ಒಟ್ಟು 4883 ಕಡೆಗಳಲ್ಲಿ , 127 ದಾಸರು , 3275 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಹಿಮಾಂ ತೀರ್ಥಧಾಮಾ | ಪಾಹಿಮಾಂತ್ರಿಜಗಾದಿ | ಪಾಹಿಮಾಂ ತನುಜಧವ | ಹೇಹಿಮರಾಚೂಡ | ದೇಹಿ ಮನೋಭೀಷ್ಮ | ಮಹೀಶಾಯಿಸುಖ ಆಕಾಶ | ವಾಹಿನಿ ಧರಾ | ಮೋಹನ ಚರಿತ ರಜತಗೇಹ ಸಾಂಬಾ ಪ ಈಶ ಅಘನಾಶ ಸರ್ವೇಶ ಸುರಕೋಶ ಮುನಿ | ತೋಷಗಜಾಸುರ ವಿನಾಶ ಭವಪಾಶ ಹರ | ವಾಸವಾದ್ಯನುತ ನಿರ್ದೋಷ ಶ್ರೀ ಭಸಿಶಿತ | ವಿ ಭೂಷಿತ ವಿನಾಶ ರಾಮೇಶ ಶಿವಶಂಭೋ 1 ವೀರ ರಣಧೀರ ಗಂಭೀರ ಸಾಕಾರವರ | ಪ್ರಾರ ಸಂಹಾರ ಭಯ ಪೂರಿತ ಪುರಾರಿ | ಮೌ ದಾರ ಚಿರಚಿರಂಡ ಜಾರಿವಿಹಾರಿ | ಶ್ರೀ ಹೇರಂಬ ತಾತದಯ ಪಾರಾವಾರ ಶಂಭೋ 2 ದುರಿತ | ಕಾಲಹರ ಗೋಗಮನ ಭಾಲನಯನಾರ್ತಜನ | ಪಾಲ ವಿಶಾಲಾ ತ್ರಿಶೂಲಧೃತನಿರುತ ಶುಭ ಲೀಲ ಶ್ರೀ ಗುರುಕೃಷ್ಣ ಬಾಲಕ ಪ್ರಭು ಶಂಭೋ3 ಅಂಕಿತ-ಶ್ರೀಗುರುಕೃಷ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾಹಿಮಾಂ ಪರಮೇಶ ಪಾಹಿಪನ್ನಗಭೂಷ ಪಾಹಿಕೈಲಾಸವಾಸ ಪ ಸ್ವಾಮಿ ಗಿರಿಜಾನಾಥ ಸಮರ ವಿಜಯ ತ್ರಿಣೇತ್ರ ಸುಜನ ವಿನುತ ಕಾಮಿತಾರ್ಥ ಪ್ರದಾತ ಕ್ಷೇಮತರ ಸುಚರಿತ್ರ ಸಾಮಗಜ ವದನ ತಾತರಾಮೇಶ ಕೇಶಪುನೀತ ಪ್ರಖ್ಯಾತ 1 ಕಾಲ ಭಾಳಾಕ್ಷಭಯ ಸಂಹಾರ ಜನಸಾರ ಶೂಲಧರ ಕರುಣಾಕರ ಶೀಲವರಗುಣ ಸುಂದರ ಹರಪಾಶ ಭಯವಶಂಕರ ಓಂಕಾರ 2 ಬಲಸಾಕಾರತ ವಿಶಾಲ ಏಕಮಯ ತ್ರಿಗುಣದಿಂದ ಖಿಲಲೋಕ ವಿಸೂತ್ರ ಜಾಲ ಸಾಕೆನ್ನ ಭವದಳಲ ಶೋಕವನು ನೀಕೇಳದೇಕೆ ಈ ಚೇಷ್ಟೆಬಹಳ ಕಾಲ ಮೂಕಾಂಬಿಕಾಂಬಲೋಲ3 ನಾಗವಾಹನ ನಮಿತನೆ ಯೋಗಮಾಯಾತೀತನೆ ಸಾಗರಾಂಬರದೊಡೆಯನೆ ಭಾಗವತ ಭಾಗಚಂದಿರಧರನೆ ಹರನೆ 4 ಧರಣಿಯೊಳಗೆ ವಿಶೇಷತರ ಗೌಜದೊಳುವಾಸ ವರಋಷಿ ಸ್ಥಾಪನೇಶ ಸರಸಕೀರ್ತಿ ವಿಲಾಸ ಸ್ಮರಹರ ಸುರಾಧ್ಯಕ್ಷ ದುರಳ ದಾನವ ವಿನಾಶ ದುರಿತಹರ ನಿರ್ದೋಶ ಧರಣಿ ಸುರಜನರಕ್ಷ ಕರಿಚರ್ಮಧರಮಹೇಶ ಉರಗರಾಜ ವಿಭೂಷವರ ಗುರು ವಿರೂಪಾಕ್ಷ ಪುರಮಥನ ಗೌತಮೇಶ 5
--------------
ಕವಿ ಪರಮದೇವದಾಸರು
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಿಡಿದೆತ್ತೊ ಕೈಯ್ಯಾ ಕೃಷ್ಣಯ್ಯ ಪ ಪಿಡಿದೆತ್ತೊ ಕೈಯ್ಯಾ ಪಾಲ್ಗಡಲೊಡೆಯನೆ ಭವ ಕಡಲಿನೊಳಗೆ ಬಿದ್ದು ಬಾಯ್ಬಿಡುವೆ ಬೇಗದಿ ಬಂದು ಅ.ಪ ತಾವರೆನಾಭಾ ಕಾವದÀು | ಎನ್ನ ಜೀವನಲಾಭಾ ಶ್ರೀವ್ಯಾಸಮುನಿಗೊಲಿದವ | ನೆಂದರಿತು ಬಂದೆ ಶ್ರೀವೇಣುಗೋಪಾಲಕೃಷ್ಣ | ಗೋವಳರೊಡೆಯ ಭಾವ ಭಕುತಿಗಳೊಂದನರಿಯೆನು ಹೇವವಿಲ್ಲದೆ ದಿನವ ಕಳೆದೆನು ಸಾವಧಾನವ ಮಾಡಲಾಗದು ಶ್ರೀವರನೇ ನವವಿಧ ಭಕುತಿ ನೀಡುತ 1 ಅನುಮಾನವ್ಯಾಕೆ | ನೀನೆ ಗತಿ ಎನುವೆನು ಬಲ್ಲಿ ಅನುದಿನ ಸೇವಿಪೆ ಅನಘನೆ | ಎನ್ನಘ ಗಣನೆ ಮಾಡದೆ ಮುನ್ನ ಅನುವಾಗಿ ಪಾಲಿಸೊ ಮಾನವೇದ್ಯನೆ ಮನದಿ ನಿರ ತನುದಿನದಿ ನಿನ್ನಯ ಧ್ಯಾನವಿತ್ತು ಮನೋವಿಷಾದವನಳಿಯೆ ನಿನ್ನನು ಮರೆಯೆನುಪಕೃತಿ ಸತತ ಸ್ಮರಿಸುವೆ 2 ಶ್ರೀ ನರಹರಿಯೆ ಭಕುತಜನ | ವನಜದಿನಮಣಿಯೆ ಸಾನುರಾಗದಿ ಕೇಳ್ವೆ | ಹನುಮನ ಮತದಲ್ಲಿ ಅನುಚಾದ ಜ್ಞಾನವ | ಕನಸಿನಲಿ ಮನಸಿನಲಿ ಜನನಿ ಜನಕ ತನುಜೆ ವನಿತೆಯಾ ತನುವಿನಲಿ ನೆಲೆಸಿರುವ ಭ್ರಾಂತಿಯ ಹೀನಗೈಸಿ ಮನೋಭಿಲಾಷೆಯ ಭಾರ ನಿನ್ನದು 3
--------------
ಪ್ರದ್ಯುಮ್ನತೀರ್ಥರು
ಪಿಡಿಯಿರಿ ಪಿಡಿಯಿರಿ ಹರಿ ಚರಣವನು ಪಡೆಯಿರಿ ಪಡೆಯಿರಿ ಹರಿ ಕರುಣವನು ಪ ಸ್ಮರಶರ ಬಾಧೆಗೆ ಸಿಲುಕದೆ ಜನರೇ ಭರದಲಿ ಶ್ರೀ ಹರಿ ಸೇವೆಯನು ನಿರುತವು ಗೈಯುತ ಕೇಶವನಾಮವ ಹರುಷದಿ ಸ್ಮರಿಸುತ ಭಜಿಸುತಲೀ 1 ದನುಜ ಭಂಜನನಾದ ಕೇಶವ ಸೇವೆಯ ತನು ಮನ ಧನದಿಂದ ಗೈಯುತಲೀ ಅನುದಿನ ಶ್ರೀ ಹರಿ ಕೀರ್ತನೆ ಮಾಡುತ ಮನುಜ ರಂಜನನನ್ನು ಸವಿಸುತಲೀ 2 ಸುಜನರ ಪಾವನ ಶರಣರ ತಾತನ ಕುಜನರ ಕಾಲನ ಆದರದೀ ಭಜನೆಯ ಮಾಡುತ ದೂರ್ವಾಪುರವನು ಸ್ರಜಸಿದ ಕೇಶವನೂ 3
--------------
ಕರ್ಕಿ ಕೇಶವದಾಸ
ಪೀಠಸಮರ್ಪಣೆಕಂ|| ಮಾನಸ ಪೂಜೆಯ ವಿರಚಿಸಿಶ್ರೀನಿಲಯನ ಚರಣಗಳಿಗೆ ಪಾವುಗೆಗಳ ನಾಂಆನತನಾಗುತಲೊಪ್ಪಿಸಿಭಾನುವಿನ ಪಥದಲಿಳುಹಿ ಬಿಂಬದಿ ಭಜಿಪೆಂಬಂದೀ ಪೀಠದಿ ನೆಲಸೊ ಹೃÀದಯಮಂದಿರದಿಂದಾ ಕರುಣದಿಂ ವೆಂಕಟರಾಯಾ ಪಪುರದೊಳು ವಿಮಲೆಯುತ್ಕುರುಷಣಿಯಗ್ನಿ ಯೊಳಿರುವಳು ಜ್ಞಾನೆ ದಕ್ಷಿಣದೇಶದಿನಿರುರುತಿಯೊಳು ಕ್ರಿಯೆ ವರುಣನೊಳ್ಯೋಗಾಖ್ಯೆಮರುತನೊಳ್ಪ್ರಹ್ವಿ ಸೋಮನೊಳ್ ಸತ್ಯೆುಹಳಾಗಿ 1ಈಶನೊಳೀಶಾನೆ ಮಧ್ಯದೊಳನುಗ್ರಹೋಪಾಸಿಕೆಯಾದಿಯಾಗಿರುತಿಹರುವಾಸುದೇವನೆ ನಮ್ಮನೊಲಿದು ರಕ್ಷಿಸುವರೆಸಾಸಿರ ನಾಮಸನ್ನುತನೆ ಸಂತಸದಿಂದ 2ಅನಲನೊಳ್ ಧರ್ಮ ನಿರುರುತಿಯೊಳ್ ಜ್ಞಾನವುತನುಗೊಂಡು ವೈರಾಗ್ಯ ಮರುತನೊಳುವಿನಯದಿಂದೈಶ್ವರ್ಯನೀಶದೇಶದಿ ಸೇವೆಗನುಕೂಲರಾಗಿ ಕಾದಿರುವರೆನ್ನೊಡೆಯನೆ 3ಮುಂದೆಯಧರ್ಮ ದಕ್ಷಿಣದೊಳಜ್ಞಾನವುಹಿಂದೆಡೆಯೊಳಗವೈರಾಗ್ಯ ತಾನುಇಂದುದೇಶದೊಳನೈಶ್ವರ್ಯನೊಂದಿರುವನುಇಂದೆಮ್ಮನೊಲಿದು ರಕ್ಷಿಸಲು ಗೋವಿಂದನೆ 4ಕಲಶದೊಳ್ ಗಂಗಾದಿ ನದಿಗಳು ಶಂಖದಜಲದೊಳು ಬ್ರಹ್ಮಾದಿಗಳ ತೀರ್ಥಸಂಘವುಒಲಿದಘ್ರ್ಯ ಪಾದ್ಯಾಚಮನ ಸ್ನಾನ ಶುದ್ಧಾಂಬುಗಳ ಪಂಚಪಾತ್ರೆಗಳೊಳು ನೆಲಸಿವೆ ಸ್ವಾಮಿ 5ಪುರುಷಸೂಕ್ತದಿಂದೆನ್ನ ಶರೀರದೊಳ್ಪೂಜಿಪವರಬಿಂಬದೊಳು ನ್ಯಾಸಗೈದಿಹೆನುಪರಮ ಮಂತ್ರಾಧಿದೇವತೆಗಳನೆಂಟು ಪನ್ನೆರಡಕ್ಕರದ ವಿದ್ಯೆುಂದಲು ಜಗದೀಶ 6ಗುರುವಾಸುದೇವಾರ್ಯರೂಪದಿ ಶ್ರೀರಂಗಪುರದ ಕಾವೇರಿ ತೀರದೋಳು ನೀನೆಕರುಣಿಸಿದತಿ ಗೋಪ್ಯ ಮಾರ್ಗದಿಂದರ್ಚಿಪೆತಿರುಪತಿ ಕ್ಷೇತ್ರದ ದೊರೆಯೆ ವೆಂಕಟರಾಯ 7ಓಂ ನಂದಗೋಪಪ್ರಿಯಾತ್ಮಜಾಯ ನಮಃ
--------------
ತಿಮ್ಮಪ್ಪದಾಸರು
ಪೀತಾಂಬರಧರ ನಮೋನಮೋ ವನ ಜಾತಾಂಬಕ ತೇ ನಮೋ ನಮೋ ಪ ಖ್ಯಾತ ಚರಿತ್ರ ವಿಧಾತೃಜನಕ ಪುರು - ಹೂತ ಸಹೋದರ ನಮೋ ನಮೋ ಅ.ಪ ಪಾರ್ಥೋನಿಧಿಶಯ ನಮೋ ನಮೋ ಶ್ರೀ ತರುಣೀಪ್ರಿಯ ನಮೋ ನಮೋ 1 ಶ್ಯಾಮಳನೀರದ ಕೋಮಳದೇಹ ನಿ ರಾಮಯ ನಿರ್ಮಲ ನಮೋ ನಮೋ ಕಾಮಜನಕ ಬಲರಾಮ ಸಹಜ ಸಂ ಗ್ರಾಮಮುಜ್ವಲ ನಮೋ ನಮೋ 2 ಸುಂದರ ನಮೋ ನಮೋ ಕುಂದರದನ ಶರದಿಂದುವದನ ಗೋ ವಿಂದ ಜನಾರ್ಧನ ನಮೋನಮೋ 3 ಶಂಸ ವಿಹಿಂಸಕ ನಮೋ ನಮೋ ಸಂಸರದಘ ವಿಧ್ವಂಸಕ ಪರಮ ಹಂಸೋತ್ತಂಸಕ ನಮೋ ನಮೋ 4 ಗರುಡಗಮನ ತೇ ನಮೋ ನಮೋ ವರದವಿಠಲ ತೇ ನಮೋ ನಮೋ 5
--------------
ವೆಂಕಟವರದಾರ್ಯರು
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಪುಂಡನಾದೆನು ನಾನು ಭಂಡ ಮನುಜಾ ಕಂಡವರಲ್ಲಿಯುಂಡು ಎಂಜಲವನು ಪ ಪುಂಡರೀಕಾಕ್ಷ ಶ್ರೀ ಕೃಷ್ಣಗರ್ಪಿಸದೆಡೆ- ಯುಂಡರದು ಬುಧರರಿವರೆಂಜಲಂದು ತುಂಡ ಜನರಿಂಧನ್ನ ಮುದ್ದು ಮೆರೆದರು ಕೊಬ್ಬಿ ಕಂಡಿವರೊಳಾದರದಿ ಸವಿಯಗೊಂಡನು ದೇವಾ 1 ಲಿಂಗಭವನೈಯ್ಯ ನಿನ್ನೊಲಿಮೆ ಮರೆಯನು ನಾನು ಮಂಗಳಾಂಗಿಯ ಮೊರೆ ಕೇಳ್ದು ಭರದಿ ಭಂಗ ಬಹುದೆಂದು ಕಾನನದಿ ಎಂಜಲನುಂಡು ಅಂಗರಕ್ಷಕನಾಗಿ ಪಾಂಡವರ ಪೊರೆದಿ ಧೊರಿಯೆ 2 ಸರಸಿಜಾಕ್ಷನೆ ನಿನ್ನ ಕರುಣಪಾತ್ರನು ನಾನು ಅರಿಯದುಡಿದನು ತೀಕ್ಷಮಿಪುದೀಗ (?) ಸುರನಿರಲಿ ನರನಿರಲಿ ಪತಿತನಾದವನಿರಲಿ ಸರಿಯಾಗಿ ಕರುಣಿಸುವಿ ನರಸಿಂಹವಿಠಲ 3
--------------
ನರಸಿಂಹವಿಠಲರು
ಪುಂಡರೀಕ ವರದ ವಿಠಲ | ಪೊರೆಯಿವನಾ ಪ ತೊಂಡ ವತ್ಸಲನೆ ಬ್ರಂ | ಹ್ಮಾಂಡಗಳ ಒಡೆಯಾ ಅ.ಪ. ಅನುವಂಶಿಕವಾಗಿ | ಆಧ್ಯಾತ್ಮ ಪರಿನಿಷ್ಠಧಾನವಾಂತಕ ಕೃಷ್ಣ | ಧೀನವತ್ಸಲನೇ |ನೀನೇಗತಿ ಎಂದೆಂಬ | ಸ್ವಾನುಭಾವದಿಇವಗೆಮಾನನಿಧಿ ತವದಾಸ್ಯ | ಧಾನಮಾಡುವುದೋ 1 ಪವನವಂದಿತದೇವ | ಕವನಶಕ್ತಿಯು ಇವಗೆದಿವಸದಿವಸಕ್ಕೆ ವೃದ್ಧಿ | ಭಾವವನೆ ಪೊಂದೀ |ಧೃವವರದ ನಿನ್ನಂಘ್ರಿ | ಸ್ತವನಮಾಳ್ವಂತೆಸಗಿಭವವನಿಧಿ ಉತ್ತರಿಸೊ | ಶರ್ವದೇವೇಡ್ಯಾ 2 ಮಧ್ವಮತ ದೀಕ್ಷೆಯಲಿ | ಶ್ರದ್ಧಾಳು ಎಂದೆನಿಸಿಸಿದ್ದಾಂತ ಪದ್ಧತಿಯ | ಶುದ್ಧಮತಿಯಿತ್ತೂಅಧ್ವೈತತ್ರಯ ತಿಳಿಸಿ | ಉದ್ದಾರ ಗೈಯುವುದೂಕೃದ್ಧಕಶ ಸಂಹಾರಿ | ಮಧ್ವವಲ್ಲಭನೇ 3 ಕರ್ಮ ಅಕರ್ಮಗಳ | ಮರ್ಮಗಳ ತಿಳಿಸುತ್ತನಿರ್ಮಲನು ಎಂದೆನಿಸೊ | ಪೇರ್ಮೆಯಲಿ ಇವನಾ |ಭರ್ಮಗರ್ಭನನಯ್ಯ | ನಿರ್ಮಮತೆ ವೃದ್ಧಿಸುತಪ್ರಮ್ಮೆಯಂಗಳ ತಿಳಿಸಿ | ಹಮ್ರ್ಯದೊಳು ತೋರೀ 4 ಭಾವಙ್ಞ ತೈಜಸನೆ | ನೀವೊಲಿದು ಪೇಳ್ದಂತೆಭಾವುಕಗೆ ಇತ್ತಿಪೆನೊ | ಈ ವಿಧಾಂಕಿತವಾ |ನೀವೊಲಿಯದಿನ್ನಿಲ್ಲ | ದೇವದೇವೋತ್ತಮನೆಕಾವಕರುಣೆಯೆಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪುಣ್ಯೋದವೇ ಈ ಪುಣ್ಯಭೂಮಿಯೊಳು ಪನ್ನಂಗಶಯನ ಸನ್ನುತಿಪ ದಾಸರಿಗೆ ಪ ಕಡುಸಿರಿವಂತರಾದೊಡೆ ಬಡವರ ಬಾಯ್ಬಡಿಯದೆ ಕೊಡುವಿಡುವ ಕೆಡದತಿ ಪುಣ್ಯ ಬಡತನವಿರ್ದಡೆ ಎಡೆಬಿಡದೆ ಒಡಲೊಳು ಜಡಜಾಕ್ಷನಡಿಧ್ಯಾನ ಹಿಡಿದ ಮಹಪುಣ್ಯ 1 ಮಡದಿಯರೊಂದಿಗೆ ಬಿಡದೆ ಸಂಸಾರಗೈಯೆ ದೃಢಯುತರು ಮನೆಯೊಳಗಡಿಯಿಡುವ ಪುಣ್ಯ ಸಡಗರದಿ ಮಕ್ಕಳನ್ಹಡೆದು ಮೋಹದಿ ಜಗ ದೊಡೆಯನ್ಹೆಸರಿಟ್ಟು ನುಡಿಯುವ ಪುಣ್ಯ 2 ತಿರುಕರಾಗಿರ್ದಡೆ ತಿರಿದು ತಂದನ್ನವನು ಹರಿಯಪ್ರಸಾದವೆಂದು ತಿರಿದುಣುವ ಪುಣ್ಯ ಪರಮಪುರುಷನ ಚರಣ ನಿರುತ ಸ್ಮರಿಪ ಪುಣ್ಯ 3 ಹಿಂದೆ ಮುಂದೆ ತಮಗೆ ನಿಂದೆಯಾಡಲು ಆ ನಂದದಿ ಹಿಗ್ಗದ ಕುಂದದ ಪುಣ್ಯ ಮಂದಿಮಕ್ಕಳು ಬಿಡದ್ಹೊಂದಿಸಲದು ಹರಿ ಗೆಂದು ಅರ್ಪಿಸಿ ಮನಸೊಂದೆಮಾಡಿದ ಪುಣ್ಯ 4 ನೀರಿನೊಳಿರಲೇನರಣ್ಯದೊಳರಿಲೇನು ಘೋರತಾಪದಿರಲೇನಪಾರಜ್ಞಾನಿಗಳು ಪಾರಮೋಕ್ಷಕ್ಕಧಿಪ ಧೀರ ಶ್ರೀರಾಮಪಾದ ವಾರಿಜದೊಳು ಮನ ಸೇರಿಸಿದ ಪುಣ್ಯರಿಗೆ5
--------------
ರಾಮದಾಸರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪುರಂದರ ಗುರುವರ್ಯ ಪ ಗುರುವರ್ಯ ಕಾಯಬೇಕೆನ್ನ ಮಧ್ವ ಗುರುಕೃತ ಗ್ರಂಥಾರ್ಥಜ್ಞಾನ ಕೊಟ್ಟು ಕರಣತ್ರಯ ಗಳಿಂದಾಚರಿಸುವ ಕರ್ಮವ ಹರಿಮಾಡಿಸುವನೆಂಬ ಸ್ಮರಣೆಯ ಕರುಣಿಸೊ ಅ.ಪ ಸುರಮುನಿ ನಿನ್ನ ಪ್ರಾರ್ಥನದಿ ಶ್ರೀ ಮ ದ್ಗುರು ವೇದವ್ಯಾಸರು ದಯದಿ ಪಾ- ಮರ ಪಂಡಿತರಿಗೆ ಸುಲಭದಿ ಧರ್ಮ ತಿಳಿದಾ- ಚರಿ ಪರೆಂದು ಮುದದಿ ಅರಿತು ನಿರುತ ಶೇವಿಪರಿಗೆ ಪರಮ ಮಂಗಳವೀವ ಭಾಗವತ ಗ್ರಂಥ ನಿರ್ಮಿಸಿದರು ಸತ್ಯ 1 ಕಲಿಯುಗದಲಿ ಹರಿನಾಮ ಜನರ ಕಲಿ ಕಲ್ಮಷಾದ್ರಿ ಸೂತ್ರಾಮ ಎಂದು ತಿಳಿದು ಕೀರ್ತಿಪರಿಗೆ ಪರಮ ಮಂ ಗಳ ಕರನಾಮದ ಮಹಿಮ ಎನುತ ಪುರಂದರ ಗಡ ದಲಿ ಪುಟ್ಟಿ ಬಲು ವಿಧ ಹರಿನಾಮಂ- ಗಳನು ವಿರಚಿಸಿದ 2 ಕಾಶ್ಯಾದಿ ಕ್ಷೇತ್ರ ಸಂಚರಿಸಿ ಪದ ರಾಶಿ ಸುಳಾದಿಗಳ ರಚಿಸಿ ಸಂ- ತೋಷ ತೀರ್ಥರ ಮತ ಬಲಿಸಿ ಗುರು ವ್ಯಾಸರಿಂದುಪದೇಶ ಗ್ರಹಿಸಿ ಜಗದಿ ಭೂಸುರ ಪಾಲಕ ಶ್ರೀಶಕಾರ್ಪರನರ ಕೇ ಸರಿ ಗತಿ ಪ್ರಿಯ ದಾಸರೆಂದೆನಿಸಿದ 3
--------------
ಕಾರ್ಪರ ನರಹರಿದಾಸರು
ಪುರಂದರ ದಾಸರೇ ನಿಮ್ಮ ಚರಣ ಸರಸಿಜ ನಂಬಿದೆ ಪ ಗುರುವ ರಹಿತರ ಮಾಡಿ ನಮ್ಮನು ಪೊರೆವ ಭಾರವು ನಿಮ್ಮದೆ ಅ ಒಂದು ಅರಿಯದ ಮಂದಮತಿ ನಾನಿಂದು ನಿಮ್ಮನು ವಂದಿಪೆ ಇಂದಿರೇಶನ ತಂದು ತೋರಿಸಿ ತಂದೆ ಮಾಡೆಲೊ ಸತ್ಕøಪೆ 1 ಪುರಂದರ ಗಡದೊಳಗೆ ನಿಂದು ನಿರುತ ದ್ರವ್ಯವÀ ಗಳಿಸಿದೆ ಕರವ ನೀಡಿ ಯಾಚಿಸೆ 2 ಪರಮ ನಿರ್ಗುಣ ಮನವರಿತು ಹರಿಗೆ ಸೂರೆಯ ನೀಡುತ ತರುಣಿ ಸಹಿತಾ ಹೊರಟನೆ 3 ಮಾರಜನಕನ ಸನ್ನಿಧಾನದಿ ಸಾರಗಾನವ ಮಾಡುವ ನಾರದರೆ ಈ ರೂಪದಿಂದಲಿ ಚಾರುದರುಶನ ತೋರಿದ 4 ಅಜಭವಾದಿಗಳರಸನಾದ ವಿಜಯವಿಠ್ಠಲನ ಧ್ಯಾನಿಪ ಭಜಿಪೆನೋ ಕೇಳ್ ಗುರುವರ 5
--------------
ವಿಜಯದಾಸ
ಪುರಂದರ ಗುರುರಾಯಾ ಸತ್ಪ್ಪುಣ್ಯ ಕಾಯಾ ಪ ನಿರುತ ನಿನ್ನ ಚರಣ ಸೇವೆ ಕರುಣ ಮಾಳ್ಪದೋ ಜೀಯಾಅ.ಪ. ಬಹು ಜನ್ಮಗಳಲ್ಲಿ ನಾನು ಮಹ ಪುಣ್ಯ ಮಾಡಿದವರ ಸಹವಾಸದಲಿದ್ದು ಗ್ರಹದ ಮುಂದೆ ಗ್ರಹದಿಂದೆನಗೆ ಮಹಿಸುರ ಜನ್ನವಿತ್ತೆ 1 ಶ್ವಾನ ಸೂಕರನೊ ನಾನದನು ಕಾಣೆನೊ ಮತ್ತಾವನೊ ನಾನಾ ಜೀವನೊ ಆನು ಒಂದು ತಿಳಿಯೆ ಗುರುವೆ ನೀನೆ ಬಲ್ಲಿ ಎನಗೆ ಬಂದ ಅನಾದಿ ಶರೀರವ ಅಜ್ಞಾನವನ್ನೇ ತೆಜಿಸುವುದು2 ಯಾಚನೆ ದೇಹದಲ್ಲಿ ಊಚು ಭಾಗ್ಯವ ಜಯಸದಿಪ್ಪ ಯೋಚನೆಯಿಂದಲಿ ಕಮಲಲೋಚನ ನಿನ್ನಂಘ್ರಿಯಾ ಕರವ ಬಾಚೆನೊ ಹೀನರಿಗೆ ನಿನ್ನ ಪಾಚಕರ ಮನೆಯ ಪರಿಚಾರ ಸಿದ್ಧÀ್ದವಾಗಲಿ 3 ಹಿಂದೆ ಏನು ಪ್ರೇರಿಸಿದಿಯೊ ನಂದವ ನಾನರಿಯೆನೊ ತಂದೆ ತಾಯಿ ನೀನೆ ಎಂದು ಪೊರದಿ ಸಂದೇಹವಿಲ್ಲ ಯೆಂದು ಪೊರೆದದ್ದು ನಿನ ಕರುಣವಲ್ಲವೆ ಮತ್ತೆ ಭಾರವು ನಿನದೆಂದು ನಾ ಪ್ರಾರ್ಥಿಸುವೆ 4 ತಿರುಗುವುದು ಕುಳ್ಳಿರುವುದು ಬರುವುದು ಮತ್ತೇಳುವದು ಮರಳೆ ಮಾತನಾಡುವುದು ವಾಸರದಲ್ಲಿ ಬಿಡದೆ ಸಿರಿ ವಿಜಯವಿಠ್ಠಲನ್ನ ಕರದೊಳಿಪ್ಪಂತೆ ಮಾಳ್ಪದೊ ಜೀಯಾ 5
--------------
ವಿಜಯದಾಸ