ಒಟ್ಟು 615 ಕಡೆಗಳಲ್ಲಿ , 86 ದಾಸರು , 499 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ನಿಮಗೆ ಜಯವಣ್ಣ ಭಯವಿಲ್ಲೀನುಡಿ ಕೇಳ್ ಚಿಣ್ಣ ಪ ಶ್ರೀ ಮನೋಹರನ ಲೀಲೆಯಿದು ಸು ಕ್ಷೇಮವಹುದು ಸತ್ಪುರುಷರಿಗೆ1 ಈ ಜಗತ್ತನೂ ಈಶ್ವರನೂ ತಾ ರಾಜನಾಗಿ ಕಾಪಾಡುವನು 2 ಕುರುಡರು ತಾವ್ ಕೆಡುವರು ಕೊನೆಗೆ 3 ಇದರೊಳುಂಟು ಬಹುವಿಧ ಭೇದ ವದರುತಿಪ್ಪದು ಸಕಲವೇದ4 ಅಂತ್ಯವಿಲ್ಲದಿಹ ಕಾರಣದಿ ಅ ನಂತ್ಯವೆಂದು ಪೇಳ್ವರು ಭರದಿ 5 ಮನುಜ ಜನ್ಮ ಬಹುದುರ್ಲಭವು ಮನನಶೀಲರಿಗಹುದು ಶುಭವು 6 ಮರೆಯಬೇಡಿ ಜನರೆ ನೀವು ಅರಿತು ಅರಿಯದವರಿಗೆ ನೋವು 7 ಕತ್ತಲೆ ಕೊನೆಯಿಲ್ಲದ ಘೋರ 8 ವುಳಿಯದು ನಿಮಗದು ಕೇಳ್ ಜನರೆ 6 ಧರ್ಮವೆಂಬ ಮೂಟೆಯ ಕಟ್ಟೆ ಬಟ್ಟೆ 10 ಗುರುವಾಜ್ಞೆಯ ಮೀರುವುದು ಸಲ್ಲ ಈ ದುರುಳತನ ನಿಮಗೆ ಸರಿಯಲ್ಲ 11 ನಾನೇ ಶ್ರೇಷ್ಠನೆಂಬುವ ಮಾತು ಶಾನೆ ವಡಕು ಗಡಿಗೆಯು ತೂತು 12 ಹಿಂದಿನವರ ಕಷ್ಟವ ನೋಡಿ ಮುಂದಕೆ ಸತ್ ಸಾಧನೆ ಮಾಡಿ 13 ಮೂರು ಕರಣ ಶುದ್ಧಿಯು ಬೇಕು ಧೀರ ಜನರಿಗಿಷ್ಟೇ ಸಾಕು 14 ಜನರ ನೋಡಿ ನಡೆಯಲಿಬೇಡಿ ಕೊನೆಗೆ ನಿಮಗೆ ಕಾಲಿಗೆ ಬೇಡಿ 15 ಹೆಚ್ಚಪೇಕ್ಷಿಸೆ ಬರುವುದಿಲ್ಲ ಮೆಚ್ಚನು ನಿಮಗೆ ಸಿರಿಯನಲ್ಲ 16 ನಿರ್ಮಲ ಮಾರ್ಗ ಹುಡುಕಿದಿರಾ 17 ಜ್ಞಾನರತ್ನ ಸಂಪಾದನೆಯು ಹೀನ ಜನರಿಗಾಗದು ಕೊನೆಯು 18 ದುರಾಸೆಯಲಿ ಕೆಡುವರು ಕೆಲರು ನರಾಧಮರು ಎಂದೆನಿಸುವರು 19 ಪರಿಯಂತ ತಂ ತಮ್ಮಟ್ಟಿಗಿಹುದು ಅಂತ 20 ಗೂಡಿನ ಮೇಲೆ ದುರಭಿಮಾನ ಮಾಡಿ ಮಾಡಿ ಕೆಡುತಿಹರು ಜನ 21 ಯೀಗೂಡಿಗೆವೊಂದಾಧಾರ ಯೋಗಿಗಳರಿವರಿದರಸಾರ 22 ವರ ರಸಗಳು ನಾಲ್ಕು ತೊಗರು 23 ಹಂಚೇಳರಿಂ ಮಾಡಿಹದೇವ 24 ಘಟಿಸಿರುವುದು ಪತ್ತಲೆಯಿದರೊಳ್ 25 ಮರನಿದೆಂದು ಶಾಸ್ತ್ರದ ಮೂಲ ಅರಿಯದೆ ನಾನೆಂಬೆನು ಬಾಲ 26 ಪಕ್ಷಿಗಳೆರಡೀ ಮರದಲ್ಲಿ ಸಾಕ್ಷಿ ಒಂದು ಒಂದಕೆ ಅಲ್ಲಿ 27 ಮರದ ಪಣ್ಣು ತಿಂಬುವದೊಂದು ನಿರುತವು ನೋಡುತಿರುವದೊಂದು 28 ದ್ವಾಸುಪರ್ಣ ಶೃತಿ ಇದರರ್ಥ ದಾಸನಾಗದಿರುವನು ವ್ಯರ್ಥ 29 ಅಧ್ಯಾತ್ಮ ವಿದ್ಯದಲಿ ತೋರುವುದೇ 30 ಜೀವನಾಮ ಆತ್ಮನಿಗುಂಟು ದೇವತಾನು ತಬ್ಬಿದ ಗಂಟು 31 ಅಭೇದ ಶೃತಿಗಳೇನಕ ವಿಧ ಸ್ವಭಾವದಿರುನಡೆ ತೋರುವದ32 ಸುರರುತ್ತಮರು ನರರಾನಿತ್ಯ ಸುರೇತರರು ನೀಚರು ಸತ್ಯ 33 ನೂರು ವರುಷ ಬದುಕುವರೆಂದು ಮೀರಿ ಮನದಿ ಯೋಚಿಸಿ ಮುಂದು 34 ಬಹು ಧನಾರ್ಜನೆಯ ವೂಹೆಯಲಿ 35 ಮೊದಲು ಅನ್ನಕಿಲ್ಲೆಂದು ಮತಿ ವಿಧ ವಿಧ ವಸ್ತ್ರಗಳಲಿ ಪ್ರೀತಿ 36 ನಾಬಡವನು ಎಂದಗಲಿರುಳು 37 ತನಗೆ ಬೇಕಂತ ಚಿಂತೆಯೊಳು 38 ಇತರರ ನೋಡಿ ತನಗಪೇಕ್ಷೆ ಗತಿ ಇಲ್ಲದೆ ಇರುವುದೆ ಶಿಕ್ಷೆ 39 ತಾವ್ ಸಮಂಜಸದಿ ಪೇಳಿದರು 40 ಪ್ರವೃತ್ತಿ ಮಾರ್ಗದ ಸಂಪತ್ತು ಭವಾಂಬುಧಿ ಸುಳಿಯು ವಿಪತ್ತು 41 ಫಲವ ಕೋರಿ ಕರ್ಮವ ಮಾಡಿ ಹಲವು ಯೋನಿಗಳೊಳೋಡಾಡಿ42 ಮರಳಿ ಮರಳಿ ಜನನ ಮರಣದೆ ದರಿಯ ಕಾಂಬ ಬಗೆ ದಾರಿಯದೆ 43 ಇದುವೆ ದೊಡ್ಡ ಸಂಸೃತಿ ವೃಕ್ಷ ತುದಿ ಮೊದಲಿಗು ದೊರಕದು ಮೋಕ್ಷ 44 ಇನ್ನು ಅಕ್ಕ ತಂಗಿಯು ಮೊದಲು 45 ಸತಿ ಸುತರು ಬಳಗಗಳು 46 ಇವರು ತನ್ನವರಿತರರಲ್ಲ ಭವ ಜಲಧಿಯ ಜಂತುಗಳೆಲ್ಲ 47 ಕೊಡದಿದ್ದರೆ ಕೋಪವು ಬಹಳ 48 ವಿತ್ತವಿರಲು ಬಂಧುಗಳೆಲ್ಲ ಹತ್ತಿ ಇವನ ಬಾಧಿಪರೆಲ್ಲ 49 ಸುಳ್ಳುಹೇಳಿದರೆ ಬಹುನಂಬಿಕೆ 50 ಹಿತೋಪದೇಶದಿ ಬಹುಕೋಪ ಪತಿತ ಜನರಿಗೆ ಇದು ಪಾಪ 51 ಒಬ್ಬ ದೈವಲೋಕಕೆ ಸತ್ಯ ಹಬ್ಬವವನ ಭಜಿಪುದಗತ್ಯ 52 ಕಾಮುಕರಿಗೆ ಕಡೆಗೂ ದುಃಖ ನೇಮವದಕೆ ಮೂಲವುರೊಕ್ಕ 53 ಸ್ಪøಹದಿಂದಲೆ ಕೋಪವು ಬಹುದು ವಿಹಿತವೆಂದು ನಗುವನೆ ಸಾಧು 54 ಲೋಭದಿಂದ ಮೂಲಕೆ ನಾಶ ಸ್ವಾಭಾವ್ಯದಿ ದುರ್ಜನಕಾಶಾ 55 ರಾಶಿ ಧನವ ಕೊಳ್ಳೆಯು ಕೊಡುವ 56 ದಾನಕೆಂದರಿಲ್ಲವು ಕಾಸು ದಂಡಕೊಡುವುದಕೆ ಬಹುಲೇಸು 57 ನಷ್ಟವಾದರೂ ಮನಕಿಷ್ಟ ದುಷ್ಟಾತ್ಮರು ಪಡುವರು ಕಷ್ಟ 58 ಆರ್ಯರುಕ್ತಿ ಕೇಳುವುದಿಲ್ಲ ಕಾರ್ಯದಲಿ ವಿಘಾತವೆ ಎಲ್ಲ 59 ಧನವಿದ್ದರು ಸೌಖ್ಯವು ಕಾಣೆ ಘನದುರಾಸೆ ಕುಜನರಿಗೆ ಆಣೆ 60 ಭೂಮಿ ಉಂಟು ತನಗೆಂಬುವರು ನೇಮದಿ ದಂಡವ ತೆರುತಿಹರು 61 ಮಳೆಬೆಳೆಯನು ನಿಂದಿಪರು ಕೆಲರು ಖಳರು ಸುಮನಸರ ದೂಷಿಪರು62 ಮೊದಲು ತುದಿಯಲಿ ದುರಭಿಮಾನ 63 ವ್ಯಾಪಾರದಿ ಧನ ಕಳಕೊಂಡು ಕೋಪ ವ್ಯಾಜ್ಯಕೆಳೆವದೆ ಫಂಡು 64 ಬಲುಧನವ ಕೂಡಿಸುತಲಿ ಮುಂದು 65 ಮುಖದಾಕ್ಷಿಣ್ಯದಿ ಮಾತಾಡಿ ವಿಕಲರನರ ಸ್ನೇಹದಿ ಕೂಡಿ66 ದೊಡ್ಡದಾಗಿ ಮನೆಯನು ಕಟ್ಟಿ ದುಷ್ಟತನದಿ ವಾದಿಸಿ ಬಿಟ್ಟಿ 67 ಕೂಲಿಯವರ ಹೊಟ್ಟೆಗೆ ಕೊಡದೆ ಲೋಲನಾಗಿ ವಂಚನೆ ಬಿಡದೆ 68 ಸಂಸಾರವಿದೆ ಸ್ಥಿರವೆಂದು ಹಿಂಸೆಪಡುತಲಿ ಸದಾನೊಂದು 69 ಚತುರ ಶೀತಿ ಲಕ್ಷಯೋನಿಗಳೊಳ್ ಮತಿಹೀನರಾಗಿ ಜನಿಸುತಲೂ 70 ಭದ್ರವು ತಮಗೆಂದು ಪ್ರಾಣಿಗಳು 71 ಇದಕ್ಕಾಗಿ ಪರಾಧೀನದಲಿ ಪದೇ ಪದೆಗೆ ತಾವು ನೋಯುತಲಿ 72 ಮನುಜ ಜನ್ಮ ಬರುವುದೆ ಕಷ್ಟ ಮಾನಿತನಾದವನೆ ಅತಿ ಶ್ರೇಷ್ಠ 73 ಭೋಧಿಸುವಾತನೆ ಶುಭತಮನು 74 ಸುಜನರಿಲ್ಲವವರದೆ ಪಂಥ 75 ಕರ್ಮಾರ್ಥ ಶೃತಿ ಗಹನದಲಿ ನಿರ್ಮಲರಾಗದೆ ಚಿಂತೆಯಲಿ&ಟಿbsಠಿ
--------------
ಗುರುರಾಮವಿಠಲ
ಜಯ ಜಯಾ ದೇವ ದೇವಾ ಮಾರ್ತಾಂಡ ಭೈರವಾ ದಯದಿಂದ ಪಾಲಸೆನ್ನಾ ಭಕ್ತರನುದಿನಕಾವಾ ಪ ಶರಣರ ಮೊರೆಯ ಕೇಳಿ | ಶಿವ ಅವತಾರವ ತಾಳಿ ಭವರೂಪಮಣಿಮಲ್ಲನಾ | ಮರ್ಧಿಸಿದೆ ತನುಶೀಳಿ 1 ವಿವೇಕಹಯವನೇರಿ | ಭೋಧನಾಸ್ತ್ರವನು ದೋರಿ ಅವಗುಣ ಬಲಮುರಿದೇ | ಜಗಕಭಯವ ಬೀರಿ 2 ಮ್ಯಾಲಕರದಿಂದ ಉಘೇ | ಯನ್ನಲು ಕೂಗಿ 3 ಘನಗುರು ಮಹಿಮಪತಿ | ಸುತ ಪ್ರಭು ಮಾಪತಿ ಮನದೊಳು ಜ್ಞಾನ ದೀಪಾ | ದಿಂದಬೆಳಗುವೆ ಆರತಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯತೀರ್ಥ ಗುರು ಹೃದ್ಗುಹಾಂತರ ವಾಸ ವಾಯ್ವಂತರ್ಗತ ಶ್ರೀ ಕೃಷ್ಣಯ್ಯ ಜೀಯಾ ಪ ಕಾಯೈಯ ನಿನ್ನವ ನಿವನೆಂದು ಅನುದಿನದಿ ಕಾಯ ಮನ ವಚನದಲಿ ನಿನ್ನ ನೆನವಿರಲಿ ಜೀಯಾ ಶ್ರೀ ವಿಜಯರಾಯರ ಸೇವೆ ಕಾರ್ಯಗಳಿಗಭಯವ ನಿಡೈಯಾ ಜೀಯಾ 1 ಲೌಕಿಕದಲ್ಲಿಹನೆಂದು ನಿರಾಕರಿಸದೇಲೆ ನಿನ್ನ ಏಕಾಂತ ಭಕುತಿಯನಿತ್ತು ಸಲಹೋ ಶ್ರೀ ಕಳತ್ರನೆ ಇವನ ವ್ಯಾಕುಲಗಳ ಹರಿಸಿ ಕೃಪಾಕಟಾಕ್ಷದಿ ನೋಡಿ ಕಾಯಬೇಕೈಯಾ 2 ಭಕ್ತವತ್ಸಲ ನಿನ್ನ ಭಕ್ತನಿವನೆಂದೆನಿಸು ಭಕ್ತಿಬಲಜ್ಞಾನ ಸಾಧನವನಿತ್ತು ಶಕ್ತನೆನಿಸಿಹಪರದಿ ಭಕ್ತಿನಿನ್ನೊಳು ಇರಲಿ ಮುಕ್ತರೊಡೆಯ ಕೃಷ್ಣವಿಠಲ ಶ್ರೀ ವೆಂಕಟೇಶ 3
--------------
ಕೃಷ್ಣವಿಠಲದಾಸರು
ಜಯತೀರ್ಥ ಗುರು ಹೃದ್ಗುಹಾಂತರವಾಸ ಪ ವಾಯುವಂತರ್ಗತ ಕೃಷ್ಣಯ್ಯ ಜೀಯ್ಯ ಅ.ಪ ಕಾಯಯ್ಯಇವ ನಿನ್ನವನೆಂದು ಅನುದಿನ ಕಾಯ ವಾಚದಲಿ ನಿನ್ನ ನೆನವಿರಲಿ ಜೀಯ ಶ್ರೀ ವಿಜಯರಾಯರ ಸೇವಾ ಕಾರ್ಯಗಳಿಗಭಯವ ನೀಡಯ್ಯ 1 ಲೌಕಿಕದಲ್ಲಿಹನೆಂದು ನಿರಾಕರಿಸದಲೆ ನಿನ್ನ ಏಕಾಂತ ಭಕ್ತಿಯನಿತ್ತು ಸಲಹೋ ಶ್ರೀ ಕಳತ್ರನೆ ಇವನ ವ್ಯಾಕುಲವ ಹರಿಸಿ ಕೃ ಪಾ ಕಟಾಕ್ಷದಿ ನೋಡಿ ಕಾಯಬೇಕಯ್ಯ 2 ಭಕ್ತವತ್ಸಲ ನಿನ್ನ ಭಕ್ತನಿವನೆಂದೆನಿಸೊ ಭಕ್ತಿಬಲಜ್ಞಾನ ಸಾಧನವನಿತ್ತು ಭಕ್ತವತ್ಸಲನೆಂಬೊ ಬಿರುದು ನಿನ್ನೊಳು ಇರಲಿ ಮುಕುತರೊಡೆಯ ದೇವಾ ಶ್ರೀ ವೇಂಕಟೇಶ 3
--------------
ಉರಗಾದ್ರಿವಾಸವಿಠಲದಾಸರು
ಜಯತೀರ್ಥರು ಕಂಡೆ ಕಂಡೇ ಗುರುಗಳ - ಕಂಡೆ ಕಂಡೇ ಪ ಕಂಡೆ ಕಂಡೆನು ಕರುಣ ನಿಧಿಯನುತೊಂಡರನು ಬೆಂಬಿಡದೆ ಕಾಯ್ವರ ಅ.ಪ. ತಂದೆ ವೆಂಕಟೇಶ ವಿಠಲ ದಾಸರ | ಮಂದಿರದಿ ವಾತದ್ವಿತಿಯ ಪೆಸರಿನವಂದನೀಯರು ಗೈಯ್ಯುತಿರ್ಪುದ | ಅಂದ ಪುಜೆಯ ಛಂದದಿಂದಲಿ 1 ಯೋಗಿ ಕುಲಮಣಿ ಟೀಕಾಚಾರ್ಯರ 2 ಕಾಯಜನ ಶರ ಭಯವಿದೂರನ | ಮಾಯಿಮತ ಮಹತಿಮಿರ ಸೂರ್ಯನಪಾವಮಾನಿ ಮತಾಬ್ಧಿ ಚಂದ್ರನ | ಜಯ ಮುನೀಂದ್ರನ ವೀತ ಶೋಕನ 3 ಹಿಂಡು ಮಾಯ್ಗಜ ಗಂಡು ಸಿಂಹನ 4 ವಾತ ಸುತನಲಿ ಸೀತೆ ಪತಿಯನುಪ್ರೀತಿಯಿಂದಲಿ ಭಜಿಪ ಯತಿಗಳ | ದೂತ ಗುರು ಗೋವಿಂದ ವಿಠಲನ 5
--------------
ಗುರುಗೋವಿಂದವಿಠಲರು
ಜಯದೇವ ಜಯದೇವ ಜಯ ಲಂಬೋದರ | ಜಯ ಶಂಭು ಸತಿಗತಿ ಪ್ರಿಯ ಸುಕುಮಾರ ಪ ಜಯತು ಜಯತೆಂಬೆ ನಿನ್ನಯ ಪದವನಾಶ್ರಯಿಸಿ | ಜಯತು ಪಾಲಿಸೋಯೆನ್ನ ಮನದಿಷ್ಟ ಸಲಿಸಿ ಅ.ಪ. ಸುರರ ಪೂಜೆಯಗೊಂಡು ಸಂತುಷ್ಟಿಗೊಳದೆ | ನರರ ಭಕ್ತಿಗೆ ಮೆಚ್ಚಿ ಧರೆಗೆ ನೀನಿಳಿದೆ || ಪರಿಪರಿ ಭಕ್ಷ್ಯ ಪಾಯಸ ಕಜ್ಜಾಯಗಳ| ವರಶುಭ ದಿನ ಚೌತಿಗುಂಬೆ ಲೇಸುಗಳ 1 ತ್ರಿಭುವನದೊಳು ಸರ್ವರಿಂದ ಸೇವೆಯನು | ವಿಭವದಿ ಕೈಗೊಳ್ಳುತ್ತೊರೆದ ಶುಭವನು || ಅಭಯವನಿತ್ತು ರಕ್ಷಿಸುವೆ ಭಕ್ತರನು | ಇಭಮುಖ ಗಣಪ ಪಾಲಿಸೊ ಭಾಗ್ಯಗಳನು 2 ಪಾದ ನೆನೆವೆ ಮನ್ಮನದಿ | ಘನ ದುರಿತವ ದೂರಪಡಿಸು ನೀ ಮುದದಿ || ಚಿನುಮಯ ಮೂರ್ತಿಯ ಪದವ ಧ್ಯಾನಿಸುವ | ಮನಕೆ ಸುಜ್ಞಾನ ಮತಿಯ ಪಾಲಿಸಯ್ಯ 3 ದಾಸರಿಗೊಡೆಯ ಗಣೇಶ್ವರ ನಿನ್ನ | ಲೇಸಿನೊಳ್ ಭಜಿಸಿ ಕೇಳುವೆ ಗುಣರನ್ನ | ದಾಸನೆಂದೆನಿಸಿ ಲೋಕದಿ ರಂಜಿಸೆನ್ನ | ದೋಷವ ತ್ಯಜಿಸನುದಿನ ಸಲಹೆನ್ನ 4 ಸಕಲ ಸುಜ್ಞಾನ ಕವಿತೆಗಳ ಮುದದಿ | ಸಖನಾಗುತೆನ್ನ ನೀ ಪೊರೆಯಯ್ಯ ದಯದಿ || ಭಕುತ ವತ್ಸಲ ಶ್ರೀನಿವಾಸನ ಪ್ರಿಯ ನೀ | ಸುಕುಮಾರ ಕುಡುಮದೊಡೆಯ ಗಜವದನ 5
--------------
ಸದಾನಂದರು
ಜಯದೇವ ಜಯದೇವ ಜಯಗುರು ಮಹೇಶಾ ಭಯವನಿವಾರಿಸಿ ಶ್ರಯಕುಡು ನೋಡದೆ ಗುಣದೋಷಾ ಪ ಶಿವಶಿವಶಿವಶಿವಯೆಂದು ನೆನಿಯಲು ದೃಡವಾಗಿ ಅವನಿಲಿಹಿಂಗುದು ಪೂರ್ವದ ದುಷ್ಕøತಗತವಾಗಿ ಭವಭವ ಭವಭವಯನಲಾಮ್ಯಾಲನಿಶ್ಚಲನಾಗಿ ಜವದಲಿ ಹರಿವುದುದುರ್ಧರ ಭವಭಯಭಯಾಗಿ 1 ಅನನ್ಯ ಭಾವದಿಹೊಕ್ಕು ಶರಣವ ನಿಮ್ಮಡಿಗೆ ತನುಮನಧನವನು ಅರ್ಪಿಸಿ ವಂಚನೆ ನಿಲದ್ಹಾಗೆ ಅನುದಿನ ಮಾಡಿಲು ಧ್ಯಾನಾಸ್ವರೂಪಹೃದಯದೊಳಗೆ ಘನ ತರದಿಹನಿಜಸ್ಥಾನವು ಸುಲಬಾಗುವದೀಗೆ2 ನಿನ್ನಾ ಮಹಿಮೆಯುತಿಳಿಯದು ನಿಗಮಕ ಶ್ರೀಗುರವೇ ಇನ್ನು ಅಂತಿಂತೆಂಬುದು ನರಗುರಿಗಳಿಗಳವೇ ಎನ್ನಾನಯನದಿನೋಡಿ ಸುಮ್ಮನು ಸುರದಿರುವೇ ಭಿನ್ನವಿಲ್ಲದೆ ಸಲಹು ಮಹಿಪತಿ ಸುತಪ್ರಭುವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಮಂಗಳಂ ಪ ಬುದ್ಧಿಯನಾಳ್ವಂಗೆ ಸಿದ್ಧಿಯನೀವಂಗೆಉದ್ದನ್ನ ಒಡಲಿಂಗೆ ವಿಘ್ನಗಳ ಕೊಲ್ವಂಗೆಶುದ್ಧ ಹಿಮಗಿರಿಯ ಸುತೆಯ ಮುದ್ದಾದ ಕುವರಂಗೆಜಿದ್ದಿನಲಿ ಶಣ್ಮುಖನ ಗೆದ್ದಂಥ ಜಾಣಂಗೆ 1 ಶಂಕರನ ಕುವರನಿಗೆ ಓಂಕಾರ ರೂಪನಿಗೆಸಂಕಷ್ಟನಾಶನಿಗೆ ಅಂಕುಶಾಯುಧ ಧರಗೆಹೂಂಕರಿಪ ಜನಕುಳ್ಳ ಬಿಂಕವನು ತರಿದವಗೆಕಿಂಕರದ ನಿರುತದಲಿ ಕರುಣದಲಿ ಕಾಯ್ವನಿಗೆ 2 ಶುಭಕಾರ್ಯದಲಿ ಮೊದಲು ಪೂಜೆಗೊಂಬಾತನಿಗೆಅಭಯವನು ತೋರ್ಪನಿಗೆ ಇಭವದನ ಗಣಪಗೆಪ್ರಭುವಾಗಿ ಗಣಗಳಿಗೆ ಜಗದೊಳಗೆ ಮೆರೆವವಗೆವಿಭವದಲಿ ಬಿಡುವಿಲ್ಲದೆ ಭಾರತವ ಬರೆದಂಗೆ 3 ಸೂಕ್ಷ್ಮದಲಿ ಪರಿಕಿಸಲು ಸಣ್ಣ ಕಣ್ಣುಳ್ಳವಗೆಕಾಂಕ್ಷೆಗಳ ಕೇಳಲಿಕೆ ಮರದಗಲ ಕಿವಿಯವಗೆತೀಕ್ಷ್ಣತರ ಮತಿವಿಡಿದ ಘನವಾದ ತಲೆಯವಗೆಸುಕ್ಷೇಮ ಲಾಭಗಳ ಭಕ್ತರಿಗೆ ಕೊಡುವವಗೆ 4 ಇಲಿದೇರ ವೀರನಿಗೆ ಸುಲಿದೇಕದಂತನಿಗೆಎಲರುಣಿಯನುಪವೀತ ಮಾಡಿಕೊಂಡವಗೆನೆಲದೊಳಗೆ ಗದಗುಸಿರಿ ವೀರನಾರಾಯಣನನೊಲಿಸಿ ಕೊಡುವಂಥ ಮಂಗಳ ಮೂರುತಿಗೆ 5
--------------
ವೀರನಾರಾಯಣ
ಜಯವ ಪಾಲಿಸಿ ಸಲಹೆ ಜನನಿ ಜಯಲಕ್ಷ್ಮಿ ಜಯಂಕರಿ ಪ ಭಯವಿಮೋಚನೆ ಭಜಿಪೆ ನಿನ್ನ ಜಯವ ವೊಂದಿಸಿ ಭವದಿ ಎನ್ನ ದಯದಿ ಬೆಂಬಲಿರ್ದು ಬಿಡದೆ ಕೈಯ ಪಿಡಿದು ಕಾಯೌ ಸುದಯೆ 1 ಜ್ಞಾನಜ್ಯೋತಿ ಸುಪ್ರಕಾಶ ಮಾಣದಿತ್ತು ಮಮತೆಯಿಂದ ಹಾನಿತಾರದೆ ಪೊರೆಯೆ ಸತತ 2 ಕಾಮಿತಾರ್ಥ ಪೂರ್ಣೆ ಸುತಗೆ ಭೂಮಿಯಾತ್ರೆ ವಿಜಯನೀಡು ಶಾಮಸುಂದರ ಸ್ವಾಮಿ ಶ್ರೀ ರಾಮನ ಪಟ್ಟದರಾಣಿ ಕರುಣಿ 3
--------------
ರಾಮದಾಸರು
ಜಲಜಾಪ್ತ ಸಂಕಾಶ ಲಲಿತ ಸನ್ಮøದುಹಾಸ ಕಲಿಕಲುಷ ವಿಧ್ವಂಸ ಪರಮಹಂಸ ಶರಣಜನ ಸಂರಕ್ಷ ಸುರವಿರೋಧಿ ವಿಪಕ್ಷ ಧರ್ಮರಕ್ಷಣ ದೀಕ್ಷ ಶ್ರೀಕಟಾಕ್ಷ ಸರಸಿಜಾಯತನಯನ ಶರದಿಂದುನಿಭವದನ ದುರುಳ ಮ್ಲೇಂಛನಿಹನನ ತುರಗವದನ ಧುರಧೀರ ಶ್ರುತಿಸಾರ ಸುರುಚಿರಾಂಗದ ಹೀರ ವರಹಾರ ಕಂಧರ ಭಯವಿದೂರ ಕಮಲಾಸನಾದಿ ಸಂಸೇವ್ಯಮಾನ ಅಮರಸಂಕುಲತೋಷ ದಿವ್ಯವೇಷ ವಿಮಲ ಶೇಷಾದ್ರೀಶ ಶ್ರೀನಿವಾಸ
--------------
ನಂಜನಗೂಡು ತಿರುಮಲಾಂಬಾ
ಜಾನಕಿಯು ನಮ್ಮಮ್ಮ ನಮಗೆ ಭಯವೇನು ಪ ಪವಮಾನ ತನಯನು ಪಾಲಿಪ ಗುರುವಯ್ಯಾ ಅ.ಪ ಕಾಲಕಾಲದಿ ತಪ್ಪದೆ | ಭತ್ಯವ ಹಾಕಿ ಬಾಲಲೀಲೆಗಳಾಡಿಸಿ ಮೇಲೆ ತುಡುಗಾಟವಾಡಿದರೆ ಕೆನ್ನೆಯ ಹಿಂಡಿ ಹಾಲ ಕುಡಿಸಿ ಮಕ್ಕಳರ್ಥಿಯ ನೋಡುವ 1 ಇತರ ಮಕ್ಕಳಿಗೆಲ್ಲಾ | ಅವರ ಮಾತಾ ಪಿತರು ವಡವೆಗಳಿಟ್ಟು ಮಿತಿಯಿಲ್ಲದೆ ಬೈದು ಬಲು ಚಿಂತೆಯ ಪಡುವರು 2 ಕಳ್ಳರಿಗೆ ಸಿಕ್ಕದೈಯ್ಯ | ನಮ್ಮೊಡವೆಗಳ್ ಕಳಚುವುದಕೆ ಬಾರದು ಒಳ್ಳೆ ವಸ್ತ್ರವ ಉಡಿಸಿ ಉಚಿತ ತಿಂಡಿಯ ಕೊಡಿಸಿ ಸುಳ್ಳಾಡದಂದದಿ ಸುತ್ತಿಸಿ ನಗುವರು 3 ಓದು ಬರಹವ ಕಲಿಸಿ | ನಮ್ಮನು ಕೆಲವು ಹೊತ್ತು ಆಟಗಳಾಡಿಸಿ ಆದರಿಸುತ ಜನ್ಮ ಜನ್ಮಗಳಲಿ ಬಿಡದೆ ಕಾದು ಕೊಂಡಿರುವರು ಕಡೆಗೂ ನಮ್ಮಗಲರು 4 ಇಂತಹ ನಮ್ಮವರ ಬಿಟ್ಟು | ಬರಿದೇ ಲೋಕ ಸಂತೆಯವರನು ನಂಬುವರೆ ಎಂತಾದರೂ ಗುರುರಾಮ ವಿಠಲನ ನಾಮ ಸ್ವಂತವಾದರೆ ಮುಕ್ತಿ ಸ್ವಾಧೀನವಾಗುವುದು5
--------------
ಗುರುರಾಮವಿಠಲ
ಜೋಕೆ ಎನ್ನ ವಿಚಾರ ನಾಕು ಜನರಂತಲ್ಲ ಸ್ವೀಕರಿಸಬೇಕು ಕ್ಷಣದಿ ಪ ನಾಕಾರು ವಿಧಗಳಲಿ ನೀಪೇಳಿದುದನೆಲ್ಲ ಏಕಮನದಲಿ ಮಾಡಿದೆ ಕೃಷ್ಣ ಅ.ಪ ಬಾಲತನದಲಿ ಬಹಳ ಲೋಲನಾಗಿರು ಎಂದು ಪೇಳಲಿಲ್ಲವೆ ಯೋಚಿಸು ಕೀಳುಜೀವನದಲ್ಲಿ ಕಾಲವನು ಕಳೆ ಎಂದು ಪೇಳಿದುದ ನೀ ಮರೆತೆಯಾ ಶ್ರೀ ಲಕುಮಿಪತಿ ನಿನ್ನ ಕೀಲುಗೊಂಬೆಯ ತೆರದಿ ಪೇಳಿದುದ ಮಾಡಿರುವೆನೊ 1 ಶ್ರೀಪತಿಯೆ ನಿನ್ನ ಪ್ರೇರಣೆಯಲ್ಲವೆ ಸರ್ವ ಪಾಪ ಪುಣ್ಯಕೆ ಕಾರಣ ಈ ಪರಿಯ ನಿನ್ನ ಸಂಕಲ್ಪವನು ಮೀರಲು ತಾಪಸೋತ್ತಮರಿಗಳವೆ ಆಪತ್ತು ಸಂಪತ್ತು ನಿನ್ನಧೀನಗಳೆಂದು ತಾಪತ್ರಯವ ಸಹಿಸಿದೆ 2 ಇಂದಿರಾಪತಿ ನಿನ್ನ ಒಂದೊಂದು ದಿನದಲಾ ನಂದ ಪೂಜೆಗೈಯಲು ಹಿಂದಿನಾ ಲೆಕ್ಕವು ಸಂದಿಲ್ಲವೆಂದು ನೀ ಇಂದು ಮಾಡುವರ್ಯಾರು ಸಂದೇಹವಿಲ್ಲವೆನಗೆ 3 ಇಂತಹುದು ಬೇಕೆಂಬ ಚಿಂತೆಯಿಲ್ಲದೆ ಬಹಳ ಸಂತಸದಿ ಮುಳುಗಿರುವೆನೊ ಕಂತುಜನಕ ಎನಗೆ ಭ್ರಾಂತಿ ನೀಡದೆ ಮನಕೆ ಶಾಂತಿಯನು ದಯಮಾಡೆಲೊ ಸಂತತ ನೀನು ಎನ್ನಂತರಂಗದಲಿರಲು ಕಂತೆಯಂದದಿ ಕಾಂಬೆನೊ ಜಗವ 4 ಧೋರಣೆಯ ನುಡಿಗಳಿಗೆ ಕಾರಣನು ನೀನಿರಲು ಯಾರ ಭಯವೆನಗಿಲ್ಲವೊ ನೀರಜಾಕ್ಷನೆÉ ನಿನ್ನ ಪ್ರೇರಣೆಯನೆಳ್ಳಷ್ಟು ಮೀರಿ ನಡೆಯುವುದಿಲ್ಲವೊ ಸಾರಗುಣ ಸಂಪನ್ನ ಧೀರಭಕ್ತ ಪ್ರಸನ್ನ ಯಾರಿರುವರೊ ಜಗದಲಿ ನಿನ್ಹೊರತು 5
--------------
ವಿದ್ಯಾಪ್ರಸನ್ನತೀರ್ಥರು
ಜ್ಞಾನಕಿದೇ ನಡಿ ಕುರುಹು | ಶ್ರೀ ರಮಾನಾಥಾಂಘ್ರಿಯ ಕಾಣುವದರಿತು ಪ ಕೋಪ ತಾಪವ ಬಿಡಬೇಕು ಪಶ್ಚಾ | ತ್ತಾಪದಿ ವೈರಾಗ್ಯ ಘನ ಬಲಿಬೇಕು | ಪಾಪವಿರಹಿತಾಗಬೇಕು | ಗತಿ | ಸೋಪಾನವಾದಾ ಶಾಂತಿಯ ಜಡಿಬೇಕು 1 ಕರುಣ ಮೂರುತಿ ಆಗಬೇಕು ಸರ್ವ | ಧರೆಯು ಜನಕ ಪ್ರಿಯವಾಗಿರಬೇಕು | ನೆರೆ ಲೋಭವನು ಜರಿಬೇಕು ತನ್ನ | ತೆರನರಿ ತನ್ನವ ನೀಡಲಿಬೇಕು 2 ದುರಿತ ಭಯವ ಬಿಡಬೇಕು | ದುಃಖ | ದುರ್ವಾಣಿಯಲಿ ತಾ ಬಳಲದಿರಬೇಕು | ಹರಿಭಕ್ತಿ ದೃಢಗೊಳ್ಳಬೇಕು ಗುರು | ಬೋಧ ನಿಜವೆನಬೇಕು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಞಾನವಾವುದು ಅಜ್ಞಾನವಾವುದು ಮಾನವಾವುದು ದುಮ್ಮಾನವಾವುದು ಪ ಹರಿಯ ಸ್ಮರಣೆಯಿರಲದೊಂದು ಜ್ಞಾನವಲ್ಲವೆ ಕೊರಳ ಸೆರೆಯ ಕಾಣದಿಪ್ಪುದಜ್ಞಾನವಲ್ಲವೆ ಪರರ ಸತಿಯ ತೊರೆವುದೊಂದು ಮಾನವಲ್ಲವೆ ಪರರ ಸೇವೆಗಿರುವದವಮಾನವಲ್ಲವೆ 1 ಧನ್ಯರನ್ನು ಮನ್ನಿಸುವುದು ಜ್ಞಾನವಲ್ಲವೆ ಹೊನ್ನ ಹುದಿದು ಅನ್ನ ತೊರೆವುದಜ್ಞಾನವಲ್ಲವೆ ಅನ್ಯರೊಡವೆ ಕಳುವುದವಮಾನವಲ್ಲವೆ 2 ಹಸಿದವರನು ಕಂಡು ಯಿಕ್ಕಲು ಜ್ಞಾನವಲ್ಲವೆ ಹುಸಿಕನಾಗಿ ಅಸತ್ಯ ಮಾಳ್ಪುದು ಅಜ್ಞಾನವಲ್ಲವೆ ಹಸನವಾಗಿ ನಡೆವ ಕೃತ್ಯ ಮಾನವಲ್ಲವೆ ಎಸೆವ ಜೂಜು ತಪ್ಪಲವಮಾನವಲ್ಲವೆ 3 ಸ್ಥಿರವಿದಲ್ಲವೆಂಬ ಜೀವಿ ಜ್ಞಾನಿಯಲ್ಲವೆ ನರಕ ಭಯವ ಮರೆವ ಜಡನಜ್ಞಾನಿಯಲ್ಲವೆ ಹಿರಿಯರಿಂದ ಅನಿಸಿಕೊಂಬುದು ಮಾನವಲ್ಲವೆ ಬರಿಯ ಕ್ಷುದ್ರವೆಸಗಲವಮಾನವಲ್ಲವೆ 4 ಕ್ರೋಧವನ್ನು ತೊರೆದ ಮನುಜ ಜ್ಞಾನಿಯಲ್ಲವೆ ವೇದವನ್ನು ಜರೆದ ನರನಜ್ಞಾನಿಯಲ್ಲವೆ ಸೋದರರು ಕೂಡಿಯಿರಲು ಮಾನವಲ್ಲವೆ ಮಾದಿಗರ ಸಂಗವದವಮಾನವಲ್ಲವೆ 5 ಗುರು-ಹಿರಿಯರನುಸರಿಸೆ ಜ್ಞಾನವಲ್ಲವೆ ಸಿರಿಯ ವೇಶ್ಯಸ್ತ್ರೀಗೆ ಕೊಡಲಜ್ಞಾನವಲ್ಲವೆ ದೊರೆಯು ಕರೆದು ಉಚಿತವೀಯೆ ಮಾನವಲ್ಲವೆ ತಿರುಕರಂತೆ ತಿರಿವುದು ಅವಮಾನವಲ್ಲವೆ 6 ವರಾಹತಿಮ್ಮಪ್ಪ ಒಲಿದರದು ಜ್ಞಾನವಲ್ಲವೆ ಮರೆದು ಕ್ಲೇಶಕೆರಗುವುದಜ್ಞಾನವಲ್ಲವೆ ಕರೆದು ಪರರಿಗಿಕ್ಕುವುದು ಮಾನವಲ್ಲವೆ ಕರೆಕರೆಯ ಮಾತು ಅವಮಾನವಲ್ಲವೆ 7
--------------
ವರಹತಿಮ್ಮಪ್ಪ
ಜ್ವರಹರಾಹ್ವಯನೆ ಶ್ರೀನಾರಸಿಂಹಪೋರನಾಮಯ ಕಳೆದು - ಆರೋಗ್ಯವೀಯೊ ಪ ಭೋಗಿ ಭೋಗಿ ಶಯನನೆ ದೇವರೋಗ ಹರಿಸುವುದರಿದೆ _ ರೋಗಾರ್ತ ಶಿಶುಗೇ 1 ಯೋಗಿ ಭಾಗವತ ಪ್ರಿಯ 2 ಈ ವಸುಮತಿಯ ಸಕಲ - ಜೀವರಂತರ್ಯಾಮಿದೇವ ನರಹರಿ ಜ್ವರ ಹ - ರಾಹ್ವಯನು ಯೆನಿಸೀ |ಕಾವುತಿರೆ ಭಯವೇನು _ ತೀವ್ರ ಪಾಲಿಪುದಿವನಗೋವ ಪಾಲಿಪ ಗುರು - ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು