ಒಟ್ಟು 6420 ಕಡೆಗಳಲ್ಲಿ , 135 ದಾಸರು , 4140 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ನಂಬಿದವರ್ಗೆ ನಿನ್ನಂದವೆ ಬಂದುದಿನ್ನೇನಿನ್ನೇನು ಪ್ರಸನ್ನ ರಾಘವ ದಶ'ಧವಾುತೆ'್ಮುರ'ನ್ನೇನಿನ್ನೇನು ಪಕೊರಳು ಗೊ್ಯುಕತೆುಂದ ಕಂಗೆಡುತಿದೆ ಲೋಕ'ನ್ನೇನಿನ್ನೇನುಪರರ ಬಾಧೆಗೆ ಕಲ್ಲುಹೊರುವಾಟ ಒದಗಿದುದಿನ್ನೇನಿನ್ನೇನುಧರೆಯ ಬಗೆದು ಬೆರತಿಂಬ ಕಾಲವು ಬಂದುದಿನ್ನೇನಿನ್ನೇನುಕರುಳ ಬಗೆದು ರಕ್ತಗುಡಿವ ಭಯವು ತೋರಿತಿನ್ನೇನಿನ್ನೇನು 1ದಾನಗೈಯಲು ಸ್ಥಾನ ಹಾನಿಯಾಗುವದಾುತಿನ್ನೇನಿನ್ನೇನುಜ್ಞಾನ ಕುಲದಿ ಪುಟ್ಟ ಕ್ಷಾತ್ರ ಜೀವನ ಬಂದುದಿನ್ನೇನಿನ್ನೇನುಮಾನಿನಿ ದುರುಳನಾಧೀನವಾಗುವದಾುತಿನ್ನೇನಿನ್ನೇನುಸೂನುವ ಪರರೆತ್ತಿಕೊಂಡೊಯ್ವ ತೆರಬಂದುದಿನ್ನೇನಿನ್ನೇನು 2ಉಟ್ಟ ಬಟ್ಟೆಯು ಪೋಪ ಸಮಯ ತಾನೊದಗಿದುದಿನ್ನೇನಿನ್ನೇನುದಿಟ್ಟ 'ಪ್ರರು ರಾವುತರಾಗುವಂತಾುತಿನ್ನೇನಿನ್ನೇನುದಿಟ್ಟಿಸಿ ನೋಡೆ ನೀನೆಮ್ಮನೆನ್ನುವರಾಗದಿನ್ನೇನಿನ್ನೇನುಹುಟ್ಟು ಹೊಂದುಗಳಡಗುವ ಕಾಲ ತಾ ಬಂದುದಿನ್ನೇನಿನ್ನೇನು 3ಕರುಣದಿಂದೀಕ್ಷಿಸಿ ಕಾಯ್ವವ ನೀನಿರಲಿನ್ನೇನಿನ್ನೇನುದುರಿತ ಕೋಟಿಗಳ ದ'ಪುದು ನಿನ್ನಯ ನಾಮ'ನ್ನೇನಿನ್ನೇನುಸ್ಮರಣೆ ಮಾತ್ರದಿ ಧನ್ಯರಹೆವಾವು ಭಯ ಪೋಪುದಿನ್ನೇನಿನ್ನೇನುವರ ವಾರಣಸೀವಾಸದಿಚ್ಛೆ ಪುಟ್ಟಿದುದೆಮಗಿನ್ನೇನಿನ್ನೇನು 4ಕರುಣದಿಂ ಚಿಕ್ಕನಾಗಪುರದಿ ನೀನೆಲಸಿದೆುನ್ನೇನಿನ್ನೇನುಗುರುವಾಸುದೇವಾರ್ಯ ರೂಪುದಾಳಿದೆಯಾಗಿುನ್ನೇನಿನ್ನೇನುಕರೆದು ಜ್ಞಾನಾಮೃತವೊರೆದು ರಕ್ಷಿಸಿದೆ ನೀನಿನ್ನೇನಿನ್ನೇನುಚರ[ಣ ಕಮಲಗಳ ನಂಬಿದೆವು ನಾನಿನ್ನೇನಿನ್ನೇನು] 5
--------------
ತಿಮ್ಮಪ್ಪದಾಸರು
ನಿನ್ನ ನಂಬಿದೆನೊ ಬ್ರಹ್ಮಣ್ಯತೀರ್ಥಾರ್ಯಾ ಸನ್ನುತಚರಣಪಾವನ ಸುಚರ್ಯಾ ಪ ಘನ್ನ ಭವದ ಭಯವನ್ನು ಕಳೆದು ಯತಿ ರನ್ನ ಎನ್ನನು ಧನ್ಯನ ಮಾಡೋ ಅ.ಪ. ಪುರುಷೋತ್ತಮ ಸುತೀರ್ಥರ ಪ್ರಿಯ ಸುಕುಮಾರ ದುರಿತೌಘಜೀಮೂತ ಚಂಡ ಸಮೀರ ಸುರುಚಿರ ತುಳಸಿ ಪಂಕಜಮಣಿಹಾರ ಧರಿಸಿ ಮೆರೆವೊ ದಿನಕರನವತಾರ ಕರುಣದಿ ತವ ಶ್ರೀಕರಚರಣಾಂಬುಜ ದರುಶನವನು ಕೊಡು ಗುಣಗಣನಿಧಿಯೇ 1 ಸೇವಕಜನರಿಗೆ ದೇವತರುವೆನಿಪ ಶ್ರೀವಿಠಲನಪಾದತಾವರೆ ಮಧುಪ ಕೋವಿದ ಜನರು ಸಂಭಾವಿಸಿ ಸ್ತುತಿಪ ಪಾವನ್ನ ಪಾದಾರ್ಚಿತ ಭಾವಜ ಮುನಿಪ ಪಾವನ ಸುಮತರ ಜೀವರ ಚಂದ್ರನೆ ಪಾವನ ಮತಿ ಕೊಡು ನೀ ಒಲಿದೆನಗೆ 2 ಪರ ತತ್ವಜ್ಞಾನ ವರವ ಪಾಲಿಸು ಸರ್ವವಿದ್ಯಾಪ್ರವೀಣ ನರಸಿಂಹವಿಠಲ ಶ್ರೀಹರಿ ಸನ್ನಿಧಾನ ಕರುಣಾಪಾತ್ರನೆ ದಿವ್ಯವರಪೂರ್ಣಜ್ಞಾನ ಹರಿಗುರುಭಜನ ತ್ವತ್ಪದ ವ್ಯಾಸಾರ್ಯರ ಗುರುವೆಂದೆನಿಸಿದೆ ಧರೆಯೊಳು ಮೆರೆದೆ 3
--------------
ನರಸಿಂಹವಿಠಲರು
ನಿನ್ನ ನಾ ಬಿಡುವನಲ್ಲಾ ಗೋಪಾಲಾ ನಿನ್ನ ಬಿಡುವನಲ್ಲ ಎನ್ನ ರಕ್ಷಿಸದಿರೆ ಪನ್ನಗಾದ್ರಿಯವಾಸ ಪರಮಪುರುಷರಂಗಾ ಪ ನಾಗಾರಿ ರೂಪನಾದ ಪರಮಾನಂದ ಭೋಗಿಶಯನ ವಿನೋದ ಭಕ್ತವತ್ಸಲ ಸಾಗರನಳಿಯ ಭೂಸುರಧೇನು ಪೋಷಕ ಭಾಗವತರ ಪ್ರಿಯಾ ಯೋಗಿಗಳರಸ1 ಜಲಜಾಕ್ಷ ನಳಿನನಾಭ ಜಾನಕೀರಮಣ ಜಲನಿಧಿಶಯನ ದೇವಾ ಜಗದೋದ್ಧಾರ ಜಲಜಬಾಂಧವ ಕುಲ ಶ್ರೇಷ್ಠಾದಿ ಮೂರುತಿ ಒಲಿದೆನ್ನ ದುಷ್ಕರ್ಮನಳಿದು ಪೋಷಿಸದಿರೆ 2 ಶಂಬರಾರಿಯ ಪಿತನೆ ಜಗನ್ನುತ ಕುಂಭಿನೀಧವನಾದನೇ ಗೋವಿಂದ ಶ್ರೀ ಕಂಬುಕಂಧರ ಕೃಷ್ಣಾ ಅಂಬುಧಿ ಬಂಧಿಸಿ ಅಂಬುಜಾಕ್ಷಿಯ ತಂದ ಹರಿ 'ಹೆನ್ನ ವಿಠ್ಠಲಾ’ 3
--------------
ಹೆನ್ನೆರಂಗದಾಸರು
ನಿನ್ನ ನಾನೇನೆಂದೆ ನಿರ್ಮಲ ರೂಪನೆ | ಪನ್ನಗ ಭೂಷಣ ಪರಮ ಸದಾಶಿವ ಪ ಸುರರು ಮೊರೆಯಿಡೆ ವಿಷವ ಧರಿಸಿ ಜಗ | ಉರಿಯಹದೆನುತ ಕಂಠದಿರಿಸಿದನು || ದುರಳ ದೈತ್ಯನ ಕೊಲ್ಲಲಾಗಿ ಅರ್ಧಾಂಗವ | ಹರಿಗೆ ನೀಡಿದ ದೇವ ಶರಣೆಂದೆನಲ್ಲದೇ || ಉರಗಣ್ಣಿನವನೆಂದೇನೇ | ಪರಹೆಣ್ಣವ | ಶಿರದೊಳಿಟ್ಟವನೆಂದೆನೇ | ಜಗದೊಳು || ಅರೆ ಮೈಯ್ಯವನೆಂದೆನೇ | ನಿಜಪದ | ಶರಣರಿಷ್ಟಾರ್ಥವ ನೀವನೇ ಬಾಯಂದೆ 1 ಸದ್ಗತಿ ನೀಡಿದ ಬ್ಯಾಡಗ ಮರ ದೊಪ್ಪ | ಲುದುರಿಸವಗ ನಿಜವ ದೋರಿದ || ಮುದದಿಂದ ಪಾಶುಪತವಾನಿತ್ತ | ಸದಮಲಾ ನಂದನೇ ಶರಣೆಂದೇ ಕಾಲಿಲಿಂ || ದ್ವೋದಿಸಿ ಕೋಂಡವನೆಂದೆನೇ | ಬಾಯಿಂದುಗು | ಳಿದರೆ ತಾಳ್ದದವನೆಂದೆನೇ | ನರಕಾಳ || ಗದಿ ಸೋತವನೆಂದೆನೇ | ವರಮುನಿ | ತ್ರದಶಾಧಿಪತಿ ಮುಖ್ಯ ಸೇವಿತ ಬಾಯಂದೆ 2 ಸರಸಿಜ ಭವನ ತಲೆಯ ನೊಂದು ಶಳದುಸಾ | ವಿರಭುಜ ನೀಡಿದ ಬಲಿಸುತಗ || ಸಿರಿಯೊಳನ ಕುಟುಂಬಕ್ಕೆ ಕೈವಲ್ಯವ | ಕರುಣಿಸಿದರಸನೆ ಬಾಯಂದೆ ಕಪಾಲ || ಕರದಿ ಪಡಿದವನೆಂದೆನೇ | ನರಮಾಂಸಕ | ಹರಿದು ಪೋದವನೆಂದೆನೇ | ಬಾಗಿಲಕಾವಾ || ಸುರನ ಬಂಟನೆಂದೆನೇ | ಸಲಹುವಾ | ಗುರು ಮಹಿಪತಿ ಪ್ರಭು ನಮೋ ನಮೋ ನಿನಗೆಂದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ನಾನೇನೆಂದೆನೊ - ರಂಗಯ್ಯ ರಂಗನಿನ್ನ ನಾನೇಂದೆನೊ ಪ ನಿನ್ನ ನಾನೇನೆಂದೆ ನಿಗಮಗೋಚರ ಸ್ವಾಮಿಪನ್ನಗಶಯನ ಪಾಲ್ಗಡಲೊಡೆಯನೆ ರಂಗ ಅ ಧೀರ ಸೋಮಕ ವೇದಚೋರ ಖಳನನು ಸೀಳಿವಾರಿಧಿಗಿಳಿದು ಪರ್ವತವನೆತ್ತಿಧಾರಿಣಿಯನು ಕದ್ದ ದನುಜದಲ್ಲಣನಾದನಾರಸಿಂಹ ನಿನಗೆ ನಮೊ ಎಂದೆನಲ್ಲದೆನೀರ ಪೊಕ್ಕವನೆಂದೆನೆ - ಬೆನ್ನಲಿ ಘನ್ನಭಾರ ಪೊತ್ತವನೆಂದೆನೆ - ಮಣ್ಣನಗೆದುಬೇರ ಮೆದ್ದವನೆಂದೆನೆ - ರಕ್ಕಸನೊಳುಹೋರಿ ಹೊಯ್ದನೆಂದು ಹೊಗಳಿದೆನಲ್ಲದೆ 1 ಪಾಷಾಣ ಪತಿ ಶರಣೆಂದೆನಲ್ಲದೆತಿರುಕ ಹಾರುವನೆಂದೆನೆ - ಹೆತ್ತ ತಾಯಶಿರವ ತರಿದನೆಂದೆನೆ - ವನವಾಸಕೆಭರದಿ ಚರಿಸಿದನೆಂದೆನೆ - ಪೂತನಿಯನುಸರಕು ಮಾಡದೆ ಕೊಂದ ಹರಿಯೆಂದೆನಲ್ಲದೆ 2 ಚಿತ್ತಜಕೋಟಿ ಲಾವಣ್ಯ ಮುಪ್ಪುರದಉತ್ತಮಸ್ತ್ರೀಯರ ವ್ರತವಳಿದುಮತ್ತೆ ಕಲ್ಕಿಯಾಗಿ ಮಧುಪರ ಮಡುಹಿದಹತ್ತವತಾರದ ಹರಿಯೆಂದೆನಲ್ಲದೆಬತ್ತಲೆ ನಿಂತವನೆಂದೆನೆ - ತೇಜಿಯನೇರಿಒತ್ತಿ ನಡೆದವನೆಂದೆನೆ - ಬಾರಿಬಾರಿಗೆಸತ್ತು ಹುಟ್ಟುವನೆಂದೆನೆ - ಆದಿಕೇಶವಭಕ್ತವತ್ಸಲನೆಂದು ಪೊಗಳಿದೆನಲ್ಲದೆ 3
--------------
ಕನಕದಾಸ
ನಿನ್ನ ನಾನೇನೆಂದೆನೊ | ಗುರುವೆ ಜಗದ್ಗುರುನಿನ್ನ ನಾನೇನೆಂದೆನೋ ಪ ನಿನ್ನ ನಾನೇನೆಂದೆ ನಿಖಿಲ ಜೀವರ ಒಡೆಯಪನ್ನಗ ನಗಧೀಶ ಪತಿತೋದ್ಧಾರನ ದೂತಅ.ಪ. ವಾರಿಧಿಯನೆ ದಾಟಿ | ನಾರಿ ಚೋರನ ಜರೆದುನಾರಿಗೋಸುಗ ಕೌರವರ ಸವರೀ ||ಮಾರಮಣನೆ ಸಾರತಮನೆಂಬ ವೇದಾಂತಸಾರ ಪೇಳ್ದಗೆ ಶರಣೆಂದೆನು ಅಲ್ಲದೇ ||ಭಾರಿ ಕೋತಿಯು ಎಂದೆನೆ - ಕುಪ್ಪುಸ ತೊಟ್ಟುನಾರಿಯಾದವನೆಂದೆನೆ - ಕಾವಿಯನುಟ್ಟುಪೋರಯತಿಯು ಎಂದನೆ - ಕುಭಾಷ್ಯಗಳಾರು ಮೂರೆರಡೊಂದರರಿ ಎಂದೆನಲ್ಲದೆ 1 ನೆರಹಿ ಕಪಿ ಸೈನ್ಯವ | ಶರಧಿಯ ಬಂಧಿಸಿದುರುಳ ರಕ್ಕಸರ ಸಂಹರಿಸೀ ||ಜರೆಯ ಸುತನ ಸೀಳಿ ಬದರೀಗೆತೆರಳೀದವಗೆ ನಮೋ ಎಂದನು ಅಲ್ಲದೇ ||ಗಿರಿಯ ಪೊತ್ತವನೆಂದನೆ - ರಕ್ಕಸಿಯಬೆರೆದ ನೆಂದವನೆಂದೆನೆ - ಕೌಪೀನವಧರಿಸಿದವನು ಎಂದೆನೆ - ಸುಜನರ್ಗೆಪರತತ್ವ ಪೇಳವನೆಂದೆನು ಅಲ್ಲದೆ 2 ಕರ್ತು ಹರಿಯೆ ಎಂದುನೀಚೋಚ್ಛ ತರತಮ ಪೇಳ್ದೆ ಎಂದೆಲ್ಲದೆ ||ಖೇಚರ ನೀನೆಂದೆನೆ - ವಿರಾಟನೊಳ್‍ಪಾಸಚಕ ನೀನೆಂದೆನೆ - ಭವಾಟವಿಮೋಚಕನೇ ಗುರು ಗೋವಿಂದ ವಿಠಲಅರ್ಚಕನೆಂದು ಸ್ತುತಿಗೈದೆನಲ್ಲದೆ 3
--------------
ಗುರುಗೋವಿಂದವಿಠಲರು
ನಿನ್ನ ನಾನೇನೆಂದೆನೋ | ಗುರುವೆ ಜಗದ್ಗುರು ನಿನ್ನ ನಾನೇನೆಂದೆನೋ ಪ ನಿನ್ನ ನಾನೇನೆಂದೆ ನಿಖಿಲ ಜೀವರ ಒಡೆಯಪನ್ನಗ ನಗಧೀಶ ಪತಿತೋದ್ಧಾರನದೂತ ಅ.ಪ. ವಾರಿಧಿಯನೆ ದಾಟಿ | ನಾರಿ ಚೋರನ ಜರೆದುನಾರಿ ಗೋಸುಗ ಕೌರವರ ಸವರೀ ||ಮಾರಮಣನೆ ಸಾರತಮನೆಂಬ ವೇದಾಂತಸಾರ ಪೇಳ್ವಗೆ ಶರಣೆಂದೆನು ಅಲ್ಲದೇ |ಭಾರಿ ಕೋತಿಯು ಎಂದೆನೆ - ಕುಪ್ಪಸ ತೊಟ್ಟುನಾರಿಯಾದವನೆಂದನೆ - ಕಾವಿಯನುಟ್ಟುಪೋರ ಯತಿಯು ಎಂದೆನೆ - ಕುಭಾಷ್ಯಗಳಾರು ಮೂರೆರಡೊಂದರರಿ ಎಂದೆನಲ್ಲದೆ 1 ನೆರಹಿ ಕಪಿಸೈನ್ಯವ ಶರಧಿಯ ಬಂಧಿಸಿದುರುಳ ರಕ್ಕಸರ ಸಂಹರಸೀ ||ಜರೆಯ ಸುತನ ಸೀಳಿ ಬದರೀಗೆತೆರಳೀದವಗೆ ನಮೊ ಎಂದೆನು ಅಲ್ಲದೇ ||ಗಿರಿಯ ಪೊತ್ತವನೆಂದನೆ - ರಕ್ಕಸಿಯಬೆರೆದನೆಂದವ ನೆಂದೆನೆ - ಕೌಪೀನವಧರಿಸಿದವನು ಎಂದೆನೆ - ಸುಜನರ್ಗೆಪರತತ್ವ ಪೇಳ್ದೆವನೆಂದೆನು ಅಲ್ಲದೇ 2 ಕರ್ತು ಹರಿಯೆ ಎಂದುನಿಚೋಚ್ಛ ತರತಮ ಪೇಳ್ದೆ ಎಂದಲ್ಲದೆ ||ಖೇಚರ ನೀನೆಂದನೆ - ವಿರಾಟನೊಳ್‍ಪಾಚಕ ನೀನೆಂದನೆ - ಭವಾಟವಿಮೋಚಕನೇ ಗುರು ಗೋವಿಂದ ವಿಠ್ಠಲಾರ್ಚಕನೆಂದು ಸ್ತುತಿ ಗೈದನಲ್ಲದೆ 3
--------------
ಗುರುಗೋವಿಂದವಿಠಲರು
ನಿನ್ನ ನಾನೇನೆಂದೆನೋ ರಾಮೇಶ್ವರನಿನ್ನ ನಾನೇನೆಂದೆನೋ ಸಕಲ ಲೋಕವನ್ನು ಪೊರೆವ ಪಾರ್ವತೀಶನೆಂದೆನಲ್ಲದೆ ಪ ತಾರಕಾಸುರನ ಪುತ್ರರ ಬಾಧೆಯನು ತಾಳಲಾರದೆ ಹರಿಮುಖ್ಯ ನಿರ್ಜರರುಶ್ರೀರುದ್ರ ಸಲಹೆಂದು ಪಾದಕೆ ಮಕುಟವ-ನೂರೆ ಪೊರೆದ ತ್ರಿಪುರಾರಿಯೆಂದೆನಲ್ಲದೆ ವಿಧಿ ಶಿರವ ಕೈ-ಯ್ಯಾರೆ ಕಡಿದನೆಂದೆನೆ ಭಕ್ತವತ್ಸಲವಾರಿಜಭವನುತಿಲೋಲನೆಂದೆನಲ್ಲದೆ 1 ನಾರದಸಹಿತ ಮತ್ಯಾರು ಕಾಣದಂದದಿಓರುಗಲ್ಲರಸಿನ ಮನೆಗೆ ಪೋಗಿತೋರುವ ಭಿತ್ತಿಯ ಕೊರೆದಾತನಿಷ್ಟವಪೂರಿಸಿದನುಪಮಮಹಿಮನೆಂದೆನಲ್ಲದೆಚೋರರ ಗುರುವೆಂದೆನೆ ಪಾರ್ಥಚಾಪದಿಂ-ದೇರುವಡೆದನೆಂದೆನೆ ಬತ್ತಲೆಮದವೇರಿ ಕುಣಿದನೆಂದೆನೆ ಅರ್ಜುನಗೊಲಿದಾರಾಜಿಸುವ ಮಹಾನಟನೆಂದೆನಲ್ಲದೆ2 ಸುರರು ದಾನವರೆಲ್ಲ ನೆರೆದು ವಾದಿಸಿ ಕ್ಷೀರಶರಧಿ ಮಥನವ ವಿರಚಿಸಲುಉರು ಹಾಲಾಹಲಮೊಗೆದುರುಹಲು ಸರ್ವರಪೊರೆದ ಶ್ರೀನೀಲಕಂಧರನೆಂದೆನಲ್ಲದೆಗರವ ಕುಡಿದನೆಂದೆನೆ ಪೆಣ್ಣಿತ್ತನಶಿರವನರಿದನೆಂದೆನೆ ಊರೂರೊಳುತಿರಿದುಗರುವನೆಂದೆನೆ ದುಷ್ಟ ಶಿಕ್ಷಕವರ ಕೆಳದಿಯ ರಾಮೇಶ್ವರನೆಂದೆನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಿನ್ನ ನೀ ತಿಳಿದು ನೋಡೊ ಪ್ರಾಣಿ ಧ್ರುವ ನಿನ್ನ ನೀ ತಿಳಿಯೊ ನೀ ಭಿನ್ನಬೇದವಳಿದು ಚೆನ್ನಾಗ್ಯನುಭವದಲಿ ಉನ್ಮನವಾಗಿ 1 ನಾನಾರು ಎಂದು ನೀ ಖೂನ ತಿಳಿದು ನೋಡೊ ಘನ ಗುರು ಕೃಪೆಯಿಂದಲಿ ತನುವಿನೊಳು 2 ಎಲ್ಲಿಂದ ಬಂದ್ಯೊ ನೀ ಎಲ್ಲಿಗ್ಹೋಗುವಿ ಮುಂದೆ ಇಲ್ಲೆವೇ ತಿಳಿದು ನೋಡೊ ಸುಲಭದಿಂದ 3 ಬಂದೆ ನಾ ತಂದೆ ನಾ ಬಂದು ಘಳಿಸಿದೆ ನಾ ಹೊಂದಿಕಿ ಹೊಲಬು ನೋಡೊ ಸಂಧಿಸಿ ಘನ 4 ನಡೆದೆ ನಾ ನುಡಿದೆ ನಾ ಹಿಡಿದೆ ನಾ ಪಡೆದೆ ನಾ ಒಡನೆ ನಿನ್ನೊಳು ನೀ ನೋಡೊ ಪಿಡಿದು ನಿಜ 5 ತಾನೇನು ತನುವೇನು ತನ್ನೊಳಗಿಹುದೇನು ಮನಮುಟ್ಟಿ ಘನವ ನೋಡೊ ಚಿನ್ನುಮಯನ 6 ಏನುಂಟು ಏನಿಲ್ಲ ಅನಿಮಿಷದಲಿ ನೋಡೊ ಘನಕ ಘನವ ಬೆರೆದು ಸನ್ಮತವಾಗಿ 7 ಮರ ಹುಟ್ಟಿ ಮರಬಿದ್ದ ತೆರನಾಗದಿರೊ ನೀನು ಎರಗೊ ಶ್ರೀಗುರುಪಾದಕ ಕರಿಗಿ ಮನ 8 ಎಡಬಲ ನೋಡದೆ ಪಿಡಿದು ಸದ್ಗುರು ಪಾದ ಬೋಧ ನೋಡಿ ನಿನ್ನೊಳು9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ನೀ ತಿಳಿಯೋ ಮೂಢ ಭೇದಿಸಿ ಗೂಢ ಧನ್ಯಗೈಸುವ ಪ್ರೌಢ ಸದ್ಗುರು ದೃಢ ಧ್ರುವ ಬಂದು ಬಂದು ಹೋಪಾದೇನ ಸಾಧಿಸಿದಲ್ಲದೆ ಖೂನ ಸಂಧಿಸಿ ಬೀಳುವುದು ಹೀನ ಜನ್ಮಕೆ ನಾನಾ ಹೊಂದು ಮನವೆ ನೀ ಪೂರ್ಣ ಸದ್ಗತಿ ಸುಖ ಸಾಧನ ಎಂದೆಂದಿಗಾದ ನಿಧಾನ ಸಾಂದ್ರ ಸದ್ಘನ 1 ಮುತ್ತಿನಂಥ ಸುಜನ್ಮ ವ್ಯರ್ಥಗಳೆವುದಧರ್ಮ ಹತ್ತಿಲ್ಯಾದಾನಂದೋ ಬ್ರಹ್ಮ ತಿಳಿಯೋ ನೀವರ್ಮ ಚೆನ್ನೊಬ್ಬಳೆ ಮಾಡೊಮ್ಮ ಕಿತ್ತಿಬಿಸ್ಯಾಡೊ ದುಷ್ಕರ್ಮ ಎತ್ತ ನೋಡಲು ಸಂಭ್ರಮ ಸದ್ಗುರು ಧರ್ಮ 2 ತನ್ನ ತಿಳಿದು ನೋಡೊ ಭಿನ್ನ ಭೇದವೆಂಬುದೀಡ್ಯಾಡೊ ಸನ್ಮತ ಸುಖ ಸೂರ್ಯಾಡೊ ಅನುಮಾನ ಬಿಡೊ ನಿನ್ನೊಳೂ ಮಹಿಪತಿ ನೋಡೊ ಅನುಭವನೇ ಕೊಂಡಾಡೊ ಉನ್ಮತವಾಗಿ ನೀ ಕೂಡೊ ಘನ ಬೆರೆದಾಡೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ನಿನ್ನ ಭಕ್ತರು ಬಹಳ ಬಲವಂತರಹುದೈ ಜನ್ಮಜನ್ಮಕೂ ಚರಣಶರಣನ್ನ ಮಾಡೈ ಪ ಹಾರಿದನು ಹನುಮಂತ ಕಡಲ ಕಾಲುವೆಯಂತೆ ಸಾರಿ ಸೇತುವೆಯ ಕಟ್ಟಿ ನೀ ದಾಟಿದೇ ಮಾರುತಿಯು ಬಲ್ಲಿದನು ಎಂದು ನಾಂಪೇಳಲೇ ಸಾರಸಾಕ್ಷನೆ ಸಾಕ್ಷಿ ಯೇತಕೈ ಬೇರೆ 1 ಭೀಷ್ಮನನು ಬೆದರಿಸಲು ತೋರಚಾಪವ ತೊಟ್ಟ ಸೂಕ್ಷ್ಮದಿಂಹಾರಿಸಿದ ಸಂಗರದಲವನು ತೀಕ್ಷ್ಣಸಾಹಸಿಯಾತನೆಂದು ನೀಂತಿಳಿಯತೈ ಶ್ರೇಷ್ಠ ಮಾರುತಿಕೈಯ ಪರಶುವಂ ಕೇಳು 2 ಶಬರ ಶಂಕರನೊಡನೆ ಕಾದಿ ಕಡೆಯಲಿ ಗೆಲ್ದು ಪ್ರಬಲನೆನ್ನಿಸಿ ಪಾಶುಪತವನ್ನೆ ಪಡೆದಾ ಪ್ರಭುವೆ ನಿನ್ನು ಪದೇಶ ಪಡೆದ ಪಾರ್ಥನ ಕೇಳು ಸುಬಲರೈ ಜಾಜೀಶ ದಾಸರೀ ಜಗದಿ 3
--------------
ಶಾಮಶರ್ಮರು
ನಿನ್ನ ಮನ ಬಂದಂತೆ ವಿಹರಿಸೊ ಸಿರಿಕೃಷ್ಣ ಎನ್ನ ಸ್ವಾಮಿ ನೀ ಎಂದು ಮರುಳಾದೆನಲ್ಲದೆ ಪ ಬೊಮ್ಮ ಮೊದಲು ಸುರೋತ್ತಮದ ಪಾದ ಧುಮ್ಮಿನೊಳು ಮುಳುಗಿಹೆ ಎಮ್ಮಯ್ಯ ಕೇಳು 1 ಸರ್ವಜ್ಞನೆಂಬಿಯಾ ಉರ್ವಿಯ ಪತಿಗಳು ಸರ್ವ ಜನಗಳಾ ಪೆÀೂರ್ವರೆ ಕಂಡೀಗ2 ಅಕ್ಷೀಣ ಶಕುತೆಂಬ ದಾಕ್ಷಿಣ್ಯವಿಲ್ಲದೆ ಸುಕ್ಷೀಣ ಜನರನ್ನು ರಕ್ಷಿಪರಯ್ಯ 3 ಭಕುತ ವತ್ಸಲನೆಂಬೊ ಭಕುತಿಯು ಎನ್ನಲ್ಲೆ ಯುಕುತವಾಗಿಹವು ವ್ಯಕತ ನಿನಗಲ್ಲವೆ 4 ಶರಣರ ದೊರೆಯೆಂದು ಕರುಣ ಮಾಡುವೆನೆಂಬ ಸಿರಿ ವಾಸುದೇವವಿಠಲ ಕರುಣಿಸಾಲಸ್ಯವ್ಯಾಕೊ 5
--------------
ವ್ಯಾಸತತ್ವಜ್ಞದಾಸರು
ನಿನ್ನ ಮರೆದೆನೊ ರಂಗ ನಿನ್ನ ಮರೆದೆ ಅನ್ಯರನ್ನಕೆ ಸಿಲುಕಿ ಅನುಗಾಲ ಮರುಳಾಗಿ ಪ ಊಟಕ್ಕೆ ಬರುವಲ್ಲಿ ತನುವುಬ್ಬಿ ಎನ್ನ ಮನ ನಾಟುವುದು ಅವರ ಕಡೆ ಅನುರಾಗದಿ ನೀಟಾದ ಭೋಜನವ ಬಯಸುವೆನು ಯಮರಾಯ ಭಂಗ ಕೇಳಿ ಎಚ್ಚರಿಯದಲೆ1 ಮತ್ತೆ ಕರೆಯಲು ಬರಲು ಉತ್ಸವ ಪಿಡಿಯಲೊಶವೆ ಹೊತ್ತು ಹೊತ್ತಿಗೆ ಅವರ ಕೊಂಡಾಡುತ ಹೆತ್ತವರಿಗಿಂತಲೂ ಅಧಿಕ ನಮಸ್ಕರಿಸುವೆನು ಚಿತ್ತಜನಪಿತ ನಿನ್ನ ಸ್ತೋತ್ರ ಪಠಿಸದಲೆ2 ಎಡೆಯ ಮುಂದೆ ಕುಳಿತು ಎಲ್ಲ ಕಾಲಗಳಿಂದ ಬಿಡದೆ ಮಾಡಿದ ಪುಣ್ಯಪಾಪಗಳೆದು ಎಡಬಲದವರ ಪಙÉ್ತ ನೋಡಿಕೊಳ್ಳುತ ದುಃಖ ಪಡುವೆನೋ ಎನಗಿಷ್ಟು ಕಡಿಮೆ ಹಾಕಿದರೆಂದು3 ಅನ್ನವಿತ್ತವನ ಪಾಪಗಳು ನಿರಂತರದಿ ಅನ್ನದಾಶ್ರಯ ಮಾಡಿಕೊಂಡಿಪ್ಪವು ಚೆನ್ನಾಗಿ ತಿಳಿಯದಲೆ ಚಾತುರ್ಯದಿಂದಲಿ ಧನ್ಯನಾದೆನು ನಾನು ಪರರ ಪಾಪವ ಭುಜಿಸಿ 4 ಒಬ್ಬರೆಡೆ ನೋಡಿಕೊಳಲಧಿಕವಾಗಿದ್ದರೆ ಉಬ್ಬುವೆನು ಊರು ಕೇರಿ ಹಿಡಿಸದಂತೆ ಸುಬ್ಬನ ಸೂರೆಯಂತೆ ಪರರ ಅನ್ನವನುಂಡು ಮೊಬ್ಬಿನಲಿ ದಿನಗಳೆದೆ ದೀನ ಮನಸಿನಲಿ 5 ಒಡಲಿಗೆ ಬಿದ್ದರಸ ಮೂರು ಭಾಗಗಳಾಗಿ ಕಡೆಗೆ ಪೋಗುವುದೊಂದು ನಿಲುವುದೊಂದು ತಡೆಯದಲೆ ಸಂತಾನ ಪಡೆವುದೊಂದೀತೆರ ಕಡೆಗಾಣಲಿಲ್ಲ ಪರರಲಿ ಉಂಡ ಋಣಕೆ6 ಆವಾವ ಬಗೆರುಚಿ ಜಿಹ್ವಗೆ ತೋರುತಿದೆ ಆವಾವ ಬಗೆ ನರಕ ಬೇರೆಯುಂಟು ಮಣಿ ಸರ್ವೇಶ ವಿಜಯವಿಠ್ಠಲ ಸ್ವಾಮಿ ಈ ಜೀವ ಹಿತವಾಗುವಂತೆ ಮಾರ್ಗವ ತೋರು 7
--------------
ವಿಜಯದಾಸ