ಒಟ್ಟು 134 ಕಡೆಗಳಲ್ಲಿ , 47 ದಾಸರು , 123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಭೂಮಿದುರ್ಗ ಮತ್ತೇಭೇಂದ್ರಿಗಮನೆ ಸ್ವ ರ್ಣಾಭ ಗಾತ್ರೆ ಸುಚರಿತ್ರೆ | ಸುಚರಿತ್ರೆ ಶ್ರೀ ಪದ್ಮ ನಾಭನ್ನ ಜಾಯೆ ವರವೀಯೆ 1 232 ದರಹಸಿತವದನೆ ಸುಂದರಿ ಕಮಲ ಸದನೆ ನಿ ವಿಧಿ ವಿಧಿ ಮಾತೆ ಲೋಕಸುಂ ದರಿಯೆ ನೀ ನೋಡೆ ದಯಮಾಡೆ 2 233 ತ್ರಿಗುಣಾಭಿಮಾನಿ ಎನ್ನವ ಗುಣದ ರಾಶಿಗಳ ವರವೀಯೆ ನಿನ್ನ ಪಾದ ಯುಗಳಕ್ಕೆ ನಮಿಪೆ ಜಗದಂಬೆ 3 234 ಪ್ರಳಯ ಕಾಲದಲಿ ಪತಿ ಮಲಗ ಬೇಕೆನುತ ವಟ ದೆಲೆಯಾಗಿ ಹರಿಯ ಒಲಿಸಿದಿ | ಒಲಿಸಿದಿ ಜಗದ ಮಂ ಗಳ ದೇವಿ ನಮಗೆ ದಯವಾಗೆ 4 235 ತಂತು ಪಟದಂತೆ ಜಗದಂತರ್ಬಹಿರದಲ್ಲಿ ಕಾಂತಮೊಡಗೂಡಿ ನೆಲೆಸಿಪ್ಪೆ | ನೆಲೆಸಿಪ್ಪೆ ನೀನೆ ನ್ನಂತರಂಗದಲಿ ನೆಲೆಗೊಳ್ಳೆ 5 236 ಈಶಕೋಟಿ ಪ್ರವಿಷ್ಟೆ ಈಶ ಭಿನ್ನಳೆ ಸರ್ವ ದೋಷವರ್ಜಿತಳೆ ವರದೇಶ | ವರದೇಶ ಪತಿದೊಡನೆ ವಾಸವಾಗೆನ್ನ ಮನದಲ್ಲಿ 6 237 ಆನಂದಮಯಿ ಹರಿಗೆ ನಾನಾಭರಣವಾದೆ ಪಾನೀಯವಾದೆ ಪಟವಾದೆ | ಪಟವಾದೆ ಪಂಕಜ ಪಾಣಿ ನೀನೆಮಗೆ ದಯವಾಗೆ 7 238ಮಹದಾದಿ ತತ್ವಗಳ ವಹಿಸಿ ನಿನ್ನುದರದೊಳು ದ್ರುಹಿಣಾಂಡ ಪಡೆದೆ ಪತಿಯಿಂದ | ಪತಿಯಿಂದ ಶ್ರೀಲಕ್ಷ್ಮಿ ಮಹಮಹಿಮಳೆ ಎಮಗೆ ದಯವಾಗೆ 8 238 ಆವ ಬ್ರಹ್ಮಾದಿ ದೇವರೆಲ್ಲರು ತವ ಕೃ ಪಾವ ಲೋಕನದಿ ಕೃತಕೃತ್ಯ | ಕೃತಕೃತ್ಯರಾಗಿ ಹರಿ ದೇವಿ ನಾ ಬಯಸುವುದು ಅರಿದಲ್ಲ 9 240 ಪಕ್ಷೀಂದ್ರವಾಹನನ ವಕ್ಷಸ್ಥಳವಾಗಿ ಅಕ್ಷಯಜ್ಞಾನಿ ಸುಖಪೂರ್ಣೆ | ಸುಖಪೂರ್ಣೆ ಕಮಲದ ಳಾಕ್ಷಿ ನೋಡೆನ್ನ ದಯದಿಂದ 10 241 ಹಲವು ಮಾತ್ಯಾಕೆ ಶ್ರೀಲಲನೆ ಶ್ರೀಜಗನ್ನಾಥ ವಿ ಮನದಲ್ಲಿ ವಾಸವಾಗೆಲ್ಲ ಕಾಲದಲಿ ಅವಿಯೋಗಿ 11
--------------
ಜಗನ್ನಾಥದಾಸರು
(ಉ) ಕ್ಷೇತ್ರವರ್ಣನೆ (1) ಮೇಲುಕೋಟೆ ಹರಿಯೇ ದೈವಶಿಖಾಮಣಿ ಹರಿಯೇ ಸದ್ಭಕ್ತ ಬಂಧು ಹರಿಯೇ ಪೂಜ್ಯಂ ಹರಿಪೂಜೆಯೆ ಪಾಪಕ್ಷಯ ಹರಿಪೂಜೆಯೆ ಪರಮಪುಣ್ಯದಾಲಯಮದರಿಂ ಕಂದ ಹೃದಯದೊಳರ್ಚಿಸುವೆ ಪ ಪರಮಸುಗತಿಯನು ಬೇಡುವೆಸಂತತ- ಮರೆಯದೆ ಪಾಲಿಸು ವರಗಳನು ಅ.ಪ ಹರುಷದಿ ಪರಮನೆ ನೀನೆಂದು ಉರುತರ ಸೌಖ್ಯಗಳನು ಕೊಡುವ 1 ಮನ್ನಿಸಿಭಕ್ತರಪೊರೆಯುವಧೀರನೆ ಅನ್ಯರಕಾಣೆನುನಾನಿನ್ನು ನಿನ್ನನೆ ನಂಬಿದೆ ನರಹರಿಮೂರ್ತಿಯೆ ಇಂದೀ ಸಂಸೃತಿ ಜಾರಿಸುವ 2 ಲೋಕದ ವಾಸನೆ ಶಾಸ್ತ್ರದವಾಸನೆ- ಸಾಕೈದೇಹದ ವಾಸನೆಯ ಈ ಕಡುವಾಸನೆ ಹೆಚ್ಚಿಸುತ 3 ಮಂಗಳ ಯದುಗಿರಿವಾಸ ಪರಮಗುರು ರಂಗನೆ ನಿಜಕೃಪೆದೋರುತಲಿ ಮಂಗಳಶಾಸನ ಗೈವುತ ಸಜ್ಜನ ಸಂಗದೊಳೆನ್ನನು ಸೇರಿಸುವ 4
--------------
ರಂಗದಾಸರು
(ಉ) ರುದ್ರದೇವರು ನಮೋ ಪಾರ್ವತೀಪತಿ ನುತಜನಪರ ನಮೋ ವಿರೂಪಾಕ್ಷ ಪ ರಮಾರಮಣನಲ್ಲಮಲ ಭಕುತಿ ಕೊಡು ನಮೋ ವಿಶಾಲಾಕ್ಷ ಅ.ಪ ನೀಲಕಂಠ ತ್ರಿಶೂಲ ಡಮರು ಹಸ್ತಾಲಂಕೃತ ರಕ್ಷಫಾಲನೇತ್ರ ಕಪಾಲ ರುಂಡಮಣಿ ಮಾಲಾಧೃತ ವಕ್ಷಶೀಲರಮ್ಯ ವಿಶಾಲ ಸುಗುಣ ಸಲ್ಲೀಲ ಸುರಾಧ್ಯಕ್ಷಶ್ರೀ ಲಕುಮೀಶನ ಓಲೈಸುವ ಭಕ್ತಾವಳಿಗಳ ಪಕ್ಷ 1 ವಾಸವನುತ ಹರಿದಾಸ ಈಶ ಕೈಲಾಸವಾಸ ದೇವದಾಶರಥಿಯ ಔಪಾಸಕ ಸುಜನರ ಪೋಷಿಪ ಪ್ರಭಾವಭಾಸಿಸುತಿಹುದಶೇಷ ಜೀವರಿಗೆ ಈಶನೆಂಬ ಭಾವಶ್ರೀಶನಲ್ಲಿ ಕೀಲಿಸು ಮನವ ಗಿರಿಜೇಶ ಮಹಾದೇವ 2 ಮೃತ್ಯುಂಜಯ ನಿನ್ನುತ್ತಮ ಪದಯುಗ ಭೃತ್ಯನೊ ಸರ್ವತ್ರಹತ್ತಿರ ಕರೆದು ಅಪತ್ಯನಂದದಿ ಪೊರೆಯುತ್ತಿರೊ ತ್ರಿನೇತ್ರತೆತ್ತಿಗನಂತೆÉ ಕಾಯುತ್ತಿಹ ಬಾಣನ ಸತ್ಯದಿ ಸುಚರಿತ್ರಕರ್ತೃ ಉಡುಪಿ ಸರ್ವೋತ್ತಮ ಕೃಷ್ಣನ ಪೌತೃ ಕೃಪಾಪಾತ್ರ3
--------------
ವ್ಯಾಸರಾಯರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಷಶಾಯಿಯ ವರ್ಣನೆ) ಸ್ವರಮಣನೆನುತಲಿ ಮೊರೆಯಲು ಶ್ರುತಿಗಳು ಹೊರಳುವದೇನುಚಿತ ಅರೆ ನಿಮಿಷವು ನಿನ್ನುರವ ಬಿಟ್ಟಗಲದೆ ಇರುವಳು ರಮೆ ನಿರತ ಪ. ಕವಿಗಳು ಗುಣರಸ ಸವಿದು ಸುಖಭರದಿ ದಿವಿಜರ ಲೆಕ್ಕಿಸರೂ ಪವಿಧರ ಪಾಲಕ ರವಿ ಉದಿಸಿದ ಬಳಿ ಕವಿಕುಲ ಮಲಗುವರೆ 1 ಇಂದಿರೆ ನಿನ್ನನು ಹೊಂದುತ ಪರಮಾ- ನಂದದಿ ಮುಳುಗಿರಲು ಎಂದಿಗು ಮಲಗದ ಸುಂದರ ವಿಗ್ರಹ ಇಂದು ನೀ ಮಲಗುವರೆ 2 ದೋಷವಿದೂರ ಅಶೇಷ ಸುರಾರ್ಚಿತ ದಾಸ ಜನಾನಂದ ಶೇಷಗಿರಿ ವಿಶೇಷಾಸನ ಯಿ- ನ್ನೇಸು ಶಯನ ಚಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
[ಶ್ರೀ ಪ್ರಾಣದೇವರ ಅನುಗ್ರಹವಿಲ್ಲದೆ ಶ್ರೀ ಹರಿಯು ಎಂದಿಗೂ ಒಲಿಯನೆಂಬ ಪ್ರಮೇಯ. ಪೂರ್ವಜನ್ಮದಲ್ಲಿ ವಾಲಿ ಹನುಮಂತನ ಅನುಗ್ರಹವಿಲ್ಲದ ಕಾರಣ ರಾಮನು ನಿಗ್ರಹಿಸಿದ. ಅರ್ಜುನನಾದಾಗ್ಗೆ ಭೀಮನು ಅಗ್ರಜನಾಗಿ ದಯ ಮಾಡಿದುದಕ್ಕೆ ಕೃಷ್ಣನು ಸಖನಾದ. ಮೂರನೆ ಜನ್ಮ ಜಯತೀರ್ಥರಾದಾಗ್ಗೆ ಜ್ಞಾನವಿತ್ತು ಕುಮತಗಳ ನಿರಾಕರಿಸಿದಿ ಪ್ರಾಣನ ಕೃಪೆಯಿಂದ ಎಲ್ಲ ಸೌಖ್ಯ ಗಂಟು. ಈಗಾದರು ಹಿಂದಿನಂತೆ ಪೊರೆಯೊ ಎಂದು ಪ್ರಾರ್ಥನೆ.] ಧ್ರುವತಾಳ ಹಿತಮಾಳ್ಪ ಜನಕನಾಗಿ ರಕ್ಷಸು ಎಂದೆಂಬೆನೆಪಿತೃ ಸಮಾನ ಜೇಷ್ಠನೆಂದೆಂಬ ವಿಧದಿ ಪಿತನೆ ಸರಿ ಎನಗೆ ಉಪಕಾರವ್ಯಾತಕಿನ್ನುಮಾತರಿಶ್ವನೆ ದೂರ ನೋಳ್ಪದೇನೊಭಾತೃನಾಗಿ ಎನ್ನ ಪಾಲಿಸು ಎಂದೆಂಬೆನೆನೋತ ಪುಣ್ಯಗಳಿಂದ ಹರಿಯು ತಾನೆ ಸ್ವತ ಏವ ಮಾಡಿದ ಈಗ ನುಡಿವದೇನೊಮಾತೃ ನೀನೆ ದೇಹ ಪೊರೆಯುವಲ್ಲಿಅತುಳ ಗುರುವಾಗಿ ಬೋಧಿಸು ಎಂದೆಂಬೆನೆಆತ್ಮ ಗುರುವಿಗೆ ನಿಜ ಗುರುವೆನಿಸಿದೆ ನಿತ್ಯನೂತನವಾಗಿ ಯಿದನು ಬೇಡಿಕೊಂಬುವದೇನುವೀತಿ ಹೋತ್ರನೆ ದೈತ್ಯ ಸಂತತಿಗೆಪ್ರತ್ಯಂತರ ಜನುಮದ್ವಯದಿ ನಿಜ ಮುಖದಿಂದಲೆಮತಿಯು ನೀಡಿದ ಮುಖ್ಯ ಗುರು ನೀನೆ ಪ್ರತಿಯಿಲ್ಲದೆ ಇದ್ದ ಇಷ್ಟನೇನೊ ಎನಗೆಗತಿ ಪ್ರದಾತನು ನೀನೆ ಆವಕಾಲಆಪ್ತನಾಗಿ ನೀನು ಸಲಹಬೇಕೆಂಬೆನೆ ಗತ ಜನ್ಮಗಳಲಿ ನೀನು ಮಾಡಿದುಪ-ಕೃತಿಗಳೆಣಿಸೆ ಈಗ ನಿನಗಿಂದಧಿಕವಾದಆಪ್ತನಾವನು ಎನಗೆ ಅರಸಿ ನೋಡಾಮತಿಯು ರಹಿತವಾದ ಜನುಮಗಳು ಬರಲಿಅತಿ ಹಿತ ನೀನೆ ಎನಗೆ ಇಹ ಪರದಿಅತಿಶಯ ಕೃಪಾನಿಧೆ ಗುರು ವಿಜಯ ವಿಠ್ಠಲರೇಯಅತಿ ಪೀಯನಾಗುವನು ನಿನ್ನ ದಯದಿ 1 ಮಟ್ಟತಾಳ ಬಾಂಧವನು ನೀನೆ ಎರಡು ಬಗೆಯಿಂದ ತಂದೆ ನಿನ್ನುಪಕಾರ ಅನಂತ ಜನುಮದಲಿಮಂದನಾದವ ನನು ತೀರಿಸಬಲ್ಲೆನೆಬಂಧು ಅನಿಮಿತ್ಯ ಗುರು ವಿಜಯ ವಿಠ್ಠಲ ನಿ-ನ್ನಿಂದಲಿ ಎನಗೆ ಅನುಗ್ರಹ ಮಾಡುವನೊ 2 ತ್ರಿವಿಡಿತಾಳ ನಿನ್ನ ಕರುಣಪೇಕ್ಷ ಮಾಡದಲೆ ಒಂದುಜನುಮ ಹರಿ ಕರುಣವಿಲ್ಲದಲೆ ಕಳದೇಅನಂತರದಿ ಎನ್ನ ಪುಣ್ಯ ಸಾಸಿರದಿಂದಅನುಜನಾದೆ ನಿನ್ನ ಕೃಪೆಯಿಂದಲಿಮನುಜ ಕೃತಿಯಾದರು ಪ್ರತಿಮದಲ್ಲಿ ಘನ್ನ ಚೇಷ್ಟಾದಿಗಳು ತೋರಿದಂತೆ ಎನ್ನ ನಾಮಕನಾಗಿ ಎನ್ನ ರೂಪದಿಂದಎನ್ನ ಕೃತ್ಯಗಳೆಲ್ಲ ನೀನೆ ಮಾಡಿಉನ್ನತವಾದ ಕೀರ್ತಿ ತಂದು ಇತ್ತು ಎನ್ನಜನ್ನರ ಮಧ್ಯದಲಿ ಶ್ರೇಷ್ಠನೆನಸಿಪನ್ನಗ ತಲ್ಪನ್ನ ಕರವಶನೆನನಿಸಿದಿನಿನ್ನ ಕರುಣಕೆ ಎಣೆ ಆವದಯ್ಯಾಎನ್ನ ಸ್ವಭಾವದಿಂದ ಹರಿ ತಾನು ಇನಿತಾದ ಮನ್ನಣೆ ಮಾಡುವನೆ ಎಂದಿಗನ್ನನಿನ್ನುಪಕಾರವೆಂಬ ವನ್ನಧಿಯೊಳಗೆ ನಿರುತಮುಣಗಿ ಇಪ್ಪೆನಯ್ಯಾ ತೆರವಿಲ್ಲದೆ ಚನ್ನ ಪ್ರಸನ್ನ ಗುರು ವಿಜಯ ವಿಠ್ಠಲರೇಯನಿನ್ನಿಂದಲೆ ಎನಗೆ ಬಂಧುನಾದಾ 3 ಅಟ್ಟತಾಳ ದುರುಳ ಮತಗಳೆಂಬೊ ಮಾಯಿ ಗೋಮಾಯಿಗಳುಶಿರವೆತ್ತಿ ನೋಡದೆ ಪಲಾಯಧ್ವರಾದರು ಈತೆರವಾದ ಮಹತ್ಮಿ ನಿನ್ನದು ನಿನ್ನದುಮರಳೆ ಮಾತುಗಳನ್ನು ತೋರದಿದ್ದರನಿಗೆ (ರೆನಗೆ)ಕರುಣವಲ್ಲದೆ ಅನ್ಯಾಲೋಚನೆ ಇದಕ್ಕಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಪೊರೆವನು ನಿನ್ನಯ ಬಲದಿಂದಲಾವಾಗ 4 ಆದಿತಾಳ ಮೂರ್ತಿ ಗುರು ವಿಜಯ ವಿಠ್ಠಲರೇಯನಿನ್ನಿಂದ ಮಾಡಿಸುವ ವಸುಧಿಯ ವ್ಯಾಪಾರ 5 ಜತೆ ನಿಖಿಳ ಸೌಖ್ಯವೆ ಉಂಟುಉನ್ನತ ಮಹಿಮ ಗುರು ವಿಜಯ ವಿಠ್ಠಲ ಒಲಿವ || [ನಳ ನಾಮ ಸಂ|| ಚೈತ್ರ ಬ|| 12 ಆದಿತ್ಯವಾರ]
--------------
ಗುರುವಿಜಯವಿಠ್ಠಲರು
2. ಶ್ರೀ ವೆಂಕಟೇಶ ಸ್ತೋತ್ರ 6 ಶರಣಾಗತರ ಕಲ್ಪತರುವೆ ವೆಂಕಟ ಧರಾ ಧರನಾಥ ನಿನ್ನ ಚರಣಾಬ್ಜ | ಚರಣಾಬ್ಜಯುಗಳ ಸಂ ದರುಶನವ ಈಯೊ ಎಂದೆಂದು 1 7 ಸ್ವಾಮಿ ತೀರ್ಥ ನಿವಾಸ ಸು ಭಯಹಾರಿ ಸುರರ ಸಾರ್ವ ಭೌಮ ನೀ ಸಲಹೆಮ್ಮೆ 2 8ವೆಂಕಟಾಚಲನಿಲಯ ಪಂಕಜೋದ್ಭವನಯ್ಯ ಕಿಂಕರನೆನಿಸೊ ಶುಭಕಾಯ 3 9 ಸತ್ಯಸಂಕಲ್ಪ ಜಗದತ್ಯಂತ ಭಿನ್ನಸ ರ್ವೋತ್ತಮ ಪುರಾಣ ಪುರುಷೇಶ | ಪುರುಷೇಶ ಸತತತ್ವ ದ್ಭೈತ್ಯನ್ನ ಕಾಯೊ ಕರುಣಾಳೊ 4 10 ದೇವಶರ್ಮನ ತುತಿಗೆ ನೀನೊಲಿದು ಪಾಲಿಸಿದೆ ದೇವಕೀಕಂದ ದಯದಿಂದ | ದಯದಿಂದ ಒಲಿದೆನ್ನ ತಾವಕರೊಳಿಟ್ಟು ಸಲಹಯ್ಯ 5 11 ಕೃತಿಪತಿಯೆ ನಿನ್ನ ಸಂಸ್ಮøತಿಯೊಂದಿರಲಿ ಜನ್ಮ ಮೃತಿ ನರಕ ಭಯವು ಬರಲಂಜೆ | ಬರಲಂಜೆ ಎನಗೆಕೃಸಂ ತತ ನಿನ್ನ ಸ್ಮರಣೆ ಕರುಣೀಸೊ 6 12ಶುಚಿಸದ್ಮನೆ ಮನೋವಚನಾತ್ಮಕೃತ ಕರ್ಮ ನಿಚಯ ನಿನಗೀವೆ ಸುಚರಿತ್ರ | ಸುಚರಿತ್ರ ಸುಗುಣಗಳ ರಚನೆ ಸುಖವೀಯೊ ರುಚಿರಾಗ 7 13ಹೃದಯದಲಿ ತವರೂಪ ವದನದಲಿ ತವನಾಮ ಉದರದಲಿ ನೈವೇದ್ಯ ಶಿರದಲ್ಲಿ | ಶಿರದಲ್ಲಿ ನಿರ್ಮಾಲ್ಯ ಪದಜಲಗಳಿರಲು ಭಯವುಂಟೆ 8 14ಸತತ ಸ್ಮರಿಸುತ ನಿನ್ನ ನುತಿಸಿ ಬೇಡಿಕೊಳುವೆ ಹಿತದಿಂದ ನಿನ್ನ ವಿಜ್ಞಾನ | ವಿಜ್ಞಾನ ನಿಜ ಭಾಗ ವತರ ಸಂಗವನ್ನೇ ಕರುಣೀಸೊ 9 15ಪ್ರಕೃತಿ ಗುಣಗಳ ಕಾರ್ಯ ಸುಖ ದುಃಖ ಮೂಲ ಜಡ ಪತಿ ನಿನ್ನ ಭಕುತ ನಾನಯ್ಯ ಎಂದೆಂದು 10 16ಪುಣ್ಯಪಾಪಾದಿಗಳು ನಿನ್ನಾಧೀನದೊಳಿರಲು ಎನ್ನದೆಂದರುಹಿ ದಣಿಸುವಿ | ದಣಿಸುವುದು ಧರ್ಮವೇ ನಿನ್ನರಿವ ಜ್ಞಾನ ಕರುಣೀಸೊ 11 17ಝಷಕೇತು ಜನಕ ದುರ್ವಿಷಯಕೊಳಗಾಗಿ ಸಾ ಹಸ ಪಡುವ ಚಿತ್ತ ಪ್ರತಿದಿನ | ಪ್ರತಿದಿನಗಳಲ್ಲಿ ನಿನ್ನ ವಶಮಾಡಿಕೊಳ್ಳೊ ವನಜಾಕ್ಷ 12 18ಇನಿತಿದ್ದ ಬಳಿಕ ಯೋಚನೆ ಯಾಕೆ ಗರುಡವಾ ಹನನೆ ಮಹಲಕ್ಷ್ಮಿ ನರಸಿಂಹ/ನರಸಿಂಹ ಬಿನ್ನೈಪೆ ಘನತೆ ನಿನಗಲ್ಲ ಕರುಣಾಳು 13 19ಸುಲಭರಿನ್ನುಂಟೆ ನಿನ್ನುಳಿದು ಲೋಕತ್ರಯದಿ ಬಲವಂತರುಂಟೆ ಸುರರೊಳು/ಸುರರೊಳು ನೀನು ಬೆಂ ಬಲವಾಗಿ ಇರಲು ಭಯವುಂಟೆ 14 20ಹಯವದನ ಸೃಷ್ಟಿ ಸ್ಥಿತಿಲಯ ಕಾರಣನುನೀನೆ ದಯವಾಗಲೆಮಗೆ ದುರಿತೌಘ / ದುರಿತೌಘರ್ಕಳು ಬಟ್ಟ ಬಯಲಾಗುತಿಹವೊ ಸುಕೃತಿಯಿಂದ 15 21ಕಲುಷವರ್ಜಿತನೆ ಮಂಗಳ ಚರಿತ ಭಕ್ತವ ತ್ಸಲ ಭಾಗ್ಯವ ಪುಷ ಬಹುರೂಪಿ /ಬಹುರೂಪಿ ಎನಗೆಚಂ ಚಲ ಬಿಡಿಸಿ ನೀ ಕರುಣೀಸೊ 16 22ಫಾಲಾಕ್ಷಪ್ರಿಯ ನಿನ್ನ ಲೀಲೆಗಳ ಮರೆಯದಲೆ ಕಾಲಕಾಲದಲಿ ಸ್ಮರಿಸುವ/ ಸ್ಮರಿಸಿ ಹಿಗ್ಗುವ ಭಾಗ್ಯ ಪಾಲಿಸೊ ಎನಗೆ ಪರಮಾತ್ಮ 17 23ಚತುರವಿಧ ಪುರುಷಾರ್ಥ ಚತುರಾತ್ಮ ನೀನಿರಲು ಇತರ ಪುರುಷಾರ್ಥ ನಾನೊಲ್ಲೆ | ನಾನೊಲ್ಲೆ ತ್ವತ್ಪಾದ ರತಿ ಭಾಗ್ಯ ನೀನೆ ಕರುಣೀಸೊ 18 24 ಜಯ ಮತ್ಸ್ಯ ಕೂರ್ಮ ವರಹ ನರಸಿಂಹ ಭೃಗುರಾಮರಘುರಾಮ ಜಯ ಬೌದ್ಧ ಕಲಿಹರ್ತಾ 19 25 ಜಯ ವಿಶ್ವತೈಜಸನೆ ಜಯ ಪ್ರಾಜ್ಞ ತುರ್ಯಾತ್ಮ ಜಯ ಅಂತರಾತ್ಮ ಪರಮಾತ್ಮ | ಪರಮಾತ್ಮ ಜ್ಞಾನಾತ್ಮ ಅನಿರುದ್ಧ ಪ್ರದ್ಯುಮ್ನ 20 26 ಜಯ ಸಂಕರುಷಣನೆ ಜಯ ವಾಸುದೇವನೆಜಯ ಜಯತು ಲಕ್ಷ್ಮೀನಾರಾಯಣಾ |ನಾರಾಯಣಾನಂತ ಜಯತು ಗೋವಿಂದಾಚ್ಯುತ ಶ್ರೀ ಕೃಷ್ಣ 21 27ಜಯ ಪೂರ್ಣ ಜ್ಞಾವಾತ್ಮ ಜಯ ಪೂರ್ಣೈಶ್ವರ್ಯ ಜಯ ಪ್ರಭಾ ಪೂರ್ಣ ತೇಜಾತ್ಮ | ತೇಜಾತ್ಮ ನಂದಾತ್ಮ ಜಯತು ಶಕ್ತ್ಯಾತ್ಮ ಕೃದ್ಧೋಲ್ಕ 22 28ಜಯ ಜಯತು ಮಹೋಲ್ಕ ಜಯತು ವೀರೋಲ್ಕ ಜಯ ಜಯತು ದ್ಯುಲ್ಕ ಸಹಸ್ರೊಲ್ಕ | ಸಹಸ್ರೊಲ್ಕ ಜಯ ಜಯ ಜಯತು ಜಗನ್ನಾಥ ವಿಠಲಾರ್ಯ 23 29 ಶ್ರೀನಿವಾಸನ ಪೋಲ್ವ ದೀನವತ್ಸಲರುಂಟೆ ದಾನಿಗಳುಂಟೆ ಜಗದೊಳು |ಜಗದೊಳು ನೀನೆ ಗತಿಯೆಂದನರರಿಗೆ ಆನಂದವೀವೆ ಅನುಗಾಲ 24 30ಒಪ್ಪಿಡಿ ಅವಲಕ್ಕಿಗೊಪ್ಪಿಕೊಂಡು ಮುಕುಂದ ವಿಪ್ರನಿಗೆ ಕೊಟ್ಟ ಸೌಭಾಗ್ಯ | ಸೌಭಾಗ್ಯ ಕೊಟ್ಟ ನ ಮ್ಮಪ್ಪಗಿಂತಧಿಕ ದೊರೆಯುಂಟೆ 25 31ಏನು ಕರುಣಾ ನಿಧಿಯೊ ಶ್ರೀನಿತಂಬಿನಿರಮಣ ತಾನುಮ್ಮನಗಲಿ ಸೈರಿಸ | ಸೈರಿಸದ ಕರುಣಿಯ ನಾನೆಂತು ತುತಿಸಿ ಹಿಗ್ಗಲಿ 26 32ಶ್ರೀನಿಧೆ ನಿನ್ನವರ ನಾನಾಪರಾಧಗಳ ನೀನೆಣಿಸದವರ ಸಲಹುವಿ | ಸಲಹುವಿ ಸರ್ವಜ್ಞ ಏನೆಂಬೆ ನಿನ್ನ ಕರುಣಕ್ಕೆ 27 33ಎನ್ನ ಪೋಲುವ ಭಕ್ತರನ್ನಂತ ನಿನಗಿಹರು ನಿನ್ನಂಥ ಸ್ವಾಮಿ ಎನಗಿಲ್ಲ | ಎನಗಿಲ್ಲವದರಿಂದ ಬಿನ್ನೈಪೆನಿನ್ನು ಸಲಹೆಂದು 28 34ಅಚ್ಯುತನೆ ನಿನ್ನಂಥ ಹುಚ್ಚು ದೊರೆಯನು ಕಾಣೆ ಕಚ್ಚಿ ಬಯದೊಡ್ಡೆ ಭಕುತರ | ಭಕುತರಪರಾಧಗಳ ತುಚ್ಛಗೈದವರ ಸಲಹೀದೆ 29 35ಎನ್ನ ಬಂಧುಗಳೆಲ್ಲ ನಿನ್ನ ದಾಸರು ಸ್ವಾಮಿ ಮನ್ನಿಸಬೇಕು ಮಹರಾಯ | ಮಹರಾಯ ನೀನಲ್ಲ ದನ್ಯರು ಸಾಕಲರಿಯರು 30 36 ತಂದೆ ತಾಯಿಯು ಭ್ರಾತ ಸಖ ಗುರು ಪುತ್ರ ಎಂದೆಂದು ನೀನೆ ಗತಿ ಗೋತ್ರ | ಗತಿಗೋತ್ರ ಇಹಪರಕೆ ಇಂದಿರಾರಾಧ್ಯ ಸಲಹೆಮ್ಮ 31 37 ಪತಿತ ನಾನಾದರೂ ಪತಿತ ಪಾವನ ನೀನು ರತಿನಾಥ ನಗಪಾಣಿ | ನಗಪಾಣಿ ನೀನಿರಲು ಇತರ ಚಿಂತ್ಯಾಕೊ ಎನಗಿನ್ನು 32 38 ನಡೆ ನುಡಿಗಳಪರಾಧ ಒಡೆಯ ನೀನೆಣಿಸಿದರೆ ಬಡವ ನಾನೆಂತು ಬದುಕಲಿ | ಬದುಕಲಿ ಕರುಣಿಯೆ ಕಡೆ ಬೀಳ್ವುದೆಂತೊ ಭವದಿಂದ 33 39ಏಸೇಸು ಜನ್ಮದಲಿ ದಾಸ ನಾ ನಿನಗಯ್ಯ ಈಶ ನೀನೆಂಬೊ ನುಡಿಸಿದ್ಧ | ನುಡಿಸಿದವಾಗಿರಲು ದಾಸೀನ ಮಾಡೋದುಚಿತಲ್ಲ 34 40ಆವ ಯೋನಿಯಲಿರಿಸು ಆವ ಲೋಕದಲಿರಿಸು ಆವಾಗ್ಯೆ ನಿನ್ನ ನೆನೆವಂತೆ | ನೆನೆವಂತೆ ಕರುಣಿಸೊ ದೇವಕೀಕಂದ ದಯದಿಂದ 35 41ಶಿಷ್ಟನೆಂದೆನಿಸೆನ್ನ ಭ್ರಷ್ಟನೆಂದೆನಿಸು ಸ ಜನರಿಂದ ನುಡಿಸಿದ್ದು
--------------
ಜಗನ್ನಾಥದಾಸರು
ಅನಘಸಂಪದನೆಂದು ಮನದೊಳಗೆ ನಲಿದಿಂತು ಜನಕನಿತ್ತನು ಎನ್ನ ನಿನಗಿಂದು ದಾನಕ್ಕೆ ಕೈನೀಡಿ ದಾನಮಂ ತಾಂ ಬೇಡಿ ದಾನಿಯಂ ಪಾತಾಳಕೀಡು ಮಾಡಿ ಮಾನಾಭಿಮಾನವಿಂತೇನೇನುಮಿಲ್ಲದೆಯೆ ದಾನವನ ಮನೆಗಾವನೇನ ಪೇಳ್ವೆ ತಿರುಕ ಹಾರುವನಿವಗೆ ಅರಸಿಯಾನಾದೆನೇ ಮರುಗಲ್ಕೆ ಫಲವೇನೊ ಅರಿಯೆನಿನ್ನು ಸಟೆನುಡಿಯಿನೆಲ್ಲರಂ ಮರುಳುಗೊಳಿಪ ಕುಟಿಲಗಾರನದೆಂತÀು ಸುಖವಪಡಿಪ ಚಟುಲಮತಿಕೇಳೆನ್ನಮನದಿಷ್ಟ ಸಲಿಪ ಸಟೆಯಲ್ಲವೆನ್ನೆರೆಯ ಶೇಷಗಿರಿಪ
--------------
ನಂಜನಗೂಡು ತಿರುಮಲಾಂಬಾ
ಅನಿಮಿಷ ರೂಪದಿಂದಾಗಮವನು ತಂದ ರಾಮಚಂದ್ರ ಘನಕೂರ್ಮರೂಪದಿಂ ಗಿರಿಯ ಬೆನ್ನೊಳಗಾಂತ ರಾಮಚಂದ್ರ ಕನಕಾಕ್ಷನನು ಕೊಂದ ಧರಿಣಿದೇವಿಯ ರಮಣ ರಾಮಚಂದ್ರ ಹಿರಣ್ಯಕನ ಕರುಳನು ಕೊರಳೊಳು ಧರಿಸಿದ ರಾಮಚಂದ್ರ ತರಳ ಪ್ರಹ್ಲಾದನ ಕರೆದಾದರಿಸಿದ ರಾಮಚಂದ್ರ ವಟುರೂಪದಿಂ ಬಂದು ವಸುಧೆಯ ಬೇಡಿದ ರಾಮಚಂದ್ರ ದಾನಕೊಟ್ಟವಗೆ ಪಾತಾಳ ಪಟ್ಟವ ಕಟ್ಟಿದ ರಾಮಚಂದ್ರ ಕ್ಷತ್ರಿಯರ ಕುಲಬೇರ ಕತ್ತರಿಸಿದ ದೇವ ರಾಮಚಂದ್ರ ಧರಿತ್ರಿಯ ಭಾರವ ಪರಿಹರಿಸಿದ ದೇವ ರಾಮಚಂದ್ರ ವಸುದೇವನಂದನನೆಂದೆನಿಸಿ ಮೆರೆದೆಯೋ ರಾಮಚಂದ್ರ ಮತ್ತೆಕಾಮಿನಿಯರ ಚಿತ್ತವ ಕಲಕಿದ ರಾಮಚಂದ್ರ ಉತ್ತಮಾಶ್ವವನೇರಿ ಕಲ್ಕಿಯೆನಿಸಿದ ರಾಮಚಂದ್ರ ಆದಿಮಧ್ಯಾಂತ ಸ್ವರೂಪ ಸುಂದರರೂಪ ರಾಮಚಂದ್ರ ವೇದವೇದ್ಯನೆ ನಿನ್ನ ಪಾದವೇ ಗತಿಯೆನಗೆ ರಾಮಚಂದ್ರ ರಘುಕುಲತಿಲಕನೆ ರಮ್ಯಚರಿತ್ರನೆ ರಾಮಚಂದ್ರ ಅಘಹರ ಪುರವೈರಿ ಸಂಸ್ತುತಿಪಾತ್ರನೆ ರಾಮಚಂದ್ರ ಮಾನಾಭಿಮಾನ ನಿನ್ನಾಧೀನಮೆಂಬೆನೈ ರಾಮಚಂದ್ರ ಏನೊಂದನರಿಯದ ಅಜ್ಞಾನಿ ನಾನಯ್ಯ ರಾಮಚಂದ್ರ ನೀನಲ್ಲದೆ ಮತ್ತನ್ಯರಾರಿಹರೈ ರಾಮಚಂದ್ರ ದೀನಪಾಲಕ ನಿನ್ನುಳಿದಾರ ನೆರೆಯೆ ರಾಮಚಂದ್ರ ವರಶೇಷಗಿರಿದೊರೆ ಮರೆಹೊಕ್ಕು ಬೇಡುವೆ ರಾಮಚಂದ್ರ ಕರುಣಾಳು ನೀನೆಂಬ ಬಿರುದುಳಿಸೆನ್ನುವೆ ರಾಮಚಂದ್ರ
--------------
ನಂಜನಗೂಡು ತಿರುಮಲಾಂಬಾ
ಅಪ್ರಾಕೃತ ಕಾಯಾ ಪ ಶ್ರೀಕರಾರ್ಚಿತಪಾದ ಲೋಕೇಶ ವಂದಿತ ಅ- ವ್ಯಾಕೃತಾಕಾಶದೊಡೆಯನೆ ವಾಸುಕೀಶಯನ ಸರ್ವೇಶ ನೀನೆ ಪ್ರಾಕೃತ ಸಜ್ಜಮಜ್ಜನ ಕಾರ್ಯಕೆ ಕಾರಣನಯ್ಯ ಏಕೋ ನಾರಾಯಣ ಅ.ಪ ಪ್ರಳಯಕಾಲದಿ ಜೀವರ ನಿಲಯಾ ಕಲ್ಪಿಸಿ ತತ್ತ ನಾಲ್ಕುವಿಧಗಳ ರೂಪಗಳನು ಧರಿಸಿ ಪ್ರಳಯದೊಳಿಂಬಿಟ್ಟು ಎಳೆಸಿದ ಕಟಾಕ್ಷವೀಕ್ಷಣದಿಂದಲಿ 1 ಅಳವು ಇಲ್ಲದ ಸೃಷ್ಟಿಯನೆಸಗಿದೇ ಸಾಧುಜೀವರು ತಮ್ಮ ಸಾಧನ ಪೊರೈಸಿ ಸ್ವದೇಹದೊಳು ಬಂದ ಮೋದದಿಂದಲಿ ನೋಡಿ ಬಾಧಿಪ ಲಿಂಗಭಂಗವೈದಿಹ ಪ್ರಾರಬ್ಧನಾಶನವಿಹ ವಿ- ವಿಧ ಸುಜೀವರ ಮೋದಪಡಿಸಿ ನಿ- ಉದರದೊಳಿಟ್ಟ್ಯಯ್ಯ ಸದಮಲಮೂರುತಿ ಅದುಭುತಮಹಿಮ ಶ್ರೀ ವಾಸುದೇವನೆ2 ಸಂಚಿತ ನೀಗಿ ಪ್ರಾರಬ್ಧ ಶೇಷ ಭೋಗ ಉಳ್ಳವರೆಲ್ಲ ಆಗದೆ ಪೂರ್ಣ ಸಾಧನೆ ನೀಗದೆ ಲಿಂಗಭಂಗ ಆಗ ಬಿಂಬನ್ನ ನೋಳ್ಪರ ನಾಗಶಯನ ನಿನ್ನಂಗದೊಳಿಂಬಿಟ್ಟೆ ಜಾಗುಮಾಡದೆ ನೀನಾಗಲೆ ಜೀವರ ಭೋಗವ ತರಲು ಭಾಗವಗೈಸಿ ಭೂಭಾಗದ ಸಾಧನ ಮಾಳ್ಪ ಜೀವಗಣ ಭಾಗವ ಕಾಯ್ದೆ ಸಂಕರುಷಣ ಮೂರುತೆ 3 ನಿತ್ಯಸಂಸಾರಿಗಳಿಗೆ ಇತ್ತೆ ನಿನ್ನುದರದೊಳು ಮುಕ್ತರೊಡೆಯ ದೇವ ಶಕ್ತನಹುದೋ ನೀ ಮೊತ್ತ ಮೊದಲು ನೀನಿತ್ತು ಪೊರೆದೆ ಬರಲಿತ್ತ ಕಾರಣ ಪ್ರ- ಸುತ್ತಿ ಸುತ್ತಿರುವೆ ಬಿತ್ತರಿಸಲೇನನಿರುದ್ಧಮೂರುತೇ 4 ಅಣುವಿಗೆ ಅಣುವಾಗಿ ಘನತೆ ಘನತಮನಾಗಿ ತೃಣಜೀವರಾದಿ ಬ್ರಹ್ಮಗಣರೆಲ್ಲರೊಳು ಗಣನೆ ಇಲ್ಲದ ಕಾರ್ಯ ಕ್ಷಣಬಿಡದಲೆ ನಡೆಸಿ ಎಣೆಯಿಲ್ಲದಿಹ ಸುಗುಣ ಸಾಂದ್ರನೆ ಪ್ರಣವದೊಳು ಪ್ರತಿಪಾದ್ಯನಾಗಿಹೆ ತ್ರಿಗುಣರಹಿತ ಮುಖ್ಯ ಪ್ರಾಣಾಂತರ್ಗತ ಪ್ರಣತಕಾಮದ ಪೂರ್ಣ ಸಂಪೂರ್ಣ5 ಮುಕ್ತಾಮುಕ್ರಾಶ್ರಯ ಭಕ್ತಪರಾಧೀನ ಶಕ್ತಾನೆ ಸರ್ವವೇದೋಕ್ತ ಮಹಿಮಾತೀತ ಉಕ್ತನಾಗಿಹೆ ಪುರುಷಸೂಕ್ತಾದೊಳಪ್ರಮೇಯ ಶಕ್ತಿಯನರಿಯರು ಅಜಭವಾದ್ಯರು ಶಕ್ತನೆ ಜೀವನ್ಮುಕ್ತರೌಘ ಸಕ್ತರಾಗಿ ನಿನ್ನ ಸ್ತೋತ್ರವ ಮಾಳ್ಪರು 6 ಶ್ರೀಶಾ ಸರ್ವೋತ್ತಮ ವಾಸ ವೈಕುಂಠಾಧೀಶ ವಾಸವಾದಿ ವಂದಿತ ಭಾಸುರಾಂಗನೆ ವಿಶ್ವಾಸ ನಿನ್ನೊಳಿಟ್ಟ ದಾಸ ಜನರ ಕಾಯ್ವ ಈಶಾವ್ಯಾಸಮಿದಂಸರ್ವಂ ಎಂದೆಂದು ಎಂದು ಉಸುರುವ ವೇದಗಳ್ ಏಸುಕಾಲಕು ಸಾಕಲ್ಯದಿ ವರ್ಣಿಸ ಲೀಶ ಕೋಟಿ ಪ್ರವಿಷ್ಟೆಗೆ ಅಸದಳ 7 ಅಂಗಜಪಿತ ರಂಗ ಮಂಗಳಾಂಗನೆ ಮಾ- ತಂಗವರದ ದೇವ ಗಂಗಾಜನಕ ಕಾಳಿಂಗನಾ ಮದ ಮೆಟ್ಟಿ ಭಂಗಾಗೈಸಿದ ಭುಜಂಗಶಯನ ಎನ್ನಂತಾ- ರಂಗದಿ ನಿಲ್ಲೋ ಇಂಗಿತ ಬಲ್ಲೆ ಶ್ರೀರಂಗಶಾಯಿ ಸಾ- ರಂಗಪಾಣಿ ಕೃಪಾಂಗ ಎನ್ನಯ ಭವಭಂಗಗೈಸಿ ಸ- ತ್ಸಂಗವೀಯೋ ಯದುಪುಂಗವ ಮಂಗಳಮೂರುತಿ ಶೌರೇ8 ಕಾಲ ಜಾಲವ ತಂದೆ ಪಾಲಿಪ ಸಲಹಿಪ ಕರ್ತ ನೀನಲ್ಲದಿ- ನ್ನಿಲ್ಲವಯ್ಯ ಶ್ರೀ ವೇಂಕಟೇಶ ಪ್ರಭೋ 9
--------------
ಉರಗಾದ್ರಿವಾಸವಿಠಲದಾಸರು
ಆಡಿನ ಮರಿಯೆತ್ತಂಬುಧಿಯೊಳಾಡುವ ಕರಿಯೆತ್ತ ಮಾನವ ಮಾಡದಿರಚ್ಚುತ ನಾನೆಂಬ ಮನವಪ. ಯಾಡಮೂಢನೊಬ್ಬ ಎಲ್ಲಾ ಜಗದೊಳು ಗೂಢನಾಗಿ ನೋಡುತಿಹ ಸುಖಿಯೊಬ್ಬ ಗಡ ನಾಡರಿಯೆ ದುಃಖಿಯೊಬ್ಬ ಸುಖದಲ್ಲಿ ಲೋ- ಲಾಡುತಿಹ ನಿರನಿಷ್ಟನೊಬ್ಬ ಗಡ1 ಕಡಲ ಕಡೆದು ಸುಧೆಯ ನೋಡಿ ತ- ನ್ನೊಡಲ ಧಣಿಯಉಂಡವನೊಬ್ಬ ಹೆ- ಣ್ಣುಡಿಗೆಯನ್ನುಟ್ಟು ಅಸುರರ ಬಾಯ ಹೊಡೆದು ಬಡಿಸಿದವನೊಬ್ಬ ಗಡ 2 ಆಡುತಲಬ್ಧಿಯೊಳಡಗಿದದ್ರಿಯ ಕೋಡುಗಲ್ಲನೆತ್ತಿ ಹೂಡಲು ಬಲ್ಲೆಯ ಓಡುತಲೊಬ್ಬನೊರಗಿದ್ದನ ಕಣ್ಣೊಳೊಡದು ಮೂಡಿದÀಗ್ನಿಯಿಂದ ಸುಡುವೆಯ3 ಮಂದ ನೀನೊಬ್ಬನೆ ಮಾಡುವೆಯ ಲೆಕ್ಕವಿಲ್ಲದೆ ಮಕ್ಕಳ ಕೂಡಿದನ ಬಹಳ ಕೋಟಿಧನಂಗಳ ಕೂಡಿರ್ದಗೆ ಕೊಟ್ಟು ನೋಡಿ ಸುಖಿಪೆಯ 4 ದೃಢವಾಗಿ ನಿನ್ನುಂಗುಟ ನಖದಿಂ ದೊಡಲನಾದರು ಒಡೆಯಲಾಪೆಯ ಮೃಡಪ್ರಿಯ ಹಯವದನನಂತೆ ಮೂಢಜಾತಿಯಾಗಿ ವೇದ ಓದುವೆಯ 5
--------------
ವಾದಿರಾಜ
ಆನಂದತೀರ್ಥ ವಂದ್ಯ ಪಾಲಿಪುದು ಸು- ಜ್ಞಾನ ಭಕುತಿಯಾನಂದ ಸಾನುರಾಗದಿ ಕಾಯೊ ಸನಕಾದಿ ಮುನಿವಂದ್ಯ ಪ. ಅಖಿಳ ವೇದವಿದಿತ ದಾಸೀಕೃತ ವಿಖನಸಗಣವಿನುತ ನಿಖಿಳ ದೋಷದೂರ ಸಕಲ ಸದ್ಗುಣಪೂರ ಪ್ರಕಟನಾಗೀಗೆನ್ನಿದಿರಿನಲಿ ಸುರನಿಕರನಂದನ ನೀರದಪ್ರಭ 1 ಮಾರನಂದನ ನಿನ್ನಯ ಲೀಲಾಮೃತವಾರುಧಿಯೊಳಗಿಳಿದು ಶ್ರೀರಮಣಿಯು ಇನ್ನು ಪಾರಗಾಣದೆ ತತ್ವ- ಸಾರ ನಿನ್ನುರವನು ಸೇರಿಕೊಂಡಿಹಳು ಕ್ರೂರ ಕರ್ಮಾಚರಣ ತತ್ವವಿಚಾರಗಂಧ ವಿದೂರವಾಗಿಹ ಹಾರಕೂಪದಿ ಮುಳುಗಿರುವನ ಕರಾರವಿಂದದಿ ಪಿಡಿದು ರಕ್ಷಿಸು 2 ವೇದ ಸ್ಮøತ್ಯುಕ್ತವಾದ ಕರ್ಮಗಳೆಂಬೊ ಹಾದಿಯನರಿಯೆ ಇನ್ನು ಈ ಧರೆಯೊಳಗಿಹ ತೀರ್ಥಕ್ಷೇತ್ರಯಾತ್ರೆ- ಯಾದರು ಮಾಡದಿನ್ನು ಎನ್ನನು ಶ್ರೀಧರ ಕರಕಮಲ ಪೂಜಿತಪಾದ ನಿನಗೊಪ್ಪಿಸಿದೆ ದೈನ್ಯದಿ ಕಾದುಕೊಂಬುವ ನೀನೆ ಕರುಣಾಂಬೋಧಿ ಶೇಷಧರಾಧಿರೇಶನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಆವ ಸೇವೆಯಿಂದ ನಿನ್ನುತ್ತೀರ್ಣಾಗುವರೋ | ಭೋಕ್ತ ಗುರು ಮಹಿಪತಿ ನಿಮ್ಮ ಶರಣರು ಪ ಒಡಲೊಳಗಿದ್ದ ಶಿಶು ಹೊರಗ ಬಂದ ಮ್ಯಾಲ ಒಡ ಮೂಡುವದು ನೋಡಿ ಜನನಿ ಮೋಹಾ ಪೊಡವಿಯೊಳಿಹನ ಕರೆದೊಡಲೋಳಿಟ್ಟುಕೊಂಡು ಕುಡಿಸಿ ಬೋಧಾಮೃತವ ಸಲಹುವ ಗುರುಮಾತಾ 1 ಸತಿಯಲಿ ವೀರ್ಯವನಿಟ್ಟು ಬೆಳಸಿ ಘನ ಯುತನಾದರಾಗ ತಂದೆಯ ಮೋಹವು ಕ್ಷಿತಿಯೊಳು ನಿಜವೀರ್ಯ ಕಳಿಯದೆ ಮೂಢ ಭಕ್ತಿರಿಗೊಲಿದು ಬೀರುವ ದಯ ಗುರು ತಂದೆ 2 ತನುವ ನಿರ್ಮಿಸಲು ತಾ ತನುವಿನೊಡೆಯ ನೀನು ಮನವ ನೀಡಲು ಚೇತನಾತ್ಮ ನೀನು ಧನವ ನೀಡಲು ಇಹ ಪರವೀವ ಧೊರಿ ನೀನು ನೆನೆವರ ಶ್ರಯಧೇಯ ಕಾಯೋ ನಂದನ ಪ್ರಭು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು