ಒಟ್ಟು 17 ಕಡೆಗಳಲ್ಲಿ , 10 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅನಂತೇಶ್ವರ ದೇವರನ್ನು ನೆನೆದು) ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇ ಲೋಕೋತ್ತಮಾನಂತೇಶ್ವರ ದೇವಾಲಯದಿ ಪ. ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆ ಝಡಿದು ಬರುತಿಹುದು ಭೋರ್ಗುಡಿಪ ತೆರೆಯ ಝಡಿವ ನಾದಕೆ ಒಡಂಬಡದೇಕಾಂತದಿ ಬಂದು ಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1 ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳು ಭಾರವನು ಪೊತ್ತು ಬಹಳಾಲಸ್ಯವೋ ಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದ ಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2 ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ- ಬೇಡಿದೆನು ಎಂಬ ನಾಚಿಕೆಯ ಮನವೋ ಖೋಡಿ ನೃಪತಿಯರ ಹೋಗಾಡಿಸುತ ಕಾಡಿನೊಳು ಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3 ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯ ಕಾಲದೊಳು ಗೈವಂತಮೇಲುಕಾರಿಯದ ಕಾಲೋಚಿತವ ಮನದೊಳಾಲೋಚಿಸುತ್ತಹಿಯ ಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4 ಯುಗಯುಗದೊಳವತಿರಿಸ ಜಗದ ಭಾರವನಿಳುಹಿ ಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವ ತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀ ಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5 ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ- ಗಲಭೆಯುಂಟೆಂದಲ್ಲಿ ನಿ¯ದೆ ಈಗ ಲಲನೆಯಳ ಕೂಡೆ ಸರಸಗಳನಾಡಲು ತನಗೆ ಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6 ಸೇರಿರ್ದ ಶರಣ ಸಂಸಾರಿ ನೀನೆಂದು ಶ್ರುತಿ ಸಾರುವುದು ಕರುಣವನು ತೋರೆನ್ನ ದೊರೆಯೇ ದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ- ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ತುಪಾಕಿ ವೆಂಕಟರಮಣಾಚಾರ್ಯ
ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ತೆಗೆ ತೆಗೆ ಬಾಗಿಲನ್ನು ಲಕ್ಷ್ಮೀಪತಿ ತೆಗೆ ತೆಗೆ ಬಾಗಿಲನ್ನು ಪ ತೆಗೆ ತೆಗೆ ಬಾಗಿಲ ಜೋಗಿ ಕೇಶವದಾಸ ನಗುತ ಬಂದಿರುವನು ಸ್ವೀಕರಿಸಿನ್ನು ಅ.ಪ. ಹÉೀಸಿ ಸಂಸಾರವನ್ನು ತ್ಯಜಿಸಿ ಬಿಟ್ಟು ಆಶೆಪಾಶೆಗಳನ್ನು ಸಾಸಿಮೆ ಕಾಳಿಗೆ ಸರಿಮಾಡಿ ಭವವನ್ನು ವಾಸುಕಿ ಶಯನ ಶ್ರೀ ಲೋಲನ ನಂಬೀ 1 ನಿನ್ನಯ ಭಜನೆಯನು ಮಾಡುತ ಬಂದೆ ನಿನ್ನಯ ಸ್ಮರಣೆಯನು ಪನ್ನಗ ಶಯನ ಶ್ರೀ ದಾಸದಾಸರ ಪೋಷ ಮನ್ನಿಸಿ ನೋಡಲು ಚರಣವ ನಂಬೀ 2 ನಿನ್ನಯ ಲೀಲೆಯಲ್ಲೀ ವೇಷವ ಹಾಕಿ ನಿನ್ನ ನಾಟಕದಲ್ಲಿ ಚನ್ನಾಗಿ ಕುಣಿದು ಲೋಕದೊಳಹÀುತಿಯನಾಗಿ ಚನ್ನಕೇಶವ ಸೂತ್ರಧಾರನ ನಂಬೀ 3
--------------
ಕರ್ಕಿ ಕೇಶವದಾಸ
ನಾಟಕ ರಂಗದಲಿ ನಟಶಿರೋಮಣಿಯೊಬ್ಬ ಪಟುತನದಿ ವಿಧವಿಧನ ನಟನೆಗಳ ತೋರುವನು ಪ ಅಘಟನಾಘಟನ ಶಕ್ತನ ಕಪಟನಾಟಕವು ಘಟಕರಲ್ಲದ ಜನಕೆ ಎಟುಕದಾನೋಟ ಅ.ಪ ಮುಖ್ಯಪಾತ್ರವು ನಮ್ಮ ರುಕ್ಮಿಣಿ ರಮಣನದು ಮುಖ್ಯತಾರೆಯು ಲೋಕ ಜನನಿ ಲಕುಮಿ ಇಕ್ಕಿದನು ಗೋರೂಪ ಚತುರಾನನನು ಮುದದಿ ಮುಖ್ಯಪ್ರಾಣನೆ ತುರಗ ಮುಕ್ಕಣ್ಣ ಕರುವಾದ 1 ಸುಖಸಾರನನು ಪಡೆದು ಧನ್ಯಳಾದ ಯಶೋದೆ ಬಕುಳೆಯೆ ತಾನಾದಳೀ ನಾಟಕದಲಿ ಅಕಳಂಕ ಮಹಿಮನನು ಅಗಲದಿದ್ದ ಸತಿಯು ಮುಖನೋಡಿ ಕೋಪದಲಿ ಕಲ್ಲುಗಳನೆಸೆದಳು 2 ಸರ್ವತ್ರ ವ್ಯಾಪ್ತನಿಗೆ ಇರಲು ಜಗವು ಸಿಗದೆ ಕಿರಿದ ತಾ ಹಲ್ಲುಗಳ ವರಹನಲ್ಲಿ ಹರನ ತಾತನು ತಾನು ಸ್ಮರನ ಬಾಣದಿ ನೊಂದ ಸುರಮೋಹಿನಿಯು ಇಂಥ ಕೊರವಂಜಿಯಾದಳು3 ಹುಟ್ಟಿಸುವ ಬೊಮ್ಮನನು ಪುಟ್ಟಶಿಶುವನೆ ಮಾಡಿ ಹೊಟ್ಟೆಗಿಲ್ಲದೆ ಬಹಳ ಬಾಡಿ ಇರಲು ಮೃಷ್ಟಾನ್ನವನು ಚಿನ್ನ ತಟ್ಟೆಯಲಿ ತಂದಿಡಲು ಶ್ರೇಷ್ಠವಿದು ಜನನಿಗೆನ್ನುತ ತಿಂದು ತೇಗಿದಳು 4 ಬಡುಕನೆದೆಗೊದೆಯಲವನಡಿಗಳಿಗೆ ಶರಣೆಂದ ಕಡು ಕೋಪಿ ಗೋವಳನ ಕೊಡಲಿಗೊಡ್ಡಿದ ಶಿರವ ಹಿಡಿ ಮಣ್ಣು ಪಿಂಡಗಳನಿತ್ತ ಚಂಡಾಲನಿಗೆ ಸಡಗರದಿ ಲಕುಮಿಯನೇ ಕರದಲಿತ್ತ ಪ್ರಸನ್ನ 5
--------------
ವಿದ್ಯಾಪ್ರಸನ್ನತೀರ್ಥರು
ನಾಟಕವಿದು ಹಳೆ ನಾಟಕ ನೋಟಕೆ ಇದು ಬಲು ನೂತನ ಪ ನಾಟಕ ಮಂದಿರ ಜಗವೆಲ್ಲ ಕಂಡಿರ ನೋಟವು ಯಾರದೊ ಆಟವು ಯಾರದೊ ಅ.ಪ ಇರುಳೊಳು ರಾಜಾಧಿರಾಜನಿವ ಹಗಲಲಿ ಭಿಕ್ಷಕೆ ಹಾಜರಿವ ಮುಗಿವುದು ಎನ್ನಯ ಪಾತ್ರವೆನ್ನುವುದೆ ಹಗಲಿನತನಕವು ಕಾಣನಿವ 1 ಯುದ್ಧವು ದಿನವೊ ಈ ನಾಟಕದಿ ಗೆದ್ದವರೊಬ್ಬರ ತೋರಿಸಿ ಯುದ್ಧದಗೋಚಿಗೆ ಹೋಗದೆ ಶಾಂತಿಯೊ ಳಿದ್ದ ಜನರೆ ಗೆದ್ದವರಿಲ್ಲಿ 2 ಕಲಿಪುರುಷನ ದೊಡ್ಡ ಸಭೆಯಲ್ಲಿ ಕುಳಿತು ಮಾತಾಡುವರಾರು ಜನ ಕಳುಹಿಸಲೊಬ್ಬನು ಇಳೆಯೊಳಗೊಬ್ಬರ ಉಳಿಸದೆ ಗೆಲುವೆನು ನೋಡು ಪ್ರಭು 3 ಶೌರ್ಯ ಸಾಹಸ ಕಾಪಟ್ಯಗಳಾ ಶ್ಚರ್ಯವು ಒಂದೊಂದು ದೃಶ್ಯದಲೂ ಯಾರ್ಯರೆಂಬುದ ಕಾಣದೆ ವೇಷದ ಮರ್ಯಾದೆಯು ವರ್ಣಿಪುದೆಂತು 4 ಕುಣಿವರು ಒಂದೆಡೆ ದಣಿವರು ಒಂದೆಡೆ ಕೊನೆ ಮೊದಲಿಲ್ಲವೀ ನಾಟಕಕೆ ಪ್ರಣಯಹನನ ದೃಶ್ಯಗಳನು ಒಂದೇ ಕ್ಷಣದಲಿ ತೋರುವ ಅಸದೃಶ್ಯದ 5 ಹೊಸ ಹೊಸ ದೃಶ್ಯವು ಹೊಸ ಹೊಸ ಪಾತ್ರವು ಪುಸಿಯಲ್ಲವು ಈ ನಾಟಕವು ಶಶಿಕುಲದರಸ ಪ್ರಸನ್ನನಾಗಿ ತಾ ಮುಸಿ ಮುಸಿ ನಗುತಲಿ ನೋಡುತಿಹ 6
--------------
ವಿದ್ಯಾಪ್ರಸನ್ನತೀರ್ಥರು
ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯಅಚ್ಯುತನ ನಾಮವನು ನೆನೆದು ಸುಖಿಯಾಗೊ ಪ ಗಳಿಸದಿರು ಸೀಮೆಯನು ಗಳಿಸದಿರು ದ್ರವ್ಯವನುಗಳಿಸದಿರು ನೀ ದುರಿತರಾಶಿಗಳನುನಳಿನನಾಭನ ದಿವ್ಯ ನಾಮವನು ನೆನೆನೆನೆದುನೆಲೆಯಾದ ಪರಮ ಪದವಿಯ ಪಡೆಯೊ ಮನವೆ 1 ನೋಡದಿರು ಪರಸತಿಯ ಕೂಡದಿರು ದುರ್ಜನರಆಡದಿರು ಮಾತುಗಳ ಗರ್ವದಿಂದಬೇಡದಿರು ಕೈಯ ಹಿಂದೆಗೆವ ಲೋಭಿಯನು, ಕೊಂ-ಡಾಡದಿರು ಬೀದಿಗೂಳುಂಬ ದೈವಗಳ 2 ನಾನಾ ಜನ್ಮದಿ ಬಂದ ನಾಟಕದ ಬೊಂಬೆಯಿದುಮಾನಕ್ಕೆ ಮೆಚ್ಚಿ ನೀ ಮರುಳಾಗದೆಜಾಣತನದಿಂ ಕಾಗಿನೆಲೆಯಾದಿಕೇಶವನಮಾನಸದಲಿ ನೆನೆದು ಸುಖಿಯಾಗು ಮನುಜ 3
--------------
ಕನಕದಾಸ
ಬುದ್ಧಿಮಾತು ಹೇಳಿದರೆ ಕೇಳ ಬೇಕಮ್ಮ ಮಗಳೆ ಮನ ಶುದ್ದಳಾಗಿ ಗಂಡನೊಡನೆ ಬಾಳ ಬೇಕಮ್ಮ ಪ ಮಾತು ಮಾತಿಗೆ ಮಾತ ಜೋಡಿಸಿ ಆಡಬೇಡಮ್ಮಮಗಳೆ ಪ್ರೀತಿ ಪಡುವ ಗಂಡನೆಂದು ಹೆಮ್ಮೆ ಬೇಡಮ್ಮ ನೀತಿ ತಪ್ಪಿ ನಡಿಯಬೇಡ ಯೆಂದಿಗಾದರೂ ಮಗಳೆ ಸೋತು ನಡೆಯಲು ಲೇಸುಯೆಂದು ತಿಳಿಯ ಬೇಕಮ್ಮ 1 ಅತ್ತೆ ಮಾವ ಗಂಜಿ ಕೊಂಡು ನಡಿಯ ಬೇಕಮ್ಮ ಮಗಳೆ ಮತ್ತೆ ಪತಿಯ ಮನವ ಮೆಚ್ಚಿಸಿ ಬಾಳ ಬೇಕಮ್ಮ ದುಡಿಯ ಬೇಕಮ್ಮ ಮಗಳೆ ಚಿತ್ತದಲ್ಲಿ ಹರಿಯ ಭಕ್ತಿ ಬಿತ್ತಬೇಕಮ್ಮ 2 ನೋಟ ಆಟದಲ್ಲಿ ಮಮತೆ ಬಹಳ ಬೇಡಮ್ಮ ಮಗಳೆ ಕೊಟ್ಟು ಕ್ರಯವ ತಿಂಡಿ ತಿಂಬೊ ನಡತೆ ಬೇಡಮ್ಮ ಕೂಟ ಜನರ ಮಾತು ಕೇಳೆ ಕೇಡು ಕೇಳಮ್ಮ ಮಗಳೆ ಸಾಟಿ ನಾನು ಗಂಡಗೆಂದು ಹಠವು ಬೇಡಮ್ಮ 3 ಕ್ಲೇಶ ಕೇಳಮ್ಮ ಮಗಳೆ ಗಂಡ ತಂದುದೆ ದೊಡ್ಡದೆಂದು ಉಂಡು ಬಾಳಮ್ಮ ಗಂಡೀ ನಂತೆ ಮೆರೆಯ ಬಾರ್ದು ತಗ್ಗಿ ನಡೆಯಮ್ಮ ಮಗಳೆ ತೊಂಡಳಾಗಿ ಹರಿಗೆ ಬಾಳೆ ಸುಖವು ನಿನಗಮ್ಮ 4 ಹರಿಯು ಕೊಟ್ಟರೂಪವೆ ಛಂದ ಲಜ್ಜೆ ಬೇಡಮ್ಮ ಮಗಳೆ ಬರಿಯ ವೇಷ ನಾಟಕದಂತೆ ಮೋಸ ಕಾಣಮ್ಮ ಜರಿಯ ಬೇಡ ಹಿರಿಯರ ಮಾತು ಹಾನಿ ಹೌದಮ್ಮ ಮಗಳೆ ಮರಿಯೆ ಹರಿಯ ಭವವು ತಪ್ಪದು ಜೋಕೆ ನೋಡಮ್ಮ 5 ಸೊಲ್ಲು ಕೇಳಮ್ಮ ಮಗಳೆ ನಲ್ಲನ ಬಲುಮೆಗೆ ಒಳ್ಳೆ ಗುಣವೆ ಮುಖ್ಯ ತಿಳಿಯಮ್ಮ ಮಗಳೆ ಒಳ್ಳೆ ಮಾತನಾಡಿ ಸರ್ವರ ಹಿತವ ಕೋರಮ್ಮ 6 ಏನೇ ಬಂದರು ಜರಿದು ಪತಿಯ ನುಡಿಯ ಬೇಡಮ್ಮಮಗಳೆ ನಿನ್ನದೆಂದು ಪುಟ್ಟಿದ ಮನೆಯ ತಿಳಿಯ ಬೇಡಮ್ಮ ಮಾನವೆ ಮುಖ್ಯ ಮಾನಿನೀಗೆ ತಿಳಿದು ಬಾಳಮ್ಮಾ ಮಗಳೆ ಮಾನವು ನೀಡೆ ಮಾನವು ಬಾಹೋದು ಮರ್ಮ ತಿಳಿಯಮ್ಮ 7 ನಾನು ನಾನು ನಾನೆಂಬೋದೆ ಹೀನ ಕೇಳಮ್ಮಾ ಮಗಳೆ ಸಾನುರಾಗದ ನುಡಿಯೆ ಸಕ್ಕರೆ ಕೀರ್ತಿ ಉಳಿಸಮ್ಮ ಸ್ನಾನ ಪಾನದಲ್ಲೇ ಮುಳುಗದೆ ಹರಿಯ ಸೆನೆಯಮ್ಮ ಮಗಳೆ ಶ್ರೀನಿವಾಸನ ಭಕ್ತರ ಪೂಜೆ ಯತ್ನದಿ ಮಾಡಮ್ಮಾ 8 ಪರರ ಸಿರಿಯ ನೋಡಿ ಮನದಿ ಕೊರಗ ಬೇಡಮ್ಮ ಮಗಳೆ ಹರಿಯು ನೀಡಿಹ ಸಿರಿಯೆ ಸಾಕುಯೆಂದು ಸುಖಿಸಮ್ಮ ಯರವಿನಿಂದ ಒಡವೆ ವಸ್ತ್ರ ಧರಿಸ ಬೇಡಮ್ಮ ಮಗಳೆ ಅರಿತು ಹರಿಯ ಗುಣಗಳ ಮನದಿ ನೆನೆದು ನೆನೆಯಮ್ಮ 9 ಸತತ ನಗೆ ಮೊಗಳಾಗಿ ಬಾಳು ಗಂಟು ಬೇಡಮ್ಮ ಮಗಳೆ ಸತತ ಕಾಯುವ ಹರಿಯೇಯೆಂದು ದೃಢದಿ ಭಜಿಸಮ್ಮ ಕೇಳಮ್ಮಾ ಮಗಳೆ ನಿತ್ಯ ಸುಖಿಸಮ್ಮ 10 ಪತಿಯ ಭಕ್ತಿಯೆ ತಾರಕ ನಿನಗೆ ಧೋರಣೆ ಬೇಡಮ್ಮ ಮಗಳೆ ಪತಿಯ ಜರಿಯುತ ವ್ರತಗಳ ಮಾಡೆ ಫಲವೇ ಇಲ್ಲಮ್ಮ ರತಿಯಿಂ ನುಡಿದಿಹೆ ಶೃತಿಗಳಸಾರ ಯುಕ್ತಿಗಳಮ್ಮ ಮಗಳೆ ಮೊರೆಯ ಹೋಗಮ್ಮ 11
--------------
ಕೃಷ್ಣವಿಠಲದಾಸರು
ಬೊಂಬೆಯಾಟವನಾಡಿಸಿದೆ ಮಹಾಭಾರತದ ಪ ಅಂಬುಜಭವಾದಿ ಅಮರರು ನೋಡುತಿರಲು ಅ ಕುರುಭೂಮಿಯೆಂಬ ಪುರವೀಧಿಯನು ರಚಿಸಿಮರೆಯ ಮಾಯದ ಐದು ತೆರೆಯ ಹಾಕಿಧರಣೀಶರೆಂಬ ನರಪ್ರತಿಮೆಗಳನಳವಡಿಸಿನರನ ರಥವಾಜಿಯ ಸೂತ್ರವನು ಪಿಡಿದು 1 ಓದುವನು ನಾರದನು ವಾದ್ಯಕಾರನೆ ಶಂಭುಬಾದರಾಯಣದೇವ ಕಥಾಪ್ರಸಂಗಿಮೇದಿನಿಯ ಹೊರೆಗಳೆವ ಮೃತ್ಯುವಿನ ಹಾಸ್ಯರಸವೇದನಿಕರಗಳು ಕೈವಾರಿಸುತಿರಲು 2 ಹದಿನೆಂಟು ಅಕ್ಷೋಹಿಣಿ ಮಾರ್ಬಲವ ನೆರೆಸಿಹದಿನೆಂಟು ದಿನ ಕದನಕೇಳಿಕೆ ನಡೆಸಿಅದರೊಳೈವರನುಳುಹಿ ಅವನಿಭಾರವನಿಳುಹಿಮುದದಿ ಬ್ರಹ್ಮಕಪಾಲವನು ತೃಪ್ತಿಗೊಳಿಸಿ 3 ಲೋಕದೊಳಗೈದನೆಯ ವೇದವಿದೆಂದೆನಿಸಿಪಾಕಶಾಸನ ಸಭೆಯನು ಮೆಚ್ಚಿಸಿಈ ಕಥೆಯ ಕೇಳಿದ ಜನಮೇಜಯನ ಪತಿಕರಿಸಿತಾ ಕಪಟನಾಟಕದ ಸೂತ್ರಧರನೆನಿಸಿ 4 ಇಂತೆಸೆವ ಲೀಲಾವಿನೋದ ರಚನೆಗಳಿಂದ ಲೋ-ಕಾಂತರಂಗಳ ಸಂಚರಿಸುತಸಂತಸದಿ ಭರತ ಸಂಸಾರವನು ಪೊರೆವ ವೇ-ದಾಂತನುತ ಕಾಗಿನೆಲೆಯಾದಿಕೇಶವರಾಯ 5
--------------
ಕನಕದಾಸ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ವಿಶ್ವಪತಿ ಇಂದುಶೇಖರ ಸುರಮಸ್ತಕಮಣಿ ಮನ್ಮಥರಿಪುವೆ ವಿಸ್ತರಿಪೆನು ನಿಮ್ಮ ಮಹಿಮೆಯ ಜಗದೊಳು ಸ್ವಸ್ಥವಾಗಿ ಪ. ಎಲ್ಲಿ ನೋಡಲು ಲಿಂಗಮಯವು ಅಲ್ಲಿಗಲ್ಲಿಗೆ ತೀರ್ಥಯಾತ್ರೆಯು ಸೊಲ್ಲು ಸೊಲ್ಲಿಗೆ ಹರಮಹಾದೇವಂತೆಲ್ಲರು ಸ್ತುತಿಸುವರು ಬಲ್ಲವರು ಇದು ಭಾವಿಸಿ ಕಾಶಿಗಿಂತ ಮಹಿಮೆ ವೆಗ್ಗಳವಹುದೆನುತ ಸುಲಕ್ಷಣೆ ಶಿವಗಾತ್ರೆ ಶಿವನವಲ್ಲಭೆ ತ್ರಾಸಿನಲಿ ತೂಗುವಳು 1 ನಾಟಕದಿ ನಾನಾಜನ್ಮದಿ ಬಂದು ದಾಟದಂತರವನಳಿದನು ಚಂದ್ರ ಕೋಟಿತೀರ್ಥದಿ ಮಿಂದು ಮೈಯ ಕೋಟಲೆ ಸಂಸಾರಗಳೆಲ್ಲ ದಾಟಿದೆನು ಇನ್ನು ಜನನಮರಣಗಳೆಂಬೋಪಾಯಗಳಿಲ್ಲವು 2 ಕೂಪಾರದಲಿ ಬಂದು ಸೂಸುವ ತೆರೆಗಳು ಅಭ್ರದಿಂದಲಿ ಅಪ್ಪಳಿಸಲು ಉನ್ನತ ಭ್ರಮೆಗೊಂಡಿದ್ದ ಕರ್ಮದ ಬಲಿಗಳು ಮಿಗಿಲಾದವು ಉರ್ವಿಯೊಳಗುಳ್ಳ ಸಕಲನದಿಗಳನು ಗರ್ಭದಲಿ ಇಂಬಿಟ್ಟು ಮೆರೆದಂತಿಹ ಸರ್ಬಗೂಡಿಸುವ ಸಿಂಧುರಾಜನಲಿ ಮಿಂದು ನಿರ್ಭಯಳಾದೆನು 3 ಬಲಿದ ದನುಜನ ಭಾವಕ್ಕೆ ಮೆಚ್ಚಿ ಒಲಿದಷ್ಟವರವಿತ್ತ ಸಿಲುಕಲು ಸುಲಭನೆಂದು ಹೇರಂಬನೊಳಿತ್ತು ನೆಲೆಗೊಳಿಸಿ ಎಳೆದರೆ ಎಳೆಯಲೊಲ್ಲದೆ ಛಲವಿಡಿದ ಲಂಕಾಧಿಪತಿಯ ಅಹಂಕಾರ ವಳಿದು ಇಂದ್ರಾದಿಗಳಿಗೆ ವರವಿತ್ತ ಮಹಾಬಲಲಿಂಗನ ಕಂಡೆ 4 ಅನ್ನದಾ ಶತಶೃಂಗ ಪರ್ವತ ಪಶ್ಚಿಮದಿಂದ ಪಾತಾಳಗಂಗೆ ಸಹಿತಲಿ ಪ್ರ- ಸನ್ನನಾಗಿ ನಿಂದ ಚೆನ್ನ ಹೆಳವನಕಟ್ಟೆರಂಗನ ಪ್ರಿಯ ಪನ್ನಂಗಧರ ಪರಮಪವಿತ್ರ ಗೋಕರ್ಣೇಶನ ಕಂಡೆ ಪಾ- ವನವಾಯಿತು ಎಲ್ಲಾ ಕುಲಕೋಟಿಯು 5
--------------
ಹೆಳವನಕಟ್ಟೆ ಗಿರಿಯಮ್ಮ
ವೆಂಕಟೇಶ ಕಲ್ಯಾಣ ಶ್ರೀವೆಂಕಟ ದೊರೆಯೆ ಪ ವಿಶ್ವಸೃಷ್ಟಿಯಗೈದಂಥ ತಾನಿನ್ನು ಅರಿಯೆನು ಎಂತೆನಲು ಅ.ಪ ಸುರವರ ನಾರೆಂದು ಅರಿಯೆಭೃಗುವು ತಾನು ಪತಿ ಹರ ವಿಧಿಗಳೆನೆಲ್ಲ ಬರುವ ಬಗೆಯ ಕಂಡು ಸುರತ ಕೇಳಿಯಸೋಗು ಧರಿಸಿ ಮಲಗಿರಲಂದು ಜರಿದುವದಿಯಲು ವಕ್ಷ ಹರಿಸಿ ದುಗುಡವ ಮುನಿಗೆ ವರಸಿ ಚರಣದ ಕಣ್ಣು ತರಿದು ಸಾಧನೆ ಅಧಿಕ ಸಿರಿಗೆ ಪ್ರೇರಿಸಿ ಕೋಪ ತೊರೆದು ಧಾಮವ ಬೇಗ ಧರೆಗೆ ಇಳಿಯುತ ಬಂದು ಗಿರಿಯ ಹುತ್ತವ ಸೇರಿ ಸುರಿಸೆ ವಿಧಿಯು ಪಾಲು ಕರುಣದಿಂದಲಿ ಕೊಂಡು ದೊರೆಯ ಸೇವಕ ಗೋವ ಹರಿಸೆ ಕೊಡಲಿಯ ನೆತ್ತೆ ಶಿರವನೊಡ್ಡುತ ರಕ್ತ ಧಾರೆ ಚಿಮ್ಮಿಸಿನಭದಿ ಬರಲು ಚೋಳನು ದೊರೆಗೆ ಕ್ರೂರ ಶಾಪವನಿತ್ತು ಕರೆಸಿಗುರುಗಳಮದ್ದು ತರಲು ಹೊರಟದೇವ ನಿರುತ ಚಿನ್ಮಯಗಾತ್ರ ಉರು ವೈದ್ಯ ಧನ್ವಂತ್ರಿ ನಿರುಪಮ ನಾಟಕದೆ 1 ಸಾಮ ವಿಶ್ವದ ಸಾರ್ವಬೌಮ ಬೇಡಿದೆ ರಚಿಸೆ ಧಾಮ ಕ್ರೋಢನ ಕಂಡು ಪ್ರೇಮದಿಂದಲಿ ಬಕುಳೆ ವಾಮ ಕಂದನು ಆಗಿ ಭಾಮೆ ಪಾಕವನುಂಡು ಕಾಮ ವರ್ಜಿತ ಪೂರ್ಣ ಕಾಮ ಕುದುರೆಯನೇರಿ ಕಾಮ ಬೇಟೆಯೋಳ್ ನಿಜ ಕಾಮಿನಿಯನು ಕಂಡು ದ್ಧಾಮ ಮೋಹವ ತೋರಿ ಭೂಮಿಜಾತೆಯ ಘಟಿಸೆ ಭಾಮೆ ಬಕುಳೆಯ ಕಳಿಸಿ ಧರ್ಮದೇವತೆಯೆನಿಸಿ ಜಾಮಾತ ಸನ್ನಾಹ ಜಾಣ್ಮಿಯಿಂದಲಿನಡೆಸಿ ಕಾಮಿತಾರ್ಥವ ಕೊಂಡು ಧಾಮ ಸೇರಲು ಬಕುಳೆ ಹೇಮಮಯ ದಾರಿದ್ರ ನೇಮದಾಟವ ತೋರಿ ಹೇಮಗರ್ಭನ ಕರಿಸೆ ಸೋಮಶೇಖರ ಕೊಡಿಸೆ ಹೇಮರಾಶಿಯ ತಂದು ಭೀಮರುಜೆಗಳ ನಟಿಸೆ ಸೋಮಸೋದರಿಕರಿಸಿ ಮಾಮನೋಹರಗೈದ ಸೀಮೆಇಲ್ಲದಂಥ 2 ಮದುವೆ ಹಬ್ಬಿಸಿ ಭಕ್ತ ಹೃದಯ ತುಂಬುವ ನಂದ ಮುದದಿ ಬೆಳೆಸೆ ಪಯಣ ವದಗೆ ಶುಕರಾತಿಥ್ಯ ಸದಯಗೊಳ್ಳುತ ತೃಪ್ತಿ ಬದಿಗರೆಲ್ಲರಿಗಿತ್ತು ಮದನಮೋಹನ ತೇಜ ಮದುವೆ ಊರನು ಸೇರಿ ಕುದಿವ ಕುತೂಹಲದಿ ಅದ್ಭುತ ಸ್ವಾಗತವ ಪದುಮಾವತಿಯ ತಂದೆ ಹೃದಯ ಪೂರ್ವಕ ನೀಡೆ ಆದರದಿ ಸ್ವೀಕರಿಸಿ ಪಾದದ್ವಂಧ್ವವ ನೀಡಿ ವೇಧಾದಿ ನಿಜವೃಂದ ಮೇದಿನೀ ಸುರವೃಂದ ಮೋದ ಮೆಲ್ಲಲು ಕೂಡಿ ವೇದ ಘೋಷವುಗೈಯೆ ವಾದ್ಯದುಂದುಭಿ ಮೊಳಗೆ ವೇದವೇದ್ಯನು ಮದುವೆ ವೇದಿಕೆಯನು ಏರಿ ಕಾದುಕೊಂಡಿಹ ಜನಕೆ ಸಾಧಿಸುತಲಭೀಷ್ಠ ಕರ ಸಾದರ ಪಿಡಿದಂಥ ಖೇದ ತರಿಯುತ ನಿಜ ಮೋದದಾನವ ಗೈವ 3 ತಿರುಪತಿ ತಿಮ್ಮಪ್ಪ ಸುರಗಣ ಜಗದಪ್ಪ ವರಸಮರಿಲ್ಲಪ್ಪ ಭರದಿ ಕಸಿವಕಪ್ಪ ಅರಿತವರಿಲ್ಲಪ್ಪ ಧರಿಸಿಹ ಸಿರಿಯಪ್ಪ ಕರುಣ ಸುರಿಸುವನಪ್ಪ ಉರುಗಗಿರಿಯಲ್ಲಿಪ್ಪ ಸುರತರು ಇವನಪ್ಪ ಗಿರಿಸಪ್ತ ದೊರೆಯಪ್ಪ ಹರಿಕೆ ಕೊಳ್ಳುವನಪ್ಪ ಅರಿಮಾರಿ ಸರಿಯಪ್ಪ ಶರಣರ ಪೊರೆಯಪ್ಪ ಕರೆಕರೆ ಬೇಡಪ್ಪ ಸ್ವರತ ಸುಖಮಯನಪ್ಪ ಅರವಿದೂರನಪ್ಪ ಮರೆವ ಶರಣರ ತಪ್ಪ ಸರ್ವಹೃದಯಗನಪ್ಪ ಪರಿಪೂರ್ಣಗುಣನಪ್ಪ ಅರಿಶಂಖುಧರನಪ್ಪ ಉರಿವ ರವಿಯಲ್ಲಿಪ್ಪ ಸರ್ವಮುಕ್ತರಿಗಪ್ಪ ಬಿರಿವ ಖಳರೆದೆಯಪ್ಪ ಮರುತ ಮಂದಿರನಪ್ಪ ಪರಿಮರ ಹೌದಪ್ಪ ಪೊರೆದೆ ಮಾಧವನಪ್ಪ ವರಲೀಲಾ ಮಯನಪ್ಪ ಪರಮ ಅದ್ಭುತನಪ್ಪ ಪರಮಾತ್ಮಹೌದಪ್ಪ ಕರಣ ಚೋದಿಪನಪ್ಪ ಕರಣಕ್ಕೆಸಿಗನಪ್ಪ ದುರಿತ ಪಾವಕನಪ್ಪ ಪರಮ ಪಾವನನಪ್ಪ ಹರನ ಅಪ್ಪನಿಗಪ್ಪ ಪರಮೋಚ್ಚಹೌದಪ್ಪ 4 ಬಾದರಾಯಣ ಪೂರ್ಣ ಭೋಧ ತೀರ್ಥರ ದೈವ ಮೋದ ಚಿನ್ಮಯಗಾತ್ರ ವೇದ ವಿಭಜಿಸಿ ನಿಂದ ಖೇದವಿದ್ಯೆಯ ಕೊಂದ ವಾದಿವಾರಿಣಿ ಸಿಂಹ ವಾದಿರಾಜರ ಹೃದಯ ಮೋದ ಹಯಮುಖ ಶುದ್ಧ ವೇದರಾಶಿಯತಂದ ವೇಧಗರುಹಿದ ಕರುಣಿ ಖೇದ ನೀಡುತಲಿದ್ದ ಆದಿದೈತ್ಯರ ಕೊಂದು ಮೇದಿನಿಯನು ಎಯ್ದೆ ಶ್ರೀಧರ ನರಸಿಂಹ ಗೋಧರಮಹಿದಾಸ ಕಾದುಕೊ ಶ್ರೀ ವಿಷ್ಣು ಭೇದ ವಿದ್ಯೆಯಮನಕೆ ಭೋಧಿಸು ವರ ಕಪಿಲ ಸಾಧು ಋಷಭದತ್ತ ಯಾದವ ಕುಲರನ್ನ ಕಾಯ್ದೆ ಗೋಪಿಯ ರನ್ನ ಸೀಳ್ದೆ ಕೌರವರನ್ನ ಪೇಳ್ದೆ ಪಾರ್ಥಗೆ ಗೀತೆ ಶುದ್ಧ ಜಯಮುನಿಹೃಸ್ಥ ಮಧ್ವ ಇಂದಿರೆನಾಥ ಮುದ್ದು ಕೃಷ್ಣವಿಠಲ ಬಿದ್ದೆ ಪಾದದಿ ಶರಣು 5
--------------
ಕೃಷ್ಣವಿಠಲದಾಸರು
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು
(ಅನಂತೇಶ್ವರ ದೇವರನ್ನು ನೆನೆದು)ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇಲೋಕೋತ್ತಮಾನಂತೇಶ್ವರ ದೇವಾಲಯದಿ ಪ.ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆಝಡಿದು ಬರುತಿಹುದು ಭೋರ್ಗುಡಿಪ ತೆರೆಯಝಡಿವ ನಾದಕೆ ಒಡಂಬಡದೇಕಾಂತದಿ ಬಂದುಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳುಭಾರವನು ಪೊತ್ತು ಬಹಳಾಲಸ್ಯವೋಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ-ಬೇಡಿದೆನು ಎಂಬ ನಾಚಿಕೆಯ ಮನವೋಖೋಡಿನೃಪತಿಯರ ಹೋಗಾಡಿಸುತ ಕಾಡಿನೊಳುಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯಕಾಲದೊಳು ಗೈವಂತಮೇಲುಕಾರಿಯದಕಾಲೋಚಿತವ ಮನದೊಳಾಲೋಚಿಸುತ್ತಹಿಯಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4ಯುಗಯುಗದೊಳವತಿರಿಸ ಜಗದ ಭಾರವನಿಳುಹಿಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ-ಗಲಭೆಯುಂಟೆಂದಲ್ಲಿ ನಿ¯ದೆ ಈಗಲಲನೆಯಳ ಕೂಡೆ ಸರಸಗಳನಾಡಲು ತನಗೆಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6ಸೇರಿರ್ದ ಶರಣ ಸಂಸಾರಿ ನೀನೆಂದುಶ್ರುತಿಸಾರುವುದು ಕರುಣವನು ತೋರೆನ್ನ ದೊರೆಯೇದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ-ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏಕೆ ವೃಂದಾವನವು ಸಾಕು ಗೋಕುಲವಾಸ |ಏಕೆ ಬಂದೆಯೊ ಉದ್ಧವಾ? ಪಸಾಕು ಸ್ನೇಹದ ಮಾತನೇಕ ಮಹಿಮನು ತಾನು |ಆ ಕುಬುಜೆಯನು ಕೂಡಿದ-ಉದ್ಧವಾ ಅ.ಪಬಿಲ್ಲು ಬಿಳಿಯಯ್ಯನ ಬೇಟ ನಗೆನುಡಿ ನೋಟ |ಇಲ್ಲದಂತಾಯಿತಲ್ಲ ||ಎಲ್ಲರಿಂದಗಲಿಸಿದ ಕ್ರೂರ ಅಕ್ರೂರನವ |ವಲ್ಲಭನ ಒಯ್ದನಲ್ಲ ||ಮಲ್ಲರನು ಮರ್ದಿಸುತ ಮಾವ ಕಂಸನ ಕೊಂದು |ಘಲ್ಲನಾಭನ ತಂದು ತೋರೈ-ಉದ್ಧವಾ 1ಅನುದಿನೊಳಾದರಿಸಿ ಅಧರಾಮೃತವನಿತ್ತು |ಇನಿದಾದ ಮಾತುಗಳಲಿ ||ಮನದ ಮರ್ಮವ ತಿಳಿದ ಮನಸಿಜಪಿತನ ಸಖವು |ಮನಸಿಜನ ಕೇಳಿಯಲ್ಲಿ ||ಕನಸಿನಲಿ ಕಂಡ ತೆರನಾಯಿತಾತನ ಕಾಂಬು |ವನಕ ಬದುಕುವ ಭರವಸೆ ಹೇಳು-ಉದ್ಧವಾ 2ಕರುಣನಿಧಿಯೆಂಬುವರು ಕಪಟನಾಟಕದರಸು |ಸರಸ ವಿರಸವ ಮಾಡಿದ ||ಸ್ಮರಿಸಿದವರನು ಕಾಯ್ವ ಬಿರುದುಳ್ಳ ಸಿರಿರಮಣ |ಮರೆದು ಮಧುರೆಯ ಸೇರಿದ ||ಪರಮಭಕ್ತರ ಪ್ರಿಯ ಪುರಂದರವಿಠಲನ |ನೆರೆಗೂಡಿಸೈ ಕೋವಿದ-ಉದ್ಧವಾ 3
--------------
ಪುರಂದರದಾಸರು
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ