ಒಟ್ಟು 30 ಕಡೆಗಳಲ್ಲಿ , 18 ದಾಸರು , 27 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆಯರಸನ ಛಂದದಿಂದ ಭಜಿಸೋ | ಮನದಲಿ ನೀ ನಿಲಿಸೊ ಪ ಕುಂದನು ಎಣಿಸದೆ ಬಂದು ಕಾಯ್ವ ನಿನ್ನಾ |ನೆಂದು ಕಂದ ಬಲು ಘನ್ನಾ ಅ.ಪ. ಪಾದದ ಮೂಲವು | ಪಾತಾಲವು ಎಂದೂ | ಉಪರಿ ರಸಾತಲವೆಂದುಪಾದದ ಪರ್ವವು | ಮಹಾ ತಲಾಖ್ಯ ಲೋಕ | ಉಪರಿ ತಲಾತಲ ಲೋಕ ||ಸಾಧಿಸು ಜಂಘೆಗಳ್ | ದ್ವಯವೆ ಸುತಲ ಲೋಕ |ಚಿಂತಿಸಿ ಕಳೆ ಶೋಕ ||ಮೋದದ ಊರು ದ್ವಯ | ವಿತಲಾತಲವೆನ್ನೂ | ಮುಂದೆ ಸಾಗುತಲಿನ್ನು 1 ಭೂರಿ ಲಲಾಟವೆ | ತಪಸಿಗಳಾಸ್ಥಾನಾ | ಶಿರ ಬ್ರಹ್ಮನ ಸ್ಥಾನ 2 ಮುನ್ನ ಸೂಕ್ಷ್ಮ ಚಿಂ | ತನೆಯೇ ಬಲು ಕಷ್ಟ | ಎಂದೆನುತ ವಿಶಿಷ್ಟಘನ್ನ ಮಹಿಮ ಹರಿ | ತಾಳಿದ ಬೃಹದ್ರೂಪ | ಅದುವೆ ವಿರಾಟ್ರೂಪಾ ||ನಿನ್ನ ಬಿಂಬ ಗುರು | ಗೋವಿಂದ ವಿಠಲನ್ನ | ಮತ್ತೆ ಸ್ಥೂಲವನ್ನಾ ನನ್ನೆಯೆಂದೈಕ್ಯವೆ | ಚಿಂತಿಸೋದು ಮುನ್ನ | ಒಲಿವನು ಗುಣ ಪೂರ್ಣ 3
--------------
ಗುರುಗೋವಿಂದವಿಠಲರು
ವಂದಿಸುವಾನರ ಶ್ರೇಷ್ಠಗ್ವಂದಿಸು ಪ ಕೇಸರಿ ಸುತನಾದ ಭೂತನುಜಳ ವಾರ್ತೆ ಲೇಸಾಗಿ ತಂದ ಪ್ರಾಣೇಶನ ಪಾದಕ್ಕೆ 1 ಸುಗ್ರೀವನಗ್ರಜನಾಗ್ರ(ಹ)ದಿ ಕೊಲಿಸಿದ ದ- ಶಗ್ರೀವನ ಬಲ ನೆಗ್ಗೊತ್ತಿದ್ವಾನರಗೆ 2 ಭೂಮಿಗೊಡೆಯ ಸೀತಾರಾಮಸೇವಕನಂಘ್ರಿ ಪ್ರೇಮದಿ ಭಜಿಸೋ ಭೀಮೇಶಕೃಷ್ಣನ ಭಕ್ತಗೆ3
--------------
ಹರಪನಹಳ್ಳಿಭೀಮವ್ವ
ಉಪದೇಶಾತ್ಮಕ ಪದಗಳು ನೀಚವೃತ್ತಿಯ ಬಿಟ್ಟು ಸೋಚಿತ ಕರ್ಮವನೇ ಯೋಚನೆ ಮಾಡುತಾ ಪ ನೀಚ ಜನರುನು ಯಾಚಿಸದೆ ಸವ್ಯ ಸಾಚಿಯ ಸಖನ ಭಜಿಸೋ ಪ್ರಾಣೀ ಸರಸ ಸಲ್ಲಾಪ ಶ್ರೀ ಹರಿಕಥಾ ಶ್ರವಣ ನೀ ಪರಮಭಕ್ತರ ಸಂಗವಾ ನಿರುತದಲಿ ನೀ ಮಾಡಿ ಹರುಷ ಮನವನು ತಾಳಿ ಚರಿಸೊ ಈ ಧರಣಿ ಮಂಡಲಾ ಅರಸಿಗಾದರು ಒಮ್ಮೆ ಶಿರಸುಬಾಗದಲೆ ಶ್ರೀ ಹರಿದಾಸರಾ ಚರಣಕೆ ಎರಗ್ಯವರ ಮನಿದ್ವಾರಪರಿಚರನು ಎಂದೆನಿಸಿ ಭರದಿಂದ ಬಾಳಿ ಬದಕೋ ಇದಕೋ 1 ಅಲ್ಪ ಆಶೆಯ ಮಾಡಿ ಅಲ್ಪ ಮಾನವನಾಗಿ ಕಲ್ಪನೀಯನು ಮಾಡದೆ ಸ್ವಲ್ಪ ಫಲದಲಿ ಮನಸು ಕಲ್ಪಿಸಿ ಪ್ರಿತಿದಿನವ ನಲ್ಪ ಜನರನು ನಿಂದಿಸೀ ಅಲ್ಪನಾರೇರು ಮಾಳ್ಪ ಒಲ್ಪಿಗೆ ಮರುಳಾಗಿ ಪಲ್ಕಿಸಿದು ಬಾಯ್ದೆರೆಯದೆ ಸ್ವಲ್ಪಗಾಲದಲಹಿತಲ್ಪ ಪದಪದುಮಗಳ ಕಿಂ - ಜಲ್ಕ ನೀನಾಸ್ವಾದಿಸೋ ಲೇಸೋ2 ಪೊಡವಿ ಮೊದಲಾದ ಈ ಮಡದಿ ಮಕ್ಕಳು ಗೇಹ ವಡವಿ ವಸನವ ಬಯಸದೆ ಪೊಡವಿಮಂಡಲದಿ ಬಹು ಬಡವ ನಾನೆನುತಲೀ ಪೊಡವಿ ಪಾಲರ ಸೇವೆಯಾ ಧೃಢಮನದಿ ನೀ ಮಾಡೆ ಕೊಡರೊಂದು ದುಗ್ಗಾಣಿ ಕಡುಮೂರ್S ಎಲೊ ಪಾಪಿಯೇ ಬಿಡದೆ ದೈನ್ಯದಿ ನೀನು ಜಡಜನಾಭನ ಪಾದ ಬಿಡದೆ ಸೇವಿಸಲು ಫಲವ ಕೂಡುವಾ 3 ನಾ ಮಾಡೋ ವ್ಯಾಪಾರ ನೀ ಮಾಡಿಸುವಿ ಎಂಬ ಈ ಮಹಾಙÁ್ಞನ ಮಾರ್ಗ ನೇಮವಾಗಿ ತಿಳಿದು ಗ್ರಾಮ ಗ್ರಾಮದಲ್ಲಿದ್ದ ಪಾಮರೋತ್ತಮ ಜನರಿಗೆ ಧಾಮನಾಗಿಹ ನಮ್ಮ ರಾಮದೇವನ ಪಾದ ತಾಮರಸ ಕೊಂಡಾಡುತಾ ಪ್ರೇಮ ಹರುಷಾಮರ್ಷ ಯಾಮಯಾಮಕೆ ಬರಲು ಕಾಮಿಪುದು ನಿನಗೆ ಸಲ್ಲಾ ಖುಲ್ಲಾ 4 ನಗುವ ಜನರಾ ಕಂಡು ನಗುವುದೇ ಲೇಸೆಂದು ಸಿಗದೆ ಜನರೊಳು ತಿರುಗುತಾ ಬಗೆ ಬಗೆಯ ಮಾತುಗಳ ಬೊಗಳುವಾ ಜನರಿಗೆ ಹಗಲಿರಳು ಹರಿ ಕಾಯಲೀ ನಿಗಮ ವಂದಿತನ ಪ್ರತಿ ಮೆಗಳು ಇವು ಎಂದು ತಿಳಿಯೇ ನಗುತ ಹರುಷವ ಕೊಡುವ ಸುಗುಣಪೂರಣ ಗುರು ಜಗನ್ನಾಥವಿಠಲರಾಯಾ ಮರೆಯಾ 5
--------------
ಗುರುಜಗನ್ನಾಥದಾಸರು
ಇಂದಿರೇಶನ ಭಜಿಸೋ ಹೇ ಮನಸೆ ನೀ ಕುಂದುವ ಜಗಮಾಯದಂದಕ್ಕೆ ಮೋಹಿಸದೆ ಪ ಅರಿವಿನೀಸಮಯವ ಅರಲವ ಕಳೆಯದೆ ಹರಿಶರಣರವಚನ ಶ್ರವಣ ಮಾಡುತ ನೀ 1 ಮನುಷ್ಯ ಜನುಮದ ಫಲವ ನೆನೆಸೀನಿಜಜ್ಞಾನದಿ ವನಜನಾಭನ ಕತೆ ಮನನಮಾಡನುದಿನ 2 ಹೇಸಿಕೆಸಂಸಾರ ನಾಶನೆಂದರಿದು ನೀ ಶ್ರೀಶ ಶ್ರೀರಾಮನ ನಿಜಧ್ಯಾಸದಿಟ್ಟೆಡೆಬಿಡದೆ 3
--------------
ರಾಮದಾಸರು
ಕಮಲ ಭಜಿಸೋ ಮೈಲಾರ ಲಿಂಗನ ಪ ಪುರಹರ ಸ್ವರೂಪನೆ ಎಂದು ಧ್ಯಾನಿಸೋ ಪಾತಕ ತಿಮಿರ ಭಾಸ್ಕರನೆಂದು ನೀ ಸ್ಮರಿಸೋ ಶಿರಬಾಗಿ ನಮಿಸೋ ಅ.ಪ ತುರಗವಾಹನವೇರಿ ಬರುತಿಹನ ಧರೆಯೊಳಗೆ ಮೈಲಾಪುರ ಸುಮಂದಿರನೆಂದು ಕರೆಸುವನಾ ಹೊನಕೆರೆಯ ಜಲದಭಿಷೇಕದಿಂದ ರ್ಚನೆಯ ಕೊಂಬುವನ ಶರಣರನ ಪೊರೆವನ 1 ಕಾಲಕಾಲದಿ ಪಾಲಕಿಯ ಉತ್ಸವದಿ ಮೆರೆಯುವನ ಅನು ಗಾಲಭಕುತರ ಮ್ಯಾಳವನು ಪಾಲಿಸಲು ಬಂದಿಹನ ಕೇಳಿ ದ್ವರಗಳ ಕೊಡುವ ಘನ ತ್ರಿಶೂಲ ಧರಿಸಿಹನ ಮಾಳಸಾಕಾಂತನ 2 ನಿಷ್ಠೆಯಿಂದಲಿ ಭಜಿಪ ಭಕುತರನ ರಕ್ಷಿಸಲು ಕೊಪ್ಪರ ಕಟ್ಟಿಯಲಿ ಸೇವೆಯನ್ನು ಕೊಳುತಿಹನ ಸಿರಿ ವಿಷ್ಣು ಭಕುತರ ಮನೆಗಳಲಿ ಪೂಜೆಯನು ಕೊಂಬುವನ ಇಷ್ಟ ಪ್ರದಾತನ3 ಸಂಚರಿಸುತಲಿ ದಿನಕರನು ಮಕರದಿ ಬರಲು ಸಂಕ್ರಮಣ ಉತ್ಸವದಿ ನೋಡಲು ನೆರೆದ ಬಹು ಜನ ರಿಂದ ಸೇವಿತನ ಗಿರಿಶಿಖರ ಗುಂಡಿನ ಮೇಲೆ ದೀಪೋತ್ಸವದಿ ರಾಜಿತನ ಮಹಿಮಾನ್ವಿತನ 4 ವಿನುತ ಶುಭಚರಣ ಸರೋಜ ಕಾರ್ಪರ ನಾರಸಿಂಹನ ಒಲಿಮೆ ಪಡೆ ದಿಹನಾ ರವಿವಾರ ವಾರದಿ ಮಾರ್ತಾಂಡದೇವನ5
--------------
ಕಾರ್ಪರ ನರಹರಿದಾಸರು
ಕಾಲ ವ್ಯರ್ಥ ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ- ಗತಿಲೇ ಬಾಹರು ಇದನು ತಿಳಿಯೋ ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1 ಇಂದೆ ಇದ್ದವ ನಾಳೆಗಿಲ್ಲಾ ಅದ ರಿಂದ ಜಗದೀಶನನು ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು ಮುಂದೆ ನರಜನ್ಮ ಬರುವುದು ಭರವಸಲ್ಲಾ 2 ಸತ್ತ ನಂತರ ಬಳಗ ನಿನ್ನ ತೀವ್ರ ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ ಮಿಥ್ಯ ಸುಖಕೊಳಗಾಗದಿನ್ನಾ ಏಕ ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3
--------------
ಹನುಮೇಶವಿಠಲ
ಕೆಟ್ಟು ಹೋಗಬೇಡ ಮನುಜ ಸಾರಿ ಹೇಳುವೆ ಮನವ ಮುಟ್ಟಿ ಭಜಿಸೋ ಹರಿಯ ಶ್ರೀ ಕೃಷ್ಣ ಕಾಯುತಾನೆ ಪ ಆನೆಯಂತೆ ಹರಿವುದೊಂದು ಹೀನ ಮನವ ಹರಿಯಬಿಟ್ಟು ನೀನು ವಿಷಯವನ್ನು ಬಯಸಿ ನಾನಾನರಕದಲ್ಲಿ ಬಿದ್ದು 1 ದಾನ ಧರ್ಮಗಳನು ಬಿಟ್ಟು ಬರಿಯ ತನುವದಂಡಿಸುತ್ತ ಪುಣ್ಯ ತೀರ್ಥಸ್ನಾನಬಿಟ್ಟು ವಿಷ್ಣು ಮೂರ್ತಿಧ್ಯಾನ ತೊರೆದು 2 ಗಂಟು ಗಡಿಗೆ ಇರಲುನಿನಗೆ ನೆಂಟರಿಷ್ಟರೆಂದು ಬಂದು ಪಂಟಿಯನ್ನು ತೆಗೆವರೆಲ್ಲ ಅಂಟಿ ಬೆನ್ನಬರುವರಿಲ್ಲ 3 ಪಂಡಧರನ ದಂಡು ಬಂದು ದಂಡೆಗೆ ದಂಡೆ ಬಿಗಿದು ಕಟ್ಟಿ ಮಕ್ಕಳು ಬರುವನೋ 4 ನಿನ್ನ ನೀನೆ ತಿಳಿದುಕೊಂಡು ಚೆನ್ನಿಗನ ಕೂಟದಲ್ಲಿ ಚಿನ್ಮಯಾತ್ಮಕ ಲಕ್ಷ್ಮೀಪತಿಯ ಮುನ್ನಭಜಿಸೋ ಜನ್ಮವಿಲ್ಲ 5
--------------
ಕವಿ ಪರಮದೇವದಾಸರು
ಕೋಲೋ ಕೋಲೆನ್ನ ಕೋಲೆ ಕೋಲು ಮುತ್ತಿನ ಕೋಲುಶ್ರೀ ಗುರು ನಿನ್ನ ಬಲಗೊಂಬೆ ಕೋಲ ಪ ಪಾದ ಏಕಚಿತ್ತಾದಲ್ಲಿ ಬಲಗೊಂಬೆ ಕೋಲಅ.ಪ. ಪಾದ ಭೃಂಗಾನೆಂದೆಸುತಾ ಪಂಚರೂಪಾದಿ ಮೆರೆವೋನು ಕೋಲಪಂಚರೂಪಾದಿ ಮೆರೆವೋನು ಭಾವೀಪಂಚಪ್ರಾಣಾನಾ ಬಲಗೊಂಬೆ ಕೋಲ 1 ಮಂದಜಾಸನ ಪದ ಪೊಂದುವನಾಕಂಡವಾದೀರಾಜಾಖ್ಯನ ಬಲಗೊಂಬೆ ಕೋಲವಾದೀರಾಜಾಖ್ಯನ ಭೂತಾ ಪತಿಯೆಂದು ಆರ್ಯನ್ನ ಮೊದಲೇ ಬಲಗೊಂಬೆ ಕೋಲ 2 ಕಂದುಕಂಠನ ಕೊರಳಿಗ್ಹಾರ ಪದಕವ ಹಾಕಿ ಪರಿಪರಿಯಿಂದ ಮೆರೆಸೋಣ ಕೋಲ ಪರಿಪರಿಯಿಂದ ಹಾರ ಪದಕವ ಹಾಕಿ ಧೀರನ್ನ ಮೊದಲೇ ಬಲಗೊಂಬೆ ಕೋಲ 3 ಕೆಂಡಗಂಣನ ಕಂಡು ರುಂಡ ಹಾರವ ಹಾಕಿ ಪರಿಪರಿಯಿಂದಾ ಭಜಿಸೋಣ ಕೋಲಪರಿಪರಿಯಿಂದಾ ರುಂಡಹಾರವ ಹಾಕಿ ಮಂಡೇ ನದೀ ಧರನ ಬಲಗೊಂಬೆ ಕೋಲ 4 ಅಮರೇಂದ್ರ ಲೋಕದಿ ಶಿವರಾಜ ಧೊರಿಗೆ ಪರಿಪರಿಯಿಂದ ಸೇವಿಪರು ಕೋಲಪರಿಪರಿಯಿಂದ ಸೇವೆಯಾಗೊಂಬಂಥ ವಾದಿರಾಜರ ದಾಸ ವಾದಿರಾಜಾಖ್ಯನ ಬಲಗೊಂಬೆ ಕೋಲ 5 ಚಾರು ಚರಣವ ಬಲಗೊಂಬೆಕೋಲ 6 ಮೂರು ಮಂದಿ ಮಧ್ಯೆ ಮಾತಾಡುತಿಪ್ಪದಿಟ್ಟತನದಿ ತಂದೆವರದಗೋಪಾಲವಿಠ್ಠಲನದಿಟ್ಟಾತನದಿ ಬಲಗೊಂಬೆ ಕೋಲ 7
--------------
ತಂದೆವರದಗೋಪಾಲವಿಠಲರು
ಗುರುವರ್ಯರನು ಭಜಿಸೋ ರಾಘವೇಂದ್ರ ಗುರುವರ್ಯರನು ಭಜಿಸೋ ಪ ಧರೆತಲದಲಿ ಅವತರಿಸಿ ಸುಜನರನು ಪರಿಪÀರಿ ವಿಧದಲಿ ಪೊರೆಯುತಲಿರುವ ಸದ್ ಅ.ಪ ನಳಿನನಾಭ ಶ್ರೀರಾಮರ ರುಚಿರ ಪದಗಳ ಸಂತತದಿ ಭಜಿಸಿ ಖಳರ ದುರ್ಮತಗಳನಳಿಸಿ ದಶಪ್ರಮತಿ ಗಳ ದಿವ್ಯ ಶಾಸ್ತ್ರಾರ್ಥಗಳನು ಸುಲಭದಲಿ ಇಳೆಯೊಳು ಸುಜನಕೆ ತಿಳಿಯುವ ತೆರದಲಿ ಬೆಳಗುತಿರುವ ಪರಿಮಳ ಮುಖವರ ಗ್ರಂಥ ಗಳನು ರಚಿಸುತ ಉಳಿಸಿ ಸುಮತಿಯನು ಇಳೆಯೊಳು ವರಮಂತ್ರ ನಿಲಯದಿ ನೆಲೆಸಿದ 1 ಮಂಗಳಕರಳೆಂದು ಚರಿತೆಯುಳ್ಳ ತುಂಗಾತೀರದಿ ನೆಲೆಸಿ ಕಂಗೊಳಿಸುತ ಚರಣಂಗಳ ಭಜಿಪರ ಸಂಘಕ್ಕೆ ತಮ್ಮ ಅಪಾಂಗ ವೀಕ್ಷಣದಿಂದ ಮಂಗಳ ತತಿಗಳ ನೀಡಿ ಅವರ ಆಘ ಭಂಗವಗೈಯುತ ಅನುದಿನದಲಿ ದ್ವಿಜ ಪುಂಗವ ನಿಕರದಿ ಪೂಜೆಯಗೊಂಬ ಉ ತ್ತುಂಗ ಚರಿತರಥಾಂಗಧರ ಪ್ರಿಯ 2 ಮುನ್ನ ಪ್ರಹ್ಲಾದನೆನೆಸಿ ಶ್ರೀ ನರಹರಿಯನ್ನು ಸತತ ಭಜಿಸಿ ಇನ್ನೊಂದು ಜನುಮದಿ ಮಾನ್ಯ ಶ್ರೀ ವ್ಯಾಸಮುನಿ ಯೆನ್ನಿಸಿ ಖಲಮತವನ್ನು ಖಂಡಿಸುತಲಿ ಚಿನ್ನ ಶ್ರೀಕೃಷ್ಣನ ಉನ್ನತ ಮಹಿಮೆಗ ಳನ್ನು ಬೋಧಿಸುತ ತನ್ನ ಭಕುತಜನ ರನ್ನು ಹರುಷದಲಿ ಧನ್ಯರೆನಿಸಿದ ಪ್ರ ಸನ್ನ ಶ್ರೀರಾಮರ ಭಕುತ ಶಿರೋಮಣಿ 3
--------------
ವಿದ್ಯಾಪ್ರಸನ್ನತೀರ್ಥರು
ಜಡಮತಿ ಮನುಜ ಡಂಭವ ತ್ಯಜಿಸೊ ದೃಢದಿಂದ್ಹರಿಪಾದ ಸತತದಿ ಭಜಿಸೋ ಪ ಒಡಲೊಳ್ವಂಚಕನಾಗಿ ಹೊರಗೆ ಬಹುಮಾನವ ಪಡೆದರೆ ಹರಿ ನಿನ್ನ ಮೆಚ್ಚುವ ನೇನೋ ಅ.ಪ ನಿರುತ ಮಾನಸದೊಳ್ ಮನೆಮಾಡಿಹ್ಯ ಪ್ರಭು ಮರೆವೆ ಪರದೆ ತೆಗೆದಿರವಿಟ್ಟು ನೋಡೋ ಅರಿಯದ ನರರು ನಿನ್ಹಿರಿಯನೆನಲು ಕರಿವರದ ಕಮಲನಾಭನರಿಯನೆ ಮರುಳೆ 1 ಮರುಳನೆ ದುರಿತವ ಸ್ಮರಿಸವನಿತರಲಿ ಅರಿಯುವ ಹರಿ ನಿನ್ನಂತರದಲಿ ನಿಂದು ಮರುಳುಮತಿಯ ನೀಗಿ ಹೊರಒಳಗೊಂದಾಗಿ ಅರೆಲವನಿಲ್ಲದೆ ಪರಮನಂ ಧ್ಯಾನಿಸೋ 2 ಧರೆಮೆಚ್ಚಿ ನಡೆದರೆ ಬರುವುದೇನೆಲೊ ನಿನ ಗ್ಹರಿಮೆಚ್ಚಿ ನಡೆವುದೆ ಪರಮಸೌಭಾಗ್ಯ ಧರೆಯಾಣ್ಮ ಶ್ರೀರಾಮ ಮರೆಯಾಗುವನೆಲೋ 3
--------------
ರಾಮದಾಸರು
ದಾಸರಾಯರಾ ಚರಣಕಮಲ ಭಜಿಸೋ |ದುರ್ವಿಷಯವ ತ್ಯಜಿಸೋ ||ಶ್ರೀಶ ಭಜಕ ಗುರು ಪ್ರಾಣೇಶದಾಸಾರ್ಯ |ಹರಿದಾಸ ವರ್ಯಾ ಪ ಸದ್ವೈಷ್ಣವ ಅಧ್ಯಕ್ಷರೆಂದೆನಿಪರೊ |ಕರ್ಮಠರೆನಿಪರೋ |ಮಧ್ವಮತ ಪ್ರವರ್ತಕರೆನಿಪರೋ |ಜ್ಞಾನಿಗಳೆನಿಪರೊ ||ಪದ್ಧತಿ ಪೂರ್ವಕ ಕವನವ ಪೇಳುವರೊ |ಹರಿ ಪರನೆಂಬುವರೊ |ಶುದ್ಧಾತ್ಮರಿಗತಿ ಪ್ರಿಯರೆಂದೆನಿಸುವರೋ |ಸತ್ಕಥಾಲಾಪರೋ 1 ಕಾಮಕ್ರೋಧ ಮದಮತ್ಸರವನು ಗೆಲಿದೂ |ತಾಮಸರನು ಹಳಿದೂ |ನೇಮದಿಂದ ಯಮನಿಯಮಗಳನು ವಹಿಸೀ |ಇಂದ್ರಿಯಗಳ ಜೈಸೀ |ತಾಮುದದಿಂದಲಿ ಹರಿಗುಣ ಕೀರ್ತನೆಯಾ |ಮಾಡುತ ನರ್ತನೆಯಾ ||ಪ್ರೇಮದಿಂದ ಮಾಡಿ ದೇಶದಲ್ಲಿ ಮೆರೆದಾ |ನಾಮ ಸುಧೆಯನ್ನೆರದಾ 2 ಏಸು ಪೇಳಲಿ ಇವರ ಚರಿತೆಯನ್ನು |ಆ ಪಾರವು ಇನ್ನೂ |ಸೋಸಿನೋಡಲು ಎನಗೆ ವಶವಲ್ಲಾ |ಇದು ಪುಸಿಯೂ ಅಲ್ಲಾ ||ಮೀಸಲ ಮನದಲಿ ತುತಿಸಲು ಸಂತಾಪಾ |ಪೋಪದು ನಿರ್ಲೇಪಾ |ಶ್ರೀಶ ಪ್ರಾಣೇಶ ವಿಠಲ ತಾ ಬಲ್ಲಾ |ವಲಿದಿಹನಲ್ಲಾ 3
--------------
ಶ್ರೀಶಪ್ರಾಣೇಶವಿಠಲರು
ನಾರಾಯಣನಾಮ ಭಜಿಸೋ ನಿರುತದಲಿ ನರನೇ ಪ ಮಾಯದ ಸಂಸಾರದಿ ಪಾರಾಗೋ ಉಪಾಯವಿದು ಸಸಾರ ಕಾಯಜನೈಯನ ಭಜಿಸೋ ಶ್ರೀ ಗುರುವಾಯು ದೇವರ ದ್ವಾರಾ 1 ಧ್ಯಾನ ಕೃತಯುಗದಿ ಯಜ್ಞವು ತ್ರೈತದಿ ಅರ್ಚನೆ ದ್ವಾಪರದಿ ಗಾನದಿ ಕಲಿಯಲಿ ಪಾಡಲು ಕೇಶವ ತಾನೇ ವಲಿವ ತ್ವರದಿ 2 ಅನಲ ಪಕ್ವಗೈಸಿದ ಅನ್ನವನಸ್ಕೊಳ್ಳೊಮಿಸುವಂತೆ ಹನುಮೇಶವಿಠಲ ಕೊಟ್ಟಾತನು ಅರ್ಪಿಸು ಅದರಂತೆ 3
--------------
ಹನುಮೇಶವಿಠಲ
ನಿತ್ಯ ಬಿಡದೆ ಭಜಿಸೋ | ಕೋಸಿಗಿ ಮುತ್ಯನ ಕೃಪೆ ಗಳಿಸೋ ಭವ ಕತ್ತಲೆ ಓಡಿಸಿ ಉತ್ತಮಗತಿಯನು | ಇತ್ತು ಪಾಲಿಸುವ ಪ ಯಾತಕೆ ಅನುಮಾನ | ಈತನೆ ಜಾತರೂಪಶಯನ | ಜಾತದಾತಯತಿ | ನಾಥ ಶ್ರೀರಾಯರ ಪ್ರೀತಿಪಡೆದ ಪಿತ | ಭ್ರಾತಾರ್ಯರು ನಿಜ 1 ಪುನಃ ಜಗದಿ ಜನಿಸಿ | ಗಣಪತಿ ಅನುಚರ ನಾಮವ ಧರಿಸಿ ಅಖಿಲ ನಿಗಮದೋಳ್ | ಮಿನುಗುವ ಹರಿಗುಣ ಮಣಿ ಬೆಳಕನು ಗುಣ ಜನಕೆ ತೋರಿದನು 2 ಮಂದಾಜಾತಶಯನ | ಶಾಮಸುಂದರ ವಿಠಲನ ಪೊಂದಿದ ಮಾನವಿ ಮಂದಿರ ನೊಲಿಸುತ ಮಂದಜನರ ದಯದಿಂದ ಸಲಹುವರು 3
--------------
ಶಾಮಸುಂದರ ವಿಠಲ
ನೋಡು ನಿನ್ನೊಳು ನೀ ನೋಡು | ಸಾಕು ಸಾಕು ಈ ಲೋಕದ ನಡವಳಿ | ಯಾಕಬೇಕು ಪಿನಾಕಿಯ ಭಜಿಸೋ ಪ ಅಗಣಿತ ಸಂಪದ ಕೈಗೂಡುವದೋ ಅದ | ಬೇಡದೆ ಬೇಗನೆ 1 ಘಾಸಿ ಕ್ಲೇಶ ಬಡುವಿ ಜಗದೀಶನು ಒಲಿವನೆ ? 2 ಹಿಂದೆ ಜನ್ಮ ನೊಂದೆ ಸದ್ಗತಿ ಪಡೆಯದೆ | ಮುಂದೆ ಸಾಧಿಸು ಶಿವ ತತ್ತ್ವವ ಒಂದೇ | ತಂದೆ ಸದ್ಗುರು ಭವತಾರಕನಂಘ್ರಿಯ |ಹೊಂದಿ ನಿಜಾನಂದ ಬೋಧದಲಿರು ನೀ3
--------------
ಭಾವತರಕರು
ಪದ್ಮನಾಭರ ಭಜಿಸೋ ಹೇ ಮನುಜಾನೀ ಪ ಮಧ್ವರಾಯರ ಕರಪದ್ಮ ಸಂಭವರಾದ ಅ.ಪ ಮತ್ತ ಮಾಯಿಗಳೆಂಬೊ ಹಸ್ತಿಗಣಕೆ ಪಂಚ ವಕ್ತ್ರರೆಂದೆನಿಸಿದ ಪೃಥ್ವೀಸುರಸೇವಿತ 1 ಪ್ರೀತಿಯಿಂದಲಿ ಗೋಪಿನಾಥನರ್ಚಿಸಿ ಸುಖ ತೀರ್ಥ ಗ್ರಂಥಕೆ ಸವ್ಯಾಖ್ಯಾತ್ರರೆಂದೆನಿಸಿದ 2 ಧರೆಯೊಳು ಶರಣರ ಪೊರಿವ ಕಾರ್ಪರನರ ಹರಿಯನೊಲಿಸಿದಂಥ ಪರಮ ಮಹಿಮರಾದ3
--------------
ಕಾರ್ಪರ ನರಹರಿದಾಸರು