ಒಟ್ಟು 9847 ಕಡೆಗಳಲ್ಲಿ , 135 ದಾಸರು , 5174 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಜೋ ಪದುಮದಳಾಕ್ಷ ಉಪೇಂದ್ರ ಪ ಜೋಜೋ ವೇದವಂದಿತ ನಿತ್ಯಾನಂದ | ಜೋಜೋ ಆದಿಮೂರುತಿ ಶ್ರೀಗೋವಿಂದ ಅ.ಪ ಉದಿಸಿದೆ ವಸುದೇವನರಸಿಯೊಳಂದು 1 ದೇವ ರೋಹಿಣಿ ನಕ್ಷತ್ರದೊಳು ಧರೆಗಿಳಿದೆ 2 ಕೌಸ್ತುಭ ಸಕಲ ಲೋಕೇಶ ಶೋಭಿಸುವೆ ಸಂಭ್ರಮದಿ3 ಪರಿಪರಿ ಶೋಭಿಸಿ ಮೆರೆವೆ ಆನಂದ 4 ಲೀಲಾವಿನೋದವ ಮಾಳ್ಪೆ ಸಂತಸದಿ 5 ಒಂದಾಗಿ ಸುಮವೃಷ್ಟಿ ಸುರಿವ ಸಂಭ್ರಮದಿ 6 ನಾರದ ಮುನಿಪನ ವೀಣಾಗಾನಗಳು | ನಾರಿ ಲಕ್ಷ್ಮಿಯು ರತ್ನದಾರತಿಯೆತ್ತುವಳು 7 ಗಿರಿಜೇಶಪ್ರಿಯನೆ ತ್ರೈಜಗದುದ್ಧಾರಿ8 ತ್ರುವಿತ್ರುವಿ ಶಂಖಚಕ್ರಗದಾಪದ್ಮ ಹಸ್ತ 9 ತ್ರುವಿತ್ರುವಿ ಪರತರ ಪಾವನರಾಮ 10 ನಂತರ್ಯದೊಳಗಿಟ್ಟು ಪೊರೆವೆನಿನ್ನೇನು 11 ಗುರು ದಾಮೋದರ ಶ್ರೀನಿವಾಸ ಆಗಿರುವೆ 12
--------------
ಸದಾನಂದರು
ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ಜೋಜೋಜೋ ಬಾಲ ಮುಕುಂದಾ | ಯೋಗಿ ಹೃದಯಾನಂದ | ಜೋಜೋ ನಮ್ಮ ಗೋಪಿಯ ಕಂದಾ | ಜೋಜೋ ಗೋಪಾಲ ಗೋವಿಂದಾ | ಜೋ ಜೋ ಪ ಉರಗರಾಜನ ಹಾಸಿಗೆ ಮೇಲೆ | ಶಿರಿದೇವಿ ಕೈಯಲಿ ಶೇವೆಯ ಕೊಳ್ಳುತಲಿ | ಭರದಿ ನಾರದ ಗಾಯನದಲಿ | ಇಂಥಾ | ಮೆರೆವ ಯೋಗದ ನಿದ್ರೆಯಲೀ || ಜೋಜೋ 1 ಆದನೆಲ್ಲವ ಬಿಟ್ಟು ಶ್ರೀಹರಿ | ವಿದಿತ ಬಾಲಕ ವೇಷವದೋರಿ | ಪುದುಳದಿಂದಲಿ ತೊಟ್ಟಿಲ ಸಾರಿ | ಮುದದಲ್ಲಾಡುವ ಸುರ ಸಹಕಾರಿ || ಜೋಜೋ 2 ಏನು ಪುಣ್ಯವೋ ಗೋಕುಲ ಜನರ | ಶ್ರೀ ನಂದಾತ್ಮಜ ನಾದವಿನೋದಾ | ಧ್ಯಾನ ಮೌನಕೆ ಗೋಚರಪಾದ | ಮಹಾ | ದಾನಿ ಮಹೀಪತಿಸುತ ಪ್ರಿಯನಾದಾ | ಜೋ ಜೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಜನನಿ ಪೊರೆಯೆ ರುದ್ರಾಣಿ ಪ. ಅಘಸಂಹಾರಿಣಿ | ಮೃಗಪತಿವಾಹಿನಿ || ಅಗಣಿತಗುಣಮಣಿ | ಭಗವತಿ ಶ್ರೀ ಜಗ ಅ.ಪ. ಸಿರಿ ಕಾತ್ಯಾಯಿನಿ | ಗೌರಿ ಭವಾನಿ || ಪರಮಪಾವನೆ | ಪರಮೇಶ್ವರಿ ಜಗ 1 ಶುಂಭಧ್ವಂಸಿ | ನಿಶುಂಭನಿಷೂದಿನಿ || ಅಂಬುಜಮುಖಿ ಮೂ | ಕಾಂಬಿಕೆ ಶ್ರೀ ಜಗ 2 ಗಾನವಿನೋದಿನಿ | ದಾನವ ಮಥಿನಿ || ದೀನಜನಾವಳಿ | ಪಾಲಿನಿ ಶ್ರೀ ಜಗ 3 ಜಟಾಮುಕುಟಸುರ|ತಟನೀಧರಸತಿ || ನಿಟಿಲಾಂಬಕಿ ಶ್ರೀ | ಕಟಿಲೇಶ್ವರಿ ಜಗ 4
--------------
ವೆಂಕಟ್‍ರಾವ್
ಜ್ಞಾನ ಸಖೀಕೇಳೆ ಜ್ಞಾನಿಗಳಾರಾಧಿಸುವಾ | ಶ್ರೀನಿವಾಸನಾ ತಂದುತೋರೆ ತನುವಿನೋಳು ಪ ಹಲವು ಸಾದಿನದಿಂದ ಬಳಲಿ ಹಂಬಲಿಸಿದೆ | ಜಲ ಜಾಕ್ಷ ಮೈಯ್ಯ ದೋರನೇ 1 ಕಣ್ಣಿಗೆ ಕಣ್ಣಾಗದನಕಾ ಬಣ್ಣ ಬಣ್ಣದ ಚಿತ್ಸುಖಾ | ಕನ್ನಿಕಾ ರನ್ನಳೆ ತಂದು ತೋರೇ 2 ಸೋಹ್ಯ ಸೊನ್ನಿಯ ದೋರಿಸಿ ಬಾಹ್ಯರಂಗ ಮರೆಸಿ | ಸಹ ಜಾನಂದದ ಕೂಡಿಸೇ 3 ಗುರು ಮಹಿಪತಿ ಸ್ವಾಮಿ ಸ್ಮರಿಸುವರಂತರ್ಯಾಮಿ | ನೆರೆದು ತಾನೇ ತಾನಾದನೇ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಞಾನದ ಬೆಳೆಯನು ಬೆಳೆಯೊ ಶ್ರೀಗುರುಬಲವನು ನೀ ಪಡೆಯೋ ಪ ನಾದಗಳೆತ್ತನು ಹೂಡು ಅದಕೆ ತ್ರಿಗುಣದ ಕೂರಿಗೆ ಜೋಡುಬೋಧದ ಬೀಜವು ನೋಡು ಮನಸಿನ ಹೊಲದಲಿ ಬಿತ್ತಿಬಿಡು 1 ಕರ್ಮ ಕಸವ ಕಳೆದುನಿರ್ಮಳ ಬೆಳೆಗೊಂಡು ಗುರು ತಾ ಸ್ವರ್ಮಣಿ ಬಲಗೊಂಡು 2 ತೇಜರಾಶಿಗಳನೆಳೆದು ರಾಜಿಪ ರಾಜ ಕೊಳಗದಲಿ ಅಳೆದುಭೋಜನಕೆ ಎಡೆಮಾಡಿ ಚಿದಾನಂದ ಸಹಜ ಮೂರುತಿಗೂಡಿ3
--------------
ಚಿದಾನಂದ ಅವಧೂತರು
ಜ್ಞಾನಭ್ಯಾಸವ ಮಾಡಿ ಹೀಗೆ ತಾನೊಲಿದು ಜ್ಞಾನ ಗುರು ಖೂನಾಗುವ್ಹಾಂಗೆ ಧ್ರುವ ಮನದಲಿ ಬಾವ್ಹಾಂಗ ನೆನೆದಲಿ ಕಾಂಬ್ಹಾಂಗೆ ತನುವಿನಲಿ ನಿಜಗೊಂಡು ತಾ ನೆಲೆಯಗೊಂಬ್ಹಾಂಗೆ ಅನುದಿನನದಲ್ಯನುಭವಿಸುವ್ಹಾಂಗೆ ಕನಗರಸಿದಲಿ ಮನೋಹರ ಮಾಡುವ್ಹಾಂಗೆ 1 ಅರ್ವಿನಲಿರುವ್ಹಾಂಗೆ ಕುರುಹುದೋರುವ್ಹಾಂಗೆ ಇರುವ್ಹ ನೆಲೆಗೊಂಡು ತಾನೆವೆ ಸ್ಥಿರವಾಗುವ್ಹಾಂಗೆ ಮರವು ಮರದೀಡ್ಯಾಡುವ್ಹಾಂಗೆ ಗುರು ಚರಣ ಕಮಲವನು ಗುರುತಾಗುವ್ಹಾಂಗೆ 2 ಧ್ಯಾಸ ನೀಜ ಬಲುವ್ಹಾಂಗೆ ವಾಸನೆ ಪೂರಿಸುಹಾಂಗೆ ಭಾಸ್ಕರ ಕೋಟಿ ಪ್ರಕಾಶ ಭಾಸಿಸುವ್ಹಾಂಗೆ ಭಾಸ್ಕರ ಬಾಹ್ಯಾಂತ್ರಲಿವ್ಹಾಂಗೆ ಲೇಸಾಗಿ ಮಹಿಪತಿ ಸ್ವಾಮಿಒಲುವ್ಹಾಂಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ಪ ನಾನು ಎಂಬುದ ಬಿಟ್ಟ ಮೇಲೆ ನರಕವ್ಯಾತಕೆ ಅ.ಪ. ಮೃತ್ತಿಕೆ ಶೌಚ ಮಾಡದವನ ಆಚಾರವ್ಯಾತಕೆಸತ್ಯವಾದಿ ಆಗದವನ ನಂಬಿಗೆ ಯಾತಕೆ ||ಚಿತ್ತಶುದ್ಧಿ ಇಲ್ಲದವನ ವೈರಾಗ್ಯವ್ಯಾತಕೆಉತ್ತಮ ಹಿರಿಯರಿಲ್ಲದಂಥ ಸಭೆಯು ಯಾತಕೆ 1 ಪತಿಯ ಆಜ್ಞೆ ಮೀರಿದವಳ ವ್ರತಗಳ್ಯಾತಕೆಸತಿಗೆ ಅಳುಕಿ ನಡಿಯುವವನ ಸಾಹಸವ್ಯಾತಕೆ ||ಯತಿಯ ನಿಂದೆ ಮಾಡುವವನ ಮತಿಯು ಯಾತಕೆಅತಿ ವಿರೋಧ ಬಡಿಸುವಂಥ ಅಣ್ಣನ್ಯಾತಕೆ 2 ಹರಿಕಥೆಯ ಕೇಳದವನ ಕಿವಿಯು ಯಾತಕೆಮುರಹರನ ಮೂರ್ತಿಯ ನೋಡದಂಥ ಕಂಗಳ್ಯಾತಕೆ ||ಮರುತ ಮತವ ಪೊಂದದವನ ಬಾಳ್ವೆ ಯಾತಕೆಎರಡಾರು ನಾಮವಿಡದ ಶರೀರವೇತಕೆ3 ತಂದೆ ತಾಯಿ ಮಾತು ಕೇಳದ ಮಕ್ಕಳ್ಯಾತಕೆಬಂಧು ಬಳಗ ಉಳ್ಳದವನ ಭಾಗ್ಯವ್ಯಾತಕೆ ||ಬಂದ ಅತಿಥಿಗನ್ನವನಿಕ್ಕದ ಸದನವೇತಕೆ ಗೋ-ವಿಂದನಂಘ್ರಿ ಸ್ಮರಿಸದಂಥ ನಾಲಿಗ್ಯಾತಕೆ 4 ಮಕ್ಕಳನ್ನ ಮಾರಿಕೊಂಬ ತಂದೆಯಾತಕೆರೊಕ್ಕಕಾಗಿ ಬಡಿದಾಡುವ ತಮ್ಮನ್ಯಾತಕೆ ||ಕಕ್ಕುಲಾತಿ ಬಡುವ ಸಂನ್ಯಾಸವ್ಯಾತಕೆಠಕ್ಕು ಭಕುತಿ ಮಾಡುವಂಥ ದಾಸನ್ಯಾತಕೆ 5 ಆಗಿ ಬರದವರ ಅನ್ನ ಉಣ್ಣಲ್ಯಾತಕೆರೋಗವಾದ ನರಗೆ ಹೆಣ್ಣಿನ ಭೋಗವ್ಯಾತಕೆ ||ಯೋಗಿಯಾದ ಮೇಲೆ ದ್ರವ್ಯದ ಆಶೆಯಾತಕೆಭಾಗೀರಥಿಯ ಮಿಂದ ಮೇಲೆ ಪಾಪವ್ಯಾತಕೆ 6 ವೇದವನ್ನು ಓದದಂಥ ವಿಪ್ರನ್ಯಾತಕೆಕಾದೊ ರಣಕೆ ಅಂಜುವಂಥ ಕ್ಷತ್ರಿಯನ್ಯಾತಕೆ ||ವಾದವನ್ನು ಮಾಡುವಂಥ ಬಂಟನ್ಯಾತಕೆಸಾಧುಗಳಿಗೆ ಎರಗದವನ ಶಿರವಿದ್ಯಾತಕೆ 7 ಯಾತ್ರೆ ತೀರ್ಥ ಮಾಡದಂಥ ಪಾದವ್ಯಾತಕೆಪಾತ್ರರ ಸಂಗವಾಗದವನ ಜನ್ಮವ್ಯಾತಕೆ ||ಸ್ತೋತ್ರಕೆ ಮರುಳಾಗುವವಗೆ ಸಾಧನ್ಯಾತಕೆಪಾರ್ಥ ಸಖನ ತಿಳಿಯದವನ ಜ್ಞಾನವ್ಯಾತಕೆ 8 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆಅರಿತು ವಿದ್ಯ ಪೇಳದ ಉಪಾಧ್ಯನ್ಯಾತಕೆ ||ಹರುಷವನ್ನು ತಾಳದಂಥ ಜ್ಞಾನಿ ಯಾತಕೆಕರಣ ಶುದ್ಧಿ ಇಲ್ಲದವನ ಸ್ನೇಹವ್ಯಾತಕೆ 9 ಗಾಣ ಕಟ್ಟಿದೆತ್ತಿಗೆ ಗೆಜ್ಜೆಯಾತಕೆ ||ರಾಣಿ ಇಲ್ಲದವನು ಮಾಡುವ ಬದುಕು ಯಾತಕೆತಾನು ಉಣ್ಣದೆ ಪರರಿಗಿಕ್ಕದ ಧನವಿದ್ಯಾತಕೆ 10 ಧರ್ಮವಿಲ್ಲದೆ ರಾಜ್ಯ ಆಳುವ ಪ್ರಭುವಿದ್ದ್ಯಾತಕೆಮರ್ಮವರಿತು ನಡೆಯದಂಥ ಹೆಣ್ಣು ಯಾತಕೆ ||ನಿರ್ಮಲಾಂಗನಾದ ಮೋಹನ ವಿಠಲನ ಗುಣಕರ್ಮ ಕ್ರಿಯಾ ತಿಳಿದ ಮ್ಯಾಲೆ ನಿರ್ಣಯವ್ಯಾತಕೆ 11
--------------
ಮೋಹನದಾಸರು
ಜ್ಞಾನವೆಂಬುದಕೇನು ಕ್ಷಣ ನಡಿಯು ಕಠಿಣ ಅನುಭವದ ನಿಜಖೂನ ಅಗಮ್ಯ ಸ್ನಾನ ಧ್ರುವ ಅಹಂ ಬ್ರಹ್ಮಾಸ್ಮಿ ಎಂಬ ಸೋಹ್ಯ ತಿಳುವದೆ ಗುಂಭ ಬಾಹ್ಯ ರಂಜನದೆ ಡಂಭ ದೇಹದಾರಂಭ ಸೋಹ್ಯ ತಿಳಿದುಕೊಂಬ ಗುಹ್ಯಗುರುತದ ಇಂಬ ಮಹಾಮಹಿಮೆಲೆ ಉಂಬ ಸಹಸ್ರಕೊಬ್ಬ 1 ಮೂರ್ತಿ ಶ್ರೀಪಾದ ಬೋಧ ಆದಿತತ್ವದ ಭೇದಿಸದಲ್ಲದ ಭೇದ ಮದಮತ್ಸರದ ಕ್ರೋಧ ಹಾದಿ ತಿಳಿಯದು ವಸ್ತುದ ಉದಯಸ್ತಿಲ್ಲದ 2 ಜ್ಞಾನಕ ಜ್ಞಾನೊಡಮೂಡಿ ಖೂನಕ ಬಾವ್ಹಾಂಗ ಮಾಡಿ ನಾ ನೀನೆಂಬುದು ಈಡಾಡಿ ಅನುಭವ ನೋಡಿ ಮನೋನ್ಮದ ನಡಿ ಅನುದಿನವೆ ಕೊಂಡಾಡಿಘನಕ ಮಹಿಪತಿ ನೀ ಕೂಡಿ ನೆನಿಯೊ ಬೆರೆದಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜ್ಞಾನಾನಂದ ಸ್ತುತಿ ಜ್ಞಾನಾನಂದ ಅನಂತರೂಪ - ಆನಮೋ ನಮೋ ತ್ವಂಪಾಲಯಮಾಂ ಪ. ಮತ್ಸ್ಯ ಸುರೂಪ ಮಂದರೋದ್ಧಾರ ಕಚ್ಛಪರೂಪ 1 ಭೂಧರಕೋಲ ನರಹರಿರೂಪ ಅದಿತೇಃ ಸೂೀನೋ - ಗಂಗಾಜನಕ 2 ಕೃನೃಪಾಹರಿ ರಾಮಪರಶ್ವಿ ಹನೂಮತೇವ್ಯ ರಮಸ್ತ ಸೀತಾ 3 ದೇವಕಿಪುತ್ರ ಪಾಂಡವಬಂಧೋ ದೇವ ಶ್ರೀಕೃಷ್ಣ ರುಕ್ಮಿಣೀನಾಥ 4 ದೈತ್ಯವಿಮೋಹ ದೇವಸುಬೋಧ ಬುಧ್ಧಸ್ವರೂಪ - ದೇಹಿಮೇ ಜ್ಞಾನಂ 5 ದರ್ಜೇನ - ಹಂತಾಧರ್ಮಸ್ವರೂಪ ಸಜ್ಜನಪಾಲ ದೇಹಿಮೇ ಭಕ್ತಿಂ 6 ಪದ್ಮಜಿತಾತ ಪ್ರಸನ್ನ ಶ್ರೀನಿವಾಸ ಪದ್ಮೇಶ ಶರಣಂ ಪಾಹಿ 7
--------------
ಪ್ರಸನ್ನ ಶ್ರೀನಿವಾಸದಾಸರು
ಜ್ಞಾನಿಯ ಕಾಣಲು ಧಗದಲ್ಯನಾಗುವ ಶಾಸ್ತ್ರಿಜ್ಞಾನಿಗಳು ಶಾಸ್ತ್ರಿಗೇನ ಮಾಡಿದರೋಏನಾದರೂ ಪೂರ್ವದ್ವೇಷವಿತ್ತಾದರೂತಾನು ನಿಂದಿಸಿ ಕುಲಸಹ ಕೆಡಿಸುವನು ಶಾಸ್ತ್ರಿ ಪ ದನವ ಕಾಣುವ ವದನವರಿಹುತಲಿಹದನವ ಕಾಯ್ದವಗಿಂತ ಅತ್ತಿತ್ತ ಕಡೆ ಶಾಸ್ತ್ರಿಘನ ವೇದಾಂತವನೋದಿ ಜ್ಞಾನಿಗಳ ನರರೆಂಬಎನಿತುಗರ್ವ ಅಹಮ್ಮಲಿ ತನ್ನ ತಿಳಿಯ ಶಾಸ್ತ್ರಿ 1 ಓದೋದು ವೇದಾಂತ ಓದುವನಾರೆಂದು ಅರಿಯಓದಿಹೆನೆಂಬ ಗರ್ವವು ತಲೆಗೆ ಹತ್ತಿಓದಿಯೇ ಅಲ್ಲಿ ಗೆದ್ದೆ, ಇಲ್ಲಿ ಗೆದ್ದೆ ನೆಂಬಅದನೊಬ್ಬನೆಲ್ಲೋ ಇರೆ ಆರಗೆದ್ದನು ಶಾಸ್ತ್ರಿ 2 ಸಾಧುಗಳಿಗೆ ವಂದಿಸಲಿಲ್ಲ ಸಾಧುಗಳ ಮನೆ ಹೋಗಲಿಲ್ಲಸಾಧುವು ಮುಂದೆ ಹಾಯಲು ಕುಳಿತು ಏಳದಲಿಹನುಸಾಧುವ ಕಂಡು ನಡೆಯೇನು ನುಡಿಯೇನು ಎಂಬಸಾಧುವ ಭಜಿಪಗೆ ಬಹಿಷ್ಕಾರೆಂದನು ಶಾಸ್ತ್ರಿ 3 ನಾನು ಅರಿಯೆ ನಿನಗೆ ಗತಿಯೇನು ಮತಿಯೇನುನಾನು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆನಾನು ನನ್ಹೆಸರೇನು ಆರು ತಿಳಿಸುವರೆಂಬಜ್ಞಾನವಿಲ್ಲದೆ ಘಟಪದಿ ಮೆರೆದಿಹ ಶಾಸ್ತ್ರಿ 4 ನಾನೇ ಶ್ರೇಷ್ಠನೆಂದೂ ನಾನೇ ದೊಡ್ಡವನೆಂದೂನಾನು ಆರಿಹೆನೆಂಬ ಎಚ್ಚರವದು ಹೋಗಿತಾನಾದ ಚಿದಾನಂದರಾದ ಸತ್ಪುರುಷಏನೇನೋ ನಿಂದೆಯ ಮಾಡಿ ನರಕಕ್ಕಿಳಿಸುವ ಶಾಸ್ತ್ರಿ 5
--------------
ಚಿದಾನಂದ ಅವಧೂತರು
ಜ್ಯೇಷ್ಠಾಭಿಷೇಕ ಗೀತೆ ನೋಡಿದೆ ಜ್ಯೇಷ್ಠಾಭಿಷೇಕದುತ್ಸವವ ಸೃಷ್ಟಿಯೊಳಾಶ್ಚರ್ಯವಾ ಪ. [ಒಪ್ಪುವ] ಮಿಥುನಮಾಸದ ಶುಕ್ಲಪಕ್ಷ ಚತುರ್ದಶಿಯಲ್ಲಿ ವಿಪ್ರರು ಕೂಡಿ ಸಹ್ಯೋದ್ಭವೆಯನ್ನು ತರುವೆವೆಂದೆನುತಲೆ ವಿಪ್ರರು ಪೋದ ವಿಚಿತ್ರ[ವ] ನೋಡಿದೆ 1 ಅಂದು ಗಜೇಂದ್ರನ ತಂದು ಸಿಂಗಾರ ಮಾಡಿ ಕುಂದಣದ ಛತ್ರಿ ಚಾಮರ ಬೀಸುತ್ತ ವಿಪ್ರರು ಬರುವುದ 2 ವೇದಘೋಷಗಳಿಂದ ವಿಪ್ರರು ಕೊಡಗಳ ವಿ ನೋದದಿಂದಲೆ ಪೊತ್ತು ತಾ[ಳ] ತಮ್ಮಟೆ ಭೇರಿ ನಾನಾ ವಾದ್ಯಂಗಳ ಮುಂದೆ ರಜತದಕೊಡ ಬರುವ ವೈಭೋಗವ 3 ಕರಿ ಕೊಡವನ್ನು ಇಳಿಸಲು ಅಸಮಾನ [2ನಿ2]ರಿಗಳ ಬಿಚ್ಚಿ ಹೊಸಬಟ್ಟೆಗಳ ಹಾಸಿ ಕುಶಲದಿಂದಲೆ ಹೊಲೆದು ಪೊಸದಾಗಿ ಕಟ್ಟುವತಿಶಯ[ವ] 4 ಗರ್ಭಗೃಹವು ಗಾಯಿತ್ರಿ ಮಂಟಪವನ್ನು ಶುಭ್ರವಾಗಿಯೆ ತೊಳೆದು ಘಮಘಮಿಸುವ ದಿವ್ಯ ಪರಿಮಳ ವು ಬರುವಂಥ ಗಂಧÀವ ತಳಿದರು ಅಂದು ಆಲಯಕ್ಕೆಲ್ಲ 5 ಭಕ್ತರಿಗೆ ತೊಟ್ಟಕವಚವ ಕಳೆದು ಅಭಯ ಹಸ್ತ ಪಾದವ ನಿತ್ತು ಕಸ್ತೂರಿ ಕಮ್ಮೆಣ್ಣೆ ಒತ್ತಿ ಸಂಭ್ರಮದಿಂದ ಮಿತ್ರಸಹಿತ ನಿಂದ ಭಕ್ತವತ್ಸಲ ರಂಗ 6 ಛಂದದಿ ಇಕ್ಷುರಸವು ಚೂತ ಕದಲಿ ರಸಂಗಳು ದಧಿ ತಿಂತ್ರಿಣಿ ನಿಂಬೆರಸ ಕ್ಷೀರ ಘೃತಗಳಿಂದ ಆ ನಂದದಿ ಯೆರೆದರು ಇಂದಿರೆರಮಣಗೆ 7 ಕೇಸರಿ ಪುನಗಿನ ತೈಲವನೆ ತೆಗೆದು ವಾಸುಕಿಶಯನಗೆ ಲೇಪವನು ಮಾಡಿ ಸ ಹಸ್ರಕೊಡದ ಅಭಿಷೇಕವ ಮಾಡಿದರು 8 ಪಟ್ಟುಪೀತಾಂಬರವನುಟ್ಟು ಶ್ರೀರಂಗನು ಕಳೆದ ಕವಚ ತೊಟ್ಟು ಹತ್ತುಸಾವಿರಸೇರಿನ ಅಕ್ಕಿ ಅನ್ನವ ನಿಟ್ಟು ವಿಪ್ರರು ಸುರಿದರು ವಿಸ್ತಾರವಾಗಿಯೆ9 ದಧಿ ಕದಳಿ ಫಲದಿಂದ ನೈ [ವೃಂದಕ್ಕೆ] ಕರೆಕರೆದು ಕೊಡುವ ಪರಿಯ ನಾ 10 ರಂಗನಾಯಕಿ ಪಟ್ಟದರಸಿ [ವೆರಸಿ]ನರಹರಿ ಚಕ್ರಮೂರುತಿಗೆ ಆಗ ಕಲ್ಪೋಕ್ತದಿಂದಭಿಷೇಕವ ಮಾಡೆ ಕರ್ಪೂರ ತೈಲವ [ಲೇ ಸಾಗಿ]ಹಚ್ಚಿ ಮಲಗಿದ ವೆಂಕಟರಂಗ[ನ] 11
--------------
ಯದುಗಿರಿಯಮ್ಮ
ಝಂಕೃತಿ ನಾಟ್ಯಕಲಾ ಬೃಂದಾವನ ಪ ಸದನ ಅ.ಪ ಝಣ ಝಣನಾದ ವೇಣುನಿನಾದ ಗಾನವಿನೋದ ನಂದನಾ1 ನವಮಣಿರುಚಿರ ಭಾಮಾನಿಕರ ಸುರುಚಿರ ಮಾಂಗಿರಿ ಶ್ರೀವರ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಝಣ ಝಣ ಝಣರೆಂದು ಕುಣಿವುದ ನೋಡೆ ಫಣಿಪತಿ ಶಯನನು ಕಾಣುವ ನೋಡೆ |ನಾಡೆ ಪ ಕಿಣಿ ಕಿಣಿ ಕಿಂಕಿಣಿ ಕಿಣಿರವ ಕೇಳೇ ಮಣಿ ಮಣಿದಾತನ ನಾಮವ ಪಾಡೇ ಅ.ಪ ನೋಡುವ ನಲಿಯುವ ಹೊಂಗೊಳಲೂದುವ ಪಾಡುವ ಕರೆಯುವ ನಗಿಸುವ ನಗುವಾ ಮಾಡೆ ವಂದನೆಗಳ ಸಂತಸಗೊಳುವಾ ಬೇಡುವರಿಷ್ಟವ ಕರುಣದಿ ಕೊಡುವಾ 1 ಬೃಂದಾವನದಾನಂದದ ನೋಟಾ ಮಂದಗಮನೆಯರ ನಲವಿನ ಕೂಟಾ ಇಂದಿರೆಯರಸ ಮಾಂಗಿರಿಪತಿಯಾಟಾ ಸಂದಪುದೆಮಗೆ ಬಾ ಕೃಷ್ಣನೊಳಾಟಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಟೀಕಾರ್ಯ - ಟೀಕಾರ್ಯ ಪ ಕಾಕು ಮತಗಳ ವಿ | ವೇಕದಿ ಖಂಡನ ಅ.ಪ. ಎತ್ತಾಗಿರುತಿರೆ | ಶಾಸ್ತ್ರಬೋಧ ಶ್ರುತಉತ್ತಮ ಸಂಸ್ಕøತಿ | ಪೊತ್ತು ಜನಿಸಿದೆ 1 ಲಕ್ಷವಿತ್ತನೀ | ಲಕ್ಷಿಸದಲೆ ಮುನಿತ್ರ್ಯಕ್ಷನಂಶರಿಂ | ಭಿಕ್ಷುಕನಾದವ 2 ಮಧ್ವಶಾಸ್ತ್ರ ದು | ಗ್ದಾಬ್ಧಿ ಮಥಿಸಿ ಬಹುಶುದ್ಧ ಸುಧೆಯ ನೀ | ಮೆದ್ದು ಉಣಿಸಿದೆ 3 ಮೌನಿ ಮಧ್ವಕೃತ | ಮಾನ ಲಕ್ಷಣಕೆಗಾನ ಮಾಡ್ದೆ ಪ್ರ | ಮಾಣ ಪದ್ಧತಿಯ 4 ಪದ್ಧತಿಯಿಂದಲಿ | ವಿದ್ಯಾರಣ್ಯರಸದ್ದಡಗಿಸಿದೆಯೊ | ಬುದ್ಧಿ ಚಾತುರ್ಯ 5 ಯೋಗಿ ವರೇಣ್ಯನೆಕಾಗಿನಿ ತೀರಗ ಭಾಗವತರ ಪ್ರಿಯ 6 ಮಾವಿನೋದಿ ಗುರು | ಗೋವಿಂದ ವಿಠಲನಭಾವ ಕುಸಮದಿಂ | ದೋವಿ ಪೂಜಿಸುವ 7
--------------
ಗುರುಗೋವಿಂದವಿಠಲರು