ಒಟ್ಟು 4285 ಕಡೆಗಳಲ್ಲಿ , 121 ದಾಸರು , 3030 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಗನೆ ಬಾರೊ ಶ್ರೀ ಹರಿಯನೆ ತೊರೋ ಶ್ರೀ ಗುರುವೇ ದಯದಿ ಪ. ಬೇಗನೆ ಬಾರೊ ಯೊಗಿಗಳೊಡೆಯ ನಾಗಶಯನ ಪ್ರೀತ ತ್ವರಿತದಿ ಅ.ಪ. ಭಕ್ತರೆಲ್ಲರು ನಿಮ್ಮ ದಾರಿಯನೆ ನೋಡುತಾ- ಸಕ್ತಿಯಿಂದಿರುತಿಹರೊ ಮೋದ ಗುರುವೆ ನಿಮ್ಮ ಶಕ್ತಿಗೆ ಎದುರ್ಯಾರೊ ಧರೆಯೊಳು 1 ಕಾಣದೆ ಕಂಗಳು ಕಾತರಗೊಳ್ಳುತ ತ್ರಾಣಗೆಡುತಲಿಹವೊ ಪ್ರಾಣವ ರಕ್ಷಿಪ ಪ್ರಾಣಪತಿಯ ಪ್ರಿಯ ಕಾಣೆ ನಾನನ್ಯರನಾ ಜಗದೊಳು 2 ಪರಮಪ್ರಿಯರು ಎಂದು ಪರಮ ಬಿರುದು ಪೊಂದಿ ಪರಮಾತ್ಮನನು ಕಂಡು ಪರಮಾತ್ಮ ತತ್ವ ಪರಮಯೊಗ್ಯರಿಗರುಹಿ ದುರಿತ ತ್ವರಿತದಿ 3 ಕಮಲಾಕ್ಷನನು ಹೃತ್ಕಮಲದಲಿ ಕಾಂಬ ಕಮಲಾಪ್ತ ಅತಿ ಪ್ರೀತ ಕಮಲಸಂಭವಪಿತ ಕಮಲಾಕ್ಷ ಹರಿಯ ಹೃ ತ್ಕಮಲದಲಿ ತೋರೋ ಗುರುವರ 4 ಗೋಪಾಲಕೃಷ್ಣವಿಠ್ಠಲನ ಸೌಂದರ್ಯದ ರೂಪವೆನಗೆ ತೋರೊ ತಾಪವ ಹರಿಸುತ ಕಾಪಾಡಬೇಕೆಂದು ನಾ ಪ್ರಾರ್ಥಿಸುವೆ ಗುರುವೆ ತ್ವರಿತದಿ 5
--------------
ಅಂಬಾಬಾಯಿ
ಬೇಡಲೇತಕೆ ಪರರ ದೇಹಿಯೆಂದು ಪ ನೀಡುವಾ ಧೊರೆ ಎನಗೆ ನೀನಿರಲು ಸರ್ವದಾ ಅ.ಪ. ಗ್ರಾಸವನು ಬೇಡೆ ದೂರ್ವಾಸ ಮುನಿಗಂದನ್ನ ಅನಾ ಯಾಸದಿಂ ತತ್ಕಾಲದಲಿ ಕಲ್ಪಿಸಿ ಆ ಸಂಯಮಿಗೆ ಉಣಿಸಿ ದಣಿಸಿದ ಮಹಾ ದಾತಾ ದಾಶರಥೆ ನಿನ್ನ ಬಿಟ್ಟನ್ಯ ದೇವತೆಗಳನು 1 ಖಳ ದುಶ್ಯಾಸನನು ದ್ರೌಪದಿಯ ಸಭೆಯೊಳು ದು ಕೂಲವನು ಸೆಳೆಯೆ ದ್ವಾರಕ ಮಂದಿರಾ ಶ್ರೀ ಲೋಲ ಶ್ರೀ ಕೃಷ್ಣ ಕರುಣಿಸು ಕರುಣಿಸೆನೆ ಪಾಂ ಚಾಲಿ ಮೊರೆ ಕೇಳಿ ದಿವ್ಯಾಂಬರ ನಿಚಯವಿತ್ತೆ 2 ಮಡದಿ ಕಳುಹಲು ಬಂದ ಬ್ರಾಹ್ಮಣನ ಪೀಡಿಸುವ ಬಡತನವ ಕಳೆದೆ ಒಪ್ಪಿಡಿಯವಲಿಗೆ ಪೊಡವಿಯನ್ನಾಳಿಸಿದೆ ಕ್ರಿಮಿಗೊಲಿದು ಕಾರುಣ್ಯದಲ್ಲಿ ಮೃಡ ಬಿಡೌಜರೀಪ್ಸಿತ ಕೊಡುವೆ 3 ತಾಪಸೋತ್ತಮ ಮೃಕಂಡಾತೃಜಗೆ ಕಲ್ಪಾಯು ನೀ ಪೂರ್ತಿ ಮಾಡಿ ಅಲ್ಪಾಯು ಕಳೆದು ಆ ಪರ್ವತೇಶ್ವರನ ಪಟ್ಟಣವ ಸಾರ್ದು ಸಾಂ ದೀಪ ತನಯನ ತಂದ ಸರ್ವಾಂತರ್ಯಾಮಿ 4 ವಿಶ್ವ ಜೀವರಿಗನ್ನ ಕಲ್ಪಕನೆ ನೀನಿರಲು ಜ್ಞಾನ ದ್ರವ್ಯ ಅಲ್ಪ ಮಾನವರಿಗಾಲ್ಪರಿರೇನಹುದು ಅಹಿ ತಲ್ಪ ಜಗನ್ನಾಥ ವಿಠ್ಠಲ ಕಲ್ಪತರುವಿರಲು 5
--------------
ಜಗನ್ನಾಥದಾಸರು
ಬೇಡವೋ ಬ್ರಾಹ್ಮಣ ದ್ರೋಹ ಬೇಡವೋ ಪ ಮಾಡಬೇಡವೋ ನಿನಗೆ | ಕೇಡು ತಪ್ಪದು ಕೊನೆಗೆನಾಡೊಳಗಪಕೀರ್ತಿ | ಗೀಡಾಗಿ ನೀ ಕೆಡ ಅ.ಪ. ಭಾರ ನೀನು - ಅಂಥಅತ್ಯಂತವಲ್ಲವಿದೇನು - ನಿನ್ನ ||ಚಿತ್ತ ದೃಢ ಮಾಡು ಉತ್ತಮ ವಿಪ್ರರವೃತ್ತಿಯ ಸೆಳದು ಉನ್ಮತ್ತನಾಗಿ ಕೆಡ 1 ಸೂಸುವ ನದಿಯೊಳು ಬಿದ್ದು - ಇನ್ನುಈಸಲಾರದೆ ಮುಳುಗೆದ್ದು - ಅಂಜಿ ||ಈಸು ಬುರುಡೆ ಬಿಟ್ಟು ಬೀಸೋ ಕಲ್ಲನೆ ಕಟ್ಟಿಈಸುವ ತೆರನಂತೆ ಭೂಸುರ ದ್ರವ್ಯವು 2 ನೃಗರಾಯನೆಂಬ ಭೂಪತಿಯು - ವಿಪ್ರ-ರಿಗೆ ಗೋದಾನವನಿತ್ತ ಬಗೆಯ ಕೇಳಿ ||ಅಗಲಿ ತಮ್ಮೊಳು ತಾವೆ ಜಗಳ ಪುಟ್ಟಿ ಆ ನೃ-ಪಗೆ ತೊಣ್ಣೆಯಾಗೆಂದ್ಹಗರಣವನೆ ಕೇಳು 3 ರಾವಣನೆಂಬುವ ದುಷ್ಟ - ಅವ-ದೇವತೆಗಳ ಸೆರೆಯಿಟ್ಟ ||ದೇವನರಸಿ ಸೀತಾದೇವಿಯ ನೆಪದಿಂದರಾವಣನ ಕೊಂದು ದೇವತೆಗಳ ಕಾಯ್ದನೊ 4 ಇನ್ನೆಷ್ಟು ಹೇಳಲೊ ಸಾಕ್ಷಿ - ಬ್ರಾಹ್ಮ -ರನ್ನವ ತೆಗೆದರೆ ಶಿಕ್ಷಿ ಮೋ-ಹನ್ನ ವಿಠ್ಠಲರಾಯ ತನ್ನಯ ಭಜಕರಬೆನ್ನ ಬಿಡದಲೆ ಕಾಯ್ವ ಇನ್ನಾದರು ಕೆಡ 5
--------------
ಮೋಹನದಾಸರು
ಬೇಡವೋರಂಗ ಹೆಂಗಳ ತಳ್ಳಿ ಹೋಗ ಬೇಡವೋನಾ ಬೇಡಿ ಕೊಂಬೆನುದಮ್ಯಯ್ಯ ಪ ಊರೊಳಗೆಲ್ಲ ನಿನ್ನಯ ದೂರೇ ರಂಗ ಬಾರೋ ನಿನ್ನನು ಕಾಣದಿರಲಾರೆ ಯಾರಿಗೆಂಬೆನು ಗೋಕುಲದೊಳಗಿರ್ದ ನಾರಿಯರೆಲ್ಲರು ಕಿವಿಗೆಡಸಿದರೆನ್ನ 1 ಚಿಕ್ಕವನಾಗಿ ನೀನಿರುತಿರೆ ಹೆಣ್ಣು ಮಕ್ಕಳ ಮೇಲÉ ಕಣ್ಣಿಡುವರೆ ಪೊಕ್ಕು ಪಾಲ್‍ಬೆಣ್ಣೆಯ ಕದ್ದರೆ ಗೋಪರ ಮಕ್ಕಳು ಕಂಡರೆ ಪ್ರಾಣವ ತೆಗೆವರು 2 ಎಲ್ಲ ಜೀವರಿಗೂ ನೀಹಿತನಾಗಿ ಪ್ರೀತಿಯಲ್ಲಿರು ಭಾರಿ ಪುರುಷನಾಗಿ ಹಲ್ಲ ಕಡಿದಿಹರಂತೆ ಗೋಪರು ಮಾನಕೊಳ್ಳಲು ಯತ್ನವ ಮಾಡಿ ಕೊಂಡಿಹರಂತೆ 3 ಕಂಡರೆ ಹಿಡಿದು ಕಟ್ಟುವರಾಗಿ ಪುಂಡ ನಿಲ್ಲಿಸ ಬೇಕೆನುತ್ತೆಲ್ಲಿ ಗೋಪರು ಕಂಡಿ ಕಣೆವೆ ಕಟ್ಟಿಕೊಂಡು ಸಾಧಿಪರಂತೆ 4 ಪಾಲು ಬೆಣ್ಣೆಯ ಕದ್ದು ಮೆಲುವರೆ ಕೃಷ್ಣ ಬಾಲೆಯರನು ಗೋಳು ಹೊಯ್ವರೆ ನಿ ನ್ನಾಲಯದೊಳಗೇನು ಕಡಿಮೆಯಾಗಿದೆ ಲಕ್ಷ್ಮೀಲೋಲನ ದಯದಿಂದ ಸಕಲ ಸಂಪತ್ತಿದೆ 5
--------------
ಕವಿ ಪರಮದೇವದಾಸರು
ಬೇಡಿ ಕಡದೀತು ಎನ್ನ ಬೇಡಿ ಕಡದೀತು ಪ ಮೂಢ ಜನರ ಸಂಗ ತ್ಯಜಿಸಿ ಗೂಢವಾದ ಸಾಧುವೆನಿಸಿ ಅ.ಪ. ಘೋರ ಸಂಸಾರ ಬೇಡಿ ಆರು ಅಹಿತರೆನ್ನ ಕಾಡಿ ಗಾರು ಮಾಡಿ ಜಡಿಯ ಕೂಡಿ ಪಾರ ಮಾಡಿದೆನ್ನ ನೋಡಿ1 ಮೋಹಪಾಶದೊಂದು ಕಟ್ಟು ದೇಹವೆಲ್ಲ ತೊಡರಿ ಬಿಟ್ಟು ಗೇಹ ತೊಲಗದಂದ ಬಿಟ್ಟ ನೇಹ ತವಿಸೆ ಕರುಣವಿಟ್ಟು 2 ಭವ ಮೋಹ ಸುಡಲಿ ಉರಿವ ಕ್ಲೇಶಗಳು ಸಿಡೀಲಿ ಕೊರೆವ ಸಂಸ್ಕøತಿ ಜಾಲಕ ತೇಲಿ ನರಸಿಂಹವಿಠಲಾ ಕೊಡಲಿ 3
--------------
ನರಸಿಂಹವಿಠಲರು
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬೇಡಿಕೊಂಬೆನು ನಿನ್ನ ಮನಬಿಚ್ಚಿ ತೋರಿಸುವೆ ಪ ಪಶುವಾದ ಎನ್ನ ಮನಸು ಪಿಸುಮಾತು ಹೇಳುತಿಹುದು ತುಸುಗುಣವಿಲ್ಲ ನಿನಗಂತೆ ಬಕುತಿಯೇಕಯ್ಯ ನಿನಗೆ ಅ.ಪ ಬದುಕು ತಪ್ಪಿಸಿ ನಿಲ್ಲು ನೀನಾಗಿ ಎನ್ನುತಿದೆ ಕದಿಮೋಸ ಮನವನು ನಂಬಿ ಬಾಳುವೆನೆಂತು ಬುದ್ಧಿ ಕಲಿಸಯ್ಯ ಮನಕೆ ಬೆಳಕು ತೋರಿಸು ನಿನ್ನ ಬದ್ಧಗೆಳೆಯನಾಗಿಸು ಅದನು ಬದುಕಿ ಬಾಳುವೆನಯ್ಯ 1 ಹಿಡಿಯಾಸೆ ಎನಗುಂಟು ಗಂಟುಕಟ್ಟಿ ನಿನ್ನೊಡನೆ ನಡೆವೆ ದಿಟ್ಟತನದಲಿ ಕಮಲಾಕ್ಷ ಲಾಲಿಸಯ್ಯ ಬಿಡಲಾರೆ ನಿನ್ನನೀಗ ಬೆಳಕು ಕಂಡಿತು ಎನಗೆ ಒಡೆಯ ಶೆಲ್ವರಾಯ ನನಸು ಕನಸಾಗಿ ಮಾಡದಿರು 2
--------------
ಸಂಪತ್ತಯ್ಯಂಗಾರ್
ಬೇಡಿದವರಿಗೆ ದೊರೆವುದೇನೆಲೊ ಸಜ್ಜನರ ಸಂಗ ಬೇಡಿದವರಿಗೆ ದೊರೆವುದೇನೆಲೊ ಪ ಬೇಡಿದವರಿಗೆ ದೊರೆವುದೇನೆಲೊ ಗಾಢಮಹಿಮನ ಭಕ್ತರಾವಾಸ ಸುಕೃತ ಫಲವು ಕೂಡಿಬಂದ ಕೋವಿದರಿಗಲ್ಲದೆ ಅ.ಪ ದೃಢಕರಡಿಯಿಟ್ಟ ಭುವನವೆ ಕ್ಷೇತ್ರ ದೃಢಕ ಜನರಡಿಯೇ ಸುಯಾತ್ರಾ ಸಿದ್ಧ್ದಾಂತ ಮಾತಿದು ದೃಢಕರಾಡಿದ ಮಾತೆ ನಿಜಮಂತ್ರ ಇದೆ ಮೂಲಶಾಸ್ತ್ರ ದೃಢಕರು ನಿಂತ ಸ್ಥಳವೆ ಬದರಿ ದೃಢಕರು ಕೂತಸ್ಥಾನ ಮಧುರೆ ದೃಢಕರೊಟನಾಟ ಲಭ್ಯವೆಂದರೆ ಪಡೆದ ಪುಣ್ಯ ಮಹಭಾಗ್ಯಗಲ್ಲದೆ 1 ಭಕ್ತ ಜನಮಿಂದದೆ ತೀರ್ಥವು ನಿಖಿಲರರಿವುದೆ ಭಕ್ತ ಜನರುಂಡಸ್ಥಳ ಸಿರಿಯಾವಾಸವು ದೊರೆಯದಾರಿಗೆ ಭಕ್ತ ದರ್ಶನ ಪರಮ ಮಂಗಲವೋ ಶುಭಕೆ ಶುಭಕರವು ಭಕ್ತಜನರಿಹ್ಯ ಸಭೆಯೆ ಹರಿಸಭೆ ಭಕ್ತರೊಪ್ಪಿಗೆ ಹರಿಯ ಒಪ್ಪಿಗೆ ಮೃತ್ಯುದೂರ ಮಾಳ್ಪ ಸರ್ವೋತ್ತಮನ ಭಕ್ತರ ಪ್ರೇಮದೊಲುಮೆ 2 ದಾಸರ್ವಾಸವೆ ಕಾಶಿಕೇಂದ್ರವು ಸತ್ಯ ಸತ್ಯವಿದು ದಾಸರಿರುವುದೆ ಪರಮ ವೈಕುಂಠವು ಮತ್ರ್ಯರರಿವುದೆ ದಾಸಗಿತ್ತದ್ದು ಹರಿಗೆ ಅರ್ಪಣವು ಪರಮ ಸುಖಕರವು ದಾಸರೊರ್ಣವು ತೀರದಾರಿಗೆ ಶ್ರೀಶ ಶ್ರೀರಾಮನಡಿಯಕಮಲ ದಾಸರಿಜನರಡಿ ಪಿಡಿದು ಸುಸಹ ವಾಸದಿರುವುದೆ ಮುಕ್ತಿಸಂಪದ3
--------------
ರಾಮದಾಸರು
ಬೇಡುವೆ ಇದನಾ ಜೀಯ್ಯಾ ವೆಂಕಟಾರಾಯ ಮಾಡು ಕರುಣವ ಫಲದಾಯ ಪ ಯತಿರತುನತಿ ದಶಮತಿ ಮತದಲಿ ಸ ನ್ನತಿ ಹಿತ ಭಕುತಿಲಿ ಪ್ರತಿದಿನ ಸ ಪಥ ಚತುರತೆ ತತುವೇಷ ತತಿಸಮ್ಮತ ಹಿತವಾಗಿಪ್ಪ ಸುಖಮತಿಯನೀಯೋ 1 ಬಲಬಲ ಬಲರಿಪು ವೊಲಿದೊಲಿದು ಗಿರಿಯಲಿ ಬಲುವೊಲಿಮೆಲಿ ವೊಲಿಸಬಾರದೇ ಕಳವಳಿಸಲು ಬಲಗುಂದಿ ನಲವು ನಿ ಶ್ಚಲವಾಗಿ ಬಲವಾಗಿ ಗಿರಿಯೆಳದೆಲೊ ಸಲಹಿದಿ 2 ತ್ರಿಜಗವೀರ ಧ್ವಜ ಸುಜನರ ನಿಜಪದ ರಜರಜವಾದರು ಭಜಿಸುವ ಸರ್ವದ ವ್ರಜಗಳ ಸಂಗ ದ್ವಿಜನರವಿ ಈ ಮತದಿ ಸಿರಿ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ಬೇಡುವೆನೊಂದು ಬೇಡತಕ್ಕುದು ಎಂದು ಬೇಡ ವರಗಳೆನಗೆ ನೀಡು ಅದನೊಂದ ಪ ಬೇಡ ಸುಖವು ಕೃಷ್ಣ ಬೇಡ ಫಲವಿಫಲ ಬೇಡ ಮಾನಾಪಮಾನ ಬೇಡ ಜಯಾಪಜಯ ಅ.ಪ ನಿದ್ರೆಸುಖವು ಬೇಡ ಭದ್ರಭೋಜನ ಬೇಡ ತಿದ್ದಿದ ವಾಸ್ತುವುಬೇಡ ಮಧುರವು ಬೇಡ ಸದನ ವಿತ್ತವು ಬೇಡ ಹೃದಯದಿ ರಾಮನಾಮ ಪರಿಹರಿಸಲು ಬೇಡ 1 ನರಕ ಬಾಧೆಯ ಪರಿಹರಿಸಲು ಬೇಡ ದುರಿತ ಸಂತತಿಗಳ ತೊರೆಯಿಸ ಬೇಡ ಸುರಲೋಕ ಸಾಮ್ರಾಜ್ಯ ವರವನೀಯಲು ಬೇಡ ನಿರುತ ನಿನ್ನಯ ಪದ್ಮ | ಚರಣವ ತೋರೆಂದು2 ಮಾವಿನಕೆರೆರಂಗ ಶ್ರೀವನಿತಾ ಸಂಗ ಭಾವಜಪಿತರಂಗ ಗರುಡ ತುರಂಗ ಭಾವನೆಗೈದು ಯೆನ್ನ ಸರ್ವಜನ್ಮದೆ ನಿನ್ನ ದಿವ್ಯನಾಮವ ಭಜನೆಗೈವ ಬುದ್ಧಿಯು ಮಾತ್ರ 3 ನೀ ಮರೆಯದಿರಯ್ಯ ನಾಮರೆಯುವನಯ್ಯ ಕಾಮಿತವೊಂದಿದ ನೀಡೊ ಮುಕುಂದ ಸೋಮಧರ ವಂದಿತ ರಾಮದಾಸಾರ್ಚಿತ ಭೀಮವಿಕ್ರಮರೂಪ ಅಮಿತಕಲಾಪಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೋಧ ಬಂದನು ಮಾ | ಪ್ರಪಂಚ ಗೆಲುವವ ನಾರೆಲಮಾ ನಮ್ಮ | ಪತಿ - ಭಕ್ತರು ಕಾಣಿಲಮಾ ಪ ಎನಗಾರು ಇದಿರಿಲ್ಲ ಸ್ವರಾಜ್ಯದೊಳಗಿಂದು | ನೀನಾರೋ ಪರದೇಶಿ ಹೇಳಲಮಾ | ನಾನೆಂಬ ಹಮ್ಮಿನ ಬಿರುದನ ಬಿಡಿಸುವ | ನಾನೆಂಬ ಹಮ್ಮಿನ ಬಿರುದವ ಬಿಡುಸುವ | ಜ್ಞಾನ ಶಸ್ತ್ರಧಾರಿ ಬೋದನುಮಾ 1 ಸರಸಿದ ಭವರುದ್ರ ಇಂದ್ರರ ಬಗೆಯದ | ನೆರೆ ಕಾಮ ಗೆಲುವವ ರಾರೆಲಮಾ | ಭಾಗವತ ಶುಕ ಹನುಮಂತನು ಮೆರೆವ ಭೀಷ್ಟ ದೇವ ನಲ್ಲೇನುಮಾ 2 ವೈಕುಂಠದೊಳು ಸನಕಾದಿಕರೊಳು ಹೊಕ್ಕ | ಆ ಕೋಪ ಕಾನುವ ನಾರೆಲಮಾ | ಸಾಕಿ ಬೆಳೆಸಿದ ಶಾಂತಿಯ ನೆಲೆಯಿಂದ | ಪ್ರಖ್ಯಾತ ಕದರಿಯು ಕೇಳಲಮಾ 3 ಧರಿಯಿತ್ತ ರಾಮಗ ಸ್ಥಳ ವಿಲ್ಲೆಂದರು ಬ್ರಾ | ಹ್ಮರು ಲೋಭಗೆದ್ದ ವನಾರೆಲಮಾ | ಮರುಳ ಕೇಳು ಧನ ತೃಣ ಸಮ ಬಗೆದರು | ಕರ್ಣ ರಲ್ಲೇನು ಮಾ 4 ಬೆಟ್ಟದಿ ಉಡಿಹಾಕಿ ಕೊಳ್ಳಲು ಹೋದನ | ಶಿಷ್ಯ ಮೋಹನ ಗೆಲುವ ನಾರೆಲ ಮಾ | ಮುಟ್ಟಿ ಬೇಡಲುಳಿವ ಮಹನ ತಂದಿಟ್ಟನು | ಸೃಷ್ಟಿ ಮನುಜ ಚಿಲ್ಹಾಳಲ್ಲೇನು ಮಾ 5 ಭ್ರಗು ಮುನಿದಕ್ಷನು ಕಾರ್ತೃ-ವೀರ್ಯಾದಿಯ | ಬಗೆಯದ್ದ ಮದ-ವಳಿ ದಾರೆಲ ಮಾ | ಜಗ ಹೊಡೆತನವಿದ್ದು ಬಾಗಿ ನಡೆದ ನಮ್ಮ | ಸುಗುಣ ಜನಕರಾಯ ನಲ್ಲೇನು ಮಾ 6 ಹುಚ್ಚಾದ ವಶಿಷ್ಟನೊಳು ವಿಶ್ವಾಮಿತ್ರನು | ಮತ್ಸರಿಲ್ಲದವ ನಾರೆಲ ಮಾ | ಎಚ್ಚರಿಸಿದ ಸುಯೋಧನಗ ವಿಜಯತನ | ಸಚ್ಚರಿತ ಧರ್ಮ ನಿಲ್ಲೇನು ಮಾ 7 ಬಗೆ ಬಗೆ ವಿಷಯ ದುಪಾಯಗಳೆನಗುಂಟು | ನಿಗದಿಯ ನಡೆನುಡಿ ಕೇಳೆಲ ಮಾ | ಭಗವದ್ಭಾವ ಸರ್ವ ಭೂತದಿ ನೋಡಲು | ವಿಗುಣವೆ ಸದ್ಗುಣ ಭಾಸುದ ಮಾ 8 ನಿನ್ನ ಬಲವ ಕಂಡೆ ಶರಣವ ಹೊಕ್ಕೆನು | ಬೋಧ ಕೇಳೆಲ ಮಾ | ಸನ್ನುತ ಮಹಿಪತಿ ಸುತ ಪ್ರಭು ನೆಲೆದೋರಿ ಮನ್ನಿಸಿ ಹೊರೆವನು ಬಾರೆಲಮಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬ್ಯಾಡವೊ ಕುವಾದಿ ಬ್ಯಾಡವೊ ಪ ಬ್ಯಾಡವೊ ಕೇಳು ಕುವಾದಿ ನೀ ನಾಡುವದುಚಿತವಲ್ಲ ಧಾದಿ | ಆಹಾ | ಮೂಢ ನಿನಿಗದಾವ ಖೋಡಿ ಬೋಧಿಸಿದನೊ ನಾಡಿಗೊಡಿಯ ರಂಗಗೀಡು ನೇನೆಂಬದುಅ.ಪ ಎಲ್ಲ ಜೀವರು ದೇವವೊಂದೆ ಭೇದ ವಿಲ್ಲೆಂದಾಡುವುದು ಧಂದೆ ಯಮ ಕೊಲ್ಲದೆ ಬಿಡ ನಿನ್ನ ಮುಂದೆ ನಿನ್ನ ಹಲ್ಲು ಮುರಿವನೊಂದೊಂದೆ || ಆಹಾ || ಉಳ್ಳಿಗಡ್ಡಿಯ ಉದ್ದಿ ಬೆಳ್ಳಗೆ ತೊಳೆದರೆ ಅಲ್ಲಕ್ಕೆ ಸರಿಯೇನೊ ಬಲ್ಲವರೊಪ್ಪಾರು 1 ಇದ್ದು ನೀ ಇಲ್ಲೆಂತೆಂಬಿ ಕಾಲಿ ಲೊದ್ದರೆ ಬಲು ನೊಂದು ಕೊಂಬಿ ಇ ಲ್ಲಿದ್ದವರೆಲ್ಲ ಬ್ರಹ್ಮ ನಾನೆಂಬಿ ಆ ಪರ ಬುದ್ಧಿಯಿಂದ ಶುದ್ಧ ಎಂತೆಂಬಿ || ಆಹಾ || ಬಿದ್ದುಹೋಯಿತು ನಿನ್ನ ಸಿದ್ದಾಂತವೆಲ್ಲವು ಸದ್ದು ಎನ್ನ ಕೂಡ ಗೆದ್ದು ಹೋಗಲಾರಿ ಬ್ಯಾಡವೊ 2 ಒಬ್ಬ ಬ್ರಹ್ಮ ಎಲ್ಲಾ ಮಾಯವೊ ಇ ನ್ನೊಬ್ಬನೆ ಎಲ್ಲಿಹ ಸುಖವೊ ಕುಹಕ ಶಾಸ್ತ್ರವೆಲ್ಲ ಮೃಷವೋ ಉಬ್ಬಿ ಆಡುವುದು ನಿರಯವು || ಆಹಾ || ಈ ಬಗೆಯಾಯಿತು ನಿನಗೊಬ್ಬಗೆ ಈ ಮಾತು ಬ್ಯಾಡವೊ 3 ಒಂದೆ ಆದರೆ ನಿನಗೆಲ್ಲ ನಿನ ತಂದೆಯಿಂದ ನೀ ಪುಟ್ಟಿದ್ದೆಲ್ಲ ನಿನ್ನ ತಂದೆ ನೀನು ಒಂದೆ ಎಲ್ಲಿ ಇನ್ನು ಛಂದಾಗಿ ನೀ ತಿಳಿಯೊ ಸೊಲ್ಲ || ಆಹಾ || ಸತಿ ನಿನಗೇನಾದಳೊ ಮನುಜ ಮಂದ ಮತಿಯೆ ತಾಯಿಗಂಡ ನೀನಾದೆಲ್ಲೋ 4 ಅನ್ನಕ್ಕೆ ಪರಬ್ರಹ್ಮನೆಂಬಿ ಈಗ ಅನ್ನ ಚಲ್ಲಲು ದೋಷವೆಂಬಿ ನಿತ್ಯ ಚನ್ನಾಗಿ ಪರಿಪೂರ್ತಿಗೊಂಬಿ ಈ ಅನ್ನ ನಾನು ವೊಂದೆ ಎಂಬೀ || ಆಹಾ || ನಿನ್ನ ದೇಹಕ್ಕೆ ರೋಗವು ಬಂದರೆ ನೀನು ಅನ್ನವ ಬಿಟ್ಟಿನ್ನು ಚನ್ನಾಗಿ ಮಲುಗುವಿ 5 ಭೇದವಿಲ್ಲೆಂತೆಂದರೆ ನೀನು ಮಾದಿಗರೆಲ್ಲ ಒಂದೇನೊ ಸರಿ ಹೋದವರೆಂಜಲ ತಿನ್ನೋ ಕಹಿ ಸ್ವಾದವು ನಿನಗಿಲ್ಲವಿನ್ನು ||ಆಹಾ|| ಓದನಾದರು ವೊಂದೆ ಮೇದ್ಯವಾದರು ವಂದೇ ಭೇದವಿಲ್ಲದೆ ತಿಂದು ಹೋದಿಯೋ ನರಕಕ್ಕೆ 6 ಎಲ್ಲವೂ ಬ್ರಹ್ಮಸ್ವರೂಪಾ ಬ್ಯಾರೆ ಇಲ್ಲೆಂದು ನಿನಗೆ ರೂಪಾ ಭೇದವಿಲ್ಲೆಂತೆಂಬುವದು ನಿಶ್ಚಯವು ವಾಕು ಸಲ್ಲದೆ ಇನ್ನು ಪೋದಾವು ||ಆಹಾ || ಬಲ್ಲಿದ ಪುರುಷನು ಮೆಲ್ಲನೆ ನಿನ್ನ ಸತಿ ಯಲ್ಲಿ ಮಲಗಿದರೆ ನೆಲ್ಲಿ ನೀ ಸೈರಿಸಿ7 ನಾಶವಿಲ್ಲೆಂಬುದೆ ಸತ್ಯ ದೋಷ ಮಿಥ್ಯ ಜಗ ಭೃತ್ಯ ಬಿಡದೆ ನಿತ್ಯ ||ಆಹಾ|| ದ್ವಾಸುಪರ್ಣವೆಂಬೊ ಈ ಶ್ರುತಿಗರ್ಥವು ಲೇಸಾಗಿ ತಿಳಿಯದೆ ಘಾಶಿಪಡುವಿ ವ್ಯರ್ಥ 8 ಈಶನು ನೀನಾದರೇನು ಸರ್ವ ದೇಶ ಪೋಷಿಸದೆ ಇಪ್ಪೋರೆ ನಿನ್ನ ಸಾ ಹಸ ವ್ಯರ್ಥ ಮಾಡೋರೆ ಹರಿ ದಾಸರು ಕಂಡು ಸಹಿಸೋರೆ ||ಆಹಾ || ಸತಿ ಸುತರು ಕ್ಲೇಶ ಪಡುವುದು ಬಿಡಿಸಲಾರಿಯೊ ಲೇಶ 9 ಗುರುದೈವವಿಲ್ಲವೊ ನಿನಗೆ ಒಬ್ಬ ಸರಿಯಿಲ್ಲ ಈ ಧರೆಯೊಳಗೆ ಯಾರು ಹಿರಿಯ ಕಿರಿಯರಿಲ್ಲ ನಿನಗೆ ನೀನು ಖರ ಶಬ್ದಕಿಂತ ಹೊರಗೆ ||ಆಹಾ || ಎರಡಿಲ್ಲಾಯೆಂಬೊದೆ ಇರುಳಿಲ್ಲ ಹಗಲಿಲ್ಲಾ ನರಕ ಸ್ವರ್ಗ ವಂದೇ ಅರಿಯಾದೆ ಮುಳುಗುವಿ 10 ವಂದನೆ ನಿಂದ್ಯಗಳೊಂದೇ ನಿನಗೆ ಗಂಧ ದುರ್ಗಂಧವು ವಂದೇ ಕೆಟ್ಟ ಹಂದಿಯೆಲ್ಲ ನೀನು ವಂದೇ ನಿನ್ನ ಕೊಂದರೆ ದೋಷವಿಲ್ಲವೆಂಬೆ ||ಆಹಾ|| ಎಂದಿಗೂ ಈ ಮಾತು ನಿಂದಾವೆ ನಿನಗಿನ್ನು ಮುಂದಕ್ಕೆ ಬರಲಾರಿ ಮಂದಮತಿಯೆ ಖೋಡಿ11 ಜಗದೊಳಗೆ ನೀ ನಿಂತು ಇದು ಜಗವಲ್ಲವೆಂಬೋದಕ್ಕಿಂತು ನೋಡಿ ನಗುವರೋ ಅಶುದ್ಧ ಜಂತು ಜಿಂಹ್ವೆ ಬಿಗಿದು ಕೋಯಿಸುವ ಯಮನಿಂತು ||ಆಹಾ || ಹಗಲು ಇರುಳು ವಂದೆ ನಗುತ ನಗುತಾ ಕಂಡು ತೊಗಲು ದೇಹವು ನಿನ್ನದಗೆ ಮಾಡುವುದು ವ್ಯರ್ಥ 12 ಸ್ವಾಮಿ ನಿನಗೆ ಬ್ಯಾರಿಲ್ಲಾ ನಿತ್ಯ ನೇಮ ಕರ್ಮವು ಬ್ಯಾರೆ ಸಲ್ಲ ಒಂದು ಕಾಮಿನಿ ನಿನಗೆ ಬೇಕಲ್ಲ ಪೂರ್ಣ ಕಾಮನು ನೀನೆಂಬೆಯಲ್ಲಾ ||ಆಹಾ|| ಗ್ರಾಮ ಭೂಮಿಗಳ್ಯಾಕೊ ತಾಮಸ ನಿನಗಿನ್ನು ತಾಮಸರಿಗೆಲ್ಲ ಸ್ವಾಮಿಯಾಗಿರು ಹೋಗೋ 13 ಕಾಣದೆ ಬಗಳುವೆ ಮಾಯಿ ನಾಯಿ ನಿನಗೆ ತಂದೆ ತಾಯಿ ಇನ್ನು ಕಾಣುತ ಬೊಗಳೋದು ನಾಯಿ ಈ ನಾಯಿ ಕಚ್ಚಿ ನೀ ಸಾಯಿ ||ಆಹಾ || ಬಾಯ ಮುರಿವಾ ನಿನ್ನ ನ್ಯಾಯದಿಂದಲಿ ವಾಯು ಕಾಯ ಖಂಡ್ರಿಸುವನೊ 14 ಇಷ್ಟು ಹೇಳಿದರೆ ನೀ ಕೇಳಿ ನೀ ವ್ಯರ್ಥ ನಿಷ್ಠುರಾಡಿ ನೀ ಬಾಳೀ ನಿನ್ನ ಕಟ್ಟಿಗೆ ಮುರಿದಂತೆ ಶೀಳಿ ಬಾಯ ಕುಟ್ಟಿ ತುಂಬುವ ಯಮಧೂಳಿ ||ಆಹಾ|| ಸೃಷ್ಟಿಗೊಡಿಯ ನಮ್ಮ ವಿಜಯವಿಠ್ಠಲನ ಮುಟ್ಟಿ ಭಜಿಸದಲೆ ಭ್ರಷ್ಟ ಮನುಜ ನೀ ಅಷ್ಟವೆಂದೆಂಬೋದು ಬ್ಯಾಡವೊ 15
--------------
ವಿಜಯದಾಸ
ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1 ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2 ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3 ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4 ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5
--------------
ಕನಕದಾಸ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮಜ್ಞಾನಿಗಳ ನೋಡಿರೊ ಇಹ್ಹಿಹ್ಹಿಬ್ರಹ್ಮಜ್ಞಾನಿಗಳ ನೋಡಿರೋ ಪ ಜ್ಞಾನಿಗಳು ತಾವು ಅಂತೆ ತಾವೇ ಪರಬ್ರಹ್ಮರಂತೆಏನೋನೋ ಹುಚ್ಚುಮಾತು ಕೇಳಿರಯ್ಯ ಅಹ್ಹಹ್ಹ 1 ಜೊಂಡು ಹುಲ್ಲಿನಂತೆ ಮಂಡೆಗಳ ಬೆಳೆಸಿಕೊಂಡುಕಂಡ ಕಂಡಂತೆ ತಿರುಗುವವರ ನೋಡಿರಯ್ಯ ಅಹ್ಹಹ್ಹ 2 ಸಂಧ್ಯವಿಲ್ಲ ಸ್ನಾನವಿಲ್ಲ ಮುಂದೆ ಹೋಮ ತರ್ಪಣವಿಲ್ಲಅಂದು ತಾವೇ ಬ್ರಹ್ಮವಂತೆ ಕಂಡಿರೇನೋ ಅಹ್ಹಹ್ಹ3 ಕಾವಿ ಕೌಪವುಟ್ಟುಕೊಂಡು ಕಮಂಡಲು ಹಿಡಿದುಕೊಂಡುದೈವ ತಾನೇ ಎಂಬ ದೈವಗಳ ನೋಡಿರೋ ಅಹ್ಹಹ್ಹ4 ಇಂತು ಚಿದಾನಂದ ಗುರು ಭಕ್ತರಗಳ ನಿಂದ್ಯಮಾಡಿಅಂತು ಕಾಲನ ಅರಮನೆಯ ಕುರಿಗಳಾದರಹ್ಹಹ್ಹ 5
--------------
ಚಿದಾನಂದ ಅವಧೂತರು