ಒಟ್ಟು 228 ಕಡೆಗಳಲ್ಲಿ , 58 ದಾಸರು , 196 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾರ ಪ ಪ್ರಶ್ನೆ:ಯಾತರಿಂದಲಿ ಕೇಳೆನ್ನಯಮನ ಬಹು ಪೂತವಾಗುವದು ಗುರುವರೇಣ್ಯ ಭೂತಳದಲಿ ಪರಮ ಪಾವನ ತೀರ್ಥ ಅನುದಿನ 1 ಉತ್ತರ:ಶ್ರಧ್ದ ಪೂರ್ವಕ ಶ್ರವಣಸಾಧನ ಮನ ಶುದ್ಧಿಗೆ ಇದೆ ಮುಖ್ಯ ಕಾರಣ ಉದ್ಭವಿಸುವದು ಭಕ್ತಿ ಜ್ಞಾನ ಅನಿ ಪ್ರಶ್ನೆ:ವಶವಲ್ಲಭವದಿ ಬಂದೊದಗುವ ನಾನಾ ವ್ಯಸನಗಳನು ಪರಿಹರಿಸುವ ಬೆಸಸುವದೆನ ಗೀ ಉಪಾಯವ ಚರಿಸಲೇನು ಗಿರಿಗುಹದಲಿ ತ¥ವÀ| ಉ.ವಸುದೇವಸುತನ ಸಂಕೀರ್ತನ ನಾನಾ ವ್ಯಸನ ಪರಿಹಾರಕ್ಕೆ ಕಾರಣ ಮುಸುಕಿರ್ದ ಮೇಘಕ್ಕೆ ಪವಮಾನ ಭವ ವ್ಯಸನಾಂಧಕಾರಕ್ಕೆ ರವಿಕಿರಣ 2 ಪ್ರ:ಏನು ಮಾಡಲಿ ಸದುಪಾಸನ ದೈವಾ ಧೀನದಿ ಬರುವ ವಿಘ್ನಗಳನ್ನು ಕಾಣೆನು ಪರಿಹಾರ ಕೃತಿಯನ್ನು ಇದ ಉ:ಬಿಡದಿರೊ ಕೃಷ್ಣನ್ನ ಸ್ಮರಣವ ಬರುವ ಯಡರುಗಳನು ಪರಿಹರಿಸುವ ದೃಢಮನದಲಿ ತಿಳಿವದು ಜವ ಪೋಪ ದ್ಯಡರು ಪ್ರಾಪಕವಾದ ಪಾತಕವ 3 ಪ್ರ:ಮೋಕ್ಷಫಲದ ಕಮಲಾಕ್ಷಣ ಅಪ- ರೋಕ್ಷ ವಾಗುವದಕ್ಕೆ ಸಾಧನ ಶಿಕ್ಷಿಸುವದು ಸದುಪಾಸನ ಆ ಉ:ಆದರದಿ ನೈರಂತರ್ಯದಿ ಯುಕ್ತ ಮಾಧವನಂಘ್ರಿಯ ಸ್ಮರಣದಿ ಸಾಧಿತ ಬಿಂಬಾಪರೋಕ್ಷದಿಸ ನ್ಮೊದ ಭರಿತನಾಗಿರು ಜಗದಿ 4 ಪ್ರ:ಏನು ಮಾಡಲು ಮುಕ್ತಿಸಾಧನವಾದ ಜ್ಞಾನ ವಿಜ್ಞಾನ ಸಂಪದವನ್ನ ಕಾಣುವದೆಂದಿಗೆ ತಿಳಿಸೆನ್ನ ಮುಂದೆ ಸಾನುರಾಗದಲಿ ಬೇಡುವೆ ನಿನ್ನ ಉ:ಭಕ್ತಿ ವೈರಾಗ್ಯದಿ ಕೂಡಿದ ಪುರು ಷೋತ್ತಮನಂಘ್ರಿ ಸಂಸ್ಮøತಿಯಿಂದ ಚಿತ್ತದಿ ಜ್ಞಾನ ವಿಜ್ಞಾನದ ಉತ್ಪ- ಮೋದ 5 ಪ್ರ:ಜಲಜನಾಭನ ಪದಯುಗದಲ್ಲಿ ನಿ- ಶ್ಚಲ ಭಕ್ತಿಯೆನಗೆ ಪುಟ್ಟುವದೆಲ್ಲಿ ಬಲುವಿಧ ಭಕುತಿಯ ಬಗೆ ಉ:ಜ್ಞಾನ ವೈರಾಗ್ಯದಿ ಕೂಡಿದ ನಂದ ಸೂನು ಪಾದಾಂಬುಜ ಸ್ಮøತಿಯಿಂದ ಪ್ರಾ- ಣೇಂದ್ರಿಯಾತ್ಮಾದಿಗಳಿಂದ ಅಧಿಕ ಕಾಣಿಸುವದು ಭಕ್ತಿ ಜವದಿಂದ 6 ಪ್ರ:ದೃಢತರವಾದ ವೈರಾಗ್ಯವ ಪೊಂದಿ ಪಡಿವೆನೆಂದಿಗೆ ಮಾಧವನ ದಯವಾ ಗಡನೆ ಪೇಳಿದಕೇನು ಪಾಯವ ನಿ- ಉ:ಜ್ಞಾನ ಭಕ್ತಿಗಳಿಂದ ಕೂಡಿದ ಶಿರಿ ವೇಣು ಗೋಪಾಲನ ಸ್ಮøತಿಯಿಂದ ಕಾಣುವಿ ಸಧೃಡ ವೈರಾಗ್ಯದ ಭಾಗ್ಯ ಶ್ರೀನಿಧಿ ಚರಣಾನು ಗ್ರಹದಿಂದ7 ಪ್ರಃಘನಲೌಕಿಕದಿ ಕೇಳೆನ್ನಯ ಮನ ನಿ- ಪುಣತರವೆನಿಸುವ ದನುದಿನ ಎನಗೆಂದಾಧ್ಯಾತ್ಮ ತತ್ವದಿ ಮನವೆರಗ ಲೆನಿಸುವದದೆ ಮುಕ್ತಿಸಾಧನ ಉ:ಅನುದಿನ ಶ್ರವಣಾದಿ ಸಾಧನ ದಿಂದ ಜನಿತ ಸದ್ಭಕುತಿಯೆ ಕಾರಣ ಮನದೊಳಾಧ್ಯಾತ್ಮ ತತ್ವಗಳನ್ನ ನೋಡಂ ಜನಯುಕ್ತ ನಯನ ದಂದದಿ ಮುನ್ನ 8 ಪ್ರಃಏನಿರುವುದು ಬಿಂಬಲಕ್ಷಣ ಮತ್ತೇ ನೇನು ಮಾಳ್ಪ ಕರ್ಮಗಳನ್ನು ಸಾನುರಾಗದಿ ಪೇಳುವದುಮುನ್ನ ಮನದಿ ಧ್ಯಾನವ ಮಾಡುವೆ ಪ್ರತಿದಿನ ಉ.ಇಂತಿರುವದು ಬಿಂಬ ಲಕ್ಷಣ ಬಹಿ ರಂತರದಲಿ ತಿಳಿವದು ಮುನ್ನ ಸಂತತ ಸೃಷ್ಟ್ಯಾದಿಗಳನ್ನ ದೇ ಹಾಂತಃ ಸ್ವಪ್ನದಿ ಸಂದರುಶನ 9 ಪ್ರ.ಎಲ್ಲಿರುವನು ಬಿಂಬ ದೇಹದಿ ಸಿರಿ ನಲ್ಲನು ವ್ಯಾಪ್ತವೆಂಬರು ಜಗದಿ ಎಲ್ಲದೇಶ ಗುಣಕಾಲದಿಯನ್ನ ಉ:ನಿಂತಿರುವನು ಸರ್ವಜೀವರ ಹೃದ ಯಾಂತರದಲಿ ವ್ಯಾಪ್ತನು ಪೂರಾ ಸಂತತ ಜೀವನ ವ್ಯಾಪಾರ ತಾನೆ ನಿಂತು ಮಾಡಿಸುವನು ನಿರ್ಧಾರ 10 ಪ್ರ:ಎಂತು ಮಾಡಲಿ ಬಿಂಬೋಪಾಸನ ಮುಕ್ತಿ ಪಂಥಕ್ಕೆ ಮುಟ್ಟಲು ಸೋಪಾನ ಅ- ನಂತ ಗುಣಾತ್ಮಕ ಬಿಂಬನ ಗುಣ ಚಿಂತಿಪರಿಗೆ ಬಂಧ ಮೋಚನ ಉ:ಇದೆ ತಿಳಿಬಿಂಬೋಪಾಸನÀ ಚತು ರ್ವಿಧ ದಿಂದಲಾತ್ಮ ಸಮರ್ಪಣ ಮೊದಲು ಆತ್ಮಾನಮೇವಾರ್ಪಣ ದ್ರವ್ಯ ಸದ್ಗುಣ ಕರ್ಮಸಮರ್ಪಣ 11 ಮಾಡಲಾವ ಧರ್ಮಗಳ ಮಾಡಲಿ ಮುನ್ನ ಜೀವರ ಬಂಧ ವಿಮೋಚನ ಮಾಳ್ಪ ಭಾಗವತ ಧರ್ಮಗಳನ್ನು ತಿಳಿದು ಶ್ರದ್ಧೆಯಿಂದಲ್ಲಿ ಮಾಡೋ ಮುನ್ನ ಹೃದ್ಗತ ಬಿಂಬೋಪಾಸಾನ ಮಾಡಿ ಸಿದ್ಧನಾಗಿ ಬಾಳೆಲೋ ಮುನ್ನಾ 12 ಪ್ರ:ಎಂತಿರುವದು ಗುರುಲಕ್ಷಣ ಮುಕ್ತಿ ಪಂಥವ ತೋರಿಸುವವರನ್ನ ಚಿಂತಿಸುವೆನು ಮನದೊಳುಮುನ್ನ ಭಗ ವಂತನ ಮಹಿಮೆ ಪೇಳುವರನ್ನ ಉ:ಜಲಜನಾಭನÀ ಪದಯುಗಲವ ಬಿಟ್ಟು ಚಲಿಸದಿರು ಲವ ನಿಮಿಷಾರ್ಧವ ಇಳಿಯೊಳಗಿಂಥಾ ಸದ್ವೈಷ್ಣವರನ್ನು ತಿಳಿದು ಸೇವಿಸುತಿರು ಮಾನವಾ 13 ಪ್ರ:ಏನು ಕೊಡಲಿ ಗುರುದಕ್ಷಿಣ ಈ ಕ್ಷೋಣಿಯಿತ್ತರು ಸರಿಗಾಣೆ ನಾ ಧ್ಯಾನವ ಮಾಡುವೆ ಪ್ರತಿದಿನಾ ಬಿಂಬ ಜ್ಞಾನವ ಕೊಟ್ಟು ರಕ್ಷಿಪರನ್ನ ಉ:ಆತ್ಮಾರ್ಪಣ ಮೇವದಕ್ಷಿಣ ಸಿರಿ ನಾಥ ನಿಂದನ್ಯ ವಸ್ತುಗಳನ್ನು ಪ್ರೀತಿಸರೆಂದಿಗೂ ಧನವನ್ನು ಈ ಮ- ಹಾತ್ಮರ ಸ್ಮರಿಸುತಲಿರು ಮುನ್ನ 14 ಕ್ಷೇತ್ರ ಕಾರ್ಪರದೊಳಗಿರುವಂಥ ಲಕ್ಷ್ಮಿ ಯುಕ್ತ ನರಸಿಂಹನೊಲಿಸುವಂಥ ಸ್ತೋತ್ರ ಮಾಲಿಕೆಯನ್ನು ಪಠಿಸುತ್ತ
--------------
ಕಾರ್ಪರ ನರಹರಿದಾಸರು
ಸಾರಥಿ ವಿಶ್ವಾಧೀಶ್ವರ ವಿಜಯ ಪಾಲಿಸು ಸತತಂ ವಿಜಯಧ್ವಜ ವೆಂಕಟಗಿರಿ ನಾಯಕಿ ಅಜಿತ ಸಕಲಸುರವೈರಿ ವಿದಾರಣ ಪ. ವೀರಾಗ್ರಣಿ ರಘುವೀರ ವಿದಾರಿತ ಘೋರದಿತಿಜ ಪರಿವಾರ ಶೌರಿ ಕಾರಣ ಧಾರಣ ವದನ ಖರಾರಿ ಕೃಪಾಕರ್ರ(?) 1 ಲಕ್ಷ್ಮಣ ಪೂರ್ವಜ ಋಕ್ಷವಿನುತ ಕಮ ಲಾಕ್ಷ ಶೂರ್ಪನಖ ಶಿಕ್ಷಾ ದಕ್ಷಿಣ ದುರಿತಾರಣ್ಯ ರಮಾಸ್ಪದವಕ್ಷಸ್ಥಳ ವಿಭವೈಕನಿಭೆ ಜಯ ದ್ವಿದಶಾಕ್ಷ ವಿಘಾತನ 2 ರಾಮಾಭಿದ ರಮಣೀಯ ಗುಣಾರ್ಣವ ಕಾಮಿತ ಫಲದಾವನಭೂಮಾ ಭವಾಮಯಹರ ಭಜಕಾಶ್ರಯಧಾಮಾ ಮಾರುತಿಕೃತ ಕಾಮಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ವಿಶ್ವಪತಿ
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ
ಸೇರಿದೆನು ಸೇರಿದೆನು ಜಗದೀಶನನರಕಜನ್ಮದ ಭಯವು ಎನಗೆ ಇನಿತಿಲ್ಲ ಪ ಮೂರ್ತಿ ಗಾತ್ರ ಕೃಷ್ಣನ ಮುಂದೆ1 ಹಸ್ತಗಳು ಮಂಟಪಶುದ್ಧಿಯನು ಮಾಡುತಿವೆಮಸ್ತಕವು ಹರಿಚರಣಕೆರಗುತಿದೆಕೋವಿಸ್ತಾರವಾದ ಪ್ರದಕ್ಷಿಣೆಯ ಮಾಡುತಿದೆಕಸ್ತೂರಿತಿಲಕವನು ಮೂಗು ಆಘ್ರಾಣಿಸುತಿದೆ 2 ಹರಿನಾಮಸ್ಮರಣೆಯನು ನುಡಿಯುತಿದೆ ಎನ್ನ ಜಿಹ್ವೆಹರಿಭಕುತಿ ಸುಧೆಯ ಪಾನಗಳಿಂದಲಿಹರಿಪ್ರೀತಿಯಾಗಿದೆ ನೋಡಿದರೆನ್ನ ದೇಹಸಿರಿಕೃಷ್ಣರಾಯನ್ನ ಮನಮಂದಿರದಿ ಕಂಡೆ 3
--------------
ವ್ಯಾಸರಾಯರು
ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ ಅರಣೋದಯದಲೆದ್ದು ಭಕ್ತಿಪೂರ್ವಕವಾಗಿ ಕಠಿಣಶ್ರಮದಿ ಮಾಳ್ಪ ಪಾಪರಾಶಿಗಳ ಪರಿಹರಿಸುತ್ತ ಸಂತ್ಯೆಸುವಾ ಪ ಭಾಗೀರಥಿ ಸರಸ್ವತಿ ಯಮುನಾ ವಾರಾಣಾ ಶ್ರೀ ಗೋದ ಫಲ್ಗುಣಿ ಶೋಣಭದ್ರಾ ನರ್ಮ ದಾ ಗಂಡಕಿ ಭಿಮರಥಿ ತುಂಗಭದ್ರೆ ಪ್ರಯಾಗ ತ್ರಿವೇಣಿ ಹೇಮಾ ವೇಗವತಿ ಗಾಯತ್ರೀ ಕಾಶಿಮಣಿಕರ್ಣಿ ಕಾ ಗೌತಮಿ ವಿಯದ್ಗಂಗಾ ಕುಮುದ್ವತೀ ಸಿಂಧು ಪಾಪಾಘನಾಶಿನೀ 1 ಸರಯು ಜಯಮಂಗಳ ಜಮದಗ್ನಿ ವರತಾಮ್ರ ಪರಣಿ ಯೋಗಾನಂದ ಕೃತಮಾಲಕುಹು ಮಹೇ ಧುನಾಶಿ ಗರುಡ ಮದಿರಾ ಮರುದ್ವತಿ ಸ್ವರ್ಣಮುಖರಿ ವರ ಝರತಾಪಿನಿ ಕಾಳಿ ಸೌ ಪರಣಿ ದಕ್ಷಿಣೋತ್ತರಪಿನಾಕಿ ಕಪಿಲ ಶೀತಳ ಕಾನಂದ ಕುರಮುಖಿ ಪ್ರಣವಸಿದ್ಧ 2 ಕಾವೇರಿ ಸಿಧು ಮಾಲತಿ ಗಾರ್ಗಿಣಿ ಹರಿ ಕುಂದ ಕುಂದಿನಿ ಶೈವ ದೇವವತಿ ಪಾತಾಳ ಗಂಗಾ ಪುನಹ ನೀರಾ ಕುಮಾರಧಾರಾ ಸಾವಿತ್ರಿ ದಾನ್ಯಮಾಲಾ ಪುಷ್ಪವತಿ ಲೋಕ ಸಿಂಧು ಧರ್ಮಕು ಭವ ನಾಶಿನಿ ವರದಾ ಮಲಾಪಹಾರಿ 3 ಸ್ವಾಮಿ ಪುಷ್ಕರಣಿ ಮಾನಸ ಚಂದ್ರ ಪುಷ್ಕರಣಿ ಭೂಮಂಡಲದೊಳುತ್ತಮೋತ್ತಮ ತ್ರಿಪುಷ್ಕರಣಿ ನಿತ್ಯ ಪದ್ಮಸರ ಚಂದ್ರಭಾಗತೀರ್ಥ ವಾಮನ ಮಯೂರ ಪಂಪಾಸರೋವರ ಪುಣ್ಯ ಧಾಮ ವ್ಯಾಸ ಸಮುದ್ರ ಧವಳಗಂಗಾ ಸುಸಾ ರೋಮಹರ್ಷತೀರ್ಥ 4 ದ್ವಾರಕಾನಗರ ಸಾಲಗ್ರಾಮ ಟರರ ಬದರಿ ಕೇ ದಾರ ನರನಾರಾಯಣ ಶ್ರೀ ಮಜ್ಜಗನ್ನಾಥ ಶ್ರೀ ಮುಷ್ಣ ಮಂದರ ಮೈನಾಕ ಕೈಲಾಸ ಕಂಚಿ ಶ್ರೀರಂಗನಾಥ ನೈಮಿಷ ದ್ವೈತವನ ಚಂಪ ಕಾರುಣ್ಯ ಕಾಶಿ ಪಂಪಾವಂತಿಕಾ ಪುರಿ ಹರಿದ್ವಾರ ಛಾಯಾಪಿಪ್ಪಲ 5 ಕೇದಾರ ಸಾಗರ ಮಂದಾಕಿನಿ ಕುಸುಮವತಿ ಆದಿಸುಬ್ರಹ್ಮಣ್ಯ ಕೋಟೇಶ್ವರ ನಂದಿ ವೇದಪಾದ ಯಯಾತಿ ಗಿರಿ ಕಾಲಹಸ್ತಿ ಕೌ ಮೋದಕೀ ಪಾಡುರಂಗ ಕ್ಷೇತ್ರ ಶ್ರೀ ವಿಷ್ಣು ಪಾಟಲೀ ಮಂತ್ರಾಲಯ6 ಮಂದರ ಮಲಯ ಕೈವಲ್ಯನಾಥ ಕಾಶೀರ ಜಾಂಬವತಿ ವೃಂ ಶ್ರೀ ವಿರೂಪಾಕ್ಷ ಕುಂದರ ನಂದಪುರಿ ಮಾಯಾ ಶ್ರೀವತ್ಸ ಗಂಧಮಾದನ ಚಿತ್ರಕೂಟ ದ್ವಾ ನರಾಚಲಾಸೌಭದ್ರಿ ಆದಿನಾಥ 7 ಈ ಮಹಿಮಂಡಲದೊಳಿಪ್ಪ ತೀರ್ಥಕ್ಷೇತ್ರ ನಾಮಗಳ ಕಾಲತ್ರಯದಲ್ಲಿ ಸರಿಸುತಿಹ ಧೀಮಂತರಿಗೆ ಸಂಚಿತಾಪ ಪರಿಹರದಾನಂತರದಲಿ ಸೋಮಾರ್ಕರುಳನಕ ಸಕಲ ಭೋಗಗಳ ಸು ತ್ರಾಮಲೊಕದ ಲುಣಿಸಿ ಕರುಣಾಳು ಪ್ರಾತ್ಯಕೆ ಸ್ವ ಅಹುದೆಂದು ಸೂತ ಶೌನಕಣೆ ಪೇಳ್ದ8 ಈ ಭರತ ಖಂಡದೊಳಗುಳ್ಳ ತೀರ್ಥಕ್ಷೇತ್ರ ವೈಭವಾಬ್ಜ ಭವಾಂಡ ಪಾರನದೊಳಗೆ ಹರಿ ಪರಮಕಾರುಣ ದಿಂದ ಸ್ತ್ರೀಬಾಲ ಗೋವಿಪ್ರಮಾತ ಪಿತೃಗಳ ಧನ ಲೋಭದಿಂದಲಿಕೊಂದ ಪಾತಕವ ಪರಿಹರಿಸಿ ಬೇಡಿದಿಷ್ಟಾರ್ಥಗಳನು 9
--------------
ಜಗನ್ನಾಥದಾಸರು
ಹನುಮ - ಭೀಮ - ಮಧ್ವರು ಅಮಮ ಎನಿತÀದ್ಭುತಮಹಿಮೆ ಪೊಗಳನು ಪಮ ದೇವ ಜೀವೋತ್ತಮ ಸುರಸಾರ್ವಭೌಮ ಹನುಮ ಪ ಭೀಮ ರಿಪುಕುಲಧೂಮ ಯತಿಕುಲಸೋಮ ಶ್ರೀಮದಾನಂದ ಮುನಿಮಹಿಮಾಅ.ಪ ಜೀಯ ಈ ಪಯೋಜಾಂಡದೊಳಿನ್ನೆಣೆಯಿಲ್ಲ ಬಲದೊಳು ಶೌರ್ಯ ಕಾಯನೋಡಲು ಆಖಣಾಶ್ಮಸಮನು ನಿನ್ನೊಳು ಹರಿಯರೂಪಗಳೆನಿತು ಇಹುದಯ್ಯ ನಿನ್ನಲ್ಲಿಹುದು ಇನ್ನೆಷ್ಟಯ್ಯ ಶ್ರೀಯರಸ ಶ್ರೀ ಶಿಂಶುಮಾರನು ನಿನ್ನ ಮುಖಕಮಲದಲ್ಲಿಹನೂ ವಾಯುಮೂರುತಿ ನಿನ್ನ ನಾಸಾಗ್ರದೊಳು ಶೋಭಿಪ ಮತ್ಸ್ಯಮೂರುತಿಯು ಜೀಯ ನಿನ್ನಯ ನಾಸಪೃಷ್ಠದಿ ಕೂರ್ಮ ಮೂರುತಿಯು ಅಲ್ಲಿ ನೆಲೆಸಿಹನು ನಯನದ್ವಯದಿ ಕಪಿಲವಿಷ್ಣು ಶ್ರವಣದ್ವಯಗಳೊಳು ಕೃಷ್ಣರಾಮರು ನಾರಾಯಣ ಇಹನು 1 ಬಾಹುದ್ವಯಗಳೋಳ್ಕಲ್ಕಿ ಬುದ್ಧರೂಪಿರೆ ಬಾಹುಬಲವಿನ್ನೆಷ್ಟಯ್ಯ ಅಹುದು ಪವನಹಸ್ತದೊಳ್ ಪಾವನ್ನ ಶ್ರೀ ಬಾದಾರಾಯಣ ಕಂಗೊಳಿಪನಯ್ಯ ಶ್ರೀ ಹರಿಯು ನೆಲೆಸಿಹನು ಪಾದ ಮಧ್ಯಸ್ಥಾನದಲಿ ಸಲೆ ಬೆಳಗುತಿಹನು ಮಹಮಹಿಮ ನಿನ್ನಯ ಪಾದಪೃಷ್ಠದಿ ಹೃಷೀಕೇಶ ಹರಿಯು ನಿಂತಿಹನು ಇಹರಯ್ಯ ದಕ್ಷಿಣ ವಾಮಜಾನುಗಳಲಿ ಯಜ್ಞ ಶ್ರೀಧರರಿಹರು ಕಟಿ ಪ್ರದೇಶದಿ ದಿಟ್ಟರಾಗಿಹರು 2 ದಕ್ಷಿಣದಲ್ಲಿಹ ವನಮಾಲೆಯಲ್ಲಿಹರು ಗುಣನಿಧಿಯೆ ತದುಪರಿ ಸೂರ್ಯವರುಣಅಶ್ವಿನಿಗಳೆಲ್ಲ ನಿನ್ನಯ ವನಮಾಲೆಯಲಿಹರು ಎಣಿಸೆ ದಕ್ಷಪ್ರಜಾಪತಿಯು ನಿನ್ನ ವಾಮ ವನಮಾಲದೊಳಲ್ಲಿ ಇರುತಿಹನು ಮಣಿದು ಸೇವಿಪ ಜಯಂತ ಮನುಯಮ ತದನಂತರ ವನಮಾಲೆಯಲ್ಲಿಹರು ಜಾಣ ಬೃಹಸ್ಪತಿ ದಕ್ಷಿಣ ವನಮಾಲದೊಳು ಆಶ್ರಯಿಸಿ ತಾವಿಹರು ಪ್ರಾಣ ಅಪಾನ ವ್ಯಾನೋದಾನ ಸಮಾನ ವನಮಾಲದಲ್ಲಿಹರು 3 ಪದುಮನಾಭನು ಸಲೆ ಬೆಳಗುತಿಹನು ವಾಮದಕ್ಷಿಣ ಕುಕ್ಷಿಯೊಳಿಹರು ಹರಿಮೂರುತಿ ನಿನ್ನಾಂತರದಿಂದ ನಿಂತಿಹನು ಪಾದಪಾಶ್ರ್ವಗಳಲ್ಲಿ ಋಷಭ ಗೋವಿಂದ ಮೂರುತಿ ಅಲ್ಲೆ ಇರುತಿಹರು ಮುದದಿ ನಿನ್ನಯ ವಕ್ಷದೊಳು ಶ್ರೀ ವರಹಮೂರುತಿ ಅಲ್ಲೆ ನೆಲೆಸಿಹನು ಎದುರಿಲ್ಲ ನಿನಗೆ ಕಪೋಲದೊಳು ಶ್ರೀ ವಾಸುದೇವನು ಇಹನು ವಿಧಿವಾಯುಗಳು ನಿನ್ನಯ ವಾಮಭುಜದೊಳು ಮುದದಿ ನಲಿಯುತಿಹರು ವಿಧಿ ವಾಯುಸತಿಯರು ದಕ್ಷಿಣಭುಜದೊಳು ನುತಿಸುತಿಹರು 4 ಪವನಶಕ್ತಿ ಹನ್ನೆರಡೆಲ್ಲ-ನಿನ್ನಯ ಹೃದಯದಾಭರಣ ಪವನಿಸಿರ್ಪುದು ಕ್ರಮದಿ-ಶಕ್ತಿ ಪ್ರತಿಷ್ಠೆ ಸಂವಿತ್ ಸ್ಪೂರ್ತಿ ಭವಹಾರಿ ನಿನಗೆ ಕಲಾವಿದ್ಯಾಮತಿ ನಿಯತಿ ಮಾಯಾ ಕಾಲಪುರುಷ ಈ ಪರಿಯು ಜೀವೇಶ ನಿನ್ನಯ ಮಹಿಮ ಗುಣಗಳ ಪೊಗಳಲಳವೇ ಹರಮುಖಾದ್ಯರಿಗೆ ಜೀವರೆಸಗುವ ಕಾರ್ಯಗಳು ಲವಲೇಶ ನಿನ್ನ ಬಿಟ್ಟು ನಡೆಯದೊ ಪವಮಾನಮೂರುತಿ ಹರಿಯ ಕರುಣಾಕಟಾಕ್ಷ ನಿನ್ನೊಳು ಇಟ್ಟುಇರುವುದು ಇನ್ನೆಷ್ಟೊ ದೇವ ನಿನ್ನಯ ಖ್ಯಾತಿ ಎಷ್ಟೋ ಬಲದಿ ಶೇಷಶೈಲವ ತಂದೆ ಕಾವುದಯ್ಯ ಶ್ರೀ ವೇಂಕಟೇಶನ ಪ್ರೇಮದ ದೂತ 5
--------------
ಉರಗಾದ್ರಿವಾಸವಿಠಲದಾಸರು
ಹರಿಪಾದ ತೀರ್ಥವನು ಕರದಿ ಪಿಡಿದವರೆಲ್ಲ ತಿರುನಾಮದವರೆನಲು ನಂಬಬಹುದೇ ಪ ಪರವಾಸುದೇವನನು ಮರೆತು ಸತಿಸುತರ ವರಾಭರಣವೇ ಹಿರಿದೆಂಬ ನರರಿಲ್ಲವೇ ಅ.ಪ ಹರಿನಿವೇದನಕಾಗಿ ಕರದಿ ಫಲಪುಷ್ಪಗಳ ತರುವವರು ದಕ್ಷಿಣೆಯ ಇರಿಸಿಹರೋ ಎಂದು ಪರಿಪರಿಯ ದೃಷ್ಟಿಯಲಿ ಪರಿಕಿಸುತ ಅಲ್ಲವೆಂ ದರಿತಾಗ ಕೋಪ ನಿಷ್ಠುರ ಗೈಯುವರು 1 ಈಶಾಯನಮಃ ಓಂ ಶ್ರೀಶಾಯ ನಮಃ ಪ ರೇಶಾಯ ನಮಃ ಎಂಬುದಕೆ ಬದಲು ಆಶೋತ್ತರವನಾಂತು ಕ್ಲೇಶಪೂರಿತರಾಗಿ ನಾಶವಾಗಲಿ ಕುಡದಜನರೆಂಬರಕಟಾ 2 ಮಾನವೋತ್ತಮ ಮಾತ್ರ ತಿರುನಾಮಧಾರಿ ಜ್ಞಾನಿ ಇಂಥವನಿಂದ ತೀರ್ಥವನು ಪಡೆದವರು ಶ್ರೀನಾಥ ಮಾಂಗಿರಿಯ ಭಕ್ತರೆನಿಸುವರು3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹಾನಿಯಾದ ಮೇಲೆ ಏನು ಬೆಂಬಲವಾದರಿನ್ನೇನಿನ್ನೇನು ಮಾನಹೋದ ಮೇಲೆ ದಿನವೆಷ್ಟು ಬಾಳಿದರಿನ್ನೇನಿನ್ನೇನು ಪ ಆಪತ್ತಿಗಿಲ್ಲದ ಆಪ್ತರೆಷ್ಟಿದ್ದರು ಇನ್ನೇನಿನ್ನೇನು ತಾ ಪರರಾಳದವಗ್ಹಣವು ಎಷ್ಟಿರ್ದರಿನ್ನೇನಿನ್ನೇನು ಕೋಪಿಷ್ಠನಾದವ ತಪವೆಷ್ಟು ಗೈಯಲು ಇನ್ನೇನಿನ್ನೇನು ಪಾಪಕ್ಕಂಜದನೀಗಧಿಕಾರರ್ವಿರಿನ್ನೇನಿನ್ನೇನು 1 ವನಿತೆಯ ಸೇರದ ಗಂಡ ಮನೆಯೊಳಿರ್ದರಿನ್ನೇನಿನ್ನೇನು ಒಣಗಲು ಪೈರಿಗೆ ಬಾರದ ಮಳೆ ತಾನಿನ್ನೇನಿನ್ನೇನು ಬನ್ನಬಡುವರ ಕÀಂಡು ಗಹಗಹಿಸಿ ನಕ್ಕರಿನ್ನೇನಿನ್ನೇನು ಮನ್ನಣಿಲ್ಲದ ಸಭೆ ಮಾನ್ಯರು ಪೊಕ್ಕರಿನ್ನೇನಿನ್ನೇನು 2 ಅವಮಾನ ಸಮಯಕ್ಕೆ ಒದಗದ ಗೆಳತನವಿನ್ನೇನಿನ್ನೇನು ಧವ ಸತ್ತ ಯುವತಿಯ ಕುರುಳು ಮಾರಿದರಿನ್ನೇನಿನ್ನೇನು ದಯದಾಕ್ಷಿಣ್ಯಲ್ಲದ ಅರಸನಾಳಿಕಿದ್ದರಿನ್ನೇನಿನ್ನೇನು ದಿವಮಣಿ ತನ್ನಯ ಕಿರಣಂಗಳ್ತೋರದಿರಲಿನ್ನೇನಿನ್ನೇನು 3 ಸತಿ ರೂಪಸ್ಥಳಾದರಿನ್ನೇನಿನ್ನೇನು ರೋಗ ಕಳೆಯದ ವೈದ್ಯರಾನಂಗರಿದ್ದರಿನ್ನೇನಿನ್ನೇನು ಆಗಿಬಾರದವರ ಬಾಗಿಲ ಕಾಯ್ದರಿನ್ನೇನಿನ್ನೇನು ಭೋಗಿವಿಷಕೆ ಗರುಡಮಂತ್ರನುವಾಗಲು ಇನ್ನೇನಿನ್ನೇನು 4 ಪ್ರೇಮದವರೆ ತನ್ನೊಳ್ ತಾಮಸರಾದಿರಿನ್ನೇನಿನ್ನೇನು ನೇಮಿಸಿದ್ಯೆಲ್ಲವು ಇದಿರಾಗಿ ಕೂತಮೇಲಿನ್ನೇನಿನ್ನೇನು ಕಾಮಧೇನುವೆ ಮನದಿ ಕಾಮಿತವೀಯದಿರೆ ಇನ್ನೇನಿನ್ನೇನು ಸ್ವಾಮಿ ಶ್ರೀರಾಮನ ಪ್ರೇಮ ಪಡೆಯದ ನರ ಇನ್ನೇನಿನ್ನೇನು 5
--------------
ರಾಮದಾಸರು
ಹೀಗಿದ್ದವನೇ ತಿಳಿದವನು | ನಿಜ | ಯೋಗದ ಮಾರ್ಗಕ ಬೇಗ ಹೊಂದುವನು ಪ ನೆಂಟರಿಷ್ಟರೊಳು ದಾಕ್ಷಿಣ್ಯಾ | ತನ್ನ | ಬಂಟ ಜನರ ಮ್ಯಾಲ ಘನ ಕಾರುಣ್ಯಾ | ಶುಂಠ ಶಠರೊಳು ಕಾಠಿಣ್ಯಾ | ತನ | ಗುಂಟಾದ ಸಾಧುಗಳೊಳು ಪ್ರೀತಿ ಬಣ್ಣಾ 1 ಅರಸುಗಳಲಿ ನಮ್ರ ಸ್ಥಿತಿ | ಸರ್ವ | ವರಿತ ವಿದ್ವತ್ತರೋಳರ್ಜಿವ ವೃತ್ತಿ | ಅರಿಗಳೊಳಗೆ ಶೌರ್ಯ ಖ್ಯಾತಿ | ತನ್ನ | ಗುರುಗಳೊಳಗ ಭೆಜ್ಜರಂಜಿಕೆ ನೀತಿ 2 ಹೆಂಗಳೆಯರೊಳು ಧೂರ್ತತನಾ | ತಾನು | ಹಿಂಗದೆ ಮಾಡುವ ಶ್ರವಣ ಮನನಾ | ತುಂಗ ಮಹಿಪತಿ ಸುತ ಪ್ರಿಯನಾ | ಮಂಗ | ಳಂಗುಟ ನೆನೆವನು ಬಿಡದನು ದಿನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೆಣ್ಣೆನವರ ಹೆಮ್ಮೆ ನೋಡಿರೀ ಜನರೆ ನೀವು ಪ ಕಣ್ಣು ಸನ್ನೆ ಮಾಡಿ ಮಾಡಿ ಕಾರ್ಯವನ್ನು ತೂಗಿಸುವರು ಅ.ಪ ಅರ ಪಾವು ರವೆಯು ಶಾವಿಗೆ ಮಾಡಿ ಭಾವದಲ್ಲಿ ಹಿಗ್ಗಿಗ್ಗಿ ತಾವು ಪ್ರಸ್ತಮಾಡುತಿಹರು 1 ಭಕ್ಷ್ಯ ಭೋಜ್ಯವೆಂಬುದದು ಲಕ್ಷ್ಯವಿಲ್ಲ ಮಾತಿನಲ್ಲಿ ಕುಕ್ಷಿತುಂಬ ಭೋಜನವಿಲ್ಲ ದಕ್ಷಿಣೆಯು ದ್ವಿಜರಿಗೆ ಕಾಣೆ 2 ವರಗೆ ಕೊಟ್ಟ ವಸ್ತ್ರ ಪಾತ್ರೆ ವರ್ಣಿಸಲೊಂದು ಬಾಯಿ ಸಾಲದು ಗುರುರಾಮ ವಿಠಲನೆ ಬಲ್ಲ 3
--------------
ಗುರುರಾಮವಿಠಲ
ಹೇ ದಯಾಸಾಗರ ಸ್ವಾಮಿ ವೇದ ಮಾಧವ ಮುಕುಂದ ಮನುಮುನಿ ಪ್ರೇಮಿ ಪ ವೇದಗೋಚರ ಸಾಧುಸನ್ನುತ ನಾದಪ್ರಿಯ ಭವಬಾಧೆರಹಿತ ಭೇದಹರ ಜಗ ಪಾದ ಭಜಿಸುವೆ ಪಾಲಿಸೆನ್ನ ಅ.ಪ ಮದಗಜ ಮುದದಿಂದ ಪೊರೆದಿ ಪ್ರಭುವೆ ಮದಗಜಗಮನೆಯ ಮಾನದಿಂ ಕಾಯ್ದೆ ಪದುಮವದನೆಶಾಪ ಕಳೆದೆ ಕರುಣಿ ಸದಮಲಬಾಲನ ತಪಕೆ ನೀನೊಲಿದಿ ಸುದಯಹೃದಯ ಸುಸದನಪಾಲ್ಸಿದಿ ಸದಮಲಾಂಗನೆ ಪದುಮವದನ ಮುದದಿ ನಿಮ್ಮಡಿ ಪದುಮಗಳು ಎ ನ್ಹøದಯ ಮಂದಿರದಿರಿಸಿ ರಕ್ಷಿಸು 1 ಗರುಡಂಗೆ ವರಮೋಕ್ಷ ನೀಡ್ದಿ ನಿನ್ನ ಸ್ಮರಿಪರಿಗೆ ದರುಶನಕೊಡುತಲಿ ನಡೆದಿ ತರುಣಿಯ ಎಂಜಲ ಸವಿದಿ ವನ ಚರನಿಗೆ ವಶನಾಗಿ ಅಭಯ ಪಾಲಿಸಿದಿ ಭರದಿ ದಕ್ಷಿಣಶರಧಿ ಹೂಳಿಸಿ ಮೆರೆವ ಲಂಕಾಪುರವ ಮುತ್ತಿದಿ ದುರುಳರ್ಹಾವಳಿ ದೂರಮಾಡಿ ಧರೆಯ ಭಾರವ ನಿಳುಹಿದಯ್ಯ 2 ನುಡಿಸಿದರೆನ್ನಿಂದಲಾವ ವಚನ ನುಡಿಸಿದ ಬಳಿಕದನು ನಡೆಸಿಕೊಡಭವ ನುಡಿಯಂತೆ ನಡೆಯೆನಗೆ ಸ್ಥಿರವ ಕೊಟ್ಟೆ ನ್ನೊಡಲೊಳಗದಂತೆಯಿರು ಅನುದಿನವು ಪೊಡವಿ ಮೂರನು ಒಡಲೊಳಿಟ್ಟಿಡೆ ಬಿಡದೆ ಆಳುವ ಒಡೆಯ ಶ್ರೀರಾಮ ದೃಢದಿ ನಿಮ್ಮಯ ಅಡಿಯ ನಂಬಿದೆ ಬಿಡಿಸು ಎನ್ನಯ ಮಂದಜ್ಞಾನವ 3
--------------
ರಾಮದಾಸರು
124-2ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಆರಣೀ ಸಜ್ಜನರ ಸೌಭಾಗ್ಯ ಏನೆಂಬೆಸೂರಿವರ ಸತ್ಯವರ್ಯ ಭಾವಿ ಸತ್ಯಪ್ರಿಯರಆರಾಧಿಸಿ ಕಳುಹಿಸಿದ ಸ್ವಲ್ಪ ಕಾಲದಲೆಆರಣಿಗೆ ಬಂದರು ಸತ್ಯವಿಜಯಾರ್ಯ 1ಸಂಸ್ಥಾನ ಮೂರ್ತಿಸ್ಥ ಹರೀಪೂಜೆ ವೈಭವವುನಿತ್ಯಪ್ರವಚನ ಪಾಠ ಕೀರ್ತನೆ ಏನೆಂಬೆಸತ್ಯವಿಜಯರು ಯುಕ್ತ ಕಾಲದಲಿ ದೇಹಅದಾರುಢ್ಯ ಹೊಂದಿದರು ರಾಜಗೆ ಹೇಳಿದರು 2ತಮ್ಮ ತರುವಾಯ ಸಂಸ್ಥಾನ ಸರ್ವಾಡಳಿತಶ್ರೀಮನೋಹರ ಹರಿಪ್ರಿಯರು ಸತ್ಯವರ್ಯಸುಮನೋಹರ ಸತ್ಯಪ್ರಿಯ ತೀರ್ಥ ನಾಮದಲಿರಮಾರಮಣನ ಸೇವೆಗೆ ವಹಿಸಬೇಕೆಂದು 3ಆದ ಕಾರಣ ಆ ಸ್ವಾಮಿಗಳ ಕರೆತರಿಸಿಭಕ್ತಿ ವಿನಯದಿ ಮಠವ ಒಪ್ಪಿಸಬೇಕೆಂದುಹಿತದಿ ಆಜ್ಞಾಪಿಸಿ ಹರಿಪುರಯೈದಿದರುಚೈತ್ರ ಕೃಷ್ಣ ಪುಣ್ಯದಿನ ಏಕಾದಶಿ ದ್ವಾದಶಿಲಿ 4ಆರಣೀರಾಜನು ಸತ್ಯವರ್ಯ ತೀರ್ಥರಲಿಅರಿಕೆ ಮಾಡಿ ಸ್ವಾಮಿಗಳು ಕೆಲವು ದಿನಮೇಲ್ಆರಣಿಗೆ ಪೋದರು ಶ್ರೀಮಠದ ಆಡಳಿತಹರಿಪ್ರೀತಿ ಸೇವೆಗೆ ಕೊಂಡರು ತಾವು5ಮೊದಲೇವೆ ಶ್ರೀ ಸತ್ಯವರ್ಯ ತೀರ್ಥರ ಮಠಸಂಸ್ಥಾನ ವೈಭವದಿ ಪ್ರಕಾಶಿಸುತ್ತಿತ್ತುಸತ್ಯ ವಿಜಯರ ಕೋರಿಕೆಯಂತೆ ಈವಾಗಹೊಂದಿದರು ಸತ್ಯವಿಜಯರ ಸಂಸ್ಥಾನ 6ಸತ್ಯಾಭಿನವರ ಪದ್ಧತಿಯಲ್ಲಿ ಶ್ರೀಮಠಸತ್ಯಪೂರ್ಣ ಸತ್ಯವಿಜಯರಿಂದ ವೈಭವದಿಇದ್ದ ಆಮಠ ಪೀಠ ಅಲಂಕರಿಸಿದರೀಗಸತ್ಯವರ್ಯ ವೈರಾಗ್ಯ ನಿಧಿಯು ಶ್ರೀಮಾನ್ 7ಬಾದರಾಯಣರಾಮ ಯದುಪತಿಯ ಸೇವೆಗೆಪ್ರೀತಿಗೆ ಸ್ವಾಮಿಗಳು ಮಠವನ್ನು ಹೊಂದಿಸತ್ಯವಿಜಯರು ಕೋರಿದಂತೆ ತಮ್ಮಯನಾಮಸತ್ಯಪ್ರಿಯತೀರ್ಥರೆಂದು ಕೊಂಡರು ಮುದದಿ 8ಧನ ಸತ್ಯಪ್ರಿಯ ತೀರ್ಥರುವಿಜೃಂಭಣೆಯಿಂದ ಚರಿಸಿ ಪುರಜನರ್ಗೂರಾಜನಿಗೂ ಫಲ ಮಂತ್ರಾಕ್ಷತೆಗಳ ಕೊಟ್ಟುರಾಜ ಮಾರ್ಯಾದೆ ಕೊಂಡುಹೊರಟರು ಅಲ್ಲಿಂದ 9ಆಂಧ್ರದೇಶದ ಕಡಪ ಉತ್ತರ ಕರ್ನಾಟಕಮತ್ತು ದಕ್ಷಿಣ ಕರ್ನಾಟಕ ಶ್ರೀರಂಗಇಂಥ ಸ್ಥಳಗಳಲ್ಲಿ ಸಂಚಾರ ಮಾಡುತ್ತಾಹಿತದಿ ಅನುಗ್ರಹಿಸಿದರು ಭಕ್ತವೃಂದಕ್ಕೆ 10ಪೀತಾಸಿಂಗ ರಾಘವಜಿ ಮುರಾರಿ ಮೊದಲಾದಕೃತಜÕ ಜನ ಪ್ರಮುಖರ ಭಕ್ತಿ ಯುತವಾದಭೂದಾನ ಗ್ರಾಮದಾನ ಮಾಡಿದ್ದ ಸ್ವೀಕರಿಸಿಶ್ರೀದನಿಗೆ ಅರ್ಪಿಸುತ ಒಲಿದರು ಸಜ್ಜನಕೆ 11ರಾಯಚೂರು ಹರಿಯಾಚಾರ್ಯರೆಂಬ ವೈಷ್ಣವಕಾಯವಾಙ್ಮನ ಇದ್ದ ಬ್ರಾಹ್ಮಣ ದಂಪತಿಯುಪ್ರಿಯ ವತ್ಸರುಗಳೊಡೆ ಸ್ವಾಮಿಗಳ ಕಡೆ ಬಂದುವಿನಯದಿ ನಮಿಸಿ ನಿಂತರು ಮಠದಲ್ಲಿ 12ಹರಿಯಾಚಾರ್ಯರ ಮಕ್ಕಳಲಿ ರಾಮಾರ್ಯಸ್ಫುರದ್ವರ್ಚಸ್ ಯುತ ಬಹುಚೂಟಿಯಾದ ಮಗನುಶ್ರೀ ಶ್ರೀಗಳು ಆ ಹುಡುಗಗೆ ಮಠದಲ್ಲಿಶಾಸ್ತ್ರಾಭ್ಯಾಸಾದಿಗಳ ಒದಗಿಸಿದರು 13ಕಾಲಕ್ರಮದಲ್ಲಿ ವಟುಗೆ ವಿವಾಹ ಮಾಡಿದರುಮಕ್ಕಳು ರಾಮಚಾರ್ಯರಿಗೆ ಎರಡುಮಾಲೋಲ ಇಚ್ಛೆಯಿಂ ಸ್ವಾಮಿಗಳು ದಕ್ಷಿಣಸ್ಥಳ ಯಾತ್ರೆ ಗೈದರು ಸೇತು ಸಮೀಪ 14ಮಾನಾಮಧುರೆಯ ವೇಗವತೀ ತೀರವುತನ್ನ ಮಠವನ್ನು ಸ್ಥಾಪಿಸಿದರು ಅಲ್ಲಿಘನಮಹಾ ಸೂರಿಯು ರಾಮಚಾರ್ಯರನ್ನತನ್ನ ಸಮೀಪದಲ್ಲೇ ನಿಲ್ಲಿಸಿದರು 15ಬಹು ವರ್ಷ ಸಂನ್ಯಾಸ ರತ್ನರಾಗಿ ಬೆಳಗಿವಹಿಸಿ ಸಂಸ್ಥಾನವ ಏಳು ವರ್ಷಶ್ರೀಹರಿಗೆ ಪ್ರಿಯರಾಮಾಚಾರ್ಯರಿಗೆ ಸಂನ್ಯಾಸವಿಹಿತದಿ ಇತ್ತರು ಶ್ರೀ ಸ್ವಾಮಿಗಳು 16ಸತ್ಯಪ್ರಿಯ ಗುರುವರ್ಯ ತಮ್ಮ ಪ್ರಿಯ ಶಿಷ್ಯರಿಗೆಸತ್ಯಬೋಧ ತೀರ್ಥವೆಂಬ ಸಂನ್ಯಾಸ ನಾಮವನ್ನಿತ್ತುಚೈತ್ರ ಶುದ್ಧ ಹದಿಮೂರನೆ ಪುಣ್ಯ ದಿನದಿಯದುಪತಿಯ ಧ್ಯಾನಿಸುತ ಹರಿಪುರಯೈದಿದರು 17ಮತ್ತೊಂದು ಅಂಶದಲಿ ಬೃಂದಾವನದಲ್ಲಿನಿಂತಿಹರು ಅಶ್ವಾಸ್ಯಧ್ಯಾನಪರರಾಗಿಹಿತದಿ ಕೊಡುತಿಹರು ವಾಂಛಿತವ ಶರಣರಿಗೆಸದಾನಮೋ ಮಾಂಪಾಹಿ ಗುರುವರ್ಯ ಶರಣು 18ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 19 ಪ
--------------
ಪ್ರಸನ್ನ ಶ್ರೀನಿವಾಸದಾಸರು