ಗುರು ವಾದಿರಾಜರ ಸ್ಮರಣೆಯ ಮಾಡಿರೊ ಪ
ಗುರು ವಾದಿರಾಜರ ಸ್ಮರಣೆಯ ಮಾಡಲು
ದುರಿತ ಕಳೆದು ಮನಕೆ ಪರಮ ಹರುಷವೀವ ಅ.ಪ.
ಪೂರ್ಣಭೋಧರ ಮತ ವಾರಿನಿಧಿಗೆ ಸಂ
ಪೂರ್ಣ ಸುಧಾಕರ ಸುಗುಣ ಗಂಭೀರ
ಕ್ಷೋಣಿ ಸುರೋತ್ತಮ ಕ್ಷೋಣಿಪಾಲಕ ಮಾನ್ಯ
ಜ್ಞಾನಿವರೇಣ್ಯ ಹಯಾನನ ಪರಚರಣ 1
ಮಾನಸದೊಳಗಿಹ ಹೀನಮತಿಯ ಕಳೆ
ದಾನಂದ ಕೊಡುವಂಥ ಜ್ಞಾನವ ಕರುಣಿಸಿ
ಪ್ರಾಣನಾಥ ಶ್ರೀ ಕರಿಗಿರೀಶನ ಪದ
ಧ್ಯಾನಿಪ ಸ್ಥಿರಮತಿ ತಾನಿತ್ತು ಪಾಲಿಪ 2