ಒಟ್ಟು 625 ಕಡೆಗಳಲ್ಲಿ , 85 ದಾಸರು , 543 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೌರಿ ಗಜಮುಖನ ಮಾತೆ | ಗುಣಗಣ ಭರಿತೆ ಶೌರಿ ಸಖನಂಗಸಂಗೀ ಸಂಪೂರ್ತೆ ಪ ಶುಭ ತನು ವಾರಿಜನೇತ್ರಳೆ ವೀರಸತಿಯೆ ದಯವಾರಿಧಿ ಪಾಲಿಸು ಅ.ಪ. ತುಂಗ ಮಂಗಳೇ ದೇವಿ | ಕಲಿಗೆ ಭೈರವೀ ರಂಗಾನ ನವವಿಧಿ ಭಕ್ತಿ ಸಂಗ ನೀಡುವಿ ಹಿಂಗದೆ ಪೊರಿಯೆ ತಾಯೇ | ಭಕ್ತ ಸಂಜೀವೆ ತಿಂಗಳ ಮುಖಿವರಗರಿವೆ | ನಮ್ಮ ಶಂಭುವೆ ಭಂಗಬಟ್ಟೇನು ನುಂಗುವ ಭವದೊಳು ಮಂಗಳ ಕರುಣಾಪಾಂಗದಿ ನೋಡೆನ್ನ ಭವ ಭಯ ಗಂಗೆಯ ಧರನಂಘ್ರಿ- ಭೃಂಗಳೆ ಬೋದಯಾಕಂಗಳೆ ಕರುಣಿಸು 1 ಇಂದ್ರಾದಿ ಸುರಗುರುವೆ | ದೇವ ತರುವೆ ಪರಿ ನಿನ್ನ ಬೇಡುವೆ ಕುಂದನೆಣಿಸದಲೆ ಶಿವ ಶಂಕರಿ ಕಾವೆ ಸಂದೇಹ ಕಳಿ ವಿಭುವೆ | ವೀರಜತನುವೆ ನೊಂದವನಾ ಮ್ಯಾಲ್ಹೊಂದಿಸು ಕರುಣವ ಮಂದಸ್ಮಿತೆ ಮುಕುಂದನ ಮನದಲಿ ವಂದಿಸು ಅನಿಮಿತ್ತ ಬಂಧುವೆ ರಕ್ಷಿಸು 2 ಕಸ್ತೂರಿ ಕುಂಕುಮ ಫಾಲೆ | ರನ್ನಾದ ಓಲೆ ವಸ್ತುಗಳಿಟ್ಟ ಹಿಮವಂತನ ಬಾಲೆ ಶಿಸ್ತಿನ ಶುಭ್ರಾಂಬರಧಾರೆ ವನಮಾಲೆ ಮಸ್ತಕದ ಕಿರೀಟ ವದನೆ ತಾಂಬೂಲೆ ಸಿರಿ ಹಸ್ತಗಳಿಟ್ಟೆನ್ನ ದುಸ್ತರದ ಹಾದಿಗಳಸ್ತಮಮಾಳ್ಪುದು ವಿಸ್ತರ ಮಹಿಮ ಜಯೇಶವಿಠಲ ವಸ್ತುವ ನೀಡಮ್ಮ ಹಸ್ತಿಯ ಗಮನೆ 3
--------------
ಜಯೇಶವಿಠಲ
ಗೌರೀಶ ಮೃತ್ಯುಂಜಯನುತ ಪಾಲಯ ಗೌರೀಶ ಮೃತ್ಯುಂಜಯ ಪ ಸುಮಶರನಾಶ ಸುಮನರಪೋಷ ಶಮೆಶಾಂತಿದಯಭೂತೇಶ 1 ಶಂಕರ ಶಶಿಧರ ಕಿಂಕರ ಪ್ರಿಯಕರ ಶಂಕರಿಮನೋಹರ 2 ಉಮೆ ಪ್ರಿಯನಾಥ ಅಮಿತವರದಾತ ಅಮರಾದಿಸುರಾರ್ಚಿತ 3 ವರಮಹಲಿಂಗ ಪರಿಭವಭಂಗ ಪರತರ ಪಾವನಾಂಗ 4 ಗಜಚರ್ಮಾಂಬರ ಭುಜಗಾಲಂಕಾರ ಸುಜನಾತ್ಮ ಸುಖಂಕರ 5 ಪುರತ್ರಯ ಸಂಹರ ಪರಿಪಕ್ವರಾಧಾರ ನಿರಂಜನ ನಿರಾಕಾರ 6 ಕೆಂಡನಯನ ರುಂಡಮಾಲನೆ ಹರಣ 7 ಬೇಡುವೆನಭವ ಕಾಡದೆ ಪರಶಿವ ನೀಡು ಎನ್ನಗೆ ವರವ 8 ಭೂಮಿತ್ರಯಕೆ ಘನಸ್ವಾಮಿ ಶ್ರೀರಾಮನ ನಾಮ ಪಾಲಿಸು ಪಾವನ 9
--------------
ರಾಮದಾಸರು
ಚಂದಮ್ಮ ಬಲು ಚೆಂದಮ್ಮ ಗೋ ವಿಂದನ ದಾಸರ ಸಂಗಮ್ಮ ಪ ಪಾದ ಪದ್ಮಮ್ಮ ನೀ ನ್ಹೊಂದಿ ಭಜಿಸು ಸದಾನಂದಮ್ಮ ಅ.ಪ ಸಂದೇಹ ಕಡಿಯಂತರಂಗಮ್ಮ ಮು ಕ್ಕುಂದನತಿಳಿ ನಿಜಲಿಂಗಮ್ಮ ನಿಂದೆ ಬಳಸದಿರು ತುಂಗಮ್ಮ ಭವ ಬಂಧವು ನಿನಗಿಲ್ಲ ಗಂಗಮ್ಮ 1 ಸಾಧಿಸು ನಿಜದೃಢ ತುಳಸಮ್ಮ ಸಂ ಪಾದಿಸು ನಿಜಜ್ಞಾನ ಶರಣಮ್ಮ ಸಾಧುಜನಕೆ ಬಾಗು ಸುಶೀಲಮ್ಮ ಪರ ಸಾಧನೆ ನಿನ್ನಗೆ ಸರಸಮ್ಮ2 ಕಾಮಿತಕಳಿ ಭಾಗ್ಯಲಕ್ಷಮ್ಮ ನೀ ತಾಮಸತೊಳಿ ಮನ ಸೀತಮ್ಮ ಸ್ವಾಮಿಧ್ಯಾನಪಿಡಿ ಸತ್ಯಮ್ಮ ಶ್ರೀ ರಾಮನ ನಂಬುನೀ ಮುಕ್ತ್ಯಮ್ಮ 3
--------------
ರಾಮದಾಸರು
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ಚದುರೇ ವೃಂದಾವನದೊಳು ನಿಂತಿಹನ್ಯಾರೇ ಪೇಳಮ್ಮಯ್ಯಾ ಪ ಸತ್ ಸಖಿಯರಿಗುಣಿಸುವ ಜಾರಚೋರ ಶ್ರೀಕೃಷ್ಣ ಕಾಣಮ್ಮಾ ಅ.ಪ. ನೀರೇ ನೋಡೋಣು ಬನ್ನಿರಿ ಎಂದುಈ ಬಾಲೇರು ಗೋಪಾಲನ ಗಾನಕೆ ಬಂದು ಬೆದರುತ ಮನದೊಳು ಮದನಾಟಕೆ ನಿಂದೂಮೋರೆಯ ತಿರುವುತ ಅಂದು ಮಾರನಯ್ಯ ತವ ಚಾರುಧರಾಮೃತ ಸೂರೆಗೈಯ್ಯೋ ಸದ್ಧೀರಿಯರೊ ನಾವು 1 ಬಾಲೆ ನಿನ್ನಾಳುವ ದಾರಿ ಬ್ಯಾರಿಲ್ಲಾ ಕಾಲಬಂದೊದಗದು ಕೇಳೆನ್ನ ಸೊಲ್ಲ ಮತ್ತಾವದೊ ತಂಗಾಳಿ ಬೀಸುವ ವ್ಯಾಳೆ ಬಂತಲ್ಲಾ ಮೋಹಿಸಿ ಬಂದೆವೊ ನಲ್ಲಾ ಫುಲ್ಲಲೋಚನ ಮೃದು ಮಲ್ಲಿಗೆ ಮುಡಿಸಿ ಮೆಲ್ಲಗೆ ಮರ್ದಿಸು ಮೃದು ಚಲ್ವಯರುಹರೆ 2 ಸಿಂಧೂ ರಾಜಕುಮಾರಿಯ ರಮಣ ಶರದಿಂದೂ ಮಂಡಲ ಮುಟ್ಟುತಲಿದೆ ಧ್ವನಿ ಹಸನಾ ಶಂಭೂರ ಶತ್ರಾದಿಗಳುಗರೆವರು ಪೂಮಳಿ ನಾನಾ ಗಣಶಿರಿಸುತ ಮರುಳಾಗಿ ಪೂ ಬಾಣಾನಾಟವನೋಡುತ ನಾರಿಯ ತ್ಯಜಿಸದೆ ಪರನಾರಿಯ ರೂಪದಿಂದ್ರಮಿಪ ಮುರಾರೇ 3 ಸುರನದಿ ಸ್ಮರಸುತ ರಾಣಿ ನಾಟ್ಯವನಾಡುತ ನವನವ ಪಾಡುತ ದಿದ್ಧಿದ್ಧಿಮಿಕಿಟ ತಾಂ ತಾಳದಿ ನಲಿಯುತ 4 ಶಶಿಸೂರ್ಯನೆಳಸನ್ನಿಭ ಪ್ರಖನಕರಾ ಸರಸೀಜಾದಳ ನುತ ಭಾವಿ ಸಮೀರಾ ಷಟ್ ಶತ ಬಂದು ವಿಂಶತಿಹಂ ಸಾಖ್ಯ ಮಂತ್ರ ಸಹಸ್ತಾದಿಂದ ಸೇವಿಪ ಮಧ್ವಮಧೀಶನ ಲೀಲೆಯನೆನಿಪರ ಬಂದು ತೋರುವಾತ ತಂದೆವರದಗೋಪಾಲವಿಠಲನು 5
--------------
ತಂದೆವರದಗೋಪಾಲವಿಠಲರು
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಜÉೂೀಜೋ ಜೋಜೋ ಜೋ ಮುಖ್ಯಪ್ರಾಣ ಜÉೂೀಜೋ [ಮಲೆವರ] ಗಂಟಲಗಾಣ ಪ. ಜÉೂೀಜೋ ರಾಕ್ಷಸಶಿಕ್ಷ ಕಲ್ಯಾಣ ಜÉೂೀಜೋ ಸಕಲವಿದ್ಯಾ ಪ್ರವೀಣ ಅ.ಪ. ಆ ಜಗದಲಿ ನೀ ಬಾಲಬ್ರಹ್ಮಚಾರಿ ಸೋಜಿಗದಲಿ ಕಪಿ ರಾಜ್ಯವನಾಳಿ ತೇಜಮುತ್ತಿನ ಕವಚಕುಂಡಲಧಾರಿ ಪೂಜಿಪರ ಪಾಲಿಪೆ ಸುಜನರುಪಕಾರಿ 1 ಭೂಮಿ ಭಾರವನಿಳಿಸಿದ ಭೀಮ ಕಾಮಿ ಕೀಚಕನ ಕುಟ್ಟಿ ರಣಧಾಮ ಭಾಮಿನಿ ದ್ರೌಪದಿ ಕಷ್ಟ ನಿರ್ಧೂಮ ಕಾಮಿತಾರ್ಥವನೀವÀ ಕಲ್ಪತರು ಭೀಮ 2 ಸೌಂದರ್ಯರೂಪದ ಶ್ರೀಮದಾನಂದ ತಂದೆ ಹಯವದನನ ಮೋಹದ ಕಂದ ಬಂದು ಉಡುಪಿಯಲಿ ನೆಲೆಯಾಗಿ ನಿಂದ ವಂದಿಸುವೆ ನಿದ್ರ್ರೆಗೈ ಹರಿಧ್ಯಾನದಿಂದ 3
--------------
ವಾದಿರಾಜ
ಜಗದಾದಿ ನಮಿತ ಆಗಮಾತೀತ ಖಗವರಗಮಿತ ಭಾಗವತಪ್ರೀತ ಸುಚರಿತ ಪ ಭವ ಬಾಧ್ಹರಣ ಜನನಮರಣ ಭಯನಿವಾರಣ ದಯಸುಸದನ ಭುವಿಜಾರಮಣ ಭಕ್ತೋದ್ಧಾರಣ ವಿಮಲಜ್ಞಾನ ಕರುಣಿಸು 1 ಅಮಿತಲೀಲ ಕುಜನಕಾಲ ರಮೆಯಲೋಲ ಶರಣುಶೀಲ ಕೌಸ್ತುಭಮಾಲ ಸುಮನಪಾಲ ಎನ್ನ ಭ್ರಮಜಾಲ ಛೇದಿಸು 2 ಭೃತ್ಯಲಲಾಮ ಶಕ್ತರಕಾಮ ಪೂರ್ತಿನಿಸ್ಸೀಮ ಕರ್ತುಶ್ರೀಭೌಮ ನಿತ್ಯನಿರಾಮ ಜಗದೋದ್ದಾಮ ಮುಕ್ತಿಪದ ಸೋಮ ಶ್ರೀರಾಮ 3
--------------
ರಾಮದಾಸರು
ಜಯ ಜಯ ಯಾಧವನಾಥ ಮುರಾರಿ ಜಯ ಜಯ ಶ್ರೀವಧುರಮಣ ಶ್ರೀ ಹರಿ ಪ ದೀನೊದ್ದರ ಸಗಟಾಸುರದಮನಾ ಆನಂದ ಮೂರುತಿ ಫಣಿವರ ಶಯನಾ 1 ಕರುಣಾ ಕರಗಿರಿಧರ ಸರ್ವೇಶಾ ಶರಣಾಗತ ವತ್ಸಲ ಪಯೋನಿಧಿವಾಸಾ 2 ಕಂಬುಕಂದರ ಕಮಲಳಾಕ್ಷಾ ಅಂಬುಜ ಭವನುತಗೋಗೋರಕ್ಷಾ 3 ಶಂಬರ ಮಥನ ಜನಕ ಮಹಾ ಮಹಿಮಾ ಜಂಭಭೇದಿಸುತ ಸಖಘನ ಶಾಮಾ 4 ಪೀತಾಂಬರಧರ ಕೃಷ್ಣ ಶ್ರೀಧರಾ ಮಾತುಳನಾಶನ ಕೃತಭೂಧರಾ 5 ಗುರುಮಹಿಪತಿ ಸುತ ಜೀವನರಾಮಾ ಪರಮಾನಂದ ಕಾಯಕ ಗುಣಧಾಮಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಜಯ ಶ್ರೀ ಹಯವದನ ಜಯ ಜಯ ಶ್ರೀ ಖಳದಮನ ಜಯತು ಸಜ್ಜನಸದನ ಸಕಲ ಆಭರಣ ಪ. ರಾಘವಾನ್ವಯಸೋಮ ಖರನಿಶಾಚರ ಭೀಮ ಧಾಮ ಸೀತಾಭಿರಾಮ ಕಾಮಿನೀಜನಕಾಮ ಶರಣಪಾಲಕ ಧಾಮ ಸ್ವಬಲ ಪಾಲಿತ ರಾಮ ಪಟ್ಟಾಭಿರಾಮ 1 ಯಾದವಾನ್ವಯಜಾತ ವರಸತ್ಯಭಾಮೇತ ವ್ಯಾಸರಾಯಸನ್ನುತ ಸಕಲವಾಗ್ವಿದಿತ ಕಂಜಾಸನಾದಿಸುತ ಕಮಲಮಾರ್ಗಣಪಿತ ಸರಸರುಕ್ಷ್ಮಿಣೀಸಕಲೇಷ್ಟದಾತ2 ವಾಸಿಷ್ಠಕುಲವಾರ್ಧಿ ಸತ್ಕಳಾಧರರೂಪ ಮಧ್ವಾರ್ಯ ಸದ್ರೂಪ ದಳಿತÀಬಹುತಾಪ ಮಾಯಿಜನ [ಧೃ] ತಕೋಪ ಕೃತಸದ್ವೀಕ್ಷೋ[ದ್ದೀ]ಪ ಸೃತಾನಿ ಸತ್ಸುಖರೂಪ ಹಯವದನ ರೂಪ 3
--------------
ವಾದಿರಾಜ
ಜಯತೀರ್ಥ ಗುರುರಾಯ ಕವಿಗೇಯಾ ಪಾದ ದ್ವಯಕಭಿನಮಿಸುವೆ ಶುಭಕಾಯ ಪ ಪಾದ ಪಾದ ದ್ವಂದ್ವಾರಾಧಕರ ಸಂಬಂಧಿಗ ನರ ನೆಂದು ಪಾಲಿಪುದು ಕಾರುಣ್ಯ ಸಾಗರ ಮಂದ ನಾನು ಕರ್ಮಂದಿಗಳರಸ ಮು ಕುಂದನ ತೋರೋ ಮನಮಂದಿರದಲ್ಲಿ 1 ಹರಿಪಾದಾಂಬುಜಾಸಕ್ತ ನಿಜ ಭಕ್ತ ಜನರಾ ಪರಿಪಾಲಿಪ ಸಮರ್ಥ ಅಕ್ಷೋಭ್ಯ ತೀರ್ಥ ಕರಕಮಲ ಸಂಜಾತಾನಂದ ದಾತಾ ಪರÀಮಹಂಸ ಕುಲವರನೆ ವಂದಿಸುವೆ ಕರುಣದಿಂದಲೆನಗರುಪು ಸುತತ್ವವ 2 ಕಾಮಿತ ಫಲದಾತಾ ಜಗನ್ನಾಥ ವಿಠ್ಠಲ ಸ್ವಾಮಿ ಪರಮ ದೂತಾ ಸುವಿಖ್ಯಾತಾ ಶ್ರೀ ಮಧ್ವ ಮತಾಂಬರುಹ ಪ್ರದ್ಯೋತಾ ತಾಮಸಗಳೆದೀ ಮಹೀಸುರರ ಮ ಹಾಮಹಿತರ ಮಾಡ್ದೆ ಮುನಿವರ್ಯಾ 3
--------------
ಜಗನ್ನಾಥದಾಸರು
ಜಯತು ಜಯತು ಜಯತು ಸತ್ಯ ಸನಾಥ ಜಯತು ನಿಜ ನಿರ್ಭೀತಜಯತು ಸದ್ಗುರುನಾಥ ಜಯತು ಅವಧೂತ ಜಯತು ಜಯತು ಪ ನಿತ್ಯ ನಿರ್ವಿಕಾರ1 ಪಾಲಿಸಗಣಿತ ಮಹಿಮ ಪಾಲಿಸಕ್ಷಯ ರೂಪಪಾಲಿಸೈ ನಿಷ್ಕಾಮ ನಿರ್ವಿಕಲ್ಪಪಾಲಿಸನಂತ ಪರಮಾತ್ಮ ಹರ ನಿರ್ಲೇಪಪಾಲಿಸೈ ಚಿದ್ರೂಪ ಸತ್ಯ ಸಂಕಲ್ಪ 2 ದುರಿತ ದಾವಾಗ್ನಿ ನಿಜ ಬಾಧಶರಣು ಭಕುತರ ವಂದ್ಯ ರಾಜಯೋಗೀಂದ್ರ3 ವಂದಿಪೆ ಚಿದಂಬರ ನಿರಾಮಯ ನಿರಪೇಕ್ಷಾವಂದಿಸುವೆ ಆರೂಢ ಪರಮ ಆಧ್ಯಕ್ಷವಂದಿಸುವೆ ನಿಶ್ಚಲ ಪರಬ್ರಹ್ಮ ಘನರಕ್ಷಾವಂದಿಸುವೆ ಗುಣಾತೀತ ದಕ್ಷ ನಿಜ ಮೋಕ್ಷ 4 ನಿರಂಜನ ನಿರಾಧಾರ ನಿರ್ಲಿಪ್ತಗುರು ಚಿದಾನಂದ ಅವಧೂತ ಪ್ರಖ್ಯಾತ 5
--------------
ಚಿದಾನಂದ ಅವಧೂತರು
ಜಯದೇವ ಜಯದೇವ ಜಯ ರಾಘವ ರಾಮಾ ದಯದಲಿಯಚ್ಚರನೀವದು ಸ್ಮರಿಸಲುತವನಾಮಾ ಪ ಹಭವ ಭವಮುಖರಮೊರೆಯನು ಕೇಳುತಲಿ ದಶರಥ ಕೌಲಸ್ಯರಾ ಬಸಿರಿಂದುದಿಸುತಲಿ ರುಷಿ ಮುಕರಕ್ಷಿಸಿ ತಾಟಕಿ ದೇಹದಿಬಿಡಿಸುತಲಿ ವಸುಧಿಲಿ ಶಿಲೆಯನು ಪಾದದದಿಮೆಟ್ಯುದ್ಧರಿಸುತಲಿ 1 ಹರುಷದಿ ಕೌಶಿಕನೊಡನೆ ಮಿಥಿಲೆಗೆ ಪೋಗುತಲಿ ಹರದು ಮುರಿದು ಜನಕಜೆ ಮಾಲೆಯ ಧರಿಸುತಲಿ ಬರಲಾನಂದದಿ ಭೃಗುಪತಿ ದಶರಥ ದರಶನ ಪಾಡುತಲಿ ಅರಸುತನಕ ಕೈಕೆಯು ಬ್ಯಾಡೆನೆ ನಡೆದೈತ್ವರಿಲಿ 2 ವನದಲಿ ಭಂಗಿಸಿಶೂರ್ಪನಖಿಖರ ದೂಶಣರಾ ಅನುವರ ಕಾಂಚನ ಮೃಗವಾ ಬೆಂಬೆತ್ತಲು ದೂರಾ ಜನಕಜೆಯಾಕೃತಿ ವೈಯ್ಯಲು ಕಪಟದಿದಶಶಿರಾ ಅನುಭಜಟಾಯುವಿನಿಂದಲಿ ಕೆಳಿ ನಡದೆ ಧೀರಾ 3 ಪಥದಲಿ ಮುರಿದುಕಬಂಧವ ಶಬರಿಗೆ ಗತಿನೀಡಿ ಪ್ರಥಮದಿ ಹನುಮನ ಕಂಡು ವಾಲಿಯ ಹತಮಾಡಿ ರತಿಯಲಿ ಸುಗ್ರೀವಜಾಂಭವ ಸೈನ್ಯದ ಲೋಡಗೂಡಿ ಕ್ಷಿತಿಜೆಯಾ ಸುದ್ದಿಯತರಿಸಿ ನಡೆದೈನಲಿದಾಡಿ 4 ಸೇತುವೆ ಗಟ್ಟಿಸಿ ಶರಣವ ಬರಲು ವಿಭೀಷಣನು ಭೀತಿಯ ಹಾರಿಸಿಸೈನ್ಯದಿ ದಾಟಿದೆ ಶರಧಿಯನು ನೀತಿಯ ತಪ್ಪಿದ ರಾವಣ ಕುಂಭಶ್ರವಣರನು ಖ್ಯಾತಿಲಿ ಮಡಹಿದೆ ಅವರಾಸಂತತಿ ಸಂಪದನು 5 ಶರಣಗಸ್ಥಿತಪರಪದವಿತ್ತು ದೇವರ ಶೆರೆಬಿಡಿಸಿ ಮರಳಿದಯೋಧ್ಯಕಪುಷ್ಪಕದಿಂ ಸೀತೆಯವರೆಸೀ ಮೆರೆವತ್ಸಜರಜನನಿಯರ ಸಕಲರಸುಖಬಡಿಸಿ ಸುರಮುನಿಜನರನುಸಲಹಿದೈ ಸಾಮ್ರಾಜ್ಯವನು 6 ನಾಮದಮಹಿಮೆ ಹೊಗಳಲು ಶೃತಿಗಳಿಗಳವಲ್ಲಾ ಪ್ರೇಮದಿಸವಿಸದುಂಬುವ ಶಿವ ಸೀತಾಬಲ್ಲಾ ನೇಮದಿಸುರನಂದಾನ್ನರ ಬವ ತರಿಸಿದರಲ್ಲಾ ಕಾಮಿತ ದಾಯಕ ಗುರುಮಹಿಪತಿ ಪ್ರಭುಶಿರಿನಲ್ಲಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಾಣ ನೀನಹುದೋ ಗುರುಮುಖ್ಯಪ್ರಾಣ ನೀನಹುದೊ ಪ ರಾಣಿ ಭಾರತೀ ರಮಣ ನಿನಗೆಣೆಕಾಣೆ ತ್ರಿಭುವನದೊಳಗೆ ಸರ್ವಪ್ರಾಣಿಗಳ ಹೃದಯದಲಿ ಮುಖ್ಯಪ್ರಾಣನೆಂದೆನಿಸಿದೆಯೊ ಧಿಟ್ಟ ಅ.ಪ ಧೀರ ನೀನಹುದೋ ವಾಯುಕುಮಾರ ನೀನಹುದೊಸಾರಿದವರ ಮನೋರಥಂಗಳಬಾರಿ ಬಾರಿಗೆ ಕೊಡುವೆನೆನುತಲಿಕ್ಷೀರನದಿ ತೀರದಲಿ ನೆಲೆಸಿಹಮಾರುತಾವತಾರ ಹನುಮ 1 ಧಿಟ್ಟ ನೀನಹುದೊ ಬೆಟ್ಟವ ತಂದಿಟ್ಟವ ನೀನಹುದೊರೆಟ್ಟೆ ಹಿಡಿದಕ್ಷಯ ಕುಮಾರನಕುಟ್ಟಿ ದೈತ್ಯರ ಕೆಡಹಿ ಬೇಗದಿಸುಟ್ಟು ಲಂಕೆಯ ಸೀತೆಗುಂಗುರಕೊಟ್ಟೆ ಜಗಜ್ಜಟ್ಟಿ ಹನುಮ2 ದುರಿತ ಮಾರ್ತಾಂಡ ನೀನಹುದೊಕುಂಡಲ ಕಿರಿಘಂಟೆ ಉಡಿಯಲಿಪೆಂಡೆ ನೂಪುರ ಕಾಲಲಂದಿಗೆತಂಡ ತಂಡದಿ ಕೃಷ್ಣನಂಘ್ರಿಪುಂಡರೀಕಕೆ ಕೈಯ ಮುಗಿದ 3
--------------
ವ್ಯಾಸರಾಯರು
ಜೀವಿಸು ಜಗದಿ ಬಾಲಕನೆ | ಚಿರಂಜೀವಿಯಾಗುತ ಪ ಚಿತ್ತಸುಶಿದ್ಧಿಯಿಂದಲಿ | ನಿತ್ಯಾನುಷ್ಟಾನ ಗೈಯುತಲಿ || ಸತ್ಯಸುಶೀಲನಾಗುತ | ಅತ್ಯಾನಂದವನನುಭವಿಸು 1 ಕ್ರೋಧಾದಿ ಗುಣವ ನಿಗ್ರಹಿಸಿ | ಸಾಧುಸತ್ವಥವಲಂಬಿಸಿ ಭೂದೈವರಾರಾಧಿಸುತ ನೀ | ಸಂಪದಿಸು ಪರಮಸತ್ಕೀರ್ತಿ 2 ಶ್ರೀಮಧ್ವಮತವಲಂಬಿಸಿ | ಪಾಮರ ಮತವ ಧಿಕ್ಕರಿಸಿ | ಈ ಮಹೀಮಂಡಲದಿ ಸುಖಿಸು ಜೀವಿಸು 3
--------------
ಶಾಮಸುಂದರ ವಿಠಲ