ಒಟ್ಟು 1912 ಕಡೆಗಳಲ್ಲಿ , 117 ದಾಸರು , 1558 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವಿರ್ಭವಿಸಿದಳಾಗ ಜಗನ್ಮಾತೆ | ಅಖಿಲಾಂಡ ವಿಖ್ಯಾತೆ ಪ ದೇವದಾನವರು ತಾವೊಡಗೂಡುತ ಲಾವುದಧಿಯಮದಿಸÀುತ್ತಿರಲದರೊಳು ಅ.ಪ ಪೊಳೆವ ಬೆರಳುಂಗುರ ಶೋಭಿತಪಾದ | ಧರಿಸಿದ ಸುರುಚಿರ ರುಳಿಯು ಅಂದಿಗೆ ಗೆಜ್ಜೆಯ ನಾದ | ಕಟಿಯಲಿ ನೋಡೆ ಥಳಥಳವಾದ ಶೃಂಗಾರವಾದ | ಒಡ್ಯಾಣದ ಮೋದ ದಲಿ ತಾನಿಟ್ಟಿಹ ಚಲುವಿಕೆಯಿಂದಲಿ ಸಲೆ ಬೆಳಗುತಲಿ ನಳಿನಲೋಚನೊಳು 1 ಕರಿರಾಜನ ಕರದಂತೆ ಒಪ್ಪುವ ಕರವು | ಬೆರಳಲಿ ನೋಡೆ ಪರಿಶೋಭಿಸುತಿಹ ಮಾಣಿಕ್ಯದುಂಗುರವು | ರಾರಾಜಿಸುವ ಹರಡಿ ಕಂಕಣಗಳು ಬಲು ಸುರುಚಿರವು | ಪರಿಕಿಸೆ ಸುಂದರವು ಪರಿ ಸರಗಳು ಕೊರಳೊಳು ಶೋಭಿಸೆ ತರಣಿ ಕಾಂತಿಯನು ತಿರಸ್ಕರಿಸುತ್ತಲಿ 2 ಮಂದಸ್ಮಿತ ಪರಿಶೋಭಿತ ಶುಭವದನ | ಆನಂದಸದನ ಕುಂದಕುಟ್ಮಲದಂತಿಹ ಸಮರದನ | ಸಂತಾಪಾರ್ದನ ಬಂಧುರ ಚಂಪಕ ನಾಸಿಕದ ಹದನ | ಏಂ ಪೇಳಲಿ ಅದನ ಮಂದರಾದ್ರಿಧರ ಕರಿಗಿರೀಶನ ಎಂದೆಂದಗಲದ ಸುಂದರಾಬ್ಜಮುಖಿ3
--------------
ವರಾವಾಣಿರಾಮರಾಯದಾಸರು
ಆವುದು ಸ್ಥಿರವೆಲೋ ಮನವೆ ಇದು ಮಾಯವು ಕಾಣೆಲೊ ಪ ಆವದು ಸ್ಥಿರವೆಲೋ ಮಾಯವಿದೆಲ್ಲವು ಭಾವದಿ ಕುದಿಯುತ ನೋಯುವಿ ಯಾಕೆಲೊ ಅ.ಪ ಅರ್ಥವೆಂಬುವುದೆಲ್ಲ ವ್ಯರ್ಥವು ಮೃತ್ಯು ತಿಳಿಯೆ ನಿಖಿಲ ಅರ್ತುವಿಚಾರಿಸು ಸಾರ್ಥಕವಾವುದು ಮರ್ತುಕೆಡದೆ ಭವನಿರ್ತದಿಂ ಗೆಲೆಯೆಲೊ 1 ಸತಿಸುತರಿವರೆಲ್ಲ ಹಿತವಿರಲತಿ ಸೇವಿಪರೆಲ್ಲ ಗತಿಸಲು ಭಾಗ್ಯವು ಹಿತದೋರಿದವರೇ ಅತಿಜರೆಯುತ ನಿನ್ನ ವ್ಯಥೆಯ ಬಡಿಪರೆಲೊ 2 ಒಂದಿನ್ಹೋಗ್ವುದಂತು ತಪ್ಪದು ನೋಯುವುದ್ಯಾಕಿಂತು ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಂಘ್ರಿಗಳಿಗ್ಹೊಂದಿ ನೀ ಸುಖಿಯಾಗೊ 3
--------------
ರಾಮದಾಸರು
ಆವೂರು ಈ ಊರು ಯಾವೂರು ಆದರೇನು ಪ ಕಾವೋರು ಶ್ರೀಹರಿ ಲೇಸಾಗಿ ಇರಲೂ ಅ.ಪ ನೀರಜನಾಭನ ಕಾಳಿಂಗ ಮಥನನ ಪಾರಿಜಾತವ ತಂದ ರುಕ್ಮಿಣಿ ಪತಿಯ ಸಾರುತ್ತ ಪಾಡುತ್ತ ಪೊಗಳುತ್ತಬೇಡುತ್ತ ಚರಣಾವ ನೆರೆನಂಬಿ ತಿರುಗುವ ದಾಸರಿಗೆ1 ಆರು ಆಳಿದರೇನು ಆರು ಅಳಿದರೇನು ಮಾರುವ ಧಾರಣಿ ಏರಿದರೇನು ಇಳಿದರೇನು ಊರೆಲ್ಲ ಎದುರಾದರೇನು ಹಿತವಾದರೇನು ಕರಿರಾಜವರದನ ಕೊನೇರಿ ವಾಸನ ಕರುಣವ ಪಡೆದವಗೆ 2 ಕಾಸು ಎಂದರೆ ಪ್ರಾಣ ಸಾಮಾನ್ಯಜನರಿಗೆ ಈ ಶರೀರವ ಕಷ್ಟದಿ ಬಿಡುವಾಗ ಬಾಹುದೈ ಪಾದ ಸೋಮಶೇಖರ ವಂದ್ಯ ಶೇಷಗಿರೀಶನ ದಾಸಾನು ಎಂತೆಂದು ಕುಣಿವವಗೆ 3 ಮೂರುಲೋಕದ ಅರಸು ಸಾರಂಗ ಪಾಣಿಯು ನೀರಜಭವಾಂಡ ಉದಯಕೆ ಕಾರಣ ಅಷ್ಟಕರ್ತ ಸಿರಿಪದ್ಮಜಾಸನ ವಂದ್ಯ ದೇವಾದಿದೇವನ ಮೀರಿ ನಡೆವುದುಂಟೆ ಈ ಚರಾಚರ ಜಗದೊಳು ಮನವೇ4 ಊರೆಲ್ಲನೆಂಟರು ಉಣಬಡಿಸುವರಿಲ್ಲ ಸಿರಿಯಿದ್ದಕಾಲಕ್ಕೆ ಎಲ್ಲರು ನೆಂಟರಯ್ಯ ಸಿರಿತನ ತಾ ತಪ್ಪಿ ಬಡತನ ಬಂದರೆ ನಡಿನಡಿಯೆಂಬರು 5 ಹರಿ ಊರು ನಮ್ಮೂರು ಹರಿವೋರು ನಮ್ಮೋರು ಹರಿನಾಮ ಬಂಧುವು ಹರಿನಾಮ ಬಳಗ ಹರಿಹರಿ ಎಂದರೆ ದುರಿತವು ಪರಿಹಾರ ಹರಿಗುರು ಚರಣವೆ ಪರಗತಿ ಸಾಧನ ಮನವೇ 6 ಕೋರಿ ಕೋರಿದ ವರವ ನೀಡುವ ಪ್ರಭುವು ಸಿರಿಜಯಮುನಿ ಹೃಸ್ಥವಾಯುಗ “ ಶ್ರೀ ಕೃಷ್ಣವಿಠಲಾ” ಸಾರಿದ ಜನರನು ಪೊರೆಯುವ ಕರುಣದಿ ನೆರೆನಂಬುಮನವೆ ಭಯಬೇಡ ಮನವೇ7
--------------
ಕೃಷ್ಣವಿಠಲದಾಸರು
ಆಶೆಯ ಬಿಡಿಸಿದ್ಯೋ ಎನ್ನಾ ಮುಂದೆ ವಾಸವಾಗದಂತೆ ಕಾಯೋ ಮೋಹನ್ನಾ ವಾಸುದೇವನೆ ನಿನ್ನ ಸ್ಮರಣೆಯೊಳಗೆ ಮನ ಸೂಸದಂತೆ ಸ್ಥಿರ ನಿಜದಲ್ಲಿ ನಿಲಿಸಯ್ಯಾ ಪ ಬೆಂಬಿಡದೆಲೆ ನಿಜದರಿವನ್ನು ಕೊಡುವಾ ಕುಂಭಿಣಿಯೊಳಗೆಲ್ಲಾ ನೀನಲ್ಲದೆ ಎನ್ನಾ ನಂಬಿಗೆ ಕೊಡುವವರ್ಯಾರೋ ನಾರಾಯಣಾ 1 ಬೆಂದೆನು ನಾ ಭವದೊಳಗೆ ಎನ್ನಾ ತಂದೆ ನೀ ಕಾಯೋ ನಿಜಪದದೊಳಗೆ ಹಿಂದಿನ ಪ್ರಾರಬ್ಧ ಬವಣೆಯ ತೀರಿಸಿ ಮುಂದೆ ನೀ ಸಲಹೊ ಪರಮಪುರುಷನೆ ಹರಿ 2 ವಾಸನೆ ಬಂಧವೇ ಜೀವಾ ನಿ ರ್ವಾಸನೆಯನು ಕೊಟ್ಟು ಸಲಹೊ ಮಾಧವಾ ಶೇಷಶಯನನೆ ನಿಜ ಧ್ಯಾನದೊಳಿರಿಸೆನ್ನಾ ಆಶೆಯನು ಸಲಿಸಯ್ಯಾ ಮುರಾರಿ 3 ಅನಂತ ಮಹಿಮಾ ಮೇಘಶ್ಯಾಮಾ ನಿಶ್ಚಿಂತ ನಿಜ ಶಾಂತಿ ಸ್ವಸುಖವೀವಾ ನಂತಪರಾಧವ ಕ್ಷಮಿಸೆನ್ನಾ ಗುರುವೇ 4
--------------
ಶಾಂತಿಬಾಯಿ
ಆಸೆ ಎಂಬೋ ನದಿ ಆಸೆ ಎಂಬೋ ನದಿಆಸೆ ಎಂಬೋ ನದಿಯಿರೆ ಮಹಾ-ತೃಷೆಯ ಆರು ದಾಟಲಳವಲ್ಲ ಪ ಮನೋರಥ ನೀರು ಮನೋರಥ ನೀರುಮನೋರಥ ನೀರು ಇರೆ ಮಹಾತೃಷೆ ಅಲೆಗಳಯ್ಯ 1 ಸುಳಿ ಮೋಹವೆಂಬೋ ಸುಳಿಮೋಹವೆಂಬಾ ಸುಳಿಯಿರೆ ಮಹಾತೊರೆ ಹರಿಯಯ್ಯಾ 2 ಸತಿ ಎಂಬಾ ಮೊಸಳೆಸತಿ ಎಂಬ ಮೊಸಳೆಯಿರೆ ಸುತರೆಂಬರು ಏಡಿಗಳಯ್ಯ 3 ಬಂಧಗಳು ಗ್ರಹ ಬಂಧುಗಳು ಗ್ರಹಬಂಧಗಳು ಗ್ರಹ ಇರೆ ಬಡಿದಾಟ ನೀರು ಗುಳ್ಳೆಯಯ್ಯ4 ಗುರು ದಯವೇ ನಾವೆ ಗುರುದಯವೇ ನಾವೆಗುರುದಯವೆ ನಾವೆಯಿರೆ ಗುರು ಚಿದಾನಂದನ ಸೇರಬೇಕಯ್ಯ 5
--------------
ಚಿದಾನಂದ ಅವಧೂತರು
ಆಸೆನೀಗೋ ಹೇಸಿಮನವೆ ಕೇಶವನಂಘ್ರಿ ದಾಸನಾಗೊ ಪ ಸಕಲಭೋಗಭಾಗ್ಯ ಬರುವ ಅಖಿಲ ಸುಖದು:ಖಂಗಳೆಲ್ಲ ಭಕುತಿದಾರ್ಯಗರ್ಪಿಸಿ ಹರಿ ಭಕುತಿಯಿಂದಪಮೃತ್ಯು ಗೆಲಿಯೊ 1 ವಂದನೆ ಸ್ತುತಿ ಮಾನ ಮನ್ನಣೆ ಬಂದು ಕುಂದು ನಿಂದೆಯೆಲ್ಲ ಮಂದರಾದ್ರಿಯ ನಿಲಯಗೆಂದಾ ನಂದದಿಂ ಭವಬಂಧ ಗೆಲಿಯೊ 2 ಪೊಡವಿಸುಖಕೆ ಮೋಹಿಸದೆ ನೀ ಕೆಡುವಕಾಯಮೋಹ ತೊಡೆದು ಒಡೆಯ ಶ್ರೀರಾಮನಂಘ್ರಿ ಕಮಲ ಧೃಢದಿ ಭಜಿಸಿ ಮುಕ್ತಿ ಪಿಡಿಯೊ 3
--------------
ರಾಮದಾಸರು
ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ ಪ. ಬಂಧುಬಳಗವ ಕಾಣೆ ಇಂದಿರೇಶನೆ ಭವದಿ ಬೆಂದು ನೊಂದೆನೊ ನಾನು ಸಿಂಧುಶಯನ ಬಂದ ಭಯಗಳ ಬಿಡಿಸಿ ನೀನೆ ಪಾಲಿಸದಿರಲು ಮಂದಮತಿಗೆ ಇನ್ನು ಮುಂದೆ ಗತಿ ಏನೊ 1 ಕಾಣದಲೆ ನಿನ್ನನು ಕಾತರಿಸುತಿದೆ ಮನವು ತ್ರಾಣಗೆಡÀುತಲಿ ಇಹುದೊ ಇಂದ್ರಿಯಗಳೆಲ್ಲ ಪ್ರಾಣಪದಕನೆ ಸ್ವಾಮಿ ಶ್ರೀನಿವಾಸನೆ ದೇವ ಜಾಣತನವಿದು ಸರಿಯೆ ಫಣಿಶಾಯಿಶಯನ 2 ಸಾಧನದ ಬಗೆಯರಿಯೆ ಸರ್ವಾಂತರ್ಯಾಮಿಯೆ ಮಾಧವನೆ ಕರುಣದಲಿ ಕಾಯಬೇಕೊ ಹಾದಿ ತೋರದೊ ಮುಂದೆ ಮುಂದಿನಾ ಸ್ಥಿತಿಯರಿಯೆ ಛೇದಿಸೊ ಅಜ್ಞಾನ ಹೇ ದಯಾನಿಧಿಯೆ 3 ಸರ್ವನಿಯಾಮಕನೆ ಸರ್ವಾಂತರ್ಯಾಮಿಯೆ ಸರ್ವರನು ಪೊರೆಯುವನೆ ಸರ್ವರಾಧೀಶ ಸರ್ವಕಾಲದಿ ಎನ್ನ ಹೃದಯದಲಿ ನೀ ತೋರೊ ಸರ್ವ ಸಾಕ್ಷಿಯೆ ಸತತ ಆನಂದವೀಯೊ 4 ಆನಂದಗಿರಿನಿಲಯ ಆನಂದಕಂದನೆ ಆನಂದ ಗೋಪಾಲಕೃಷ್ಣವಿಠ್ಠಲಾ ಆನಂದನಿಲಯ ಶ್ರೀ ಗುರುಗಳಂತರ್ಯಾಮಿ ನೀನಿಂದು ಸರ್ವತ್ರ ಕಾಯಬೇಕಯ್ಯ 5
--------------
ಅಂಬಾಬಾಯಿ
ಇಂದಿರಾ ಪಾಲಿಸು ಎನ್ನ ಇಂದಿರಾ ಪ ಇಂದಿರಾ ದೇವಿಯೆ ನಿನ್ನ | ಪಾದಪೊಂದಿದೆ ಸಲಹಬೇಕೆನ್ನಾ | ಆಹಕಂದರ್ಪ ಇಂದ್ರ ಫಣೀಂದ್ರ ಗರುಡ ಕಂದುಕಂಧರ ಬ್ರಹ್ಮಾದಿ ವಂದ್ಯಳೆ ಪಾಲಿಸು ಅ.ಪ. ಕೃತಿ ಶಾಂತಿ | ದುರ್ಗೆಭೂಮಿ ಶ್ರೀದೇವಿ ಜಯಂತಿ | ಲಕ್ಷ್ಮೀರಮೆ ದಕ್ಷಿಣೆ ಗುಣವಂತಿ | ಸತ್ಯಭಾಮೆ ರುಕ್ಮಿಣಿ ಮಹಾಕಾಂತಿ | ಆಹಈ ಮಹಾನಂತ ರೂಪ ನಾಮಗಳುಳ್ಳಕೋಮಲ ಗಾತ್ರಿಯೆ ಕಾಮಜನನಿ ಕಾಯೆ 1 ಶ್ರೀಭಾಗ ಮಹಾ ಪ್ರಳಯದಲ್ಲಿ | ಪದ್ಮನಾಭಾಗೆ ಬಹು ಭಕ್ತಿಯಲ್ಲಿ | ದಿವ್ಯಆಭರಣಗಳಾಕಾರದಲ್ಲಿ | ಮಿಕ್ಕವೈಭವನೇಕ ರೂಪಾದಲ್ಲಿ | ಆಹಸ್ವಾಭಿಮಾನದಿ ಬಹು ಶೋಭನ ಪೂಜೆಯಲಾಭಗಳೈದಿದ ಶೋಭನವಂತಳೆ 2 ದೇಶಕಾಲಾದಿಗಳಲ್ಲಿ | ಜೀವರಾಶಿ ವೇದಾಕ್ಷರದಲ್ಲಿ | ಇದ್ದುವಾಸುದೇವನ ಬಳಿಯಲ್ಲಿ | ಸರಿಸೂಸಿ ವ್ಯಾಪ್ತಿ ಸಮದಲ್ಲಿ | ಆಹಲೇಸಾಗಿ ಒಪ್ಪುತ್ತ ಈಶ ಕೋಟಿಯೊಳುವಾಸಾಳೆ ಎನ್ನಭಿಲಾಷೆ ಸಲ್ಲಿಸಬೇಕು3 ಭವ ಬಂಧಾ | ಆಹನೀನೆ ಕಳೆದು ದಿವ್ಯ ಜ್ಞಾನ ಭಕುತಿಯಿತ್ತುಪ್ರಾಣಪತಿಯ ಪಾದವನ್ನು ತೋರಿಸಬೇಕು 4 ನಿತ್ಯ ಭಾಗ್ಯವು ನಿನಗೊಂದೆ | ಅಲ್ಲರತ್ನಾಕರನು ನಿನ ತಂದೆ | ತಾಯಿರತ್ನಗರ್ಭಳು ಕೇಳು ಮುಂದೆ | ಪತಿಗತ್ಯಂತ ಪ್ರಿಯಳಾದೆ ಅಂದೆ | ಆಹಸತ್ಯಬೋಧರು ಮಾಳ್ಪ ಅತ್ಯಂತ ಪೂಜೆಯಿಂಯುಕ್ತೆ ಶಿರಿಯೆ ನಿನಗೆತ್ತ ಕತ್ತಲು ಕಾಣೆ 5 ಲೋಕ ಜನನಿಯು ಎಂದು ನಿನ್ನಾ | ಕೀರ್ತಿಸಾಕಲ್ಯವಾಗಿದೆ ಘನ್ನಾ | ಎನ್ನಸಾಕಲಾರದೆ ಬಿಡಲಿನ್ನಾ | ಮುಂದೆಯಾಕೆ ಭಜಿಸುವುದು ನಿನ್ನಾ | ಆಹಸಾಕಾರವಾಗಿನ್ನು ಬೇಕಾದ ವರಗಳನೀ ಕರುಣಿಸಿ ಎನ್ನ ಜೋಕೆ ಮಾಡಲಿ ಬೇಕು 6 ಆವ ಜನ್ಮದ ಪುಣ್ಯಫಲದಿ | ನಿನ್ನಸೇವೆ ದೊರಕಿತೊ ಈ ಕ್ಷಣದಿ | ಎನಗೀವ ಭವ್ಯ ಕೇಳು ಮನದಿ | ಆಹಶ್ರೀ ವ್ಯಾಸ ವಿಠಲನ್ನ ಸೇವಿಪ ಯತಿಗಳ ಸಹವಾಸವನೆ ಇತ್ತು ಭಾವ ಶುದ್ಧನ ಮಾಡು 7
--------------
ವ್ಯಾಸವಿಠ್ಠಲರು
ಇಂದಿರಾರಾಧ್ಯನೆ ಬಂದು ನಿಲ್ಲೊ ಪ ಇಂದೆನ್ನ ಸಲಹೊ ಮಂದನಾನೊಂದನರಿಯೆ ಏ- ನೆಂದು ಕರೆಯಲೋ ಗೊವಿಂದ ಅ.ಪ ಜಲದೊಳಾಡುವ-ಕಲ್ಲಹೊರುವ ಎಲ್ಲಕಾಡಿನೊಳಾಡುವ ಭಳಿರೆ ಎರಡಂಗವ ತಳೆವ ವನಳಿವಗೋವನೆ ಕಾಯ್ದ ಮರೆವ ನಿನ್ನಯ ರೂಪವಾ ಸಲಿಲ ಹೊಕ್ಕು ಅಸುರನ ಸಂಹರಿಸಿ ಕಲಕಿಶರಧಿಯ ಸುಧೆಯನು ತರಿಸಿ ನೆಲಗಳ್ಳನ ಮದವನೆ ಮರ್ದಿಸಿ ಚೆಲುವಚೆಳ್ಳುಗುರಿನಿಂದುದರವ ಛೇದಿಸಿ ಸುಲಭದಿಂದ ಶುಕ್ರನ ಕಣ್ಮರಿಸಿ ಬಲುಕೊಬ್ಬಿದ ಕ್ಷತ್ರಿಯರನೊರೆಸಿ ಶಿಲೆಯ ಮೆಟ್ಟಿ ಮುನಿಸತಿಯರನುದ್ಧರಿಸಿ ಲೀಲೆಯಿಂದ ವ್ರಜನಾರಿಯರೊಲಿಸಿ ಸಲೆದಿಗಂಬರರೂಪವ ಧರಿಸಿ ಮಾಧವ 1 ಜಲದೊಳು ನಿಂದು ಕಣ್ಣಬಿಡುವ ಶೈಲವ ತಳೆವಾ ಕಲಕೀ ಮಣ್ಣ ಮೆಲುವ ಕಲ್ಲಕಂಭವ ಒಡೆವಾ ಬಲಿಯನೆ ಬೇಡುವ ಪರಶುವ ತೊಳೆದು ವನವನಗಳ ಚರಿಸುವ ಬಾಲೆಯರನಾಳ್ವ ಎಲ್ಲನಾಚಿಕೆಯ ಬಿಡುವ ಸಲ್ಲುವಹಯವೇರಿ ಮೆರೆವಾ ನಿನ್ನಯ ರೂಪವಾ ಎಲ್ಲವೇದವನುದ್ಧರಿಸಿ ವಾರಿಧಿಯಲಿ ತಳೆದು ಅಮೃತಮಥನಕೆ ಶಿಲೆಯ ಝಲಿಸಿ ನಿಲಸಿದೆ ನಿಜಕೆ ಧರಣಿಯ ಬಲ್ಲಿದ ಬಲಿಯ ಬಂಧಿಸಿ ಭಕ್ತಿಯ ಸಲ್ಲಿಸಿದೆ ಪಿತ ಪೇಳ್ದ ಆಜ್ಞೆಯ ಬಿಲ್ಲನೆತ್ತಿ ವರಿಸಿದೆ ಸೀತೆಯ ಮಲ್ಲರ ಮಡುಹಿ ತೋರಿದೆ ಚರಿಯ ಜಳ್ಳುಮಾಡಿತೋರ್ದೆ ಧರ್ಮಕೆ ಮಾಯ ಹುಲ್ಲುಣಿಸುವ ಹಯವೇರಿ ಮೆರೆದ ಶ್ರೀ ವಲ್ಲಭ ನಿನ್ನಯ ರೂಪವ ಸೊಲ್ಲಿಪರಾರೋ ಶ್ರೀಧರ 2 ನಿಗಮತಂದಿತ್ತೆ ನಗವಾನೆ ನೆಗವಾ ಮೊಗದೊಳು ಭೂಮಿಯ ಬಗೆವಾ ಉಗುರಿಂದುದರವ ಸೀಳ್ವ ತ್ಯಾಗಿಯನ್ಯಾಚಿಸುವ ಭೃಗುವಿಗೆ ಮುದವ ತೋರ್ವ ಸಾಗರಕೆ ಸೇತುಕಟ್ಟುವ ನೆನೆದಮೃತವ ಮೆಲುವ ಎಂದೆನಿಸಿ ಮೆರೆವ ನಿನ್ನಯ ರೂಪವಾ ಪೊಗಲಳವೇ ಭೂಧವ ನಿಗಮಕಾಗಿ ನೀ ತಮನ ಮರ್ದಿಸಿ ನಗವ ಬೆನ್ನಲಿ ಪೊತ್ತು ಸುಧೆಯನು ಸಾಧಿಸಿ ಹಗೆಯ ಹಿರಣ್ಯನ ಅಸುವನೆ ಹರಿಸಿ ಮಗುವಿನ ಭಕ್ತಿಗೆ ವ್ಯಾಪ್ತಿಯ ತೋರಿಸಿ ಬಾಗಿಲ ಕಾಯ್ದು ನೀ ಬಲಿಯ ರಕ್ಷಿಸಿ ಆ ಗರ್ವಿಸಿದರಸರ ಪರಶುವಿಂದ ವರೆಸಿ ಯಾಗರಕ್ಷಣೆಗೆ ನೀ ರಕ್ಷಕನೆನಿಸಿ ನೀಗಲು ಕುರುಕುಲ ಕಲಹವೆಬ್ಬಿಸಿ ಆಗಮ ಶಾಸ್ತ್ರಕೆ ಮಾಯವ ಕಲ್ಪಿಸಿ ಬೇಗ ಬಂದು ಹಯವೇರಿ ಮೆರೆವ- ಬೇಗದಿ ತೋರೋ ಶ್ರೀಪಾದವಾ 3
--------------
ಉರಗಾದ್ರಿವಾಸವಿಠಲದಾಸರು
ಇಂದಿರೆ ಪತಿ ಭಂಗಬಡುವ ವಿಷಯಂಗಳಿಗೆರಗದೇ ರಂಗ ನಿನ್ನಯ ಮಂಗಳಂಗುಟರ್ಚಿಸುವಂತೆ 1 ಉದರ ಪೋಷಣೆಗಾಗಿ ಸದೆಬಡಿಗನಾಗದೇ ಸದಮಲ ನಿನ್ನೂಳಿಗದವನಾಗುಳಿವಂತೆ 2 ಶರೀರ ಸಂಬಂಧಿಗಳಲ್ಲಿರುವ ಪ್ರೇಮವ ತಂದು ಗುರು ಮಹಿಪತಿ ಪ್ರಭು ಸ್ಮರಣೆಯೊಳಿರುವಂತೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿರೇಶ ನಿನ್ನ ಚರಣದ್ವಂಧ್ವವನ್ನು ಬಿಡೆನೊ ಕರುಣಾ ನೊಂದಿರುವೆನೊ ಮನದಿ ಬಹಳ ಹಿಂದುಮುಂದು ತೋರದಿಹುದು ಬಂಧು ಬಳಗವೆಲ್ಲ ನೀನೆ ಎಂದಿಹೆನೊ ಅರವಿಂದಲೋಚನ ಅ.ಪ ಊರು ಊರು ಸುತ್ತಿ ದಣಿದು ಸಾರರಹಿತ ಶಾಸ್ತ್ರಗಳ ವಿ ಕಾಲ ಕಳೆದೆನೋ ಉದಾರಚರಿತ ಭೂರಿ ಕರಣದಿಂದ ನಿನ್ನ ಚಾರುಚರಣ ಸೇವೆ ರುಚಿಯು ತೋರಿ ಮನಕೆ ಸಂತಸದಿ ಮುರಾರಿ ಎನಗೆ ಗತಿಯೆನುತಲಿ 1 ದುರಿತ ಸ್ತೋಮಗಳಲಿ ಮುಳುಗಿ ಬಳಲಿದೆನೊ ನಿಸ್ಸೀಮ ಮಹಿಮ ನಾಮಸ್ಮರಣ ಮಾತ್ರದಿಂದ ಪಾಮರ ಜನರುಗಳ ಯೋಗ ಕ್ಷೇಮ ವಹಿಸಿ ಪೊರೆಯುವಂಥ ಕಾಮಧೇನು ನೀನೆಂದರಿತು 2 ಮಾತಿನಲ್ಲಿ ಮಲ್ಲರೆಂದು ಖ್ಯಾತಿ ಪಡೆದ ಜನಗಳಿರಲು ಯಾತರವನು ಇವನು ಎನ್ನದಿರು ದೂತ ಪ್ರಸನ್ನನೇ ಸೋತು ವಿವಿಧ ಕಾರ್ಯಗಳಲಿ ಆತುರದಲಿ ನಿನ್ನ ಪರಮ ಪ್ರೀತಿಯ ಪಡೆಯುವುದೇ ದೊಡ್ಡ ನೀತಿಯೆಂದು ಅರಿತು ಸತತ 3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರೇಶ ಭವಬಂಧನ ಬಿಡಿಸೊ ನಿನ್ನಾನಂದದೊಳಿರಿಸೊ ಪ ಸಿಂಧುಶಯನ ಗೋವಿಂದ ಮುರಾರೆ ಅಚಿಂತ್ಯಾದ್ಭುತ ಶೌರೆ ಅ.ಪ. ತಾಳಲಾರೆನೊ ಈ ತಾಪತ್ರಯ ಹರಿಸೊ ನಿನ್ನವನೆನಿಸೊ ಕಾಲಕರ್ಮ ಕೋಟಲೆ ತಪ್ಪದಲ್ಲ ನೀ ಕೇಳೆನ್ನ ಸೊಲ್ಲ ವಾಕು ಪಾಲಿಸಿ ಎನ್ನನು ಪಾರುಗಾಣಿಸೊ ಫಣಿರಾಜಶಯ್ಯ 1 ಪರಿಪರಿಯಿಂದಲಿ ಜನ್ಮ ಧರಿಸಿ ಕರೆದುತಂದೆ ಈ ಜನ್ಮದಿ ನಿಂದೆ ಅರಿಯದವರಂತಿರುವರೆ ಕಾಯುವ ಕರುಣಿ ನೀನು ದೀನಜನ ಸುರಧೇನು 2 ಅಂಬರ ಮಣಿಯಂತೆ ಬಿಂಬ ಮೊಳಗ್ಹೊಳೆದು ದುರಂತ ಕರ್ಮಂಗಳ ಕಳೆದು ಹಂಬಲಿಸುವ ಭಕುತರ ಬೆಂಬಲಿಗನೆನಿಸಿ ಸಂತತ ನಿನ್ನ ಸುಖಸಿರಿಯ ಸುರಿಸೊ 3 ಬಿಂಬವು ಒಲಿದರೆ ಪ್ರತಿಬಿಂಬ ಫಲಸುವದುಂಟು ಈ ಮಾತು ನಿಘಂಟು ಬಾಂಬೊಳೆ ಹರಿಸಿದ ಹರಿ ಮಾನಿಧಿವಿಠಲ ನೀನಲ್ಲದಿನ್ಯಾರೋ ದೇವರ ದೇವಾ 4
--------------
ಮಹಾನಿಥಿವಿಠಲ
ಇಂದು ನಿನ್ನಪಾದ ಸನ್ನಿಧಿಯ ಘನ್ನ ದರುಶನದಿಂದಲಿಪ ಮುನ್ನ ದುರಿತಗಳೆಲ್ಲವು ಛಿನ್ನಛಿನ್ನವುಮಾಡಿ ಬನ್ನಬಡಿಸದೆ ಎಮ್ಮ ಸಲಹುವಸ್ವಾಮಿ ಅ.ಪ ಸುಮನಸರೊಡೆಯ ಕಾಲನಾಮಕನಾಗಿಪ್ಪ ಮೋದ ನಾಮ ವತ್ಸರದಿ ವಿಮ¯ ಚೈತ್ರಕೃಷ್ಣಪಕ್ಷದಶಮಿ ಸೌಮ್ಯವಾಸರದಿ ದ್ಯುಮಣಿ ಉದಯಕಾಲದಲಿ ಮಮಕುಲಸ್ವಾಮಿಯೆ ಎನ್ನ ವಂಶಜಾಪ್ತರ ಅಮಿತಶ್ರಮ ಪರಿಹರಿಸಿ ಈಗ ಶ್ರೀಮನೋಹರ ನಿನ್ನ ವಿಶ್ವರೂಪವ ತೋರ್ದೆ ಪ್ರೇಮ ಇಂದಿಗೆ ಆಯಿತೆ ಅಮಿತಜನ ಬಂಧು 1 ನಿನ್ನ ದರುಶನವೆಂದಿಗಂದಿಗಾಗಲಿ ಎಂದು ನಿನ್ನ ಧ್ಯಾನವನೆ ಮಾಡಲು ಸನ್ನುತಾಂಗನೆ ನೀನೆ ಘನ್ನ ಕರುಣವು ಮಾಡಿ ಎನ್ನ ಯತ್ನವು ಇಲ್ಲದೆ ನಿನ್ನ ದರುಶನಕ್ಕಾಗಿ ಅನ್ಯರಿಂದ ಪ್ರೇರಿಸಿ ಎನ್ನಲ್ಲಿ ಮನವು ಪುಟ್ಟಿಸಿದೆ ಪನ್ನಗಾಚಲನಿಲಯ ನಿನ್ನ ಮಹಿಮೆ ಎಂತುಂಟೋ ಎನ್ನನಿಲ್ಲಿಗೆ ತಂದು ಘನ್ನ ದರುಶನವಿತ್ತೆ 2 ಪಂಕಜೋದ್ಭವನಯ್ಯ ಮಂಕುಕವಿಸಿದೆ ಪಯಣ ಶಂಕೆಯ ಪರಿಹರಿಸಿ ಸಂಕಟಹರಿಸಿ ನಿನ್ನ ಕಿಂಕರರೊಳು ಸೇರಿಸಿ ಬಿಂಕದಲಿ ಗಿರಿಯನೇರಿಸಿ ಪಂಕಜನಾಭ ಮುಕುಂದ ಗೋವಿಂದ ಶಂಕರನುತಪೂಜಿತ ಶಂಖತೂರ್ಯಾದಿ ವಾದ್ಯಗಳಿಂದಲಿ ಶ್ರೀ ವೇಂಕಟೇಶ ನಿನ್ನ ನೋಡಿದೆ ಬಿಡದೇ 3
--------------
ಉರಗಾದ್ರಿವಾಸವಿಠಲದಾಸರು
ಇಂದು ಆರತಿ ತಂದು ಬೆಳಗಿರೆ ಇಂದಿರಾವರಗೆ ಮಂದರಧರಗಿಂದು ಪ ಸಿಂಧು ಶಯನಗೆ ಕುಂದರದನೆ ಅ.ಪ ವಾಹನ ವಂದಿತ ದಶ ಕಂಧರಾಂತಗೆ ಕುಂದರದನೆ ವಂದಿಸುವರ ಬಂಧ ಬಿಡಿಶ್ಯಾ ನಂದಗರಿವಗೆ ಮಂದಗಮನೆ 1 ಅಂಗನೆಯರು ಶೃಂಗಾರದಲಿ ಸಂಗೀತ ಪ್ರಿಯಗೆ ಭೃಂಗಾಲಕಿ ಗಂಗಾಪಿತ ಮಂಗಳಾಂಗ ವಿ- ಹರಿಗ ವಾಹನಗೇ ತಿಂಗಳಮುಖಿ 2 ನಾರಿಯಳ ನುದ್ಧಾರ ಮಾಡಿದ ಚಾರು ಚರಣಗೆ ನಾರಿ ಮಣಿಯೆ ಸೇರಿದವರ ಪೊರೆವ ಕಾರ್ಪರ ನಾರಶಿಂಹಗೆ ಭೂರಿಮಹಿಮಗಿಂದು 3
--------------
ಕಾರ್ಪರ ನರಹರಿದಾಸರು
ಇದು ಈಗ ಸಮಯ ಸೀತಾರಾಮ ಪ ಇದು ಈಗ ಸಮಯವು ಪದುಮದಳಾಕ್ಷನೆ ಸದಯದಿ ನಿಂದೆನ್ನ ಒದಗಿ ಕಾಯ್ವ ಶ್ರೀರಾಮ ಅ.ಪ. ಖಾಸವು ತುಂಬೆ ಕಂಠದಿ ಶ್ವಾಸವು ನಿಲ್ಲೆ ಘಾಸಿಯಾಗಲು ಘುರುಘುರುಕೆಂದು ಬÉೂೀರಿಡೆ ಸಾಸಿರ ಚೇಳು ಕಡಿದಂತಾಗುವಾಗ 1 ಕಾಲವು ಸಲ್ಲೆ ಪಂಚೇಂದ್ರಿಯಂಗಳು ಸಡಿಲೆ ಈ ದೇಹದಿ ಲಾಲಾ ಮೂತ್ರವು ಮಲ ಜೋಲಿ ಬೀಳುತಲಿರೆ ಕಾಲನ ದೂತರು ಬಂದು ಬಿಡದೆಳೆಯುತಿರುವಾಗ 2 ನಂದನಾದಿಗಳು ನಿಂದು ಗೋಳಿಡುತಿರೆ ಬಂಧು ಬಳಗಗಳು ಒಂದನು ನೋಡಿದೆ ಕುಂದುತ್ತ ಚಿತ್ತದಿ ನಿಂದಿರಲು ತಂದೆ ಧೇನುಪುರಿನಾಥ ಬಂದೆನ್ನ ಕಾಯೊ ಹೋಗುವಾಗ 3
--------------
ಬೇಟೆರಾಯ ದೀಕ್ಷಿತರು