ಒಟ್ಟು 914 ಕಡೆಗಳಲ್ಲಿ , 91 ದಾಸರು , 691 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋನೇರಿ ವಾಸ ವಿಠಲ | ನೀನೆ ಪೊರೆ ಇವನ ಪ ಕಾಣೆ ನಿನ್ಹೊರತು ಕಾ | ರುಣ್ಯ ಮೂರುತಿ ಹರಿಯೆ0ಜ್ಞಾನಗಮ್ಯನೆ ಸಲಹೊ | ಮಾಣದಲೆ ಇವನಾ ಅ.ಪ. ಸುಕೃತ | ರಾಶಿ ಫಲಿಸಿತೊ ಇವಗೆ ದಾಸ ದೀಕ್ಷೆಯಲಿ ಬಹು | ಆಶೆ ತೋರುವನೋವಾಸವಾನುಜ ನಿನ್ನ | ದಾಸತ್ವ ಪಾಲಿಸುತಪೊಷಿಸೂವುದು ಬಿಡವೆ | ಶೇಷಾದ್ರಿವಾಸಾ 1 ತೈಜಸನು ಗುರುವಾದಿ | ರಾಜಾಖ್ಯ ರೂಪದಲಿಮಾಜದಲೆ ಪೇಳ್ವ ವಿ | ಭ್ರಾಜದಂಕಿತವಾವಾಜರೂಪಯು ಹರಿಯೇ | ಯೋಜಿಸಿಹೆ ಇವಗೆನಿವ್ರ್ಯಾಜ ಕರುಣಿಯೆ ಪೂರ್ಣ | ತೇಜೌಜ ನಿಧಿಯೇ 2 ಮಧ್ವ ಸಮಯದ ಜ್ಞಾನ | ವೃದ್ಧಿ ಗೈಸಿವನಲ್ಲಿಅದ್ವೈತ ತ್ರಯದರಿವು | ಬುದ್ಧಿಗೇ ನಿಲುಕೀಅಧ್ವಯನು ಹರಿಯೆಂಬ | ಸಿದ್ಧಾಂತ ಮನಸಿನಲಿಬದ್ಧವಾಗುವ ತೆರದಿ | ಸಿದ್ಧಿಸೋ ಹರಿಯೇ 3 ಕಂಸಾರಿ ತವನಾಮ | ಶಂಸನ ಪ್ಲವದಿಂದಸಂಸಾರ ನಿಧಿ ತರಣ | ಸಂಶಯವು ರಹಿತಾಅಂಶ ಅವತಾರ ಆ | ವೇಶ ವಿಷಯಗಳ ನಿಸ್ಸಂಶಯದಿ ತಿಳಿಸಿ ಪದ | ಪಾಂಸು ಸೇವೆ ಈಯೋ 4 ಸರ್ವಜ್ಞ ಸರ್ವೇಶ ಸರ್ವಮೂಲನೆ ದೇವದುರ್ವಿಭಾವ್ಯದೆ ಹರಿಯೆ | ಶರ್ವವಂದ್ಯಾಸರ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ಕೋಲು ಕೋಲೆನ್ನ ಕೋಲು ಕೋಲು ಕೋಲೆನ್ನ ಕೋಲು ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲು ಕೋಲು ಕೋಲೆನ್ನ ಕೋಲು ಕೋಲು ಕೋಲೆನ್ನ ಕೋಲೆ ಪ. ತಮನ ಕೊಂದನ ಕೋಲೆ ಕಮಠನಾದನ ಕೋಲೆ ಕ್ಷಮೆಯನೆತ್ತಿದನ ಕೋಲೆ ಕೋಲು ಕಮನೀಯ ನರಸಿಂಹರೂಪನಾದನ ಕೋಲೆ ಸುಮುಖ ವಾಮನನ ಕೋಲೆ 1 ಪರಶುರಾಮನ ಕೋಲೆ ರಘುಕುಲದಲುದಿಸಿ ದಶ- ಶಿರನ ಕೊಂದವನ ಕೋಲೆ ಕೋಲು ಸಿರಿಕೃಷúರಾಯನ ಸುಕೋಲೆ ಬುದ್ಧನ ಕೋಲೆ ತುರಗವೇರಿದನ ಕೋಲೆ 2 ವಾದಿರಾಜನಿಗೊಲಿದು ಸೋದೆಪುರದಿ ನಿಂದು ಮೋದಿ ತ್ರಿವಿಕ್ರಮನ ಕೋಲೆ ಕೋಲು ಕಾದಿ ಖಳರನು ಕೊಂದ ವೇದಗಳ ತಂದ ವಿ ನೋದಿ ಹಯವದನ ಕೋಲೆ 3
--------------
ವಾದಿರಾಜ
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯಾ ಬಲಗೊಂಬೆ ಕೋಲೆ ಪ ಮೊದಲು ನಮ್ಮ ಗುರು ರಘುಪತಿಯ ಪಾದಕ್ಕೆ ಮುದದಿಂದ ಎರಗಿ ಬಿನ್ನೈಪೆ ಕೋಲೆ ಮುದದಿಂದ ಎರಗಿ ಬಿನ್ನೈಪೆ ಮನದಲ್ಲಿ ಪದಮನಾಭನ್ನ ತೋರೆಂದು ಕೋಲೆ1 ಜನುಮ ಜನುಮದಲ್ಲಿ ಅನಿಮಿತ್ಯ ಬಂಧು ನೀಯನಗೀಯೋ ನಮ್ಮ ಸೇವೆಯ ಕೋಲೆ ಎನಾಗಿಯೋ ನಿಮ್ಮ ಸೇವೆಯ ತವ ಪಾದವನು ಧ್ಯಾನ ಮರಿಯಾದೆ ಕೋಲೆ2 ಮೂಢನಾದ ಎನ್ನನೋಡಿ ಕರುಣವನು ಮಾಡಿ ಹರಿಚರಣ ತೋರಿದ ಕೋಲೆ ಮಾಡಿ ಹರಿಚರಣ ತೋರಿದ ನಿಮ್ಮ ದಯ ಕೀಡುಂಟೆ ಜಗದಿ ಗುರುವರ್ಯ ಕೋಲೆ3 ಪತಿಪಾದ ಮಹಿಮೆ ತೋರಿಸಿ ಕೋಲೆ ಪತಿಪಾದ ಮಹಿಮಾ ತೋರಿಸಿ ಸ ದ್ಗತಿ ಪಥsÀವನ್ನು ವಿಡಿಸಿದ ಕರುಣಿಯೆ ಕೋಲೆ 4 ಅನಾಥ ರಕ್ಷಕ ಆಪತ್ತು ಬಾಂಧವ ಶ್ರೀನಿವಾಸನ್ನ ನಿಜದಾಸ ಕೋಲೆ ಶ್ರೀನಿವಾಸನ್ನ ನಿಜದಾಸ ಮಮಕುಲ ಸ್ವಾಮಿಗೆ ನಮಿಪೆ ಮನದಲ್ಲಿ ಕೋಲೆ 5 ಲಕುಮೀಶ ಹರಿ ದೇವಕಿ ತನಯಗೆ ಸಕಲಾ ಕರ್ಮಗಳಾ ಅರ್ಪಿಸೆ ಕೋಲೆ ಸಕಲಾ ಕರ್ಮಗಳಾ ಅರ್ಪಿಪೆ ನಮ್ಮಗುರು ಸುಖನಿಧಿಗಳಿಗೆ ನಮಿಸುವೆ ಕೋಲೆ 6 ಆನಮಿಸುವೆ ಮಹಾನುಭಾವ ಗುರು ನೇಮಕಲ್ಲಾರ್ಯರ ಚರಣಕ್ಕೆ ಕೋಲೆ ನೇಮಕಲ್ಲಾರ್ಯರ ಚರಣಕ್ಕೆ ಕೋಸಗಿ ಸ್ವಾಮಿರಾಚಾರ್ಯರ ಪಾದಕ್ಕೆ ಕೋಲೆ 7 ಪುರಂದರಾದಿ ದಾಸವರ್ಯರ ಸುಂದರ ಚರಣಕ್ಕೆ ಎರುಗುವೆ ಭರದಿಂದ ಕೋಲೆ ಭರದಿಂದ ಮುದಮುನಿ ಇವರನ್ನು ತೋರಿ ಪೊರೆಯಂದು ಕೋಲೆ 8 ಅಂದದಿಂದ ಆನಂದತೀರ್ಥ ರಾಘ ವೇಂದ್ರಾದಿ ಸಕಲ ವಿಭುದಾದಿ ಕೋಲೆ ರಾಘವೇಂದ್ರಾದಿ ಸಕಲ ವಿಭುದ ಆ ಕರ್ಮಂ ದೀಗಳಿಗೆ ನಮಿಸುವೆ ಕೋಲೆ 9 ವಾದಿರಾಜರ ದಿವ್ಯ ಪಾದಕ್ಕೆ ನಮಿಸುವೆ ಸಾಧಿಸಿ ಕೊಡಲಿ ಸತತಾದಿ ಕೋಲೆ ಸಾಧಿಸಿ ಕೊಡಲಿ ಸತತಾದಿ ಹರಿದಾಸ ರಾದವರ ಸೇವೆಯನಗೆಂದು ಕೋಲೆ 10 ಗಣಪಾದಿಗಳು ಸುರಮುನಿ ಪಾದಗಳಿಗಾ ನಮಿಸುವೆ ಮನಸಿಜ ಸುರಪಾಗ ಕೋಲೆ ನಮಿಸುವೆ ಮನಸಿಜ ಸುರಪಾಗ ಭೂತ ಗಣಪತಿ ಶೇಷರಪಾದ ಕಮಲಕ್ಕೆ ಕೋಲೆ 11 ಭಾರತೀವಾಣಿ ಗುರು ಮಾರುತಿ ಪಾದಕೆ ಪರಿ ಮಣಿಯುವೆ ಕೋಲೆ ಪರಿ ಮಣಿಯುತ ಹರಿಪಾದ ತೋರುತ ಮನದಲ್ಲಿ ನಿಲಿಸೆಂದು ಕೋಲೆ 12 ಲಕ್ಷ್ಮೀದೇವಿಯೆ ಲಕ್ಷಣವಂತಿಯೆ ಪಕ್ಷಿವಾಹನನ ಅರ್ಧಾಂಗಿ ಕೋಲೆ ಪಕ್ಷಿವಾಹನನ ಅರ್ಧಾಂಗಿ ಭವದಿಂದ ರಕ್ಷಿಸಲೆನ್ನ ತವಕಾದಿ ಕೋಲೆ 13 ಶಿರಿಗೋವಿಂದವಿಠಲ ವಿಶ್ವವ್ಯಾಪಕ ಮರುತಾಂತರ್ಗತನೆ ಮುರರಿಪು ನಮ್ಮ ಗುರುವರ್ಯರ ಪ್ರೀಯ ಸಲಹಯ್ಯ ಕೋಲೆ14
--------------
ಅಸ್ಕಿಹಾಳ ಗೋವಿಂದ
ಕೋಲೋ ಕೋಲೆನ್ನ ಕೋಲೆ ಕೋಲು ಮುತ್ತಿನ ಕೋಲುಶ್ರೀ ಗುರು ನಿನ್ನ ಬಲಗೊಂಬೆ ಕೋಲ ಪ ಪಾದ ಏಕಚಿತ್ತಾದಲ್ಲಿ ಬಲಗೊಂಬೆ ಕೋಲಅ.ಪ. ಪಾದ ಭೃಂಗಾನೆಂದೆಸುತಾ ಪಂಚರೂಪಾದಿ ಮೆರೆವೋನು ಕೋಲಪಂಚರೂಪಾದಿ ಮೆರೆವೋನು ಭಾವೀಪಂಚಪ್ರಾಣಾನಾ ಬಲಗೊಂಬೆ ಕೋಲ 1 ಮಂದಜಾಸನ ಪದ ಪೊಂದುವನಾಕಂಡವಾದೀರಾಜಾಖ್ಯನ ಬಲಗೊಂಬೆ ಕೋಲವಾದೀರಾಜಾಖ್ಯನ ಭೂತಾ ಪತಿಯೆಂದು ಆರ್ಯನ್ನ ಮೊದಲೇ ಬಲಗೊಂಬೆ ಕೋಲ 2 ಕಂದುಕಂಠನ ಕೊರಳಿಗ್ಹಾರ ಪದಕವ ಹಾಕಿ ಪರಿಪರಿಯಿಂದ ಮೆರೆಸೋಣ ಕೋಲ ಪರಿಪರಿಯಿಂದ ಹಾರ ಪದಕವ ಹಾಕಿ ಧೀರನ್ನ ಮೊದಲೇ ಬಲಗೊಂಬೆ ಕೋಲ 3 ಕೆಂಡಗಂಣನ ಕಂಡು ರುಂಡ ಹಾರವ ಹಾಕಿ ಪರಿಪರಿಯಿಂದಾ ಭಜಿಸೋಣ ಕೋಲಪರಿಪರಿಯಿಂದಾ ರುಂಡಹಾರವ ಹಾಕಿ ಮಂಡೇ ನದೀ ಧರನ ಬಲಗೊಂಬೆ ಕೋಲ 4 ಅಮರೇಂದ್ರ ಲೋಕದಿ ಶಿವರಾಜ ಧೊರಿಗೆ ಪರಿಪರಿಯಿಂದ ಸೇವಿಪರು ಕೋಲಪರಿಪರಿಯಿಂದ ಸೇವೆಯಾಗೊಂಬಂಥ ವಾದಿರಾಜರ ದಾಸ ವಾದಿರಾಜಾಖ್ಯನ ಬಲಗೊಂಬೆ ಕೋಲ 5 ಚಾರು ಚರಣವ ಬಲಗೊಂಬೆಕೋಲ 6 ಮೂರು ಮಂದಿ ಮಧ್ಯೆ ಮಾತಾಡುತಿಪ್ಪದಿಟ್ಟತನದಿ ತಂದೆವರದಗೋಪಾಲವಿಠ್ಠಲನದಿಟ್ಟಾತನದಿ ಬಲಗೊಂಬೆ ಕೋಲ 7
--------------
ತಂದೆವರದಗೋಪಾಲವಿಠಲರು
ಕ್ಷಮಾಸಮುದ್ರನೆ ನಮಾಮಿ ಗುರು ನಿನ್ನ ಸಮಾನರ್ಯಾರಿನ್ನೂ |ಪ|| ಕಮಲ ಭ್ರಮರ ತವಪದ | ನಮಿಸುವೇ ಅ.ಪ. ತತ್ವ ಪ್ರದರ್ಶಕ ಶೃತ್ಯರ್ಥ ಬೋಧಕಗೀತಾರ್ಥ ಸಂಗ್ರಹ ಕೃತೇ ನಮೋ |ಪ್ರತ್ಯರ್ಥಿಮತ್ತೇಭ ಪಂಚಾಸ್ಯ ನಿನ್ನಯಭೃತ್ಯನ ಅಪಮೃತಿ ತಪ್ಪಿಸಿದೇ 1 ಅದ್ವೈತ ದುಸ್ಸಹ ವಾಸನ ನಿರಸನಖದ್ಯೋತ ಸಮ ವ್ಯಾಪ್ತ ಪರಿಮಳಾ |ಸದ್ವೈಷ್ಣ್ವ ಕುಮುದೇಂದು ವಿದ್ವಾಂಸನತ ಪದದ್ವಂದ್ವಾ ವಿಮಲ ಕಮಲಾ 2 ಕುಷ್ಠಾದಿ ರೋಗಹರ ಕಷ್ಟ ನಿವಾರಣಶ್ರೇಷ್ಠ ನಿಮ್ಮಯ ಸ್ಮರಣಾ |ನಿಷ್ಟೇಲಿ ಭಜಿಪರ ಇಷ್ಟಾರ್ಥ ಸಲಿಸುವ ದುಷ್ಟವಾದಿಯ ದಮನಾ3 ಪ್ರಹ್ಲಾದ ಬಾಲನೆ ವಿಮಲಾ ವಿಭೀಷಣಬಾಹ್ಲೀಕ ಸೂನಾದೆ ಪ್ರತೀಪಗೆ |ವಿಹ್ವಲ ಹೃದಯರ ಚಂದ್ರಿಕೆಯಿಂದಲಿಆಹ್ಲಾದ ಪಡಿಸಿದ ಸಲ್ಹಾದಾಗ್ರಜನೇ 4 ಸದನ ಗುರುವೇ |ಮಂತ್ರಾಗಮ್ಯ ಗುರು ಗೋವಿಂದ ವಿಠಲನಅಂತರದಿ ತೋರಿಸಿ ರಕ್ಷಿಸಯ್ಯಾ 5
--------------
ಗುರುಗೋವಿಂದವಿಠಲರು
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು
ಗಣೇಶ ಸ್ತವನ ನೀ ದಯವಾಗು ಶುಭೋದಯ ಗಣಪತಿ ಕಾದುಕೊಂಡಿರು ಸಂತತಂ ಪ. ವಾದವಿರಲಿ ನಿಷುಸೀದ ಗಣಪನೆಂಬ ವೇದಾರ್ಥವ ಪರಿಶೋಧಿಸಿ ನಮಿಸುವೆ ಅ.ಪ. ಯದ್ಯದ್ವಿಭೂತಿಮದೆಂದು ಪೇಳಿದ ಪರಿಶುದ್ಧವಾದ ವಚನ ಶ್ರದ್ಧಾಪೂಜಿತ ಸಕಲ ದೇವರೊಳಗಿದ್ದು ಉಲಿವ ಕಥನ ಮಧ್ವಾಗಮ ಸಂಸಿದ್ಧವಾಗಿರೆ ವೃಥಾ ಪದ್ಧತಿ ತಿಳಿವದು ದುರಾಧ್ಯರಂತಿರಲಿ 1 ಸರ್ವದೇವ ನತಿಯೆಲ್ಲವು ಕೇಶವನಲ್ಲಿ ಸೇರುವದೆಂದು ಯಲ್ಲಾ ಕಡೆಯಲಿ ಚಲ್ಲದೆ ಜಲವ ಬೇರಲ್ಲಿ ಸುರಿಯಿರೆಂದು ಫುಲ್ಲನಾಭ ಶಿರಿವಲ್ಲಭ ವ್ಯಾಸರ ಸೊಲ್ಲ ತಿಳಿದು ನಿಂನಲ್ಲಿಗೆ ಸೇರಿದೆ 2 ವಿಘ್ನಮಹೌಘ ವಿದಾರಣ ಭವಸಂವಿಘ್ನಮನ:ಶರಣಾ ರುಗ್ಣಾತ್ವಾದಿ ನಿವಾರಣ ಸಂಗದ-ಭಗ್ನಸುರಾರಿ ಗಣಾ ನಗ್ನ ಚಿದಾತ್ಮಜ ನೀಲಾಭರಣ ಭ- ಯಾಗ್ನಿ ಶಮನ ನಿರ್ವಿಘ್ನದಿ ಕರುಣಿಸು 3 ಪುಂಡರೀಕ ನಯನ ಅಂಡಜಾಗಮನಾಖಂಡಲ ಸೈನಿಕ ಚಂಡವೈರಿ ಮಥನಾ ಪಂಡಿತ ಪಾಮರ ಸಮದೃಗಭೀಪ್ಸಿತ ಶುಭ ಮಂಡಲ ಮಧ್ಯಗ 4 ವಿಶ್ವಂಭರ ವಿಬುಧೇಶ ಗಣಾರ್ಚಿತ ವಿಶ್ವನಾಥವಿನುತಾ ವಿಶ್ವಜನಿಸ್ಥಿತಿ ಕಾರಣವಾರಣ ವಿಶ್ವಭೂತಿ - ಶರಣ ವಿಶ್ವಾಸಾನುಗುಣಾರ್ಥ ವಿಭಾವನ ವಿಶ್ವದೇವಗತ ವೆಂಕಟರಮಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಗಣೇಶ ಸ್ತೋತ್ರ ಗಣಪತೇ ಎನ್ನ ಪಾಲಿಸೋ - ಗಂಭೀರಾ ಪ ಪಾರ್ವತಿ ನಂದನ ಸುಂದರ ವದನಶರ್ವಾದಿ ಸುರವಂದ್ಯ ಶಿರಬಾಗುವೆನು 1 ಮೋದ ಭಕುತರಿಗಿತ್ತುಮಾಧವನಲಿ ಮನ ಸದಾ ನಿಲಿಸು ನೀ 2 ಪಂಕಜ ನಯನ ವೆಂಕಟ ವಿಠಲನಕಿಂಕಿರನೆನಿಸೆನ್ನ ಶಂಕರ ತನಯನೆ 3
--------------
ವೆಂಕಟೇಶವಿಟ್ಠಲ
ಗರ್ವಿಸುವದು ತರವೆ ಗರ್ವಿಸುವದು ತರವಲ್ಲ ನೀವಿದ ಕೇಳಿ ಸರ್ವೇಶನೊಪ್ಪನೀ ನಡತೆಯ ಕಂಡರೆ ಪತೊಗರಿ :ಬೆಲ್ಲವೆ ಬಾ ನಾನು ತೊಗುರಿಬೇಳೆಯು ನನಗುಲ್ಲಾಸದಿಂದೊಂದು ಯೋಚನೆ ತೋರಿತುಎಲ್ಲರು ಒಬ್ಬಟ್ಟು ಒಳ್ಳಿತೆಂದೆಂಬರುಬಲ್ಲವರಾದರೆ ವಿವರಿಸದಿರುವರೆಸಲ್ಲದ ಮಾತನಾಡಲಿಬೇಡ ಸತ್ಯವನಿಲ್ಲಿ ನನ್ನೊಳು ಪೇಳು ಮತ್ತೆ ನಾಲುವರಿರುವಲ್ಲಿ ನ್ಯಾಯವ ತಿದ್ದಿಕೊಂಬ ನಾವಿಬ್ಬರುಇಲ್ಲದ ಬಳಿಕ ಗೋಧಿಯ ದೆಸೆುಂದೇನುಸಲ್ಲದ ತುಪ್ಪವನೇನ ಮಾಡಲಿಬೇಕುಒಳ್ಳೆಯತನ ನಿನ್ನೊಳು ಇರುವುದಿದನೆಲ್ಲವನೆನಗೆ ಪೇಳು ಸಟೆಯ ಪೇಳಬಲ್ಲೆನೆ ನಾ ನಿನ್ನೊಳು ನಿಮ್ಮೊಳು ನಾನೆಬಲ್ಲಿದನಲ್ಲವೆ ಕೇಳು ನನ್ನನೆ ಯೆಲ್ಲಾಕೊಳ್ಳುವರವನಿಯೊಳು ನೀನೂ ಸ್ವಲ್ಪವಲ್ಲವೆ ನಿಜ ನಮ್ಮೊಳು ಕೋಪಿಸಬೇಡಸಲ್ಲದ ವಸ್ತುಗಳು ಗೋಧಿಯು ಎಣ್ಣೆಯಲ್ಲವೆ ನಿತ್ಯದಲ್ಲೂ ತುಪ್ಪವ ಬಿಡುಪೊಳ್ಳುನುಡಿದರೆನ್ನ ಮಾತೆಲ್ಲ ಪಾಳು 1ಬೆಲ್ಲ :ಏನೆಲೆ ತೊಗುರಿಬೇಳೆಯೆ ನನ್ನ ಸ್ವಲ್ಪವೆಂದೇನು ಕಾರಣವನು ಕಂಡು ನನ್ನೊಡನೀಗನೀನುಸುರಿದೆ ಮಾತು ಹೆಚ್ಚಿ ಬರುತಲಿದೆುೀ ನಡೆ ನಿನ್ನಯ ಶ್ರೇಷ್ಠವದೆನಿಟಷ್ಟೂನಾನಿಲ್ಲದಿರಲು ಸೀಯಾಗುವದೆಂತುರೆನೀನು ಸುಮ್ಮನೆ ಹೇಳಿಕೊಂಬೆ ತನ್ನಯ ಸ್ತುತಿತಾನೆ ಮಾಡಿಕೊಂಬ ಮನುಜಗೆ ನರಕವೆಂಬೀನಿಗದಿಯನರಿತರೆ ಪರನಿಂದೆಯನೀನೆಚ್ಚರಂಗೆಟ್ಟು ಮಾಳ್ಪೆಯ ಇನ್ನಭಿಮಾನವನೀಗ ುರುಯೆನ್ನೆಡೆಯೊಳುನೀನಿರಬೇಡ ಸಾರು ಹೆಚ್ಚುಗೆ ನಿನ್ನದೇನದನೆನಗೆ ತೋರು ದುರ್ಜನರು ತಾವೀನುಡಿ ನಿಜವೆಂಬರು ಸತ್ಪುರುಷರುಮಾನಸದಲಿ ಒಪ್ಪರು ನಿನಗೆ ಅಭಿಮಾನ ಮೊದಲು ಇದ್ದರೂ ಹಾರು ಮುಂದುಜಾಣತನವೆಯಾದರೂ ಹೆದರದಿಪ್ಪೆಹೀನಾಯವೆ ಬಂದರೂ ನಾಲುವರೆನ್ನದೀನಡೆಯೆನ್ನುವರು ಎಂಬುದನೀಗನೀನರಿಯದೆ ಬಂದೆುದು ಪಾಪ ಬೇರು 2ಗೋಧಿ :ಹೋಗಲೆ ತೊಗುರಿ ಬೆಲ್ಲಗಳಿರ ನನ್ನನುಕೂಗಿ ಬೈವಿರಿ ಗೋಧಿ ಯೋಗ್ಯದ ವಸ್ತು ತಾನಾಗದು ಎಂದು ಕೊಬ್ಬಿದ ಮಾತನಾಡುತ ನೀಗಿಕೊಂಬಿರೆ ನಿಮ್ಮ ಮಾನವ ಸದರ ನಿಮಗಾಗಿದೆ ಕೊರಗಿಪರೆ ಮಾತಿನ ಪರಿಯೇಗುವುದೆನಿಸದಿರೆ ನಿಮ್ಮನು ತೃಣಕಾಗಿ ನಾ ಕಾಣುವರೆ ಕಾಣೆನು ಮಾನಹೇಗೆ ನಿಮ್ಮೊಳು ಹೋಗೆ ಯೆನಗೆ ಸಮನಾಗಲು ನೀವು ಬಲ್ಲಿರೆ ುೀ ಯಾಳೆಗೆಹೋಗಿ ನೀವು ಕೊಬ್ಬಿದರೆ ಈಶ್ವರ ಕೃಪೆಯಾಗುವದೆಂತೆನ್ನು ಮರೆಯೊಗಲೊಲ್ಲಿರೆ 3ಎಣ್ಣೆ :ಹರಟಿಕೊಂಬಿರೆ ನೀವೆ ನಿಮ್ಮೊಳು ನನ್ನನುಜರೆಯುತಲೆಣ್ಣೆುಂದೇನೆಂದು ನಾನಿಲ್ಲದಿರಲು ನೀವೆಂತೊಂದು ಗೂಡಿ ಬಾಳುವಿರಿದನರಿಯದೆ ಮುಂಗೆಟ್ಟು ನುಡಿದರೇನಾುತೀಪರಿಯಹಂಕಾರ ಲೇಸಲ್ಲ ಹೀನಾಯವುಬರುವದು ಪರರ ನಿಂದಿಸಿ ಜೀವಿಸುವುದುತರವಲ್ಲ ಸದ್ಗತಿಗೆಟ್ಟು ಕೊನೆಗೆ ಬರದಿರದು ನರಕ ಬೆಂಕಿುಂ ಮೂರುವೇಳೆ ನೀಕೊರಗುವೆ ಬೆಲ್ಲವೆ ಕೇಳು ತೊಗುರಿಯೆ ನೀನಿರದೆ ಸಾರಿಯೊಳು ಬೇಯುವೆ ಗೋಧಿಕೊರಗುವೆ ಕಲ್ಲಿನೊಳು ಚಚ್ಚಿಸಿಕೊಂಡುಇರುವದೆ ನಿಮ್ಮವೊಲು ಕಷ್ಟವದೆಂಬದರಿುರೆ ನೀವು ನನ್ನೊಳು ುಂಥಾ ನಡೆಬರುವುದೆ ಬಹು ಕೇಳಾ ಹೀನಾಯವುಬರದಿರದೀ ಬಾಳು ಯಾತಕೆ ಸುಖಕರ ಮಾರ್ಗ ತಾ ನಿಮ್ಮೊಳು ುಲ್ಲವು ುದನರಿಯದೆ ನಿಮ್ಮಳಲು ಬಿಡದು ನನ್ನಮರೆಯೊಕ್ಕು ಬದುಕುವದಿದು ಬಹುಮೇಲೂ 4ತುಪ್ಪ :ಜಗದೊಳು ನೀವೆ ಬಲ್ಲಿದರೆಂದು ನಿಮ್ಮೊಳುನಿಗದಿಯ ಮಾಡಿಕೊಂಬಿರಿ ಗರ್ವ ಹೆಚ್ಚಿತೆಸುಗುಣವಂತರು ನೀವಾದರೀಪರಿಯಲ್ಲಿಬಗುಳಿಕೊಂಬಿರೆ ತುಪ್ಪವಂ ಬಿಡುಯೆನ್ನುತಮಿಗೆ ಸುರತತಿ ಮೊದಲಾಗಿ ನನ್ನಿಂದಲಿಸೊಗಸಾಗಿ ಕೃಪೆವಡೆವರು ನಾನಿಲ್ಲದೆಮಿಗೆ ಶುದ್ಧರಾಗುವಿರೆಂತು ಬರಿದೆ ನಿಮ್ಮನಿಗದಿಯ ಪೇಳಿಸಿಶಾನಿಗೆ ನನ್ನ ನೀವಗಲಲು ರುಚಿಕರವೆಂತು ನಾನೊಪ್ಪೆನುನಿಗಮದ ಮಾತಿದುವೆ ಸಟೆಯ ಮಾಡಿಸೊಗಸಾಗಿ ಬಾಳಿ ನೀವೆ ಅನ್ಯಾಯಗಳಗಣಿತವಾಗಿುವೆ ನನ್ನಯ ನ್ಯಾಯನಿಗದಿಯಾದರೆ ಹೋಗುವೆ ತಪ್ಪಿದರೆ ಈಜಗದೊಳಗ್ನಿಯ ಪೊಗುವೆ ನಿಮಗೆ ಆಣೆಯಗಲಿದರಿಲ್ಲಿಂದವೆ ಪೋಟಾಟವೆಜಗದೊಳುತ್ತಮ ವಸ್ತುವೆ ನಾನೆಂಬರುಬಗೆುರೆನ್ನನು ನೀವೆ ಮೊಂಡರುಯೆಂದುಖಗವಾಹನಗೆ ಪೇಳುವೆ ಚಿಕ್ಕನಾಗನಗರಕೆ ನಡೆುರಿ ನ್ಯಾಯವ ತಿದ್ದುವೆ 5ಒಟ್ಟಾಗಿ :ದೇವ ಭಕ್ತಾವನ ಪಾವನ ಚರಿತ ಸುರಾವಳಿನುತಪಾದಭಾವಜ ಜನಕ ರಮಾವಲ್ಲಭಾನಂತ ಗೋವಿಂದ ಮಾಧವನೀವರಿಯದೆ ಪೋಗಲಾವಗತಿ ನಮಗೀ ವಸುಧೆಯೊಳ್ಮುನಿಭಾವಿತ ಚರಣನೆಸಾವಧಾನದೊಳು ಪರಾಮರಿಸಿುಂತಪ್ಪದಾವಲ್ಲಿುದ್ದಡಲ್ಲಿಗೆ ತಕ್ಕ ಶಿಕ್ಷೆಯನೇ ವಿರಚಿಸಿ ಗುಣವಿದ್ದಲ್ಲಿ ರಕ್ಷಿಪುದಾವ ಪರಿಯಲಾದರು ಜಗನ್ನಾಥನೆುೀವ್ಯವಹಾರವನು ನಿಗದಿಗೈದುನೀವೊಲಿದೆಮ್ಮುವನು ರಕ್ಷಿಸಬೇಕು ದೇವಾದಿದೇವ ನೀನು ಅನಾಥರ ಕಾವಲ್ಲಿ ದಯಾವಂತನುಸುಜನಪತಿ ಭಾವಿತ ಪಾದಪದ್ಮನು ನೀನೆ ಗತಿನಾವರಿದನ್ಯರನು ಬಾಳುವೆವೆಂತುರಾವಣಾರಿಯೆ ನೀನು ಕೈಪಿಡಿ ಗತಿುವರೆದಿಕ್ಕು ನೀನು ಮಾಡಿನ್ನೇನುಭಾವಿಸೆವನ್ಯರನು ನಮ್ಮಿಂದಲಿಸೇವೆಗೊಳುವ ನೀನಿರಲು ಭಜಿಸದೆ ನಾವು 6ಬರಿದೆ ಜಗಳವಾಡಬೇಡವೀಚೆಗೆ ಬನ್ನಿಒರೆಯುವೆ ಬುದ್ಧಿಯ ಕೇಳಲಿಚ್ಛಿಸಿದರೆತರುಣನಾಗಾಖ್ಯಪುರದ ವೆಂಕಟೇಶನುಗುರುವಾಸುದೇವಾವತಾರವ ತಾಳಿಯೆಕರುಣದಿಂ ತಿಮ್ಮದಾಸನ ಬಹುದೋಷವ ಪರಿದಾಳ್ದನೆಂಬ ಬಿರುದಪೊತ್ತು ನಾನೀಗಮೆರೆಯುವೆನೀವೆಲ್ಲ ಬರಿ ಮಾತ ಮಾಡದೆಶಿರದಲಿ ಹೊತ್ತು ನನ್ನಯ ನುಡಿಗೇಳಲುಬರುವುದು ಕೀರ್ತಿ ಮೂಜಗದೊಳಗದರಿಂದನೆರೆುೀಗ ನೀವೆಲ್ಲರೂ ಒಂದಾಗಿಯೆುರಲು ಸೌಖ್ಯವದೆಂಬರು ವಿಂಗಡದಿ ನೀವಿರಲು ಜನರು ಬೈವರು ಕೂಡಲು ನನ್ನಗುರುದಯ ಬಹುದೆಲ್ಲರು ಹಿಗ್ಗುವರು ಮತ್ತರಿತು ಸಾರವ ಕೊಂಬರು ಬಹಳ ಶ್ರೇಷ್ಠರುವದರಿಯದಿದ್ದರೂ ಹೊಣೆಯ ನೀವೆನೆರೆ ನಿಮ್ಮನೀ ಜನರು ಬೈಯದ ಹಾಗೆಉರು ಶಿಕ್ಷೆಯನೆ ಮಾಳ್ಪರು ಯಾರೆಂಬಿರೆಅರಿುರಿ ಗಂಗಪ್ಪ ಹೊಣೆ ಹೋಗಿನ್ನಾದರು7
--------------
ತಿಮ್ಮಪ್ಪದಾಸರು
ಗಾಡಿಪಂಥ ಮಾಡಬೇಡೆಲೈ ಪ. ಮಾರುತಿಸೇವ್ಯನೆ ಧೀರ ದಾತಾರನೆ ಕೋರಿ ಭಜಿಪೆ ಬೇಗ ಬಾರೈ ಸುಂದರ 1 ನಾರಿಯರ್ನಿನ್ನನು ಸಾರಿಕರೆವರೈ ಧಾರಣಿಜಾತೇಸಹ ಸಾರಿ ಬಾಬಾ ಬೇಗ 2 ಭವಭಯದೂರನೆ ಭಕ್ತಮಂದಾರನೆ ಭಾವಜ ಜನಕನೆ ದೇವಾದಿದೇವನೆ3 ಶೇಷಗಿರೀಶನೆ ದಾಸಜನಾಶ್ರಯನೆ ವಾಸವವಂದಿತನೆ ಶ್ರೀ ವಾಸುದೇವನೆ 4
--------------
ನಂಜನಗೂಡು ತಿರುಮಲಾಂಬಾ
ಗಿಣಿಯೆ ನಿನಗೇನು ಬೇಕದನೀವೆ ಹಯವದನ-ನೆನಿಪ ಹರಿಯನು ಕರೆತಾರೆ ಗಿಣಿಯೆಮುನಿ ವಾದಿರಾಜನಿಗೆ ವರವೀವ ದೇವನವನೆನೆವವರ ಬಿಡನೆಲೆ ಗಿಣಿಯೆ ಪ. ವೃಂದಾವನದಿ ಚಂದ್ರನಂತೆಸೆವ ಗೋವಿಂದಚಂದದಿ ನಿನ್ನ ಮಾತ ಮನ್ನಿಸುವನಂದಗೋಪಿಯ ಮುದ್ದುಕಂದನೆನಿಪ ಮುಕುಂದನ-ನಿಂದಿರುಳು ತಂದು ತೋರು ಗಿಣಿಯೆ 1 ಮೂರು ಬಣ್ಣದ ಕೊರಳ ತಿರಿಯುಳ್ಳ ಗಿಣಿ ನೀನುಮೂರು ಬಣ್ಣದ ಚಾರುನಯನಮಾರನನುಚರ ನೀನು ಮಾರನ ಜನಕನವನುಮೀರ ನಿನ್ನ ಬಿನ್ನಪವ ಗಿಣಿಯೆ 2 ಸತತ ಸಿರಿದೇವಿಯರ ಸುತನೆನಿಪ ಕಾಮನಿಗೆರಥವಾಗಿ ಮೆರೆವೆ ನೀ ಗಿಣಿಯೆಕೃತಕೃತ್ಯನಾದರೂ ಅದರಿಂದ ನಿನ್ನ ಮಾತಪ್ರತಿಪಾಲಿಸುವನೆÉಲೆ ಗಿಣಿಯೆ 3 ಎಲ್ಲರು ಭುಂಜಿಸುವ ಮೊದಲೆ ಭುಂಜಿಸುವ ನಮ್ಮಿನಿಯಬಲ್ಲಿದಾತನ ಬಿರುದ ನಿನಗಿತ್ತಚೆಲುವ ಸಸಿಗಳ ತೆನೆಯ ತಂದು ತಂದು ಮೆಲುವೆ ಗಡಸಲುವುದು ಮೋಹನದ ಗಿಣಿಯೆ 4 ಪಚ್ಚೆಯ ಬಣ್ಣದ ಗರಿಯ ಸಿರಿಯುಳ್ಳ ಗಿಣಿ ನೀನುಪಚ್ಚೆಯ ಬಣ್ಣದ ವ್ಯಾಸನವನುಎಚ್ಚರಿಸಿ ಕೊಡುತಿದೆ ನಿನ್ನ ಕಂಡರಾ ಮುನಿಯಮೆಚ್ಚಿದೆ ನಾನವನ ತಂದು ತೋರು ಗಿಣಿಯೆ 5 ಕೆಂದಾವರೆಯ ಪೋಲ್ವ ನಿನ್ನ ಚರಣ ಹರಿಯ ಪದದÀಂದವನು[ತಂದುತೋರು]ಗಿಣಿಯೆಚೆಂದದ ಅವನ ಚೆಂದುಟಿಯಂತೆ ನಿನ್ನ ಚೆಲುವ ಮುಖ ಕೆಂಪುತÀಂದು ಮುಂದಿರಿಸು ನೀ ಗಿಣಿಯೆ6 ಅವನ ವಾಹನನೆನಿಪ ಗರುಡನ ಕುಲದಲುದ್ಭವಿಸಿ-ದವ ನೀನೆಲೆ ಗಿಣಿಯೆಅವನ ಮುದ್ದು ನುಡಿಯ ಬಲ್ಲರೆ ನೀನು ಜಗದೊಳಗೆಸವಿಮಾತುಗಳ ನುಡಿವೆ ಗಿಣಿಯೆ 7 ಗಮನ ನಿನಗೆಸೊಗಸುನುಡಿಯಿಂದವನ ಪದಕೆ ಬಿನ್ನಹ ಮಾಡಿಸುಗುಣನ ಕರೆತಾರೆ ಗಿಣಿಯೆ8 ತಮ್ಮ ತಮ್ಮ ಮನೆಗಳಲ್ಲಿ ರಮೆಯರಸ ಕೃಷ್ಣನ-ನು ಮನದಲ್ಲಿ ಅರ್ಚಿಸಿ [ಪೂಜಿಸುವರು]ಸುಮುಖನೆಂದು ನಿನ್ನ ಮನೆಯ ಚಾವಡಿಯಲಿ ಇಹ-ನ ಮನ್ನಿಪರೆಲೆ ಗಿಣಿಯೆ 9 ಉರದಲ್ಲಿ ಸಿರಿವತ್ಸಯೆಂಬ ಕುರುಹುಂಟವಗೆಕರಗಳಲಿ ಶಂಖಚಕ್ರಗಳು ಕೊರಳಲ್ಲಿ ಕೌಸ್ತುಭಮಣಿಯಿಹ ಹಯವದನ ನ-ಮ್ಮರಸನೆಂದರಿತುಕೊ ಗಿಣಿಯೆ 10
--------------
ವಾದಿರಾಜ
ಗಿರಿಶಾ ಗೌರೀಪ್ರಾಣಾಧೀಶ ಜಯ ಜಯದುರಿತ 'ನಾಶ ಮಹೇಶ ಪದಕ್ಷಯಜ್ಞ 'ಧ್ವಂಸಕಾರಿ ಸುರಪಕ್ಷಪಾತಿ ಕಾಮಾರಿ ದುಃಖಹರ 1ಘೋರಪಾಪ ಸಂದೋಹನಾಶನಭೂರಿ ದಯಾಳೋ ಭೋಗಿಭೂಷಣ 2ಈಶಗಿರೀಶ ಧನೇಶ್ವರ 'ುತ್ರಕಾಶೀಶ್ವರ ಸುರಸನ್ನುತಿ ಪಾತ್ರ 3ವಾಸವಾದಿನುತ ದುಷ್ಟಭಯಂಕರವೇಷ ಜಟಾಧರ ಚಂದ್ರಶೇಖರ 4ಕಲಭಪ್ರೌಢ ಮಹಾನಾಟ್ಯೇಶ್ವರಆ'ಮುಕ್ತೇಶ್ವರ ಪ್ರಮಥ ಗಣೇಶ್ವರ 5ಕಾಳಿಂದೀಪ್ರಿಯ ಕಮಲನಯನಸಖಕಾಲಕಾಲ ಕಾಲಾಗ್ನಿ ಪಂಚಮುಖ 6ನೀಲಕಂಠ ನಿಖಿಲಾಮರ ರಕ್ಷಕಫಾಲಚಂದ್ರ ಸಂಸೃತಿ 'ಷಭಕ್ಷಕ 7ಶಾಂತಮೂರ್ತಿವರಕಾಂತಿ ಗುಣಪ್ರಿಯಶಾಂತಿದಾಯಕಾ ಶಾಂತ ಸಂಶಯ 8ಕುಂಭಜಾತ ನುತನಟನ'ಲಾಸಶಂಭು ಹರ ಚಿದಾಕಾಸ ನಿವಾಸ 9
--------------
ಹೊಸಕೆರೆ ಚಿದಂಬರಯ್ಯನವರು
ಗುಣವಂತರ ಗುಣವ ಗುಣವಂತನರಿವನುಗುಣಹೀನ ಗುಣವಂತನ ಗುಣವೇನ ಬಲ್ಲನೋ ಪ ಕಮಲಗಳ ಹೃದಯ ಭ್ರಮರಕ್ಕೆ ತಿಳಿಯುವುದುಕಮಲಗಳ ಗುಣ ಕಪ್ಪೆಗೇನು ತಿಳಿವುದೋವಿಮಲರಾ ಹೃದಯ ವ್ಯುತ್ಪನ್ನರಿಗೆ ಹೊಳೆಯುವುದುಕುಮತಿಗಳಿಗೆ ಕೋಮಲರ ಘನತೆಯೆಂತರಿವುದೋ 1 ಕೆಚ್ಚಲೊಳಿರುತಿಹುದು ಕರುವಿಗೆ ದೊರಕುವುದುಕೆಚ್ಚಲ ಕಚ್ಚಿರುವ ಉಣ್ಣೆಗದು ದೊರೆವುದೋಸಚ್ಚರಿತ್ರರ ಬೋಧೆ ಸತ್ಪುರುಷಗಂಟುವುದುಹುಚ್ಚ ತಾ ಬದಿಯಿದ್ದರೆ ಪರಿಣಾಮವೇನಹುದೋ 2 ಸಾಧುಗಳ ಮಹಿಮೆಯ ಸಾಧುಗಳ ಹೃದಯವುಸಾಧುಗಳ ಬೋಧೆಯ ಸಾಧು ಸಹವಾಸಬೋಧ ಚಿದಾನಂದ ಬಗಳೆಯಾದವರಿಗರಿವುವಾದಿಯಾಗಿಹ ಮೂರ್ಖರಿಗೆ ಗುಣವೇನು ತಿಳಿಯುವುದೋ 3
--------------
ಚಿದಾನಂದ ಅವಧೂತರು
ಗುರು ಜಗದೀಶ ವಿಠಲ | ಪೊರೆಯ ಬೇಕಿವನ ಪ ಮರುತಾಂತರಾತ್ಮ ಹರಿ | ಪ್ರಾರ್ಥಿಸುವೆ ನಿನಗೇ ಅ.ಪ. ಕಾಕು ಸಂಗವ ಕೊಡದೆ ಮಾಕಳತ್ರನೆ ಕಾಯೊ | ಜೋಕೆಯಿಂದಿವನವಾಕು ಮನ್ನಿಸಿ ಎನ್ನ | ಬೇಕಾದಭೀಷ್ಟಗಳತೋಕನಿಗೆ ಕೊಡು ನೀನೆ |ಶ್ರೀಕರಾರ್ಚಿತನೇ 1 ಶರ್ವಾದಿ ದಿವಿಜೇಡ್ಯ | ಪರ್ವಕಾಲದಿ ಬಪ್ಪಸರ್ವ ವಿಘ್ನಗಳ್ಹರಿಸಿ | ಪೊರೆಯೊ ಇವನದುರ್ವಿಭಾವ್ಯನೆ ಹರಿಯೆ | ದರ್ವಿಜೀವಿಯ ಕಾದಸರ್ವ ಭಾರವು ನಿನದೊ | ಸರ್ವಾಂತರಾತ್ಮ 2 ಸಾರ ಅಂಕಿತವಿತ್ತುಧೀರ ನೀ ಪೊರೆಯೆಂದು | ಪ್ರಾಥಿಸಿಹೆ ಹರಿಯೇ 3 ಕೃಷ್ಣೆಗಕ್ಷಯ ವಸನ | ಕೊಟ್ಟು ರಕ್ಷಿಸಿದಂಥಕೃಷ್ಣ ಮೂರುತಿ ಇವನ | ಸುಷ್ಠುಷ್ಟು ಪಾಲಿಪುದೋಶ್ರೇಷ್ಠ ಹರಿ ಗುರು ಭಕ್ತಿ | ಮತ್ತೆ ತರತಮ ಜ್ಞಾನಕೊಟ್ಟು ಕಾಪಾಡೊ ಹರಿ | ವಿಷ್ಠರಶ್ರವನೇ 4 ಜಲಧಿ | ನಾನೆ ಎಂದೆನಿಪ ತವಭವ್ಯ ನಾಮಾಮೃತವ | ಸಾರ್ವಕಾಲದಲೀತಾವಕಗೆ ಉಣಿಸುತ್ತ | ಭಾವದಲಿ ಮೈದೋರೊಗೋವಿದಾಂಪತಿಯೆ ಗುರು | ಗೋವಿಂದ ವಿಠಲ5
--------------
ಗುರುಗೋವಿಂದವಿಠಲರು
ಗುರು ವಾದಿರಾಜ ಯತಿಯಾ ನೆನಸುವದು ನಿರುತ ಕರುಣಿಪ ಮತಿಯಾ ಪ ಆರ್ತನಾ ಸರಿದಾರು ನವನ ವರ್ತಮಾನವನೆ ಕೇಳಿ ಕರ್ತೃತ್ವ ಪರಿಹರಿಸಿ ಸಂಸೃತಿಯ ಗರ್ತದಿಂದೆತ್ತಿ ನೋಳ್ಪ 1 ದುರಿತ ರಾಶಿಗಳ ಶೀಳಿ ಹೊರದೆಗೆದು ಮರುತ ಶಾಸ್ತ್ರವನೆ ಪೇಳಿ ಪರಮಾರ್ಥ ಮಾರ್ಗವಾ ತೋರಿ ಸುಖಬಡಿಸಿ ಧರಿಯೊಳಗೆ ಮೆರೆದೆ ಧೀರ 2 ವಂದಿಸಿ ಸೌಂದರ್ಯಪುರಿಯ ವಾಸ ವರಪ್ರದ ನಂದ ಸತ್ಕೀರ್ತಿ ಭೂಪ ವಂದಿಸಿದವರಿಗೆ ಲೇಸಾಗಿ ಕೊಡುವ ಮು ಕುಂದನಂಘ್ರಿಯ ದಾಸ 3 ತೀರ್ಥಯಾತ್ರೆಯನೆ ಮಾಡಿ ಹರಿ ಭೇದಾರ್ಥದಿಂದಲೆ ಕೊಂಡಾಡಿ ಅರ್ಥಾಸೆಗಳ ಈಡಾಡಿ ಹಯಮೊಗನ ಅರ್ಥಿಯಿಂದಲಿ ಪೂಜಿಪ4 ತ್ರಿಜಗದೊಳಗಿನವರಿಗೆ ಎಣೆಗಾಣೆ ಕುಜನ ಮತ ಸೋಲಿಸುವಲ್ಲಿ ವಿಜಯವಿಠ್ಠಲನೆ ದೈವವೆಂದು ಧ್ವಜವೆತ್ತಿ ತಿರುಗಿದ ಮುನಿಪ 5
--------------
ವಿಜಯದಾಸ