ಒಟ್ಟು 1996 ಕಡೆಗಳಲ್ಲಿ , 117 ದಾಸರು , 1619 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮ ಗೋವಿಂದ ಸೀತಾ - ರಾಮ ಗೋವಿಂದ ಪ.ತೃಪ್ತಿಯಹುದೆ ಹೆತ್ತ ತಾಯಿ ಇಕ್ಕದನಕಭಕ್ತಿಯಹುದೆ ಭಕ್ತಜನರ ಸಲಹದನಕಮುಕ್ತಿಯಹುದೆ ಭಾವಶುದ್ದಿ ಇಲ್ಲದನಕಚಿತ್ತಶುಧ್ಧಿ ಆತ್ಮನಿಜವು ತಿಳಿಯದನಕ 1ಓದಲೇಕೊ ಮನದಿ ಜ್ಞಾನವಿಲ್ಲದನಕಭೇದವೇಕೊ ಗತಿಯುಗಮನ ತಿಳಿಯದನಕಕಾದಲೇಕೊ ಭುಜದಿ ಶಕ್ತಿಯಿಲ್ಲದನಕವಾದವೇಕೊಶ್ರುತಿ- ಶಾಸ್ತ್ರ ತಿಳಿಯದನಕ2ನಳನವಿದ್ದರೇನು ತುಂಬಿಯೊದಗದನಕದಳವು ಇದ್ದರೇನು ಧೈರ್ಯಕೊಡದನಕಲಲನೆಯಿದ್ದರೇನು ಪುತ್ರರಿಲ್ಲದನಕಚೆಲುವನಾದರೇನುವಿದ್ಯೆಕಲಿಯದನಕ3ಮನವಿದ್ದೇಕೊಶುಕ - ಪಿಕವಿಲ್ಲದನಕತನುವಿದ್ದೇಕೊ ಪರಹಿತಕೆ ಬಾರದನಕಮನೆಯಿದ್ದೇಕೊ ಅತಿಥಿಯೊಬ್ಬರಿಲ್ಲದನಕಧನವಿದ್ದರೇನು ದಾನ - ಧರ್ಮಕ್ಕೊದಗದನಕ 4ಹರಿಯ ಚಿಂತೆಯಿರಲು ಅನ್ಯ ಚಿಂತೆಯೇತಕೊಹರಿಯ ಧ್ಯಾನವಿರಲು ಅನ್ಯ ಧ್ಯಾನವೇತಕೊಸಿರಿ ಪುರಂದರವಿಠಲನಿರಲು ಭಯವು ಏತಕೊಹರಿಯ ಒಲಿದ ಮನುಜನಿಗೆ ದೈನ್ಯವೇತಕೊ 5
--------------
ಪುರಂದರದಾಸರು
ರಾಮ ರಾಮ ರಾಮ ರಾಮ ರಾಮವೆನ್ನಿರೊ |ರಾಮ ರಾಮವೆಂಬ ನಾಮ ಮನದಿ ನೆನೆಯಿರೊ ಪ.ಇಂದ್ರಿಯಂಗಳೆಲ್ಲ ಕೂಡಿ ಬಂದು ತನ್ನ ಮುಸುಕಿದಾಗ |ಸಿಂಧುಸುತಾಪತಿಯ ಧ್ಯಾನ ಅಂದಿಗೆ ಒದಗಲೀಯದು1ಭರದಿ ಯಮನ ಭಟರು ಬಂದು ಹೊರಡು ಎಂದು ಮುಟ್ಟಲು |ಕೊರಳಿಗಾತ್ಮ ಸೇರಿದಾಗ ಹರಿಯ ಧ್ಯಾನ ದೊರೆಯದಯ್ಯ 2ಕಾಸಶ್ವಾಸದಲ್ಲಿ ಸಿಲುಕಿ ದೋಷ ಬಲಿದು ಪೋಗುವಾಗ |ವಾಸುದೇವನೆಂಬ ನಾಮ ವದನದಲ್ಲಿ ಒದಗದಯ್ಯ 3ಶೃಂಗಾರವಾದ ದೇಹ ತಂಗಿಬಿಟ್ಟು ಪೋಗುವಾಗ |ಕಂಗಳಿಗಾತ್ಮಾ ಸೇರಿದಾಗ ರಂಗನ ಧ್ಯಾನ ದೊರಕದಯ್ಯ 4ಕಷ್ಟಜನ್ಮದಲ್ಲಿ ಬಂದು ದುಷ್ಟಕರ್ಮಗಳನು ಮಾಡಿ |ಬಿಟ್ಟು ಹೋಗುವಾಗ ಪುರಂದರವಿಠಲನ ನೆನೆಮನವೆ 5
--------------
ಪುರಂದರದಾಸರು
ರಾಮ ಶ್ರೀರಾಮ ಸೀತಾರಾಮ ಶ್ರೀರಾಮರಾಮನೆ ರವಿಕುಲಸೋಮಶ್ರೀರಾಮಪರಾಮ ರಾಮ ರಘುರಾಮನೆ ದಶರಥರಾಮನೆ ಗುಣಗಣಧಾಮನೆ ಶ್ರೀರಘು ಅ.ಪಕೌಸಲ್ಯಾದೇವಿಯ ಕಂದನೆ ರಾಮಕೌಶಿಕಯಜÕವ ಕಾಯ್ದ ಶ್ರೀರಾಮಹಿಂಸಿಸಿದ ತಾಟಕಿಯನು ಕೊಂದರಾಮಧ್ವಂಸಮಾಡಿದೆ ಶಿವಧನು ಮುರಿದುರಾಮಸಂಶಯವಿಲ್ಲದೆ ಸೀತೆಕರವಪಿಡಿದುತನ್ನಂಶದ ಪರಶುರಾಮನಿಗೊಲಿದನೆ ಶ್ರೀ 1ದಶರಥರಾಮ ನೀನರಸನಾಗೆನಲುಅಸುರಾವೇಶದಿ ಕೈಕೆ ವರವ ಯಾಚಿಸಲುಎಸೆವ ಸಿಂಹಾಸನ ತೊರೆದು ಪೊರಮಾಡಲುಶಶಿಮುಖಿಸೀತಾಲಕ್ಷ್ಮಣರ ಕೂಡಿ ಬರಲುಭರತಗೆ ಪಾದುಕೆ ಕೊಡುತಲಿ ಕಳುಹಿಸಿಗುಹನ ಮನ್ನಿಸಿ ವನರಾಜ್ಯದೊಳ್ ಮೆರೆದೆ 2ವನದೊಳುಮಾಯಾಮೃಗವ ಕಂಡು ಸತಿಯುಮನದಿ ಚಿಂತಿಸಿರಾಮ ತೆರಳೆ ರಕ್ಕಸನುವನಜಾಕ್ಷಿ ಸೀತೆಯ ಕಳವಿನಿಂ ತರಲುವನವನಚರಿಸಿ ಪುಡುಕೆ ಕಂಡು ಕಪಿವರನುಶರಧಿಲಂಘಿಸಿ ಸೀತೆಯನು ಕಂಡು ಹನುಮನುಕುರುಹು ಪಡೆದು ಲಂಕೆ ದಹಿಸುತ ಬರಲು 3ಸೇತುಬಂಧನ ಮಾಡಿ ಕಪಿಗಳ ಕೂಡಿನೀತಿ ಪೇಳಿದ ವಿಭೀಷಣಗಭಯ ನೀಡಿಭೂತ ರಾವಣನ ದಶಶಿರವ ಚಂಡಾಡಿಸೀತಾಸಹಿತ ರಾಮ ಪುಷ್ಪಕವನೇರಿಆತುರದಿಂದಿಹ ಭರತನಿಗ್ವಾರ್ತೆಯಪ್ರೀತಿಲಿ ಕಳುಹಿದ ಶ್ರಿ ರಘುರಾಮ 4ಬಂದ ಶ್ರೀರಾಮಚಂದ್ರ ಬಹುಪ್ರೀತಿಯಿಂದಛಂದದಿಂ ಭರತನ ಮನ್ನಿಸಿ ಮುದದಿಂದಕುಂದಣಮಯದ ಸಿಂಹಾಸನ ಚಂದ-ದಿಂದಲೇರುತ ರಾಮ ನಸುನಗೆಯಿಂದಇಂದಿರಾಸೀತಾ ಸಹಿತ ಅಯೋಧ್ಯದಿಬಂದು ಪೊರೆವ ಕಮಲನಾಭ ವಿಠ್ಠಲನು 5
--------------
ನಿಡಗುರುಕಿ ಜೀವೂಬಾಯಿ
ರಾಯರ ನೋಡಿರೈ ಶುಭತಮ ಕಾಯರ ಪಾಡಿರೈ ಪತೋಯಜ-ಪತಿನಾರಾಯಣ ಪದಯುಗxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಭೃಂಗಾ - ಭüಕ್ತಕೃಪಾಂಗಾ ಅ.ಪಮಂದಸ್ಮಿತಯುತ ದ್ವಂದ್ವ ಓಷ್ಠ,ಶ್ರುತಿಕಂಧರಯುತ ಪೂರಂದರ - ಕರಿಕರಸುಂದರ ಹೃದಯದಿ ನಾಮಾ ಹಚ್ಚಿಹÀ ಪ್ರೇಮಾ 1ಸ್ವಸ್ತಿಕಾಸನ- ಸ್ಥಿತ-ಮೋದಕೃತವಿನೋದವಸ್ತ್ರದಿ ಶೋಭಿಪಗಾತ್ರಶುಭಚರಿತ್ರಸ್ವಸ್ಥ ಮನದಿ ಪ್ರಶಸ್ತ ಹರಿಯಪಾದಸ್ವಿಸ್ತಿಕ-ಯುಗಳ- ಧ್ಯಾನ ಮಾಡುವಙ್ಞÕನಸ್ವಸ್ತಿದನೆನಿಸಿದ ಭೂಪಾ ಭವ್ಯ ಪ್ರತಾಪ 2ಕುಟಲವಿಮತರ ಪಟಲಾಂಧಕಾರಕೆಪಟುತರದಿನಮಣಿ ರೂಪಾ ನಿಜ ಜನ-ಸುರಪಾಸ್ಪುಟಿತ-ಹಾಟಕ- ಚಂದ್ರಾ ಸದ್ಗುಣಸಾಂದ್ರಚಟುಲಜನರ ಪರಿಪಾಲಾ ಕರುಣವಿಶಾಲಾಕಿಟಿರದ-ಭವ- ನದಿ - ತಟ-ಕೃತ - ಮಂದಿರಧಿಟ ಗುರುಜಗನ್ನಾಥಾ ವಿಠಲ ದೂತಾ 3
--------------
ಗುರುಜಗನ್ನಾಥದಾಸರು
ರುದ್ರದೇವರ ಹರಿಹರಸ್ತೋತ್ರ127ಶರಣು ನಿನ್ನಚರಣಕಮಲಗಳಿಗೆ ಶಿವಶಿವಾ |ಕರವಪಿಡಿದು ಸುಮತಿಯಿತ್ತು ಪೊರೆಯೊ ಶಿವಶಿವಾ ಪದಂತಿಚರ್ಮ ಹೊದ್ದ ಭಸ್ಮಭೂಷ ಶಿವಶಿವಾ |ಚಿಂತಿ ರಹಿತ ಲಯಕೆ ಕರ್ತೃನಾದ ಶಿವಶಿವಾ ||ಸಂತರಿಂದ ಸತತ ಸೇವೆಗೊಂಬ ಶಿವಶಿವಾ |ಕಂತುಪಿತನ ಪೂರ್ಣ ಪ್ರೀತಿಪಾತ್ರ ಶಿವಶಿವಾ 1ಮಂದಮತಿಯ ತಪ್ಪಿನೆಣಿಸಬ್ಯಾಡ ಶಿವಶಿವಾ |ಕುಂದುನಿನಗೆ ಎಂದಿಗೆಂದಿಗಿಲ್ಲ ಶಿವಶಿವಾ ||ಮಂದಗಮನೆ ನಿನ್ನ ಮನದೊಳಿಲ್ಲೆ ಶಿವಶಿವಾ |ತಂದುಕೊಂಡ ದಕ್ಷ ವೃಥ ಕುವಾರ್ತಿ ಶಿವಶಿವಾ 2ಹೀನರಂತೆ ನಿನಗೆ ಕೋಪ ಸಲ್ಲ ಶಿವಶಿವಾ |ಮಾಣು ಯಜÕ ಸಹಯನಾಗು ದಯದಿ ಶಿವಶಿವಾ ||ಏನುಪಾಯ ಇದಕೆ ಚಿಂತಿಸುವದು ಶಿವಶಿವಾ |ಪ್ರಾಣೇಶ ವಿಠಲ ನಿನ್ನ ವಶದೊಳಿಹನು ಶಿವಶಿವಾ 3
--------------
ಪ್ರಾಣೇಶದಾಸರು
ಲೇಸ ಪಾಲಿಸು ಜಗದೀಶನೆ ದಯದಿ |ದೋಷರಹಿತ ಪರಮೇಶನೆ ಮುದದಿ ಪದಾಸ ಜನರ ಮನದಾಸೆಯ ಸಲಿಸುವ |ಸಾಸಿರ ನಾಮ ಸರ್ವೇಶ ಶ್ರೀಶಂಕರ ಅ.ಪಕಾಮ ವ್ಯಾಮೋಹ ಮದಾಂಧಕಾರವು ಬಂದುಪ್ರೇಮದಿ ನಿನ್ನನು ಭಜಿಸಲು ಬಿಡದೂ |ಕಾಮಹರನೆ ಕಾಯೋ ಕಾಮಿತಾರ್ಥವನಿತ್ತು |ಪ್ರೇಮ ಗಿರಿಜಾರಮಣ |ಸೋಮಶೇಖರ ನಿನ್ನ ಲೇಸ ಪಾಲಿಸು 1ಫಾಲಲೋಚನಭವ|ಭಾರನಿವಾರಣ |ಶೂಲಪಾಣಿಯೆ ಮುನಿಜಾಲಸಂರಕ್ಷಣ |ಮಹಾಲಿಂಗೇಶನೆ | ಭಕ್ತಪಾಲಕನೆಂಬುವ |ಮೂಲ ಚರಿತ್ರವಕೇಳಿಬಂದೆನು ದೇವಾ 2ಹಿಂದೆ ಮಾರ್ಕಾಂಡೇಯ ಮುನಿವರ ನಿನ್ನನು |ಚಂದದಿ ಪೂಜಿಸಿ ವಲಿಸಲಾ ಯಮನೂ |ಬಂದು ಪಾಶವ ಕೊರಳ ಸಂದಿನೋಳ್ ಸೇರಿಸ- |ಲಂದು ಮೈದೋರಿ ಗೋವಿಂದಸಖ ನೀ ಕಾಯ್ದೆ 3
--------------
ಗೋವಿಂದದಾಸ
ಲೊಳ್ಳ ಕಳ್ಳೊಟ್ಟೆ ಜಂಬಾಳಗಟ್ಟೆ ಸಂಸಾರ ನೋಡಮ್ಮಲೊಳ್ಳ ಕಳ್ಳೊಟ್ಟೆ ಸರಸನಂಬಲುಗತಿಯದು ಲೊಳ್ಳಟ್ಯಮ್ಮಮ್ಮಪಹೆಂಡಿರು ಮಕ್ಕಳು ತಂದೆ ತಾಯಿಗಳುಭಾಗ್ಯವು ಲೊಳ್ಳಟ್ಯಮ್ಮಮ್ಮಚಂಡ ಯಮದೂತರುಮಂಡೆತಿವಿವಾಗಬಿಡಿಸುವರಾರು ಇಲ್ಲಮ್ಮ1ಶ್ರೇಷ್ಠತೆ ಚೆಲುವಿಕೆ ವಸ್ತ್ರವು ಪ್ರಾಯವುಸಿದ್ಧಿಯು ಲೊಳ್ಳಟ್ಯಮ್ಮಮ್ಮದುಷ್ಟಮದೂತರು ದುಬುದುಬು ಬಡಿವಾಗಬಿಡಿಸುವರಾರು ಇಲ್ಲಮ್ಮ2ವಾರೆ ಮುಂಡಾಸವು ಗೀರು ಗಂಧಗಳುಪೋರತನವು ಲೊಳ್ಳಟ್ಯಮ್ಮಮ್ಮಘೋರ್ಯಮದೂತರು ಘರ್ಜಿಸುತ ಒಯ್ವಾಗಬಿಡಿಸುವರಾರು ಇಲ್ಲಮ್ಮ3ಕನಸಿನ ತೆರವಿದು ಸಂಸಾರವೆಂಬುದುಅನುಮಾನವಿದಕಿಲ್ಲಮ್ಮಮ್ಮಕನಸೆಂದು ನಿಶ್ಚೈಸೆ ಕಾಲನು ಬಾರನುಮನದಲಿ ತಿಳಿದುಕೊ ನೀನಮ್ಮ4ತನ್ನನು ಮರೆತು ಸಂಸಾರ ನೆಚ್ಚಲುತಿರುಗುವ ಜನ್ಮವ ನಮ್ಮಮ್ಮಚೆನ್ನ ಚಿದಾನಂದ ಗುರುವೆಂದು ನಂಬಲುಜನ್ಮವ ಕಳೆವುವು ತಿಳಿಯಮ್ಮ5
--------------
ಚಿದಾನಂದ ಅವಧೂತರು
ವಂದನೆ ಮಾಡಿರೈಗುರುವರದೇಂದ್ರರ ಪಾಡಿರೈ ಪಬಂದ ದುರಿತಗಳ ಹಿಂದೆ ಮಾಡಿ ಸುಖ |ತಂದುಕೊಡುವ ದಯಾಸಿಂಧುಯತೀಂದ್ರರ ಅ.ಪ.ಮರುತ ಮತಾಂಬುಧಿ ಸೋಮನೆನಿಪ ವಸುಧೇಂದ್ರ - ಸದ್ಗಣಸಾಂದ್ರ|ಗುರುಗಳಕರಕಮಲದಿ ಜನಿಸಿದ ಸುಕುಮಾರಾ - ಕುಜನ ಕುಠಾರಾ ||ನೆರೆನಂಬಿದ ಭಕುತರನನುದಿನದಲಿ ಪೊರೆವಾ - ದುರಿತವ ತರಿವಾ |ಧರೆಯೊಳು ತ್ಯಾಗದಿ ಕರ್ಣನ ಮರೆಸಿದ ನೋಡಿ - ವರಗಳ ಬೇಡಿ1ಕರಿಹಿಂಡೊಳುಹರಿಹೊಕ್ಕ ತೆರದಿ ವಾದಿಗಳ - ಕೀಳು ಮತಗಳ |ವರಶಾಸ್ತ್ರಗಳಲಿ ಗೆಲಿದು ಸುಬುದ್ಧಿಯ ವರದ - ಜಗದೊಳು ಮೆರೆದ ||ಶರಭಂಗವರದಚರಣಸರಸೀರುಹಭೃಂಗ- ವಿಷಯ ಅಸಂಗ |ಸ್ಮರಣೆಯ ಮಾಡೆ ಪಿಶಾಚ ರೋಗಗಳ ಭಯವೂ - ಮುಟ್ಟದಲಿಹವೂ 2ಸಾನುರಾಗದಲಿ ಶ್ರೀ ರಾಘವೇಂದ್ರರ ಸ್ತೋತ್ರ - ಮಾಳ್ಪ ಸುಪಾತ್ರ |ಜಾನಕಿಪತಿ ಆನಂದದೊಳಿವರಿಗೆ ಒಲಿವ - ಹೃದಯದಿ ಸುಳಿವ ||ದೀನ ದಯಾಳು ಅಪರಿಮಿತ ಮಹಿಮ ಗುಣಾಢ್ಯ - ವಾದದಿ ದಾಢ್ರ್ಯಾ |ಧ್ಯಾನಿಸೆ ಮನದೊಳು ಜ್ಞಾನ ಕೀರ್ತಿ ಸುಖ ಕೊಡುವ - ಅಘಗಳ ಕಡಿವ 3ವಿಷ್ಣುನ ಲೋಕ ಪ್ರವೇಶ ಮಾಡಿದ ಚರಿಯಾ - ಕೇಳಿರಿ ಪರಿಯಾ |ಶಿಷ್ಟ ಜನರು ವಿಶ್ವಾವಸು ನಾಮಕ ಅಬ್ದ - ಆಷಾಢ ಶುದ್ಧ ||ಷಷ್ಠಿಯು ಕುಜವಾಸರ ಉತ್ತರಾ ನಕ್ಷತ್ರಾ -ವರಪುಣ್ಯಕ್ಷೇತ್ರ |ನಟ್ಟ ನಡುವೆ ವೃಂದಾವನ ಮಧ್ಯದೊಳಿರುವಾ - ಸೌಖ್ಯವ ಸುರಿವಾ 4ಆನೆ ಹಂಡೆ ವಸನಗಳು ದ್ರವ್ಯವು ನಾನಾ - ಮಾಡಿದ ದಾನಾ |ಆ ನಗರದಿ ಬಹು ಮಂದಿಯು ಭಕುತಿಯಲಿಂದಾ - ಪೂಜಿಪ ಚಂದ ||ಸೂನುಪಡೆದು ಸುಖ ಪಡುವರು ಸರ್ವರುನಿತ್ಯ- ಈತನು ಸತ್ಯ |ನಾನೆಂತುಸಿರಲಿ ಪ್ರಾಣೇಶ ವಿಠಲನ ದಾಸಾ, ಮುನಿ ಉತ್ತಂಸಾ 5
--------------
ಪ್ರಾಣೇಶದಾಸರು
ವಂದಿಸಿದರ ಕಾವೆ ವರವನೀವೆ ಅಹಿಪವೀಂದ್ರಭವಸುರರಗುರುಮಧ್ವಮುನಿರಾಯಪ.ಒಂದೊಂದುಶ್ರುತಿಸ್ಮøತಿಗೆ ಬಹ್ವಾರ್ಥಗಳ ಪೇಳದೆಒಂದೆರಡು ತತ್ವವಿಸ್ತರವ ಪೇಳಿದೆಒಂದು ಮೂರವತಾರದಲ್ಲಿ ಹರಿಯನೆ ಒಲಿಸಿಒಂದು ನಾಲ್ಕರ ಭೇದ ನಿಜರಿಗರುಹಿದೆಯ 1ಒಂದೈದು ರಿಪುವರ್ಗ ನಿಗ್ರ್ರಹವ ಮಾಡಿಸಿದೆಒಂದಾರು ತ್ರಿಗುಣಿಸಿದ ಮತವ ಮುರಿದೆಒಂದೇಳು ಮದವ ಕಾಲಲಿ ಮೆಟ್ಟಿ ಹರಿಪುರಕೆಒಂದೆಂಟು ಭಕುತಿಪಥ ತೋರ್ದೆ ವೈಷ್ಣವರಿಗೆ 2ಒಂದು ಒಂಬತ್ತು ಹರಿಯವತಾರ ಕಥೆ ರಚಿಸಿಒಂದು ಹತ್ತೇಂದ್ರಿಯದ ಗೆಲವ ಕಳಿಸಿಒಂದು ಹನ್ನೊಂದು ಸ್ತೋತ್ರದಿ ಕೃಷ್ಣನ ಮೆಚ್ಚಿಸಿದೆಒಂದು ಹನ್ನೆರಡು ತತ್ವದಾಗ 3ಒಂದು ಹದಿಮೂರು ಭುವನಗಳಲ್ಲಿ ನೀ ವ್ಯಾಪ್ತಒಂದು ಹದಿನಾಲ್ಕು ದ್ವಿಗುಣಿಸಿದ ಮ್ಯಾಲೇಳೊಂದಿದ ಸದ್ಗ್ರಂಥಗಳ ನಿರ್ಮಿಸಿ ಬುಧರಿಗಿತ್ತೆಒಂದು ಹದಿನೈದು ಗುಣದ ಲಕ್ಷಣಾಂಗ 4ಒಂದು ಹದಿನಾರೆಂಟು ತತ್ವ ಸಿದ್ಧಾಂತದಲಿಒಂದು ಹದಿನೇಳು ಪರ್ವಮೋಹಕ ಬಿಡಿಸಿದೆಒಂದು ಮನದಿಂದ ಶಿರಿ ಪ್ರಸನ್ನವೆಂಕಟ ಕೃಷ್ಣನಒಂದೊಂದು ಗುಣಕೆ ಅನಂತ ವ್ಯಾಖ್ಯಾನ 5
--------------
ಪ್ರಸನ್ನವೆಂಕಟದಾಸರು
ವಂದಿಸುವುದಾದಿಯಲಿ ಗಣನಾಥನ ಪಒಂದೆ ಮನದಲಿ ಬಂದು ಪೂಜಿಸಲು ಗಣನಾಥಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು 2ಇಂದುಜಗವೆಲ್ಲ ಉಮೆನಂದನನ ಪೂಜಿಸಲುಚೆಂದದಿಂದಲಿ ಸಕಲಸಿದ್ಧಿಗಳನಿತ್ತುತಂದೆಸಿರಿಪುರಂದರವಿಠಲನ ಸೇವೆಯೊಳುಬಂದು ವಿಘ್ನವ ಕಳೆದಾನಂದವನು ಕೊಡುವ 3
--------------
ಪುರಂದರದಾಸರು
ವಾದಿರಾಜಾ ಪಾಲಿಸು ಎನ್ನ ಪಮೋದಪರಾಗವಸಾದರನೀಡಿಅ.ಪಪಾದವ ನಂಬಿದೆ ನೀ ದಯದಲಿ 1ವಾರ್ತದಿ ಬಂದವನಾರ್ತಿಯ ಬಿಡಿಸೋ 2ಬಲ್ಲಿದನೆಂಬೊದು ಬಲ್ಲೆ ಬಲ್ಲೆನು 3ಮರ್ತರೆ ಅನ್ಯ ಸಮರ್ಥರ ಕಾಣೆ 4ಕಾಮಿತನೀಡೈ ಸುರತರುವೇ 5ವೀಕ್ಷಿಸಿ ಮನದಾಪೇಕ್ಷವ ಸಲಿಸೋ 6ನೀತ ಗುರುಜಗನ್ನಾಥವಿಠಲ ದೂತ 7
--------------
ಗುರುಜಗನ್ನಾಥದಾಸರು
ವಾಸುದೇವನ ಗುಣೋಪಾಸನೆತಾರಕxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹೇಸಿಕೆಸಂಸಾರ ಮಾರಕವೋ ಪಕ್ಲೇಶದ ಭವದೊಳಾಯಾಸಿ ಬಡದೆಹರಿದಾಸರ ದಾಸ ನೀನಾಗೋ ಭವನೀಗೋ ಅ.ಪಥಳಥಳ ದೇಹವ ತೊಳೆದು ನಾಮವಹಚ್ಚಿಛಳಿಗಂಜದೆ ನಿತ್ಯಜಲದಿ ಮುಳುಗಿಕರ್ಮಒಳಗೆ ಹೊರಗೆ ಎಲ್ಲಾ ಹೊಳೆವ ಹರಿಯಮೂರ್ತಿತಿಳಿಯದೆ ಯಮನಿಗೆ ಸಿಲುಕುವೆಯಲ್ಲೋ 1ಡೊಂಬನಂದದಿ ಡಾಂಬಿಕ ಕರ್ಮದ ಆ -ಅಂಬರಹಾಸಿಟ್ಟು ಕುಂಭದಿ ನೀರೆರೆದುಬಿಂಬನುಂಡನು ತೆಗಿ ಎಂಬುವಿಯಲ್ಲೋ 2ಕರ್ತಶಾಸ್ತ್ರಾರ್ಥತ್ವದ ಅರ್ಥ ತಿಳಿಯದೆ ಜೀವ -ಅತ್ತಣದ್ವಾರ್ತೆಯ ಮರೆತಿರುವೀ 3ಒಡೆಯನೆನುತನಿತ್ಯಪೊಡವಿತಳದಿ ಬಹುಧೃಢಮನದಲಿ ನೇಮಹಿಡಿದು ಮಾಡಿದಕರ್ಮಜಡಜನಾಭನಪಾದದೃಢ ಮಾಡಲೊಲ್ಲೆ4ಪ್ರೀತಿಯಾಗುವಕರ್ಮವ್ರಾತಮಾಡದೆನೀಗಿ5
--------------
ಗುರುಜಗನ್ನಾಥದಾಸರು
ವಿಠ್ಠಲ ದೇವರುನಮೋಯೆಂಬೆ ನಮೋಯೆಂಬೆನಮ್ಮಯ ವಿಠಲಗೆ ಪಕಾಷ್ಟಹಾರನ ಇಷ್ಟಮಿತ್ರನದಿಟ್ಟಪುತ್ರನ ಮನದಿಷ್ಟವಿತ್ತವಗೆ 1ಉತ್ತರಿತ್ತರಿ ತಮ್ಮ ಕತ್ತಲಮನೆಯೊಳುನೆತ್ತಿಹೊಡೆಸಿದಸ್ತ್ರೀನೆತ್ತಿ ಸಲಹಿದಗೆ2ಮಂಗಲಮುನಿಯಿಂದ ಭಂಗಪಟ್ಟವನಅಂಗಜನಶ್ವ ಶೃಂಗಾರದ್ಹಿಡಿದಗೆ 3ಕುರುಪನನುಜೆಯ ಪರಪತಿಶಿವತರಣಿಯಿದಿರಿನೋಳ್ ತರಿಸಿದ ಮಹಿಮಗೆ 4ಭಕ್ತವತ್ಸಲ ಮುಕ್ತಿದಾಯಕಭಕ್ತರ ಇಷ್ಟವ ಪೂರ್ತಿಪ ಶ್ರೀರಾಮಗೆ 5
--------------
ರಾಮದಾಸರು
ವಿದುರನ ಭಾಗ್ಯವಿದು |ಪದುಮಜಾಂಡ ತಲೆದೂಗುತಲಿದೆ ಕೊ ಪಕುರುರಾಯನು ಖಳನನುಜನು ರವಿಜನು |ಗುರುಗಾಂಗೇಯರು ಎದುರಿರಲು ||ಹರಿಸಿ ರಥವ ನಡು ಬೀದಿಯಲ್ಲಿ ಬಹ |ಹರಿಯ ತಾನು ಕಂಡನು ಹರುಷದಲಿ 1ದಾರಿಯಲಿ ಬಹ ಮುರವೈರಿಯ ಕಾಣುತ |ಹಾರುತ ಚೀರುತ ಕುಣಿಯುತಲಿ ||ವಾರಿಧಾರೆಯನು ನೇತ್ರದಿ ಸುರಿಸುತ |ಬಾರಿಬಾರಿಗೆ ಹಿಗ್ಗುವ ಸುಖದಿ 2ಆಟಕೆ ಲೋಕಗಳೆಲ್ಲಾ ಸೃಜಿಸುವ |ನಾಟಕಧರ ತನ್ನ ಲೀಲೆಯಲಿ ||ನೀಟಾದವರ ಮನೆಗಳ ಜರೆದು |ಕುಟೀರದಲಿ ಬಂದುಹರಿ ಕುಳಿತ3ಅಡಿಗಡಿಗೆ ತನ್ನ ತನುಮನ ಹರಹಿ |ಅಡಗೆಡೆಯುತ ಬಲು ಗದ್ಗದದಿ ||ನುಡಿಗಳ ತೊದಲಿಸಿ ರೋಮವ ಪುಳಕಿಸಿ |ದುಡುದುಡು ಓಡುವ ದಶದಿಶೆಗೆ 4ಕಂಗಳುದಕದಿ ಪದಂಗಳ ತೊಳೆದು |ಗಂಧವ ಪೂಸಿದ ತನುಪೂರಸಿ ||ಮಂಗಳ ಮಹಿಮನ ಚರಣಕೆರಗಿ ಪು-ಷ್ಪಂಗಳಿಂದ ಪೂಜೆಯ ಮಾಡಿದನು 5ನೋಡಿದ ಭಕುತನ ಮನದ ಹವಣಿಕೆಯು |ಪಾಡುವ ಪೊಗಳುವ ಹರುಷದಲಿ ||ನೀಡಿದ ಕರದಲಿ ಬಿಗಿದಪ್ಪಿದ ಕೊಂ -ಡಾಡಿದ ಕರುಣದಿ ಜಗದೊಡೆಯ 6ಕ್ಷೀರವಾರಿಧಿ ಶಯನಗೆ ವಿದುರನು |ಕ್ಷೀರವನುಣ ಬಡಿಸಿದ ನೋಡಾ ||ವಾರಿಜನಾಭನು ಕರಸಂಪುಟದಲಿ |ಆರೋಗಣಿಸಿದ ಘನತೆಯನು 7ಒಂದು ಕುಡಿತೆ ಪಾಲುಹರಿ ತಾ ಸವಿದು |ಮುಂದಕೆ ನಡೆಸಿದ ಧರೆಮೇಲೆ ||ಇಂದಿರೆಯರಸನ ಚರಿತೆ ವಿಚಿತ್ರವು |ಚೆಂದದಿ ಹರಿದುದು ಬೀದಿಯಲಿ 8ಕರುಣಾಕರ ಸಿರಿಹರಿ ತನ್ನ ಭಕುತರ |ಪೊರೆವನುಅನುದಿನ ಆಯತದಿ ||ಸಿರಿಯ ಅರಸು ನಮ್ಮಪುರಂದರ ವಿಠಲನ |ಶರಣರು ಧನ್ಯರು ಮೇಲೆ 9
--------------
ಪುರಂದರದಾಸರು
ವಿರುಪಾಪುರ ವೇಂಕಟರಮಣನಿತ್ಯxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಸ್ಮರಿಸುವೆ ನಿನ್ನಚರಣನಿನ್ನಯ ಕರುಣಾ ಪಘನ್ನ ಕೀರುತಿಬ್ಯಾಗಬನ್ನಬಡಿಪರೇನೊ ಈಗ1ಅನ್ಯಾಯಕಾರಿ ಕೊನಿಗೆ 2ಆತಿಹ ಬೇಲಿಯು ಕುಲಮೇಯೆನರನಾಥನು ಸರ್ವಾಪಹಾರವು ಗೈಯೆ 3ಆರಿಗೆ ಉಸರಿದೇನು ಕಂ -ಸಾರಿ ಮನದಿ ಭಜಿಸುವೆನು 4ಶಿರಿಗುರುಜಗನ್ನಾಥ ವಿಠಲಮರೆಯದೆ ಪಾಲಿಸೊದಾತಾನಿನಪದದೂತರ ದೂತನೊ ಶಿರಿನಾಥಾ 5
--------------
ಗುರುಜಗನ್ನಾಥದಾಸರು