ಒಟ್ಟು 73 ಕಡೆಗಳಲ್ಲಿ , 33 ದಾಸರು , 72 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮಹಿಮೆ ನೋಡಿರೈ ರಾಯರ ಮಹಿಮೆ ಪಾಡಿರೈ ಪ ಜಲಜನಾಭನೊಲುಮೆ ಪಡೆದು ಇಳೆಯೊಳು ಪ್ರಖ್ಯಾತರಾದ ಅ.ಪ ರಾಘವೇಂದ್ರ ಯತಿಗಳೆಂದು ಬಾಗಿ ನಮಿಸುವವರ ಮನದ ರಾಗ ದ್ವೇಷಾದಿಗಳ ಕಳೆದು ನೀಗಿಸುವರೊ ಭವದ ಬಂಧ 1 ತಾಳ ತಂಬೂರಿಪಿಡಿದು ಭೋಗಶಯನನನ್ನು ಭಜಿಸಿ ಕೂಗಿ ಪಾಡುತಿರಲು ನಲಿದು ಬೇಗ ಪಾಲಿಸುತಲಿ ನಲಿವ2 ದೇಶದೇಶದವರು ಬಹಳ ಕ್ಲೇಶಪಡುತ ಬರಲು ಅವರ ಕ್ಲೇಶಗಳನು ಕಳೆದು ಪರಮ ಉ- ಲ್ಲಾಸ ನೀಡಿ ಪೊರೆಯುವಂಥ 3 ಸೀತಾಪತಿಯ ಪೂಜಿಸುತಲಿ ಖ್ಯಾತರಾದ ಯತಿಗಳನ್ನು ಪ್ರೀತಿಯಿಂದ ಸೇವಿಸುವರ ಪಾತಕಗಳ ಕಳೆದು ಪೊರೆವ 4 ಗಳದಿ ಹೊಳೆವ ತುಳಸಿ ಮಾಲೆ ಹೊಳೆವ ನಗೆಯ ಮುಖದ ಭಾವ ಕಮಲನಾಭ ವಿಠ್ಠಲನೊಲಿಸಿ ಹಲವು ವಿಧದಿ ಪೂಜಿಸುವರು5
--------------
ನಿಡಗುರುಕಿ ಜೀವೂಬಾಯಿ
ಮಾಯವಾಯಿತು ರತುನ | ಮರೆ ಮೋಸಮಾಡಿ ಪ. ಮಾಯವಾಯಿತು ಎನ್ನ ಮೋಹದ ಮಮ ಗುರುವೆಂತೆಂಬ ರತುನ ನೋಯಲೇಕಿದಕಿನ್ನು ನೃಹರಿ ಉ- ಪಾಯದಿಂದಪಹರಿಸಿವೈದನು ಅ.ಪ. ಕರಗತವಾಗಿ ಇತ್ತು | ಪ್ರಕಾಶವು ಧರಣಿಯಲ್ಲಿ ವ್ಯಾಪಿಸಿತ್ತು ಪರಿಪರಿ ಸಜ್ಜನಕೆ ತತ್ವದ ವರ ಸುಧೆಯನುಣಿಸುತ್ತಲಿತ್ತು ಕರಕರದು ಅಂಕಿತವ ಕೊಡುತಲಿ ಪರಮ ಸಾಧನಗೈಸುತಿತ್ತು 1 ಸುಂದರವಾಗಿ ಇತ್ತು | ದುರ್ಜನರಿಗದ ರಂದ ತೋರದಲೆ ಇತ್ತು ಒಂದೊಂದೂ ಗುಣ ವರ್ಣಿಸಲು ಈ ಮಂದ ಮತಿಗಳವಲ್ಲವಿನ್ನು ತಂದೆ ಮುದ್ದುಮೋಹನಾರೆಂ- ತೆಂದು ಜಗದಲಿ ಮೆರೆಯುತಿತ್ತು 2 ಮಾಸಿ ಪೋದಂಥ ಹರಿ | ದಾಸಕೂಟ ತಾ ಸ್ಥಾಪಿಸುತ ಈ ಪರಿ ವಾಸುದೇವನ ಗುಣಮಣಿಗಳ ರಾಶಿಭೂತದಿ ಅರುಹಿ ಶಿಷ್ಯರ ಸಾಸಿರಾನೂರ್ಮೇಲೆ ಹೆಚ್ಚಿಸಿ ತಾ ಸೂರೆಗೊಂಡಾನಂದವನು3 ಗತಶಾಲಿ ಸಾಹಸ್ರವು | ಮೇಲೆಂಟು ಶತವು ಮತ್ತರವತ್ತೆರಸುವು ವತ್ಸವಿಕ್ರಮ ಪ್ರಥಮ ಮಾಸವು ಪ್ರಥಮ ಪಕ್ಷದ ರಾಮನವಮಿ ಹಿತದಿ ಮಂಗಳವಾರ ಸೂರ್ಯನ ಗತಿಯು ನೆತ್ತಿಯೊಳೋರೆ 4 ಎಷ್ಟು ಪೊಗಳಲಳವು | ಆನಂದ ರತ್ನದ ಗುಟ್ಟರಿಯದು ಜಗವು ಶ್ರೇಷ್ಠ ಗೋಪಾಲಕೃಷ್ಣವಿಠಲನು ಕೊಟ್ಟು ಕಳುಹಿಸಿ ಧರೆಯೊಳ್ಮೆರಸಿ ಥಟ್ಟನೇ ತಾ ಕರೆಸಿಕೊಂಡು ಶ್ರೇಷ್ಠ ಶಯ್ಯೆಯ ಮಾಡಿಕೊಂಡನು 5
--------------
ಅಂಬಾಬಾಯಿ
ಮುಕ್ಕೋಟ ದ್ವಾದಶಿಯ ದಿವಸ (ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ) ರಂಭೆ : ಮತಿವಂತೆ ಪೇಳೀತನ್ಯಾರೆ ದೇವ ವ್ರತತಿಯಧಿಪನಂತೆ ನೀರೆ ತೋರ್ಪ ಅತಿಶಯಾಗಮ ಬಗೆ ಬ್ಯಾರೆ ರತ್ನ ದ್ಯುತಿಯಾಭರಣವ ಶೃಂಗಾರ ಆಹಾ ಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ- ಗತಿ ಸ್ಮøತಿ ತತಿಗಳ ಮತಿಗಗೋಚರನಂತೆ 1 ಊರ್ವಶಿ : ಲಾಲಿಪುದೆಲೆಗೆ ಪೇಳುವೆನು ನೂತನವ ಲೋಲ ಲೋಚನನ ನಾಟಕ ಸತ್ಕಥನವ ಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿ ಬಾಲಾರ್ಕಸದೃಶನೀತನು ಇರ್ಪನಲ್ಲಿ ನೀಲನಿಭಾಂಗನು ನೆನೆವರ ಪಾಪವ ಘೋಲುಘಡಿಸಲೆಂದೆನುತಲಿ ಭಾರ್ಗವ ಕೋಲಿಂದೆಸಗಿದ ಧರಣಿಗೆ ಬಂದು ಸ- ಲೀಲೆಗಳೆಸಗುವ ಜಾಲವಿದೆಲ್ಲ 2 ಸರಸಿಜಗಂಧಿ ಕೇಳ್ ದಿಟದಿ ತನ್ನ ಅರಮನೆಯಿಂದ ಸದ್ವಿಧದಿ ಈರ್ವ- ರರಸಿಯರ್ ಸಹಿತ ಮಿನಿಯದಿ ಅತಿ ಭರದಿಂದ ಸೂರ್ಯನುದಯದಿ ಆಹಾ ಉರುತರ ಹೇಮಪಲ್ಲಂಕಿಯೊಳಡರಿ ತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ3 ಊರ್ವಶಿ : ಮದ್ದಾನೆಗಾತ್ರೆ ಲಾಲಿಸಿ ಕೇಳು ಮಾತ ಬದ್ಧ ನೀ ಪೇಳ್ದ ಮನದ ಶಂಕಾವ್ರಾತ ತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳು ಸೂರ್ಯ ಉದಯ ಕಾಲದೊಳು ಭದ್ರಭವನವನು ಪೊರಟು ವಿನೋದದಿ ಅದ್ರಿಧರನು ಸಜ್ಜನರೊಡಗೂಡಿ ಉ- ಪದ್ರಿತ ಪಾಪವ ಛಿದ್ರಿಪ ಸ್ನಾನಕೆ ರೌದ್ರಿತ ರಾಮಸಮುದ್ರದ ಬಳಿಗೆ 4 ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿ ಪರಮ ಮಹಿಮೆನೆಂದ ಮೇರೆಗೆ ಘನ- ತರ ಸ್ನಾನವೇನಿದು ಕಡೆಗೆ ವೃತ ದಿರವೋ ಉತ್ಸವವೋ ಪೇಳೆನಗೆ ಆಹಾ ತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈ ಪರಿಗಳ ಸಾಂಗದಿಂದರುಹಬೇಕೆನಗಿನ್ನು 5 ಊರ್ವಶಿ : ಅಕುಟಿಲೆ ಬಾಲೆ ಯೌವನವಂತೆ ಕೇಳೆ ಸಕಲಾಂತರ್ಯಾತ್ಮನೀತನು ಸತ್ಯಶೀಲೆ- ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿ ಭಕುತವತ್ಸಲನು ಉತ್ಸವಿಸುವನಲ್ಲಿ ವಿಕಳಹೃದಯ ನರನಿಕರಕಸಾಧ್ಯವೆಂ ದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿ ಅಖಿಳೋತ್ಸವ ಮಸ್ತಕಕಿದು ವೆಗ್ಗಳ ಮುಕುಟೋತ್ಸವವೆಂದೆನುತಲಿ ರಚಿಸುವ 6 ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನ ವೊಲವಿಂದ ಗೈದ ಮೇಲಿವನು ತನ್ನ ರಮಣಿಯರ್ಸಹಿತಂದಣವನು ಏರಿ ನಿಲುನಿಲುತ್ಯಾಕೆ ಬರುವನು ಆಹಾ ಪೊಳಲೊಳಗಿಹ ಜನನಿಳಯದ ದ್ವಾರದಿ ಕಳಕಳವೇನಿದ ತಿಳುಪೆನಗೀ ಹದ7 ಊರ್ವಶಿ : ಕುಂದರದನೆ ಬಾಲೆ ಚದುರೆ ಸೈ ನೀನು ಮಿಂದು ತೋಷದಿ ಅಂದಣವನ್ನೇರಿ ತಾನು ಇಂದೀ ಪುರದೊಳಿರ್ಪ ಜನರ ದೋಷಗಳ ಕುಂದಿಸಲೆಂದವರವರ ದ್ವಾರದೊಳು ನಿಂದಿರುತಲ್ಲಿಯದಲ್ಲಿ ಆರತಿಗಳ ಚಂದದಿ ಕೊಳುತೊಲವಿಂದ ಕಾಣಿಕೆ ಜನ- ವೃಂದದಿ ಕೊಡುತಾನಂದ ಸೌಭಾಗ್ಯವ ಒಂದಕನಂತವ ಹೊಂದಿಸಿ ಕೊಡುವ 8 ರಂಭೆ : ಸರಸಿಜಾನನೆ ಮತ್ತೇನಿದನು ತನ್ನ ಅರಮನೆಯಲ್ಲಿ ಭೂದ್ವಿಜನರನು ಸರ್ವ ಪುರಜನ ಸಹಿತೊಳಗಿವನು ನಾನಾ ತರದಿ ಮೆರೆವ ಭೋಜನವನು ಆಹಾ- ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ- ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9 ಊರ್ವಶಿ : ಮಂಗಲಾನನೆ ಲೇಸು ನುಡಿದೆ ಕೇಳ್ ನೀನು ಗಂಗಾಜನಕ ತನ್ನ ಗೃಹದಿ ವಿಪ್ರರನು ಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿ ಸಂಗಾತದಲಿ ಆರೋಗಣೆ ಗೈದು ಮೆರೆಸಿ ಅಂಗಣದಲಿ ರಾತ್ರೆಯಲಿ ವಿನೋದದಿ ಕಂಗೊಳಿಸುವ ಉರಿದರಳ ಸಮೂಹಕೆ ರಂಗಪೂಜೆಯನುತ್ತಂಗವಿಸುವ ನಿಗ- ಮಂಗಳೊಡೆಯನು ವಿಹಂಗಮಾರೂಢ 10 ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ- ಕುಮುದಾಪ್ತ ಠಾವಿನ ವೋಲು ಬಂದು ಆದರಿಸಲಿದರ ಮಧ್ಯದೊಳು ತನ್ನ ರಮಣಿಯರ್ ಸಹಿತ ತೋಷದೊಳು ಆಹಾ ವಿಮಲವನ್ನೇರಿನ್ನೆಲ್ಲಿಗೈದುವನೆಂಬಾ- ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11 ಊರ್ವಶಿ : ಥೋರ ಕನಕುಂಭಕುಚಭಾರೆ ಕೇಳೆ ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆ ಚಾರು ಈ ಹೂವಿನ ತೇರನೇರುತಲಿ ಕೇರಿ ಕೇರಿಯೊಳಾರತಿಗೊಳ್ಳುತಲಿ ಭೋರಿಡುತಿಹ ವಾದ್ಯಧ್ವನಿ ಘನತರ ಭೇರಿ ಮೃದಂಗಾದ್ಯಖಿಳ ವಿನೋದದಿ ಸ್ವಾರಿಗೆ ತೆರಳುವ ಕ್ರೂರ ನರರ ಆ- ಘೋರ ಪಾಪ ಜರ್ಝರಿಸಲೆಂದು 12 ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನ ಅರಮನೆಯಿದಿರು ರಥವನು ತಾನು ಭರದೊಳಗಿಳಿದಂದಣವನು ಏರಿ ಮೆರೆವಾಲಯದ ಸುತ್ತುಗಳನು ಆಹಾ ತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ- ಭರಿತ ಗಾಯನ ಭೇರಿ ಧ್ವನಿಗಳೇನಿದ ಪೇಳೆ13 ಊರ್ವಶಿ : ಕೃಷ್ಣಾಂಕ ವದನೆ ಕೇಳೆಲೆ ಪೇಳ್ವೆ ನಿನಗೇ ದುಷ್ಟಮರ್ದನ ರಥವಿಳಿವುತ್ತಲಾಗೇ ಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆ ಅಷ್ಟಾವಧಾನವ ರಚಿಸುತ್ತ ಕಡೆಗೆ ಶ್ರೇಷ್ಠನು ರತ್ನಾಸನದಿ ಗ್ರಹದಿ ಪರ ಮೇಷ್ಟಜನಕೆ ಸಂತೋಷಾನಂದದಿ ಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತ ಇಷ್ಟವನೀವ ಯಥೇಷ್ಟ ದಯಾಬ್ಧ 14 ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನು ಹರಿ ಏಕರೂಪನೆನ್ನುತಲಿ ಲಕ್ಷ್ಮೀ ಕರವೆನಿಸುವ ಕಾರ್ಕಳದಲಿ ಭಾಗ್ಯೋ- ದಯ ದೇವಾಲಯದ ಮಧ್ಯದಲಿ ಆಹಾ ತ್ವರಿತದಿ ನುತಿಸಿರೊ ಗುರು ನಾರಸಿಂಹ ಶ್ರೀ- ಕರ ವೆಂಕಟೇಶನ ಚರಣಕಮಲಗಳ 15
--------------
ತುಪಾಕಿ ವೆಂಕಟರಮಣಾಚಾರ್ಯ
ಯಾರು ಇಕ್ಕುವರೆಂದು ಹಾರೈಸುವೈ ಆತ್ಮ ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು ಕಲಹ ಮಾಳ್ಪಳು ತನ್ನ ಕುಲವನಿತೆಯು ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1 ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು ಕೂಗುವುದು ಹುಲಿ ಕರಡಿ ಇದಿರಿನೊಳಗೆ ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು ನಾಗಶಯನನ ಗುಡಿಯ ಸೇರೆಲವೊ ಆತ್ಮ 2 ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3 ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು ಬೀಳುವುದು ಮೇಲೆ ಹದಿನಾರು ಭಿತ್ತಿಗಳು ಏಳು ಇಲ್ಲಿರಬೇಡ ಕಾಳಸರ್ಪನು ಬಂದು ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4 ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ ಆರು ಪಥದಲಿ ನೀನು ಮೀರಿ ನಡೆದೆ ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ ಆರ ವ್ಯಾಪಾರವನು ಕೇಳಿದೈ ಆತ್ಮ 5 ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು ಬತ್ತುವುದು ಕೈಕಾಲು ಬಳಲಿಕೆಯೊಳು ಮತ್ತೇಳು ಮಂದಿ ತಾವತ್ತತ್ತ ಸಾರುವರು ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6 ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು ಗಂಟ ಕಟ್ಟಿಯೆ ಮನದಿ ಮರುಗುತಿರಲು ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ ನಂಟರನು ನಾ ಕಾಣೆ ಆಲಿಸೈ ಆತ್ಮ 7 ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ ದಾಯವಿಲ್ಲದ ಊರು ಕರಕಷ್ಟವು ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ- ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8 ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ ನೀಡುವನು ಧರ್ಮವನು ಧೈರ್ಯನಾಗಿ ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9
--------------
ವರಹತಿಮ್ಮಪ್ಪ
ರಂಗಾ ಮನೆಗೆ ಬಾರೋ ಕೃಪಾಂಗ ಶ್ರೀರಂಗ ಪ ರಂಗ ಕಲುಷವಿಭಂಗ ಗರುಡ ತು-ರಂಗ ನವಮೋಹನಾಂಗ ಶ್ರೀರಂಗ ಅ.ಪ ಪಚ್ಚೆ ಬಾವುಲಿಗಳನು ನಿನ್ನ ಕಿವಿಯೊಳಗಿಟ್ಟುಮೆಚ್ಚಿ ಮುದ್ದಾಡುವನು ಹೆಚ್ಚಿದ ವಾಲಿಯನು ಬಾಣದಿ ಚುಚ್ಚಿದ ಸಪ್ತತಾಳಂಗಳನು ಬಿಚ್ಚಿದ ಸಮುದ್ರವ ಸುತ್ತ ಮುಚ್ಚಿದಎಚ್ಚರಿಕೆಯಲಿ ಲಂಕೆಯನು ಪೊಕ್ಕುಕಿಚ್ಚುಗಳ ಹಚ್ಚಿಸಿದ ಹನುಮನ ಮೆಚ್ಚಿದ ಖರದೂಷಣರ ಶಿರಗಳಕೊಚ್ಚಿದ ಅಚ್ಯುತಾನಂತ1 ಮುತ್ತಿನ ಹಾರವನು ಕಂಠದೊಳಿಟ್ಟುಎತ್ತಿ ಮುದ್ದಾಡುವೆನುಹತ್ತಿದ ರಥವನು ಮುಂದೊತ್ತಿದಕೌರವರ ಸೇನೆಗೆ ಮುತ್ತಿದಉಭಯರಿಗೆ ಜಗಳವ ಬಿತ್ತಿದ ಮತ್ತ ಮಾತಂಗಗಳನೆಲ್ಲಒತ್ತರಿಸಿ ಮುಂದೊತ್ತಿ ನಡೆಯುತಇತ್ತರದಿ ನಿಂತ ವರ ರಥಿಕರಕತ್ತರಿಸಿ ಕಾಳಗವ ಮಾಡಿದ 2 ಉಂಗುರಗಳನು ನಿನ್ನ ಅಂಗುಳಿಗಿಟ್ಟುಕಂಗಳಿಂದಲಿ ನೋಡುವೆಹೆಂಗಳ ಉತ್ತುಂಗದ ಕುಚಂಗಳಆಲಂಗಿಸಿದ ಭುಜಂಗಳಕಮಲಸಮ ಪಾದಂಗಳಹಿಂಗದೆ ಸ್ಮರಿಸಿದ ಮಾತಂಗನಭಂಗವ ಪರಿಹರಿಸಿ ಬ್ಯಾಗದಿಮಂಗಳ ಸ್ವರ್ಗವನಿತ್ತ ಉ-ತ್ತುಂಗ ವಿಕ್ರಮ ರಂಗವಿಠಲನೆ 3
--------------
ಶ್ರೀಪಾದರಾಜರು
ರಾಘವೇಂದ್ರಯತಿ ಗುರುರಾಯರ ಮಹಿಮೆ ಕೇಳಿರಿ ನಮ್ಮ ಗುರುರಾಯರ ಮಹಿಮೆ ಪ ಪರಮ ಭಕುತಿಯಿಂದ ಸ್ಮರಿಸುವ ಸುಜನರ ದುರಿತಗಳÀ್ಹರಿಸಿ ಸದ್ಗತಿ ಪಥವ ತೋರುವ ಅ.ಪ ಇಂದಿರೇಶನ ಮಹಿಮೆ ಪೊಗಳುವ ಭಕ್ತ ಸಂದಣಿ ಪೊರೆಯುವರ ಹಿಂದಿನ ಅಘಗಳನೊಂದೂ ನೋಡದೆ ಶ್ರೀ- ಮುಕುಂದನ ಭಜಕರ ಸಂಗಡ ನೀಡುವ ದಿವ್ಯ 1 ದೇಶ ದೇಶದೊಳಿವರ ಮಹಿಮೆಗಳ ಉ- ಲ್ಲಾಸದಿ ಪೊಗಳುವರ ದಾಸರೆಂತೆಂದು ಸಂತೋಷದಿ ಸೇವಿಪ ಮೀಸಲ ಮನದವರ ಪೋಷಿಸುತಿರುವಂಥ 2 ಹಲವು ಸಾಧನವೇತಕೆ ತನುಮನವ ಶ್ರೀ- ಹರಿಗೆ ಸಮರ್ಪಿಸಿರಲು ಕುಲಕೋಟಿ ಪಾವನ ಮಾಳ್ಪ ಶ್ರೀ ಗುರುಗಳ ಚರಣ ಸೇವಕರೆಂದು ಸಿರಬಾಗಿ ನುತಿಸಿರೊ 3 ನಿದ್ರೆ ಮಾಡುವ ಬಾಲೆಯ ಕರಗಳಿಗೆ ಶ್ರೀ- ಮುದ್ರಾಧಾರಣ ಮಾಡಿಹ ಸಜ್ಜನರಿಗಿವರ ಭಯ ವಜ್ರಕವಚವು ಸತ್ಯ ಹೃದ್ಗøಹದಲಿ ರಾಮಭದ್ರ ಮೂರುತಿ ಕಾಂಬ 4 ಸವಿನಯ ತೋರುವರ ಕನಲಿಕೆ ಕಳೆದು ಶ್ರೀ ಕಮಲನಾಭ ವಿಠ್ಠಲನೊಲುಮೆಯ ಪಡೆದ ಮಂತ್ರಾಲಯ ನಿಲಯ5
--------------
ನಿಡಗುರುಕಿ ಜೀವೂಬಾಯಿ
ರಾಧಾಕೃಷ್ಣ ಮುರಾರಿ ಜಯ ಜಯ ವೇದ ವೇದ್ಯನೆ ವಿಷ್ಣು ಜಯ ಜಯ ಮೋದತೀರ್ಥ ಸುವಂದ್ಯ ಜಯ ಜಯ ಮಾಧವಾ ಮಧುಸೂದನಾ ಪ ಶ್ರೀಧರಾ ಪ್ರದ್ಯುಮ್ನ ಜಯ ಜಯ ಮತ್ಸ್ಯ ಜಯ ಜಯ ಕೂರ್ಮ ಜಯ ಜಯ ಭೂಧವ ದಾ-ಮೋದರಾ 1 ನಾರಸಿಂಹ ಉ-ಪೇಂದ್ರ ಜಯ ಜಯ ಚಾರುವಾಮನ ಪೋರ ಜಯ ಜಯ ಶ್ರೀ ತ್ರಿವಿಕ್ರಮ ವೀರ ಜಯ ಜಯ ಭಾರ್ಗವಾ-ದ್ವೀಜ ಪೋಷಕಾ 2 ರಾಮ ಲೋಕೋ-ದ್ಧಾರ ಜಯ ಜಯ ಬುದ್ಧ ಜಯ ಜಯ ಶ್ರೀಮನೋಹರ ಕಲ್ಕಿ ಕಲಿವೈರಿ 3 ಈಶ ರಸ ಅನಿ-ರುದ್ಧ ಜಯ ಜಯ ದೋಶಹರ ಸಂ-ಕಷ್ರ್ಣ ಜಯ ಜಯ ಶ್ರೀಶಹರಿ ಹೃಷಿಕೇಶ ಜಯ ಜಯ ಕೇಶವಾ ನಾರಾಯಣಾ 4 ಬಾದರಾಯಣ-ದತ್ತ ಜಯ ಜಯ ವೇಧ ಅಚ್ಚುತ-ಕಪಿಲ ಜಯ ಜಯ ಮಧ್ವಗುರು ಮಹಿ-ದಾಸ ಜಯ ಜಯ ಅಧೋಕ್ಷಜ 5 ಶ್ರೀ ಜನಾರ್ಧನ-ಋಷಭಜಯ ಜಯ ನೈಜತೇಜಾ ನಂತ ಜಯ ಜಯ ವಾಜಿವದನ ಇಂ-ಇಂದ್ರ ಜಯ ಜಯ ರಾಜ ಭಕುತರ ಭೋಜ ಸುರರಾಜ 6 ಅಜ ಧನ್ವಂತ್ರಿ ಜಯ ಜಯ ಪೃಶ್ನಿ ಗರ್ಭ ಮುಕುಂದ ಜಯ ಜಯ ಚೆನ್ನ ಬೋಧಕ ಹಂಸ ಜಯ ಜಯ ಶಿಂಶುಮಾರ ಸುಮೋಹಿನಿ 7 ಪಾಂಡುರಂಗ ವಿ-ಠೋಬ ಜಯ ಜಯ ತೊಂಡವತ್ಸಲ-ವರದ ಜಯ ಜಯ ಗಂಡುಗಲಿ ತಿ-ಮ್ಮಪ್ಪ ಜಯ ಜಯ ರಂಗನಾಥ ಪ-ರಾದ್ಯನಂತನೆ 8 ವಿಶ್ವತೈಜಸ-ಪ್ರಾಜ್ಞ ಜಯ ಜಯ ಶಶ್ವದೇಕನೆ-ತುರಿಯ ಜಯ ಜಯ ಶ್ರೀಶ “ಶ್ರೀ ಕೃಷ್ಣ-ವಿಠಲ” ಜಯ ಜಯ ಗೋವಿಂದಾ ಪುರು-ಷೋತ್ತಮಾ 9
--------------
ಕೃಷ್ಣವಿಠಲದಾಸರು
ರಾಮಭಜೇ ತೇ ಪದಯುಗಳಂ ಸೀತಾ ಪ ರಾಮಭಜೇ ತೇ ಪದಯುಗಳಂ ರಾಮ ಸುಂದರ ಘನಶ್ಯಾಮ ರಘೂದ್ವಹ ಅ.ಪ ದಶರಥ ಹೃದಯಾನಂದಕರಂ ತ್ರಿ ದಶಗಣ ಚಿತ್ತಾಮೋದಕರಂ 1 ಪೂರಿತ ಕೌಶಿಕಜನಂ ಸಂ ತಾರಿತ ಗೌತಮ ಲಲನಾಂ 2 ಖಂಡಿತ ಶಂಕರಚಾಪಂ ಪರಿ- ದಂಡಿತ ಭಾರ್ಗವ ಕೋಪಂ 3 ಸ್ವೀಕೃತ ಜಾನಕೀಹೃದಯಂ ದೂ ರೀಕೃತ ಪಾತಕನಿಚಯಂ 4 ಪಾಲಿತ ಮಾತಾಪಿತೃ ವಚನಂ ಸಂ ಲಾಲಿತ ಮುನಿಜನ ಸ್ತುತಿರಚನಂ 5 ಭರತ ಸಮರ್ಪಿತ ನಿಜರಾಜ್ಯಂ ಮುನಿ ವರಭಾರದ್ವಾಜಾರ್ಪಿತ ಭೋಜ್ಯಂ 6 ದಂಡಕಾರಣ್ಯಂ ಪಾವನಚರಣಂ ಉ- ದ್ದಂಡ ವಿರಾಧಾ ಪಾತಕಹರಣಂ 7 ಕುಂಭಜಾರ್ಪಿತ ಶರಕೋದಂಡ ಸಂ ರಂಭ ನಿರ್ಜಿತ ರಾಕ್ಷಸದಂಡಂ 8 ಪಂಚವಟೀತಟ ಕೃತವಾಸಂ ದೃ ಗಂಚಲ ಧೃತಗಜದುಲ್ಲಾಸಂ 9 ಶೂರ್ಪನಖೀ ವಚನಾಲೋಲಂ ಸಹ ಜಾರ್ಪಿತ ವಿವಿಧಾಯುಧ ಜಾಲಂ 10 ರೂಪನಿರ್ಜಿತ ಸುಮಬಾಣಾಂಗಂ ವಿ ರೂಪಿತ ದುಷ್ಟ ಶೂರ್ಪನಖಾಂಗಂ 11 ಖರತರ ಖರದೂಷಣಕಾಲಂ ಸುರ ನರವರ ಮುನಿಗಣ ಪರಿಪಾಲಂ 12 ಮಾಯಾಮೃಗಾರ್ಪಿತ ಬಾಣವರಂ ಜ- ಟಾಯು ಸಂಪಾದಿತ ಲೋಕವರಂ13 ರಾವಣಹೃತ ನಿಜಪತ್ನೀಕಂ ಲೋ- ಕಾವನಗತ ಕೋಪೋದ್ರೇಕಂ14 ಸಾಧಿತ ಶಬರೀ ಮೋಕ್ಷಕರಂ ಕ- ಬಂಧ ಬಂಧನ ಮೋಚನ ಚತುರಂ 15 ವಾತ ತನೂಭವ ಕೃತಸ್ತೋತ್ರಂ ಪಂ ಪಾತಟ ನಿರ್ಮಿತ ಸುಕ್ಷೇತ್ರಂ 16 ಶಿಕ್ಷಿತ ಸಂಕ್ರಂದನ ತನುಜಂ ಸಂ- ರಕ್ಷಿತ ಚಂಡಕಿರಣ ತನುಜಂ 17 ಸೀತಾಲೋಕನ ಕೃತಕಾಮಂ ನಿಜ ದೂತಾಮೋದನ ಸುಪ್ರೇಮಂ 18 ನಿಜಕರ ಭೂಷಣ ದಾತಾರಂ ಧುರ ವಿಜಯ ವನಾಲಯ ಪರಿವಾರಂ 19 ಧೂತಾಹೃತ ಶುಭದೃಷ್ಟಾಂತಂ ವಿ- ಜ್ಞಾತ ನಿಜಸ್ತ್ರೀ ವೃತ್ತಾಂತಂ 20 ಭೀಷಣ ಜಲನಿಧಿ ಬಂಧಕರಂ ವಿ ಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲಧಿಂ ಸಂ- ತೋಷಿತ ದೈವತಪರಿಧಿಂ 22 ಸೀತಾ ಸಮಾಶ್ರಿತ ವಾಮಾಂಕಂ ಪರಿ- ಪಾತಕ ನಿಜನಾಮಾಂಕಂ 23 ಸ್ವೀಕೃತ ಸಾಕೇತಾವಾಸಂ ಅಂ- ಗೀಕೃತ ಮಾನುಷವಿಲಾಸಂ 24 ವರವ್ಯಾಘ್ರ ಪ್ರಭೂಧರ ಕಲ್ಪತರುಂ ಶ್ರೀ ವರದವಿಠಲಮತಿಶಯ ರುಚಿರಂ 25
--------------
ವೆಂಕಟವರದಾರ್ಯರು
ರೂಪನ ಗುಡಿನಿ¯ಯಾ ವೇಂಟಕರಾಯಾ ರೂಪನ ಗುಡಿ ನಿಲಯಾ ವ್ಯಾಪಕ ಜಗತ್ರಯ ಕಾಪಾಡುವ ಭಾರತರ್ಕನು ದಾಸರ ಪ ದಂಡಿ ದಾನವಮರ್ದನ ಸಕಲಜಗ ಉ- ದ್ದಂಡ ರಕ್ಷಕ ಪಾವನಾ ಚಂಡ ಪ್ರ- ಚಂಡ ಮಾರ್ತಾಂಡ----ದ್ಭವ ಕುಂಡಲಿ ಶಯನ ಕೋದಂಡ ಪಾಣಿ ಹರಿ 1 ಗಂಗಾಜನಕ ದೇವಾ ಸಕಲಮೋಹ- ನಾಂಗನಾ ಪಡೆದನಾ ಶೃಂಗಾರದಲಿ ಕುಜ ರಂಗ ಮಂಟಪದಲಿ ಮಂಗ ಳಾಂಗಿಯ ಬಿಡದೆ ಮಡಗಿಸಿ ಇರುವಂಥಾ 2 ಮಂದರಾದ್ರಿಯ ಧರಿಸಿ ಸುಜನರಿಗೆ ಆ- ನಂದದಿ ಸುಧೆಯನುಣಿಸಿ ಅಂದು ಭಕ್ತರ ಆನಂದದಿ ಸಲುಹಿದ ತಂದೆ 'ಹೊನ್ನ ವಿಠ್ಠಲ’ ದಯಮಾಡಿ ಸಲಹಯ್ಯಾ 3
--------------
ಹೆನ್ನೆರಂಗದಾಸರು
ಲಕ್ಷ್ಮಿ ನರಹರಿ ವಿಠಲ | ರಕ್ಷಿಸೋ ಇವಳ ಪ ತ್ರ್ಯಕ್ಷ ಬಿಂಬನೆ ಸ್ವಾಮಿ | ಪಕ್ಷಿವಹ ಕರುಣಾಕಟಾಕ್ಷ ದಿಂದೇಕ್ಷಿಸುತ | ಕಾಪಾಡೊ ಹರಿಯೇ ಅ.ಪ. ಅಕ್ಷಿ ಮೂರುಳ್ಳ ನಿಟಿ | ಲಾಕ್ಷನೈ ರೂಪದಲಿಅಕ್ಷಿ ಗೋಚರನಾಗಿ | ಸ್ವಚ್ಛ ತೈಜನನೇದೀಕ್ಷೆ ದಾಸತ್ವದಲಿ | ಲಕ್ಷ್ಯವಿಟ್ಟಿಹಳ ಉ-ಪೇಕ್ಷಿಸದೆ ದಯತೋರ್ದೆ | ಲಕ್ಷ್ಮಿ ನರಸಿಂಹಾ 1 ಮನ್ಯು ಸೂಕ್ತದಿಂ ಬ | ಹ್ಪನ್ನ ಭೊಕ್ತøವಿನಿಂದಚೆನ್ನಾಗಿ ಸೇವಿತನೆ | ಅನ್ನಂತ ಮಹಿಮಾಬಿನ್ನವಿಪೆ ನಿನಗೆ ಕಾ | ರುಣ್ಯ ಮೂರುತಿ ಹರಿಯೆಕನ್ಯೆಗಭಯದನೆ ಆ | ಪನ್ನ ಪರಿಪಾಲಾ 2 ಲೌಕಿಕದಿ ಬಹುಪರಿಯ | ಸೌಖ್ಯಗಳ ನೀನಿತ್ತುಪ್ರಾಕ್ಕು ಕರ್ಮವ ಕಳೆದು | ಕಾಪಾಡೊ ಹರಿಯೇ |ಚೊಕ್ಕ ಭಕ್ತಿ ಜ್ಞಾನ | ಅಕ್ಕರದಿ ತವಪದದಿಉಕ್ಕುವ ಪರಿಮಾಡು | ರಕ್ಕಸಾಂತಕನೇ 3 ನೀಚೋಚ್ಚ ತರತಮವು | ಪಂಚ ಬೇದವನರುಹಿಸಂಚಿತವ ದಹಿಸೂವ | ಹಂಚಿಕೆಯನಿತ್ತೂಅಂಚೆವಹಪಿತನೆ ಹೃ | ತ್ಪಂಕಜದಿ ನಿನಕಾಂಬಸಂಚಿಂತನೆಯ ನೀಯೊ | ಪಂಚ ಪ್ರಾಣಾತ್ಮಾ 4 ಪಾವಮಾನಿಯ ಪ್ರೀಯ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಭಾವದಲಿ ತೋರೋ |ನೀವೊಲಿಯುತಿವಳಿನ್ನ | ಕಾವುದೆನೆ ಬಿನ್ನೈಪೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲೋಕನೀತಿಯ ಪದಗಳು 448 ಅನ್ನದಾನವನ್ನೆ ಮಾಡು ಕನ್ಯದಾನವನ್ನೆ ಮಾಡುನಿನ್ನ ನಂಬಿದರ ಪೊರೆದುನ್ನತ ಹರ್ಷದಿ ಬಾಳುಸನ್ನುತ ಸರ್ವಲೋಕಗಳನ್ನು ರಕ್ಷಿಸುವನಾಗ ಪ್ರ-ಸನ್ನ ಮೂರುತಿಯಾಗುರನ್ನದ ರಾಶಿಗಳನ್ನು ಚಿನ್ನದ ಆಭರಣಗಳನ್ನುಭೂಸುರರಿಗಿತ್ತು ಮನ್ನಿಸು ಉದಾರನಾಗುಮನ್ನೆಯರೆಲ್ಲರು ಬಂದುನಿನ್ನನೋಲೈಸಲೆಂದು ಅಪರ್ಣೆಪರಿಸಿದಳು 1 ಕೋಟಿ ಗೋದಾನವ ಮಾಡು ಸಾಟಿಯಿಲ್ಲದಂಥಾ ಪಂಚಕೋಟಿ ಗಜದಾನ ಶತಕೋಟಿಯಶ್ವದಾನಗಳಮೀಟಾದ ಬ್ರಾಹ್ಮರಿಗಿತ್ತು ಕೀರ್ತಿವಂತನಾಗು ಕಿ-ರೀಟ ಶೌರ್ಯದೊಳಾಗು ಮೀಟಾದ ಮಂತ್ರಿಗಳ ಕಿ-ರೀಟ ರತ್ನಕಾಂತಿಗಳ ಕೋಟಿ ನಿನ್ನ ಪಾದದಲ್ಲಿಧಾಟಿಯಾಗಿರುವನಾಗುಲೂಟಿಸಿ ವೈರಿಗಳನು ಗೋಟುಗೊಳಿಸುವ ಶಶಿಜೂಟ ಭಕ್ತನಾಗು 2 ಇತ್ತೆರದೆ ಬೀಸುತಿಹ ಮುತ್ತಿನ ಚಾಮರ ಶ್ವೇತಛ್ಛತ್ರ ಸೀಗುರಿಗಳ ಮೊತ್ತದ ಸಾಲೊಳಗೆ ಒ-ಪ್ಪುತ್ತಲಿರುವವನಾಗು ಸತ್ಯವಂತನಾಗು ಸುವ್ರತ ನೀನಾಗುಪೆತ್ತವರ ನೋಡಿ ನಲಿವುತ್ತಿರಲು ಭೂಸುರರುಮುತ್ತಿನಕ್ಷತೆಯನಾಂತುಪೃಥ್ವಿಯ ವೊಳಗೆಲ್ಲಾ ಸ-ರ್ವೋತ್ತಮ ಪುರುಷನಾಗೆನುತ್ತಮಸ್ತಕದಿ ತಳಿವುತ್ತ ಪರಸಿದರು 3 ಇಂದ್ರನಾಗು ಭೋಗದೊಳು ಸತ್ಯವಾಕ್ಯದೊಳು ಹರಿ-ಶ್ಚಂದ್ರನಾಗು ಪಾಲನೆಯ ಮಾಡುವುದರೊಳಗೆ ಉ-ಪೇಂದ್ರನಾಗು ಬುದ್ಧಿ ಕೌಶಲದೊಳು ತಿಳಿಯಲು ನಾ-ಗೇಂದ್ರ ನೀನಾಗುಚಂದ್ರನಾಗು ಶಾಂತಿಯೊಳಗೆಂದು ವಂದಿಮಾಗಧರವೃಂದ ಕರವೆತ್ತಿ ಜಯವೆಂದು ಪೊಗಳುತ್ತಿರಲಾ-ಚಂದ್ರಾರ್ಕವು ಸೌಖ್ಯದಿ ಬಾಳೆಂದು ಸಾನಂದದೊಳಾಗಇಂದಿರೆ ಪರಸಿದಳು4 ಧೀರನಾಗುದಾರನಾಗು ಸೂರಿಜನವಾರಕೆ ಮಂ-ದಾರನಾಗು ಸಂಗರ ಶೂರನಾಗು ವೈರಿ ಜ-ಝ್ಝೂರನಾಗು ಮಣಿಮಯ ಹಾರನಾಗುವೀರಾಧಿವೀರ ನೀನಾಗುಭೂರಮಣನಾಗು ಮಂತ್ರಿವಾರ ಸಂರಕ್ಷಕನಾಗುಕಾರುಣ್ಯಸಾಗರನಾಗು ಕಾಮಿತಫಲಿದನಾಗುಶ್ರೀ ರಾಮೇಶನಪಾದಾಬ್ಜ ವಾರಿಜ ಭಕ್ತನಾಗೆಂದುಶಾರದೆ ಪರಸಿದಳು5
--------------
ಕೆಳದಿ ವೆಂಕಣ್ಣ ಕವಿ
ವರದೇಂದ್ರವಿಠಲರ ಹಾಡು ವಾಸುದೇವನ ಪುರ ಪ್ರವೇಶಿಸಿದರು |ಈಶ ಭಜಕ ಶ್ರೀಶ ಪ್ರಾಣೇಶದಾಸಾರ್ಯ ಪ ಉತ್ತಂಕ ಋಷಿಯಂತೆ ಉತ್ತಮ ಗುರುಪಾದ |ಅತ್ಯಂತ ಭಕ್ತಿಯಿಂ ಸ್ತುತಿಸಿ ಯಜಿಸಿ ||ಉತ್ತಮ ಶ್ಲೋಕ ಶ್ರೀ ಪುರುಷೋತ್ತಮನ ಗುಣವ |ನೃತ್ಯ ಗೀತದಿ ಪಾಡಿ ಮೃತ್ಯಲೋಕವ ತ್ಯಜಿಸಿ 1 ವಾಸ ವಾಸರದಲಿ ವಾಸುದೇವನ ಕಥೆಯ |ಭೂಸೂರರಿಗೆ ಪೇಳಿ ತೋಷದಿಂದ ||ವಾಸವಾದ್ಯಮರ ವಂದಿತನ ಪಾದದಿ ಭಕ್ತಿ |ಲೇಸಾಗಿ ತೋರಿ ಭವಕ್ಲೇಶವನು ಪರಿಹರಿಸಿ 2 ಅಬ್ಧನಂದನ ಭಾದ್ರಪದ ತಿಥಿ ಅಷ್ಟಮಿಯ |ಶುದ್ಧ ಭೌಮ್ಯವಾಸರದ ಉಷಃಕಾಲದಿ ||ಮುದ್ದು ಪ್ರಲ್ಹಾದನ್ನ ಪೊರೆದ ನರಹರಿರೂಪ |ಹೃದ್ಗುಹಾದಲಿ ನೋಡಿ ಹರುಷವನು ಬಡುತಲಿ 3 ದಾಸ ಕುಲ ಶ್ರೇಷ್ಠ ಗುರು ಪ್ರಾಣೇಶದಾಸರಿಂ |ಶ್ರೀಶ ಪ್ರಾಣೇಶ ವಿಠಲೆಂಬಂಕಿತಾ ||ಸೋಸಿನಿಂದಲಿ ಪಡೆದು ಶ್ರೀಶ ಮಹಿಮೆ ಉ- |ಲ್ಲಾಸದಿಂದಲಿ ಭಜಿಸಿ ಬೇಸರವನಳಿಯುತಾ 4 ಮರುತನೆ ಪರಮ ಗುರು, ಹರಿಯೆ ಪರದೇವತೆ |ಪುರಂದರರೆ ದಾಸರೆಂದರುಹಿ ಧರೆಗೆ ||ವರದೇಂದ್ರ ವಿಠಲನ ಚರಣವನು ಪೂಜಿಸಿ |ದರಣಿ ಸಾಧನವನ್ನು ತ್ವರಿತದಿಂದಲಿ ಮುಗಿಸಿ 5
--------------
ಶ್ರೀಶಪ್ರಾಣೇಶವಿಠಲರು
ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ
ವೆಂಕಟಾಚಲ ನಿಲಯ ಪಿಡಿಯೆನ್ನ ಕೈಯ ಪಂಕಜಾಲಯ ಸುಪ್ರೀಯ ಪ ಅಹಿ ಕಂಕಣನುತ ಪದ- ಪಂಕಜ ತೋರೊ ಮೀನಾಂಕನ ಜನಕ ಅ.ಪ. ಪತಿತ ಪಾವನ ಮೋಹನ, ಪಾಲಿಸೊ ಎನ್ನ ಸತತ ಬಿಡದೆ ನೋಡೆನ್ನ ಹಿತರಹಿತರಾದವರನ್ನ ಪೊರೆದಳಿದೆ ಘನ್ನ ನತಜನರಿಗೆ ಪ್ರಸನ್ನ ದಿತಿಸುತ ತತಿಸಂಗತಿಯಲಿ ಮಥಿಸಲು ವನಧಿಯ ಅತಿ ಸಮ್ಮತಿಯಲಿ ಚತುರ ಧರಿಸಿ ಪರ್ವತ ಸುರತತಿಗ- ಮೃತ ವುಣಿಸಿದ ಶಾಶ್ವತಗತಿನಾಥ 1 ಸತಿಯ ಕಾಯಿದ ವಿನೋದ ಸಾಮಜವರದ ಚತುರದಶ ಲೋಕಾಧಿನಾಥ ಗತಿ ನೀನೆ ಮಹಾಪ್ರಸಾದ ಪರಮಮೋದ ಅತಿಶಯದಿ ಪೊಳೆವ ಪಾದ ಶತಪತ್ರವು ಹೃದ್ಗತವಾಗಲಿ ಉ- ನ್ನತ ಮಹಿಮನೆ ಕೀರುತಿವಂತನೆ ಅ- ಪ್ರತಿಭಾರತಮಲ್ಲ ಮೂರವತಾರಗೆ ಅತಿಪ್ರಿಯನೆನಿಪ ಮೂರತಿ ಚತುರದೇವ 2 ಸ್ಥಿತ ಮನ ಮಾಡೋ ಭವಭಂಗ ಸಂಗ ನಿಸ್ಸಂಗ ಚ್ಯುತಿ ದೂರ ಶೌರೀ ಕಾಳಿಂಗ- ದುರಿತ ಮಾತಂಗ-ಮರಿಗೆ ಸಿಂಗ ತುತಿಪೆ ಕರುಣಾಂತರಂಗ ಕ್ಷಿತಿಯೊಳಗಹಿ ಪರ್ವತನಿವಾಸನೆ ಖರೆಗೊಳಿಸುವ ದುರ್ಮತಿಯನು ತೊಲಗಿಸಿ ತ್ವತು ಪಾದದಲಿಡು ಮತಿಯಲ್ಲದೆ ತಿರು - ಪತಿ ವಿಜಯವಿಠ್ಠಲ ಇತರವನರಿಯೆ 3
--------------
ವಿಜಯದಾಸ