ಒಟ್ಟು 1099 ಕಡೆಗಳಲ್ಲಿ , 104 ದಾಸರು , 827 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳು ಶ್ರೀನಿವಾಸ ಏಳು ಲಕ್ಷ್ಮೀರಮಣ ಏಳು ಬೆಟ್ಟದೊಡೆಯ ಏಳು ಭಕ್ತರ ಪ್ರೀಯ ಏಳಯ್ಯ ಬೆಳಗಾಯಿತು ಹರಿಯೇ ಪ. ಆದಿಶೇಷನ ಮೇಲೆ ಅಪ್ರಮೇಯನು ನೀನು ಆದರದಿ ಮಹಲಕ್ಷ್ಮಿಯೊಡನಿರಲೂ ಸುರರು ಸನಕ ಸನಂದನರು ಆದರಿಸೆ ಬಾ ಬೇಗ ಬಾಗಿಲನು ತೆಗೆದು ಆದಿಮೂರುತಿ ನಿನ್ನ ಮುಖ ದರ್ಶನವ ಮಾಡಿ ಮೋದ ಪಡುತಲೆ ಭಕ್ತ ಕೋಟಿ ಸ್ತುತಿ ಮಾಡಲು ಮಾಧವನೆ ಹಾಸು ಮಂಚವನಿಳಿದು ಬಾ ಕತ್ತಲೆ ಹರಿಪಾ ದಿವಾಕರನ ತೆರದಿ ಹರಿಯೇ ಏಳಯ್ಯ ಬೆಳಗಾಯಿತು 1 ಕಾಸಿದ್ಹಾಲನೆ ತಂದು ಕಾವಡಿಯಲಿ ತುಂಬಿ ಲೇಸಾಗಿ ನಿನ್ನ ಭಕ್ತರು ನಿಂತಿದಾರೆ ವಾಸುದೇವನೆ ನಿನಗೆ ಮಲ್ಲಿಗೆ ಕುಸುಮ ಭಾಸುರಾಂಗನೆ ತಂದು ಅರ್ಪಿಸಲು ಭಕ್ತರು ಏಸು ಹೊತ್ತಿನಿಂದ ತುಳಸೀ ದಳ ತಂದು ವಾಸುಕೀಶಯನಗೆಂದು ಭೂಸುರರು ನಿಂದಾರೆ ವೇದ ಘೋಷದಿಂದ ಈಸು ನುಡಿಗಳು ನಿನ್ನ ಕರ್ಣಕೇಳಲಿಲ್ಲವೆ ಏಸು ಮೆಚ್ಚಿಸಿಹಳೋ ಲಕ್ಷ್ಮೀ ನಿನ್ನ ಸರಸದೊಳು ವಾಸುಕೀಶಯನ ಹಾಸಿಗೆಯಿಂದೇಳೋ ದೊರೆಯೆ ಏಳಯ್ಯ ಬೆಳಗಾಯಿತು2 ಕರುಣಾಸಾಗರ ನಿನಗೆ ಕರುಣೆ ಬರುವಾತೆರ ಪರಿಪರಿಯ ಸ್ತೋತ್ರದೊಳು ನಾರಿಯೇರು ಕರೆವರೋ ಕರಗತ ಕಾಮಧೇನು ನೀನೆಂದು ಕರದೊಳಾರತಿಯ ಪಿಡಿದೂ ತರತರದ ಉಡಿಗೆ ತೊಡಿಗೆ ನಿನಗೀಯಲು ಸರಸರನೆ ದೇಶದೇಶದಿ ಬಂದು ನಿಂತಿದ್ದಾರೆ ಶರಧಿ ಗಂಭೀರನೆ ವರ ಶ್ರೀ ಶ್ರೀನಿವಾಸನೆ ಕರುಣೆ ತೋರುತ್ತ ನಿನ್ನ ಭಕ್ತರ ಮೇಲೆ ವರ ನಾರಿಯರ ನಾಟ್ಯ ವೈಭವದಿ ವರದುಂದುಭಿ ವಾದ್ಯದಲಿ ವರ ತಾಳ ಮೇಳದಿಂ ವರ ಶೇಷಾದ್ರಿವಾಸ ವೆಂಕಟೇಶನೆ ಏಳಯ್ಯ ಬೆಳಗಾಯಿತು 3
--------------
ಸರಸ್ವತಿ ಬಾಯಿ
ಏಳುಪೀಠಕೆ ನಳಿನಸಂಭವೆ ಜಗನ್ನುತೆ ಪ ಬಾಲೇಂದು ನಿಭಫಾಲೆ ಶ್ರೀತಪರಿಪಾಲೆ ಕೋಮಲೆ ಅ.ಪ. ಸಿಂಧುನಂದನೆ ಇಂದುಸೋದರಿ ಕುಂದರದನೆ ಮಂದಗಾಮಿನಿ ವಂದಿತಾಖಿಲವೃಂದಾರಕ ವೃಂದಾನಂದಪ್ರದೆ 1 ತೋರಮುತ್ತಿನ ಚಾರುಪೀಠಕೆ ಸಾರುಬೇಗನೆ ಸಾರಸಾನನೆ ನಾರೀರನ್ನೆಯರು ಸಾರಿಕರೆವರು ಮೀರದಾನಂದದಿಂ 2 ಶೇಷಶೈಲನಿವಾಸಿನೀ ನತಪೋಷದಾಯಿನಿ ಶ್ರೀರಮಾಮಣಿ ಯಾಸಾಸಾರಸನೇತ್ರೆ ಕಮಲಾವಾಸೇ ದಯೆತೋರಿಸೆ 3
--------------
ನಂಜನಗೂಡು ತಿರುಮಲಾಂಬಾ
ಏಳೇಳೇಳೆಲೆ ಮಾಮ | ಆರೋ ರೇಳೋದು ಸುಳ್ಳು ಬಂತು ಕ್ಷಾಮ ಪ ಹಾಳಾಗಿ ಹೋಯ್ತು ಮಳೆಬಳೆ ಕಾಳೆಲ್ಲ ಕಸವಾಯಿತು ಅ.ಪ ಭೂಮಿ ಒಕ್ಕಲಮಗನದು ಭೂಮೆಮ್ಮನ ಮಕ್ಕಳು ಒಕ್ಕಲಿಗರು ಭೂಮಿ ಬೆಳೆದರೆ ಅರ್ಧವನ್ನು ಬ್ರಾಹ್ಮಣರಿಗೇಕೆ ಕೊಡಬೇಕು 1 ಆರೋರು ಹೊಲ ಮಾಡಬಾರದು ಮಾಡಿದರೆ ಬಲು ಪಾಪ ಮಾರಲಿ ನಮಗೆ ಮೂರಕ್ಕೆ ನಾಲ್ಕಕ್ಕೊ ಏನಲಾ ಯೀರ್ಕೆಂಪ 2 ಎರವು ಇಸ್ತೆ ಚೇಸ್ತಾನು ಒದ್ದಂಟೆ ವಾಡೆ ಪೋನಿ ವಲ್ಲ ಬಾ ಪ್ನೋಳ್ ಚೇನು 3 ಹೊಲಕುಯಿದು ಕಟ್ಟುವಾಗ ಛಲದಿ ಹಾರುವೈಯ ಬೇಗ ಒಕ್ಕಲಿಗನ ಕಾಯಬೇಕಂತಾನೆ ಬಲು ಭ್ರಾಂತನು ತಾನೆ4 ಕೊಳಗ ಕೊಡÀುವೆವೇಳು ನಮ್ಮಲ್ಲಿ ನಡೆಯದು 5 ಕಂದಾಯ ಕೊಡುವಮಟ್ಟಿಗೆ ಕಾಳುಕೊಟ್ಟರೆ ಸಾಕು ಮುಂದಲು ಬಾರಿಗೆ ಸಾವೇ ಹಾಕಿ ಮೂಗಳಕ್ಕೆ ಗುತ್ತಿಗೆಬೇಕು 6 ನಾವು ತಿಂದು ಮಿಕ್ಕದರೊಳಗೆ ಹಾರೋರಿಗೆ ಸರಿಪಾಲು ಕಾಲ ಕಳ್ವೋದೆ ಮೇಲು 7 ಹೆಂಡಿರು ಹಿಟ್ಟು ಹೊರಲಿಲ್ಲ ಈ ಪುಂಡುತನ ನಮ್ಮಲಿ ಸಲ್ಲಾ ಭಂಡಿಸೌದೆ ಬೇಕೆಂದು ಬರುತಾನೆ ಭಲೆ ಭಲೆ ಹಾರೋನೆ 8 ನಮ್ಮದುಕೇಳಲೆ ಇನ್ನು ಉಳುಮೆಯಿಲ್ಲ ಹಾರುವೈಯಂಗೆ ರಾಜಿನಾಮೆ ಕೊಡಲಿ ಬಿಡಲೆ 9 ಎಷ್ಟು ಧರ್ಮದೊಳಿದ್ದುರು ರೈತರು ಕಷ್ಟಪಡುವರು ನಾವೆ ಬಿಟ್ಟಿ ಹಾರುವಯ್ಯ ಬಲ್ಲೆನೆ ಗುರುರಾಮವಿಠಲಗಾಗಲಿ ಸೇವೆ 10
--------------
ಗುರುರಾಮವಿಠಲ
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಒಂದು ದಿನದಲಿ ಇಂದಿರೇಶನು ಚಂದದಿಂದಲಿ ವನಕೆ ಬಂದನು ಸುಂದರಾಂಗನು ಗೋಪ ವೃಂದದಿ ನಿಂದು ಕೊಳಲನು ಸ್ವರವಗೈದನು 1 ಕೊಳಲ ಧ್ವನಿಯನು ಕೇಳುತಾಕ್ಷಣ ಖಗಮೃಗಂಗಳು ಮಯ್ಯ ಮರತವು ತರುಣಿ ಮಣಿಯರು ಮನೆಯ ಕೆಲಸಕೆ ಮರತು ಮಯ್ಯನು ತೆರಳಿ ಬಂದರು 2 ಕೊಳಲ ಧ್ವನಿಯನು ಕೇಳಿ ಗೋಪೇರು ನಳಿನನಾಭನ ಬಳಿಗೆ ಬಂದರು ನಳಿನಮುಖಿಯರ ನೋಡಿ ಕೃಷ್ಣನು ಮುಗುಳುನಗೆಯಲಿ ಮಾತನಾಡಿದನು 3 ನಾರಿಮಣಿಯರೆ ರಾತ್ರಿ ವೇಳೆಯು ಈಗ ಇಲ್ಲಿಗೆ ಬಂದಿರೇತಕೆ ಮಾರನಯ್ಯನ ಮಾತುಕೇಳುತ ಮಡದಿ ಮಣಿಯರು ನುಡಿದರಾಗಲೆ4 ಬಾಲಕೃಷ್ಣನೆ ನಿನ್ನ ಕೊಳಲಿನ ಈಗಲೆಮ್ಮಯ ಮನವು ಹರುಷಿಸೆ ಬೇಗ ನಿನ್ನನು ಬೇಡಿಕೊಂಬೆವೊ 5 ಇಂತು ಕೃಷ್ಣನು ಸರಸವಾಡುತ ನಿಂತನವರಿಗೆ ಹರುಷ ತೋರುತ ಚಿಂತೆಯೆಲ್ಲವ ಬಿಟ್ಟು ಗೋಪೇರು ಅಂತರಾತ್ಮನ ಭಜಿಸುತಿದ್ದರು 6 ಏನು ಪುಣ್ಯವೊ ನಮ್ಮದೆನುತಲಿ ದಾನವಾರಿಯ ಸ್ಮರಿಸುತಿದ್ದರು ನಾರೇರೆಲ್ಲರ ನೋಡಿ ಕೃಷ್ಣನು ಬೇಗದಿಂದಲಿ ಅಂತರ್ಧಾನನಾದನು 7 ಸ್ಮರನ ಪಿತನನು ಸ್ಮರಿಸಿಪಾಡುವ ತರುಣಿಯರಿಗೆ ಮೈ ಸ್ಮರಣೆ ಮರೆತಿರೆ ಭರದಿ ಕಂಗಳ ತೆರೆದು ನೋಡಲು ಮುರಳೀಧರನ ಕಾಣದಲೆ ಚಿಂತಿಸಿ 8 ಜಾಜಿ ಸಂಪಿಗೆ ಸೂಜಿ ಮಲ್ಲಿಗೆ ರಾಜೀವಾಕ್ಷನ ಕಾಣಲಿಲ್ಲವೆ ಬಿಳಿಯ ಮಲ್ಲಿಗೆ ಎಳೆಯ ತುಳಸಿಯೆ ನಳಿನನಾಭನ ಸುಳಿವು ಕಾಣಿರಾ 9 ಸರಸದಿಂದಲಿ ಹರಿವ ಯಮುನೆಯೆ ಪಾದ ಕಾಣೆಯಾ ಚಿಗರಿ ಮರಿಗಳೆ ನಿಮ್ಮ ಕಂಗಳು ನಳಿನನಾಭನ ಸುಳವು ಕಾಣವೆ 10 ಯಾರ ಕೇಳಲು ಹರಿಯ ಕಾಣರು ನಾರಿಮಣಿಯರೆ ನಾವೆ ಕರೆಯುವ ಮುದ್ದು ಕೃಷ್ಣನೆ ಪದ್ಮನಾಭನೆ ಶ್ರದ್ಧೆಯಿಂದಲಿ ನಿಮ್ಮ ಭಜಿಪೆವೊ 11 ಜಯತು ಜಯತು ಶ್ರೀ ಲಕ್ಷ್ಮೀ ರಮಣನೆ ಜಯತು ಜಯತು ಶ್ರೀ ಗರುಡಗಮನನೆ ಜಯತು ಜಯತು ಶ್ರೀ ಉರಗಶಯನನೆ ಜಯತು ಜಯತು ಶ್ರೀ ಪರಮ ಪುರುಷನೆ 12 ಜಯತು ಜಾಹ್ನವಿಜನಕÀ ಶ್ರೀಶನೆ ಜಯತು ಭಕ್ತರ ಭಯವಿನಾಶನೆ ಜಯತು ಪಾವನ ಪುಣ್ಯ ಚರಿತನೆ ಜಯತು ಜಯತು ಲಾವಣ್ಯರೂಪನೆ 13 ಎಳೆಯ ಚಿಗುರಿನಂತಿರುವ ಪಾದವು ರುಳಿಯ ಗೆಜ್ಜೆಯು ಕಾಲಪೆಂಡೆಯು ಎಳೆಯ ಪಾದದಿ ಹೊಳೆವ ಪೈಜನಿ ಘಲಿರು ಘಲಿರು ಎಂದೆನುತ ಮೆರೆವುದು 14 ಪುಟ್ಟ ನಡುವಿಗೆ ಪಟ್ಟೆ ಮಡಿಗಳು ಇಟ್ಟ ಚಲ್ಲಣ ಪುಟ್ಟ ಕೃಷ್ಣಗೆ ಉಡುಗೆಜ್ಜೆಯು ಗಂಟೆ ಸರಪಳಿ ಒಪ್ಪಿ ಮೆರೆಯುವ ಕಾಂಚಿಧಾಮವು 15 ಚತುರ ಹಸ್ತದಿ ಶಂಖುಚಕ್ರವು ಗದೆಯು ಪದುಮವು ಹೊಳೆಯುತಿರುವುದು ಕಡಗ ಕಂಕಣ ತೋಳ ಬಾಪುರಿ ವಜ್ರದೊಂಕಿಯು ಮೆರೆಯುತಿರುವುದು 16 ಕೌಸ್ತುಭ ವೈಜಯಂತಿಯು ಸುರಗಿ ಸಂಪಿಗೆ ಸರಗಳೊಲಿಯುತ ಎಳೆಯ ತುಳಸಿಯ ಸರಗಳೊಪ್ಪುತ ಜರದವಲ್ಲಿಯು ಜಾರಿ ಬೀಳಲು 17 ವÀಕ್ಷ ಸ್ಥಳದಿ ಶ್ರೀಲಕ್ಷ್ಮಿ ಒಪ್ಪಿರೆ ರತ್ನ ಪದಕಗಳೆಲ್ಲ ಶೋಭಿಸೆ ಮಕರ ಕುಂಡಲ ರತ್ನದ್ಹಾರಗಳಿಂದ ಒಪ್ಪಿರೆ 18 ಗುರುಳು ಕೂದಲು ಹೊಳೆವೊ ಫಣೆಯಲಿ ತಿಲುಕ ಕಸ್ತೂರಿ ಶೋಭಿಸುತ್ತಿರೆ ಎಳೆಯ ಚಂದ್ರನ ಪೋಲ್ವ ಮುಖದಲಿ ಮುಗುಳು ನಗೆಯು ಬಾಯ್ದಂತ ಪಂಕ್ತಿಯು 19 ಪದ್ಮನೇತ್ರಗಳಿಂದ ಒಪ್ಪುತ ಪದ್ಮ ಕರದಲಿ ಪಿಡಿದು ತಿರುವುತ ಪದ್ಮಲೋಚನೆಯನ್ನು ನೋಡುತ ಪದ್ಮನಾಭನು ಕೊಳಲನೂದುತ 20 ರತ್ನ ಮುತ್ತಿನ ಕಿರೀಟ ಶಿರದಲಿ ಮತ್ತೆ ನವಿಲಿನ ಗರಿಗಳೊಪ್ಪಿರೆ ಹಸ್ತಿ ವರದನು ಎತ್ತಿ ಸ್ವರವನು ಮತ್ತೆ ಕೊಳಲನು ಊದೊ ದೇವನೆ 21 ಸುಂದರಾಂಗನೆ ಮಂದಹಾಸನೆ ಮಂದರೋದ್ಧರ ಬಾರೋ ಬೇಗನೆ ಇಂದಿರೇಶನೆ ಇಭರಾಜವರದನೆ ರಂಗನಾಥನೆ ಬಾರೊ ಬೇಗನೆ22 ಮದನ ಮೋಹನ ಪಾರಮಹಿಮನೆ ಬಾರೊ ಬೇಗನೆ ಶ್ರೀರಮಾಪತೆ ಶ್ರೀ ನಿಕೇತನ ವಾರಿಜಾಕ್ಷನೆ ಬಾರೊ ಬೇಗನೆ 23 ಹೀಗೆ ಗೋಪೇರು ಮೊರೆಯನಿಡುತಿರೆ ಮಂಗಳಾಂಗನು ಬಂದನೆದುರಿಗೆ ಧ್ವಜ ವಜ್ರಾಂಕುಶ ಪದ್ಮ ಪಾದವು ಅಡಿಯನಿಡುತಿರೆ ಧರಣಿ ನಲಿವಳು 24 ಹರಿಯ ನೋಡುತ ಪರಮ ಹರುಷದಿ ತರುಣಿಮಣಿಯರು ಹರುಷ ಪಡುತಲಿ ಪರಮ ಮಂಗಳ ಚರಿತ ದೇವಗೆ ಸ್ವರವನೆತ್ತಿ ಮಂಗಳವ ನುಡಿದರು 25 ಶುಭ ಕಂಬು ಕಂಠಗೆ ಮಂಗಳಂ ಮಹಾ ಮಾರನಯ್ಯಗೆ ಮಂಗಳಂ ಮಹಾ ಮುದ್ದುಕೃಷ್ಣಗೆ ಮಂಗಳಂ ಜಯ ಮಂಗಳಾಂಗಗೆ 26 ಕಮಲ ಮುಖಿಯರು ನಮಿಸಿ ಕೃಷ್ಣಗೆ ಸರಸವಾಡುತ ಹರುಷ ಪಡುತಲಿ ಕಮಲನಾಭ ವಿಠ್ಠಲನ ಕೂಡುತ ಮನದಿ ಸುಖವನು ಪಡುತಲಿದ್ದರು 27
--------------
ನಿಡಗುರುಕಿ ಜೀವೂಬಾಯಿ
ಒಂದೆ ಸಾಕೆನಗೆ ನಿನ್ನಯ ಸೇವೆಯೊಂದೆ ಸಾಕೆನಗೆ ಪಒಂದೆ ಸಾಕು ನಿನ್ನಯ ಸೇವೆ ನಿರತವುಮಂದರಧರ ಶ್ರೀ ವೆಂಕಟರಮಣನೆ ಅ.ಪದೇವಕಿನಂದನನೆ ಎನ್ನನು ನೀಕಾವ ಕೃಪಾಕರನೆಭಾವಜನಯ್ಯನೆ ಭಾನುಪ್ರಕಾಶನೆದೇವರದೇವ ಶ್ರೀ ವೆಂಕಟರಮಣನೆ 1ವಾರಿಧಿರೂಪವಾದ ಭವದೊಳು ಮುಳುಗಿದಾರಿಗಾಣದೆ ುಹೆನುತೋರಿಸಿ ದಾರಿಯ ಜ್ಞಾನದ ನಾಮೆಂಸೇರಿಸು ತಡಿಯ ಶ್ರೀ ವೆಂಕಟರಮಣನೆ 2ತಿರುಪತಿುಂದ ಬಂದು ತರುಣನಾಗಪುರದೊಳು ಗುರು ರೂಪಲಿಕರುಣದಿಂದ ನಾರಾಯಣದಾಸನಿಗೆ ಬೇಗಸ್ಥಿರಸುಖ'ೀವ ಶ್ರೀ ವೆಂಕಟರಮಣನೆ 3
--------------
ನಾರಾಯಣದಾಸರು
ಒಲವಿಲ್ಲವೆನ್ನಬಹುದೇ ನೀರೆ ನಿನ್ನಲ್ಲಿ ಚೆಲುವ ವೇಲಾಪುರದ ಚೆನ್ನಿಗನಿರವ ನೋಡಿ ಪ ತರಳೆ ನಿನ್ನಯ ಮೋಹ ವಿರಹದಿರವದ ಬಗೆಯ ಸ್ಮರನರಳ ಸರಳುಗಳ ಉರವಣಿಯ ಘನವಾ ಪರೆಯದಿಂ ಮೋದಕದಿ ಬಿಂದುಗಳು ಮೊಳಗೆ ಕ ಸ್ತುರಿ ತಿಲಕ ಮಸುಳಿಸಲು ಬಂದ ಗುಣಮಣಿಯೇ 1 ನೀಲಜೀಮೂತಸನ್ನಿಭದೋರೆದುರುಬಿನ ಮೇಲೆ ಸುತ್ತಿದ ಬೆಂಮುರಿ ಜಾರೆಗುರುಳೂ ಭಾಳದಿಂ ಪರೆಯೆ ಕಡುತವಕದಿಂದೆನ್ನ ನುಡಿ ಗೇಳುತಲೆ ಬಂದನಿದೆ ನೋಡೆ ಗುಣಮಣಿಯೇ 2 ಸೋಗೆ ಮುಡಿಯಳೆ ನಿನ್ನ ಕಾಂಬೆನೆಂದರ್ಥಿಯಲಿ ರಾಗ ಮಿಗೆ ವೈಕುಂಠ ವಿಠಲನಾಥ ತಾನಾದ ಬೇಗದಿಂ ನೆರೆದು ಸುಖಿಯಾಗು ಪೆಣ್ಮಣಿಯೆ 3
--------------
ಬೇಲೂರು ವೈಕುಂಠದಾಸರು
ಒಲಿಸಬೇಕು ಹರಿಯ ನಾವೀಗ ಕೇಶವನನ್ನು ಒಲಿಸಬೇಕು ಹರಿಯ ನಾವೀಗ ಪ ಒಲಿಸಬೇಕು ಹರಿಯ ನಾವು ಪರಮ ಭಕ್ತಿಯ ಸೇವಿಯಿಂದ ಒಲಿಸಬೇಕು ರಂಗನನ್ನು ಮೋಕ್ಷವೀವ ಹರಿಯನು1 ಭಕ್ತಿರಹಿತವಾದ ಪೂಜೆ ಸ್ತೋತ್ರ ಸ್ಮರಣೆ ಭಜನೆಯಿಂದ ಭಕ್ತಿರಹಿತ ಶ್ರವಣದಿಂದ ಹರಿಯು ತಾನು ಒಲಿಯನಯ್ಯ 2 ಭಕ್ತಿಯಿಂದ ಪೂಜೆಮಾಡಿ ಭಕ್ತಿಯಿಂದ ಸ್ತೋತ್ರಪಾಡಿ ಭಕ್ತಿಯಿಂದ ಶ್ರವಣ ಮಾಡಿ ಸೇವೆ ಮಾಡಲೊಲಿಯುತಾನೆ 3 ದೂರ್ವಾಪುರದಿ ನಿತ್ತ ಹರಿಗೆ ಆತ್ಮ ನೇವೇದ್ಯವನು ಮಾಡೆ ಗರ್ವರಹಿತನಾದ ಕೇಶವ ಬೇಗದಿಂದಲೊಲಿಯುತಾನೆ 4
--------------
ಕರ್ಕಿ ಕೇಶವದಾಸ
ಓಡದಿರು ಓಡದಿರು ಖೋಡಿ ಮನವೆ ಮೂಢತನದಲಿ ಬರುವ ಕೇಡುಗಳನರಿದರಿದು ಪ. ಬೀಸುವದು ಬಿರುಗಾಳಿ ಸೂಸುವದು ಉರಿಮಳೆಯು ಪೆಸರಿಲ್ಲದೆ ಕತ್ತಲೆಯು ಮುಸುಕುತಿಹುದು ಈಸು ನೆಲಸಿಹ ಘೋರ ಭೀಷಣಾಟವಿಯೊಳಗೆ ಬೀಸುವನು ಬೇಡನೊಬ್ಬನು ಬಲೆಯನಿಕದಕೊ1 ಅತ್ತೆಯೆಂಬುವಳು ನಿನ್ನ ನೆತ್ತಿಯಲಿ ತೈಲವನು ಒತ್ತಿ ಮೋಹದಿ ವಹಿಸಿಕೊಂಡಿರುವಳು ಅತ್ತ ಕಡೆ ಬೇಡ ಹಿಂದೊತ್ತಿ ಬರುವರೆ ಬೇಗ ತುತ್ತಾಗ ಎನುತ ಬಾಯ್ ತೆರೆದಿರುವಳು 2 ಮುಂಗಡಯೊಳ್ ಸಾಲಾಗಿ ಅಂಗಡಿಗಳಿರುತಿಹವು ಹಂಗಿಗನು ನೀನಾಗಿ ಬೇಡ ಅವರ ಸಂಗ ಗೈಯುತ ವ್ಯಾಪಾರಂಗಳನು ಮಾಡಿದರೆ ಭಂಗಿಯನು ಕೊಟ್ಟು ಬಲು ಭಂಗಪಡಿಸುವರಯ್ಯ 3 ಖೂಳತನ ಬೇಡ ಬಾ ಮಾಳಿಗೆಗೆ ಹೋಗುವ ಏಳು ಮೆಟ್ಟಲ ದಾಂಟಿ ಲೋಲತನದಿ ಅಲದೆಲೆ ಮಂಚದಲಿ ಲೋಲನಾಗಿಹನ ಪದ ಆಲಿಂಗನದಿ ಬಲು ಕುಶಾಲಿನಲ್ಲಿರು ಕಂಡ್ಯ 4 ಈ ರೀತಿಯಲಿ ನಿನಗೆ ಸಾರಿ ಪೇಳಿದೆ ನೋಡು ಭೂರಿ ಮಾಯಾಭ್ರಾಂತಿಗೊಳಗಾಗದೆ ಕಾರಣಿಕ ಲಕ್ಷ್ಮೀನಾರಾಯಣನ ಪಾದ ವಾರಿಜದಿ ನಲಿದು ಸುಖಿಯಾಗು ನೀ ಮನವೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಓಡದಿರು ಓಡದಿರು ಖೋಡಿ ಮನವೆ ಮೂಢತನದಲಿ ಬರುವ ಕೇಡುಗಳನರಿದರಿದುಪ. ಬೀಸುವದು ಬಿರುಗಾಳಿ ಸೂಸುವದು ಉರಿಮಳೆಯು ಪೆಸರಿಲ್ಲದೆ ಕತ್ತಲೆಯು ಮುಸುಕುತಿಹುದು ಈಸು ನೆಲಸಿಹ ಘೋರ ಭೀಷಣಾಟವಿಯೊಳಗೆ ಬೀಸುವನು ಬೇಡನೊಬ್ಬನು ಬಲೆಯನಿಕದಕೊ1 ಅತ್ತೆಯೆಂಬುವಳು ನಿನ್ನ ನೆತ್ತಿಯಲಿ ತೈಲವನು ಒತ್ತಿ ಮೋಹದಿ ವಹಿಸಿಕೊಂಡಿರುವಳು ಅತ್ತ ಕಡೆ ಬೇಡ ಹಿಂದೊತ್ತಿ ಬರುವರೆ ಬೇಗ ತುತ್ತಾಗ ಎನುತ ಬಾಯ್ ತೆರೆದಿರುವಳು 2 ಮುಂಗಡಯೊಳ್ ಸಾಲಾಗಿ ಅಂಗಡಿಗಳಿರುತಿಹವು ಹಂಗಿಗನು ನೀನಾಗಿ ಬೇಡ ಅವರ ಸಂಗ ಗೈಯುತ ವ್ಯಾಪಾರಂಗಳನು ಮಾಡಿದರೆ ಭಂಗಿಯನು ಕೊಟ್ಟು ಬಲು ಭಂಗಪಡಿಸುವರಯ್ಯ 3 ಖೂಳತನ ಬೇಡ ಬಾ ಮಾಳಿಗೆಗೆ ಹೋಗುವ ಏಳು ಮೆಟ್ಟಲ ದಾಂಟಿ ಲೋಲತನದಿ ಅಲದೆಲೆ ಮಂಚದಲಿ ಲೋಲನಾಗಿಹನ ಪದ ಆಲಿಂಗನದಿ ಬಲು ಕುಶಾಲಿನಲ್ಲಿರು ಕಂಡ್ಯ4 ಈ ರೀತಿಯಲಿ ನಿನಗೆ ಸಾರಿ ಪೇಳಿದೆ ನೋಡು ಭೂರಿ ಮಾಯಾಭ್ರಾಂತಿಗೊಳಗಾಗದೆ ಕಾರಣಿಕ ಲಕ್ಷ್ಮೀನಾರಾಯಣನ ಪಾದ ವಾರಿಜದಿ ನಲಿದು ಸುಖಿಯಾಗು ನೀ ಮನವೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ
ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕಥನಾತ್ಮಕ ಹಾಡುಗಳು ಉದ್ಭವಿಸಿದ ಕಂಬದಿ | ಶ್ರೀ ನಾರಸಿಂಹ ಉದ್ಭವಿಸಿದ ಕಂಬದಿ ಪ. ಉದ್ಭವಿಸಿದ ಬೇಗ ಪದ್ಮಸಂಭವಪಿತ ಮುದ್ದು ಬಾಲಕನ ಉದ್ಧರಿಸುವೆನೆಂದು ಅ.ಪ. ದುರುಳನು ಪ್ರಹಲ್ಲಾದನು | ಪರಿಪರಿಯಿಂದ ಕರಕರಪಡಿಸೆ ಕುವರನ ನರಹರಿ ಎನ್ನನು ಪೊರೆ ಎಂದು ಮೊರೆಯಿಡೆ ಸುರರು ನೋಡುತಿರೆ ಭೋರ್ಗರೆಯುತ ಆ ಕ್ಷಣ 1 ಎಲ್ಲಿರುವನು ಹರಿ ಎಂದು | ದೈತ್ಯನು ಮಗನ ಇಲ್ಲಿ ಸ್ಥಂಭದಿ ತೋರೆಂದು ಖುಲ್ಲನು ಹಿಂಸಿಸೆ ಸರ್ವತ್ರದಿ ಶ್ರೀ- ನಲ್ಲನಿರುವನೆಂದು ಸಾಧಿಸೆ ಭಕ್ತನು 2 ತನಯನ ನುಡಿ ಉಳಿಸಲು | ನರಹರಿ ಹೊಸಲೊಳ್ ಇನನು ತಾ ಮುಳುಗುತ್ತಿರಲು ದನುಜನ ತೊಡೆಯ ಮೇಲಿಟ್ಟು ನಖದಲಿ ಕನಲಿ ಸೀಳಿ ಕರುಳ್ಮಾಲೆ ಧರಿಸುತ 3 ಸುರರು ಜಯ ಜಯವೆನ್ನುತ | ಪೊಗಳುತ್ತಲಿರೆ ನರಹರಿ ಉಗ್ರ ತಾಳುತ ಸುರರು ಬೆದರಿ ಪ್ರಹ್ಲಾದನ ಕಳುಹಲು ಕರಿಗಿರಿ ನರಹರಿ ಶಾಂತನೆನಿಸಿದ 4 ತಾಪವಡಗಿತು ಜಗದಲಿ | ವರ ಭಕ್ತನಿಂದ ಶ್ರೀಪತಿ ಲಕುಮಿ ಸಹಿತಲಿ ಗೋಪಾಲಕೃಷ್ಣವಿಠ್ಠಲ ಗುರುವರದ ಈ ಪರಿಯಿಂದ ಭಕ್ತರ ಪೊರೆಯಲು5
--------------
ಅಂಬಾಬಾಯಿ
ಕದವ ತೆಗೆಯೆ ಸುಂದರಿವಯ್ಯಾರಿ ಮುತ್ತಿನ ಪ ಕಡಲ ಶಯನನೆ ಮಡದಿ ಹರುಷದಿ ಸಡಗರದಿ ಮುಂದಡಿ ಇಡುತ ನಿನ್ನ ಒಡೆಯ ಬಂದಿಹನೆಂದು ಹರುಷದಿ ಬೆಡಗು ಮಾಡದೆ ಬಿಡಿಯ ಮುತ್ತಿನ 1 ಯಾರು ನಿನ್ನಯ ಪೆಸರ ಏನೆಂದು ತಿಳಿಯದೆ ಹೇಗೆ ತೆಗೆಯಲಿ ಕದವಾ ಘೋರ ರಾತ್ರಿಯ ವೇಳೆಯಲಿ ಬಂ- ದೀಗ ಬಾಗಿಲ ಬಡಿಯ ನಿಂದಿರೆ ನಾರಿಯರು ಏನೆಂದು ಕೇಳ್ಪರು ದ್ವಾರ ಬಿಡುಬಿಡುತಲಿ ಸಾಗು ಮುಂದಕೆ2 ತೆಗೆಯಲೊಲ್ಲೆನು ಕದವ ಸಮರಾತ್ರಿ ವೇಳದಿ ರುಕ್ಮನ ಅನುಜೆ ಕೇಳೆ ಪೃಥ್ವಿಯೊಳು ಎನ್ನನು ಚಕ್ರಿ ಎನ್ನುತ ಪೇಳ್ವರೆ ಅರ್ಥಿವಚನಗಳನ್ನು ಕೇಳುತ ಸತ್ವರದಿ ನೀ ಬಂದು ಮುಂದಕೆ ಮುತ್ತಿನ ಕದತೆಗೆದು ಬೇಗನೆ ರತ್ನ ಪೀಠದಿ ಕುಳ್ಳಿರಿಸೆ ಹೊಸ ಮುತ್ತಿನರಗಿಣಿ ಸತ್ಯವಾಣಿಯೆ3 ಕೇಳಿ ಹರ್ಷಿತನಾದೆನು ನಿನ್ನಯ ಮಾತ ಕೇಳಿ ನಗುವರು ಜನರು ಹೇಳಿ ಕೇಳುವರಿಲ್ಲ ನಿನ್ನ ಮನಸಾರ ಮಾತುಗಳಾಡಲೇತಕೆ ಕು- ಲಾಲ ಭವನವಿದಲ್ಲ ಸುಮ್ಮನೆ ಹೇಳ ಕೇಳದೆ ಹೊರಡು ಮುಂದಕೆ 4 ಹೀಗೆ ನುಡಿಯುವದೇತಕೆ ಈಗೆನ್ನ ಮಾತಿಗೆ ಬೇಗದಿ ತೆಗೆ ಕದವ ನಾಗವೇಣಿಯೆ ನಗುತ ಪೇಳುವೆ ಬೇಗದಲಿ ಇನ್ನೊಂದು ನಾಮವ ಈಗ ಧರಣಿಧರನು ಬಂದಿಹೆ ಸಾಗರನ ಸುತೆ ಸರ್ಪವೇಣಿಯೆ 5 ಧರಣೀಧರ ನೀನಾದರೆ ಈ ಧರೆಯನೆಲ್ಲವ ಸಿರದ ಮೇಲಿರಿಸುವೆಯ ಸರ್ವ ಜನರಿಗೆ ಭಯವ ಪಡಿಸುವ ಉರಗರಾಜ ನೀನೆಂದು ತಿಳಿದೆನು ಇರುತ ಸರ್ಪಗಳೊಳಗೆ ನೀ ಬಲು ಹರುಷದಿಂದಲಿ ಸಾಗುಮುಂದಕೆ6 ಹರಿಣಾಕ್ಷಿ ಕೇಳೆ ನೀನು ಎನ್ನನು ಜನರು ಹರಿಯೆಂದು ಕರಿಯುವರು ಕರೆ ಕರೆಯ ಮಾಡದಲೆ ಬೇಗನೆ ವರ ಕನಕ ಕದ ತೆಗೆದು ಸುಮ್ಮನೆ ಇರಿಸು ಸುಖ ಸಾಮ್ರಾಜ್ಯ ಪೀಠವ ಹರುಷದಿಂ ಕುಳಿತೆಲ್ಲ ಪೇಳುವೆ 7 ಕೋತಿ ನೀನಹುದಾದರೆ ಮಾತುಗಳ್ಯಾಕೆ ಜಾತಿ ಕಪಿಗಳ ಕೂಡುತ ಪ್ರೀತಿಯಿಂದಲಿ ಮನಕೆ ಬಂದೆಡೆ ನೀತೆರಳುತಲಿ ಪೋಗು ಮುಂದಕೆ ಕೋತಿಗಳ ಗುಂಪಿದಲ್ಲ ತಿಳಿಮಹ- ರೂಪವತಿಯರಿರುವ ಸ್ಥಳವಿದು 8 ಪ್ರೀತಿಸತಿಯೆ ನೀ ಕೇಳೆ ನಿನ್ನೊಳು ಬಹು ಪ್ರೀತಿಯಿಂದಲಿ ಬಂದೆನು ಶ್ರೀಶನ ನುಡಿಕೇಳಿ ರುಕ್ಮಿಣಿ ಆತುರದಿ ಬಾಗಿಲನೆ ತೆಗೆಯುತ ನಾಥ ಕಮಲನಾಭ ವಿಠ್ಠಲನಿಗೆ ತಾನಮಿಸಿ ವಂದಿಸುತ ಭಕುತಿಯಲಿ ಬಾಗಿಲು ತೆಗೆದಳಾಗ ಭಕುತಿಯಲಿ ಶ್ರೀಶಗೆ ಬಾಗಿಲು ತೆಗೆದಳಾಗ9
--------------
ನಿಡಗುರುಕಿ ಜೀವೂಬಾಯಿ