ಒಟ್ಟು 4790 ಕಡೆಗಳಲ್ಲಿ , 128 ದಾಸರು , 3230 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಾರೊ ಹನುಮ ಬಾರೊ ಭೀಮ ಬಾರೊ ಮಧ್ವಮುನಿಪ ಪ. ಬಾರೊ ರಾಮಕೃಷ್ಣ ವೇದವ್ಯಾಸರ ಪ್ರಿಯ ಭಕ್ತ ಅ.ಪ. ಅಂಜನೇಯ ಸುತನು ಆಗಿ ಸಂಜೀವನ ಗಿರಿಯ ತಂದೆ ಕಂಜಲೋಚನೆಯ ವಾರ್ತೆ ಮಂಜುಭಾಷಣ ರಾಮನಿಗರುಹಿದೆ 1 ಪಾಪಿ ಕೌರವ ಕುಲವ ಕೊಂದು ದ್ರೌಪದಿಯ ಕಾಯ್ದ ಮಹಿಮ ಶ್ರೀಪತಿ ಶ್ರೀ ಕೃಷ್ಣನ ಭಜಿಸಿದ ಭೂಪ ಭೀಮಸೇನ ಬೇಗ 2 ಭೂಸುರ ಜನ್ಮದಲಿ ಬಂದು ಆಸೆಯಿಂದ ಆಶ್ರಮ ಕೊಂಡು ದೋಷಿ ಅನ್ಯಮತವ ಮುರಿದು ಭೂಸುರರ ಕಾಯ್ದ ಮಧ್ವ 3 ಸಕಲ ಸುಜನರ ಸೇವೆ ಕೊಂಡು ಮುಕುತಿಮಾರ್ಗಪ್ರದ ನೀನಾಗಿ ಭಕುತಿಮಾರ್ಗವ ತೋರಿ ಎನ್ನ ಹೃತ್ಕಮಲ ಮಧ್ಯದಲಿ ನಿಲ್ಲೊ 4 ಗೋಪಾಲಕೃಷ್ಣವಿಠ್ಠಲನ ರೂಪ ನೋಡುವ ಕೃಪೆಯ ಮಾಡೊ ಶ್ರೀಪತಿ ಶ್ರೀ ಶ್ರೀನಿವಾಸಗೆ ನೀ ಪ್ರೀತಿಕರನೆಂದು ನಮಿಪೆ 5
--------------
ಅಂಬಾಬಾಯಿ
ಬಾರೋ ನಿತ್ಯಾನಂದಲೀಲಾ | ಗೋಪಾಲ ಬಾಲ ಪ ಬಾರೋ ವನಜಮಾಲಾ ಬಾರೋ | ಗಾನಲೋಲಾ ಅ.ಪ ನಿನ್ನ ಕರುಣೆ ಎನ್ನೊಳಿರಲಿ ನಿನ್ನ ಚರಣ ಎನಗೆ ಸಿಗಲಿ ನಿನ್ನ ಧ್ಯಾನ ಮನದೊಳಿರಲಿ ನಿನ್ನ ನಾಮ ರಸನೆಯೊಳಿರಲಿ 1 ಮುರಳೀಧರ ಲೋಕೇಶ ಧರಣೀಧರ ವೆಂಕಟೇಶ ಶರಣಾಗತ ಕ್ಲೇಶನಾಶ ವರದಾಯಕ ಮಾಂಗಿರೀಶ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ಬಾರಿಗೆ ಕರೆವೆ ನಿನ್ನ ಮೋರೆ ತೋರೆಲೋ ಪ ಪುಟ್ಟ ಪಾದವ ಕ್ಷಿತಿಯೊಳಿಟ್ಟು ಮೋದವ ಕೊಟ್ಟು ಭಕ್ತರಿಗೆ ತೋರೋ ಕೃಷ್ಣ ರೂಪವಾ 1 ಸಿಂಧು ಮಥಿಸಿದಿ ಸುಧೆಯ ತಂದು ಬಡಿಸಿದಿ ಕೃಷ್ಣಾಚಂದದಿಂದ ದೇವತೆಗಳ ವೃಂದ ಸಲಹಿದಿ 2 ಇಂದು ವದನನೆ ಶಾಮಸುಂದರಾಂಗನೇಆನಂದದಿಂದ ತೋರೋ ಎನಗೆ ಕುಂಜಹೃದಯನೇ 3 ಇಂದಿರೇಶನೆ ಭವೇಂದ್ರ ವಂದ್ಯನೆ ಕೃಷ್ಣಾ ನಿನ್ನಕಂದನೆಂದು ಕರೆಯೋ ಎನ್ನ ನಂದ ಬಾಲನೇ4
--------------
ಇಂದಿರೇಶರು
ಬಾರೋ ಬಾರೋ ಬಾರಯ್ಯ ಬಾರೊ ಸದ್ಗುರುಸ್ವಾಮಿ ಬಾರಯ್ಯ ಬಾರೊ ಮದ್ಗುರು ಸ್ವಾಮಿ ಬಾರಯ್ಯ ಬಾರೊ ಧ್ರುವ ಸ್ವರೂಪಸುಖ ನಿಜವನ್ನು ತೋರೊ ಹರುಷಾನಂದದನುಭವ ಬೀರೊ ಗುರುತವಾಗ್ಯೆನ್ನೊಳು ನಿತ್ಯವಿರೊ ತರಣೋಪಾಯದ ನಿಜಬೋಧ ನೀ ಸಾರೊ 1 ಕಣ್ಣುಕೆಂಗೆಂಡುತಾವೆ ಕಾಣದೆ ನಿಮ್ಮ ಪುಣ್ಯಚರಣ ತೋರೊ ಘನ ಪರಬ್ರಹ್ಮ ಚಿಣ್ಣಕಿಂಕರ ಅತಿದೀನ ನಾ ನಿಮ್ಮ ಧನ್ಯ ಧನ್ಯಗೈಸುವದೆನ್ನ ಜನುಮ 2 ಚಾಲ್ವರುತಾವೆ ಮನೋರಥಗಳು ಆಲೇಶ್ಯ ಮಾಡದಿರು ನೀ ಕೃಪಾಳು ಮೇರೆದಪ್ಪಿ ಹೋಗುತಿದೆ ದಿನಗಳು ಬಲು ಭಾಗ್ಯೊದಗಿಬಾಹುದು ನೀ ದಯಾಳು 3 ಹಾದಿ ನೋಡುತಿದೆ ಹೃದಯ ಕಮಲ ಸಾಧಿಸಿಬಾಹುದು ಮುನಿಜನ ಪಾಲ ಸಾಧುಹೃದಯ ನೀನಹುದೊ ಸಿರಿಲೋಲ ಛೇದಿಸೊ ನೀ ಬಂದು ಭವಭಯಮೂಲ 4 ಬಾರದಿದ್ದರೆ ಪ್ರಾಣ ನಿಲ್ಲದೊ ಎನ್ನ ಕರುಣಿಸಿಬಾಹುದು ಜಗನ್ಮೋಹನ ತರಳ ಮಹಿಪತಿಗೆ ನೀ ಜೀವಜೀವನ ಕರೆದು ಕರುಣ ಮಳೆಗೈಸು ಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ಬಾರೋ ರಂಗಾ ಪ ಬಾರೈಯ್ಯಾ ಯದುವೀರಾ | ಈರೇಳು ಭುವನಾಧಾರಾ | ಶ್ರೀ ರಮಣಿಯ ಮನೋಹರಾ | ವಾರಣ ಭಯ ನಿವಾರಾ | ಕರುಣಾಕರಾ | ದೀನೋದ್ಧಾರಾ | ಸರ್ವಾಧಾರಾ | ಪರಮ ಉದಾರಾ | ಸುರಸಹತಾರಾ | ದಯಾಸಾಗರ 1 ಒದಗುವೆ ಸ್ಮರಣೆಗೆ ನೇಮಾ | ಮದನಜನಕ ಮಹಮಹಿಮಾ | ಜೀಮೂತ ಶಾಮಾ | ಸದ್ಗುಣ ಧಾಮಾ | ಪೂರಿತ ಕಾಮಾ | ತ್ರಿವಿಕ್ರಮಾ | ಅನಂತ ನಾಮಾ | ಲೋಕಾಭಿರಾವi 2 ಅಸುರ ಕುಲ ಸಂಹರಣಾ | ಬಿಸರುಹ ಸಖ ಶತ ಕಿರಣಾ | ಅಸಮನೆ ಮಹಿಪತಿ ಸುತನಾ | ಪೋಷಿಸುವೆ ನೀ ಪರಿಪೂರ್ಣ ಖಗವರ ಗಮನಾ | ಮೃದುತರ ಚರಣಾ | ಅಹಲ್ಯೋದ್ಧರಣಾ | ಕನPsÀರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬೇಗ ತೋರೋ ಮುಖವನು ನಿನ್ನ ಬಾರಿಗೆ ಬಿದ್ದೆನು ಪಾರಗಾಣಿಸೊ ಪ ಅಂಗಜನಯ್ಯಾ ಭುಜಂಗ ಶಯನಾ ಶ್ರೀ ರಂಗ ಎನ್ನಾ ಅಂತರಂಗಕ್ಕೆ ನೀ 1 ಕಂಜಲೋಚನ ನಾ ನಿನಗಂಜಲಿ ಮುಗಿಯುವೆ ಕುಂಜರೇಶ ವರದ ಭುಜಂಗ ಶಯನ2 ಘನ್ನಮಹಿಮ ಸನ್ಮತಿಯ ಪಾಲಿಸು ಪ್ರ ಸನ್ನ ಪ್ರಾಣನಾಥ ವಿಠಲರಾಯನೆ 3
--------------
ಬಾಗೇಪಲ್ಲಿ ಶೇಷದಾಸರು
ಬಾರೋ ಬೇಗ ಬಾರೋ ರಾಮ ಬಾರೋ ನೀ ಮೊಗದೋರೋ ರಾಮ ಪ ಅಗಣಿತ ಮಹಿಮ ರಘುಕುಲೋದ್ಧಾಮ ನಿಗಮಾಗಮ ಪೂಜಿತ ಶ್ರೀರಾಮ 1 ನಿಕರ ದುರಿತಾರಿ ರಾಮ 2 ಹರಣ ರಮಾಪತಿ ಚರಣ 3
--------------
ಅನ್ಯದಾಸರು
ಬಾರೋ ಬೇಗನೆ ರಾಮಾ ನೀ ಬಾ ಪ ಏಕೆ ಪಂತರ ಮನೆಯೊಳು ನೀರ ತಂದೆ | ಲೋಕದೊಳಗೆ ನಿನ್ನ ಮಹಿಮೆಗೆ ಕುಂದೇ1 ಅಂದು ಕಬೀರನ ಸತಿಗಾಗಿ ಹಿಂದೆ |ಛಂದಾಗಿ ಕೊತವಾಲನಾಗಿ ಬಂದೆ 2 ಗುರು ಭವತಾರಕ ಎನ್ನ ತಂದೆ |ಆರು ಮುನಿದರೂ ಏನಿಲ್ಲ ಮುಂದೆ 3
--------------
ಭಾವತರಕರು
ಬಾರೋ ಮನ ಮೋಹನ ಭಾಮೆ ರುಕ್ಮಿಣಿ ಸತ್ಯಭಾಮೆಯರಸ ಬೇಗ ಪ ಯಮುನಾ ತೀರದಿ ಮುರಳಿಯ ನುಡಿಸಲು ಪ್ರಮದೇರು ಗೋವ್ಗಳು ಮರುಳಾಗಿರಲು ಮಮತೇಲಿ ಸಲಹಿದ ಚಲುವ ಕೃಷ್ಣನೆ ಬೇಗ 1 ಗೋಪಿಯ ಕಂದ ಶ್ರೀ ಗೋಪಾಲನೆ ಗೋವರ್ಧನೋದ್ಧಾರಿ ಶ್ರೀ ಕೃಷ್ಣನೆ ಗೋಪಿಕಾಲೋಲ ಶ್ರೀ ಗೋಪಾಲ ಕೃಷ್ಣ ಬೇಗ 2 ಕಮಲ ಸಂಭವನಯ್ಯ ಕಮಲಾಪತೆ ಕಮಲಜಾತೆಯ ಪ್ರಿಯ ಪೊರೆ ಶ್ರೀಪತೆ ಕಮಲ ಪತ್ರಾಕ್ಷ ಶ್ರೀ ಕಮಲನಾಭ ವಿಠ್ಠಲ 3
--------------
ನಿಡಗುರುಕಿ ಜೀವೂಬಾಯಿ
ಬಾರೋ ಮನೆಗೆ ಶ್ರೀಧರನೆ ನಿಜಪರಿ ವಾರದೊಡನೆ ಗುಣವಾರಿಧಿಯೆ ಪ ಮಾರಜನಕ ಸುಕುಮಾರಾಂಗ ಪರಮೋ ದಾರಾಕೃತಿಯ ನೀ ತೋರಿಸೆನಗೆ 1 ಎಷ್ಟು ಜನ್ಮದ ತಪ ಒಟ್ಟಾಗಿ ಸೇರಲು ದೃಷ್ಟಿಸುವೆನೊ ಶ್ರೀ ಕೃಷ್ಣ ನಿನ್ನನು 2 ಚಿನ್ನದ ಪೀಠದಿ ರನ್ನದ ಕಲಶದಿ ಚನ್ನಾಗಿ ತೊಳೆಯವೆ ನಿನ್ನಡಿಗಳ 3 ಗಂಧವ ಹಚ್ಚಿ ಸುಗಂಧ ತುಳಸೀದಳ ದಿಂದಾಲಂಕರಿಸುವೆ ಸುಂದರಾಂಗನೆ 4 ಜಾಜಿಯು ಮೊದಲಾದ ಹೂಜಾತಿಗಳ ತಂದು ಮೂಜಗದೊಡೆಯನನು ಪೂಜಿಸುವೆನೊ5 ಲೋಪವಿಲ್ಲದೆ ದಿವ್ಯ ಧೂಪವನರ್ಪಿಸಿ ದೀಪಂಗಳನು ಬಹು ದೀಪಿಸುವೆನು 6 ಘೃತ ಮೇಲಾದ ಭೋಜ್ಯವ ಮೇಳೈಸುವೆನು ಶ್ರೀಲೋಲನಿಗೆ 7 ಕರ್ಪೂರವೀಳ್ಯವನರ್ಪಿಸಿ ಮೋದದಿ ಕರ್ಪೂರದಾರತಿಗಳರ್ಪಿಸುವೆನು 8 ಮಣಿದು ನಿನ್ನಂಘ್ರಿಗೆ ಹಣೆಯ ಚಾಚುತ ಮನ ದಣಿಯುವಂದದಿ ನಾ ಕುಣಿದಾಡುವೆ 9 ಸದಯ ನಿನ್ನಂಘ್ರಿಯ ಹೃದಯಾರವಿಂದದ ಸದನದೊಳಿಂಬಿಟ್ಟು ಮುದಮೊಂದುವೆ 10 ಶರಣಾಗತರನೆಲ್ಲ ಕರುಣದಿ ಸಲಹುವ ವರದವಿಠಲ ಪುಲಿಗಿರಿಧಾಮನೆ 11
--------------
ವೆಂಕಟವರದಾರ್ಯರು
ಬಾರೋ ಯದುಕುಲ ತಿಲಕ ನಲಿಯುತ ಬಾರೋ ಯದುಕುಲ ತಿಲಕ ಅ.ಪ ನಂದಕುಮಾರ ಸುಂದರಾಕಾರ ಬೃಂದಾವನಲೋಲ ನಲಿಯುತ 1 ಜಗಮೋಹನ ಬಾಲ ಸದನಕೆ 2 ಅಧರಾಮೃತದ ಮಧುರಸ ಕುಡಿದ ಹೃದಯಂಗಮ ಮುರಳೀ ನುಡಿಸುತ 3 ರಂಗಿನ ತಿಲಕ ಮುಂಗುರುಳುಗಳು ಶೃಂಗಾರದ ಸೊಬಗ ನೋಡುವೆ 4 ಕುಣಿಯುತಲಿರುವ ಮನದ ಬಯಕೆಯ ದಣಿಸೋ ವನಮಾಲಿ ಪ್ರಸನ್ನನೆ 5
--------------
ವಿದ್ಯಾಪ್ರಸನ್ನತೀರ್ಥರು
ಬಾರೋ ರಂಗಯ್ಯ ಬಾರೋ ಕೃಷ್ಣಯ್ಯ ಬಾರೋ ರಂಗ ನವನೀರದ ನಿಭಾಂಗ ಪ ನಂದಗೋಪನಂದನ ಸುಂದರ ನಾರಾಯಣ ಇಂದು ವದನ 1 ಗಮನ ವರ ಶ್ರೀವತ್ಸಲಾಂಛನ ದುರಿತ ಹರಣ ನರಹರಿ ಪರಮಪಾವನ 2 ಪಂಕಜದಲಲೋಚನ ವೆಂಕಟಾಚಲರಮಣ ಭಂಜನ 3 ಅನಘ ವನಧಿಶಯನ ಮುನಿ ಹೃತ್ಕಮಲ ಪೋಷಣ ಘನಮಣಿ ಖಚಿತಾಭರಣ ಕನಕಾಂಬರ ಭೂಷಣ 4 ಬಲಿಬಂಧನ ವಾಮನ ಜಲಜೋದರ ಜನಾರ್ಧನ ವಿಲಸಿತ ಹೆನ್ನೆ ಪಟ್ಟಣ ನಿಲಯ ಶ್ರೀ ಮಧುಸೂದನ 5
--------------
ಹೆನ್ನೆರಂಗದಾಸರು
ಬಾರೋ ವೆಂಕಟಗಿರಿನಾಥ| ದಯ- ದೋರೈ ಭಕುತರ ಪ್ರೀತ ಪ. ಮಾರಪಿತ ಗುಣಹಾರ ಮಂದರ- ಧಾರ ದೈತ್ಯಸಂಹಾರ ಸುಜನೋ ದ್ಧಾರ ಮಮಹೃದಯಾರವಿಂದಕೆ ಬಾರೋ ಕೃಪೆದೋರೋ ವೆಂಕಟ ಅ.ಪ. ವೃಷಭಾಸುರನೊಳು ಕಾದಿ ಸಾ- ಹಸವ ಮೆರೆಸಿದ ವಿನೋದಿ ವಶಗೈದು ದೈತ್ಯನ ಶಿರವ ಕತ್ತ- ರಿಸುತಲಿ ನೀನಿತ್ತೆ ವರವ ವಸುಧೆಯೊಳಗಿಹ ಸುಜನರನು ಮ- ನ್ನಿಸುತಲಿಷ್ಟವನಿತ್ತು ಕರುಣಾ- ರಸದಿ ಸಲಹುವ ಬಿಸಜನಾಭ ಶ್ರೀ- ವೃಷಭಾಚಲವೊಡೆಯ ವೆಂಕಟ 1 ಅಂಜನೆಯೆಂಬಳ ತಪಕೆ ಭಕ್ತ- ಸಂಜೀವನೆಂಬ ಶಪಥಕೆ ರಂಜಿಪ ಪದವಿತ್ತೆ ಮುದದಿ ಖಿಲ- ಭಂಜನಮೂರ್ತಿ ಕರುಣದಿ| ಮಂಜುಳಾಂಗ ಶ್ರೀರಂಗ ಸುರವರ ಕಂಜಭವವಿನುತಾದಿ ಮಾಯಾ- ರಂಜಿತಾಂಘ್ರಿ ಸರೋರುಹದ್ವಯ ಅಂಜನಾಚಲವೊಡೆಯ ವೆಂಕಟ 2 ಶೇಷನ ಮೊರೆಯ ತಾ ಕೇಳಿ ಬಲು ತೋಷವ ಮನಸಿನೊಳ್ತಾಳಿ ದೋಷರಹಿತನೆಂದೆನಿಸಿ ಕರು- ಣಾಶರಧಿಯ ತಾನೆ ಧರಿಸಿ ಶ್ರೀಶ ಹರಿ ಸರ್ವೇಶ ನತಜನ- ಪೋಷ ದುರ್ಜನನಾಶ ರವಿಶತ- ಭಾಸ ಕೌಸ್ತುಭಭೂಷ ವರ ಶ್ರೀ- ಶೇಷಾಚಲವಾಸ ವೆಂಕಟ 3 ಮಾಧವವಿಪ್ರ ವಿರಹದಿ ಭ್ರಷ್ಟ ಹೊಲತಿಗಳನು ಸೇರ್ದ ಮುದದಿ ಸಾದರದಲಿ ನಿನ್ನ ಬಳಿಗೆ ಬರೆ ನೀ ದಯಾನಿಧಿ ಕಂಡು ಅವಗೆ ಶೋಧಿಸುತ ಪಾಪಗಳೆಲ್ಲವ ಛೇದಿ ಬಿಸುಡುತ ನಿಂದು ವೆಂಕಟ- ಭೂಧರದ ನೆಲೆಯಾದ ನಾದವಿ- ಭೇದಬಿಂದು ಕಲಾದಿಮೂರುತಿ 4 ಧನಪತಿಯೊಳು ತಾನು ಸಾಲ ಕೊಂಡ ಘನಕೀರ್ತಿಯಿಂದ ಶ್ರೀಲೋಲ ವನಿತೆ ಪದ್ಮಾವತಿಪ್ರೀತ ಭಕ್ತ- ಜನಸುರಧೇನು ಶ್ರೀನಾಥ ವನಧಿಶಯನ ಮುರಾರಿ ಹರಿ ಚಿ- ಧ್ವನಿನಿಭಾಂಗ ಸುಶೀಲ ಕೋಮಲ ವನಜನಾಭ ನೀಯೆನ್ನ ಕೃಪೆಯೊಳ- ಗನುದಿನದಿ ಕಾಯೊ ಕೃಪಾಕರ 5 ಛಪ್ಪನ್ನೈವತ್ತಾರು ದೇಶದಿಂದ ಕಪ್ಪವಗೊಂಬ ಸರ್ವೇಶ ಅಪ್ಪ ಹೋಳಿಗೆಯನ್ನು ಮಾರಿ ಹಣ- ಒಪ್ಪಿಸಿಕೊಂಬ ಉದಾರಿ ಸರ್ಪಶಯನ ಕಂದರ್ಪಪಿತ ಭಜಿ- ಸಿರ್ಪವರ ಸಲಹಿರ್ಪ ಕುಜನರ ದರ್ಪಹರಿಸುತ ಕಪ್ಪಕಾಣಿಕೆ ಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6 ಚಾರುಚರಣತೀರ್ಥವೀಂಟಿ ನಿನ್ನೊ- ಳ್ಸಾರಿ ಬರುವ ಪುಣ್ಯಕೋಟಿ ಸೇರಿದೆ ಕೊಡು ಮನೋರಥವ ಲಕ್ಷ್ಮೀ- ನಾರಾಯಣನೆನ್ನೊಳ್ದಯವ ತೋರು ನಿರತ ಸಮೀರಭವ ವರ- ದಾರವಿಂದದಳಾಕ್ಷ ತಿರುಪತಿ ವೀರ ವೆಂಕಟರಮಣ ಮದ್ಬಹು-ಭಾರ ನಿನ್ನದು ಪಾಲಿಸೆನ್ನನು 7
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರೋ ಹೃದಯ ಸದನಾ ಮುಖ್ಯ ಪ್ರಾಣ ಪ ಬಾರೋ ಹೃದಯದೊಳು ವಾರಿಜಾಸನ ಪದಏರುವಾತನೆ ದಿವ್ಯ ಕಾರುಣ್ಯ ಸಾಗರ ಅ.ಪ. ಹರಿಭಕ್ತರೊಳು ನೀನು ಹಿರಿಯನೆಂಬುವ ವಾರ್ತೆಪರಿಪರಿ ಕೇಳುತ ಶರಣು ಬಂದೆನೊ ನಿನ್ನ1 ಮಂದಗಮನೆ ಕೊಟ್ಟ ಇಂದ್ರಮಾಣಿಕ ಮಾಲೆಕಂಧರದೊಳಗಿಟ್ಟ ಇಂದ್ರಶಯನ ಪ್ರೀಯಾ 2 ಕಾಳಿ ರಮಣ ಧರ್ಮನಾಳೆ ಎನಲು ಧನ-ನೀಲ ಮಾಣಿಕ್ಯ ಭೂಷಲೋಲ ಭೂಸುರಗಿತ್ತೆ 3 ಮಾಧವನಾಜ್ಞದಿ ಮೇದಿನಿಯೊಳು ಬಂದುಬಾದರಾಯಣ ಮತ ಸಾಧನೆ ಮಾಡಿದ 4 ಪಾದ ಮುಂದೆ ಸೇವಿಸಿ ನಿತ್ಯಾನಂದತೀರ್ಥರೇ ನೀವು ಸಂದೇಹವಿಲ್ಲದೆ 5
--------------
ಇಂದಿರೇಶರು