ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ
ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ
ಪೋರತನದವನು ಎರೆಡು ತೆರೆಗಳಲ್ಲಿ
ದೂರಾಗಿ ಮೊರೆಯು ಅಲ್ಲವೆಂದು
ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ
ಧೀರ ತಾ ಕರವನು ಪಿಡಿದ ಬಳಿಕ 1
ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ
ಅಗದಂಕರನು ತಾನು ಬಳಿಗೆ ಬಂದು
ಬಗೆಬಗೆಯಿಂದಲಿ ಸುರಸ ಪದಾರ್ಥಗಳು
ಸೊಗಸಾಗಿ ಉಣಿಸಲು ಚಿಂತೆಯುಂಟೆ2
ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ
ಕರ್ಣಧಾರನು ತಾನೆ ಬಂದು ನಿಂದು
ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು
ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3
ತನ್ನಯ ಹಿತವು ತಾ ವಿಚಾರಿಸಲವಂಗೆ
ಚನ್ನಾಗಿ ಪರಮ ಗುರು ತಾನೆ ಬಂದು
ಸನ್ಮಾರ್ಗವನು ತಾನೆ ಪೇಳುವೆನೆನಲು
ಇನ್ನು ಆಯಾಸವುಂಟೆ ಅವನಿಗೆ 4
ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು
ಪಾದ ಪದುಮ
ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ
ಈ ಸುಗುಣ ಗುರುರಾಯ ಎನಗೆ ಒಲಿದ 5