ಒಟ್ಟು 7812 ಕಡೆಗಳಲ್ಲಿ , 132 ದಾಸರು , 3804 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೇ ಅನಾಥ ನಾನೇ ಸನಾಥ ಪ ಜ್ಞಾನಿಗಳಾಡುವರು ಯೀಪರಿ ಮಾತಾ ಅ.ಪ ನಂಬಿರುವುದೆ ಸುಳ್ಳು ನಂಬಿದಿರುವದೆ ನಿಜ ಹಂಬಲಿಸಿದರೇನು ತುಂಬುವುದಿಲ್ಲ 1 ಇಲ್ಲಾ ಎಂಬೋದುಂಟು ಉಂಟೂ ಎಂಬೋದಿಲ್ಲ ಬಲ್ಲರು ಸರ್ವರು ಬಾಯಿಮಾತಲ್ಲ 2 ಮಾನಾಭಿಮಾನ ನಿನ್ನಧೀನವು ಹರಿಯೇ 3 ಕಾಣೋದು ಕೇಳೋದು ಮಾಣಾದೆ ಮಾಡೋದು ನೀನೆ ಯನ್ನೊಳಗಿದ್ದು ನಡೆಸುತ್ತಲಿರುವೆ 4 ಎನಗೇ ನೀನೆ ತಂದೆ ನಿನಗೇ ತಂದೆ ಕಾಣೆ ಸಿರಿನಲ್ಲ 5 ನಿನ್ನೊಳಗೆ ಜಗವು ಜಗದೊಳಗೆ ನೀನೆ ಪನ್ನಗ ಶಯನಾ ಪಾವನ ಚರಿತನೆ 6 ಸರುವಾರೊಳಗೂ ಗುರುರಾಮ ವಿಠ್ಠಲ ಪರಿಪೂರ್ಣನೆಂಬೋದು ಪ್ರಹ್ಲಾದ ಬಲ್ಲ7
--------------
ಗುರುರಾಮವಿಠಲ
ನೀನೇ ಕಾಪಾಡಬೇಕು ನಿರುತವು ಬಿಡದೆಯ- ಜ್ಞಾನಾಬ್ಧಿಯ ದಾಟಿಸು ಸೀ- ಕಮಲ ಭೃಂಗ ಶುಭಾಂಗ 1 ಸುಗ್ರೀವನ ಮಂತ್ರಿವರ ದ- ಶಗ್ರೀವನ ಗುದ್ದಿದವನೆ ಶತ್ರುನಿಕರವಂ ಶೀಘ್ರದಿ ಗೆಲುವಂದದಲಿಯ- ನುಗ್ರಹವ ಮಾಡುತಲೆಮ್ಮ ಕೈಪಿಡಿ ಹನುಮ 2 ತ್ವರಿತವತಿ ನಿಧಾನವಲಸಿಕೆಗಳನು ಬಿಡಿಸಿ ಪಿರಿಯರು ಪೇಳಿದ ಪರಿಯಲಿ ನೆರೆನಡೆವಂದದಲಿ ಸುಮತಿಯನು ಕೊಡು ಹನುಮ3 ಹೊರಗಿನ ಶತ್ರುಗಳಂ ವಾ- ಕ್ಪೌರುಷದಿ ವೋಡಿಸಲುಬಹುದು ಒಳಗಿನ ಕಾಮ್ಯಾ ದ್ಯರ ಗೆಲುವುದಕೆ ಶಾಂತಿಯೆ ಕ್ಷುರವಹುದು ದಯಮಾಡಿ ನೀನೆ ಕರುಣಿಸು ಹನುಮ4 ಕತ್ತಿಯಲಿ ಕಡಿದೆರೆರಡಾ- ಗುತ್ತಿರುವುದು ಜಡವು ವಾಕ್‍ಕತ್ತಿಯ ದೆಸೆಯಲಿ ನೆತ್ತಿಮೊದಲು ಪಾದವರಿಗು ಕತ್ತರಿಸಿದರೀತಿಯಹುದು ಕಾಯೈ ಹನುಮ 5 ಪರಧನ ಪರಾಕಾಮಿನಿಯರಿ ಕೊರಳೊಳರಿವೆಂಬ ರಜ್ಜುವಿಂದಲಿ ವಿರಾಗ ದೊಣ್ಣೆಯನು ಕಟ್ಟಿ ಕೈಪಿಡಿ ಹನುಮ 6 ಸಂಗವು ನಿತ್ಯಾಹ್ನೀಕಕೆ ಭಂಗವು ಬರುತಿಹುದು ಸದ್ವಿಷಯವಾದರದೆ ಬಂಗಾರವು ರತ್ನವು ತಾ ಹಿಂಗದೆ ಸೇರಿಸಿದ ರೀತಿ ಹಿತವೈ ಹನುಮ 7 ನವವಿಧ ಭಕ್ತಿಯ ಕೊಡು ರಾ- ಘವನಂಘ್ರಿಪರಾಗದಲಿ ಕಡು ವಿರತಿಯನು ನೀಂ ತವಕದಲಿ ಪಾಲಿಸುತಲಿ ನಿ- ನ್ನವರಂ ಕೈಪಿಡಿವುದೆಂದಿಗೂ ಬಿಡದೆ ಹನುಮ 8 ತಾನನುದಿನದಿ ಬರುವ ಕಷ್ಟಗಳನು ಪರಿಹರಿಸುತ್ತ ಹಿಂದೆ ತಿರುಗುತಲಿರುವಂ9
--------------
ಗುರುರಾಮವಿಠಲ
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ನೀನೇ ಶ್ರಾದ್ಧದನ್ನವನುಂಡವಾ ನಾನರಿಯದಂತೆ ಯೆನ್ನ ಗೃಹದೊಳು ಶ್ರೀವೈಷ್ಣವನಾಗಿ ಪ ಬಾಣಸಿಗಾದವರು ನೀನೋ ನಾರಾಯಣಿಯೋ ಕ್ಷೋಣಿಯೊ ರವಿಯೋ ಜಾಹ್ನವಿಯೊ ರತಿಯೋ ವಾಣಿಯೋ ಸುರಧೇನುವೋ ಬಂದಾತಧನಂಜಯನೂ ತಾನೆ ಎನ್ನ ಆದ್ದಾಗಾಯ ತೆಲೆದೇವಾ1 ತಿಳಿದೆ ನಾನೀಗ ನಿನ್ನನು ಕೂಡೆ ಬಂದಿದ್ರ್ದ ಬಿಳಿಯ ಚುಟ್ಟಿನ ಯೆಣ್ಣೆಗೆಂಪಿನವನೂ ಕುಳಿತವನು ಕೈಯಪುಸ್ತುಕದವನು ಕಂಕುಳೊಳ ಗಿಳಿದ ಮಡಿಗಡೆಯವರಾರು ಪೇಳೆಲೆ ದೇವಾ 2 ಆವಾವ ಸ್ಥಾನಕಾರಾರ ನೇಮಿಸಿದೆ ನೀ ದೇವಾ ಉಪಾಧ್ಯರಾರಭಿಶ್ರವಣವನು ಪೇಳ್ದ ಕೋವಿದರಾರು ಶ್ರೀವೈಷ್ಣವರಾರೆಲೆದೇವ 3 ಜನನ ಸ್ಥಿತಿಲಯಕೆ ಕಾರಣಭೂತನೋರ್ವ ನೀ ನೆನುತ ವೇದಾಂತಗಳು ಪೊಗಳುತಿರಲೂ ಇನಿತಕ್ಕೆ ಯೆಂದನ್ನದಗಳು ಕುಡಿತೇಪಾಲ್ಗೇ ಮನವ ಸೋತುದ ಬಿಡುವೆಯಾ ನಿತ್ಯತೃಪ್ತಾ 4 ಗುರುಗಳಂದದಲಿ ಶ್ರೀವೈಷ್ಣವ ನೀನಾಗಿ ಶರಣನಾ ಪಿತೃಗಳಿಗೇ ಶ್ರಾಧ್ಧವನುಂಡುದದೂ ಪಿರಿಯದಾಯ್ತು ಎನ್ನ ನೂರೂಂದು ಕುಲಕೆಲ್ಲಾ ಪರಮಪದವಾಯ್ತು ವೈಕುಂಠಚೆನ್ನಿಗರಾಯಾ 5
--------------
ಬೇಲೂರು ವೈಕುಂಠದಾಸರು
ನೀನೇನ ಮಾಡಲಾಪಿಯೋ ಲಕುಮೀಶಾ | ನಾನೀಗ ಪಡೆದದ್ದು ಉಣದಲೆ ಪೋಗುವದೆ | ಪ ಲೋಕದೊಳಗೆ ನಿನ್ನ ಕೊಂಡಾಡಿ ಪ್ರತಿದಿನ ಏಕ ಭಕುತಿಲಿ ಸರ್ವೋತ್ತಮನೆಂದು ಏಕಾಂತ ಭಜಿಪÀ ಮನುಜಗಾದರು ಬರೆದ ವಾಕು ತಪ್ಪುವದೇನೋ ಅಜನು ನಿರ್ನೈಸಿದ1 ಮುಂದೆ ಕೊಡುವ ಫಲಕೆ ಕರ್ತ ನೀನಲ್ಲದೆ ಹಿಂದಣಿಂದಲಿ ಬರುವ ಕಾಲಾಖ್ಯಕೆ ಒಂದು ಬಿಂದು ಮಾತ್ರ ತೊಲಗಿಪ ನಡತಿ ಕಾಣೆ ಅಂದಲ್ಲಿ ಏನು ಫಲ ಎನ್ನ ಕರ್ಮವಷ್ಟೇ 2 ಇದ್ದದೊಂದು ಮರಿ ಅಡಗಾಣಿಸಿ ಬಂದು ಹದ್ದು ತಾ ವೈಯಲು ಆ ಕುರುಬ ಯೆಲ್ಲಿ ಇದ್ದರೇನು ಭಯ ವಿಜಯವಿಠ್ಠಲ ನಿನ್ನ ಪೊದ್ದಿದವಗಾದರು ಅನುಭವಿಸದೆ ಬಿಡದು3
--------------
ವಿಜಯದಾಸ
ನೀನೊಲಿದು ನಿನ್ನ ಸೇವೆಯನು ಕೊಡು ಹರಿಯೇ ಪ ನಾನೊರಲುವಾ ಕೂಗು ಕೇಳಿಸದೆ ದೊರೆಯೇ ಅ.ಪ ಸಂಸಾರ ಸುಖಗಳನು ಅನುಭವಿಸಿ ಸಾಕಾಯ್ತು ಹಿಂಸೆ ಚಿಂತೆಯ ರುಚಿಯ ತಿಳಿದುದಾಯ್ತು ಹಂಸನೀರೊಳಗಿದ್ದು ನೀರರಿಯದಂತಾಯ್ತು ಕಂಸಾರಿ ಸಾಕಿನ್ನು ಭೂಮಿ ಬೇಸರವಾಯ್ತು 1 ಶತಪಾಪಿ ನಾನಾಗಿ ಪತಿತಜನ್ಮವನಾಂತು ವ್ರತ ನೇಮ ನಿಷ್ಠೆಗಳ ಮರೆತು ಕುಳಿತು ಮಿತವಿಲ್ಲದನ್ಯಾಯಕಾರ್ಯದಿಂ ಬಸವಳಿದು ಸತಿಸುತೆಯರಾಟದಲಿ ನಿನ್ನ ಮರೆತೆ2 ಕರುಣಾ ಸಮುದ್ರ ನೀನಲ್ಲವೇ ಹರಿಯೇ ಪೊರೆಯೋ ಮಾಂಗಿರಿರಂಗ ಕರುಣಾಂತರಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೋಲಿದುದ್ದಕ್ಕೀ ಇಹ ಸೌಖ್ಯವೇಯಿನ್ನು ನಾನೊಲ್ಲೆ ನಾನೊಲ್ಲೆ ಸರ್ವೇಶಾ ಪ ನಿನ್ನನುರಾಗದಿ ಗತಿಯೆಂದು ನಂಬಿದ ಮಾನವನೊಡನೆ ನೀನಾಡುವದೆಲ್ಲಾ ಅ.ಪ ಷಡುರಸ ನಾನಾ ಸುಭೋಜನವ ಬಿಡಿಸಯ್ಯ ದಾನವ ಭಂಜನ ಒಡಲಿಗೋಸುಗ ನಿನ್ನನು ಸೇವಿಸುವೆ ತೋರಿಸದಿರೆ | ದಿವ್ಯಾಂಬರಗಳ ಉಡಿಸಿ ಸ್ವರ್ಣಾಭರಣಗಳ ತೊಡಿಸಿ | ಬರಿ ಮಾತಿನಲಿ ಮೊರೆ ಯಿಡುವೆನೊ ವಾಕ್ಕಾಯದಿಂದಲೀ 1 ಜನರು ಜನಪರಿಂದ ಮನ್ನಣೆ ಸ್ವಲ್ಪ | ಎನಗೆ ಹತ್ತದು ಕಾಣೊ ನಿನ್ನಾಣೆ || ಮನುಜನ ಸೈಸಿದವನ ಬಾಯೆನೆ ಬರೆವಾ | ವಿಭವ ದೊರೆಯದೆ | ಜನುಮದಲಿ ಬಂದದಕೆ ಮಹಾ ಸಾಧನವಿಧಾರಿ ತೋರಿಸಿ | ನಿನ್ನ ದಾಸನೆನಿಸದೆ | ನಿಸ್ಸಾರವೆಣಿಸಿ ತೋರ್ಪ ದೇವ ಸೈಸೈ 2 ಥಂಡ ಥsÀಂಡದಲೆನ್ನ ಮರುಗಿಸಿ | ಮಂಡಲದೊಳು ಪ್ರಚಂಡನೆನಿಸದಿರು | ಉಂಡ ಪರಾನ್ನಕೆ ದಂಡನೆ ಬಹಳಲ್ಲಿ | ತೊಂಡ ನಾನಯ್ಯ ಕರುಣಸಾಗರ | ಖಂಡ ಮತಿಯನು ಕೊಡದೆ ಮುಕ್ತರ | ಅಂಡ ಜಾಂಸಗ ವಿಜಯವಿಠ್ಠಲಾ 3
--------------
ವಿಜಯದಾಸ
ನೀನ್ಯಾಕೊ ನಿನ್ನ ಗೊಡಿವ್ಯಾಕೊ ಹನುಮೇಶ ಪ ಅನ್ಯಮತಿ ಪೊಂದಿ ಮಿಥ್ಯಾಜ್ಞಾನಿಯಾಗದೆ ಪಾದ ಪೊಂದಿದ್ದರೆ ಸಾಕೊ ಅ.ಪ ಜೀವೋತ್ತಮರ ಭಾವವನನುಸರಿಸಿ ನೋವಾಗುವ ಮಾರ್ಗವ ಜರಿದು ಭಾವಜನಯ್ಯ ನಿನ್ನ ಭಾವವ ಕಂಡು ಆವಾಗಲು ಸುಖಿಪರ ಗೃಹ ಕಾವನಾದರೆ ಸಾಕು 1 ದೇಹಸ್ಥಿರವಲ್ಲ ದಹನಶೀಲಭವ ಇಹಸುಖ ಹೇಯವೆಂದು ಮೋಹಪಾಶಕೆ ಸಿಗಿಸದೆ ನಿನ್ನನುಪಮ ಮಹಿಮೆಗಳ ಕೇಳುತ ಆನಂದವಾದರೆ ಸಾಕು 2 ಮೋದತೀರ್ಥರೆ ಸದ್ಗುರು ಭೇದ ಜ್ಞಾನವೆ ಗತಿಪ್ರದ ವೇದ ಸಚ್ಛಾಸ್ತ್ರಂಗಳೆ ಸತ್ಯ ತಿಳಿದು ಆದಿ ವಿಜಯ ರಾಮಚಂದ್ರವಿಠಲನೆ ಅಗಾಧಮಹಿಮ ಮಮ ಪ್ರೀಯನೆಂಬ ಭಕ್ತಿ ಇತ್ತರೆ ಸಾಕೊ3
--------------
ವಿಜಯ ರಾಮಚಂದ್ರವಿಠಲ
ನೀರಜ ಯುಗ ಮನೋ - ವಾರಿಜದಲಿ ನಾ ಭಜಿಸುವೆನು ಪ ಸಾರಿದ ಜನರ‌ಘದೂರದಿ ಓಡಿಸಿ ಧಾರುಣಿಯೊಳು ಸುರಸೌರಭಿ ಎನಿಸಿಹ ಅ.ಪ ಅವರ ಪದಜಲ ಈ ಭುವನತ್ರಯ ಪಾವನ ತರವೆಂದೆನಿಸುವದೋ ಅವರ ಪದಯುಗ ಕೋವಿದಜನರು ಭಾವದಿ ದಿನದಿನ ಸೇವಿಪರೋ ಅವರ ಹೃದಯದಿ ನಾರಾಯಣ ಚ - ಕ್ರಾವತಾರವ ಧರಿಸಿಹನೊ ಶ್ರೀವರ ಹರಿ ಕರುಣಾವಲೋಕನದಿ ದೇವಸ್ವಭಾವವ ನೈದಿಹರೋ 1 ಆವ ಮಾನವನಿವರಚರಣ ಸೇವಕತೆರನೆಂದೆನಿಸುವನ್ನೋ ಕೋವಿದ ಜನರೆಲ್ಲರು ಆವನ ದೇವೋತ್ತುಮನೆಂದೆನಿಸುವನು ಪಾವನಿ ಮುಖ ದೇವೋತ್ತುಮರೆಲ್ಲರು ಈ ವಿಧ ಮಹಿಮೆಯ ತೀವ್ರದಿ ತೋರುವ 2 ಅವರು ಅವನೀ ದೇವತೆಗಳಿಗೆ ಜೀವನವಿತ್ತು ಪೊರೆದಿಹರೋ ಪಾವಕಘಾಕಿದ ಹಾರವ ಮತ್ತೆ ಭೂವರನಿಗೆ ತಂದಿತ್ತಿಹರೋ ಮಾವಿನ ರಸದಲಿ ಬಿದ್ದಿಹ ಶಿಶುವಿಗೆ ಜೀವನವಿತ್ತು ಕಾಯ್ದಿಹರೋ ಶೈವನ ನಿಜಶೈವವ ಬಿಡಿಸೀ ತಮ್ಮ ಸೇವೆಯನಿತ್ತು ಕಾಯ್ದಿಹರೋ 3 ಸಲಿಲವ ತಂದಿರುತಿಹ ನರನಿಗೆ ಸುಲಲಿತ ಮುಕ್ತಿಯನಿತ್ತಿಹರೋ ಚಲುವ ತನಯನಾ ಪುಲಿನದಿ ಪಡೆದಿಹ ಲಲನೆಯ ಚೈಲದಿ ಕಾದಿಹರೋ ಸಲಿಲವು ಇಲ್ಲದೆ ಬಳಲಿದ ಜನಕೆ ಸಲಿಲವನಿತ್ತು ಸಲಹಿದರೋ ಇಳೆಯೊಳು ಯತಿಕುಲತಿಲಕರೆಂದೆನಿಸಿ ಸಲಿದಂಥದು ತಾವು ಸಲಿಸಿಹರೋ 4 ಅನುದಿನದಲಿ ತಮ್ಮ ಪದಕಮಲವನು ಮನದಲಿ ಬಿಡದೆ ಭಜಿಸುವರಾ ಜನರಿಗೆ ನಿಜಘನಸುಖವನು ಕೊಟ್ಟವ - ರನುಸರಿಸೀ ಇರುತಿಹರಾ ಮನೋ ವಾಕ್ಕಾಯದಿ ನಂಬಿದ ಜನಕೆ ಜನುಮವನ್ನುನೀಡರು ಇವರ ಘನಗುಣ ನಿಧಿ ಗುರುಜಗನ್ನಾಥ ವಿಠಲ - ನಣುಗಾಗ್ರೇಸರೆರೆನಿಸಿಹರಾ 5
--------------
ಗುರುಜಗನ್ನಾಥದಾಸರು
ನೀರಜಗಂಧಿಯೇ ಹೇಳೇ ಸುಳಿದವರಾರಮ್ಮಾ | ನೀರಜ ಶರಪತಿ ಕಾಣಮ್ಮಾ ಪ ಅರುಣನಖಾಂಗುಲಿ ಗುಲ್ಫ ಗೆಜ್ಜೆ ಕಾ- ಪುರ ನೂಪುರದ ಲೊಪ್ಪುವನವದಾರಮ್ಮಾ | ಸರಸಿಯೊಳಗಪೊಕ್ಕು ತಮನಸುವ ಬಗೆದು | ವರಶೃತಿ ತಂದವ ಕಾಣಮ್ಮಾ 1 ಕಲಿ ದಶನಂದದಿ ಜಂಘೆ ಪೊಂಬಾಳೆಯ | ಪರಿಯ ತೊಡೆಯುಳ್ಳುವ ದಾರಮ್ಮಾ | ಶರಧಿ ಮಥಿಸುವಂದುಗಿರಿನಿಲ್ಲದಿರೆ ಬಂದು | ಭರದಿ ಬೆನ್ನೆವಿತ್ತವ ಕಾಣಮ್ಮ2 ಕಾಂಚನ ವಸನನಿರಿಯ ಮ್ಯಾಲ ವಡ್ಯಾಣ ಮಿಂಚಿನ ಘಂಟೆಯ ದಾರಮ್ಮಾ | ಕ್ಷಿತಿ ವಯ್ದದನುಜನ ಶೀಳಿ ವಿ | ರಂಚಿ ಗುಳಹಿದವ ಕಾಣಮ್ಮಾ3 ಕಿರಿಡೋಳ್ಳಾತ್ರಿವಳಿಯ ನವರತ್ನ ಪದಕಿಹ | ಉರಸಿನ ವತ್ಸನವ ದಾರಮ್ಮಾ | ನರಹರಿ ರೂಪದಿ ಹಿರಣ್ಯಕನನು ಕೊಂದು | ಶರಣನ ಕಾಯ್ದವ ಕಾಣಮ್ಮಾ4 ಕೌಸ್ತುಭಹಾರ ಮೌಕ್ತಿಕದ ಕೊರಳಲಿಹ | ಹಸ್ತ ಕಡಗದವ ನಾರಮ್ಮಾ | ಸ್ವಸ್ತಿ ಎನುತ ಬಂದು ಬೇಡಿ ಬಲಿಯಾಗರ್ವ | ಸ್ವಸ್ತಿ ಮಾಡಿವನು ಕಾಣಮ್ಮಾ5 ಕ | ಪೋಲ ಹೊಳಹಿನವ ದಾರಮ್ಮಾ | ಏಳು ಮೂರು ಬಾರಿ ಕ್ಷತ್ರಿಯ ರಾಯರ ಸೋಲಿಸಿ ಬಂದವ ಕಾಣಮ್ಮಾ6 ಕರ್ಪೂರ ಕರಡಿಗಿ ಬಾಯಿ ಸಂಪಿಗೆಯಂತೆ | ತೋರ್ಪ ನಾಶಿಕದವ ದಾರಮ್ಮಾ | ದರ್ಪ ಮುರಿದು ರಾವಣನ ತಲಿಯ ಧರೆ | ಗೊಟ್ಟಿಸಿದವ ನಿವ ಕಾಣಮ್ಮಾ7 ಕುಡಿಗಂಗಳ ಭ್ರೂಲತೆಯ ಪೆರೆನೆಣೆಸಲು | ಪೊಡವಿಯೊಳಗ ನಂಬಿದ್ದ ಪಾಂಡವರನು | ಬಿಡದೆ ಸ್ಪಾಪಿಸಿದವ ಕಾಣಮ್ಮಾ8 ಕುರುಳು ಗೂದಲು ತಳಕದ ಮಾಲ್ಯ ಮೌಲಿಕ | ಧರಸಿದ ಮುಕುಟವ ದಾರಮ್ಮಾ | ತರಳನಾಗಿ ಮುಪ್ಪುರ ನಾರಿಯರ ವೃತ | ತ್ವರಿತದಿ ಅಳಿದವ ಕಾಣಮ್ಮಾ9 ನೋಡಲು ಮನಸಿಗೆ ಮೋಹನೆ ಮಾಡುವ | ಪ್ರೌಡದಿ ಮನವವ ದಾರಮ್ಮಾ | ರೂಢಿಲಿ ಕುದುರೆಯ ಏರಿ ಕಲಿಮಲವ | ಝಾಡಿಸಿದವನಿವ ಕಾಣಮ್ಮ10 ಸಹಜದಿ ಸವಿಸವಿ ಮಾತಲಿ ಸೋಲಿಸು | ತಿಹ ಸರ್ವರಿಗಿವ ದಾರಮ್ಮಾ | ಮಹಿಪತಿ ಸುತನ ಹೃದಯದಲಿ ನಿಂತು ತನ್ನ| ಮಹಿಮೆ ಬೀರಿಸುವವ ಕಾಣಮ್ಮಾ11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರಜದಳನಯನಾ ಅನ್ಯನಲ್ಲ ನಾ ನಿನ್ನ ದಾಸನುಯಂದು ಚಿನ್ಮಯ ಮೂರುತಿ ಶ್ರೀನಿವಾಸಹರೆ ಪ ಪಂಕಜೋದ್ಭವನಾ ಪಡೆದಂಥಾ ವೆಂಕಟಗಿರಿನಿಲಯ ವೇಣುನಾದಪ್ರೀಯಾ ಬಿಂಕಾದಿ ಶರಣರ ಪೊರೆದಂಥಾ ಚಕ್ರಧರ ಶೌರಿ ಮಹಾನುಭಾವ ಬಿಂಕದಾನವರಳಿದ ಬಲವಂತಾ ಶಂಕೆಯಿಲ್ಲದೆ ನಿಮ್ಮ ಸ್ಮರಿಸುವ ದಾಸರ ಕಿಂಕರ ಕಿಂಕರ ಕಿಂಕರನೆಂದು ಇನ್ನು 1 ವಾಸುಕಿಶಯನ ಶ್ರೀ ವಸುದೇವನಂದನ ಭೂಸರವಂದ್ಯ ಪುರಾಣ ಪುರುಷ ಈಶ ಜಗತ್ರಯ -----ರಾಜವರದಾ ಭೂಸುತೋನಾಯಕ ಭೂರಮಣಾ ಸಾಸಿರನಾಮದ ಸರ್ವೇಶನೆ ಕೃಷ್ಣಾ ಭೂಸೂರ ಕೀರ್ತಿ ಪ್ರಕಾಶನಾದ ಕೇಶವ ಗೋವಿಂದ ಕರುಣಿಸಿ ಕಾಯೋ ಎನ್ನ ಪಾದ ವೈಕುಂಠಾಧೀಶ 2 ಅಂಡಜಗಮನ ಭೂಮಂಡಲ ನಾಯಕ ಪುಂಡರೀಕಾ ವರದ ಪರಮಾತ್ಮನೆ ಚಂಡ ಪ್ರಚಂಡ ವೇದಾಂತ ರಹಸ್ಯನಾದ ಉದ್ದಂಡ ದೇವಾ ಕೊಂಡಾಡುವರ ನಿಮ್ಮ ಕರುಣಿಸಿ ಕೈಹಿಡಿದು ಕಾಯ್ವ ಭಾರವುಳ್ಳ ಘನನು ನೀನೂ ಪತಿ ` ಹೆನ್ನ ವಿಠ್ಠಲ' ನಿನ್ನಂದು ಸೇರಿದ ಅವರ ಹರುಷದಿ ಸಲಹೋ ಇನ್ನೂ 3
--------------
ಹೆನ್ನೆರಂಗದಾಸರು
ನೀರಜಾಕ್ಷೇರೆಲ್ಲ ಬಂದು ಮಾರಜನಕಗೆ ಆರತಿ ಎತ್ತಿರೇ ನಾರಿಮಣಿ ಶ್ರೀ ರುಕ್ಮಿಣಿಮಣಿಗೆ ಪ ವೇದವನು ಕದ್ದ ಖಳನ ಬೇಧಿಸಿದವಗೆ ಆದರದಿಂದ ಮಂದರವೆಂಬೋ ಭೂಧರ ತಂದವಗೆ 1 ಕುಂಭಣಿಯನ್ನು ಬಿಡದೆ ತಂದ ಕುಂಭಿಣಿರಮಣಗೆ ಕಂಭದಿ ಬಂದು ದನುಜ ಡಿಂಭನ ಕಾಯ್ದ ನೃಹರಿಗೆ 2 ಭೂಮಿ ಬೇಡಿದವನಿಗೆ ದುಷ್ಟ ಭೂಮಿಪ ಹರನಿಗೆ ಕಾಮಿನಿಚೋರನ ಶಿರವ ತರಿದ ಸ್ವಾಮಿ ರಾಮಗೆ 3 ಪಾಂಡುಸುತರ ಸಲಹಿ ಖಳರ ದಂಡಿಸಿದವಗೆ ಚಂಡತ್ರಿಪುರರ ಹೆಂಡರ ವ್ರತವ ಖಂಡನೆ ಮಾಳ್ಪಗೆ 4 ದುರುಳ ನೃಪರ ತರಿದ ಕಲ್ಕಿಗೆ ವರದ ನಾಮಗಿರಿ ಶ್ರೀಹರಿಯ ಚರಣಕಮಲಕೆ 5
--------------
ವಿದ್ಯಾರತ್ನಾಕರತೀರ್ಥರು
ನೀರಿನಿಂದಲೆ ಸರ್ವಫಲ ಬಾಹೋದು ನೀರಜಾಕ್ಷನ ಸೇವೆ ಮಾಳ್ಪ ಸುಜನರಿಗೆ ಪ ನೀರಿಲ್ಲದಲೆ ಯಾವ ಸಾಧನವು ನಡೆಯದು ನೀರಿಲ್ಲದಲÉ ಯಾಗ ತಪಸ್ಸು ನಿಲ್ಲುವದು ನೀರಿಲ್ಲದಲೆ ಸ್ನಾನ ಆಚಾರಹೀನವು ನೀರಿಲ್ಲದಲೆ ದೇವತಾರ್ಚನೆಯು ಇಲ್ಲವು 1 ನೀರೆಂದರೆ ಬರಿಯ ಜಡವಾದ ನೀರಲ್ಲ ನೀರಜಾಕ್ಷನು ಜಲದಿ ವಾಸವಾಗಿಹನು ವಾರಿಜಾಸನ ಮುಖ್ಯ ಸುರರೆಲ್ಲ ಹರುಷದಲಿ ನೀರಮಧ್ಯದೊಳಿರುವ ಹರಿಯಧ್ಯಾನಿಪರೆಲ್ಲ2 ಉದಯಕಾಲದಿ ಮುಖವ ತೊಳೆಯೆ ಜಲವಿರಬೇಕು ಮಧುಸೂದನನ ಮನೆಯ ಸಾರಿಸಲು ಜಲಬೇಕು ಹೃದಯ ಶುದ್ಧದಿ ಸ್ನಾನ ಮಾಡೆ ಜಲವಿರಬೇಕು ಮುದದಿ ಮಡಿಯುಡುವುದಕೆ ಉದಕವಿರಬೇಕು3 ಮೃತ್ತಿಕಾಶೌಚಕ್ಕೆ ಅಗತ್ಯಜಲವಿರಬೇಕು ನಿತ್ಯ ಗೋಸೇವೆಗೆ ಉದಕಬೇಕು ಮತ್ತೆ ಶ್ರೀ ತುಳಸಿಗೆರೆಯಲು ಉದಕವಿರಬೇಕು ಮತ್ತೆ ಹರಿಪೂಜೆಗಗ್ರೋದಕವು ಬೇಕು4 ಸಚ್ಚಿದಾನಂದನ ಅಭಿಷೇಕಕ್ಕೆ ಜಲಬೇಕು ಮತ್ತೆ ಪಾಕವು ಮಾಡೆ ಜಲವುಬೇಕು ನಿತ್ಯ ತೃಪ್ತನ ನೈವೇದ್ಯಕ್ಕೆ ಜಲವು ಬೇಕು ಅರ್ತಿಯಿಂದ ಅತಿಥಿ ಪೂಜೆಗೆ ಉದಕಬೇಕು 5 ಪಾದ ತೊಳಿಬೇಕು ಮತ್ತೆ ಅವರಿಗೆ ಸ್ನಾನಕಣಿ ಮಾಡಬೇಕು ಸುತ್ತ ಬೆಳೆÀಗಳಿಗೆಲ್ಲ ಮತ್ತೆ ನೀರಿರಬೇಕು ಸತ್ಯ ಮೂರುತಿ ಪಾದದಂಗುಷ್ಟದಲಿ ಜನಿಸಿದ6 ನಿತ್ಯ ಎರೆಯೆ ನೀರಿರಬೇಕು ಕುಸುಮ ಪುಷ್ಪದ ಗಿಡಕೆ ನೀರುಬೇಕು ವಸುದೇವಸುತನ ತೆಪ್ಪೋತ್ಸವಕೆ ಜಲಬೇಕು ಎಸೆವ ಕದಲಾರತಿಗೆ ಉದಕಬೇಕು 7 ನೀರಿನೊಳು ಹಾವಿನ ಮೇಲೆ ಮಲಗಿದ ಹರಿಯ ನಾಭಿನಾಳದ ತುದಿಯಲಿರುವ ಕಮಲದಲಿ ನೀರಜಾಸನನ ಪಡೆದಿರುವ ಮಹಿಮೆಯ ಕೇಳಿ ನೀರಿನಲಿ ಹರಿಯ ಅವತಾರ ರೂಪಗಳುಂಟು8 ನೀರಿನೊಳು ವಾರುಣಿಯಪತಿಯ ಶಯ್ಯದೊಳಿಹನು ನೀರಿನೊಳು ಮುಳುಗಿ ವೇದವ ತಂದನು ನೀರಿನೊಳು ಮುಳುಗಿ ಭಾರವ ಪೊತ್ತು ನಿಂತನು ನೀರಜಾಕ್ಷನು ನಾರಬೇರ ಮೆದ್ದಿಹನು 9 ನೀರಜೋದ್ಭವಪಿತನು ಕ್ರೂರರೂಪವ ತಾಳ್ದ ನೀರೆ ಅದಿತಿಯ ಪುತ್ರನಾಗಿ ನಿಂತ ನೀರಜಾಕ್ಷನು ಪರಶುವಿಡಿದು ಸಂಚರಿಸಿದನು ನೀರೆಗೋಸುಗ ಸಾಗರಕÉ ಸೇತುವೆಯ ಕಟ್ಟಿದನು10 ನೀರಿನೊಳು ಗಜದ ಶಾಪವ ಕಳೆದು ಪೊರೆದನು ನೀರೆ ದ್ರೌಪದಿಯ ಅಭಿಮಾನವನು ಕಾಯ್ದ ನೀರ ಮಧ್ಯದಿ ದ್ವಾರಕಾಪುರವ ರಚಿಸಿದನು ನೀರಜಾಕ್ಷಿಯರ ಕೂಡಿ ನೀರೊಳಗೆ ಆಡಿದನು 11 ಕಮಲ ಜಲದಲ್ಲಿಹುದು ಕಮಲನಾಭ ವಿಠ್ಠಲ ಜಲದೊಳೋಲ್ಯಾಡುವ ಶ್ರಮವ ಪರಿಹರಿಪ ಚಂದ್ರನು ಜಲದಿ ಪುಟ್ಟಿಹನು ಕಾಮಧೇನು ಐರಾವತವು ಪುಟ್ಟಿದ ಜಲವಯ್ಯ 12
--------------
ನಿಡಗುರುಕಿ ಜೀವೂಬಾಯಿ
ನೀಲ ಸುಂದರ ಲೀಲವಿಗ್ರಹನೆ ಪ ಭಂಜನ ಬಾರೈ ಉರುಟಣೆಗೆ ಅ.ಪ. ಸಾರಸ ರೇಖರಂಜಿತ ಪಾದಪಂಕಜಕೆ ನವ್ಯಮಾದ ಸುಗಂಧ ಚೂರ್ಣವ ನಿಂದು ಲೇಪಿಸುವೆ 1 ಫಾಲ ಫಾಲ ದೇಶದಿ ನಾಂ ಇಂದು ತಿಲಕವ ತಿದ್ದಿ ನಿಲವೆನು ಪ್ರಾಣ ನಾಯಕನೆ 2 ಸಾಧು ರಕ್ಷಣ ದಕ್ಷ ರಾಕ್ಷಸ ಶಿಕ್ಷ ಭುಜಯುಗಕೆ ಶ್ರೀಧರಿತ್ರೀಫಾಲ ಲೋಲನೆ ಗಂಧವ ಲೇಪಿಸುವೆ 3 ಕಂಬುಕಂಠ ಶ್ರೀಕಂಠ ಮಿತ್ರನೆ ನಿನ್ನಯ ಕಂಠಕೆ ನಾಂ ಅಂಬುಜೋಪಮ ಹಸ್ತದಿ ಗಂಧವ ನಿಂದು ಲೇಪಿಸುವೆ 4 ಚಕೋರ ಚಂದ್ರನೆ ಮಾಲೆಯನರ್ಪಿಸುವೆ ಧೇನುನಗರ ಶ್ರೀರಾಮಚಂದ್ರನೆ ವೀಟಿಯ ಸ್ವೀಕರಿಸೈ 5
--------------
ಬೇಟೆರಾಯ ದೀಕ್ಷಿತರು
ನೀಲಕಂಠ | ನೀಲಕಂಠ | ನೀಲಕಂಠ | ಪಾಲಯ ಪ ಗಾಳಿದೇವನ ಒಲಿಮೆ ಯಿಂದಕಾಲಕೂಟ ಮೆದ್ದ ಶಿವನೇ ಅ.ಪ. ಸುಕೃತ ಭೃಕುಟಿ ಭವನೆ ಕಳೆವೆ ಪಾಪ 1 ಕಾವೇರಿಕೆ ನರ್ಮದೇಗಳ್ | ಸೇರ್ವ ಸನಿಯ ಶೈಲದಲ್ಲಿ ||ಭಾವ ಜಾರಿ ನಿನ್ನ ಪ್ರಭವ | ತೋರ್ವೆ ಜ್ಯೋತಿರೂಪ ಭಾವ 2 ಸುರರು ನಗುವ ಪರಿಯು ಅಲ್ಲವೆ | ಶರಣ ಜನರ ಪೊರೆಯೆ ಸ್ವೀಕರ 3 ಚಾರು ಚರಣಘೋರ ಭವವ ತಾರಿಪ ಓಂ | ಕಾರ ಪ್ರತಿಮ ಕಾಯೊ ಎಮ್ಮ4 ಹರಿಯ ಪದದ ನೀರನೀಗ | ಹರಿಯ ದ್ವಾರದಿಂದ ತಂದೂಹರಿಯ ದ್ವಾರ ತೋರ್ಪ ಭಾವಿ | ಹರಿಂ5ಶಯ್ಯಗೆ ಎರೆವೆನಂi5 5 ಮನವ ಆಳ್ವನೆ ಮೊರೆಯ ಕೇಳಿ | ಮನದ ಮಲಿನ ತ್ವರದಿ ತಳ್ಳಿಮನದಾಭಿಧನ ಚಿಂತೆಯಲ್ಲಿ | ಮನವನಿರಿಸೊ ಕೃಷ್ಣನಲ್ಲಿ 6 `ದೂಃ` ಎಂತ ಮರುತ ನಿನ್ನ | ಶರೀರದೊಳಗೆ ಇರುವನಲ್ಲಿದೂರುವಾಸ ತೋರೊ ಶ್ರೀಪ | ಗುರು ಗೋವಿಂದ ವಿಠಲ ರೂಪ 7
--------------
ಗುರುಗೋವಿಂದವಿಠಲರು