ಒಟ್ಟು 2355 ಕಡೆಗಳಲ್ಲಿ , 108 ದಾಸರು , 1717 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಮವ ಮಮ ಕುಲಸ್ವಾಮಿ ಗುಹನತಜನ ದುರಿತಾಪಹ ಪ.ಭೀಮವೀರ್ಯ ನಿಸ್ಸೀಮಪರಾಕ್ರಮಧೀಮತಾಂವರ ನಿರಾಮಯ ಜಯ ಜಯ ಅ.ಪ.ಜ್ಞಾನಶಕ್ತಿ ಶತಭಾನುಭಾಸುರ ಪ್ರಸನ್ನಪಾವನ್ನಮೀನಕೇತನಸಮಾನ ಸಹಜ ಲಾವಣ್ಯಗಾನಲೋಲ ಕರುಣಾನಿಧಿ ಸುಮನಸ-ಸೇನಾನಾಥ ಭಾವನಿಸುತ ಸುಹಿತ 1ಪಟುತರಶಕ್ತಿ ಕುಕ್ಕಟ ಕುಲಿಶಾಭಯಶಯ ನಿರಪಾಯನಿಟಿಲಾಕ್ಷತನಯ ನಿಗಮಜÕ ಬಾಹುಲೇಯಕುಟಿಲ ಹೃದಯ ಖಲಪಟಲವಿದಾರಣತಟಿತ್ಸಹಸ್ರೋತ್ಕಟರುಚಿರಮಕುಟ2ಪಾವಂಜಾಖ್ಯ ಪವಿತ್ರ ಕ್ಷೇತ್ರಾಧಿವಾಸ ಸರ್ವೇಶದೇವ ಲಕ್ಷ್ಮೀನಾರಾಯಣಸ್ಮರಣೋಲ್ಲಾಸಸೇವಕ ವಿಬುಧಜನಾವಳಿಪಾಲಕಕೇವಲ ಸುಖಸಂಜೀವ ಜೀವನದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾರ್ತಾಂಡಕುಲದೀಶ ದಶರಥನುದರದಿಪುತ್ರನಾಗಿಯೆ ಜನಿಸಿ ರಾಘವ ವಿಶ್ವಾಮಿತ್ರರೆಜÕವಪಾಲಿಸಿ ತಾಟಕೀ ಮುಖ್ಯಧೂರ್ತದೈತ್ಯರ ಮಥಿಸಿಅಹಲ್ಯೆದೇವಿಯ ಪಾಲಿಸಿ ಅರ್ಥಿಯಲಿ ವಿಥಿಲೇಖೆಗೆಗಮಿಸುತ ಪೃಥ್ವಿಜಾತೆಯನೊಲಿಸಿ ಮಾರ್ಗದಿ ಕಾರ್ತವೀರ್ಯಾಂತಕನ ಭಂಗಿಸಿ ತ್ವರಿತದಿಂದಯೋಧ್ಯೆಗೈಸಿದ ರಾಮಸೀತೆಗೆ ಮುತ್ತಿನಾರತೀಯ ಬೆಳಗೀರೆ ಶೋಭಾನೆ 1ಮಲತಾಯಿ ಕೈಕೆಯ ಮಾತಿಗೋಸುಗ ಪೋಗಿ ನೆಲಸಿದನಾರಣ್ಯದಿ ಪೋಗಿಮೃಗರಾಮ ತರಲುಪೋಗಲು ಭರದಿ ಸೀತೆಯ ರಾವಣೇಶನೊಯ್ಯಲುಮಾಯದೀ ರಾಮಲಕ್ಷ್ಮಣರ ವನದಿ ಚಲಿಸುತಲಿಕಪಿವರರ ಸ್ನೇಹದಿಜಲಧಿಬಂಧಿಸಿ ರಾವಣಾದ್ಯರಗೆಲಿದು ಶರಣಗೆ ಪಟ್ಟಗಟ್ಟುತ ಲಲನೆಸಹ ನಡೆತಂದಯೋಧ್ಯೆಗೆ ರಾಮಸೀತೆಗೆ ಹರಳಿನಾರತೀಯಾ ಬೆಳಗೀರೇ ಶೋಭಾನೆ 2ಚಂದದಿ ಧರಣಿಯ ಪಾಲಿಸುತಿರೆ ರಾಮನೊಂದಪವಾದವಕೇಳಿಸೀತೆಯ ಘೋರಾರಣ್ಯದಿ ಬಿಡಲು ಪೇಳಿ ಗರ್ಭಿಣಿ ಸೀತೆಬಂದ್ವಾಲ್ಮೀಕಿಯರೊಳು ಬಾಳಿ ಪಡೆದು ಲವಕುಶರನಲ್ಲಿಚಂದದಲಿ ಪಾಲಿಸುತಿರೆ ಗೋವಿಂದನೆಜ್ಞಾಶ್ವವನು ಬಂಧಿಸಿಬಂದು ಕಲಹದಿ ನಿಜವನರಿತಾ ನಂದನರ ಕರೆತಂದಯೋಧ್ಯೆಗೆರಾಮಸೀತೆಗೆ ಕುಂದಣದಾರತೀಂiÀi್ಞ ಬೆಳಗೀರೆ ಶೋಭಾನೆ 3
--------------
ಗೋವಿಂದದಾಸ
ಯಾಕೆ ಕೈ ಬಿಡುವೆ ದೇವಾ |ತ್ರಿಜಗವನು ಸಾಕುವ ನೀನಭವ ||ಏಕೋ ಮೂರುತಿ ಶ್ರೀ ವೆಂಕಟಪತಿನಿನಗೆ ನಾ ಬೇಕಾದವನಲ್ಲವೆ ಸ್ವಾಮಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಬಾಲನ ಪತಿಕರಿಸಿ ಹಿರಣ್ಯಕನ | ಸೀಳಿ ರಕ್ಷಿಸಿದಂತೆ |ಶ್ರೀ ಲೋಲಾ ಗತಿಯೆಂಬೆ ||ಬ್ರಹ್ಮಸುತನಿಗೆಪಾಲನಮುದ್ರೆಯನಿತ್ತೆ ಸ್ವಾಮಿ |ಸಭೆಯೊಳು ದ್ರೌಪದಿ ಸ್ತುತಿಸೆ ನಿನ್ನ | ಅಭಿಮಾನ ಕಾಯ್ದೆ |ಗಂಡಇಭನಕ್ರನೊಳ .....................................ಧ್ರುವ ಅಂಬರೀಷಅಂಗದವಿಭೀಷಣ |ಪವನಜರುಕ್ಮಾಂಗದ |ಅವರಪಾಲಿಸಿದಂತೆ ರಕ್ಷಿಸು ಬಿಡದೆ ಎನ್ನ ||ಭವಹರಾ ಶ್ರೀ ಶಂಕರನಾತ್ಮಸಖಾ ||
--------------
ಜಕ್ಕಪ್ಪಯ್ಯನವರು
ಯಾಕೊ ದಯಬಾರದುಹರಿನಿನಗ್ಯಾಕೊ ದಯಬಾರದುಪ.ಶ್ರೀಕರ ಲೋಕೇಶ ಏಕಾನೇಕ ಸ್ವರೂಪ ಅ.ಪ.ಕಾಮಿತಾರ್ಥದಾಯಕರ ಸ್ವಾಮಿ ಲೋಕನಾಯಕಭೀಮವಿಕ್ರಮ ಶ್ರೀರಾಮ ನಿರಾಮಯ 1ಸುಂದರಿನಾಥ ಸುರೇಂದ್ರವಂದಿತಕಂದನ ಕಂದಾರವಿಂದದಳನಯನ 2ಅಕ್ಷರಬ್ರಹ್ಮ ಸಂರಕ್ಷಿಸು ನಮ್ಮಪಕ್ಷೀಂದ್ರವಾಹನ ಲಕ್ಷ್ಮೀನಾರಾಯಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾತಕೆ ಕೃಪೆಮಾಡದೆ ಯಿರುತಿಹೆ ಸಿರಿಯೇಪೀತಾಂಬರಧರ ತರುಣಿಯೆ ಪಪಾತಕಹಾರಿಣಿ ಭಾವಜನನೀಭಕ್ತ ಕುಟುಂಬಿನಿಭವಭಯ ನಾಶಿನಿ 1ದಾರಿದ್ರ್ಯಾಂಬುಧಿ ತರುಣೋಪಾಯವುತೋರಿಸು ರಘುಕುಲದೊರೆ ಸುಪ್ರಿಯಳೆ 2ರತ್ನಾಭರಣಯುಕ್ತ ಸುಗಾತ್ರೇರತ್ನಾಕರಸುತೇ ರಾಜೀವಾಲಯೇ 3ಹೇಮಭೂಧರ ಸ್ವಾಮಿನಿ ತುಲಸೀರಾಮದಾಸ ಸುಕ್ಷೇಮವು ನಿನ್ನದು 4
--------------
ತುಳಸೀರಾಮದಾಸರು
ಯೋಗಧರತಾತಕಘ ಲೋಕಪತಿ ದೇವ6ಪಾಹಿನಾರಾಯಣನೆಪಾಹಿವಾಸುಕಿಶಯನ |ಪಾಹಿಗರುಡಧ್ವಜನೆಪಾಹಿಕಮಲಾಕ್ಷ ಪಸಂವತ್ಸರಾಂಬರಧರ ನತಜನ ಪಾಲ |ಸಂವತ್ಸರ ಹರೇ ಕಾರುಣ್ಯ ನಿಧಿಯೇ ||ಸಂವತ್ಸರಕೆ ನಿನ್ನ ಸಮರಾರೊ ತ್ರಿಜಗದಿ |ಸಂವತ್ಸರ ಜಲಜಕೆ ಸಂವತ್ಸರುಪಮಾ1ಸಂವತ್ಸರಾಕ್ಷಸುತ ಗಜವೈರಿ ಸಂಹರನೆ |ಸಂವತ್ಸರಾದಿ ಸಂವತ್ಸರರಿಪು||ಸಂವತ್ಸರ ಕುವರನೆ ಸಂವತ್ಸರನೆ ಯನ್ನ |ಸಂವತ್ಸರವಳಿದು ಕೊಡು ಸಂವತ್ಸರ ಮತಿ2ಸಂವತ್ಸರ ಸಮಗ್ರ ಪ್ರಾಣೇಶ ವಿಠಲನೆ |ಸಂವತ್ಸರ ಸ್ವಾಮಿ ದೋಷ ದೂರ ||ಸಂವತ್ಸರ ಪಿತಸಿರಿಸಂವತ್ಸರನೇಕ್ಲೇಶ|ಸಂವತ್ಸರಮಾಡುದೀನ ಕಲ್ಪತರು3
--------------
ಪ್ರಾಣೇಶದಾಸರು
ರಕ್ತಾಕ್ಷಿ ಸಂವತ್ಸರ ಸ್ತೋತ್ರ156ಶರಣು ಶರಣು ರಕ್ತಾಕ್ಷಿ ವರ್ಷದ ಸ್ವಾಮಿ ಶ್ರೀ ನರಸಿಂಹನೇಶರಣು ದುರ್ಗಾರಮಣ ಜಗಜ್ಜನ್ಮಾದಿ ಕಾರಣ ಪಾಹಿಮಾಂ ಪಸರಸಿಜಾಸನ ಶಿವ ಶಕ್ರಾದಿ ಸುರಸುವಂದಿತ ಪಾದನೇಶ್ರೀ ರಮಾಯುತನಾಗಿ ನೀ ಸಂವತ್ಸರದ ನಾಯಕರೊಳುಇರುತ ಪ್ರಜೆಗಳ ಯೋಗ ಕ್ಷೇಮವ ವಹಿಸಿಪೊರೆವಿ ದಯಾನಿದೇ 1ರಾಜ ಸೋಮನು ಮಂತ್ರಿ ಭೃಗು ಸೇನಾಧಿಪತಿ ಬೃಹಸ್ಪತಿಪ್ರಜ್ವಲಿಪರ ವಿಸಸ್ಯನಾಯಕಶನಿಯು ಧಾನ್ಯ ಅಧಿಪನುರಾಜರಾಜೇಶ್ವರನೆ ನಿನ್ನ ಆಜÉÕಯಿಂದ ಚರಿಪರು 2ಶರಣು ಭಕ್ತರ ಕಾಯ್ವ ಕರುಣಾವಾರಿವಿಧಿನೀ ಸರ್ವದಾತರಿದು ಪಾಪವ ಪುಣ್ಯ ಒದಗಿಸಿ ಭಕ್ತಿ ಜ್ಞÕನ ಆಯುಷ್ಯಆರೋಗ್ಯವಿತ್ತು ಕಾಯೋಅಜಪಿತಪ್ರಸನ್ನ ಶ್ರೀನಿವಾಸನೇ3
--------------
ಪ್ರಸನ್ನ ಶ್ರೀನಿವಾಸದಾಸರು
ರಕ್ಷಿ ರಕ್ಷಿ ರಕ್ಷಿಸಯ್ಯ ಚಿದಾನಂದ ಸ್ವಾಮಿರಕ್ಷ ಶಿಕ್ಷ ಕರ್ತನಾದ ದಯದಿಂದಪದಾಸ ನಿಜವಲ್ಲವೆನೆ ಸಾಕ್ಷಿ ಬೇಕೆ ನಿನ್ನದಾಸರ ದಾಸನಾಗಲಿಕೆಏಸುಕಾಲ ಪರೀಕ್ಷೆ ನಿನ್ನ ನೋಡಲಿಕೆ ಎನ್ನಲೇಸುಹೊಲಬುನಿನ್ನನು ಬಿಡದು ಜೋಕೆ1ನಿನ್ನ ನೋಡೆ ನಾನು ಬೇರೆಯಲ್ಲವಯ್ಯಇದು ಮಾಡಿ ಬಂದ ಸುಕೃತವೇಯೆಲ್ಲನಿನ್ನವನ ನೀನೆ ಕೈವಿಡಿದೆಲ್ಲ ಕೇಳುನಿನ್ನೊಳಗೆನ್ನೊಳಗೆ ಭೇದವೇನೂ ಇಲ್ಲ2ಖೂನವಿಲ್ಲದ ಖೂನದಿಂದ ನಿನ್ನ ಕಂಡೆ ನಾಖೂನವಿದ್ದೂ ವಿಲ್ಲದಂತೆ ಬಲಗೊಂಡೆಧ್ಯಾನ ಮೌನವೆಲ್ಲವ ನಾ ಕಳಕೊಂಡೆಧ್ಯಾನವೆಂತು ನಿನ್ನನೆ ಭಜನೆಗೊಂಡೆ3ನಿನ್ನ ಪಾದವ ನಂಬಿಯೆ ಸಂತೋಷನಾದೆ ನಾನಿನ್ನ ಪಾಡಿ ಪೊಗಳಿ ವಿಶೇಷನಾದೆನಿನ್ನ ಲೀಲೆ ನೆನೆದು ನಾನೀಶನಾದೆನಿನ್ನ ನೋಡಿಯೆ ಕಂಡು ಜಗದೀಶನಾದೆ4ಕೋಟಿ ಶತಶಶಿ ಪ್ರಭೆಯ ತಾಳ್ದ ಅಂದವನ್ನುಪಾಟಿಸಿ ಪೊಗಳಬಲ್ಲೆನೆ ಮುಂದಾನೀಟೆನಿಪದೇವಗುರುಚಿದಾನಂದ ನಿನ್ನನೀಟಿನಂತೆ ನಿಲ್ಲಿಸು ಕರುಣದಿಂದ5
--------------
ಚಿದಾನಂದ ಅವಧೂತರು
ರಕ್ಷೀಸಬೇಕೆಮ್ಮನನುದಿನದಲ್ಲಿ |ಪಕ್ಷಿರಾಜನೆ ಹರೀಸ್ಯಂದನಾ ಸ್ವಾಮಿ ಪಇಂದ್ರಲೋಕಕ್ಕೆ ಪೋಗಿ ಕಲಹ ಮಾಡಿಪೀಯೂಷ|ತಂದನುಜರಿಗಿತ್ತ ಧೀರನೆ |ಸಿಂಧೂವಿನೊಳಗಿದ್ದಕೂರ್ಮಗಜಮಂದಿಯಾ |ತಿಂದು ದಕ್ಕಿಸಿಕೊಂಡ ವೀರನೇ 1ಪಾದಪ ಮುರಿದು ವಾಲಖಿಲ್ಲ್ಯೆರ ಪೋಷಿಸಿ |ಮೋದದಿಂದ ವರವು ಪಡಿಯೋ ||ಮಾಧವನಂಘ್ರಿ ಕಮಲದೊಳಗೆ ಇಟ್ಟ |ಹೇ ದಯಾಂಬುಧಿ ನಿನಗೆಣೆ ಯಾರೋ 2ಅರುಣಾನುಜ ಮಾತೆಯ ಬಯಕೆ ಪೂರೈಸೀದ |ಪರಮಸಮರ್ಥ ಭಕ್ತವತ್ಸಲಾ ||ಉರಗಾಶನನೆ ನಿನ್ನ ಪ್ರಾರ್ಥಿಸುವೆನುನಿತ್ಯ|ಹರಿಸೇವೆ ವಿನಹ ಮತ್ತೊಂದೊಲ್ಲೆನೊ 3ಪ್ಲವಗರ ಪಾಲಿಸಿದೆ ರಘುಜಾನ ಒಲಿಸಿದೆ |ತವಕಬಲಿವೈದ ಮುಕುಟ ತಂದೆ ||ದಿವಿಜರಿಗೆ ಸಹಾಯವಾದೆ ವಿಪ್ರರ ಕಾಯ್ದೆ |ಅವರಾರೇನರಿಯರೊ ನಿನ್ನ ಲೀಲೆ 4ಶ್ರೀನಾಥನ ಪಾದಾಬ್ಜದಲ್ಲಿನಿರತಮನ |ತಾನಿರುವಂತಾಗಲಿ ಖೇಚರಾ ||ಮೌನಿ ಕಶ್ಯಪ ಜಾತಾ ಲಾಲಿಸುವದೆನ್ನ ಮಾತಾ |ಪ್ರಾಣೇಶ ವಿಠಲನ ನಿಜದೂತ 5
--------------
ಪ್ರಾಣೇಶದಾಸರು
ರಂಗ ಕೊಳಲನೂದಲಾಗ |ಮಂಗಳಮಯವಾಯ್ತುಧರೆ-ಜ -ಪನಂಗಳು ಚೈತನ್ಯ ಮರೆದು |ರಂಗಧ್ಯಾನಪರರಾದರು ಅ.ಪಬಾಡಿದ ಮಾಮರಗಳು ಗೊನೆಯೊಡೆದವು |ತೀಡುತ ಮಾರುತ ಮಂದಗತಿಗೊಯ್ಯೆ ||ಬಾಡಿದ ಬರಲು ಫಲದ ಗೊಂಚಲು |ಪಾಡಲೊಲ್ಲವಳಿಕುಲಗಳು ||ಹೇಡಿಗೊಂಡವು ಜಕ್ಕವಕ್ಕಿ ಗಿಳಿ ಮಾ-|ತಾಡದೆ ಕಳೆಗುಂದಿದವು ಕೋಗಿಲೆ ||ಓಡಾಟ ವೈರಾಟ ಬಿಟ್ಟು ಖಗಮೃಗ |ಗಾಢ ನಿದ್ರಾವಶವಾದವು 1ಕೆಳಗಿನುದಕ ಉಬ್ಬೇರಿ ಬಂದುವು |ತುಳುಕಿ ಚೆಲ್ಲಾಡಿ ನಿಂದಳು ಯಮುನೆ ||ಮಳೆಯ ಮೋಡೊಡ್ಡಿ ಮೇಘಾಳಿ ಧಾರಿಟ್ಟುವು |ಕಲುಕರಗಿ ಕರಗಿ ನೀರಾದುವು ||ನಳಿನಚಂಪಕನಾಗಪುನ್ನಾಗಪಾ-|ಟಲ ಸೇವಂತಿಗೆ ಕುಂದ-ಮೊಲ್ಲೆ ಮಲ್ಲಿಗೆ ಬ-||ಕುಲ ಮಾಲತಿ ಜಾಜಿ ಪರಿಮಳಗೂಡಿ |ನೀಲಾಂಗನಂಘ್ರಿಗೆ ನೆರೆದುವು 2ಕೆಚ್ಚಲು ಬಿಗಿದು ತೊರೆದ ಮೊಲೆಯೊಳು |ವತ್ಸದೊಡಲಾಸೆಜರಿದುಎಳೆಹಲ್ಲ||ಕಚ್ಚದಲ್ಲಿಗಲ್ಲಿ ನಿಂದುವು ತಮ್ಮಯ |ಪುಚ್ಚವ ನೆಗಹಿ ನೀಂಟಿಸಿ ||ಅಚ್ಯುತನಾಕೃತಿ ನೋಡಲು ಸುರರಿಗೆ |ಅಚ್ಚರಿಯಾಯಿತು ಆವು ಕಂಡಾನಂದ ||ಪೆಚ್ಚಿ ಮುಕುಂದನ ಲೀಲಾವಿನೋದಕೆ |ಮೆಚ್ಚಿ ಕುಸುಮವ ಸುರಿದರು 3ಮುದ್ದು ಮೋಹನನ ಮಂಜುಳ ಸಂಗೀತ |ಸದ್ದನಾಲಿಸಿ ಗೋಪಾಂಗನೆಯರೆಲ್ಲ ||ಬುದ್ಧಿ ಸೂರಾಡಿ ತಮ್ಮಾಲಯವನೆ ಬಿಟ್ಟು |ಎದ್ದು ಪರವಶರಾದರು ||ಸಿದ್ದ ಮುನಿಜನರಿದ್ದ ಸಮಾಧಿಯಿಂ-|ದೆದ್ದೆದ್ದು ಕುಣಿದೆದ್ದರು ಎದುರಾಗಿ ||ಗದ್ದುಗೆಯರಸನ ಒಲಿಸಿಕೊಂಡರು |ಗೆದ್ದರು ಭವದ ಸಮುದ್ರವನು 4ಶ್ರೀಮನೋಹರ ಗೋಪಾಲ ಮೂರುತಿ |ಆ ಮಧು ಕುಂಜ ವನದಿ ತ್ರಿಭಂಗಿಯಲಿ ||ಹೇಮಾಂಬರವುಟ್ಟು ಗೀರುಗಂಧ ಕಸ್ತೂರಿ |ನಾಮ ಮುಕುಟದ ಬೆಳಕಿನಲಿ ||ದಾಮವನಮಾಲೆ ಶ್ರೀವತ್ಸಕೌಸ್ತುಭ|ಸ್ವಾಮಿ ಪುರಂದರವಿಠಲರಾಯನ |ರಾಮಶ್ರಿ-ಗುಂಡಶ್ರಿ ಮೇಘರಂಜನೆ ಪಾಡಿ |ಸಾಮಗಾನಪ್ರಿಯ ನಮೊ ಎಂದರು 5
--------------
ಪುರಂದರದಾಸರು
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ರಂಗ ರಂಗ ಎಂಬ ನಾಮವ ನೆನೆವರ |ಸಂಗದೊಳಿರಿಸು ಎನ್ನ ಪಅಂಗದೊಳ್ಲೆವರು ದೆಸೆದಸೆಗೆಳೆಯುವ |ಭಂಗವ ಬಿಡಿಸೊ ಹರಿಯೆ-ಸ್ವಾಮಿ ಅ.ಪಹರೆಕೃಷ್ಣ ಎಂದೆಂಬೆಜಿಹ್ವೆತಾನಿರುತಿರೆ |ಬರಿಯೆ ಮಾತಾಡುವೆ ನಾ ||ಗುರು-ಹಿರಿಯರ ವಂದನೆಗೆ ಕರ-ಶಿರವಿರೆ |ಗುರುವಹಂಕಾರತನ ||ಪರಿಪರಿ ಪುಷ್ಪದಲಿ ಪೂಜಿಸದೆ ಅಚ್ಯುತನ |ಮರೆತಿಹೆ ನಾನನುದಿನ |ಅರಿವ ನೋಡಿದರೆ ಎನ್ನಲಿ ಕಾಣೆನೈ ದೇವ |ಮೊರೆಹೊಕ್ಕೆ ಸಲಹೊ ಎನ್ನ-ಸ್ವಾಮಿ 1ವೇದ ಶಾಸ್ತ್ರ ಪುರಾಣ ನಾಮವ ನೆನೆವರ |ಚೋದ್ಯವ ನಾನರಿಯೆನು ||ಹಾದಿಬೀದಿ ತಿರುಗುವ ಜಾರಸ್ತ್ರೀಯಳ ಕಂಡು-ವಿ-|ನೋದಗಳ ಮಾಡುತಿಹೆನು ||ಮಾಧವಗೋವಿಂದ ಎನ್ನದೆ ಕಾಲನ |ಬಾಧೆಗಳಿಗೊಳಗಾದೆನೊ ||ಈ ಧರೆಯೊಳಗೆನ್ನ ರಕ್ಷಿಸುವವರ ಕಾಣೆ |ಶ್ರೀಧರ ನೀನೆ ಸಲಹೊ-ಸ್ವಾಮಿ 2ಮಡದಿ-ಮಕ್ಕಳಿಗೆಲ್ಲ ಒಡವೆ ಬೇಕೆಂಬುವ |ಕಡುಲೋಭತನವ ಬಿಡಿಸೊ ||ಅಡಿಗೆ ಅಡಿಗೆ ನಾರಾಯಣನೆಂಬ ನಾಮವನು |ನುಡಿವ ನಾಲಗೆಗಿರಿಸೊ ||ಪೊಡವಿಯೊಳುಪುರಂದರವಿಠಲರಾಯನೆ ನಿನ್ನ |ಅಡಿಯದಾಸನೆನಿಸೊ-ಸ್ವಾಮಿ 3
--------------
ಪುರಂದರದಾಸರು
ರಂಗನಾಯಕಸ್ವಾಮಿ ರಾಜೀವಲೋಚನ ಬೆಳಗಾಯಿತೇಳೆನ್ನುತಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳುಶೃಂಗಾರದ ನಿದ್ರೆ ಸಾಕೆನ್ನುತಪ.ಪಕ್ಷಿರಾಜನು ಬಂದು ಬಾಗಿಲೊಳಗೆನಿಂದುಅಕ್ಷಿ ತೆರೆದು ಬೇಗ ಈಕ್ಷಿಸೆಂಬ ||ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತಸೂಕ್ಷ್ಮದಲಿ ನಿನ್ನನು ಸ್ಮರಿಸುವುವೊ ಕೃಷ್ಣ 1ಸನಕ - ಸನಂದನ - ಸನತ್ಸುಜಾತರು ಬಂದುವಿನಯದಿ ಕೈಮುಗಿದು ಓಲೈಪರು ||ಘನಶುಕ - ಶೌನಕ - ವ್ಯಾಸ ವಾಲ್ಮೀಕರುನೆನೆದು ಕೊಂಡಾಡುವರೊ ಹರಿಯೇ 2ಸುರರು ಕಿನ್ನರರು ಕಿಂಪುರುಷರು ಉರಗರುಪರಿಪರಿಯಲಿ ನಿನ್ನ ಸ್ಮರಿಸುವರು ||ಅರುಣನು ಬಂದುದಯಾಚಲದಲ್ಲಿ ನಿಂದಕಿರಣ ತೋರುವ ಭಾಸ್ಕರನು ಶ್ರೀ ಹರಿಯೇ 3ಪದುಮನಾಭನೆ ನಿನ್ನ ನಾಮಾಮೃತವನುಪದುಮಾಕ್ಷಿಯರು ತಮ್ಮ ಮನೆಯೊಳಗೆ ||ಉದಯದೊಳೆದ್ದು ಸವಿದಾಡುತ ಪಾಡುತದಧಿಯ ಕಡೆವರೇಳು ಮಧುಸೂದನ ಕೃಷ್ಣ 4ಮುರುಮಢನನೆ ನಿನ್ನ ಚರಣದ ಸೇವೆಯಕರುಣಿಸಬೇಕೆಂದು ತರುಣಿಯರು ||ಪರಿಪರಿಯಿಂದಲಿ ಸ್ಮರಿಸಿ ಹಾರೈಪರುಪುರಂದರವಿಠಲ ನೀನೇಳೊ ಹರಿಯೇ 5
--------------
ಪುರಂದರದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರಾಘವನಾಡಿದ ಮಾತಿಗಾಂಜನೇಯ ಬಿನ್ನವಿಸುವದು |ಈಗ ಪೇಳುವೆ ಸಜ್ಜನರಾಲಿಸುವದು ಪಆ ರವಿನಂದನನು ತಾ ಮೇರೆ ಮಾಡಿ ಅಟ್ಟಿದನು |ವಾನರರುಗಳನು ತಿಂಗಳು ಮೀರಿತಿಂದಿಗೆ ||ಮಾರುತಿ ಕೇಳೀ ಮಾತು ಇನ್ನಾರ ಕಾಣೆ ಬಲ್ಲಿದರ |ನಾರಿಯೆಲ್ಲಿಹಳೋ ವಾರ್ತೆ ತಾರೋ ನೀ ಪೋಗಿ 1ಸ್ವಾಮಿ ಪಾಲಿಸೊ ಅಪ್ಪಣೆ ನಾ ಮುಂಚೆ ಪೋಗುವೆ |ತಡವ ಮಾಡದೆ ಎಲ್ಲೀಗೆನ್ನ ಭೂಮಿಜಾ ರಮಣ ||ಈ ಮುದ್ರೆ ಕೊಂಡು ಪೋಗೋ ಶಾಮಲಾಪತಿ ದಿಕ್ಕಿಗೆ |ಸಮುದ್ರ ದಾಟಿ ವೇಗಪಾವಮಾನಿಕೇಳೋ 2ಭೂತಲಾಕಾಶ ಲೋಕಾದಿ ಪಾತಾಳದೊಳಗಿರಲಿ |ನಾ ತರುವೇನು ವಾರ್ತೆ ಜಗನ್ನಾಥಪರಾಕು||ಹೇತರಳತ್ರಿಲೋಕ ವಿಖ್ಯಾತನಾಗಿಹ ರಾವಣ |ಪಾತಕಕೊಂಡು ಪೋಗಿಹ ಸೀತೆಯ ಕೇಳು 3ಬುದ್ಧಿದೇವ ನೀ ಕೊಟ್ಟಂಥ ಬುದ್ಧಿಯಿಂದಲೇ ಅವನ |ಗುದ್ದಿ ಸರ್ವ ಬಲವನ್ನೂ ಒದ್ದು ಬರುವೆನೊ ||ಮುದ್ದು ಕಂದ ರಕ್ಕಸರವಧ್ಯರೋವರಪಡೆದು |ರುದ್ರನಿಂದ ಮಾಡದಿರೊ ಗದ್ದಲ ಕೇಳೋ 4ತಂದೆ ರಾಮಾ ನಿನ್ನ ದಯೆಯಿಂದ ಈಡಲ್ಲವೊ ಯನಗೆ |ನಂದಿಧ್ವಜಾ ಈ ರಕ್ಕಸರೊಂದು ತೃಣವೋ ||ಕಂದ ಈ ವೇಳೆಯೊಳೇನು ಬಂದುದನು ಭೋಗಿಸಿ ನಾನು |ಕೊಂದು ಹಾಕುವ ದಿನವೂ ಮುಂದುಂಟು ಕೇಳೋ5ದೇವಿಯ ನೋಡಿ ಬರುವಾಗ ತಾವಂತು ಕೆಣಕಲು ದಾ- |ನವರು ಸುಮ್ಮನಿರಲೇನು ದೇವದೇವೇಶ ||ಕೋವಿದಾಗ್ರೇಶನೆ ನೀನು ಸಾವಿರಾಳಿಗೆ ಒಬ್ಬನೇ |ಆ ವಿಚಾರ ಮನಕೆ ತರುವದೇ ಕೇಳೋ 6ಹೇಳಿದ ಮಾತು ಕಟ್ಟಿದ ಕೂಳು ನಿಲ್ಲವೊ | ಆ ವನ-ದೊಳೇನಹದೊ ಬಲ್ಲೆನೇ ಪ್ರಾಣೇಶ ವಿಠಲಾ ||ಬಾಲಕ ಹನುಮಂತ ನಿನ್ನೊಳಗೆನ್ನಾ ರಾಣಿಯಲ್ಲಿ- |ಹಳೋ ನೋಡಿ ಬರುವುದಕಾಲಸ್ಯ ಕೇಳೋ 7
--------------
ಪ್ರಾಣೇಶದಾಸರು