ಒಟ್ಟು 23 ಕಡೆಗಳಲ್ಲಿ , 16 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೇಷಪ್ರಭುಗಳ ರಚನೆಗಳು ಪಾಲಿಸು ಶ್ರೀಹರಿಯೇ | ಸದ್ಗುಣ | ಶೀಲ ಭಾಗ್ಯನಿಧಿಯೇ | ಶ್ರೀಲಲಾಮ ಶೇಷಾಚಲಾಧೀಶ ಶ್ರೀಲೋಲ ಬಾಲಭಾಸ್ಕರ ಸಂಕಾಶನೆ ಪ ಕಂಡವರಿಗೆರಗಿ ದೈನ್ಯವ | ಗೊಂಡೆ ಖಿನ್ನನಾಗಿ ಭಂಡನಾಗಿ ಬಳಲಿಸಿ ಬಹು ಕಾಯವ ದಂಡಿಸಿದೆನು ರಕ್ಷಿಸೋ ಶ್ರೀಹರಿಯೇ 1 ಯಾರಿಗೆ ದೂರುವೆನು ಭಕ್ತೋ | ದ್ಧಾರನಲ್ಲವೆ ನೀನು | ಘೋರದುರಿತ ದಾರಿದ್ರ್ಯದ ವ್ಯಥೆಯ ಇ- ನ್ಯಾರಿಗೊರೆವೆ ಅದನ್ಯಾರು ಕಾವರೈ 2 ಏನಪರಾಧವ | ಗೈದೆ ನಾ -ನೇನು ಪಾಪಾತುಮನೋ | ಈಸಪರಾಧವನೆಣಿಸದೆ | ಎನ್ನಯ | ಕ್ಲೇಶವ ಪರಿಹರಿಸೋ ದಯಾನಿಧೇ 3 ಪರ ಪುರುಷೋತ್ತಮ | ಪರಂಜ್ಯೋತಿ ಪರಬ್ರಹ್ಮಸ್ವರೂಪನೆ 4 ಗಮನ ಮಾಧವ ಕರುಣಾ-| ಪಾಂಗರಂಗ ಮಂಗಲಾಂಗ ರಕ್ಷಿಸು 5
--------------
ಅನ್ಯದಾಸರು
(ಬಾಗಿಲು ತಡೆ) ಸಾರಸ ನಿಲಯೆ ಸಾಗರ ತನಯೆ ಸಾರೆ ಬಂದೆನು ಈಗ ಬೇಗ ಸಾರಿ ಬಾಗಿಲ ತೆಗೆ ಬೇಗ ಪ. ಸಾರು ಸಾರೆಲೊ ಸಾರಿಕೂಗುವನಾರೊ ಸಾರು ಬಾಗಿಲ ತೆಗೆ ನಾನು ಅ.ಪ. ಏಕಿಂತು ಕೋಪವೆ ಕೋಕಿಲಾರವೆ ನೀಂ ಕಟಾಕ್ಷಿಸು ಎನ್ನ ಮುನ ಸಾಕುಮಾಡುವುದಿದೆನ್ನ 1 ಸಾಕು ಸಾಕಿಂತು ಏಕೆ ಕೂಗುತಿರ್ಪೆ ಕಾಕು ನುಡಿಗಳುಸಲ್ಲ 2 ಪುಂಡರ ತಡೆವುದ ಕಂಡುಂಟು ಜಗದೊಳು ಗಂಡನ ತಡೆವರೆ ಭಾಮೆ ರಾಮೆ ಕಂಡವರೇನೆಂಬರೆ ಭಾಮೆ 3 ಗಂಡನಾರಿಗೆ ಹೆಂಡತಿಯಾರಿಗೆ ಪುಂಡಾಟವಾಡದೆ ಪೋಗು ಸಾಗು ಭಂಡನಾಗಿರ್ಪೆ ಪೋಗು 4 ವಲ್ಲಭೆ ನಿನ್ನೆದೆ ಕಲ್ಲಾಗಿರುವುದೆ ಬಲ್ಲವಳೆಂಬುವುದೆಲ್ಲೆ 5 ಬಲ್ಲೆ ಬಲ್ಲೆನೀ ಚಲ್ಲಾಟಗಳ ಸೊಲ್ಲಿಸದಾರನ್ನು 6 ದಶರಥರಾಮನೆ ಸೀತೆ ಖ್ಯಾತೆ ಪುಸಿಯಲ್ಲವೆಲೆ ಭೀತೆ 7 ನಿಶಿಚರರಿಲ್ಲಿಹರೇನೈ ಜ್ಞಾನಿ ವಿಷಮವರ್ತನವೇನೈ 8 ಅಂಗನೆ ನಿನ್ನ ಮೋಹನಾಂಗನಾದ ಶ್ರೀ ರಂಗ ನಾನೆಲೆ ಚಪ ಲಾಕ್ಷಿ ಲಕ್ಷ್ಮಿ | ಭಂಗಿಸಬೇಡೆನ್ನ ಲಕ್ಷ್ಮಿ 9 ತುಂಗ ವಿಕ್ರಮ ರಘು ರಾಮ ಶ್ಯಾಮ ರಂಗ ಕಾರುಣ್ಯಧಾಮ 10 ಪರಿ ಪೇಳುತೆ ಕೈಪಿಡಿದಳು ತ ನ್ನೋಪನ ವಂದಿಸಿ ರಾಣಿ ರಮಣಿ ಕೋಪರಹಿತೆ ಸುವಾಣಿ 11 ಭೂಪಶೇಷಾದ್ರೀಶನು ಕಾಂತೆಯ ಕೈಪಿಡಿದನು ನಲವೇರೆ ಅರರೆ ತಾಪಸನುತ ನಲವೇರೆ 12
--------------
ನಂಜನಗೂಡು ತಿರುಮಲಾಂಬಾ
ಅಧಮನಲ್ಲವೆ ಅವನು ಅಧಮನಲ್ಲವೆ | ಯದುಪತಿಯ ಭಜಿಸಿ ಸದಾ | ಬದುಕದಿದ್ದ ನರಜನ್ಮ ಪ ಕರವ ಮುಗಿದು ಜಿಹ್ವೆಯಲ್ಲಿ | ಹರಿ ಹರಿ ಎಂದು ಸ್ಮರಣೆ ಮಾಡಿ | ಹರುಷವಾಗದಿದ್ದ ನರನು 1 ಕುಡತಿ ಜಲವ ಕೊಂಡು ರವಿಗೆ | ಕಡಿಯದಘ್ರ್ಯವೆರೆದು ಪುಣ್ಯ | ಪಡೆಯದಿದ್ದ ಹೀನ ನರನು 2 ಹಾದಿ ಹಿಡಿತು ಬರುತ ಸುಮ್ಮನಾದರನ್ನ | ಇರದೆ ವೇಣು | ನಾದ ಕೃಷ್ಣ ಕೃಷ್ಣಯೆಂದೂ | ಓದಿಕೊಳುತ ಬಾರದವನು 3 ಕಲಶ ತುಂಬಿದ ನೀರು ತಂದು ಕುಳಿತು ಘಳಿಗೆ | ಕೊಳದ ಯಿದ್ದ ಹೀನ ನರನು 4 ಪೊಡವಿಯರಸ ಕೇಶವನ್ನ | ಅಡಿಗೆ ಏರಿಸಿ ನಗುತ ತನ್ನ | ಮುಡಿಯಲಿಟ್ಟುಕೊಳದ ನರನು |5 ಸಿರಿ | ವಿಠ್ಠಲನ ಮುಂದೆ ತಂದು | ಇಟ್ಟು ಅರ್ಪಿತವೆಂದು ಸುಖ | ಬಟ್ಟು ಉಣದ ಮಂಕು ನರನು6 ಉಂಡು ತಿಂದು ತೇಗಿಕೊಳುತ | ತಂಡ ತಂಡದ ವಿಷಯದಲ್ಲಿ | ಭಂಡನಾಗಿ ನಮ್ಮ ಕೃಷ್ಣ ಭಂಡನೆಂದೂ ಅನದ ನರನು 7 ಊರು ಕೇರಿಗೆ ಪೋಗುವಾಗ | ಭಾರಪೊತ್ತು ತಿರುಗುವಾಗ | ಕಂಸಾರಿ ಎನದ ಹೀನ ನರನು 8 ಮಂತ್ರವಿಲ್ಲ ತಂತ್ರವಿಲ್ಲ | ಕಂತುಪಿತನ ಮುಂದೆ ನಿಂತು | ಸಂತರ್ಪಣೆ ಎಂದು ಮನದಿ | ಚಿಂತೆ ಮಾಡದಿದ್ದ ನರನು 9 ಮಲಗಿ ನಿದ್ರೆಗೊಳುತರೊಮ್ಮೆ | ಕಳವಳಿಸಿ ಭೀತಿಯಲಿ | ತಳಮಳವಗೊಂಡು ಹರಿಯ | ಜಲಜಪಾದ ನೆನೆಯದವನು 10 ಎಲ್ಲ ಬಿಟ್ಟು ವಿಜಯವಿಠ್ಠಲ ವೆಂಕಟನೆ ದೈವ | ಸೊಲ್ಲು ಪೇಳಿ ಬಾಳದವನು 11
--------------
ವಿಜಯದಾಸ
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ
ದ್ಯಾವಿ ನಮ್ಮ ದ್ಯಾವರು ಬಂದರು ಬನ್ನೀರೆ, ನೋಡ ಬನ್ನಿರೆ ಪ ಕೆಂಗಣ್ಣ ಮೀನನಾಗಿ ನಮ ರಂಗಗುಂಗಾಡು ಸೋಮನ ಕೊಂದಾನ್ಮ್ಯಾಗುಂಗಾಡು ಸೋಮನ ಕೊಂದು ವೇದವನುಬಂಗಾರದೊಡಲನಿಗಿತ್ತಾನ್ಮ್ಯಾ1 ದೊಡ್ಡ ಮಡುವಿನೊಳಗೆ ನಮ ರಂಗಗುಡ್ಡವ ಹೊತ್ಕೊಂಡು ನಿಂತಾನ್ಮ್ಯಾಗುಡ್ಡವ ಹೊತ್ಕೊಂಡು ನಿಂತು ಸುರರನುದೊಡ್ಡವರನ್ನ ಮಾಡ್ಯಾನ್ಮ್ಯಾ 2 ಚೆನ್ನ ಕಾಡಿನ ಹಂದಿಯಾಗಿ ನಮ ರಂಗಚಿನ್ನದ ಕಣ್ಣನ ಕೊಂದಾನ್ಮ್ಯಾಚಿನ್ನದ ಕಣ್ಣನ ಕೊಂದು ಭೂಮಿಯವನಜಸಂಭವಗಿತ್ತಾನ್ಮ್ಯಾ 3 ಸಿಟ್ಟಿಂದ ಸಿಂಹನಾಗಿ ನಮ ರಂಗಹೊಟ್ಟೆಯ ಕರುಳ ಬಗೆದಾನ್ಮ್ಯಾಹೊಟ್ಟೆಯ ಕರುಳ ಹಾರವ ಮಾಡಿ ಪುಟ್ಟಗೆ ವರವ ಕೊಟ್ಟಾನ್ಮ್ಯಾ4 ಹುಡುಗ ಹಾರುವನಾಗಿ ನಮ ರಂಗಬೆಡಗಲಿ ಮುಗಿಲಿಗೆ ಬೆಳೆದಾನ್ಮ್ಯಾಬೆಡಗಲಿ ಮುಗಿಲಿಗೆ ಬೆಳೆದು ಬಲಿಯನ್ನಅಡಿಯಿಂದ ಪಾತಾಳಕೊತ್ತ್ಯಾನ್ಮ್ಯಾ 5 ತಾಯ ಮಾತನು ಕೇಳಿ ಸಾಸಿರ ತೋಳಿನಆವಿನ ಕಳ್ಳನ ಕೊಂದಾನ್ಮ್ಯಾಆವಿನ ಕಳ್ಳನ ಕೊಂದು ಭೂಮಿಯಅವನಿಸುರರಿಗೆ ಇತ್ತಾನ್ಮ್ಯಾ 6 ಪಿಂಗಳ ಕಣ್ಣಿನ ಕೊಂಗಗಳ ಕೂಡಿಛಂಗನೆ ಲಂಕೆಗೆ ಪೋದಾನ್ಮ್ಯಾಛಂಗನೆ ಲಂಕೆಗೆ ಪೋಗಿ ನಮ ರಂಗಹೆಂಗಸುಗಳ್ಳನ ಕೊಂದಾನ್ಮ್ಯಾ7 ಕರಿಯ ಹೊಳೆಯ ಬಳಿ ತುರುಗಳ ಕಾಯುತಉರಗನ ಮಡುವ ಧುಮುಕ್ಯಾನ್ಮ್ಯಾಉರಗನ ಹೆಡೆ ಮೇಲೆ ಹಾರ್ಹಾರಿ ಕುಣಿವಾಗವರವ ನಾರೇರ್ಗೆ ಕೊಟ್ಟಾನ್ಮ್ಯಾ 8 ಭಂಡನಂದದಿ ಕುಂಡೆಯ ಬಿಟುಗೊಂಡುಕಂಡ ಕಂಡಲ್ಲಿಗೆ ತಿರುಗ್ಯಾನ್ಮ್ಯಾಕಂಡ ಕಂಡಲ್ಲಿಗೆ ತಿರುಗಿ ತ್ರಿಪುರರಹೆಂಡಿರನೆಲ್ಲ ಕೆಡಿಸ್ಯಾನ್ಮ್ಯಾ 9 ಚೆಲುವ ಹೆಂಡತಿಯ ಕುದುರೆಯ ಮಾಡಿಒಳ್ಳೆ ರಾಹುತನಾದಾನ್ಮ್ಯಾಒಳ್ಳೆ ರಾಹುತನಾಗಿ ಮ್ಲೇಚ್ಛರಡೊಳ್ಳು ಹೊಟ್ಟೆಯ ಮ್ಯಾಲೊದ್ದಾನ್ಮ್ಯಾ 10 ಡೊಳ್ಳಿನ ಮ್ಯಾಲ್ ಕೈ ಭರಮಪ್ಪ ಹಾಕ್ಯಾನುತಾಳವ ಶಿವನಪ್ಪ ತಟ್ಟಾನ್ಮ್ಯಾಒಳ್ಳೊಳ್ಳೆ ಪದಗಳ ಹನುಮಪ್ಪ ಹಾಡ್ಯಾನುಚೆಲುವ ಕನಕಪ್ಪ ಕುಣಿದಾನ್ಮ್ಯಾ11
--------------
ಕನಕದಾಸ
ನಿನಗೆ ಅಂಜುವಳಲ್ಲೋ ಮುರಾರೆ ಮಧುರಿಪು ಪ ಮಲ್ಲರ ಗೆಲಿದಿಹ ಗೊಲ್ಲ ಗೋಪಾಲ ಬಾ ಪರಿಪಾಲಿಸು ಅ.ಪ. ಮಾನವ ಮಡುಹಿದ ಮಲ್ಲನ ಕಂಡು ಅಂಜುವಳೆ ರಂಗ ನಾ ಅಂಜುವಳೇ 1 ಥಂಡ ಥಂಡದಾ ಬಲು ಭಂಡ ಮಾತಾಡುವ ಪುಂಡನಿಗೆ ನಾ ಅಂಜುವಳೇ ಪುಂಡ ಜರಾಸಂಧನಿಗಂಜಿ ನಗೇಂದ್ರನ ಭಂಡಿ ಪೊಡೆದ ಈ ಭಂಡನಿಗೇ ರಂಗಾ ನಾ ಅಂಜುವೆನೇ 2 ಹಿಂಡು ಜೀವರಾ ನಾ ಅಂಬುಜದೊಳಿಟ್ಟು ಸಲಹುವತೊಂಬನಿಗೆ ನಾ ಅಂಜುವಳೇ ಪುಂಡ ಖಳರ ಚಂಡಾಡುವತಂದೆವರದಗೋಪಾಲವಿಠ್ಠಲ ರಂಗಾ 3
--------------
ತಂದೆವರದಗೋಪಾಲವಿಠಲರು
ಬಂಡು ಮಾಡುವರಲ್ಲೊ ರಂಗೈಯ್ಯ ಪ ಮಡುವ ಪೊಕ್ಕೆನುಯೆಂದು ಮಡದೇರೆಲ್ಲರು ಕೂಡಿ ಬಿಡುಗಂಣನಿವನೆಂಬರೋ ರಂಗೈಯ್ಯಾ 1 ಗುಡ್ಡ ಹೊತ್ತನು ಎಂದು ಸಡ್ಡೆನು ಮಾಡದೆ ನಿನ್ನ ದೊಡ್ಡ ದೆವ್ವಯೆಂಬರೊ ರಂಗೈಯ್ಯಾ 2 ಧರಣಿ ಎತ್ತಿದೆ ಎಂದು ಪರಿಹಾಸ ಮಾಡುತ ಕೋರೆದಾಡಿಯನೆಂಬರೊ ರಂಗೈಯ್ಯಾ 3 ತರಳನ ಸಲಹಲು ಸಿರಿಗೆ ಪೇಳದೆ ಬಂದ ಉರಿಮೋರೆಯವನೆಂಬರೊ ರಂಗೈಯ್ಯಾ 4 ಕೃಪೆಯ ಮಾಡದೆ ಬಲಿಯ ತಪಭಂಗ ಮಾಡಿದ ಕಪಟ ತಿರುಕನೆಂಬರೊ ರಂಗೈಯ್ಯಾ 5 ಪಿತನ ಮಾತನು ಕೇಳಿ ಮಾತೃಹತ್ಯವಗೈದ ಪತಿತ ಹಾರುವನೆಂಬರೊ ರಂಗೈಯ್ಯಾ 6 ಸತಿಯ ರಕ್ಕಸನೊಯ್ಯೆ ಅತಿಶೋಕ ಪೊಂದಿದ ಹತಭಾಗ್ಯನಿವನೆಂಬರೊ ರಂಗೈಯ್ಯಾ 7 ನೆರೆಹೊರೆ ಹೆಂಗಳ ಸುರತದಿ ಕೂಡಿದ ಜಾರ ಚೋರನು ಎಂಬರೊ ರಂಗೈಯ್ಯಾ 8 ಬಟ್ಟೆಯಿಲ್ಲದೆ ಪೋಗಿ ನೆಟ್ಟನೆ ನಿಂತಿರ್ದ ಕೆಟ್ಟಾ ಭಂಡನಿವನೆಂಬರೊ ರಂಗೈಯ್ಯಾ 9 ಅಷ್ಟಾ ಭಾಗ್ಯವ ನೀಗಿ ಕಷ್ಟಕ್ಕೆ ಗುರಿಯಾದ ದುಷ್ಟ ರಾಹುತನೆಂಬರೊ ರಂಗೈಯ್ಯಾ 10 ಕಂದಾ ನೀ ನಿರ್ದೋಷ ರಂಗೇಶವಿಠಲ ನೆಂದು ತಿಳಿದು ದೂರುವರೊ ರಂಗೈಯ್ಯಾ 11
--------------
ರಂಗೇಶವಿಠಲದಾಸರು
ಬಂದದ್ದನುಭವ ಮಾಡ್ವೆ ಕಂದನಾಗಿರುವೆ ತಂದೆ ನಿನ್ನಯ ದಯವೊಂದಿರಲಿ ಹರಿಯೆ ಪ ಮಂದಿ ಮಕ್ಕಳು ಎನ್ನ ಕುಂದಿಟ್ಟು ಜರೆಯಲಿ ಬಂಧು ಬಾಂಧವರೆಲ್ಲ ನಿಂದಿಸಿ ನುಡಿಲಿ ಬಂಧನವು ಬಿಡರಿರಲಿ ಎಂದೆಂದು ಮರೆಯದಂತೆ ಇಂದಿರೇಶ ನಿಮ್ಮ ಧ್ಯಾನವೊಂದೇ ಎನಗಿರಲಿ 1 ಭೂಪತಿಗಳೆನ್ನೊಳ್ಕೋಪಮಂ ತಾಳಲಿ ತಾಪಬಡಿಸಲಿ ಮಹಪಾಪಿವನೆನುತ ತಾಪತ್ರಯ ಬಿಡದಿರಲಿ ಪಾಪಲೋಪನೆ ಜಗ ದ್ಯ್ಯಾಪಕನೆ ನಿನ್ನ ಧ್ಯಾಸಪರೂಪ ಎನಗಿರಲಿ 2 ಕಂಡಕಂಡಂತೆ ಜನರು ಭಂಡನೆಂದೆನ್ನಲಿ ತಂಡತಂಡದಿ ಕಷ್ಟ ಅಂಡಲೆದು ಬರಲಿ ಹೆಂಡರು ಸೇರದೆ ಗಂಡನೆಲ್ಲೆಂದೆನಲಿ ಪಂಢರೀಶ ನಿನ್ನ ಪದೆನ್ನ ಮಂಡೆಮೇಲಿರಲಿ 3 ಎತ್ತ ಪೋದರು ಜನರು ಹತ್ರ ಬಡಿಯಲಿ ಎನಗೆ ವಿತ್ತಕೊಟ್ಟೊಡೆಯರು ನಿತ್ತರಿಸದೊದಿಲಿ ಮುತ್ತಿಕೊಂಡ್ವೈರಿಗಳು ಕುತ್ತಿಗೆ ಕೊಯ್ಯಲಿ ಚಿತ್ತಜಪಿತನಿನ್ನ ಭಕ್ತ್ಯೊಂದೆನಗಿರಲಿ 4 ಪೀಡಿಸಲಿ ಬಡತನವು ಕಾಡಿಸಲಿ ದಾರಿದ್ರ್ಯ ಓಡಿಸಲಿ ಪೊಡವಿಪರು ನಾಡ ಬಿಟ್ಟೆನ್ನ ನೋಡಲಿ ಮುನಿದೆನ್ನ ನಾಡದೈವಗಳೆಲ್ಲ ಬೇಡೆನೆ ಶ್ರೀರಾಮ ನಿನ್ನಡಿ ಬಲೊಂದೆನಗಿರಲಿ5
--------------
ರಾಮದಾಸರು
ಬಲುದೊಡ್ಡವನೇನೆಪ ಅಕ್ಕಕÉೀಳುವರೇನೆ ಅ.ಪ ಕೃಷ್ಣಸರಸಿಜೋದ್ಭವಗಿತ್ತನೆ ಗಾರುಡಿವಿದ್ಯವೆ 1 ಕೃಷ್ಣಸುರರಿಗೆ ಹಂಚಿಚನೆ ಅಂಗನೆಯಾಗಿ ಹೀಂಗೆ ಮಾಡೋದು ವಂಚನೆಯಲ್ಲವೆ ಇದು ವಂಚನೆಯಲ್ಲವೆ 2 ಭೂಮಿಯನೆತ್ತಿದನೆ ಇದುಮೋಸದ ವಿದ್ಯವೆ 3 ಕೃಷ್ಣನು ನರಹರಿ ಆದನೆ ಇದು ಘೋರಕೃತ್ಯವೆ 4 ಕೃಷ್ಣ ಇಂದ್ರನ ಸಲಹಿದನೆ ಇದು ಯಾತರೆ ನ್ಯಾಯವೆ 5 ಕೃಷ್ಣ ಭೂಪರ ತರಿದನೆ ಅವನು ಘಾತುಕನಲ್ಲವೆ 6 ಕೃಷ್ಣ ಅಡವಿಯೊಳ್ ಚರಿಸಿದನೆ ಒಡೆಂiÀiರ ಲಕ್ಷಣವೆ 7 ಕೃಷ್ಣಗೋಪೆರ ಕೂಡಿದನೆ ಪಾಪವಲ್ಲವೆ 8 ಕೃಷ್ಣ ದೈತ್ಯರ ನಳಿಸಿದನೆ ಭಂಡನಲ್ಲವೇ 9 ಕೃಷ್ಣ ಧರ್ಮವನುಳುಹುವನೆ ಅಕ್ಕ ಕೋಪ ಬೇಡವೇ 10 ಕೃಷ್ಣವಿಠಲನೆ ಅವನು ಶ್ರೀ ಕೃಷ್ಣವಿಠಲನೆ ಅತನು ಶ್ರೀಕೃಷ್ಣವಿಠಲನು ಅವನಾದರೆ ಜೀಯನೆ ಅವನೆಮಗೆ ಅಕ್ಕ ಜೀಯನೆ ಅವನೆಮಗೆ11
--------------
ಕೃಷ್ಣವಿಠಲದಾಸರು
ಬೇಡಿಕೆಗೆ ಮಿತಿಯಿಲ್ಲ ಬೇಡಿಕೆಗೆ ಕೊನೆಯಿಲ್ಲ ಬೇಡಿ ಬದುಕುವುದೊಂದು ರೋಗವಯ್ಯ ಪ ರೂಢಿಗೊಡೆಯನ ದಿವ್ಯನಾಮಗಳ ಕೊಂಡಾಡಿ ಹಾಡುವವಗೆ ರೋಗಭಯವಿಲ್ಲವಯ್ಯಾ ಅ.ಪ ಬೇಡುವವ ಮನೆಮನೆಗೆ ಓಡೋಡಿ ನಿಲಬೇಕು ನಾಡಿಗರ ನೋಡಿ ಕೈ ನೀಡಬೇಕು ನೋಡಿದರೆ ಕಟ್ಟಾಳು ಬೇಡುವೆ ಹೋಗತ್ತ ದುಡಿ ಗೇಡಿ ಎಂದಾಗ ಗೋಳಾಡಲೇಕಯ್ಯ 1 ಕಂಡ ಕಂಡವರಿಗೆಲ್ಲ ಕೈಮುಗಿದು ಮಂಡೆಯ ಬಾಗಿ ಭಂಡನೆಂದೆನಿಸುವುದು ಮಾನಭಂಗ ಪುಂಡರೀಕಾಕ್ಷ ಗೋವಿಂದ ನಾಮವ ಹಾಡಿ ಕೊಂಡಾಡಲೊದಗುವನು ಮಾಂಗಿರಿಯರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಂಡನಾದೆ ಸಂಸಾರಕೊಂಡದೊಳಗೆ ಬಿದ್ದು ಕಂಡುಕಾಣದಂತಿರುವರೇ ಪುಂಡರೀಕನಯನ ಪ ಅಶÀನ ವಸನಕ್ಕಾಗಿ ದೆಸೆಗೆಟ್ಟು ಬಾಯ್ಬಿಡುತ ಅಸುವ ಕರದೊಳ್ಪಿಡಿದು ವಸುಧೆಯ ಜನರ ಬಸವಳಿದು ಬೇಡಲು ಕಣ್ಣೆಸಿದು ಬೈಯಲು ತಲೆಬಾ ಗಿಸಿಕೊಂಡು ನಿಂದೆ ಹರಿ ಉಸುರಲಳವಲ್ಲ 1 ರೊಕ್ಕದ ಆಸೆಗಾಗಿಕ್ಕೆಲದ ಜನರನ್ನು ತರ್ಕಿಸದೆ ದೈನ್ಯದಿಂ ಚಿಕ್ಕಮಗ ನಾ ಎನುತ ಫಕ್ಕನೆ ಕೈತಾಳನಿಕ್ಕುವರು ನಗಲು ಮಹ ದು:ಖದಿಂ ತಿರುಗಿದೆನು ಬಿಕ್ಕಿಬಿಕ್ಕಳುತ 2 ಯರ ಮೋಹಿಸಿ ದಂಡಿಸಿದೆ ಮನೆಸತಿಯ ಕಂಡವರು ತಿದ್ದಿದರು ಚಂಡಿತನವಿಡದೆ ಕಂಡವರ ಅರ್ಥವನು ಮನೆಸೇರಿಸಿ ಬಂಡೆದ್ದು ಜನರೊಳಗೆ ಮಂಡೆಯೆತ್ತದೆಹೋದೆ 3 ತಪದಿಂದ ಹರಿಪಾದ ಜಪಿಸುವುದ ಮರೆದು ನಾ ಕೃಪಣತ್ವಜನಸೇವೆ ಅಪರೂಪಗೈದೆ ಚಪಲತ್ವತನದಿಂದ ಅಪಹರಿಸಿ ಪರರರ್ಥ ಸುಪಥಕ್ಕೆ ದೂರಾಗಿ ಅಪರಾಧಿಯಾದೆ4 ಕದ್ದು ತಿಂದೆ ನೆರಹೊರೆಯ ಬಿದ್ದೆ ದುರ್ಬವಣೆಯೊಳು ಬದ್ಧನಾಗಿ ಧರೆಮೇಲೆ ಹದ್ದಿನಂತೆ ಬಾಳ್ದೆ ತಿದ್ದಿ ನೀ ಎನ್ನ ತಪ್ಪುಬುದ್ಧಿಯನು ಕಲಿಸೆನ್ನೊ ಳಿದ್ದು ಪೊರೆ ದಯದಿಂದ ಮುದ್ದು ಶ್ರೀರಾಮ 5
--------------
ರಾಮದಾಸರು
ಭಂಡನೆಂದು ಎನ್ನ ನೀ ತಿಳಿಯೋ ಅಖಿಲಾಂಡನಾಯಕ ಪ ತಂಡ ತಂಡದಿ ಒದಗಿ ಬರುತಿಹ ಗಂಡ ಸಂತತಿ ನಾ ಕಂಡು ಬೆದರುವ ಷಂಡನಲ್ಲವೊ ಪುಂಡರೀಕ ಲೋಚನನೇ ದೊಡ್ಡ 1 ಮಂದ ಮಾನವರಿಂದ ನುಡಿಸುವ ನಿಂದೆ ವಚನಗಳಿಂದ ಮನ ನೊಂದರೂ ಗೋವಿಂದ ನಿನ್ನನು ಬಂಧುವೆಂದು ನಂದದಿ ಪೊಗಳುವ 2 ದ್ವೇಷಿ ಜನಗಳೂ ರೋಷದಿಂದಲಿ ಶೋಷಿಸಿದರೂ ನೀ ಕಮ ಲೇಶ ಎನ್ನನು ಪೋಷಿಸುವನೆಂದು ಘೋಷಿಸುವೆನೋ ಶೇಷಶಯನನೇ 3 ಹೀನ ಮಾನವರಿಂದ ನೀ ಅವಮಾನ ನೀಡಿದರೂ ವರ ಜಾನಕೀಶನೆ ನೀನು ಎನ್ನಯ ಮಾನರಕ್ಷಕನೆಂದು ಅರಿಯುವ 4 ಸಣ್ಣ ಮಾನವರಿಂದ ಎನ್ನಯ ಸಕಲ ವೈಭವವು ದೊಡ್ಡ ಸೊನ್ನೆಯಾದರು ನಿನ್ನ ಪಾದಗ ಳನ್ನು ಬಿಡೆನೊ ಪ್ರಸನ್ನ ಮೂರುತಿ 5
--------------
ವಿದ್ಯಾಪ್ರಸನ್ನತೀರ್ಥರು
ಮಂಡೆ ತುರಿಸುವಭಂಡನಂತೆ ಉದ್ದಂಡನಾಗದಿರು ಪ. ಬಂಟ ಬಾಳನೆ ಕ-ಳಾಸವ ಕೊಂಡು ಸೂಳೆಉಣಳೆ ಈಸತಿ ಸಂತರ್ಗಾಗಿ ಕುಣಿಯದೆಕೇಶವ ಹೃಷಿಕೇಶ ಎನ್ನುಭಾಸುರ ಹರಿಮೂರ್ತಿಯ ನೆನೆಸಾಸಯೆಂದೆನಿಸಿಕೊಳ್ಳದೆಏಸುಬಂದರೈಸರೊಳಿರು 1 ಆಶೆಯೆಂಬ ಪಾಶವ ಬಿಡು ಈಸಂಸಾರವಾರಾಶಿಯನೆನೀಸಲಾರದೆ ಕಾಸಿಗಾಗಿವೇಷವ ತೋರಿ ಘಾಸಿಯಾಗದೆದಾಸರೊಳಾಡುವ ಸರ್ವೇಶ ನಿ-ರಾಶೆನಲ್ಲದೆ ಲೇಸ ಕೊಡನುರೋಷಬೇಡ ಸಂತೋಷದಲಿರುಆಸರು ಬೇಸರಿಗಂಜಬೇಡ 2 ಕ್ಲೇಶ ಉಂಬೆಭಾಸಕೆ ನೀನೊಳಗಾಗದೆಶೇಷಶಾಯಿ ಹಯವದನನ ನೆನೆ3
--------------
ವಾದಿರಾಜ