ಒಟ್ಟು 623 ಕಡೆಗಳಲ್ಲಿ , 85 ದಾಸರು , 539 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಲೆಂದು ಪಾಡಿರೆ ಕೋಮಲೆಯರೆಲ್ಲಾ ಅಮ್ಮಯ್ಯ ಗೋಪಾಲ ಕೃಷ್ಣಯ್ಯಗ ಶರಣಿಂದು ಕೋಲ ಪ. ಮುದ್ದು ಸುಭದ್ರ ನೀನು ಗೆದ್ದುಬರುತಿಯೆಂದುಎದ್ದ ಬೃಹಸ್ಪತಿಯು ತವಕದಿ ಕೋಲಎದ್ದ ಬೃಹಸ್ಪತಿಯು ತವಕದಿ ಅರ್ಜುನ ಸಿದ್ಧ ಮಾಡೆಂದ ರಥಗಳ ಕೋಲ 1 ಕೇಳಿರಿ ನಿಮಗೆಲ್ಲ ಭಾಳ ಬಲವದೆಕಾಳಿ ಮೊದಲಾದ ಕೆಲದೆಯರುಕಾಳಿ ಮೊದಲಾದ ಕೆಲದೆಯರು ಹರುಷದಿ ಹೇಳಿ ಬೃಹಸ್ಪತಿಯು ನುಡಿದಾನು ಕೋಲ2 ಪಾಂಡವರೆಲ್ಲರು ಉಂಡು ವೀಳ್ಯವನ್ಹಾಕಿಪುಂಡರಿಕಾಕ್ಷನ ಅರಮನೆಗೆ ಕೋಲಪುಂಡರಿಕಾಕ್ಷನ ಅರಮನೆಗೆ ಐವರುತಂಡ ತಂಡದಲೆ ನಡೆದಾರು ಕೋಲ3 ದ್ರೌಪದಿ ಸುಭದ್ರಾ ಇಬ್ಬರು ಒಂದಾಗಿಅಗಣಿತ ಒನಿತೆಯರು ಕೋಲಅಗಣಿತ ಒನಿತೆಯರು ಕೂಡಿಕೊಂಡು ತಾವುಪ್ರೇಮದಿಂದಲಿ ಬರುತಾರೆ ಕೋಲ 4 ಅರಿಷಿಣ ಕುಂಕುಮ ಗಂಧಬೆರೆಸಿ ಪರಿಮಳದಿಂದಸರಸಾದ ಸುರಭಿ ಕುಸುಮವ ಕೋಲಸರಸಾದ ಸುರಭಿ ಕುಸುಮರಾಮೇಶನ ಅರಸಿಯರಿಗೆ ಒಯ್ವೋ ಉಪಚಾರ ಕೋಲ 5
--------------
ಗಲಗಲಿಅವ್ವನವರು
ಕ್ಷೇತ್ರ ಮೇಲುಕೋಟೆ ಹರಿಯ ಕಂಡೆನು ಗಿರಿಯದೊರೆಯ ಕಂಡೆನು ಪ. ತರಳನನ್ನು ಪೊರೆಯಲೋಸುಗ ನರಮೃಗಾವತಾರನಾದಅ.ಪ. ತಿರುನಾರಾಯಣಪುರದ ಗಿರಿಯ ಶಿಖರದಿ ಚರಣತಲದಿ ತಿರುಕಲ್ಯಾಣಿ ಮೆರೆಯುತಿರಲು ಹರುಷದಿಂದ ಹರಿಯ 1 ದಾಸರಾದರ ಹೃದಯಾ ವಾಸನೆನಿಸುವ ವಿನುತ ಚರಣ ಭಾಸುರಾಂಗ ದೋಷಹರಣ ಹರಿಯ 2 ನಾಗವೈರಿಯ ರೂಪನಾಗೆ ಮೆರೆಯುವ ಯೋಗಪಟ್ಟಿಯಾಂತು ಪರಮ ಯೋಗನಿಷ್ಟೆಯಲ್ಲಿ ಕುಳಿತ ಹರಿಯ 3 ದುಷ್ಟದೈತ್ಯರಂ ಕುಟ್ಟಿ ಕೆಡಹಿದ ಮುಟ್ಟಿಭಜಿಪ ಭಕ್ತರೆಲ್ಲರ ಕಷ್ಟಕಳೆದು ಇಷ್ಟವೀವ ಹರಿಯ 4 ಶೇಷಗಿರಿಯೊಳು ಮತ್ತಾ ಮೇಲುಕೋಟೆಯೊಳ್ ಶೇಷಭೂತರಾಶೇಷ ಭಕ್ತರ ಪೋಷಿಸುತ್ತಿಹ ಸರ್ವೇಶನೀತನೆ ಹರಿಯ 5
--------------
ನಂಜನಗೂಡು ತಿರುಮಲಾಂಬಾ
ಗಂಗಾನದಿ ಮಂಗಳಂ ಜಯತು ಭಾಗೀರಥಿಗೆ ಜಯ ಮಂಗಳಂ ಯಮುನೆ ಸರಸ್ವತಿಗೆ ಪ ವಾಮನರೂಪಿಲಿ ದಾನವ ಬೇಡಿ ಪ್ರೇಮದಿಂ ಪಾದವ ಮೇಲಕ್ಕೆ ನೀಡಲು ನೇಮದಿಂ ತಡೆದು ಬ್ರಹ್ಮಾಂಡದಿಂದ ಸುಮ್ಮಾನದಿಂ ಪೊರಟು ಬಂದ ದೇವಿಗೆ 1 ಹರಿಯ ಪಾದದಲಿ ಉದ್ಭವಿಸಿದ ಗಂಗೆಗೆ ಹರನ ಶಿರದಲ್ಲಿ ವಾಸವಾದವಳಿಗೆ ಧರಿಣಿಗೆ ಇಳಿದು ಬಂದ ದೇವಿಗೆ 2 ಭಾಗೀರಥಿ ಎಂಬೊ ಪೆಸರು ಪೊತ್ತು ಅವನ ಭಾಗಿಗಳಿಗೆ ಮೋಕ್ಷವನಿತ್ತು ಹರುಷದಿ ಯೋಗಿಗಳು ಸ್ತುತಿಪ ಗಂಗಾದೇವಿಗೆ 3 ಜಾಹ್ನವಿ ಎನಿಸಿದೆ ಜಗದೊಳಗೆ ಜನರಿಗೆ ಜನನ ಮರಣ ಕೊಡದೆ ಬಿಡಿಸಿ ಜಾಣತನದಿ ಮುಕ್ತಿ ಕೊಡುವವಳಿಗೆ 4 [ದೃಡದಿ ] ಬಲಭಾಗದಿ ಭಗೀರಥಿ ಬರುತಿರೆ ಯೆಡದ ಭಾಗದಲಿಯಮುನೆ ಬರುತಿರಲು ನಡುವೆ ಸರಸ್ವತಿ ತ್ರಿವೇಣಿಯೆಂದೆನಿಸಿ ಪೊಡವಿಗಧಿಕವಾಗಿ ಮೆರೆಯುವ ದೇವಿಗೆ 5 ಬಂದು ಭಾಗೀರಥಿಗೆ ವಂದನೆಗಳ ಮಾಡಿ ತಂದು ಪುಷ್ಪವ ತುಳಸಿ ಕ್ಷೀರವನು ಚಂದದಿಂ ಪೂಜೆಮಾಡಿ ವೇಣಿಮಾಧವಗೆ ಅಂದು ವಂದಿಸಿದವರಿಗೆ 6 ಸೃಷ್ಟಿಯ ಮೇಲುಳ್ಳ ಜನರೆಲ್ಲರು ಬಂದು ಇಷ್ಟಾರ್ಥಗಳನು ಕೊಡುವೆನೆಂದೆನುತಲೆ ಪಾದ ತೋರಿಸುವಳು 7
--------------
ಯದುಗಿರಿಯಮ್ಮ
ಗಜವÀದನ ಪಾಲಿಸೊಗಜವÀದನ ಪಾಲಿಸೊ ಪತ್ರಿಜಗದೊಡೆಯ ಶ್ರೀ ಭುಜಗಭೂಷಣಗಜವÀದನ ಪಾಲಿಸೊ ಅ ಪಭಕ್ತಿಯೊಳು ಭಜಿಪೆನು ರಕ್ತಾಂಬರಧರಮುಕ್ತಿಪಥವ ತೋರೊ ಶಕ್ತಿ ಸ್ವರೂಪನೇ 1 ವಾಸವ ಪೊಗಳುವೆಲೇಸಪಾಲಿಸೊ ನಿತ್ಯವಾಸವನುತ2 ಪೊಡವಿಯೊಳಗೆ ನಿನ್ನ ಬಿಡುವರ್ಯಾರೊ ಎನ್ನಕಡುಹರುಷದಿ ಕಾಯೋ ವಿಜಯ ವಿಠ್ಠಲದಾಸ 3
--------------
ವಿಜಯದಾಸ
ಗಜೇಂದ್ರ ಮೋಕ್ಷ ವರಶಂಖಗದೆ ಪದ್ಮಕರದಿ ಚಕ್ರವ ಪಿಡಿದ ಗರುಡಗಮನ ನಮ್ಮ ಕರಿವರದಹರಿಯನ್ನ ನಿರುತ ನೆನೆನೆನೆದು ಬದಿಕಿರಯ್ಯಾ ಪ ಹರಿಧ್ಯಾನ ಹರಿಸೇವೆ ಹರಿಭಕ್ತಿ ಹರಿಚರಿತೆ ದುರಿತದುರ್ಗಕೆಕುಲಿಶ ವರಮುಕ್ತಿಸೋಪಾನ ಕಾಣಿರಯ್ಯಾ ಅ.ಪ. ಕ್ಷೀರಸಾಗರ ಮಧ್ಯೆ ಗಿರಿತ್ರಿಕೂಟ ದೊಳಗೆ ಇರುವುದೂ ಋತುಮಂತ ವರುಣನ ವರವನವು ಅಲ್ಲಿ ಪರಿಪರಿಯ ಲತೆಬಳ್ಳಿ ಸರಸಸ್ಥಾನಗಳಲ್ಲಿ ಮೆರೆವೋರು ಸುರಸಂಘ ನಾರಿಯರ ಸಹಿತಾ 1 ಪದ್ಮಗಾಶ್ರಯವಾದ ಪದ್ಮಕೊಳಾದೊಳಗೆ ಮದಿಸಿದಾ ಗಜವೊಂದು ಐದಿತು ಪರಿವಾರ ಸಹಿತ ವಿಧಿಯ ಬಲ್ಲವರಾರು ಮುದದಿರ್ದ ಆ ಗಜಕೆ ವಿಧಿ ವಕ್ರಗತಿಯಿಂದ ಪಾದವನೆ ಪಿಡಿಯಿತು ನಕ್ರವೊಂದು 2 ಒಂದು ಸಾವಿರ ವರುಷ ಕುಂದದೆಲೆ ಕರಿಮಕರಿ ನಿಂದು ಹೊರಾಡೆ ಸುರವೃಂದ ಬೆರಗಾಯಿತು ಬಂಧು ಬಳಗವು ಮತ್ತೆ ಅಂದ ಹೆಂಡಿರು ಎಲ್ಲ ಕುಂದು ಅಳಿಸದೆ ಇರಲು ಛಂದದಲಿ ಯೋಚಿಸಿತು ಗಜವೂ 3 ಏನಿದ್ದರೇನಯ್ಯ ಶ್ರೀನಿವಾಸನಕೃಪೆಯು ಇನ್ನಿಲದಾಮೇಲೆ ಕುನ್ನಿಗೆ ಸರಿಎಂದು ಹೀನ ಎನ್ನಯ ಜನ್ಮ ದೀನ ಭಾವದಿ ಹರಿಯ ಮಾನವನು ಬದಿಗಿಟ್ಟು ಧ್ಯಾನಿಸಿ ಸ್ತುತಿಸಿದಾ 4 ಸತ್ಯಶಾಶ್ವತಭೋಕ್ತ ಸೃಷ್ಟ್ಯಾದಿಕರ್ಮವಿಗೆ ನಿತ್ಯ ತೃಪ್ತನು ಆದ ಶಾಡ್ಗುಣ್ಯಪರಿಪೂರ್ಣನೆ ವಂದಿಸುವೆನೋ ಓತಪ್ರೋತದಿ ಜಗದಿ ವ್ಯಾಪ್ತ ಆಪ್ತನು ಆದ ಆರ್ತದಲಿ ಕರೆವೆನೋ 5 ಎಲ್ಲಕಡೆಯಲಿ ಇರ್ಪ ಎಲ್ಲರೂಪವ ತಾಳ್ವ ಎಲ್ಲ ಪ್ರೇರಣೆಮಾಳ್ವ ಎಲ್ಲರಿಂ ಭಿನ್ನನಿಗೆ ವಂದಿಸುವೆನೋ ಎಲ್ಲರಿಂ ಉತ್ತಮಗೆ ಎಲ್ಲರಾ ಬಿಂಬನಿಗೆ ಎಲ್ಲರ ವಾಚ್ಯನಿಗೆ ನಲ್ಲನೆಂತೆಂದು ನಾಕರೆವೆನೋ 6 ಎಲ್ಲರನು ಗೆದ್ದವಗೆ ಎಲ್ಲರಾನಲ್ಲನಿಗೆ ಎಲ್ಲ ದೋಷವಿಹೀನ ಒಳ್ಳೆ ಗುಣ ಪೂರ್ಣನ ಕರೆವೆನೋ 7 ನಿನ್ನ ತಿಳಿದವರಿಲ್ಲ ನಿನ್ನ ಮೀರಿದುದಿಲ್ಲ ಜನನ ಮರಣಗಳಿಲ್ಲ ನಿನಗಿಲ್ಲ ಸಮ ಅಧಿಕ ವಂದಿಸುವೆನೋ ನಿನ್ನನಾಮಕೆ ಗುಣಕೆ ನಿನ್ನ ಅವಯವಕೆ ನಿನ್ನ ಕ್ರಿಯ ರೂಪಗಳಿಗೆ ಇನ್ನಿಲ್ಲವೊ ಭೇದಸಾರಿ ನಾಕರೆವೆನೋ 8 ವೇದಗಮ್ಯನುನೀನೆ ವೇದದಾಯಕ ನೀನೆ ವೇದಾತೀತನು ನೀನೆ ಸಾಧು ಪ್ರಾಪ್ಯನುನೀನೆ ವಂದಿಸುವೆನೋ ಖೇದವರ್ಜಿತನೀನೆ ಅಂದ ಸಾರವು ನೀನೆ ಬಂಧನೀಡುವ ನೀನೆ ಅದ್ಭುತ ಅಚಿಂತ್ಯಶಕ್ತಿವಂತನ ಕರೆವೆನೋ 9 ಜ್ಞಾನಿಗೋಚರನೀನೆ ಗುಣಾತೀತನು ನೀನೆ ಗುಣಪ್ರವರ್ತಕನೀನೆ ಅನಾಥ ಸರ್ವಸಮ ವಂದಿಸುವೆನೋ ಜ್ಞಾನದಾಯಕನೀನೆ ಆನಂದಮಯನೀನೆ ನೀನೇ ಸರ್ವಾಧಾರ ನೀನೆ ಏಕನು ಎಂದು ಕೂಗಿ ನಾಕರೆವೆನೋ 10 ಸಾಕಾರ ನಿರಾಕಾರ ಆಕಾರ ಅಹೇಯ ಓಂಕಾರ ವಾಚ್ಯನೆ ಸಾಕಲ್ಯಸಿಗದವನೆ ಸ್ವೀಕಾರ ಮಾಡೋ ವಿಕಾರ ವರ್ಜಿತನೆ ಲೋಕೈಕವೀರಾನೆ ನೀ ಕೆವಲನು ಮುಕ್ತೇಶ ಸಲಹೋ 11 ಏನು ಕೊಡಲೊ ದೇವ ದೀನನು ನಾನಯ್ಯ ನಿನ್ನದೇ ಈ ಭಾಗ್ಯ ಮನ್ನಿಸುತ ದಯಮಾಡಿ ಸಲಹೋ ಘನ್ನಕರುಣಾಳುವೆ ಅನ್ಯರನು ನಾ ನೊಲ್ಲೆ ನಿನ್ನವನು ನಿನ್ನವನೋ ನಿನ್ನ ಚರಣಕೆ ಶರಣು ಶರಣೂ 12 ಕರಿ ತಾನು ಮೊರೆಯಿಡುತ ಕೂಗಲು ಸುರವೃಂದ ಯೋಚಿಸುತ ಹರಿಯಲ್ಲದನ್ಯತ್ರ ಅರಿಯೆವೀಗುಣವೆಂದು ಅರಿತು ಸುಮ್ಮನಿರಲೂ ಹರುಷದಿಂದಲಿ ಹರಿಯು ಗುರುಡನೇರುತ ಬರಲು ತರಿದು ನಕ್ರನ ಭರದಿ ಕರಿಯಪೊರೆಯೆ ಆದ 13 ಏನೆಂದು ವರ್ಣಿಸಲಿ ಶ್ರೀನಿವಾಸನ ಕರುಣ ದೀನ ಭಕ್ತರ ಮೇಲೆ ಸಾನುರಾಗದಿ ಕರಿಯ ಹಿಡಿದೆತ್ತಿದಾ ಇನ್ಯಾಕೆ ಭಯವಯ್ಯ ಘನ್ನ ಇಂದ್ರದ್ಯುಮ್ನನೆ ಏಳು ಮುನ್ನಿನಾ ದೋಷವಿದು ಇನ್ನು ನೀ ಧನ್ಯನಹುದೋ 14 ದೇವಲನ ಶಾಪದಲಿ ಆ ವರ ನಕ್ರನಾಗಿದ್ದ ಶ್ರೀವರನ ಭಕ್ತ ಹೂಹೂ ಗಂಧರ್ವನೆರಗಿ ಬಿದ್ದನು ಹರಿಗೇ ದೇವೇಶ ಹುಸಿನಗುತ ಈವೆ ವರವನು ಕೇಳಿ ಯಾವಾತ ಈ ಕಥೆಯ ಭಾವಶುದ್ಧದಿ ಭಜಿಸೆ ಉದಯದಲಿ ನಾ ಒಲಿವೆ ತವಕದಲಿ ಎಂದನೂ 15 ಹರಿಗೆ ಸಮರಾರಿಲ್ಲ ಹರಿಭಕ್ತ ಗೆಣೆಯಿಲ್ಲ ಸುರರು ಮೊರೆಯಿಟ್ಟರಾಗ ಹರಿವಾಯುಗುರುಗಳು ಕರುಣದಿಂದಲಿ ಇದನು ಮನ್ನಿಪುದು ಬುಧರೂ 16 ಮುದ್ದುಜಯತೀರ್ಥರ ಹೃದಯದಲಿನಲಿಯುವ ಮಧ್ವಾಂತಃಕರಣದಿ ಮುದ್ದಾಗಿ ಕುಣಿಯುವಂಥ ಮಾಧವ ಶ್ರೀಕೃಷ್ಣವಿಠಲರಾಯನು ಬೇಗ ಮೋದ ಸುರಿಸುವ ಈ ಪದವ ಪಠಿಸಲೂ 17
--------------
ಕೃಷ್ಣವಿಠಲದಾಸರು
ಗುಂಜಾ ನರಸಿಂಹಾ-ಪಾಹಿ ಮಾಂ ಪಾಹಿ ಪ ಅಜಭವ ಫÀಣಿ ದ್ವಿಜರಾಜ ಸುಪೂಜಿತ ತ್ರಿಜಗದೊಡೆಯ ನರಹರಿಯೆ-ದುರಿತ ಹರಾ ಅ.ಪ ಪಟುತರ ಭಾಧೆ ಸಂಕಟಪಡುತಲಿ ಸುರ- ಕಟಕ ನುತಿಸಿ ಕೋಟಿತಟಿತ್ಕಾಯನೆ ಕೋಟಿ ಖಳರೆದೆ ಕುಟ್ಟಿ ಯಮಪುರ ಕಟ್ಟಿ ದಿಟ್ಟತನದಲಿ ನಿಶಾಚರನಳುಹಿದ 1 ಸಿಡಿಲೋಪಮ ಘುಡು ಘುಡಿಸುತ ಕಿಡಿಯ ಕಡೆಗಣ್ಣಿಂದಲಡಿಗಡಿಗುಗುಳುತ ಕೂಡಿನಖಗಳ ನೀಡಿಶಿರವನ- ಲ್ಲಾಡಿಸಿ ಜಡಜಂಗಮರ ನಡುಕ ಬಿಡಿಸಿದೆಯೊ2 ಅಡಿಗಡಿಗೆಡರನು ಪಡುತಿಹ ಹುಡುಗನ ದೃಢತರ ಭಕುತಿಯ ನುಡಿಯುನು ಕೆÉೀಳುತ ನೋಡಿ ಅಭಯವ ನೀಡಿ ನೀ ದಯ ಮಾಡಿ ಬಿಡುಗಣ್ಣರನು ಬಿಡದೆ ಸಲಹಿದೆಯೊ 3 ಕೇಳಿ-ಹರುಷವ ತಾಳಿ-ದನುಜರ ಧೂಳೀಪಟಮಾಡಿ ನಲಿದು ನಿಂದಾಡಿದೆ 4 ಸಿಂಧುಶಯನ ಭವಬಂಧವಿಮೋಚಕ ಇಂದಿರೆಯರಸ ಶ್ರೀ ವೇಂಕಟೇಶ ನೀ ಬಂದೂ ಸ್ತಂಭದಿ ನಿಂದೂ ಭಕುತರ ಬಂಧೂ ಸುರವೃಂದಕೆ ಆನಂದವ ನೀಡಿದ 5 ಕಡಲುಗಳೇಳಡಿಗಡಿಗುಕ್ಕುತ ಪಥ ತಪ್ಪಿ ಬೀಳುತಲಿರೆ ದಾಡಿ ಕುಣಿದಾಡೀ ಸ್ಮಶ್ರುಗಳ ತೀಡಿ ಬಡಬಾನಲಲ್ಲಾಡಿಸಿ ನಿಂದ 6 ಪರಿಪರಿ ಸುರರವಯವಗಳನು ಧರಿಸಿ ಉರುತರ ಕ್ರೀಡೆಯ ಮಾಡಿ ಪ್ರಳಯದಿ ತೋರಿ ಧಿಕ್ಕರಿಸಿ ತಾಳಿ ಹರುಷದಿ ಕೇಳಿಯೊಳು ಉರಗಾದ್ರಿವಾಸವಿಠಲ ನೀ ನಿಂದೆಯೊ 7
--------------
ಉರಗಾದ್ರಿವಾಸವಿಠಲದಾಸರು
ಗುರುಮಾರ್ಗ ಧನ್ಯಧನ್ಯವೆನ್ನಿ ಕರುಮುಗಿದು ಅನ್ನಿ ಧ್ರುವ ಮರೆವ ಗರ್ವವ ಮುರಿವ ಹರಿವ ಮೂರೆರಡಂಕುರವ ತೋರುವ ದೋರುವ ಯರ್ಹ ಪಜರುವ ಹೊಡೆವ ಮರುವ್ಹ ಅರುವ ಗುರುವಿನ ಕರುವ್ಹ ಬೆರುವ ಪರಾತ್ಪರವ ಇರುವ ಹರುಷದಿ ಸ್ಥಿರುವ ಕರೆವ ಸಾರಾಯ ಸುರೆವ 1 ಕಾಯ ಕಳವಳವ ಅಳೆವ ಚಿತ್ತ ಚಂಚಲವ ಗಳುವ ಭಾವದುಶ್ಚಲವ ಉಳುವ ಉಪಾಯಲಳಿವ ನಲುವ ನೋಡಿ ನಿಶ್ಚಲವ ಬಲಿವ ಭಕ್ತಿ ಅಚಲವ ತಿಳುವ ಸದ್ವಸ್ತುದ ಹೊಳೆವ 2 ಕೆಡುವ ಬುದ್ದಿಯ ಬಿಡುವ ಕಡೆವ ಸಂದೇಹ ದೃಢವ ನುಡಿವ ಶ್ರುತಿಯಂತೆ ನಡುವ ಜಡೆವ ಸದ್ಬಕ್ತಿವಿಡುವ ತುಡುವ ವೈರಾಗ್ಯನೆ ಮುಡುವ ಸದ್ಗತಿ ಸದ್ಗುರುಗತಿಪಡೆವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುರಾಜ | ನಮಿಪರ ಸುರಭೋಜ ಗುರುರಾಜ ಪ. ವರತಂದೆ ಮುದ್ದುಮೋಹನರೆಂದೆನಿಸುತ ಮೆರೆಯುತ ಜಗದೊಳು ಪೊರೆಯುವ ಕರುಣಿ 1 ಅಜ್ಞತೆ ತೊಲಗಿಸಿ ಸುಜ್ಞತೆ ಕೊಡುತಲಿ ವಿಘ್ನವ ತರಿಯುವ ಪ್ರಾಜ್ಞ ಮೂರುತಿಯೆ 2 ಸರಸಿಜಾಕ್ಷನ ಪದ ಹರುಷದಿ ಭಜಿಸುವ ಪರಮಪ್ರಿಯರು ಎಂದು ಬಿರುದು ಪೊತ್ತಿಹರೆ 3 ನಾಗಶಯನನಿಗೆ ಭೋಗವಪಡಿಸುವ ಆಗಮಜ್ಞರೆ ನಿಮಗೆ ಬಾಗುವೆ ಸತತ 4 ಸಾಸಿರ ಫಣೆಯಿಂದ ಸೂಸುವ ಕಾಂತಿಯೊಳ್ ವಾಸವ ವಿನುತ 5 ದೇವತಾಂಶದ ಗುರು ಪವಮಾನಿಗೆ ಪ್ರಿಯ ಭಾವಿಸಿ ಭಜಿಪರ ಕಾವ ಕರುಣಾಳು 6 ಶಾಂತಚಿತ್ತದಿ ಬಹು ಸಂತೋಷಪಡುತಲಿ ಅಂತರಂಗದಿ ಹರಿಯ ಚಿಂತಿಸುತಿರುವ 7 ಉದ್ಭವಿಸಿ ಜಗದಿ ಅಧ್ಭುತ ಮಹಿಮೆಯ ಒಬ್ಬೊಬ್ಬರಿಗೆ ತೋರಿ ಹಬ್ಬಿಪೆ ಹರುಷ 8 ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನನು ದೃಷ್ಟಿಗೆ ತೋರಿಸಿ ಕಷ್ಟ ಬಿಡಿಸಿರಿ 9
--------------
ಅಂಬಾಬಾಯಿ
ಗುರುವರ್ಯರನು ಭಜಿಸೋ ರಾಘವೇಂದ್ರ ಗುರುವರ್ಯರನು ಭಜಿಸೋ ಪ ಧರೆತಲದಲಿ ಅವತರಿಸಿ ಸುಜನರನು ಪರಿಪÀರಿ ವಿಧದಲಿ ಪೊರೆಯುತಲಿರುವ ಸದ್ ಅ.ಪ ನಳಿನನಾಭ ಶ್ರೀರಾಮರ ರುಚಿರ ಪದಗಳ ಸಂತತದಿ ಭಜಿಸಿ ಖಳರ ದುರ್ಮತಗಳನಳಿಸಿ ದಶಪ್ರಮತಿ ಗಳ ದಿವ್ಯ ಶಾಸ್ತ್ರಾರ್ಥಗಳನು ಸುಲಭದಲಿ ಇಳೆಯೊಳು ಸುಜನಕೆ ತಿಳಿಯುವ ತೆರದಲಿ ಬೆಳಗುತಿರುವ ಪರಿಮಳ ಮುಖವರ ಗ್ರಂಥ ಗಳನು ರಚಿಸುತ ಉಳಿಸಿ ಸುಮತಿಯನು ಇಳೆಯೊಳು ವರಮಂತ್ರ ನಿಲಯದಿ ನೆಲೆಸಿದ 1 ಮಂಗಳಕರಳೆಂದು ಚರಿತೆಯುಳ್ಳ ತುಂಗಾತೀರದಿ ನೆಲೆಸಿ ಕಂಗೊಳಿಸುತ ಚರಣಂಗಳ ಭಜಿಪರ ಸಂಘಕ್ಕೆ ತಮ್ಮ ಅಪಾಂಗ ವೀಕ್ಷಣದಿಂದ ಮಂಗಳ ತತಿಗಳ ನೀಡಿ ಅವರ ಆಘ ಭಂಗವಗೈಯುತ ಅನುದಿನದಲಿ ದ್ವಿಜ ಪುಂಗವ ನಿಕರದಿ ಪೂಜೆಯಗೊಂಬ ಉ ತ್ತುಂಗ ಚರಿತರಥಾಂಗಧರ ಪ್ರಿಯ 2 ಮುನ್ನ ಪ್ರಹ್ಲಾದನೆನೆಸಿ ಶ್ರೀ ನರಹರಿಯನ್ನು ಸತತ ಭಜಿಸಿ ಇನ್ನೊಂದು ಜನುಮದಿ ಮಾನ್ಯ ಶ್ರೀ ವ್ಯಾಸಮುನಿ ಯೆನ್ನಿಸಿ ಖಲಮತವನ್ನು ಖಂಡಿಸುತಲಿ ಚಿನ್ನ ಶ್ರೀಕೃಷ್ಣನ ಉನ್ನತ ಮಹಿಮೆಗ ಳನ್ನು ಬೋಧಿಸುತ ತನ್ನ ಭಕುತಜನ ರನ್ನು ಹರುಷದಲಿ ಧನ್ಯರೆನಿಸಿದ ಪ್ರ ಸನ್ನ ಶ್ರೀರಾಮರ ಭಕುತ ಶಿರೋಮಣಿ 3
--------------
ವಿದ್ಯಾಪ್ರಸನ್ನತೀರ್ಥರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಸ್ತುತಿ ಭೂರಿ ದಯವ ಸತತ ಪ ಧೀರವರೇಣ್ಯ ಸಮೀರ ಸಮಯಗಳ ಸಾರವನರಿಯುವ ದಾರಿಯ ಕಾಣಲು ಅ.ಪ ವ್ಯಾಸರಾಜಗುರು ದಾಸರೆಂದಿನಿಸಿ ಶ್ರೀಶ ಶ್ರೀಕೃಷ್ಣನ ತೋಷಿಸಲು ಸಾಸಿರ ವಿಧದಲಿ ಸಲಿಸಿ ಸೇವೆಗಳ ಭಾಸುರ ಕೀರುತಿ ಪಡೆದ ಯತಿವರ 1 ಅಂದದ ನವಮಣಿ ಮಂದಿರಗಳಲಿ ನಂದಕುಮಾರನ ಕುಳಿÀ್ಳರಿಸಿ ಚಂದದಿ ದಿನ ದಿನ ಪೂಜೆಯ ಗೈದು ಆನಂದಸಾಗರದಿ ಮಿಂದ ಯತಿವರÀ 2 ಘನ್ನ ಮಹಿಮೆ ಸುಖ ಚಿನ್ಮಯ ರೂಪ ಪ್ರಸನ್ನ ಶ್ರೀಕೃಷ್ಣಗೆ ಹರುಷದಲಿ ಚಿನ್ನಮಯದ ತೊಟ್ಟಿಲನ್ನು ಸೇವೆ ಮಾಡಿ ಅನ್ಯರಿಗಲ್ಲದ ಪುಣ್ಯ ಪಡೆದವರ 3
--------------
ವಿದ್ಯಾಪ್ರಸನ್ನತೀರ್ಥರು
ಗೆಲವ ನೀಡೆನಗೆ ಇಹ್ಯದ ಗೆಲವ ನೀಡೆನಗೆ ಪ ಗೆಲವ ನೀಡಿಯೆನ್ನ ಮಲಿನಬಿಡಿಸಿ ನಿನ್ನ ವರ ದಿವ್ಯಪಾದನಳಿನದೊಲುಮೆಯಿತ್ತು ಅ.ಪ ಎಡರು ಆವರಿಸಿದ ಕಾಲದಿ ದೈರ್ಯವ ದಯಮಾಡೊ ಸಡಗರಸಿರಿ ಬಂದ ಕಾಲದಿ ಶಾಂತಿ ವಿನಯ ಕೊಡೊ ಕಡುಜವ್ವನದಲಿ ದುಡುಕನುಕೊಡದಿರು ಪಿಡಿದು ನೇಮವನು ಬಿಡದ ಛಲವನಿತ್ತು 1 ಧರಣಿಯ ಸುಖಕಾಗಿ ಎನ್ನಿಂ ಪುಸಿಯ ನುಡಿಸದಿರೋ ಹರಣಪೋದರು ಪರರಿಗೆ ದೇಹಿಯೆನಿಸದಿರೋ ಪರಮಹರುಷದಿಂದ ಹರಿಶರಣರು ಮೆಚ್ಚಿ ಶಿರವದೂಗುವಂಥ ನಿರುತವರ್ತನೆಯಿತ್ತು 2 ಸತತದಿ ಕರ್ಣಕ್ಕೆ ಹರಿಕಥೆ ಕೀರ್ತನೆ ಕರುಣಿಸೊ ಪತಿತಪಾವನವೆನಿಪ ಭಜನಾನಂದವ ಪಾಲಿಸೊ ಕ್ಷಿತಿಯೋಳಧಿಕ ಸದುಗತಿ ಮೋಕ್ಷಾಧಿ ಪತಿ ಶ್ರೀರಾಮ ನಿಮ್ಮ ಪಾದಭಕ್ತಿಯಿತ್ತು 3
--------------
ರಾಮದಾಸರು
ಗೋಪಾಲ ಬಾಲಾ ತ್ರಿಭುವನ ಪಾಲಾ ಕರುಣಾಲವಾಲ ಗೋಪಾಲ ಬಾಲಾ ಗೋಪೀ ಬಾಲಾ ಭಕುತಾನುಕೂಲ ಪ ಪಾಪಕುಲಾನಲ ತಾಪಸ ಸಂಕುಲ ಶ್ರೀಪತೆ ಮಾಂಗಿರಿನಿಲಯ ಶುಭಾಕುಲ ತಾಪತ್ರಯ ಕುಲಜಾಲ ನಿರ್ಮೂಲ ಗೋಪಗೋಪಿಕಾನಂದದುಕೂಲಾಅ.ಪ ಮುರಳೀಧರ ಘನಸುಂದರ ಭಾವ ದೇವಾದಿದೇವ ಸರಸೀರುಹದಳನಯನ ಸ್ವಭಾವಾ ಜೀವಾದಿಜೀವ ವರದಾಯಕ ಶರಣರ ಸಂಜೀವಾ ಮೃದುಮಧುರಸ್ವಭಾವ ಸ್ವರನಾದದಿ ಘಲು ಘಲ್ಲೆನುತಿರುವಾ ವರನೂಪುರದುಂಗುರ ಝಣ ಝಣರವ ಹರುಷದೊಳೆಲ್ಲೆಡೆಯೊಳು ನಲಿನಲಿದಾಡುವ 1 ಮುದ್ದಾಡಿ ನಲಿಯಳೆ ನಿನ್ನ ಯಶೋದಾ ಅಘರೂಪವಾದ ಮುದ್ದೆ ಬೆಣ್ಣೆಯ ಮೆಲುವಾತುರದಿಂದ ಕರಯುಗಗಳಿಂದ ಕದ್ದು ನೀ ನೋಡುವುದೇ ಅತಿಚೆಂದ ಭಕ್ತರಾನಂದಾ ಮದ್ದುಣಿಸಿದಳ ಒದ್ದು ಸಂಹರಿಸಿದ ಮೆದ್ದು ಉದ್ಧರಿಸೊ ಗೋವಿಂದ ನಂದನಕಂದ 2 ಅಕ್ಕೋ ಬೃಂದಾವನದಾನಂದ ಹೊಂಗೊಳಲಿಂದಾ ಇಕ್ಕೋ ಚೆಂದದ ಗಾನಾನಂದ ಕಿರುನಗೆಯಿಂದ ಕಕ್ಕುಲತೆಯ ಮದದಿಕ್ಕೆಗೆ ಸಿಲುಕದ ಠಕ್ಕುಗಾರ ಸೊಬಗಿಂದ ರಾಧೆಗೆ ಮುದ ವಿಕ್ಕಿ ಮಡುವ ಧುಮ್ಮಿಕ್ಕಿ ನರ್ತನಗೈದ 3 ವೈರಿ ಕಂಸಾರಿ ಶೌರಿ ಬಾ ಬಾರೋ ಪಾಂಡವ ಪಕ್ಷ ವಿಹಾರೀ ಶಿಶುಪಾಲ ಸಂಹಾರೀ ಭವ ಬಂಧನ ಪರಿಹಾರಿ ಶರಣರಿಗುಪಕಾರೀ ಇಭಕುಲಕೇಸರಿ ಘನ ಗಿರಿಧಾರೀ ಅಭಯಪ್ರದ ಹರಿ ಗೂಢಸಂಚಾರಿ ನಭಚರಹರಿ ಮಾಂಗಿರಿ ಸುವಿಹಾರೀ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಾಲ ಹರಿ ವಿಠಲ ನೀ ಪಾಲಿಸಿವಳಾ ಪ ಪಾಪೌಘಗಳ ಕಳೆದು ಸುಪವಿತ್ರಳನೆ ಮಾಡಿಕೈ ಪಿಡಿದು ಪೊರೆಯಿವಳ | ಗೋಪಾಲ ಬಾಲ ಅ.ಪ. ನಿನ್ನ ಸೇವಿಸೆ ದಾಸ | ಘನ್ನ ದೀಕ್ಷೆಯ ಮನದಿಕನ್ಯೆ ಬಹು ಭಕ್ತಿಯಲಿ | ಬಿನ್ನವಿಸಿ ಇಹಳೊಮನ್ಯು ಸೂಕ್ತೋದಿತನೆ | ಚೆನ್ನ ತೈಜಸನಾಗಿಇನ್ನು ಪೇಳ್ದಂಕಿತವ | ಕನ್ಯೆ ಗಿತ್ತಿಹನೋ 1 ಪತಿಸೇವೆ ದೊರಕಿಸುತ | ಪತಿವ್ರತೆಯಳೆಂದೆನಿಸಿಅತುಳ ವೈಭವ ತೋರಿ | ಹಿತದಿಂದ ಪೊರೆಯೋವ್ರತತಿ ಜಾಸನ ಪಿತನೆ | ಗತಿಗೋತ್ರ ನೀನೆನಿಸಿಸುತೆಸಮಳ ಪೊರೆವುದಕೆ | ಮತಿ ಮಾಡೊ ಹರಿಯೇ 2 ತಾರತಮ್ಯ ಜ್ಞಾನ ಮೂರೆರಡು ಭೇದಗಳಸಾರತತ್ವಗಳುರುಹಿ | ಸಾರತಮ ನಿನ್ನಾಪಾರುಗಾಣದ ಮಹಿಮೆ | ಚಾರುಕೀರ್ತಿಸುವಂತೆತೋರೊ ಸನ್ಮಾರ್ಗವನು | ವಾರಿನಿಧಿ ಶಯ್ಯಾ 3 ಹರಿಗುರೂ ಸದ್ಭಕ್ತಿ | ಹಿರಿಯರಲಿ ಆಸಕ್ತಿಸರ್ವ ಕಾರ್ಯವು ಹರಿಯ ವರಸೇವೆಯೆಂಬಾವರಮತಿಯ ಕರುಣಿಸುತ | ಹರಿಯು ತಾನಿತ್ತುದನಹರುಷದಲಿ ಉಂಬಂಥ | ಅರಿವು ಕೊಡು ಸತತ 4 ಭಾವಜಾರಿಯ ತಾತ | ಪಾವಮಾನಿಯ ಪ್ರೀತಕೇವಲಾನಂದಮಯ | ಜೀವ ಪರತಂತ್ರಾಈ ವಿಧವು ಇರಲಾಗಿ | ನೀವೊಲಿಯಲಿನ್ಯಾರುಕಾವರನು ಕಾಣೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗೋವಿಂದ ಗೋವಿಂದ ಗೋವಿಂದನೆನ್ನಲು ಪ ಏನೆಂದು ಪೇಳಲಿ ಆನಂದವನು ನಾ ಅ.ಪ ಹಸಿವು ತೋರದೆನಗೆ ತೃಷೆಯು ತೋರದೆನಗೆ ಪರಿ ನಾಮರಸವ ಸೇವಿಸುತಿರೆ 1 ದ್ವೇಷವು ತೋರದು ರೋಷವು ತೋರದು ಶೇಷಶಯನ ನಿನ್ನ ಹರುಷದಿ ಪೊಗಳಲು 2 ಭಯವು ತೊಲಗುವುದು ಜಯವು ತೋರವುದು ನಯನಗಳಲಿ ಸುಖ ಜಲವು ಸುರಿಯುವುದು 3 ಎಂದಿನ ಪುಣ್ಯವೊ ಇಂದರಿತೆನು ಗೋ- ವಿಂದನಾಮ ಮಕರಂದದ ಸವಿಯನು4 ನಿನ್ನ ಸುಕರುಣದ ಚಿನ್ಹೆ ಕಾಣಿಸಿತು ಪ್ರ ಸನ್ನನಾಗುವಿಯೆಂದು ಚೆನಾÀÀ್ನಗಿ ಅರಿತೆನು5
--------------
ವಿದ್ಯಾಪ್ರಸನ್ನತೀರ್ಥರು