ಒಟ್ಟು 440 ಕಡೆಗಳಲ್ಲಿ , 68 ದಾಸರು , 342 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರ ಅಕ್ಷರವ ಧ್ರುವ ಕ್ಷರ ಅಕ್ಷರವ ಸೆÉರಗ ಪಿಡಿಯೋ ಗುರು ಮುಖದಲಿ ನೀ ಪೂರ್ಣ ಪರಮಾನಂದ ಸುಖದೋರುವ ಬಗೆ ಅರಿಯೋ ಕೂಟ ಸ್ಥಳದಲಿ ಪ್ರಾಣಿ 1 ರೇಚಕ ಪೂರ್ವಕದನುಭವ ತಿಳಿದು ಯೋಚಿಸಿ ನೋಡಲಿಂದ ಸೂಚಿಸಿ ತಾನೆ ಭಾಸುವ ಕ್ರಮವಿದು ಅಚರಿಸೋ ಅನುಭವದಲಿ ಪ್ರಾಣಿ 2 ಕ್ಷರ ಅಕ್ಷರವ ತಿಳಿಯದೆ ಬರೆÀವಾ ಅಕ್ಷರದಾ ಖೂನ್ಯಾಕ ಎರಡೇ ಮಾತಿನ ಅರಿವೇ ಅದರೆ ಪರಲೋಕಕ್ಕೆ ಸೋಪಾನವಿದು ಪ್ರಾಣಿ 3 ಇದೇ ಹೇಳಿದ ಗೀತೆಯಲ್ಲಿ ಶ್ರೀಕೃಷ್ಣನೆ ತಾಂ ಅರ್ಜುನಗೆ ಇದರಿಟ್ಟಿದು ಘನಸುಖ ಆ ಮಹಿಮನೆ ಇದರಿಂದಲಿ ತಿಳಿವದು ನೀ ಪ್ರಾಣಿ 4 ಇಡಾ ಪಿಂಗಳ ನಾಡಿ ನಡುವಿದು ಸಾಧಿಸಿ ಮಾತಿನ ಖೂನ ಎಡಬಲ ನೋಡದೆ ಪಡಕೋ ಮಹಿಪತಿ ಒಡನೆ ನಿನ್ನೊಳು ನಿಧಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಮೌಷಧಿ ಸಿಕ್ಕಿತು ಪರಿಪರಿರೋಗ ಪರಿಹಾರಕಿದು ದಕ್ಕಿತು ಪ ಜ್ವರದ ಬೇಗೆಗೆ ದಾಹ ಕರುಳ ಕುಂದಿಸಿಯೆನ್ನ ನರಳಿಸಿದಾಗ ಮಾಂಗಿರಿರಂಗಾ ಎಂದೆಂಬ ಅ.ಪ ಸುರನರೋರಗ ಗರುಡ ಚರಣ ಗುರು ದಿವಾಕರ ಕಿನ್ನರಾಪ್ಸರ ಶರಣಜನ ಕರುಣಾಕರ ಶ್ರೀ ಧರ ಸುಖಂಕರ ಶೌರಿಯೆಂಬಾ1 ಪಿತ್ತವು ತಲೆಗೇರಿತು ಸುತ್ತಲು ಕಣ್ಗೆ ಕತ್ತಲೆ ಮುಸುಕಿದ್ದಿತು ಚಿತ್ತಪಲ್ಲಟಿವಾಗಿ ಮತ್ತನಾಗಿರಲಾಗ ನೆತ್ತಿಯೊಡೆದ ಎನ್ನ ಕುತ್ತಿಗೋಂಕಾರ 2 ಚಿತ್ತ ಮಸ್ತಕ ನೆತ್ತಿಗಳ ಬೆಂಬತ್ತಿ ಮತ್ತತೆಯಿತ್ತ ಪತ್ತದ ಕತ್ತಲೆಯನುತ್ತರಿಸಿದುತ್ತಮ ಚಿತ್ತಜನಪೆತ್ತಚ್ಯುತಾ ಯೆಂಬ 3 ಉಸಿರು ಉಗ್ಗಡಿಪಾಗ ವಸುದೇವ ಸುತಯೆಂಬ 4 ರಸರಸಂಗಳೊಳೆಸೆದು ವಾಸಿಸಿ ಉಸಿರು ಬಸಿರನು ವಸುವಿಲಾಸದೊಳೆಸೆದು ಪೊಸ ಪೊಸ ಎಸಕದಿಂ ಸುಖ ರಸವನೀಯುವ ರಾಮಯೆಂಬಾ 5 ಕರ ನೇತ್ರಗಳು ತಂಪಿಂಪಿನ ಸವಿ ಬಲೆಯೊಳು ಬಿದ್ದುವು ಜವ ನೇಣೆಸೆದಾಗ ಭವದೂರಹರಿ ಯೆಂಬ 6 ಶಿವ ಭವಾಮರಪವನಪಾವಕ ಜವ ಶಶಾಂಕವಾಕರಾನಕ ಶ್ರೀಧರ ಹರೇ ಭವದೂರನೆಂಬಾ 7 ಲಕ್ಷನಾಮಗಳೆಲ್ಲ ಲಕ್ಷಣವಾದ [ತು ರಕ್ಷೆಯೀಯುವಗುಳಿಗೆ] ಮಾತ್ರಾ ಮೋಕ್ಷಸುಖವನಿತ್ತು ರಕ್ಷಿಪುದೆಂಬುದ ದಕ್ಷಸುತೆಗೆ ಫಾಲಾಕ್ಷ ತಾಂ ಪೇಳಿದ 8 ಅಕ್ಷಯಾತ್ರವಿಪಕ್ಷ ರಾಕ್ಷಸ ಶಿಕ್ಷ ಸುಜನರಕ್ಷ ಪ್ರದವ ಅ ಧ್ಯಕ್ಷ ನುತಕಮಲಾಕ್ಷ ಶರಣಕಟಾಕ್ಷ ಲಕ್ಷ್ಮೀಪಕ್ಷ [ಮೂಂಗಿರಿರಂಗ] ಯೆಂಬಾ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪರಶುರಾಮ ದೇವರು ಬೆಳಗಿರಾರುತಿಯನು ಜಲಜ ನೇತ್ರರೆ ನೀವುಛಲವ ಸಾಧಿಸಿದಂಥ ಚೆಲುವರಾಯನಿಗೆ ಪ ರೇಣುಕಾಸುತ ಕ್ಷೋಣಿಪಾಲಕರ ಕೊಂದುಕಾಮಧೇನುವಿನ ಆಶ್ರಮ ಸ್ಥಾನದಿ ತಂದಾ 1 ಹತ್ತೇಳು ಒಂದು ಅಕ್ಷೋಹಿಣೀ ಸೈನ್ಯಹತ್ಯೆ ಮಾಡುತ್ತ ರಕ್ತದ ನದಿಯನು ಸುತ್ತಹರಿಸಿದವಗೆ 2 ವಂದ್ಯ ಮಹಿಮನೆ ಇಪ್ಪತ್ತೊಂದು ಬಾರಿಲೆ ಕ್ಷಾತ್ರವೃಂದವನಳುಹಿದ ಇಂದಿರೇಶನಿಗೆ 3
--------------
ಇಂದಿರೇಶರು
ಪರಿ ಪೋಷಿಸುತ ಎನ್ನ ಪ ಸತಿ | ಅಕ್ಷರಳೆ ಕೃಪೆ ಈಕ್ಷಣೇಯಲೆತ್ರ್ಯಕ್ಷ ಸುರಮುಖ | ರಕ್ಷೆ ಭಕುತಿಯ | ಬಿಕ್ಷೆ ಪಾಲಿಸಿ | ರಕ್ಷಿಸೆನ್ನನು 1 ಸ್ತವ್ಯನನ ಶ್ರೋ | ತವ್ಯನನ ಧ್ಯಾ | ತವ್ಯನನ ಮಂ | ತವ್ಯ ಭವ್ಯನನ |ಅವ್ಯಯನ ಅನ | ವದ್ಯ ರೂಪನ | ಸುವ್ಯಕ್ತಿಗೈ | ಅವ್ಯಕ್ತಮಾನಿಯೆ 2 ಭಾವ ಜಾರಿಯ | ಭಾವ ಕೊಲಿದು ವಿ | ಭಾವ ಸುಪ್ರಭೆ | ಭಾವ ತೋರಿದೆಗೋವಳನು ಗುರು | ಗೋವಿಂದ ವಿಠಲನ | ತಾವಕಗೆ ತೋರೂವುದೆಲೆ ತಾಯೆ 3
--------------
ಗುರುಗೋವಿಂದವಿಠಲರು
ಪರಿಣಯ ಮಹೋತ್ಸವವು ಪ ಮಂಗಳ ಮಂಟಪವು ಚಪ್ಪರದಲ್ಲಿ .ಶೃಂಗಾರ ವರ ಪೀಠವು ಕಂಗೊಳಿಪ ರುಚಿರಾಂಬರಾಳಿಯು ಮಂಗಳ ಸುವಾದ್ಯಂಗಳಿಂದಲಿ 1 ಸುತ್ತ ದೀಪಾವಳಿಯು ಸುವರ್ಣದ ಮುತ್ತಿನ ತೋರಣವು ವಜ್ರ ಪದ್ಮವು ಸುತ್ತು ವೀಳೆಯ ಪುಷ್ಪ ನಿಚಯವು ಸುತ್ತೆ ಜವ್ವಾಜಿಗಳ ಪರಿಮಳ ಸುತ್ತಿ ಸುಳಿವ ಸುಗಂಧ ಲಹರಿಯು 2 ಬೀಗರು ಹಸೆಯೊಳಿರೆ ಆ ಮಧ್ಯದಿ ಬೀಗಿತ್ತಿಯರು ಕುಳ್ಳಿರೆ ಆಗ ನಿಶ್ಚಿತ ಲಗ್ನದಲ್ಲಿ ವಧೂವರರ ಪೂಜಿಯನು ಗೈಯಲು ತುಂಬಿರಲು ಸಭೆಯೊಳು 3 ದಾರಾ ಮಹೊತ್ಸವವು ಅಕ್ಷತೆಗಳ ಸೇರೆಯೊಳೆರೆಯುವುದು ನಾರಿಯರ ವರದೇವತಾಸ್ತುತಿ ಸಾರೆ ಭೂಸುರರಾಶಿಷಂಗಳು ಸೇರೆ ಸಂಗೀತಗಳ ವೈಖರಿ ಸಾರಿ ಸುರಗಣ ಜಯಜಯನ್ನಲು 4 ಮಾಡೆ ದಾನದಕ್ಷಿಣೆಯಾಗಲು ಬಾನುರಾಗದೆ ಸರ್ವರನ್ನು ವಿನೋದದಿಂದುಪಚರಿಸುತಿರಲು ಹರಸೆ ಸಂತೋಷದಿ 5
--------------
ಬೇಟೆರಾಯ ದೀಕ್ಷಿತರು
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪಾದ | ಸೋಕಿದ ಕೊನೆಧೂಳಿ ಪ ತಾಕಿದ ಮನುಜರಿಗೆ ಕಾಕುಬುದ್ಧಿಗಳೆಲ್ಲ ಪರಿಹಾರವಾಗುವವೊ | ಬೇಕಾದ ಪದವಿಯ ಕೊಡುವನು ಶ್ರೀ ಹರಿ ಅ.ಪ ಮಧ್ವಮತವೆಂಬ ಅಬ್ಧಿಯೊಳಗೆ ಪೂರ್ಣ | ಉದ್ಭವಿಸಿದ ಚಂದ್ರನಾ ಗುಣಪೂರ್ಣನಾ || ಅದ್ವೈತಮತÀ ತಮನಿಧಿ ನಿಶಿಕುಠಾರ | ವಿದ್ಯಾರಣ್ಯವ ಗರುವಕೆ ಪರಿಹಾರ 1 ತತ್ವ ವಾರಿಧಿಗಳ ತತ್ವಸುಧೆಯ ಭಾಷ್ಯ | ವಿಸ್ತರಿಸಿ ಇರಲು ಬೇಗದಲಿ || ಚಿತ್ರವಲ್ಲಭನÀ ಸೇವೆಯ ಮಾಡಿ ಟೀಕಂಗಳ || ಸುತ್ತೇಳು ಲೋಕಕ್ಕೆ ಪ್ರಕಟಿಸಿ ಮೆರೆವರ 2 ಎಂದಿಗಾದರು ಒಮ್ಮೆ ಕೊನೆ ನಾಲಿಗೆಯಿಂದ | ಬಿಂದು ಮಾತ್ರದಿ ನೆನೆಯೆ || ಮಂದ ಮತಿಯಾದರೂ ಅಜ್ಞಾನನಾಶವು | ಸುಂದೇಹÀವಿಲ್ಲವು ಅವಾವ ಕಾಲಕ್ಕೆ 3 ಜ ಎಂದು ಪೊಗಳಲು ಜಯಶೀಲನಾಗುವ | ಯ ಎನ್ನೆ ಯುಮರಾಯನಂಜುವನು || ತೀ ಎಂದು ಪೊಗಳಲು ತೀವ್ರ ಪದವಿ ಉಂಟು | ರ್ಥ ಎಂದು ಪೊಗಳಲು ತಾಪತ್ರಯುಪಶಮನ 4 ಯೋಗಿ ಅಕ್ಷೋಭ್ಯತೀರ್ಥರ ಕರಕಮಲಸಂಜಾತ | ಭಾಗವತರ ಸುಪ್ರೇಮ || ಕಾಗಿಣಿ ತೀರದ ಮಳಖೇಡ ನಿವಾಸಾ | ಶ್ರೀ ಗುರು ವಿಜಯವಿಠ್ಠಲ ಸೇವಕ ಭಕ್ತಾ 5
--------------
ವಿಜಯದಾಸ
ಪಾದ ಬಿಡಲಾರೆ ಎನ್ನೊಡೆಯ ರಂಗ ಭಾರ ನಿನ್ನಗೆ ಕೂಡಿತು ಪ ನೀನೆ ಚಿಂತಾಮಣಿ ನೀನೆ ಪರುಷದ ಖಣಿ ನೀನೆ ಎನ್ನಗೆ ಧಣಿ ವೇಣುಗೋಪಾಲ 1 ಪಕ್ಷಿವಾಹನ ಲೋಕರಕ್ಷಿಪನು ನೀನೆಲೊ ಅಕ್ಷಯದಿ ದ್ರೌಪದಿಯ ರಕ್ಷಿಸಿದವ ನೀನೆ 2 ಪಾರ ಮಹಿಮನೆ ಸರ್ವಭಾರ ನಿನ್ನದಯ್ಯ ಸೇರಿದೆನು ನಿಮ್ಮ ಪದಕೆ ಮಾರಪಿತ ಶ್ರೀರಾಮ 3
--------------
ರಾಮದಾಸರು
ಪಾದ ಚಿಂತನವು ಕ್ಷಣದಲಿ ಶೋಧಿಪುದು ಮತಿಯ ತಾರಕ ಪ ಮೋದತೀರ್ಥರ ಭೇದಮತ ಅನು ವಾದ ಮಾಡಿದ ಶ್ರೀಜಯತೀರ್ಥರ ಅ.ಪ ಈ ಜಗದೊಳಗಿನ ರಾಜಕೀಯದ ಸೋಜಿಗ ಜೀವನವನೆ ತೊರೆದು ರಾಜೀವೋದ್ಭವನಯ್ಯನ ಚರಣಾಂ ಬೋಜ ನಿರತ ಯತಿರಾಜರ ತಾರಕ 1 ಕಾಕುಮತಗಳನೇಕಗಳನು ನಿ ರಾಕರಿಪ ಗ್ರಂಥಗಳನು ರಚಿಸಿ ಲೋಕೋತ್ತರನಿಗೆ ನ್ಯಾಯಸುಧೆಯಭಿ ಷೇಕವ ಮಾಡಿದ ಟೀಕಾಚಾರ್ಯರ 2 ವಿಧಿ ಫಾ ಲಾಕ್ಷನುತ ಶ್ರೀಕೃಷ್ಣನ ಪೂಜಕ ದುಷ್ಟ ಪಕ್ಷ ನಿರಾಸದಲಿ ಅತಿ ದಕ್ಷ ದೀಕ್ಷ ಅಕ್ಷೋಭ್ಯರ ಕುವರರ 3
--------------
ವಿದ್ಯಾಪ್ರಸನ್ನತೀರ್ಥರು
ಪಾಲಿಸು ನಮ್ಮಮ್ಮ ಮುದ್ದು ಶಾರದೆ ನಮ್ಮ ನಾಲಿಗೆ ಯೊಳು ತಪ್ಪುಬಾರದೆ ನೀಲ ಕುಂತಳೆ ತಾಯೀ ನಿನ್ನ ನಂಬಿದೆ ಕಾಯೆ ಪ ಅಕ್ಷರಾಕ್ಷರ ವಿವೇಕಿಯೇ ನಿಮ್ಮ ಕುಕ್ಷಿಯೊಳೀರೇಳು ಲೋಕವೆ ಸಾಕ್ಷಾತ್ ಸ್ವರೂಪಿಣಿ ಮೋಕ್ಷದಾ ಯಕಿಯೆ ತಾಯೆ ಪಾಲಿಸಮ್ಮಮ್ಮ 1 ಸರ್ವಾಲಂಕಾರ ಮೂರ್ತಿಯ ಚರಣ ಭಜಿ ಸುವೆ ಕೀರ್ತಿಯ ಗುರುಮೂರ್ತಿ ಪರಮಾ ನಂದದೊಳ್ ಪಾಲಿಸಮ್ಮಮ್ಮ 2 ಶೃಂಗಪುರದ ನೆಲೆವಾಸಿಯೆ ನಿಮ್ಮ ಸಂಗೀತ ಶಾಸ್ತ್ರ ವಿಶಾಲಯ ಭೃಂಗ ಕುಂತಳೆ ತಾಯೆ ಭಳಿರೆ ಬ್ರಹ್ಮನರಾಣಿ ಪಾಲಿಸಮ್ಮಮ್ಮ 3
--------------
ಕವಿ ಪರಮದೇವದಾಸರು
ಪಾಲಿಸೆನ್ನನೂ ರಾಮ ಪಂಥವ್ಯಾತಕೋ ಪ ಕಾಲವೈರಿ ಕಪಟನಾಟಕ | ಆಲಿಸೆನ್ನ ಬಿನ್ನಪವಂ ಚಾಲನೆ ಶ್ರೀಲೋಲನೇ ನೀಂ ಅ.ಪ ರಕ್ಷಕಾಮಣಿ ಸಾಧುಜನ ರಕ್ಷಾಮಣಿ ಅಕ್ಷಯ ಸುಜನರಾಶ್ರಿತÀ ನಿನ್ನ ಭಿಕ್ಷವನಾಂಬೇಡುವೆನೈ ಪಕ್ಷಿವಾಹನ ಜಗದಧ್ಯಕ್ಷನೇ ಸೀತಾರಾಮ 1 ಪಂಡಿತಾಮಣಿ ಜ್ಞಾನಕುಂಡಲಿನಗರೀಶ ನೀ ನಂಡಜ ವಾಹನನಹುದೊ ಪಂಡರಿಪುರನಾಯಕ ಚಾ ಮುಂಡಿ ವರದಾಯಕ ನೀಂ [ಶ್ರೀರಾಮ] 2 ಶಾಶ್ವತ ಜನಭಾಷಾ ಭಾಸ್ಕರಕೋಟಿ ತೇಜಾ ಈಶ್ವರ ಮತ್‍ಗುರು ತುಲಶೀರಾಮಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಪಾವನಿ ನಿರಂಜನಿ ಪಾವನಿ ಧ್ರುವ ಆದಿನಾರಾಯಣಿ ಸಾಧುಜನವಂದಿನಿ ಸದಾನಂದರೂಪಿಣಿ ಸದ್ಗತಿ ಸುಖದಾಯಿಣಿ 1 ಲಕ್ಷುಮಿ ರೂಪಿಣಿ ಸಾಕ್ಷಾತ್ಕಾರಿಣಿ ರಕ್ಷರಕ್ಷಾತ್ಮಿಣಿ ಅಕ್ಷಯಪದದಾಯಿಣಿ 2 ಅನಾಥರಕ್ಷಿಣಿ ದೀನೋದ್ದಾರಿನೀ ಅನಂತಾನಂತಗುಣಿ ಮುನಿಜನ ಭೂಷಣಿ 3 ದಾರಿದ್ರ್ಯಭಂಜನಿ ದುರಿತವಿಧ್ವಂಸಿನಿ ಪರಮಸಂಜೀವಿನಿ ಸುರಮುನಿರಂಜನಿ 4 ಸ್ವಾಮಿ ಶ್ರೀ ಗುರುವಿಣೆ ಬ್ರಹ್ಮಾನಂದ ರೂಪಿಣಿ ಮಹಿಪತಿಕುಲಸ್ವಾಮಿಣಿ ನೀನೆ ಪರಮಪಾವನಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾವಮಾನಿಯೆ ತವ | ಯಾವ ಮಹಿಮೆಯೊಳೇಕಭಾವ ಪೊಗಳಲು ಆವ | ದೇವತೆಗಳಿಗಳವೇ ಪ ಶ್ರೀವರನಂಘ್ರಿಯ | ಸೇವೆಗೈವಲಿ ಬಹು | ಧಾವಿಸೀ |ಬಹು ಎಚ್ಚರದಿ ಸೇವಿಸೀ ||ನಿರುತ ಭಕ್ತಿಯ | ಭಾವದಲಿ ದುರಿ | ತಾವಳಿ ವಿಭಾವಸುನೀ ವೊಲಿದು ಭೃ | ತ್ಯಾವಳಿಯ ಪಾಲಿಪೆ | ಸಾರ್ವಕಾಲ ಮ-ತ್ತೋರ್ವರಿಲ್ಲವೊ | ದೇವರೊತ್ತಮ | ದೇವ ನೀನೇ ಅ.ಪ. ಸೂರ್ಯ ಮೋಚನ |ಆಶಿಸುತಲಿ ಹಾರಿ | ದೋಷವ ಕಳೆಯಲು | ಯತ್ನೀಸೆ ಆ ಸುಮಹದಾಕಾರ ಶೃಣಗೈದೀವಾಸವನು ನಿನ ಘಾತಿಸಲು ಕುಲಿಶದೀ ಅದಕಂಡು ತವ ಪಿತಶ್ವಾಸಗಳ ಬಲು ಪರಿಯ ರುದ್ಧಿಸಲು | ಮೂರ್ಲೋಕ ತಪಿಸೇಅಸುರರು ವಿಧಿವಿಧದಿ ಮೊರೆ ಇಡಲೂ | ಆಲೈಸ ನಾಲ್ಮೊಗಶ್ವಾಸ ಸತಿಯನು ಸೂಸಿ ಸೂಚಿಸಲೂ | ಅದಕೇಳಿ ಮತ್ತೆಲೇಸುಗೈಯ್ಯಲು ಮನವ ಮಾಡಲೂ ವಾಸವಾದ್ಯರಶ್ವಾಸ ಮಾಡುವ ತೆರನ ಮಾಡೆಯ್ದೊಕ್ಲೇಶನಾಶನ ಶ್ವಾಸಮಾನಿ ಮಹಾ ಕೃಪಾಳೊ 1 ವ್ರಾತ ಮಣಿ ರಘು | ಜಾತಗಿತ್ತೆಯೊ | ಮಾತರಿಶ್ವಾ 2 ಪುಂಡರೀಕಾಕ್ಷ ಉರ ಬಗೆದು ಕರುಳಕೊಂಡು ಕೊರಳಲಿ ಧರಿಸೀ | ನರ ಮೃಗನ ಲೀಲೆಕಂಡು ದ್ವಯೆ ಬಲ ತಪಿಸೀ | ಅರಕ್ಷೌಹಿಣಿ ಮುಂ-ಕೊಂಡು ನೀನೆ ಸಂಹರಿಸೀ | ಕೌರವನ ತೊಡೆಖಂಡಿಸುತವನ ಛೇದಿಸೀ |ಅಂಡಜಾಧಿಪವಹಗೆ ಅರ್ಪಿಸಿ | ನಿಂದೆ ಭೀಮಾ 3 ಅದ್ವೈತ ಸಿದ್ಧಿಲಿಹೇಯ ಬಹಳವ ನೀನೆ ತೋರಿಸೀ | ಬದರಿಯಲಿ ಬಾದರಾಯಣರಿಂದ ಉಪದೇಶೀಸಿ | ಮತ್ತಿಲ್ಲಿ ಬರುತಲಿಧೇಯ ಸಾಧಿಸೆ ಗ್ರಂಥ ಬಹು ರಚಿಸೀ | ಕುಭಾಷ್ಯಗಳ ಬಹುಹೇಯತ್ವವನೆ ಸಾಧಿಸೀ | ವಾದ ಕಥೆಯಲಿಮಾಯಿಗಳ ಬಲುಪರಿಯ ಸೋಲಿಸೀ |ಕಾರ್ಯ ಸರ್ವವ | ರಾಯ ಕೃಷ್ಣಗೆ ಅರ್ಪಿಸಿದೆ ಮಧ್ವಾ 4 ಪರಿ ವ್ಯಾಪ್ತನೆ | ಅಧ್ಯರ್ಥ ರೂಪಿಅಪ್ರಾಪ್ಯ ಅಶಕ್ತಿ ರಹಿತಾನೇ |ವ್ಯಾಪಿಸುತ ಜಗ | ವೀಪರೀಯಲಿ | ಮಾಳ್ಪೆ ಪ್ರಾಣಾ 5 ಮೋಕ್ಷಾಧೀಚ್ಛೆಯ ವರ್ಜ | ಅಚ್ಛಿನ್ನ ಭಕುತಾನೇದಕ್ಷಿಣಾಕ್ಷಿ ಗೋ | ವತ್ಸ ರೂಪಾನೇ ||ಅಕ್ಷಿಯೋಳಿಹ ತ್ರಿದಶಾ | ದ್ಯಕ್ಷರಿಂದಲಿ ಸಂ | ಸೇವ್ಯಾನೇ |ಕಂಠದಲಿ ನೀ ಹಂಸೋಪಾಸಕನೇ |ಶಬ್ದಗಳ ನುಡಿದು ನುಡಿಸುತಿರುವಾನೆ | ಕೂರ್ಮರೂಪಿ ಸಲಕ್ಷಣದಿ ಬ್ರಹ್ಮಾಂಡ ಧಾರಕನೆ | ಸಪುತ ಸ್ಕಂದಗತಇಚ್ಛೆಯಲಿ ಲೋಕಧಾರಕನೆ | ಬೃಹತಿ ಸಾಸಿರವಾಚ್ಯನೆಂದೆನಿಸುತ್ತ ಸ್ತುತ್ಯಾನೆ | ಪತ್ಯಬಿಂಬ ಮುಖ್ಯನೆಈಕ್ಷಿಸುವೆ ಸರ್ವತ್ರ ಹರಿಯನ್ನೆ | ಮುಂದಿನಜ ಅಪರೋಕ್ಷವನು ಪಾಲಿಸೆಂಬೇನೆ ||ಮೋಕ್ಷದನೆ ಕರುಣಾ ಕಟಾಕ್ಷದಿ | ಈಕ್ಷಿಪುದು ಪವನ 6 ಜೇಷ್ಠ ಶ್ರೇಷ್ಠನೆ ಸ | ಮಷ್ಟಿ ರೂಪನೆ ಪವನ |ವ್ಯಷ್ಟಿರೂಪದಿ ಜಗದಿ | ವರೀಷ್ಟನೇ ||ನಿಷ್ಠೇಲಿ ಭಜಿಪರಿ | ಗಿಷ್ಟಾರ್ಥವನೆ | ಸಲಿಸೂವೇ |ಅತಿರೋಹಿತ ವಿಜ್ಞಾನಿ ಎನಿಸಿರುವೆ ||ಸಕಲ ಗುಣಗಣ ಭೋಕ್ತøವೆನಿಸಿರುವೆ | ಸಕಲ ಜ್ಞಾನೋಪದೇಷ್ಟನೆಂದೆನಿಸಿ ಕರೆಸೂವೆ | ಶಿವ ಶೇಷ ಖಗಪರಿನಿಷ್ಟ ಗುರು ನೀನೆ ಎನಿಸಿರುವೆ ಸಜಾತಿ ಗುಣ ಅಯುತವರಿಷ್ಟನು ನೀನು ಆಗಿರುವೆ | ವಿಜಾತ್ಯನಂತ ಗುಣಗರಿಷ್ಟ ರೂಪಿ ಎನಿಸಿರುವೇ | ವೇದಾನುಕ್ತ ಗುಣವಿಶಿಷ್ಟ ರೂಪದಲಿಂದ ಮೆರೆಯುವೇ ||ಇಷ್ಟ ಗುರು ಗೋವಿಂದ ವಿಠ್ಠಲ | ಪ್ರೀತಿ ಪಾತ್ರನು ಆದ ಪ್ರಾಣ 7
--------------
ಗುರುಗೋವಿಂದವಿಠಲರು
ಪಿಳ್ಳಂಕೇರಿಯ ವಾಸ ದಾಸ | ಕಾಯೊಮಲ್ಲಾರಿ ಮಹಿದಾಸ ದಾಸಾ ಪ ಎಲ್ಲ ಸಚರಾಚರದಿ ವ್ಯಾಪ್ತನು | ನಲ್ಲ ಕೃಷ್ಣನ ಸೇವೆ ಬಹಳದ ಸಲ್ಲಿಸಲು ಬಹುರೂಪ ತಾಳ್ದ ಪ್ರ | ಪುಲ್ಲ ವದನಾಂ ಭೋಜ ಹನುಮ ಅ.ಪ. ದಕ್ಷಿಣಾಕ್ಷಿಯ ವತ್ಸರೂಪಾ | ಸುರತ್ರ್ಯಕ್ಷಾದಿ ಸಂಸೇವ್ಯ ಭೂಪಾ |ಕ್ಷೋಭ್ಯತೀರ್ಥ ಶ್ರೀ ಯತಿಪಾ | ಗೊಲಿದುಅಕ್ಷಾರಿ ತೋರ್ದೆ ಈ ರೂಪಾ |ಕುಕ್ಷಿಯಲಿ ಪಾಪಾತ್ಮ ಪುರುಷನ | ಶಿಕ್ಷಿಸುತ ಶೋಭಿಸುತ ನಿತ್ಯಪಕ್ಷಿವಾಹನನಂಘ್ರಿ ಕಮಲವ | ಈಕ್ಷಿಸಲು ಸಹಕರಿಪ ಪ್ರಾಣಾ 1 ದುರುಳ ಅವನನ್ವಯದ | ಸಹಜಾತರನು ವಧಿಸಿ ಮೆರೆದ ಸ 2 ಸಾರ ಸಜ್ಜನರನ್ನು ಪೊರೆದ 3 ಹಂಸನಾಮಕ ಹರಿ ದ್ವಂದ್ವಾ | ಪಾದಪಾಂಸುವ ಧರಿಸಿ ಮೆರೆಯುವಾ |ಹಂಸಾಖ್ಯ ಜಪ ದಿನ ದಿನವಾ | ಪಟ್ಯತವಿಂಶತ್ಯೇಕ ಸಾಸಿರವಾ |ಹಂಸವಾಹನ ತಾತನೆನಿಸುವ | ಕಂಸಮರ್ದನ ಚರಣಕರ್ಪಿಸಿಸ್ವಾಂಶರೂಪವನಂತ ಧರಿಸುತ | ಶಂಸಿಸುವೆ ವೇದೋಕ್ತ ಅನುಕ್ತದಿ 4 ದೇವ ದೇವರ ದೇವ ದೇವಾ | ಗುರುಗೋವಿಂದ ವಿಠ್ಠಲ್ಲ ದೇವಾ |ಕಾವ ಕೊಲ್ಲುವ ಸ್ಥಿರ ಚರವಾ | ನಂಬುದಾವ ಬಲ್ಲನಿವನ ಮಹಿಮವಾ |ಭಾವಿ ಬೊಮ್ಮನೆ ರಮೆಯ ಮುಖದಿಂ | ಶ್ರೀವರನ ಮಹಿಮೆಗಳ ತಿಳಿದುಭಾವ ಶುದ್ಧಿಯ ಗೈದು ಸುಜನರ | ಸ್ವಾವಲಂಬಿಗಳೆನಿಸಿ ಪೊರೆವ 5
--------------
ಗುರುಗೋವಿಂದವಿಠಲರು
ಪುಣ್ಯ ಪಡೆಯೆ ನೀನು ಪೂರ್ಣೇಂದುವದನೆ ಪುಣ್ಯ ಪಡೆಯೆ ನೀನು ಪ ಕುಂದಣದಾರತಿ ಬೆಳಗಿ ಅಕ್ಷತೆನಿಟ್ಟು ಆ- ನಂದವಾಗಾಶೀರ್ವಾದ ಮಾಡ್ಹರಸುತಲಿ 1 ಅತಿ ಹರುಷದಿ ಗಂಡು ಸುತರನೆ ಪಡೆದು ನೀ ಪೃಥಿವಿನಾಳೆನುತ ದ್ರೌಪದಿ ಹರಸಿದಳು2 ಅಕ್ಕರದಿಂದ್ಹೆಣ್ಣುಮಕ್ಕಳ ಪಡೆದು ಪ- ಲ್ಲಕ್ಕಿನೇರೆನುತ ದೇವಕ್ಕಿ ಹರಸಿದಳು 3 ಕಟ್ಟಿದ್ದ ಮಾಂಗಲ್ಯ ಕರಿಯ ಕಾಜಿನ ಬಳೆ ಮುತ್ತೈದೆತನಕೆ ಸಾವಿತ್ರಿ ಹರಸಿದಳು 4 ಅನ್ನ ಗೋವ್ಗಳು ಕನ್ಯಾದಾನ ಮಾಡೆನುತ ಸಂ- ಪನ್ನ್ಯಾಗಿರೆನುತ ಅರುಂಧತಿ ಹರಸಿದಳು 5 ಆಯುಷ್ಯ ಆರೋಗ್ಯ ಶ್ರೇಯಸ್ಸು ಸೌಭಾಗ್ಯ ನೀ ಪಡೆ ಸುಖ ಶ್ರೀಮಹಾಲಕ್ಷ್ಮಿ ಹರಸಿದಳು 6 ಕಾಮಿತ ಫಲ ಇಷ್ಟದಾಯಕನಾದ ಶ್ರೀ ಭೀಮೇಶಕೃಷ್ಣರಾಯನ ಕರುಣದಲಿ 7
--------------
ಹರಪನಹಳ್ಳಿಭೀಮವ್ವ