ದಾಸ ಸಂಚಯ

ಇಂದಿನ ಕೀರ್ತನೆ

ದಧಿ ಕಡೆವ ವೇಳೆಗೆ ಪ
ಮಧುವೈರಿ ಬಂದನದಕೋ ಸಂಗಡಿಗರೊಂದಿಗೆ
ವಿಧವಿಧ ರಾಗದಿ ಕೊಳಲನೂದುತ ತಾನು ಅ.ಪ.
ಅರಳೆಲೆ ಮಾಗಾಯಿ ಕಿರುಗೆಜ್ಜೆ ಪಾಗಡ
ಪರಿ ಪರಿಯಾಭರಣಗಳಿಟ್ಟು ಕಿರುನಗೆ ಮುಖದ 1
ವಾರಿಜನೇತ್ರನು ಓರೆನೋಟದಿ ಸಕಲ
ನಾರೀಮಣಿಗಳ ಮನಸೂರೆಗೊಳ್ಳುತಲಿ 2
ಬಾಲನಂದದಿ ತಾನು ಲೀಲೆಯ ತೋರುತ
ಮಾಲೋಲನು ಆಗ ಬೆಂಣೆ ಕೊಡೆನ್ನುತಲಿ 3
ಏನು ಪುಣ್ಯ ಯಶೋದೆ ತಾನು ಮಾಡಿರ್ದಳೊ
ಶ್ರೀನಿಧಿ ಕೃಷ್ಣನು ಸಾನುರಾಗದಲಪ್ಪಿದ 4
ಮುಟ್ಟಿ ಭಜಿಸುವರಘ ಸುಟ್ಟು ಸಲಹು
ದಿಟ್ಟ ಶ್ರೀ ರಂಗೇಶವಿಠಲ ನಲಿಯುತ 5

--- ರಂಗೇಶವಿಠಲದಾಸರು