ಚಾರು ಚರಣವ
ಸಾರಿದೆ ಶರಣ ಮಂದಾರ ಕರುಣವ
ಬೀರಿ ಭವವನಧಿ ತಾರಿಸು ತವಕದಿ
ಸೂರಿ ಸುಧೀಂದ್ರ ಕುಮಾರ ಉದಾರ ಪ
ಪಾದ ವನರುಹ ಧ್ಯಾನ
ಪ್ರಣವನ ಸ್ತವನ ಅರ್ಚನೆ ಮಾಳ್ಪ ನಾನಾ
ಜನರ ವಾಂಛಿತವೀವಗುಣ ಪೂರ್ಣ ಜ್ಞಾನ
ಧನಪ ಪಾಲಿಸೆನಗೀಕ್ಷಣ ನಿನ್ನಾಧೀನ
ಮನುಜನ ನೀ ಪ್ರತಿದಿನದಿ ದಣಿಸುವುದು
ಘನವೆ ಗುರುವೆ ಪಾವನತರ ಚರಿತ 1
ಪಾದ ಕೀಲಾಲಜ ಮಧುಪಾ
ಬಾಲಕನ ಬಿನ್ನಪವ ಲಾಲಿಸೋ ಮುನಿಪ
ತಾಳಲಾರೆನೊ ತಾಪತ್ರಯದ ಸಂತಾಪ
ಕೇಳೋವಿಮಲಜ್ಞಾನ ಶೀಲ ಸ್ವರೂಪ
ಭೂಲಲನಾಧವ ಕೋಲನಂದನಾ
ಕೂಲಗವರ ಮಂತ್ರಾಲಯ ನಿಲಯ 2
ಕಲಿಕಲ್ಮಷವಿದೂರ ಕುಜನ ಕುಠರಾ
ನಳಿನಾಕ್ಷ ವಿಮಲ ಶ್ರೀ ತುಲಸಿಯ ಹಾರ
ಗಳ ಸುಶೋಭಿತ ಕಮಂಡಲ ದಂಡಧರಾ
ಜಲಧಿ ವಿಹಾರಾ
ಸುಲಲಿತ ಕರುಣಾಂಬುಧಿಯೆ ಜಗನ್ನಾಥ ವಿ
ಠಲನೊಲಿಮೆಯ ಪಡೆದಿಳೆಯೊಳು ಮೆರೆದಾ 3