ಒಟ್ಟು 8641 ಕಡೆಗಳಲ್ಲಿ , 130 ದಾಸರು , 5054 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯವ ಪಾಲಿಸಿ ಸಲಹೆ ಜನನಿ ಜಯಲಕ್ಷ್ಮಿ ಜಯಂಕರಿ ಪ ಭಯವಿಮೋಚನೆ ಭಜಿಪೆ ನಿನ್ನ ಜಯವ ವೊಂದಿಸಿ ಭವದಿ ಎನ್ನ ದಯದಿ ಬೆಂಬಲಿರ್ದು ಬಿಡದೆ ಕೈಯ ಪಿಡಿದು ಕಾಯೌ ಸುದಯೆ 1 ಜ್ಞಾನಜ್ಯೋತಿ ಸುಪ್ರಕಾಶ ಮಾಣದಿತ್ತು ಮಮತೆಯಿಂದ ಹಾನಿತಾರದೆ ಪೊರೆಯೆ ಸತತ 2 ಕಾಮಿತಾರ್ಥ ಪೂರ್ಣೆ ಸುತಗೆ ಭೂಮಿಯಾತ್ರೆ ವಿಜಯನೀಡು ಶಾಮಸುಂದರ ಸ್ವಾಮಿ ಶ್ರೀ ರಾಮನ ಪಟ್ಟದರಾಣಿ ಕರುಣಿ 3
--------------
ರಾಮದಾಸರು
ಜಯವೆನ್ನಿ ಜನರೆಲ್ಲ ಸ್ವಾಮಿ ಭವರೋಗವ್ಶೆದ್ಯಗೆ ಭಾವಜನಯ್ಯಗೆ ಕುವಲಯಧರಸ್ವಾಮಿಗೆ ನಾರಾಯಣ ಪ. ಆಗಮಚೋರನ ಗೆಲಿದ ರಾಮ ಬೇಗನೆ ಸುರರಿಗೆ ಸುಧೆಯೆರೆದ ಕೃಷ್ಣ ನಾಗಲೋಕವ ಹೊಕ್ಕವನ ಕೊಂದಾಗ ಶಿಶು ಕೂಗೆ ಕಂಬದಿ ಬಂದಗೆ ನಾರಾಯಣ 1 ಭಾಗೀರಥಿಯ ಪಡೆದೆ ರಂಗ ಬಾಗಿಸಿ ತಾಯ ಶಿರವ ಕಡಿದೆ ರಾಮ ನೀಗಿದಶ್ವವಾಹಕಗೆ ನಾರಾಯಣ 2 ಜಲದೊಳಗಾಳ್ದನ ಸೀಳ್ದ ರಾಮ ಅಲಸದೆ ಗಿರಿಯ ಬೆನ್ನಲಿ ತಾಳ್ದ ಕೃಷ್ಣ ನೆಲನ ಕದ್ದೊಯ್ದಸುರನ ಮರ್ದಿಸಿದ ಶಿಶು- ಗೊಲಿದು ಬಲಿಯ ತುಳಿದೆ ನಾರಾಯಣ 3 ಛಲಪದದಿ ರಾಯರ ಕಡಿದೆ ರಾಮ ಬಲು ಬಿಲ್ಲನು ಕರದಲ್ಲಿ ಪಿಡಿದೆ ಕೃಷ್ಣ ಕೋ- ಡುಳ್ಳವ ಕೋಪದ ಮುಖ ದೈನ್ಯದಿ ಬೇಡುವೆ ಕೊಡಲಿಗಾರ ನಾರಾಯಣ 4 ರೂಢಿಯೊಳು ರಾಯರ ಗೆಲಿದ ರಾಮ ಓಡಿ ಹೊಕ್ಕನೆ ದುರ್ಗದ ಜಲ ಕೃಷ್ಣ ನೋಡೆ ನಾರಿಯರ ವ್ರತವಳಿದೆ ಹಯವದನ ರೂಢರಾವುತನಾದ ನಾರಾಯಣ5
--------------
ವಾದಿರಾಜ
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ಜಲಜಾಕ್ಷ ಯಾಚಿಸುವೆ ಚಲುವ ಚರಣ ತೋರೋ ಸುಲಭದಿ ಹಯವದನ ಪ [ಶಶಿಯೊಲಿರುವದರಿಧರ] ಅಕ್ಷ ಸುಬೋಧ ಪುಸ್ತಕಧರ ವಸುಮತಿ ರಮಣನೆ ನಿನ್ನ ಸಾಸಿರ ನಾಮದಲಿ ಸೋಸಿಲಿ ನಾ ಪ್ರಾರ್ಥಿಸುವೆ 1 ವರವಾದಿ ಜಯದ ವಿಮುಕ್ತಿ ಪ್ರದಾತ ಅನುದಿನ ನಿನ್ನ ಆರೆರಡು ಅ ಕ್ಷರದ ಮಂತ್ರವನೂ ಪ್ರೇಮದಿ ನಾ 2 ಮುಖದೊಳ್ ಸಕಲಾಗಮ ವಿದ್ಯಾ ಸುಘೋಷ ಮಾಡಿ ಆ ಕಮಲಜ ಭವಮುಖರಿಂದ ಅಮೃತದಲಿ [ಸ್ತುತಿಸಿಹ ಅಭಿಷಿಕ್ತನೆ] ನೀನೆನಿಸಿ ನರಹರೆ 3
--------------
ಪ್ರದ್ಯುಮ್ನತೀರ್ಥರು
ಜಲಜಾಪ್ತ ಸಂಕಾಶ ಲಲಿತ ಸನ್ಮøದುಹಾಸ ಕಲಿಕಲುಷ ವಿಧ್ವಂಸ ಪರಮಹಂಸ ಶರಣಜನ ಸಂರಕ್ಷ ಸುರವಿರೋಧಿ ವಿಪಕ್ಷ ಧರ್ಮರಕ್ಷಣ ದೀಕ್ಷ ಶ್ರೀಕಟಾಕ್ಷ ಸರಸಿಜಾಯತನಯನ ಶರದಿಂದುನಿಭವದನ ದುರುಳ ಮ್ಲೇಂಛನಿಹನನ ತುರಗವದನ ಧುರಧೀರ ಶ್ರುತಿಸಾರ ಸುರುಚಿರಾಂಗದ ಹೀರ ವರಹಾರ ಕಂಧರ ಭಯವಿದೂರ ಕಮಲಾಸನಾದಿ ಸಂಸೇವ್ಯಮಾನ ಅಮರಸಂಕುಲತೋಷ ದಿವ್ಯವೇಷ ವಿಮಲ ಶೇಷಾದ್ರೀಶ ಶ್ರೀನಿವಾಸ
--------------
ನಂಜನಗೂಡು ತಿರುಮಲಾಂಬಾ
ಜಾಗರ ಮಾಡಿದೆನೇ ಪ ಜಾಗರ ಮಾಡಿದೆ ಸಾಗರನಿಲಯನ ನೀಗದಮಹಿಮೆ ಶಿವ ಯೋಗದಿ ತಿಳಿಸೆಂದು ಅ.ಪ ಲಕ್ಷಪತ್ರರ್ಪಿಸಿ ತ್ರಿಜಗದ್ರಕ್ಷ ನಿನಗೆ ನಮಿಸಿ ಲಕ್ಷದಿಂದ ಸತಿಗಕ್ಷಯವಿತ್ತ ಭಕ್ತ ಪಕ್ಷನ ನಾಮ ಎನ್ನ ಕುಕ್ಷಿಗೆ ನೀಡೆಂದು 1 ಮನವನು ಮಡಿಮಾಡಿ ಹರಹರ ನಿನಗೆ ನಾ ಎಡೆಮಾಡಿ ಮನಸಿಜಜನಕನ ಘನಸಚ್ಚರಿತೆಯನ್ನು ಕೊನೆಯ ನಾಲಗೆ ಮೇಲೆ ನೆನವು ಸ್ಥಾಪಿಸೆಂದು 2 ಪ್ರೇಮ ದೃಷ್ಟಿ ತೆರೆದು ಶಂಭು ಎನ್ನ ಕಾಮಿತಗಳ ಕಡಿದು ಭೂಮಿಗಧಿಕ ಮಮಸ್ವಾಮಿ ಶ್ರೀರಾಮನ ಕೋಮಲ ಪಾದವೆನ್ನ ಮಂಡೆಮೇಲ್ಹೊರಿಸೆಂದು 3
--------------
ರಾಮದಾಸರು
ಜಾಗಿಸಬೇಕು ಜಗದ್ಗುರುವಿನ ಕೃಪೆಯಿಂದ ಧ್ರುವ ಜಾಗಿಸದಲ್ಲದೆ ಖೂನ ಸುಗಮ ಸುಪಥದೋರದು ನಿಧಾನ ಯೋಗಿಜನರ ನಿಜಧನ ಆಗುದು ಸ್ವಾಧೀನ 1 ಜಾಗಿಸಿ ನೋಡಲು ಸ್ವಸುಖ ಬಗೆಬಗೆದೋರುತದೆ ಅನೇಕ ಅಗಣಿತಗಮ್ಯಾಲೋಲಿತ ಶ್ರೀಗುರು ಕೌತುಕ 2 ಝಗಿಝಗಿಸುವ ಜಗಜ್ಯೋತಿ ಜಾಗಿಸಿದ ಶ್ರೀ ಸದ್ಗುರುಮೂರ್ತಿ ಸಾಗಿ ಭವನಿದ್ರೆಯವಾರ್ತಿ ನೀಗಿದ ಮಹಿಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ ಪ್ರಾಣನಾಯಕನ ತಿಳಿವುದೊಂದೆ ಜ್ಞಾನಾಭ್ಯಾಸ ಮಾಡಿ ಧ್ರುವ ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ ನೆರೆ ಇಲ್ಲದೆ ಸಾಧುಸಜ್ಜನರು ಸರ್ವಬಳಗವ್ಯಾಕೆ ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ಯಾಕೆ 1 ಪ್ರಾಣವಿಲ್ಲದ ಸುಂದರವಾದ ಶರೀರ್ಯಾಕೆ ಕಾಲ ಬದಕುವುವದ್ಯಾಕೆ ಸ್ವಾನುಭವದ ಸುಖ ನೆಲೆಯುಗೊಳ್ಳದೆ ಒಣ ಡಂಭವ್ಯಾಕೆ ತಾನಾಗಿಹ್ಯ ವಸ್ತು ದೊರಕಿಲ್ಲದೆ ನಾ ನೀನೆಂಬುದ್ಯಾಕೆ 2 ಶ್ರೀ ಹರಿಮಹಿಮೆಯ ಸೋಹ್ಯ ತಿಳಿಯದೆ ದೇಹ್ಯವ್ಯಾಕೆ ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಾಣರಾಯಗೆ ಇಟ್ಟ ಕಾಣಿಕೆಯನು ಕೊಟ್ಟು ಪ ಕಷ್ಟಗಳೆಲ್ಲವು ಬೆನ್ನಟ್ಟಿ ಬರುವಾಗ ಕಟ್ಟಿದ ಹರಕೆಗಳೆಲ್ಲವನು ಸಿಟ್ಟು ಮಾಡುವ ಸ್ವಾಮಿ ಇಟ್ಟುಕೊಂಡರೆ ಇನ್ನು ಮುಟ್ಟಿಸಿಕೊಡಬೇಕಲ್ಲಿ ತಿಮ್ಮಪ್ಪನಲ್ಲಿ 1 ಗಂಡ ಹೆಂಡತಿಯು ಮಕ್ಕಳು ಸಹವಾಗಿ ದಂಡು ಮಾಳ್ಪೆವು ತಾವು ಎನುತಲಿ ಉಂಡೆವು ಸ್ಥಿರವಾರ ಊಟವ ಏಕವ ಕಂಡು ಬಹರೆ ಹೋಗುವ ದಯವಾಗುವ 2 ಕಟ್ಟಿದ ಕಾಣಿಕೆ ಇಟ್ಟು ಚರಣದಲ್ಲಿ ಸಾಷ್ಟಾಂಗವು ಎರಗಿದರೆ ದೃಷ್ಟಿಯಿಂದಲೆ ನೋಡಿ ದಯಮಾಡಿ ಕಳುಹುವ ವರಾಹ ನಮ್ಮಪ್ಪ ತಿಮ್ಮಪ್ಪನು 3
--------------
ವರಹತಿಮ್ಮಪ್ಪ
ಜಾತಿ ಕುಲಗೋತ್ರಗಳ ಖ್ಯಾತಿ ಹಿರಿದಲ್ಲಯ್ಯ ಪ ನೀತಿ ನಯ ಭಕುತಿಗಳು ಹಿರಿಯವಯ್ಯ ಅ.ಪ ಸ್ನಾನ ಸಂಧ್ಯಾ ಹೋಮ ಧ್ಯಾನ ದಿನಚರ್ಯೆಗಳ ತಾನಲಕ್ಷ್ಯವ ಗೈವ ಮಾನವನು ದ್ವಿಜನೇ ಶ್ರೀನಿವಾಸಾ ರಂಗ ದಾನವಾರಿ ಎಂದು ಜಾನಿಸುವ ಹರಿಜನರು ಹೀನರಹರೇ1 ಬೂದಿ ನಾಮವ ಬಳಿದು ವೇದಾಂತಿ ತಾನೆಂದು ಮೇದಿನಿಯ ಜನರಲ್ಲಿ ಕ್ರೋಧ ತೋರಿ ಮಾಧವನ ಭಕುತರಲ್ಲಿ ಭೇದ ವೈರವ ತಾಳಿ ವಾದ ಮಾಡುವ ನರಗೆ ಹರಿಯ ಕೃಪೆಯುಂಟೆ 2 ವನಜನಾಭನ ನೆನೆದು ತನುಮನವನರ್ಪಿಸದೆ ಧನದಾಸೆದೋರುವನು ಹರಿಭಕುತನೆ ಕನಸುಮನಸಿನೊಳೆಲ್ಲ ಮಾಂಗಿರೀಶನ ಭಜಿಸಿ ದಿನಪೂಜೆಗೈವವನು ಕುಲಹೀನನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಾನಕಿಯು ನಮ್ಮಮ್ಮ ನಮಗೆ ಭಯವೇನು ಪ ಪವಮಾನ ತನಯನು ಪಾಲಿಪ ಗುರುವಯ್ಯಾ ಅ.ಪ ಕಾಲಕಾಲದಿ ತಪ್ಪದೆ | ಭತ್ಯವ ಹಾಕಿ ಬಾಲಲೀಲೆಗಳಾಡಿಸಿ ಮೇಲೆ ತುಡುಗಾಟವಾಡಿದರೆ ಕೆನ್ನೆಯ ಹಿಂಡಿ ಹಾಲ ಕುಡಿಸಿ ಮಕ್ಕಳರ್ಥಿಯ ನೋಡುವ 1 ಇತರ ಮಕ್ಕಳಿಗೆಲ್ಲಾ | ಅವರ ಮಾತಾ ಪಿತರು ವಡವೆಗಳಿಟ್ಟು ಮಿತಿಯಿಲ್ಲದೆ ಬೈದು ಬಲು ಚಿಂತೆಯ ಪಡುವರು 2 ಕಳ್ಳರಿಗೆ ಸಿಕ್ಕದೈಯ್ಯ | ನಮ್ಮೊಡವೆಗಳ್ ಕಳಚುವುದಕೆ ಬಾರದು ಒಳ್ಳೆ ವಸ್ತ್ರವ ಉಡಿಸಿ ಉಚಿತ ತಿಂಡಿಯ ಕೊಡಿಸಿ ಸುಳ್ಳಾಡದಂದದಿ ಸುತ್ತಿಸಿ ನಗುವರು 3 ಓದು ಬರಹವ ಕಲಿಸಿ | ನಮ್ಮನು ಕೆಲವು ಹೊತ್ತು ಆಟಗಳಾಡಿಸಿ ಆದರಿಸುತ ಜನ್ಮ ಜನ್ಮಗಳಲಿ ಬಿಡದೆ ಕಾದು ಕೊಂಡಿರುವರು ಕಡೆಗೂ ನಮ್ಮಗಲರು 4 ಇಂತಹ ನಮ್ಮವರ ಬಿಟ್ಟು | ಬರಿದೇ ಲೋಕ ಸಂತೆಯವರನು ನಂಬುವರೆ ಎಂತಾದರೂ ಗುರುರಾಮ ವಿಠಲನ ನಾಮ ಸ್ವಂತವಾದರೆ ಮುಕ್ತಿ ಸ್ವಾಧೀನವಾಗುವುದು5
--------------
ಗುರುರಾಮವಿಠಲ
ಜಾನಕಿರಾಮ ಜಾನಕಿರಾಮ ಪ ನೃತ್ಯವನಾಡೊ ವರಗಳ ನೀಡೋ 1 ವಾರಿಧಿ ಬಂಧ ವಸುದೇವ ಕಂದ ಸ್ವಾರಸ್ಯ ತಂದ ಸತ್ಕರುಣದಿಂದ 2 ಶಿರಿವಾಸ ಸಿರಿದೇವಿ ತೋಷ ಉದ್ಧವ ಘೋಷ3
--------------
ವಿಜಯದಾಸ
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ಜಾಹ್ನವಿ ದೇವಿ ಜಯ ಭಕುತ ಸಂಜೀವಿ ಜಯ ಪ್ರದಾಯಕ ವೀವೆ ಜಯ ಎಮ್ಮ ಕಾವೆ ಪ ಅಜನ ಸಭೆಯಲಿ ವರುಣಗೆ ಶಾಪವು ಬರಲು ಪ್ರಜಪಾಲನಾದ ಶಂತುನ ನಾಮದೀ ನಿಜರೂಪದಲಿ ಬಂದು ಅಷ್ಟವಸುಗಳ ಪಡೆದೆ ಭಜಿಸಬಲ್ಲೆನೆ ನಿನ್ನ ಬಹು ಭಾಗ್ಯವಂತೇ1 ಸಗರರಾಯನ ವಂಶವನ್ನೆ ಉದ್ಧಾರೆ ಅಗಣಿತೋದಯ ಪಾರಂವಾರೆ ಶುಭಶರೀರೆ ಮುಗುವೆನು ಕರವೆತ್ತಿ ಸಂತತ ವಾರಂವಾರೆ 2 ಏನು ಧನ್ಯರೊ ಎನ್ನ ಕುಲಕ ಪಾವನೆಯೆನಲು ನೀನುಬ್ದಿ ಪೊರದೆ ಉತ್ಸಾಹದಿ ಮೆರೆದೆ ಮಾನನಿಧಿ ವಿಜಯವಿಠ್ಠಲನ ಸನ್ನಿಧಿಯಲ್ಲಿಜ್ಞಾನಪೂರ್ವಕ ವೊಲಿದು ಭಕುತಿ ಕೊಡು ಎನಗೆ 3
--------------
ವಿಜಯದಾಸ
ಜಿತಮನವ ನೀಡೆನಗೆ ಜಿಷ್ಣುಸಖನೆ ರತಿಪತಿಪಿತ ನಿನ್ನ ಹಿತದಿ ಭಜಿಸುವೆನೊ ಪ. ದುಷ್ಟ ಇಂದ್ರಿಯಗಳು ಕೆಟ್ಟ ವಿಷಯಗಳಲ್ಲಿ ಕಟ್ಟ್ಟೆ ಎನ್ನಯ ಮನವ ಸೆಳೆಯುತಿಹವೊ ಕೃಷ್ಣಮೂರುತಿ ನೀನೆ ದೃಷ್ಟಿಯಿಂದಲಿ ನೋಡಿ ಒಟ್ಟುಗೂಡಿಸಿ ನಿನ್ನ ಪಾದದಲ್ಲಿಡಿಸೊ 1 ಎಂಟು ಜನ ದುಷ್ಟರು ಆರು ಜನ ಕಳ್ಳರು ಕಂಟಕರಾಗಿನ್ನು ಕಾಡುತಿಹರೋ ಎಂಟುದಳಗಳಿಪ್ಪ ನೆಂಟರೆನಗಾಗರೊ ಎಂಟೆರಡು ಇಂದ್ರಿಯವ ಬಂಧನದೊಳಿರಿಸೊ 2 ಮೂರು ತಾಪಗಳಿಂದ ಮೂರು ಗುಣದೊಳು ತಿರುಗಿ ಮೂರು ಮಾರ್ಗವ ಕಾಣೆ ಮುರವೈರಿಯೆ ಮೂರು ಅವಸ್ಥೆಗಳ ವಿವರವರಿಯದ ಎನಗೆ ದಾರಿ ತೋರಿ ಸಲಹೊ ಕಾರುಣ್ಯನಿಧಿಯೆ 3 ಡಿಂಬ ಮಧ್ಯದಲಿರುವ ಅಂಬರದಲಿ ನಿನ್ನ ಬಿಂಬರೂಪವ ತೋರೊ ಶಂಭು ಸಖನೆ ಅಂಬುಜನಾಭ ಎಪ್ಪತ್ತೆರಡು ಸಾಹಸ್ರ ತುಂಬಿದ ನಾಡಿಯೊಳು ರೂಪಗಳ ತೋರೊ4 ಮನದಲ್ಲಿ ನೆಲಸಿಹನೆ ಮನುಶಬ್ದವಾಚ್ಯನೆ ಮನದಿಂದ ಭಿನ್ನನೆ ಮನಪ್ರೇರಕ ಮನವ ನಿನ್ನಲಿ ನಿಲಿಸಿ ಅನುಗಾಲ ಸಲಹುವುದು ಚಿನುಮಯನೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ