ಒಟ್ಟು 4256 ಕಡೆಗಳಲ್ಲಿ , 116 ದಾಸರು , 2832 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗವಾಲಿಯನಿಡು ತಂಗಿ ನಿನ್ನಂತರಂಗ ದಂಗಳ ಸಾರಿಸಿ ರಂಗಗರ್ಪಿತವೆಂದು ಪ. ಮಂಗಳಮಹಿಮ ಶ್ರೀ ಕೃಷ್ಣ ತನ್ವಲಿವ ಎಂದಂಗನೆ ಸುಭದ್ರೆಗೆ ರಂಗಹೇಳಿದ ಅ.ಪ. ಅರಿಷಡ್ವರ್ಗಹಂಕಾರ ಮದಗಳೆಂಬ ಮಮಕಾರವ ಬಿಟ್ಟು ಮುನ್ನ ತೊಡರಬಿಡಿಸಿ ನಿನ್ನ ಕಡೆಹಾಯಿಸುವ ಪಥ ದೊಡೆಯ ಶ್ರೀಧರಪಾದವದರೊಳು ನಿಲುವಂತೆ 1 ಶ್ವೇತ ಕಲ್ಲನೆ ಕುಟ್ಟಿ ಅಚ್ಚುತನಾಮ ಪವಳ ಬೆರಸಿ ಸ್ವಚ್ಛ ಮುತ್ತುಗಳೆಂಬಂಥ ಶೀಲತೆಯಿಂದ ಅಚ್ಚ ಶ್ರೀ ತುಳಸಿಯ ಕಟ್ಟೆಯ ಬೆಳಗುವಂಥ2 ಹರಿನಾಮದರಿಶಿನವದರ ಮಧ್ಯದಿ ತುಂಬಿ ಅರಿಗಳ ಕಡಿವಂಥ ಕುಂಕುಮವ ಪರಮಾನಂದದಿನೆಲ್ಲಿ ಕರಿಯ ಬಣ್ಣ ಹರುಷದಗಸೆ ಹಸುರ ಬೆರಸಿ ಶ್ರೀ ಶ್ರೀನಿವಾಸಗೆ 3
--------------
ಸರಸ್ವತಿ ಬಾಯಿ
ರಂಗಾ ಮನೆಗೆ ಬಂದ ಪರಮ ಮಂಗಳದಾಯಿ ಹಿಂಗಿತು ದಾರಿದ್ರ್ಯವಿನ್ನು ಶೃಂಗಾರ ಭುಜಂಗ ಶಾಯಿ ಪ. ಪದ್ಮನಾಭ ಸಿರಿನಲ್ಲಕೃಷ್ಣ ತನ್ನ ಪಾದ ಪಲ್ಲವೆ ಶರಣೆಂದು ನಿಲ್ಲೆ ಧೈರ್ಯದಿ ಮೆಲ್ಲ ಮೆಲ್ಲಕಾಗಿ ತನ್ನ ವಲ್ಲಭೆಯ ಕೂಡಿ ಎನ್ನ ಸೊಲ್ಲ ಲಾಲಿಸುತ ಕಂಸದಲ್ಲಣ ತಡವಿಲ್ಲದಂತೆ 1 ಆರುವೆನನೆಂಬ ಹುಣ ಘೋರಭಾವದಿಂದಲುಂಡು ಗಾರುಮಾಳ್ಪ ಸಮಯದಲ್ಲಿ ಚೀರುತಿರುವುದ ಮಾರಜನಕ ಲಾಲಿಸಿ ಕೃಪಾರಸದಿ ಸಲಹಿ ನಿಜ ಪಾ ದಾರವಿಂದ ಯುಗ್ಮವನ್ನು ತೋರಿ ತಿರುಗಿ ಕಳುಹಿದಂಥ 2 ಭಕ್ತಾಭರಣನೆಂಬ ಬಿರುದ ವ್ಯಕ್ತವಾಗಿ ತೋರಿ ಸರ್ವೋ ದ್ವøಕ್ತ ಮಹಿಮ ತನ್ನೊಳ್ಪರಮಾ ಮತಿಯನಿತ್ತು ಮಾಯಾ ಶಕ್ತಿಯರಸ ವೆಂಕಟೇಶ ನಿತ್ಯ ಮುಕ್ತ ರಮೆಯ ಕೂಡಿ ನಗುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ರಘುನಂದನ ರಘುನಂದನ ರಘುನಂದನ ರಘುನಂದನ ಪಸುಖದಾಯಕ ಸಕಲಾಗಮ ನಿರುತಖಗವಾಹನ ಮಣಿಭೂಷಣ ಕರುಣಾಕರ ಚರಿತಕೌಸಲ್ಯ ವರನಂದನ ಘನಕುಂಡಲ ಮಣಿಮಂಡಲನಾರಾಯಣ ದಾಮೋದರ ಮಧುಸೂದನ ಕೃಷ್ಣ 1ಗೋ'ಂದ ಮುಕುಂದಾಚ್ಚುತ ಕೃಷ್ಣಾಂಬುಜನಾಥಲಕ್ಷ್ಮೀಶ ಕೃಪಾಳೋ, ಜಗದೀಶವಂದ್ಯ 'ಷ್ಣುಶ್ರೀ ರಾಘವ ರಾಮಾನುಜ ಪಾ' ಮುಕುಂದಸೀತಾರಮಣ ತ್ರಿನಯನ ಗೋಪಾಲ ಗಿರೀಶ 2ಗೋಪಾಲ ಗೋಪಾಲ ಗೋಪಾಲ ಗೋಪಾಲಭಕ್ತಪ್ರಿಯ ಗೋ'ಂದ ಮುಕುಂದ ಅತಿಭೀಷಣ ಕಟುಭಾಷಣ ಯಮಕಿಂಕರ ಪಠಳಂಕೃತತಾಡನ ಪರಪೀಡನ ಮರಣಾಗಮ ಸಮಯೇ 3ಶಿವ ಶಂಕರ ಶಿವ ಶಂಕರ ಶಿವ ಶಂಕರ ಶಿವ ಶಂಕರಉಮಯಾಸಾಮಮಪೇಕ್ಷಿತ ಯಮಶಾಶ್ವತ ಶೂಲಿಂಪರಮೇಶ್ವರ ಹರಗೌರಿರಮಣ * 4
--------------
ವೆಂಕಟದಾಸರು
ರಘುವೀರನ ಕಂಡನು ಕಪಿವೀರ ಕಲಿಕಲ್ಮಷದೂರ ಪ ಅಘವರ್ಜಿತ ಪನ್ನಗಶಯನನೆಂದು ಬಗೆದು ಮನದಿ ಕರಮುಗಿದನು ದೂರದಿ ಅ.ಪ. ಶಿರಭಾಗದಿ ಮೆರೆವ ಜಟಾಮಕುಟ | ಚಿಕುರಾಳಿಯಿಂದ ಪರಿಶೋಭಿಪ ಸುಂದರ ಲಲಾಟ | ಕಮಲಾಕ್ಷಗಳಲಿ ನಾಸಿಕ ಬಲು ಮಾಟ ಸ್ಮರಲಾವಣ್ಯ ಧಿಕ್ಕರಿಸುವ ಸುಂದÀರ ಶರಧಿ ಗಂಭೀರನ 1 ಆಜಾನುಬಾಹುಗಳತಿ ಪ್ರಶಸ್ತ | ಸುರಚಾಪದಂತೆ ರಾಜಿಪ ಧನುವ ಧರಿಸಿದ ಹಸ್ತ | ವಿಶಾಲ ವಕ್ಷಕೆ ಈ ಜಗದೊಳಗುಪಮೇಯದೆತ್ತ | ದೋಷನಿರಸ್ತ ಮೂಜಗದೊಳಗತಿ ಸೋಜಿಗನೆನಿಪ ಸು ತೇಜದಿ ರಾಜಿಪ ರಾಜಕುಮಾರನ 2 ಸುಂದರ ತ್ರಿವಳಿಗೊಪ್ಪುವ ಉದರ | ನೆರೆ ಗಂಭೀರ ಚಂದದಿ ಶೋಭಿಪ ನಾಭಿಕುಹರ | ಚೀರಾಂಬರಧರ ಬಂಧುರ ಕಟಿತಟ ಬಲು ರುಚಿರ | ನೋಳ್ಪರ ಚಿತ್ತಹರ ಕುಂದಿಲ್ಲದ ಪದದ್ವಂದ್ವ ಸುಶೋಭಿತ ಸುಂದರಾಂಗ ಶ್ರೀ ಕರಿಗಿರೀಶನ 3
--------------
ವರಾವಾಣಿರಾಮರಾಯದಾಸರು
ರಚ್ಚೆ ಕಟ್ಟೆ ಪುರಾಣ ರಾದ್ಧಾಂತವು -ಇದು ಪ ಹುಚ್ಚುತನದಲಿ ನೀ | ಚೋಚ್ಚ ನುಡಿಗಳನಾಡುವುದು ಅ.ಪ ನವನವ ಆಸ್ತಿಗಳೆಲ್ಲ | ಇವನ ಮನೆಗೆ ಸೇರಿ ಬಂತು 1 ಸೊಟ್ಟಮೂತಿ ನಾಗಪ್ಪನ ಸೋದರಿಯರು ಏನು ಹೇಳಲಿ 2 ಇವನಿಗೆ ಬಂತು ಮತ್ತೆ ನಾವು ಬಡವರು ನಮಗೆಲ್ಲಿಂದ ಬಹುದು? 3 ದುರ್ಯೋಧನ ಯೋಗ್ಯ ಕುಂತೀತರಳರದೇ ಅನ್ಯಾಯ ಕೃಷ್ಣನು ನೆರೆ ಮೋಸಗಾರನು ಭಾರತ ಕಥೆಯೆಂಬುವುದು4 ಮೋಸಗಾರರೀವೂರೆಲ್ಲ ಆಶೆ ಪಾತಕರು 5 ತಂಗಿ ಆಸ್ತಿ ಸೇರಿತಿವಗೆ ಭಂಗಿ ಕೋರ ವೆಂಕಟರಾಯ ಮಂಗಿ ಸಂಗದಿಂದಲೀ ಕಮಂಗನಾನನು 6 ಮಧ್ವರಾಯನ ಮಗನ ಕಥೆ ಏನು ಹೇಳೋಣ 7 ಕಾಸಿದ್ದವರೇನು ಮಾಡಿದರೂ ಮಾಡಬಹುದು 8 ದಾರಿಹೋಕರೆಲ್ಲ ಕೂಡಿ ಭಾರಿ ಭಾರಿ ಮಾತುಗಳಾಡಿ ಸೂರೆಗೊಂಬುವರು ಪಾಪ ಶರಧಿಯನ್ನು 9 ಶರಣರ ದೂರಿಪಾತಕಕ್ಕೆ ಭಾಗಿಗಳಹರು 10
--------------
ಗುರುರಾಮವಿಠಲ
ರತ್ನವ ದೊರಕಿಸಿರೊ ಬಹಳ ಪ್ರಯತ್ನದಿಂದ ರಕ್ಷಿಸಿರೊಪ ಕತ್ತಲೆ ತುಂಬಿದ ಕತ್ತಲೆಗೂಡೊಳುಸುತ್ತಲು ಬೆಳಗಿಸಿ ಝಗಝಗಝಗಿಸುವ ಅ.ಪ. ಜ್ಞಾನದ ಖಣಿಯಿಂದಲಗೆದು ಮನಸಿನಹೀನ ಕಸವನೆಲ್ಲ ತೆಗೆದುಧ್ಯಾನ ಕುಂದಣದಿಂದ ಘಟ್ಯಾಗಿ ಬಿಗಿದುಮಾನಸ ಭಾಂಢಾರದೊಳಗಿಡಲು ಬಗೆದು 1 ಬೆಲೆ ಇದಕೆ ಒಂದೇ ಲಕ್ಷ ಕೊಟ್ಟರೆಸುಲಭವೊ ನಿಮಗೆ ಪರೋಕ್ಷಒಲಿದೊಗೆವುದು ತಾನು ಕಿರಣಕಟಾಕ್ಷನಿಲುವಿಗೆ ಬೇಕಾದ ಅಳತೆಗೆ ಬರುವ2 ತೇಜದಿ ಕೋಟಿಸೂರ್ಯರ ಮಿಕ್ಕುವ ನಿತ್ಯಭಾಜಕ ಜನರಘರಾಶಿಯ ಮುಕ್ಕುವಓಜದೆ ಮನಕಾನಂದವನಿಕ್ಕುವಗದುಗಿನ ವೀರ ನಾರಾಯಣನೆಂಬುವ 3
--------------
ವೀರನಾರಾಯಣ
ರಥವನೇರಿದ ರಥಗಾತ್ರ ಪಾಣಿ | ರಥಪತಿ ದಶರಥ ಸುತ ದಶರಥ ನೃಪ ಭಾಗೀ | ರಥಿ ವಿನುತಾ ಸು | ರಥನಯ್ಯ ಮನೋರಥ ದೇವ ಪ ಕರಿ ಭಯಂಕ ಹರ ಹರಿಣಾಂಕಾ | ಕಿರಣಶತ ಧಿಕ್ಕರಿಸುವ ದೇವಾ || ವರಮಣಿ ಭಕ್ತ ವರದಾಯುದಧಿ ತುರಗವು | ಪರತರ ತಮ ತರರಸ | ಪರಮ ಮಂಗಳ ಪುರುಷ ಪ್ರಧಾನಂ | ಪ್ರವಿಷ್ಠ ಭಾ | ಸುರ ಕೀರ್ತಿಹರ ನಿರುತ ಪ್ರದರು ಸುರಪತಿ 1 ಮಣಿಪ್ರಚುರ ಮುತ್ತಿನ ಮುಕುಟ ಸು | ಫಣಿ ಕಸ್ತೂರಿ ಕಂಕಣ ಕೇಯೂರ ಕಾಂ| ಕೌಸ್ತುಭ ಸೂರ್ಯನಗೆಲ್ಲ್ಲೆ | ವನಮಾಲೆ ಹರಿಮಣಿ ಪದಕ ಪಾ | ವನ ಪೀತಾಂಬರ ಮಿನಗುವ ಕಾಂಚಿ | ಝಣ ಝಣ ಮಹಾ | ಧ್ವನಿ ಚರಣ ಭೂಷಣವಾಗಿಯೂ ಮಾ | ನಿನಿ ಕೂಡಾ 2 ಎತ್ತಿದ ಶ್ವೇತಾತಪತ್ರ ಚಾಮೀಕರ | ವಿತ್ತ ನಭ ತುಳುಕುತ್ತಲಿರೆ ಧ್ವಜ | ಮಾತ್ರ ಬಂದಾಗಿ ತೂಗುತ್ತಿರಲು | ಸುತ್ತಲು ಊದುವ ತುತ್ತುರಿ ಶಂಖ | ವತ್ತಿ ಬಾರಿಸುವ ಮತ್ತೆ ವಾದ್ಯಗಳು | ತುತ್ತಿಸುವ ಮುನಿ | ಉತ್ತಮ ಜನ ಬಾ | ಗುತ್ತ ವಡನೆ ಬರುತಿರಲು 3 ವಸು ರುದ್ರಾದಿತ್ಯ ವಸುಜನರ ಪಾ | ಲಿಸುವೆನೆಂದು ದರಶನವು ಸರಸಿಜಗದಾಧರಿಸಿಕೊಂಡು ಅಷ್ಟ ರಸ ನಾಮಕ ಹರುಷದಿಂದ | ನಸುನಗುತ ನೀಕ್ಷಿಸಿಕೊಳುಂತ ಆ | ಲಸ ಮಾಡದೆ ರಂ | ಜಿಸುವ ಲೀಲಾಮಾನಸ ವಿಗ್ರಹ ಮೆ | ಚ್ಚಿಸಿದ ಜನರ | ವಶವಾಗಿಪ್ಪ ರಾಕ್ಷಸ ರಿಪು 4 ವನಧಿ ಚಿನ್ಮಯ ಉ | ಭಯಾ ಭಯ ಹಾರೆ | ಪಯೋವಾರಿ ನಿಧಿ | ಶಯನ ಚತುರ್ಬೀದಿಯಲಿ ತಿರುಗಿ | ಪ್ರೀಯದಿಂದಲಿ ಸ | ತ್ಕ್ರಿಯವಂತ ಜಯ ಜಯ ಪ್ರದಾ | ಸಾರಥಿ ನಿ | ರಯ ವಿದೂರ ವಿಜಯವಿಠ್ಠಲ ಸಾ | ಹಾಯವಾಗುವ ಗಿರಿಯ ವೆಂಕಟರಾಯ ಬಂದಾ 5
--------------
ವಿಜಯದಾಸ
ರಥವಾನೇರಿದ ಶ್ರೀ ಹನುಮಂತ | ಭೀಮ ಬಲವಂತ ಪ ಗತ ಶೋಕನ ಪದ | ರತಿ ಇಚ್ಛಿಪರಿಗೆಹಿತದಿಂದಲಿ ಸದ್ | ಗತಿಯ ಕೊಡುವೆನೆಂದು ಅ.ಪ. ಪತಿ ಕರಿಸೆನ್ನಲು |ಪ್ರತಿ ಪ್ರತಿ ತತುವರು | ಗತ ವಿಭವದಲಿರೆಪ್ರತಿ ನಿನಗಿಲ್ಲೆಂದೆ | ನುತಲಿ ತೋರಿದ 1 ಗರ ಉದುಭವಿಸಲುಹಿತದಿಂದಲಿ ಜಗ | ಪತಿಯಾಣತಿಗಳ |ಪತಿ ಕರಿಸುತ ನೀ | ಪಾತ್ರಗ ಗರವನುಮತಿ ವಂತನೆ ಕುಡಿ | ದತಿಶಯ ತೋರಿದೆ 2 ಮೂರು - ಕೋಟಿಯ ರೂಪ - ಧರನೆ | ಮೂರ್ವಿಕ್ರಮ ಸೇವಕನೆಮೂರು ಲೋಕಂಗಳ ವ್ಯಾಪಕನೆ | ರಕ್ಕಸಾಂತಕನೆ ||ಆರು ಮೂರುಗಳು | ಎರಡೊಂದನೆ ದಶನೂರು ಮೇಲೆ ಆ | ರ್ನೂರ್ ಜಪಗಳ |ಮೂರು ಭೇದ ವಿಹ | ಜೀವರುಗಳಲಿವಾರ ವಾರಕೆ ನೀ | ಗೈಯ್ಯುವೆ ಗುರುವೇ 3 ವಿಶ್ವ ಕ ಕರ್ಮ ಸಮೂಹವಸಾಕ್ಷಾತ್ತಾಗಿ ತಾನೆ | ಗೈಯ್ಯುವೆನೆಂದು 4 ಆನನ ಕಮಲಕೆಭಾನುವೆನಿಸುತಲಿ | ದುಶ್ಯಾಸನನಗೋಣ ಮುರಿದುರದಿ | ಕೋಣನ ವಿರಚಿಸಿಶೋಣಿತ ಕುಡಿದಂತೆ | ಕಾಣುವೆನೆಂದು 5 ಚಕ್ರಧರ | ಅಂಬುಜ ನಯನನಬೆಂಬಿಡದಲೆ ನೀ | ಸಂಭಮ್ರದಲಿ ನಿನ |ಅಂಬಕದಲಿ ನಿನ | ಬಿಂಬನ ಕಾಣುತತ್ರ್ಯಂಬಕನಿಂ ಸಂ | ಭಾವನೆ ಗೊಳ್ಳುತ 6 ಮಾಘ ಶುದ್ಧವು ನವಮಿಯ ದಿನದಿ | ಪಾರ್ಥಿವ ವತ್ಸರದಿಸಾಗರ ಕಟ್ಟೆ ಯತಿ ಸಮ್ಮುಖದಿ | ಕುಳ್ಳಿರುತಲಿ ರಥದಿ ||ನಿಗಮಗಳಿಗೆ ಸಿಗ | ದಗಣಿತ ಗುಣಮಣಿಖಗವರ ಗುರು ಗೋ | ವಿಂದ ವಿಠ್ಠಲನ |ಸುಗುಣ ಗಣಂಗಳ | ಬಗೆ ಬಗೆಯಿಂದಲಿಪೊಗಳುವರಘಗಳ | ನೀಗುವೆನೆನ್ನುತ 7
--------------
ಗುರುಗೋವಿಂದವಿಠಲರು
ರಥಾರೂಢ ವೆಂಕಟಗಿರಿನಾಯಕ ಪಥವ ತೋರೊ ಬೇಗ ಮುಂದಿನ ಪಥವ ತೋರೊ ಬೇಗ ಪ. ಪೃಥಾ ಕುಮಾರನ ರಥಾಶ್ವ ನಡಸುತ ಕಥಾಕ್ರಮದಿ ಮನೋರಥಾವ ಸಲಿಸಿದ ಅ.ಪ. ರಮಾಕಮಲಭವ ಉಮಾರಮಣ ಶ್ರೀ- ಕ್ಷಮಾದಿ ನಾಯಕ ವಂದ್ಯ ನಮೋ ನಮೋಯೆಂದೊದರುವೆ ಅನುದಿನ ಕಮಲ ಪಾಲಿಸು 1 ನೃಪಾಧಮನು ಲಸದುಪಾಯದಿಂದಲಿ ಅಪಾಯ ಚಿಂತನೆ ಮಾಡುತಿರೆ ತಪೋನಿಧೀಶನದಪಾರ ಮಹಿಮನೆ ಕೃಪಾಕಟಾಕ್ಷದಿ ಸುಪಾದ ತೋರಿದ 2 ಅಡಾವಡಿಯಿಂದ ಧಡಾಧಡನೆ ಬಂದು ಒಡೆಯ ನಿನ್ನಡಿಗಳ ಮೇಲೆ ತನು ಕೆಡಹಿದ ಮ್ಯಾಲೆ ತಡವ್ಯಾತಕೊ ಪದ ಕೊಡೋ ಮೂಡಲಗಿರಿ ಒಡೆಯ ಶ್ರೀನಿಧೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ರಮಣಿ ಕೇಳೆಲೆ ಮೋಹನ ಶುಭಕಾಯನ ಅಮರ ವಂದಿತ ರವಿಶತಕೋಟಿ ತೇಜನ ವಿಮಲ ಚರಿತ್ರದಿ ಮೆರೆವ ಶ್ರೀ ಕೃಷ್ಣನಕಮಲವದನೆ ನೀ ತೋರೆ ಪ ಬಾಯೊಳಗಿಹಳ ಗಂಡನ ನಿಜ ತಮ್ಮನತಾಯ ಪಿತನ ಮಡದಿಯ ಧರಿಸಿದನಸ್ತ್ರೀಯಳ ಸುತನ ಕೈಯಲಿ ಶಾಪಪಡೆದನದಾಯಾದಿಯ ಮಗನಸಾಯಕವದು ತೀವ್ರದಿ ಬರುತಿರೆ ಕಂಡುಮಾಯಾಪತಿ ಭೂಮಿಯನೊತ್ತಿ ತನ್ನಯಬೀಯಗನ ತಲೆಗಾಯಿದಂಥರಾಯನ ಕರೆದು ತೋರೆ 1 ನಾಲಗೆ ಎರಡರವನ ಭುಂಜಿಸುವನಮೇಲೇರಿ ಬಹನ ತಂದೆ ಇಹ ಗಿರಿಯನುಲೀಲೆಯಿಂದಲಿ ಕಿತ್ತೆತ್ತಿದ ಧೀರನಕಾಳೆಗದಲಿ ಕೊಂದನಲೋಲಲೋಚನೆಯ ಮಾತೆಯ ಪುತ್ರನಣುಗನಮೇಲು ಶಕ್ತಿಗೆ ಉರವನಾಂತು ತನ್ನವರನುಪಾಲಿಸಿದಂಥ ದಾತನಹ ದೇವನಲೋಲೆ ನೀ ಕರೆದು ತೋರೆ 2 ಉರಿಯೊಳು ಜನಿಸಿದವನ ನಿಜ ತಂಗಿಯಸೆರಗ ಪಿಡಿದ ಖಳನಣ್ಣನ ತಂಗಿಯವರನ ತಲೆಯನು ಕತ್ತರಿಸಿದ ಧೀರನಗುರುವಿನೊಳುದಿಸಿದನಶರವ ತಪ್ಪಿಸಿ ತನ್ನ ದಾಸರ್ಗೆ ಅನುದಿನಕರೆದು ವರವನಿತ್ತು ಮನ್ನಿಸಿ ಸಲಹುವಉರಗಗಿರಿಯ ವೆಂಕಟಾದಿಕೇಶವನ ಗರತಿ ನೀ ಕರೆದು ತಾರೆ 3
--------------
ಕನಕದಾಸ
ರಮಾನುತ ಪಾದಪಲ್ಲವ ಶ್ರೀಕರ ಚರಣ ಸೇವಕರ ಸಂಗದೊಳಿರಿಸು ವಿಜಯರಾಯ ಪ ನಿಮ್ಹೊರತು ಪೊರೆವರನ್ಯರನು ನಾಕಾಣೆ ನಿಮ್ಮ ಚರಣವ ನಂಬಿದೆ ಕರುಣದಿ ಕಾಯೊ ಅ.ಪ ಪಂಡಿತ ಪಾಮರರನು ಉದ್ಧಾರ ಮಾಡೆ ಕರುಣದಿಂದ ಸಕಲ ವೇದಗಳ ಕ್ರೋಡೀಕೃತವಾದ ನಿರ್ಣಯ ಭಾಷ್ಯಗಳರ್ಥವ ಮಾಡಿದಿ ಪದಗಳ ಸಕಲರೂ ತಿಳಿವಂದದಿ 1 ನಿನ್ನವರಾದ ರಂಗ ಒಲಿದ ರಾಯರ ನೋಡು ನಿನ್ನ ಉಕ್ತಿಯ ನಂಬಿದ ವೆಂಕಟರಾಯರ ನೋಡು ನಿನ್ನವನೆಂದೆನ್ನನು ಅವರಂತೆ ನೋಡದೆ ಎನ್ನ ಕೈ ಸಡಿಲ ಬಿಡುವದೇನೋ 2 ಎಂದಿಗಾದರು ನಿನ್ನ ದಾಸರ ಕರುಣದಿಂದ ಪಾದದ್ವಂದ್ವ ಹೊಂದದೆ ಹೋಗುವೆನೆ ದಾಸರಪ್ರಿಯನೆ ತಂದೆ ವಿಜಯ ರಾಮಚಂದ್ರವಿಠಲರಾಯನ ಹೊಂದುವ ಮಾರ್ಗವ ಬಂದು ತೋರಿಸಬೇಕೊ 3
--------------
ವಿಜಯ ರಾಮಚಂದ್ರವಿಠಲ
ರಮೆಯರಸ ರಕ್ಷಿಸೋ ನಮಿತಜನರ ಕಲ್ಪದ್ರುಮ ಸುಮನೋಹರ ಪ ಅಮಿತ ಸುಗುಣ ಪೂರ್ಣ-ಶಮಲವರ್ಜಿತ ಹೃ- ತ್ಕಮಲ ದ್ಯುಮಣಿ ನಿಸ್ಸೀಮಮಹಿಮ ಸಂಪೂರ್ಣಕಾಮ ಹರಿ1 ಅಘ ಸಂ- ಕಷ್ಟಹರಿಸಿ ಸಂತುಷ್ಟಿಯನೀವ ನಿರ್ದುಷ್ಟಫಲಪ್ರದ 2 ಉರಗಾದ್ರಿವಾಸವಿಠಲ ದೇವ ಹರೇ ಕರೆ ನಿನ್ನ ಬಳಿ ಸಿರಿ ವೆಂಕಟೇಶನೆ ದೊರೆ-ಪೊರೆ ನಿನ್ನ್ಹೊರತು ನಾನರಿಯೆ 3
--------------
ಉರಗಾದ್ರಿವಾಸವಿಠಲದಾಸರು
ರಾಘವೇಂದ್ರ ರಾಯರಡಿಗೆ ಬಾಗಿ ನಮಿಸಿರೊ ನೀಗಿ ಭವದ ಬಂಧದಿಂದ ಮುಕ್ತರಾಗಿರೊ ಪ ಶಂಕೆಯಿಲ್ಲದೆ ವರಗಳ ಕೊಟ್ಟು ಚಿಂತೆ ಹರಿಸುವರ ಕಂತುಪಿತನ ಭಕ್ತರಿಗೆ ನಿರಂತರ ಸಂತಸ ನೀಡುವರ ಪಂಕಜನಾಭನ ಕಿಂಕರರ ಭಯ ಚಿಂತೆಯ ನೀಗುವರ ಶಂಖು ಕರ್ನರಿವರೆನ್ನುತ ಅಭಯದ ಕಂಕಣ ಕಟ್ಟಿಹರ 1 ಹಾಟಕಶ್ಯಪುತ್ರನು ವಿನಯದಿ ಪ್ರಾರ್ಥಿಸಿ ಪೂಜಿಸಿದ ಮಾಟಮುಖದ ದೇವನ ಪಾದಾಂಬುಜ ಧ್ಯಾನಿಸಿ ಸೇವಿಸಿದ ಕೋಟಲೆ ಭವದೊಳು ತಾಪವ ಪಡುವರ ಆಪದ ಪರಿಹರಿಸಿ ಭ- ವಾಟವಿದಾಟಿಸಿ ಪೊರೆದ ಪ್ರಹ್ಲಾದರ ಉಲ್ಲಾಸದಿ ಭಜಿಸಿರಿ2 ವ್ಯಾಸರಾಯರೆಂದು ಜಗದಿ ಪ್ರಖ್ಯಾತಿ ಪಡೆದವರ ದೇಶ ದೇಶದ ಭಕುತರ ಉಲ್ಲಾಸ ಕೊಡುವರ ಶ್ರೀ ಸುಧೀಂದ್ರಾರ್ಯರ ಪುತ್ರರೆನಿಸಿಕೊಂಬರ ಕ್ಲೇಶಗಳನೆ ಕಳೆವರೆಂಬ ಕೀರ್ತಿಪಡೆದರ3 ಕಂಗೊಳಿಪ ಕೋರೆಯಿಂದ ಬಂದ ಭದ್ರೆಯ ತೀರದಿ ಚಂದದಿಂದ ಮೆರೆವ ರಾಘ- ವೇಂದ್ರ ರಾಯರ ಕೊಂಡಾಡಿ ಪಾಡಿರೊ ಮನಕೆ ಸಂಭ್ರಮ ನೀಡುವರು ಪೊಂದಿದ ಪಾಪಗಳೆಲ್ಲವ ನೀಗಿಸಿ ಚಂದದಿ ಸಲಹುವರು 4 ಕರುಣದಿಂದ ಭಕ್ತರನೆಲ್ಲ ಸಲಹುತಿರ್ಪರ ಕಮಲನಾಭ ವಿಠ್ಠಲನಂಘ್ರಿ ಭಜನೆ ಮಾಳ್ಪರ ಕನಕಮಯದ ಮಂಟಪದಲಿ ಮರೆಯುತಿರ್ಪರ ಕರೆದು ಪ್ರಾರ್ಥಿಸುವವರ ಮನಕೆಹರುಷ ತೋರ್ಪರ 5
--------------
ನಿಡಗುರುಕಿ ಜೀವೂಬಾಯಿ
ರಾಜಕುಲ ವನರಾಶಿ ರಾಜರಾಜೇಶ್ವರಾ | ರಾಜೀವ ನಯನ ಯದುರಾಜ ಎಲೊ ಭಾಪುರೆ ಪ ಗರಳ ಪೇರ್ಮೊಲೆಯಿತ್ತ ಅಸುರಿಯಳ ಸಂಹರಿಸಿ | ಮರಳಿ ಅವಳಿಗೆ ಉತ್ತಮ ಗತಿಯನಿತ್ತೆ | ದುರಳ ಶಕಟಾಸುರನ ಚರಣ ದುಂಗುಟದಲ್ಲಿ | ತರಳಾಟದಿಂದ ಮರ್ದಿಸಿದೆ ಎಲೆ ಭಾಪುರೆ 1 ವ್ರಜ | ಪುರವ ಪಾಲಿಸಿದೆ ಕಾಳಿಂಗನೈದು | ಸಿರದಲ್ಲಿ ತುಳಿದು ರಮಣ ದ್ವೀಪಕೆ ಕಳುಹಿ | ಪರಿಪರಿಯ ಖಳರ ಮರ್ದಿಸಿದೆ ಎಲೊ ಭಾಪುರೆ 2 ಕರೆಯ ಬಂದಾ ಕ್ರೂರ ಭಕ್ತನಿಗೆ ಯಮುನೆಯಲಿ | ಕರುಣದಿಂದಲಿ ನಿಜರೂಪ ತೋರಿ | ಮುರಿದು ಧರಿಗೆ ವರಿಸಿದೆ ಕಂಸನ ಎಲೆ ಭಾಪುರೆ 3 ವನಧಿಯೊಳು ಪುರ ಬಿಗಿದು ಕಾಲಯವನನ ಸದೆದು | ಅನಿಲ ಸುತನಿಂದ ಮಾಗಧನ ಕೊಲ್ಲಿಸಿ | ವನಿತೆಯರ ಸೆರೆ ಬಿಡಿಸಿ ಸೂತತನವನೆ ವೊಹಿಸಿ | ಫಲ್ಗುಣಗೆ ವಿಶ್ವರೂಪವ ತೋರಿದೆ ಎಲೊ ಭಾಪುರೆ 4 ಗುರು ಭೀಷ್ಮ ಶಲ್ಯ ಶಕುನಿ ಸುಬಲ ಭಗದತ್ತ | ತರಣಿಸುತ ದುಶ್ಶಾಸ ಕೌರವೇಶಾ | ಎರಡು ಬಲ ವ್ಯಾಜ್ಯದಲಿ ಭೂಭಾರನಿಳುಹಿ ಸಾ | ವಿರ ತೋಳ ಖಳನ ಭಂಗಿಸಿದೆ ಎಲೊ ಭಾಪುರೆ5 ದ್ವಾರಕಾಪುರದಲ್ಲಿ ನಾರದಗೆ ಸೋಜಿಗವ | ತೋರಿದೆ ಒಬ್ಬೊಬ್ಬ ನಾರಿಯಲಿ | ನಾರಿಯರ ಕೂಡ ಬಲು ಕ್ರೀಡೆಗಳನಾಡಿ ಅ | ವರ ಸಂತಾನವನು ಪಡದೆ ಎಲೊ ಭಾಪುರೆ 6 ವರ ಚಂದ್ರಹಾಸ ಮಿಗಿಲಾದ ಭೂಪಾಲಕರ | ಕರೆಸಿ ಪಾಂಡುವರ ಯಾಗವನೆ ಮುಗಿಸಿ | ಹರುಷದಲಿ ಯದುಕುಲವಾಸ ಮಾಡಿದೆ | ಪರಮ ಪುರುಷ ವಿಜಯವಿಠ್ಠಲನೆ ಎಲೆ ಭಾಪುರೆ 7
--------------
ವಿಜಯದಾಸ
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ