ಒಟ್ಟು 53 ಕಡೆಗಳಲ್ಲಿ , 18 ದಾಸರು , 34 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಊ) ಲೋಕನೀತಿಯ ಕೃತಿಗಳು ಕೆಟ್ಟಗುಣಗಳು ನರನ ಅಟ್ಟಿಕೆಡಹುತಲಿಹುವು ಭ್ರಷ್ಟನೆನಿಸದೆ ಬಿಡವು ಇವನ ಪ ಸೃಷ್ಟಿಯೊಳಗಿವುಗಳಿಂದೆಷ್ಟುಜನ ಕೆಟ್ಟಿಹರೋ ಕಟ್ಟುತ್ತ ಮುಸಲದಿಂ ಕುಟ್ಟುತಿಹುವೂ ಅ.ಪ ಸರಿಧರೆಯ ಸ್ತ್ರೀಯರಂ ಕಾಯಿಸಲು ನರತಾನು ಹರಿಯಿಂದ ಹತನಾಗಿ ಹೋದಾ ವರವಿಪ್ರನಲಿ ಕ್ರೋಧಮಾಡಿದ ಬಕಾಸುರನ ತರಿದನಲ್ಲವೆ ಭೀಮ ತಾನು 1 ದಾಯವನು ಲೋಭದಿಂ ಕೌರವನು ಪಾಂಡವರಿ ಗೀಯದುದಕವನೇನು ಪಡೆದಾ ರಾಯದಶರಥ ತನ್ನ ಸತಿಸುತರ ಮೋಹವಿರೆ ಆಯುವಿಂ ಗತನಾಗಿ ಹೋದಾ 2 ಜಮದಗ್ನಿಯ ಹೋಮಧೇನುವಂ ಮದದಿಂದೆ ಕಾರ್ತಿವೀರ್ಯಾರ್ಜುನನು ಕೊಳಲು ಅಮಿತಬಲನಾಪರಶುಧಾರಿಯು ತಾನು ಸಮರದೊಳೆ ಸವರುತ್ತ ಅವನ ಕಳೆದ3 ಕೃಷ್ಣನನು ಮತ್ಸರದಿ ಶಿಶುಪಾಲ ಬಯ್ಯಲು ವಿಷ್ಣುಚಕ್ರವು ಕೊಂದಿತವನ ಬಾಣ ತಾನೀರ್ಷೆಯಿಂ ಭವಗವಂತನಿದಿರೇಳೆ ಪ್ರಾಣವುಳಿಯುತ ನಾಲ್ಕು ತೋಳ್ಗಳಾಯ್ತು 4 ವಾಸುದೇವನ ಮೇಲಸೂಯೆಯಿಂ ಪೌಂಡ್ರಕ ವಾಸುದೇವನೊಳು ಅಳಿದ ಕಂಡ್ಯಾ ದೂಷಣೆಯು ಡಂಬಗಳು ನಾಶನವ ಗೈಯುವುವು ಈಶ ಸುಜನರಿಗಾಗಿ ಭಾವಿಸುವ ಜಗದೀ5 ದರ್ಪದಿಂ ದಶಶಿರನು ಮರೆಯುತ್ತಲಿರಲಾಗಿ ಅಪಹಾರಗೈದ ಶ್ರೀರಾಮ ತಲೆಯಾ ರಿಪುಗಳಾ ಮಧು ಕೈಟಭರ ಮಮತೆಯನು ಉಪಮೆಯಲ್ಲಿದು ಮಾಯಿ ಮುರಿದ ನೋಡಾ 6 ನಿರ್ವಿಕಾರನ ನೆನೆದು ಗರ್ವವರ್ಜಿತರಾಗಿ ಸರ್ವವೂ ಹೆಜ್ಜಾಜಿ ಕೇಶವಾ ಯೆಂದು ಪರ್ವತೋದ್ಧರನಲ್ಲಿ ಕರ್ಮಾರ್ಪಣೆಯ ಮಾಡಿ ಒರ್ವನೇ ಜಗದೀಶನೆಂದು ನಮಿಸೀ 7
--------------
ಶಾಮಶರ್ಮರು
ಅನಂತ ಯೋನಿಯೊಳಗೆ ಅನಂತ ಜನ್ಮತಿರುಗಿಅನಂತ ಯುಗಯುಗಂಗಳಲಿ ಸತ್ತು ಹುಟ್ಟೆಅನಂತನಾಟವೆಯೆಂದು ಅರಿವು ಇಲ್ಲದೆ ಹೋಗಿಅನಂತ ದುಃಖಸಾಗರದಿ ಹಿರಿದು ಬಳಲುವಿರಿ 1 ವಿಶ್ವತೈಜಸ ಪ್ರಾಜ್ಞ ಮೂವರೆಂದೆನಿಸಿವಿಶ್ವದೊಳು ನಾನಾ ರೂಪಗಳ ತಾಳಿವಿಶ್ವದೊಳ ಹೊರಗೆಲ್ಲ ಪೂರ್ಣ ತಾನೆಂದೆನಲುವಿಶ್ವಾತ್ಮಕನು ನೀವು ಮತ್ತಾರು ತಿಳಿಯಿರೋ 2 ಮೂರವಸ್ಥೆಗಳಲ್ಲಿ ಮೂರು ಮೂರ್ತಿಗಳಾಗಿತೋರುತಿಹ ನಾನಾ ಬಗೆ ಲೀಲೆಗಳನುಭೂರಿ ಸಂಸಾರಗಳ ದುಃಖ ಸುಖವೆಂದೆನಿಸಿತೋರಿ ನೋಡಿಪನವನು ಮತ್ತಾರು ತಿಳಿಯಿರೋ 3 ಸತಿ ಪುರುಷರಾಗಿಹನು ಸುತನು ತಾನಾಗಿಹನುಖತಿಯು ಶಾಂತಿಯು ಕಾಮವಾಗಿ ತಾನಿಹನುಅತಿ ಕುಲಗಳಾಗಿಹನು ಅತಿ ಜಂತುವಾಗಿಹನುಮಿತಿಯಿಲ್ಲದಾಗಿಹನು ನೀವಾರು ತಿಳಿಯಿರೋ 4 ಈ ವಾಕ್ಯಗಳನೇ ನೀವಾರಮುಂದುಸುರದಲೆಸಾವದಾನದಿ ತಿಳಿದು ನೋಡಿದೇವ ಚಿದಾನಂದ ಗುರು ತಾನೀಗ ನಿಜವೆಂದುಸಾವದಾನದಿ ಕಂಡು ಕಡೆಹಾಯಿರೋ 5
--------------
ಚಿದಾನಂದ ಅವಧೂತರು
ಆ ನಮಿಪೆ ವಿಷ್ಣು ಶ್ರೀ ಬ್ರಹ್ಮ ವಾಯು ವಾಣಿ ಭಾರತಿ ಮುಖ್ಯರವತಾರ ಆವೇಶಕಾನಮಿಪೆ ಪ ಮತ್ಸ್ಯ ಕೂರ್ಮ ಭೂವರಹ ನರಸಿಂಹ ದಧಿ ವಾಮನ ತ್ರಿವಿಕ್ರಮ ಭೃಗುಕುಲೋದ್ಭವ ಬುದ್ಧ ಕಲ್ಕಿ ಹಯಾಸ್ಯ ನಾಮ ತಾಪಸ ಮನು ಉಪೇಂದ್ರ ಅಜಿತಾದಿಗಳಿಗಾ ನಮಿಪೆ 1 ದಾಸ ಧನ್ವಂತ್ರಿ ಹರಿ ಹಂಸ ದತ್ತಾ ವ್ಯಾಸ ಕಪಿಲಾತ್ಮಂತರಾತ್ಮ ಪರಮಾತ್ಮ ಯ ಜ್ಞೇಶ ವೈಕುಂಠ ನಾರಾಯಣಾಧ್ಯವತಾರಕಾನಮಿಪೆ 2 ನಾರಾಯಣೀ ಋಷಭ ಐತರೇಯ ಶಿಂಶು ಮಾರ ಯಜ್ಞ ಪ್ರಾಜ್ಞ ಸಂಕರುಷಣಾ ಕ್ಷಿರಾಬ್ದಿ ನಿಲಯ ಯಮನಂದನಾ ಕೃಷ್ಣ ಹರಿ ನಾರಾಯಣ ಧರ್ಮಸೇತು ರೂಪಾದಿಗಳಿಗಾನಮಿಪೆ 3 ಗುಣಗಳಭಿಮಾನಿ ಶ್ರೀ ಭೂ ದುರ್ಗ ದಕ್ಷಿಣಾಂ ಭೃಣಿ ಮಹಾಲಕ್ಷ್ಮೀ ಶ್ರೀ ವಿಷ್ಣುಪತ್ನೀ ಮಾಯಾ ಕೃತಿ ಶಾಂತಿ ಶುದ್ಧ ರು ಕ್ಮಿಣಿ ಸತ್ಯ ಸೀತಾದ್ಯಮಿತ ರೂಪಗಳಿಗಾನಮಿಪೆ 4 ಹೀನಳೆನಿಸುವಳನಂತಾಂಶದಲಿ ಸುಖ ಬಲ ಜ್ಞಾನಾದಿ ಗುಣದಿ ಮಹಾಲಕ್ಷ್ಮಿ ಹರಿಗೆ ಆನಂದ ವಿಜ್ಞಾನ ಮಯನ ವಕ್ಷಸ್ಥಳವೆ ಸ್ಥಾನವಾಗಿಹುದು ಇಂದಿರೆಗೆ ಆವಾಗ 5 ವಿಧಿ ವಿರಿಂಚಿ ಮಹನ್ ಬ್ರಹ್ಮ ಸೂತ್ರ ಗುರು ಮಹಾಪ್ರಭು ಋಜ ಸಮಾನ ವಿಜ್ಞ ಪ್ರಾಜ್ಞ ಹರಿಭಕ್ತಿ ಮೇಧಾವಿ ಮುಕ್ತಿ ಧೃತಿ ಅಮೃತನಿಗೆ 6 ಸ್ಥಿತಿ ಯೋಗ ವೈರಾಗ್ಯ ಚಿಂತ್ಯ ಬಲಸುಖ ಬುದ್ಧಿ ವಿತತಾದಿ ಗೋಪ ಹನುಮ ಭೀಮ ವೃಷಿವರಾನಂದ ಮುನಿ ಮೊದಲಾದ ರೂಪಶ್ರೀ ಪತಿಗಧಿಷ್ಟಾನ ಕೋಟಿಗುಣಾಧಮರು ರಮೆಗೆ ಆ ನಮಿಪ 7 ಸರಸ್ವತಿ ಗಾಯತ್ರಿ ಬುದ್ಧಿ ವಿದ್ಯಾ ಪ್ರೀತಿ ಗುರುಭಕ್ತಿ ಸರ್ವ ವೇದಾತ್ಮಿಕ ಭುಜಿ ಪರಮಾನು ಭೂತಿ ಸಾವಿತ್ರಿ ಸು ಸುಖಾತ್ಮಿಕಾ ಪತಿ ನಾಮಗಳಿವೆಂದರಿದು 8 ಶಿವಕನ್ಯ ಇಂದ್ರಸೇನಾ ಕಾಶಿಜಾ ಚಂದ್ರ ಯುವತಿ ದ್ರೌಪದಿಯು ಭಾರತಿ ರೂಪವು ಪವಮಾನ ಬ್ರಹ್ಮರಿಗೆ ಶತಗುಣಾಧಮ ಸದಾ ಶಿವನ ರೂಪಗಳ ಈ ಪರಿಯ ಚಿಂತಿಸುತ 9 ತತ್ಪುಮಾನ್ನೂಧ್ರ್ವಪಟ ದುರ್ವಾಸ ವ್ಯಾಧ ಅ ಶ್ವತ್ಥಾಮ ಜೈಗೀಷವ್ಯ ತಪ ಅಹಂಕ್ರತು ಶುಕ ವಾಮದೇವ ಗುರು ಮೃತ್ಯುಂಜಯೋರ್ವ ಸದ್ಯೋಜಾತ ತತ್ಪುರುಷಗಾನಮಿಪೆ 10 ನರ ವಯು ಶುಕಕೇಶವೇಶ ಬಲಗೆ ಸಂ ಕರುಷಗಾವೇಶ ಲಕ್ಷ್ಮಣದೇವಗೆ ಗರುಡ ಶೇಷಾಘೋರ ಸಮರು ಶತಗುಣದಿಂದ ಕೊರತೆಯೆನಿಸುವರು ಮೂವರು ವಾಣಿ ದೇವಿಗೆ 11 ಶೇಷಗೆ ಸಮಾನನೆನಿಪಳು ಜಾಂಬವತಿ ರಮಾ ವೇಶ ಕಾಲದಿ ಷಣ್ಮಹಿಷಿಯರ ಒಳಗೆ ಹ್ರಾಸಕಾಲದಿ ಸಮಳು ಐವರಿಗೆ ಜಾಂಬವತಿ ವೀಶಾದ್ಯರಿಗೆ ಹರಿ ಸ್ತ್ರೀಯರ ಸಮರೈದುಗುಣ12 ರೇವತಿ ಶ್ರೀಯುತ ಶ್ರೀ ಪೇಯ ರೂಪತ್ರ ಯಾವಕಾಲದಿ ವಾರುಣಿಗೆ ಪಾರ್ವತೀ ದೇವಿ ಸೌಪರಣಿಗೆ ಸಮ ಷಣ್ಮಹಿಷಿಯರಿಗೆರಡು ಮೂವರೀರೈದು ಗುಣ ಕಡಿಮೆ ಪತಿಗಳಿಗೆ 13 ಕುಶ ವಾಲಿ ಗಾಧಿ ಮಂದ್ರದ್ಯುಮ್ನನು ವಿಕುಕ್ಷಿ ಶ್ವಸನ ಹರಿ ಶೇಷ ಸಂಯುಕ್ತಾರ್ಜುನಾ ಅಶನೀಧರನ ಸುರೂಪಂಗಳಿವು ಮನ್ಮಥನ ನಿತ್ಯ 14 ಪ್ರದ್ಯುಮ್ನ ಸಂಯುಕ್ತ ರುಕ್ಮಿಣೀ ದೇವಿ ಸುತ ಪ್ರದ್ಯುಮ್ನ ಭರತನು ಸನತ್ಕು ಮಾರಾ ಸಾಂಬ ಸ್ಕಂಧ ಸುದರುಶನ ರುದ್ರ ನಾರ್ಧಾಂಗಿನಿಗೆ ದಶಗುಣಾಧಮರೆಂದು15 ಭವ ಪ್ರಾಣ ನಾಮರಗೆ ರೂಪ ಸರ್ಮೋತ್ತುಂಗನು ಕಾಮ ಪುತ್ರಾನಿರುದ್ದಾದಿಗಳು ದಶ ಹೀನ ಈ ಮಹಾತ್ಮರ ದಿವ್ಯ ಅವತಾರರೂಪಗಳಿಗಾನಮಿಪೆ 16 ಪ್ಲವಗ ಬ್ರಹ್ಮಾಂಶಯುಗ್ದೋಣ ಮಾರುತಾವೇಶ ಸಂಯುತ ವುದ್ಧವಾ ಮುರು ರೂಪವು ಬೃಹಸ್ಪತಿಗೆ ಪ್ರದ್ಯುಮ್ನನ ಕು ಮಾರಾನಿರುದ್ಧ ಶತೃಘ್ನ ಅನಿರುದ್ಧನಿಗೆ 17 ತಾರ ಚಿತ್ರಾಂಗದ ಶಚಿ ರೂಪ ಲಕ್ಷುಣ ಈ ರುಗ್ಮವತ್ರಿ ಎರಡು ರತಿರೂಪವು ಆರುಜನ ದಕ್ಷ ಸ್ವಯಂಭುವ ಮನು ಪ್ರಾಣ ಗಿರೈದು ಗುಣಗಳಿಂದಧಮರೆಂದರಿದು 18 ಭೂತಾಭಿಮಾನಿ ಪ್ರವಹ ಪಂಚಗುಣದಿ ಪುರು ಹೊತ ಪತ್ನ್ಯಾದಿಗಳಿಗಧಮನೆನಿಪ ಈತಗವತಾರವಿಲ್ಲವನಿಯೊಳು ಚಂದ್ರ ಪ್ರ ದ್ಯೋತನಾಂತಕ ಸ್ವಯಂಭುವ ಪತ್ನಿ ಶತರೂಪಿ 19 ಸತ್ಯಜಿತ ಜಾಂಬವಾನ್ ವಿದುರ ಗುರು ವಾಯು ಸಂ ಯುಕ್ತ ಧರ್ಮಜ ಯಮಗೆ ರೂಪ ನಾಲ್ಕು ರಾತ್ರಿ ಚರನವತಾರ ಯಿಂದ್ರ ಯುಕ್ತಾಂಗದಾ ದಿತ್ಯ ನವತಾರ ಬ್ರಹ್ಮ ವಿಷ್ಟ ಸುಗ್ರೀವ 20 ಹರಿಯುಕ್ತ ಕರ್ನ ಮನು ಪತ್ನಿ ಶತರೂಪ ನಾ ಲ್ವರು ಸಮರು ಪ್ರವಹಗಿಂದೆರಡು ಗುಣದೀ ಕೊರತಿ ಮಹ ಭಿಷಕು ಮಂಡೂಕ ಶಂತನು ಸುಶೇ ಪಾದ ಪಾದಾರ್ಧಿಕಾನಮಿಪೆ21 ನಾರದಾಧಮ ವರುಣಗಿಂತಗ್ನಿ ಅವ ತಾರ ದೃಷ್ಟದ್ಯುಮ್ನ ಲವ ನೀಲರೂ ಪಾದ ಗುಣದಾಧಮರು ಎಂದು22 ಅಂಗೀರ ಪುಲಸ್ತ್ಯಾತ್ರಿ ಪುಲಹನು ಮರೀಚಿ ಮುನಿ ಪುಂಗವ ದಶಿಷ್ಠ ಕೃತು ಬ್ರಹ್ಮ ಸುತರೂ ತುಂಗ ವಿಶ್ವಾಮಿತ್ರ ವೈವಸ್ವತರು ಸದಾ ಕೆಂಗದಿರಗಧಮರೊಂಭತ್ತು ಜನರೆಂದು 23 ಸಪ್ತ ಋಷಿಗಳಿಗೆ ಸಮನೆನಿಪ ವೈವಸ್ವತನು ಲುಪ್ತವಾಗಲು ಕಡಿಮೆಯೆನಿಪ ಪ್ರಾವಹ ತಾರ ಕ್ಲುಪ್ತ ಒಂದೇ ರೂಪ ಕೃಪೆಯೆಂದು ಕರೆಸುವಳಿಗಾನಮಿಪೆ24 ಹರನಾವೇಶಯುತ ಘಟೋತ್ಕಚ ದುರ್ಮಖನು ನಿಋಋತಿ ಕರೆಸುವನು ರಾಹು ಯುಗ್ಭೀಷ್ಟಕ ನೃಪಾ ನರೆ ಮಿತ್ರ ನಾಮಕನ ರೂಪ ನಾಲ್ವರು ಅಗ್ನಿ ಗೆರಡು ಗುಣದಿಂಧಮರೆನಿಪರೆಂದೆಂದು 25 ಮಾರಾರಿಯುಕ್ತ ಭಗದತ್ತ ತತ್ತನÀಯ ಕು ಬೇರಗೆರಡವತಾರ ವಿಘ್ನೇಶಗೆ ಚಾರುದೇಷ್ಣನು ಒಂದೆ ಇಂದ್ರನಾವೇಶಯುತ ಆರುರೂಪಗಳುಳ್ಳ ನಾಸತ್ಯ ದಸ್ರರಿಗೆ 26 ವಿವಿಧÀ ಮೈಂದ ತ್ರಿಸಿಖ ನಕುಲ ಸಹದೇವ ವಿಭು ಅವತಾರ ಅಶ್ವಿನೀ ದೇವತೆಗಳ ಲವಣಾದಿ ಷಡ್ರಸಗಳೊಳಗಿದ್ದು ಜೀವರಿಗೆ ವಿವಿಧ ಭೋಗಗಳಿತ್ತು ಸಂತೈಪರೆಂದೆಂದು 27 ದ್ರೋಣಾರ್ಕ ದೋಷಾಗ್ನಿ ಧ್ರುವ ವಿಭಾವಸು ವಸ್ತು ಪ್ರಾಣಾಷ್ಟ ವಸುಗಳೊಳಗೆ ದ್ಯುನಾಮಕ ವಾಣೀಶಯುಕ್ತ ಭೀಷ್ಮನು ನಂದಗೋಪಾಲ ದ್ರೋಣನಾಮಕ ಪ್ರಧಾನಾಗ್ನಿಗಿಂದಧಮರೆಂದಾ ನಮಿಪೆ 28 ಭೀಮರೈವತ ವೋಜಜ್ಯೆಕಪಾದ ಹಿರ್ಬದ್ನಿ ಭವ ವಾಮ ಬಹುರೂಪೋಗ್ರಜ ವೃಷಾಕಪಿ ಈ ಮಹನ್ನೆಂಬ ಹನ್ನೊಂದು ರುದ್ರರು ಭೂರಿ ನಾಮಕ ಜೈಕ ಪಾದಹಿರ್ಬದ್ನಿ ಭೂರಿಶ್ರವಗಾನಮಿಪೆ29 ತ್ರ್ಯಕ್ಷನುಳಿಧತ್ತು ರುದ್ರರು ಸಮರು ಶಲ್ಯ ವಿರು ಪಾಕ್ಷನವತಾರ ಕೃಪ ವಿಷ್ಕಂಭುನೂ ಅಕ್ಷೀಣಬಲ ಪತ್ರತಾಪಕ ಸಹದೇವ ರಕ್ಷಘ್ನ ಸೋಮದತ್ತನು ಎನಿಸುತಿಹಗೆ 30 ವಿರೂಪಾಕ್ಷ ವಿಷ್ಕಂಭ ಪತ್ರತಾಪಕ ಮೂರು ಹರನ ರೂಪಾಂತರಗಳಿವು ವಿವಸ್ವಾನ್ ಅರಿಯಮ ಪೂಷ ಭಗ ಸವಿತು ತೃಷ್ಟಾಧಾತ ವರುಣ ಶಕ್ರೋರುಕ್ರಮನು ಮಿತ್ರ ಪರ್ಜನ್ಯಗಾನಮಿಪೆ 31 ಶೌರಿನಂದನ ಭಾನು ಸವಿತ್ರ ನಾಮಕ ಸೂರ್ಯ ವೀರಸೇನನು ಯಮಾವಿಷ್ಟ ತ್ವಷ್ಟಾ ಆರುಜನ ರುಕ್ತರೆನಿಪರು ವುರುಕ್ರ್ರಮ ಶಕ್ರ ವಾರಿಧಿ ವಿವಸ್ವಾನ್ ಮಿತ್ರ ಪರ್ಜನ್ಯರಿಗೆ 32 ಪ್ರಾಣ ನಾಗ ಪಂಚಕ ಅಹಂಕಾರಿಕ ಪ್ರಾಣ ಪ್ರವಹ ನಿವಹ ಸಂವಹ ಸ್ವಹಾ ಕಾಲ ಶ್ವಾಸ ಏ ಕೋನ ಪಂಚಾಶನ್ ಮರುದ್ಗಣಸ್ಥರು ಎಂದು 33 ಶ್ವೇತ ಶಂ ಹನುಮ ಭೀಮ ಯತಿವುದಿತ ಕಾಮ ಜಡಪಿಂಗ ಕಂ ಪನ ವೃದ್ವಹ ಧನಂಜಯ ದೇವದತ್ತರಿಗೆ 34 ಶುಕ್ರ ಶಂಕು ಗುರು ಕಾಂತ ಪ್ರತಿಭ ಸಂವರ್ತಕನು ಪಿಕ ಕಪಿಗಳಿವರು ಮುರುತರು ಸಮೀರಾ ಯುಕುತ ಪಾಂಡು ವರಾಹನು ಎನಿಪ ಸಂಪಾತಿ ಕೇಸರಿ ಶ್ವೇತ ಮರುತನವತಾರ ವೆಂದಾನಮಿಪೆ35 ಪ್ರತಿಭವಂಶನು ಚೇಕಿತಾನೆಂದೆನಿಪ ವಿ ಪ್ರಥು ಸೌಮ್ಯ ಕುಂತೀಭೋಜನೆ ಕೂರ್ಮನು ಕ್ಷಿತಿ ಯೊಳಗೆ ಪ್ರಾಣಪಂಚಕರೊಳು ಪ್ರಾಣ ಗಜ ಅಥ ಗವಾಕ್ಷಾಪಾನ ವ್ಯಾನ ಗವಯನು ಎಂದು 36 ವೃಷನು ಸರ್ವತ್ರಾತನು ವುದಾನಗಂಧ ಮಾ ದ ಸಮಾನನರಿವರು ವಿತ್ತಪನ ಸುತರು ಶ್ವಸನಗಣದೊಳು ಕಿಂಚಿದುತ್ತ ಮರಹಂ ಪ್ರವಹ ಗಸಮರೆನಿಪರು ಪ್ರಾಣ ಪಂಚಕರು ಎಂದೂ 37 ಪ್ರತಿ ವಿಂಧ್ಯ ಧರ್ಮಜನ ಭೀಮಸೇನನ ಪುತ್ರ ಶೃತಸೋಮ ಅರ್ಜುನಜ ಶೃತಕೀರ್ತಿಸಾ ಶತಾನೀಕÀನ ಕುಲಜ ಸಹದೇವಾತ್ಮಜನು ಶೃತಕರ್ಮರಿವರು ದ್ರೌಪದಿ ದೇವಿಗಾತ್ಮಜರಿಗಾನಮಿಪೆ38 ಚಿತ್ರರಥ ಅಭಿಪೌಮ್ರಬಲ ಕಿಶೋರ ಗೋಪಾಲ ರುತ್ತಮರು ಗಂಧರ್ವರೈವರಿಂದ ಯುಕ್ತರಾಗಿಹರು ಕೈಕೇಯರೈವರು ಪಾಂಡು ಪುತ್ರಜರು ವಿಶ್ವದೇವತೆಗಳಿವರೆಂದು39 ಕಾಲ ಕಾಮಲೋಚನದಕ್ಷ ಕೃತು ಪುರೂ ರವ ಸತ್ಯ ವಸು ಧುರಿಗಳಿವರು ವಿಶ್ವೇ ಋಭು ಗುಣ ಪಿತೃತ್ರಯ ದ್ಯಾವ ಅವನಿಪರು ಗಣಪಾದ್ಯರಧಮ ಮಿತ್ರನಿಗೆಂದು 40 ವಸುಗಳೆಂಟಾದಿತ್ಯರೀರಾರು ಒಂದಧಿಕ ದಶರುದ್ರಗಣ ಪಿತೃತ್ರಯ ಬೃಹಸ್ಪತೀ ವಿಶ್ವ ದೇವ ಅಶ್ವಿನಿಗಳೆರಡೈವತ್ತು ಶ್ವಸನಗಣರು ಋಭುವೊಂದು ಎರಡು ದ್ಯಾವಾಪೃಥವಿ 41 ಒಂಭತ್ತು ಕೋಟಿ ದೇವತೆಗಳೊಳು ನೂರು ಜನ ಅಂಬುಜಾಪ್ತರ ಒಳಗುರುರುಕ್ರಮನುಳಿದು ಪದ್ಮ ಸಂಭವನ ಸಹರಾಗಿಹರು ಶತಸ್ಥರಿಗೆ 42 ಮರುತತ್ರಯರು ವನಿಯಮ ಸೋಮ ಶಿವದಿವಾ ಕರರಾರು ರುದ್ರ ಗುರು ಇವರುಕ್ತರೂ ಉರವರಿತ ಎಂಭತ್ತೈದು ಸಮರು ತಮ್ಮೊಳಗೆ ಸರಸಿಜೋದ್ಭವನ ಸುತರೆನಿಪ ಸನÀಕಾದಿಗಳಿಗಾನಮಿಪೆ43 ಸನಕಾದಿಗಳೊಳುತ್ತಮ ಸತತ್ಕುಮಾರ ಶಿಖಿ ತನುಜ ಪಾವಕನು ಪರ್ಜನ್ಯನು ಮೇಘಪ ಎನಿಸುವನು ಶರಭವೊಂದೇರೂಪ ಧರ್ಮರಾ ಜನ ಪತ್ನಿ ದೇವಕಿಯು ಶಾಮಲೆಯ ರೂಪವೆಂದಾ ನಮಿಪೆ44 ಯಮ ಭಾರ್ಯ ಶಾಮಲಾ ರೋಹಿಣಿದೇವಿ ಚಂ ದ್ರಮನ ಸ್ತ್ರೀ ಅನಿರುದ್ಧದೇಹಿ ಉಷಾ ದ್ಯುಮಣಿ ಭಾರ್ಯಾ ಸಂಜ್ಞ ಗಂಗಾ ವರುಣ ಭಾರ್ಯ ಸುಮರಾರು ಜನರು ಪಾವಕಗೆ ಕಿಂಚಿದಧಮರೆಂದಾ ನಮಿಪೆ45 ಪರ್ಜನ್ಯ ಈ ರೆರಡು ವನ್ಹಿಗೆ ಕಡಿಮೆ ಪಾದಮಾನೀ ಸುರಪನಂದನ ಜಯಂತನು ಪ್ರಹಲ್ಲಾದ ಈ ರ್ವರು ಮುಖ್ಯರಧಮ ಪರ್ಜನ್ಯಗೆಂದೆಂದು 46 ಎರಡು ಗುಣ ಪರ್ಜನ್ಯಗಿಂದಧಮಳು ಸ್ವಹಾ ರೆರಡಧಿಕ ಗುಣದಿ ಸ್ವಪತಿಗೆ ನೀಚಳೂ ಹರಿ ಶಕ್ರಸತಿ ಅಶ್ವಿ ಯುಕ್ತಾಭಿಮನ್ಯು ಚಂ ದಿರಜ ಬುಧನವತಾರ ಸ್ವಾಹಾ ದೇವಿಗಧಮಳೆಂದಾ ನಮಿಪೆ 47 ಎನಿಸುವಳು ಶಲ್ಯ ಜರಾಸಂಧನಾತ್ಮಜಾ ಶ್ವಿನಿ ಭಾರ್ಯಾನಾಮಾಭಿಮಾನಿ ಉಷಾ ಘನರಸಾಧಿಪ ಬುಧಗೆ ಕಿಂಚಿದ್ಗುಣ ಕಡಿಮೆ ಅವಳ ಪತ್ನಿಗೆ ದಶಗುಣಾಧಮಳುಯೆಂದು 48 ಧರಣಿಗಭಿಮಾನಿ ಎನಿಸುವ ಸೂರ್ಯಸುತ ಶನೇ ಶ್ವರ ಉಷಾದೇವಿಗೆರಡು ಗುಣಾಧಮ ತರಣಿ ನಂದನಗೆ ಸತ್ಕರ್ಮಾಭಿಮಾನಿ ಪು ಷ್ಕರ ಕಡಿಮೆ ಪಂಚಗುಣದಿಂದ ಎಂದೆಂದು 49 ನಾರದನ ಶಿಷ್ಯ ಪ್ರಹ್ಲಾದ ಬಾಲ್ಹೀಕ ಸ ಮೀರ ಸಂಯುಕ್ತ ಸಹ್ಲಾದ ಶಲ್ಯಾ ಮೂರನೆಯನುಹ್ಲಾದ ಸವಿತ್ರನಾವೇಶದಲಿ ತೋರಿದನು ದೃಷ್ಟಕೇತು ಎನಿಸಿ ಧರೆಯೊಳಗೆ 50 ತಾಮಾಂಶಯುಗ್ ಜಯಂತನು ಬಭ್ರುವಹ ವರು <ಈ
--------------
ಜಗನ್ನಾಥದಾಸರು
ಆನಮಿಸುವೆ ಗುರುವಾ ಮಂತ್ರಾಲಯ ಸ್ಥಾನ ಮಾಡಿದ ಯತಿಯಾ ಪ ದಾನವರೊಳವತರಿಸಿ ದೈನ್ಯರ ಮಾ£ನಿಧಿಯು ತಾನು ಜ್ಞಾನಿಗಳಿಗೆ ಕಾಮಧೇನುವೆನಿಸಿದೀ ಮಾನಿಯತೀಂದ್ರ ವಿಜ್ಞಾನಪೊಯ್ಯವನು ಅ.ಪ ಸದಯ ಸರ್ವದಾಯೆನಿಸಿ ಹೃದಯದಿ ಮುದವಾಂಕುರಿಸುವನು ಪರಿ ಸದಮಲ ಕೀರ್ತಿಯ ವಿದಿಶಮಾಗಿ ಭೂತಳದಿ ಉದಯಿಸಿದ 1 ದೋಷದೂರ ನೆನಿಸೀ ದಾಸರಿಗೀಶನಡಿಯ ತೋರ್ಪಾ ವಾಸುದೇವನಿಗೆ ನಿಜ ದಾಸನೆನಿಸಿ ಭವ- ವಾಸದೊಳಿಹ ಪರತೋವೀವನು 2 ಕರುಣಸಾಗರನೆನಿಸಿ ಶರಣಗೆ ವರಗಳ ತಾನೀವಾ ಗುರುವೆಂದೆಂಬ ಯಥಾರ್ಥ ಪದವಿ ತಾ ನರಸಿಂಹವಿಠಲನ ಕರುಣದೊಳಿಹನು 3
--------------
ನರಸಿಂಹವಿಠಲರು
ಆರು ಕೊಟ್ಟರು ಕೊಟ್ಟರಾರುಂಡರಾರಿಲ್ಲಿಬೇರೆ ನಾ ನೀ ನಾನೆಂದು ಕೆಡುವುದೀ ಲೋಕ ಪಕಾಲ ಚ್ಟೇಸಿತು ಕರ್ಮವು ಕೊಟ್ಟಿತೀ ಕಿವಿಗಳಾಲಿಸಿತು ಕಂಡಿತಕ್ಷಿಗಳೆಂದಿತಂಘ್ರಿಲೀಲೆಯಲಿ ಕೈಪಿಡಿಯುತಾ ಘ್ರಾಣಿ ಘ್ರಾಣವೀ ಲೋಲ ಚಿತ್ತವನುಸಂಧಾನಗೆಯ್ತು 1ಪ್ರಾಣ ಒಳಕೊಂಡಿತನ್ನವನು ಸಂಕಲ್ಪಿಸಿತುದೀನ ಮನಮತಿಗೆ ನಿಶ್ಚಯವಾುತೂತಾನಿದರೊಳಾರು ಕೊಂಬವನೊ ಕೊಡುವನೊ ದುರಭಿಮಾನದಿಂ ಕೆಡುತಿಹರು ನೀನು ನಾನೆಂದು 2ಭಾನು ಜಲದಲಿ ಪೊಳೆಯಲದರ ಕಂಪಾದಿಗಳುಭಾನುವಿನದೆಂದು ಭ್ರಮಿತರು ಬಗೆವ ತೆರದಿಜ್ಞಾನಮಯ ನಾದಾತ್ಮ ಹಮ್ಮಿನೊಳ್ಪೊಳೆಯಲಜ್ಞಾನದಿಂದೀ ರಾಸಿ ನಾನೆನ್ನುತಿಹರೊ 3ಈಯನಿರ್ವಚನೀಯ ಜೀವತ್ವವೆಂದರಿದುಕಾಯದಲಿ ಕೂಟಸ್ಥ ಸತ್ಯವೆಂದೂಮಾಯದಿಂದ ತೋರಿ ತಾನೀ ವಿಶ್ವಪುಸಿ ಎಂದುಹೇಯ ಭೋಗದಲನಾಸಕ್ತನಾಗಿರದೆ 4ತಾನು ನಿರ್ಲೇಪನೆಂದರಿಯದೆ ಶರೀರಾಭಿಮಾನದಿಂ ಗೋಪಾಲ ಯತಿಯ ಚರಣವನೂಸಾನುರಾಗದಲಿ ಸೇವಿಸದೆ ಮಿಥ್ಯಾವಿಷಯದೀನತೆಯನೈದಿ ರಾಗಾದಿಗಳ ಬಿಡದೆ 5
--------------
ಗೋಪಾಲಾರ್ಯರು
ಎಲ್ಲಿ ಮತಿಯು ಎಲ್ಲಿ ಗತಿಯು ಎಲ್ಲವೀಗ ಹುಸಿಯು ಕಂಡ್ಯಎಲ್ಲವಿಹುದು ಬಹುದು ಬಹಳ ಸಂಸ್ಕಾರಿಯೊಬ್ಬಗೆ ಪ ಭಕ್ತಿಯನ್ನು ಮಾಡುವರು ಹಲವು ಮಂದಿ ನೋಡಲಿಕೆಭಕ್ತಿಯಿಹುದು ತಾನೀಗ ಅದರೊಳೊಬ್ಬಗೆಮುಕ್ತಿಮಾತ ಕೇಳುವರು ಮುಗಿದ ಕೈಗಳಿಂದಮುಕ್ತಿ ಮೇಲೆ ಚಿತ್ತವಿಹುದು ಅದರೊಳೊಬ್ಬಗೆ1 ಕಣ್ಣುಗಳ ಮುಚ್ಚಿಕೊಂಡು ನೋಡವರು ಆತ್ಮನಕಣ್ಣು ಕುಳಿತು ಕಾಣಬಹುದದರೊಳೊಬ್ಬಗೆಹುಣ್ಣಿಮೆಯ ಬೆಳಕಿನಂತೆ ಹರಹಿಯಿಹುದು ಎಂಬರುತಣ್ಣನೆಯ ಕಳೆಯು ತೋರುವುದದರೊಳೊಬ್ಬಗೆ2 ಜ್ಞಾನಗಳ ಹೇಳುವರು ಜ್ಞಾನಿಗಳೊ ಎಂಬಂತೆಜ್ಞಾನ ನಿಶ್ಚಯಹುದು ತಾನು ಅದರೊಳೊಬ್ಬಗೆಮಾನನಿಧಿ ಚಿದಾನಂದ ತಾನೀಗ ಎನುತಲಿಹರುತಾನೆ ತಾನಾದ ನಿಜವು ಅದರೊಳೊಬ್ಬಗೆ 3
--------------
ಚಿದಾನಂದ ಅವಧೂತರು
ಗುಮ್ಮವ ನೋಡಿರೋ ಮೂಲಮಾಯೆ ಗುಮ್ಮವ ನೋಡಿರೋಗುಮ್ಮವು ಹೀಗೆಂದು ಶತಕೋಟಿ ಬ್ರಹ್ಮರು ಆಗಿವೆಗುಮ್ಮವ ಹೀಗೆಂದು ಗುರುತರಿವರಿಲ್ಲಯ್ಯ ಪ ಇಲ್ಲದೆ ತಾನೀಗ ತೋರುವ ಗುಮ್ಮಎಲ್ಲ ಲೋಕತಾನೆ ಆಗಿಹ ಗುಮ್ಮಗೆಲ್ಲುವೆನಗೆ ಗೆಲುವಾಗದ ಗುಮ್ಮಒಳ್ಳೆ ಒಳ್ಳೆಯವರನು ಅಂಜಿಪ ಗುಮ್ಮ1 ಮಾನಿನಿ ಸುತ ಸಂಪತ್ತಾದ ಗುಮ್ಮನಾನಾ ಭವವು ಆಗಿ ತೊಳಲಿದ ಗುಮ್ಮ2 ತಿಳಿವೆ ನೆಂದರೆ ತಿಳಿಗೊಡದು ಗುಮ್ಮತಿಳಿದರೆ ತನ್ನೊಳಗಡವುದು ಗುಮ್ಮಬಲು ಚಿದಾನಂದ ಗುರುವಿನಲಿ ಗುಮ್ಮಹೊಳೆ ಹೊಳೆದು ತೋರಿಪುದು ಗುಮ್ಮ 3
--------------
ಚಿದಾನಂದ ಅವಧೂತರು
ಗುಲ್ಲು ಹುಟ್ಟಿತು ಗ್ರಾಮದೊಳಗೆ ಗಲಿಬಿಲಿಯಾಯಿತು ನೀವು ಕೇಳಿಖುಲ್ಲರು ಕುಲಸಹ ಕೂಡೆ ಮಡಿದರು ನೀವು ಕೇಳಿ ಪ ಮರ ಮುರಿದೊರಗಿತು ನೆರಳೆ ನೆಲೆಯಾಯಿತು ನೀವು ಕೇಳಿಕುರಿತಳೇ ಸತ್ತವು ನರಿ ಮಾಳಿಗೆ ಏರಿತು ನೀವು ಕೇಳಿ 1 ಅತ್ತೆಯು ಅಳಿದಳು ಸೊಸೆಯು ಸುಖಿಸಿದಳು ನೀವು ಕೇಳಿಮುತ್ತೈದೆಯಾದಳು ರಂಡೆ ತಾನೀಗ ನೀವು ಕೇಳಿ2 ಕೊಡವೊಡೆಯಿತು ಕಳ್ಳರ ತಲೆ ಹೋದವು ನೀವು ಕೇಳಿನಡೆದುಹೋದರು ಬಯಲೂರಿಗೆ ಗೂಳೆಯ ನೀವು ಕೇಳಿ 3 ಮಂಡೆಗೆ ಕೈ ಬಂದಿತು ಮುರುಕು ಆಯಿತು ಹುಟ್ಟು ನೀವು ಕೇಳಿರುಂಡವಿಲ್ಲದೆ ತಲೆ ಬಂದು ಹತ್ತಿತು ನೀವು ಕೇಳಿ 4 ಗುಡ್ಡದ ಸಂದಿಯ ನೀರನೆ ಕುಡಿದು ನೀವು ಕೇಳಿದೊಡ್ಡ ಚಿದಾನಂದ ಗುರುವ ಸೇರಿದರು ನೀವು ಕೇಳಿ 5
--------------
ಚಿದಾನಂದ ಅವಧೂತರು
ಜಯಕೃಷ್ಣವೇಣಿ | ಜಗಪಾವನೀ | ಜಯಕರುಣಿ ಭಯಹರಿಣಿ ಭವತಾರಿಣಿ ಪ ಮಾಬಳೇಶ್ವರನ ಸುಜಟಾ ಭಾಗದಲಿ ಪದ್ಮ | ನಾಭನಂಶದಿ ಬಂದು ಶೋಭಿಸುತಲಿ | ಈ ಭುವನಜನರ ಮನದಾಭೀಷ್ಟಮಂ ಕೊಡಲು | ತಾ ಭರದಿ ನದಿರೂಪನಾಗಿ ಪ್ರವಹಿಸಿದೆ 1 ನಿನ್ನೆಡೆಗೆ ನಡೆತಂದು ನಿನ್ನ ಜಲ ವೀಕ್ಷಿಸುತ | ನಿನ್ನ ಘೋಷವ ಕೇಳಿ ತನ್ನ ಕರದಿ | ನಿನ್ನ ಸ್ಪರ್ಶನ ಅಚಮನ ಮಾರ್ಜನದಿಂದ | ತನುಮನೇಂದ್ರಿಯಗಳು ಪಾವನವಾದವು 2 ಪೊಡವಿಯೊಳಧಿಕ ತೀರ್ಥ ತಡಿಯಗ್ರಾಮವೇ ಕ್ಷೇತ್ರ | ಸುರರು | ಒಡಲೊಳಿಹ ಜಲಚರಗಳೊಡನೆ ಗತಿಸಾಧಕರು | ನುಡಿವ ಪಕ್ಷಿಗಳು ಸಲೆ ಗಿಡಮರಗಳು 3 ಸಾಗಿಸುವ ಕರ್ಮೇದ್ರಿ ತ್ಯಾಸದ್ಧರ್ಮದಿಂ | ಯೋಗ ಅಷ್ಟಾಂಗದಿಂ ಯಾಗದಿಂದ | ಭೋಗಿಸುವ ಪುಣ್ಯವನು ರಾಗದಿಂ ತೀರದಿಹ | ಯೋಗಿಜನಕೀವೆ ತಾನೀಗ ದಯದಿ 4 ಬಿಂದುಮಾತ್ರವೇ ಬೀಳಲೊಂದು ಕಾಯದಿ ಅಘದ | ವೃಂದ ನಾಶನವಹುದು ಮಿಂದಡವನ | ಛಂದಮಂ ಬಣ್ಣಿಸುವದಿಂದು ತಿಳಿಯದು ಎನುತ | ತಂದೆ ಮಹೀಪತಿ ಜ ಕರದ್ವಂದ್ವ ಮುಗಿಯೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಂಬೂರಿ ಹಿಡಿಸಿದನು ಪ ಅಂಬುಜಾಕ್ಷನು ದಯದಿ ಅ.ಪ ನಂಬೀದ ಜನರಿಗೆ ಬೆಂಬಲ ತಾನೆಂಬ ನಂಬಿಕೆ ಹೃದಯದಿ ತುಂಬುತ ತಾನೀಗ 1 ಆಶಾ ಪಾಶಕೆ ಸಿಲುಕಿ ಬೇಸತ್ತು ಬೆಂಡಾಗಿ ಮೋಸ ಹೋಗುತ್ತಲಿದ್ದೆ ಶ್ರೀಶ ದಯಾಂಬುಧಿ 2 ಹುಟ್ಟಿದ ದಿನದಿಂದ ಕಷ್ಟದಲ್ಲೇ ಬಂದೆ ಮುಟ್ಟಲಿದನು ಈಗ ಸಂತುಷ್ಟಿಯ ಕಂಡೆನು 3 ಕಾಡಿ ಬೇಡುವರಿಲ್ಲ ನಾಡೆಲ್ಲ ನಮ್ಮದೇನೆ ನೀಡುವ ದೊರೆ ಒಬ್ಬ ಈಡಿಲ್ಲದವನಾತ 4 ವಿಧಿ ವಿಸ್ಮರಣೆ ನಿಷೇಧ ಹರಿನಾಮ ಸುಧೆಯನ್ನು ಕರೆದು ಕರೆದು ಕುಡಿವೆ5 ತಂಬೂರಿ ಸಿಗುವುದು ತುಂಬ ಭಾಗ್ಯವು ಸತ್ಯ ಹಂಬಲಂಗಳ ಬಿಡಿಸಿ ತುಂಬುವ ಹರಿ ಮನದಿ6 ಪುಣ್ಯ ರಾಶಿಗಳೆಲ್ಲ ವದಗಿ ಬಂದವೊ ಏನೋ ಚಿನ್ಮಯ “ಶ್ರೀ ಕೃಷ್ಣವಿಠಲ”ನ ದಾಸನಾದೆ7
--------------
ಕೃಷ್ಣವಿಠಲದಾಸರು
ತೋರುವನೂ | ದಯ ದೋರುವನೂ|| ಭಕ್ತರಿಗೆ | ದಯ| ದೋರುವನು ಪ ತೋರುತಲವರನು | ಪರಿಪರಿವಿಧದೊಳು ಪೊರೆಯುವನೂ | ಹರಿ | ಮೆರೆಯುವನೂಅ. ಪ ಆದಿಯೊಳಾ| ತಮನೆಂಬಾಸುರನನು || ಭೇದಿಸಿ ವೇದವ ತಂದವನು || ಮೋದದಿ ಗಿರಿಯನು | ಕೂರ್ಮವತಾರದಿ | ಸಾಧಿಸಿ ಬೆನ್ನೊಳು ಪೊತ್ತವನು 1 ಧರಣಿಯ ಕದ್ದೊಯ್ದಸುರನ ಬಗಿಯಲು | ವರಾಹವತಾರವ ತಳೆದವನು|| ನರಮೃಗರೂಪದೊ| ಳುದಿಸುತ ಕಂಬದಿ| ವರ ಪ್ರಹ್ಲಾದನ ಪೊರೆದವನು 2 ಬಲಿಯೊಳು ದಾನವ |ಬೇಡುತ ಮೂರಡಿ| ಯೊಳಗಿಳೆಯನು ತಾನಳೆದವನು|| ಭಾರ್ಗವನೂ ಭೃಗು ಮೊಮ್ಮಗನು| 3 ಶರಣಗೆ ಲಂಕಾ| ಪುರದೊಡೆತನವನು| ಸ್ಥಿರವಾಗಿತ್ತಿಹ ರಾಘವನು|| ತುರುಗಳ ನಿಕರವ ಪೊರೆದವನು 4 ಬೌದ್ದವತಾರವ | ಧರಿಸಿದ ಮಹಿಮನು| ಕಲ್ಕಿಸ್ವರೂಪದಿ ಮೆರೆಯುವನು|| ಶ್ರಧ್ದೆಯೋಳವನನು | ಭಜಿಸಲು ಮುದದಲಿ | ಅಬ್ಧಿವಾಸ ಮೈದೋರುವನು 5 ಮಧುವನದಲಿ ಧ್ರುವ | ತಪವಾಚರಿಸಲು | ಮುದದೊಳು ಧ್ರುವಪದವಿತ್ತವನು | ಸುದತಿಯು ಮೊರೆಯಿಡ | ಲಕ್ಷಯ ಸೀರೆಯ | ಇತ್ತವನೂ ದಯವಿತ್ತವನು6 ಶೇಷಗಿರೀಶನು | ದಾಸರಿಗೊಲಿದವ | ರಾಸೆಯ ಸಲಿಸಿದ | ಶ್ರೀವರನು || ಶೇಷಶಯನ ಹರಿ | ದಾಸದಾಸನೆ | ನ್ನಾಸೆಯನೂ ತಾನೀಯುವನು 7 ಪಂಕಜನಾಭನು | ಪರಮಪವಿತ್ರನು | ಕಿಂಕರಜನಪರಿಪಾಲಕನು || ಶಂಕಚಕ್ರಂಗಳ ಧರಿಸಿದ ಶ್ರೀಪತಿ | ವೆಂಕಟೇಶ ದಯದೋರುವನು 8
--------------
ವೆಂಕಟ್‍ರಾವ್
ನಡೆಯೇ ತೀರ್ಥವು ನುಡಿ ಪ್ರಸಾದವುಕೊಡುವುದೇ ತಾನೀಗನುಗ್ರಹವುಹಿಡಿವುದೇ ತತ್ವವು ಬಿಡುವುದೇ ವೈರಾಗ್ಯದೃಢದಲಿ ತನ್ನ ತಿಳಿದಾ ಮಹಾತ್ಮನಾ ಪ ಮೆಟ್ಟಿದ್ದೆ ಕಾಶಿಯು ಮಲಗಿದ್ದೆ ಶ್ರೀ ಶೈಲದಿಟ್ಟಾಗಿ ಕುಳಿತುದೇ ಕುರುಕ್ಷೇತ್ರವುಘಟ್ಟಿಯಾಗಿಹುದೇ ಗಯವೀಗ ಗೋಕರ್ಣಮುಟ್ಟಿಯೇ ತನ್ನತಾ ತಿಳಿದ ಮಹಾತ್ಮನಾ 1 ಉಂಡದ್ದೆ ಕೇದಾರ ಉಟ್ಟಿದ್ದೆ ಶ್ರೀ ಬದರಿಕಂಡದ್ದೆ ಕಂಚಿ ಕಾಳಹಸ್ತಿಮಂಡೆಗೆರಕೊಂಡುದೇ ಮೈಲಾರ ಮಧುರೆಯುಖಂಡಿಸಿ ತನ್ನತಾ ತಿಳಿದ ಮಹಾತ್ಮನಾ 2 ಸುಧಾ ಶರಧಿಯು ಆತ ಸಾಕ್ಷಾತ್ತು ದೈವವುವಿಧ ವಿಧದ ಜಗ ತಾನೆಯಾದಾತನುಮದಕಾಮ ಕ್ರೋಧ ಪಾಶ ಶೋಕ ವರ್ಜಿತಚಿದಾನಂದ ಗುರುವೇ ತಾನಾದ ಮಹಾತ್ಮನಾ 3
--------------
ಚಿದಾನಂದ ಅವಧೂತರು
ನಾರಾಯಣ ತನ್ನ ನಂಬಿದ ಭಕುತರ ಕಾರುಣ್ಯದಿ ಕಾವ ಪ ಮಾರುತಿ ಸಹಿತನಾಗಿ ತಾನೀ ಶರೀರದೊಳಿಹ ದೇವ ಅ.ಪ ಅನಿರುದ್ಧನು ತಾ ಸಕಲ ಚರಾಚರ ಸೃಷ್ಟಿಯ ಗೈವ ವನಧಿಶಯನ ಪ್ರದ್ಯಮ್ನನು ಬ್ರಹ್ಮಾಂಡವ ಪಾಲಿಸುವ ತ್ರಿನಯನನಂತರ್ಗತ ಸಂಕರ್ಷಣ ತಾನು ಲಯವನು ಗೈವ ವಾಸುದೇವ ಸುಜೀವರಿಗೆ ಮೋಕ್ಷವನೀವ 1 ನರಸಿಂಹ ರೂಪದಿ ಹರಿಯು ಭಕುತ ಪ್ರಹ್ಲಾದನ ಕಾಯ್ದ ಸಿರಿ ರಾಮನು ತಾನಾಗಿ ಬಂದು ದಶಶಿರನ ಭಂಜಿಸಿದ ದುರುಳ ಕಂಸನ ನಿಗ್ರಹಿಸಲು ಯದು ವಂಶದೊಳುದಿಸಿ ಬಂದ ಪರಾಶರಾತ್ಮಜನಾಗಿ ವರವೇದ ವಿಭಾಗವ ಗೈದ 2 ವರಾಹ ನರಹರಿರೂಪವ ತಾ ಕೊಂಡ ಇಚ್ಛೆಯಿಂದಲಿ ವಟುವಾಗಿ ಕೊಡಲಿಯ ಪಿಡಿದ ಪ್ರಚಂಡ ಸಿರಿ ಕೃಷ್ಣ ದಿಗಂಬರನಾಗಿ ಕಂಡ ಸ್ವಚ್ಛ ಅಶ್ವವೇರಿದ ರಂಗೇಶವಿಠಲ ಬಿನಗು ದೈವರ ಗಂಡ 3
--------------
ರಂಗೇಶವಿಠಲದಾಸರು
ಪುಟ್ಟಿದನು ಜಗದೀಶ | ಜಗಭಾರ ನೀಗಲುವೃಷ್ಣಿಕುಲದಲಿ ಈಶ | ದೇವಕಿಯ ಜಠರದಿಕೊಟ್ಟು ಅವಳಿಗೆ ಹರ್ಷ | ಕರುಣಾಬ್ದಿ ಭೇಶ ಪ ಅಟ್ಟಹಾಸದಿ ದೇವದುಂದುಭಿ | ಶ್ರೇಷ್ಠವಾದ್ಯಗಳೆಲ್ಲ ಮೊಳಗಲುಅಷ್ಟಮಿಯ ದಿನದಲ್ಲಿ ಬಲು ಉ | ತ್ಕøಷ್ಟದಲ್ಲಿರೆ ಗ್ರಹಗಳೆಲ್ಲವು ಅ.ಪ. ಪರಿ ದೇ-ವಕ್ಕಿಯಲಿ ಉದ್ಭವಿಸೀ | ಸಜ್ಜನರ ಹರ್ಷೀಸಿ ||ವಕ್ರಮನದವನಾದ ಕಂಸನು | ಕಕ್ಕಸವ ಬಡಿಸುವನು ಎನುತಲಿನಕ್ರಹರ ಪ್ರಾರ್ಥಿತನು ದೇ | ವಕ್ಕಿ ವಸುದೇವರಿಂದಲಿ 1 ದೇವ ಶಿಶುತನ ತಾಳೀ | ನಗುಮೊಗವ ತೋರಲುದೇವ ವಾಣಿಯ ಕೇಳೀ | ಅನುಸರಿಸಿ ಆದ ವಸುದೇವ ತನಯನ ಕೈಲೀ | ಕೊಂಡಾಗ ಬಂಧನಭಾವ ಕಳಚಿತು ಕೇಳೀ | ಶ್ರೀ ಹರಿಯ ಲೀಲೇ ||ಪ್ರಾವಹಿದ ಸರಿದ್ಯಮುನೆ ವೇಗದಿ | ಭಾವ ತಿಳಿಯುತ ಮಾರ್ಗವೀಯಲುಧೀವರನು ದಾಟುತಲಿ ಶಿಶು ಭಾವದವನನ ಗೋಪಿಗಿತ್ತನು 2 ವಿಭವ ||ತಂದು ಶಿಶು ಸ್ತ್ರೀಯಾಗಿ ಮಲಗಿರೆ | ಬಂದು ಕಂಸನು ಕೈಲಿ ಕೊಳ್ಳುತಕಂದನಸು ಹರಣಕ್ಕೆ ಯತ್ನಿಸೆ | ಬಾಂದಳಕ್ಕದು ಹಾರಿ ಪೇಳಿತು 3 ದುರುಳ ಭಯವನೆ ಪೊಂದಿ ತೆರಳುತತರಳರಸುಗಳ ನೀಗ ತನ್ನಯ | ಪರಿಜನಕೆ ಅಜ್ಞಾಪಿಸಿದ ಕಂಸ 4 ಆರೊಂದನೆಯ ದಿನದಿ | ಗೋಕುಲಕೆ ಬಂದಳುಕ್ರೂರಿ ಪೂಥಣಿ ವಿಷದಿ | ಪೂರಿತದ ಸ್ತನ ಕೊಡೆಹೀರಿ ಅವಳಸು ಭರದಿ | ಮೂರೊಂದು ಮಾಸಕೆಭಾರಿ ಶಕಟನ ಮುದದಿ | ಒದೆದಳಿದೆ ನಿಜಪದದಿ ||ಮಾರಿ ಪೂಥಣಿ ತನುವನಾಶ್ರಿತ | ಊರ್ವಶಿಯ ಶಾಪವನೆ ಕಳೆಯುತಪೋರ ಆಕಳಿಸುತ್ತ ಮಾತೆಗೆ | ತೋರಿದನು ತವ ವಿಶ್ವರೂಪ 5 ಭಂಜನ ||ಪಾನಗೈಯ್ಯುತ ದಾನ ವನ್ಹಿಯೆ | ಹನನ ವಿಷತರುರೂಪಿ ದೈತ್ಯನ ಧೇನುಕಾಸುರ ಮಥನ ಅಂತೆಯೆ | ಹನನ ಬಲದಿಂದಾ ಪ್ರಲಂಬನು6 ಪರಿ ಗೋವರ್ಧನ | ಶಂಖ ಚೂಡನ ಶಿರಮಣಿಯು ಬಲು ಅಪಹರಣ | ಅರಿಷ್ಟಾಸುರ ಹನನ ||ಹನನಗೈಯ್ಯಲು ಕೇಶಿ ಅಸುರನ | ಘನಸುವ್ಯೋಮಾಸುರನ ಅಂತೆಯೆ ಮನದಿ ಯೋಚಿಸಿ ಕಂಸ ಕಳುಹಿದ | ದಾನ ಪತಿಯನು ಹರಿಯ ಬಳಿಗೆ 7 ಬಲ್ಲ ಮಹಿಮೆಯ ಹರಿಯ | ಅಕ್ರೂರ ವಂದಿಸಿಬಿಲ್ಲಹಬ್ಬಕೆ ಕರೆಯ | ತಾನೀಯೆ ಕೃಷ್ಣನುಎಲ್ಲ ತಿಳಿಯುತ ನೆಲೆಯ | ಪರಿವಾರ ಸಹಿತದಿಚೆಲ್ವ ರಥದಲಿ ಗೆಳೆಯ | ಅಕ್ರೂರ ಬಳಿಯ ||ಕುಳ್ಳಿರುತ ಶಿರಿ ಕೃಷ್ಣ ತೆರಳುತ | ಅಲ್ಲಿ ಯಮುನೆಲಿ ಸ್ನಾನ ವ್ಯಾಜದಿ ಚೆಲ್ವತನ ರೂಪಗಳ ತೋರುತ | ಹಲ್ಲೆಗೈದನು ಗೆಳೆಯ ಮನವನು 8 ಬವರ | ಗೈವುದಕೆ ಬರ ಹರಿಹಲ್ಲು ಮುರಿಯುತ ಅದರ | ಸಂಹರಿಸಿ ಬಿಸುಡಲುಮಲ್ಲ ಬರೆ ಚಾಣೂರ | ಹೂಡಿದನು ಸಂಗರ ||ಚೆಲ್ವ ಕೃಷ್ಣನು ತೋರಿ ವಿಧ್ಯೆಯ | ಮಲ್ಲನನು ಸಂಹರಿಸುತಿರಲು ಬಲ್ಲಿದನು ಬಲರಾಮ ಮುಷ್ಟಿಕ | ಮಲ್ಲನನು ಹುಡಿಗೈದು ಬಿಸುಟನು 9 ಜಲಧಿ | ಆವರಿಸಿ ಬರುತಿರೆಹರಿಯ ಬಲ ಸಹ ಭರದಿ | ಸಂಹರಿಸಿ ಅವರನುಕರಿಯ ವೈರಿಯ ತೆರದಿ | ಹಾರುತಲಿ ಮಂಚಿಕೆಲಿರುವ ಕಂಸನ ಶಿರದಿ | ಪದಮೆಟ್ಟಿ ಶಿಖೆ ಪಿಡದಿ ||ಗರುಡನುರಗನ ಪಿಡಿದು ಕೊಲ್ಲುವ | ತೆರದಿ ಕೃಷ್ಣನು ಪಿಡಿದ ಕಂಸನ ಕರದಿ ಖಡ್ಗದಿ ಶಿರವ ನಿಳುಹಲು | ನೆರೆದ ಸುಜನರು ಮೋದಪಟ್ಟರು 10 ಮಂದ ಮೋದ ಪಡಿಸುವ 11
--------------
ಗುರುಗೋವಿಂದವಿಠಲರು
ಪೂಜೆಯ ಮಾಡಿದೆನೆ ದೇವರ ಪೂಜೆಯ ಮಾಡಿದೆನೆಈ ಜಗದರಸ ಚಿದಾನಂದ ತಾನೆಂದು ಪ ಶುದ್ಧ ಸ್ನಾನವನೆ ಮಾಡುತ ನಿರ್ಮಲ ವಸನವನುಬಂಧಿಸಿ ಬಿಗಿದು ಸ್ವಸ್ಥಾನಾಸ ಮಧ್ಯದಲ್ಲಿ ಕುಳಿತು 1 ನಿಸ್ಪøಹ ಭಸಿತವನೇ ಧರಿಸುತ ನಿಷ್ಕಲಂಕನಾಗಿವಿಶ್ವೇಶ್ವರ ವಿರೂಪಾಕ್ಷನೇ ತಾನೆಂದು 2 ಸರ್ವ ಪೂಜಿತನು ತಾನೀಗ ಸರ್ವನಿವಾರಿತನುಸರ್ವರೂಪಕ ತಾನೀಗೆಂದು ಧ್ಯಾನವರ್ಪಿಸಿದೆನೆ3 ಆನಂದ ವ್ಯಾಪಕನೆ ತಾನೀಗ ಆನಂದ ರೂಪಕನೇಆನಂದಾತ್ಮಕ ತಾ ನೀಗೆಂದಾಹ್ವಾನ ವರ್ಪಿಸಿದನೆ 4 ಇಂದ್ರಿಯ ರೂಪಕ ತಾನೀಗ ಇಂದ್ರಿಯ ವ್ಯಾಪಕನೇಇಂದ್ರಿಯ ಸಾಕ್ಷಿಕ ತಾನೀಗೆಂದು ಸಿಂಹಾಸನವರ್ಪಿಸಿದೆನೆ 5 ನಿಶ್ಚಲಾತ್ಮಕನವ ತಾನೀಗ ನಿಶ್ಚಲೈಕ್ಯನಾದನಿಶ್ಚಲವಸ್ತು ನಿಜತಾನೇ ಎಂದಘ್ರ್ಯವರ್ಪಿಸಿದೆನೆ 6 ವಿಶ್ವ ವಿಶ್ವಭೋಕ್ತøವಿಶ್ವಲೀಲಾತ್ಮಕ ತಾನೀಗೆಂದು ಪಾದ್ಯವರ್ಪಿಸಿದೆನೆ 7 ನಿಗಮ ಗೋಚರ ತಾನೆಂದು ಸ್ನಾನವರ್ಪಿಸಿದೆನೆ 8 ಅಂಬರ ವ್ಯಾಪಕನೇಅಂಬರದೊಳು ಚಿದಂಬರ ತಾನೆಂದು ವಸ್ತ್ರವರ್ಪಿಸಿದೆನೆ9 ಚೈತನ್ಯಾಧಾರ ತಾನೀಗ ಚೈತನ್ಯಾದೂರ ಚೈತನ್ಯಾಧಿಪತಾನೆಂದು ಯಜ್ಞೋಪವೀತ ವರ್ಪಿಸಿದನೆ10 ಕಲುಷ ನಿರ್ಜಿತನೇಕಲುಷ ಹರತಾ ನಿಜವೆಂದಾಭರಣವರ್ಪಿಸಿದೆನೆ11 ಲೇಪಕ್ಕಾಧಾರ ತಾನೀಗ ಲೇಪ ನಿರಾಧಾರಲೇಪಹರ ತಾ ನಿಜವೆಂದು ಅನುಲೇಪವರ್ಪಿಸಿದೆನೆ12 ಪುರತನು ವಿಸ್ತರಿಸಿ ತಾನೀಗ ಪುರಾಧಿಪತಾನೆನಿಸಿಪುರುಷೋತ್ತಮ ತಾನೆಂದು ಸುಪುಷ್ಪವರ್ಪಿಸಿದೆನೆ13 ಪರ ಇಹವು ತಾನೇ ತಾನೀಗ ಪರಾತ್ಪರನು ತಾನೆಪರವಸ್ತು ತಾ ನಿಜವೆಂದು ಧೂಪವರ್ಪಿಸಿದೆನೆ 14 ಜ್ಯೋತಿಯ ರೂಪ ತಾನೀಗ ಜ್ಯೋತಿ ನಿರ್ಮಯನುಜ್ಯೋತಿಯಹ ಚಿಜ್ಯೋತಿಯು ತಾನೆಂದು ಜ್ಯೋತಿಯರ್ಪಿಸಿದೆನೆ 15 ನಿತ್ಯ ತೃಪ್ತನುನಿತ್ಯತೃಪ್ತ ತಾನೆಂದು ನೈವೇದ್ಯವರ್ಪಿಸಿದೆನೆ 16 ಮಂಗಳವೆ ಆದ ತಾನೀಗ ಮಂಗಳಾಂಗನಾದಮಂಗಳ ಮೂರುತಿ ತಾನೆಂದು ತಾಂಬೂಲವರ್ಪಿಸಿದೆನೆ 17 ನಿರ್ವಿಕಾರ ನಿಜ ತಾನೀಗ ನಿರಾವಲಂಬ ನಿಜ ನಿ-ರಾವರಣ ತಾನೆಂದು ಪ್ರದಕ್ಷಿಣವರ್ಪಿಸಿದೆನೆ 18 ಜಯ ಜಯಾತ್ಮಕನೆ ತಾನೀಗ ಜಯ ಸದಾತ್ಮಕನೆಜಯನಿತ್ಯಾತ್ಮಕ ತಾನೆಂದು ನಮಸ್ಕಾರವರ್ಪಿಸಿದೆನೆ19 ಲೋಕೈಕನಾಥ ತಾನೀಗ ಏಕೈಕ ನಾಥನುಏಕ ನಾಥನು ತಾನೆಂದು ವಿಸರ್ಜನವರ್ಪಿಸಿದೆನೆ 20 ಪರಿ ಪರಿ ಮಾಡಿದೆನೆ 21
--------------
ಚಿದಾನಂದ ಅವಧೂತರು