ದುರಿತ ಪರಿಹರಿಸೋ ಭಾರಕನು ನೀನು
ಪಾದ ಹೊಂದಿದವರಿಗೆಯಿನ್ನು ಪ
ಮಾನವ ನಾನು ಮನ ಖಚಿತವಿಲ್ಲದ
ಕಂದರಕೆ ಬಿದ್ದು ಬಹುಕಷ್ಟ ಪಡುತಾ
ಸಂದೇಹವಾನು ಬಿಡದೆ ಸಂಶಯಿಸಿ ನಿನ್ನೊಮ್ಮೆ
ಎಂದು ಕೊನಿಮದ ದೋಷದಿಂದ ಅದರಿಂದಾ 1
ಕಷ್ಟವನು ಪಡುವಾಗ ಕೃಷ್ಣ ನೀನೆ ಗತಿಯೆಂದು
ಅಷ್ಟು ಮಾತ್ರ ಸುಖಬರಲು ಅರಿತು ನಿನ್ನ
ನಿಷ್ಠರಾದವರನಾಸಂಖ್ಯ ಅರಿಯೆನು ಮಾಡ್ದ
ದುಷ್ಟ ಬುದ್ಧಿಗಳಿಂದ ದುರುದ್ದೇಷದಿಂದಾ 2
ನೀನೆ ಸೂತ್ರಧಾರನಾಗಿರುವೆ ಸಕಲಕ್ಕೂ
ನಾನೊಂದೂ ಅರಿಯದಜ್ಞಾನಿ ಹರಿಯೆ
ಏನಾದರಾಗಲಿ ಇನ್ನು ಎನ್ನನು ಬಿಡದೆ
ನೀ ದಯಮಾಡಿ ರಕ್ಷಿಸೋ ನಿಜ 'ಹೊನ್ನ ವಿಠ್ಠಲಾ 3