ಒಟ್ಟು 12747 ಕಡೆಗಳಲ್ಲಿ , 128 ದಾಸರು , 5642 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವೆ ನಿಮ್ಮನು ನಾ ಮೊರೆಹೊಕ್ಕೆನಲ್ಲದೆ ಅರಿಯೆ ಅನ್ಯರನಿನ್ನು ಪೊರೆಯಿರೀಗ ಪ. ಸಿರಿಯರಸನ ತೋರಿ ಗುರುವೆ ಕರುಣಿಸಿರಿ ತರತಮ್ಯ ತಿಳಿಸುತ ಹರಿಸಿರಿ ಭವದುಃಖಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಹಿಂದು ಮುಂದರಿಯದೆ ಕುಂದಿದೆನು ಬಂದು ಕರುಣದಿ ಆನಂದವ ನೀಡುತ ನಂದಕಂದನ ಲೀಲೆಯಿಂದ ರಕ್ಷಿಸಿದಿರಿ1 ಮುಸುಕಿದ ಅಜ್ಞಾನ ಹಸನಾಗಿ ತೊಲಗಿಸಿ ಕುಶಲದ ಮತಿಯಿತ್ತು ಪಾಲಿಸುತ ಬಿಸಜಾಕ್ಷನು ದಯ ಎಸೆವ ಕರುಣದಿಯಿತ್ತು ಘಸಣೆಗೊಳಿಸದಲೆ ವಸುಮತಿಯೊಳು ಪೊರೆವ 2 ಕಷ್ಟವಪಡಲಾರೆ ಸೃಷ್ಟಿಯೊಳಗಿನ್ನು ತಟ್ಟದೆ ಎನ್ನ ಮೊರೆ ಮನಸಿಗೀಗ ಕೊಟ್ಟು ಅಭಯವನು ಘಟ್ಯಾಗಿ ಪೊರೆಯಿರಿ ಕೆಟ್ಟ ಕಲ್ಮಷ ಕಳೆದು ಸೃಷ್ಟಿಗೊಡೆಯನ ತೋರಿ 3 ತಲ್ಲಣಿಸುತಿಹೆ ಕ್ಷುಲ್ಲ ದೇಹದಿ ಬಂದು ಒಲ್ಲೆನು ಈ ದುಃಖಭವ ಎಲ್ಲ ಮನಸು ನಿಮ್ಮ ಪಾದದಲಿರುವುದು ತಲ್ಲಣಗೊಳಿಸದೆ ಪೊರೆಯಿರಿ ಗುರುದೇವ 4 ತಂದೆ ಮುದ್ದುಮೋಹನವಿಠ್ಠಲನೆಂಬೊ ಇಂದಿರೇಶನ ಅಂಕಿತದಿ ಮೆರೆವೊ ಸುಂದರ ಗೋಪಾಲಕೃಷ್ಣವಿಠ್ಠಲನ ಎಂದೆಂದಿಗೂ ಮನಮಂದಿರದಲಿ ಕಾಂಬ 5
--------------
ಅಂಬಾಬಾಯಿ
ಗುರುವೆ ನಿಮ್ಮಯ ಕರುಣ ವೃಕ್ಷ ನೆಳಲೊಹೊರತಾದ ಕಾರಣದಿ ಹೀನನಾದೆ ಪ ಉದ್ಧವ ಖ್ಯಾತಿ ದ್ರೋಣನು ಕಲಿಯುಗದಿ ನಾನಾ ||ಭೌತಿಕಗಳ ಧರಿಸಿ ಪ್ರಾರ್ಥಿಸಿದ ಸಜ್ಜನರಆರ್ತಗಳ ಪರಿಹರಿಸಿ ಸರ್ವಾರ್ಥಗರೆವ1 ಶರಧಿ ಮುಣುಗಿದ ಮಹಾಪರಮ ಕರುಣಾನಿಧಿಯ ದೇವಮಣಿಯೆ2 ನಿರ್ಜನರು 3 ಆವಾವ ಕಾಲದಲಿ ನಿನ್ನ ದಯದಿಂದಲ್ಲಿದೇವಾರ್ತಿಗಳನೈದು (ದಿ) ಸೌಖ್ಯಬಡುವೆ ||ಕಾವ ಕರುಣೆಯೆ ಎನ್ನ ಅವಗುಣಗಳೆಣಿಸದಲೆಸಾವಧಾನದಲೆನ್ನ ಸಲಹಬೇಕು4 ಬಾಲಕನ ಅಪರಾಧ ಅನಂತವಿರಲಿನ್ನುಪಾಲಿಸಬೇಕಯ್ಯ ನೈಜಗುರುವೆ ||ಪಾಲಸಾಗರಶಾಯಿ ಗುರು ವಿಜಯ ವಿಠ್ಠಲರೇಯಕಾಲಕಾಲಕೆ ಅಗಲದಂತೆ ವರವೀಯೋ 5
--------------
ಗುರುವಿಜಯವಿಠ್ಠಲರು
ಗುರುವೆ ವರಹಜೆ ತಟವಾಸಾ | ಗುರುವೇ ಪುರಿ ಮಂತ್ರಾಧೀಶಾ ಪ ಆರು ಮೊರೆ ಇಡುವೆನೊ | ವರಪದ ಪದುಮಕೆಕರುಣದಲೆಮನ | ಹರಿಯಲಿ ಇರಿಸೋ ಅ.ಪ. ಬಾಗಿ ಭಜಿಪೆ ಗುರುವೇ | ಎನ್ನಯರೋಗ ಹರಿಸು ಪ್ರಭುವೇ ||ರಾಘವೇಂದ್ರ ದುರಿತೌಘ ವಿದೂರನೆ |ಭೋಗಿ ಶಯನ ಪದ | ರಾಗದಿ ಭಜಿಸುವ 1 ಭೂತ ಪ್ರೇತ ಬಾಧೇ | ಬಿಡಿಸುವಖ್ಯಾತಿ ನಿಮ್ಮದು ತಿಳಿದೇ ||ದೂತರೆನಿಪ ಜನ | ಆತುನಿಮ್ಮ ಪದ |ಪ್ರೀತಿ ಸೇವೆಯಲಿ | ಕಾತುರರಿಹರೋ 2 ಯೋನಿ ಬರಲೇನು ಅಂಜೆನೂ 3 ಪರಿಮಳಾರ್ಯರೆಂದೂ | ನಿಮ್ಮಯಬಿರಿದು ಕೇಳಿ ಬಂದೂ ||ಮೊರೆಯ ನಿಡುವೆ ತವ | ಚರಣಾಂಬುರುಹಕೆ |ಅರಿವ ನೀಯೊ ತವ | ಪರಿಮಳ ಸೊಬಗನು 4 ಪಾದ ಬಿಸಜ ||ವರ ಸುಹೃದ್ಗ ಗುರು | ಗೋವಿಂದ ವಿಠಲನಚರಣ ಸರೋಜವ | ನಿರುತ ಭಜಿಪ ಗುರು 5
--------------
ಗುರುಗೋವಿಂದವಿಠಲರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಸ್ತುತಿ ದಾಸರ ಭಜಿಸುತ ಕ್ಲೇಶವ ಕಳೆಯಿರೊ ವಾಸುದೇವನ ಭಕ್ತರಾದ ಶ್ರೀಪುರಂದರ ಪ ಮೀಸಲ ಮನದಲಿ ಕೇಶವನಡಿಗಳ ಆಸೆಲಿ ಪೂಜಿಪ ದಾಸರೊಳಗೆ ಶ್ರೇಷ್ಠ ಅ.ಪ ಪುರಂದರ ಗಡದೊಳು ಹಿರಿಯನೆಂದೆನಿಸಿದ ವರದಪ್ಪನಿಗೆ ವರಕÀುವರ ನೆಂದೆನಿಸಿದೀ ಧರೆಯೊಳು ತನಗ್ಯಾರು ಸರಿಯಿಲ್ಲದಂತೆ ಮೆರೆಯೆ ಸಿರಿಯರಸನು ಶೀಘ್ರದಲಿ ತಾನರಿಯುತ 1 ಬಂದನು ಮಗನಿಗೆ ಮುಂಜಿಯೆಂದೆನುತಲಿ ಚಂದದಿಂದಲಿ ಬೇಡಲು ಧಣಿಯ ಬಂದೆಯಾತಕೆ ನಮ್ಮ ಚಂದದ ಬೀದಿಲಿ ಹಿಂದಕೆ ತೆರಳೆನೆ ಬಂದನು ಬಾರಿ ಬಾರಿ 2 ಹರಿಯೆಂದು ತಿಳಿಯದೆ ಜರಿಯುತ ನುಡಿಯಲು ಮರಳಿ ಮರಳಿ ಯಾಚಿಸೆ ಬಿಡದೆ ತೆರಳನು ಈ ವೃದ್ಧ ತೆರಳಿಪೆನೆನುತಲಿ ಸರಸರ ತೆಗೆಯುತ ಸುರಿದನು ನಾಣ್ಯವ 3 ನೋಡುತ ಶ್ರೀಹರಿ ಗಾಡದಿ ಕೈನೀಡೆ ನೀಡಿದ ಸವೆದ ರೊಕ್ಕವ ನೋಡೀ ಗಾಡನೆ ಬಂದು ನಾಯಕನ ಸತಿಯಳನು ಬೇಡಿದ ಪುಣ್ಯವು ಬಾಹೋದೆನುತಲಿ 4 ಏನು ನೀಡಲಿ ಎನಗೇನಿಹುದೆನ್ನಲು ಮಾನಿನಿ ಮೂಗುತಿ ನೀಡೆಂದೆನಲು ಮಾನಿನಿ ಮಾಡಲು ಜ್ಞಾನಿಗಳರಸನು ಗಾಡ ಹಿಂತಿರುಗುತ 5 ಗಾಡನೆ ಮೂಗುತಿ ನೀಡುತ ದ್ರವ್ಯವ ಬೇಡಲು ಬೇಗದಿ ನೀಡುತ ನುಡಿದನು ನೋಡುತ ವಡವೆಯ ನೀಡಿದ ಭರಣಿಲಿ ಸತಿ ಮುಖವಾ 6 ಮೂಗುತಿ ಎಲ್ಲೆನೆ ಬೇಗದಿ ನಡುಗುತ ನಾಗವೇಣಿಯು ಪ್ರಾರ್ಥಿಸಿ ಹರಿಯ ಆಗ ಕುಡಿವೆ ವಿಷವೆನ್ನುತ ಕರದಲಿ ನಾಗವಿಷದ ಬಟ್ಲಲಿ ಇರಲು 7 ತೋರಿದಳಾಗಲೆ ತನ್ನಯ ರಮಣಗೆ ತೋರದಿರಲು ಮುಂದಿನ ಕಾರ್ಯ ಭಾರಿ ಆಲೋಚನೆಯ ಮಾಡುತ ಮನದಲಿ ಸಾರಿದ ತನ್ನ ವ್ಯಾಪಾರದ ಸ್ಥಳಕೆ 8 ತೆರೆದು ನೋಡಲು ಆ ವಡವೆಯ ಕಾಣದೆ ಮಿಗೆ ಚಿಂತೆಯು ತಾಳುತ ಮನದಿ ನಗಧರನ ಬಹು ಬಗೆಯಲಿ ಪೊಗಳುತೆ ತೆಗೆದ ಅಸ್ಥಿರ ರಾಜ್ಯದಿ ಮನವ 9 ಕಳವಳ ಪಡುತಲಿ ಆ ಲಲನೆಯ ಸಹಿತದಿ ತನುಮನ ಧನ ಹರಿಗರ್ಪಿಸುತಾ ಕ್ಷಣ ಬಿಡದಲೆ ಹರಿ ಚರಣವ ಸ್ಮರಿಸುತ ಕಮಲನಾಭ ವಿಠ್ಠಲನೆನ್ನುವ ಹರಿ 10
--------------
ನಿಡಗುರುಕಿ ಜೀವೂಬಾಯಿ
ಗುರುಸ್ತುತಿ ಪ್ರೇಮದಿಂದೊಂದಿಸುವೆ ಗುರುವೃಂದಕೇ ಕಾಮಧೇನುವಿನಂತೆ ಕೊಡಲೆಮಗಭೀಷ್ಟವನು ಪ ಸತಿಯ ಬೇಡುವನಲ್ಲ ಸುತರ ಬೇಡುವನಲ್ಲ ಅತಿಶಯದ ಭಾಗ್ಯವನು ಕೇಳ್ವನಲ್ಲ ರತಿಪತಿ ಆಟವನು ಖಂಡಿಸಿ ಬೇಗದಲಿ ಮತಿ ತಪ್ಪಲೆನಗೆ ದುರ್ವಿಷಯದೊಳಗೆಂದು 1 ಶಕ್ತಿ ಬೇಡುವನಲ್ಲ ಯುಕ್ತಿ ಬೇಡುವನಲ್ಲ ಭುಕ್ತಿ ಎನಗಿಲ್ಲೆಂದು ಕೇಳ್ವನಲ್ಲ ಮುಕ್ತಿದಾಯಕ ನಮ್ಮ ವಿಟ್ಠಲನ ಚರಣದಲಿ ಭಕ್ತಿ ದೃಢವಾಗೆನಗಿತ್ತು ರಕ್ಷಿಸಲೆಂದು 2 ಮಾನ ಬೇಡುವನಲ್ಲ ದಾನ ಬೇಡುವನಲ್ಲ ಹೀನತನ ಬ್ಯಾಡೆಂದು ಕೇಳ್ವನಲ್ಲ ಮಾನನಿಧೀಶ ನಮ್ಮ ಶ್ರೀ ನರಹರಿಯ ಚರಣವನು ಕಾಣಿಸುವ ಜ್ಞಾನವನು ದಾನಮಾಡಲಿ ಎಂದು3
--------------
ಪ್ರದ್ಯುಮ್ನತೀರ್ಥರು
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಗುಲ್ಲು ಹುಟ್ಟಿತು ಗ್ರಾಮದೊಳಗೆ ಗಲಿಬಿಲಿಯಾಯಿತು ನೀವು ಕೇಳಿಖುಲ್ಲರು ಕುಲಸಹ ಕೂಡೆ ಮಡಿದರು ನೀವು ಕೇಳಿ ಪ ಮರ ಮುರಿದೊರಗಿತು ನೆರಳೆ ನೆಲೆಯಾಯಿತು ನೀವು ಕೇಳಿಕುರಿತಳೇ ಸತ್ತವು ನರಿ ಮಾಳಿಗೆ ಏರಿತು ನೀವು ಕೇಳಿ 1 ಅತ್ತೆಯು ಅಳಿದಳು ಸೊಸೆಯು ಸುಖಿಸಿದಳು ನೀವು ಕೇಳಿಮುತ್ತೈದೆಯಾದಳು ರಂಡೆ ತಾನೀಗ ನೀವು ಕೇಳಿ2 ಕೊಡವೊಡೆಯಿತು ಕಳ್ಳರ ತಲೆ ಹೋದವು ನೀವು ಕೇಳಿನಡೆದುಹೋದರು ಬಯಲೂರಿಗೆ ಗೂಳೆಯ ನೀವು ಕೇಳಿ 3 ಮಂಡೆಗೆ ಕೈ ಬಂದಿತು ಮುರುಕು ಆಯಿತು ಹುಟ್ಟು ನೀವು ಕೇಳಿರುಂಡವಿಲ್ಲದೆ ತಲೆ ಬಂದು ಹತ್ತಿತು ನೀವು ಕೇಳಿ 4 ಗುಡ್ಡದ ಸಂದಿಯ ನೀರನೆ ಕುಡಿದು ನೀವು ಕೇಳಿದೊಡ್ಡ ಚಿದಾನಂದ ಗುರುವ ಸೇರಿದರು ನೀವು ಕೇಳಿ 5
--------------
ಚಿದಾನಂದ ಅವಧೂತರು
ಗೃಹಸಮರ್ಪಣೆ ಪುರುಷಾರ್ಥದಾಯಿ ಶ್ರೀವರ ನೀ ನಿಲಯದಿ ಸ್ಥಿರವಾಗು ಕರುಣಾನಿಧೆ ವರದೇಶ ನಿಜಪಾದ ಸರಸೀಜ ಮಕರಂದ ನಿತ್ಯ ಪ. ಆವ ಕಾಲಕು ಸಿರಿದೇವಿಯರಸ ನೀನೆ ಕಾವಲಾಗಿರುವಿ ಎಂದು ಭಾವಶುದ್ಧದಿ ನಿನ್ನ ಸೇವಾರತಿಯನಿತ್ತು ಪಾವನಗೊಳಿಪ ಬಂಧು ಕಾರುಣ್ಯಸಿಂಧು ವಿರಿಂಚಿ ಭವಾಹಿ ವಿಪತಿ ಸು- ರಾವಳೀಶಯವೆಂದು ರವಿಮುಖ ದೇವ ಋಷಿಗಣ ದೇವ್ಯ ನಿನ್ನ ಕ- ನಿತ್ಯ ಬಯಸುವೆ 1 ನಿನ್ನ ಕಟಾಕ್ಷ ಸಂಪೂರ್ಣವಾಗಿರಲೆನ- ಗನ್ಯರ ಭಯವಿಲ್ಲವು ಪರಮ ಸುಗು- ಣಾರ್ಣವ ನಿನಗೆಲ್ಲವು ತಾ ಸೇರಿರುವವು ಪನ್ನಗಾರಿ ಧ್ವಜ ಪರೇಶ ಮ- ಹೋನ್ನತಿ ಪ್ರದ ಮೂಜಗದ್ಭವ ನಿನ್ನ ದಾಸರದಾಸನೆಂದರಿ- ದೆನ್ನ ಮೇಲ್ಕಡೆಗಂಣನಿರಿಸುತ 2 ಪಂಕಜಾಲಯ ಭೂವರ ಕಿಂಕರಾಧಾರನಿ:- ಶಂಕ ಕೃಪಾಕರ ಅಂಕಿತ ಕೊಡು ಸಾದರ ಬಲಭದ್ರ ಸೋದರ ಶಂಕರನೆ ಶುಭಕರ ಕಮಲವನು ಶಂಕಿಸಿದೆ ಶಿರದಲ್ಲಿ ಕಲ್ಪಿಸಿ ಅಂಕುರಿತ ಭಯ ಬಿಡಿಸು ಸಕಲಾ- ಶಂಕವಾರಣ ವೆಂಕಟೇಶ್ವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗೊಲ್ಲತಿಯರ ಕಣ್ಣದೃಷ್ಟಿ ಮಗಗಾಯಿತಮ್ಮ ಬಹು ನಲ್ಲೆಯರು ಬಂದು ಮೆಚ್ಚುಮದ್ದು ಮಾಡಿ ಹೋದರಮ್ಮ ಪ. ಅಂಗಕೆ ಒಳಿತಿಲ್ಲವಮ್ಮ ಕಂಗಳು ಮುಚ್ಚಲೊಲ್ಲನಮ್ಮ ಹೆಂಗಳ ನೋಡುತಲೆ ಚಟ್ಟಿಕ್ಕಿದನಮ್ಮ ತಂಗಿ ನೀರು ಎರೆದೆವಮ್ಮ ತುಂಗಗಾತ್ರ ಎದ್ದು ನಮ್ಮ ಭಂಗಪಡಿಸುತ ಬಾಯ ತೆರೆದನಮ್ಮ 1 ನೀನು ಮೈಯ ನೋಡಮ್ಮ ತನುವು ಕಿರಿದಾಯಿತಮ್ಮ ಮೊಲೆಯಾನ ಕೊಡಲಿ ತಾಯ ನೋಡನಲ್ಲಮ್ಮ ಅನ್ನವ ಕೊಳಲೊಲ್ಲನಮ್ಮ ಅತಿಭೀತನಾದ ದೈತ್ಯ ಕನ್ನೆ ಮೊಲೆಹಾಲನುಂಡು ಬೆಳೆದನಲ್ಲಮ್ಮ 2 ನಮ್ಮ ಮಾತು ಕೇಳನಮ್ಮ ಒಮ್ಮೆಗೆ ಮೈಹೊದಿಯ ನಮ್ಮ ಸುಮ್ಮನೆ ಘೊರಸುತಾನೆ ಮಲಗನಲ್ಲಮ್ಮ ಬೊಮ್ಮಜೆಟ್ಟಿಗೆ ಮಾಡಿದೆವಮ್ಮ ಒಮ್ಮೆಗಿಷ್ಟೆಲ್ಲವಾಯಿತಮ್ಮ ನಮ್ಮ ಹಯವದನಗಿನ್ನು ಅಂಜಿಕಿಲ್ಲಮ್ಮ 3
--------------
ವಾದಿರಾಜ
ಗೊಲ್ಲರಾ ಮನೆಯ ಪೊಕ್ಕುಗುಲ್ಲು ಮಾಡುವುದೇನಲ - ಬಲುಲಲ್ಲೆ ಮಾಡುವುದೇನಲ ಪ ಹಾಲು ಮೊಸರು ಘೃತವು ನೆಲುವಿನಮೇಲೆ ಇಟ್ಟ ಬೆಣ್ಣೆಯಬಾಲಕರಿಗಿಲ್ಲದಲೆ ಸುರಿದುಹಾಲುಗಡಿಗೆಯನೊಡೆದಲ 1 ಸಣ್ಣ ಮಕ್ಕಳ ಕಣ್ಣ ಮುಚ್ಚಿಹುಣ್ಣಿಮೆ ಬೆಳುದಿಂಗಳಲಿಬಣ್ಣ ಬಣ್ಣದ ಮಾತನಾಡಿಸಣ್ಣ ಕೆಲಸಕ್ಕೆಳೆದಲ 2 ಸುದತಿಯೊಬ್ಬಳು ದಧಿಯ ಮಥಿಸುತಒದಗಿದ ಬೆಣ್ಣೆಯ ತೆಗೆಯಲುಮದನ ಕದನಕೆ ಕೆಡಹಿ ಮಾನಿನಿಒದರಿದರು ನೀ ಬಿಡೆಯಲ 3 ಕಿಟ್ಟ ನಾ ನಿನಗೆಷ್ಟು ಹೇಳಲಿದುಷ್ಟ ಬುದ್ಧಿಯ ಬಿಡೆಯಲಇಷ್ಟು ಹರಳಿಸಿ ರಟ್ಟು ಯಾತಕೆಬಿಟ್ಟು ಮಧುರೆಗೆ ಪೋಗೆಲ4 ಕೇಶವ ವಿಠ್ಠಲ ನಿನ್ನನುಕೂಸು ಅಂದವರ್ಯಾರಲೊ - ಹಸುಗೂಸು ಅಂದವರ್ಯಾರಲೊದೇಶದೊಳಗೆ ವಾಸವಾಗಿಹ ಬೇಲೂರು ಚೆನ್ನಕೇಶವ 5
--------------
ಕನಕದಾಸ
ಗೋಕುಲ ಬಿಟ್ಹ್ಯಾಂಗಿಲ್ಲಿಗೆ ಬಂದೆ ಶಿರಿಕೃಷ್ಣ ರಂಗಾ ವ್ಯಾಕುಲದಲಿ ನೀ ಸಾಗರ ತ್ಯಜಿಸಿ ಜೋಕೆಯಿಂದಲಿ ನಿಜಧಾಮಕೆ ಬಂದೆ ಪ ಬನ್ನವ ಪಡುತಿಹ ಭಕುತನ ನೋಡಿ ಚಿಂತೆಯ ಮಾಡಿ ಎನ್ನಂತರಂಗದ ಬಾಧೆಗಳು ಕಾಡೆ ಬಳಲುವುದಾ ನೋಡೆ ಮನ್ನಿಸಿ ಶರಣನ ಬಾಧಿಸುವ ಪೀಡೆ ಪರಿಹಾರ ಮಾಡೆ ಪನ್ನಗ ಶಯನ ಶ್ರೀಹರಿಯೇ ಓಡೋಡಿ ಬಂದೆ 1 ಪೊಕ್ಕಿಹೆನು ಸಂಸಾರಾರ್ಣವದೊಳಗೆ ಬಹು ದುಃಖದ ಅಲೆಗೆ ಲೆಕ್ಕವಿಲ್ಲದಾ ಜಂತುಗಳದರೊಳಗೆ ಇಂಬಿಲ್ಲಾ ಅಲ್ಲಿಡಿಂಬಕೆ ಸಿಕ್ಕಿ ಬಳಲುವಂಥ ಭಕುತನ ನೋಡಿ ಬಿಡುಗಡೆ ಮಾಡೆ ಅಕ್ಕರದಿಂದಲಿ ಭರದಿ ಕಾಪಾಡಲು ಬಂದೆ 2 ಶರಣರ ಪೊರೆಯುವುದೇ ನಿನ ಗುಟ್ಟು ಬಣ್ಣಿಸಲಿನ್ನೆಷ್ಟು ಕರುಣಿಸಿ ಬರುವಿ ಶಿರಿಯನು ಬಿಟ್ಟು ಭಕುತರೆ ನಿನಕಟ್ಟು ನಿರುಪಮ ನಿನ್ನಯ ದಯಕೇನೆನ್ನಲಿ ಶರಣರ ಪೊರೆಯುವಿ ನರಸಿಂºವಿoಲಾ ಬಂದೆ 3
--------------
ನರಸಿಂಹವಿಠಲರು
ಗೋಕುಲಕ್ಹೋಗು ನೀ ಶೋಕವಿನಾಶಿನಿ ಲೋಕೇಶ ಪಾರ್ವತಿ ಶ್ರೀಕರೆ ಶ್ರೀಮತಿ ಪ. ದೇವಕೀಗರ್ಭದ ಕೇವಲೆಂಟಂಶದ ದೇವಶೇಷಾಖ್ಯನ ದೇವಿಗೈ ದರ್ಶನ 1 ಶಶಿಮುಖಿ ರೋಹಿಣಿ ಬಸುರೊಳಗಿಡು ನೀ ಬಿಸರುಹಲೋಚನಿ2 ಸುಂದರಿ ದೇವಕೀ ಕಂದನಾಗುವೆ ಸುಮುಖಿ ನಂದನ ನಂದಿನಿಯೆಂದೆನಿಸು ಭವಾನಿ 3 ಜಗದಂಬಿಕೆ ಜಯೆ ಸುಗುಣೆ ವೈಷ್ಣವಿ ವಿಜಯೆ ಜಗದೊಳು ನಿನ್ನ ಪೂಜೆ ಅಗಲದ ಗೈವರಗಜೆ 4 ಲಕುಮಿನಾರಾಯಣನ ಯುಕುತಿಯಂತಾಕ್ಷಣ ಸುಖದೆ ಗೈದಳು ಶಿವಸಖಿ ತಾನೆಲ್ಲವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗೋಕುಲಕ್ಹೋಗು ನೀ ಶೋಕವಿನಾಶಿನಿ ಲೋಕೇಶ ಪಾರ್ವತಿ ಶ್ರೀಕರೆ ಶ್ರೀಮತಿ ಪ. ದೇವಕೀಗರ್ಭದ ಕೇವಲೆಂಟಂಶದ ದೇವಶೇಷಾಖ್ಯನ ದೇವಿಗೈ ದರ್ಶನ 1 ಶಶಿಮುಖಿ ರೋಹಿಣಿ ಬಸುರೊಳಗಿಡು ನೀ ಬಿಸರುಹಲೋಚನಿ 2 ಸುಂದರಿ ದೇವಕೀ ಕಂದನಾಗುವೆ ಸುಮುಖಿ ನಂದನ ನಂದಿನಿಯೆಂದೆನಿಸು ಭವಾನಿ 3 ಜಗದಂಬಿಕೆ ಜಯೆ ಸುಗುಣೆ ವೈಷ್ಣವಿ ವಿಜಯೆ ಜಗದೊಳು ನಿನ್ನ ಪೂಜೆ ಅಗಲದ ಗೈವರಗಜೆ4 ಲಕುಮಿನಾರಾಯಣನ ಯುಕುತಿಯಂತಾಕ್ಷಣ ಸುಖದೆ ಗೈದಳು ಶಿವಸಖಿ ತಾನೆಲ್ಲವ5
--------------
ತುಪಾಕಿ ವೆಂಕಟರಮಣಾಚಾರ್ಯ
ಗೋಕುಲದ ಸತಿಯರೆಲ್ಲ ಶ್ರೀಕೃಷ್ಣನಾಟಗಳದೂರುತಲೆ ಪಾಡುವರು ಪ. ಕಪಟ ಸರ್ವಾಂಗದೊಳಗಿದಕೊಮಣ್ಣ ಮೆಲುವನು ತನ್ನ ತೆರೆಬಾಯಿ ತೆರೆವನಿವಚಿಣ್ಣತನದಾ ತನುವ ತೋರುತಲೆ ವನದೊಳಗೆಪಣ್ಣು ಫಲಗಳ ಸವಿವುತಅಣ್ಣನೊಡನೆ ಕೊಳಲನೂದುತಲಿ ಗೋಕುಲದಹೆಣ್ಣುಗಳ ಮರುಳು ಮಾಡುವ ಗಂಡುಗಲಿಯಿವನಿನ್ನ ಮಗ ಅಮ್ಮಮ್ಮ ಶುಕನ ನುಡಿಗಳ ಗೆಲುವಬಣ್ಣಿಸುವ ಕವಿಯದಾವ1 ಸುರರು ಸೋಲುತಿರೆಆರ್ತಿಯ ಕಳೆವರೆ ಭವರೋಗಕಿವನೆ ಮದ್ದುಇತ್ತಲೀತನ ಚೆಲುವ ಕಾಣುತಲಿ ಕಂದರ್ಪಪೃಥ್ವಿಯಲಿ ಬಿಲ್ಲ ಬಿಸುಟ 2 ಮೂರ್ತಿ ಕೀರ್ತಿಯ ಸೊಬಗುಚಿತ್ರ ಚರಿತ್ರಗಳ ಕಂಡಿರೆ ನಿಮ್ಮ ಕುಮಾರನಾದ ಹತ್ತುಸಾವಿರ ಪೆಸರು ಸಲ್ಲುವುದಮ್ಮ ಸ-ರ್ವತ್ರ ನೋಡುವ ಸುಜನರುಚಿತ್ತದೊಳಗೆಲ್ಲ ಪುರವಿಟ್ಟವರು ಅರಸುತಿರೆವ್ಯಾಪ್ತನೆಂಬುದಕೆ ತಮ್ಮ ತಮ್ಮ ಮನವೇ ಸಾಕ್ಷಿಮುಕ್ತಿ ನಮಗೇಕೆ ಹಯವದನನಂಘ್ರಿü್ರಗಳಾಣೆನಿತ್ಯದಲಿ ಇವನ ನೋಡುತಲಿಹುದು ಸಾಕೆಲೆ ಗೋಪಿ3
--------------
ವಾದಿರಾಜ