ಒಟ್ಟು 265 ಕಡೆಗಳಲ್ಲಿ , 52 ದಾಸರು , 205 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾತರವನೆಂದುಸುರಲಿ - ಜಗನ್ನಾಥ ಮಾಡಿದ ಒಂದು ನರರೂಪವಯ್ಯ ಪ ಮುಟ್ಟು ಹುಟ್ಟಿನೊಳು ನೆಟ್ಟನೆ ನಾ ಬಂದೆತೊಟ್ಟಿದ್ದೆನಾಗ ತೊಗಲಬಕ್ಕಣಇಷ್ಟರೊಳಗೆ ಒಂದು ವಿವರವರಿಯದಂಥಭ್ರಷ್ಟಗೆ ನನಗಿನ್ಯಾತರ ಕುಲವಯ್ಯ 1 ಸೂತಕ ದುರ್ಗಂಧದ ಮಲಮೂತ್ರನಿಂದ ಠಾವಲಿ ತನ್ನ ನಿಜವರಿಯದೆಬಂದದ್ದು ಬಚ್ಚಲ ಗುಣಿ ತಿಂದದ್ದು ಮೊಲೆ ಮಾಂಸ - ಇಂಥಅಂಧಕಗೆ ನನಗಿನ್ಯಾತರ ಕುಲವಯ್ಯ 2 ಒಂಬತ್ತು ಎಜ್ಜದೊಳೊಸರುವ ಹೊಲಸದುತುಂಬಿ ತುಳುಕುವ ಕೊಡವಾಗಿರಲುಇಂಬಿಲ್ಲದೆ ಹೊಲೆಗೊಂಡ ಠಾವಿನಲಿ ಬಂದಂಥಡಂಬಕ ನನಗಿನ್ಯಾತರ ಕುಲವಯ್ಯ3 ಕರುಳು ಖಂಡ ನಾರುವ ಚರ್ಮರೋಹಿತನರಪಂಜರದೀ ಹುರುಳಿಲ್ಲದನರದೇಹ ಹೊತ್ತು ತಿರುಗುವಂಥತಿರುಕ ನನಗಿನ್ಯಾತರ ಕುಲವಯ್ಯ 4 ಹಚ್ಚಡದ ಮೇಲೆ ಲಚ್ಚಿಕೆಯಿಟ್ಟಂತೆಹೆಚ್ಚು ಕಡಮೆ ಎಂದು ಹೆಣಗಾಡುತನಿಚ್ಚ ಕಾಗಿನೆಲೆಯಾದಿಕೇಶವನಹುಚ್ಚಗೆ ನನಗಿನ್ಯಾತರ ಕುಲವಯ್ಯ 5
--------------
ಕನಕದಾಸ
ಯಾರು ಬಂದರೊನಮ್ಮ ದ್ವಾರಕೆಯೊಳಗಿಂದುಭೋರೆಂಬೊ ಕಾಳಿ ಹಿಡಿಸುತ ರಮಣಿ ಪ. ಮುತ್ತಿನ ತುರಾಯಿಯವರು ಹತ್ತಿವಾಜಿಮ್ಯಾಲೆ ಚಿತ್ತ ಚಲಿಸದಲೆ ಬರತಾರೆಚಿತ್ತ ಚಲಿಸದಲೆ ಬರತಾರೆರುಕ್ಮಿಣಿ ಅಚ್ಯುತನ ನೋಡೊ ಭರದಿಂದ ರಮಣಿ1 ರಥಿಕಾ ರಥಿಕರು ತಮ್ಮ ರಥವ ಮುಂದಕ್ಕೆ ಹಾಕಿ ಅತಿ ವೇಗದಿಂದ ಬರುತಾರೆ ರಮಣಿಅತಿ ವೇಗದಿಂದ ಬರುತಾರೆ ದೇವಕಿಯಸುತ ನಂಘ್ರ್ರಿನೋಡೊ ಭರದಿಂದ ರಮಣಿ2 ನಲ್ಲೆಯರು ಮುತ್ತಿನ ಪಲ್ಲಕ್ಕಿ ಮಂದಕೆ ಹಾಕಿನಿಲ್ಲದಲೆ ಬೇಗ ಬರತಾರೆನಿಲ್ಲದಲೆ ಬೇಗ ಬರತಾರೆ ಲಕ್ಷ್ಮ್ಮಿವಲ್ಲಭನ ನೋಡೊ ಭರದಿಂದ 3 ತೇರಿನ ಬೀದಿಲೆ ಭೋರೆಂಬೊ ರಭಸಿಗೆಊರಜನವೆಲ್ಲ ಬೆರಗಾಗಿಊರಜನವೆಲ್ಲ ಬೆರಗಾಗಿಉಪ್ಪರಗಿ ಏರಿ ನೋಡುವವರು ಕಡೆಯಿಲ್ಲ4 ಬೀಡುಬಿಟ್ಟಿದ್ದ ಬೈಲು ಗಾಡಿ ಏರಿದವರು ಓಡಿಸಿ ಬೇಗ ಬರತಾರೆಓಡಿಸಿ ಬೇಗ ಬರತಾರೆಹರಿಪಾದ ನೋಡಬೇಕೆಂಬ ಭರದಿಂದ5 ಮದ್ದು ಬಾಣಬಿರಸು ರಥಿಣಿರಭಸಿಗೆ ಎದ್ದು ಜನೆರೆಲ್ಲ ಬೆರಗಾಗಿಎದ್ದು ಜನೆರೆಲ್ಲ ಬೆರಗಾಗಿ ಮುಯ್ಯದ ಸುದ್ದಿ ಕೇಳುವರು ಹರುಷದಿ 6 ಮಿತ್ರಿ ತಿಲೋತ್ತಮಾ ಮತ್ತೆಮೇನಕೆಯರುಥೈ ಥೈ ಎಂದು ಕುಣಿಯುತಥೈ ಥೈ ಎಂದು ಕುಣಿಯುತ ಬರುವಾಗಹತ್ತು ದಿಕ್ಕುಗಳು ಬೆಳಗೋವೆ7 ರಂಭೆ ಊರ್ವಸಿಯರು ಸಂಭ್ರಮದಿ ಕುಣಿಯಲುತುಂಬಿತು ನಾದ ಧರೆಯೊಳುತುಂಬಿತು ನಾದ ಧರೆಯೊಳುರುಕ್ಮಿಣಿ ಬಂದವರಾರೆಂದು ಬೆರಗಾಗಿ ರಮಣಿ8 ವಜ್ರ ಹಚ್ಚಿದ ಮನೆಗಳುಜತ್ತು ದೀವಿಗೆಯ ಸೊಬಗಿನ ಜತ್ತು ದೀವಿಗೆಯ ಸೊಬಗಿನ ಮನೆಯೊಳುಮಿತ್ರೆಯರು ನೋಡಿ ಬೆರಗಾಗಿ 9 ಕುಂದಣ ರಚಿಸಿದ ಅಂದಣವನೇರಿಕೊಂಡುಸಂದಣಿಸಿ ಬೇಗ ಬರುತಾರೆಸಂದಣಿಸಿ ಬೇಗ ಬರುತಾರೆ ನಮ್ಮ ಮುಕುಂದನ ಮನೆ ಎದುರಿಗೆ 10 ಧೀರ ಧೀರರು ತಮ್ಮ ತೇರು ವಾಜಿಯ ಇಳಿದುವೀರ ರಾಮೇಶನ ಮನೆ ಮುಂದೆವೀರ ರಾಮೇಶನ ಮನೆ ಮುಂದೆ ಹೇಳಲಿನಾರಿ ಒಬ್ಬಳನ ಕಳುಹೆಂದ ರಮಣಿ 11
--------------
ಗಲಗಲಿಅವ್ವನವರು
ರಂಗ ಬಾರನ್ಹ್ಯಾಗೆ ಮಾಡಲಂಬುಜಾಕ್ಷಿಯೆ ರಂಗ ಬಾರನ್ಹ್ಯಾಗೆ ಮಾಡಲೆ ಪ ತಾಪ ಹೋಗದು ಶೀತ ಕಳೆವೊ ಸೂರ್ಯನಂತೆ ದ್ವಾರಾವತಿಯ ನಿಲಯನಮ್ಮ 1 ಅಕ್ಕ ರುಕ್ಮಿಣಿಯಲ್ಲಿ ನಕ್ಷತ್ರಮಧ್ಯಚಂದ್ರನಂತೆ ಪೊಕ್ಕಳಿಂದಲಜನ ಪಡೆದ ಚಕ್ರಧಾರಿ ಅಕ್ಕರ ಪಡುವೊ 2 ಕರೆದುತಾಹೋರೊಬ್ಬರಿಲ್ಲ ಕರುಣಾನಿಧಿಯೆಂಬುವುದು ಸಲ್ಲ ತರುಣಿ ಸತ್ಯಭಾಮೆಗಧಿಕ ತಿಳಿದು ತನ್ನ ರುಕ್ಮಿಣಿಯಲ್ಲಿರುವ 3 ಉಂಗುರದ ಹರಳಿನಂತೆ ಹೊಂದಿಕೊಂಡು ರುಕ್ಮಿಣಿಯನ್ನು ಇಂದಿರೇಶ ಬಿಟ್ಟಿನ್ನೊಬ್ಬರ ಮಂದಿರಕ್ಕೆ ಬಂದಿಹನ್ಹ್ಯಾಗೆ 4 ಮಂದಮತಿಯು ಆದನೇನೆ ತಂದೆಯಾದ ಸತ್ರಾಜಿತನು ತಂದುಕೊಟ್ಟನೆನ್ನ ಈ ಸುಂದರಳಾದ ಸೌ(ಸವ?) ತಿ ಕೆಳಗೆ 5 ಅಕ್ರೂರಜಮಿಳಂಬರೀಷ ಚಿಕ್ಕಧ್ರುವ ಪ್ರಹ್ಲಾದ ಗಜನು ಭಕ್ತಿಯಿಂದ ಕರೆಯೆ ಕಣ್ಣೆತ್ತಿ ನೋಡನವರನೀಕಾಲಕ್ಕೆ 6 ಗಾಯನದಿ ಗಂಧರ್ವ ಬಂದು ನಾರದ ಸುದಾಮ ಬಂದು ಬೇಡಿಕೊಂಡು ಕರೆಯಲವರ ನೋಡಿ ಮುಂದಕೆ ಬರುವನಲ್ಲ 7 ಸೋಳ ಸಾವಿರ ಸತಿಯರೆಲ್ಲ ಭಾಳ ಚಿತ್ರಭೂಷಿತರಾಗಿ ಏಳು ಕೃಷ್ಣೇಳೆಂದು ನಾಲ್ಕು ತೋಳು ಪಿಡಿದು ಕರೆವೋಣೇನೆ 8 ನೀಲ ಜಾಂಬವಂತಿ ಹಚ್ಚಿದ್ಹಗಲು ಬತ್ತಿಯಂತೆ ಸುತ್ತುಗಟ್ಟಿ ಕರೆವೋಣೇನೇ 9 ಪುತ್ಥಳ್ಯಂತ ರುಕ್ಮಿಣಿ ತೊಡೆಯಲಿಟ್ಟು ಕುಳಿತನಿಂದಿರೇಶ ಬಿಟ್ಟರಾಕೆ ನಮ್ಮನು ಕಣ್ಣೆತ್ತಿ ನೋಡೋದಷ್ಟೆ ಹೊರತು 10 ಗೊಲ್ಲ ಸತಿಯರೆಲ್ಲ ತಮ್ಮಲ್ಲಿ ದಧಿಬೆಣ್ಣೆಗಳ ತಂದು ಮೆಲ್ಲು ಕೃಷ್ಣಯೆಂದು ಕರೆಯೆ ಫುಲ್ಲನೇತ್ರ ತೆಗೆದುಕೊಂಡ11 ಕುಬ್ಜೆ ಕರದಿ ಗಂಧ ಹಚ್ಚೇನೆಂದು ಕರೆಯೆ ಬೆನ್ಹತ್ತಿ ಬರುವನೇನೆ ಕೃಷ್ಣ 12 ಸಾಸಿರ್ಹೆಡೆಯ ಮಂಚವಿಳಿದು ಸರಸವಾದ ವಚನದಿಂದ ಭೀಷ್ಮೆ ಭಿಡಿಯವೇನೆ ಭೀಮೇಶಕೃಷ್ಣನ ಕರೆವೋದಕ್ಕೆ13
--------------
ಹರಪನಹಳ್ಳಿಭೀಮವ್ವ
ರಂಗಾ ಮನೆಗೆ ಬಾರೋ ಕೃಪಾಂಗ ಶ್ರೀರಂಗ ಪ ರಂಗ ಕಲುಷವಿಭಂಗ ಗರುಡ ತು-ರಂಗ ನವಮೋಹನಾಂಗ ಶ್ರೀರಂಗ ಅ.ಪ ಪಚ್ಚೆ ಬಾವುಲಿಗಳನು ನಿನ್ನ ಕಿವಿಯೊಳಗಿಟ್ಟುಮೆಚ್ಚಿ ಮುದ್ದಾಡುವನು ಹೆಚ್ಚಿದ ವಾಲಿಯನು ಬಾಣದಿ ಚುಚ್ಚಿದ ಸಪ್ತತಾಳಂಗಳನು ಬಿಚ್ಚಿದ ಸಮುದ್ರವ ಸುತ್ತ ಮುಚ್ಚಿದಎಚ್ಚರಿಕೆಯಲಿ ಲಂಕೆಯನು ಪೊಕ್ಕುಕಿಚ್ಚುಗಳ ಹಚ್ಚಿಸಿದ ಹನುಮನ ಮೆಚ್ಚಿದ ಖರದೂಷಣರ ಶಿರಗಳಕೊಚ್ಚಿದ ಅಚ್ಯುತಾನಂತ1 ಮುತ್ತಿನ ಹಾರವನು ಕಂಠದೊಳಿಟ್ಟುಎತ್ತಿ ಮುದ್ದಾಡುವೆನುಹತ್ತಿದ ರಥವನು ಮುಂದೊತ್ತಿದಕೌರವರ ಸೇನೆಗೆ ಮುತ್ತಿದಉಭಯರಿಗೆ ಜಗಳವ ಬಿತ್ತಿದ ಮತ್ತ ಮಾತಂಗಗಳನೆಲ್ಲಒತ್ತರಿಸಿ ಮುಂದೊತ್ತಿ ನಡೆಯುತಇತ್ತರದಿ ನಿಂತ ವರ ರಥಿಕರಕತ್ತರಿಸಿ ಕಾಳಗವ ಮಾಡಿದ 2 ಉಂಗುರಗಳನು ನಿನ್ನ ಅಂಗುಳಿಗಿಟ್ಟುಕಂಗಳಿಂದಲಿ ನೋಡುವೆಹೆಂಗಳ ಉತ್ತುಂಗದ ಕುಚಂಗಳಆಲಂಗಿಸಿದ ಭುಜಂಗಳಕಮಲಸಮ ಪಾದಂಗಳಹಿಂಗದೆ ಸ್ಮರಿಸಿದ ಮಾತಂಗನಭಂಗವ ಪರಿಹರಿಸಿ ಬ್ಯಾಗದಿಮಂಗಳ ಸ್ವರ್ಗವನಿತ್ತ ಉ-ತ್ತುಂಗ ವಿಕ್ರಮ ರಂಗವಿಠಲನೆ 3
--------------
ಶ್ರೀಪಾದರಾಜರು
ರತುನ ಸಿಕ್ಕಿದೆ ತಮ್ಮ ಇದು ಬಹು ಜತನೆಲೋ ನಿಸ್ಸೀಮ ರತುನ ಸಿಕ್ಕಿದೆ ಪ ನಿನ್ನ ಸುಕೃತದ ಫಲದಿಂದ ಪತಿತಪಾವನ ಸಿರಿಪತಿ ವಿಮಲನಾಮ ಅ.ಪ ದುರಿತ ದಾರಿದ್ರ್ಯವಿಲ್ಲದ ಈ ರತ್ನದಿಂ ಜರಮರಣಂಟಿಲ್ಲ ನರಹರಿ ವರಪಾದ ಶರಣರು ಪರಕ್ಕೆ ಪರಮ ಗೌಪ್ಯದಿಂದ ಶೋಧಿಸುತಿರುವಂಥ 1 ತಾಪತ್ರಯಗಳಿಲ್ಲ ಈ ರತ್ನದಿಂ ಪಾಪ ಶಾಪವಿಲ್ಲ ಪಾಪಿಯಮದೂತರ ಲೋಪಗೈದಯ ಭಯ ಆಪಾರ ಪರಲೋಕ ಸೋಪಾನಕ್ಹಚ್ಚುವ2 ಧರ್ಮಕೆ ಕೊಡು ನದರ ಈ ರತ್ನದ ಮರ್ಮ ತಿಳಿಯೆ ಚದರ ಬ್ರಹ್ಮ ಬ್ರಹ್ಮಾದಿಗಳೊಮ್ಮನದ್ಹೊಗಳುತ ನಿರ್ಮಲಾಗುವ ಪರಬ್ರಹ್ಮ ಶ್ರೀರಾಮನೆಂಬ 3
--------------
ರಾಮದಾಸರು
ರಥವೇರಿ ಬರುತಿಹ ಗುರುರಾಯ ನಾ ನೋಡಮ್ಮಯ್ಯ ಪ ಅತಿಸದ್ಭಕುತಿಲಿ ಸ್ತುತಿಸುವರಿಗೆ ಸತ್ಪಥವನೆ ತೋರುವ ಕ್ಷಿತಿಪತಿದಾಸರೆ ಅ.ಪ ತಿದ್ದಿಹಚ್ಚಿದ ನಾಮ ಮುದ್ರೆಗಳಿಂದಲೋಪ್ಪುತಿಹರೇ ನೋಡಮ್ಮಯ್ಯ | ಕ್ಷುದ್ರರ ಮುಖಕೆ ಬೀಗ ಮುದ್ರೆಯ ನೊತ್ತುತ ಸದ್ವೈಷ್ಣವರ ನುದ್ಧರಿಸಿದ ಕರುಣೀ 1 ವರಶ್ರುತಿ ಸಮ್ಮತರಥ ನಿರ್ಮಿತವಾಗಿಹುದೇ ನೋಡಮ್ಮಯ್ಯ || ಸ್ಮರಪುರಹರ ಸಾರಧಿಯಾಗಿಹರೆಂದರಿತವರಿಗೆ ಶುಭಗರೆವ ದಯಾನಿಧೇ 2 ಶಾಮಸುಂದರನ ನಾಮಸುಧಾರಸವ ನೋಡಮ್ಮಯ್ಯ ಶ್ರೀಮಾನ್ ಮಾನವಿ ಕ್ಷೇತ್ರವೆ ತವನಿಜ ಧಾಮವೆಂದೆನಿಸಿ ಸುಸ್ತಂಭದೊಳಿಹರೇ 3
--------------
ಶಾಮಸುಂದರ ವಿಠಲ
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ಲಕ್ಷ್ಮಿ ರಮಣಗೆ ಮಾಡಿದಳು ಉರುಟಾಣಿÉ ಪ. ಇಳೆಯೊಳಗತಿಜಾಣೆ ಸುಂದರ ಫಣಿವೇಣಿ ಅ.ಪ. ಕಚ್ಛಪ ಕಿರನೆ ಕೇಸರಿಯಂದದ ಮುಖನೆ ಸ್ವಚ್ಛಮುಖವ ತೋರೈ ಅರಿಸಿನ ಹಚ್ಚುವೆನು 1 ದುರುಳ ಕ್ಷತ್ರಿಯರನ್ನು ಕೊರಳ ತರಿದ ಹರಿಯೆ ಹರುಷದಿಂ ಕೊರಳ ತೋರೈ ಗಂಧವ ಹಚ್ಚುವೆನು 2 ದಶರಥsÀನಲಿ ಜನಿಸಿ ದಶಮುಖನ ಸಂಹರಿಸಿ ಕುಸುಮ ಮುಡಿಸುವೆನು 3 ಹರಿನಾರು ಸಾಸಿರ ಸುದತಿಯರನಾಳಿದನೆ ಪದುಮಕರವ ತೋರೈ ವೀಳ್ಯವ ಕೊಡುವೆನು 4 ವಸನರಹಿತನಾಗಿ ವಸುಧೆಯ ತಿರುಗಿದೆ ಬಿಸಜನಾಭನೆ ನಿನಗೆ [ವಸನ ಉಡಿಸುವೆನು] 5 ವರ ತುರಗವನೇರಿ ಕಲಿಯ ಸಂಹರಿಸುವಿ ಸಿರಿಹಯವದನನೆ ಆರತಿಯೆತ್ತುವೆನು 6
--------------
ವಾದಿರಾಜ
ವರಗಿರಿವಾಸನ ಅರಮನೆ ಸೊಬಗನೆ ದೊರೆಗಳು ನೋಡಿ ಶಿರಗಳ ತೂಗುತ ಬೆರಗಾಗಿಪ. ಛÀತ್ರ ಚಾಮರ ರಾಜ ಪುತ್ರರು ಚಂದಾಗಿಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತಬ್ಯಾಗ ಹೊಕ್ಕರು ಚಿತ್ತಜನೈಯ್ಯನÀ ಅರಮನೆಯೊಳಗೆ 1 ತಾರಾಪತಿಗಳಂತೆ ತೋರುತಲೈವರುಥೋರ ಮುತ್ತುಗಳ ಅಲವೂತಥೋರ ಮುತ್ತುಗಳ ಅಲವೂತ ಹೊಕ್ಕರುವೀರಕೃಷ್ಣಯ್ಯನ ಅರಮನೆ ಬ್ಯಾಗ2 ಪಚ್ಚದ ಪಾವಟಿಗೆ ರತ್ನ ಹಚ್ಚಿದ ಚೌಕಟ್ಟುಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತ ಹೊಕ್ಕರುಚಿತ್ತಜನಯ್ಯನ ಅರಮನೆ ಬ್ಯಾಗ 3 ಪಕ್ಷಿ ವಾಹನನರಮನೆ ದಕ್ಷಿಣ ದ್ವಾರದಿಲಕ್ಷಣವುಳ್ಳ ವನಿತೆಯರುಲಕ್ಷಣವುಳ್ಳ ವನಿತೆಯರು ತೆರೆದ ಬಾಗಿಲೊಳು ನಕ್ಷತ್ರದಂತೆ ಹೊಳೆಯುತ4 ಎಡಬಲ ಶ್ರೀತುಳಸಿಗಿಡಗಳು ಅಲವುತ ಕಡಲಶಯನನ ಅರಮನೆ ಒಳಹೊಂದಿಕಡಲಶಯನನ ಅರಮನೆ ಒಳಗಿನ್ನುನಾರಿಯರು ನೆರೆದರು 5 ಗಂಧದ ಥಳಿ ಕೊಟ್ಟು ಚಂದುಳ್ಳ ಅಂಗಳಕಹಂದರಗಳ್ಹಾಕಿದ ಇಂದಿರೇಶನರಮನೆಇಂದಿರೇಶನ ಅರಮನೆಯೊಳಗೆಬಂದುನಾರಿಯರು ನೆರೆದರು 6 ಚಂದ್ರನಂತೊಪ್ಪುತ ಚಂದಾಗಿನಿಂತತಂದೆ ರಾಮೇಶನ ಅರಮನೆ ತಂದೆ ರಾಮೇಶನ ಅರಮನೆ ವೃಂದಾವನಕೆಹೊಂದಿ ನಾರಿಯರುನೆರೆದರು ಬೆರಗಾಗಿ 7
--------------
ಗಲಗಲಿಅವ್ವನವರು
ಶರಣಾರ್ಥಿ ಶಿವಶರಣಾರ್ಥಿ | ಹರಿಹರ ಎಂದು ಶಿವಪದ ಕಂಡವಗೆ ಪ ಗುರುವಿಗೆರಗೆ ನಿಜ ಗುರುತಕೆ ಬಂದಿನ್ನು | ಧರೆಯೊಳು ಪುಣ್ಯ ಜಂಗಮನೆ ವಾಸಿ | ಅರಹುಮರಹು ಮೀರಿ ಸಹಜಾವಸ್ಥಿಗೆ | ಬೆರದಿಹ ಶರಣಗೆ 1 ಎದೆಸೆಜ್ಜೆಯೊಳಗಿಹ ಘನಲಿಂಗ ಪೂಜಿಸಿ | ಮುದದಿಂದ ಭಕ್ತಿಯ ಪಾವುಡದೀ | ಸದ್ಭಾವ ಸೂತ್ರದಿ ಆವಗುಧರಿಸಿಹ | ವಿದಿತ ಲಿಂಗಾಂಗಿಗೆ 2 ಆಶೆಯಸುಟ್ಟು ವಿಭೂತಿಯ ಹಚ್ಚಿದ | ಧ್ಯಾಸದಂಡ ಕೈಲಿ ಪಿಡಿದು | ಲೇಸಾದ ಸುಗುಣ ರುದ್ರಾಕ್ಷಿಯ ತೊಟ್ಟು | ಭಾಸಿಪ ಸಂತಗೆ 3 ಶಾಂತಿಯ ತೊಡರವ ಕಟ್ಟಿ ವಿವೇಕದ | ಮುಂತಾದ ಕಾಷಾಯ ಪೊದ್ದಿಹನಾ | ಸಂತತ ಗುರುಧರ್ಮ ಭಿಕ್ಷೆಯನುಂಡು | ವಿಶ್ರಾಂತಿಯ ಮಠ ಹಿಡಿದ ವಿರಕ್ತಗೆ 4 ಶರಣನೆನುತಾ ಅನ್ಯರ ಶರಣರ ಮಾಡೀ | ಶರಣ ತಾನೆಂಬ ವೃತ್ತಿಯನುಳಿದು | ದ್ಧರಿಸಿದ ಮೂರ್ತಿಗೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೌರಿ ಸುರಸೇವ್ಯ ಸುಜನಾತ್ಮ ಸತ್ಯ ಆನಂದ ತವಸೇವೆ ನೀಡೆನಗೆ ಪ ಕೊಡು ಎನ್ನ ಕರ್ಣಕ್ಕೆ ದೃಢಮಾಡು ವಚಶ್ರವಣ ಬಿಡದೆನ್ನ ನಯನಕ್ಕೆ ಇಡು ನಿನ್ನ ದರ್ಶನವ ನುಡಿಸೆನ್ನ ವದನದಿಂ ಕಡು ಸತ್ಯವಚನವನು ಎಡಬಿಡದೆ ಜಿಹ್ವೆಕ್ಕೆ ನೀಡು ತವಧ್ಯಾನ 1 ಒದಗಿಸೈ ಕೈಗೆ ತವಪಾದಪದುಮ ಸೇವಾ ಹೃದಯಕ್ಕೆ ಕರುಣಿಸು ಸದಮಲ ಸುಶಾಂತಿ ಸದಯಾತ್ರ ನೀಡೆನ್ನ ಪಾದಕ್ಕೆ ಪುಣ್ಯಸ್ಥಳ ವಿಧವಿಧದಿ ಬೇಡ್ವೆ ನೀನು ದಯನಾಗೆನ್ನೊಳಗೆ 2 ಚಿತ್ತಕ್ಕೆ ಸ್ಥಿರನೀಡು ಸ್ವಸ್ಥತೆ ಕೊಡು ಮನಕೆ ಸತ್ಯರಿಗೆ ಮಣಿಸೆನ್ನ ಮಸ್ತಕವ ಸತತ ನಿತ್ಯ ಪರಿಪೂರ್ಣ ಮಮ ಕರ್ತ ಶ್ರೀರಾಮ ನಿನ್ನ ಭಕ್ತನೆಂದೆನಿಸೆನ್ನ ಮುಕ್ತಿ ಪಥಕ್ಹಚ್ಚು 3
--------------
ರಾಮದಾಸರು
ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ ಜಗದಾದಿ ಮೂಲಗುರು ಅಗುರು ಶ್ರೀ ಹಂಸ ವಾಗೀಶ ಸನಕಾದಿ ದೂರ್ವಾಸಾದಿಗಳ ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2 ಕರ ಅಬ್ಜಜರು ಪದ್ಮನಾಭನೃಹರಿ ಮಾಧವಾಕ್ಷೋಭ್ಯ ಈ ಮಹಾಗುರುಗಳು ಸರ್ವರಿಗು ಆನಮಿಪೆ ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3 ಸಾಧು ವೈದಿಕ ವೇದಾಂತ ಸತ್ತತ್ವ ಮತ ಮಧ್ವ ಮತವೇ ಅನ್ಯ ಯಾವುವೂ ಅಲ್ಲ ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4 ಸೂರಿವರ ಶೋಭನ ಭಟ್ಟಾದಿಗಳಂತೆ ಸಾರಾಸಾರ ವಿವೇಕಿ ಗೋವಿಂದ ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ ಎರಗಿ ಶರಣಾದರು ಮಧ್ವರಾಯರಲಿ 5 ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ ಈ ಧರೆಯಲ್ಲಿ ತೋರಿಹ ಮಧ್ವರಾಯರ ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6 ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ ಅಚಲ ಸತ್ತತ್ವನಿಶ್ಚಯ ಜ್ಞಾನಿ ಶಾಸ್ತ್ರಿಗೆ ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7 ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ ವನರುಹನಾಭರಿಂದ ನಾಲ್ಕನೇ ಸ್ಥಾನವ ಘನದಯದಿ ಇತ್ತರು ಆನಂದಮುನಿಯು 8 ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ ಮಾಧವ ತೀರ್ಥರು ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9 ಪದ್ಮನಾಭತೀರ್ಥರ ಪಾದಪದ್ಮಗಳಿಗೆ ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ ವಿದ್ಯಾಕುಶಲರು ಸೂರಿಗಳ ಚರಣಕ್ಕೆ ಸಂತೈಪರೆಮ್ಮ ಸದಾ ನಮೋ ಸರ್ವದಾ 10 ನರಹರಿತೀರ್ಥರು ಚರಣ ಸರಸೀರುಹದಿ ಶರಣಾದೆ ಕಾಯ್ವರು ಈ ಮಹಾನ್ ಇಹರು ವರಾಹ ತನಯಾ ಸರಿದ್ವರಾಕ್ಷೇತ್ರದಲಿ ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11 ಮಾಧವತೀರ್ಥರ ಪಾದಪದ್ಮಗಳಿಗೆ ಸದಾನಮೋ ನಮೋ ಎಂಬೆ ಇವರ ಪೀಳಿಗೆಯ ಯತಿಗಳೂ ಭಕ್ತಿಮಾನ್ ಜ್ಞಾನಿಗಳ ಚರಣಕ್ಕೆ ಆದರದಿ ನಮಿಸುವೆ ಸದಾ ಪೊರೆವರೆಮ್ಮ 12 ಸುಲಭರು ಸುಜನರಿಗೆ ಶರಣರ ಸಲಹುವರು ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13 ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ ಶರಣಾದ ಪುರುಷನ ಪಶ್ಚಾತ್ತಾಪ ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು ಏರಿ ಮರ ನದಿಯಲಿ ಬೀಳೆ ಹೇಳಿದರು 14 ತನ್ನಯ ಮಹಾಪಾಪ ಕಳೆಯುವ ಗುರುಗಳು ಏನು ಹೇಳಿದರೂ ಮಾಡುವೆ ತಾನೆಂದು ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ ದೀನ ರಕ್ಷಕ ಗುರು ಇಳಿಯೆ ಹೇಳಿದರು 15 ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16 ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17 ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ ಶ್ರೀಮಧ್ವಶಾಸ್ತ್ರದ ದಾಢ್ರ್ಯ ಜ್ಞಾನ ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ ಸುಮಹಾ ಉಪಾಯವ ಅರುಹಿಹರು ದಯದಿ 18 ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ ವೇದ ವಂಚಕ ದುರ್ಮತಗಳ ಖಂಡನವ ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ - ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19 ಅದ್ವೈತವಾದಿಯು ಶಾಂಕರ ಮಠಾಧೀಶ ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ ವಾದಿಸಿದರು ಮುಳುಬಾಗಿಲು ಸಮೀಪ 20 ಶ್ವೇತಕೇತು ಉದ್ದಾಲಕರ ಸಂವಾದ ತತ್ವ ಮಸಿ ವಾಕ್ಯವೇ ವಾದದ ವಿಷಯ ವೇದಾಂತ ದೇಶಿಕರು ರಾಮಾನುಜೀಯತಿಯ ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21 ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು ಸಆತ್ಮಾ ತತ್ವಮಸಿ ಎಂಬುವಂಥಾದ್ದು ಭೇದ ಬೋಧಕವೋ ಅಭೇದ ಬೋಧಕವೋ ಎಂದು ವಾದವು ಆ ಈರ್ವರಲ್ಲಿ 22 ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ ಭೇದವೇ ಬೋಧಿಸುವುದು ಆ ವಾಕ್ಯವೆಂದು ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು ಸೋತಿತು ವಿದ್ಯಾರಣ್ಯರ ಐಕ್ಯವಾದ 23 ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್ ಎಂದು ಬರೆದರು ತಮ್ಮಯ ಗ್ರಂಥದಲ್ಲಿ ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24 ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25 ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು ಎದುರಾಗಿ ನದಿಯಲ್ಲಿ ಆಚೆ ದಡದಿಂದ ಕುದುರೆ ಸವಾರನು ವರ್ಚಸ್ವಿ ಯುವಕನು ಬೆದರದೆ ಪ್ರವಾಹದಲಿ ಬರುವುದು ಕಂಡರು 26 ಕುದುರೆ ಮೇಲ್ ಆಸೀನನಾಗಿದ್ದ ಯುವಕನು ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ ಉದಕವ ಕೈಯಿಂದ ತುಂಬಿಕೊಳ್ಳದಲೇ ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27 ಮಾಧವ ಮಧ್ವರು ಮೊದಲೇ ಸೂಚಿಸಿದಂತೆ ಇಂದು ಆ ಕುರುಹರಿತು ಅಕ್ಷೋಭ್ಯರು ಇದು ಏನು ಪಶುವಂತೆ ಎಂದು ಧ್ವನಿಗೂಡಲು ಹಿಂದಿನ ಜನ್ಮ ಯುವಕಗೆ ನೆನಪು ಬಂತು 28 ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ ಸಂಸ್ಕಾರ ಪ್ರತಿಭೆಯು ಉದಯವಾಯ್ತು ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29 ನಗಾರಿಸಮ ಬಲಿಯುವಕನು ಪ್ರವಾಹದ ವೇಗ ಲೆಕ್ಕಿಸದಲೇ ದಡಕೆ ತಾ ಬಂದು ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ ಆಗಲೇ ಸಂನ್ಯಾಸ ಕೊಡಲು ಬೇಡಿದನು 30 ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ ಈತ ರಾಯರ ಸುತನಾದರೂ ವೈರಾಗ್ಯ ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31 ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ ಜಯ ಘೊಷ ಹರಡಿತು ಪರಿಮಳ ಸುಗಂಧ 32 ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ ರಮಾಪತಿ ಪೂಜಾಸತ್ತತ್ವವಾದ ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33 ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34 ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ ಹನ್ನೊಂದು ನೂರು ಅರವತ್ತೇಳ ಶಕವರುಷ ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ ಮಧ್ವ ಹೃದಯಾಬ್ಜಗನ ಪುರವ ಐದಿದರು 35 ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ ಬಂದು ಬೇಡುವವರಿಷ್ಟಾರ್ಥ ಪೂರೈಸುತ ವೃಂದಾವನದಲ್ಲಿ ಕುಳಿತಿಹರು ಕರುಣಿ 36 ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ || ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಾಘವೇಂದ್ರ ಗುರುವೇ ಪರಮ ದಯಾಳು ಪ್ರಭುವೇ ಪ ನಿರುತಾದಿ ಸೇವಿಸುವರಾ ಕಾಮಿತ ಕಲ್ಪತರುವೇಅ.ಪ ತುಂಗಾ ತೀರದೊಳ್ ಬಂದೂ ಮಂಗಾಳ ಮಹಿಮರು ನಿಂದೂ ಮಂಗಳಾ ಮೂರುತಿ ಶ್ರೀ ರಾಮಚಂದ್ರನ್ನ ಪೂಜೀಪರಿಂದೂ 1 ಕಾವೀಶಾಠಿಯನುಟ್ಟೂ ಗಂಧಾಕ್ಷತೆಗಳಿಟ್ಟೂ | ತಿರ್ದಿ ಹಚ್ಚಿರುವಾನಾಮಾ ಫಣಿಯಲ್ಲಿ ಹೊಳೆÉಯುತಾಲೀ 2 ವೀಣಾವಾದನದಿಂದಾ ಗಾನವ ಮಾಡುತಲೀ ವೇಣುಗೋಪಾಲ ಕೃಷ್ಣನ್ನ ಕುಣಿಸಿ ಕೊಂಡಾಡುತಿಹರು3 ಭಕ್ತಿಯಿಂದಲಿಸ್ತುತಿಪ ಜನರಾ ಆಪತ್ತುಗಳೆಲ್ಲವ ಕಳೆವಾ ಸಂಪತ್ತು ಸೌಭಾಗ್ಯವೀವಾ ಶರಣೇಂದವರ ಪೊರೆವಾ 4 ಸರಿಯಾರು ನಿಮಗೆ ದೇವಾ ಈ ಧರುಣಿಯೊಳರಸೆ ಕಾವಾ ದೊರಗಳ ನಾ ಕಾಣೆನಯ್ಯ ಶ್ರೀ ರಾಘವೇಂದ್ರ ಜೀಯಾ 5
--------------
ರಾಧಾಬಾಯಿ
ಶ್ರೀ ಶ್ರೀನಿವಾಸ ಕಲ್ಯಾಣ ಲಾವಣಿ ಮಾಧವ ಪ ಮುದಮೋದ ಘನ ಸುಖ ಭಕ್ತರಿಗೀಯಲು ಅ.ಪ. ದೇವ ದೇವೇಶನು ಯಾರೆಂತೆಂದು ಕೋವಿದ ಭೃಗುಮುನಿ ಹುಡುಕುತ ಬಂದು ಪಾರ್ವತಿ ಪತಿಹರ ವಿಧಿಗಳ ಜರಿದು ಧಾವಿಸಿ ಹರಿಯೆಡೆ ಬರ್ಪುದ ಕಂಡು ಭಾವಜ ಪಿತರತಿ ಸೋಗನು ಹಾಕೆ ದೇವನ ಮಾಯೆಯು ಮುಸುಕಲು ಮುನಿಗೆ ಈ ವಿಧ ಸಲ್ಲದು ಹರಿಗೆಂತೆಂದು ಪಾವನ ನೆದೆಯನು ವದ್ದನು ದುಡುಕಿ1 ಮಾಧವ ಚರಣವ ತೊಳೆದು ಹರಿಸುತ ದುಗುಡವ ಭಕ್ತನಿಗಂದು ಕರದಿಂ ದೊತ್ತುತ ಚರಣದ ಕಣ್ಣು ತರಿಯಲು ಹೆಚ್ಚಿನ ಸಾಧನೆ ಮುನಿಗೆ ಹರುಷದಿ ತೆರಳಿದ ಋಷಿವರ ತಾನು ಅರಿಯುತ ಕಾಂತನ ಮನವಂ ಸಿರಿಯು ಸರಸರ ಕೋಪವ ನಟಿಸುತ ತಾನು ಬಿರುಸಿನ ನುಡಿಗಳ ಆಡಿದಳಂದು 2 ಏನಿದು ಮುನಿ ವಿಪರೀತವು ಥರವೆ ನಾನಿಹ ಸ್ಥಳವನು ವದೆಯುವದೆಂದು ಮಾನಿನಿ ಗೌರವ ಕಾಯದೆ ಕ್ಷಮಿಸಿಹೆ ನಾನಿಹೆ ಬರಿಸತಿ ಭಕ್ತರೆ ಹೆಚ್ಚು ಕಾನನ ಸೇರುವೆ ನನಗೇಕೀ ಮನೆ ಮಾನವು ಹೊಯಿತು ಯನ್ನಲು ಸತಿಯು ಮೌನವ ಧರಿಸಲು ಗಂಡನು ನಗುತ ದೀನರ ಪೊರೆಯಲು ಬಂದಳು ಭುವಿಗೆ 3 ಗಂಡನ ಬಿಡುವಳೆ ಲಕ್ಷ್ಮೀದೇವಿ ಪುಂಡರ ಮಾತಿದು ನಂಬಿಲುಬೇಡಿ ಗಂಡನ ಮನತೆರ ನಟಿಸಿದಳಷ್ಟೆ ಗಂಡನು ಹಾಗೆಯೆ ತೊರೆಯುತ ಧಾಮ ಕುಂಡಿಲಿ ಗಿಳಿಯುತ ಅಲೆಯುತ ಹೊರಟ ಕಂಡಲ ಗಿರಿಯೆಡೆ ನಡೆತಾತಂದ ಕಂಡನು ಹುತ್ತವ ಒಂದೆಡೆ ತಾನು ಕುಂಡಲಿಗೊಡೆಯನು ನೆಲಸಿದನಲ್ಲಿ 4 ಪಾವನ ಗಿರಿಯದು ಕೇಳಿರಿ ಎಲ್ಲ ದೇವನ ಖಗಮೃಗ ಬಳ್ಳಿಗಳಾಗಿ ದೇವ ಸಮೂಹವು ಸೇವಿಪರಲ್ಲಿ ಕೋವಿದ ಋಷಿಗಳು ಧ್ಯಾನಿಪರೈಯ ಭಾವಸು ಭಕ್ತಿಲಿ ನೋಡಲು ಗಿರಿಯ ಜೀವರ ಪಾಪಗಲೆಲ್ಲಾ ನಾಶ ನೋವನು ಕಾಣರು ಹರಿಕೃಪೆ ಮುಂದೆ ದೇವನು ಇರೆ ಇದೆ ಭೂವೈಕುಂಠ 5 ಕೃತಯುಗದಲ್ಲಿದು ವೃಷಭಾಚಲವು ಗತಿಸಿದ ರಕ್ಕಸ ಹರಿಯಿಂತೆಂದು ಸುತನಂ ಪಡೆಯಲು ಅಂಜಿಲಿದೇವಿ ಅತಿ ತಪಗೈದಳು ತ್ರೇತೆಯಲೆಂದು ಉತ್ತಮ ನೆಂಬುವ ಗರ್ವವ ನೀಗಿ ಸ್ತುತಿಸಿದ ಶ್ವಾಸನ ಶೇಷನು ಎಂದು ಇತ್ತರು ಮೂರಲಿ ಶೇಷನ ನಾಮ 6 ವೆಂಕಟ ಗಿರಿಯಿದು ಕಲಿಯುಗದಲ್ಲಿ ಸಂಕಟ ನೀಗಿದ ಮಾಧವನಿಲ್ಲಿ ಸಂಕಟ ನೀಡುವ ಪಾಪಗಳನ್ನು ಶಂಕರ ಹರಿತಾ ಕಡಿಯುವನೆಂದು ವೆಂಕಟ ನೆನಿಸುತ ಮೆರೆಯುವ ನಿಲ್ಲಿ ಶಂಕೆಯ ಮಾಡದೆ ಶರಣೆಂದಲ್ಲಿ ಪಂಕಜ ನೇತ್ರನು ಪೊರೆಯುವನಿಲ್ಲಿ ಮಂಕುಗಳಾಗದೆ ಭಜಿಸಿರಿ ಬೇಗ 7 ಇಂದಿರೆ ಕೆರಳೆ ತಂದೆಯು ತೊರೆದನೆ ನಿಜ ವೈಕುಂಠ ಪೊಂದಿಹ ಹುತ್ತವ ಏನಿದು ಛಂದ ಕಂದನು ನಾನಿಹೆಎನ್ನುತ ಬೊಮ್ಮ ತಂದೆಗೆ ಕ್ಷೀರವ ಕರೆಯಲುನಿತ್ಯ ಛಂದದ ಗೋತನು ಧರಿಸುತ ಶಿವನ ಕಂದನ ಗೈಯುತ ಮಾತೆಯ ಸಹಿತ ಬಂದನು ಚೋಳನ ಅರಮನೆಯೆಡೆಗೆ 8 ಕೊಳ್ಳಲು ರಾಣಿಯು ಸೇರುತ ಗೋಷ್ಠಿ ನಲ್ಲಗೆ ಪ್ರತಿದಿನ ಕ್ಷೀರವ ಸುರಿಸೆ ಇಲ್ಲವೆ ಆಗಲು ರಾಣಿಗೆ ಹಾಲು ಗೊಲ್ಲನ ಶಿಕ್ಷಿಸಿ ಬೈಯಲು ಬಹಳ ಗೊಲ್ಲನು ಪತ್ತೆಯ ಹಚ್ಚುತ ಚರ್ಯೆ ಕೊಲ್ಲಲು ಗೋವನು ಕೊಡಲಿಯನೆತ್ತೆ ಬಲ್ಲಿದ ತಡೆಯಲು ಶಿರವನು ಒಡ್ಡೆ ನಿಲ್ಲದೆ ಗಗನದಿ ಚಿಮ್ಮಿತು ರಕ್ತ 9 ನೋಡುತ ಮಡಿಯಲು ಗೊಲ್ಲನು ಅಲ್ಲೆ ಓಡುತ ಗೋಗಣ ಹಟ್ಟಿಯ ಸೇರೆ ಜಾಡನು ಪಿಡಿಯುತ ಚೋಳನು ಬರಲು ಕೇಡಿಗ ನೃಪನೆ ಪಿಚಾಚಿಯು ಆಗೆನೆ ಬೇಡಲು ಕ್ಷಮೆಯನು ಬಹುಪರಿಹರಿಯ ನೀಡಿವಿಶಾಪವ ವೆಂಕಟ ಕರುಣಿ ಆಡಲು ತೊಡಗಿದ ಈ ವಿಧ ಮುಂದೆ 10 ಆದುದು ಆಯಿತು ಚೋಳನೆ ಕೇಳು ಭುಂಜಿಸು ಕರ್ಮ ಪದ್ಮಾವತಿ ಯೆಂಬಾಕೆಯ ಮುಂದೆ ಮೋದದಿ ಮುದುವೆಯ ನಾಗುವೆ ಆಗ ಭೂಧವ ಮಾವನು ನೀಡುತ ಮಕುಟ ಕವಿ ವಾರ ನಾಧರಿಸುವಾಗಿಲ್ಲದೆ ಬಾಧೆ ಪೊಂದುವಿ ಕಲಿಕೊನೆ ಪೂರ್ವಾವಸ್ಥೆ 11 ಪೇಳತ ಲೀಪರಿ ಚೋಳಗೆ ದೇವ ಲೀಲೆಯ ತೊರಲು ಘಾಯವ ಪಿಡಿದು ಕೇಳಲು ಔಷಧ ಗುರುವನು ಸ್ಮರಿಸಿ ಆಲಸ್ಯಗೈಯದೆ ಬಂದವ ನುಡಿಯೆ ಮೂಲಿಕೆ ಹುಡುಕುತ ಗಿರಿಯಲಿ ಅಲೆಯೆ ಶೈಲದ ಸ್ವಾಮಿ ವರಾಹನು ಸಿಗುತ ಕೇಳಲು ವೆಂಕಟ ಕಥೆ ವಿಸ್ತಾರ ಪೇಳಲು ತಬ್ಬಿದ ಕ್ರೋಡನ ಚತುರ 12 ಏನಿದು ಬಹು ವಿಪರೀತವು ಪೇಳಿ ಸತಿ ಬಿಟ್ಟಲೆಯುವುದೆಂತು ಪೂರ್ಣಾನಂದಗೆ ಗೊಲ್ಲನ ಪೆಟ್ಟೆ ಚಿನ್ಮಯ ನೆತ್ತರು ಚಿಮ್ಮುವದುಂಟೆ ಕ್ಷುಧೆ ತೃಷೆ ದೂರಗೆ ಹಾಲು ಅನ್ಯರು ವೈದ್ಯರೆ ಧನ್ವಂತ್ರೀಗೆ ಕಾಣನೆ ಔಷಧಿ ಪೂರ್ಣಪ್ರಜ್ಞ ತಾನಿರೆ ವೆಂಕಟ ತಿಳಿಯನೆ ಕ್ರೋಡ 13 ಲೀಲೆ ಇದೆಲ್ಲವು ಕೊಡುವದವಗೆ ಬೀಳಿಸಿ ಮೋಹದಿ ಕುಜನರ ತರಿವ ಪಾಲಿಪ ಸುಜನರ ಬೀರುತ ಜ್ಞಾನ ಲೀಲಾಮಯನವ ಸರಿಯೆಂತೆನ್ನಿ ಕೇಳಲು ಕ್ರೋಡನ ವಾಸಿಸೆ ಜಾಗ ಕೇಳುವರಾರೈ ನೀನಿರೆ ಯನ್ನ ಬೀಳುವರೆಲ್ಲರು ನಿನ್ನಡಿಭರದಿ ಧಾಳಿಯೆ ನನ್ನಯ ಪ್ರಭುತನವೆಂದ 14 ಮುಂದೆಯೆ ನೀನಿರು ನಾಹಿಂದಿರುವೆ ಬಂದವರೆಲ್ಲರು ನಿನಗೊಂದಿಸುತ ವಂದಿಸಲೆನ್ನದು ವಲಿಯುವೆನಾಗ ಮುಂದಿಹ ನಿನಗೇ ಮೊದಲಲಿ ಪೂಜೆ ಛಂದದಿ ಶಾಸನ ಹೀಗೇ ಬರದು ಮಂದಿರ ಕೆಡೆ ಕೊಡು ಎನ್ನಲು ನಗುತ ನಂದದಿ ನೀಡುತ ಹಾಗೆಯೆ ಎಲ್ಲ ಕಂದನ ಸೇವಿಸೆ ಬಕುಳೆಯ ಕೊಟ್ಟ 15 ತಗ್ಗಿರೆ ಸಾಧನ ವೆಗ್ಗಳಗೈವ ವೆಗ್ಗಳ ಸಾಧನೆ ತಗ್ಗಿಪ ದೈವ ಹಗ್ಗವು ಸರಿಇವ ನಿಚ್ಚೆಯು ಕೇಳಿ ಅಗ್ಗದ ಪ್ರಭುವರ ಇವತಾನಲ್ಲ ತಗ್ಗಿಸಿ ವಿಷಯ ಬಗ್ಗಿಸಿ ಮನವನು ಹಿಗ್ಗುತ ಭಜಿಸಲು ಚರಣ ಸರೋಜವ ತಗ್ಗದ ಸೌಖ್ಯವ ನೀಡುತ ಕಾವ ಮುಗ್ಗದೆ ಭವದಲಿ ಭಜಿಸಿರಿ ಬೇಗ 16 ಬಕುಳೆ ಯಶೋದೆಯು ಪೂರ್ವದಿ ಕೇಳಿ ರುಕ್ಮಿಣಿ ಮುದುವೆಯ ನೋಡದಲಾಕೆ ಉಕ್ಕಿದ ಮೋಹದಿ ಬಯಸಲು ನೋಡೆ ಭಕ್ತಳ ಬಯಕೆಯ ಸಿದ್ಧಿಸೆ ದೇವ ಬಕುಳೆಯ ಜನ್ಮದಿ ನಿಂದಿಹಳೆಂದು ಅಕ್ಕರೆಯಿಂದಲಿ ತಾ ಕರತಂದು ಚೊಕ್ಕಸುಕಂದನ ತೆರದಲಿ ನಿಂದ ಭಕ್ತಿಲಿ ಸೇವೆಯ ಗೈದಳು ಬಕುಳೆ 17 ನಾರಾಯಣ ಪುರ ನಾಮದ ನಗರಕೆ ದೊರೆಯೆನಿಸಿದ್ದನು ಆಕಾಶರಾಯ ಕೊರಗುತ ಬಹುದಿನ ಸುತರಿಲ್ಲೆಂದು ಧರಣಿಯ ಶೋಧಿಸೆ ಯಾಗಕ್ಕೆಂದು ದೊರಕಲು ಕಮಲವು ದೊಡ್ಡದು ಒಂದು ತೆರೆಯುತ ನೋಡಲು ಶಿಶು ತಾನೊಂದು ಬೀರುತ ಕಾಂತಿಯ ಕಾಣಿಸಲಂದು ದೊರಕಿತು ಕನ್ಯಾಮಣಿಯೆಂತೆಂದು 18 ಅರಮನೆ ಗಾ ಶಿಶು ಹರುಷದಿ ತಂದು ಸರಸಿಜಮುಖಿ ಪದ್ಮಾವತಿಯೆಂದು ಕರೆಯುತ ರಾಣಿಯು ಸಾಕುತ ಬಂದು ವರುಷಗಳುರುಳಲು ಕಾಲದಿ ಕನ್ಯೆ ಸಿರಿತೆರ ಲಕ್ಷಣ ಗಣದಿಂ ಬೆಳೆಯೆ ವರಿಸಲು ಈಕೆಯ ನರರಿಂದಾಗದು ಹರಿಯೇ ಸರಿವರವೆನ್ನುತ ಮನದಿ ಅರಸುತ ವರನಂ ಬಳಲಿದ ಧೊರೆಯು 19 ವೇದವತೀ ಈಕೆಯು ತ್ರೇತೆಯಲೆನ್ನಿ ಮಾಧವ ಮನತೆರ ತೆರಳುವ ಸೀತೆ ಮೋದದಿ ಸೇರಲ್ ಗಿರಿ ಕೈಲಾಸ ಖÉೀದಗಳುಣ್ಣುತ ಲಂಕೆಯಲಿದ್ದು ಸಾಧಿಸಿ ಖಳರವಿನಾಶವನಲ್ಲಿ ಮೇದಿನಿ ಸುತೆಯಳ ಸೇವಿಸಿ ಬಹಳ ಮೋದದಲಾಗಲಿಯಂದಳು ಸೀತೆ 20 ಶಕ್ರನು ಶಿಖಿಸಹ ಇದ್ದಹಾಗೆ ಲೋಕಕೆ ತೋರಲು ಸೀತೆಯ ರಾಮ ಚೊಕ್ಕ ಪರೀಕ್ಷೆಯ ನಡಿಸಲು ಶಿಖಿಯಲಿ ತಕ್ಕಣ ಬಂದರು ಸೀತೆಯರಿಬ್ಬರು ಅಕ್ಕರೆಯಿಂದಲಿ ನುಡಿಯುತ ಕಥೆಯು ಸಕ್ಕದಿ ನಿಂತಿಹ ಈಕೆಯ ನೀನು ಈಕ್ಷಿಸಿ ಪಿಡಿಕೈಯೆನ್ನಲು ಸೀತೆ ರಕ್ಕಸ ವೈರಿಯು ಮಡದಿಗೆ ನುಡಿದ 21 ಒಂದೇ ಬಾಣವು ಒಂದೇ ವಚನವು ಒಂದೇ ನಡತೆಯು ಒಬ್ಬಳುಮಡದಿ ಇಂದೆನಗೆಂಬುದು ತಿಳಿಯದೆ ನಿನಗೆ ಛಂದದಿ ಕಲಿಯಲಿ ನಡಿಸುವೆ ಬಯಕೆ ಇಂದ್ರನು ಅಗ್ನಿಯ ಪುಟ್ಟಲಿ ವಡಲಲಿ ಇಂದಿನ ಯುಗದಲಿಯನ್ನಲು ರಾಮ ವಂದಿಸಿ ನಡೆದರು ಎಲ್ಲರು ಆಗ ಹಿಂದಿನ ವರತೆರ ಬಂದಿಹಳೀಗ 22 ಭೂಸುರ ಪೊಟ್ಟಿಲಿ ಪುಟ್ಟುತ ಹಿಂದೆ ಶ್ರೀಶನ ಮಡದಿಯ ತಪದಿಂ ಮೆಚ್ಚಿಸಿ ಭಾಷೆಯ ಪಡದಿರೆ ಸವತಿಯ ಪಟ್ಟಕೆ ಘಾಸಿಯ ನೀಡುತ ರಾವಣ ಬಂದು ಆಶಿಸಿ ಸಂಗವ ದುಡುಕುತ ನುಡಿಯೆ ರೋಷದಿ ಶಾಪವ ನೀಡಿದಳೀಕೆ ನಾಶಕೆ ಕಾರಣಳಾಗುವೆ ನಾನೆ ಭ್ರಷ್ಟನೆಯೆನ್ನುತ ಶಿಖಿ ಸೇರಿದಳು 23 ಲಕ್ಷ್ಮೀ ವಿಭೂತಿಯೆ ಇವಳೆಂತೆನ್ನಿ ಲಕ್ಷಣ ನಿಭಿಡಿತಳಾಗಿಹ ಕನ್ಯೆ ಕುಕ್ಷಿಯು ತೆಳ್ಳಗೆ ಸಿಂಹಸುಮಧ್ಯಮೆ ಪಂಕಜ ನೇತ್ರೆಯು ಪಂಕಜವದನೆಯು ಪಂಕಜ ಗಂಧಿ ಭುಜಂಗ ಸುವೇಣಿ ಶಂಕರ ನಗೆನುಡಿ ಗುರುಲಾವಣ್ಯ ಶಂಖ ಸುಪದ್ಮಾರೇಖೆಗಳಿಂದ ಲಂಕೃತ ಅಂಗೈ ಪಾದಗಳ್ಹಾಗೆ 24 ಕಾಮನ ಬಿಲ್ಲನು ಹಳಿಯುವ ಹುಬ್ಬು ಸೋಮನ ಮೀರಿಪ ಯುಗಯುಗ ಕಾಂತಿ ಸಾಮಜಗಮನೆ ರಂಭೋರುಗಳು ಕೋಮಲ ಚಂಪಕ ನಾಶಿಕ ತುಟಿಗಳು ಕಾಮದ ಪೀವರ ಕುಚಯುಗಹಾಗೆ ಸು ನೇಮದಿ ಬೆಳದಿಹ ಪಲ್ಗಳ ರಾಜಿ ವಾಮನಿತಂಬಜಘನದ್ವಯವ ಭಾಮೆ ಸಫಾಲದಿ ಮೆರೆದಳು ತಾನು 25 ಈಕೆಯು ಕಮಲೆಯ ತೆರೆದಿಂ ಬೆಳೆದು ಸಾಕಲು ಕರೆದಳು ಕನಕಸುವೃಷ್ಟಿ ಕಾಕನು ಕಾಣದೆ ರಾಜನು ಮೆರೆದ ನಾಕವೆ ಎನಿಸಿತು ರಾಜನಮನೆಯು ಜೋಕೆಯಲೊಂದಿನ ಸಖಿಯರ ಕೂಡಿ ಈಕ್ಷಿಸೆ ಪುರವುದ್ಯಾನವ ಕುವರಿ ಸೌಖ್ಯದಿ ತೆರಳುತೆಯಿರುತಿರುವಲ್ಲಿ ನಾಕದ ನಾರದ ವದಗಿದನಲ್ಲಿ 26 ಹರಿಕಾರ್ಯಾಂಗನು ಬಂದನು ಎನ್ನುತ ಗುರು ಸತ್ಕಾರಂಗಳಗೈದು-ಆ ತುರ ತೋರಲು ತಿಳಿಯೆ ಭವಿಷ್ಯ ಕರಗಳ ನೋಡುತ ತೂಗುತ ತಲೆಯು ಸಿರಿತೆರ ಲಕ್ಷಣ ಕಾಣುವೆನಮ್ಮ ಹರಿಯೇ ಸರಿ ವರಿಸಲ್ ನಿನ್ನ ಅರಸುತ ಬರುವನು ತಾನೆ ನಿನ್ನ ಬರಿ ಮಾತಲ್ಲವು ನೋಡೆಂತೆಂದ 27 ಪರಿ ಹೊರಡಲ್ ಮುನಿಯು ಲಾಲಿಸಿ ª
--------------
ಕೃಷ್ಣವಿಠಲದಾಸರು