ಒಟ್ಟು 28 ಕಡೆಗಳಲ್ಲಿ , 17 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನಿವನು ಈಗ ಬರಲಿದಕೆ ಬಗೆಯೇನುಚೆನ್ನಾಗಿ ಪೇಳೆ ರಮಣಿ ಪ ಮನ್ನಿಸಿ ಮಮತೆಯಲಿ ಮನವ ಸೆಳಕೊಂಡೊಯ್ದುಅನ್ಯರನು ಕೂಡುವನೆ ಕೆಳದಿ ಅ.ಪ. ಬಣ್ಣದ ಗಿಣಿ ಬರೆದ ಸಣ್ಣ ಕುಪ್ಪಸವುಳ್ಳಚಿನ್ನದ ಶ್ರೀರೇಖೆ ಸೀರೆಬಿನ್ನಣವುಳ್ಳ ಬಿಳಿಯೆಲೆ ಅಡಿಕೆ ಕೆನೆಸುಣ್ಣಕರ್ಪೂರ ಕಾಚಿನುಂಡೆಕಣ್ಣಿಗಿಂಪಾದ ಕಡು ಚೆಲ್ವ ಮಲ್ಲಿಗೆ ಮೊಗ್ಗೆ ಉನ್ನತವಾದ ದಂಡೆಇನ್ನು ಈ ಪರಿಮಳವು ಬಗೆಬಗೆಯ ಆಭರಣರನ್ನ ಕೆತ್ತಿಸಿದ ಗೊಂಡೆಮುನ್ನ ಸಿಂಗರ ಮಾಡಿ ಎದೆಹಿಡಿದು ಬಿಗಿಯಪ್ಪಿನಿನ್ನ ಈ ವೇಳೆ ಕೂಡಿದೆ ದೃಢದೆ 1 ಈಗಾಗು ಬಾಹನೆಂತಿರುವೆ ತಾನೂರಿದ್ದಉಗುರು ಗುರುತನು ನೋಡುತಸೋಗೆಗಣ್ಣಿನ ಕಾಡಿಗೆಯ ಕಲಕಿದನೆಂದುಬೇಗ ನಟನೆಯ ಮಾಡುತರಾಗದಿಂದದಲಿ ರವಿಕೆ ನೆರಿಯನು ಬದಲುಟ್ಟುಭೋಗಕ್ಕೆ ಅನುವಾಗುತಹಿಂಗೆ ಸಿಂಗರಿಸಿಕೊಂಡಿಷ್ಟು ಹೊತ್ತನು ಕಳೆದೆಹೇಗೇ ಸೈರಿಪೆ ಕೂಡದೆ ಮುಂದೆ 2 ಇಂದಲ್ಲದಿರೆ ನಾಳೆ ಬಹನೆಂದು ಇದ್ದರೆಕಂದರ್ಪ ಕಾಡುತಿಹನೆತಂದು ತೋರಿಸು ತನ್ನ ತಂದೆಯನೆಂದು ಪೂ-ವಿಂದ ಬಾಣವ ಎಸೆವನೆಇಂದುಬಿಂಬವು ಮಂದ ಮಾರುತವು ಸುಮದ ಮಳೆ-ಯಿಂದ ಸೆಕೆಗಾನಾರೆನೆಒಂದು ನಿಮಿಷದಲಿ ಶ್ರೀರಂಗ ವಿಠ್ಠಲನನ್ನುಹೊಂದಿಸೆನ್ನಗಲದಂತೆ ಕಾಂತೆ 3
--------------
ಶ್ರೀಪಾದರಾಜರು
ಅಚ್ಚರಿಯೊಳಚ್ಚರಿಯು ಅಚ್ಯುತನ ನಾಮವಿದು ತುಚ್ಛ ಬುದ್ಧಿಯ ಬಿಟ್ಟು ಎಚ್ಚೆತ್ತು ನೋಡೊ ಪ ನಿಧಿಯು ತನ್ನೆದುರಿಗಿರೆ ವದರಿ ದುರ್ಯೋಧನನು ಮದಡನಾದನು ಬರಿದೆ ದಳವ ಕೊಂಡು ಸದಮಲಾತ್ಮನ ದಿವ್ಯ ಪದವನರ್ಜುನ ಪಿಡಿದು ಮುದದಿ ಭಾಗ್ಯವ ಪಡೆದನದ್ಭುತವ ನೋಡ 1 ಹರಿಯ ಯೋಗದ ಸಿರಿಯು ಇರುವ ನಿಜವರಿಯದೆ ಕುರುಡನಣುಗನು ಜರಿದು ಹಾಳಾದನು ಉರುತರದ ಭಕ್ತಿಯಿಂದೆರಗಿ ಕರಗಳ ಮುಗಿದು ನರ ತನ್ನ ಹೆಸರನ್ನು ಸಾರ್ಥಕವಗೈದ 2 ನೀಚಯುಕ್ತಿಗಳಿಂದ ಗೋಚರಕೆ ಬಹನಲ್ಲ ವಾಚಾಮಗೋಚರನು ಶ್ರೀಕಾಂತನು ಕೀಚಕಾರಿ ಪ್ರಿಯನ ಶ್ರೀ ಚರಣ ಭಕ್ತಿ ಭವ-ಮೋಚನಕೆ ಸೂಚನೆಯು ಆಚರಿಸಿ ನೋಡೋ 3
--------------
ಲಕ್ಷ್ಮೀನಾರಯಣರಾಯರು
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ
ಎಚ್ಚರಾದರು ದೇವಗಣರಿಂದು ನಮ್ಮ ಲಕ್ಷ್ಮೀರಮಣ ಕೃಷ್ಣ ರಥವನೇರುವನೆಂದು ಪ. ಶಿಂಶುಮಾರ ಚಕ್ರದಂಶಮಕರ ತಿ- ಗ್ಮಾಂಶು ಸಂಕ್ರಮಿಸುವ ಸಮಯದಲಿ ಕಂಸಮರ್ದನ ಯದು ವಂಶಾಬ್ಧಿ ಚಂದ್ರ- ವಿಪಾಂಗಗಮನನಾಗಿ ವೀಧಿಗೆ ಬಹನೆಂದು 1 ಕಂದನ ಸಂಭ್ರಮ ತಂದೆಗೆ ಸುಖಕರ- ವೆಂದು ಪೇಳುವ ಮಾತ ನಿಜವ ದೋರಿ ಮಂದರಧರ ಮನ್ಮಥನ ಕೇತು ಬೆಳಗುವಾ- ನಂದದಿ ರಥವೇರುತ್ತಿಂದು ಬರುವನೆಂದು 2 ಮೋಕ್ಷದಾಯಕ ಕಮಲಾಕ್ಷ ಕೃಷ್ಣನ ಸ- ತ್ಕಟಾಕ್ಷ ಸಂಪಾದಿಪಪೇಕ್ಷೆಯಲಿ ತ್ರ್ಯಕ್ಷಾಧ್ಯಕ್ಷಲೋಕಾಧ್ಯಕ್ಷರೆಲ್ಲರು ಕೂಡಿ ಪಕ್ಷಿವಾಹನನನ್ನು ಈಕ್ಷಿಪ ತವಕದಿ 3 ಪೃಥೆಯ ಕುಮಾರನ ರಥವ ನಡಸುತತಿ- ರಥರನು ಗೆಲಿಸಿ ಸಾಮ್ರಾಜ್ಯವಿತ್ತ ಕಥೆಯ ಕೇಳ್ಪರ ಮನೋರಥಗಳ ಕೊಡುವ ಮ- ನ್ಮಥನ ಜನಕ ಮುಕ್ತಿ ಪಥವ ತೋರುವನೆಂದು 4 ಸಿದ್ಧಿ ವಿಘ್ನಮುಖ ದೋಷಭೇಷಜ ಭಕ್ತಿ ಸಿದ್ಧ ಜಪರಿಗೆ ಸಿದ್ಧಿಸುವನೆಂದು ಮಧ್ವಮುನಿಯು ತಂದಿಲ್ಲಿರಿಸಿ ಪೂಜಿಸಿದಂಥ ಸಿದ್ಧಾಂತವೇದ್ಯನಿರುದ್ಧನಿಲ್ಲಿಹನೆಂದು 5 ಧಾರುಣಿಯೊಳಗಿನ ವಿಷ್ಣುಭಕ್ತರ ಸಂಘ ಸೇರಿ ಸಂತೋಷದಿ ಜಯವೆನಲು ಪಾರಿವ್ರಾಜರು ಕೂಡಿ ಪರತತ್ವ ನುಡಿಯೆ ಸ- ರ್ಪಾರಿಯನೇರಿ ಸಮೀರೇಡ್ಯಬಹನೆಂದು 6 ಮಾಯಿಜನರ ಮುರಿದೊತ್ತುತ ತತ್ವರ- ಸಾಯನ ಸುಧೆಯ ಸಜ್ಜನರಿಗಿತ್ತು ವಾಯುಮುನಿಯು ಪ್ರತಿಷ್ಠೆಯ ಗೈದ ಪುರುಷಾರ್ಥ ದಾಯಕ ವೆಂಕಟರಾಯನೀತನೆಯೆಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಎಂಥಾ ಠೌಳಿಗಾರನಮ್ಮ ಗೋಪಮ್ಮ ನಿನ್ನ ಮಗ ನ್ನೆಂಥಾ ಠೌಳಿಗಾರನಮ್ಮ ಪ. ಎಂಥಾ ಠೌಳಿಗಾರ ಪಂಥಾದಿ ಬೆನ್ನಟ್ಟಿ ಬಂದು ನಿಂತಲ್ಲೆ ನಾನಾರೂಪವೆಂತು ತಾಳುವ ನೋಡೆ ಎಂಥಾ ಅ.ಪ. ನೀರೊಳು ಮೀಯಲು ಪೋದೆನೆ ಗೋಪಮ್ಮ ಸಾರಿ ಪಿಡಿಯಲು ಹೋದೆ ಆರು ಅರಿಯರೆಂದು ಪೊತ್ತು ಮರೆಯಾದನೇ ಗೋಪಮ್ಮ 1 ಗೋಪಿ ಧೂಳು ಕೆದರಿ ಕೋರೆ ತೋರುವನ ಖೂಳ ದೈತ್ಯನ ಸೀಳೆ ಕೇಳಿ ಕಂದನ ನುಡಿ ಭಾಳ ಕ್ರೂರ ಮೃಗ ಕೇಳಿದೊಡಲು ಭಯ ತಾಳಿ ಬಂದೆ ಇಂಥ2 ದೊರಕಿದನೆಂದೆ ತಿರುಕ ಬ್ರಹ್ಮಚಾರಿ ತಿರುಗಿ ನೋಡೆ ಥೋರ ಕೊಡಲಿ ಪಿಡಿದು ನಿಂತು ಮಾರುತಿ ಸೇವಿತನಾದ ಗಮನ ದೇವನು ಎಂಥಾ 3 ಚಿತ್ತಜನೈಯ್ಯನು ನಾನೆತ್ತ ಪೋದರು ಬಿಡ ಸುತ್ತಿ ಬಹನೆ ಕೃಷ್ಣಾ ಮುತ್ತ ತಾರೆನುತ ಕತ್ತಲೆಯೊಳು ಪೋದೆ ವಿಸ್ತರಿಸುವೆನೆಂತು ಗೋಪಿ ಇಂಥಾ 4 ಶ್ರೀಪತಿ ಶ್ರೀನಿವಾಸನ ಪಿಡಿದು ಗೋಪಾಲನ ಎಳತಂದೆ ನಿನ್ನೆಡೆಗೆ ತಾ ಪರಾರಿಯಾಗಿ ಗೋಪತಿ ಹಯನೇರಿ ಏಪರಿ ಪೋದನೊ ತಾಪತಾಳಲಾರೆ ಎಂಥಾ 5
--------------
ಸರಸ್ವತಿ ಬಾಯಿ
ಕಂ||ಮಂಗಳವಾರದ ಪೂಜೆಗೆಮಂಗಳ ನೈರುತ್ಯದಲ್ಲಿ ಶಿವನಪ್ಪಣೆುಂಮಂಗಳ ನಾಮವ ಜಪಿಸುತಮಂಗಳವನ್ನೀಯುತೆಮಗೆ ಶೋಭಿಸುತಿಪ್ಪಳ್‍ನಿನ್ನ ಚರಣವ ನಂಬಿ ಭಜಿಸುತಿಹ ಭಕ್ತನಿಗೆ ುನ್ನುಂಟೆ ಗ್ರಹಗತಿಗಳು ಕೃಷ್ಣಾ ಪಉನ್ನತದ ಚಕ್ರವರ್ತಿಯ ಹೊಂದಿ ಬದುಕುವನಿಗನ್ಯರಟ್ಟುಳಿ ಬರುವದೇ ಕೃಷ್ಣಾ ಅ.ಪನೀನೊಬ್ಬನೇ ದೇವನೆಂದು ಪೇಳುತಲಿಹುದುಸಾನುನಯವುಳ್ಳ ಶ್ರುತಿಯು ಕೃಷ್ಣಾಏನೊಂದು ರೂಪಾಗಿ ತೋರಿದರು ಸಕಲವೂನೀನಲ್ಲದನ್ಯವುಂಟೇ ಕೃಷ್ಣಾಏನೆಂಬೆ ಚಿನ್ನ ಹಲವಂದದಾಭರಣದಲಿಕಾಣಿಸಿದರದು ಭೇದವೇ ಕೃಷ್ಣಾನೀನೇ ದೇವಾತ್ಮಕನು ನೀನೆ ಗ್ರಹರೂಪಕನುನೀನೊಲಿದ ನರಗೆ ಭಯವೇ ಕೃಷ್ಣಾ 1ಉತ್ತವನು ಬಿತ್ತುವನು ಬಿತ್ತಿದವನುಂಬವನುಮತ್ತೊಬ್ಬನದಕೆ ಬಹನೇ ಕೃಷ್ಣಾಉತ್ತು ಬಿತ್ತಿದೆ ಮಾಯೆಯೆಂಬ ಕ್ಷೇತ್ರದಿ ನಿನ್ನಚಿತ್ತೊಂದು ಬೀಜವನ್ನು ಕೃಷ್ಣಾಬಿತ್ತು ವೃಕ್ಷಾಕಾರವಾದಂತೆ ಲೋಕವಿದುವಿಸ್ತರದಿ ಬಹುವಾುತು ಕೃಷ್ಣಾಬಿತ್ತಿ ಬೆಳೆದುಂಬಾತನುತ್ತಮನು ನೀನಿರಲುಮತ್ತೊಂದು ಭಯವದೇಕೆ ಕೃಷ್ಣಾ 2ಇಂದ್ರಾದಿ ದಿಕ್ಪಾಲಕರ ರೂಪನಾಗಿರುವೆಚಂದ್ರಾದಿ ಗ್ರಹರೂಪನು ಕೃಷ್ಣಾಇಂದ್ರ ಚಂದ್ರಾದಿತ್ಯ ವರುಣಾದ್ರಿ ಗಗನಾದಿಇಂದ್ರಿಯಾಧೀಶ ನೀನೆ ಕøಷ್ಣಾಇಂದ್ರಿಯಾಧೀನರಾಗಿರುವರರಿಯರು ನಿನ್ನಮಂದಬುದ್ಧಿಯ ಮೂಢರು ಕೃಷ್ಣಾತಂದ್ರಿಯನು ಪರಿಹರಿಸಿ ಹೊಂದಿ ನಿನ್ನನು ಭಜಿಪಛಂದವನು ನೀ ತೋರಿಸು ಕೃಷ್ಣಾ 3ಒಡೆಯನೊಬ್ಬನು ಜಗಕೆ ಬಳಿಕಾತನಾಜ್ಞೆಯಲಿನಡೆವರೆಲ್ಲರು ಮೀರದೆ ಕೃಷ್ಣಾನಡೆಯಲರಿಯದು ಹಲಬರೊಡೆಯರಾಗಲು ನೀತಿಕೆಡುವುದದು ಕದನಮುಖದಿ ಕೃಷ್ಣಾನುಡಿದು ಭೇದವ ನಿತ್ಯ ಕದನವನು ಮಾಡುತಿಹಜಡರ ಮಾತದು ಸತ್ಯವೇ ಕೃಷ್ಣಾಬಿಡಿಸಿ ಭೇದವನೊಬ್ಬನೊಡೆಯನೆಂದುರು ಸಾರ್ವಸಡಗರದ ಶ್ರುತಿ ನಿತ್ಯವು ಕೃಷ್ಣಾ 4ಬಿಡದೆ ನಿನ್ನಂಘ್ರಿಯನು ದೃಢವಾಗಿ ಭಜಿಸುವರುಜಡತೆಯಳಿದ ಮಹಾತ್ಮರು ಕೃಷ್ಣಾಬಿಡುವದವರಿಗೆ ಲೋಕ ನಡೆವ ನಡತೆಯ ಭ್ರಮೆಯುನಡತೆಯದು ನಿನ್ನ ನಿಜವು ಕೃಷ್ಣಾನಡೆದು ಬಳಿಕಾ ಮಾರ್ಗವನು ಹೊಂದಿದವ ನಿಪುಣಬಿಡಬೇಕು ಮೂಢಮತವ ಕೃಷ್ಣಾಪೊಡವಿಯೊಳು ತಿರುಪತಿಯ ವಾಸ ವೆಂಕಟರಮಣಕೊಡು ನಿನ್ನ ಭಜಿಪ ಮತಿಯ ಕೃಷ್ಣಾ 5ಓಂ ಅವ್ಯಕ್ತ ಗೀತಾಮೃತ ಮಹೋದಧಯೇ ನಮಃ
--------------
ತಿಮ್ಮಪ್ಪದಾಸರು
ನಾಕೇಶ ಪೂಜ್ಯ ಕರು | ಣಾಕರನೆ ಬೇಗಲೇಳೆನ್ನುತಾ ಪ ನಾಕಿ ಸುತನೆ ನಿದ್ದೆ ಸಾಕೆನ್ನುತಾ ಅ.ಪ ತರಿದೊಟ್ಟಿ ತಮವ ಮುಂದರಿಸುವನು ದೇವ 1 ಸುತ್ತ ಸಂಚರಿಸೆ ವಿಪತ್ತೊದಗಲಿಕೆ ಬೇ - ಉತ್ತಮವಾತನೀ ಕೃತ್ಯವ ದೂರೆ ಪೂ ರ್ವೋತ್ತರದಿಂ ಬಹನೇಳೆನ್ನುತಾ ದೇವ 2 ಫಕ್ಕನೋಡುವವು ನೀನೇಳೆನ್ನುತ ದೇವ 3 ಕರಗಳಂ ಮುಗಿದು ನಿಂದಿರುತಿಹರು ದೇವಾ 4 ಪರಿಕಿಸಿ ವರವೀಯಲೇಳುವುದು ದೇವ 5
--------------
ಬೆಳ್ಳೆ ದಾಸಪ್ಪಯ್ಯ
ಪವನಾ ಸಂಭೂತಾ ಒಲಿದೂತವಕಾದಿ ಕಾಯಬೇಕೂ |ಇವನಾರೋ ಎಂದೂ ದಾಸಿನಾ | ಮಾಡದಲೆ ಎನ್ನಾ ಪ ಹರಿವೇಷಧರನೆ ನರ |ಹರಿಭಕುತರ ಪೊರೆಯುವದಕ್ಕೇ ||ಹರಿಯಂತೆ ಒದಗುವೆಯೋ ನೀನೂ | ಹರಿದಾಸ ನಾನೂ 1 ಕಪಿಪಾ ಕಪಿಯಾಜ್ಞದಂತೇ |ಕಪಿಲನ್ನ ಪತ್ನಿಯನ್ನೂ ||ಕಪಿಗಳು ಹುಡುಕಿ ಮಿಡುಕಲು | ಕಾಯ್ದೆ ಆವಾಗಲೂ 2 ಅಜಸುತನ ಶಾಪದಿಂದ |ಅಜಗರನಾದ ವನಪಾದ ||ರಜದೀ ಪೂನೀತನ ಮಾಡಿದನೇ | ಅಜಪದವಿಗೆ ಬಹನೇ3 ಕಲಿಯುಗದಿ ಕವಿಗಳೆಲ್ಲಾ |ಕಲಿಯಾ ಬಾಧೆಗೆ ಬಳಲಿ |ಕಲಿವೈರಿ ಮುನಿಯೆಂದೆನಿಸಿದೇ | ಕಲಿಮಲವಾ ಕಳೆದೆ 4 ಗುರು ಪ್ರಾಣೇಶ ವಿಠಲಾ |ಗುರುವರನೆಂಬೊ ಜ್ಞಾನಾ ||ಗುರು ಮಧ್ವರಾಯಾ ಕರುಣಿಸೋ | ಗುರುಮತಿಯನು ಬಿಡಿಸೋ 5
--------------
ಗುರುಪ್ರಾಣೇಶವಿಠಲರು
ಪೂರ್ಣಿಮೆಯ ದಿನ (ಗರುಡ ದೇವರನ್ನು ಕುರಿತು) ರಂಭೆ :ಮಂದಗಮನೆ ಪೇಳಿದಂದವನೆಲ್ಲ ಸಾ- ನಂದದಿ ತಿಳಿದೆನೆ ಬಾಲೆ ವಾಹನ ವೇರಿ ಮಂದರಧರ ಬಹನ್ಯಾರೆ1 ಅಕ್ಕ ನೀ ಕೇಳಲೆ ರಕ್ಕಸವೈರಿಯ ಪಕ್ಕದ ಮೇಲೇರಿಸುತ ಅಕ್ಕರದಿಂದ ಕಾಲಿಕ್ಕಿ ಬರುವನೀತ ಹಕ್ಕಿಯಂತಿಹನೆಲೆ ಜಾಣೆ2 ಘೋರನಾಸಿಕದ ಮಹೋರಗ ಭೂಷಣ ಧಾರಿವನ್ಯಾರೆಂದು ಪೇಳೆ ಮಾರಜನಕಗೆ ವಾಹನನಾಗುವನೀತ ಕಾರಣವೇನೆಂದು ಪೇಳೆ3 ಊರ್ವಶಿ : ಈತನೆ ಮಹಾತಿಬಲ ಕಾಣೆ ಶ್ರೀವಿಷ್ಣುವಿಂಗೆ ಕೇತನನಾದ ಪುನೀತನೆಲೆ ಜಾಣೆ ಭೀತಿರಹಿತವಿಖ್ಯಾತಿ ಸರ್ಪಾ- ರಾತಿ ಸೂರ್ಯಾನ್ವಯನ ಬಲಗಳ ಚೇರಿಸಿದ ನಿಷ್ಕಾತುರನ ಹರಿ ಪ್ರೀತ ವಿನತಾ ಜಾತ ಕಾಣಲೆ4 ಗಂಡುಗಲಿ ಮಾರ್ತಾಂಡತೇಜಮಖಂಡ ಬಲನಿವನು ಮಾತೆಯ ಚಂಡವಿಕ್ರಮನು ನೇಮವ ತಂಡವೆಲ್ಲವನು ಕೋಪದಿ ನಂಡಲೆದು ಕರದಂಡನಾಭನ ಕೊಂಡುಬಂದವನಂಡಜಾಧಿಪ5 ಭೂರಿವೈಭವದಿ ಗರುಡನ ದಯದಿ ತೋರುತ ರವದಿ ಸನಕ ಸ- ಚಾರುಚರಣವ ತೋರಿ ಭಕ್ತರ ಶ್ರೀರಮಾಧವ ಮಾರಜನಕನು6
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು
ಯಾತಕೆ ಚಿಂತಿಪೆ ಬಿಡು ನೀ | ಪರ ಮಾತುಮ ಪೊರೆವನು ಶರಣರ ಬಿಡದೆ ಸಂಶಯ ಬಿಡದೆ ನಂಬು ನೀ ದೃಢದೆ ಪ ಧರ್ಮವು ಹೊಸಗಿ ಅಧರ್ಮವು ಮುಸುಗಿರೆ ಧರ್ಮಸ್ಥಾಪಕ ತಾನು ಒಮ್ಮೆಲೆ ಬಹನೆ ದೀಕ್ಷೆಯಿಂದಿಹನೆ ಕೀರ್ತಿಯತಹನೆ 1 ದುಷ್ಟರ ಶಿಕ್ಷಿಸೆ ಶಿಷ್ಟರ ರಕ್ಷಿಸೆ ಸೃಷ್ಟಿಗೆ ಬಹೆನೆಂದು ಕೊಟ್ಟಿಹನಭಯ ಎಂದಿಗು ಮರೆಯ ನಮ್ಮನು ತೊರೆಯ 2 ಅನ್ಯ ಚಿಂತೆಯ ಬಿಟ್ಟು ತನ್ನಲೆ ಮನವಿಟ್ಟು ಭಾರ ತನ್ನದೆಂದಾತ ಘನ್ನ ಶ್ರೀಕಾಂತ ಮುಕ್ತಿಪ್ರಧಾತ3
--------------
ಲಕ್ಷ್ಮೀನಾರಯಣರಾಯರು
ಯಾವ ಸಂಭ್ರಮವಿದೇ ವಾರಿಜ ವದನೆ ಶ್ರೀವೇಣುಗೋಪಾಲ ಮನೆಗೆ ಬಂದಿಹನೇ ಪ ದೇವ ದೇವನು ನಿನ್ನ ಪೂಜೆಗೊಪ್ಪಿದನೇ ಯಾವ ವಾತ್ಸಲ್ಯವ ನಿನಗೆ ತೋರಿದನೇ ಅ.ಪ ಗಾನ ನೃತ್ಯಗಳಿಂದ ಒಲಿಸಿದೆಯೇನೇ ಜೇನು ಸಕ್ಕರೆ ಬೆಣ್ಣೆಗಳನಿತ್ತೆಯೇನೇ ಸಾನುರಾಗದಿ ಪೂಜೆ ಮಾಡಿದೆಯೇನೇ ನಾನೇನಗೈದರೆ ಅವನೊಲಿಯುವನೇ1 ಪರಿಮಳ ಗಂಧಕೆ ಮೈ ತೋರುವನೇ ಕೊರಳಿಗೆ ಹಾರವ ನೀಡಲೊಪ್ಪುವನೇ ಮುರಳಿಯ ಗಾನವನೊಲಿದು ಕೇಳುವನೇ ಪರಮಪುರುಷ ಬಾರೆಂದರೆ ಬಹನೇ 2 ಕರಗಳ ಮುಗಿದರೆ ಕರುಣಿಪನೇನೇ ಚರಣಕೆ ಮಣಿದರೆ ಒಲಿಯುವನೇನೇ ಪರಿಪರಿ ಹೊಗಳಲು ನಲಿಯುವನೇನೇ ವರದ ಮಾಂಗಿರಿರಂಗ ದಯೆ ತೋರನೇನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಮಣಿ ಕೇಳೆಲೆ ಮೋಹನ ಶುಭಕಾಯನ ಅಮರ ವಂದಿತ ರವಿಶತಕೋಟಿ ತೇಜನ ವಿಮಲ ಚರಿತ್ರದಿ ಮೆರೆವ ಶ್ರೀ ಕೃಷ್ಣನಕಮಲವದನೆ ನೀ ತೋರೆ ಪ ಬಾಯೊಳಗಿಹಳ ಗಂಡನ ನಿಜ ತಮ್ಮನತಾಯ ಪಿತನ ಮಡದಿಯ ಧರಿಸಿದನಸ್ತ್ರೀಯಳ ಸುತನ ಕೈಯಲಿ ಶಾಪಪಡೆದನದಾಯಾದಿಯ ಮಗನಸಾಯಕವದು ತೀವ್ರದಿ ಬರುತಿರೆ ಕಂಡುಮಾಯಾಪತಿ ಭೂಮಿಯನೊತ್ತಿ ತನ್ನಯಬೀಯಗನ ತಲೆಗಾಯಿದಂಥರಾಯನ ಕರೆದು ತೋರೆ 1 ನಾಲಗೆ ಎರಡರವನ ಭುಂಜಿಸುವನಮೇಲೇರಿ ಬಹನ ತಂದೆ ಇಹ ಗಿರಿಯನುಲೀಲೆಯಿಂದಲಿ ಕಿತ್ತೆತ್ತಿದ ಧೀರನಕಾಳೆಗದಲಿ ಕೊಂದನಲೋಲಲೋಚನೆಯ ಮಾತೆಯ ಪುತ್ರನಣುಗನಮೇಲು ಶಕ್ತಿಗೆ ಉರವನಾಂತು ತನ್ನವರನುಪಾಲಿಸಿದಂಥ ದಾತನಹ ದೇವನಲೋಲೆ ನೀ ಕರೆದು ತೋರೆ 2 ಉರಿಯೊಳು ಜನಿಸಿದವನ ನಿಜ ತಂಗಿಯಸೆರಗ ಪಿಡಿದ ಖಳನಣ್ಣನ ತಂಗಿಯವರನ ತಲೆಯನು ಕತ್ತರಿಸಿದ ಧೀರನಗುರುವಿನೊಳುದಿಸಿದನಶರವ ತಪ್ಪಿಸಿ ತನ್ನ ದಾಸರ್ಗೆ ಅನುದಿನಕರೆದು ವರವನಿತ್ತು ಮನ್ನಿಸಿ ಸಲಹುವಉರಗಗಿರಿಯ ವೆಂಕಟಾದಿಕೇಶವನ ಗರತಿ ನೀ ಕರೆದು ತಾರೆ 3
--------------
ಕನಕದಾಸ
ಸಂಪ್ರದಾಯದ ಹಾಡುಗಳು ಕೋಲು ಹಾಡು ಆಕಾಶಕಭಿಮಾನಿ ಶ್ರೀಕಂಠ ವರಪುತ್ರಏಕದಂತನೆ ವಿಘ್ನೇಶ ಕೋಲೆಏಕದಂತನೆ ವಿಘ್ನೇಶ ನಿನ್ನ ಪದಏಕ ಚಿತ್ತದಲಿ ಬಲಗೊಂಬೆ ಕೋಲೆ 1 ನೆನೆಯಕ್ಕಿ ನೆನೆಗಡಲೆ ಗೊನೆಯ ಬಾಳೆಯ ಹಣ್ಣುಘನವಾದ ಚಿಗುಳಿ ತಂಬಿಟ್ಟು ಕೋಲೆಘನವಾದ ಚಿಗುಳಿ ತಂಬಿಟ್ಟು ತಂದೀವೆಗಣಪತಿ ಮತಿಯ ಕರುಣಿಸು ಕೋಲೆ 2 ಜಾಹ್ನವಿ ಜಾಹ್ನವಿ ಜನಕ ನಾರಾಯಣನಗಧರನ ಮುನ್ನ ಬಲಗೊಂಬೆ ಕೋಲೆ 3 ಮಚ್ಛ ಕೂರುಮ ವರಹ ನರಸಿಂಹ ವಾಮನಸ್ವಚ್ಛ ಭೃಗುರಾಮ ರಘುರಾಮ ಕೋಲೆಸ್ವಚ್ಛ ಭೃಗುರಾಮ ರಘುರಾಮ ಕೃಷ್ಣ ಬೌದ್ಧಅಚ್ಛ ಕಲ್ಕಿಯ ಬಲಗೊಂಬೆ ಕೋಲೆ 4 ಈಶ ಬ್ರಹ್ಮರಿಗೆ ನಿಯಾಮಕನಾಗಿದ್ದುಪೋಷಿಸುತಿಪ್ಪ ಪರಮಾತ್ಮ ಕೋಲೆಪೋಷಿಸುತಿಪ್ಪ ಪರಮಾತ್ಮನಾದ ಶ್ರೀಕೇಶವನ ಮೊದಲೆ ಬಲಗೊಂಬೆ ಕೋಲೆ 5 ನೀರಿಗಾಶ್ರಯನಾಗಿ ನೀರೊಳು ಮಲಗಿಪ್ಪನೀರಜ ನೇತ್ರ ನಿಗಮಾತ್ಮ ಕೋಲೆನೀರಜ ನೇತ್ರ ನಿಗಮಾತ್ಮನಾದ ಶ್ರೀನಾರಾಯಣನ್ನ ಬಲಗೊಂಬೆ ಕೋಲೆ 6 ಯಾದವ ಕುಲಜನೆ ಸಾಧುಗಳರಸನೆಮಾದೇವಿಗಾಶ್ರಯನಾಗಿಪ್ಪ ಕೋಲೆಮಾದೇವಿಗಾಶ್ರಯನಾಗಿ ಪಾಲಿಸುವಮಾಧವನ್ನ ಮೊದಲೆ ಬಲಗೊಂಬೆ ಕೋಲೆ 7 ಚಂದದಿಂದ ವೇದ ವೃಂದ ಪ್ರತಿಪಾದ್ಯನೆಇಂದಿರಾದೇವಿ ರಮಣನೆ ಕೋಲೆಇಂದಿರಾದೇವಿ ರಮಣನಾದ ಗೋ-ವಿಂದನ್ನ ಮೊದಲೆ ಬಲಗೊಂಬೆ ಕೋಲೆ 8 ಸೃಷ್ಟಿಯೊಳಗೆಲ್ಲ ವ್ಯಾಪ್ತನಾಗಿರುತಿಪ್ಪವೈಷ್ಣವಕುಲಕೆ ತಿಲಕನೆ ಕೋಲೆವೈಷ್ಣವ ಕುಲಕೆ ತಿಲಕನಾದ ಶ್ರೀವಿಷ್ಣುವಿನ ಮೊದಲೆ ಬಲಗೊಂಬೆ ಕೋಲೆ 9 ಅಧಮನಾಗಿದ್ದಂಥ ಅಸುರನ ಸಂಹರಿಸಿಮುದವ ಬೀರಿದನೆ ಸುರರಿಗೆ ಕೋಲೆಮುದವ ಬೀರುತ ಸುರರ ಪಾಲಿಸುವಂಥಮಧುಸೂದನನ್ನ ಬಲಗೊಂಬೆ ಕೋಲೆ 10 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕವ ಕೋಲೆಆಕ್ರಮಿಸಿ ತ್ರಿಲೋಕವನಳೆದ ತ್ರಿ-ವಿಕ್ರಮನ್ನ ಮೊದಲೆ ಬಲಗೊಂಬೆ ಕೋಲೆ 11 ಭೂಮಿಯೊಳಗೆ ಅತಿ ಸಂಭ್ರಮನಾಗಿದ್ದಕಾಮಿತಾರ್ಥಂಗಳ ಕರೆವನೆ ಕೋಲೆಕಾಮಿತಾರ್ಥಂಗಳ ಕರೆದು ಭಕ್ತರ ಪೊರೆವವಾಮನನ್ನ ಮೊದಲೆ ಬಲಗೊಂಬೆ ಕೋಲೆ 12 ವೇದಾಭಿಮಾನಿಗೆ ಸಾದರವಾಗಿಪ್ಪಬೌದ್ಧ ಮೂರುತಿಯೇ ಭವದೂರ ಕೋಲೆಬೌದ್ಧ ಮೂರುತಿಯೇ ಭವದೂರನಾದ ಶ್ರೀಶ್ರೀಧರನ್ನ ಮೊದಲೆ ಬಲಗೊಂಬೆ ಕೋಲೆ 13 ಸಾಕಾರ ಮೂರುತಿ ಸರ್ವೇಂದ್ರಿ ನಿಯಾಮಕನಾಕೇಶ ವಂದ್ಯ ನಳಿನಾಕ್ಷ ಕೋಲೆನಾಕೇಶ ವಂದ್ಯ ನಳಿನಾಕ್ಷನಾದ ಹೃಷಿ-ಕೇಶ ಹರಿಯ ಬಲಗೊಂಬೆ ಕೋಲೆ 14 ಪದುಮ ಸಂಭವ ಪಿತ ಪದುಮಿನಿ ವಲ್ಲಭಪದುಮ ಪೊಕ್ಕುಳಲಿ ಪಡೆದನೆ ಕೋಲೆಪದುಮ ಪೊಕ್ಕುಳಲ್ಲಿ ಪಡೆದು ಪಾಲಿಸುವಂಥಪದುಮನಾಭನ ಮುನ್ನ ಬಲಗೊಂಬೆ ಕೋಲೆ 15 ಕಾಮಿನಿ ಯಶೋದೆ ಒರಳಿಗೆ ಕಟ್ಟಲುಶ್ರೀ ಮನೋಹರ ಶೆಳೆದೊಯ್ದ ಕೋಲೆಶ್ರೀ ಮನೋಹರ ಶೆಳೆದು ಪಾಪವ ಕಳೆದದಾಮೋದರನ್ನ ಬಲಗೊಂಬೆ ಕೋಲೆ 16 ಕಿಂಕರರ ಚಿತ್ತ ದುರ್ವಿಷಯಕ್ಕೆರಗಲುಪಂಕಜನಾಭ ಶಳೆದನೆ ಕೋಲೆಪಂಕಜನಾಭ ಶಳೆದು ತನ್ನಲ್ಲಿಡುವಸಂಕರುಷಣನ್ನ ಬಲಗೊಂಬೆ ಕೋಲೆ 17 ಏಸು ಬ್ರಹ್ಮಾಂಡದೊಳು ವಾಸವಾಗಿರುತಿಪ್ಪದಾಸವರ್ಗವನೆ ಪೊರೆವನೆ ಕೋಲೆದಾಸ ವರ್ಗವನೆ ಪೊರೆವನೆ ನಮ್ಮ ಶ್ರೀವಾಸುದೇವನ್ನ ಬಲಗೊಂಬೆ ಕೋಲೆ 18 ಅದ್ವೈತ ಮಹಿಮನೆಸದ್ವೈಷ್ಣವರ ಪೊರೆವನೆ ಕೋಲೆಸದ್ವೈಷ್ಣವರ ಪೊರೆವನೆ ಅಜನಯ್ಯಪ್ರದ್ಯುಮ್ನ ಹರಿಯ ಬಲಗೊಂಬೆ ಕೋಲೆ 19 ಅನಿಮಿಷ ದೈತ್ಯರ ಮನಕೆ ಸಿಲುಕದಿಪ್ಪಸನಕಾದಿ ವಂದ್ಯ ಸಕಲೇಶ ಕೋಲೆಸನಕಾದಿ ವಂದ್ಯ ಸಕಲೇಶನಾಗಿಪ್ಪಅನಿರುದ್ಧ ಹರಿಯ ಬಲಗೊಂಬೆ ಕೋಲೆ 20 ಕ್ಷರಾಕ್ಷರದೊಳು ಪರಮೋತ್ತಮನಾದಕರಿರಾಜ ವರದ ಕವಿಗೇಯ ಕೋಲೆಕರಿರಾಜ ವರದ ಕವಿಗೇಯನಾದ ಶ್ರೀಪುರುಷೋತ್ತಮನ್ನ ಬಲಗೊಂಬೆ ಕೋಲೆ 21 ಅಕ್ಷಯ ಮೂರುತಿ ಮೋಕ್ಷದಾಯಕ ಸ್ವಾಮಿಕುಕ್ಷಿಯೋಳ್ ಜಗವ ರಕ್ಷಿಪ ಕೋಲೆಕುಕ್ಷಿಯೋಳ್ ಜಗವ ಪಾಲಿಪ ನಮ್ಮ ಅ-ದೋಕ್ಷಜ ಹರಿಯ ಬಲಗೊಂಬೆ ಕೋಲೆ 22 ಕ್ರೂರ ಖಳನುದರ ಸೀಳಿ ಪ್ರಹ್ಲಾದನಕಾರುಣ್ಯದಿಂದ ಕಾಯ್ದನ ಕೋಲೆಕಾರುಣ್ಯದಿಂದ ಕಾಯ್ದನ ನಮ್ಮ ಶ್ರೀನಾರಸಿಂಹನ್ನ ಬಲಗೊಂಬೆ ಕೋಲೆ 23 ಸಚ್ಚಿದಾನಂದನೆ ಸಕಲಗುಣ ಪರಿಪೂರ್ಣಮುಚುಕುಂದ ವರದ ಮುನಿನುತ ಕೋಲೆಮುಚುಕುಂದ ವರದ ಮುನಿನುತನಾದ ಶ್ರೀಅಚ್ಯುತನ ಮೊದಲೆ ಬಲಗೊಂಬೆ ಕೋಲೆ 24 ದುರ್ಧರ್ಷರಾಗಿದ್ದ ಖಳರ ಸಮುದಾಯವಮರ್ದನ ಮಾಡಿದ ಮಹಮಹಿಮ ಕೋಲೆಮರ್ದನ ಮಾಡಿದ ಮಹಮಹಿಮನಾದ ಜ-ನಾರ್ದನ್ನ ಮೊದಲೆ ಬಲಗೊಂಬೆ ಕೋಲೆ 25 ಇಂದ್ರಾನುಜನಾಗಿ ಸ್ವರ್ಗದೊಳಿರುತಿದ್ದುಸಾಂದ್ರ ಸುಖವೀವೆ ಸುರರಿಗೆ ಕೋಲೆಸಾಂದ್ರ ಸುಖವಿತ್ತು ಸುರರ ಪಾಲಿಸುವ ಉ-ಪೇಂದ್ರನ ಮೊದಲೆ ಬಲಗೊಂಬೆ ಕೋಲೆ 26 ಪರಮ ಭಕ್ತರ ಪಾಪ ಪರಿಹಾರವನೆ ಮಾಡಿಪರಮ ಪದವಿಯ ಪಾಲಿಪ ಕೋಲೆಪರಮ ಪದವಿಯ ಪಾಲಿಪ ನಮ್ಮ ಶ್ರೀ-ಹರಿಯ ಮೊದಲೆ ಬಲಗೊಂಬೆ ಕೋಲೆ 27 ಶಿಷ್ಟ ಪಾಲಕ ಉತ್ಕøಷ್ಟ ಜ್ಞಾನಾನಂದಕೃಷ್ಣೆಯ ಕಷ್ಟ ಬಿಡಿಸಿದ ಕೋಲೆಕೃಷ್ಣೆಯ ಕಷ್ಟ ಬಿಡಿಸಿದ ನಮ್ಮ ಶ್ರೀ-ಕೃಷ್ಣನ್ನ ಮೊದಲೆ ಬಲಗೊಂಬೆ ಕೋಲೆ 28 ಅನಿರುದ್ಧಾದಿ ರೂಪ ವಿಶ್ವಾದಿ ಅಜಿತಾದಿಸನತ್ಕುಮಾರಾದಿ ಅಜಾದಿ ಕೋಲೆಸನತ್ಕುಮಾರಾದಿ ಅಜಾದಿ ರೂಪನಾದಘನ ಮಹಿಮನ್ನ ಬಲಗೊಂಬೆ ಕೋಲೆ 29 ಹಯಗ್ರೀವ ದತ್ತ ಋಷಭ ಸಂಕರ್ಷಣಭಯರಹಿತ ಬಾದರಾಯಣ ಕೋಲೆಭಯರಹಿತ ಬಾದರಾಯಣ ಮಹಿದಾಸವಯಿಕುಂಠ ಹರಿಯ ಬಲಗೊಂಬೆ ಕೋಲೆ 30 ಆತ್ಮಾದಿ ವಾಸುದೇವಾದಿ ಮೂರುತಿಶ್ರೀ ತರುಣೇಶ ವಿಶ್ವೇಶ ಕೋಲೆಶ್ರೀ ತರುಣೇಶ ವಿಶ್ವೇಶ ರೂಪನಾದಜ್ಯೋತಿರ್ಮಯನ ಬಲಗೊಂಬೆ ಕೋಲೆ 31 ಮುನಿ ವೇದವ್ಯಾಸ ಸನತ್ಕುಮಾರ ಮೂರ್ತಿಮಿನಗುವ ದತ್ತಾತ್ರೇಯನೆ ಕೋಲೆಮಿನಗುವ ದತ್ತಾತ್ರೇಯ ಹಯಗ್ರೀವದನುಜಾಂತಕನ್ನ ಬಲಗೊಂಬೆ ಕೋಲೆ 32 ಕಂಗಳಾಪಾಂಗದಿಂ ಕಮಲಾಸನಾದಿಗಳಸಂಗಾತ ಸೃಷ್ಟಿಪ ಮಹಲಕ್ಷ್ಮೀ ಕೋಲೆಸಂಗಾತ ಸೃಷ್ಟಿಪ ಮಹಲಕ್ಷ್ಮೀ ನಿನ್ನ ಪಾ-ದಂಗಳಿಗೆರಗಿ ಬಲಗೊಂಬೆ ಕೋಲೆ 33 ಮಾಯಾ ಜಯಾಕೃತಿ ಶಾಂತಿ ಇಂದಿರಾದೇವಿಕಾಮನ ಜನನಿ ಜಯಂತಿ ಕೋಲೆಕಾಮನ ಜನನಿ ಜಯಂತಿ ಜಾನಕಿ ಸತ್ಯ-ಭಾಮಾ ರುಕ್ಮಿಣಿಯ ಬಲಗೊಂಬೆ ಕೋಲೆ 34 ಪರಮೇಷ್ಠಿ ಪರಮೇಷ್ಠಿ ನಿನ್ನ ಪದಪದುಮವ ಮುನ್ನ ಬಲಗೊಂಬೆ ಕೋಲೆ 35 ಹನುಮ ಭೀಮ ಮಧ್ವ ಮುನಿರಾಯ ಮಾರುತಿದನುಜಾರಿ ಭಕ್ತ ವಿರಕ್ತ ಕೋಲೆದನುಜಾರಿ ಭಕ್ತ ವಿರಕ್ತ ನಿನ್ನ ಪಾದವನಜವ ಮುನ್ನ ಬಲಗೊಂಬೆ ಕೋಲೆ 36 ವಾಣಿ ಅಜನ ಮುದ್ದು ರಾಣಿ ಪಲ್ಲವ ಪಾಣಿಜಾಣೆ ಕೊಡೆಮಗೆ ಮತಿಗಳ ಕೋಲೆಜಾಣೆ ಕೊಡೆಮಗೆ ಮತಿಗಳ ನಿನ್ನ ಪಾದರೇಣುವಿನ ಮುನ್ನ ಬಲಗೊಂಬೆ ಕೋಲೆ 37 ಭಾರತಿದೇವಿ ನಿನ್ನ ವಾರಿಜ ಚರಣವಬಾರಿ ಬಾರಿಗೆ ಭಜಿಸುವೆ ಕೋಲೆಬಾರಿ ಬಾರಿಗೆ ಭಜಿಸುವೆ ಎಮಗೆ ಶ್ರೀನಾರಾಯಣನಲ್ಲಿ ರತಿ ಕೊಡು ಕೋಲೆ 38 ಇಂದ್ರನ ಗೆದ್ದು ಸುಧೆ ತಂದು ಮಾತೆಯಬಂಧನ ಕಡಿದ ಬಲುಧೀರ ಕೋಲೆಬಂಧನ ಕಡಿದ ಬಲುಧೀರನಾದ ಖ-ಗೇಂದ್ರನ್ನ ಮುನ್ನ ಬಲಗೊಂಬೆ ಕೋಲೆ 39 ಸಾಸಿರ ಮುಖದಿಂದ ಶ್ರೀಶನ್ನ ತುತಿಸಿ ಶ್ರೀವಾಸುದೇವಂಗೆ ಹಾಸಿಕೆ ಕೋಲೆವಾಸುದೇವಂಗೆ ಹಾಸಿಕೆಯಾದ ಮಹ-ಶೇಷನ್ನ ಮುನ್ನ ಬಲಗೊಂಬೆ ಕೋಲೆ 40 ಅಪರಿಮಿತ ಕಾರ್ಯ ತ್ರಿಪುರ ದಹನನೆಚಪಲ ಮೂರುತಿ ಚಂದ್ರಚೂಡ ಕೋಲೆಚಪಲ ಮೂರುತಿ ಚಂದ್ರಚೂಡ ಭಜಕರಅಪಮೃತ್ಯು ಹರನ ಬಲಗೊಂಬೆ ಕೋಲೆ 41 ಖಗ ಶೇಷಶಂಭು ರಾಣಿಯರ ಬಲಗೊಂಬೆ ಕೋಲೆ 42 ಶಕ್ರ ಕಾಮಾದಿ ದೇವರ್ಕಳ ಚರಣಕ್ಕೆಅಕ್ಕರದಿಂದ ಅಭಿನಮಿಪೆ ಕೋಲೆಅಕ್ಕರದಿಂದ ಅಭಿನಮಿಸಿ ಪೇಳ್ವೆ ದೇ-ವಕ್ಕಿ ನಂದನನ ಚರಿತೆಯ ಕೋಲೆ 43 ಪದ್ಮನಾಭ ನರಹರಿತೀರ್ಥಶ್ರೀ ಮಾಧವಾರ್ಯ ಅಕ್ಷೋಭ್ಯ ಕೋಲೆಶ್ರೀ ಮಾಧವಾರ್ಯ ಅಕ್ಷೋಭ್ಯ ಜಯತೀರ್ಥಸ್ವಾಮಿಗಳ ಮೊದಲೆ ಬಲಗೊಂಬೆ ಕೋಲೆ 44 ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆನ್ಯಾಯ ಗ್ರಂಥಗಳ ರಚಿಸಿದ ಕೋಲೆನ್ಯಾಯ ಗ್ರಂಥಗಳ ರಚಿಸಿದ ನಮ್ಮ ವ್ಯಾಸ-ರಾಯರ ಮುನ್ನ ಬಲಗೊಂಬೆ ಕೋಲೆ 45 ಜನನಿ ಗರ್ಭದಿಂದವನಿ ಸ್ಪರ್ಶಿಸದೆಜನಿಸಿ ಬ್ರಹ್ಮಣ್ಯ ಮುನಿಗಳ ಕೋಲೆಜನಿಸಿ ಬ್ರಹ್ಮಣ್ಯ ಮುನಿಗಳ ಮೃದು ಹಸ್ತವನಜ ಸಂಭವನ ಬಲಗೊಂಬೆ ಕೋಲೆ 46 ಶ್ರೀಪಾದರಾಯರಲಿ ಸಕಲ ವಿದ್ಯವನೋದಿಶ್ರೀಪತಿ ಪ್ರೀತಿ ಪಡಿಸಿದ ಕೋಲೆಶ್ರೀಪತಿ ಪ್ರೀತಿ ಪಡಿಸಿದ ವ್ಯಾಸಮುನಿಭೂಪನ ಮೊದಲೆ ಬಲಗೊಂಬೆ ಕೋಲೆ 47 ದೇಶಾಧಿಪತಿಗೆ ಬಂದ ಕುಯೋಗವನೆ ನೂಕಿತಾ ಸಿಂಹಾಸನವೇರಿ ಮೆರೆದನೆ ಕೋಲೆತಾ ಸಿಂಹಾಸನವೇರಿ ಮೆರೆದನೆ ವ್ಯಾಸ ಮು-ನೀಶನ್ನ ಮೊದಲೆ ಬಲಗೊಂಬೆ ಕೋಲೆ 48 ದಂಡ ಕಮಂಡಲು ಧರ ಪಂಡಿತಾರಾಧಾರಕುಂಡಲಿಶಯನನ ಭಜಕರ ಕೋಲೆಕುಂಡಲಿ ಶಯನನ ಭಜಕ ರಾಘವೇಂದ್ರರಕೊಂಡಾಡಿ ಪದನ ಗುಣಿಸುವೆ ಕೋಲೆ 49 ತಂತ್ರ ಸಾರಗಳಿಗೆ ಅರ್ಥವನ್ನು ಸ್ವ-ತಂತ್ರದಿಂದಲಿ ರಚಿಸಿದ ಕೋಲೆ ಸ್ವ-ತಂತ್ರದಿಂದಲಿ ರಚಿಸಿದ ರಾಘವೇಂದ್ರರಪಂಥವಿದ್ದಲ್ಲಿ ಬಲಗೊಂಬೆ ಕೋಲೆ 50 ವೇದಶಾಸ್ತ್ರಾಮೃತ ಸಾರಬಲ್ಲ ರಾಮವೇದವ್ಯಾಸರ ಭಜಕರ ಕೋಲೆವೇದವ್ಯಾಸ ಭಜಕ ರಾಘವೇಂದ್ರರಪಾದವಿದ್ದಲ್ಲಿ ಬಲಗೊಂಬೆ ಕೋಲೆ 51 ತುಂಗಭದ್ರಾ ತೀರ ಮಂತ್ರಾಲಯದಲ್ಲಿಮಂಗಳ ಮಹಿಮರೆನಿಪರೆ ಕೋಲೆಮಂಗಳ ಮಹಿಮರೆನಿಪ ರಾಘವೇಂದ್ರ-ರಂಘ್ರಿ ಕಮಲವ ಬಲಗೊಂಬೆ ಕೋಲೆ 52 ಗುರು ರಾಘವೇಂದ್ರರ ಚರಣ ಪಂಕಜವನ್ನುಸ್ಥಿರ ಬುದ್ಧಿಯಿಂದ ಸ್ಮರಿಸುವೆ ಕೋಲೆಸ್ಥಿರ ಬುದ್ಧಿಯಿಂದ ಸ್ಮರಿಸಿ ನಾ ಪೇಳ್ವೆನುಸರಸಿಜಾಕ್ಷನ್ನ ಚರಿತೆಯ ಕೋಲೆ 53 ರಾಜರಾಜೇಶ್ವರ ಸತ್ಯಾಭಿನವ ತೀರ್ಥರಾಜಕರಾಬ್ಜ ಸಂಭೂತ ಕೋಲೆರಾಜಕರಾಬ್ಜ ಸಂಭೂತ ಸತ್ಯಾಧಿ-ರಾಜರ ಮೊದಲೆ ಬಲಗೊಂಬೆ ಕೋಲೆ 54 ಕ್ಷೀರನದಿಯ ತೀರ ವೇಲೂರ ಪುರವಾಸಸಾರ ಸಜ್ಜನರ ಪೊರೆವನೆ ಕೋಲೆಸಾರ ಸಜ್ಜನರ ಪೊರೆವ ಸತ್ಯಾಧಿರಾಜಧೀರ ಯತಿಗಳ ಬಲಗೊಂಬೆ ಕೋಲೆ 55 ಸತ್ಯಬೋಧರೆಂಬ ಸದ್ಗುರು ಚರಣವಚಿತ್ತದೊಳಿಟ್ಟು ಚರಿಸುವೆ ಕೋಲೆಚಿತ್ತದೊಳಿಟ್ಟು ಸ್ಮರಿಸಿ ನಾ ಪೇಳ್ವೆನುಚಿತ್ತದೊಲ್ಲಭನ ಚರಿತೆಯ ಕೋಲೆ 56 ಪುರಂದರ ರಾಯರಪರಮ ಕೃಪಾಪಾತ್ರ ವಿಜಯರಾಯ ಕೋಲೆಪರಮ ಕೃಪಾಪಾತ್ರ ವಿಜಯರಾಯರ ಪಾದಪರಮ ಭಕ್ತಿಯಲಿ ಸ್ಮರಿಸುವೆ ಕೋಲೆ 57 ದೇವ ನಾರಾಯಣ ಭೂದೇವಿ ಮೊರೆ ಕೇಳಿದೇವಕಿಯಲ್ಲಿ ಜನಿಸಿದ ಕೋಲೆದೇವಕಿಯಲ್ಲಿ ಜನಿಸಿ ಧಾರುಣಿದೇವಿ ಭಾರವನೆಲ್ಲನಿಳುಹಿದ ಕೋಲೆ 58 ಶಕಟ ಪೂತನಿ ವತ್ಸ ಬಕಧೇನುಕ ಕಂಸಮುಖಾದ್ಯರನ್ನು ಮಡುಹಿದ ಕೋಲೆಮುಖಾದ್ಯರನ್ನು ಮಡುಹಿ ವಸುದೇವ ದೇ-ವಕಿಯರ ಬಂಧನ ಬಿಡಿಸಿದ ಕೋಲೆ 59 ಹೆತ್ತ ತಾಯಿಯ ಮೊಲೆಯರ್ತಿಲಿ ನಲಿದುಂಡುಮತ್ತೆ ಬಾಲಲೀಲೆ ತೋರಿದ ಕೋಲೆಮತ್ತೆ ಬಾಲಲೀಲೆ ತೋರಿ ತೋಷವ ಪಡಿಸಿಮುತ್ಯಾಗೆ ಪಟ್ಟವ ಕಟ್ಟಿದ ಕೋಲೆ 60 ಜರೆಯ ಸುತನು ತಾನು ಜಗಳಕ್ಕೆ ಬಹನೆಂದುಕರೆಸಿದ ವಿಶ್ವಕರ್ಮನ್ನ ಕೋಲೆಕರೆಸಿದ ವಿಶ್ವಕರ್ಮನ್ನ ದ್ವಾರಕಪುರವ ನಿರ್ಮಿಸೆಂದಾಕ್ಷಣ ಕೋಲೆ 61 ದ್ವಾರಕಪುರದ ಶೃಂಗಾರ ವರ್ಣಿಸಲುಮೂರು ಕಣ್ಣವಗೆ ವಶವಲ್ಲ ಕೋಲೆಮೂರು ಕಣ್ಣವಗೆ ವಶವಲ್ಲ ನಾಲ್ಕಾರುಮೋರೆಯವರಿಗೆ ವಶವಲ್ಲ ಕೋಲೆ 62 ತಳಿರು ತೋರಣಗಳುಮೇರುವಿಗೆ ಪೊನ್ನ ಕಲಶವು ಕೋಲೆಮೇರುವಿಗೆ ಕಲಶ ಕನ್ನಡಿ ಮನೋ-ಹಾರವಾಗಿರುವುದು ಸಟೆಯಲ್ಲಿ ಕೋಲೆ 63 ಹದಿನಾರು ಸಾವಿರ ಚದುರೇರ ಮಂದಿರವುಮದನನಯ್ಯನ ಮನೆ ಮಧ್ಯ ಕೋಲೆಮದನನಯ್ಯನ ಮನೆ ಮಧ್ಯ ಪ್ರದೇಶಅದುಭುತವಾಗಿ ಬೆಳಗೋದು ಕೋಲೆ 64 ನಾರಿ ರುಕ್ಮಿಣಿ ಸತ್ಯಭಾಮೆದೇವಿ ಮತ್ತೆವಾರಿಜಮುಖಿಯರ್ ನಾಲ್ಕೆರಡು ಕೋಲೆವಾರಿಜಮುಖಿಯರ್ ನಾಲ್ಕೆರಡು ಸಹಿತಾಗಿವಾರಿಜನಾಭ ಕುಳಿತಿದ್ದ ಕೋಲೆ 65 ಶ್ರೀ ಭೂರಮಣನಾದ ಶ್ರೀಕೃಷ್ಣನರಮನೆಗೆಸುಭದ್ರೆ ಮುಯ್ಯ ತರುತಾಳೆ ಕೋಲೆಸುಭದ್ರೆ ಮುಯ್ಯ ತರುತಾಳೆ ಗಜಪುರಭೂ ಭುಜರೆಲ್ಲ ಬರುತಾರೆ ಕೋಲೆ 66 ಧರ್ಮ ಭೀಮಾರ್ಜುನ ನಕುಲ ಸಹದೇವರುಪೆರ್ಮೆಯಿಂದಲಿ ಪೊರವಂಟು ಕೋಲೆಪೆರ್ಮೆಯಿಂದಲಿ ಪೊರವಂಟು ದಿಕ್ಪಾಲರುಕೂರ್ಮೆಯಿಂದಲಿ ಬರತಾರೆ ಕೋಲೆ 67 ವಜ್ರ ಧರಿಸಿ ಉ-ಪೇಂದ್ರನರಮನೆಗೆ ಬರುತಾರೆ ಕೋಲೆ 68 ಸತಿ ಸ್ವಾಹಾದೇವಿಯ ಕೂಡಿಅತಿಶಯದಿಂ ಮೇಷವೇರುತ್ತ ಕೋಲೆಅತಿಶಯದಿಂ ಮೇಷವೇರಿ ಶಕ್ತಿಯ ಪಿಡಿದುಕ್ರ್ರತುಪತಿ ಮನೆಗೆ ಬರುತಾನೆ ಕೋಲೆ 69 ಯಮನು ಮಹಿಷವೇರಿ ಗಮನದಿಂದಲಿ ಸತಿಶಾಮಲಾದೇವಿ ಸಹಿತಲಿ ಕೋಲೆಶಾಮಲೆ ಸಹಿತ ದಂಡಾಯುಧ ಧರಿಸಿರಾಮನ ಮನೆಗೆ ಬರುತಾನೆ ಕೋಲೆ 70 ನಿರರುತಿ ತಾನೊಂದು ನರನ ಪೆಗಲನೇರಿಪರಮಾಪ್ತ ಸ್ತ್ರೀಯನೊಡಗೂಡಿ ಕೋಲೆಪರಮಾಪ್ತ ಸ್ತ್ರೀಯನೊಡನೆ ಕುಂತವ ಧರಿಸಿಧರಾಧರನ ಮನೆಗೆ ಬರುತಾನೆ ಕೋಲೆ 71 ವರುಣ ತಾನೊಂದು ಮಕರಿಯನೇರಿಕೊಂಡುಸಿರಿ ಭಾಗೀರಥಿಯನೊಡಗೊಂಡು ಕೋಲೆಸಿರಿ ಭಾಗೀರಥಿಯನೊಡನೆ ಪಾಶಧರಿಸಿಸಿರಿವತ್ಸನರಮನೆಗೆ ಬರುತಾನೆ ಕೋಲೆ 72 ಮರುತದೇವನೊಂದು ಎರಳೆಯನೇರಿತರುಣಿ ಪ್ರಾವಹಿಯೊಡಗೂಡಿ ಕೋಲೆ ತರುಣಿ ಪ್ರಾವಹಿಗೂಡಿ ಧ್ವಜ ಧರಿಸಿ ಶ್ರೀ-ಧರನ ಮನೆಗೇ ಬರುತಾನೆ ಕೋಲೆ 73 ವಿತ್ತಪತಿಯೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೂಡಿ ಕೋಲೆಚಿತ್ತದೊಲ್ಲಭೆಯ ಒಡನೆ ಖಡ್ಗ ಧರಿಸಿಕರ್ತನ್ನ ಮನೆಗೆ ಬರುತಾನೆ ಕೋಲೆ 74 ಈಶಾನ ತಾನೊಂದು ವೃಷಭವೇರಿಕೊಂಡುಶ್ರೀ ಸತಿದೇವಿಯೊಡಗೂಡಿ ಕೋಲೆಶ್ರೀ ಸತಿದೇವಿಯೊಡಗೂಡಿ ಶೂಲ ಧರಿಸಿ ನಾ-ರಸಿಂಹನ ಮನೆಗೆ ಬರುತಾನೆ ಕೋಲೆ 75 ಹರಿಯೇ ಸರ್ವೋತ್ತಮ ಹರಿಯೇ ಪರದೇವತೆಹರಿದಾಸರೆಂಬೋ ಬಿರುದಿನ ಕೋಲೆಹರಿದಾಸರೆಂಬೋ ಬಿರುದಿನ ಹೆಗ್ಗಾಳೆಹಿರಿ ಬಾಗಿಲೊಳು ಹಿಡಿಸಿಹರು ಕೋಲೆ 76 ಒಬ್ಬನೆ ವಿಷ್ಣುವಿನ್ನೊಬ್ಬ ದೈವಗಳಿಲ್ಲೆಂ-ದಬ್ಬರದಿಂದ ನಾಗಸ್ವರ ಕೋಲೆಅಬ್ಬರದಿಂದ ನಾಗಸ್ವರಂಗಳಹೆಬ್ಬಾಗಿಲೊಳಗೆ ನುಡಿಸೋರು ಕೋಲೆ 77 ಖಳನ ಬೆನ್ನ ಚರ್ಮ ಸುಲಿದು ಭೇರಿಗೆ ಹಾಕಿಅಲವ ಬೋಧರೆ ಜಗದ್ಗುರು ಕೋಲೆಅಲವ ಬೋಧರೆ ಜಗದ್ಗುರುಗಳೆಂತೆಂದುಛಲದಿಂದ ಭೇರಿಯ ಹೊಡಿಸೋರು ಕೋಲೆ 78 ವಿಷ್ಣು ಸರ್ವೋತ್ತಮ ವಿಷ್ಣು ಪರದೇವತೆವಿಷ್ಣುದಾಸರೆಂಬ ಬಿರುದಿನ ಕೋಲೆವಿಷ್ಣುದಾಸರೆಂಬ ಬಿರುದಿನ ಠೆಕ್ಕೆಯಘಟ್ಯಾಗಿ ಎತ್ತಿ ನಿಲಿಸೋರು ಕೋಲೆ 79 ಮತದೊಳು ಮಧ್ವಮತ ವ್ರತದೊಳು ಹರಿದಿನಕಥೆಯೊಳು ಭಾಗವತವೆನ್ನಿ ಕೋಲೆಕಥೆಯೊಳ್ ಭಾಗವತವೆನ್ನಿ ಇದರಂತೆಪ್ರತಿಮೆಯೊಳ್ ವಿಷ್ಣು ಪ್ರತಿಮೆನ್ನಿ ಕೋಲೆ 80 ಈಚಲ ಬನದೊಳು ಗೋ ಕ್ಷೀರ ಕುಡಿದಂತೆನೀಚರ ಸಂಗ ಸುಜನರು ಕೋಲೆನೀಚರ ಸಂಗ ಸುಜನರು ಮಾಡಲುಈಚೆ ನೋಡುವರಿಗೆ ಅನುಮಾನ ಕೋಲೆ 81 ಸೂರಿ ಜನರ ಸಂಗ ಸುಧೆಯ ಪ್ರಾಶನೆಯಂತೆಹೋರಣೆ ಗುಣವುಳ್ಳ ಅಧಮರ ಕೋಲೆಹೋರಣೆ ಗುಣವುಳ್ಳ ಅಧಮರ ಸಹವಾಸನೀರುಳ್ಳಿ ತಿಂದ ತೆರನಂತೆ ಕೋಲೆ 82 ಒಳ್ಳೆ ಮನುಜರ ಸಂಗ ಮಲ್ಲಿಗೆ ಮುಡಿದಂತೆಖುಲ್ಲ ಕುಮತಿಯ ಸಹವಾಸ ಕೋಲೆಖುಲ್ಲ ಕುಮತಿಯ ಸಹವಾಸ ಮಾಡಲುಮುಲ್ಲಂಗಿ ತಿಂದು ತೇಗಿದಂತೆ ಕೋಲೆ 83 ಭಾವಜ್ಞರ ಸಂಗ ಶ್ಯಾವಿಗಿ ಉಂಡಂತೆಭಾವವನರಿಯದ ಬಲುಹೀನ ಕೋಲೆಭಾವವನರಿಯದ ಬಲುಹೀನರ ಸಂಗಬೇವಿನಹಾಲ ಕುಡಿದಂತೆ ಕೋಲೆ 84 ಬಾಳುವರ ಸಂಗ ಹಾಲೋಗರುಂಡಂತೆಬಾಳುವೆಗೆಟ್ಟ ಅಧಮರ ಕೋಲೆಬಾಳುವೆಗೆಟ್ಟ ಅಧಮರ ಸಹವಾಸಹೇಳಬಾರದ್ದು ತಿಂದಂತೆ ಕೋಲೆ 85 ಹರಿಗುರು ದ್ರೋಹಿ ಮರಳಿ ಮಾತೃ ದ್ರೋಹಿವರ ವೈಷ್ಣವ ದ್ರೋಹಿ ಪಿತೃ ದ್ರೋಹಿ ಕೋಲೆವರ ವೈಷ್ಣವ ದ್ರೋಹಿ ಸ್ವಾಮಿ ದ್ರೋಹಿನೆರಳು ಬಿದ್ದವರ ನೆರೆಹೊಲ್ಲ ಕೋಲೆ 86 ಕತ್ತೆ ಕುದುರೆ ಒಂದೆ ಅತ್ತೆ ಸೊಸೆಯು ಒಂದೆಹೆತ್ತಮ್ಮ ಒಂದೆ ಹೆಂಡ್ತೊಂದೆ ಕೋಲೆಹೆತ್ತಮ್ಮ ಒಂದೆ ಹೆಂಡ್ತೊಂದಾದ ಮೇಲೆವ್ಯರ್ಥದ ಮದುವೆ ನಿನಗ್ಯಾಕೆ ಕೋಲೆ 87 ಅಕ್ಕ ತಂಗಿಯು ಒಂದೆ ಮಕ್ಕಳು ಸೊಸೆ ಒಂದೆಚಿಕ್ಕಮ್ಮ ಒಂದೆ ಹೆಂಡ್ತೊಂದೆ ಕೋಲೆಚಿಕ್ಕಮ್ಮ ಒಂದೆ ಹೆಂಡ್ತೊಂದಾದ ಮೇಲೆರೊಕ್ಕ ವೆಚ್ಚ ಮಾಡಿ ಮದುವ್ಯಾಕೆ ಕೋಲೆ 88 ಹಿಟ್ಟು ಬೂದಿ ಒಂದೆ ರೊಟ್ಟಿ ಮುಚ್ಚಳ ಒಂದೆಕಟ್ಟಿಗೆ ಒಂದೆ ಕಬ್ಬೊಂದೆ ಕೋಲೆಕಟ್ಟಿಗೆಯೊಂದೆ ಕಬ್ಬೊಂದಾದ ಮೇಲೆಕಟ್ಟಿಗೆ ಯಾಕೆ ಮೆಲುವೊಲ್ಲೆ ಕೋಲೆ 89 ಹಾಲು ಮಜ್ಜಿಗೆಯೊಂದೆ ಕೋಳಿ ಕೋಗಿಲೆಯೊಂದೆಮಾಳಿಗೆ ಒಂದೆ ಬಯಲೊಂದೆ ಕೋಲೆಮಾಳಿಗೆಯೊಂದೆ ಬಯಲು ಒಂದಾದರೆಹೇಳಬಾರದ್ದು ತಿನವಲ್ಯ ಕೋಲೆ 90 ಗಂಗೆಯ ತಡಿಯಲ್ಲಿ ಲಿಂಗವನರ್ಚಿಸಿಅಂಗೈಯಲಿಟ್ಟು ಪೂಜಿಸುವೆ ಕೋಲೆಅಂಗೈಯಲಿಟ್ಟು ಪೂಜಿಸುವೆ ಎಲೆ ಪಾಪಿಲಿಂಗನು ನೀನು ವಂದ್ಹ್ಯಾಗೆ ಕೋಲೆ 91 ಶಿವನು ನೀನಾದರೆ ಶಿವೆಯು ನಿನಗೇನುಅವಿವೇಕಿ ಮನುಜ ಈ ಮಾತು ಕೋಲೆಅವಿವೇಕಿ ಮನುಜ ಈ ಮಾತು ಕೇಳಿದರೆಕವಿಗಳು ನಗರೆ ಕೈ ಹೊಯ್ದು ಕೋಲೆ 92 ವೇದ ಪ್ರಾಮಾಣ್ಯಂದು ಸುಜನರಿಗೆಲ್ಲಬೋಧಿಸುತಿಪ್ಪ ಬೌದ್ಧನ ಕೋಲೆಬೋಧಿಸುತಿಪ್ಪ ಬೌದ್ಧನ ಎಳೆದೊಯ್ದುಕಾದೆಣ್ಣೆಯೊಳು ಕೆಡುಹೋರು ಕೋಲೆ 93 ಇಲ್ಲಿ ಮಾತ್ರ ಭೇದ ಅಲ್ಲಿಯೊಂದೆ ಎಂಬಕ್ಷುಲ್ಲಕರ ಹಿಡಿದು ಹಲ್ಮುರಿದು ಕೋಲೆಕ್ಷುಲ್ಲಕರ ಹಿಡಿದು ಹಲ್ಮುರಿದು ಯಮರಾಯಕಲ್ಲುಗಾಣಕ್ಕೆ ಹಾಕಿಸುವ ಕೋಲೆ 94 ಅಪ್ಪ ನಾರಾಯಣನಿಪ್ಪಂಥ ಅರಮನೆಅಪ್ರಾಕೃತದ ವೈಕುಂಠ ಕೋಲೆಅಪ್ರಾಕೃತದ ವೈಕುಂಠವೆಂಬೋದುಸ್ವ ಪ್ರಕಾಶದ ಪರಮಾತ್ಮ ಕೋಲೆ 95 ಸುತ್ತ ವಿರಜಾನದಿ ಮತ್ತೆ ಆನಂದ್ವನಚಿತ್ತಜನೈಯ್ಯನರಮನೆಗೆ ಕೋಲೆಚಿತ್ತಜನೈಯ್ಯನರಮನೆ ಎಂಬುದುಉತ್ತಮೋತ್ತಮ ವೈಕುಂಠ ಕೋಲೆ 96 ನೀಲ ವೈಢೂರ್ಯ ನಿಚ್ಚಳ ವಜ್ರಅಚ್ಚ ಮಾಣಿಕ್ಯದ ಅಳವಟ್ಟು ಕೋಲೆಅಚ್ಚ ಮಾಣಿಕ್ಯದ ಅಳವಟ್ಟು ಹರಿಪುರಅಚ್ಯುತನಿಪ್ಪ ಅರವನೆ ಕೋಲೆ 97 ಸಿರಿಯು ತಾ ಮುರಹರನ ಪಟ್ಟಣದಲ್ಲಿವಿರಜೆಯೆಂತೆಂದು ಕರೆಸೋಳು ಕೋಲೆವಿರಜೆಯೆಂತೆಂದು ಕರೆಸಿ ವೈಕುಂಠಕ್ಕೆಪರಿಖಾ ರೂಪದಲ್ಲಿ ಮೆರೆವಳು ಕೋಲೆ 98 ಉತ್ತರದಿ ನಾಲ್ಕು ತತ್ಥಳಿಸುವ ದ್ವಾರಮುತ್ತು ಮಾಣಿಕ್ಯ ನವರತ್ನ ಕೋಲೆಮುತ್ತು ಮಾಣಿಕ್ಯ ನವರತ್ನ ಝಲ್ಲಿಯಎತ್ತಿ ಮೇಲ್ಕಟ್ಟು ಬಿಗಿದಿದೆ ಕೋಲೆ 99 ಜಯ ವಿಜಯಾದ್ಯೆಂಟು ದ್ವಾರಪಾಲಕರುಜಯದೇವಿ ರಮಣನರಮನೆಗೆ ಕೋಲೆಜಯದೇವಿ ರಮಣನರಮನೆ ಬಾಗಿಲೊಳ್‍ಜಯ ಜಯವೆನುತ ನಿಂದಾರೆ ಕೋಲೆ 100 ಕಸವೆಲ್ಲ ಪರಿಮಳ ಕೆಸರೆಲ್ಲ ಶ್ರೀಗಂಧಬಿಸರುಹ ನೇತ್ರನ ಅರಮನೆ ಕೋಲೆಬಿಸರುಹ ನೇತ್ರನ ಅರಮನೆಯೊಳಗೆಲ್ಲಕುಸುಮದ ಮಳೆಯು ಗರೆವುದು ಕೋಲೆ 101 ಕಾಜಿನ ನೆಲೆಗಟ್ಟು ರಾಜ ಮಾಣಿಕ ಗೋಡೆಈ ಜಡ ದ್ರವ್ಯವಲ್ಲಿಲ್ಲ ಕೋಲೆಈ ಜಡ ದ್ರವ್ಯವಲ್ಲಿಲ್ಲ ಪುಸಿಯಲ್ಲಶ್ರೀ ಜನಾರ್ದನನರಮನೆಯೊಳ್ ಕೋಲೆ 102
--------------
ಮೋಹನದಾಸರು
ಸಾಧು ಸಂತರಾಶ್ರಯ ಮಾಡಿ | ಇದೇ ಮಾಡಿ ಹಿತ ನೋಡಿ ಪ ಅವರ ವಚನಕಾಗಿ ಅಗೋಚರನಾದಾ | ದೇವ ಬಹನು ಒಡಮೂಡಿ 1 ಎಡಬಲದಲಿ ರಿದ್ದಿ ಶಿದ್ಧಿ ನಿಂದಿರಲು | ನೋಡಲು ನುಡಿಸರು ಕೂಡೀ 2 ಮಹಿಪತಿ ನಂದನು ಸಾರಿದ ನಿಜವಾ | ಇಹಪರ ಸುಖವ ಸೂರ್ಯಾಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು