ಒಟ್ಟು 47 ಕಡೆಗಳಲ್ಲಿ , 3 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ಧೇನುಪಾಲ ದಾಸಾರ್ಯಾ | ನುತಿಸುವೆಮಾನವೀಶನ ಪೊರೆದಾರ್ಯಾ ಪ ಕಾಣೆ ನಿನಗೆ ಸಮ ಕರುಣಾಳುಗಳನುಶ್ರೀನಿವಾಸರ ಪೊರೆದಾರ್ಯಾ ಅ.ಪ. ಯತಿವರ ವರದೇಂದ್ರರ ವರಬೋಧ ಪಡೆದು ಸಚ್ಛಾಸ್ತ್ರಗತಿಯನೆ ತಾ ಗಳಿಸುತಹಂ ಮತಿ ವಿಶಿಷ್ಟ ತಚ್ಛಾತ್ರ |ಹಿತವ ನುಡಿಯೆ ವಿಜಯಾರ್ಯಾಗತ ತಿಳಿದು ಸುಪಾತ್ರಕೃತಕನಟಿಸಿ ತಾ ಕಳುಹಿದವರ ಉಪಚಾರದಿ ಮಾತ್ರ 1 ಉತ್ತಮ ನಿಂದೆಯ ಕೃತಿಗೆ ಪ್ರಾಪ್ತಿ ಇವಗೆ ಅತಿರೋಗಇತ್ತ ಮಾತೆಗರಿವಾಯ್ತು ಸುತನ ಕ್ಷೀಣಾರ್ಯುರ್ಯೋಗ |ಅತ್ತ ಅನಿಲಾಜ್ಞೆ ಪೊತ್ತು ವಿಜಯಾರ್ಯಪದ ಸುಯೋಗಪ್ರಾಪ್ತಿಗೈಸಿ ಕ್ಷಮೆಯಾಚಿಸಿ ಆಯ್ತಿವಗೆ ತವಪದ ಯೋಗ 2 ಪರಿ ಯೋಗದಿಂದ ಮೆರೆದೆ ಸುರ ಭೂಸುರ ವೃಂದವು ಪೊಗಳುತಿರಲು ಆಗ 3 ಮೂರ್ತಿ ಕಂಡದೇವ |ರಂಗನೊಲಿಮೆಯಿಂದಂಗ ಜನಸ್ತ್ರದ ಸಂಗರಹಿತ ಭೂದೇವಇಂಗಿತಜ್ಞ ಎನಗೀಯೊ ಗುರುವೆ ದ್ವಂದ್ವ ಸಮರ್ಪಣ ಭಾವ 4 ಹೊತ್ತಿಹೆ ಬಿರುದನು ಭಕ್ತಿರೂಪಿ ಎನೆ ಗುರು ಭಾಗಣ್ಣಹತ್ತು ಎಂಟು ಮತ್ತೊಂದು ಮೊಗದವನ ವಿಶ್ವಮೂರ್ತಿಯನ್ನ |ಪೊತ್ತು ನೀನು ಹೃತ್ಕಂಜದೊಳಗೆ ಬಹು ತುತ್ತಿಪೆಯೊ ಅವನಕೃತ್ತಿವಾಸ ಸಖ ಸರ್ವೋತ್ತಮನೆನುತೊತ್ತಿ ಪೇಳ್ದ ಅಣ್ಣ 5 ಪರಿ ಮೆರೆದೆ ನೀನು ಅಂದುಯೋಗ ಇದನ ಕಂಡಾಗ ಜನರು ಭಯ ಭ್ರಾಂತರಾದರಂದು6 ಮೂರ್ತಿ ಗುರು ಗೋವಿಂದ ವಿಠಲನ ಪಾದತೋರೊ ಭೂಪ 7
--------------
ಗುರುಗೋವಿಂದವಿಠಲರು
ಪ್ರೆಮಾಂಬುಧಿ ಶುಭದಾಯಕ ಜಯ ಜಯ 1 ಪ್ರಹ್ಲಾದಾವರ ಜಾತನೆ ಜಯಯ ಶಲ್ಯ ನೃಪಾಲಕ ಯೋಧನೆ ಜಯ ಜಯ 2 ಪುರುಹೂತಾರ್ಯ ಪೋತನೆ ಜಯ ಜಯ ಮರುತ ಪದಾರ್ಹರ ಪ್ರೀತನೆ ಜಯ ಜಯ 3 ನರಸಿಂಹಾರ್ಯರ ಪುತ್ರನೆ ಜಯ ಜಯ ಗುರುವರದೇಂದ್ರರ ಛಾತ್ರನೆ ಜಯ ಜಯ 4 ತುರುರಕ್ಷಕ ವಿಜಯಾರ್ಯರ ಜಯ ಜಯ ಕರುಣ ಪೂರ್ಣ ಪಡೆದಾತನೆ ಜಯ ಜಯ 5 ಪಂಕಜವೈರಿಯ ಭಾಗದಿ ಜಯ ಜಯ ಅಂಕಿತ ಪಡೆದ ಅಕಳಂಕನೆ ಜಯ ಜಯ 6 ಪಂಢರಿನಾಥನ ಮೂರುತಿ ಜಯ ಜಯ ಕಂಡು ಕೊಂಡಾಡಿದ ಧೀರನೆ ಜಯ ಜಯ 7 ರಂಗವಲಿದ ದಾಸ್ತೋತಮ ಜಯ ಜಯ ತುಂಗ ಮಹಿಮ ಶುಭಾಂಗನೆ ಜಯ ಜಯ 8 ನತಜನ ತತಿ ಮಂದಾರನೆ ಜಯ ಜಯ ಕೃತ ಹರಿಕಥಾಸುಧೆ ಸಾರವ ಜಯ ಜಯ 9 ಮೂಕರ ಮುಖದಿಂ ಕರುಣದಿ ಜಯ ಜಯ ವಾಕು ಪೇಳಿಸಿದ ಗುಣನಿಧಿ ಜಯ ಜಯ 10 ಮಾನವಿ ಮಂದಿರ ಮಾನಿತ ಜಯ ಜಯ ಕ್ಷೋಣಿ ವಿಬುಧ ಗಣ ಸೇವಿತ ಜಯ ಜಯ 11 ಕುಂಭಿಣಿನಾಥ ದಾಸಾಗ್ರಣಿ ಜಯ ಜಯ ನಂಬಿದೆ ನಿನ್ನ ಪದಾಂಬುಜ ಜಯ ಜಯ 12 ಸಾಧು ವರಿಯ ಪ್ರಹ್ಲಾದನೆ ಜಯ ಜಯ ಭೇದಜ್ಞಾನ ಸುಬೋಧಕ ಜಯ ಜಯ 13 ಭೂಸುರ ಕುಮುದಕೆ ಭೇಶನೆ ಜಯ ಜಯ ಭಾಸುರ ಸ್ತಂಭ ನಿವಾಸನೆ ಜಯ ಜಯ 14 ಪವನಾಗಮ ಪ್ರವೀಣನೆ ಜಯ ಜಯ ಸನ್ನುತ ಮಹಿಮನೆ ಜಯ ಜಯ 15 ತಂದೆ ನಮಗೆ ನೀನೆಂದಿಗು ಜಯ ಜಯ ಕುಂದು ಕ್ಷಮಿಸಿ ದ್ವಿಜ ವಂದ್ಯನೆ ಜಯ ಜಯ 16 ಕಂಸಾರಿಯ ಪ್ರೀಯ ಸಾಂಶನೆ ಜಯ ಜಯ ಭವ ಹಿಂಸೆಯ ಜಯ ಜಯ 17 ನಿನ್ನ ತಾಣ ಸುಕ್ಷೇತ್ರವು ಜಯ ಜಯ ನಿನ್ನ ಕವನ ಶೃತ್ಯರ್ಥವು ಜಯ ಜಯ 18 ಕಲುಷ ಕುಲಾದ್ರಿಗೆ ಕುಲಿಶನೆ ಜಯ ಜಯ ವಲಿದು ಕರಪಿಡಿದು ಸಲಹೈ ಜಯ ಜಯ 19 ಆರ್ತರಿಷ್ಟಾರ್ಥವ ಸಲಿಸಲು ಜಯ ಜಯ ಸ್ವಾರ್ಥರಹಿತರಿಗೆ ಕೀರ್ತಿಯು ಜಯ ಜಯ 20 ಎನ್ನವವ ಚನವಿದಲ್ಲವು ಜಯ ಜಯ ನಿನ್ನನು ಭವಕಿದು ಬಂದದು ಜಯ ಜಯ 21 ಮಂದ ಬುದ್ಧಿಯಲಿ ನಿಮ್ಮನು ಜಯ ಜುಯ ನಿಂದಿಪ ಮನುಜ ದಿವಾಂಧನು ಜಯ ಜಯ 22 ಧರ್ಮದ ಮಾರ್ಗವ ತೋರಿಸು ಜಯ ಜಯ ಕರ್ಮಜ ದೇವನೆ ಕೈಪಿಡಿ ಜಯ ಜಯ 23 ಅನಿಲ ಮತಾಂಬುಧಿ ಮೀನನೆ ಜಯ ಜಯ ಪ್ರಣತಾಮರಮಣಿಧೇನುವೆ ಜಯ ಜಯ 24
--------------
ಶಾಮಸುಂದರ ವಿಠಲ
ಭ್ರಷ್ಟ ಸಂಕಲ್ಪನ್ನ | ಮಾಡದಿರೆಲೋ |ಇಷ್ಟ ದೈವವೆ ಎನ್ನ | ಕಷ್ಟದೊಳು ಹಾಕಿ ಪ ಖಗ ವರಧ್ವಜ ದಾಸಮಿಗಿಲಾಗಿ ಪೇಳ್ವೆನೆಂದ | ವಘಡಿಸೀ ನುಡಿಸೀಹಗರಣದಿ ಹರಿದಿನದಿ | ಸುಗುಣ ತಾ ಬರದಿರಲುಖಗಗಮನ ನಿನ್ವಚನ | ಲಘುವಾಗಲಿಲ್ಲೇ 1 ಅಪ್ಪ ವಿಜಯಾರ್ಯ ಪದ | ವಪ್ಪಿ ಪೂಜಿಸಿ ಪೋಗಿಚಿಪ್ಪಗಿರಿಯಲಿ ನೋಡೆ | ಒಪ್ಪಿದವ ಬರದೇಅಪ್ಪಾರ ಮನನೊಂದು | ಅರ್ಪಿಸಿಹೆ ನಿನ್ನಡಿಗೆಕೃಪ್ಪೆಯಿಂ ಬರಮಾಡೊ | ಗೊಪ್ಪ ಶಿಷ್ಯನ್ನಾ 2 ಮಾನಾಪಮಾನಗಳು | ಯೇನೊಂದು ನಿನ್ನೊಳಗೊಮಾನನಿಧಿಯೆ ಕೇಳೊ | ಮೌನಿ ವರದಾದೀನ ಜನಪಾಲ ಗುರು | ಗೋವಿಂದ ವಿಠ್ಠಲನೆಮಾನ್ಯ ಮಾನದನೆಂಬ | ಸೂನೃತವ ಸಲಿಸೋ 3
--------------
ಗುರುಗೋವಿಂದವಿಠಲರು
ರಾಘವೇಂದ್ರ ಹರಿ ವಿಠಲ | ಕಾಪಾಡೊ ಇವಳಾ ಪ ಭೋಗಿ ಶಯನನೆ ಹರಿಯೆ | ನಾಗಾರಿವಾಹಾ ಅ.ಪ. ಮಂತ್ರಮಂದಿರ ಧೊರೆಯ ಅಂತರಂಗದಿ ಭಜಿಪಸತತದಿ ವಿಜಯಾರ್ಯ | ಚಿಂತೆಯಲ್ಲಿಹಳಾ |ಅಯೆ ಸತ್ಸುಕೃತದಿಂ ಹರಿದಾಸ್ಯ ಕಾಂಕ್ಷಿಪಳಮಾತೆ ಕೈ ಪಿಡಿ ಹರಿಯೇ | ಸಂತರುದ್ಧರಣಾ 1 ಭಾವದಲಿ ತವ ಮಹಿಮೆ | ಸ್ತವನಗೈಯ್ಯುವ ಕಾರ್ಯದಿವಸ ದಿವಸದಿ ವೃದ್ಧಿ | ಭಾವವನೆ ಪೊಂದೀಕವನ ರೂಪದಿ ಪ್ರವಹ | ಭುವಿಯೊಳಗೆ ಹರಿವಂತೆಹವಣಿಸೋ ಶ್ರೀಹರಿಯೇ | ಪವನ ವಂದಿತನೆ 2 ಭವ ಭಂಗ | ಕಾರುಣ್ಯಪಾಂಗ 3 ಭವ ಶರಧಿ | ದಾಟಿಸೋ ಹರಿಯೇ 4 ಕೈವಲ್ಯಪ್ರದ ಪುರುಷ | ದೇವದೇವೇಶ ಹರಿಗೊವತ್ಸನದಿಗಾವು | ಧಾವಿಸುವ ತೆರದೀನೀವೊಲಿಯು ತಿವಳಿಗೆ | ಭಾವದಲಿ ಮೈದೋರೊಭಾವಜನಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀ ಗೋಪಾಲದಾಸರು ನಿನ್ನ ದಯದಿಂದಲೇ ಎನ್ನ ಜೀವನವು ಘನ್ನ ಗೋಪಾಲ ವಿಠ್ಠಲ ದಾಸರಾಯ ಪ ತುಂಗೆ ಕೃಷ್ಣೆ ಮಧ್ಯರಂಗ ಕ್ಷೇತ್ರದಿ ಮುದದಿ ತುಂಗ ವಿಜಯಾರ್ಯರ ಪದಂಗಳಿಗೆ ಎರಗಿ ಗಂಗೆಪಿತ ಮಾತಂಗ ವರದನಾಮನ ಅಂತ ರಂಗದಿ ನೋಡಿ ಗುಣಗಳನು ಪಾಡಿದೆಯೊ 1 ಅನುಜರಿಗು ಅಚಲ ಮಾತೆಗು ಶರಣು ಸುಜನರಿಗು ಮೌನಿ ಪಂಡಿತರಿಗೂ ಎನ್ನಂಥ ಪಾಮರಗು ಜ್ಞಾನ ಸುತತ್ವ ಸನ್ಮಾರ್ಗ ಬೋಧಿಸಿ ಜಗ ನ್ನಾಥನ ಮನಸಿನ ಅನುಭವಕೆ ತಂದೆ 2 ಬೇಸರದಿ ನಾ ಸೀತಾಪತಿಪಲ್ಲಿಯಲಿ ಮಲಗೆ ಏಸು ಕರುಣವೊ ದಾಸರಾಜ ನೀ ಬಂದು ವ್ಯಾಸಮುನಿಮಠ ಗುರುಪೂಜೆಗೆ ಕರೆದೊಯ್ದು ದಶಪ್ರಮತಿ ಭಾಷ್ಯಪಠನಾರ್ಚನೆಯ ತೋರಿಸಿದೆ 3 ಗೋ ಎನಲು ಗರುಡವಾಹನ ಪೀಡೆ ಪರಿಹರಿಪ ಪಾ ಎನಲು ಪರಮಪೂರುಷ ಪಾಲಿಸುವ ಲ ಎನಲು ಲಕ್ಷ್ಮೀಶ ನಿಖಿಳೇಷ್ಟಗಳನೀವ ಅನವರತ ಗೋಪಾಲದಾಸರಿಗೆ ಶರಣು 4 ಆನಂದಮುನಿಹೃಸ್ಥ ವನಜಸಂಭವಪಿತ ಪ್ರ ಸನ್ನ ಶ್ರೀನಿವಾಸ ಜಗನ್ನಾಥ ನಿನ್ನ ಪಾದ ಸಂಸ್ಮರಿಸುವ ಸುಜನರನು ಅನವರತ ಪಾಲಿಸುವ ಸಂದೇಹವಿಲ್ಲ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಸ್ಮರಿಸುವುದು ಗುರು ಸಂತತಿಯನೂ ಪ ನಿತ್ಯ | ಗುರುವರ್ಯ ಸಂತತಿಯ ಹರಿಕರುಣವೂ ದೊರಕಿ | ಸರ್ವ ಆಮಯ ಹರವು ಪರಮ ಪುರುಷಾರ್ಥಕ್ಕೆ ವರ ಮಾರ್ಗವೆಂದೆನಿಪ ಸದ್ಭಕ್ತಿ ಜ್ಞಾನಪ್ರದವು ಅ.ಪ. ಆದಿ ಮೂರುತಿ ಹಂಸ | ಪಾದಾನುವರ್ತಿ ವಿಧಿಆದಿವಿಧಿ ಸುತರು ಸನ | ಕಾದಿ ಪದ ಪದ್ಮಗಳಮೋದದಿಂ ಭಜಿಪ ದೂ | ರ್ವಾಸ ತತ್ಕರಜ ಸುಜ್ಞಾನ ನಿಧಿಗಳ ಪಾದವ ||ಆದರದಿ ಗರುಡವಾಹನ ತೀರ್ಥ ಕೈವಲ್ಯರಾದರಿಸಿ ಜ್ಞಾನೇಶ ತತ್ಕರಜ ಪರತೀರ್ಥಪಾದಾಬ್ಜ ಸೇವಿಸುವ ಸತ್ಯ ಪ್ರಾಜ್ಞ ಕರಜ ಪ್ರಾಜ್ಞ ತೀರ್ಥರು ಯತಿಗಳ 1 ಅಚ್ಯುತ ಮಾಧವ ತೀರ್ಥ | ಆಕ್ಷೋಭ್ಯ ತೀರ್ಥರೂತತ್ಕರಜ ಪರವಾದಿ | ಗಜಸಿಂಹ ಜಯತೀರ್ಥಯತಿಗಳಾ ವಿದ್ಯಾಧಿ | ರಾಜ ಸತ್ಕವೀಂದ್ರರು ವಾಗೀಶ ರಾಮಚಂದ್ರ 2 ಅತ್ಯಂತ ಮಹಿಮರೆನೆ | ವಿಭುದೇಂದ್ರ ವಿದ್ಯೆನಿಧಿಮತ್ತವರ ಕರಜಾತ | ರಘುನಾಥ ರಘುವರ್ಯಭೃತ್ಯ ವೇದವ್ಯಾಸ | ತೀರ್ಥ ವಿದ್ಯಾಧೀಶ ವೇದನಿಧಿ ಸತ್ಯವ್ರತರ ||ಸತ್ಯನಿಧಿ ಸತ್ಯನಾಥಾಖ್ಯ ಸತ್ಯಾಭಿನವಸತ್ಯ ಪೂರ್ಣಾಖ್ಯ ಯತಿ | ಸತ್ಯ ವಿಜಯಾರ್ಯ ವರಸತ್ಯ ಪ್ರಿಯ ತೀರ್ಥಾಖ್ಯ | ಸತ್ಯ ಬೋಧಾಖ್ಯಮಹ ಸತ್ಯ ಸಂಧಾಖ್ಯ ಮುನಿಯ 3 ಸತ್ಯವರ ಸತ್ಯಧರ್ಮಾಖ್ಯ ಸತ್ಯಸಂಕಲ್ಪಸತ್ಯ ಸಂತುಷ್ಟಾಖ್ಯ | ಸತ್ಯ ಪರೆಯಣ ತೀರ್ಥ ಸತ್ಯ ಕಾಮಾಖ್ಯ ಯತಿ | ಸತ್ಯೇಷ್ಟ ಕರಜರೆನೆ ಸತ್ಯ ಪರಾಕ್ರಮ ತೀರ್ಥರ || ಸತ್ಯ ವೀರಾಖ್ಯಯತಿ | ಸತ್ಯಧೀರಾಖ್ಯರಂತತ್ಕರಜ ಶಿರಿಸತ್ಯ | ಜ್ಞಾನಾಖ್ಯ ಅಗ್ನ್ಯಂಶದುಸ್ತಿಮಿರ ಮಾಯ್ಮತದ | ಮಾರ್ತೆಂಡರೆಂದೆನಿಪ ಶಿರ ಸತ್ಯ ಧ್ಯಾನಾಖ್ಯರ4 ನಿತ್ಯ ಗುರು ಗೋವಿಂದ ವಿಠಲ ತಾ ಪೊರೆವ ಸತ್ಯ 5
--------------
ಗುರುಗೋವಿಂದವಿಠಲರು
124-2ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಆರಣೀ ಸಜ್ಜನರ ಸೌಭಾಗ್ಯ ಏನೆಂಬೆಸೂರಿವರ ಸತ್ಯವರ್ಯ ಭಾವಿ ಸತ್ಯಪ್ರಿಯರಆರಾಧಿಸಿ ಕಳುಹಿಸಿದ ಸ್ವಲ್ಪ ಕಾಲದಲೆಆರಣಿಗೆ ಬಂದರು ಸತ್ಯವಿಜಯಾರ್ಯ 1ಸಂಸ್ಥಾನ ಮೂರ್ತಿಸ್ಥ ಹರೀಪೂಜೆ ವೈಭವವುನಿತ್ಯಪ್ರವಚನ ಪಾಠ ಕೀರ್ತನೆ ಏನೆಂಬೆಸತ್ಯವಿಜಯರು ಯುಕ್ತ ಕಾಲದಲಿ ದೇಹಅದಾರುಢ್ಯ ಹೊಂದಿದರು ರಾಜಗೆ ಹೇಳಿದರು 2ತಮ್ಮ ತರುವಾಯ ಸಂಸ್ಥಾನ ಸರ್ವಾಡಳಿತಶ್ರೀಮನೋಹರ ಹರಿಪ್ರಿಯರು ಸತ್ಯವರ್ಯಸುಮನೋಹರ ಸತ್ಯಪ್ರಿಯ ತೀರ್ಥ ನಾಮದಲಿರಮಾರಮಣನ ಸೇವೆಗೆ ವಹಿಸಬೇಕೆಂದು 3ಆದ ಕಾರಣ ಆ ಸ್ವಾಮಿಗಳ ಕರೆತರಿಸಿಭಕ್ತಿ ವಿನಯದಿ ಮಠವ ಒಪ್ಪಿಸಬೇಕೆಂದುಹಿತದಿ ಆಜ್ಞಾಪಿಸಿ ಹರಿಪುರಯೈದಿದರುಚೈತ್ರ ಕೃಷ್ಣ ಪುಣ್ಯದಿನ ಏಕಾದಶಿ ದ್ವಾದಶಿಲಿ 4ಆರಣೀರಾಜನು ಸತ್ಯವರ್ಯ ತೀರ್ಥರಲಿಅರಿಕೆ ಮಾಡಿ ಸ್ವಾಮಿಗಳು ಕೆಲವು ದಿನಮೇಲ್ಆರಣಿಗೆ ಪೋದರು ಶ್ರೀಮಠದ ಆಡಳಿತಹರಿಪ್ರೀತಿ ಸೇವೆಗೆ ಕೊಂಡರು ತಾವು5ಮೊದಲೇವೆ ಶ್ರೀ ಸತ್ಯವರ್ಯ ತೀರ್ಥರ ಮಠಸಂಸ್ಥಾನ ವೈಭವದಿ ಪ್ರಕಾಶಿಸುತ್ತಿತ್ತುಸತ್ಯ ವಿಜಯರ ಕೋರಿಕೆಯಂತೆ ಈವಾಗಹೊಂದಿದರು ಸತ್ಯವಿಜಯರ ಸಂಸ್ಥಾನ 6ಸತ್ಯಾಭಿನವರ ಪದ್ಧತಿಯಲ್ಲಿ ಶ್ರೀಮಠಸತ್ಯಪೂರ್ಣ ಸತ್ಯವಿಜಯರಿಂದ ವೈಭವದಿಇದ್ದ ಆಮಠ ಪೀಠ ಅಲಂಕರಿಸಿದರೀಗಸತ್ಯವರ್ಯ ವೈರಾಗ್ಯ ನಿಧಿಯು ಶ್ರೀಮಾನ್ 7ಬಾದರಾಯಣರಾಮ ಯದುಪತಿಯ ಸೇವೆಗೆಪ್ರೀತಿಗೆ ಸ್ವಾಮಿಗಳು ಮಠವನ್ನು ಹೊಂದಿಸತ್ಯವಿಜಯರು ಕೋರಿದಂತೆ ತಮ್ಮಯನಾಮಸತ್ಯಪ್ರಿಯತೀರ್ಥರೆಂದು ಕೊಂಡರು ಮುದದಿ 8ಧನ ಸತ್ಯಪ್ರಿಯ ತೀರ್ಥರುವಿಜೃಂಭಣೆಯಿಂದ ಚರಿಸಿ ಪುರಜನರ್ಗೂರಾಜನಿಗೂ ಫಲ ಮಂತ್ರಾಕ್ಷತೆಗಳ ಕೊಟ್ಟುರಾಜ ಮಾರ್ಯಾದೆ ಕೊಂಡುಹೊರಟರು ಅಲ್ಲಿಂದ 9ಆಂಧ್ರದೇಶದ ಕಡಪ ಉತ್ತರ ಕರ್ನಾಟಕಮತ್ತು ದಕ್ಷಿಣ ಕರ್ನಾಟಕ ಶ್ರೀರಂಗಇಂಥ ಸ್ಥಳಗಳಲ್ಲಿ ಸಂಚಾರ ಮಾಡುತ್ತಾಹಿತದಿ ಅನುಗ್ರಹಿಸಿದರು ಭಕ್ತವೃಂದಕ್ಕೆ 10ಪೀತಾಸಿಂಗ ರಾಘವಜಿ ಮುರಾರಿ ಮೊದಲಾದಕೃತಜÕ ಜನ ಪ್ರಮುಖರ ಭಕ್ತಿ ಯುತವಾದಭೂದಾನ ಗ್ರಾಮದಾನ ಮಾಡಿದ್ದ ಸ್ವೀಕರಿಸಿಶ್ರೀದನಿಗೆ ಅರ್ಪಿಸುತ ಒಲಿದರು ಸಜ್ಜನಕೆ 11ರಾಯಚೂರು ಹರಿಯಾಚಾರ್ಯರೆಂಬ ವೈಷ್ಣವಕಾಯವಾಙ್ಮನ ಇದ್ದ ಬ್ರಾಹ್ಮಣ ದಂಪತಿಯುಪ್ರಿಯ ವತ್ಸರುಗಳೊಡೆ ಸ್ವಾಮಿಗಳ ಕಡೆ ಬಂದುವಿನಯದಿ ನಮಿಸಿ ನಿಂತರು ಮಠದಲ್ಲಿ 12ಹರಿಯಾಚಾರ್ಯರ ಮಕ್ಕಳಲಿ ರಾಮಾರ್ಯಸ್ಫುರದ್ವರ್ಚಸ್ ಯುತ ಬಹುಚೂಟಿಯಾದ ಮಗನುಶ್ರೀ ಶ್ರೀಗಳು ಆ ಹುಡುಗಗೆ ಮಠದಲ್ಲಿಶಾಸ್ತ್ರಾಭ್ಯಾಸಾದಿಗಳ ಒದಗಿಸಿದರು 13ಕಾಲಕ್ರಮದಲ್ಲಿ ವಟುಗೆ ವಿವಾಹ ಮಾಡಿದರುಮಕ್ಕಳು ರಾಮಚಾರ್ಯರಿಗೆ ಎರಡುಮಾಲೋಲ ಇಚ್ಛೆಯಿಂ ಸ್ವಾಮಿಗಳು ದಕ್ಷಿಣಸ್ಥಳ ಯಾತ್ರೆ ಗೈದರು ಸೇತು ಸಮೀಪ 14ಮಾನಾಮಧುರೆಯ ವೇಗವತೀ ತೀರವುತನ್ನ ಮಠವನ್ನು ಸ್ಥಾಪಿಸಿದರು ಅಲ್ಲಿಘನಮಹಾ ಸೂರಿಯು ರಾಮಚಾರ್ಯರನ್ನತನ್ನ ಸಮೀಪದಲ್ಲೇ ನಿಲ್ಲಿಸಿದರು 15ಬಹು ವರ್ಷ ಸಂನ್ಯಾಸ ರತ್ನರಾಗಿ ಬೆಳಗಿವಹಿಸಿ ಸಂಸ್ಥಾನವ ಏಳು ವರ್ಷಶ್ರೀಹರಿಗೆ ಪ್ರಿಯರಾಮಾಚಾರ್ಯರಿಗೆ ಸಂನ್ಯಾಸವಿಹಿತದಿ ಇತ್ತರು ಶ್ರೀ ಸ್ವಾಮಿಗಳು 16ಸತ್ಯಪ್ರಿಯ ಗುರುವರ್ಯ ತಮ್ಮ ಪ್ರಿಯ ಶಿಷ್ಯರಿಗೆಸತ್ಯಬೋಧ ತೀರ್ಥವೆಂಬ ಸಂನ್ಯಾಸ ನಾಮವನ್ನಿತ್ತುಚೈತ್ರ ಶುದ್ಧ ಹದಿಮೂರನೆ ಪುಣ್ಯ ದಿನದಿಯದುಪತಿಯ ಧ್ಯಾನಿಸುತ ಹರಿಪುರಯೈದಿದರು 17ಮತ್ತೊಂದು ಅಂಶದಲಿ ಬೃಂದಾವನದಲ್ಲಿನಿಂತಿಹರು ಅಶ್ವಾಸ್ಯಧ್ಯಾನಪರರಾಗಿಹಿತದಿ ಕೊಡುತಿಹರು ವಾಂಛಿತವ ಶರಣರಿಗೆಸದಾನಮೋ ಮಾಂಪಾಹಿ ಗುರುವರ್ಯ ಶರಣು 18ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 19 ಪ
--------------
ಪ್ರಸನ್ನ ಶ್ರೀನಿವಾಸದಾಸರು
139-1ಶ್ರೀರಮಣ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಶ್ರೀನಿವಾಸಾಚಾರ್ಯ ಪಂಡಿತೋತ್ತಮರುಅನಿಮಿಶಾಂಶರು ಹೌದು ಭುವಿಯಲ್ಲಿ ಹುಟ್ಟಿಮಾನುಷಾನ್ನವನುಂಡು ಕರ್ಮವಾತಾವರಣಸನ್ನಿವೇಶದ ಬಲದಿ ಗರ್ವಕೊಳಗಾದರು 1ಆದಿತೇಯರು ಭೂಮಿಯಲ್ಲಿ ಜನ್ಮವ ತಾಳೆಜಾತಾಪರೋಕ್ಷಿಗಳು ಶಕ್ತ್ಯಾತ್ಮನಾವ್ಯಕ್ತ್ಯಾತ್ಮನಾಅಪರೋಕ್ಷಪ್ರಕಾಶವುಒದಗಿ ಗುರುಗಳು ಅನುಗ್ರಹವು ಮಾಡಿದರೆ 2ದೇವತಾ ಕಕ್ಷದಲಿ ದೊಡ್ಡ ಮಟ್ಟದವರುವಿಶ್ವಾಮಿತ್ರರಿಗೆ ಉತ್ತಮರು ನಾರದಗೆಆವರರೆನಿಸುವ ಭೃಗುಋಷಿಯೇ ವಿಜಯಾರ್ಯರುತಾವೆ ಬಂದರು ಶ್ರೀನಿವಾಸರ ಬಳಿಗೆ 3ಪೂರ್ವದಲೆ ಕೇಳಿಹರು ಈ ವಿಜಯದಾಸರುದೇವಾಂಶಅಪರೋಕ್ಷಜ್ಞಾನಿಗಳು ಎಂದುಈ ವಿಧದಿಪೇಳುವುದುಪುಸಿಎಂದು ನೆನೆದರುಗರ್ವಮೌಢ್ಯದಿ ಶ್ರೀನಿವಾಸ ಆಚಾರ್ಯ 4ಕನ್ನಡ ನುಡಿ ಹಾಡಿ ಕುಣಿಕುಣಿವ ಈ ದಾಸಜ್ಞಾನಿಯೆ ? ಅರಿತವನೇ ಬ್ರಹ್ಮವಿದ್ಯೆ ಎಂದುಹೀನಮಾತ್ಸರ್ಯದಿ ಮನಸೋತು ಅವಹೇ -ಳನ ಮಾಡಿದರು ವಿಜಯಾರ್ಯರಲ್ಲಿ 5ತಾಳುವ ತನ್ನಲ್ಲಿ ಮಾಡುವ ಅಪರಾಧತಾಳಹರಿ ತನ್ನ ಭಕ್ತರಲಿ ಮಾಡುವುದುಮಾಲೋಲ ನಿಯಮನದಿ ಸ್ವೋತ್ತಮಾಪರಾಧಫಲವು ಕಂಡಿತು ಶ್ರೀನಿವಾಸರಲಿ ಬೇಗ 6ರಾಜಯಕ್ಷ್ಮವೋಗುಲ್ಮಮತ್ತೇನು ರೋಗವೋರಾಜವೈದ್ಯರು ಸಹ ನಿರ್ಣಯಿಸಲಶಕ್ಯಭೋಜನ ಅರುಚಿ ಉದರಶೂಲಿತನು ಕುಗ್ಗಿಲಾಜವೂ ಸಹ ಜೀರ್ಣ ಆಗದ ಮಾಂದ್ಯ 7ಇಂದಿರೇಶಗೆ ಪ್ರಿಯ ಮಹಾತ್ಮ ಸ್ವೋತ್ತಮರಲ್ಲಿಗೈದ ಅಪರಾಧ ಫಲವೆಂದರಿಯದೆವೈದ್ಯಕ್ಕೆ ಹಣ ವೆಚ್ಚ ಮಾಡಿ ಕ್ಷೇತ್ರಗಳಿಗೆಪೋದರು ದೈವಾನುಗ್ರಹ ಪಡೆಯಲಿಕ್ಕೆ 8ವಾದೀಂದ್ರಸನ್ನುತರಾಘವೇಂದ್ರಾರ್ಯರವೃಂದಾವನದಲ್ಲಿ ಸೇವೆ ಮಾಡಿದರುಮುಂದು ಯಾತ್ರೆ ಗೈದು ಘಟಿಕಾದ್ರಿ ಹನುಮಗೆದುಗ್ಧಾಭಿಷೇಕ ಹರಿವಾಯುಸ್ತುತಿಯಿಂದ 9ಮಂತ್ರಾಲಯ ವೆಂಕಟಗಿರಿ ಘಟಿಕಾದ್ರಿಇಂಥಾ ಸುಪುಣ್ಯ ಕ್ಷೇತ್ರಗಳಿಗೆ ಪೋಗಿಮಂತ್ರಾಲಯ ಮತ್ತೂ ಬಂದು ಶ್ರೀ ರಾಘ-ವೇಂದ್ರ ತೀರ್ಥರಪಾದಭಜಿಸಿ ನಮಿಸಿದರು10ಹರಿವಾಯುಸ್ತುತಿ ಪುರಶ್ಚರಣ ಆದರದಿಚರಿಸೆ ಭಾರತೀಶನು ಮತ್ತುಗುರುರಾಘವೇಂದ್ರರುಅರುಪಿದರು ಸ್ವಪ್ನದಿ ವಿಜಯವಿಠಲ ದಾÀಸಆರ್ಯರಲಿ ಶರಣಾಗುಕ್ಷಮೆಬೇಡು ಎಂದು11ಶ್ರೀನಿವಾಸ ಆಚಾರ್ಯರು ಎಚ್ಚರಿತುತಾನು ವಿಜಯಾರ್ಯರಲಿ ಗೈದ ಅಪರಾಧನೆನೆದು ಬಹುವ್ಯಾಕುಲಪಶ್ಚಾತ್ತಪ್ತರು ಆಗಿಕ್ಷಣದಿ ಹೊರಟರು ವಿಜಯದಾಸರ ಬಳಿಗೆ 12ದೀನ ಕರುಣಾಕರರುವಿಜಯದಾಸಾರ್ಯರುಘನದಯದಿ ಶ್ರೀನಿವಾಸಾಚಾರ್ಯರ ಕ್ಷಮಿಸಿತನ್ನ ಶಿಷ್ಯ ಗೋಪಾಲದಾಸಾರ್ಯರುಅನುಗ್ರಹ ಮಾಡುವ ಗುರುಗಳು ಎಂದರು 13ಪರಮಗುರುವರ್ಯ ಶ್ರೀ ವಿಜಯದಾಸಾರ್ಯರನಿವ್ರ್ಯಾಜ ಪ್ರೀತಿ ಅಪ್ಪಣೆಯ ತಾ ಕೊಂಡುಗುರುಗಳು ಗೋಪಾಲದಾಸಾರ್ಯರಲಿ ಪೋಗಿಶರಣಾಗಿ ಶ್ರೀನಿವಾಸರು ನಮಿಸಿದರು 14ತನ್ನಲ್ಲಿ ಗುರುಗಳು ಕಳುಹಿಸಿದವರೆಂದುದೀನ ಆಚಾರ್ಯರು ನಿಜ ಶರಣರೆಂದುಚೆನ್ನಾಗಿ ಆತನ ಪರಿಸ್ಥಿತಿ ಅರಿತುಅನುಗ್ರಹಿಸಿದರು ಗೋಪಾಲವಿಠಲರು 15ಅನ್ನ ಫಲಹಾರಗಳ ಕೊಳ್ಳದ ವ್ಯಾಧಿಯಲಿಸಣ್ಣ ಬಡವಾದಂಥ ಗಾತ್ರದಿಂದಸನ್ನಮಿಸಿದ ಶ್ರೀನಿವಾಸಾಚಾರ್ಯನ್ನಮನೆಯಲ್ಲಿ ಉಪಚರಿಸಿ ಆದರಿಸಿದರು 16ಗುರುಗ ಶಿರಿವಿಜಯವಿಠಲ ತನ್ನೊಳಿಪ್ಪಶಿರಿ ಗೋಪಾಲ ವಿಠsÀಲ ಶ್ರೀನಿವಾಸಸರಸಿಜಭವಾಂಡ ದೊರೆ ಶ್ರೀ ಜನಗ್ನಾಥನ್ನಸ್ಮರಿಸಿ ಅರ್ಚಿಸಿ ನೈವೇದ್ಯ ಮಾಡಿದರು 17ನಿವೇದಿತಾನ್ನ ಜೋಳದ ರೊಟ್ಟಿ ಕೊಟ್ಟುದ್ರವ ಮಾತ್ರ ಕೊಳ್ಳುವ ರೋಗಿ ಆಚಾರ್ಯಗೆದೇವರ ಅನಿಲನಪರಮಗುರುಗಳ ನೆನೆದುಸವಿದು ಉಣ್ಣುವುದೆಂದು ಹಿತದಿ ಪೇಳಿದರು 18ಶ್ರೀನಿವಾಸಾಚಾರ್ಯ ಉಣ್ಣಲು ರೋಗವುದಿನದಿನದಿ ಕ್ರಮದಿಂದ ನಿವಾರಣ ಆಯ್ತೂಧ್ಯಾನ ಪೂಜಾಅನುಸಂಧಾನಕ್ರಮಗಳುಚೆನ್ನಾಗಿ ಆಚಾಯರಾಕರ್ಷಿಸಿದವು 19ಶ್ರೀನಿವಾಸಾಚಾರ್ಯರ ರೋಗಮೋಚನಕೆಧ್ಯಾನಿಸಿ ಜಪಿಸಿ ಶ್ರೀ ಧನ್ವಂತರಿ ಮಂತ್ರಬಿನ್ನಪವ ಮಾಡಿದರು ಕೀರ್ತನಾ ರೂಪದಿದೀನದಯಾಳು ಗೋಪಾಲದಾಸಾರ್ಯ 20ಆಹ್ನಿಕ ಜಪಗುರುಪರಮಗುರು ನಮನವಿಘ್ನವಿಲ್ಲದೆ ಆಚಾರ್ಯರು ಚರಿಸಿದರುಘನರೋಗ ಹೋಯಿತು ತ್ರಾನ ಇನ್ನೂ ಬೇಕುಶ್ರೀನಿಧಿ ನೋಡಿದನು ಕೃಪಾದೃಷ್ಟಿಯಿಂದ 21ಶ್ರೀ ನಿಧಿಃ ಸರ್ವಭೂತಾನಾಂ ಭಯಕೃದ್ಭಯನಾ -ಶನನು ವಿಜಯದಾಸಾರ್ಯ ರೂಪದಲಿತಾನೆ ಸ್ವಪ್ನದಿ ಪೇಳ್ದ ಗೋಪಾಲದಾಸರಿಗೆದಾನ ಕೊಡು ಆಯುಷ್ಯ ಚತ್ವಾರಿವರ್ಷ 22ಶಿರಿವಿಜಯವಿಠ್ಠಲ ವಾಯುಗುರುಇಚ್ಛಾನು -ಸಾರದಿ ಶ್ರೀನಿವಾಸಾಚಾರ್ಯನಲಿ ವಾತ್ಸಲ್ಯಕಾರುಣ್ಯ ತೋರಿಸಿ ತಮಗಿದ್ದ ಆಯುಸ್ಸಲಿಎರೆದರು ಧಾರೆಯ ನಲವತ್ತು ವರ್ಷ 23ಏನೆಂಬೆ ಈ ನಮ್ಮ ಗುರುಗಳ ಔದಾರ್ಯದೀನಕರುಣಾಂಬುಧಿ ಗೋಪಾಲದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ ಆಯುಷ್ಯವ ಕೊಡುವರೆ ಅನ್ಯರಿಗೆ 24ರೋಗಕಳೆದು ಆಯುರ್ದಾನವಕೊಂಡಈಬ್ಯಾಗವಟ್ಟ ಶ್ರೀನಿವಾಸಾಚಾರ್ಯಜಗನ್ನಾಥವಿಠ್ಠಲ ದಾಸರಾಯರು ಎಂದುಜಗತ್ತಲ್ಲಿ ಖ್ಯಾತರಾಗುವ ಬಗೆ ಮಾಡಿದರು 25ಗುರುಹಿರಿಯರಲಿ ಮಾಳ್ಪ ಉದಾಸೀನ ಎಷ್ಟುಭಾರಿತರ ಆಪತ್ತು ಕೊಡುವುದು ಎಂದುಗುರುಅನುಗ್ರಹದಿಂದ ಸೌಭಾಗ್ಯಲಾಭವುಅಪಮೃತ್ಯು ಪರಿಹಾರ ಎಂದು ತಿಳಿಯುತ್ತೆ 26ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 27-ದ್ವಿತೀಯಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-3ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹರಿದಾಸ ಶ್ರೇಷ್ಠವರ ಕರುಣಿ ಪುರಂದರಾರ್ಯಗುರುಮಹಂತರು ಕೃಪಾನಿಧಿಯು ವಿಜಯಾರ್ಯಈರ್ವರನು ಸಂಸ್ಮರಿಸಿ ಗೋಪಾಲದಾಸರುಪರಮದಯ ತೋರಿದರು ಆಚಾರ್ಯರಲ್ಲಿ1ಹರಿದಾಸ ಪಂಥದಲಿ ಆಚಾರ್ಯರು ಸೇರಿಹರಿವಾಯು ಸೇವೆಯು ಸಜ್ಜನೋದ್ಧಾರಧರೆಯಲ್ಲಿ ಮಹತ್ಕಾರ್ಯ ಆಗುವುದು ಎಂದುಅರಿವರು ಗೋಪಾಲದಾಸರು ಮೊದಲೇ 2ಹರಿದಾಸಗೋಷ್ಠಿಯು ವೆಂಕಟಾಚಲ ಯಾತ್ರೆಚರಿಸೆ ವೆಂಕಟ ರಮಣನಾಲಯದಲ್ಲಿಶ್ರೀ ಶ್ರೀನಿವಾಸನು ಈ ಆಚಾರ್ಯಗೆನೇರವಾಗಿ ತಾನೆ ಕೊಟ್ಟಿಹ ಪ್ರಸಾದ 3ನೆನೆದರು ಈಗ ಗೋಪಾಲದಾಸಾರ್ಯರುತನ್ನ ರೂಪದಿ ಅಂದುಬಂದು ವಾತ್ಸಲ್ಯದಿಅನ್ನ ನಾಮಾವೆಂಕಟಕೃಷ್ಣ ಜಗದೀಶಅನ್ನ ಕೊಟ್ಟು ಒಲಿದಿಹನು ಆಚಾರ್ಯಗೆ 4ಪುರಂದರದಾಸಾರ್ಯರು ಒಲಿದು ದಯದಿ ತಾನೆಯಾರಿಗೆ ತಿಮ್ಮಣ್ಣಾರ್ಯರದ್ವಾರ ಉಪದೇಶಅನುಗ್ರಹ ನಾಮಾಂಕಿತವ ಇತ್ತರೋ ಆನರಸಿಂಹ ದಾಸಾರ್ಯರ ಪುತ್ರರು ಇವರು 5ಹರಿದಾಸರ ಪುತ್ರರಿವರು ಯೋಗ್ಯರು ಎಂದುಹರಿದಾಸಪದ್ಧತಿ ಆರಾಧನಾಕ್ರಮಶಾಸ್ತ್ರ ಜಿಜ್ಞಾಸೆಅನುಸಂಧಾನರೀತಿಯೂಅರುಪಿದರು ಆಚಾರ್ಯರಿಗೆ ದಾಸಾರ್ಯ 6ನೆರೆದಿದ್ದರೂ ಗೋಪಾಲದಾಸಾರ್ಯರಪರಮಪ್ರೀತಿ ಪಾತ್ರ ಈಮಹಂತರುವರದ ಗೋಪಾಲರು ತಂದೆ ಗೋಪಾಲರುಗುರುಗೋಪಾಲದಾಸಾದಿಸೂರಿಗಳು7ಭಾರತೀಪತಿ ಅಂತರ್ಗತಹರಿಶ್ರೀಶಗುರುಗಳ ಒಳಗಿದ್ದು ಜ್ಞಾನೋಪದೇಶಹರಿದಾಸತ್ವದ ವರನಾಮಾಂಕಿತವಕಾರುಣ್ಯದಿಈವಅಧಿಕಾರಿಗಳಿಗೆ8ವನರುಹೇಕ್ಷಣ ಯಜÕನಧಿಷ್ಠಾನ ಯಜÕನವನಜಪಾದ ದ್ವಯವು ಮನವಾಕ್ಕಿಲಿಹುದುಅನಿಲ ಸೋಕಿದ ತೂಲರಾಶಿಯಂದದಲಿಏನು ಮೈಲಿಗೆಯಾದರು ಸುಟ್ಟು ಪೋಪುವು 9ತುಳಸಿದಳ ನಿರ್ಮಾಲ್ಯ ಹರಿಗೆ ಅರ್ಪಿತವಾದ್ದುಜಲಸ್ನಾನ ತರುವಾಯ ಧ್ಯಾನ ಸ್ನಾನಜಲಜನಾಭನ ದಿವ್ಯನಾಮ ಸಂಕೀರ್ತನೆಎಲ್ಲ ಮೈಲಿಗೆ ದೋಷ ಪರಿಹರಿಸುವುವು 10ಶೀಲ ತನುಮನದಿಂದಗುರುಪರಮಗುರುದ್ವಾರಮಾಲೋಲ ಪ್ರಿಯತಮ ಜಗದೇಕ ಗುರುವೆಂದುಗಾಳಿದೇವನು ಮಧ್ವ ಭಾವಿಬ್ರಹ್ಮನ ಸ್ಮರಿಸಿಕಾಲಿಗೆ ಎರಗಿ ಶ್ರೀಹರಿಯ ಚಿಂತಿಪುದು 11ವಾಯುದೇವನ ಒಲಸಿಕೊಳ್ಳದ ಜನರಿಗೆಭಯಬಂಧ ನಿವೃತ್ತಿಯು ಸದ್ಗತಿಯು ಇಲ್ಲಮಾಯಾಜಯೇಶನಪರಮಪ್ರಸಾದವುವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 12ಬಲಜ್ಞಾನಾದಿಗಳಲ್ಲಿ ಹ್ರಾಸ ಇಲ್ಲವು ಇವಗೆಎಲ್ಲ ಅವತಾರಗಳು ಸಮವು ಅನ್ಯೂನಶುಕ್ಲಶೋಣಿತಸಂಬಂಧವು ಇಲ್ಲವೇ ಇಲ್ಲಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 13ಮಾತರಿಶ್ವಸೂತ್ರಪವಮಾನ ಮುಖ್ಯ ಪ್ರಾಣತ್ರೇತೆಯಲಿ ಹನುಮ, ದ್ವಾಪರದಲಿ ಭೀಮಈತನೇ ಕಲಿಯುಗದೆ ಮಧ್ವಾಭಿದಾನದಿಬಂದಿಹನು ಸಜ್ಜನರ ಉದ್ಧಾರಕಾಗಿ 14ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂಪ್ರತಿಷ್ಠಿತವು ಜೀವರ ದೇಹಕಾಧಾರತತ್ವದೇವಾದಿಗಳ ವರಿಷ್ಟ ಚೇಷ್ಟಕನುಈ ವಾಯುವೇ ಬ್ರಹ್ಮಧಾಮನಾಗಿಹನು 15ಬ್ರಹ್ಮಧಾಮನುಜೀವೋತ್ತಮವಾಯು ಆದುದರಿಂದಬ್ರಹ್ಮ ಸುಗುಣಾರ್ಣವ ಸರ್ವೋತ್ತಮ ವಿಷ್ಣೂನಅಹರ್ನಿಶಿಸ್ಮರಿಪುದು ಈ ಬ್ರಹ್ಮಧಾಮನಲಿಬ್ರಹ್ಮಪ್ರಸಾದ ಆಕಾಂಕ್ಷಿ ಅಧಿಕಾರಿ 16ಬ್ರಹ್ಮಗುಣಪೂರ್ಣಹರಿಗೋಪಾಲ ವೆಂಕಟನೆಬ್ರಹ್ಮಾಂಡ ಸರ್ವವ ಪಾಲಿಸುವ ಪ್ರಭುವುಅಹೋರಾತ್ರಿ ಏಳುದಿನ ಗಿರಿ ಎತ್ತಿ ಮಳೆ ತಡೆದಮಹಾದ್ರಿಧೃಕ್ ಅನ್ನಾದ ಅನ್ನದ ಜಗನ್ನಾಥ 17ಗೋವರ್ಧನಗಿರಿ ಎತ್ತಿ ಜನ ಪಶು ಕಾಯ್ದಶ್ರೀವರ ಗೋಪಾಲ ವಿಠ್ಠಲ ರುಕ್ಮಿಣೀಶದಿವ್ಯ ಮಂದಿರದಲ್ಲಿ ಭೀಮರತಿಯ ತೀರದಲಿದೇವ ನಿಂತಿಹ ಶ್ರೀನಿವಾಸ ಜಗನ್ನಾಥ 18ಶ್ರೀನಿವಾಸ ವೆಂಕಟನೆ ಗೋಪಾಲ ವಿಠ್ಠಲನುತನ್ನ ಭಕ್ತನಿಗೊಲಿದು ಪಂಢರೀಪುರದಿತಾನೆ ಬಂದು ಅಲ್ಲೇ ನಿಂತು ಭಕ್ತರು ಮಾಳ್ಪಗಾನ ಸೇವಾ ಕೇಳುತ ಪಾಲಿಸುತಿಹನು 19ಸರ್ವಕ್ಷರ ಉತ್ತಮನು ಸರ್ವೇಶಸರ್ವ ಐಶ್ವಯಾದಿ ಸಚ್ಛಕ್ತಿ ಪೂರ್ಣಶಿವ ಸುರಪುರಿಗೆ ಸುಖಜ್ಞಾನಾದಿಗಳನೀವದೇವಿ ಶ್ರೀ ಲಕ್ಷ್ಮೀಶ ಠಲಕ ವಿಠ್ಠಲನು 20ಜಡಭವ ಅಂಡದ ಸೃಷ್ಟ್ಯಾದಿ ಕರ್ತನಿವತಟಿತ್ಕೋಟಿಅಮಿತ ಸ್ವಕಾಂತಿಯಲಿ ಜ್ವಲಿಪಜಡಜ ಭವಪಿತ ಡರಕ ಜಗನ್ನಾಥ ವಿಠ್ಠಲನುನೋಡಲಿಕೆ ಕಾಣುವ ಅವನಿಚ್ಛೆ ದಯದಿ 21ಜಲದಲ್ಲಿ ಜಲರೂಪ ಜಲಜೇಕ್ಷಣನಿಹನುಜಲದಲ್ಲಿ ನೀ ಮುಳುಗಿ ಮೇಲೇಳುವಾಗಜ್ವಲಿಸುವ ಶಿರೋಪರಿ ಜಗನ್ನಾಥ ವಿಠ್ಠಲನುಒಳನಿಲುವ ಹೊರಕಾಂಬ ಎಲ್ಲರ ಸ್ವಾಮಿ 22ಇಂಥಾಸುವಾಕ್ಯ ಧಾರಾನುಗ್ರಹವಹಿತದಿ ಗೋಪಾಲದಾಸಾರ್ಯರು ಎರೆಯೆಮುದಬಾಷ್ಪ ಸುರಿಸುತ್ತ ಶ್ರೀನಿವಾಸಾಚಾರ್ಯಭಕ್ತಿಯಲಿ ನಮಿಸಿದರು ಗುರುಚರಣಗಳಿಗೆ 23ವಾಸುದೇವನ ಒಲಿಸಿಕೊಂಡ ಐಜೀಯವರುಈಶಾನುಗ್ರಹ ಪಡೆದ ದಾಸಾರ್ಯರುಗಳುಆ ಸಭೆಯಲಿ ಇದ್ದ ಹರಿಭಕ್ತ ಭೂಸುರರುಆಶೀರ್ವದಿಸಿದರು ಆಚಾರ್ಯರನ್ನು 24ಉತ್ಕøಷ್ಟ ನಿಗಮಘೋಷಗಳು ಮಂಗಳಧ್ವನಿಹರಿನಾಮ ಕೀರ್ತನ ಸುಸ್ವರ ಸಂಗೀತದಾರಿಯಲಿ ಎದುರ್ಗೊಂಡ ಶುಭಕರ ಶಕುನವುಹೊರಟರಾಚಾರ್ಯ ವಿಠ್ಠಲ ದರ್ಶನಕೆ 25ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಚತುರ್ಥ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-4ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಗುರುಗಳು ಏಕಾಂತದಲ್ಲಿ ಇತ್ತ ಉಪದೇಶಮರೆಯದೇ ಅನುಸರಿಸಿ ಭೀಮರತಿಯನ್ನುಸೇರಿ ವಿಹಿತದಿ ಸಂಕಲ್ಪಾದಿಗಳ ಮಾಡಿನೀರಲ್ಲಿ ಇಳಿದರು ಶ್ರೀನಿವಾಸಾಚಾರ್ಯ 1ಸರ್ವ ಜಗತ್ಪಾಲ ಶ್ರೀ ಪಾಂಡುರಂಗವಿಠ್ಠಲನುಪ್ರವಾಹ ಸುಳಿಯಿಂದ ಬಡುಗಾತ್ರ ಭಕ್ತನ್ನಕಾಯ್ವುದಕೆ ಗಂಡಾ ಶಿಲಾ ನಿರ್ಮಿಸಿದ ಅಲ್ಲಿದೇವಗುರುಸ್ಮರಣೆಯಿಂ ಇಳಿದರಾಚಾರ್ಯ2ನರಸಿಂಹ ವಿಠ್ಠಲದಾಸರು ತಂದೆಯಗುರುಗಳು ಗೋಪಾಲ ವಿಠ್ಠಲ ದಾಸರಪರಮಗುರುಗಳುವಿಜಯವಿಠ್ಠಲ ದಾಸರಪುರಂದರದಾಸರಾಜರ ಸ್ಮರಿಸಿದರು3ತೀರ್ಥಾಭಿಮಾನಿಗಳ ಭಾರತೀಪತಿಯಪದುಮೆ ಪದ್ಮೇಶ ಫಂಡರಿ ನಾಥ ಹರಿಯಮೋದಚಿನ್ಮಯ ಜಗನ್ನಾಥನ ಸ್ಮರಿಸುತ್ತಉದಕಪ್ರವಾಹದೊಳು ತನುವ ಅದ್ದಿದರು4ಸೀನಪ್ಪ ಶ್ರೀನಿವಾಸ ಶ್ರೀನಿವಾಸಪ್ಪ ಈಶ್ರೀನಿವಾಸಾಚಾರ್ಯ ಒಂದು ಸಲ ಮುಳುಗೇಳೆತನುಗತ ಒಳ ಹೊರಗಿನಕಲುಷಕಳೆದವುಪುನಃ ಮುಳಗೇಳಲು ಸುಪವಿತ್ರರಾದರು 5ಪುನಃ ಮುಳುಗಿ ಎದ್ದು ಅ ಘ್ರ್ಯವ ಅರ್ಪಿಸಲುಇನನ ಮಂಡಲದಿ ವರವಾಯು ಅಧಿಷ್ಠಾನದಲಿಶ್ರೀ ನಾರಾಯಣ ಸರ್ವಜನ ಹಿತಕರನಆನಂದ ಚಿನ್ಮಾತ್ರ ವಪುಷನ್ನ ಸ್ಮರಿಸಿದರು 6ಋಕ್ಸಾಮ ವೇದಗಳಿಂದ ವಾಣೀವಾಯುಸುಖಪೂರ್ಣ ನಾರಾಯಣನ ಸ್ತುತಿಸುವರುಆಕಳಂಕ ಉನ್ನಾಮಸಾಮನಾಮ ಹೀಂಕಾರಶ್ರೀಕೃತಿಪತಿ ಪ್ರದ್ಯುಮ್ನಾದಿ ಸ್ವರೂಪ 7ಸಪ್ತಕಾಲದಿ ಸಪ್ತಸಾಮ ಪ್ರತಿಪಾದ್ಯನುಸಪ್ತಸ್ವರೂಪನು ಆದಿತ್ಯಾಂತಸ್ತಪ್ರದ್ಯುಮ್ನವಾಸುದೇವವರಾಹನಾರಾಯಣಅನಿರುದ್ಧ ನರಸಿಂಹ ಸಂಕರುಷಣ 8ಪರಮಗುರುವಿಜಯದಾಸಾರ್ಯರ ಪ್ರೇರಣೆಯಿಂದಗುರುಗಳು ಗೋಪಾಲದಾಸಾರ್ಯರುಅರುಪಿದಅನುಸಂಧಾನಕ್ರಮದಿಂದಲೇಗುರುತಮ ಸಮೀರನಲಿ ಹರಿಯ ಸ್ಮರಿಸಿದರು 9ಸೂರ್ಯನೊಳಿಪ್ಪಸಮೀರಅಧಿಷ್ಠಾನಸ್ಥಸೂರಿಜನ ಪ್ರಾಪ್ಯ ಋಕ್ ಸಾಮಾದಿಸ್ತುತ್ಯಸೂರ್ಯತೇಜಃ ಪುಂಜ ಸ್ಫೂರ್ತಿದ ಜಗತ್ಕರ್ತ ಶ್ರೀಶ್ರೀನಾರಾಯಣಗಘ್ರ್ಯ ಅರ್ಪಿಸಲು ಒಲಿದ 10ಝಗಝಗಿಪ ತೇಜಸ್ಸು ಶಿರೋಪಕಂಡರುಮೂಗಿನಿಂದೊಂದಡಿ ಶಿರದ ಮೇಲೆಜಗನ್ನಾಥವಿಠ್ಠಲ ಎಂದು ಪ್ರಜ್ವಲಿಸಿತುಹೇಗೆ ವರ್ಣಿಸುವೆ ಆ ಅದ್ಭುತ ದೃಶ್ಯ 11ಸರ್ವ ಜಗದ್ರಕ್ಷಕ ವಿಠ್ಠಲನು ತತ್ಕಾಲಪ್ರವಾಹವ ತಡೆಯಲು ನಿರ್ಮಿಸಿದ ಶಿಲೆಯುಪ್ರಜ್ವಲಿಪ ಈ ದಿವ್ಯ ಹರಿನಾಮ ಅಂಕಿತಕ್ಕೆಐವತ್ತು ಅಂಗುಲ ಹಿಂದೆ ನಿಂತಿತ್ತು 12ಕ್ಷಣಮಾತ್ರದೊಳಗೆ ಈತಟಿತ್ಕೋಟಿನಿಭಜ್ಯೋತಿಫಣೆಮುಂದೆ ನಿಂತಿತು ಆಗ ಆಚಾರ್ಯಚೆನ್ನಾಗಿ ನೋಡಿದರುಹರಿಇಚ್ಛಾಶಕ್ತಿಯಿಂಶ್ರೀನಿವಾಸವಿಜಯಗೋಪಾಲ ವಿಠ್ಠಲನ13ಶ್ರೀ ಶ್ರೀನಿವಾಸನೇವಿಜಯವಿಠ್ಠಲನಾಗಿಶ್ರೀ ಶ್ರೀನಿವಾಸ ಗೋಪಾಲ ವಿಠ್ಠಲನಾಗಿಶ್ರೀ ಶ್ರೀನಿವಾಸ ಶ್ರೀ ಜಗನ್ನಾಥ ವಿಠ್ಠಲನಾಗಿಶಿರಿ ಜಗನ್ನಾಥ ದಾಸಾರ್ಯರು ನೋಡಿದರು 14ಶ್ರೀ ಶ್ರೀನಿವಾಸನೆ ಪ್ರಸನ್ನನು ಆಗಿತೋರಿಹನು ಜಗನ್ನಾಥ ವಿಠಲನೆನಿಸಿತಿರುಪತಿ ಶ್ರೀನಿಧಿಯೇ ಪಂಡರಿ ವಿಠ್ಠಲನುಸೂತ್ರನೋಡಿ ನಸ್ಥಾನ ತೋಪಿ15ಶ್ರೀ ರುಕ್ಮಿಣೀಪತಿ ಪರಂಜ್ಯೋತಿ ಪರಂಬ್ರಹ್ಮಉರುಅಖಿಳಸಚ್ಛಕ್ತ ಜಗನ್ನಾಥ ವಿಠ್ಠಲಶಿರಿ ಜಗನ್ನಾಥದಾಸರ ಹೃದಯ ¥ದ್ಮದೊಳುಸೇರಿದನು ಜ್ವಲಿಸುತಿಹ ಸರ್ವೋತ್ತಮ ಅಲ್ಲಿ 16ಎಂಟುಅಕ್ಷರಮೂಲಮಂತ್ರದಿ ನಾರಾಯಣನವಿಠ್ಠಲ ಹಯಗ್ರೀವ ವೆಂಕಟೇಶಾದಿಷಡಕ್ಷರಿ ವಿಷ್ಣು ರಾಮ ಕೃಷ್ಣಾದಿಗಳಕ್ರೋಡನರಸಿಂಹಾದಿಗಳನು ಜಪಿಸಿದರು17ಗುರುಪರಮಗುರುಪೇಳ್ದ ರೀತಿಯಲಿ ಜಪಚರಿಸಿಶ್ರೀ ರುಕ್ಮಿಣಿ ವಿಠ್ಠಲ ಮಂದಿರಕೆ ಪೋಗಿಪುರಂದರಾರ್ಯರ ನಮಿಸಿಗುರುಪರಮಗುರುಗಳಸ್ಮರಿಸಿ ಒಳಪೊಕ್ಕರು ವಿಠ್ಠಲನ್ನ ನೋಡೆ 18ಶ್ರೀ ಮಧ್ವರಮಣ ನಿನ್ನ ಅದ್ವಿತೀಯ ಮಹಿಮೆಈ ಮಹೋತ್ತಮಕೃತಿಪುರಂದರದಾಸರದುಅಮಲ ಭಕ್ತಿಯಲ್ಲಿದನ್ನ ಅರ್ಥ ಅರಿತು ಪಠಿಸಿಶ್ರೀಮಂದಿರದೊಳು ಪ್ರವೇಶ ಮಾಡಿದರು 19ತ್ರಿಜಗದೀಶನಪಾದಪದ್ಮಗಳ ನೋಡುತ್ತನಿಜಭಕ್ತಿ ಭಾವದಲಿ ಸಾಷ್ಟಾಂಗ ನಮಿಸಿಅಜಭವೇಂದ್ರಾದಿ ಸುರವಂದ್ಯನ್ನ ಕೇಶಾದಿರಾಜೀವಪಾದಾಂತ ದರುಶನ ಮಾಡಿದರು20ಜ್ವಲಿಸುವ ಕಿರೀಟ ಸುಳಿಗುರುಗಳು ಫಣಿಯ ತಿಲಕಬಿಲ್ಲುವೋಲ್ ಸುಂದರ ಭ್ರೂ ಮುಖಕಮಲಜಲಜೇಕ್ಷಣ ಮುಗುಳುನಗೆಯು ತಟಿದಂದಿಪೊಳೆವ ಕುಂಡಲಕರ್ಣ ಕಂಬುಗ್ರೀವ 21ವನಮಾಲೆ ಎಳೆ ತುಳಸಿದಳ ಹಾರ ಕೊರಳಲ್ಲಿಘನಬಾಹು ವಿಸ್ತಾರವಕ್ಷ ಶ್ರೀವತ್ಸಸ್ವರ್ಣಮಣಿ ಗ್ರೈವೇಯಕೌಸ್ತುಭರತ್ನವುಕಣ್ಣಾರ ಕಾಣಲಾನಂದ ಸೌಂದರ್ಯ 22ಮೂರುಗೆರೆ ಉದರದಲಿವನರುಹನಾಭಿಯುಕರಗಳು ಕಟಿಯಲ್ಲಿ ಶಂಖಾರವಿಂದಪುರುಟಮಣಿ ಗಣಸೂತ್ರ ಪೀತಾಂಬರ ಉಡಿಸ್ಫುರದ್ರತ್ನ ನೂಪುರ ಸಮಪಾದದ್ವಯವು 23ತಟಿತ್ಕೋಟಿನಿಭ ತನ್ ಕಾಂತಿಯಲಿ ಜ್ವಲಿಸುವಸಾಟಿಯಿಲ್ಲದ ಸುಂದರಾಂಗ ಶ್ರೀರಮಣವಿಠ್ಠಲ ಕೃಪಾನಿಧಿ ಶರಣಜನ ಪಾಲನ್ನಹಾಡಿ ಸ್ತುತಿಸಿದರು ಜಗನ್ನಾಥ ದಾಸಾರ್ಯ 24ಫಣಿಪಶಾಯಿಯ ಅನಂತ ಪದ್ಮನಾಭನು ತನ್ನಆನಂದಲೀಲೆಯಲಿ ಜಗವ ಪಡೆಯುವನುಆನಂದಲೀಲೆಯಲಿ ಅವತಾರ ರೂಪಗಳತಾನೇ ಪ್ರಕಟಿಸಿ ಸಜ್ಜನರ ಪಾಲಿಸುವ 25ದೇಶಗುಣಕಾಲ ಅಪರಿಚ್ಛಿನ್ನನು ಅನಂತನುಶ್ರೀಶಸರ್ವೇಶ ಚಿನ್ಮಯನುಅನಘಐಶ್ವರ್ಯ ಪೂರ್ಣಜಗದೇಕ ಪಾಲಕನುಅಸಮ ಸರ್ವೋತ್ತಮನು ಸುಖಮಯನು ಸುಖದ 26ಮೀನಕೂರ್ಮಸ್ತ್ರೀ ಅಜಿತ ಧನ್ವಂತರಿಕ್ರೋಢಶ್ರೀನಾರಸಿಂಹ ವಟುಭೃಗು ರಾಮರಾಮಕೃಷ್ಣ ಜಿನಸುತ ಕಲ್ಕಿ ಠಲಕ ವೆಂಕಟರಮಣಆನಂದಚಿತ್ತನು ಅನಂತ ಅವತಾರ 27ದಾಸೋಹಂ ತವ ದಾಸೋಹಂ ಎಂದುದಾಸವರ್ಯರು ಬಿನ್ನೈಸಿ ಸ್ತುತಿಸಿದರುನಸುನಗುತ ವಾತ್ಸಲ್ಯದಿಂದ ವಿಠ್ಠಲನುವಿಶೇಷಾಪರೋಕ್ಷ ಅನುಗ್ರಹಿಸಿದನುದಯದಿ 28ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್ಕು ವಿದಿಕ್ಕುಗಳ ರಂಜಿಸುವರೂಪದಿಂದ ಪಾಲ್ಗಡಲಲಿ ಆವಿರ್ಭವಿಸಿದ ಶ್ರೀಇಂದಿರೆಯೆ ರುಕ್ಮಿಣಿ ಸೌಂದರ್ಯಪೂರ್ಣೆ 29ಮಾಯಾಜಯಾಕೃತಿಶಾಂತಿ ಸೀತಾಲಕ್ಷ್ಮಿತೋಯ ಜಾಲಯ ಚಿತ್ಪ್ರಕೃತಿ ಭೂದುರ್ಗಾತೋಜಯಾಕ್ಷಿವೇದವತಿದಕ್ಷಿಣಾ ಶ್ರೀಜಯಂತಿ ಸತ್ಯಾರುಕ್ಮಿಣಿ ಸುಂಧುಕನ್ಯಾ 30ಸರ್ವ ಜಗಜ್ಜನನಿಯು ಸರ್ವ ವಿಧದಲಿ ಹರಿಯಸೇವಿಸುತಿಹಳು ಸದಾ ನಿತ್ಯಾವಿಯೋಗಿನಿದೇವದೇವೋತ್ತಮ ರಾಜರಾಜೇಶ್ವರನು ವಿಠ್ಠಲನುದೇವಿ ಶ್ರೀ ರಾಜರಾಜೇಶ್ವರಿಯು ರುಕ್ಮಿಣಿಯು 31ಜ್ವಲಿಸುವ ಮುತ್ತು ನವರತ್ನದಿ ಕಿರೀಟಒಳ್ಳೆ ಪರಿಮಳ ಹೂವು ಮುಡಿದಂತ ತುರುವುಫಾಲದಲಿ ಶ್ರೇಷ್ಠತಮ ಕಸ್ತೂರಿ ತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬೊಟ್ಟು 32ಅಂಬುಜಾಕ್ಷಿ ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯದ ಕೃಪಾನೋಟಕಂಬುಕಂಠದಿ ಮಂಗಳಸೂತ್ರಕರಯುಗದಿಅಂಬುಜವರಕೊಡುವಅಭಯಹಸ್ತಗಳು33ಕಂಧರದಲಿ ಪರಿಮಳಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟೆವಸ್ತ್ರವು ಸ್ವರ್ಣಸರ್ವಾಭರಣ ಭೂಷಣವುಪಾದಉಂಗುರ ಪೆಂಡೆ ಕಂಡು ನಮಿಸಿದರು34ಜಗನ್ನಾಥ ವಿಠ್ಠಲನೂ ಜಗನ್ಮಾತೆ ರುಕ್ಮಿಣಿಯೂಜಗನ್ನಾಥದಾಸರಿಗೆ ಔತಣ ಮಾಡಿದ್ದುಜಗತ್ತಲ್ಲಿ ಭಕ್ತಜನರೆಲ್ಲ ಪೇಳ್ತಿಹರುಜಗದೀಶ ಪಂಢರೀ ವಿಠ್ಠಲನ ಮಹಿಮೆ 35ಕೇಶವ ನಾರಾಯಣಮಾಧವಗೋವಿಂದಶ್ರೀಶ ವಿಷ್ಣು ಮಧುಸೂದನ ತ್ರಿವಿಕ್ರಮಈಶ ವಾಮನ ಶ್ರೀಧರ ಹೃಷಿಕೇಶರಮೆಯರಸಪದ್ಮನಾಭದಾಮೋದರ36ಸಂಕರುಷಣ ವಾಸುದೆವ ಪ್ರದ್ಯುಮ್ನ ನಮೋಅಕಳಂಕ ಅನಿರುದ್ಧ ಪುರುಷೋತ್ತಮನಿಷ್ಕಳಅಧೋಕ್ಷಜನರಸಿಂಹಅಚ್ಯುತಶ್ರೀಕರ ಜನಾರ್ದನ ಉಪೇಂದ್ರ ಹರಿಕೃಷ್ಣ 37ರಮಾಪತಿ ರಮಾಯುತನು ಶ್ರೀಹರಿಯ ರೂಪಗಳಬ್ರಹ್ಮವಾಯು ವಾಣೀಭಾರತಿ ಉಮೇಶಉಮಾ ತತ್ವದೇವದಿಕ್ಪಾಲಕರು ಗಂಗಾಕರ್ಮಮಾನಿ ಪುಷ್ಕರಾದಿಗಳೊಳ್ ತಿಳಿದರು 38ಭೋಜನ ಪದಾರ್ಥದಲು ತದ್ಗತ ಶಬ್ದಂಗಳಲುಭೋಜ್ಯಗಳ ಬಡುಸುವರಲ್ಲೂ ಕ್ಷೇತ್ರದಲ್ಲೂಭೋಜಭಿಮಾನಿಗತ ಖಂಡಾಖಂಡಗನುಭಜನೀಯ ಸ್ಥೂಲಭುಕ್ ಅವ್ಯಯನ ಕಂಡರು 39ಕರುಣಾಬ್ಧಿ ಶ್ರೀ ಹರಿಯ ಔದಾರ್ಯ ಏನೆಂಬೆಶ್ರೀ ಶ್ರೀನಿವಾಸನು ಅಂದು ತಿರುಪತಿಯಲ್ಲಿಶಿರಿ ವಿಜಯಾರ್ಯರ ರೂಪದಿ ಪ್ರೇರಿಸಿಧಾರೆಯೆರಿಸಿದ ಆಯಸ್ ಗುರುಗಳ ಕೈಯಿಂದ 40ಶ್ರೀ ಶ್ರೀನಿವಾಸನ ಮಹಾದ್ವಾರಕೆದುರಾಗಿಹಾರೆ ಕಲ್ಲುಮಂಟಪ ಆಗ್ನೇಯ ದಿಕ್ಕುಎರಡನೆಯದೋ ಮೂರನೆಯದೋ ಅಂಕಣದ ಖೋಲಿಹರಿದಾಸರು ಇದ್ದ ಮುಖಾಮಿ ಬಿಡಾರ 41ಎಳೆಕೆಂಪು ರೋಜ ಊದಾವರ್ಣದಿ ಅಂಚುಬಿಳಿರೇಷ್ಮೆ ವಸ್ತ್ರವ ಮೇಲ್ ಹೊದ್ದುಕೊಂಡುಮಲಗಿ ಚಲಿಸದೆ ನಿತ್ರಾಣನಾಗಿದ್ದವಗೆಒಲಿದು ಆಯುರ್ದಾನ ಮಾಡಿಸಿದ ಕರುಣಿ 42ಗುರುಗಳು ಗೋಪಾಲದಾಸರ ರೂಪದಿಂದ ಬಂದುಶಿರಿವರನು ತಾನೇನೆ ಅನ್ನಪ್ರಸಾದಕರದಲ್ಲಿ ಇತ್ತನು ಅವನೇವೆಇಂದುಶಿರಿಸಹ ಅಮೃತಾನ್ನ ಔತಣವನ್ನಿತ್ತ 43ಶಿರಿಯ ವಾತ್ಸಲ್ಯ ದಯೆ ಏನೆಂದು ಪೇಳಲಿಚಾರುದೇಷ್ಣಾಹ್ವಯ ತನ್ನಸುತ ಈಗವರಗೋಪಾಲದಾಸರುಅವರಶಿಷ್ಯರಿವರೆಂದು ಪ್ರೀತಿಯಲಿ ಔತಣ ಮಾಡಿಹಳು 44ಈ ರೀತಿ ಹರಿಶಿರಿ ಇತ್ತ ಔತಣ ಮತ್ತುಹರಿಯ ಕೈಯಿಂದ ಹರಿಗರ್ಪಿತ ಮಾಲಾದಿಹರಿಪ್ರಸಾದವ ಕೊಂಡು ಫಂಡರಿಪುರದಿಂದಹೊರಡಲಾದರು ಜಗನ್ನಾಥದಾಸಾರ್ಯ 45ನರಸಿಂಹಾದಾಸಾರ್ಯರಾದ ತನ್ನ ತಂದೆಗೆಗುರುಗಳುಪುರಂದರದಾಸಾರ್ಯರೆಂದುಪರಮಗುರುವಿಜಯದಾಸಾರ್ಯರ ಗುರುಯೆಂದುಚರಣವಂದಿಸಿ ಹೊರಡೆ ಅಪ್ಪಣೆ ಕೊಂಡರು46ಪರಮಗುರು ವಿಜಯದಾಸಾರ್ಯರ ಸ್ಥಳಕೆಸ್ಮರಣೆ ಪೂರ್ವಕ ಮನಸಾ ಪೋಗಿ ಸನ್ನಮಿಸಿಗುರುಗಳಚರಣಆಕಾಂಕ್ಷಿಗಳು ತ್ವರಿತದಿಹೊರಟರು ಶ್ರೀ ಜಗನ್ನಾಥನ್ನ ಸ್ಮರಿಸುತ್ತ 47ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 48- ಇತಿ ಪಂಚಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-7ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹಂಸನಾಮಕ ಪರಂಬ್ರಹ್ಮ ವಿಧಿಸನಕಾದಿವಂಶಜ ಗುರುಗಳಲಿ ಜಗದೇಕ ಗುರುವುದಶಪ್ರಮತಿ ಈ ಮಧ್ವ ಮುನಿಯ ಪೀಳಿಗೆ ಜಾತವ್ಯಾಸಮುನಿ ಯೋಗಿವರ್ಯರಿಗೆ ಆ ನಮಿಪೆ 1ವ್ಯಾಸರಾಯರ ಮುಖ ಕಮಲದಿಂದುಪದೇಶದಾಸತ್ವ ಹೊಂದಿದರು ಪುರಂದರದಾಸಾರ್ಯದಾಸಶ್ರೇಷ್ಠರು ದಯಾನಿಧಿಯು ಈಪುರಂದರದಾಸಾರ್ಯರೇ ನಾರದರ ಅವತಾರ 2ಪುರಂದರಾರ್ಯರಹಸ್ತಕಂಜಸಂಜಾತರುಧೀರ ಭೃಗು ಅವತಾರ ವಿಜಯದಾಸಾರ್ಯಹರಿದಾಸವರ ವಿಜಯದಾಸರ ಶಿಷ್ಯರುಸೂರಿಸುರವರ್ಯ ಗೋಪಾಲ ದಾಸಾರ್ಯ 3ವಿಶ್ವೋಪಾಸಕರು ವರಗಣೇಶಾಂಶರುಈಶಾನುಗ್ರಹಿ ಗೋಪಾಲ ದಾಸಾರ್ಯಬೇಸರವಿಲ್ಲದೆ ಸ್ಮರಿಪ ಸಜ್ಜನರ ಪಾಲಿಪರುದಾಸತ್ವ ಜಗನ್ನಾಥದಾಸರಿಗಿತ್ತವರು 4ಸೂರಿಕುಲತಿಲಕನು ಜಗನ್ನಾಥ ದಾಸಾರ್ಯಈರೆರಡು ಮುಖ್ಯ ಜನ್ಮವಕೊಂಡಹಿಂದೆಗುರುಯುಕ್ ಪುರಂದರಾರ್ಯರವತ್ಸಗುರುರಾಯ ಸೇವಾರತಮದ್ರದೇಶಾಧಿಪ ಈ ರೀತಿ ಮೂರು 5ಮಾರೀಚ ದಿತಿ ಪೌತ್ರ ಮೊದಲನೆಯದಲ್ಲಿಧೀರ ಪ್ರಹ್ಲಾದನಿಗೆ ಭ್ರಾತ ಸಂಹ್ಲಾದಹರಿಅಧೋಕ್ಷಜನ್ನೊಲಿಸಿ ಕೊಂಬ ಮಾರ್ಗವ ಅರಿತನಾರದಾನುಗ್ರಹಿಯು ಉಪದೇಶಕೇಳಿ6ಹರಿಯ ಸೇವಿಸುವುದಕೆ ಶಿಷ್ಯರುದ್ಧಾರಕ್ಕೆಪ್ರಾರಬ್ಧ ಕರ್ಮವು ತೇದು ಹೋಗಲಿಕೆಧರೆಯಲ್ಲಿ ಪುನರ್ಜನ್ಮ ಕೊಂಡನು ಬ್ಯಾಗವಟ್ಟನರಸಿಂಹ ದಾಸರ ಮಗನೆನಿಸಿಕೊಂಡು 7ಸೂರಿಕುಲ ಶಿರೋಮಣಿ ವರದೇಂದ್ರ ಯತಿವರರುಶ್ರೀರಾಘವೇಂದ್ರರ ಸ್ಮರಿಪುದಿವರಲ್ಲಿಭಾರಿಪಂಡಿತ ಶ್ರೀನಿವಾಸ ಇವರಲ್ಲೋದಿಪೌರ ವಿದ್ಯಾರ್ಥಿಗಳಿಗೆ ಪಾಠ ಪೇಳ್ದ 9ಗರುವಕೊಳಗಾಗಿ ಈ ಶ್ರೀನಿವಾಸಾಚಾರ್ಯಕರುಣಾಶಾಲಿಗಳು ವಿಜಯದಾಸರನ್ನಕ್ಷುದ್ರ ಮಾತುಗಳಾಡಿ ಸ್ವೋತ್ತಮಾಪರಾಧದಿಂಘೋರವ್ಯಾಧಿ ಕೊಂಡು ಕುಗ್ಗಿದನು ತೀವ್ರ 10ಪರಿಪರಿ ಔಷಧೋಪಚಾರಗಳು ಸೋತುಹರಿಗುರು ಕ್ಷೇತ್ರಾಟನ ಸೇವಾದಿಗಳುಹರಿವಾಯುಸ್ತುತಿಕ್ಷೀರಅಭಿಷೇಕಫಲದಿಂಅರಿತನು ಅಪರಾಧಕ್ಷಮೆಬೇಡೆ ಹೊರಟ11ತ್ವರಿತದಲಿ ವಿಜಯಾರ್ಯರಲ್ಲಿ ಶರಣಾಗಿಕರುಣದಿ ಕ್ಷಮಿಸಿ ಉದ್ಧರಿಸಬೇಕೆಂದಕರುಣಿಸಮ ಚಿತ್ತರು ಶರಣನಿಗೆ ಹೇಳಿದರುಗುರುಗಳು ಗೋಪಾಲದಾಸರ ಕಾಣೆಂದು 12ತನ್ನಲ್ಲಿ ಗುರುಗಳು ಕಳುಹಿಸಿ ಬಂದಿಹನುದೀನನು ನಿಜ ಶರಣಾಗಿಹನು ಎಂದುಘನಮೂಮಂತ್ರ ಸಹ ಧನ್ವಂತರಿ ಜಪಿಸಿಧನ್ವಂತರಿಗೆ ಬಿನ್ನೈಸಿದರು ದಾಸರು 13ವಿಜಯಗೋಪಾಲ ವೆಂಕಟ ಜಗನ್ನಾಥನ್ನಪೂಜಿಸಿ ನೈವೇದ್ಯಾನ್ನ ಜೋಳದರೊಟ್ಟಿಭುಜಿಪುದಕೆ ಕೊಡುತ ಹರಿಗುರುಗಳ ಸ್ಮರಿಸುನಿಜ ಭಕ್ತಾಯುಷ್ಪ್ರದ ಸತ್ಪತಿ ಎಂದು 14ದ್ರವ ಮಾತ್ರ ಕೊಂಬ ಆ ರೋಗಿ ತಿಂದನು ರೊಟ್ಟಿದ್ರಾವಿಕ ಆಯಿತು ರೋಗ ದಿನ ದಿನದಿದೈವಾನುಗ್ರಹವಾಯ್ತುಗುರುಅನುಗ್ರಹದಿಂದಶ್ರೀ ವೆಂಕಟ ಶೈಲಾಧಿಪನು ಒಲಿದ 15ರೋಗ ನಿವೃತ್ತ ಆಚಾರ್ಯ ದಾಸರ ಸಹಪೋಗಿ ವೆಂಕಟಗಿರಿಯಲ್ಲಿ ಶ್ರೀನಿಧಿಗೆಭಕುತಿಯಿಂ ಸನ್ನಮಿಸಿ ಮಲಗೆ ನಿತ್ರಾಣದಲಿಬೇಗ ಗಜವರದಹರಿಬಂದು ತಾ ಪೊರೆದ16ಶ್ರೀನಿಧಿಃ ಸರ್ವ ಭೂತಾನಾಂ ಭಯಕೃದ್ಭಯನಾಶನನು ವಿಜಯಾರ್ಯರ ರೂಪದಲಿ ಪೇಳೆದಾನ ಎರೆದರು ಗೋಪಾಲ ದಾಸಾರ್ಯರುತನ್ನ ಆಯುಷ್ಯದಲಿ ನಲವತ್ತು ವರ್ಷ 17ರೊಟ್ಟಿ ಕೊಟ್ಟಾಗಲೇಗುರುಪ್ರೇರಣೆಯಂತೆಕೊಟ್ಟಿದ್ದರು ಆಯುಷ್ಯ ಆಚಾರ್ಯಗೆದಿಟವಾಗಿ ಜಗಕೆ ತಿಳಿಸೆ ವೆಂಕಟ ಈಗಕೊಡಿಸಿದನು ಆಯುರ್ದಾನದ ಧಾರೆ 18ಘನ್ನ ಹರಿಗುರು ಭಕ್ತಿ ಶಿಷ್ಯ ವಾತ್ಸಲ್ಯವಏನೆಂಬೆ ನಮ್ಮಗುರುಗೋಪಾಲ ದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ನ ಆಯುಷ್ಯವ ಕೊಡುವರೆ ಅನ್ಯರಿಗೆ 19ಏನೆಂಬೆಅನಿಮಿತ್ತ ಬಂಧುವೆಂಕಟಪತಿಯದೀನ ದಯಾಳತ್ವ ಆಚಾರ್ಯನಿಗೆತಾನೇವೆ ಗೋಪಾಲದಾಸರ ರೂಪದಿತಂದುಅನ್ನ ಕೊಟ್ಟ ಆಯುಷ್ಯವ ಕೊಡಿಸಿದವ 20ಶ್ರೀನಿವಾಸಾಚಾರ್ಯ ಹರಿತನ್ನ ದಾಸರಿಗೆತಾನೆ ಬಂದೊಲಿವುದು ನೇರಲ್ಲಿ ಕಂಡುತನ್ನನ್ನು ಹರಿದಾಸರಲಿ ಓರ್ವ ಮಾಡೆಂದುವಿನಯದಿಂ ಗೋಪಾಲದಾಸರ ಬೇಡಿದನು 21ವಿಜಯಗೋಪಾಲನ್ನವಿಜಯದಾಸರ ಸ್ಮರಿಸಿನಿಜ ಶಿಷ್ಯಾಚಾರ್ಯನಿಗೆ ಉಪದೇಶಿಸಿದರುಅಜಪದಾರ್ಹನು ಮಧ್ವನಲ್ಲಿ ಜ್ವಲಿಸುವಶ್ರೀತಶ್ರೀ ಜಗನ್ನಾಥ ಎಂದು ಧ್ಯಾನಿಸು ಎಂದು 22ಪೋಗಿ ಪಂಢÀರಪುರ ಭೀಮರತಿಯಲ್ಲಿಸ್ವಗುರು ಆದಿ ಹನ್ನೆರಡು ಸ್ಮರಿಸುಬಾಗು ಮಧ್ವಾಂತಸ್ಥ ಹರಿಗೆಮಜ್ಜನಮಾಡುಜಗನ್ನಾಥ ಹರಿತೋರ್ವ ಪೊಳೆವ ಹರಿನಾಮ 23ಝಗಿ ಝಗಿಪ ತೇಜಸ್ಸು ಶಿರೋಪರಿ ಕಂಡನುಮೂಗಿನೊಂದೊಂದಡಿ ಶಿರದ ಮೇಲೆ&ಟಜquo;ಜಗನ್ನಾಥ ವಿಠಲ&ಡಿಜquo; ನಾಮ ಪ್ರಜ್ವಲಿಸಿತುಜಗನ್ನಾಥ ತನ್ನಿಚ್ಛೆಯಿಂದಲೇ ತೋರ್ದ 25ಜಡಜ ಭವಪಿತ ಡರಕ ಜಗನ್ನಾಥ ವಿಠಲನನೋಡಿದರು ಜಗನ್ನಾಥದಾಸ ಆಚಾರ್ಯಪೊಡವಿಗೊಡೆಯನುವಿಜಯಗೋಪಾಲ ಜಗನ್ನಾಥವಿಠ್ಠಲ ಪ್ರಸನ್ನನಾದನು ಶ್ರೀನಿವಾಸ 26ವೆಂಕಟಗಿರಿನಾಥ ಪಂಢರಿ ಜಗನ್ನಾಥಅಕಳಂಕ ಗುಣನಿಧಿ ವಿಠಲಪ್ರಸನ್ನನಾಗಿದಾಸರು ಮೂಲ ಮಂತ್ರಾದಿಗಳಿಂದಏಕಾಗ್ರ ಚಿತ್ತದಲಿ ಭಜಿಸಿ ಸ್ತುತಿಸಿದರು 27ಪುರಂದರದಾಸಾರ್ಯರ ವಂದಿಸಿ ಅವರಿಂದವಿರಚಿತ ಶ್ರೀಮಧ್ವ ರಮಣ ನಿನ್ನಭಾರಿತತ್ವವಕೊಂಡಕೀರ್ತನೆ ಹಾಡುತ್ತಶ್ರೀಕರ ವಿಠಲನ ಮಂದಿರದೊಳು ಪೊಕ್ಕರು 28ವಿಶ್ವವಿಷ್ಣು ವಷಟ್ಕಾರಾದಿ ನಾಮನುದಾಸಪ್ರಿಯಜನ ವಿಠ್ಠಲ ರುಕ್ಮಿಣಿಯಕೇಶವಾದಿಪಾದಾಂತ ಸಂಸ್ತುತಿಸಿ ನಮಿಸಿದರುದಾಸರು ಶರಣು ತಾನೆನ್ನುತ ಮುದದಿ 29ಏನೆಂಬೆ ವಿಠ್ಠಲನ ರುಕ್ಮಿಣಿಯ ವಾತ್ಸಲ್ಯಅನುಪಮ ಔತಣ ದಾಸರಿಗೆ ಮಾಡಿಅನುತ್ತಮ ಪ್ರಸಾದ ಮಾಲಾದಿಗಳ ಕೊಟ್ಟುಅನುಗ್ರಹಿಸಿ ಕಳಿಸಿದರು ದಾಸರ ಸ್ವಪುರಕೆ 30ಮಳಖೇಡ ಕೃಷ್ಣ ಮಂತ್ರಾಲಯಕೆ ಪೋಗಿಅಲ್ಲಿರುವಗುರುದೇವತಾ ನಮನ ಮಾಡಿಗೋಪಾಲದಾಸ ಉದ್ಧಾರಕರ ಬಳಿಬಂದುಕಾಲಿಗೆರಗಿದರು ಕೃತಕೃತ್ಯ ಭಾವದಲಿ 31ವಾಸುದೇವಗೆ ಪ್ರಿಯ ಐಜಿ ಮಹಾತ್ಮರುವ್ಯಾಸತತ್ವಜÕ ಹರಿದಾಸ ಯತಿವರರುಸಸೋದರ ಪರಿವಾರ ಗೋಪಾಲದಾಸಾರ್ಯರಬಿಸಜಾಂಘ್ರಿ ಸನ್ನಮಸಿ ಹೊರಟರಲ್ಲಿಂದ 32ಚೀಕಲ ಪರಿವಿಯಲಿ ಏಕಾತ್ಮ ನರಹರಿಯಅಕಳಂಕ ದೃಢಭಕ್ತಿಯಿಂದ ಪೂಜಿಸುವಆ ಕರುಣಿ ವಿಜಯದಾಸರ ಕಂಡು ನಮಿಸಿಚಿಕ್ಕಂದಿ ಸ್ವಪುರ ಮಾನವಿಯಯೈದಿದರು 33ಮನುತೀರ್ಥ ತಟದಲ್ಲಿ ಮೀಸಲಾಗಿವರಿಗೆಅನ್ಯರಾಕ್ರಮಿಸದೇ ರಕ್ಷಿಸಲ್ಪಟ್ಟಮನೆಯಲ್ಲಿ ನರಹರಿಯ ಹನುಮನ್ನ ಪೂಜಿಸುತದಿನದಿನದಿ ಪ್ರವಚನ ಭಜನೆ ಮಾಡಿದರ 34ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 35- ಅಷ್ಟಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀಪಾದರಾಜರ ಅಣು ಚರಿತೆ103ಪ್ರಥಮ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪೊಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪಶ್ರೀ ಹಂಸ ಲಕ್ಷ್ಮೀಶನಾಭಿಭವಸನಕಾದಿಮಹಂತದೂರ್ವಾಸಾದಿಗಳಗುರುಪರಂಪರೆಯಮಹಾಪುರುಷೋತ್ತಮ ದಾಸ ಶ್ರೀ ಮಧ್ವವನ -ರುಹಪಾದಗಳಲಿನಾ ಶರಣು ಶರಣಾದೆ1ಕಲಿಯುಗದಿ ಸಜ್ಜನರು ದುರ್ಜನರ ದುಸ್ತರ್ಕಕಲುಷವಾದಗಳಲ್ಲಿ ಮನಸೋತು ಪೋಗೆಳಾಳುಕನ ಪರಮಪ್ರಸಾದ ಹೊಂದುವ ಜ್ಞಾನಇಳೆಯಲಿ ಮಧ್ವ ಬೋಧಿಸಿದ ಅವತರಿಸಿ 2ಭಾರತೀಪತಿ ವಾಯು ಭಾವಿ ಬ್ರಹ್ಮನೇ ಮಧ್ವಹರಿಆಜÉÕಯಲಿ ಸುಜನರನುದ್ದರಿಸೆ ಜನಿಸಿಪರಮಸತ್ತತ್ವವಾದ ಅರುಪಿ ಬದರಿಗೆತೆರಳಿದನು ತತ್‍ಪೂರ್ವ ಶಿಷ್ಯರ ನೇಮಿಸಿದ್ದ 3ವೈದಿಕ ಸದಾಗಮದಿ ಬೋಧಿತ ತಾತ್ವಿಕದ್ವೈತ ಸಿದ್ಧಾಂತದ ಆದಿಗುರು ಮಧ್ವಬದರಿಗೆ ತೆರಳಲು ಶ್ರೀಪದ್ಮನಾಭ-ತೀರ್ಥರಾರೋಹಿಸಿದರು ಮಧ್ವಮಠ ಪೀಠ 4ಈ ಆದಿಮಠಗುರುಪರಂಪರೆಯು ನರಹರಿತೀರ್ಥ ಮಾಧವತೀರ್ಥ ಅಕ್ಷೋಭ್ಯ ತೀರ್ಥಮಾಧ್ವಗ್ರಂಥಗಳಿಗೆ ಟೀಕೆಯ ಬರೆದಿರುವಜಗತ್‍ಪ್ರಖ್ಯಾತ ಜಯತೀರ್ಥ ಸಾಧು ಮುನಿವರ್ಯ 5ವಿದ್ಯಾಧಿರಾಜರು ಜಯತೀರ್ಥಜಾತರುವರ್ಧಿಸಿದರು ಈ ಆದಿ ಮಠವನ್ನಆದಿಮಠ ಭಿನ್ನಾಂಶ ಮಠಗಳುಪಂಕಜನಾಭಮಾಧವಾಕ್ಷೋಭ್ಯರಿಂ ಪುಟ್ಟಿ ಇಹುದು 6ಪದುಮನಾಭಾದಿ ಈ ಸರ್ವ ಗುರುಗಳಿಗೆ ನಾಆದರದಿ ಶರಣಾದೆ ಸಂತೈಪರೆಮ್ಮಪದುಮನಾಭರು ತಾವೇ ಸ್ಥಾಪಿಸಿದ ಮಠದಲ್ಲಿಮೊದಲನೇಯವರು ಶ್ರೀ ಲಕ್ಷ್ಮೀಧರರು 7ಶ್ರೀ ಲಕ್ಷ್ಮೀಧರ ತೀರ್ಥ ಸೂರಿಗಳ ವಂಶಜರುಮಾಲೋಲ ಶ್ರೀರಂಗನಾಥನ ಪ್ರಿಯಶೀಲ ಯತಿವರ ಸ್ವರ್ಣವರ್ಣತೀರ್ಥರುಅವರಜಲಜಕರಜಾತ ಶ್ರೀಪಾದರಾಜಾರ್ಯ 8ಶ್ರೀಲಕ್ಷ್ಮೀಧರ ತೀರ್ಥ ಮೊದಲಾದ ಸರ್ವರಕಾಲಿಗೆ ಎರಗುವೆ ಕರುಣಾಶಾಲಿಗಳುಶ್ರೀ ಲಕ್ಷ್ಮೀನಾರಾಯಣಾರ್ಯರ ಪ್ರಭಾವವುಬಲ್ಲನೆ ನಾನು ವರ್ಣಿಸಲು ಘನತರವು 9ಯತಿರಾಜರಿವರ ಮಹಿಮೆ ಬಹು ಬಹು ಬಹಳವೇದ್ಯ ಎನಗೆ ಅತಿ ಸ್ವಲ್ಪವೇವೇಅದರಲ್ಲೂ ಬಿಟ್ಟಿದ್ದು ಇಲ್ಲಿ ಪೇಳಿಹುದುಅತಿಕಿಂಚಿತ್ ಅಣುಮಾತ್ರ ಸುಜನರು ಆಲಿಪುದು 10ಕನ್ನಡ ಪ್ರದೇಶದಲಿ ಮಹಿಸೂರು ರಾಜ್ಯದಲಿಚೆನ್ನಪಟ್ಟಣಕೆರಡು ಕ್ರೋಶದೊಳಗೇವೇಸಣ್ಣ ಗ್ರಾಮವು ಅಬ್ಬೂರು ಎಂಬುದುಂಟುಕಣ್ವತೀರ್ಥಾಭಿಧ ಪುಣ್ಯನದೀತೀರ 11ವಿದ್ಯಾಧಿರಾಜರ ಕರಕಮಲೋತ್ಪನ್ನರುವೇದ ವೇದಾಂತ ಕೋವಿದರುಗಳು ಈರ್ವರುವಿದ್ಯಾಧಿರಾಜ ಈರ್ವರಲಿ ಪೂರ್ವಜರುವಾದಿಗಜ ಸಿಂಹ ರಾಜೇಂದ್ರ ಯತಿವರರು 12ರಾಜೇಂದ್ರ ತೀರ್ಥಜ ಜಯಧ್ವಜರಹಸ್ತಕಂಜಸಂಜಾತ ಪುರುಷೋತ್ತಮ ತೀರ್ಥರುರಾಜರಾಜೇಶ್ವರ ಪಟ್ಟಾಭಿರಾಮನ್ನಪೂಜಿಸುತ ಇದ್ದರು ಅಬ್ಬೂರಿನಲ್ಲಿ 13ಪುರುಷೋತ್ತಮಾರ್ಯರ ಮಹಿಮೆ ನರರಿಂದಅರಿವುದಕೆಸಾಕಲ್ಯಶಕ್ಯವು ಅಲ್ಲಶಿರಿವರನ ಪೂರ್ಣಾನುಗ್ರಹಕೆ ಪೂರ್ಣಪಾತ್ರರಾಗಿಹ ಈ ಕರುಣಿಗೆ ಶರಣು 14ಘೃಣಿಸೂರ್ಯಆದಿತ್ಯ ತೇಜಸ್ಸಲಿ ಬೆಳಗುವವಿನಯ ಸಂಪನ್ನ ಸುಬುದ್ಧಿಮಾನ್ ಬಾಲನ್ನತನ್ನ ಬಳಿ ಕರೆತರಿಸಿ ಬ್ರಹ್ಮಣ್ಯ ತೀರ್ಥಾಖ್ಯಅನಘನಾಮವನಿತ್ತುಪ್ರಣವಉಪದೇಶಿಸಿದರು15ವಾಜಿವಕ್ತ್ರನು ನರಸಿಂಹ ವಿಠಲನುಯಜÕವರಾಹಶ್ರೀರಾಮ ಯದುಪತಿಯಪೂಜಿಸುವ ಬಗ್ಗೆ ಮತ್ತೂಬ್ರಹ್ಮ ವಿದ್ಯಾ ಮಧ್ವಸಚ್ಛಾಸ್ತ್ರ ಬೋಧಿಸುತ್ತಿಹರು ಬ್ರಹ್ಮಣ್ಯರ್ಗೆ 16ಪುರುಷೋತ್ತಮರನ್ನ ಕಾಣಲು ಅಬ್ಬೂರನ್ನಕುರಿತು ಬರುತಿಹರು ಸ್ವರ್ಣವರ್ಣತೀರ್ಥರು ಆಗ ಸಾಯಂಕಾಲ ಇನ್ನೆಷ್ಟುದೂರವೋ ಎಂದು ಶಂಕಿಸಿದರು ಮನದಿ 17ಮಾರ್ಗದಲಿ ದನಗಳ ಮೇಸುವ ಬಾಲಕರೊಳುಅಕಳಂಕ ವರ್ಚಸ್ವಿ ಹುಡುಗ ಓರ್ವನ್ನತಾ ಕಂಡು ಪಲ್ಲಕ್ಕಿ ನಿಲ್ಲಿಸಿ ಕೇಳಿದರುಶ್ರೀಗಳು ಗ್ರಾಮಕ್ಕೆ ದೂರ ಎಷ್ಟೆಂದು 18ಅಹಸ್ಪ್ರಾಂತ ಗಗನಸ್ಥಸೂರ್ಯನ್ನ ನೋಡಿಬಹು ಸಣ್ಣ ವಯಸ್ಸಿನ ಎನ್ನನ್ನು ನೋಡಿಅಹಂಮಾಎಂದು ಕೂಗೋ ಧೇನುಗಳ ನೋಡಿಬಹು ಸಮೀಪವು ಗ್ರಾಮ ಎಂದು ಸೂಚಿಸಿದ 19ಕುಶಾಗ್ರ ಬುದ್ಧಿಯ ಸೂಕ್ಷ್ಮತ್ವವ ನೋಡಿಆ ಸ್ವಾಮಿಗಳಿಗೇ ಈ ಹುಡುಗ ಯಾರೆಂದುಭಾಸವಾಗಿ ಲೋಕರೀತಿಯಲಿ ಕೇಳಿದರುಹೆಸರು ಏನು ಯಾರ ಮಗ ಮನೆ ಎಲ್ಲಿ 20ನಮಿಸಿ ಸ್ವಾಮಿಗಳಿಗೆ ಕರಮುಗಿದು ಪೇಳಿದಅಮ್ಮಗಿರಿಯಮ್ಮನು ತಂದೆಯು ಶೇಷಗಿರಿಲಕ್ಷ್ಮೀನಾರಾಯಣಾಭಿದನು ತಾನೆಂದುಸಮೀಪಸ್ಥ ಹೊಲದಲ್ಲಿ ಮನೆಯ ತೋರಿಸಿದ 21ಕ್ರಮದಿ ಬರೆ ಓದುವಿದ್ಯೆಕಲಿಯದಿದ್ದರೂಸೂಕ್ಮ ಬುದ್ಧಿ ದೇಹಕಾಂತಿ ಮುಖ ವರ್ಚಸ್ಸಸುಮಹಾ ಪೂರ್ವಸಾಧನದಿ ಎಂದರಿತರುಈ ಮಹಾ ಸೂರಿವರ್ಯರು ಶ್ರೀಸ್ವಾಮಿಗಳು 22ಅಬ್ಬೂರು ಸೇರಿ ಪುರುಷೋತ್ತಮರ ಕೈಯಿಂದಉಪಚಾರಗಳನ್ನು ಕೊಂಡು ಬಾಲತಪೋನಿಧಿ ಬ್ರಹ್ಮಣ್ಯರ ಕಂಡು ಅವರಂತೆಒಬ್ಬ ಬಾಲನು ತಮಗೂ ಬೇಕೆಂದರು 23ತಥಾಸ್ತು ಎನ್ನುತಲಿ ಪುರುಷೋತ್ತಮರತಂದೆ ತಾಯಿಗಳನ್ನು ಕರೆತರಿಸಿ ಬೇಗಮುದದಿ ಮಾಡಿದರು ಲಕ್ಷ್ಮೀನಾರಾಯಣಗೆವೇದಾಧಿಕಾರ ಬರುವಂಥ ಉಪನಯನ 24ಬಹ್ಮೋಪದೇಶಾದಿ ಮಂತ್ರೋಪದೇಶಗಳುವಿಹಿತ ರೀತಿಯಲ್ಲಿ ಆದ ತರುವಾಯಬ್ರಹ್ಮಚಾರಿ ಆ ಬಾಲಕನಿಗೆ ಸಂನ್ಯಾಸಮಹಾಪ್ರಣವಉಪದೇಶ ಕೊಟ್ಟರು ಗುರುವು25ಗುರುಸ್ವರ್ಣವರ್ಣ ತೀರ್ಥರು ವಾತ್ಸಲ್ಯವಎರೆಯುತ್ತ ಲಕ್ಷ್ಮೀನಾರಾಯಣ ತೀರ್ಥಆಶ್ರಮೋಚಿತ ನಾಮ ಕೊಟ್ಟು ಬಾಲನ್ನಸೇರಿಸಿಕೊಂಡರು ತಮ್ಮ ಪರಂಪರೇಲಿ 26ಹಿಂದೆ ಶೇಷಗಿರಿಯಪ್ಪ ಗಿರಿಯಮ್ಮ ದಂಪತಿಯಕಂದನು ದನ ಮೇಸೋ ಲಕ್ಷ್ಮೀನಾರಾಯಣಇಂದುಲಕ್ಷ್ಮೀನಾರಾಯಣ ತೀರ್ಥರಾಗಿವೇದಾಂತ ಸಾಮ್ರ್ರಾಜ್ಯ ಯುವರಾಜನಾದ 27ವಿದ್ಯಾಧಿ ರಾಜ ರಾಜೇಂದ್ರ ಜಯಧ್ವಜ ಪುರು -ಷೋತ್ತಮ ಬ್ರಹ್ಮಣ್ಯರಿಗೆ ನಮೋ ಲಕ್ಷ್ಮೀಧರಾದಿ ಗುರುಗಳಿಗೂ ಸುವರ್ಣವರ್ಣರಿಗೂಸದಾ ನಮೋ ಲಕ್ಷ್ಮಿನಾರಾಯಣ ತೀರ್ಥರಿಗೂ 28ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 29 ಪ-ಪ್ರಥಮ ಕೀರ್ತನೆ ಸಂಪೂರ್ಣಂ-ದ್ವಿತೀಯಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪೀವಲ್ಲಭ ರಂಗ ಒಲಿದಿಹಮಹಂತಪಸ್ವರ್ಣವರ್ಣರೂ ಲಕ್ಷ್ಮೀನಾರಾಯಣರಿಗೆಆಮ್ನಾಯನಿಗಮಾಂತ ವಿದ್ಯೆಗಳ ಕಲಿಸೆಘನಮಹಾಪಾಂಡಿತ್ಯ ಪ್ರೌಢಿಮೆಯನು ಹೊಂದಿಸಣ್ಣ ಯತಿ ಪ್ರಖ್ಯಾತರಾದರು ಜಗದಿ 1ವಿಭುದೇಂದ್ರ ರಘುನಾಥ ಮೊದಲಾದ ಯತಿವರರುಈ ಬಾಲಯತಿಯ ಪಾಂಡಿತ್ಯ ಪ್ರಭಾವವಬಹು ಬಹು ಶ್ಲಾಘಿಸಿ ರಘುನಾಥರಿವರಿನ್ನ'ಶ್ರೀಪಾದ ರಾಜರು&ಡಿsquo; ಎಂದು ವರ್ಣಿಸಿದರು 2ಅಂದಿನಾರಭ್ಯ ಈ ಲಕ್ಷ್ಮೀ ನಾರಾಯಣರಮಂದಿಗಳು ವಿದ್ವಜ್ಜನರು ಸಜ್ಜನರು'ಆನಂದ ಉತ್ಸಾಹದಿ ಶ್ರೀಪಾದರಾಜ&ಡಿsquo;ರೆಂದು ಕರೆಯುವುದು ಅದ್ಯಾಪಿ ಕಾಣುತಿದೆ 3ರಂಗಕ್ಷೇತ್ರಕೆ ಬಂದು ಶ್ರೀ ಪಾದರಾಜ ಸಹರಂಗನಾಥನ್ನ ಕಂಡು ಸ್ಥಾಪಿಸಿ ಮಠವಭಂಗವಿಲ್ಲದೇ ಪೂಜಾ ಪ್ರವಚನವ ಗೈಯುತ್ತತುಂಗಯತಿ ಸ್ವರ್ಣವರ್ಣರು ಕುಳಿತರಲ್ಲೇ 4ವರುಷಗಳು ಜರಗಿತು ಶ್ರೀಪಾದರಾಜರುಊರು ಊರಿಗೆ ದಿಗ್ವಿಜಯವ ಮಾಡುತ್ತಪರಪಕ್ಷ ಕುಮತಗಳ ಛೇದಿಸಿ ಸತ್ತತ್ವಆರುಪಿದರು ಯೋಗ್ಯಾಧಿಕಾರಿಗಳಿಗೆ 5ಮುಳಬಾಗಿಲು ಎಂದು ಆಧುನಿಕರು ಕರೆವಂಥಒಳ್ಳೇ ಕ್ಷೇತ್ರಕ್ಕೆ ಬಂದು ಮಠದಲ್ಲಿ ಇರುತ್ತಬಾಲಕರು ವೃದ್ಧರು ಯತಿಗಳಿಗೂ ಸದ್ವಿದ್ಯಾಕಲಿಸುತ್ತಿದ್ದರು ತಾವೇ ಪಾಠ ಹೇಳುತ್ತಾ 6ಮುಳಬಾಗಿಲು ಕ್ಷೇತ್ರದಲ್ಲಿ ಹನುಮಂತಶ್ರೀ ಲಕ್ಷ್ಮೀಪತಿಯನ್ನು ಸೇವಿಸುತ ಇಹನುಬಾಲೇಂದು ಶೇಖರನು ಗಿರಿಜಾ ಸಮೇತಶೈಲ ತೋಟಗದ್ದೆ ಅಟವಿಗಳು ಇಹವು 7ಊರಿಗೆ ಕ್ರೋಶ ಮಾತ್ರದಿ ಇರುವ ಸ್ಥಳದಲಿವರಮಧ್ವಸಿದ್ಧಾಂತ ಜಯ ಶಿಲಾ ಲಿಖಿತಇರುವುದು ಅದ್ಯಾಪಿ ಕಾಣ ಬಹುದು ಅಲ್ಲೇಭಾರಿತರ ವಾದವು ನಡೆಯಿತು ಹಿಂದೆ 8ಶ್ವೇತಕೇತು ಉದ್ದಾಲಕರ ಸಂವಾದತತ್ವಮಸಿ ವಾಕ್ಯವೇ ವಾದ ವಿಷಯವಾದಿಸಿದರು ವಿದ್ಯಾರಣ್ಯ ಅಕ್ಷೋಭ್ಯರುವೇದಾಂತ ದೇಶಿಕರ ಮಧ್ಯಸ್ಥ ತೀರ್ಮಾನ 9ಛಾಂದೋಗ್ಯ ಉಪನಿಷತ್ತಲಿರುವ ವಾಕ್ಯಸ ಆತ್ಮಾ ತತ್ವಮಸಿ ಎಂಬುವಂಥಾದ್ದುಭೇದ ಬೋಧಕವೋ ಅಭೇದ ಬೋಧಕವೋಎಂದು ವಾದವು ಆ ಈರ್ವರಲ್ಲಿ 10ಆತ್ಮ ಶಬ್ದಿತ ನಿಯಾಮಕಗೂ ನಿಯಮ್ಯ ಜೀವನಿಗೂಭೇದವೇ ಬೋಧಿಸುವುದು ಆ ವಾಕ್ಯವೆಂದುಸಿದ್ಧಾಂತ ಅಕ್ಷೋಭ್ಯರು ಸ್ಥಾಪಿಸಿದರುಸೋತಿತು ವಿದ್ಯಾರಣ್ಯರ ಐಕ್ಯವಾದ 11ಮಧ್ಯಸ್ಥರಾಗಿದ್ದ ವೇದಾಂತ ದೇಶಿಕರುವಿದ್ಯಾರಣ್ಯ ಎಂಬುವ ಮಹಾರಣ್ಯವತತ್ವಮಸಿ ಅಸಿಯಿಂದ ಅಕ್ಷೋಭ್ಯರುಛೇದಿಸಿದರೆಂದು ಬರೆದಿಹರು ತಮ್ಮ ಗ್ರಂಥದಲಿ 12ಶ್ರೀಪಾದರಾಜರ ಮಠವು ಆ ಸ್ಥಳಕೆಸಮೀಪವೇ ಅಲ್ಲುಂಟು ನರಸಿಂಹ ತೀರ್ಥಸುಪವಿತ್ರತ್ರ್ಯೆ ಲೋಕ್ಯಪಾವನೆಗಂಗಾಸುಪ್ರಸನ್ನಳು ಇಲ್ಲಿ ತೋರಿಹಳು ಸ್ಮರಿಸೇ 13ದಿಗ್ವಿಜಯ ಕ್ರಮದಲ್ಲಿ ಕಾಶೀ ಪಂಢರೀಪುರಮುಖ್ಯ ಕ್ಷೇತ್ರಗಳಿಗೆ ಪೋಗಿ ಅಲ್ಲಲ್ಲಿಭಗವಂತ ಶ್ರೀಪತಿಯ ಒಲಿಸಿಕೊಳ್ಳುವಮಾರ್ಗಭಾಗವತಧರ್ಮ ಸಚ್ಛಾಸ್ತ್ರ ಬೋಧಿಸಿದರು14ಅಲ್ಲಲ್ಲಿ ವಾದಿಸಿದುರ್ವಾದಿಕುಮತಿಗಳಸುಳ್ಳು ಸೊಲ್ಲುಗಳನ್ನು ಬಳ್ಳಿಗಳ ತೆರದಿಸೀಳಿ ಛೇದಿಸಿ ಸ್ಥಾಪಿಸಿದರು ಮಧ್ವಮತಶೀಲತ್ವ ಔನ್ನತ್ಯ ವೇದ ಸನ್ನತಿಯ 15ಅಬ್ಬೂರಲ್ಲಿ ಶ್ರೀ ಸ್ವರ್ಣವರ್ಣ ತೀರ್ಥರುಶ್ರೀ ಪುರುಷೋತ್ತಮ ತೀರ್ಥರ ಕೈಯಿಂದಸುಪ್ರೌಢ ಪಾಂಡಿತ್ಯ ಹೊಂದಿ ಪೀಠವ ಏರಿಪರಿಪಾಲಿಸುತ್ತಿದ್ದರು ಯತಿ ಧರ್ಮ 16ಮಹಾಮಹಿಮ ಶ್ರೀ ಪರುಷೋತ್ತಮರು ತಮ್ಮಯಗುಹೆಯೊಳು ಕುಳಿತರು ಏಕಾಗ್ರ ಚಿತ್ತದಲಿಮಹಾರ್ಹ ಕೇಶವನ ಆರಾಧಿಸುತಿಹರುಬಾಹ್ಯ ಜನರ ಸಂಪರ್ಕವಿಲ್ಲದಲೇ 17ಬ್ರಹ್ಮಣ್ಯ ತೀರ್ಥರು ಉದಾರ ಕರುಣಿಗಳುಬ್ರಾಹ್ಮಣ ಶ್ರೇಷ್ಠನ್ನ ಬದುಕಿಸಿ ಅವನಗೃಹಿಣಿಗೆ ಮಾಂಗಲ್ಯ ಭಾಗ್ಯ ವರ್ಧಿಸಿಮಹಾತ್ಮ ಪುತ್ರನ ಹಡೆಯೆವರನೀಡಿದರು18ತಮಗೆ ಆ ಮಗುವನ್ನು ಕೊಡಬೇಕು ಎಂದುಬ್ರಹ್ಮಣ್ಯರು ಪೇಳಿದ್ದ ಅನುಸರಿಸಿಆ ಮಗುವ ದಂಪತಿಗಳ್ ನೀಡೆ ಶಿಶುವುಶ್ರೀ ಮಠದಿ ಬೆಳೆಯಿತು ಗುರುಗಳ ಪಾಲನದಿ 19ಶ್ರೀ ಹರಿಗೆ ಅಭಿಷೀಕ್ತ ಹಾಲುಂಡು ಶಿಶು ಬೆಳೆದುಶ್ರೀಹರಿನೈವೇದ್ಯದಿಂ ವರ್ಧಿಸಿ ಬಾಲವಿಹಿತ ವಯಸ್ಸಲ್ಲೇವೇ ಉಪನಯನವು ಆಗಿಬ್ರಹ್ಮಣ್ಯರ ಕರದಿ ಲಭಿಸಿತು ಸಂನ್ಯಾಸ 20ಸರ್ವೋತ್ತಮ ಇಜ್ಯಪೂಜ್ಯ ಹರಿಸಾರಾತ್ಮಸರ್ವೇಶ ಶ್ರೀವ್ಯಾಸ ಶ್ರೀಶನ ನಾಮವ್ಯಾಸತೀರ್ಥರು ಎಂದು ಈ ಬಾಲಯತಿವರಗೆಆಶ್ರಮ ನಾಮವಿತ್ತರು ಬ್ರಹ್ಮಣ್ಯರು 21ಪ್ರಣವಾದಿ ಮಂತ್ರಗಳ ತಾವೇವೇ ಬೋಧಿಸಿಘನಬ್ರಹ್ಮ ವಿದ್ಯಾದಿ ಸಚ್ಛಾಸ್ತ್ರ ಕಲಿಯೆಸಣ್ಣ ಯತಿವರ ಶ್ರೀ ಪಾದರಾಜರಲಿಬ್ರಹ್ಮಣ್ಯತೀರ್ಥರು ಕಳುಹಿಸಿದರು 22ಶ್ರೀ ಪಾದರಾಜರು ವ್ಯಾಸರಾಯರಿಗೆಸುಪ್ರೀತಿಯಲಿ ಸರ್ವ ವಿದ್ಯೆಗಳ ಕಲಿಸಿತಾಪೋದಕಡೆ ದಿಗ್ವಿಜಯದಿ ಕರದ್ಹೋಗಿಈ ಬಾಲ ಯತಿಗಳ ಪ್ರಭಾವ ಹರಡಿದರು 23ಶ್ರೀಪಾದರಾಜರು ಸ್ವಭಾವದಿ ಕೃಪಾಳುಗಳುಈ ಪುಣ್ಯ ಶ್ಲೋಕ ಶ್ರೀಗಳ ಮಹಿಮೆ ಏನೆಂಬೆಸರ್ಪಬಾಧೆಯು ವ್ಯಾಸರಾಜರಿಗೆ ಸೋಕದೆಕಾಪಾಡಿಹರು ಆ ಆಹಿಯ ಹೋಗೆಂದು 24ಶಂಖತೀರ್ಥದ ಮಹಿಮೆ ಶ್ರೀಪಾದರಾಜರುಶಂಕೆಇಲ್ಲದೇ ತೋರ್ಪಡಿಸಿಹರು ಜಗಕೆಮಂಕುತನದಲಿ ಬ್ರಹ್ಮಹತ್ಯೆ ಮಾಡಿದವನಕಳಂಕ ಕಳೆದರು ಶಂಖತೀರ್ಥ ಪ್ರೋಕ್ಷಣದಿ 25ಸಂದೇಹಪರಿಹರಿಸೆ ಮಠದಿ ಜನತಿಳಿವುದಕೆತಂದಿಟ್ಟ ಕಪ್ಪುವಸ್ತ್ರದ ಮೇಲೆ ಶಂಖತೀರ್ಥ ಪ್ರೋಕ್ಷಿಸಿ ಶುಭ್ರ ಬಿಳಿಯಾಗಿ ಮಾಡಿದರುಸದಾ ಶರಣು ಇವರಿಗೂ ಶಂಖತೀರ್ಥಕ್ಕೂ 26ಕಂಜಭವಪಿತ ಪಾಂಡುರÀಂಗನು ಶ್ರೀಪಾದರಾಜರಿಗೆ ತಾನೇ ಒಲಿದದ್ದೇ ಕ್ಷೇತ್ರದಮಂಜೂಷದಲಿ ಭಾಮಾ ರುಕ್ಮಿಣೀ ಸಮೇತರಾಜೀವೇಕ್ಷಣ ರಂಗವಿಠಲನು ಒಲಿದಿಹನು 27ಸಾಳುವ ನರಸಿಂಹಾದಿ ರಾಜರು ಪ್ರಮುಖರುಪಾಳೆಯಗಾರರು ಮಂಡಲೇಶ್ವರರುಕೇಳಿಈ ಗುರುಗಳ ಪ್ರಭಾವ ನೋಡಿಕಾಲಿಗೆ ಎರಗಿಹರು ಬಹುಭಕ್ತಿಯಿಂದ 28ಮುಳಬಾಗಿಲು ಮಠಕೆ ಐವತ್ತು ಕ್ರೋಶದೊಳುಸಾಳುವ ನರಸಿಂಹ ರಾಜನ ಅರಮನೆಯುಎಲ್ಲ ಕಾರ್ಯಗಳನ್ನು ಶ್ರೀಪಾದರಾಜರಲಿತಿಳಕೊಂಡುಅವರಆಜÉÕಯಿಂದ ಆಳಿದನು29ಚಂದ್ರಗಿರಿ ಎಂಬುವ ಪಟ್ಟಣದಿ ಆ ರಾಜಮಂದಿರವು ವೇಂಕಟಾಚಲಕೆ ಸಮೀಪಚಂದ್ರಸೋದರಿ ರಮಣ ವೇಂಕಟೇಶನ ಪೂಜೆನಿಂತು ಹೋಗದೆ ಏರ್ಪಾಡು ಮಾಡೆಂದ 30ಗುರುಸಾರ್ವಭೌಮರು ಶ್ರೀಪಾದರಾಜರುಆ ರಾಜನ ಬಿನ್ನಹವನ್ನು ಲಾಲಿಸಿತ್ವರಿತದಿ ಶ್ರೀ ವ್ಯಾಸರಾಜರ ಕಳುಹಿಸಿತಿರುಪತಿ ವೇಂಕಟನ ಪೂಜೆಗೈಸಿದರು 31ರಾಜನ ಪ್ರಾರ್ಥನೆಗೆ ಒಪ್ಪಿ ಶ್ರೀಪಾದರಾಜರು ಅರಮನೆಗೆ ಪೋಗಲು ಅಲ್ಲಿಗಜತುರಗವಿಪ್ರಜನ ಪೂರ್ಣಕುಂಭಾದಿ ಸಹರಾಜನು ಸ್ವಾಗತವ ನೀಡಿದನು ಮುದದಿ 32ವೇದ ಘೋಷಗಳೇನು ಮಂಗಳದ್ವನಿ ಏನುವಾದ್ಯಮೇಳಗಳ ಸುಸ್ವರವು ಏನುಬೀದಿಯಲಿ ತೋರಣ ಪುಷ್ಪ ಮಂಟಪವೇನುಆದರದಿ ಸ್ವಾಗತದ ವೈಭವ ಏನೆಂಬೆ 33ಸಾಳುವ ನರಸಿಂಹನು ತನ್ನ ಸಿಂಹಾಸನದಲ್ಲಿ ಶ್ರೀ ಶ್ರೀ ಪಾದರಾಜರನ್ನಕುಳ್ಳಿರಿಸಿ ಕನಕಾಭೀಷೇಕವ ಮಾಡಿದ್ದನ್ನಅಳವೇ ವರ್ಣಿಸಲಿಕ್ಕೆ ನೋಡಲಾನಂದ 34ಶಿರಿ ರಮಣ ಶಿಂಶುಮಾರನ ಪಾದದಲಿ ಸ್ಥಿರಆಶ್ರಿತರು ಆದುದರಿಂದ ಧರೆಯಲ್ಲಿಹರಿಸಮರ್ಪಿತ ಸರ್ವ ಭೋಗ್ಯಭಾಗ್ಯಂಗಳುಅರಣ್ಯದಲ್ಲಿದ್ದರೂ ಜನರಿಗೆ ದೊರೆಯುವವು 35ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 36ತೃತೀಯ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪದೀನ ದಯಾಳು ಶ್ರೀ ಪಾದರಾಜರುಜನರು ಭಾಗೀರಥೀಯಾತ್ರೆ ಮಾಡಲಿಕೆಹಣವು ತ್ರಾಣವು ಸಾಲದು ಎಂದು ಅರಿತುಜಾಹ್ನವಿಯ ತರಿಸಿದರು ನೃಸಿಂಹ ತೀರ್ಥದಲಿ 1ಶ್ರೀಮಧ್ವಿಷ್ಣಂಘ್ರಿನಿಷ್ಠಾಃ ಅತಿ ಗುಣಗುರುತಮಶ್ರೀಮದಾನಂದ ತೀರ್ಥಃ ಎಂದು ಸಂಸ್ತುತ್ಯಶ್ರೀಮಧ್ವಾಚಾರ್ಯರ ಪ್ರಿಯತಮರು ಕರೆದಲ್ಲಿಅಮರ ತಟಿನೀ ಬಂದದ್ದೇನು ಆಶ್ವರ್ಯ 2ಶ್ರೀ ಮಧ್ವಿಷ್ಣಂಘ್ರಿ ಸಂಭೂತೆಯು ತನ್ನಯವಿಮಲ ತೀರ್ಥವ ನರಸಿಂಹ ತೀರ್ಥದಲಿಧಿಮು ಧಿಮು ಎಂದು ಪ್ರವಹಿಸಲು ಜನಸರ್ವರೂಸಮ್ಮುದದಿ ಪೂಜಿಸಿದರು ವಿಹಿತ ರೀತಿಯಲಿ 3ಹಿಂದೆ ಇಂದ್ರನು ತನ್ನಯ ವಜ್ರದಿಂದಅದ್ರಿಗಳ ಪಕ್ಷಿಗಳ ಕಡೆದ ತೆರದಿಇಂದುಶ್ರೀಪಾದರಾಜರು ಕುಮತ ಹೀರಿ ಪಕ್ಷಗಳಛೇದಿಸಿದರು ತಮ್ಮ ವಾಗ್ವಜ್ರದಿಂದ 4ಆನಂದ ತೀರ್ಥರ ನಿಜಾನಂದಪ್ರದ ಶಾಸ್ತ್ರಬಂದು ಬೇಡಿದ ಭಾಗ್ಯ ಅಧಿಕಾರಿಗಳಿಗೆಕುಂದುಕೊರತೆ ಏನೂ ಇಲ್ಲದೆ ಬೋಧಿಸಿಇಂದಿರೇಶನ ಪ್ರಸಾದವ ಒದಗಿಸಿಹರು 5ಚಂದ್ರಿಕಾ ನ್ಯಾಯಾಮೃತ ತರ್ಕತಾಂಡವಮೊದಲಾದ ಗ್ರಂಥಗಳ ರಚಿಸಿದ ಪ್ರಖ್ಯಾತವಾದಿಗಳಕೇಸರಿವ್ಯಾಸಮುನಿ ಮುಖ್ಯಮೇದಿನಿಸುರರಿಗೆ ವಿದ್ಯಾ ಕಲಿಸಿಹರು6ಶ್ರೀರಂಗ ವಿಠಲ ರುಕ್ಮಿಣೀ ಸತ್ಯಭಾಮಾತೋರಿ ತಾವೇ ತಮ್ಮ ಪ್ರತೀಕಗಳೊಳಗೆ ನಿಂತುಸೂರಿವರ ಶ್ರೀಪಾದರಾಜರ ಕೈಯಿಂದಭರದಿ ಪೂಜಾ ಸ್ತೋತ್ರ ಕೀರ್ತನೆ ಕೊಂಡಿಹರು 7ಅನುಪಮ ಅನುತ್ತಮ ಗುಣಗಣಾರ್ಣವ ರಮಾ -ನಾಥನು ಜಗಜ್ಜನ್ಮಾದ್ಯಖಿಲೈಕ ಕರ್ತಾವಿಷ್ಣು ಸರ್ವೇಶ್ವರ ಸ್ವತಂತ್ರಅನಘಮಹಿಮಾಕನ್ನಡ ನುಡಿಯಲಿ ಸಹಸ್ರಾರು ಹಾಡಿಹರು 8ಪ್ರತಿಒಂದು ಪದ ವಾಕ್ಯ ನುಡಿ ಪದ್ಯ ಕೀರ್ತನೆಯುಇಂದಿರಾಪತಿಯಲ್ಲಿ ನಿಶ್ಚಲ ಭಕ್ತಿಬಂಧಮೋಚಕ ಜ್ಞಾನ ಸಾಧನವಾಗಿರುವವುಆದರದಿ ಪಠಿಸೆ ಇಹಪರ ಸುಖಪ್ರದವು 9'ಸ್ಮರಿಸಿದವರನುಕಾವನಮ್ಮ ಸೂರ್ಯಾನೇಕ ಪ್ರಭಾವಸುರಮುನಿಗಳ ಸಂಜೀವ ಶ್ರೀ ವೆಂಕಟೇಶ ನಮ್ಮಪೊರೆವ&ಡಿsquo; ಎಂದಾರಂಭಿಸುವ ಕೀರ್ತನೆ ಪಠಿಸೆಸುಶ್ರವಣವು ಮಾಳ್ಪರ ಭಾಗ್ಯವೇ ಭಾಗ್ಯ 10ಶ್ರೀಪಾದರಾಜರು ಶಿರಿ ವೇಂಕಟೇಶನತಾಪೋಗಿ ಕಂಡು ಧ್ಯಾನದಿ ಸದಾ ನೋಡಿಸೌಭಾಗ್ಯ ಪ್ರದ ಈ ಕೀರ್ತನೆ ಹಾಡಿಹರುಸುಪುಣ್ಯ ಭಾಗಿಗಳೇ ಪಠಿಸಿ ಕೇಳುವರು 11ಭಕ್ತಿಯಿಂದ ಪಠಿಸುವ ಕೇಳುವ ಸಜ್ಜನರುಓದಿ ಕೇಳಿದ್ದು ಕೃಷ್ಣಗರ್ಪಿಸಲುಬದಿಯಲ್ಲೇ ತಾನಿದ್ದು ಯೋಗಕ್ಷೇಮವ ವಹಿಪಶ್ರೀದ ವೇಂಕಟ ಜನಾರ್ದನ ಕೃಷ್ಣ ಶ್ರೀಶ 12ಧನ ಧಾನ್ಯ ಆರೋಗ್ಯ ಆಯುಷ್ಯ ಕೀರ್ತಿಯಘನವಿಘ್ನಕಷ್ಟ ಪರಿಹಾರ ಜಯ ಎಲ್ಲೂಜ್ಞಾನ ಉದ್ಭಕ್ತಿ ಸಂತೋಷಹರಿಅಪರೋಕ್ಷಸಾಧನವು ಇವರ ಈ ಕೀರ್ತನೆ ಪಠನ 13ಜಯ ಜಯ ಜಗತ್ರಾಣ ಜಗದೊಳಗೆಸುತ್ರಾಣಅಖಿಲಗುಣಸದ್ದಾಮ ಶ್ರೀ ಮಧ್ವನಾಮಾಜಯಾಸಂಕರುಷಣ ಸಂಭೂತ ಮುಖ್ಯ-ವಾಯು ಹನುಮ ಭೀಮ ಮಧ್ವನ ಸ್ತೋತ್ರ 14ಈ ಮಧ್ವನಾಮಾಖ್ಯ ಸ್ತವರಾಜವನ್ನುನಮ್ಮ ಶ್ರೀಪಾದ ರಾಜಾರ್ಯ ರಚಿಸಿನಮಗೆಲ್ಲರಿಗಿತ್ತು ನಮಗೆ ಸೌಭಾಗ್ಯವಪ್ರೇಮದಿಂದಲಿ ಒದಗಿಸಿಹರು ಕರುಣಾಬ್ಧಿ 15ಸ್ಮರಿಸಲಾಕ್ಷಣ ಕಾಯ್ವಪುರಂದರದಾಸಾರ್ಯರಪರಂಪರೆ ವಿಜಯಾರ್ಯ ಗೋಪಾಲದಾಸಾರ್ಯಸೂರಿಗೋಪಾಲಾರ್ಯ ಶಿಷ್ಯರು ಜಗನ್ನಾಥದಾಸರಾಯರು ಫಲಶ್ರುತಿ ಬರೆದಿಹರು 16ವರಮಧ್ವ ನಾಮಕ್ಕೆ ಬರೆದಿರುವ ಫಲಶ್ರುತಿಯಭರದಿ ಪಠಿಸುವವರು ಶ್ರೀ ಮಧ್ವನಾಮಉತ್ಕøಷ್ಟ ಮಹಾತ್ಮ್ಯ ಉಳ್ಳದ್ದೆಂದರಿವರುಬರುವುದು ಅನುಭವಕೆ ಮಧ್ವನಾಮ ಓದಿ 17ಶ್ರೀ ಲಕ್ಷ್ಮೀನಾರಾಯಣ ರಾಮ ಹಯಶೀರ್ಷಭೈಷ್ಮೀ ಸತ್ಯಾಯುತ ರಂಗ ವಿಠಲಶ್ರೀ ಮದಾಚಾರ್ಯ ಪೂಜಿತ ಗೋಪೀನಾಥನ್ನಸಮ್ಮುದದಿ ಪೂಜಿಸುವ ಯೋಗಿವರ ಆರ್ಯ 18ಗಂಗೆ ಪ್ರತಕ್ಷ ತೋರಲು ಬಾಗಿನ ಕೊಟ್ಟುಜಗ ಜನ್ಮದ್ಯಖಿಳ ಕರ್ತನ್ನ ಪೂಜಿಸುತ್ತಜಗದೇಕ ಗುರುಮಧ್ವ ಸಚ್ಚಾಸ್ತ್ರ ಭೋದಿಸಿಝಗಿ ಝಗಿಪ ತೇಜಸ್ಸಲಿ ಹೊಂದಿದರುಸಮಾಧಿ19ಶಾಲಿಶಕ ಹದಿನಾಲ್ಕುನೂರೆಂಟನೆ ವರುಷಶುಕ್ಲ ಚತುರ್ದಶಿ ಜೇಷ್ಠ ಮಾಸದಲ್ಲಿಶೀಲತಮ ಭಾವದಲಿ ಳಾಳುಕನ ಧ್ಯಾನಿಸುತಕುಳಿತರು ಸಮಾಧಿಯಲಿ ಹರಿಪುರಯೈದಿದರು 20ಶಿಂಶುಮಾರಪುರವನ್ನಯೈದಿತಾ ಮತ್ತೊಂದುಅಂಶದಲಿ ಸುಪವಿತ್ರ ವೃಂದಾವನದಿ ಭಾಸಿಸುತ ಇರುತಿಹರುಬ್ರಹ್ಮ ವಿದ್ಯಾಲಯ - ಶ್ರೀಶಪ್ರಿಯನರಸಿಂಹ ತೀರ್ಥ ಮಂದಿರದಿ 21ದರ್ಶನವು ಪಾಪಹರ ಪ್ರದಕ್ಷಿಣೆ ಹರಿಯಾತ್ರೆವಿಶ್ವಾಸದಿಂದ ನಮಸ್ಕಾರ ಸರ್ವೇಷ್ಟಐಶ್ವರ್ಯ ಜ್ಞಾನಾದಿ ಫಲಪ್ರದವು ಯೋಗ್ಯರಿಗೆಸಂಸ್ಮರಿಸಲು ಸರ್ವ ಸಿದ್ಧಿದಾಯಕವು 22ಸಿಂಧೂರಅಜಮಿಳ ಸುಧಾಮ ಪ್ರಹ್ಲಾದಾದಿಭಕ್ತರ ಪರಿಪಾಲಕರನು ಶ್ರೀರಮಾಪತಿಯಸದಾ ಒಲಿಸಿಕೊಂಡಿಹಮಹಂತಗುರುವರಶ್ರೀಪಾದರಾಜರೇ ನಮೋ ನಮೋಪಾಹಿ23ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯು ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 24|| ಇತಿ ಶ್ರೀ ಪಾದರಾಜರ ಅಣು ಚರಿತೆ ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗೋಪಾಲ ದಾಸಾರ್ಯವಿಜಯಶ್ರೀ ಲಕ್ಷ್ಮೀ137ಭಾಗಣ್ಣ ಗೋಪಾಲ ದಾಸಾರ್ಯರ್ ಪಾದಕ್ಕೆಬಾಗಿ ಶರಣಾದೆನು ಸತತ ನಿಶ್ಚಯದಿಜಗದಾದಿಕರ್ತಅಜಅಘದೂರ ಸುಗುಣಾಬ್ಧಿತುರಗಾಸ್ಯವಿಜಯಶ್ರೀನಿವಾಸ ಪ್ರಿಯತಮರು || ಭಾಗಣ್ಣಪನಾರಸುಗುಣಾರ್ಣವನು ಶ್ರೀರಮಾಪತಿ ಹಂಸಸರಿಸಿಜಾಸನಸನಕದೂರ್ವಾಸಇಂಥಾಪರಮೋತ್ಕøಷ್ಟಗುರುಪರಂಪರೆಗೆ ಶರಣೆಂಬೆಪುರುಷೋತ್ತಮಾಚ್ಯುತ ಪ್ರೇಕ್ಷರಿಗೆ ಶರಣು 1ಸದಾಗಮಾಮಾಯಗಳು ಬ್ರಹ್ಮ ಧಾಮವೆÉಂದುಉದ್ಘೋಷಿಸುತಿವೆ ಮುಖ್ಯವಾಯುದೇವಮಾತರಿಶ್ವಸೂತ್ರಪವಮಾನಮುಖ್ಯಪ್ರಾಣಪ್ರತಿರಹಿತ ಬಲಜ್ಞಾನರೂಪಹನುಮ ಭೀಮ ಮಧ್ವನ್ನ2ಪ್ರೋಚ್ಚಸುರವರ ವಾಯುವಿನ ತೃತೀಯಾವತಾರ ಮಧ್ವಅಚ್ಯುತಪ್ರೇಕ್ಷರಲಿ ಸಂನ್ಯಾಸಕೊಂಡುಪ್ರಚ್ಛನ್ನ ಬೌದ್ಧಾದಿ ಮತ ಪಂಕದಿ ಬಿದ್ದಿದ್ದಸಜ್ಜನರನ್ನುದ್ಧರಿಸಿ ಸತ್‍ಜ್ಞಾನವಿತ್ತ 3ಶ್ರೀ ಮಧ್ವಗುರು ವಂಶಸ್ಥಪದ್ಮನಾಭನರಹರಿಮಾಧವಾಕ್ಷೋಭ್ಯಜಯ ವಿದ್ಯಾಧಿರಾಜವಿದ್ಯಾಧಿರಾಜರ ಶಿಷ್ಯರು ಈರ್ವರುಸಾಧು ಉತ್ಕøಷ್ಟರೀ ತೀರ್ಥರ್‍ಗಳಿಗೆ ಶರಣು 4ಶ್ರೀ ವಿದ್ಯಾಧಿರಾಜರ ಪ್ರಥಮ ಶಿಷ್ಯ ರಾಜೇಂದ್ರಹಸ್ತಪದ್ಮ ಜಾತರು ಜಯಧ್ವಜಾರ್ಯಮಾಧವನ ಏಕಾಂತ ಭಕ್ತ ಪುರುಷೋತ್ತಮರುತತ್ಸುತ ಬ್ರಹ್ಮಣ್ಯರೀ ಸರ್ವರಿಗೂ ಶರಣು 5ಪದ್ಮನಾಭತೀರ್ಥಜ ಲಕ್ಷ್ಮೀಧರರ ವಂಶಜಾತ ಸುವರ್ಣವರ್ಣ ತೀರ್ಥಾಭಿದರಸುತಲಕ್ಷ್ಮೀ ನಾರಾಯಣ ಯತಿವರ್ಯ ಶ್ರೀಪಾದರಾಜರು ಈ ಸರ್ವರಿಗೂ ಶರಣು 6ಶಿಂಶುಮಾರಪುಚ್ಛಶ್ರಿತರ ಅವತಾರರೇವಸುಮತೀಖ್ಯಾತ ಶ್ರೀಪಾದರಾಜರಲಿಭಾಷ್ಯಾಧಿಗಳ ಕಲಿಯೇ ಬ್ರಹ್ಮಣ್ಯ ತೀರ್ಥರಶಿಷ್ಯವರ್ಯ ವ್ಯಾಸರಾಜರು ಸೇರಿದರು 7ವಾದಿಗಜಕೇಸರಿಮಧ್ವಮತೋದ್ಧಾರರುಮೇದಿನೀ ಪ್ರಖ್ಯಾತ ಮಹಾಭಾಗವತರುಸಾಧುಜನ ಆಹ್ಲಾದ ಶ್ರೀ ವ್ಯಾಸರಾಜರಲಿಸದಾ ಶರಣು ಪಾಲಿಪರುಪ್ರತಿಕ್ಷಣ ದಯದಿ8ಆನಂದ ಮುನಿಕರ ಅರವಿಂದ ಸಂಜಾತವಿಷ್ಣುತೀರ್ಥ ವಂಶಜ ವಾಗೀಶರಹಸ್ತವನರುಹೋತ್ಪನ್ನರು ಸುಮಹಾಮಹಿಮರುಘನದಯಾನಿಧಿ ವಾದಿರಾಜ ಸ್ವಾಮಿಗಳು9ಯುಕ್ತಿಮಲ್ಲಿಕಾ ಮೊದಲಾದ ತತ್ವಬೋಧಕವಾದಗ್ರಂಥ ಪದ್ಯ ಕೀರ್ತನೆಗಳ್ ಸಜ್ಜನರಿಗಿತ್ತುಸೋದೆಯಲ್ಲಿ ತ್ರಿವಿಕ್ರಮಮೂರ್ತಿ ನಿಲ್ಲಿಸಿಹರುಭೂಧರಹಯಾಸ್ಯಪ್ರಿಯತಮ ಶ್ರೀ ವಾದಿರಾಜಾರ್ಯ10ತೀರ್ಥಪಾದ ಶ್ರೀಪತಿಯು ಬ್ರಹ್ಮ ಶಿವಾದ್ಯಮರ ಸಹಸದಾ ಸನ್ನಿಹಿತವಾಗಿರುವ ಮತ್ತುತೀರ್ಥವನ ಕ್ಷೇತ್ರಗಳೊಳುತ್ತಮ ವೃಂದಾವನದಿಅತ್ಯಕ್ತ ದೇಹದಿ ಕುಳಿತಿಹರು ಗುರುರಾಟ್ 11ಬುಧರು ತಿಳಿದಂತೆಯೇ ಬ್ರಹ್ಮಾಂಡ ಪುರಾಣದಲ್ಲಿವಾದಿರಾಜರು ಭಾವೀಕಲ್ಪ ಮುಖ್ಯವಾಯುಎಂದು ಪ್ರಸಿದ್ಧರೀ ಸುದುಪಾಸ್ಯ ಮದ್ಗುರುವರ್ಯರಲ್ಲಿ ಶರಣಾದೆಸದಾನಮೋ ಲಾತವ್ಯಾಚಾರ್ಯ ಕರುಣಾಬ್ಧೆ 12ವಿದ್ಯಾಧಿರಾಜರ ಎರಡನೇ ಶಿಷ್ಯರುಕವೀಂದ್ರ ಪೀಳಿಗೆಯ ಶ್ರೀರಾಮಚಂದ್ರದ್ವಿತೀಯಶಿಷ್ಯ ವಿದ್ಯಾನಿಧಿ ವಂಶಜಾತರುಆದ್ಭುತಮಹಿಮರು ಕರುಣಿ ರಘೋತ್ತಮರು 13ಕಾಮಿತಪ್ರದ ಟೀಕಾಭಾವ ಬೋಧಾರ್ಯರುಎಮ್ಮಪಾಲಿಪ ರಘೋತ್ತಮರಿಗೆ ಶರಣುರಾಮಚಂದ್ರರ ಮೊದಲನೆ ಶಿಷ್ಯ ವಿಬುಧೇಂದ್ರಈ ಮಹಾತ್ಮರ ವಂಶಜರು ಸರ್ವರಿಗೂ ನಮಿಪೆ 14ದುರ್ಜನರ ಕುಮತಗಿರಿವಜ್ರ ವಿಜಯೀಂದ್ರರುಸಜ್ಜನರುದ್ಧಾಕರು ಸುಧೀಂದ್ರಸೂರಿನಿಜವಿರಾಗಿ ಯಾದವೇಂದ್ರ ವಿಜ್ಞಾನಿಯುಭಜಕಜನಸುರಧೇನುರಾಘವೇಂದ್ರಾರ್ಯ15ಯಾರುಹಿಂದೆ ಏಡಮೂಕ ಬ್ರಾಹ್ಮಣನಾಗಿದ್ದಾಗಯಾರದ್ವಾರಾ ಶ್ರೀ ವಾದಿರಾಜರು ಸ್ವಪ್ನದಲ್ಲಿಉತ್ಕøಷ್ಟ ಶುಭತಮ ವೃಂದಾವನಾಖ್ಯಾನ ತಾವೇ ಹೇಳಿದರುಆಸೂರಿ ವಿಶ್ವಪ್ರಿಯಾರ್ಯರಿಗೆ ಶರಣು 16ಸೂರಿಕುಲತಿಲಕರು ವಾದಿಕರಿಹರಿ ಖ್ಯಾತಸಿರಿವ್ಯಾಸರಾಯರಲಿ ಮುದ್ರಿಕೆಯಕೊಂಡನಾರದರ ಅವತಾರರೆಂದು ಪ್ರಸಿದ್ಧರುಪುರಂದರದಾಸಾರ್ಯ ಕರುಣಾಂಬುಧಿಗೆ ಆನಮಿಪೆ17ನಿರ್ಝರ ವೃಂದ ಋಷಿ ಭೃಗುಮುನಿಯೇ ಧರೆಯಲ್ಲಿವಿಜಯದಾಸಾರ್ಯರಾಗಿ ಮೆರೆದವರ್ಗೆ ಶರಣುವಿಜಯವಿಟ್ಠಲನೊಲಿಯೆ ಜ್ಞಾನ ಭಕ್ತಿಸತ್ತತ್ವಸಜ್ಜನರಿಗೆ ಬೋಧಿಸಿದ ನಿವ್ರ್ಯಾಜ ಕರುಣಿ 18ಆಲಸ್ಯದಿನಾ ಮೈಥಿಲೀಪತಿ ಪಲ್ಲಿಯಲ್ಲಿಮಲಗಿರಲು ಶ್ರೀ ಗೋಪಾಲದಾಸಾರ್ಯರುಬಲುಕರುಣದಲ್ಲಿ ಮುಂದೆ ನಿಂತು ಯತಿಕೃತಮಾಲೋಲ ಪೂಜೆನೋಡಿ ಒದಗಿದ ಗುರುವರ್ಯ 19ಉಮಾಸೂನು ವಿಘ್ನಹರ ಕ್ಷಿಪ್ರಪ್ರಸಾದನುಈ ಮಹೀಯಲ್ಲಿ ಗೋಪಾಲದಾಸರಾಗಿರಮಾಪತಿಯ ಸೇವಿಸಿ ಸಜ್ಜರನ್ನುದ್ಧರಿಸಿಹರುನಮಿಸಿ ಶರಣಾದೆ ಈ ಉದಾರ ಕರುಣಿಗೆ 20ಸುಪವಿತ್ರೆ ಸೌಭಾಗ್ಯಪ್ರದ ಮಂತ್ರಗಳನೆಗೆಉಪದೇಶಮಾಡಿದ ಕಪಿಗೋತ್ರದವರುಸುಪುಣ್ಯ ಶೇಶ್ಲೀಕರು ಉದಾರ ಸಾತ್ವಿಕರುಶ್ರೀಪತಿ ಕೃಷ್ಣಪ್ರಿಯ ಶ್ರೀರಾಮಾಚಾರ್ಯರಿಗೆ ಶರಣು 21ತರುಣತನಾರಭ್ಯ ಹರಿದಾಸತ್ವ ಒದಗಿಸಿಪರಿಪರಿ ವಿಧದಲ್ಲಿ ಔದಾರ್ಯದಿಂದಕಾರುಣ್ಯಬೀರಿ ಕಾಪಾಡುತಿರುವಂಥಾ ಈಹರಿಪ್ರತಿಮಾರೂಪ ಗುರುಸರ್ವರಿಗೂತಂದೆ ತಾಯಿಗೂ ಶರಣು 22ದಧಿಶಿಲಾ ಎಂಬುವರು ಆಡಂಬರ ಪ್ರಿಯರುಮಂದಿಗಳು ಮೊಸರು ಕಲ್ಲೆಂದು ಕರೆಯುವರುಸಾಧುವೈಷ್ಣವವಿಪ್ರಮುರಾರಿರಾಯರುಸಾಧ್ವಿ ವೆಂಕಮ್ಮ ದಂಪತಿ ಇದ್ದ ಕ್ಷೇತ್ರ 23ಪುತ್ರ ರತ್ನಗಳು ನಾಲ್ಕು ಈ ದಂಪತಿಗೆಅಗ್ರಜಭಾಗಣ್ಣ, ಸೀನಪ್ಪ, ದಾಸಪ್ಪತರುವಾಯ ರಂಗಪ್ಪ ನಾಲ್ಕನೆಯವನಾಗಿಗೌರವದಿ ಚರಿಸಿತು ಮುರಾರಿರಾಯರ ಕುಟುಂಬ 24ಸಂಸಾರಾವಸ್ಥೆಯಲ್ಲಿ ನಶ್ವರ ಸುಖ ದುಃಖಮಿಶ್ರವಾಗಿಯೆ ಉಂಟು ಆ ನಿಯತಿಯಲ್ಲಿಭೂಸುರವರ್ಯರು ಮುರಾರಿರಾಯರು ಸ್ವರ್ಗತಾ ಸೇರಿದರುಸತಿಸುತರನ್ನು ಬಿಟ್ಟು25ಬಾಲಕರನ್ನು ಪ್ರಿತ್ರವ್ಯರು ಲೆಕ್ಕಿಸದಿರಲುಮಾಲೋಲ ಪಾಲಿಸುವ ಕರ್ತನ್ನೇ ನಂಬಿಶೀಲೆ ವೆಂಕಮ್ಮ ಮಕ್ಕಳನ್ನ ಕರಕೊಂಡುಒಳ್ಳೆಯ ಜನಪದ ಶಂಖಪುರವೈದಿದಳು 26ಶಂಖಪುರ ಹತ್ತಿರವೇ ಹನೂಮಂತನ ಗುಡಿಮಕ್ಕಳ ಸಹ ಅಲ್ಲಿ ವಾಸಮಾಡಿಮುಖ್ಯ ಪ್ರಾಣದೇವರ ಸೇವಿಸಿದ ಫಲವಾಗಿಚಿಕ್ಕ ಜಮೀನು ಕೊಂಡಳು ದಾನವಾಗಿ 27ದಾನ ಕೊಟ್ಟವನಿಗೆ ಬಲು ಪುಣ್ಯ ದೊರೆಯಿತುದಾನಿಗಳುಭಾಗವತಶ್ರೇಷ್ಠರಾದ್ದರಿಂದಹನುಮ ಗೋಪಾಲಾನುಗ್ರಹದಿಂದ ಐವರೂಧಾನ್ಯಸಮೃದ್ದಿ ತೊರೆದರು ಆತಂಕ 28ಕುಲ್ಕರ್ಣಿ ಎಂಬಂಥ ಸರ್ಕಾರ ಅಧಿಕಾರಿವೆಂಕಮ್ಮನಲ್ಲಿ ಮಾತ್ಸರ್ಯ ದ್ವೇಷ ಬೆಳೆಸಿಸರ್ಕಾರ ಕೆರೆ ನೀರು ಕದ್ದು ಹೊಯಿಸಿದಳೆಂದು ಆಚಿಕ್ಕ ಜಮೀನ ಒಡಮೆ ಕಿತ್ತಿಕೊಂಡ 29ಸಾಧ್ವೀ ವೆಂಕಮ್ಮನಿಗೂ ಮಹಾತ್ಮ ತತ್ಪುತ್ರರಿಗೂಅಧಮ ಅಧಿಕಾರಿ ಮಾಡಿದ ದ್ರೋಹದಿಂದಪುತ್ರ ಸಂತಾನ ವಂಶಕ್ಷೀಣವಾಯಿತು ಅವಗೆಅಂದಿನಿಂದ ಕೆರೆ ಅದ್ಯಾಪಿ ನೀರಿಲ್ಲ ಆ ಕೆರೆಯಲ್ಲಿ 30ದೀನರಿಗೂ ಸಾಧು ಮಹಾತ್ಮರಿಗೂ ಮಾಳ್ಪಸಣ್ಣದೋ ದೊಡ್ಡದೋ ದ್ರೋಹಕ್ಕೆ ದಂಡನಾಅನುಭವ ಕ್ಷಿಪ್ರದಲ್ಲೋ ಮೆಲ್ಲಗೋ ಅಪರಾಧಿ ಮೂರ್ಖಗೆದೀನ ರಕ್ಷಕ ಸತ್ಪತಿ ಶ್ರೀಹರಿಈವ31ಭಾಗಣ್ಣ ಸೀನಪ್ಪ ದಾಸಪ್ಪ ರಂಗಪ್ಪಲೌಕಿಕ ವಿದ್ಯಾ ಕಲಿತು ಉಪಾಧ್ಯಾಯರಲ್ಲಿಭಾಗಣ್ಣನಿಗೆ ಶಾನುಭೋಗ ಮುಂಜಿಮಾಡಿಭಗವದ್ವಿಷಯ ಕಲಿತರೂ ಭಾಗಣ್ಣ 32ತತ್ಕಾಲ ಲೌಕಿಕ ಶ್ರೀತನ ಕೊರತೆ ನೋಡಿಬಂಧುಗಳಿವರನ್ನುದಾಸೀನಮಾಡಿದರುಇಂದಿರಾಪತಿವೆಂಕಟಕೃಷ್ಣಗೋಪಾಲಬಂದು ಶ್ರೀ ಒದಗಿಸಿದ ಕ್ಷಿಪ್ರದಲೆ ಇವರ್ಗೆ 33ಬ್ರಹ್ಮಚಾರಿ ಭಾಗಣ್ಣ ಗಾಯತ್ರೀ ಮಂತ್ರವಅಹರಹ ಸೂಕ್ಷ್ಮಾರ್ಥಅನುಸಂಧಾನವಿಹಿತ ಶ್ರದ್ಧಾ ಉದ್ಭಕ್ತಿಪೂರ್ವಕ ಜಪಿಸೆಶ್ರೀ ಹಯಾಸ್ಸ ನಾರಾಯಣನು ಒಲಿದ ಕ್ಷಿಪ್ರದಲೆ 34ವೇದೋಚ್ಚಾರಣವೇ ಗಾನವು ಜಗದ್ರಕ್ಷಣೆಯೇ ತ್ರಾಣವುಮಾಧವನೇ ಗಾಯತ್ರಿನಾಮ ಹಯಗ್ರೀವಭೂತಪೂರ್ಣವಾಗ್ವಶ್ರೀ ಪೃಥ್ವೀ ಆಶ್ರಯ ಶರೀರವ್ಯಾಪ್ತನುಹೃದಯ ಪ್ರಾಣಾಧಾರದಿವ ಪರಸ್ವರೂಪಪಾದತ್ರಯವು ಜಗತ್ಪಾದಸದೃಶ35ಜ್ಞಾನಸುಖ ಬಲಪೂರ್ಣ ಸರ್ವ ಜಗದಾದಿಕರ್ತದಿನಪತೇಜ ಸ್ಫೂರ್ತಿದ ಚೇಷ್ಟಕಾಧಾರಶ್ರೀ ನಾರಾಯಣದೇವ ನಿನ್ನ ಚಿಂತಿಪೆ ಭಜಿಪೆಅನುಪಮ ಸರ್ವೋತ್ತಮ ನಮೋ ಕೇಶವಾದಿ ನಾಮ 36ಲೌಕಿಕ ವಿಷಯಗಳೊಳ್ ಮನವಾಕ್ಕು ಚಲಿಸದೆಏಕಚಿತ್ತದಿ ಗಾಯತ್ರೀ ಪ್ರತಿಪಾದÀ್ಯಶ್ರೀ ಗಾಯತ್ರೀನಾಮ ನಾರಾಯಣನನ್ನಭಾಗಣ್ಣ ಜಪಿಸಿದರು ಕಂಡರು ಶ್ರೀಕರನ್ನ 37ಏಕಾಂತದಲ್ಲಿ ವೃಕ್ಷಮೂಲದಲ್ಲಿ ಕುಳಿತಿದ್ದಭಾಗಣ್ಣನ ಜಪಕೆಡಿಸಿ ಓರ್ವ ದುಷ್ಟಹಾಕಿದನು ಕುದಿನೀರು ಬೊಬ್ಬೆಗಳ್ ಅವನ ಮೇಲೆದ್ದವುಚಿಕಿತರಾಗಿ ಜನರು ಹೊಗಳಿದರು ಭಾಗಣ್ಣನ 38ಮತ್ತೊಂದುದಿನ ಇದಕೆÀ ಮುಂದೆಯೋ ಹಿಂದೆಯೋಸುತ್ತಿ ಭಾಗಣ್ಣ ವೃಕ್ಷಮೂಲದಲಿ ಸರ್ಪಹಿತದಿ ಆಶೀರ್ವದಿಸಿ ಪೋದಂತೆ ಪೋಯಿತುಇದು ನೋಡಿ ಜನರು ಕೊಂಡರು ಭೀತಿ, ಆಶ್ಚರ್ಯ ಮರ್ಯಾದೆ 39ಅಂದು ಮೃತಸರ್ಪ ಅರಿಯರಿಯರು ಶಮೀಕರು ಸಮಾಧಿಯಲಿಇಂದುತನ್ನ ಸರ್ಪ ಸುತ್ತಿರುವುದು ಭಾಗಣ್ಣ ಅರಿಯರುಇಂದಿರೇಶ ಒಲಿದವನಿವನೆಂದು ಶೇಷನೇ ಆಲಿಂಗಿಸಿದನೋಸ್ಕಂಧ ತನ್ನಯ ಸಹೋದರನೆಂದಪ್ಪಿ ಕೋಂಡನೋ 40ತತ್ವಮಾತೃಕಾನ್ಯಾಸಗಳ ಚರಿಸಿಮಂತ್ರ ಮೂಲಪ್ರಣವಅಷ್ಟಾಕ್ಷರೀ ಗಾಯತ್ರೀಭಕ್ತಿ ಪೂರ್ವಕ ಜಪಿಸಿ ಹೊರ ಒಳಗೆ ಶ್ರೀಹರಿಯವ್ಯಾಪ್ತಿವಿಜ್ಞಾನಪುಟ್ಟಿತು ಈ ಚೌತಾಪರೋಕ್ಷಿಗೆ41ವ್ಯಾಪ್ತಿ ದರ್ಶಿಯು ಇವರು ಶ್ರೀ ವಿಷ್ಣು ಅನುಗ್ರಹದಿಇಂದಿನ ಹಿಂದಿನ ಮುಂದಿನ ವಿಷಯ ಜ್ಞಾನವೇದ್ಯವಾಯಿತು ಹರಿಸ್ಮರಣಾ ಪೂರ್ವ ಆಲೋಚನದಿಬಂದು ಕೇಳುವವರಿಗೆ ಯೋಗ ಪೇಳಿದರು 42ಯೋಗಕ್ಷೇಮ ಸರ್ವಕೂ ನಿಯಾಮಕನು ಹರಿಯೇವೆಭಾಗಣ್ಣ ಈತತ್ವಜ್ಞಾನ ಪೂರ್ವಕದಿಲೌಕಿಕ ಧನ ಅಪೇಕ್ಷಿಸದಿದ್ದರೂ ಜನರುಬಾಗಿ ದ್ರವ್ಯಗಳಿತ್ತು ಬೇಡಿದರು ಸ್ವೀಕರಿಸೆ 43ಭವಿಷ್ಯ ಪೇಳುವುದರಲ್ಲಿ ಖ್ಯಾತಿ ಹರಡಿದ್ದಲ್ಲದೆಸರ್ವೇಶನ ಸ್ತೋತ್ರಕವನ ಪಟು ಎಂದುಸರ್ವರೂ ಕೊಂಡಾಡಿ ಆ ಊರಿಗೆ ಬಂದ ಪ್ರಖ್ಯಾತಕವಿಯನ್ನ ನಿಗ್ರಹಸಿ ಓಡಿಸಿದರು ಧೀರ 44ದಿಗ್ವಜಯ ಜಯಶೀಲನೆಂದು ಖ್ಯಾತ ಆಕವಿಭಾಗಣ್ಣ ಸೋಲಿಸಿ ಓಡಿಸಿದ್ದುಭಾಗಣ್ಣನ ಪ್ರಭಾವವ ಹರಡಿಸಿತು ನಾಡಲ್ಲಿಭಾಗಣ್ಣಗೆ ಸನ್ಮಾನ ಮಾಡಿದರು 45ಗದ್ವಾಲರಾಜನು ಇನ್ನೂ ಬಹು ಪ್ರಮುಖರುಬಂದು ನೇರವಾಗಿ ಭಾಗಣ್ಣನಲ್ಲಿವಂದಿಸಿ ಸನ್ಮಾನ ಪ್ರಶಸ್ತಿಗಳ ಅರ್ಪಿಸಿಪೋದರು ಶ್ಲಾಫಿಸುತ ತಮ್ಮ ತಮ್ಮ ಸ್ಥಳಕೆ 46ಹಿಂದೆ ದ್ರವ್ಯ ಹೀನನಾಗಿದ್ದ ಭಾಗಣ್ಣನಿಗೆಇಂದುಶ್ರೀಕೃಷ್ಣನ ಒಲುಮೆಯಿಂದಬಂದು ಸೌಭಾಗ್ಯ ಶ್ರೀ ದ್ರವ್ಯಗಳುಔದಾರ್ಯದಿ ದಾನಾದಿಗಳ್ ಮಾಡಿದರು 47ಇಷ್ಟರಲ್ಲೇ ಸೀನಪ್ಪ ದಾಸಪ್ಪ ರಂಗಪ್ಪಪ್ರೌಢವಯಸ್‍ಐದಿ ಗದ್ವಾಲು ಹೋಗೆ ಅಲ್ಲಿಮೌಢ್ಯ ಮಾತ್ಸರ್ಯದಿ ರಾಜ್ಯಾಧಿಕಾರಿಗಳುಕಡು ನಿರೋಧ ಮಾಡಿದರು ಮೂವರನ್ನು 48ವೆಂಕಟೇಶನ ಇಚ್ಛಾ ಈಮೂವರು ಅಣ್ಣಭಾಗಣ್ಣ ನಾಶ್ರಯದಲ್ಲೇವೆ ಇದ್ದುಅಗಲದೆ ಶ್ರೀಹರಿಗುಣಾನುವರ್ಣನಾಗಳಸುಗಾನ ಮಾಡುತ್ತಾ ಇರಬೇಕು ಎಂದು 49ಭಾಗಣ್ಣ ಅರ್ಯರು ಗದ್ವಾಲಿಗೆ ಪೋಗಿಸುಗುಣವಂತ ತಮ್ಮಂದಿರನ್ನ ಕರೆತಂದುಅಗಣಿತಗುಣಾರ್ಣವ ಶ್ರೀಯಃ ಪತಿಯ ಸೇವೆಗೆಯೋಗ್ಯೋಪದೇಶ ಪೂರ್ವಕ ತಯಾರು ಮಾಡಿದರು 50ದಾಸಪ್ಪ ಸೀನಪ್ಪ ರಂಗಪ್ಪ ತಮ್ಮ ಜ್ಞಾನಭಕ್ತಿಕಾಶಿಸಿ ವರ್ಧಿಪುದು ದಿನೇ ದಿನೇ ಹೆಚ್ಚಿಶ್ರೀ ಶ್ರೀನಿವಾಸನ ಪ್ರೀತಿಗೆ ಭಾಗಣ್ಣಚರಿಸುವ ಅನ್ನದಾನಾದಿಗಳಲ್ಲಿ ಸೇವಿಸಿದರು 51ದ್ರವ್ಯ ಧಾನ್ಯರಾಶಿಗಳು ತುಂಬಿದ್ದು ಕಂಡುದೇವ ಬ್ರಾಹ್ಮಣ ಸೇವೆಗೆ ಅಕ್ಕಿ ಹೆಚ್ಚು ಬೇಡೆಂದುಯಾವರೂ ಕಾಣದೆ ವೆಂಕಮ್ಮ ಮುಚ್ಚಿಡಲುಯಾವತ್ತೂ ಅಕ್ಕಿಯು ಹುಳುವಾಯ್ತು ಮರುದಿನ 52ಹರಿಬಲುಮೆಯಿಂದ ಭಾಗಣ್ಣ ಈ ರೀತಿ ತೋರಿಸಲುಹರಿಭಕ್ತಿ ವೈರಾಗ್ಯ ಹೆಚ್ಚಿತು ಮಾತೆಗೆಭಾರಿತರ ಕೀರ್ತನಾ ಸೇವೆ ಅತಿಶಯ ಚರ್ಯಅರಿತು ನಾಡೆಲ್ಲವೊ ಕೊಂಡಾಡಿತು ಭಾಗಣ್ಣನ 53ಉತ್ತನೂರು ಸಮೀಪವು ಐಜೀ ಎಂಬುವ ಗ್ರಾಮಉತ್ತಮ ಬ್ರಾಹ್ಮಣ ವೇಂಕಟನರಸಿಂಹಾಚಾರ್ಯದಂಪತಿಗೆ ಪುತ್ರರತ್ನ ವೇಂಕಟರಾಮಾಚಾರ್ಯಮಂದತನ ತೋರಿಸಿದ ಪುಸ್ತಕ ವಿದ್ಯೆಯಲ್ಲಿ 54ಭಾಗಣ್ಣ ಆರ್ಯರ ಪ್ರಭಾವದಲಿ ಆದರವೇಂಕಟನೃಸಿಂಹಾರ್ಯರ ಭಾರ್ಯೆಗೆ ಉಂಟುಭಾಗಣ್ಣನಲಿ ಪೋಗಿ ಮಗನ ತಿದ್ದುವ ಬಗೆಹೇಗೆಂದು ಅರಿಯಿರಿ ಎಂದಳು ಸಾಧ್ವೀ 55ಸಾಧ್ವೀ ಆಸ್ತ್ರೀರತ್ನಳಿಗೆ ಭಾಗಣ್ಣನುಔದಾರ್ಯದಿ ಒದಗುವ ಜ್ಞಾನಿವರ್ಯನೆಂದುಸುದೃಢದಿ ನಂಬಿದರೂ ಆಚಾರ್ಯ ಅರ್ಧಮನಸಿಂಪೋದರು ಕಂಡರು ಭಾಗಣ್ಣನ ಗುಡಿಯಲ್ಲಿ 56ವೇಂಕಟನೃಸಿಂಹಾರ್ಯ ತನ್ನ ಪಾಂಡಿತ್ಯ ಗುರುತನ ನೆನದುಆಕಸ್ಮಿಕ ಬೇಟಿಯಂತೆ ತೋರ್ಪಡಿಸಿವೇಂಕಟೇಶ ತುಳಸೀ ಸನ್ನಿಧಾನದಿ ಸಂಭಾಷಿಸಲುಶೀಘ್ರ ಕಂಡರು ಭಾಗಣ್ಣನ ಜ್ಞಾನಪ್ರಭಾವ 57ಭಾಗಣ್ಣ ಅಭಯವನಿತ್ತು ಆಚಾರ್ಯರನ್ನಹೋಗಿ ಬನ್ನಿ ಆತಂಕಬೇಡ ಮಹಾತ್ಮಮಗ ಸೂರಿಕುಲ ರತ್ನನು ವೇಂಕಟರಾಮಪ್ರಕಾಶಿಪುದು ಆತನ ಜ್ಞಾನಕ್ಷಿಪ್ರದಲೇ ಎಂದರು 58ಭಾಗಣ್ಣ ಆರ್ಯರು ಹೇಳಿದ ರೀತಿಯಲ್ಲೇವೇಂಕಟರಾಮಾರ್ಯ ಏಕವಾರ ಶ್ರವಣದಲ್ಲೇವೇಂಕಟನರಸಿಂಹಾಚಾರ್ಯ ಚಕಿತರಾಗುವಂತೆಅಕಳಂಕ ಪಾಂಡಿತ್ಯಪ್ರೌಢಿಮೆ ತೋರಿಸಿದ 59ಪ್ರತಿದಿನ ಐಜಿಯವರು ಭಾಗಣ್ಣ ದಾಸರೂ ಈರ್ವರುತತ್ವ ವಿಚಾರ ಹರಿಭಜನೆ ಮಾಡಿಒಂದು ದಿನ ಬ್ರಹ್ಮ ಜಿಜ್ಞಾಸ ಸ್ವಾರಸ್ಯದಲಿ ಸಾಯಂಸುಧ್ಯಾಕಾಲ ಅತಿಕ್ರಮವು ಆಯಿತು 60ಸೂರ್ಯಾಸ್ತ ಮನಃಪೂರ್ವಕರ್ತವ್ಯಕರ್ಮಬಿಟ್ಟದೋಷಪ್ರಾಯಶ್ಚಿತ್ತಾಘ್ರ್ಯ ಕೊಡಲಿಕ್ಕೆ ಇರಲುಭಯಬೇಡ ದೋಷವಿಲ್ಲ ಎಂದು ಭಾಗಣ್ಣಾರ್ಯಸೂರ್ಯನ್ನ ತಾನು ನೋಡಿ ತೋರಿಸಿದರು ಐಜೀಗೆ 61ಇಂದ್ರಜಾಲವಲ್ಲವು ಕ್ಷುದ್ರೋಪಾಸನಾದಿಗಳಿಂದಲ್ಲಅರ್ಧರಾತ್ರಿಯಲಿ ಸೂರ್ಯನ್ನ ನೋಡಿ ನೋಡಿಸಿದ್ದುಮಾಧವಶ್ರೀ ಮುಖ್ಯ ವಾಯುದೇವರು ರುದ್ರಸದಾ ಒಲಿದಿರುವ ಭಾಗಣ್ಣಗೆ ಇದು ಆಶ್ಚರ್ಯವಲ್ಲ 62ತೇಜೋಜಲ ಪೃಥ್ವೀಮುನಿಗಳು ಶ್ರೀ ಪ್ರಾಣರುದ್ರರುವಜ್ರ, ಅಗ್ನಿ, ವರುಣ ಪೃಥಿವ್ಯಾದಿ ಸರ್ವರೊಳಗೊರಾಜನೆ ನಿಯಮಿಸುವ ಅನಿರುದ್ಧ ಜಗದೀಶಜಗಜ್ಜನ್ಮಾದಿಕರ್ತ ಗಾಯತ್ರೀ ಭರ್ಗಸರ್ವಗನು 63ತೀರ್ಥಯಾತ್ರೆಯ ತೀರ್ಥರೂಪ ಭಾಗಣ್ಣ ತನ್ನಭ್ರಾತರೊಡಗೂಡಿ ಹೊರಟಿಹರುಮಂತ್ರಾಲಯ ವೇಂಕಟಗಿರಿ ಘಟಿಕಾದ್ರಿಹಸ್ತಿವರದಕಂಚಿ ಮೊದಲಾದ ಕ್ಷೇತ್ರ64ವೇಂಕಟ ಕೃಷ್ಣನ ಮುದ್ರೆಯಿಂ ಕವನಗಳಉತ್ಕøಷ್ಟ ರೀತಿಯಲ್ಲಿ ರಚಿಸಿ ಭಜಿಸುತ್ತಾಭಾಗಣ್ಣ ಆದವಾನೀಯಲ್ಲಿ ತಿಮ್ಮಣ್ಣಾರ್ಯರಲ್ಲಿಮುಕ್ಕಾಮು ಹಾಕಿದರು ಸ್ವಲ್ಪಕಾಲ 65ದಿವಾನು ತಿಮ್ಮಣ್ಣ ರಾಯರ ಉಪಚಾರಸರ್ವ ಅನುಕೂಲ ಆತಿಥ್ಯಕೊಳ್ಳುತ್ತಾದಿವ್ಯಮಾರುತೀ ಗುಡಿಗೆ ಪ್ರತಿದಿನ ಪೋಗಿಸೇವೆಸಲ್ಲಿಸಿದರು ಭಾಗಣ್ಣ ಶ್ರೀಹನುಮನಿಗೆ 66ಶ್ರೀ ವಿಜಯದಾಸಾರ್ಯರು ಶ್ರೀ ವ್ಯಾಸದೇವರ ಕಂಡುಶ್ರೀವರ ಒಲಿದು ಪುರಂದರಾರ್ಯರ ಕೈಯಿಂದದಿವ್ಯನಾಮಾಂಕಿತ ಬೀಜಾಕ್ಷರಗಳ ಹೊಂದಿಭುವಿಯಲಿ ಪ್ರಖ್ಯಾತರಾಗಿ ಬಂದಿದ್ದರಾಗ 67ವಿಜಯವಿಟ್ಠಲದಾಸರಾಯರು ತಮ್ಮನಿಜ ಶಿಷ್ಯವೃಂದದಲಿ ವ್ಯಾಸವಿಜಯಸಾರಥಿಗೋಪಾಲಹಯವದನಭಜನೀಯ ಈ ಮೂರು ಅಂಕಿತಕೊಡಬೇಕಾಗಿತ್ತು 68ಗೋಪಾಲವಿಠ್ಠಲಸುನಾಮಭಾಗಣ್ಣಗೆಸುಪ್ರಿಯ ಮನದಿಂದ ಇತ್ತು ಹಯವದನಸುಪವಿತ್ರ ಅಂಕಿತ ಚೀಕಲಪರವಿ ಆನಂದನಿಗೆಕೃಪಾಂಬುಧಿ ವಿಜಯದಾಸಾರ್ಯ ಇತ್ತರು 69ಶ್ರೀಪುರಂದರದಾಸಾರ್ಯರನುಗ್ರಹದಲಿಸುಪುಣ್ಯವಂತನು ಸಹನ ಶಾಲಿಯಾದಶ್ರೀಪಪ್ರಿಯ ತಿಮ್ಮಣ್ಣ ವೇಣುಗೋಪಾಲನಾಮತಾಪೊಂದಿದ ವಿಜಯದಾಸರು ಕೃಪದಿ ಕೊಡಲು 70ಶೋಭನ ಜ್ಞಾನಪ್ರದ ವ್ಯಾಸ ನಾಮಾಂಕಿತವಸುಬ್ಬಣ್ಣ ಕಲ್ಲೂರು ಪಂಡಿತೋತ್ತಮಗೆಲಭಿಸುವಂತೆ ವಿಜಯದಾಸ ಮಹಂತರುಕೃಪೆಯಿಂದ ಒದಗಿಸಿದರು ಔದಾರ್ಯನಿಧಿಯು 71ಗೋಪಾಲ ವಿಟ್ಠಲಾಂಕಿತದಲಿ ಭಾಗಣ್ಣಶ್ರೀಪಪ್ರಿಯತಮ ಪದ್ಯ ಸುಳಾದಿಗಳ ರಚಿಸಿಸುಪುಣ್ಯವಂತ ಸೀನಪ್ಪ ದಾಸಪ್ಪ ಈರ್ವರಿಗೂಉಪದೇಶ ಮಾಡಿದರು ಮಂತ್ರೋಪೇತ ನಾಮಾಂಕಿತಗಳನ್ನು 72ಕರಿರಾಜವರದನು ಗರುಡವಾಹನಸಿರಿವರವಾಸು ದೇವನೇ ವರದರಾಜನೆಂದೂಧರೆಯಲುತ್ತಮ ಕಂಚೀಪುರದಿ ಇರುವವನು ನಾಮವರದಗೋಪಾಲ ವಿಟ್ಠಲನಾಮ ಶ್ರೀನಿವಾಸನಿಗೆ 73ಇತರಾದೇವಿಯ ಸುತನೆನಿಸಿ ಮಹಿದಾಸನಾಮದಲಿಪ್ರಾದುರ್ಭವಿಸಿದ ಶ್ರೀಯಃಪತಿಗೆ ಪ್ರಿಯತಮವುಬೃಹತೀ ಸಹಸ್ರದಲಿ ವಿಷ್ಣು ನಾಮ ವಿಶ್ವಶಬ್ದಕ್ಕೆವಾಯುದೇವಾಂತರ್ಗತನು ಎಂದು ಜೆÕೀಯ 74ಮಧ್ವಾ ್ಯಖ್ಯ ವಾಯುದೇವರಗುರುಮಹಿದಾಸವೇದವ್ಯಾಸ ಹಂಸಾಖ್ಯ ಕಪಿಲ ಶ್ರೀಪತಿಯಉತ್ತಮನಾಮ ಗುರುಗೋಪಾಲ ವಿಟ್ಠಲನಾಮಅಕಳಂಕ ಯದುಪತಿಯ ನಾಮವ ಕೊಟ್ಟರು 75ಭಂಗಾರದಂಥ ವೈಷ್ಣವ ಸಂತತಿಯ ಪಡೆದುರಂಗನಾಥನನುಗ್ರಹದಿ ಪಾಲಿಸುವಂಥಾರಂಗಪ್ಪರಾಯರಿಗೆ ತಂದೆ ಗೋಪಾಲವಿಟ್ಠಲನಾಮಅಕಳಂಕ ಯದುಪತಿಯ ನಾಮವ ಕೊಟ್ಟರು 76ವಿಜಯರಾಯರ ಪರಮಭಕ್ತಾನುಗ್ರಹಿವಿಜಯಸಾರಥಿಪ್ರಿಯ ಗೋಪಾಲರಾಯರುವಿಜಯಾರ್ಯರ ಸುಪ್ರಸಾದದ ಬಲದಿಂದಅನುಜರಿಗೆ ಒದಗಿಸಿದರುಅಪರೋಕ್ಷ77ಗೋಪಾಲ ವರದಗುರು ಗೋಪಾಲದಾಸರ್ಗಳಅಪರೋಕ್ಷಮಹಿಮೆಗಳ ಸಾಧು ಸಜ್ಜನಗಳತೋರ್ಪಡಿಸಿ ಬೇರೆ ಬೇರೆಯಾಗಿಟ್ಟು ಮೂವರನ್ನುಶ್ರೀಪಪ್ರಿಯ ಕವನವ ರಚಿಸಿಗುರುಹೇಳಿದರು78ಗುರುಅಂತರ್ಗತನಾದ ಗೋಪಾಲನೃಹರಿಯಸ್ಮರಿಸಿ ಮೂವರೂ ಗುರುನಾಮವೂ ತದಂತಸ್ಥಹರಿಗೆ ಸುಪ್ರೀತಿಕರಯೆಂದು ರಚಿಸಿದರುಗುರುಸತ್ಯಬೋಧರ ಪ್ರಭಾವತೋರ್ಪಡಿಸಿ79ಸೂರಿಗಳುಗೋಪಾಲದಾಸಾದಿ ಮೂವರೂಬರೆದ ಕೀರ್ತನೆಯಲ್ಲಿ ಸತ್ಯಬೋಧಾರ್ಯರಸ್ವರೂಪವ ಸೂಕ್ಷ್ಮದಲಿ ಸೂಚಿಸಿಹರು ಎಂದುಅರಿವರು ಜ್ಞಾನಿಗಳು ಬಲ್ಲೇನೇ ನಾನು? 80ನೆರೆÀದಿದ್ದ ಜನರೆಲ್ಲ ಆಶ್ಚರ್ಯ ಚಕಿತರುಪರಿಪರಿ ವಿಧದಲ್ಲಿ ಮೂವರನ್ನು ಕೊಂಡಾಡೆಗುರುಸತ್ಯಬೋಧರು ಯುಕ್ತ ರೀತಿಯಲ್ಲಿಭಾರಿತರ ಭೂಷಣಾನುಗ್ರಹ ಮಾಡಿದರು 81ತಂದೆ ಗೋಪಾಲದಾಸಾರ್ಯರು ಮನೆಯಲ್ಲೇನಿಂದುಸತಿಸುತರಿಗೆ ಹರಿಸೇವೆಯನ್ನಒದಗಿಸುತ ಮಾತ್ರಂತರ್ಯಾಮಿ ಹರಿಯನ್ನ ತಾನುಭಕ್ತಿಪೂರ್ವಕ ಮಾಡುತ್ತಿದ್ದರು ಸೇವಾ ಸುಧ್ಯಾನ ಪರರು 82ಹರಿಕ್ಷೇತ್ರ ಹರಿತೀರ್ಥಯಾತ್ರೆಯಗೈಯ್ಯಲುಸಿರಿವಿಜಯರಾಯರ ಅನುಗ್ರಹ ಕೊಂಡುಹೊರಟರು ಗೋಪಾಲದಾಸಾರ್ಯರುವರದಗುರುಗೋಪಾಲದಾಸರ ಸಮೇತ83ಉಡುಪಿಕ್ಷೇತ್ರಸ್ಥ ಹರಿಮೂರ್ತಿಸ್ಥ ತೀರ್ಥಸ್ಥಕಡಲಶಯನನ್ನ ನೋಡಿ ಸೇವಿಸಲಿಕ್ಕೆಒಡಹುಟ್ಟಿದವರ ಸಹ ನಡೆಯುತ್ತಿರುವಾಗಅಡ್ಡಗಟ್ಟಿದ ಕ್ರೂರನು ಭೀಮಾಭಿದನು 84ಶ್ರೀ ವಿಜಯದಾಸರಿಂ ಮೊದಲೇ ಅನುಗ್ರಹೀತಭಾವುಕಾಗ್ರಣೀ ಗೋಪಾಲಾರ್ಯರು ಹರಿಗುರುಗಳಿತ್ತದಿವ್ಯ ಸಾಮಥ್ರ್ಯದಿಂ ಸಸೈನ್ಯ ಭೀಮನ್ನತೀವ್ರ ನಿಶ್ಚೇಷ್ಟಗೈಸಿ ಶರಣರ ಮಾಡಿದರು 85ಉಡುಪಿಸುಕ್ಷೇತ್ರದಲ್ಲಿ ಗೋಪಾಲಾರ್ಯರುಮಾಡಿದ್ದು ವರ್ಣಿಸಲು ಬಲ್ಲೆನೇ ನಾನು ?ಆಟದಲಿ ಜಗಪಡೆವ ಕೃಷ್ಣ ತಾಸುತನಂತೆಆಟವಾಡಿದ ಬಾಲರೂಪದಿ ಕೃಪಾಳು 86ಪೂರ್ವ ದಕ್ಷಿಣ ವರುಣ ದಿಶೆಯಾತ್ರೆಮಾಡಿಶ್ರೀ ವೇಣೀಸೋಮಪುರಕೆ ಮರಳಿ ಬಂದುಕೋವಿದಕುಲರತ್ನ ವಾಸುದೇವವಿಟ್ಠಲ ರಾಮಶ್ರೀವೇಂಕಟರಾಮಾರ್ಯರನ್ನು ಕಂಡರು 87ಉತ್ತನೂರು ಪೋಗಿ ವೇಂಕಟಕೃಷ್ಣನ್ನವಂದಿಸಿ ಬಂಧುಗಳ ಕೂಡ ತಾ ಇದ್ದುಒಂದುದಿನ ನಿಶ್ಚೈಸಿದರು ಪಂಡರೀಪುರಕ್ಕೆ ಪೋಗಿಇಂದಿರಾಪತಿಯನ್ನ ನೋಡಿ ಸೇವಿಸಲು 88ಪತ್ರಪೂ ಪಲ್ಲವ ಫಲವೃಕ್ಷ ದೇಶವುಸುಪವಿತ್ರ ಶ್ರೀ ತುಳಸೀ ಉತ್ಕøಷ್ಟವನದಿಸುಪುಣ್ಯ ಶ್ಲೋಕ ಶ್ರೀದಾಸಾರ್ಯರನ್ನ ಸುತ್ತಿ ಅಟ್ಟಿಶ್ರೀಪತಿ ಕೇಳ್ದ ಅಲೇನಾಹಿ ಎಂದು 89ಶ್ರೀಹರಿ ಸ್ವೇಚ್ಛೆಯಿಂ ಪ್ರಕೃತಿ ಕ್ಷೋಭಿಸಿ ತ್ರಿಗುಣ ಬೆರೆಸಿಮಹದಹಂಕಾರಾದಿ ತತ್ವ ಸೃಷ್ಟಿಗೈದುಬ್ರಹ್ಮಾಂಡ ನಿರ್ಮಿಸಿ ತದಾಶ್ರಯನಾಗಿ ಇಪ್ಪವನು ತಾನೇಮಹಾದ್ಭುತ ಕುದುರೆ ಸವಾರನಾಗಿ ತೋರಿ ಮರೆಯಾದ 90ಆಲೋಚಿಸಿ ತಿಳಿದು ವಿಟ್ಠಲನೇ ಬಂದವನೆಂದುನೀಲಕುದುರೆ ಎಂಬ ಸ್ತೋತ್ರ ಮಾಡಿದರುಪೇಳ್ವರು ವ್ಯಾಪ್ತೋಪಾಸಕ ಜ್ಞಾನಿಗಳು ಇದರ ರ್ಥಮೊದಲನೇ ನುಡಿಯು ಮೇಲೆ ಹೇಳಿದಹರಿಮಹಿಮೆಯೆಂದು ಬಲ್ಲೆನೇ ನಾನು 91ಭೀಮರಥಿ ಸ್ನಾನವು ಪುರಂದರಾರ್ಯರ ನಮಿಸಿಭೂಯಾದಿ ಗುಣಗಣಾರ್ಣವ ವಿಟ್ಠಲನ್ನಪ್ರೇಮೋತ್ಸಾಹದಲಿ ಸನ್ನಮಿಸಿಸ್ತುತಿಸಿರಮ ರುಕ್ಮಿಣಿಯ ನಮಿಸಿದರು ದಾಸಾರ್ಯ 92ಕೋಲ್ಹಾಪುರ ಪೋಗಿ ಮಹಾಲಕ್ಷ್ಮಿ ಮಂದಿರದಿಶೀಲ ಪರಮಾದರದಿ ಲಕ್ಷ್ಮೀನಾರಾಯಣರನ್ನಕೀಲಾಲಜಾದಿ ಪುಷ್ಪಾರ್ಚನೆಗೈದು ಕಾಪಾಡೆಂದು ಕೀರ್ತನೆಗಳಿಂದ ಸ್ತುತಿಸಿದರು 93ಇನ್ನು ಬಹು ಬಹು ಕ್ಷೇತ್ರಯಾತ್ರೆ ಸೋದರರ ಕೂಡಿಅನವರತಸುವ್ರತ ಧ್ಯಾನಪರರಾಗಿಘನಮಹಿಮ ಗೋಪಾಲ ವಿಟ್ಠಲನ ಸ್ತುತಿಸುತ್ತವೇಣೀ ಸೋಮಪುರಕ್ಕೆ ಬಂದರು ತಿರುಗಿ 94ಗುರುಗಳು ವಿಜಯದಾಸಾರ್ಯರ ದ್ವಾರಾಯಾತ್ರಫಲ ಕೃಷ್ಣನಿಗೆ ಸಮರ್ಪಿಸಿಉದ್ದಾಮಪಂಡಿತವೇಂಕಟರಾಮಾರ್ಯರಲಿಇದ್ದು ಪೋದರು ಉತ್ತನೂರ ಸ್ವಕ್ಷೇತ್ರ 95ಉತ್ತನೂರು ವೇಂಕಟಕೃಷ್ಣನಾಲಯ ಮುಂದೆನಿಂತು ತುಳಸೀ ವನದಿಂದ ಸುಳ್ಳಿ ತೆಗೆವಾಗಬಂದರು ಭ್ಯಾಗವಟ್ಟಿ ಶ್ರೀನಿವಾಸಾಚಾರ್ಯವಂದಿಸಿ ನಿಂತರು ಕೈಮುಗಿದು ವಿನಯದಿ 96ಜ್ಞಾನದಲಿ ಋಜುಮಾರ್ಗ ಗರ್ವದಲ್ಲಿನಿತ್ಯಸಂಸಾರಿಮಾರ್ಗಜ್ಞಾನ ಬೋಧಿಸುವುದರಲ್ಲಿ ಪಂಡಿತರಮಾರ್ಗಮಾನುಷಾನ್ನವನುಂಡು ಮಂದಧೀಯಲ್ಲಿ ಗುರುನಿಂದಾಈ ಶ್ರೀನಿವಾಸಾಭಿದನು ಮಾಡಿ ನರಳುತಿದ್ದ 97ಭಾಗಣ್ಣ ಆರ್ಯರು ಶ್ರೀನಿವಾಸಾಚಾರ್ಯಗೆಅಘನಾಶವಿಜ್ಞಾನಲಭಿಸುವ ಸಾಧನವುನಿಗಮಾರ್ಥ ಬೋಧಕ ಉಪದೇಶ ಮಾಡಿ ಪಂಡರಿಪುರ ಪೋಗಿರಿಜಗನ್ನಾಥ ವಿಟ್ಠಲ ಒಲಿದು ಕಾಂಬ ಎಂದರು 98ಶ್ರೀನಿವಾಸಾಚಾರ್ಯರು ದಾಸಾರ್ಯಾರ್ ಹೇಳಿದಂತೆಸುನಿರ್ಮಲ ಭೀಮ ರಥಿಯಲ್ಲಿ ಸ್ನಾನಗೈದುಇನನಲಿ ಅನಿಲಾಂತರ್ಗತ ನಾರಾಯಣನ್ನಧ್ಯಾನಿಸಿ ಭಕ್ತಿಜ್ಞಾನದಿಂದ ಕೊಟ್ಟರು ಅಘ್ರ್ಯ 99ಐದೆರಡು ಸಾಧು ಭಕ್ತಿ ಪ್ರತಿಪಾದ್ಯ ಶ್ರೀ ನಾರಾಯಣನುವಾಗ್ದೇವಿವರವಾಯುಗಳಿಂದ ಋಕ್‍ಸಾಮದಿಂಸ್ತುತಇಪತ್ತೆರಡಕ್ಷರದಲ್ಲಿ ಎರಡನೇ ಮೂರಕ್ಷರ ಬೋಧಿತಆದಿತ್ಯಸ್ಥ ವಾಯುಸ್ಥನ್ನ ಸ್ಮರಿಸಿಕೊಟ್ಟರು ಅಘ್ರ್ಯ 100ಜಗನ್ನಾಥದಾಸರ್ಗೆ ಗೋಪಾಲದಾಸಾರ್ಯಗುರುಜಗತ್ತಲ್ಲಿ ಕಂಡಿಲ್ಲದ ಉದಾರದಲಿತೆಗೆದು ತನ್ನಾಯುಷ್ಯದಿಂ ಚತ್ವಾರಿವರ್ಷಕೊಟ್ಟರುಗುರುಗ ಶ್ರೀವಿಜಯಗೋಪಾಲ ಶ್ರೀನಿವಾಸನ ಪ್ರೀತಿಗೆ101ಭಕ್ತಿಯಲ್ಲಿ ಭಾಗಣ್ಣನೆಂದು ಸುಪ್ರಖ್ಯಾತಭಕ್ತ ಶಿರೋಮಣಿಯು ಗೋಪಾಲ ದಾಸಾರ್ಯಬೀದಿಯಲಿ ಜರುಗದ ರಥಕೂಢನ್ನ ಬಾರೈಯ್ಯಎಂದು ಸ್ತುತಿಸೆ ರಥ ಓಡೋಡಿ ಬಂತು 102ತಿರುಪತಿ ಶ್ರೀ ಶ್ರೀನಿವಾಸನ ರಥವುಸರಸರ ಬಂದದ್ದು ಜನರು ನೋಡಿಹರಿಭಕ್ತಾಗ್ರೇಸ ಗೋಪಾಲ ದಾಸರನ್ನಪರಿಪರಿ ವಿಧದಿ ಕೊಂಡಾಡಿದರು ಮುದದಿ 103ಕಂಚೀ ವರದರಾಜನ ದೇವಾಲಯದಲ್ಲಿಕಿಚ್ಚು ಸೋಕಿ ಚೀಲ ಉರಿಯಲು ಅದನ್ನದಾಸವರ್ಯ ದೂರದೇಶದಲಿದ್ದರೂ | ತನ್ನ ಚೀಲ |ಕಸಕಿ ಶಾಂತ ಮಾಡಿದರು ಕಂಚಿಯ ಉರಿಯ 104ದಾರಿದ್ರ್ಯ ಋಣರೋಗ ಅಪಮೃತ್ಯು ಅಪಿಚಾರಪರಿಪರಿ ಕಷ್ಟೋಪಟಳ ವಿಘ್ನಗಳಗುರುವಿಜಯರಾಯಾಂತರ್ಗತ ಗೋಪಾಲನ ಒಲುಮೆಯಿಂದಎರಗುವರ್ಗೆ ಕಳೆದಿಹರು ಅದ್ಯಾಪಿ ಒದಗುತಿಹರು 105ಗೋಪಾಲದಾಸರಿಗೆವಿಜಯದಾಸರಲ್ಲಿಇಪ್ಪ ಭಕ್ತಿಯ ವರ್ಣಿಸಲಶಕ್ಯಗೋಪಾಲ ದಾಸರನ್ನು ನಂಬಿದವರನ್ನ ವಿಜಯಾರ್ಯ ಕೈ ಬಿಡರುಗೋಪಾಲವಿಜಯವಿಟ್ಠಲ ಬಂದು ತಾನೇ ಒಲಿವ106ಗೋಪಾಲ ದಾಸಾರ್ಯರೇ ನೀವು ವಿಜಯಾರ್ಯರಲ್ಲಿತಪ್ಪದೇ ಮಾಡಿದ ಭಕ್ತಿಯಿಂದದಿ ಎನಗೆಸ್ವಲ್ಪವಾದರೂ ನಿಮ್ಮಲ್ಲಿ ಪುಟ್ಟುವಂತೆ ಮಾಡಿರಿಗೋಪಾಲ ಪ್ರಿಯತಮರೇ ಪಾಹಿಮಾಂ ಶರಣು 107ಹೆಳವನಕಟ್ಟೆ ಗಿರಿಯಮ್ಮ ಮೊದಲಾದಶೀಲ ಶಿಷ್ಯರು ಬಹುಮಂದಿಗಳುಬಲು ಭಕ್ತಿಶ್ರದ್ಧೆಯಿಂ ಉಪದೇಶಗೊಂಡುಜಲಜನಾಭನ ಒಲುಮೆ ಪಾತ್ರರಾಗಿಹರು 108ಜ್ಞಾನ ಭಕ್ತಿ ವೈರಾಗ್ಯವಂತಳು ಗಿರಿಯಮ್ಮಕ, ೃಷ್ಣ ಮಂತ್ರ ಉಪದೇಶ ದಾಸಾರ್ಯರಿಂದಕೊಂಡು ಶ್ರೀ ರಂಗವಿಟ್ಠಲ ಕೃಷ್ಣನ್ನ ಪ್ರತ್ಯಕ್ಷಕಾಣುವಂಥ ಸೌಭಾಗ್ಯ ಶಾಲಿಯಾಗಿಹಳು 109ಅದ್ವಿಜನು ಶೈವನು ಪತ್ನಿ ಸಹಸೇವಿಸಿಮಂತ್ರಾಲಯ ಗುರುಗಳಿಂ ಅನುಕೂಲ ಹೊಂದಿಕೃತಜÕಭಾವದಿ ಲಕ್ಷ ಬ್ರಾಹ್ಮಣ ಭೋಜನ ಮಾಡಿಸುವೆನುಎಂದು ಹರಕೆ ಮಾಡಿಸಲಿಕ್ಕಾಗಲಿಲ್ಲ 110ಸ್ವಪ್ನದಲಿ ಹೇಳಿದರು ಕರುಣಿ ಶ್ರೀ ರಾಘವೇಂದ್ರಗುರುತಪ್ಪದೇ ಹರಕೆ ಸಲ್ಲುವುದು ಮೂವರು ಬ್ರಾಹ್ಮಣರುಸುಪುಣ್ಯವಂತರು ಮಹಾತ್ಮರು ಮರುದಿನ ಬೆಳಿಗ್ಗೆಈ ಪಥದಿ ಬರುವರ್ಗೆ ಭೋಜನ ಮಾಡಿಸೆಂದು 111ವರದಗುರುಗೋಪಾಲದಾಸರು ದಾಸಾರ್ಯರುಅರಿತುಅಪರೋಕ್ಷಸಾಮಥ್ರ್ಯದಿ ಈ ಸ್ವಪ್ನನೇರಾಗಿ ಬರಲಾಗ ಆಶೈವಗುರುಭಕ್ತನುನಾರೀ ಸಹನಮಸ್ಕರಿಸಿ ಸ್ವಾಗತವನಿತ್ತ 112ಮೂವರಿಗೂ ಅಧಿಕವಾದ ಪದಾರ್ಥಗಳನರ್ಪಿಸಿದೇವರ ನೈವೇದ್ಯ ಮೂವರಿಗೂ ಭೋಜನದೇವಗುರುಬ್ರಾಹ್ಮಣ ಪ್ರೀತಿಯಾಗಲಿ ಎಂದು ನಮಿಸಿದರುಶೈವ ಕುಲೀನ ದಂಪತಿ ಭಕ್ತಿ ಪೂರ್ವಕದಿ 113ಅಂದು ರಾತ್ರಿ ಆ ಭಕ್ತ ದಂಪತಿಗೆ ಸ್ವಪ್ನದಲಿಪ್ರೀತಿ ಆಯಿತು ಕೃಷ್ಣನಿಗೆ ಹರಕೆ ಪೂರ್ಣ ಆಯ್ತುಎಂದು ರಾಘವೇಂದ್ರ ತೀರ್ಥ ಸ್ವಾಮಿಗಳು ಹೇಳಿಮುದದಿ ದಂಪತಿಯ ಕೃತ ಕೃತ್ಯ ಮಾಡಿದರು 114ಮೊದಲು ಆದರ ರಹಿತ ವೆಂಕಟನೃಸಿಂಹಾರ್ಯನಿಂದುಗೋಪಾಲ ದಾಸಾರ್ಯರಹರಿಪೂಜಾಪದ್ಧತಿಯ ನೋಡುತಿರೆ ಹನುಮಂತ ದೇವರುಮೂರ್ತಿಮತ್ ಕುಳಿತಿದ್ದುದು ಕಂಡರು 115ಬಂದು ವೆಂಕಟ ನೃಸಿಂಹಾಚಾರ್ಯರು ಮತ್ತುನಿಂದಿಸಿದ ವೈದಿಕರು ತತ್ವ ಕೀರ್ತನೆಗಳಅದ್ಭುತ ಸುಳಾದಿಕೇಳಿನಿರ್ಮತ್ಸರರಾಗಿಬಂದು ಶಿಷ್ಯತ್ವ ಬೇಡಿದರು ಆರ್ಯರಲಿ 116ವೈರಾಗ್ಯನಿಧಿ ಗಂಗಾಧರನ ಅನುಗ್ರಹದಿವೈರಾಗ್ಯ ಯುಕ್‍ಜ್ಞಾನಹರಿಭಕ್ತಿ ಲಭಿಸಿದ್ದಸೂರಿವರ ಗೋಪಾಲ ದಾಸಾರ್ಯ ಜರಿಗೆ ಶಾಲು ರೇಷ್ಮೆಭಾರಿ ಪಲ್ಲಕ್ಕಿ ವೈಭವದಿ ಮೆರೆದರುಹರಿಪ್ರೀತಿಗಾಗಿ117ಪನ್ನಗಾಚಲಶ್ರೀ ಶ್ರೀನಿವಾಸನ ಭಕ್ತಅನಿಮಿಷಾಂಶರು ಗೋಪಾಲ ದಾಸಾರ್ಯಶ್ರೀನಿವಾಸನಪ್ಪಣೆಕೊಂಡು ಊರಿಗೆ ಬಂದುಅವನೀಸುರರಿಗೆ ಔತಣವಿತ್ತು ಧ್ಯಾನದಿ ಕುಳಿತರು 118ಮುಖ್ಯಕಾರಣ ವಿಷ್ಣು ಸ್ವತಂತ್ರ ಎಂದುತಾ ಭಜಿಸಿಶಿಷ್ಯರಿಗೆ ಬೋಧಿಸಿ ಸಜ್ಜನರ ಪೊರೆದುಪುಷ್ಯ ಬಹುಲಾಷ್ಟಮೀಯಲ್ಲಿ ಪೂಷಯದುಪತಿಧಾಮಕೃಷ್ಣ ಭಕ್ತಿರಿಗೌತಣವಿತ್ತು ಐದಿದರು 119ಗದ್ವಾಲ ರಾಜ ಮೊದಲಾದ ರಾಜ ಪ್ರಮುಖರಿಂದಮೇದಿನೀ ಪ್ರಖ್ಯಾತ ಯತಿಗಳು ಪಂಡಿತರಿಂಎದುರಿಲ್ಲದಸೂರಿಐಜೀಯವರಿಂದಲುಸದಾ ಮರ್ಯಾದೆ ಕೊಂಡವರು ದಾಸಾರ್ಯ 120ವಿಜಯದಾಸಾರ್ಯ ಪೂಜಿಸಿದಹರಿಮೂರ್ತಿವಿಜಯವಿಟ್ಠಲ ಪ್ರತಿಮೆ ಅಂತರ್ಗತನ್ನವಿಜಯಸಾರಥಿಪ್ರಿಯ ಗೋಪಾಲ ದಾಸರು ಪೂಜಿಸಿರಾಜಿಸುತಿಹ ಮೂರ್ತಿಇಹುದುಅವರಮನೆಯಲ್ಲಿ121ಜ್ಞಾನ ಸುಖ ಬಲ ಪೂರ್ಣ ಜನ್ಮಾದಿಕರ್ತಅಜವನರುಹಜ ಪಿತ ಶ್ರೀಶಪ್ರಸನ್ನ ಶ್ರೀನಿವಾಸಅನಘಹಯಮುಖವಿಜಯಗೋಪಾಲ ಸರ್ವಗಗೆಘನ್ನ ಪ್ರಿಯ ಗೋಪಾಲ ದಾಸಾರ್ಯ ಶರಣು 122|| ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು