ಶರಣಜನೋದಧಿಚಂದ್ರಾ ಸಿರಿ
ಯರಸ ದೇವ ದೇವ ಕರುಣಿ ಮುಕುಂದಾ ಪ
ಹಾರದ ನಿಗದಿಯ ಬಿಟ್ಟು ಸೋತವನಾಗಿ
ವ್ಯಾಸ ಭೀಷ್ಮನ ಗೆಲಿಸಿದೆ ಮುಕುಂದಾ 1
ಹಗಲೇ ಇರಳ ಮಾಡಿ ಸೈಂಧವನಸುವನು
ತೆಗಿಸಿ ನರನ ವಾಸಿ ಕೊಂಡ್ಯೋ ಮುಕುಂದಾ 2
ಶರಧಿಯಂಜಿಸಿಕೊಂಡು ಪಕ್ಷಿಯ ಶಿಶುವಾಗಿ
ಗರುಡನ ವಾಸಿಯ ಕೊಂಡ್ಯೊ ಮುಕುಂದಾ 3
ದಶಜನುಮವತಾಳಿ ಮುನಿಯ ಬೆದರಿಸ್ಯಂಬ
ರಿಕ್ಷಣ ಫಲನಡಿಸಿದೆ ಮುಕುಂದಾ 4
ಗುರು ಮಹಿಪತಿ ಸ್ವಾಮಿ ಭಕ್ತ ವತ್ಸಲನೆಂಬ
ಬಿರುದುವಾಳಿದರೆಂದು ಸಲಹೋ ಮುಕುಂದಾ 5