ಒಟ್ಟು 8888 ಕಡೆಗಳಲ್ಲಿ , 133 ದಾಸರು , 4838 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅನಂತಚತುರ್ದಶಿಯ ದಿನದ ಪ್ರಾರ್ಥನೆ) ಪದ್ಮನಾಭ ಪರಿಪಾಲಿಸು ದಯದಿಂದ ಪದ್ಮಜಾದಿ ವಂದ್ಯ ಪರಮ ದಯಾಳೊ ಪದ್ಮಿಯಳರಸ ಹೃತ್ಪದ್ಮನಾಮಕ ಸ್ವರ್ಣ ಸದ್ಮ ವೃತ್ತಿಪದಪದ್ಮವ ತೋರೊ ಪ. ಚಿಂತಿತದಾಯಕ ಸಂತರ ಕುಲದೈವ ಕಂತು ಜನನಿಯೊಡಗೂಡಿ ನೀನು ನಿಂತು ಎನ್ನಲಿ ಕೃಪೆ ಮಾಡೆಂದು ನಮಿಪೆ ಧು- ರಂತ ಮಹಿಮ ನಿನ್ನ ಚರಣಾಬ್ಜಯುಗಲಾ 1 ಆದಿ ಮಧ್ಯಾಂತವಿದೂರ ನಿನ್ನಲಿ ಮಹ ದಾದಿ ತತ್ವಗಳೆಲ್ಲ ನಿಂತಿಹವು ಆದಿ ಭೌತಿಕ ಮೊದಲಾದ ತಾಪಗಳನ್ನು ಶ್ರೀದ ನೀ ಬಿಡಿಸಲು ಸದರವಾಗಿಹವು 2 ಒಂದರಿಂದೊಂದಾದರಿಂದ ಮೂರು ಮೂರ್ತಿ ಇಂದಿರೆ ಸಹಿತಾವಿರ್ಭೂತನಾಗಿ ಮುಂದಿನ ಮಹದಾದಿ ತತ್ವವ ನಿರ್ಮಿಸಿ ನಿಂದನಂತಾಸಂತರೂಪನಾದವನೆ 3 ಭವ ಚಕ್ರದೊಳು ತಂದು ನವ ನವ ಕರ್ಮಗಳನೆ ಮಾಡಿಸಿ ಅವರ ಯೋಗ್ಯತೆ ಮೀರದಲೆ ಫಲಗಳನಿತ್ತು ನಿತ್ಯ ತೃಪ್ತನಾಗಿರುವಿ 4 ಮಛ್ವಾದ್ಯನಂತವತಾರಗಳನೆ ಮಾಡಿ ಸ್ವೇಚ್ಛೆಯಿಂದ ಸುಜನರ ಸಲಹಿ ಕುಚ್ಛಿತ ಜನರಿಗೆ ತುಚ್ಛಗತಿಯನೀವೆ ಸ್ವಚ್ಛ ಬ್ರಮ್ಹಾದಿಕ ವಿವ್ಛಾ(?)ವಿಷಯನೆ 5 ನಾನಾವತಾರದಿ ನಂಬಿದ ಸುರರಿಗೆ ಆನಂದವಿತ್ತು ರಕ್ಷಿಪೆ ಕರುಣದಿ ದಾನವರಿಗೆ ಅಧ:ಸ್ಥಾನವ ನೀಡುವಿ ಮಾನವರನು ಮಧ್ಯಗತರ ಮಾಡಿಸುವಿ 6 ಹಿಂದೆ ಮುಂದಿನ ಭವದಂದವ ತಿಳಿಯದ ಮಂದಾಗ್ರೇಸರ ನಾನಾದೆಂಬುದನು ಅಂಧಕರಾರಣ್ಯದಿಂದ ಮೂಢನಾದಂ ದಿಂದ ಬಿನ್ನೈಪೆನು ಇಂದಿರಾಧವನೆ 7 ಮಾಡುವ ಕರ್ಮವು ನೋಡುವ ವಿಷಯಗ- ಳಾಡುವ ಮಾತು ಬೇಡುವ ಸೌಖ್ಯವು ನೀಡುವ ದಾನವೋಲ್ಯಾಡುವ ಚರ್ಯವ ನೋಡಲು ತಾಮಸ ಪ್ರಹುಡನಾಗಿಹೆನು 8 ಆದರು ನಿನ್ನಯ ಪಾದಾರವಿಂದ ವಿ- ನೋದ ಕಥಾಮೃತ ಪಾನದೊಳು ಸ್ವಾದ ಲೇಶದಾದರ ತೋರ್ಪದ- ನಾದಿ ಮೂರುತಿ ನೀನೆ ತಿಳಿಸಬೇಕದನೂ 9 ಇದರಿಂದಲೇ ಮುಂದೆ ಮದನನಯ್ಯನೆ ನಿನ್ನ ಪದವ ಕಾಣುವೆನೆನುತೊದರುವೆನು ಹೃದಯ ಮಂಟಪದಿ ನೀ ಹುದುಗಿರುವುದರಿಂದ ಕದವ ತೆರೆದು ತೋರೊ ವಿಧಿಭವವಿನುತಾ 10 ಕನ್ನೆ ಸುಶೀಲೆಯ ಕರಸೂತ್ರ ರೂಪದ ನಿನ್ನ ತಿಳಿಯದೆ ಕೌಂಡಿಣ್ಯನಂದು ಮನ್ನಿಸದಿರೆ ಮದ ಮೋಹಗಳೋಡಿಸಿ ನಿನ್ನ ರೂಪವ ತೋರ್ದ ನಿಜಪೂರ್ಣ ಸುಖದಾ 11 ಬ್ರಹ್ಮಾದಿಗಳನೆಲ್ಲ ನಿರ್ಮಿಸಿ ರಕ್ಷಿಸಿ ತಮ್ಮ ತಾವರಿಂiÀiದ ನಿಮ್ಮ ಸ್ತುತಿಪರೆ ಕು- ಕರ್ಮಿ ನಾನೆಂದಿಗಾದರೂ ಶಕ್ತನಹುದೆ 12 ಅದು ಕಾರಣದಿಂದ ಪದುಮನಾಭ ನಿನ್ನ ಪದ ಕಮಲಗಳಲಿ ರತಿಯನಿತ್ತು ಸದರದಿ ಸಲಹಯ್ಯ ವಿಧುಶೇಖರಾರ್ಚಿತ ಮದನನಯ್ಯ ಮರುದಾದಿ ವಂದಿತನೆ 13 ದೋಷರಾಶಿಗವಕಾಶನಾದರೂ ಯೆನ್ನ ಶ್ರೀಶ ನಿನ್ನ ದಾಸದಾಸನೆಂದು ಘೋಷವಾದುದರಿಂದ ಪೋಷಿಸಬೇಕಯ್ಯ ಶೇಷಗಿರೀಶ ಸರ್ವೇಶ ನೀ ದಯದಿ 14
--------------
ತುಪಾಕಿ ವೆಂಕಟರಮಣಾಚಾರ್ಯ
(ಅನಂತಪದ್ಮನಾಭ ಪ್ರಾರ್ಥನೆ) ಚಿಂತಿತದಾಯಿ ನಿರಂತರ ಸುಖದಾನಂತಪದ್ಮನಾಭಾ ಸಕಲಸುಜನಾಂತರ ಫಲದಾ ಪ. ಯಾಕೆಂದರೆ ಪೂರ್ಣಾ ನಂದನೀನೊಲಿಯಲು ಎಂದಿಗು ಕುಂದನು ಹೊಂದದಲಿರುವೆ ಸುಂದರ ವಿಗ್ರಹ ಸುಲಭದಿ ಸಕಲಾನಂದ ವಾರಿಧಿಯೊಳಿಳಿವೆ ಭವ ಬಂಧನ ಬಿಡಿಸುವ ದೊರೆ ನಿನ್ನರಿಯದೆ ಮಂದ ಬುದ್ಧಿಯಿಂದಿರುವುದು ಥರವೆ1 ನೀಲಾಳಕ ಪರಿಶೋಭಿತ ಮುಖಕಮಲಾಲಿಸು ಬಿನ್ನಪವÀ ಲೀಲಾಮೃತರಸ ಕುಡಿಸುತ ಕರುಣದಿ ಪಾಲಿಸು ವರಸುಖವಾ ಪದದೊಳಗಿರಿಸಿದ ದುರಿತ 2 ಹೆಂಡತಿ ಜನಿಸಿದ ಮನೆಯೊಳಗಿರುವುದೆ ಪುಂಡರೀಕನಾಥಾ ಪಂಡಿತರುಗಳಿದ ಕಂಡರೆ ನಗರೆ ಬ್ರಹ್ಮಾಂಡಕೋಟಿಭಾಸಾ ಅಂಡಲೆಯದೆ ಹೃನ್ಮಂಡಲದೊಳು ಶುಭಕುಂಡಲ ರಮೆಯೊಡಗೊಂಡು ಬೇಗದಲಿ ನಿಭ ಕುಂಡಲಿಗಿರಿಗ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಅನುಭವ ಬಾರಾಮಾಸ ) ಏನೆಂದು ಹೇಳಲಿ ಶಾಂತಳೇ ಬುದ್ಧಿವಂತಳೇ | ವರ್ತ ಣೂಕದೆನ್ನ ಮಾತಾ | ಶ್ರೀನಾಥ ನಂಘ್ರಿಯ ನೋಡದೇ ಒಮ್ಮೆ ಮಾನವ ಜನು ಮದಿ ಬಂದೆನು ಹೊಂದಿ ನಿಂದೆನು | ಮೆರೆದೆನು ಸ್ವಹಿತಾ | ನಾನಾ ಹಂಬಲ ದೊಳು ಶಿಲುಕಿದ ಬಲು ಬಳಲಿದ | ದೊರಯದು ಪರಮಾರ್ಥ | ಶ್ಲೋಕ 1 ಭರತ ಖಂಡದಿ ಬಂದ ನೃದೇಹವಾ | ಮರೆದು ಮಾಡಲಿಬಾರದು ಹೇಯವಾ | ತ್ವರಿತ ನಂಬುದು ಶ್ರೀ ಹರಿ ಪಾದವಾ | ಗುರು ಮಹಿಪತಿ ಸಾರಿದ ಬೋಧವಾ | ಪದ ಮುಕುತಿ ಸಾಧನ ಮಾರ್ಗಶೀರ್ಷ ಮಾಸಾ ವಿಶೇಷಾ | ಧರಿಯೊಳು ಇದರಿಂದಾ | ಯುಕುತೊಲು ಹೋಗಿ ನಿರಂತರಾ ಸಾಧು ಸಂತರಾ | ಅವರ ಚರಣಾರವಿಂದಾ | ಭಕುತಿಲಿ ಮುಟ್ಟಿವಂದಿಸಲಿಲ್ಲಾ ಹೊಂದಿಸಲಿಲ್ಲಾ | ಅಖಿಳ ದೊಳಾರಿಗೆ ಬಾಗದೇ ದಿನನೀಗದೇ | ಮೋಟ ಮರ ನಿಲುಲುಂದಾ | ಶ್ಲೋಕ 2 ಮೆರೆವ ಅವಯವದೊಳು ಉತ್ತು ಮಂಗದಿ ನಿಂದು | ಹೊರಿಯ ಲುದರ ಕಾಗೀ ಬಾಗುವೀ ನೀಚಗಿಂದು | ಹರಿ ಶರಣರ ಕಂಡು ವಾಕ್ಯ ನಮನವೇನು | ಗುರು ಮಹಿಪತಿ ಸ್ವಾಮಿ ವಲಿಯನೆಂದಿಗೆ ತಾನು | ಪದ ಮಾಸ ಶೂನ್ಯವೇ ನೋಡು ಶ್ರವಣವೇ | ಮಾಡಿ ಸ್ಥಿರ ಮನುಚಿತಾ | ಸವಿ ಸವಿಯಲಿ ನಿತ್ಯ ನೂತನಾ ತೋರದನುಮಾನಾ | ಶ್ರೀ ಗೋವಿಂದ ಚರಿತಾ | ಹವಣದಿ ಸಂತರ ಮುಖದಿಂದಾ ಅನುಸರಣಿಂದಾ | ಕೇಳಲಿಲ್ಲನರತಾ | ಅವನಿಲಿ ದುಷ್ಟಪ ಕೀರ್ತಿಯಾ ಅನ್ಯ ವಾರ್ತರಿಯಾ | ಆಲಿಸಿದೇ ಸುಖ ಬಡುತಾ | ಶ್ಲೋಕ 3 ಕುಂಡಲ ವಿಟ್ಟಿಹಾ | ಹರಿ ಕಥಾಮೃತ ಕೇಳುದು ಬಿಟ್ಟಿಹಾ | ಗಿರಿಯ ಗುಹ್ಯವೋ ಕರ್ಣವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ನೋಟ ಉನ್ಮನಿ ನದಿ ಮಾಘವೇ ಮಹಾಯೋಗವೇ | ಲಯ ಲಕ್ಷಿಯ ಲಿಂದು | ನೀಟದಿ ಹರಿಯಾವತಾರದಾ ಮೂರ್ತಿ ಧ್ಯಾನಕ ತಂದು | ಧಾಟಿಲಿ ಸಮ ದೃಷ್ಟಿ ಬಲಿಯದೇ ಅಲ್ಲ ಚಲಿಸದೇ | ನಾನಾ ಬಯಕೆಯ ವಿಡಿದು ತ್ರೋಟಕ ದೈವ ನೋಡಿದ ಮತ ಕೂಡಿದ | ನೀಚ ವೃತ್ತಿಗೆ ಬಿದ್ದು | ಶ್ಲೋಕ 4 ಅಂಗನೆಯರ ಶೃಂಗಾರ ನೋಡುವಾ | ರಂಗನಾಕೃತಿ ನೋಡಲಿ ಬಾಡುವಾ | ಕಂಗಳೋಸಿ ಖಿಗಿಲಿಗಳೋ ಮಂದನಾ | ಇಂಗಿತ್ಹೇಳಿದ ಮಹಿಪತಿ ನಂದನಾ | ಪದ ಪುಣ್ಯ ಫಲಗುಣ ಮಾಸವೇ ವಬಿಗಿಯೇರ ಸನವೇ | ಸನ್ನುತ ಶ್ರೀಹರಿ ನಾಮವಾ ವಿಡಿದು ಪ್ರೇಮನಾ | ಪದ ಪದ್ಯಲೀಗ | ಚೆನ್ನಾಗಿ ಕೀರ್ತನೆ ಮಾಡದೇ ಗತಿಬೇಡದೇ | ಪಾತಕಕೆ ಗುರಿಯಾಗೆ | ಅನ್ಯರ ನಿಹಪರ ಸ್ತುತಿಗಳಾ ಹುಸಿನುಡಿಗಳಾ | ಆಡಿಬರಡಾದೆ ನೆಲಿಗೆ | ಶ್ಲೋಕ 5 ಸಿರಿಕಾಂತಾ ನತಶಮಿತ ದುರಿತಧ್ವಾಂತ ಯನುತಾ | ಹರಿನಾಮಾ ಪ್ರೇಮ ವಿಡಿದು ಸ್ಮರಿಸಾದಿಪ್ಪವನುತಾ | ನರಾಧಮಾನೇ ಮಾವನ ಮುಖವೋ ನೃಪಮಾಯ ಮುಖವೋ | ಅರುಹಿದಾ ಬೋಧಾ ಗುರು ಮಹಿಪತಿ ಸ್ವಾಮಿ ಸುಖವೋ ಪದ ದೋಷನಾಶಕ ಪ್ರಣವಧ ಕ್ಷೇತ್ರಾ ಮಾಸವೀ ಚಿತ್ರಾ | ಪವನನಾ ನೆಲೆಗೊಳಿಸಿ | ಮೀಸಲ ರೇಚಕ ಪೂರ್ವಕಾ ಧೃಡ ಕುಂಭಕಾ | ದಿಂದ ಮಂತ್ರವ ಜಪಿಸಿ | ವಸುದೇವನ ಪಾದ ನಿರ್ಮಾಲ್ಯ ಆಘ್ರಾಣಿ ಸಲಿಲ್ಲಾ | ಭೋಗ ದ್ರವ್ಯವ ಬಯಸಿ | ಲೇಸಾದ ಪರಿಮಳವನೇ ತಂದು ವಾಸಿಸುತ ನಿಂದು | ಮೈಯ್ಯ ಮರ್ತೆನು ಚಲಿಸಿ ಶ್ಲೋಕ 6 ಪರಿಮಳಂಗಳ ವಾಸನೆಗ್ಹಿಗ್ಗುಯವಾಸಿರಿ | ತುಳಸಿಯ ತೋರಲು ಸಗ್ಗುವಾ | ಇರುವ ನಾಶಿಕೋತಿತ್ತಿಯೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ತನುವೆಂಬೋ ವೃಕ್ಷ ಕಿವೇ ಶಾಖಾ ಹಸ್ತಾ ಮೌಲಿಕಾ | ದೇವ ಪೂಜದರಿಂದ | ಘನವಾದಾ ತುಳಸಿ ಪುಷ್ಪಗಳನು ತಂದು ಹಲವನು | ಸಹಸ್ರ ನಾಮಗಳಿಂದಾ | ಅನುವಾಗಿ ಹರಿಗೆ ಏರಿಸಲಿಲ್ಲಾ ಅರ್ಪಿಸಲಿಲ್ಲಾ ಮರಹು ಆಲಸ್ಯದಿಂದಾ | ವನಿಯೊಳು ಪಗಡಿ ಪಂಚಿಗಳನು ಆಡಿ ದಿನವನು | ನೂಕಿದನು ಇದರಿಂದಾ | (ತನಗಿಂದ ದೀನದುರ್ಬಲರನು ಕಂಡು ಹೊಡೆವನು | ಹೋಗಾಡಿದ ನಿಜಾನಂದ ) ಶ್ಲೋಕ 7 ಹರಿಯ ಸೇವೆಯ ಮಾಡಲು ಬೀಳುವಾ | ಮೆರೆವ ಕಂಕಣ ಮುದ್ರಿಕೆ ತಾಳುವಾ | ಕರವೋ ಮದನಾ ಕೈಯ್ಯವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ಸರ್ವ ವಿಷಯವತಿ ಜೇಷ್ಠವೇ ಬಲಿ ದಿಷ್ಟವೇ | ಮೃದು ಕಠಿಣ ವೆನ್ನದೇ | ಹರಿಯಂಗಣದಿ ಲೋಟಾಂಗಣವನು ಹಾಕುತಲಿ ತಾನು | ದೇವ ರೂಳಿಗದಿಂದೇ | ನೆರೆ ಹಡಪಿಗ ಪಾದುಕೆಯ ವಾ ಯಂಬನಾಮವಾ | ತಾಳಿ ಕರಸಿ ಕೊಳ್ಳದೇ | ತರಳೆ ತ್ಯಾಡಿಸುತಲಿ ತನ್ನಾ ಕಳೆ ದನುದಿನಾ | ಇದು ಯಾತರ ಛಂದಾ | ಶ್ಲೋಕ 8 ಪರೋಪಕಾರ ವಂಚನೆ ಮಾಡುವಾ | ಸುರಭಿ ಚಂದನ ಮಿಂಚಿಲೆ ತೀಡುವಾ | ಶರೀರೋ ಬೆಚ್ಚಿನ ಮಾಟವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ ಪದ ಆಷಾಡ ಗೇಯಲಿ ಹಸಿವೆಯ ಬಲು ತೃಷಿವಿಯು | ಸಕಲನು ಕೂಲದಿಂದಾ | ಲೇಸಾಗಿ ನೈವೇದ್ಯ ವದಗಿಸಿ ಹರಿಗರ್ಪಿಸಿ | ನಿಜ ತೀರ್ಥ ಪ್ರಸಾದಾ | ಭೂಷಣದಲಿ ನಾನು ಕೊಳಲಿಲ್ಲಾÀ ಸುಖ ಬಡಲಿಲ್ಲಾ | ದೋಷದನ್ನವ ಉಂಡು ವಡಲನು ನಾನು ಹೊರೆದನು ಬಯಸುತ ಜಿವ್ಹ ಸ್ವಾದಾ ಶ್ಲೋಕ 9 ವಿದತವಾದ ರಸ್ನಾವ ಉಂಬನು | ಮುದದಿ ತತ್ವದ ವಿದ್ಯವ ತುಂಬನು | ಉದರೋಶಾಲ್ಮಲಿ ಫಲವೋ ಮಂದನಾ | ಇದನು ಸಾರಿದ ಮಹಿಪತಿ ನಂದನಾ | ಪದ ಮನ ವಿಶ್ರಾವಣ ಸುಖ ಬೆರತಿದೇ ನೋಡು ನಿಂದಿದೇ | ಗುರು ಬೋಧಿಸಿದನು | ಮನನ ಮಾಡುತ ನಿಜಧ್ಯಾಸಾ | ಹಚ್ಚಿ ವಿಶೇಷಾ | ಪಡೆದು ಸಾಕ್ಷಾತ್ಕಾರವನು | ಚಿನುಮಯಾನಂದ ನೋಲಾಡದೇ ತಾಂ ಪೀಡಾಡದೇ | ಅಲ್ಲಿ ತೊಳಲಿದ | ಹರಿ ವಲುಮೆ ಇಲ್ಲದೇನು | ಶ್ಲೋಕ 10 ವಿಷಯ ಚಿಂತನೆ ಮಾಡಲು ಸಂಭ್ರಮಾ | ಕುಸುಮ ನಾಭನ ನೆನಿಯೆ ವಿಭ್ರಮಾ | ಕುಶಲ ಮಾನಸೋ ಪಶುವೋ ಮಂದನಾ | ಸ್ವಸುಖ ಸಾರಿದ ಮಹಿಪತಿ ನಂದನಾ ಪದ ಸುಕೃತ ಇದೇವೇ ಭಾದ್ರಪದವೇ | ನಡೆದ್ಹೋಗಿದ ರಿಂದಾ ಒಲಿದ ಪುಣ್ಯ ಕ್ಷೇತ್ರವಾಗಿಹಾ ಸಂತರಾಲಯಾ | ಪುಗುವುದೇ ಯಾತ್ರೆ ಛಂದಾ | ಜಲಜಾಂಬಕನ ಮಹಿಮೆ ಗಳುಂಟು ಅಲ್ಲಿ ಸುಖವುಂಟು | ತೊರೆದನು ಪುರವಿಂದಾ | ಸತಿ ಉದರದ ದಾವತಿಗಾಗಿ ತಿರುತಿರುಗೀ | ಜನುಮ ಶ್ಲೋಕ 11 ಧನದ ಆಶೆಗೆ ನಡೆಡತಾಕುವಾ | ಘನ ಪ್ರದಕ್ಷಿಣೆ ಮಾಡಲು ಬಳುಕುವಾ | ಮನುಜಪಾದವೋ ಪಾದವೋಮಂದನಾ | ಅನುವ ಸಾರಿದ ಪದ ಪ್ರತಿ ಪದಾಶಿವಿಜಯಂಬುದೇ ಗುರು ಭಕ್ತಿಂದೇ | ಶೃತಿ ಯಥಾದೇವೇ ತಥಾಗುರೌ ಎಂದು ನುಡಿವುದು ಅರ್ಥ ತಿಳಿದು | ನಂಬಿ ಭಜಿಸದೆವೆ | ಕ್ಷಿತಿಯೊಳು ನರರೆಂದು ಬಗೆದೆವು ಹಿತ ಮರದೆವು | ಬಾಹ್ಯ ದೃಷ್ಟಿ ಶ್ಲೋಕ 12 ಸಕಲ ವೃತ ತಪ ತಿರ್ಥಾ ಶಾಸ್ತ್ರ ಪೌರಾಣ ಬಲ್ಲಾ | ಅಖಳದಿ ಫಲವೇನು ಶ್ರೀ ಗುರು ಭಕ್ತನಲ್ಲಾ | ನಿಖಿಳಾ ಭರಣಗಳಿದ್ದು ವ್ಯರ್ಥ ಮಾಂಗಲ್ಯವಿಲ್ಲಾ | ಪಿಂತಿನ ತಪ್ಪವ ನೋಡದೇ ತಡ ಮಾಡದೇ | ಸಿರದಲ್ಲಾ ಭಯ ನೀಡಿ | ಅಂತರಂಗದ ಸುಖದೆಚ್ಚರಾ ಕೊಟ್ಟ ಸಾರಥಿ | ನಾಮ ಬಿಡದೆ ಕೊಂಡಾಡಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಆ) ಆಳ್ವಾರಾಚಾರ್ಯ ಸ್ತುತಿಗಳು (1) ಆಂಜನೇಯ ನೋಡಿರೈ ಕಣ್ದಣಿಯಾ ಸಜ್ಜನರೆಲ್ಲ ಪಾಡಿರೈ ಮನದಣಿಯಾ ಪ ಗಾಢಭಕುತಿಯನಾಂತು ಭಜನೆಯ ಮಾಡುವರ ದುರಿತಗಳನೋಡಿಸಿ ಕೂಡೆನಿರ್ಮಲರೆನಿಸಿ ಪೊರೆವಾ ರೂಢನಹ ಮಾರುತಿಯ ಮೂರ್ತಿಯ ಅ.ಪ ಉಡಿಯೋಳ್ ಘಂಟೆಗಳೆಸೆಯೆ ಚರಣದೊಳುಳ್ಳ ತೊಡರುಗಗ್ಗರಮುಲಿಯೆ ರ್ಕಡೆಯ ಕರ್ಣದಿ ಪೊಳೆಯೆ ಕಡಗ ಮಣಿಮಕುಟಗಳ ಪೇರುರ ದೆಡೆಯ ವಜ್ರದಪದಕ ಮೊದಲಹ ತೊಡಿಗೆಗಳ ಸಡಗರದೊಳೊಪ್ಪುವ ದೃಢತರದ ಮಾರುತಿಯ ಮೂರ್ತಿಯ 1 ಭರದಿಂದ ಶರನಿಧಿಯಾ ಲಂಘಿಸಿ ಪೊಕ್ಕಾ ನಿರುಪಮತರ ಲಂಕೆಯ ಗುರಿಗೊಂಡರಸಿ ಸೀತೆಯಾ ಕಂಡಾರಘು ವರನುರುಮುದ್ರಿಕೆಯ ಕರದೊಳಿತ್ತಾರಮಣಿಯಿಂ ವಿ ಸ್ಫುರಿಪ ಚೂಡಾಮಣಿಯ ಕೈಕೊಂ ಡಿರದೆ ಬಂದೊಡೆಯಂಗೆ ಸಲಿಸಿದ ಪರಮಬಲಯುತನಮಳಮೂರ್ತಿಯ 2 ವಾದವಿದೂರನನು ಪಾವನ ಮೃದು ಪಾದಾರವಿಂದನನು ವೇದಾಂತವೇದ್ಯನನು-ಸನ್ನುತಪರ ನಾದಾನುಮೋದನನು ಸಾದರದೊಳೈತಂದು ಪ್ರಾರ್ಥಿಪ ಸಾಧುಸಂತತಿಗೊಲಿದು ಪರಮಾ ಮೋದದಿಂ ಪರಮಾರ್ಥವಿಷಯವ ಬೋಧಿಸುವ ಮಾರುತಿಯ ಮೂರ್ತಿಯ 3 ರಂಗನಾಥನದೂತನ ಸತ್ಕರುಣಾಂತ ರಂಗನಾರ್ತಪ್ರೀತನ ಕಂಗೊಳಿಸುವ ನೂತನಪುರವರದೊಳು ಹಿಂಗದೊಪ್ಪಿರುವಾತನ ಮಂಗಳಾತ್ಮನ ಮೋಹದೂರನ ಸಂಗರಹಿತನ ಸತ್ಯಚರಿತನ ರಂಗದಾಸಪ್ರಣಿತಮಹಿಮೋ ತ್ತುಂಗ ಶ್ರೀ ಮಾರುತಿಯ ಮೂರ್ತಿಯ 4
--------------
ರಂಗದಾಸರು
(ಆ) ಮಹಾಲಕ್ಷ್ಮೀ ಸ್ತುತಿಗಳು ಅರಿತು ಸಿಂಗರಮಾಡಿ ಅರಿತು ಸಿಂಗರ ಮಾಡಿ ಪ ಗರುವ ಚೆನ್ನಿಗರಾಯ ಬರುತಿಹನೆ ಬೇಗಾ ಅ.ಪ ಅಳಿಕುಂತಳೆಗೆ ನೋಡಲಲರ್ದ ಸಂಪಿಗೆ ಯೇಕೆ ಚೆಲುವ ಜಾಜಿಯ ಕಮ್ಮಲರ ತುರುಬಿರಮ್ಮಾ ಹೊಳೆವ ಚಂದಿರಮುಖಿಗೆ ವಳಿನವೇತಕೆ ಕೈಗೆ ಅಲರ್ದ ನೈದಿಲೆ ಕುಸುಮವನೆ ಕೊಡಿರೆಯಮ್ಮಾ 1 ಕೀರವಾಣಿಗದೇಕೆ ಜವ್ವಾಜಿ ಪರಿಮಳವು ಚಾರುಕತ್ತುರಿ ಹದನ ಮಾಡಿರಲು ಮುನ್ನಾ ತೋರ ಕುಚಗಿರಿಗಳಿಗೆ ವಜ್ರಭೂಷಣವೇಕೆ ಹಾರವಿದೆ ತಂದಿರಿಸಿ ಮಂಜುಳವಿದೆನಿಸೀ 2 ಲಾವಣ್ಯನಿಧಿಯೀಕೆ ಬೇರೆ ಸಿಂಗರವೇಕೆ ತೀವಿದಂಗದಕಾಂತಿ ನಯನ ವಿಶ್ರಾಂತೀ ಶ್ರೀವೇಲಪುರದಲ್ಲಿ ನೆಲಸಿಹ ಕರುಣದಿಂದ ದೇವ ವೈಕುಂಠಕೇಶವನರಸಿಯೀಕೇ 3
--------------
ಬೇಲೂರು ವೈಕುಂಠದಾಸರು
(ಆ) ಯತಿ ; ದಾಸ ನಮನ ಶ್ರೀ ವಿದ್ಯಾಧೀಶರು ಪಾದ ಪದ್ಮಂಗಳಿಗೆ ಪ. ಸಾಧನದಗೋಸುಗಕೆ ಮೇದಿನಿಯೊಳ್ ಜನಿಸಿಸಾಧನವ ಕಾಣದೆ ಮೋದಗೊಂಡಿಹೆನುಸಾಧುಜನ ಪ್ರಿಯನೆ ಸಾದರದಿಂದಲಿಭೇದ ಕಂಚಜ್ಞಾನ ಹಾದಿಯನೆ ತೋರುತಲಿ 1 ಧರೆಯ ರಮಣನು ತಾನು ಧೊರೆ ಎಲ್ಲ ಜಗಕೆಂದುಪರಿಪರಿ ಸ್ತುತಿಸುವಾ ಪರಮ ಭಕುತಿಯನಿತ್ತುಪರಿಪಾಲಿಸಬೇಕು ಕರಮುಗಿದು ಪ್ರಾರ್ಥಿಸುವೆಶರಣು ಜನ ಪರಿಪಾಲಾ 2 ನಿರುತ ಸಂಸಾರದೋಳ್‍ವೈರಾಗ್ಯ ಕರುಣಿಸಿ ಕರಪಿಡಿಯೋ ಕರುಣಾಲವಾಲಪರಮ ಪಾವನ ತಂದೆವರದವಿಠಲನಚರಣವನು ಭಜಿಸುವೆನು ಮರುತ ಮತ ಮೋಹನ 3
--------------
ಸಿರಿಗುರುತಂದೆವರದವಿಠಲರು
(ಆ) ಲಕ್ಷ್ಮೀ ಸ್ತುತಿಗಳು ಅಮ್ಮಾ ನೀನೆಮ್ಮ ಮನೆಯಲಿಹುದಮ್ಮಾ ನಿತ್ಯ ಪ ನಮ್ಮಯ್ಯನೊಡನೆ ಸುಭಾಷಿಸುತಲಿ ಸಮ್ಮಾನದಿ ಮುಖದಿಂ ನಲಿದಾಡುತಾ ಅ.ಪ ಮಕ್ಕಳೆಂದೆಮ್ಮ ನಲಿಸುತ ಒಲಿಸುತ ಸಕ್ಕರೆ ಸಮಿಗುಂಮಿಗಲಹ ಮಾತುಗ ಳಕ್ಕರದಾಡುತ ಶುಭಸಂಪದಗಳ ನಕ್ರೂರಾರ್ಚಿತೆ ಕೊಡುತ ಮೋದದಿಂ 1 ನೀನಿರುವ ಮನೆಯು ಶೋಭಿಸುತಿಹುದು ತಾನೇತಾ ಮಂಗಳ ನೆಲೆಸಿಹುದು ಸಾನುರಾಗದಿಂ ಸರ್ವರ ಜನನಿಯೆ ನಾನಿನ್ನಾದರದ ಪ್ರೇಮಸುಪುತ್ರನು 2 ನಿತ್ಯಾರಾಧನೆಗನುಕೂಲಗಳಂ ಸತ್ಯಧರ್ಮಗಳ ಬಿಡದಾಚರಿಪುದ ಸ್ತುತ್ಪತದಿ ಸಮಾರಾಧನ ವೆಸಗುನವ ಅತ್ಯಾನಂದದ ಸೌಭಾಗ್ಯವಿತ್ತು 3 ಸವಿ ಸವಿಭಕ್ಷ್ಯಗಳನುಗೊಳಿಸುತ್ತ ಸುವಿಮಲ ಮಂಗಲ ದ್ರವ್ಯಸುಪುಷ್ಪವ ಸುವಾಸಿನಿಯರಿಗೂ ಸದಭಕ್ತರಿಗುಂ ಸುವರ್ಣಭಾಜನದೀಯುವುದಿತ್ತು 4 ಹಾಲು ಹಣ್ಣು ಮಧು ಮಧುರದ ಮನೆಯಂ ಶ್ರೀಯೋಗಗಾನ ಧ್ಯಾನದ ನೆಲೆಯ ಬಾಲರ ಲೀಲೆಯ ಲಾಲನ ಪಾಲನ ಕಾಲವೆಲ್ಲ ಸೊಗನಗೆ ಮೊಗನೆರೆಯಲಿ 5 ಭೃಗುಸುತೆ ಕ್ಷೀರಸಾಗರಜಾತೆ ಭಗವತಿ ಭಾಗ್ಯದಾತೆ ಅಮೃತ ಮಂಗಳಸುಂದರಿ ಚಂದ್ರಸಹೋದರಿ ಅಗಲದೆ ಹರಿವಕ್ಷಸ್ಥಲಸ್ಥಿತೇ 6 ಸುವರ್ಣವರ್ಣಿ ಕಮಲಸುಚರಣೆ ಭುವಿಸುರ ಪೂಜಿತೆ ಕಲ್ಪಲತೆ ಭವ ಭವಹಾರಿಣೆ ಭಕ್ತೊದ್ಧಾರಿಣೆ ದಿವಿರಾಜವರದೆ 7 ಶ್ರೀಕರ ಸಾತ್ವಿಕ ಸುಲಲಿತರಿಂದ ನಾಕಿಗರೆಂಬೊ ಬಂಧುಗಳೊಡನೆ ಜೋಕೆಯ ಮಕ್ಕಳ ವಿವಾಹಗೈದು ಸಾಕಾರ ಸಂಸಾರ ಸುಖನಿಧಿ ಎನಿಸು 8 ಚಪ್ಪರ ತೋರಣ ಮೇಲ್ಕಟ್ಟುಗಳಿಂ ದೊಪ್ಪುವ ಬಗೆಬಗೆ ರಂಗವಲಿಗಳಿಂ ದಿಪ್ಪಾಸಾಗರ ಮಂಗಳ ವಾದ್ಯಂಗ ಳಪ್ಪ ಸದೃಹವ ಮಾಡುತ ಮಮತೆಯಿಂ9 ಅಪ್ರತಿಮ ರತ್ನಪೀಠವನಿಟ್ಟು ತುಪ್ಪದ ನಂದಾದೀವಿಗೆ ಹಚ್ಚಿ ಅಪ್ರಮೇಯನೋಡನಿಪ್ಪ ನಿನ್ನ ಸುಪ್ರೀತಿಯೊಳಾಂ ಪೂಜಿಪುದೀಯತ 10 ಪರಿಮಳ ತೈಲದಭ್ಯಂಜನದಿಂ ಸುರಭೀತೊಯ ಸ್ನಾವನಗೈದು ಹರಿದ್ರಾಕುಂಕುಮ ರತ್ನ ಕಿರೀಟವು ಸರಪೀತಾಂಬರ ಕಮಲವ ಧರಿಸಿ 11 ನರುಗುಂಪಿನ ಶ್ರೀಗಂಧದ ಲೇಪ ಪರಿಪರಿ ಘಮ ಘಮ ಸುಗಂಧ ಧೂಪ ಪರಮ ಪ್ರಕಾಶದ ಮಂಗಳ ದೀಪ ಸಿರಿಹರಿ ನಿಮ್ಮಯ ದಿವ್ಯ ಸ್ವರೂಪ 12 ಬಗೆ ಬಗೆ ಭಕ್ಷ್ಯವು ಕ್ಷೀರಾಜ್ಯಗಳಂ ಹಗಲಿರುಳುಂ ಫಲತಾಂಬೂಲಗಳಂ ನಿಗಮ ಸ್ತುತಿಕೈಗೊಳ್ಳುತ ಪಿಯೆ ನೀ ನಗಲದೆ ಸವಿಯುತ ಸಂತೋಷದಿಂದ 13 ಜಯ ಜಯ ಕರ್ಪೂರಾರತಿಮಾತೆ ನಯದಿಂ ಕುಸುಮಾಂಜಲಿಯಖ್ಯಾತೆ ದಯೆಯಿಂ ಭಾವಭಯ ಹರಿಸಾಪೂತೆ ಜಯ ಜಯ ಶ್ರೀಕೇಶವ ಸಂಪ್ರೀತೆ 14 ವಿಧಿರಮಾತೇ ಶ್ರೋಣಿತ ಚರಿತೆ ಬುಧಜನಪಾಲೆ ಕೃಪಾಲಪಾಲೆ ಮುದದಿಂ ಪಾಲಿಸು ಬಾಳಿನಲಿಡುತೆ ಹೃದಯನ್ನುತೆ ಜಾಜೀಶ ಸಹಿತೆ 15 ಅಗಣಿತ ಸುಗುಣೆ ಕರುಣಾಭರಣೆ ಜಗದೋದ್ಧಾರೆ ಜಯಜಯತಾರೆ ಯುಗಪದಕೀಗಲೆ ಮುಡಿಯಿಟ್ಟಿರುವೆ ಮಗುವಾದೆನ್ನಂ ಮಡಿಲೊಳಗಿಡು ನೀಂ 16
--------------
ಶಾಮಶರ್ಮರು
(ಆ) ಲಕ್ಷ್ಮೀಸ್ತುತಿಗಳು ಶಂಬರಾರಿ ಜನನಿ ಪ ಬೆಂಬಿಡದೆನ್ನ ಹೃದಂಬುಜದೊಳಗವ ಲಂಬಿಸಿ ಸಲಹು ಮದಂಬೆ ಸನಾತನಿ ಅ.ಪ ಅಂಬುಜಮುಖಿ ಚಿಕುರೆ ಶರ ಕುಂಭಪಯೋಧರೆ ಬಿಂಬಫಲಾಧರೆ 1 ಕರ್ಣದೊಳೆಸೆವ ಸುವರ್ಣವಿಡಿದ ಪೊಸ ರನ್ನದೊಡವೆಗಳ ಮನ್ನಿಸುವಂತಿದೆ ರನ್ನೆ ಗುಣಾರ್ಣವೆ 2 ನೀಲಭುಜಗವೇಣಿ ಲೀಲೆಯಿಂದ ಶಾರ್ದೂಲ ಮಹೀಂದ್ರದೊ ಳಾಲಯಗೈದಲಮೇಲಮಂಗಾಮಣಿ 3
--------------
ವೆಂಕಟವರದಾರ್ಯರು
(ಆ) ಶ್ರೀ ಹರಿಯ ಸ್ತುತಿ ಕೃತಿ ಆಗಿ ಹೋಗುವುದು ಜಗದೀಶನಾಕೃತಿಯು ಅಗಾಧವಿಹುದೈಯ್ಯ ಪ ಮಂದರೋದ್ಧರನಾಜ್ಞೆಯಿಂದ ಬ್ರಹ್ಮನು ತಾನು ಇಂದಿಗೆ ಸೃಷ್ಟಿ ಮಾಡುವುದಿಲ್ಲವೇನು ಇಂದೀವರಾಕ್ಷ ಮುಕುಂದನ ದಯದೀ ಪಾಂಡುನಂದನನು ಅಶ್ವಮೇಧವ ಮಾಡಲಿಲ್ಲೇ 1 ಹರಿಯ ಕೃಪೆಯಿಂದಲಿ ವರದಂಜನೇಯ ಸುತನು ಗುರು ರಾಮನಾ ಸತಿಯ ಅರಸುವುದಕ್ಕಾಗಿ ಪರಮ ದುರ್ಲಭವಾದ ಶರಧಿಯನು ಹರುಷದಲಿ ಸಿರಿನಾಮ ಸ್ಮರಿಸಿ ಹಾರಲಿಲ್ಲೇನೋ2 ಧನಭೂಮಿ ಕನ್ಯಾಗ್ರಹದಾನ ಕೊಡಲದಕೆ ಹರಿ ಅನುಕೂಲವಾದಷ್ಟೇ ಫಲಕೊಡುವನು ಮನವನೊಪ್ಪಿಸಿ ಗತಿ ಎಂದು ನೆನೆದವರಿಗೆ ಘನ ಮುಕ್ತಿಯನು ಕೊಡುವ ಹನುಮೇಶವಿಠಲ 3
--------------
ಹನುಮೇಶವಿಠಲ
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಆರೋಹಣ ಕ್ರಮದಲ್ಲಿ ದಾಸ-ಗುರು-ದೇವತಾನಮನ) ಅಕ್ಕ ನೋಡೆ ನಾನಾ ನಿನ್ನ ದಯದಿಂದ ಗುರು ರಂಗವಲಿದದಾಸರ ಕನುಷಿನೊಳಗುಳ್ಳ ರಕ್ಕಸರಿಗೆಲ್ಲ ಕಕ್ಕಸವಾಗುತಿದೆ ದಕ್ಕಲಾರದು ಇನ್ನು ರೊಕ್ಕ ರೊಕ್ಕಕ್ಕೆ ಸಿಕ್ಕಿ ಬಲುಪರಿಯಿಂದ ಸೊಕ್ಕಿ ಧಕ್ಕೆ ತಿನ್ನುತ ಇದ್ದು ಶಕ್ಕುತಿಯಿಲ್ಲದೆ ಯನಗೆ ಪುಕ್ಕಟೆ ಸಿಕ್ಕಿತುಯೆನ್ನ ಕಕ್ಕನು ಇವರಕ್ಕಮುಕ್ಕಿ ಮಹ ಪಕ್ಕಿವಾಹನ ತಂದೆವರದಗೋಪಾಲವಿಠಲನ ತೋರುವಾ 1 ವತ್ಸರ ಇಂದಿರೆ ಕರ್ತು ನಾನಲ್ಲ ಚಂದ್ರ ಪುರಕೆ ಪೋಗು ಭಾಗಣ್ಣನೆಂಬುವನುಂಟು ಶಿರಿ ಅರಸ ವರದಗೋಪಾಲವಿಠಲನ ದಯದಿಂದಾ ಬಂದು ಸೇರಿದರು 2 ಅಪರೋಕ್ಷ ಪಾಲಿಸಿ ಮಂತ್ರಗಳುಪದೇಶಿಸಿ ಚರಣಂಗಳ ಲಯ ಮಾಡಿಸಿ ನಿರುತದಿ ಪಾಲಸಾಗರಶಾಯಿ ತಂದೆವರದಗೋಪಾಲವಿಠಲನ ನಿಲ್ಲಿಸಿ ಕೊಟ್ಟುಬಿಡದೆ3 ವಾಸವ ಮಾಡುತ ದಾಸರ ಪೋಷಿಸಬೇಕೆನುತ ಆಶೆಯುಕ್ತ ದೋಷರಹಿತಭಾವಿ ವಾಯುಪದಸ್ಥ ಸ್ವಾದಿರಾಜರ ಆಜ್ಞಾವ ಧರಿಸಿ ಶೇರಿ ಅರಸನ ಮಹಿಮೆಯ ಶೋಧಿಸಿ ಭಾಗವತಾದಿ ಶಾಸ್ತ್ರ ಅರ್ಥಸಮ್ಮತ ಕವನದಿ ರಚಿಸಿ ಹರಿಕಥಾಮೃತಾಖ್ಯ ಗುಣಸಾಗರ ಸಾರವೆಂದು ನಾಮವೆನಿರ್ಮಿಸಿ ಕುಮತವ ಭೇದಿಸಿ ಹಾನಿ ವೃದ್ಧಿಯ ಭೇದಿಸಿ ನೀತಿ ಹಿತನ ದ್ವಾರ ಜಗನ್ನಾಥವಿಠಲನೆಂಬೊ ಪೆಸರು ಪಡೆದು ತೀರ್ಥಕ್ಷೇತ್ರಾದಿಯಾಟಿಸಿ ಗಾತ್ರವ ಘೋಟಿಸಿಸೂತ್ರವ ಮೀಟುತ ಪಾತ್ರರ ಸಂಗಡ ಚಿತ್ರವೇಷವ ಧರಿಸಿ ವರ್ತನೆಗ್ಯಯ್ಯುತ ಸೂತ್ರನಾಮಕ ಕೃಷ್ಣನಂತರ್ಯಾಮಿ ಸೂತ್ರವಂದಿತ ತಂದೆವರದಗೋಪಾಲವಿಠಲನ ಭಜಿಸಿ ಮಹಪದವೈದ 4 ಆನಂದ ಆನಂದ ಮಹಾಸಾಗರದೊಳಗೆ ಮುಳುಗಿ ಶಿಂಧುಶಯನ ಅರವಿಂದನಯನನ ಪೊಂದಿ ಮಹ ಪೊಂಗೊಳಲನೂದುತ ಜಗಂಗಳ ಪೋಗುತ ಗಂಗಾಜನಕ ಹರಿ ಗೋವಿಂದನಾಶ್ರಯಿಸಿ ದ್ವಂದ್ವಾವ ಭಜಿಸುತ ಮಂಗಳ ಮೂರುತಿ ಸ್ವಪನದಿ ಬಂದು ನಂದಾದಿ ಕವನ ಪೇಳಿ ಪವಿತ್ರನ ಮಾಡಿದಿ ಭಾವಿ ಭಾರತಿ ವರನ ಮಹಿಮೆಗೆಣೆಯುಂಟೆ ಹನುಮ ಭೀಮ ಮಧ್ವಾತ್ಮಕ ರೂಪಧಾರಿಗುರುರಾಜಾಂತರ್ಗತ ತಂದೆವರದಗೋಪಾಲವಿಠಲನು ಬಂದು ವದಗಿದ ವಾಸನಾಮಯದಿ 5 ಜತೆ :ಪಾತಕ ಪೋಯಿತು ಪೂತಾತ್ಮಕನ ಸೇವಿಪ ಜಗನ್ನಾಥರಾಯನ ಕಂಡೇ ಹರಿರೂಪಧಾರಿ ಗುರು ತಂದೆವರದಗೋಪಾಲವಿಠಲನ ದಯದಿಂದಾ 6
--------------
ಗುರುತಂದೆವರದಗೋಪಾಲವಿಠಲರು
(ಇ) ಆತ್ಮನಿವೇದನೆ ಏನು ಮಾಡಲಿ ವೆಂಕಟೇಶ ಈ ಬೆಳೆಯು ಸೋನೆಯಿಲ್ಲದೆ ಉರಿದುದು ಪ ನಾನಾ ಪ್ರಕಾರದೊಳು ಹಾನಿಯಾಯಿತು ಇರವು ಹೀನರಾದೆವು ನಾವು ಶ್ರೀನಿವಾಸನೆ ಕೇಳು ಅ.ಪ ಮೂಡದೆಸೆಯಳು ಬಂದುದು, ಆ ಮಳೆಯು ಬಡಗದೆಸೆಯಳು ಸುರಿದುದು ಎಡಬಿಡದೆ ತೆಂಕ ಕಡೆಯಲಿ ಹೊಡೆದ ಮಳೆಯು ತಾ ನಡುವೆ ಬಿಡುವುದು ಯಾತಕೆ 1 ಕಟ್ಟುಕಡು ಮದಗ ಸಹಿತ, ಈ ಊರ ತಲೆ ಗಟ್ಟಿನೊಳು ನಾ ಕಾಣೆನು ಕೆಟ್ಟು ಹೋಯಿತು ಮಳೆಯು ಹೊಟ್ಟೆಯನು ಉರಿಸುತ್ತ ದೃಷ್ಟಿಯಲಿ ನೋಡು ನೀನು 2 ಮಳೆಯಿಲ್ಲದಿಳೆಯಾರಿತು, ನಟ್ಟಿರ್ದ ಫಲವೆಲ್ಲ ಬೆಳೆ ಕೆಟ್ಟಿತು ಸ್ಥಳದ ತೆರಿಗೆಯ ಬಿಟ್ಟು ಕಳುಹುವನೆ ದೊರೆ ತಾನು ಎಳೆದೆಳೆದು ಕೊಲುವನಲ್ಲ 3 ಕಷ್ಟ ಬಂದುದು ನಮ್ಮ ಕಡೆಗೆ, ಈ ವೃಷ್ಟಿ ಬಿಟ್ಟು ಪೋದುದು ಇಳೆಯನು ಸುಟ್ಟ ಊರೆಲ್ಲವನು ತಟ್ಟಿನಾರಿದ ಮೇಲೆ ಮುಟ್ಟಿ ನೋಡುವರಿಲ್ಲವೊ 4 ಹದಿನಾಲ್ಕು ಲೋಕವನು ನೀ ನಿನ್ನ ಉದರದೊಳಗಳವಟ್ಟಿಹೆ ಬೆದರುತಿದೆ ಈ ಲೋಕ ಒದರುವುದು ಜನರೆಲ್ಲ ಉದುರದೇತಕೆ ಇಳೆಗೆ ಮಳೆಯು 5 ಎಲ್ಲ ಬೇಡಿಯೆ ಕೊಂಬರು, ಈ ಹರಕೆ ಯಲ್ಲಿ ಅಂತರಬಾರದು ಹಲ್ಲು ಬಾಯಾರಿರ್ದ ಮಕ್ಕಳಿಗೆ ಎಳೆನೀರು ಬೆಲ್ಲವಾಗಿಹ ಮಳೆಯನೆರೆಯೊ 6 ನೀಲಮೇಘಶಾಮ ವರ್ಣ, ಕಾಣಲಾ ಮೂಲೋಕದೊಡೆಯಾ ನಿನ್ನ ಕಾಲಮೇಘವು ನಿನಗೆ ದೂರವಾಗುವುದುಂಟೆ ಆಲಸ್ಯ ಮಾಡಬೇಡ 7 ಬಡವರೆಲ್ಲರು ಕೂಡಿಯೇ, ಒಪ್ಪು ಕೈ ವಿಡಿದು ಬೇಡಿಯೇ ಕೊಂಡೆವು ಸಿಡಿಲು ಮಳೆ ಮಿಂಚುಗಳು ಹೊಡಕರಿಸಿ ಬರುವಂತೆ ಒಡೆಯ ದಯದೋರೊ ನೀನು 8 ಸ್ವಾಮಿ ನಿನ್ನಯ ನಾಮವು, ಜನರಿಂಗೆ ಕಾಮಿತಾರ್ಥವನೀವುದು ಪ್ರೇಮವಾಗಿಹ ಮಳೆಯ ಭೂಮಿಯಲಿ ಇಳಿಬಿಟ್ಟು ನಾಮವಾಗೆವು ಸ್ವಾಮಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
(ಇ) ಶ್ರೀಕೃಷ್ಣಲೀಲೆ ಅಂಗಜನೈಯನು ಗೋಕುಲ ಪೋಗುವಾಗಕಂಗಳ್ಹಬ್ಬದ ಉಬ್ಬಿನೇನ ಬಣ್ಣಿಪೆನಾ ಪ ಎಳೆಗರುಗಳ ಝುಂಗುಗಳನ್ನು ಮತ್ತೆಮಲೆವ ಗೂಳಿಗಳ ಗೂರಾಟವನ್ನುಒಲಿವಾವಿನ ಕೆಚ್ಚಲು ಸಂದಣಿಯಲ್ಲಿನಲಿವ ಮರಿಗರುಗಳ ನೋಡುತಲಿ 1 ಆಡಿಸುವ ಮೊಗ ಬದಿಗಳ ತುರಿಸುತ್ತಝಾಡಿಸುವಾಕಾರ ಬೆದರು ನೋಟಏಡಿಸುವ ಹುಬ್ಬಿನ ಗೋವಳರಕೋಡಂಗಿ ಆಟಕ್ಕೆ ಕುಲುಕಿ ನಗುತ 2 ಒಂದು ಹುಬ್ಬೊಂದು ಕಿವಿಯನಲಗಿಸುತಮುಂದಣ ಚಂಡಿಕೆ ತಾಳದ ಗತಿಗೆಚಂದದಿ ಕುಣಿಸುವ ಭೃಂಗಿ ಆಟಕೆ ಗೋಪಸಂದೋಹಕೆ ಮೆಚ್ಚಿ ಬಲಗೆ ತೋರಿಸುತ 3 ಕೆಲರು ಕೋಗಿಲೆಯಂತೆ ಕೆಲರು ನವಿಲಿನಂತೆಕೆಲರು ಹಂಸದಂತೆ ಸಾರಸದಂತೆಗಳರವದಿಂ ಗೋಪರು ಕೂಗೆ ಋತುಗಳುನಳಿನಾಕ್ಷನ ಸೇವೆಗೆ ಕೂಡಿದಂತಿರೆ 4 ಒಂದೊಂದು ತಾಳಕ್ಕೆ ಒಂದೊಂದು ಪದಗತಿಒಂದೊಂದು ರಸಕ್ಕೆ ಮತ್ತೊಂದು ಕೈಗತಿಒಂದೊಂದು ಭಾವಕ್ಕೆ ಒಂದೊಂದು ನೇತ್ರವಾನಂದದಿ ಗೋವರ್ಧನ ನಾಟ್ಯವಾಡೆ 5 ಕಿನ್ನರ ಗಾನ ಗೋಪರ ಗೀತ ದೇವಕನ್ಯೇರ ನಾಟ್ಯ ಗೋಪರನಾಟ್ಯಚೆನ್ನಾರ ಕುಣಿಸುವ ಚಿಣ್ಣರ ಕಣ್ಣುಸನ್ನೆ ಝೇಂಕರಿಸುವ ಗೋಪರ ನೋಡುತ6 ನಾರಂದನ ವೀಣೆ ಗೋಪರ ಕಿನ್ನರಿಗೀರ್ವಾಣದುಂದುಭಿ ಗೋಪರ ಮುರಜಆ ರಂಭೆಯರಾಟ ಗೋಪರ ತಾಂಡವಕ್ಷೀರೋದಕದಂತೆ ಕಲೆಸಿ ಬೆರೆಸಿರೆ 7 ರಸತುಂಬಿ ತುಳುಕುವ ಕೊಳಲ ರವಂಗಳುಹಸುಗಳ ಕೊರಳ ಘಂಟೆಗಳ ನಿನಾದಎಸೆವೆಳಗಂದಿಯ ಅಂಬಾರವಂಗಳು ಪಸರಿಸೆ ಗೋವಳೆಯರು ಸಡಗರಿಸಿ8 ಜಂಗುಳಿ ಗತಿಯರ ಮುಖ ಕನ್ನಡಿ ಊರೋ-ಜಂಗಳೆ ಮಂಗಳ ಪೂರ್ಣ ಕುಂಭಗಳುಕಂಗಳೆ ನೀಲೋತ್ಪಲಂಗಳು ಕರಗಳೆತುಂಗ ಪಲ್ಲವ ತೋರಣದಂತೆಸೆಯೆ 9 ಚೆಂದದ ನೋಟವು ಮಂಗಳಾರತಿಯಾಗೆಮಂದಹಾಸವು ಪೂಮಳೆಯಾಗೆ ಆನಂದ ಪುಳಕಗÀಳೆ ಕೋಡಿಯಾಗೆ ಗೋಪವೃಂದವಿದಿರುಗೊಳ್ಳ ಬಂದರೊಲವಿಲಿ 10 ಕಂಗಳ ಕುಡಿ ನೋಟಂಗಳಿÀಂ ಸೆಳೆದುರಂಗನ ತಮ್ಮಂತರಂಗದೊಳಿಟ್ಟುಹಿಂಗದಾಲಂಗಿಸಿ ಸುಖಾಂಬುಧಿಯ ತ-ರಂಗದಿ ಗೋಪಾಂಗನೆಯರು ಮುಳುಗಿ11 ಗೋಪಿಜನರು ರಂಗಗೆ ಮರುಳಾಗಿರೆನೂಪುರ ಮರಕತ ಪ್ರಭೆ ಸಾರಳೆಯಾಗೆಆ ಪದ್ಮರಾಗವೆ ಕೆಂಪು ಕಾರಳೆಯಾಗೆಶ್ರೀಪದನಖ ಕಾಂತಿ ರಂಗವಲ್ಲಿಯಾಗೆ 12 ಬೃಂದಾರಕರು ಪೂಮಳೆಗರೆಯಲು ಬೇಗಬಂದಾಳಿಗಳು ಬೃಂದಾವನದಲ್ಲಿ ಮಕರಂದವನುಂಡು ಸ್ವರ್ಗವ ಹಳಿದಿಳೆಗೆಬಂದಳಿಂದಿರೆಯೆಂಬ ಸಂಭ್ರಮದಿಂದ 13 ತುರುಗಾತಿಯರ ನೋಟದ ಬೇಟಂಗಳುಹರಿಮುಖೇಂದವಿನಲ್ಲಿ ಚಕೋರಗಳುಹರಿನಾಭಿಸರೋವರದಲ್ಲಿ ಮೀನ್ಗಳುಹರಿಪಾದಪದುಮದಿ ತುಂಬಿಗಳಾಗೆ14 ಇತ್ತ ಗೋವಳರಾಟಕೆ ತಲೆದೂಗುತಅತ್ತ ದೇವತೆಗಳ ಸ್ತುತಿ ಕೇಳುತ್ತಇತ್ತ ಗೋವಳೆಯರ ನಗಿಸುತ್ತ ನಗುತ್ತಅತ್ತಿತ್ತ ಮುನಿಗಳ ಸ್ತುತಿ ಕೇಳುತ್ತ 15 ಕಂಜಾಸನ ನಮಿಸಲು ಕೈಹಿಡಿದೆತ್ತಿ ಮೃ-ತÀ್ಯುಂಜಯ ವಂದಿಸೆ ಬಾ ಯೆನ್ನುತ್ತಅಂಜಲಿ ಪುಂಜದ ಇಂದ್ರಾದಿಗಳನ್ನುಕಂಜನೇತ್ರಗಳ ಸನ್ನೆಯಲಿ ಮನ್ನಿಸುತ16 ಸಿರಿ ವನಿತೆಗೆ ವನಮಾಲೆ ಉಯ್ಯಾಲೆಮೊರೆವಳಿಕುಲಗಳ ರವ ಸಂಗೀತ ವರ ಮುತ್ತಿನ ಹಾರ ಚಾಮರ ಶ್ರೀಕೃಷ್ಣ-ನುರಮಧ್ಯವೆ ಮಂಟಪವಾಗೆಸೆಯೆ 17
--------------
ವ್ಯಾಸರಾಯರು
(ಇ) ಶ್ರೀಕೃಷ್ಣಸ್ತುತಿಗಳು ಜಯಕೃಷ್ಣ ಜಗದೀಶ ಜಯ ಶಶಿಕುಲಾಧೀಶ ವಿನುತ ವಾಣೀಶ ಜಯಣೀಶ ಜಯ ಜಯ ಪ ಕಮಲಭವನುತಿಪಾತ್ರ ಕಮಲಸಖನಿಭಗಾತ್ರ ಕಮಲರಿಪುಸಮವಕ್ತ್ರ ಕಮಲದಳನೇತ್ರ ಕಮಲಕರಧೃತಗೋತ್ರ ಕಮನೀಯ ಸುಚರಿತ್ರ ಕಮಲಾರಿಧರಮಿತ್ರ ಕಮಲಾಕಲತ್ರ 1 ನಂದಗೋಪಕುಮಾರ ನವನೀತದಧಿಚೋರ ಸುಂದರೀ ಕುಲಜಾರ ಸ್ಮರಸಮರ ಶೂರ ಕಂದರ್ಪಸಹಕಾರ ಕಾಮಿನೀವಾರ ಬೃಂದಾವನವಿಹಾರ ಭಕ್ತ ಮಂದಾರ 2 ಧರಣೀಧರಾಸ್ಫಾಲ ಮನಕರ ನಿಜಲೀಲ ನರಪೌತ್ರ ಪರಿಪಾಲ ನವ್ಯವನಮಾಲಾ ವರವ್ಯಾಘ್ರಗಿರಿಲೋಲ ವರದಾರ್ಯವಿಠಲ 3
--------------
ವೆಂಕಟವರದಾರ್ಯರು
(ಈ) ತಾತ್ವಿಕ ಕೃತಿಗಳು ಓಂ ನಮೋ ನಾರಾಯಣ ಓಂ ನಮೋ ನಾರಾಯಣ ಪ ರಾಮಾನುಜ ಬೆಳೆದ ಧರೆಯೊಳಗೆ ಅ.ಪ ನಾರದ ಬಿತ್ತಿದ ನಾರಾಯಣ ಬೀಜಕೆ ಧೀರಾಂಬರೀಷನು ಗೊಬ್ಬರವಾದ ಕು- ಮಾರ ಪ್ರಹ್ಲಾದನು ನೀರಾಗೆರೆದ ಆ ರುಕುಮಾಂಗದ ಗಾಳಿಯಾದ1 ನಾರಾಯಣನೆಂಬ ಬೀಜಮಂತ್ರವು ಕು- ವರ ಧ್ರುವನ ಕಾವಲಿನಲ್ಲಿ ಸರಸರ ಬೆಳೆಯಿತು ಆಳುವಾರರು ಭೂ ಸುರ ಭಾಗವತರುಗಳಲಿ 2 ರಮಾನುಜನಿದರ ಒಕ್ಕಣೆಮಾಡಿ ಸಮಾನತೆಯಿಂದ ಹಂಚಿದನು ಶ್ರಿಮಣಿಯಲ್ಲಿ ತುಂಬಿದನು ಸಮಾನ ವೇದವೆನಿಸಿದನು 3 ಹಬ್ಬಿತು ಹರಡಿತು ಧರೆಯೆಲ್ಲ ಉಬ್ಬಿತು ಉಲಿಯಿತು ಗಿರಿಯೆಲ್ಲ ಅಬ್ಬಬ್ಬ ಜಾಜಿಪುರೀಶ ಕೇಶವನಾಮವು ಹಬ್ಬವಾಯಿತು ನಮಗೆಲ್ಲ 4
--------------
ನಾರಾಯಣಶರ್ಮರು