ಒಟ್ಟು 451 ಕಡೆಗಳಲ್ಲಿ , 82 ದಾಸರು , 383 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೊರೆವನಲ್ಲವೋ ಹರಿ ದೊರೆವನಲ್ಲವೊ ಪ ಪರಮಯೋಗನಿಷ್ಠೆಯಿಂದ ಇರುಳು ಹಗಲು ಸಮಾಧಿಯಲ್ಲಿ ಇರುವ ಮಹಾಯೋಗಿಗಳಿಗೆ ಅರಿಯೆ ಸಾಧ್ಯವೇ ಅ.ಪ ಸಕಲ ದಾನಧರ್ಮಗಳನು ಸರ್ವಕ್ರತುಗಳನ್ನು ಮಾಡೆ ಶಕುತರಾಗಲರಿಯರೆಂದಿಗು ಶಾಙ್ಗಪಾಣಿಯಂ 1 ರಚ್ಚೆಗಿಕ್ಕಿ ಕಾಣಬಹುದೇ ರಾಜೀವಾಕ್ಷನ 2 ಪಾಮರ ತಾನೆಂದು ಸಕಲ ನೇಮನಿಷ್ಠೆಯಿಂದಲವನ ನಾಮ ಸ್ಮರಿಸೆ ಸುಲಭನಹನು ಗುರುರಾಮವಿಠ್ಠಲನು 3
--------------
ಗುರುರಾಮವಿಠಲ
ಧಣಿ ನೀನಿರಲು ತಣಿಸಿ ಪರರ ದಣಿವುದುಂಟೆ ಲೋಕದಿ ಪ ಕ್ಷಣ ಕ್ಷಣದಲಿ ಪೊರೆವ ಚಿಂತಾ ಮಣಿ ನೀನಿರೆ ತ್ರಿಭುವನಕೆ ಅ.ಪ ಕರದಲಿರುವ ಮಣಿಯ ಬೆಲೆಯ ನರಿಯದಂಥ ಮೂಢ ಜನರು ಪರರಿಗಿತ್ತು ಹರುಷದಿಂದ ಪುರಿಯ ಕೊಂಬ ತೆರದಲಿ 1 ದುರಿತ ದೂರ ಮಾಡಿ ಸಾರ ಫಲಗಳನ್ನು ಕೊಡುವ ನಾರಸಿಂಗ ಮಂತ್ರವಿರಲು ಭೈರವನನು ಜಪಿಸುವಂತೆ 2 ಪಡೆದ ಜನಕನಲ್ಲದೆನ್ನ ನುಡಿಗೆ ಒಲಿವರುಂಟೆ ಜಗದಿ ಕಡಲಶಯನ ಎನ್ನ ಕರವ ಪಿಡಿಯುತ ಪ್ರಸನ್ನನಾಗೋ 3
--------------
ವಿದ್ಯಾಪ್ರಸನ್ನತೀರ್ಥರು
ಧನವ ಗೆದ್ದವರುಂಟೆ ಜನರೊಳಗೆ ಶ್ರೀನಿವಾಸ ಪ ಕನಸಿಲಾದರು ಬಿಡದು ಕನಕದಾಶೆಯು ಈಶ ಅ.ಪ. ಹೆಂಡತಿಯ ಬಿಡಬಹುದು ಮಂಡೆಬೋಳಿಸಬಹುದು ಕಂಡ ಕಂಡವರೀಗೆ ದಂಡ ಬೀಳಲಿ ಬಹುದು ಪುಂಡರೀಕಾಕ್ಷನಿಗೆ ತೊಂಡನಾಗಲಿ ಬಹುದು ದುಡ್ಡು ಕಾಸುಗಳನ್ನು ನೀಡಲಾಗದು ಮನಸು 1 ನಾಮ ಹಾಕಲಿಬಹುದು ನೇಮಮಾಡಲಿಬಹುದು ಹೋಮಮಾಡುತಲಿ ಬಹು ಕರ್ಮಿಷ್ಟನೆನಿಸಬಹುದು ನಾಮ ಪಾಡಲಿಬಹುದು ಧರ್ಮಪೇಳಲಿ ಬಹುದು ಹೇಮದಾಶೆಯು ಬಿಡದೂ ಶ್ರೀ ಮನೋಹರನೇ 2 ಜಪಮಾಲೆಧರಿಸುತಲಿ ಉಪವಾಸ ಮಾಡಬಹುದು ತಾಪಸನು ಎನಿಸುತಲಿ ಪುರಾಣಗಳ ಪೇಳಲಿಬಹುದು ಶ್ರೀಪತಿಯ ಸೇವಿಸುತ ಜಪತಪವ ನಡೆಸಬಹುದು ರೂಪಾಯಿ ಮಮತೆ ತಾ ಮುಪ್ಪಿನಲು ತೊಲಗದೈಯ್ಯ 3 ಯಾತ್ರೆಮಾಡಲಿಬಹುದು ಸ್ತೋತ್ರ ಘಟ್ಯಾಗಿ ಹೇಳಬಹುದು ನೀತಿ ಪೇಳಲಿಬಹುದು ಪೂತನೆನಿಸಬಹುದು ಮಾತು ಮಾತಿಗೆವೇದ ಎತ್ತಿ ಪೇಳಲಿಬಹುದು ಪ್ರೀತಿ ತಪ್ಪದೂ ಯೆಂದೂ ಆಸ್ತಿ ಧನಕನಕದಲಿ 4 ಲಜ್ಜೆಬಿಡುತಲಿ ಬೇಗ ಗೆಜ್ಜೆಕಟ್ಟಲಿ ಬಹುದು ಸಜ್ಜನನುಯೆಂದೆನಿಸಿ ಮೂರ್ಜಗದಿ ಮೆರೆಯಬಹುದು ಮಜ್ಜನಕ ಜಯತೀರ್ಥ ವಾಯು ಹೃದಯದಲಿರ್ಪಜ ಗಜ್ಜನಕ “ಶ್ರೀಕೃಷ್ಣವಿಠಲ”ನೆ ನೀವಲಿವ ತನಕ 5
--------------
ಕೃಷ್ಣವಿಠಲದಾಸರು
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ಧರಣೆಯನಾಳ್ವ ಪಾರ್ಥಿವರಿಂಗೆ ಪ್ರಜೆಗಳು ಬೇಡವಾಯ್ತು ವರಹದ ಮೇಲಣಾಸೆಯಿಂದ ರಹಿತರ ಬಡಿವುದಾಯ್ತು ಪ ರಾಜ್ಯಕೆ ದಂಡ ಹಾಕಿದರು ತೀರಿತೆಲ್ಲಿ ಪ್ರಜೆಗಳ ಬಾಳು ನಜರು ಕೊಡುವುದಾಯ್ತು ತೆರತೆರುವುದರಿಂದ ವರಹಕೊಂಡು ಬಂದು ಏರೆಯ ರೂಪಾಯಿಗಳನು ಎತ್ತಿ ದಂಡಿಗೆ ಕೊಡುವುದಾಯ್ತು 1 ಮತ್ತೆ ಸೇನಭೋಗರು ಶಿರಸ್ತೆದಾರರು ಸಾವಿರ ಸಾವಿರ ವೆತ್ತಿ ಜನಕೆ ಬೆದುಕಮಾಳ್ವ ಕರಣಿಕರಿಗೆ ಪತ್ತು ನೂರು ಮೂರು ಸಾವಿರವೆಂದು ದಂಡವನುಕಟ್ಟಿ ವಿತ್ತವನ್ನು ಸೆಳೆದರದುವೆ ಬಿತ್ತು ಬೇರೆ ಪ್ರಜೆಗಳ ಮೇಲೆ 2 ಸೂಳೆ ಮಾಲೆಯರನು ಕರೆಸಿ ಜನಕೆ ಸಾವಿರದಂಡಕಟ್ಟಿ ಕೂಳತಿನಲು ಬಿಡದೆ ತರುಬಿವಾಲೆ ಮೂಗುತಿ ನಾಣ್ಯಗೊಂಡು ಬೀಳು ಕೊಟ್ಟು ಮನೆಗೆ ಅಂಗಡಿ ಸಾಲುವಳಿಗೆಯರನು ಕಾಲನಂತೆ ದಣಿಸಿ ರೊಕ್ಕದ ಜಾಳಿಗೆಯನು ಕೊಂಡು ಮೆರೆವ 3 ಸುಲಿಗೆಯಾಗ ದುಳಿಯಲಿಲ್ಲ ಬೆಳೆದ ಬೆಳೆಯ ನುಣ್ಣಲಿಲ್ಲ ಹೊಳಲ ಸುಟ್ಟು ಬಿಟ್ಟುದೆಲ್ಲ ಕುಲಕೆ ಪಶುಗಳುಳಿಯಲಿಲ್ಲ ತಲೆಯ ಚಂಬುಹಾರಿತಲ್ಲ ಜನರು ಸತ್ತು ಹೋದುದೆಲ್ಲ ಮಲೆತ ರಿಪುಗಳನ್ನು ಕುಟ್ಟಿ ಪ್ರಜೆಗಳ ಕಾಯ್ದು ಕೊಳ್ಳಲಿಲ್ಲ 4 ತಿರುಕರಿಂಗೆ ಸುಖಿಗಳಿಂಗೆ ಹರುವೆ ಸೊಪ್ಪುಮಾರ್ವರಿಂಗೆ ತರುಣಿಯರನು ಬಿಟ್ಟು ತಲೆಯ ಹೆರೆಸಿ ಕೊಂಡಲೆಗಳರಿಂಗೆಗೆ ಹಿರಿದು ಕಿರಿದು ಎಂದು ಬಿಡದೆ ಮರುತ ಸುತನ ಕೋಣೆಲಕ್ಷ್ಮಿ ಯರಸ ರುದ್ರರೂಪಧರಿಸಿ ಜನರಿಗಿನಿತು ಮಾಡಿದ 5
--------------
ಕವಿ ಪರಮದೇವದಾಸರು
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ನಗುವು ಬರುತಿದೆ ಎನಗೆ ನಗುವು ಬರುತಿದೆಬಿಗಿದು ಶ್ವಾಸ ಮೂಗ ಹಿಡಿದು ನಿಟಿಲ ನೋಡುವವರ ಕಂಡು ಪ ಹಡೆದ ದೈವ ಹತ್ತಿರಿರಲು ನೋಡಿದರು ನೋಡದಂತೆಮೃಡನು ತಾನೆ ಇರಲು ಮೂಗ ಕೊನೆಯ ನೋಡುವವರ ಕಂಡು 1 ಹೊಳೆಯುತಿಹುದು ಪರಬ್ರಹ್ಮ ನಾನಾ ರೂಪಗಳನು ತಾಳಿತಿಳಿಯದಲೆ ತನ್ನನೀಗ ಕಣ್ಣು ಮುಚ್ಚುವವರ ಕಂಡು2 ಮನಕೆ ನಿಲುಕದವನು ತಾನೆ ಮಂಗಳವಾಗಿ ಬೆಳಗುತಿರಲುಮನದಿ ಪೂಜೆಯನ್ನು ಮಾಡ್ವ ಮಂದಮತಿಗಳನ್ನು ಕಂಡು3 ತಾನು ದೇವ ನಿಜವಿದಿರಲು ತಂದು ಪ್ರತಿಮೆ ಇಟ್ಟುಕೊಂಡುಏನೋ ಮಂತ್ರ ಒದರುತಿರುವ ಮನುಜರನ್ನು ಕಂಡು ನನಗೆ4 ಯೋಗ ಮಾಡಿಕೊಂಬುದೇನು ಯೋಗಮಾಡುವವನೆ ಇರಲುಯೋಗಿಯಾದ ಚಿದಾನಂದ ತಾನೆ ಸಾಕ್ಷಿಯಾಗಿ ಇರಲು5
--------------
ಚಿದಾನಂದ ಅವಧೂತರು
ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು
ನರಜನ್ಮವನು ಕೊಟ್ಟು ಸಲಹಿದೆ ಯೆನ್ನನು ಕೊರತೆಯೇನಿಲ್ಲವೋ ಗೋವಿಂದಾ ಪ ಉರುತರ ಜನ್ಮವ ಸುರುಚಿರಾಂಗಗಳನ್ನು ಅರಿವು ಇಂದ್ರಿಯಗಳ ಸ್ಮರಣೆಯಿಂ ಕೂಡಿದ ಅ.ಪ ನಿನ್ನಧ್ಯಾನವ ಗೈವವೊಲೆನ್ನ ಈ ರಸನೆಯು ನಿನ್ನ ಮೂರ್ತಿಯ ನೋಡಲಿ ಈ ನೇತ್ರಾ ನಿನ್ನ ಪೂಜಿಸೆ ಹಸ್ತ ನಿನ್ನ ಚರಿತೆಗೆ ತರ್ಕಾ ನಿನ್ನ ನಮಿಸಲು ಶಿರವು ನಿನ್ನಾಲಯಕೆ ಕಾಲು 1 ನಿನ್ನ ಪಾದದ ತುಳಸಿಯನ್ನು ಘ್ರಾಣಿಸ ಇನ್ನೇನು ಬೇಡವಯ್ಯ ಸನ್ನುತಾಂಗ ಗೋಪಾಲ 2 ಧನಕನಕಾಂಬರ [ವಸ]ನದ ಧರ್ಮ ಮೋಕ್ಷದೊ ಳಿನಿತಾಸೆಯೆನಗಿಲ್ಲ ಕೇಳಯ್ಯ ಜನುಮ ಜನುಮದೆ ನಿನ್ನ ಘನಪುಣ್ಯ ನಾಮವ ನೆನೆವ ಭಕ್ತಿಯು ಮಾತ್ರ ಮನದೆ ನೆಲೆಗೊಳಿಸಯ್ಯ 3 ದೇವದೇವನೆ ನಿನ್ನ ಸೇವಕರಿಗೆ ಯೆನ್ನ ಸೇವಕನೆನಿಸದೆ ಬಿಡಬೇಡಾ ದಾಸರಸೇವಿಸಲೆನ್ನ ಜೀವ ತುಡಿಯುವುದೊ ವಿಸಲೆ ದಾಸರದಾಸ ಶ್ರೀ ಮಾಂಗಿರಿಯರಸ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾಥದೀನಾನಾಥ ಸದ್ಗತಿ|ದಾತ ನೋಡಿರೋ|ಭವ| ಭೀತರ ಪತಿತರೆ ಪುನೀತಮಾಡುವ ನೀತನೆ|ರಘು| ಪ ಹವಣದಿ ತಾನಾರೆ ಸವಿಧ್ಹಣ್ಣುಗಳನ್ನು| ತವಕದಿ ಜಾನಕಿಧಮಗರ್ಪಿತವೆನೆ| ಅವನಿಲಿ ಶಬರಿಗೆ ಘವಿಘವಿಸುತ್ತಿಹ| ಅವಿರಳ ಪದದನುಭವ ನೀಡಿದ|ರಘು...... 1 ದಾವನ ಶ್ರುತಿಗಳು ಭಾವಸಿ ನುಡಿಯಲು| ದೇವನ ಹಿತಕುಜ ಕೇವಲ ವನಜರ| ಜೀವರೊಳಾಡುತ ಸೇವೆಗೆ ನಲಿಯುತ| ಕೈವಿಡಿದಿತ್ತನು ಕೈವಲ್ಯವ|ರಘು...... 2 ಕುಂದದೆ ಬಾಂಧವ ನಿಂದಿಸಿ ನೂಕಲು| ನೊಂದುವಿಭೀಷಣ ಬಂದರೆ ಶರಣವ| ತಂದೆ ಮಹೀಪತಿ ನಂದನ ಪ್ರಭು ಆ| ನಂದದ ಸ್ಥಿರಪದ ಹೊಂದಿಸಿದಾ|ರಘು..... 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾನೇನು ಮಾಡಲಯ್ಯ ಎನ್ನಯ ಮನ ನಿನ್ನ ಧ್ಯಾನಿಸಲೊಲ್ಲದೂ ಪ ಶ್ರೀನಿವಾಸನ ದಯ ಕಾಣುವೋಧ್ಹ್ಯಾಂಗಿನ್ನು ನೀನೆ ದಯಮಾಡೋ ಗುರು ರಾಘವೇಂದ್ರ ಅ.ಪ ಕೀರ್ತಿಸದೆ ನಿನ್ನ ವ್ಯರ್ಥ ಚಿಂತೆಯ ಮಾಡಿ ಪಾರ್ಥಸಾರಥಿ ಮಾರ್ಗಕ್ಹೊರ್ತಾದೆ ನಾ ಮರ್ತೆ ನಿಜಸೌಖ್ಯವನು ಬೆರ್ತೆ ಅನ್ಯರ ಸತಿಯ ಸಾರ್ಥಕಾಗದೇ ಪೋಯಿತೆನ್ನ ಆಯು 1 ಮಾಂಸದಾಸೆಗೆ ಮೀನು ಹಿಂಸೆಪಡುತಿರುವಂತೆ ಕಂಸಾರಿ ಪ್ರಿಯ ಹಂಸರೊಂದಿತ ಎನ್ನ ಸಂಶಯವ ಪರಿಹರಿಸಿ ಸಂಶಾಂತ ಮತಿ ನೀಡೋ ಸಂಶಯ ದೂರನೇ 2 ಎಷ್ಟು ಪೇಳಲಿ ಎನ್ನ ದುಷ್ಟ ಕರ್ಮಗಳನ್ನು ಜೇಷ್ಟ ದೂತನೆ ಎನ್ನ ಕಷ್ಟ ಬಿಡಿಸೋ ವೃಷ್ಣಿಸಖಪ್ರಿಯ ಮನ ತೃಷ್ಣಗಳನೆ ಕಳೆದು ಶ್ರೇಷ್ಠಾ ನರಹರಿ ಚರಣಾಭೀಷ್ಟವ ನೀಡೋ 3
--------------
ಪ್ರದ್ಯುಮ್ನತೀರ್ಥರು
ನಾರದ ಮುನಿವರರೆ | ಸದ್ಗುರುವರ ನಾರಾಯಣ ಪ್ರಿಯಶ್ರೀ ಪ ನಾರದ ಮುನಿವರರೆ ನಿಮ್ಮಯ ಚಾರುಚರಣಕೆ ನಮಿಪೆನು ಆ ದ್ವಾರಕಾಪುರನಿಲಯ ಕೃಷ್ಣನ- ಸಾರ ಪೇಳ್ದಿರಿ ಅ.ಪ. ಪರಮ ಸುಂದರ ರೂಪನು | ಆ ಕೃಷ್ಣನು ಪರತರ ಪರಮಾತ್ಮನು ಶರಣಜನ ಮಂದಾರನಾತನು ಕರುಣಶರಧಿಯು ಕಾಮಜನಕನು ಸರಸಿಜೋದ್ಭವ ಸುರರಿಗಧಿಕನು ಹರಿಯು ಇವನೆಂದರುಹಿದಿರಿ ಗುರು 1 ಲೋಕಮೋಹಕನಯ್ಯನು | ಶ್ರೀಕೃಷ್ಣನು ಲೋಕ ವಿಲಕ್ಷಣನು ಲೋಕ ಕಂಟಕರನ್ನು ಶಿಕ್ಷಿಸಿ ನಾಕ ನಿಲಯರ ಭರದಿ ರಕ್ಷಿಸಿ ಲೋಕ ಕಲ್ಯಾಣವನ್ನು ಗೈದ ತ್ರಿ ಲೋಕದೊಡೆಯನೆಂದರುಹಿದಿರಿ ಗುರು 2 ವಿಧಿ ಶುಭರೂಪನ | ಶ್ರೀಕೃಷ್ಣನ ದೇವಾದಿದೇವೇಶನ ಪಾವನಾಂಘ್ರಿಗಳನ್ನು ಪೂಜಿಸಿ ಸೇವಿಸುವ ಸೌಭಾಗ್ಯವೆಂದಿಗೆ ದೇವ ಕರಿಗಿರಿನಿಲಯ ನರಹರಿ ಯಿವನೆಂಬುದನೆನಗೆ ತಿಳುಹಿರಿ 3
--------------
ವರಾವಾಣಿರಾಮರಾಯದಾಸರು
ನಿತ್ಯ ಶುಭಮಂಗಳಮಂ ಪ ಧರೆಯೊಳು ನಿನ್ನಂಥಾ ತರುಣಿ ಮಣಿಯಳಾ ಕಾಣೆಹರಿಯ ವಕ್ಷಸ್ಥಳದಿ ಇರುವೆ ನೀನುಕರವೆತ್ತಿ ಮುಗಿಯುವೆನು ಸಿರಿಯೆ ತವ ಸೌಭಾಗ್ಯಎರಡು ಕಣ್ಣಿಗೆ ತೋರೆ ವರಮಹಾಲಕ್ಷ್ಮಿ1 ಜರದ ಪೀತಾಂಬರವು ಚರಣದೊಳಗಲಿಯುತಲಿಸಿರಿವಂತೆ ಮೂರು ಹೆಜ್ಜೆ ಬರುವಳಾಗಿಸೆರಗೊಡ್ಡಿ ಬೇಡುವೇನು ಹೆರಳಿನಲಿ ಮುಡಿದಿರುವಮರುಗು ಮಲ್ಲಿಗೆ ಚಂಪಕ ಸರಗಳನ್ನು ನೀಡೆ 2 ಇಂದುಮುಖಿ ನಿನ್ನಗಾರ್ತಿಯ ತಂದು ನಿಂದಿಹೆ ನಿಜಸುಂದರಾ ಮೃದು ಕೀರ್ತಿ ಪಾಡುತಿಹೆನೆಚಂದ್ರಶೇಖರ ಸುರರಿಂದ ವಂದಿತ ಚರಣಇಂದಿರೇಶನ ಸಹ ಬಂದಿಲ್ಲೆ ತೋರಿಸುಮುಖ3
--------------
ಇಂದಿರೇಶರು