ಒಟ್ಟು 26 ಕಡೆಗಳಲ್ಲಿ , 16 ದಾಸರು , 23 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ಮಧುರೆಗೆ ತಾ ಕೊಂದು ಮಾತುಳನ ಬಂಧನ ರಹಿತವಾಗಲು ಮಾತಾಪಿತರು 1 ಜರೆಯಸುತನ ಬಾಧೆಯು ಘನವಾಗುತಿರಲು ಜಲದೊಳು ದ್ವಾರಕಾಪುರವ ನಿರ್ಮಿಸಿದ 2 ಯದುನಂದನ ತನ್ನಗ್ರಜ ಬಲರಾಮನ ಕೂಡ ಮುದದಿಂದಾವಾಸ ಯಾದವರ ಸಹಿತಾಗಿ3 ಇರುತಿರೆ ರುಕುಮ ತನ್ನನುಜೆ ಸಹಿತಾಗಿ ಚೆಲುವ ಸುಂದರಿಗೆ ಬ್ಯಾಗ್ವಿವಾಹದುತ್ಸವವು 4 ಅಕ್ಕರದನುಜೆ ರುಕ್ಮಿಣೀದೇವಿಗಿನ್ನು ಚಿಕ್ಕ ಚೆನ್ನಿಗನಾದ ತಕ್ಕ ವರನ್ಯಾರು 5 ವಸುಧೆಪಾಲರ ಮಧ್ಯ ಶಿಶುಪಾಲನೀಗಧಿಕ ಕುಸುಮಗಂಧಿನಿಗೆ ನಿಶ್ಚಯವ ಮಾಡಿದರು 6 ಅಗ್ರಜನ್ವಾಕ್ಯವ ಕೇಳಿ ಮನದಲ್ಯೋಚಿಸುತ ಘನಮಹಿಮಗೆ ಓಲೆ ಬರೆದಳು ಲಿಖಿತ 7 ಹರಿ ನೀನೆ ಮುರವೈರಿ ಸರುವಾಂತರಯಾಮಿ ನಿನ್ನ ಸ್ಮರಣೆ ದರುಶನ ಮಾತ್ರಕೆ ಪರಮಲಾಭೆನಗೆ 8 ಎಂದೆಂದಿಗೆನ ಕೂಡಾನಂದವ ಬಟ್ಟು ಇಂದೆ ಕೈಬಿಟ್ಟು ದೂರಿಂದ ನೋಡುವರೆ 9 ಪ್ರಾಣಪತಿ ನೀ ಪಾಣಿಗ್ರಾಣ (ಗ್ರಹಣ?) ಮಾಡದಲೆ ಇರೆ ಪ್ರಾಣ ಉಳಿಯದು ಕೇಳೆನ್ನಾಸೆ ಹುಸಿಯಲ್ಲ 10 ಸರ್ವರ್ವಂದಿತ ನಿನ್ನ ಅರಮನೆದ್ವಾರ ಕಾದಿರುವೋ ಭೃತ್ಯರಿಗೊಪ್ಪಿಸಿಕೊಡದೆ ಕರುಣಾಳು 11 ದೇಶಕಾಲಕೆ ನಾ ನಿನ್ನ ಸಮಳ್ವಾಸುದೇವ ಗುಣಕಸಮಳೆಂದು ಉದಾಸೀನ ಮಾಡಬ್ಯಾಡ 12 ವಕ್ಷಸ್ಥಳದ ವಾಸಿಯ ತುಚ್ಛಮಾಡದಲೆ ಲಕ್ಷೀಲೆ ಕರೆದೊಯ್ಯೊ ಪಕ್ಷಿವಾಹನನೆ 13 ಎನ್ನ ಬಿನ್ನಪ ಕೇಳಿ ಮನ್ನಿಸೊ ಕೃಷ್ಣ ಪನ್ನಂಗಶಯನ ನಿನ್ನ ಪಾದಕ್ಕೆರಗುವೆನು 14 ಪಾದ ಉರಗ ಮೆಟ್ಟಿದ ಪಾದ ನಿನ್ನ ಧ್ವಜವಜ್ರಾಂಕುಶ ಪಾದಕ್ಕೆರಗಿ ನಮಿಸುವೆನು 15 ಬರೆದ ಓಲೆಗೆ ಹಚ್ಚಿ ಅರೆದರಿಷಿಣವ ಕರವ ಜೋಡಿಸಿ ಕೊಟ್ಟು ಕಳುಹೆ ದ್ವಾರಕೆಗೆ16 ಜಗದೀಶಗೆ ಪತ್ರವ ಜಾಣೆ ತಾ ಬರೆದು ದ್ವಿಜನ ಕೈಯಲಿ ಕೊಟ್ಟು ಕಳುಹೆ ದ್ವಾರಕೆಗೆ 17 ವ್ಯಾಳ್ಯ ಮೀರುವುದೆಂದು ಎದ್ದಾಗ ರುಕುಮ ಭೇರಿ ತಾಡನ ಮಾಡಿಸೆ ಭೋರೆಂಬೊ ರಭಸ 18 ಎರೆದು ಮುಡಿಯನ್ಹಿಕ್ಕಿ ಜಡೆಯಬಂಗಾರ ಚೌರಿ ರಾಗಟೆ ಗೊಂಡ್ಯ ಧರೆಗೆ ಮುಟ್ಟುತಿರೆ 19 ಅಚ್ಚ ಜರತಾರಿ ಹೊಳೆವಷ್ಟಪತ್ರಿಕೆಯು ಮ್ಯಾಲೊಪ್ಪುವೊ ಪಟ್ಟೀನೊಡ್ಯಾಣ ಸರಿಸಿಟ್ಟು 20 ಕಂಕಣ ಚೂಡ್ಯ ದ್ವಾರ್ಯ ್ಹರಡಿ ಕೈಕಟ್ಟು ಮ್ಯಾ- ಕಂಚುಕ ತೊಟ್ಟು 21 ಹರಳು ಮಾಣಿಕ್ಯದ್ವಾಲೆ ಬುಗುಡಿ ಬಾವುಲಿಯು ಹೊಳೆವೊ ಮುತ್ತಿನ ಮೂಗುತಿ ಥಳಥಳಸುತಲಿ 22 ಹಾರ ಪದಕದ ಮಧ್ಯ ಮೇಲಾದೇಕಾವಳಿಯು ತೋರ ಮುತ್ತಿನ ದಂಡೆ ಲೋಲ್ಯಾಡುತಿರಲು 23 ಕನ್ನಡ್ಯಂದದಿ ಗಲ್ಲ ಕಳೆಯ ಸುರಿಸುತಲಿ ಸಣ್ಣಮುತ್ತಿನ ಗೊಂಚಲು ಸರಗಳಲೆಯುತಲಿ 24 ಝಗಝಗಿಸುತ ಬಂದಳು ಜಗದ ಮೋಹಿನಿಯು ಮುಗುಳು ನಗೆಯಿಂದ ಮೂರ್ಜಗವ ಮೋಹಿಸುತ 25 25 ಗೆಜ್ಜೆ ಸರಪಳಿ ಅಂದಿಗೆ ಹೆಜ್ಜೆಸರಿಸಿಡುತ ನಿರ್ಜರೇಶನ ಮಾರ್ಗದ ನಿರೀಕ್ಷಣದಿಂದ 26 ಸುತ್ತ ಮುತ್ತೈದೇರು ಕತ್ತಿಕೈ ಭಟರು ತುತ್ತೂರಿ ವಾದ್ಯ ಭೇರಿ ತಮ್ಮಟೆ ಕಾ(ಕಹ?) ಳೆ 27 ನಡೆದು ರುಕ್ಮಿಣಿ ಹೊಕ್ಕಳು ಗುಡಿಯ ಮಹಾದ್ವಾರ ಮೃಡನರಸಿಯ ಪೂಜಿಸಿ ದೃಢಭಕ್ತಿಯಲಾಗ 28 ಹಿರಿಯ ಮುತ್ತೈದೇರಿಗೆ ಮರದ ಬಾಗಿನವ ಅರೆದರಿಷಿಣ ಕುಂಕುಮ ಕರದಲ್ಲಿ ಗಂಧ 29 ಕಡಲೆ ಕಬ್ಬು ಕಾಯಿ ಉಡಿಯ ತುಂಬುತಲಿ ಕಡಲಶಯನನ ಮಾರ್ಗವ ಬಿಡದೆ ನೋಡುತಲಿ 30 ಮಂಗಳಗೌರಿಯೆದುರಿಗೆ ಮುತ್ತೈದೇರು ಅಂಗನೆ ಭೈಷ್ಮಿ ಪೀಠದಲಿ ಕುಳ್ಳಿರಿಸಿ 31 ಮಂಗಳಾಂಗನು ನಿನ್ನ ಪತಿಯಾಗಲೆಂದು ಮಂಗಳಸೂತ್ರ ಬಂಧನ ಮಾಡಲು ನಗುತ 32 ಮಾರನಯ್ಯನ ಮೋರೆ ನೋಡಿದಾಕ್ಷಣದಿ ಮಹಾ- ದ್ವಾರದಿ ಮುತ್ತು ಸೂರ್ಯಾಡೇನೀಕ್ಷಣದಿ 33 ಹರನ್ವಲ್ಲಭೆ ತೋರೆ ಮುರಹರನ ಕರಿವರನ ಭಯ- ಹರನ ಶ್ರೀಧರನ ಕೊಡುವೆನೀ ದೇವರನು 34 ಮಚ್ಛಲೋಚನೆ ಧ್ಯಾನ ಅಚ್ಚ್ಯುತನಲ್ಲೇ ಇಡೆ ಭಕ್ತ- ವತ್ಸಲ ಬಂದನೆಂದೆಚ್ಚರಿಸಿದರು35 ಹತವಾದ ಪ್ರಾಣ ಬರಲತಿ ಹರುಷವ್ಹ್ಯಾಗೋ ರಥವ ಕಾಣುತ ರುಕ್ಮಿಣಿ ಕೃತಕೃತ್ಯಳಾಗ 36 ಸೃಗಾಲದ ಮಧ್ಯ ಒಂದು ಸಿಂಹ ಹೊಕ್ಕಂತೆ ಶ್ರೀನಾಥ ರುಕ್ಮಿಣಿಯ ಸ್ವೀಕಾರ ಮಾಡಿದನು 37 ರಥವು ಮುಂದಕೆ ಸಾಗೆ ಪಥವು ತೋರದಲೆ ಅಲೆ ಬಾಯ ಬಿಡುತ ಶ್ರೀಪತಿಯ ಬೆನ್ನ ್ಹತ್ತಿ 38 ಬಂದ ರುಕುಮನ ಗಡ್ಡ ಮಂಡಿ ಸವರುತಲಿ ಬಂಧನ ರಥಕೆ ಮಾಡಿದ ನಂದಸುತನು 39 ವಾರೆನೋಟದಿ ನೋಡಿ ಮೋರೆ ತಗ್ಗಿಸಿದ ನಾರಿ ರುಕ್ಮಿಣಿಯ ಮುಖ ನೋಡಿ ಶ್ರೀಕೃಷ್ಣ 40 ಕರುಣವಿರಲಿಕ್ಕೆ ನೀ ಬರೆದ್ಯಾತಕೆ ಓಲೆ ತಿಳಿಯಲಿಲ್ಲವೆ ಎಂದೀಪರಿ ಹಾಸ್ಯದಿ ನುಡಿದ41 ಒಡಹುಟ್ಟಿದವನಲ್ಲಿ ಕಡು ಮೋಹವಿನ್ನೂ ಹಿಡಿಯದೆನ್ನೊಳು ಕೋಪ ಬಿಡುರುಕ್ಮಿಣಿ ಎಂದ 42 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಹರಿಯೆ | ಕರುಣ ವಾರಿಧಿಯೆ | ಧೊರೆಯೇ |ವರ ಚರಣ ಸೇವೆಯನು ಕೊಡು ಹರಿಯೇ ಪ ಗಾಂಗೇಯ | ಶರದಿ ಸೆಣೆಸಲು ಅಂದುಸರಸದಲಿ ನೀ ಅವನ | ಪೊರೆಯಲಿಲ್ಲವೆ ಎಂದು 1 ದುರುಳ ದುಶ್ಯಾಸನ | ಸೀರೆ ಸಭೆಯಲಿ ಸೆಳೆಯೇತರಳೆ ಪಾಂಚಾಲೆ | ಓಲೆ ಕಳುಹಿದಳೆ ಹರಿಯೆತರುಳೆ ಕೈಗಾಯ ಬೇಕೆಂದು | ನಿನ್ನ ಧೊರೆಯೇಎರಳಾಕ್ಷಿಗಕ್ಷಯ್ಯ | ವಸನಿತ್ತೆ ಹರಿಯೇ 2 ಅಂದು ಬಲತಾಯಿ ಬಾಲಕನ | ತೊಡೆಯಿಂದ ನೂಕೇ |ಬಂದು ಕಾನನಕೆ ತಪಗೈದ | ತರಳನನು ಕಾಯ್ದೇ |ಇಂದು ನಾ ಮಾಡಿದಪರಾಧ | ವೇನಯ್ಯ ಹರಿಯೇ |ಕಂದನಪರಾಧ ಎಣಿಸುವಳೆ | ತಾಯಿ ಧೊರೆಯೇ3 ಗೌತಮರ ಮಡದಿಯನು | ಕಾಯಲಿಲ್ಲವೆ ಹರಿಯೆಔತಣವ ಕೊಟ್ಟು ಬರ | ಹೇಳಿದಳೆ ಧೊರೆಯೇ ||ವೀತಶೋಕನೆ ಎನ್ನ | ಮೊರೆ ಕೇಳಿಸದೆ ಹರಿಯೇಔತಪ್ರೋತ ನೀನೆಲ್ಲವನು | ತಿಳಿದಿರುವೆ ಧೊರೆಯೇ 4 ಬಲಿಯ ಯಾಚಿಸುತ | ನೀ ಅವನ ವಂಚಿಸಿದಿ ಹರಿಯೆತಲೆ ಬಾಗಲಲಿ ನಿಂದು | ನೀ ಅವನ ಪೊರೆದೆ ಧೊರೆಯೆಸಲೆ ಬೀದಿ ಬೀದಿಯಲಿ | ನಾ ಕೀರ್ತಿಸುವೆ ಹರಿಯೇಬಲು ದಯಾಪರ ಗುರು | ಗೋವಿಂದ ವಿಠಲೆಂದು ಧೊರೆಯೆ 5
--------------
ಗುರುಗೋವಿಂದವಿಠಲರು
ಅನುದಿನ ಚರಣಕಮಲವ ತೋರಮ್ಮ ನಮ್ಮಮ್ಮಾ ಪ. ಮನೋಭಿಮಾನಿಯೇ ಎನ್ನವಗುಣಗಳೆಣಿಸದೆ ತ್ವರಿತದಿ ಬಂದು ಮುತ್ತಿನ ಗದ್ದಿಗೆಯನೇರಮ್ಮ ನಮ್ಮಮ್ಮಾ ಅ.ಪ. ದಕ್ಷಕುವರಿ ದಾಕ್ಷಾಯಿಣಿ ಗೌರಿ ಪಕ್ಷಿವಾಹನನ ಸೋದರಿ ಈಕ್ಷಿಸುತಿರುವೆನು ಉಪೇಕ್ಷಿಸದೆ ಎನ್ನ ರಕ್ಷಿಸಿ ಕಾಯೆ ಪಾರ್ವತಿ ತಾಯೆ 1 ಶಂಭುದೇವನ ರಾಣಿ ಹೃದಯಾಂಬರದೊಳು ನಿಂದು ಅಂಬರ ಪೂಜಿತೆ ನಂಬಿದ ಭಕ್ತರ ಪೊರೆವ ಸದ್ಗುಣ ಚರಿತೆ 2 ಗೆಜ್ಜೆ ಪಾದಗಳಿಂದ ಘಲ್ ಘಲ್ ಎನುತ ಬಾರಮ್ಮ ಹೆಜ್ಜೆಯನಿಡುತ ಮುಗುಳ್ನಗೆ ನಗುತ ಬಾರಮ್ಮ ಸುಜ್ಞಾನ ಮತಿಯಿತ್ತು ಕಾಯುವ ತಾಯಿ ಬಾರಮ್ಮ 3 ಕಂಚುಕ ಪಟ್ಟೆಯ ಪದಕ ಕಟ್ಟಿದ ಕಠಾಣೆ ಮುತ್ತಿನಮೂಗುತಿ ಪಚ್ಚೆಯ ಓಲೆ ಇಟ್ಟ ಕಸ್ತೂರಿತಿಲಕ ಕೆತ್ತಿದ ಕಿರೀಟ ಹೊಳೆಯುತ 4 ಬೇಡಿಕೊಂಬೆವೆ ತಾಯೆ ನೀ ಎನ್ನ ಆಪತ್ತು ಪರಿಹರಿಸಿ ಪಾಡಿ ಪೊಗಳಿ ಕೊಂಡಾಡುವೆ ಕಾಯೆ ತಾಯೆ ಬೇಡಿದ ವರಗಳ ರುಕ್ಮಿಣೀಶವಿಠಲನ ಕರುಣದೆ ನೀಡೆ ತಾಯೆ 5
--------------
ಗುಂಡಮ್ಮ
ಎಂಥ ಕೌತುಕವೆ ನಿಮ್ಮಿಬ್ಬರದೆಂಥ ಕೌತುಕವೆಎಂಥ ಕೌತುಕ ಚಿಂತಾಮಣಿಯ ನೋಡಿಸಂತೋಷ ವಾಗದೆ ಕಾಂತೆಯರುಕಾದುವ ಎಂಥ ಕೌತುಕವೆ ಪ. ನಾರಿಯರಿಬ್ಬರ ಬಿಟ್ಟು ನೀರೊಳಡಗಿದಮಾರಿ ತೋರದಲೆ ನೆಲವನೆ ಮಾರಿ ತೋರದಲೆ ನೆಲವನೆ ಬಗಿದುಅತಿ ಕ್ರೂರನಾದರೂ ಬಿಡರೆಲೆ ಸಖಿಯೆ1 ತಿರಕ ತಾಯಿಯಸುದ್ದಿ ಅರಿತವನಲ್ಲದೆದೊರೆತನ ಬಿಟ್ಟು ದನವನೆ ಕಾಯ್ದುದೊರೆತನ ಬಿಟ್ಟು ದನವ ಕಾಯ್ದರುನಿಮ್ಮ ಕರಕರೆ ಒಂದು ಬಿಡರೆಲೆ ಸಖಿಯೆ2 ಬತ್ತಲಾಗಿ ಎನ್ನ ಹತ್ತಿಲೆ ನಿಲ್ಲೆಂದುಎತ್ತ ಓಡಲೆನುತÀ ಕುದುರೆಯಎತ್ತ ಓಡಲೆನುತ ಕುದುರೆ ಜಳಕಿಸಿಬೆನ್ಹತ್ತಿ ಕೊಂಡವನ ಬಿಡರೆಲೆ ಸಖಿಯೆ3 ಕಾಲ ನಳಿನಾಕ್ಷಿ ಆಗ ನೆರವಾದಿನಳಿನಾಕ್ಷಿ ಆಗ ನೆರವಾದಿ ಉಪಕಾರ ಒಲಿದುಶ್ರೀಕೃಷ್ಣ ಮದುವ್ಯಾದ ಸಖಿಯೆ 4 ಕುಂದುಗುಣಗಳೆಲ್ಲ ಮುಂದಕ್ಕೆ ತಾರದೆ ಹಿಂದಿನ ಉಪಕಾರ ಸ್ಮರಿಸುತ ಹಿಂದಿನ ಉಪಕಾರ ಸ್ಮರಿಸುತ ಅವಳು ಮುಂದೆ ಬೇಕೆಂದು ಮನಸೋತ ಸಖಿಯೆ5 ಭಾವೆ ರುಕ್ಮಿಣಿ ನಿಮ್ಮ ಹೀನಗುಣನೋಡದೆಕಾಮನ ಪಿತನು ಕೈ ಹಿಡಿದ ಕಾಮನ ಪಿತನು ಕೈ ಹಿಡಿದ ಕಾರಣಭೂಮಂಡಲವೆಲ್ಲ ನಮಿಸಿತು ಸಖಿಯೆ 6 ಅಷ್ಟು ಜನರೊಳು ಧಿಟ್ಟತನವ ಮಾಡಿಗಟ್ಯಾಗಿ ನೀನು ರಥವೇರಿಗಟ್ಯಾಗಿ ನೀನು ರಥವೇರಿ ಧೈರ್ಯದಿಕೃಷ್ಣನ ಬೆರೆದು ತೆರಳಿದಿ ಸಖಿಯೆ 7 ಮುದ್ದು ರಾಮೇಶಗೆÀ ಕದ್ದು ಓಲೆಯ ಬರಿಯೆಹದ್ದು ವಾಹನನು ಎರಗಿದಹದ್ದು ವಾಹನನು ಎರಗಿದ ಕಾರಣವಿದ್ವಜ್ಜನರೆಲ್ಲ ನಮಿಸಿತು ಸಖಿಯೆ8
--------------
ಗಲಗಲಿಅವ್ವನವರು
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಒಡವೆ ಹೋಯಿತು ಮನ ದೃಢವಾಯಿತು ಪ ಹಿಡಿದರೋಡುವ ಕಳ್ಳ ಬಿಡದೆ ಕದ್ದುಕೊಂಡು ಹೋದಅ ಆರು ಜೋಡಿನ ಓಲೆಯಿತ್ತು ಮೂರು ಮುತ್ತಿನ ಮೂಗುತಿಯಿತ್ತುಚಾರುತರದ ಇಪ್ಪತ್ನಾಲ್ಕೆಳೆಯ ಸರವು ಒಂದಿತ್ತುಈರೈದು ತಾಳಿಗಳಿತ್ತು ಬಿರುದಿನ ಕಪ್ಪೆಂಟಿತ್ತುದಾರಿ ನೋಡಿಕೊಂಡು ಇದ್ದ ಛಾಯನೆಂಬ ಕಳ್ಳ ಕದ್ದ 1 ಎಪ್ಪತ್ತೆರಡು ಸಾವಿರ ಸೂತ್ರದ ಹಸ್ತಕಟ್ಟು ಎರಡಿತ್ತುಕಪ್ಪು ಬಿಳುಪು ಕೆಂಪು ವರ್ಣದ ಪದಕ ಒಂದಿತ್ತುಒಪ್ಪವಿತ್ತ ಹಸ್ತಕಡಗ ಆಶಾಪಾಶವೆರಡಿತ್ತುಒಪ್ಪವನ್ನು ಸಾಧಿಸಿ ನೇತ್ರನೆಂಬ ಕಳ್ಳ ಕದ್ದ 2 ಹುಟ್ಟು ಸಾವು ಎರಡು ಎಂಬ ಘಟ್ಟಿ ತೂಕದ ನಗವಿತ್ತುಕಷ್ಟ ಸುಖ ಕರ್ಮಗಳೆಂಬ ಸಂಚಿಗಳಿತ್ತುಅಷ್ಟು ಇಷ್ಟು ಚಿಲ್ಲರೆ ಒಡವೆ ಪೆಟ್ಟಿಗೆಯಲಿ ತುಂಬಿತ್ತುದೃಷ್ಟಿ ನೋಡಿಕೊಂಡು ಇದ್ದ ಧರ್ಮನೆಂಬ ಕಳ್ಳ ಕದ್ದ 3 ಎಲ್ಲ ಒಡವೆ ಹೋಯಿತಾದರು ಪುಲ್ಲಳಾಗಿ ಮೆರೆಯುತಾಳೆಚೆಲ್ವನೊಬ್ಬ ಪುರುಷನ ಕಂಡು ತಾಳಲಾರದೆಬಲ್ಲಿದಳು ಈಕೆ ಎಂದು ಇವಳ ಬಗೆ ತಿಳಿಯಿತೆಂದುಕೊಲ್ಲಬಾರದೆನುತ ಹೇಳಿ ಮನೆಯ ಬಿಟ್ಟು ಹೊರಗಟ್ಟಿದ4 ಇಂಥ ಒಡವೆ ಹೋಯಿತೆಂದು ಚೋದ್ಯಪಟ್ಟು ನೋಡುತಿರಲುತಂತ್ರ ಮಾಡಿ ಆದಿಕೇಶವ ಶ್ರೀಹರಿಯು ತಾನೆ ಬಂದುತಂತ್ರವನ್ನು ಹೇಳಿ ಜ್ಞಾನ ಮಾರ್ಗವನ್ನು ಬಿಟ್ಟುಕೊಟ್ಟುಸಂತಸದಿಂದ ಇರು ಎಂದು ಚಿಂತೆ ಬಿಡಿಸಿ ಸಲೆ ಸಲಹಿದ 5
--------------
ಕನಕದಾಸ
ಕಂಡೆನು ಹರಿಸತಿಯ ಸುರಚಿರದುಂಡ ಕಂಕಣ ಕೈಯ್ಯಾಮಂದಾರ ಮಲ್ಲಿಗೆಯ ಹೆರಳಲಿ ದಂಡೆ ಮುಡಿದ ಪರಿಯ ಪ ಪೈಜಣಯಿಟ್ಟಿಹಳು ಗಳದಿ ಕಟ್ಟಾಣಿಯ ಕಟ್ಟಿಹಳುಹಾಟಕ ಹಾರಗಳು ನೋಳ್ಪರ ನೋಟಕೆ ಹಬ್ಬಗಳು 1 ಹೇಮ ಕಂಚುಕ ಪುತ್ಥಳಿ ಮಾಲೆ ತೂಗುವ ಕಟಿಯು 2 ಸರಸಿಜನುವ ಮುಖಿಯು ನಾಶಿಕ್ಹರಳು ಮುತ್ತಿನ ಗೊನೆಯುಹರಳು ಓಲೆಯ ಪ್ರಭೆಯು ಕರ್ಣದಿ ಕುರುಡು ದ್ರಾಕ್ಷಾಲತೆಯು 3 ಸುಂದರಿ ಶುಭಗಾತ್ರೆ ಸುಖಮಯ ಸಿಂಧೂರ ಪಟಾಕಾ ಮಾತ್ರೆಮುಂದೆ ಫಲದ ಪಾತ್ರೆ ಇಟ್ಟಳು ಬಂದು ಸರಸ ನೇರಿ4 ನಂದಬಾಲನ ಮಡದಿ ಸ್ವಪ್ನದಿ ಬಂದು ನಿಂತಳು ಭರದಿಆನಂದವಾಯ್ತು ಮನದಿ ಕಂಡೆನು ಇಂದಿರೇಶನ ದಯದಿ 5
--------------
ಇಂದಿರೇಶರು
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಕೋಲನ್ನ ಕೋಲೇ ಕೋಲೇ ಕೋಲನ್ನ ಕೋಲೇಸದ್ಗುರುವ ಬಲಗೊಂಬೆ ಕೋಲನ್ನ ಕೋಲೆ ಪ ನಾಯಿಗೋಣನೆ ಮುರಿದು ನಾಗಾರ ಇಲಿ ತಿಂದುಹೋಯಿತೇ ಕಣ್ಣು ಕಾಗೆಯದು ಕೋಲನ್ನ ಕೋಲೆ 1 ಕಷ್ಟದ ಹದ್ದನೆ ಬಡಿದು ಇಷ್ಟವಿಲ್ಲದೆ ಗುಡ್ಡವನೇರಿದವನ ನರಿಸೂಚಿಸಿತೇ ಕೋಲನ್ನ ಕೋಲೆ2 ಆನೆಯ ಅಣುನುಂಗಿ ಅಡರಿತೇ ಮೇಲಕೆಕೋಣನ ಕೋಗಿಲೆ ನುಂಗಿತೇ ಕೋಲನ್ನ ಕೋಲೆ 3 ಊದಿತ್ತು ಓಲೆಯು ಒಂಭತ್ತು ಮಡಕೆಗೆಹಾದಿಯಾಯಿತೇ ನಡುವಣ ಮಾರ್ಗ ಕೋಲನ್ನ ಕೋಲೇ4 ಕದವನೆ ತೆರೆದು ಕಳ್ಳರ ಬಲಿಕೊಟ್ಟುಮೊದಲಗಿತ್ತಿಗೆ ಮೂಗುತಿಯಿಟ್ಟೆ ಕೊಲನ್ನ ಕೋಲೇ 5 ತುಂಬಿ ಕಮಲ ಕಳೆಯೇರೆ ಕೋಲನ್ನ ಕೋಲೇ 6 ಓಡಿಲಗಲ ಮಾಡಿ ಉಣ್ಣದೂಟವುಂಡುಓಡುವ ಹಾರುವನ ಕಟ್ಟಿಹಾಕಿ ಕೋಲನ್ನ ಕೋಲೆ 7 ಕೋತಿಯು ಸತ್ತಿತೇ ಕೊಡವೀಗ ಒಡೆಯಿತೇಜೋತಿಯು ಒಳಗ್ಹೊರಗೆ ಬೆಳಗಿತೇ ಕೋಲನ್ನ ಕೋಲೆ 8 ಮುದುಕಿಯನೆ ಕೊಂದು ಮರವನೆ ಮುರಿದೊರಗಿಚಿದಾನಂದ ಬ್ರಹ್ಮ ತಾನಾಯಿತೇ ಕೋಲನ್ನ ಕೋಲೆ9
--------------
ಚಿದಾನಂದ ಅವಧೂತರು
ಗಾಡಿಯೆತ್ತಲಿಂದ ಬಂದುದೆ ಮಾತ ನಾಡಲರಿಯದಿಪ್ಪ ಹೊಚ್ಚ ಹೊಸ ಹರೆಯದ ಮುಗುದೆಗೀ ಪ ಬಳುಕೆ ಸಿಂಹಮಧ್ಯ ಬಟ್ಟಮೊಲೆಗಳು ಮರೆ ತೋರವಾದ ಬಳವಿ ಮುಡಿಯೊಳಲರು ಹೊಯ್ಯನಿಳೆಯಲುದುರಲು ಜಲಜಮುಖದಿ ಬೆಮರುದೋರೆ ವಲಯಹಾರ ಉರದಿ ಘಲಿರು ಘಲಿರೆನೆ ಆವಕಡೆಯು ಕುಲುಕಿ ಕುಲುಕಿ ನಡೆವ ಈ 1 ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಲಜ್ಜೆ ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸಿ ಸಸಿನೆ ತಿದ್ದಿ ಉರದಿ ಜರಿಯ ವಸನವನ್ನು ಸಂತವಿಸುತ ಕುಸುರಿಲಂಗ ದಂದವನ್ನು ಎಸಸಿ ಬಿಡುವ ನಡೆವ 2 ಕರವನೊಯ್ಯಗೊಲಿದು ಉರಗಗಿರಿಯ ಮೇಲೆ ಬಾಲಚಂದ್ರ ನಿರಲು ಸೆರಗ ಮರೆಯಮಾಡಿ ಮರಳಿ ಮರಳಿ ನೋಡುತಾ ಸ್ಮರನತಾತ ಸುರನಗರದೆರೆಯ ವೈಕುಂಠಲಕ್ಷ್ಮಿಯರಸನೊಡನೆ ನೆರೆದ ಪರಿಯ ಸಿರಿಯ ಗರುವ ಗಮನದಾ 3
--------------
ಬೇಲೂರು ವೈಕುಂಠದಾಸರು
ಗಾಡಿಯೆತ್ತಲಿಂದ ಬಂದುದೇ ಮಾತ ನಾಡಲರಿಯದಿಪ್ಪ ಹೊಚ್ಚಹೊಸ ಹರೆಯದ ಮುಗುದೆಗೀ ಪ ಬಳುಕೆ ಸಿಂಹಮಧ್ಯ ಬಟ್ಟ ಮೊಲೆಗಳದುರೆ ತೋರವಾದ ಬಳಲುಮುಡಿಯೊಳಲರು ಒಯ್ಯನಿಳೆಯೊಳುದುರಲೂ ಜಲಜಮುಖದಿ ಬೆವರುದೋರೆ ವಲಯತೋರಹಾರ ಉರದಿ ಘಲಿರು ಘಲಿರನುಲಿವ ಕುಲುಕಿ ಕುಲಕಿ ನಡೆವ ಯೀ 1 ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಿ ಲಜ್ಜೆ ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸೆ ಸಸಿನೆ ತಿದ್ದಿ ಉರದಿ ಜರಿವ ವಸನವನ್ನು ಸಂತವಿಸುತ ಉಸುರಿಲಿಂದ ಗಂಧವನ್ನು ಎಸಸಿಬಿಡುವ ನಡೆವ ಯೀ 2 ಕರವನೊಯ್ಯನೊಲಿದು ರೋಜಗಿರಿಯ ಮೇಲೆ ಬಾಲಚಂದ್ರ ನಿರಲುಸೆರಗಮರೆಯಮಾಡಿ ಮರಳಿಮರಳಿನೋಡುತಾ ಸ್ಮರನತಾತ ಸುರನಗರ ದೆರೆಯ ಲಕ್ಷ್ಮಿಯರಸನೊಡನೆ ನೆರೆದಪರಿಯ ಸಿರಿಯ ಗರುವಗಮನದಾ ಯೀ 3
--------------
ಕವಿ ಲಕ್ಷ್ಮೀಶ
ಗೌರಿ ಗಜಮುಖನ ಮಾತೆ | ಗುಣಗಣ ಭರಿತೆ ಶೌರಿ ಸಖನಂಗಸಂಗೀ ಸಂಪೂರ್ತೆ ಪ ಶುಭ ತನು ವಾರಿಜನೇತ್ರಳೆ ವೀರಸತಿಯೆ ದಯವಾರಿಧಿ ಪಾಲಿಸು ಅ.ಪ. ತುಂಗ ಮಂಗಳೇ ದೇವಿ | ಕಲಿಗೆ ಭೈರವೀ ರಂಗಾನ ನವವಿಧಿ ಭಕ್ತಿ ಸಂಗ ನೀಡುವಿ ಹಿಂಗದೆ ಪೊರಿಯೆ ತಾಯೇ | ಭಕ್ತ ಸಂಜೀವೆ ತಿಂಗಳ ಮುಖಿವರಗರಿವೆ | ನಮ್ಮ ಶಂಭುವೆ ಭಂಗಬಟ್ಟೇನು ನುಂಗುವ ಭವದೊಳು ಮಂಗಳ ಕರುಣಾಪಾಂಗದಿ ನೋಡೆನ್ನ ಭವ ಭಯ ಗಂಗೆಯ ಧರನಂಘ್ರಿ- ಭೃಂಗಳೆ ಬೋದಯಾಕಂಗಳೆ ಕರುಣಿಸು 1 ಇಂದ್ರಾದಿ ಸುರಗುರುವೆ | ದೇವ ತರುವೆ ಪರಿ ನಿನ್ನ ಬೇಡುವೆ ಕುಂದನೆಣಿಸದಲೆ ಶಿವ ಶಂಕರಿ ಕಾವೆ ಸಂದೇಹ ಕಳಿ ವಿಭುವೆ | ವೀರಜತನುವೆ ನೊಂದವನಾ ಮ್ಯಾಲ್ಹೊಂದಿಸು ಕರುಣವ ಮಂದಸ್ಮಿತೆ ಮುಕುಂದನ ಮನದಲಿ ವಂದಿಸು ಅನಿಮಿತ್ತ ಬಂಧುವೆ ರಕ್ಷಿಸು 2 ಕಸ್ತೂರಿ ಕುಂಕುಮ ಫಾಲೆ | ರನ್ನಾದ ಓಲೆ ವಸ್ತುಗಳಿಟ್ಟ ಹಿಮವಂತನ ಬಾಲೆ ಶಿಸ್ತಿನ ಶುಭ್ರಾಂಬರಧಾರೆ ವನಮಾಲೆ ಮಸ್ತಕದ ಕಿರೀಟ ವದನೆ ತಾಂಬೂಲೆ ಸಿರಿ ಹಸ್ತಗಳಿಟ್ಟೆನ್ನ ದುಸ್ತರದ ಹಾದಿಗಳಸ್ತಮಮಾಳ್ಪುದು ವಿಸ್ತರ ಮಹಿಮ ಜಯೇಶವಿಠಲ ವಸ್ತುವ ನೀಡಮ್ಮ ಹಸ್ತಿಯ ಗಮನೆ 3
--------------
ಜಯೇಶವಿಠಲ
ಪಡಿಶಟ್ಟು ಪಟ್ಟಣವ ಕೇಳದೆಯಕ್ಕಪಡಿಶಟ್ಟು ಪಟ್ಟಣವಪಡಿಶಟ್ಟು ಪಟ್ಟಣದ ವಿವರ ಕೇಳೇಹುಟ್ಟಳಿವುದಕೆ ಕಡೆಯಿಲ್ಲ ಪ ಪಟ್ಟಣದರಸಗೆ ತಲೆಯೇ ಇಲ್ಲಪಟ್ಟಣದರಸನ ಹೆಂಡತಿ ರಂಡೆಪಟ್ಟುಗೊಡುವ ಓಲೆಕಾರರು ಪಾಪಾಶಿ ಬೆಲೆಯವರು 1 ಸಿಂಗಲೀಕನವ ಪ್ರಧಾನಿ ಶಿಷ್ಟನೀಗವನು ಕೋಣಮಂಗಳನೀಗವನು ತಳವಾರಅಂಗತಿರುಗುವವನೆ 2 ಕರಣೀಕನೀಗವ ಮೊಂಡನೊಣವು ಎಂಬುವನವನಾಚಾರಿಹಿರಿಯ ಗೂಗೆ ಬಹಳ ಮುದುಕಿ ಎಲ್ಲರಿಗು ಹಿರಿಯವಳು 3 ಹದ್ದು ಈಗ ತಾ ದಳವಾಯಿನೀಚರೆಲ್ಲರು ನಾಯಕರುಇದ್ದ ವಕ್ಕಲು ಎಲ್ಲ ದುಃಖಿಗಳು ಬಲು ಎಡವಟ್ಟುಗಳು 4 ಗುರು ಕರುಣದಿ ಅರಸಗೆ ತಲೆ ಬರಲುಅರಸನ ಹೆಂಡತಿ ಮಂಗಳೆಯಾಗಲುಗುರು ಚಿದಾನಂದ ತಾನಾದರಸು ಎಲ್ಲರು ಮುಕ್ತರೆ 5
--------------
ಚಿದಾನಂದ ಅವಧೂತರು
ಮೂರ್ತಿ ನೀ ಬಿಸಜಾಲಯೆ ಸಹಿತ ಪ ಎಸೆವ ಪೀಠಕೆ ನಸುನಗುತೀಗಲು ಕುಸುಮಾಸ್ತ್ರನ ತಾತ ಅ.ಪ ಬ್ರಹಾದಿ ಸುರರ್ ಪ್ರಾರ್ಥನೆ ಗೈವರ್ ಸಾರಥಿ ಮನವಲಿದು ತ್ವರಿತದಿ ದಯಮಾಡಿ 1 ಓಲೆ ಬರೆದು ತಾ ಒಲಿಸಿಕೊಂಡ ಳಾಲೋಲ ನಯನೆ ನಿನ್ನಾ ಫಾಲಾಕ್ಷನ ಸಖ ಪುರಷೋತ್ತಮ ಜಗ ತ್ಪಾಲನ ಸಂಪನ್ನ 2 ಪಾನುಜ ಸರ್ವಾಂತರ್ಯಾಮಿ ರಮಣೀಯ ಮಹಿಮಾರ್ಣವ ಶ್ರೀಗುರು ರಾಮವಿಠಲ ಸ್ವಾಮಿ 3
--------------
ಗುರುರಾಮವಿಠಲ
ವರದರಾಜ ವಿಠಲ | ಪೊರೆಯ ಬೇಕಿವನಾತರಳತವದಾಸ್ಯಕ್ಕೆ | ಮೊರೆಯನಿಡುತಿಹನಾ ಪ ಜನಿತ ಜನಿತ ಸಂಸ್ಕಾರಗಳನೀನಾಗಿ ಕಳೆಯುತಲಿ ಮಾನನಿಧಿ ಸಲಹೋ 1 ತೈಜಸನೆ ಓಲೆಯಲಿ | ಯೋಜಿಸಿದ ಅಂಕಿತವಾಮಾಜದಲೆ ಇತ್ತಿಹೆನೊ | ವಾಜವರ ವದನಾಮಜಗಜ್ಜನ್ಮಾದಿ | ಬ್ರಾಜಿಷ್ಣುಕರಿವರದಓಜಸವನಿತ್ತಿವಗೆ | ನೀ ಜಯನ ಬೀರೋ 2 ಲೌಕಿಕದಿ ಅಭಿಮಾನ | ತೋಕನಿಗೆ ನೀ ಬಿಡಿಸಿಏಕಮೇವನೆ ನಿನ್ನ | ಏಕಮಾನಸದೀ |ಪ್ರಾಕೃತಸುಗೀತೆಯಲಿ | ಝೇಂಕರಿಪ ಸುಕೃಪವಮಾಕಳತ್ರನೆ ಈಯೋ | ಲೋಕೈಕ ಮೂರ್ತೇ 3 ಪತಿ | ಭೂಮಗುಣಪೂರ್ಣಸೋಮಧರ ಮಧ್ಯ ಸತ್ | ಶ್ರೀ ಮಧ್ವ ಮತದೀಕ್ಷೆಕಾಮನಕೆ ತವದಾಸ್ಯ | ಸ್ವಾಮಿ ಕರುಣಿವುದೋ 4 ಪಾವಮಾನಿಗೆ ಪ್ರೀತ | ಭಾವಜಾರಿಯ ತಾತದಾವಗ್ನಿ ಬಹು ಪೀತ | ಗೋವಗಳರತ್ರಾತಗೋವತ್ಸದನಿಗೆ ಹಸು | ಧಾವಿಸೀ ಪೊರೆವಂತೆತಾವಕನ ಪೊರೆಯೊ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು