ಒಟ್ಟು 1305 ಕಡೆಗಳಲ್ಲಿ , 97 ದಾಸರು , 1006 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ಮರುಳಾದೆ ನೀ ಯದಿಯ ಬಿಗುವಿನಲಿ ತಿರುಗಿ | ಪಂಥದಲ್ಲಿ ಕೆಡಲಿಬೇಡ ಎರಡು ದಿನ | ಸಂತೆ ನೆರೆದಂತೆ ಮೂಢ ಇಪ್ಪದಿದು | ಸಂತತ ತೊರೆದು ಬಾಡೊ ಪ್ರಾಣಿ ಪ್ರಾಣಿ ಪ ವಿಂಚುಗೂಳನು ತಿಂದು ಮನೆ ಮನೆಗಳು ತಿರುಗಿ | ಸಂಚಿತಾರ್ಥವ ತಿಳಿಯದೆ ಮರುಳಾದ | ಪರ | ಪಂಚವನು ನೀ ಕಳಿಯದೆ ವ್ಯರ್ಥಾಯ | ವಂಚನಿಂದಲಿ ನಡೆದು ಬಾಯಿ ತೆರೆದು | ಹಲ್ಲನು | ಹಂಚಿಕೆ ತೋರಿದಂತೆ ಮೃತ್ಯುವಿನ | ಪಂಚದಲಿ ಸೇರಿದಂತೆ | ಆಗುವುದು | ಕಂಚು ಕೆಳಗೆ ಬಿದ್ದಂತೆ ಪ್ರಾಣಿ 1 ನುಗ್ಗು ನುಸಿಯಾಗದಿರು | ನೂಕು ನಿನ್ನಹಂಕಾರ | ಮುಗ್ಗದಿರು ಈ ಬಲಕಿಗೆ ಸ್ಥಿರವಾಗಿ | ಬಗ್ಗು ನಡೆವಳಿ ನಡೆದು | ವೆಗ್ಗಳದ ನಡೆವಳಿ ನಡೆದು | ವೆಗ್ಗಳದ ಧರ್ಮದಾ ಸುಗ್ಗಿಯಲಿ ದಿನವ ಹಾಕೊ | ಬಿಡು ಬಿಡು ಅಗ್ಗಳಿಕೆತನವೆ | ಸಾಕು ಆವಾಗ ತೆಗ್ಗಿಕೊಂಡಿರಲಿ ಬೇಕು | ಪ್ರಾಣಿ 2 ಇನ್ನಾದರೂ ಕೇಳು | ಪುಣ್ಯವಂತರ ಕೂಡು | ನಿನ್ನವರು ನಿನಗೆ ದಾರೊ | ಕಣ್ಣಾಗೆ ಎಣ್ಣೆ ಬಿದ್ದಂತೆ ಸಾರೊ ಬಾಯಿಂದ | ಬೆನ್ನಿಗೆ ಬಂದ ವಿಚಾರೊ ತುದಿಯಲಿ | ಮಣ್ಣು ಮಣ್ಣನೆ ಕಲಿತು ಹೋಗುವುದು ನಿಶ್ಚಯವು | ಚೆನ್ನಾಗಿ ಎಚ್ಚೆತ್ತುಕೋ ಈ ಮಾತಿಗೆ | ಖಿನ್ನನಾಗುವದೇತಕೊ ಸಾವಿರಕು | ಮುನ್ನಿಲ್ಲವೊ ಮನಸಿತೊ ಪ್ರಾಣಿ 3 ವೇದಶಾಸ್ತ್ರವನರಿಯೆ ಆದಿಪುರಾಣಗಳು | ಅದ್ವೈತ | ವಾದವರ ಕೂಡದಿರು ಇದೆ ಮಿಗಿ ಲಾದರು ಮರಿಯದಿರು ಉತ್ತಮ | ಸಿರಿ ವಿಜಯವಿಠ್ಠಲನ ಶ್ರೀ | ಪಾದವನು ಒಂದೇ ಭಕ್ತಿಯಿಂದಲಾ | ರಾಧಿಸು ಇದಕೆ ಯುಕ್ತಿ ಕಡಿಯದಲೆ | ಮಾಧವನು ಕೊಡುವ ಮುಕ್ತಿ ಪ್ರಾಣಿ4
--------------
ವಿಜಯದಾಸ
ಎಂತುನುತಿಪೆ ನಾನು-ಈ ಜಗ | ದಂತರ್ಯಾಮಿಯನು ಪ ಸಂತತ ವಾಙÁ್ಮನ ಅ.ಪ. ಸಾಸಿರ ಮುಖದವನ-ಅವಯವ-ಸಾಸಿರವುಳ್ಳವನ ಸಾಸಿರ ಪೆಸರವನ-ರೂಪಿ ಸಾಸಿರವಾಗಿಹನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನು1 ಜಗವನು ನಿರ್ಮಿಸುವ-ಬೊಮ್ಮನು-ಮಗನೆಂದೆನಿಸಿರುವ ಬಗೆಯುವದೀಜಗವ-ಜಠರದಿ-ನುಸುಳಿಸಿಕೊಂಡಿರುವ ಮಗುಳಿದ ನಳಿಯುವ ನಗಚಾಪರಮೊಮ್ಮಗನೆಂಬುವರೀ | ಯಗಣಿತ ಮಹಿಮನ 2 ನಿಗಮವ ಪೆತ್ತವನ-ಬೊಮ್ಮಗೆ-ನಿಗಮವನಿತ್ತವನ ನಿಗಮೋದ್ಧಾರಕನ-ನಿತ್ಯದಿ-ನಿಗಮಗೋಚರನ ಬಗೆಬಗೆಯೋಗಿಗಳ ಧ್ಯಾನಕೆನುಗಳಿದ ಶ್ರೀಪದ ಯುಗಳಾಂಬುಜನನು 3 ಮಾಯಾಧೀಶ್ವರನ-ದೇವನಿ-ಕಾಯಾರಾಧಿತನ ಕಾಯಜ ಸುಂದರನಾ-ಜೀವನಿ-ಕಾಯಕೆ ಮಂದಿರನಾ ಮಾಯಾಕಾರನಿವ ನಾಯವ ನರಿಯದೆ ದಾಯಗೆಟ್ಟರ ನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ- ತರಣಿಯೊಳಿರುತಿಹನ ಶರನಿಧಿ ಮಂದಿರನಾ-ಶ್ರೀ ಪುಲಿಗಿರಿಯೊಳು ನಿಂದಿಹನ ನಿರುತವು ತನ್ನಯ ಚರಣವ ನಂಬಿದ ಶರಣರ ಪೊರೆಯುವ-ವರದ ವಿಠಲನಾ 5
--------------
ಸರಗೂರು ವೆಂಕಟವರದಾರ್ಯರು
ಎಂಥ ಆಟವಿದು ಕ್ಷಿತಿಜಪತಿದೆಂಥ ಆಟವಿದು ಪ ಎಂಥ ಆಟ ಶ್ರೀ ಕಂತುಜನಕ ಭ ಕ್ತಾಂತರಂಗ ಸುರಚಿಂತಾಮಣಿಯೇ ನಿನ್ನದೆಂಥ ಅ.ಪ ಮಡುವಿನೊಳಡಗಿರುವ ಉರಗನ ಹೆಡೆಮೆಟ್ಟಿ ನಾಟ್ಯಮಾಡುವ ಸಡಗರದಲಿ ಗೊಲ್ಲ ರ್ಹುಡುಗರ ಕೂಡಿಸಿ ಒಡನೆ ಬಿಲ್ಲಿನಾಟ ರಚಿಸಿ ಮಧುರಪುರ ಬಿಡದೆ ಸೇರಿ ಗಡಕಡಿದು ಮಾವನ ಶಿರ ತಡೆಯದೆಮನಪುರಪಥವ ಪಿಡಿಸಿದ್ದು 1 ಗೋವಳರೊಡಗೂಡಿ ಗೋವುಗಳ ಕಾಯಲ ಡವಿಸೇರಿ ಮಾಯವೃಷ್ಟಿ ಅತಿಭರದಿ ಗೈಯಲಾಗ ಗೋವರ್ಧನ ಗಿರಿಯೆತ್ತೆ ಏಳುದಿನ ಗೋವುಗಳನು ಮತ್ತು ಗೋವಳರೆಲ್ಲರ ಜೀವ ಸಮಾನಮಾಡಿ ಪ್ರೇಮದಿ ಸಲಹಿದ್ದು 2 ಎಷ್ಟು ಕ್ಷೀರ ನೀಡೆ ಜನನಿಗಿನ್ನಿಷ್ಟೆಂದ್ಹಟ ಮಾಡೆ ಸಿಟ್ಟಿನಿಂದ ತಾಯಿ ಕಟ್ಟಲು ಒರಳಿಗೆ ಅಟ್ಟಹಾಸದಿ ಡುರುಕಿಟ್ಟು ನಡೆದು ಶಾಪ ಪಟ್ಟು ಪಟ್ಟಣಮುಂದೆಷ್ಟೋಕಾಲದಿಂದ ಕಷ್ಟಪಡುವರ ದಯದೃಷ್ಟಿಯಿಂ ಸಲಹಿದ್ದು 3 ದುರುಳ ಭಸ್ಮನಂದು ಹರನಿಂ ಉರಿಹಸ್ತವನು ಪಡೆದು ಪರಮಪಾಪಿ ವರ ಕರುಣಿಸಿದವನಿಗೆ ಮರುಳಮಾಡವನ ಕರವೆ ಅವನ ಮೇ ಲ್ಹೊರೆಸಿ ಉರುವಿಸಿ ಹರನ ರಕ್ಷಿಸಿದ್ದು 4 ಬತ್ತಲೆ ಪುರಗಳನ್ನು ಪೊಕ್ಕು ನೀ ಸತಿಯರ ವ್ರತಗಳನು ಹತಗೈದು ತ್ರಿಪುರದ ಪಥಪಿಡಿಸೆಮಪುರ ಹಿತದಿಂ ಸುರಗಣಕತಿಸೌಖ್ಯವ ನಿತ್ತು ಜತನಗೈದಿ ಸಿರಿಪತಿಯ ಶ್ರೀರಾಮನೆ ಸತತದಿಂಥ ಮಹಪತಿತ ಮಹಿಮದಿಹ 5
--------------
ರಾಮದಾಸರು
ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇಇಂಥ ದುರ್ದೆಸೆಗೆನ್ನ ಎಳೆತಂದು ಬಿಡಲಿಕ್ಕೆ ಪ ಉದಯ ಕಾಲದೊಳೆದ್ದು ಉದರ ಪೋಷಣೆಗಾಗಿಹದವನರಿಯದೆ ಬಳಲಿ ಅಂತಿಂತು ಬಡೆದಾಡಿಬದುಕು ತಂದೊಡಲ ಹೊರಕೊಂಡು ಸಲೆನನ್ನಪದವ ನೆನೆಯಲು ಸ್ವಲ್ಪ ಸಹ ವೇಳೆ ಸಿಗದಂತೆ 1 ಹಿಡಿದ ಕಾರ್ಯಗಳೆಲ್ಲ ಬಿಡದೆ ನಿಷ್ಫಲವಾಗಿಒಡವೆ ಇಲ್ಲದ ಬರಿಯ ಒಡೆತನಕೆ ಅಣಿಮಾಡಿಮಡದಿ ಮಕ್ಕಳ ಬಿರುಸು ನುಡಿಗೇಳಿ ಮನನೊಂದುಸುಡುಬಾಳ್ವೆ ಇದನೆಂದು ಮುಡುಕುವಂದದು ಗೈಸಿ 2 ನಂಬಿದವರನು ಹರಿಯು ಬೆಂಬಿಡನು ಎಂದೆಂದುಎಂಬ ಬಿರುದನು ತೊರೆದು ಇಂಬುಗೊಡದಿರಲಿಕ್ಕೆಅಂಬುಜಾಕ್ಷನೆ ನಿನಗೆ ಸಂಬಂಧವಿರದೇನುಹಂಬಲಿಪ ದುಃಸ್ಥಿತಿಗೆ ತುಂಬ ತಂದಿಡಲಿಕ್ಕೆ 3 ಅಣುಗರಿಗೆ ಉಣಿಸಲಿಕೆ ಹಣವೆತ್ತ ಗಳಿಸಲಿಫಣಿಶಯನ ನಿನಗಿನ್ನು ಗುಣವೆತ್ತ ತೋರಿಸಲಿಮಣಿಗಳನು ಎಣಿಸುತ್ತ ಪ್ರಣವೆತ್ತ ಧೇನಿಸಲಿಹಣಿವ ಭವದೊಳು ಸಿಲುಕಿ ಕ್ಷಣವು ಸಹ ಸಿಗದಾಯ್ತು 4 ಬಾಳಿನೊಳು ಸೌಖ್ಯವೇ ಆಳವೈಶ್ವರ್ಯವೆತೋಳಿನೊಳು ದಾಢ್ರ್ಯವೆ ಚಿತ್ತದೊಳು ಸ್ಥೈರ್ಯವೆಹೇಳು ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದಿಗೀಪದ ಕರುಣಮಾಡುವೆಯೋ ನಿಮ್ಮ ಧ್ಯಾನಾ ನಂದ ಅಮೃತಪಾರ ನವಿನುಡಿಯ ಪ ಎಂದಿಗೀಪದ ಕರುಣಮಾಡಿ ಕರವ ಪಿಡಿದು ಮಂದಮತಿಯ ತರಿದು ಪೊರೆಯುವೆ ಸಿಂಧುಶಯನ ತಂದೆ ಶ್ರೀಹರಿ ಅ.ಪ ವಿಷಮಸಂಸಾರ ಮೋಹವನು ಬಿಡಿಸಿ ನಿಮ್ಮ ಭಜನ ಅಸಮ ಸುಖದೆನ್ನ ಮನವ ನಿಲ್ಲಿಸಿ ವ್ಯಸನ ಏಳರ ಕಾಟ ತಪ್ಪಿಸಿ ಬಿಡದೆ ಎನ್ನ ರಸನೆಮೇಲ್ನಿಮ್ಮ ನಾಮ ಸ್ಥಾಪಿಸಿ ವಸುಧೆ ಜನರ ಸುದ್ದಿ ಮರೆಸಿ ನಶಿಪ ಲೌಕಿಕದಾಸೆ ಕೆಡಿಸಿ ಕುಶಲಮತಿಯಿತ್ತು ಪಾಲಿಸುವ ಮಹ ಅಸಮಶುಭದಿನ ಕುಸುಮನಾಭ 1 ಹತ್ತು ಇಂದ್ರಿಯ ಮೂರು ಬಾಧೆ ತೊಲಗಿಸಿಬಿಡದೆ ಎನ್ನ ನೇತ್ರದೊಳು ತವಮೂರ್ತಿ ನಿಲ್ಲಿಸಿ ಸುತ್ತಿ ಕೊಲುವ ಮಾಯ ಮುಸುಕು ಹಾರಿಸಿ ನಿತ್ಯದೆನ್ನ ಚಿತ್ತದೊಳು ನಿಜಜ್ಞಾನ ಸ್ಥಿರಪಡಿಸಿ ಸತ್ಯ ಸನ್ಮಾನ್ಯಕ್ತನೆನಿಸಿ ನಿತ್ಯ ನಿರ್ಮಲ ನಿಮ್ಮ ಭಕ್ತರ ಉತ್ತಮ ಸಂದರುಶನವಿತ್ತು ತವ ಭೃತ್ಯನೆನಿಸೆನ್ನ ಸಲಹುವಂಥ 2 ಕ್ಲೇಶ ಪಂಚಕದುರುಲು ಪರಿಹರಿಸಿ ಅನುಮೇಷ ನಿಮ್ಮ ದಾಸಜನರಾವಾಸದೆನ್ನಿರಿಸಿ ಮೋಸಮರವೆಯ ಜಾಲ ಛೇದಿಸಿ ನಿಶಿದಿವದಿ ನಿಮ್ಮ ಧ್ಯಾನದೊಳೆನ್ನ ಮನವಐಕ್ಯೆನಿಸಿ ಮೋಸ ಪಾಶಗಳೆಲ್ಲನಾಶಿಸಿ ದೋಷರಾಶಿಯಿಂ ಮುಕ್ತನೆನಿಸಿ ಶ್ರೀಶ ಶ್ರೀರಾಮ ನಿಮ್ಮ ಚರಣ ದಾಸನೆನಿಸಿ ಪೋಷಿಸುವಂಥ 3
--------------
ರಾಮದಾಸರು
ಎಂದಿಗೆ ನೀ ಯೆನ್ನ ಮುಂದಕೆ ಬರುವೆಯೊ ಸುಂದರ ಮೂರುತಿಯೆ ನಂದದಿ ಭಕುತರ ವೃಂದಗಳೆಲ್ಲವ ಸಂದೇಹವಿಲ್ಲದೆ ಮುಂದಕೆ ಕರದೊಯ್ವೆ ಪ ಪಂಕಜಾಕ್ಷನೆ ನೀನು ಕಿಂಕರ ಜನರಾ- ತಂಕಗಳೆಲ್ಲವ ಶಂಕಿಸದೆ ವೆಂಕಟನಾಮಕ ಸಂಕಟಪರಿºರವಿವ- ಳಾಂಕರನÀರವ ನಿಶ್ಶಂಕೆಯಿಂದಲಿಯಿತ್ತು 1 ಆರುವೈರಿಗಳೆನ್ನ ಗಾರುಮಾಡುವರಯ್ಯಾ ಆರು ಕಾವರು ಇಲ್ಲಾ ಮಾರಜನಕನೆ ಪಾರುಗಾಣಿಸದೆ ನೀ ದೂರಗೈಸಲು ಯನ್ನ- ನಾರು ರಕ್ಷಿಪರೊ ದೋಷವಿದೂರನೆ ಪೇಳೋ 2 ಯರಬೆರಡೆನಾಗಿತ್ತು ಪೊರಿಯೋ ದೇವರ ದೇವ ಕರುಣಾಬ್ಧಿ ನೀನೆಂದು ವರವೋದು ಶ್ರುತಿಯು ಶರಣಾಗತನನ್ನು ಪೊರೆಯದೆ ಬಿಡುವಂದು ಸರಿಯೇನೋ ಕರುಣಾಳು ಸಿರಿವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ಎಂದಿಗೆ ಬಿಟ್ಟೀತು ಈ ಆಸೆ ಪ ಕುಂದಿ ಕುಂದಿ ಕೊರಗುವ ಮನಸೆ ಅ.ಪ ಸಾರವಿಲ್ಲದ ಸುಖಗಳ ಕೋರಿ | ಸಂ- ಸಾರವೆಂಬ ಚಕ್ರದಿ ಸೇರಿ1 ಕಷ್ಟದಿಂದೇನು ಕಾಣುವೆ ಕೊನೆಗೆ 2 ಗರ್ವಹಂಕಾರಗಳಿಂ ಮೆರೆದೆ 3 ಅದು ಇದು ಬೇಕೆಂದಪೇಕ್ಷಿಸುವೆ | ನಿನ್ನ ಮೊದಲರಿಯದೆ ವೃಥಾ ಯೋಚಿಸುವೆ 4 ಪರಮಸುಖವ ಪಡು ನೀ ಸತತ 5
--------------
ಗುರುರಾಮವಿಠಲ
ಎಂದಿಗೆನಗೆ ಬುದ್ಧಿ ಬಂದಿತೋ ಹರಿಯೆ ಇಂದೀವರಾಕ್ಷ ನೀನೆ ಗತಿ ದೊರೆಯೆ ಪ. ಕಣ್ಣಿದಿರಲಿ ಕಂಡು ಕಾಲಗತಿಗಳನ್ನು ತನ್ನ ಸಂಸ್ಥಿತಿ ಮುಂದೆಂತಾಹುದನು ಚೆನ್ನಾಗಿ ಗ್ರಹಿಸದೆ ಚಪಲ ಚಿತ್ತದಿ ಗೃಹ ಸನ್ಮಹದಲಿ ಮನವನಿಟ್ಟು ಬಳಲುವೆ 1 ಸಾಗದ ಕಾರ್ಯವ ಸುಲಭವೆಂದೆಣಿಸಿದ- ರಾಗದು ಹಗಲಿರಳೊರಳಿದರು ನಾಗಶಯನ ನೀನು ನಿರ್ಣಯಿಸಿದ ರೀತಿ ಯಾಗುವದೆಂಬುದನರಿಯದೆ ಮರುಳಾದೆ 2 ಇಂತಾದ ಮ್ಯಾಲೆ ಶ್ರೀಕಾಂತ ನೀ ದೊರಕುವ- ದೆಂತು ಸಂಘಟ್ಟಿಪದೋ ನಾನರಿಯೆ ಕಂತುಜನಕ ವೆಂಕಟೇಶನೆ ಮಾನಸ ಭ್ರಾಂತಿಯ ಬಿಡಿಸು ನಿಶ್ಚಿಂತೆಯಿಂದಿರಿಸ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದು ಕಾಂಬೆನು ನಾನುಗೋ- ವಿಂದ ನಿನ್ನಯ ಪಾವನ್ನ ಪಾದವನ್ನು ನಾ ಪೊಂದಿಸೇವಿಸಿ ಆನಂದಪಡುವುದಕಿನ್ನು ಕರುಣಿಸೈ ಮುನ್ನ ಪ ಪೊಂದಿ ಮಹದಾನಂದ ಪಡೆಯಲು ಕಂದಿಕುಂದಿತು ತನುಮನೇಂದ್ರಿಯ ಇಂದೆ ತೋರಿಸೊ ಪಾದಕಮಲವ ಅ.ಪ ಬಾಲತನದಲಿ ನಾನು ಶ್ರೀಲೋಲ ನಿನ್ನಿಂದ ಪಾಲಿತನಾದೆನೊ ಬೆಲೆಯುಳ್ಳ ಆಯುವನೆಲ್ಲ ಕಳೆದು ಬಿಟ್ಟೆನು ನಾನು ಕೆಲಕಾಲದಲಿ ನಾ ಕಲುಶಕ್ರಿಯೆಗಳನ್ನು ಫಲವಿಲ್ಲದೆಸಗಿದೆನು ಎಲ್ಲರೊಳು ನೀ ನೆಲಸಿ ಜೀವರ ಎಲ್ಲಕರ್ಮವ ಮಾಡಿಸಿ ಫಲವೆಲ್ಲ ಅವರಿಗೆ ಇತ್ತು ನೀ ನಿರ್ಲಿಪ್ತನೆಂದು ತಿಳಿಯದಲೆ ಖುಲ್ಲಮಾನವರೊಡನೆ ಬೆರೆತು ಪುಲ್ಲಲೋಚನ ನಿನ್ನ ಮರೆದು ಇಲ್ಲ ಎನಗೆ ಎಣೆಯೆನುತ ನಾ ಬಲುಹೆಮ್ಮೆಯಿಂದಲಿ ದಿನಗಳ ಕಳೆದೇ ಇಲ್ಲನಿನಗೆಸರಿಯಿಲ್ಲ ನೀ ನಿಲ್ಲದಾಸ್ಥಳವಿಲ್ಲ ಜಗದಾ ಎಲ್ಲ ಕಾಲಗಳಲ್ಲಿ ಇಹ ಶ್ರೀನಲ್ಲ ನೀನೆಲ್ಲ ಬಲ್ಲೆಯೊ 1 ಬರಿದೇ ಕಾಲವ ಕಳೆದೇ ಶ್ರೀಹರಿಯೆ ನಿನ್ನಯ ಸ್ಮರಣೆಯನ್ನು ಮಾಡದೇ ಪರಿಪರಿಯ ತನುಮನ ಕ್ಲೇಶಗಳಿಗೊಳಗಾದೆ ನಾಮಸ್ಮರಣೆಯೊಂದಲ್ಲದೇ ಇನ್ನೆಲ್ಲಾ ಬರಿದೇ ಪರಮಕರುಣಾಶರಧಿ ಎಂಬುವ ಕರಿಧ್ರುವಬಲಿಮುಖ್ಯರೆಲ್ಲರ ಪೊರೆದ ಕೀರುತಿ ಕೇಳಿ ನಂಬಿದೆ ಶರಣಜನಮಂದಾರನೆಂದು ಅರಿಯೆ ನಾನವರಂತೆ ಸಾಧನ ಅರಿತು ಮಾಡುವ ಪರಿಯು ತಿಳಿಯದು ಬಿರುದು ಭಕ್ತಾಧೀನನೆಂದು ಹರಿಯೆ ನಿನ್ನಯ ಮರೆಯಹೊಕ್ಕೆನು ದುರಿತಶರಧಿಯೊಳಾಡುತಿರುವನ ಉ- ತ್ತರಿಸಲೊಂದೇ ನಾವೆಯಂತಿಹ ಚರಣಸ್ಮರಣೆಯಕೊಟ್ಟು ರಕ್ಷಿಸು ಪುರುಷಸೂಕ್ತಸುಮೆಯ ಜೀಯಾ2 ಶೇಷಗಿರಿಯವಾಸ ಶ್ರೀ ಶ್ರೀನಿವಾಸ ದೋಷರಹಿತ ಸರ್ವೇಶ ಮನೋ- ಕಾಶದಲಿ ಅನವರತ ನಿಲ್ಲೊ ಶ್ರೀಶಾ ಬಿಡಿಸೆನ್ನ ಭವಬಂಧ ಗ್ರಂಥಿಯ ಪಾಶಾ ಹರಿಸುವುದು ಕ್ಲೇಶಾ ಶ್ರೀಶ ನಿಗಗತಿಶಯವೆ ಎನ್ನಯ ವಿಷಯದಭಿಲಾಷೆಗಳ ಬಿಡಿಸೀ ದೋಷರಹಿತನ ಮಾಡಿಸೀ ಎನ್ನ ಪೋಷಿಸೋ ನಿನ್ನಸ್ಮರಣೆಯಿತ್ತು ದ್ವಾಸುಪ- ರ್ಣ ಶ್ರುತಿಗಳಿಂದಲಿ ಈಶ ದಾಸರ ಭಾವ ತಿಳಿಯದೆ ಮೋಸಹೋದೆನೊ ಬೋಧೆ ಇಲ್ಲದೆ ವಾಸುದೇವನೆ ರಕ್ಷಿಸೆನ್ನನು ಏಸುಕಾಲಕು ನೀನೆ ಗತಿ ಎಂದು ಆಸೆ ಮಾಡುವೆ ನಿನ್ನ ಕರುಣಕೆ ಬೇಸರದಲೆ ಮೊರೆಯ ಲಾಲಿಸಿ ಶ್ರೀಶ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು
ಎಂದೂ ಬಂಧವಿಲ್ಲ ಆತ್ಮಗೆ ಬಂಧವ ಕಲ್ಪನೆ ಮಿಥ್ಯವಿದೆಲ್ಲ ಮಂದರ ನುಡಿಯಿದು ಈ ಸಂಸಾರ ಪ ನಿತ್ಯಮುಕ್ತನೇ ತಾನಾದವಗೆ ಮಿಥ್ಯವ ಕಲ್ಪನೆ ಬರುವದೆಂತೋ ತಥ್ಯವಿಲ್ಲದ ಮಾತಿನ ಮಾಲೆ ಮತ್ತೆ ಬಂಜೆಯಾ ಮಗನೆಂಬುವವೋಲ್ 1 ಆತ್ಮನೆ ತಾನೆಂಬನುಭವ ಪಡೆಯದೆ ಮತ್ತೆ ಶಬ್ದ ಮಾತ್ರವನರಿತವಗೆ ಸುತ್ತಿಕೊಳ್ಳುವುದು ಸಂಶಯ ವಿದುವೆ ಅನುಭವದೊಳಗೇನಿಲ್ಲ ವಿಕಲ್ಪ 2 ಭಾನುವಿಗುಂಟೇ ಉದಯಾಸ್ತಗಳು ಮಾನವಕಲ್ಪನೆಗಳು ತಾನೆಲ್ಲ ತಾನೇ ತಾನಾದವಗಿನ್ನು ಹೀನಭವದ ಭಾಧೆಯುತಾನುಂಟೇ 3 ಅನುಭವರೂಪನು ತಾನಾದಾಗ ಅನುಭವ ಬರುವದು ಈ ನುಡಿ ಕೇಳೈ ಮನವಾಣಿಗೆ ಮೀರಿದ ಸ್ವಾತ್ಮನುನೀ ಚಿನುಮಯ ಶಂಕರತಾನಾದವಗೇ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎನ್ನ ಪಾಲಿಸುವದಾಗದೇ|ಸಿರಿ ರಮಣಾ| ಪ್ರಸನ್ನ ವಿಮಲ ಅತುಳ ಶೇಷಗಿರಿಯ ವಾಸಾ ವೆಂಕಟೇಶಾ ಪ ದುರುಳ ದೈತ್ಯನ ಕರುಳ ಬೆರಳ ಸರಳ ಉಗುರಿನಿಂದ ವಿರಳ| ವಿರಳ ಮಾಡಿ ಪೊಸರಂತೆ ಕೊರಳಿಗಾಕಿ ಮರಳೆ| ತರಳಗೊಲಿದು ಹರಣಗಾಯ್ದೆ|ಆದೇಶದಲ್ಲಿ| ಅರಸುತನುವ ಕೊಟ್ಟು ನಿಲಿಸಿದೇ|ಕ್ಷಿತಿಯೊಳಗ| ಪರಮ ನಿಜ ಭಕ್ತನೆನೆಸಿದೇ 1 ನೆಗಳಿ ಬಂಧನ ಬಿಡೆ ಹರಿಗಳರಿಗಳ ಸಂಗಡಿಭಗಳ ಸಮೂ| ಪತಿ ನೀರ್ಗುಡಿಯೆ ಪೋಗಲಾಗಳೆ| ನೆಗಳಿ ಪಿಡಿಯೆ ಶ್ರೀ ಪಾದಗಳ ಯುಗಳ ನೆನಿಯ ಕೇಳದೇ| ಸಕಲ ಪಕ್ಷಿಗಳ ಶ್ರೇಷ್ಠ ನಿಲ್ಲದೊದಸಿದೇ|ಕರುಣದಿಂದ ಸುಗತಿ ಕೊಟ್ಟು ಜನಮ ಹರಿಸಿದೇ2 ಇಳೆಯ ಮದದಿ ದ್ರೌಪತಿಯನು| ತಿಳಿಯದೆಳಿಯೆ ಕಳಿಯೆ ಸೀರೆಯಾ| ಕಳಿಯೆ ಮಾನ ವಿಜಯಗೆಳೆಯ ಇಳೆಯ ಭಾರರ್ಬಳಿಯೆ| ಸುಳಿಯೆ ದಾಟಿಸೆನುತ ನುತಿಸೆ ತ್ವರಿತದೀ|ನೀನು ಸಭೆ| ಯೊಳಗ ಪೊರಯಿಸಿದೇ ವಸ್ತ್ರದೀ|ಮಹಿಪತಿ| ನಂದನೊಡೆಯ ವ್ಯಾಳ್ಯಕ್ಕೊದಗಿದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನನು ನೀ ಜರೆವೆ ಜೀವನೆನಿನ್ನನೀ ತಿಳಿದೆನೆಂದೂಮುನ್ನ ಮಾಡಿದ ಪುಣ್ಯಕರ್ಮಂಗಳೆನ್ನಿಂದ ಮನ್ನಿಸದುಪಕಾರವಾ ಜೀವಾ ಪದೇಹವು ಹೇಯವೆಂಬೆ ಮತ್ತೀಗದೇಹದೊಳಿರುತಿರುವೆದೇಹದಾಧಾರದಲ್ಲೀ ಧ್ಯಾನಿಸಿಸೋಹಂ ಭಾವನೆ ಬಂದುದೂಉಹಾಪೋಹಗಳಲ್ಲಿ ಚದುರನು ನಾನೆಂಬೆಓಹೊ ನಾನಿಲ್ಲವೆ ಜೀವಾ 1ಚಿತ್ತೆ ತಾ ಪ್ರಕೃತಿಯಾಗೀ ಭೂತದಮೊತ್ತವೆಂದೆನಿಸಿತಲ್ಲೈಮತ್ತೆ ಭೂತಂಗಳವೂ ನಾಲ್ಕುಳ್ಳತತ್ವವಿಪ್ಪತ್ತಾುತುಹತ್ತಿಂದ್ರಿಯಂಗಳಿಂದ ವಿಕರ್ಮಗಳು ಪುಟ್ಟಿಮುತ್ತೆರನಾುತಲ್ಲೈ ಜೀವಾ 2ಕನಕವೆ ಕುಂಡಲಾದಿ ಭೂಷಣಭಣಿತೆಯ ತಾಳಿರಲುಕನಕವಲ್ಲವೆ ಭೂಷಣ ಯೆಣಿಸಲುಚಿನುಮಯಾತ್ಮಕನಿಂದಲೆಜನಿಸಿ ದೃಶ್ಯತ್ವದಿ ತೋರಿದಡೇನಾುತುತನುವಾತ್ಮನಲ್ಲವೇನೈ ಜೀವಾ 3ಮಾಡಿದ ಉಪಕಾರವ ಮರೆಯುವಮೂಢಗೆ ನರಕವೆಂದುಆಡದೆ ಶೃತಿನಿಕರ ನೀನದನೋಡದೆ ನುಡಿಯುತಿಹೆಕೂಡಿಕೊಂಡೆನ್ನನು ನಿಜದೊಳು ಬೆರೆದರೆಪ್ರೌಢ ನೀನೆನಿಸಿಕೊಂಬೆ ಜೀವಾ 4ಕಾರ್ಯಕಾರಣ ರೂಪವಾ ನೋಡಲುಕಾರ್ಯಕಾರಣವಲ್ಲವೆಸೂರ್ಯನಿಂದಾದುದಕ ಬೆರೆಯದೆಸೂರ್ಯನ ಮರಳಿ ನೋಡೂಧೈರ್ಯಶಾಲಿಯೊಳಿಪ್ಪ ಧೈರ್ಯತ್ವವಾತನವೀರ್ಯವಲ್ಲವೆ ನೋಡಲೂ ಜೀವಾ 5ರೂಪನಾಮಗಳೆರಡೂ ಸತ್ತಾನುವ್ಯಾಪಿಸಿ ಜಗವಾದುದುದೀಪದೊಳಗೆ ಕಾಳಿಕೆ ತೋರ್ಪಂತೆಈ ಪರಿಯಲಿ ಮಾಯೆಯುವ್ಯಾಪಾರಂಗಳನುಪಸಂಹರಿಸಲು ಕಾಯವ್ಯಾಪಕನೊಳು ನಿಂದುದೂ ಜೀವಾ 6ಪೊಳೆದೆನು ನಾ ಮೊದಲೂ ಆಮೇಲೆಪೊಳೆದೆ ನೀ ಪ್ರತಿಫಲಿಸಿಜಲಗತ ಪ್ರತಿಬಿಂಬವೂ ನಿಜವಲ್ಲದಳಿವಂತುಪಾಧಿುಂದಾನಿಲುವುದು ನಿಜಬಿಂಬವಾಭಾಸ ನೀ ಪುಸಿನಿಲುವೆ ನಾ ನಿಜದೊಳಗೆ ಜೀವಾ 7ಬಂಜೆಯ ಮಗ ನಿಜವೊ ಅವನಿಗೆಮುಂಜಿಯೆಂಬುದು ನಿಜವೋಅಂಜಿಕೆದೋರಿಸಿತು ರಜ್ಜುವುರಂಜಿಸಿ ಸರ್ವನಾಗಿವ್ಯಂಜಿಸಿ ಕರಣದಿ ನಿದ್ರೆಯೊಳಭಂಜಿಸಿ ಮಂಜಿನಂದದಿ ಪೋಪೆಯೈ ಜೀವಾ 8ಇರಿಸಲು ಬೇರೆನ್ನನು ತೆರಹಿಲ್ಲಬೆರೆಸಾತ್ಮನೊಳು ಬಿಡದೆಕಿರಣಂಗಳು ರವಿಯ ಬಿಟ್ಟೊಮ್ಮೆಇರಬಲ್ಲವೆ ನೋಡಲುತಿರುಪತಿನಿಲಯ ಶ್ರೀ ವೆಂಕಟರಮಣನಚರಣನಾನಲ್ಲವೇನೈ ಜೀವಾ 9 ಕಂ||ಇಂತೀ ಪರಿಯಲಿ ಜೀವನನಿಂತಿರುವವನಿಲ್ಲದವನ ನುಡಿವದು ಸಹಜವುಎಂತಾದರು ತನ್ನ ತಿಳಿಯದೆಮುಂತೋರದ ನುಡಿುದೇನೆನೆ ಮುಳಿದಂ ಜೀವಂ
--------------
ತಿಮ್ಮಪ್ಪದಾಸರು
ಎನ್ನಪಾಪವೇ ಎನ್ನ ಕಾಡುವುದು ಎನ್ನಯ್ಯ ಹರಿಯೆ ನಿನ್ನದಿದರೊಳನ್ಯವೇನಿಹ್ಯದು ಪ ಮುನ್ನಮಾಡಿದ ಪಾಪಕರ್ಮವು ಬೆನ್ನಬಿಡದೆ ಕಾಡುತಿರಲು ನಿನ್ನಗನ್ನುವುದಾವ ನ್ಯಾಯವು ಪನ್ನಂಗಶಾಯಿ ಸನ್ನುತಾಂಗ ಅ.ಪ ನಾನಾಜೀವಿಗಳ ಪ್ರಾಣಹಾರಿಸಿದೆ ಅನ್ಯರಿಗೆ ಬಿಡದೆ ಜಾಣನುಡಿ ಪೇಳಿ ಹಾನಿ ಬಯಸಿದೆ ದುಗ್ಗಾಣಿ ರಿಣಕಾ ಗೇನುಯಿಲ್ಲೆಂದಾಣೆ ಮಾಡಿದೆ ನಾ ನಿನ್ನ ಮರೆದೆ ಏನು ತಿಳಿಯದೆ ಜ್ಞಾನ ಪೇಳಿದೆ ಜ್ಞಾನವಂತರಿಗ್ಹೀನ ನುಡಿದೆ ಮಾನವಂತರ ಮಾನ ಕಳೆದೆ ಹೀನಬವಣೆಯೋಳ್ಬಿದ್ದೆನಭವ 1 ಅಂಗನೆಯರ ಸಂಗ ಬಯಸಿದೆ ದುರಿತಕ್ಕೆ ಹೇಸದೆ ಅಂಗನೆಯರ ಗರ್ಭ ಭಂಗಿಸಿದೆ ಅನ್ಯರ ಒಡವೆಗೆ ಕಂಗಳಿರೆ ಭಂಗಕೊಳಗಾದೆ ಮಂಗ ನಾನಾದೆ ನಿತ್ಯ ನೇವಹಕೆ ಅಂಗನೆನಿಸದೆ ಬಡವರ್ವಿಮಹಕೆ ನುಂಗಿ ಕೂತೆನು ಪರರ ದ್ರವ್ಯಿ ನ್ನ್ಹ್ಯಾಂಗೆ ನಿನ್ನೊಲಿಮೆನಗೆ ಅಭವ 2 ಕೊಟ್ಟ ಒಡೆಯರಿಗೆರಡನೆಯ ಬಗೆದೆ ನಂಬಿ ಎನ್ನೊ ಳಿಟ್ಟ ಗಂಟನು ಎತ್ತಿಹಾಕಿದೆ ಪಡೆದ ಮಾತೆಯ ಬಿಟ್ಟು ಬೇಸರ ಮಾಡಿನೋಡಿದೆ ಭ್ರಷ್ಟನಾನಾದೆ ದುಷ್ಟಗುಣಗಳನೊಂದುಬಿಡದೆ ಶಿಷ್ಟಪದ್ಧತಿ ಜನಕೆ ಉಸುರಿದೆ ಕೊಟ್ಟವಚನೊಂದು ನಡೆಸದಿಂದುಳಿದು ಕೃತಿ ಪೇಳೆನಭವ 3 ಒಂದೆ ಮನದವನಂತೆ ತೋರಿದೆ ಮತ್ರ್ಯದವರಿಗೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿದೆ ದೋಷವಿನಿತು ಹೊಂದದವರಿಗೆ ಕುಂದು ಹೊರೆಸಿದೆ ನಾನೇ ಅಹುದಾದೆ ಸಿಂಧುಶಯನ ಭಕ್ತರನ್ನು ಕಂ ಡೊಂದಿಸದೆ ಮುಖವೆತ್ತಿ ನಡೆದೆ ಮುಂದುಗಾಣದೆ ದೋಷ ಮಾಡಿದೆ- ನೊಂದು ಪುಣ್ಯವನರಿಯೆನಭವ 4 ಕೊಡುವ ಧರ್ಮಕೆ ಕಿಡಿಯನ್ಹಾಕಿದೆ ಕೂಡಿದ್ದವರಿಗೆ ಕೆಡಕು ಬೋಧಿಸಿ ಒಡಕು ಹುಟ್ಟಿಸಿದೆ ಅಡಿಗೆ ಬಾಗಿ ಮಿಡುಕುವವರಿಗೆ ದುಡುಕನಾಡಿದೆ ಕಡುಪಾಮರಾದೆ ಪಿಡಿದು ಕಾಯುವ ಒಡೆಯನ್ಹೆಸರಿನ ಮುಡಿಪು ನುಂಗಿ ಕಡುಪಾಪಾತ್ಮಾದೆನು ಸುಡುಸುಡೆನ್ನಯ ಜನ್ಮವ್ಯಾಕಿನ್ನು ಒಡೆಯ ಶ್ರೀರಾಮ ಸಾಕುಮಾಡೋ 5
--------------
ರಾಮದಾಸರು