ಒಟ್ಟು 2143 ಕಡೆಗಳಲ್ಲಿ , 112 ದಾಸರು , 1724 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನುಜ ವಿಶ್ವಾಸ ಬೇಡ ವನಿತೇರೊಳ್ಮನುಜ ವಿಶ್ವಾಸ ಬೇಡ ತಿಳಿದು ಪ.ನಗೆಮೊಗದಬಲೇರ ಬೆಗಡು ಸ್ನೇಹದಕಿಂತಹೆಗಲ ಶೂಲವೆ ಸುಖವುಸುಗುಣವಿಲ್ಲದ ನರ್ಕಸೌಖ್ಯ ಬೇಕಾದರೆವಿಗಡೆಯರ್ಸಖ್ಯವೆ ಸಾಕು ತಿಳಿದು 1ಮಹಪ್ರೇಕ್ಷರಾದರ ಅಹಿತಕಾರಿಣಿಮಾಯೆಸಹಜ ತಾಮಸರೂಪಿಯಐಹಿಕಾಮುಷ್ಮಿಕದ ಬಹು ಪುಣ್ಯ ಕೆಡಿಸುವಕುಹಕಕೃತ್ರಿಮಶೀಲೆಯ ತಿಳಿದು2ಗುರುಹಿರಿಯರ ಭಕ್ತ್ಯಾಚರಣೆಗೆ ಪ್ರತಿಕೂಲೆತ್ವರಿತ ಕಾಮುಕಿ ಮೋಹಿಯಧರೆಯೊಳಭಿಜÕರ ಮರುಳು ಮಾಡುವ ಬುದ್ಧಿಭರಿತೆ ನಿಷ್ಠುರೆ ನೀಚೆಯ ತಿಳಿದು 3ಎನಿತಿಲ್ಲ ಪತಿವ್ರತೆ ವನಿತೇರವರೆ ನಾಕಾವನಿಯ ಪಾವನ ಮಾಳ್ಪರುಅನುದಿನವರ ನಾಮ ನೆನವಿಗಿರಲಿ ಮಿಕ್ಕಬಿನುಗುನಾರೇರ ನೆಚ್ಚದೆ ತಿಳಿದು4ಪ್ರಸನ್ವೆಂಕಟೇಶಪಾದಬಿಸಜಾರ್ಚನಾನುಕೂಲೆಯಾದಸಿಯಳೆ ಶುಭಗುಣಳುಹುಸಿಢೌಳಿಕಾರ್ತಿ ದುವ್ರ್ಯಸನಿಯನಾಳ್ವಮಾನಿಸಗೆ ಸುಖವೆ ಸ್ವಪ್ನವು ತಿಳಿದು 5
--------------
ಪ್ರಸನ್ನವೆಂಕಟದಾಸರು
ಮನೆಯೊಳಗಾಡೊ ಗೋವಿಂದ-ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ಪನೊಸಲಿಗೆ ತಿಲಕವನಿಡುವೆ-ಅಚ್ಚ-|ಹೊಸಬೆಣೆಯಿಕ್ಕಿ ಕಜ್ಜಾಯವ ಕೊಡುವೆ ||ಹಸನಾಧಾಭರಣಗಳಿಡುವೆ-ಚಿಕ್ಕ-|ಹಸುಳೆ ನಿನ್ನನು ನೋಡಿ ಸಂತೋಷಪಡುವೆ 1ಅಣ್ಣಯ್ಯ ಬಲರಾಮಸಹಿತ-ನೀ-|ನಿನ್ನೆಲ್ಲಿಯಾದರೂ ಆಡುವುದು ವಿಹಿತ ||ಹೆಣ್ಣುಗಳೇಕೋ ಸಂಗಾತ-ರಂಗ |ಬಿನ್ನಪಪರಿಪಾಲಿಸೊ ಜಗನ್ನಾಥ2ಜಾರನೆನಿಸಿಕೊಳಲೇಕೆ-ರಂಗ-|ಚೋರನೆನಿಸಿಕೊಂಬ ದೂರು ನಿನಗೇಕೆ ||ವಾರಿಜಾಕ್ಷಿಯರ ಕೂಡಲೇಕೆ-ನಮ್ಮ-|ಪುರಂದರವಿಠಲರಾಯ ಎಚ್ಚರಿಕೆ 3
--------------
ಪುರಂದರದಾಸರು
ಮರುಳು ಮಾಡಿಕೊಂಡೆಯಲ್ಲೇ - ಮಾಯಾದೇವಿಯೆ ಪಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಪ್ಪಂತೆ ಅ.ಪಜಾÕನಿಗಳುನಿತ್ಯಅನ್ನ-ಪಾನದಿಗಳನ್ನು ಬಿಟ್ಟು |ನಾನಾವಿಧ ತಪವಿದ್ದರು-ಧ್ಯಾನಕೆ ಸಿಲುಕದವನ 1ಸರ್ವಸಂಗವ ಬಿಟ್ಟು ಸಂ-ನ್ಯಾಸಿಯಾದ ಕಾಲಕು |ಸರ್ವದಾ ತನ್ನೆದೆಯ ಮೇಲೆ ಬಿಡದೆ ನಿನ್ನ ಧರಿಸಿಪ್ಪಂತೆ 2ಪ್ರಳಯಕಾಲದಲ್ಲಿ ಆಲ-ದೆಲೆಯ ಮೆಲೆ ಮಲಗಿದ್ದಾಗ |ಹಲವು ಆಭರಣಂಗಳು-ಜಲವು ಆಗಿ ಜಾಣತನದಿ 3ರಂಗನು ಭುಲೋಕದಿ-ಭುಜಂಗ ಗಿರಿಯೊಳಾಲ ಮೇಲು |ಮಂಗಪತಿಯಾಗಿ ನಿನ್ನ-ಅಂಗೀಕರಿಸುವಂತೆ 4ಮಕ್ಕಳ ಪಡೆದರೆ ನಿನ್ನ-ಚೊಕ್ಕತನವು ಪೋಪುದೆಂದು |ಪೊಕ್ಕುಳೊಳು ಮಕ್ಕಳ ಪಡೆದು-ಕಕ್ಕುಲಾತಿ ಪಡುವಂತೆ 5ಎಡಕೆ ಭೂಮಿ ಬಲಕೆ ಶ್ರೀಯು-ಎದುರಿನಲ್ಲಿ ದುರ್ಗಾದೇವಿ |ತೊಡೆಯ ಮೇಲೆ ಲಕುಮಿಯಾಗಿ- ಬಿಡದೆ ಮುದ್ದಾಡುವಂತೆ 6ಎಂದೆಂದಿಗೂ ಮರೆಯೆ ನಿನ್ನಾ-ನಂದದಿ ಜನರಿಗೆಲ್ಲ |ತಂದು ತೋರೇ ಸ್ವಾಧೀನ ಪು-ರಂದರವಿಠಲ ಹರಿಯ 7
--------------
ಪುರಂದರದಾಸರು
ಮಹಾಲಕ್ಷ್ಮಿ50ದಯಮಾಡಮ್ಮ ದಯಮಾಡಮ್ಮಹಯವದನನ ಪ್ರಿಯೆ ಪವಿನಯದಿಂದ ಬೇಡುವೆನೆ ಕಮಲನೇತ್ರೆಯೆ ಅ.ಪಶಂಬರಾರಿಪಿತನ ರಾಣಿ ನಂಬಿಸ್ತುತಿಸುವೆಅಂಬುಜನಾಭನ ಧ್ಯಾನಸಂಭ್ರಮಎನಗೀಯೆ1ಗೆಜ್ಜೆಪಾದ ಧ್ವನಿಗಳಿಂದ ಮೂರ್ಜಗ ಮೋಹಿಸುತ್ತಸಜ್ಜನರ ಸೇವೆಗೊಳ್ಳುತ ಜನಾರ್ದನನ ಪ್ರೀತೆ 2ತ್ರಿಗುಣಾಭಿಮಾನಿಯೆ ನಿನ್ನ ಪೊಗಳುವ ಭಕ್ತರಬಗೆ ಬಗೆ ತಾಪತ್ರಯಗಳ ಕಳೆದುಮಿಗೆ ಸೌಖ್ಯವ ನೀಯೆ 3ಪದ್ಮಾಕ್ಷಿಯೆ ಪದ್ಮಸದನೆ ಪದ್ಮಪಾಣಿಯೆಪದ್ಮನಾಭನಗೂಡುತಲಿ ಹೃತ್ಪದ್ಮದಲಿ ಪೊಳೆಯೆ 4ಕನಕಾಭರಣಗಳಿಂದಲಿ ಪೊಳೆಯುವ ಕಮಲನೇತ್ರೆಯೆಕಮಲನಾಭವಿಠ್ಠಲನ ಕೂಡಿಕರುಣದಿ ಬಾರೆತಾಯೆ 5
--------------
ನಿಡಗುರುಕಿ ಜೀವೂಬಾಯಿ
ಮಾಮವ ಯತಿಕುಲೋತ್ತುಂಗ ಪಶ್ರೀಮನೋಹರ ರಘು - ರಾಮ ಪದದ್ವಯತಾಮರಸ- ಯುಗ-ಭೃಂಗಅ.ಪಭರ್ಜಿತ ದೋಷತರಂಗ1ಸಾಧಿತ ಹರಿಮತ - ಭೇದಿತಪÀರಮತಛೇದಿತ - ಮಾಯಿ - ಪತಂಗ 2ತೋಷಿತಯದುವರ - ಪೋಷಿತದ್ವಿಜಕುಲದೂೀಷಿತ - ದುರ್ಜನ - ಸಂಘ 3ಮೋದಿತಸುಜನಾ - ರಾಧಿತ ಸುರಗಣಾ -ಸಾದಿತ ಶ್ರೀಹರಿಯಂಗ 4ದಾತಗುರುಜಗ- ನ್ನಾಥವಿಠಲಪದಪಾಥೋದ್ಭವ ಯುಗ ಸಂಗಾ 5
--------------
ಗುರುಜಗನ್ನಾಥದಾಸರು
ಮಾರ್ತಾಂಡಕುಲದೀಶ ದಶರಥನುದರದಿಪುತ್ರನಾಗಿಯೆ ಜನಿಸಿ ರಾಘವ ವಿಶ್ವಾಮಿತ್ರರೆಜÕವಪಾಲಿಸಿ ತಾಟಕೀ ಮುಖ್ಯಧೂರ್ತದೈತ್ಯರ ಮಥಿಸಿಅಹಲ್ಯೆದೇವಿಯ ಪಾಲಿಸಿ ಅರ್ಥಿಯಲಿ ವಿಥಿಲೇಖೆಗೆಗಮಿಸುತ ಪೃಥ್ವಿಜಾತೆಯನೊಲಿಸಿ ಮಾರ್ಗದಿ ಕಾರ್ತವೀರ್ಯಾಂತಕನ ಭಂಗಿಸಿ ತ್ವರಿತದಿಂದಯೋಧ್ಯೆಗೈಸಿದ ರಾಮಸೀತೆಗೆ ಮುತ್ತಿನಾರತೀಯ ಬೆಳಗೀರೆ ಶೋಭಾನೆ 1ಮಲತಾಯಿ ಕೈಕೆಯ ಮಾತಿಗೋಸುಗ ಪೋಗಿ ನೆಲಸಿದನಾರಣ್ಯದಿ ಪೋಗಿಮೃಗರಾಮ ತರಲುಪೋಗಲು ಭರದಿ ಸೀತೆಯ ರಾವಣೇಶನೊಯ್ಯಲುಮಾಯದೀ ರಾಮಲಕ್ಷ್ಮಣರ ವನದಿ ಚಲಿಸುತಲಿಕಪಿವರರ ಸ್ನೇಹದಿಜಲಧಿಬಂಧಿಸಿ ರಾವಣಾದ್ಯರಗೆಲಿದು ಶರಣಗೆ ಪಟ್ಟಗಟ್ಟುತ ಲಲನೆಸಹ ನಡೆತಂದಯೋಧ್ಯೆಗೆ ರಾಮಸೀತೆಗೆ ಹರಳಿನಾರತೀಯಾ ಬೆಳಗೀರೇ ಶೋಭಾನೆ 2ಚಂದದಿ ಧರಣಿಯ ಪಾಲಿಸುತಿರೆ ರಾಮನೊಂದಪವಾದವಕೇಳಿಸೀತೆಯ ಘೋರಾರಣ್ಯದಿ ಬಿಡಲು ಪೇಳಿ ಗರ್ಭಿಣಿ ಸೀತೆಬಂದ್ವಾಲ್ಮೀಕಿಯರೊಳು ಬಾಳಿ ಪಡೆದು ಲವಕುಶರನಲ್ಲಿಚಂದದಲಿ ಪಾಲಿಸುತಿರೆ ಗೋವಿಂದನೆಜ್ಞಾಶ್ವವನು ಬಂಧಿಸಿಬಂದು ಕಲಹದಿ ನಿಜವನರಿತಾ ನಂದನರ ಕರೆತಂದಯೋಧ್ಯೆಗೆರಾಮಸೀತೆಗೆ ಕುಂದಣದಾರತೀಂiÀi್ಞ ಬೆಳಗೀರೆ ಶೋಭಾನೆ 3
--------------
ಗೋವಿಂದದಾಸ
ಮುಕ್ಕ ನಿನ್ನ ನಡತೆ ನೋಡೋಮುಕ್ಕ ನಿನ್ನ ನಡತೆ ನೋಡೋತಕ್ಕ ಯಮನ ಶಿಕ್ಷೆಯಿಹುದುಸೊಕ್ಕ ಬೇಡವೋ ಮುಂದೆ ದುಃಖಗಳಿಸಿಹರೊಕ್ಕ ಕಕ್ಕಸಬಡುವೆಯೋ ಕಾಸದು ಹೋದರೆದಕ್ಕಿಸಿಕೊಂಬೆಯಾ ಎಲೆ ಹುಚ್ಚು ಮೂಳಪಗುರುಹಿರಿಯರ ನಿಂದೆ ಮಾಡಿಅವರಚರಣಸ್ಥಳವ ಜರೆದಾಡಿ ದುಷ್ಟದುರುಳರ ಜೋಡುಗೂಡಿ ನೀನುಬರಿದೆ ಆಯುಷ್ಯ ಕಳೆದೆ ಓಡಾಡಿ ಎಲೆಖೋಡಿಭರಭರದಿಂದಿಳಿವರು ಕಾಲನ ದೂತರುಕೊರಳನೆ ಕಡಿವರು ಎಲೆ ಹುಚ್ಚು ಮೂಳ1ನಿನ್ನನು ನೀನೇ ನೋಡಿಕೊಂಬೆ ನಾನುಚೆನ್ನಾಗಿ ಇಹೆನು ಎಂದೆಂಬೆ ಹುಚ್ಚುಕುನ್ನಿಯಂತೆ ಓಡಾಡಿ ಒದರಿಕೊಂಬೆಜಾರಕನ್ನೆಯರ ಜೋಡುಗೊಂಬೆ ನಾಕಾಣೆನೆಂಬೆಇನ್ನೇನು ಹೇಳಲಿ ಕಾಲನ ದೂತರುಬೆನ್ನಲಿ ಸುಳಿವರು ಎಲೆ ಹುಚ್ಚು ಮೂಳ2ಹೆಂಡತಿ ನೋಡಿ ಹಲ್ಲು ತೆರೆವೆ ಆಕೆಯಗೊಂಡೆ ಚವುರಿ ನೋಡಿ ಬೆರೆವೆಕಂಡ ಕಂಡ ವಿಷಯಕ್ಕೆ ಮನವೊಲಿದೆ ಅಂಟಿಕೊಂಡಿವೆ ಅಜ್ಞಾನ ಮರೆವೆಚಂಡ ಯಮದೂತರುಚಂಡಿಕೆಹಿಡಿದುಮಂಡೆಗೆ ಒದೆವರು ಎಲೆ ಹುಚ್ಚು ಮೂಳ3ಬಾಲೆಯ ಸುತರ ನಂಬುವೆಯೋ ಕೊಪ್ಪವಾಲೆಗಳ ಮಾಡಿಸಿ ಇಡುವ ಯಮನಾಳುಗಳು ಕೈ ಬಿಡುವರೇನೋ ನಿನ್ನಬಾಳು ವ್ಯರ್ಥವಾಯಿತು ಬಿಡಿಪರಿಲ್ಲವೋಸೀಳುವೆನೆನುತಲಿಕಾಲದೂತರುಕಾಲ್ಹಿಡಿದೆಳೆವರೋ ಎಲೆ ಹುಚ್ಚು ಮೂಳ4ಇನ್ನಾದರೂ ಜ್ಞಾನವ ತಿಳಿಯೋಚೆನ್ನಾಗಿ ಧ್ಯಾನದಿ ಬಲಿಯೋ ಕಂಡುನಿನ್ನೊಳು ಥಳಥಳ ಹೊಳೆಯೋನಿನ್ನ ಜನ್ಮ ಜನ್ಮವೆಲ್ಲ ಕಳೆಯೋಬ್ರಹ್ಮನಾಗಿ ಬೆಳೆಯೋರತ್ನದೊಳಗೆ ರತ್ನ ಬೆಳಗಿದಂತೆಚೆನ್ನ ಚಿದಾನಂದ ನೀ ನಿತ್ಯನಾಗೋ5
--------------
ಚಿದಾನಂದ ಅವಧೂತರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುತ್ತು ರತ್ನದಕೋಲಮತ್ತಮಲ್ಲಿಗಿಕೋಲತತ್ವ ಸೂಸ್ಸಾಡುವಕೋಲಮಿತ್ರೆಯರು ಹರುಷದಿ ಎತ್ತಿ ಕೋಲ್ಹಾಕುವಅತ್ಯಂತ ಸೊಬಗಿನಕೋಲಪ.ನಳಿನಾಕ್ಷಿಯರ ಮನ ಕೊಳಲೂದಿ ರಾತ್ರಿಲೆಸೆಳಿದೆಲ್ಲ್ಯೊಕಪಟಭಾವದಲೆ ಕೃಷ್ಣಸೆಳಿದೆಲ್ಲ್ಯೊಕಪಟಭಾವದಲೆಎಳೆಯ ಮಕ್ಕÀಳುಗಂಡಉಳಿದ ಭಾಗ್ಯವ ಬಿಟ್ಟುಅಳೆದೆಲ್ಲೊಅವರಒಗೆತನವ1ಕಂಜಾಕ್ಷ ಶ್ರೀಕೃಷ್ಣ ರಂಜಿಸಿ ಕೊಳಲೂದಿಮಂಜುಳ ಸ್ವರಕೆ ಮೋಹಿಸುತ ಬಾಲೆಮಂಜುಳ ಸ್ವರಕೆ ಮೋಹಿಸುತಕುಂಜರಗಮನೆಯರು ಸಂಜಿಲೆ ಬಂದರುಅಂಜದೆ ಅತ್ತೆಮಾವರಿಗೆ 2ಭಾವಮೈದುನರನ್ನ ಕೇವಲ ತುಚ್ಛಿಸಿಧಾವಿಸಿ ಬಂದ ಬಾಲೆಯರ ಕೃಷ್ಣಧಾವಿಸಿ ಬಂದ ಬಾಲೆಯರಪಾವನ ಮಾಡದೆ ದೇವ ರಾತ್ರಿಯೊಳುಯಾವ ಪಾಶವ ಬಿಡಿಸಿದಯೊ 3ತಂದೆತಾಯಿ ಬಳಗ ಬಂಧು ಜನರ ಬಿಟ್ಟುಹೊಂದಲು ನಿನ್ನಂಘ್ರಿಗಾಗಿ ಕೃಷ್ಣಹೊಂದಲು ನಿನ್ನಂಘ್ರಿಗಾಗಿಬಂದ ಕಾರಣವ ಒಂದೂ ಮಾತಾಡದೆಕಂದಿಕುಂದಿಸಿದೆಲ್ಲಾ ಅವರ 4ಚಿತ್ತ ಚಂಚಲವಾಗಿ ಎತ್ತಿಗೆ ಮುರವಿಟ್ಟುಮತ್ತೊಂದು ಹೋರಿಯ ತರಿಸೆ ಬಾಲೆಮತ್ತೊಂದು ಹೋರಿಯ ತರಿಸೆಹತ್ತಿರಿದ್ದವರೆಲ್ಲ ಅತ್ಯಂತ ನಗುವರುಒಂದು ಅರ್ಥಿಯು ಮಾಡಿಸಿದೆಲ್ಲೊ 5ಮಂಗನ ಮರಿಯೆತ್ತಿ ಅಂಗಿಯ ತೊಡಿಸುತರಂಗನ ಬಳಿಗೆ ಬಾರೆಂದು ಕಂದರಂಗನ ಬಳಿಗೆ ಬಾರೆಂದುಅಕ್ಕ ತಂಗಿಯರು ಕಂಡು ಹಂಗಿಸಿ ನಗುವರುಶ್ರೀರಂಗ ಮಾಡಿದ ಕೌತುಕವ 6ಬೆಕ್ಕಿನ ಬಾಯೊಳಗೆ ಇಕ್ಕುತ ತುತ್ತನೆಚಿಕ್ಕ ಕಂದಯ್ಯ ಉಣ್ಣೆನುತ ಬಾಲೆಚಿಕ್ಕಕಂದ ಉಣ್ಣೆನುತ ನಕ್ಕರುಗೆಳತಿಯರು ಚಕ್ಕನೆ ಜರಿದರುಚಕ್ಕಂದವೇನು ಮಾಡಿದೆಯೊ 7ಪಟ್ಟಿ ಮಂಚದ ಮೇಲೆ ಬಿಟ್ಟು ಕಂದನ ಬಾಲೆತೊಟ್ಟಿಲ ತೂಗಲು ಭರದಿ ಬಾಲೆತೊಟ್ಟಿಲ ತೂಗಲು ಭರದಿಬಟ್ಟಿ ಬಂದವರು ಅಷ್ಟೂರು ನಗುವಂತೆಎಷ್ಟು ಸೋಜಿಗವ ಮಾಡಿದೆಯೊ 8ಉಟ್ಟ ಪೀತಾಂಬರ ಬಿಟ್ಟು ಹಾಕಿಸಿ ಮ್ಯಾಲೆಕೃಷ್ಣನ ಕೊಳಲು ಲಾಲಿಸುತ ಬಾಲೆಕೃಷ್ಣನ ಕೊಳಲು ಲಾಲಿಸುತ ಧಿಟ್ಟನಕೊಳಲೊಳು ಧಿಟ್ಟೆ ಲಾಲಿಸಿದಳುಶ್ರೀಕೃಷ್ಣ ಮಾಡಿದ ಕೌತುಕವ 9ಕಾಲಿನ ಗೆಜ್ಜೆಯು ಮ್ಯಾಲೆ ಕೊರಳಿಗೆಕಟ್ಟಿಮೇಲಾದ ಸರ ಕಾಲಿಗ್ಹಾಕಿ ಬಾಲೆಮೇಲಾದ ಸರ ಕಾಲಿಗ್ಹಾಕಿಶಾಲೆ ಹಂಬಲ ಬಿಟ್ಟು ಲೋಲಾಕ್ಷಿ ನಡೆದಳುಕೋಲಾಹಲವ ಮಾಡಿಸಿದಿಯೊ 10ಹಣೆಗೆ ಕುಂಕುಮ ಗಲ್ಲಕ್ಕೆ ಕಾಡಿಗೆಚಲ್ವ ಫಣಿಗೆ ಅರಿಷಿಣವು ಬಾಲೆಚಲ್ವ ಫಣಿಗೆ ಅರಿಷಿಣವುನಲ್ಲೆಯರೆಲ್ಲರು ತಮ್ಮ ವಲ್ಲಭರನ ಬಿಟ್ಟುಅಲ್ಲೆ ರಾತ್ರಿಲೆ ಒರಗಿದರು 11ಕಜ್ಜಲ ನೇತ್ರಿಯರ ಲಜ್ಜವಗೈಸಿದೆಸಜ್ಜಾಗಿ ಕೊಳಲೂದಿದೊಮ್ಮೆಸಜ್ಜಾಗಿ ಕೊಳಲೂದಿಗುಜ್ಜಿರಮಾದೇವಿಹೆಜ್ಜೆ ಹೆಜ್ಜೆಗೆ ಹಂಗಿಸುವಳುಅರ್ಜುನ ಆಡಿದ ನಗುತ ರಾಮೇಶ ಇದಕೆ ಮೆಚ್ಚಿದ12
--------------
ಗಲಗಲಿಅವ್ವನವರು
ಮೋರೆಯ ಕಾಂತಿಗೆ ಹಚ್ಚಿರೋ ಕಿಚ್ಚಾಮರುಳಾಗುತಿರುತಿಹನವ ಹುಚ್ಚಾಪಯೋನಿಯ ಮುಖ ನೋಡೆ ಎಲ್ಲಕೆಹೇಸಿಕೆತಾನೆ ರಕ್ತವ ನಿತ್ಯತವಿಸುತಿಹುದುಏನೇನು ಶುಚಿಯಲ್ಲ ಇಂತು ವಿವೇಕವಿಲ್ಲಏನು ಕಾರಣ ಮೋಹ ಪಡುವರೋ1ನರಕಾಣುವ ಪೂರಿತವದು ಭಗವದುಭರದಿ ದುರ್ಗಂಧವಾಸನೆಬಹುದುಸರಸಿಜೋದ್ಭವನಾಗಲಿ ಶಿವನೆ ತಾನಾದರಾಗಲಿಮರುಳೆ ಪುನಃ ಜನ್ಮಕೆ ತಾರದೆ ಬಿಡುವುದೇ2ಚಕ್ರಿ ಖಂಡವು ಆಸ್ತಿ ಚದುರಸ್ತಿರೊಪಾಗಿಕರ್ಮವೆಂಬುದಕೆ ಸ್ಥಾನವಾಗಿಹುದುನಿರ್ಮಳ ಚಿದಾನಂದ ವಸ್ತುವ ತಿಳಿಗೊಡದಧರ್ಮದಾ ಪಥದಲ್ಲಿ ಕೆಡಹುತಿಹುದು3
--------------
ಚಿದಾನಂದ ಅವಧೂತರು
ಯಾಕಿಂತು ಮನಸೋತೆ ಏ ರುಕ್ಮಿಣೀದೇವಿಲೇಖನವ ಬರೆದು ನೀನಾ ಕೃಷ್ಣಗೆಪಲೋಕಮಾನ್ಯಳೆ ನೀನು ಬೇಕಾಗಿ ಮರುಳಾದೆಈ ಕೃಷ್ಣ ಯಾದವರ ಕುಲಕೆ ತಿಲಕಅ.ಪಜನಿಸಿದನು ಮಧುರೆಯೊಳು ದೇವಕಿಯ ಜಠರದಲಿತನಯನೆನಿಸಿದ ಗೋಪಿಗಿವನು ಗೋಕುಲದಿದನುಜೆ ಪೂತನಿಯಳ ಮೊಲೆಯುಂಡು ತೇಗಿದನುಮನೆ ಮನೆಯ ಪಾಲ್ಮೊಸರು ಕದ್ದು ಮೆದ್ದಾ1ತುರುವ ಕಾಯ್ದನ ವನದಿ ತಿರಿಯ ಬುತ್ತಿಯನುಂಡಶಿರಕೊರಳಿಗಾಭರಣ ನವಿಲ್ಗರಿಯ ತುಂಡುತರಳತನದಲಿ ಹಲವು ತರುಣಿಯರ ವ್ರತವಳಿದಕರಿಯನಿವ ಸ್ತ್ರೀಯರುಡುವ ಸೀರೆ ಕದ್ದೊಯ್ದ2ನಂದಗೋಕುಲದಿ ಸಾಕಿದ ಸ್ತ್ರೀಯರನು ಬಿಟ್ಟುಬಂದು ಮಧುರೆಯೊಳು ಮಾತುಳನ ಮರ್ದಿಸಿದಾಚಂದವೆ ಆ ಕುಬುಜೆ ಡೊಂಕ ತಿದ್ದಿಯೆ ನೆರೆದಸಿಂಧುಮಧ್ಯದಿಂzÀಗೋವಿಂದ ಮಾಗದಗಂಜಿ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಯಾತಕೆ ಕೃಪೆಮಾಡದೆ ಯಿರುತಿಹೆ ಸಿರಿಯೇಪೀತಾಂಬರಧರ ತರುಣಿಯೆ ಪಪಾತಕಹಾರಿಣಿ ಭಾವಜನನೀಭಕ್ತ ಕುಟುಂಬಿನಿಭವಭಯ ನಾಶಿನಿ 1ದಾರಿದ್ರ್ಯಾಂಬುಧಿ ತರುಣೋಪಾಯವುತೋರಿಸು ರಘುಕುಲದೊರೆ ಸುಪ್ರಿಯಳೆ 2ರತ್ನಾಭರಣಯುಕ್ತ ಸುಗಾತ್ರೇರತ್ನಾಕರಸುತೇ ರಾಜೀವಾಲಯೇ 3ಹೇಮಭೂಧರ ಸ್ವಾಮಿನಿ ತುಲಸೀರಾಮದಾಸ ಸುಕ್ಷೇಮವು ನಿನ್ನದು 4
--------------
ತುಳಸೀರಾಮದಾಸರು
ರಕ್ಷಿಸು ಮಹಮಾಯೆ ಕರುಣ ಕ-ಟಾಕ್ಷದಿಂದಲಿ ತಾಯೆ ಪ.ದಾಕ್ಷಾಯಿಣಿ ದೈತ್ಯಾಂತಕಿವರನಿಟಿ-ಲಾಕ್ಷನ ರಾಮಿ ನಿರೀಕ್ಷಿಸು ಜನನೀ ಅ.ಪ.ವಾಸವಮುಖವಿನುತೆ ರವಿಸಂ-ಕಾಶೆ ಸುಗುಣಯೂಥೇಭಾಸುರಮಣಿಗಣಭೂಷೆ ತ್ರಿಲೋಕಾ-ಧೀಶೆ ಭಕ್ತಜನಪೋಷೆ ಪರೇಶೆ 1ಗುಹಗಣಪರಮಾತೆ ದುರಿತಾ-ಪಹೆ ದುರ್ಜನ ಘಾತೆಬಹುಕಾಮಿತಪ್ರದೆ ಭಜಕಜನೋರ್ಜಿತೆಮಹಿತೆ ಯೋಗಿಹೃದ್ಗುಹನಿವಾಸಿನಿಯೆ 2ಶುಂಭಾಸುರಮಥಿನಿ ಸುರನಿಕು-ರುಂಬಾರ್ಚಿತೆ ಸುಮನಿರಂಭಾದಿಸುರನಿತಂಬಿನೀ ಜನಕ-ದಂಬಸೇವಿತಪದಾಂಬುಜೆ ಗಿರಿಜೆ 3ಅಷ್ಟಾಯುಧಪಾಣಿ ಸದಾಸಂ-ತುಷ್ಟೆ ಸರಸವಾಣಿಸೃಷ್ಟಿಲಯೋದಯಕಾರಿಣಿ ರುದ್ರನಪಟ್ಟದ ರಾಣಿಪರಾಕುಕಲ್ಯಾಣಿ4ನೇತ್ರಾವತಿ ತಟದ ವಟಪುರ-ಕ್ಷೇತ್ರಮಂದಿರೆ ಶುಭದಾಸುತ್ರಾಣಿ ಲಕ್ಷ್ಮೀನಾರಾಯಣಿ ಸ-ರ್ವತ್ರ ಭರಿತೆ ಲೋಕತ್ರಯನಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಕ್ಷಿಸೋ ಲೋಕನಾಯಕನೆ-ನೀ ಎನ್ನ-ರಕ್ಷಿಸೋ ಲೋಕನಾಯಕನೇ ಪಎಷ್ಟೆಷ್ಟು ಜನ್ಮ ಕಳೆದೆನೋ ಇನ್ನೆಷ್ಟೆಷ್ಟು ಜನ್ಮ ಪಡೆವೆನೋ ||ಕಷ್ಟವ ಪಡಲಾರೆ ಕೃಷ್ಣ ಕೃಪೆಯನಿಟ್ಟುಇಷ್ಟವ ಪಾಲಿಸು ಇಭರಾಜವರದನೆ 1ಬಾಲತನದಿ ಬಹು ಬೆಂದೆನೋ ನಾನಾಲೀಲೆಯಿಂದಲಿಕಾಲಕಳೆದೆನೋ ||ಲೋಲಲೋಚನ ಎನ್ನ ಮೊರೆಯ ಕೇಳುತ ಬೇಗಜಾಲವ ಮಾಡದೆ ಪಾಲಿಸೈ ನರಹರಿ 2ಮುದುಕನಾಗಿ ಚಿಂತೆಪಡುವೆನೋ ನಾಕದಡು ದುಃಖವ ಪಡಲಾರೆನೋ ||ಸದರವಲ್ಲವು ಶ್ರೀಪುರಂದರವಿಠಲಮುದದಿಂದ ರಕ್ಷಿಸೊ ಖಗರಾಜಗಮನ 3
--------------
ಪುರಂದರದಾಸರು
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು