ಒಟ್ಟು 1148 ಕಡೆಗಳಲ್ಲಿ , 88 ದಾಸರು , 890 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎದೆ ಒಡೆದು ಏಕೆ ನೀ ಹೆದರುತಿ ಮನವೆ ಪಾದ ಭಜನೆ ಹೃದಯದಲಿರೆ ಪ ಅಖಿಲ ಜನಗಳ ಪೊರೆವ ಹರಿಯು ಕರ್ತನಾಗಿರಲು ಸಕಲ ಜಗಬೋಧಗುರು ಸನ್ನಿಧಿ ಇರಲೂ ಸಕಲ ಬ್ರಹ್ಮಾದಿ ದೇವತೆ ಬಂಧು ಬಳಗಿರಲು ನಿಖಿರವಿಲ್ಲದೆ ಚಿತ್ತ ನೀನು ಈ ಪರಿಯಿಂದಾ 1 ಮುದದಿಂದ ಶ್ರೀ ಲಕ್ಷ್ಮೀ ಮಹಾತಾಯಿ ತಾ ----- -----ದಮಲ ಜ್ಞಾನಿಗಳ ಸಂಬಂಧ ವಿರಲೂ ಕುದುರೆಯಂದದಿ ಮನಸು ಕ್ರೂರರಾರ್ವರಕೂಡಿ ಒದರಿ ಪರಿಪರಿಯಲ್ಲಿ ಚಿಂತೆಯೊಳಗಾಗಿ 2 ಪರಮಾತ್ಮ ಪರಬ್ರಹ್ಮ ಪರಲೋಕ ಬಾಂಧವನು ಪರಿಪರಿಯ ಷೋಷಿಸುವ ಭಾರಕನು ಇರಲು ಅರಿತು ನೀ ಚನ್ನಾಗಿ ಹರಿ ಹೊನ್ನ ವಿಠ್ಠಲನ ಸ್ಮರಣೆಯಲಿ ನಿರುತ ಇರೆ ಸಕಲ ಸಂಭ್ರಮವು 3
--------------
ಹೆನ್ನೆರಂಗದಾಸರು
ಎನಗೆ ನೀನೇ ಬಂಧು ಎಲೆಲೆ ಕರುಣಾಸಿಂಧುಎನ್ನ ಮನವೇ ನಿನ್ನ ಮನೆಯೆಂದು ನೆನೆದು ಬಾರೊ ತಂದೆ ಪ. ಮಕ್ಕಳ ಕೊಡುವೆ ಕಂಡ ಸುಜನರ್ಗೆ ಮಗ ನಾನುಅಕ್ಕರಿಂದ ಬೇಡುವವರ ರಕ್ಷಿಸಿಕೊಂಡು ತಂದೆಅಕ್ಷಿಹೀನರಿಗೆ ಪೊಸಚಕ್ಷುವನೀವೆ ಎನಗಿರ್ದಅಕ್ಷಿದೋಷವ ಕಳೆದು ರಕ್ಷಿಸಿಕೊಡು ತಂದೆ 1 ಪೋದ ಗಂಟ ತರಿಸಿಕೊಡುವುದು ನಿನ್ನ ಬಿರುದು ನಿನ್ನಬೋಧನೆಂಬ ಧನದ ಗಂಟು ನಾನು ನನ್ನ ರಕ್ಷಿಸಿಕೊಈ ಧರೆಯ ಕುಂಟರ ಬಲುಬಂಟರ ಮಾಡಿ ನಡೆಸಿದೆಮೋದನಿಧಿ ನಿನ್ನ ಭಕ್ತನ ಕುಂಟುತನವ ಬಿಡಿಸೊ 2 ಸಿರಿಹಯವದನ ತಿಮ್ಮ ನೀ ನಿಧರ್Àನರ್ಗೆ ಧನವಿತ್ತುಕರುಣಿ ಎನ್ನ ಧೈರ್ಯಧÀನವನು ಕೊಡೆಯದೇಕೆಧರೆಯೊಳೆನ್ನಾಜ್ಞೆಯನು ನಿಲಿಸಿಕೊಳಬೇಕಾದರೆಧುರದಿ ಅನನ್ಯಾಶ್ಚಿಂತಯೆಂತೋ ಎಂದ ಮಾತ ಸಲಿಸೋ 3
--------------
ವಾದಿರಾಜ
ಎನ್ನಪಾಪವೇ ಎನ್ನ ಕಾಡುವುದು ಎನ್ನಯ್ಯ ಹರಿಯೆ ನಿನ್ನದಿದರೊಳನ್ಯವೇನಿಹ್ಯದು ಪ ಮುನ್ನಮಾಡಿದ ಪಾಪಕರ್ಮವು ಬೆನ್ನಬಿಡದೆ ಕಾಡುತಿರಲು ನಿನ್ನಗನ್ನುವುದಾವ ನ್ಯಾಯವು ಪನ್ನಂಗಶಾಯಿ ಸನ್ನುತಾಂಗ ಅ.ಪ ನಾನಾಜೀವಿಗಳ ಪ್ರಾಣಹಾರಿಸಿದೆ ಅನ್ಯರಿಗೆ ಬಿಡದೆ ಜಾಣನುಡಿ ಪೇಳಿ ಹಾನಿ ಬಯಸಿದೆ ದುಗ್ಗಾಣಿ ರಿಣಕಾ ಗೇನುಯಿಲ್ಲೆಂದಾಣೆ ಮಾಡಿದೆ ನಾ ನಿನ್ನ ಮರೆದೆ ಏನು ತಿಳಿಯದೆ ಜ್ಞಾನ ಪೇಳಿದೆ ಜ್ಞಾನವಂತರಿಗ್ಹೀನ ನುಡಿದೆ ಮಾನವಂತರ ಮಾನ ಕಳೆದೆ ಹೀನಬವಣೆಯೋಳ್ಬಿದ್ದೆನಭವ 1 ಅಂಗನೆಯರ ಸಂಗ ಬಯಸಿದೆ ದುರಿತಕ್ಕೆ ಹೇಸದೆ ಅಂಗನೆಯರ ಗರ್ಭ ಭಂಗಿಸಿದೆ ಅನ್ಯರ ಒಡವೆಗೆ ಕಂಗಳಿರೆ ಭಂಗಕೊಳಗಾದೆ ಮಂಗ ನಾನಾದೆ ನಿತ್ಯ ನೇವಹಕೆ ಅಂಗನೆನಿಸದೆ ಬಡವರ್ವಿಮಹಕೆ ನುಂಗಿ ಕೂತೆನು ಪರರ ದ್ರವ್ಯಿ ನ್ನ್ಹ್ಯಾಂಗೆ ನಿನ್ನೊಲಿಮೆನಗೆ ಅಭವ 2 ಕೊಟ್ಟ ಒಡೆಯರಿಗೆರಡನೆಯ ಬಗೆದೆ ನಂಬಿ ಎನ್ನೊ ಳಿಟ್ಟ ಗಂಟನು ಎತ್ತಿಹಾಕಿದೆ ಪಡೆದ ಮಾತೆಯ ಬಿಟ್ಟು ಬೇಸರ ಮಾಡಿನೋಡಿದೆ ಭ್ರಷ್ಟನಾನಾದೆ ದುಷ್ಟಗುಣಗಳನೊಂದುಬಿಡದೆ ಶಿಷ್ಟಪದ್ಧತಿ ಜನಕೆ ಉಸುರಿದೆ ಕೊಟ್ಟವಚನೊಂದು ನಡೆಸದಿಂದುಳಿದು ಕೃತಿ ಪೇಳೆನಭವ 3 ಒಂದೆ ಮನದವನಂತೆ ತೋರಿದೆ ಮತ್ರ್ಯದವರಿಗೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿದೆ ದೋಷವಿನಿತು ಹೊಂದದವರಿಗೆ ಕುಂದು ಹೊರೆಸಿದೆ ನಾನೇ ಅಹುದಾದೆ ಸಿಂಧುಶಯನ ಭಕ್ತರನ್ನು ಕಂ ಡೊಂದಿಸದೆ ಮುಖವೆತ್ತಿ ನಡೆದೆ ಮುಂದುಗಾಣದೆ ದೋಷ ಮಾಡಿದೆ- ನೊಂದು ಪುಣ್ಯವನರಿಯೆನಭವ 4 ಕೊಡುವ ಧರ್ಮಕೆ ಕಿಡಿಯನ್ಹಾಕಿದೆ ಕೂಡಿದ್ದವರಿಗೆ ಕೆಡಕು ಬೋಧಿಸಿ ಒಡಕು ಹುಟ್ಟಿಸಿದೆ ಅಡಿಗೆ ಬಾಗಿ ಮಿಡುಕುವವರಿಗೆ ದುಡುಕನಾಡಿದೆ ಕಡುಪಾಮರಾದೆ ಪಿಡಿದು ಕಾಯುವ ಒಡೆಯನ್ಹೆಸರಿನ ಮುಡಿಪು ನುಂಗಿ ಕಡುಪಾಪಾತ್ಮಾದೆನು ಸುಡುಸುಡೆನ್ನಯ ಜನ್ಮವ್ಯಾಕಿನ್ನು ಒಡೆಯ ಶ್ರೀರಾಮ ಸಾಕುಮಾಡೋ 5
--------------
ರಾಮದಾಸರು
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಎಲೆ ಮನಾ ವ್ಯರ್ಥಗಳೆವರೇ ಜನುಮವನು | ನೆಲಿಯ ನಿನ್ನರುವದಾ ಹೊಲಬು ಮರೆದು ಪ ಇಳಿಯೊಳಗ ನರದೇಹದಲಿ ಜನಿಸಿ ಕೊಡುವದು | ಸುಲಭವಲ್ಲವೊ ಹೋದ ಬಳಿಕ ನಿನಗದು ಮುಂದ ಅ.ಪ ಮೇದಿನಿಯೊಳಗ ಮಿಗಿಲಾದ ಜನ್ಮದಿ ಬಂದು| ಐದಿದಾವರ್ಣ ಕರ್ಮಾಧರಿಸಿ ಮಾಡುತಲಿ | ಗೈದು ನಿತ್ಯಾನಿತ್ಯ ವೈದಿಕ ವಿಚಾರವನು | ಆದಿ ಪುರುಷನ ಕಾಂಬ ಹಾದಿ ಕೂಡಿ | ಖೇದವನು ಕುಡುವ ವಿವಾದ ಗುಣವನೆ ನೀಗಿ | ಮೋದದಲಿ ಶರಣ್ಹೊಕ್ಕು ಸಾಧು ಜನರನು ಸರಿಸಿ | ವೇದಾಂತ ಬ್ರಹ್ಮ ಸೂತ್ರಾದಿ ವಾಕ್ಯಾರ್ಥವನು 1 ಬೋಧೆಯಲಿ ಪಡೆದು ಜ್ಞಾನೋದಯ ಕಾಣದೆ ಭವ ಶರಧಿಯನು ಗೆಲಲಾಗಿ | ಶರಣ ಜನರಿಗೆ ತೆಪ್ಪ ಪರಿಯಂದಾತಾಗಿಹ | ಹರಿನಾಮವ ನೆನೆದು ಹರಿಧ್ಯಾನಗೈವುತಲಿ | ಹರುಷದಲಿ ಪದಿನಾರು ತೆರ ಪೂಜಿಸಿ | ಪರಮ ಸದ್ಭಾವದಲಿ ಗುರುಡಿಂಗರ ಮೇಳದಲಿ | ಭರದಿ ತಾಳದಂಡಿಗೆಯ ಕರದೊಳಗ ತಾ ಪಿಡಿದು | ಶರೀರ ಭಾವನೆ ಮರೆದು ಭರಿತ ಪ್ರೇಮಿತನಾಗಿ | ಇರಳು ಹಗಲು ಪಾಡುತಲಿ ಹರಿಭಕ್ತನಾಗದೇ 2 ವನಧಿಯೊಳು ಥೆರೆಸಂಗ ಧನುಮತದಿದೋರ್ವ | ಗುಳ್ಳಿಯ ಪರಿಸೇವೆಯೀತನು ವೆಂದು-ದರಿಯು | ಆನದೊಳಗ ಉತ್ಕ್ರಷ್ಟ ತನದಿ ಮೆರೆಸ್ಯಾಡುತಿಹ | ಕನಕದಧಿದೇವಿ ಕಿವಿಯನು ಬೀಸುವಾಗ | ಅಣುಗ ಕರಿಯಂತೆ ಅರಕ್ಷಣದವಳು ಯಂದು ಅತಿ | ಹೆಣಗುತಿಹ ಸಾಯಾಸವನೆ ತ್ಯಜಿಸಿ ತಾ ದೊರಕಿ | ಧನಿತದರಿಂತುಷ್ಟವನು ಕರಿಸಿ ದೃಢದಿಂದ | ಘನ ನಂಬು ಗುರು ಮಹಿಪತಿ ಚರಣ ಬಿಡದಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಲಾಪರಾಧವೈಯ್ಯಾ ಹರಿಪ್ರೀತಿ ಯಿಲ್ಲದಿಹ ಕರ್ಮಗಳು ಝಲ್ಲರಿಯ ಛಾಯಾ ಪ. ಸಾಧುಲಿಂಗವ ಧರಿಸಿ ವೇದ ವೇದಾಂತ ಸ- ದ್ಬೋಧೆಯನು ಕೇಳಿದರು ಪೇಳಿದರು ಸುಪವಿತ್ರ ಮೇದಿನಿಯ ಸರ್ವತೀರ್ಥಸ್ನಾನ ಮಾಡಿದರು ಓದಿದರು ಸರ್ವಶಾಸ್ತ್ರ ಸಾಧಿಸುತ ಕಾಮ ಕ್ರೋಧಾದಿಗಳ ಜೈಸಿ ವನ ಕೈದಿ ತಪಗೈದರು ಮಹಾದಾನಿಯಾದರು ವಿ- ರಾಧವಧ ಪಂಡಿತನ ಪಾದಕರ್ಪಣ ವಿನಹ ಬಾಧಿಸದೆ ಬಿಡದು ಜನ್ಮ 1 ಹರಿಯೆ ಸರ್ವೋತ್ತಮ ಚರಚರಾತ್ಮಕ ಜಗ- ದ್ಗುರುತಮ ಮಹಾಮಹಿಮ ಕರುಣಾರ್ಣವನ ನಾಮ ಸ್ಮರಣೆಯಿಲ್ಲದೆ ಮಾಳ್ಪ ಪರಿಪರಿಯ ಕರ್ಮಗಳು ನರಕ ಸ್ವರ್ಗದ ಭ್ರಮಣವು ಸ್ಥಿರವೆಂದು ನಂಬಿ ದುಸ್ತರ ಭವಾರ್ಣವದಿ ಮುಳುಗಿ ತಿರುತಿರುಗಿ ಜನ್ಮಮಂ ಧರಿಸಿ ಬಹುದುಃಖ ಸಾ ಗರದಿ ತೇಲಾಡುವುದನರಿಯದತಿ ದುರ್ಮೋಹ ಸೆರೆಯೊಳಗೆ ಬಿದ್ದ ಮೇಲೆ 2 ಸರ್ವತಂತ್ರಸ್ವತಂತ್ರ ಸರ್ವತ್ರ ವ್ಯಾಪ್ತ ಸುರ ಸಾರ್ವಭೌಮಸುನಾಮ ಸಾಮಗಾನಪ್ರೇಮ ದೂರ್ವಾದಳಶ್ಯಾಮ ದುರ್ಗಾರಮಣ ಜಗವ ಗರ್ವದಿಂ ತಾ ಕರ್ತುವೆಂದಹಂಕರಿಸಿ ಜಗ ಕೊರ್ವನೆ ಹೃಷೀಕೇಶ ಕೇಶವ ದೈತ್ಯ ಪೂರ್ವಕವೆ ನಿರಪರಾಧ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಲ್ಲಾಪರಾಧವೈಯ್ಯಾ ಹರಿಪ್ರೀತಿ ಯಿಲ್ಲದಿಹ ಕರ್ಮಗಳು ಝಲ್ಲರಿಯ ಛಾಯಾಪ. ಸಾಧುಲಿಂಗವ ಧರಿಸಿ ವೇದ ವೇದಾಂತ ಸ- ದ್ಬೋಧೆಯನು ಕೇಳಿದರು ಪೇಳಿದರು ಸುಪವಿತ್ರ ಮೇದಿನಿಯ ಸರ್ವತೀರ್ಥಸ್ನಾನ ಮಾಡಿದರು ಓದಿದರು ಸರ್ವಶಾಸ್ತ್ರ ಸಾಧಿಸುತ ಕಾಮ ಕ್ರೋಧಾದಿಗಳ ಜೈಸಿ ವನ ಕೈದಿ ತಪಗೈದರು ಮಹಾದಾನಿಯಾದರು ವಿ- ರಾಧವಧ ಪಂಡಿತನ ಪಾದಕರ್ಪಣ ವಿನಹ ಬಾಧಿಸದೆ ಬಿಡದು ಜನ್ಮ 1 ಹರಿಯೆ ಸರ್ವೋತ್ತಮ ಚರಚರಾತ್ಮಕ ಜಗ- ದ್ಗುರುತಮ ಮಹಾಮಹಿಮ ಕರುಣಾರ್ಣವನ ನಾಮ ಸ್ಮರಣೆಯಿಲ್ಲದೆ ಮಾಳ್ಪ ಪರಿಪರಿಯ ಕರ್ಮಗಳು ನರಕ ಸ್ವರ್ಗದ ಭ್ರಮಣವು ಸ್ಥಿರವೆಂದು ನಂಬಿ ದುಸ್ತರ ಭವಾರ್ಣವದಿ ಮುಳುಗಿ ತಿರುತಿರುಗಿ ಜನ್ಮಮಂ ಧರಿಸಿ ಬಹುದುಃಖ ಸಾ ಗರದಿ ತೇಲಾಡುವುದನರಿಯದತಿ ದುರ್ಮೋಹ ಸೆರೆಯೊಳಗೆ ಬಿದ್ದ ಮೇಲೆ 2 ಸರ್ವತಂತ್ರಸ್ವತಂತ್ರ ಸರ್ವತ್ರ ವ್ಯಾಪ್ತ ಸುರ ಸಾರ್ವಭೌಮಸುನಾಮ ಸಾಮಗಾನಪ್ರೇಮ ದೂರ್ವಾದಳಶ್ಯಾಮ ದುರ್ಗಾರಮಣ ಜಗವ ಗರ್ವದಿಂ ತಾ ಕರ್ತುವೆಂದಹಂಕರಿಸಿ ಜಗ ಕೊರ್ವನೆ ಹೃಷೀಕೇಶ ಕೇಶವ ದೈತ್ಯ ಪೂರ್ವಕವೆ ನಿರಪರಾಧ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿಪ ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ 1 ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2 ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3 ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4 ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5 ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡುಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6 ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡುಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7 ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8 ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡುಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9 ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10 ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನುಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ 11
--------------
ಕನಕದಾಸ
ಎಲ್ಲಿ ನೋಡಿದರಲ್ಲಿ ಚನ್ನಕೇಶವನು ಪುಲ್ಲಲೋಚನನಾದ ಶ್ರೀ ಕೃಷ್ಣನು ಪ ಭೂತಳ ಪಾತಾಳ ಸಕಲ ಲೋಕಗಳಲ್ಲಿ ಭೂತ ಪ್ರೇತಾಳ ಕ್ರಿಮಿ ಜಂತುಗಳಲ್ಲಿ ಮಾತು ಚೇಷ್ಟಗಳಲ್ಲಿ ಕೆರೆ ಭಾವಿ ವನದಲ್ಲಿ ಕೋತಿ ಖಗವೃಂದ ಪಶುವರ್ಗಂಗಳಲ್ಲಿ 1 ವೇದ ಶಾಸ್ತ್ರಗಳಲ್ಲಿ ಸರ್ವ ಧರ್ಮಗಳಲ್ಲಿ ಬೋಧಕ ಮೊದಲಾದ ಗುರು ವರ್ಗದಲ್ಲಿ ಪಾದ ಪಾದಗಳಲ್ಲಿ ಸಾಧು ಸಜ್ಜನರಲ್ಲಿ ವಾದ್ಯ ಮೃದಂಗಾಗಿ ನಾದಂಗಳಲ್ಲಿ 2 ಕಣ್ಣುಗಳಿಗೆಸೆಯುವ ಸಕಲ ವಸ್ತುಗಳಲ್ಲಿ ಮಣ್ಣಿನಲಿ ಸರ್ವತ್ರ ಘನ ಸೃಷ್ಟಿಯಲ್ಲಿ ಬಣ್ಣಿಸಲ್ಕಾಗದ ಹರಿ ಕೀರ್ತನೆಗಳಲ್ಲಿ ಹೆಣ್ಣು ಹೊನ್ನು ಮಣ್ಣು ತ್ರಿವರ್ಗದಲ್ಲಿ 3 ಸಕಲ ಚರ ಪ್ರಾಣಿಯಲಿ ಅಚರ ಜೀವಗಳಲ್ಲಿ ಸಕಲ ಸ್ತ್ರೀ ಪುರುಷರಲಿ ಸುರದನುಜರಲ್ಲಿ ಸಕಲ ಧಾನ್ಯಗಳಲಿ ತಿಂಡಿ ತಿನಸುಗಳಲ್ಲಿ ಸುಖ ದುಃಖ ಬಹಿರಂಗ ಅಂತರಂಗದಲಿ 4 ದಿನದಲ್ಲಿ ನಿಶೆಯಲ್ಲಿ ಅನ್ನಪಾನಗಳಲ್ಲಿ ಅಣುರೇಣು ತೃಣಕಾಷ್ಟ ಸರ್ವ ದಿಕ್ಕಿನಲೀ ಕನಸಿನಲಿ ಮನಸಿನಲಿ ಪಂಚ ಭೂತಗಳಲ್ಲಿ ಜನನ ಮರಣಾತೀತ ಚನ್ನಕೇಶವನು 5
--------------
ಕರ್ಕಿ ಕೇಶವದಾಸ
ಏನು ಧನ್ಯರೋ ಜಗದಿ ಎಂಥ ಮಾನ್ಯರೋ | ಮೌನಿ ಶ್ರಿ ರಘುಪ್ರೇಮತೀರ್ಥರು ಪ ಕಲಿಯುಗದಿ ಕÀ್ರತುಗೈದ ಇಳಿಯ ಜನಕ ಸಾಧ್ಯವೆಂದು ಕುಲಿಶಪಾಣಿಯಂತೆ ತೋರ್ಪರು 1 ಧೂರ್ತರಿಂದ ದೂರವಿದ್ದು | ಸ್ವಾರ್ಥರಹಿತರಾಗಿ | ಸಕಲ ತೀರ್ಥಕ್ಷೇತ್ರ ಚರಿಸಿ ಜನ್ಮ ಸಾರ್ಥಕೆನಿಸಿದ ಯತಿಯು 2 ಸದನ ತೃಣಸಮಾನವೆನಿಸಿ ಮುದದಿ | ವಿನಯಶೀಲ ದ್ವಿಜರಿಗಿತ್ತು ಮುನಿಯೆನಿಸಿ ವಿರುಕ್ತರು 3 ಚತುರಾಶ್ರಮ ವ್ರತದಿ ನೇಮ ಸತತಾ ಚರಿಸುತಲಿ | ಶಿಷ್ಯರಾದಿಗೆ ವ್ರತಬೋಧವೃಷ್ಟಿ ಹಿತದಿಗರೆದು ಪೊರೆವ ಯತಿಯು 4 ಶ್ರೀಮಧ್ವಸುಮತವಾರಿಧಿ ಸೋಮನೆಂದೆನಿಸಿ | ಜಿತ ಕಾಮರಾಗಿ ಕಠಿಣ ತಪದಿ | ಶ್ರೀ | ಶಾಮಸುಂದರನ ವಲಿಸಿದವರು 5
--------------
ಶಾಮಸುಂದರ ವಿಠಲ
ಏನು ಮಾಡಲೀ ಮನ ಮಾತು ಕೇಳದೇನು ಮಾಡಲಿ ಶ್ರೀ ನರಹರಿಯ ನೆನೆಯದೆ ಕಂಡ ಹೀನ ವಿಷಯದಲ್ಲಿ ಶ್ವಾನನಂತೆ ಪೋಪರೇನು ಪ ಸಾಧು ಸಜ್ಜನರ ಬೋಧನೆಯ ಜರಿಸಿ ಮಾಧವನೆ ನಿನ್ನ ಪಾದಕೊಯಿರಿ ಮಾಳ್ಪೊದೇನು 1 ಕಾಯ ಬಾಂಧವರ ಮಾಯಪಾಶಕ್ಹಾಕೆ ತೋಯಜಾಕ್ಷ ಎನ್ನ ಬಾಯ ಬಿಡಿಸೊರೈಯ್ಯ 2 ಗಜ ಸಿಕ್ಕಿಬಿದ್ದು ನೈಜ ದಿಕ್ಕುಕಾಣದಂತೆ ಸಿಕ್ಕೆ ವಿಷಯದಲ್ಲಿ 3 ತಂದು ತಂದು ಗೋವಿಂದ ನಿನ್ನಲಿಡೆ ಸಂದುಗೊಂಡು ಬಿಡಿಸಿಕೊಂಡು ಪೋಪುದೈಯ್ಯ 4 ದೇಹಗೇಹದಲ್ಲಿ ಸ್ನೇಹ ಇಡಿಸಿ ಕೆಡಿಸಿ ಶ್ರೀ ಹಯವದನ ಮೋಹಪಾಶಕ್ಹಾಕೋದೇನು 5 ವಾಕು ಕೇಳೋ ತಂದೆ ಪಾದ ಒಂದೇ ಸಾಕಬೇಕೊ ಇಂದೆ 6 ಹೀನಬುದ್ಧಿಬಿಡಿಸಿ ಜ್ಞಾನ ನಿನ್ನಲಿರಿಸಿ ಗಾನಲೋಲ ಕಾಯೋ ಶ್ರೀ ನರಹರಿಯೆ 7
--------------
ಪ್ರದ್ಯುಮ್ನತೀರ್ಥರು
ಏನು ಹೇಳಲಿ ನಿನಗ ಮನವೇ ನಾ ಇನ್ನೇನು ಹೇಳಲಿ ನಿನಗೆ ಶ್ರೀನಾಥನಂಘ್ರಿಯ ನೀನೋಲೈಸದಿಹುದೇನೋ ಪ ಮನುಷ್ಯದೇಹ ಧರಿಸಿ ಸದ್ಗತಿಯ | ಜ್ಞಾನದಾರಿ ತ್ಯಜಿಸಿ ನೀ ಭಕುತಿ ಸುಖ | ಖೂನವಿಲ್ಲದೆ ಚರಿಸಿ | ಏನೂ ಇಲ್ಲದೆ ವಿದ್ಯಾ ಮಾಟಕ ಭ್ರಮಿಸಿಹುದೇನಾ 1 ವಿಷಯ ಸುಖ ಹರಿದು ಸಂಸಾರದಿ | ನಿಶಿದಿನದಲಿ ಸವೆದು ತಾಪತ್ರಯ | ಘಸಣಿಯೊಳಗ ಕುದಿದು | ಪಶುವಿನ ಪರಿಯಲಿ ಯಚ್ಚರ ಮರೆದಿಹುದೇನಾ 2 ಇನ್ನಾರೆ ಹಿತವರಿಯೋ ಸದ್ಗುರುವಿನ | ಮನ್ನಿಸಿ ಗತಿ ಪಡಿಯೋ ಹರಿಯ ನಾಮವಾ | ಚನ್ನಾಗಿ ನಂಬಿ ನಡಿಯೋ | ಸನ್ನುತ ಮಹಿಪತಿ ಬೋಧಾಮೃತ ಸವಿಯದೇನಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಹೇಳಿದರೇನು ಹೀನ ಮನಕ | ತಾನು ಎಚ್ಚರ ಹಿಡಿಯ ದನಕಾ ಪ ಬೂದಿಯೊಳಗ ಹೋಮ ಮಾಡಿದಂತೆ | ಬೋಧಾನುಗೃಹ ಕಳವದು ಮರೆತಕೆ 1 ಹರಿ ಕೀರ್ತನೆ ಇರಲಿಲ್ಲಾ | ಬರಡು ಮಾತಿಗೆ ಸುಖ ಪಡುದಲ್ಲಾ 2 ಒಮ್ಮೆಯಾದರೂ ಹರಿ ಹರಿಯಂದು | ಝಮ್ಮೆನೆವೆ ಪಶ್ಚಾತಾಪ ಬಾರದೆಂದು 3 ಗಾಳಿಯಂತೆ ಓಡಾಡುವದು ನೋಡಿ | ಕಾಲೂರಿ ನಿಲ್ಲದು ಮತಿಗೇಡಿ 4 ತಂದೆ ಮಹಿಪತಿ ದಯವಾಗದನಕ | ಒಂದು ಹಿಡಿಯದು ಸ್ವಹಿತ ವಿವೇಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು
ಏನೆಂದು ಬಣ್ಣಿಸಲಿ ಎಲೆ ಧನವೆ ನಿನ್ನ ಮಾಣುವ ವಿಷಯಸುಖ ಅಹುದೆನಿಪ ಪರಿಯ ಪ ಏರಿಸುವಿ ಹಿರಿಕುದುರೆ ತೋರಿಸುವಿ ದುರ್ಮದವ ಹಾರಿಸುವಿ ಸುವಿಚಾರ ಮೀರಿಸುವಿ ಸುಪಥ ದೂರಿಸುವಿ ಮಹನೀತಿ ಘೋರಿಸುವಿ ಬಡವರನು ಕಾರಿಸುವಿ ತಿಂದನ್ನ ಧಾರುಣಿಯೊಳು 1 ಮೆರೆಸುವಿ ಅಂದಣದಿ ಸುರಿಸುವಿ ದುರ್ವಚನ ನರಸುವಿ ಎಡಬಲದಿ ಪರಿಪರಿಯ ಜನರ ತರಿಸುವಿ ಸತಿಸುತರ ಇರಿಸುವಿ ಅರಮನೆಯೊಳ್ ಮರೆಸುವಿ ಮಹಿಮರ ಸಂದರುಶನದ ಸುಖವ 2 ವೇದಶಾಸ್ತ್ರಕಿಳಿಸುವಿ ವಾದನುಡಿ ಕಲಿಸುವಿ ನೀ ಸಾಧುಸಜ್ಜನರ ನಿಜಬೋಧ ತೋರಿಸುವಿಯೋ ಭೇದನಿಕ್ಕುತ ವೈರ ಸಾಧಿಸುತ ಪರಲೋಕ ಸಾಧನೆಯ ಕೆಡಿಸ್ಯಮಬಾಧೆಗಾನಿಸುವಿ 3 ತೊಡಿಸುವಿ ವಿಧವಿಧದ ಒಡವೆವಸ್ತ್ರಂಗಳನು ನುಡಿಸುವಿ ಕಡೆತನಕ ಕಡುದುಗುಡ ಬಡಿಸುವಿ ಬಲುಜಂಬ ನಡೆಸುವಿ ದುಷ್ಷಥದಿ ಕೆಡಿಸುವಿಯೋ ಸಲೆ ಪುಣ್ಯಪಡೆದ ನರಜನುಮ 4 ಇನ್ನೆಷ್ಟು ಬಣ್ಣಿಸಲಿ ನಿನ್ನ ಕರುಣದ ಗುಣವ ನಿನ್ನ ನಂಬಲು ಬಿಡದೆ ಕುನ್ನಿಯೆಂದೆನಿಸಿ ಪನ್ನಂಗಶಯನ ಮಮ ಸನ್ನುತಾಂಗ ಶ್ರೀರಾಮ ನುನ್ನತಂಘ್ರಿಯ ಧ್ಯಾನವನ್ನು ಅಗಲಿಸುವಿ 5
--------------
ರಾಮದಾಸರು