ಒಟ್ಟು 238 ಕಡೆಗಳಲ್ಲಿ , 59 ದಾಸರು , 202 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿ ನೀನೆವೆ ಸರ್ವ ಚೇತನ ಧೃತಿಯ ಸಕಲವೇ | ಧರಿಯೊಳು ನಾನೆಂಬುವ ಗುಣವೇ ವರಶೃತಿ ನೇಹನಾ ನಾಸ್ತಿಯಂದು | ಸಾರುವದಿದಕನು ಮಾನವೇ ಪ ಬಯಲೊಳು ಪುಟ್ಟದ ಪರಿಪರಿನಾದದ | ಹೊಯಿಲಿನ ಮಂಜುಳ ಶಬ್ದವಾ | ಬಯಲದಿ ಕೇಳಿತಲ್ಲಿನವ ಹೊಂದುವಾ | ಬಯಲಾಧಾರ ನೀನಲ್ಲವೇ 1 ಸೃಷ್ಟಿಯೊಳಗ ಕಮನೀಯ ಲಾವಣ್ಯದು | ತ್ಕøಷ್ಟತರ ಮೋಹನ ರೂಪವಾ | ದೃಷ್ಟಿಲಿ ಕಾಣುತ ಸುಖದೋಳಗಾಗುವ | ದೃಷ್ಟಸ್ವ ತೇಜ ನೀನಲ್ಲವೆ 2 ಕಮಲ ಪಾರಿಜಾತ ಮಲ್ಲಿಗೆ ಮಕ | ರಂಗದೊಳಗ ಸುಳಿದಾಡುತ | ಮಂದ ಮಾರುತ ಬಂದು ಸೋಕಲು ನಲಿವಾ | ಸುಂದರ ರೂಪನು ನೀನಲ್ಲವೆ 3 ರಸಭರಿತ ಬೇರೆ ಬೇರೆ ದೋರುತಲಿಹಾ | ಅಸಮತೆರೆದ ಪದರ್ಥವನು | ರಸನಾದಿ ಕೊಂಡು ಸವಿಗೆ ತಲೆದೂಗುವಾ | ಕುಶಲ ಭೋಕ್ತನುನೀನಲ್ಲವೇ 4 ಚೆನ್ನಾಗಿ ಕಸ್ತೂರಿ ಪುಳಕವ ಕೂಡಿಸಿ | ಪನ್ನೀರವನು ಮೇಲೆದಳಿದು | ಉನ್ನತ ಚಂದನ ಲೇಪಿಸೆ ಸುವಾ | ಸನೆ ಕೊಂಬುವ ನೀನಲ್ಲವೇ 5 ಅಷ್ಟದಳ ಕಮಲದಳ ಗದ್ದುಗಿಯೊಳು ನಿಂದು | ಅಷ್ಟಮ ಸ್ಥಳಗಳ ಮುಟ್ಟಿಸಿ | ನೆಟ್ಟಿನೆ ಮುಖದೊಳು ಸವಿಸವಿ ಮಾತವ | ಸ್ಪಷ್ಟದಿ ನುಡಿಪ ನೀನಲ್ಲವೇ 6 ಭಜಕನ ಮಾಡಿ ಸೌಮ್ಯತನದಿ ಕರದಿಂದ | ರಜತಮ ವಿರಹಿತ ದಾನವನಾ | ದ್ವಿಜರಿಗೆ ಕುಡಿಸಿ ಅದರಶ್ರಯ ಕೊಂಬುವ | ನಿಜಶಯ ಕರ್ತನು ನೀನಲ್ಲವೇ 7 ಪವನಭ್ರವ ನಡೆಸುವಪರಿಚರಣದಿ | ಜವದಿ ಸುಕೇತ್ರ ಯಾತ್ರೆಯಾ | ಬವರದಿ ಮಾಡಿ ಪುಣ್ಯ ಅರ್ಪಿಸಿ ಕೊಂಬಾ | ಭುವನ ಪಾವನ ನೀನಲ್ಲವೇ 8 ರಸನುಂಡು ಕಬ್ಬ ಹಿಪ್ಪಿಯುಗುಳುವಂತೆ | ಅಸಮತೆ ರಚಿಸಿ ಸರ್ವಾಂಗರ | ರಸವಿತ್ತು ಮಲವಘ ಮುಖದಿಂದ ಪವನದಿ | ಬಿಡಸುವನು ನೀನಲ್ಲವೇ 9 ಅಂಗನೆಯರ ಧೃಡಾಲಿಂಗನವನು ಮನ| ದಿಂಗಿತದಂದದಿ ಗೈಯ್ಯಲು | ಅಂಗಸಂಗದ ಲೋದಗುವ ಭೋಗಿಪ | ಅಂಗಜ ಜನಕ ನೀನಲ್ಲವೇ 10 ಯಂತ್ರವಾಹಕ ನಂದದಿ ಜಗನಿರ್ಮಿಸಿ | ಚಿತ್ರ ವಿಚಿತ್ರವ ದೋರುವಾ | ಅಂತ್ರ ಬಾಹ್ಯವ್ಯಾಪಕ ಮಹಿಪತಿ ಸುತ ಪ್ರಭು | ಸೂತ್ರಧಾರಿ ನೀನಲ್ಲವೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿನಾಮ ಭಜನೆಯೊಳಿರು ಇರೂ ಶ್ರೀಹರಿ ಮಹಿಮೆಯ ಭುವಿ ತೋರುರೋರು ಪ ಸಜ್ಜನರ ಸಂಗವ ಮಾಡು ಮಾಡು ದುರ್ಜನರ ಸಂಗವ ಬಿಡೂ ಬಿಡೂ ಮೂಜ್ಜಗದೊಡೆಯನ ಪಾಡು ಪಾಡು ಇನ್ನು ಮುಕುತಿಯ ಬೇಕೆಂದು ಬೇಡು ಬೇಡು 1 ಪಾದ ಹಿಡಿ ಹಿಡಿ ಮನದಿರುವ ಕಾಮ ಕ್ರೋಧ ಕಡಿ ಕಡಿ ಶರಣರ ಕೂಟದೋಳ್ ಕೂಡಿ ಕೂಡಿ ಬೇಗ ನರಹರಿ ಮೂರ್ತಿಯ ನೋಡಿನೋಡಿ 2 ರಾಮನಾಮಾಮೃತ ಕುಡಿ ಕುಡಿ ಅತಿಕಾಮುಕ ದ್ರವ್ಯವ ಬಿಡಿಬಿಡಿ ಸ್ವಾಮಿ ನಾರಾಯಣನೆಂದು ನುಡಿನುಡಿ ಬಹು ಪ್ರೇಮದಿ ಹರಿಕರುಣ ಪಡಿಪಡಿ 3 ಸಕಲಶಾಸ್ತ್ರಗಳ ನೋಡು ನೋಡು ಅದರ ಸಾರಾಂಶ ತಿಳಿದು ಆಡೂ ಆಡೂ ಪ್ರಕಟಿತ ಭಕ್ತರಿಗನ್ನ ನೀಡು ನೀಡು ಇನ್ನು ಪರಮಾತ್ಮನ ಕೊಂಡಾಡು ಆಡು 4 ನರಹರಿಯು ಕಥೆಯ ಕಿವಿಲಿ ಕೇಳುಕೇಳು ಪರಮ ಭಕ್ತರ ಪಾದಕೆ ಬೀಳು ಬೀಳು ಶ್ರೀ ಪರಬ್ರಹ್ಮನ ಸೇವೆಗೆ ಏಳು ಏಳು 5 ಯೋಗ್ಯರ ಕಂಡರೆ ಹಿಗ್ಗೂ ಹಿಗ್ಗೂ ಅತಿ ಭಾಗ್ಯರ ಕಂಡರೆ ತಗ್ಗೂ ತಗ್ಗೂ ಸುಜ್ಞಾನಿಗಳಿಗೆ ಡೊಗ್ಗು ಡೊಗ್ಗು ಇನ್ನು ಶುದ್ಧಾತ್ಮಕರೊಳು ಜಗ್ಗು ಜಗ್ಗು 6 ಸನ್ಯಾಸಿಗಳನು ಸೇರು ಸೇರು ದುಷ್ಟದುರ್ಮಾಗರ ಕಂಡು ದೂರು ದೂರು ಮರ್ಮ ಬಲ್ಲವರಲ್ಲಿ ಜಾರು ಜಾರು ಶ್ರೀ ಮಹಾ 'ಹೆನ್ನ ವಿಠ್ಠಲನ’ ‘ಸಾರೂ ಸಾರೂ’ 7
--------------
ಹೆನ್ನೆರಂಗದಾಸರು
ಹರಿವಾಸುದೇವನೆ ಬ್ಯಾಸರಿಲ್ಲದೆ ದಾಸನ ಮೊರೆ ಕೇಳು ಜಗದೀಶ ನನ್ನ ಸಮಾನ ಕರುಣಾಭೂಪರುಂಟೆ ಪೇಳು ಪ. ಕಾಲಕಾಲಕೆ ಪೇಳಲಂಜುವೆ ಶ್ರೀಲಲಾಮ ಹರಿಯೆ ಆದರೆ ಬೀಳಗೊಳಿಸುವ ದೇಹಬಾಧೆಯು ತಾಳಲಾಪ ಹೊರೆಯೆ ಎರಡೇಳು ಭಕ್ತಿಯ ಮ್ಯಾಳವರಿಯದೆ ಹಾಳು ಮೋಹ ತೆರೆಯೆ ಮುಳಿಗೇಳಲಾರೆನು ಮಾಧವನೆ ಕರುಣಾಳು ಕಾಯೊ ದೊರೆಯೆ 1 ಯಾರ ಧನವಿನ್ಯಾರ ಭೂಮಿಯು ಯಾರ ವಸ್ತುಗಳಿವು ಕುಂಬಾರ ಭಾಂಡಗಳಂತೆ ನಶ್ವರ ತೋರಲ್ಯಾಕೆ ಫಲವು ಲಘು ನೀರಗುಳ್ಳೆಯ ಪೋಲ್ವ ದೇಹಕೆ ಸೇರಿದ ಸನ್ನಹವು ಬಿಳಿ ಭಾರ ಪೊತ್ತ ಥರವು 2 ಅದರಿಂದ ವೆಂಕಟಮಂದಿರನೆ ನಿನ್ನಿಂದ ಮಾತ್ರ ತಿಳಿಸು ಮೂರ್ತಿ ತಾಪಗಳಿಂದ ಬ್ಯಾರೆಗೊಳಿಸು ದ್ವಿಜ ವೃಂದ ರಕ್ಷಕನೆಂಬ ಬಿರುದನು ಎಂದೆಂದಿಗು ಘಳಿಸು ಭವ ಬಂಧ ಮೋಚಕ ನಿನ್ನ ಸೇವಾನಂದವಾರ್ಧಿಗಿಳಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹುಟ್ಟಿ ಹುಟ್ಟಿ ಹೊಂದಲಾರೆನಯ್ಯ ಕೃಷ್ಣನೆ ುೀಕಷ್ಟವನ್ನು ಬಿಡಿಸಿ ಕಾಯಬೇಕು ಕೃಷ್ಣನೆ ಪಇಷ್ಟು ದಿವಸ ನಿನ್ನನರಿಯದಿದ್ದೆ ಕೃಷ್ಣನೆ ನೀನುದ್ಟೃುಟ್ಟು ಹುಟ್ಟದಂತೆ ಮಾಡು ಕೃಷ್ಣನೆಅ.ಪಗರ್ಭದೊಳು ನವಮಾಸ ಸಿಕ್ಕಿ ಕೃಷ್ಣನೆ ನೊಂದೆನರ್ಭಕತ್ವದಲ್ಲಿ ಮುಗ್ಧನಾದೆ ಕೃಷ್ಣನೆನಿರ್ಬಂಧವಾುತು ವಿದ್ಯದಲ್ಲಿ ಕೃಷ್ಣನೆ ಮತ್ತೆನಿರ್ಭರದ ಪ್ರಾಯದಲ್ಲಿ ಬೆರೆತೆ ಕೃಷ್ಣನೆ 1ಮದಗಳೆಂಟರಿಂದ ಮೈಯ ಮರೆತೆ ಕೃಷ್ಣನೆ ಬೇಗಹುದುಗಿ ಕ್ಲೇಶವೈದರಲ್ಲಿ ಬಿದ್ದೆ ಕೃಷ್ಣನೆವೊದಗಿ ಪಾಶವೆಂಟರಿಂದ ಬಿಗಿದೆ ಕೃಷ್ಣನೆ ಹಮ್ಮುಇದಕೆ ಮೂಲವಾುತು ಕರ್ಮದಿಂದ ಕೃಷ್ಣನೆ 2ಅರಿಗಳರುವರಿಂದ ಕೊರಗುತಿಹೆನು ಕೃಷ್ಣನೆ ಮುಂದನರಿಯದವರ ಸಂಗವನ್ನು ಮಾಡಿ ಕೃಷ್ಣನೆಉರುಳಿಬಿದ್ದೆ ವಿಷಯಕೂಪದಲ್ಲಿ ಕೃಷ್ಣನೆ ುದನುಪರಿವ ಶಕ್ತಿಯನ್ನು ಕಾಣೆನಯ್ಯ ಕೃಷ್ಣನೆ 3ಮಾಯಾಕಾರ್ಯ ದೇಹವೆನ್ನದೆಂದು ಕೃಷ್ಣನೆ ಅದುಹೇಯವೆಂದು ಕಾಣದಾದೆನಯ್ಯ ಕೃಷ್ಣನೆ ನೋಯದಂತೆ ಪೋಷಣೆಯ ಮಾಡಿ ಕೃಷ್ಣನೆ ುೀಗ ನೋಯಲಾಗಿ ಭಯವು ಜನಿಸಿತಯ್ಯ ಕೃಷ್ಣನೆ 4ಹರಿವ ನದಿಯ ನಡುವೆ ಪರ್ಣ ಸಿಕ್ಕಿ ಕೃಷ್ಣನೆ ಸುಳಿಯಬೆರಸಿ ತಡಿಯ ತಾನು ಸೇರದಂತೆ ಕೃಷ್ಣನೆಕುರುಡ ಕೂಪವರಿಯದುರುಳುವಂತೆ ಕೃಷ್ಣನೆ ಕಾಲಶರಧಿಯಲ್ಲಿ ಮುಳುಗಿ ನೆಲೆಯ ಕಾಣೆ ಕೃಷ್ಣನೆ 5ಇರುಹೆ ಕಡೆಯು ಬ್ರಹ್ಮನಾದಿಯಾಗಿ ಕೃಷ್ಣನೆ ಲೋಕಮರುಳುಗೊಂಡು ಮಾಯೆುಂದ ಮರುಗಿ ಕೃಷ್ಣನೆ ಕೊರಗುತಿದೆ; ಮಾಯೆಯನ್ನು ದಾಟಿ ಕೃಷ್ಣನೆ ಬೇಗಪರಮನೊಳು ಬೆರೆಸಿ ಕೊರಗ ಬಿಡಿಸು ಕೃಷ್ಣನೆ 6ರಜ್ಜು ಸರ್ಪನಾಗಿ ತೋರಿ ಬೆದರೆ ಕೃಷ್ಣನೆ ಅದರಬೆಜ್ಜರವ ಪರಿವ ಮಂತ್ರವುಂಟೆ ಕೃಷ್ಣನೆರಜ್ಜುವೆಂದು ತಿಳಿವುದೊಂದೆ ಮಂತ್ರ ಕೃಷ್ಣನೆ ಹಾಗೆರಜ್ಜು ಸ್ಥಾನ ನಿನ್ನ ನಿಜವ ತೋರು ಕೃಷ್ಣನೆ 7ಕರ್ಮವೆ ಜನ್ಮಕ್ಕೆ ಹೇತುವೆನಲು ಕೃಷ್ಣನೆ ಅಂದುಬ್ರಹ್ಮವತ್ಸಪಾಲರಪಹರಿಸೆ ಕೃಷ್ಣನೆಕರ್ಮವಿತ್ತೆ ಬದುಲ ನಿರ್ಮಿಸಲು ಕೃಷ್ಣನೆ ಹಾಗೆಕರ್ಮವೆನ್ನದೀಗಲೆನ್ನ ಸಲಹು ಕೃಷ್ಣನೆ 8ದುರಿತ ದುಃಖದಿಂದ ನೋವ ಜನರ ಕೃಷ್ಣನೆ ಅವರದುರಿತಗಳ ನೂಕಿ ನಿನ್ನೊಳಿರಿಸು ಕೃಷ್ಣನೆತಿರುಪತೀಶ ದೇವ ವೆಂಕಟೇಶ ಕೃಷ್ಣನೆ ಮಾಯಾತೆರೆಯ ತೆಗೆದು ನಿನ್ನ ನಿಜವ ತೋರು ಕೃಷ್ಣನೆ 9ಓಂ ಸತ್ಯಸಂಕಲ್ಪಾಯ ನಮಃ
--------------
ತಿಮ್ಮಪ್ಪದಾಸರು
ಹುರುಡು ನಿನಗೆ ಥರವೇನೊ ಸ್ವಾಮಿ ಗರುಡವಾಹನ ಸುರಧೇನು ಪ. ಕುರುಡ ಕಾಣದೆ ಕೂಪದಲಿ ಬಿದ್ದರೆತ್ತದೆ ಮೊರಡುತನದಿ ಮುಖ ನೋಡುತ ನಗುವಂಥ ಅ.ಪ. ಜ್ಞಾನಮಾರ್ಗವ ಕಾಣದಿರುವ ದೀನ ಮಾನವನಿಗೆ ಮೋಹಭರವ ತಾನೆ ಕಲ್ಪಿಸಿ ತತ್ವದಿರುವ ಮುಚ್ಚಿ ನಾನಾ ಯೋಗಿಗಳಲ್ಲಿ ತರುವ ಮಾನವು ಸರಿಯೆ ಮಹಾನುಭಾವ ನಿನ್ನ ದೀನ ಬಂಧುತ್ವಕೆ ಹಾನಿ ಬಾರದೆ ಕೃಷ್ಣ 1 ಇಂದ್ರಿಯಾರ್ಥ ಸನ್ನಕರ್ಷವೆಂಬ ಬಂಧನದಲ್ಲಿ ಸಿಕ್ಕಿ ಬೀಳ್ವ ನಾನಾ ತಂದ್ರ ಸಾಗರ ಮುನಿಗಳ ಬಹು ಮಂಜನು ಮಾಯೆಯ ಗೆಲ್ವ ಹೊಂದಿಕೆಯನು ಸುಖ ಸಾಂದ್ರ ನೀನರಿಯೆಯ ಇಂದ್ರಾದಿಗಳನು ಎಂದೆಂದಿಗೂ ಸಲಹುವಿ 2 ಅದರಿಂದ ಸರ್ವಕಾಲದಲಿ ನೀನೆ ಒದಗಿ ಪೊಳೆವುತ್ತ ಮನದಲಿ ಪದಯುಗವಿರಿಸಿ ಶಿರದಲಿ ದಾಸಪದವ ಪಾಲಿಸು ಕರುಣದಲಿ ಭವ ವಂದ್ಯ ವೆಂಕಟಗಿರಿನಾಯಕ ಪದುಮಾಲಯೆ ಕೂಡಿ ಸದನದಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹೆಂಡತಿ ನೋಡಣ್ಣ ಈಕಿನ ನ್ನ್ಹೆಂಡತಿ ನೋಡಣ್ಣ ಪ ಮಂಡೆಮುಸುಕು ತೆಗೆದ್ಹಿಂಡುಜನರ ಮುಂದೆ ಬಂಡುಮಾಡಿ ಎನ್ನ ಬೈಲಿಗೆ ತರುವಳು ಅ.ಪ ಕಂಡದ್ದು ಬೇಡುವಳು ತರದಿರೆ ಗಂಡನಲ್ಲೆಂಬುವಳು ತಿಂಡಿಗಾಗಿ ಎನ್ನ ಕಂಡವರ ಕಾಲ್ಹಿಡಿಸಿ ಮಿಂಡೆ ಭಂಡ 1 ಮಾತುಮಾತಿಗಿವಳು ಎನ್ನನು ಕೋತ್ಯಂತೆ ಕುಣಿಸುವಳು ಸೋತೆನೆಂದ್ಹೇಳುತ ಪಾತಕದ್ಹಾಕೆನ್ನ ನೀತಿಗೆಡಿಸುವಳು ಭೀತಿಲ್ಲದ 2 ಒಯ್ಯಾರ ಮಾಡುವಳು ಬೈದರೆ ಬಾಯಿ ತೆರೆದಳುವಳು ಬಾಯಿ ಮುಚ್ಚೆಂದರೆ ಕೈಬಿಟ್ಟೋಡ್ವಳು ದಾಯಾದಿಗಳು ಮುಂದೆ ಹೊಯ್ಮಾಲಿ 3 ತೊಡರು ಬಿಡಳು ಒಡಲಿನ ಕೆಡಕುಗುಣವ ಕಡಿಯಳು ಅಡಿಗಡಿಗೆನ್ನನು ದುಡುಕು ನುಡಿದು ಮನ ಮಿಡುಕಿಸುವಳು ಬಾಯ್ಬಡಕಿ ಬಿಡಿಕಿ 4 ಒದಗಿಸಿ ನಾಂ ತರಲು ಅದರೊಳು ಕದಿದರ್ಧ ತಿನ್ನುವಳು ಪದುಮನಾಭ ನಮ್ಮ ಸದಯ ಶ್ರೀರಾಮನ ಪಾದ ಕೃಪೆಯ ಪಡೆಯದಧಮ 5
--------------
ರಾಮದಾಸರು
ಹೇಳುವೆನು ಕೇಳಿ ಕರ್ಣಾಮೃತವ ಆಲೋಚನೆ ಸಲ್ಲ ತಿಳಿದ ಜ್ಞಾನರಿಗೆ ಪ ಲಕ್ಷಣ ಛಂದಸ್ಸು ಅಡಿಪ್ರಾಸ ಆದಿ ಅಂತಿ ಲಕ್ಷಕ್ಕೊಂದಾದರು ಮೊದಲೇ ಇಲ್ಲಾ ಅಕ್ಷಿ ಇಲ್ಲದವನು ಕೋಲು ಸಂಪಾದಿಸುವ ಅಕ್ಷಿ ಉಂಟಾದವಗೆ ಅದರಿಂದ ಫಲವೇನು 1 ಜ್ಞಾನ ಕರ್ಮರ ಲಂಬನ ಮಾಡಿ ತಿಳಿದಂಥ ಮಾನವನು ನಾನಲ್ಲ ಎಂದೆಂದಿಗೂ ಜ್ಞಾನಿಗಳ ಮನೆಯ ತೊಂಡರ ಪಾದರಕ್ಷೆಯಾ ಪಾಣಿಯಲ್ಲಿ ಪಿಡಿದವನ ನಖಧೂಳಿ ದಯದಿಂದ 2 ರಾಗತಾಳ ಭೇದ ಜತೆ ಜಾಣತನದಿಂದ ವಾಗರ ನಿಮಿತ್ಯ ಪೇಳಲಿಲ್ಲಾ ಹ್ಯಾಗಾದರೇನು ನಾರಾಯಣಚ್ಯುತನೆಂದು ಕೂಗಿ ಕಾಲವ ಕಳದೆ ಜನುಮ ಸಾಧನಕೆ 3 ಬೆಲ್ಲ ಕರದಲಿ ಪಿಡಿದು ಆವನಾದರೇನು ಎಲ್ಲಿ ತಂದರೆ ಅದು ಸೀ ಎಲ್ಲವೇ ಬಲ್ಲನವ ನರಿಯನಿವನೆಂದು ಆಡದಿರಿ ಪುಲ್ಲನಾಭನ ಸ್ಮರಣೆ ಒಂದು ಮುಕ್ತಾರ್ಥ 4 ಹರಿದೈವವೆಂದು ತಾ ಉತ್ತರೋತ್ತರ ತಿಳಿದು ಗುರುಮಧ್ವಮತದಲ್ಲಿ ಲೋಲಾಡಲು ಸಿರಿಯ ಅರಸ ವಿಜಯವಿಠ್ಠಲ ಬಂದು ವೊಲಿವನು ಗುರು ಪುರಂದರನ ದಯೆ ಎನ್ನ ಮೇಲಿರಲಾಗಿ5
--------------
ವಿಜಯದಾಸ
ಹ್ಯಾಂಗೆ ಉದ್ಧಾರ ಮಾಡ್ಯಾನೋ ಶ್ರೀಹರಿ ಹೀಗೆ ದಿನಗಳಿವಂಗನಿಗೆ ಪ ಬ್ಯಾಗ ಪತಿಗೆ ತಾ ಬಾಗದನುಕೂಲವಾಗಿರದೆ ತಿಳಿದ್ಹಾಗೆ ನಡೆವಳ ಅ.ಪ. ಉದಯದಲೆದ್ದತಿ ಸಜಮಲಳಾಗಿ ತಾ ಮುದದಿ ಪತಿಗೆ ನಮಿಸದವಳಿಗೆ ಪದುಮಾಕ್ಷಿ ತುಳಸಿಯ ಪೂಜಿಸಿ ಮನದಿ ಮಾಧವನ ಭಕ್ತಿಲಿ ಸ್ತುತಿಸದವಳಿಗೆ ಪದುಮನಾಭನೇ ಸರ್ವಪರನೆಂದು ಅರಿಯದೆ ಅಧಮ ಶಾಸ್ತ್ರವ ಕೇಳಿ ಅದರಂತೆ ನಡೆವಳ 1 ಹರಿದಿನದಲಿ ಉಂಡು ಹರಿಯನ್ನದಲೇ ಊರ ತಿರುಗಿ ಹೊತ್ತು ಕಳೆವಳಿಗೆ ಸರಸದಿ ನರಹರಿ ನಾಮ ಸಂಕೀರ್ತನೇ ಇರುಳು ಜ್ಯಾಗರ ಮಾಡದವಳಿಗೆ ದೊರಕಿದಷ್ಟರಲೇ ತಾ ಹರುಷ ಪಡೆದೇ ಧನ ಪತಿ ಹೊರಗ್ಹಾಕ್ವಳ 3 ಗುರು ಹಿರಿಯರ ಅತ್ತೆಮಾವರ ಜರಿದು ತಾ ಹಿರಿಯಳು ಮನಿಗೆ ನಾನೆನುತಿರ್ಪಳು ಪರರ ನಿಂದಿಸಿ ಭೂಸುರರು ಬಂದರೆ ಅನ್ನ ದೊರಕದೆನುತ ಹೇಳಿ ಕಳಹುವಳ ಸರಸ ಮೃಷ್ಟಾನ್ನವ ಹರುಷದಿ ಪತಿದ್ವಾರಾ ಹರಿಗರ್ಪಿಸದಲೇ ತ್ವರದಿ ತಾ ತಿನ್ವಳ 3 ಪತಿ ಅಂತರ್ಯಾಮಿ ಶ್ರೀ ಪತಿಯನರಿದು ತನ್ನ ಪತಿಯ ಸೇವೆ ಮಾಡದಿರುವಳಿಗೆ ಪತಿ ಮುಕ್ತಿ ಪಥವೆಂದು ಪತಿಹಿತದವನೆಂದು ಅರಿಯದೇ ಪತಿ ನೋಡ್ವಳಿಗೆ ಪತಿಯಿಂದಲಂಕೃತವಾಗಿಹ ಮಂಗಳಸೂತ್ರವೇ ಸಕಲ ಭೂಷಣವೆಂದರಿಯದವಳಿಗ್ಹಾಂಗೆ 4 ಪರಮ ಅತ್ತೆಯ ಮಾತು ಶಿರದಿ ಸ್ವೀಕರಿಸಿ ಐವರ ಕೂಡ ಧಾರೆಯರೆಸಿಕೊಂಡಾ ಪರಮ ಪಾವನಳಾದ ಭಾರತೀ ದೇವೇರ ಸ್ಮರಿಸದೇ ಅದರಂತಾಚರಿಸದೆ ಇರುವಳಿಗ್ಹ್ಯಾಂಗೆ 5 ವನವಾಸದಲಿ ಪಾಂಡು ತನಯರ ಕೂಡ ತಾ ಧನ ಸುಖ ಬೇಡದೆÀ ಪೋದವಳು ಘನ ಹಸಿವುತೃಷೆಯಿಂದ ಅನ್ನ ಬೇಡಿದ ದುರ್ವಾಸಾದಿಗಳನು ಆದರಿಸಿದವಳಾ ಆಜನನಿ ದೃಪವ ನಂದನಿಯ ಕೃತ್ಯಗಳನ್ನು ನೆನೆದು ತನ್ನಯ ಮನವನ್ನು ತೊಳೆಯದವಳು 6 ಮರುತಂತರ್ಗತ ಸ್ವಾಮಿ ಸಲಹೆನ್ನದೇ ಪರರಿಗೊಂದೆಡೆ ಇಕ್ಕಿ ಪಂಕ್ತಿ ಭೇದವ ಮಾಡಿ ಕರ್ಮ ಮಾಡ್ವಳಿಗೆ ಪರಮ ಪಾವನನಾದ ಹನುಮೇಶವಿಠಲನ ನೆರೆ ನಂಬದಲೇ ದೇಹ ಸ್ಥಿರವೆಂದು ತಿಳಿವಳಿಗ್ಹ್ಯಾಂಗ 7
--------------
ಹನುಮೇಶವಿಠಲ
ಅಂಬಿಗ ನಾ ನಿನ್ನ ನಂಬಿದೆ - ಜಗದಂಬಾರಮಣ ನಿನ್ನ ಹೊಂದಿದೆ ಪತುಂಬಿದ ಹರಿಗೋಲಂಬಿಗ - ಅದಕೊಂಬತ್ತು ಛಿಧ್ರಗಳಂಬಿಗ ||ಸಂಭ್ರಮದಿಂದಲಿಅಂಬಿಗ ಅದರಿಂಬನರಿತು ನಡೆಸಂಬಿಗ 1ಹೊಳೆಯ ಅಬ್ಬರ ನೋಡಂಬಿಗ ಅಲ್ಲಿಸೆಳವು ಬಹಳ ಕಾಣೋಅಂಬಿಗ ||ಸುಳಿಗೊಳಗಾದೆನುಅಂಬಿಗ - ಎನ್ನಸೆಳೆದುಕೊಂಡು ಒಯ್ಯೋಅಂಬಿಗ 2ಹತ್ತು ಬೆಂಬಡಿಗರು ಅಂಬಿಗರು - ಅಲ್ಲಿಒತ್ತಿ ಬರುತಲಿಹರಂಬಿಗಹತ್ತುವರೆತ್ತಲುಅಂಬಿಗ ಎನ್ನಎತ್ತಿಕೊಂಡು ಒಯ್ಯೋಅಂಬಿಗ 3ಆರು ತೆರೆಯ ನೋಡಂಬಿಗ ಸುತ್ತಿಮೀರಿ ಬರುತಲಿವೆಅಂಬಿಗ ||ಆರೆನೆಂತಿಂತುಅಂಬಿಗ ಮುಂದೆದಾರಿಯ ತೋರಿಸುಅಂಬಿಗ 4ಸತ್ಯವೆಂಬುವ ಹುಟ್ಟುಅಂಬಿಗ ಓದುಭಕ್ತಿಯೆಂಬುವ ಪಾತ್ರಅಂಬಿಗ ||ನಿತ್ಯಮುಕ್ತ ನಮ್ಮ ಪುರಂದರವಿಠಲನಮುಕ್ತಿಮಂಟಪಕೆ ಒಯ್ಯೋ 5
--------------
ಪುರಂದರದಾಸರು
ಆರುಮುನಿದರು ಮುನಿಯಲಿ ಎನ್ನಪಾರು ಮಾಡುವಹರಿನಿನ್ನ ದಯವಿರಲಿಪವಾರಿಜಾಕ್ಷನೆ ನಿನ್ನ ಕರುಣವೆಂಬಾಲಯಸೇರಿ ಕೊಂಡವರಿಗೆ ಆರಂಜಿಕಿನ್ನೇನು ಅ.ಪಬಿರುಗಾಳಿ ಭರದಿಂದ ಬೀಸೆ ಮಹಗಿರಿಯು ನಡುಗಿ ಅದರಿಂದಾಗ್ವುದೆಘಾಸಿನರಿಗಂಜಿ ಹುಲಿ ಸ್ಥಳ ತ್ಯಜಿಸಿಮರೆಯಾಗೋಡುವದೇನರಹರಿ ತವಪಾದ ಸ್ಮರಿಪ ದಾಸರುನರಗುರಿಗಳಿಗ್ಹೆದರುವರೇನು 1ದಿನಕರನಿಗೆ ಕುಂದ್ಹೊರಿಸಿ ಇಂಥಬಿನುಗರು ಜರೆದರೆ ಆಗುವನೆ ಮಸಿವನಜಾಕ್ಷನೊಳು ಮನ ನಿಲಿಸಿದಿನ ದಿನ ಘನವಾಗಿ ನೆನೆವ ಭಕ್ತರಮನ ಮಣಿಯುವುದೇನಯ್ಯಬಿನುಗರ ಕೃತಿಗಿನ್ನು 2ಬರುವುದೆಲ್ಲವು ಬಂದು ಬಿಡಲಿ ಎನ್ನಸರುವರು ಪರಿಪರಿ ಜರಿದುನೋಡಲಿಸಿರಿವರ ನಿನ್ನ ದಯವಿರಲಿಮರಿಯಾದ್ಹಾಳಾಗಲಿ ಸ್ಥಿರಸುಖ ಪ್ರಾಪ್ತಿಸಲಿವರದ ಶ್ರೀರಾಮ ನಿನ್ನಸ್ಮರಣೆಯೊಂದೆನಗಿರಲಿ 3
--------------
ರಾಮದಾಸರು
ಆವ ಕುಲವಾದರೇನು ಪ.ಭಾವದ ಎಲ್ಲಾನ ತಿಳದವನಿಗೆ ಮತ್ತೇ ಅಪಅಸುಡೊಂಕು ಕಬ್ದು ಇರಲು - ಅದರೊಳಗಿದ್ದರಸ ತಾನು ಡೊಂಕೇನಲೊ - ಮರುಳೆವಿಷಯಭಾವನೆ ಬಿಟ್ಟು ನೀ ಹೋಗಿ ಗುರುಗಳಹಸನಾಗಿ ಕೇಳು ಕಾಣೋ - ಮನುಜಾ 1ನಾನಾವರ್ಣದ ಆಕಳ - ಕ್ಷೀರದಲಿನಾನಾವರ್ಣಗಳಹುದೆ - ಮನುಜಾಹೀನ ಭಾವನೆಗಳನಿಂದಿಟ್ಟು ನೀ ಪೋಗಿಜ್ಞಾನಿಗಳ ಕೇಳು ಕಾಣೋ - ಮನುಜಾ 2ಶರಧಿಯೊಳ ತೆರೆನೊರೆಗಳಾ - ಪರಿಯಂತೆಶರೀರವಲ್ಲದೆ ಬೇರಿಹುದೇ ?ವರಪುರಂದರವಿಠಲನ ಸ್ಮರಿಸುತಿರಲು ನಿನಗೆಸಿರಿಯನು ಮುಕುತಿಯಹುದು - ಮನುಜಾ 3
--------------
ಪುರಂದರದಾಸರು
ಇನ್ನೇನುಗತಿಎನಗೆಲೊ ಹರಿಯೆ |ನಿನ್ನನು ನೆನೆಯದೆ ಮೋಸಹೋದೆನಲ್ಲ ಪಅಂಕದೊಳಾಡುವ ಶಿಶುವಿನ ಮುದ್ದಿನ |ಬಿಂಕದ ನುಡಿಗಳ ಕೇಳುತಲಿ ||ಕಿಂಕಿಣಿಧ್ವನಿಯನು ಕಿವಿಗೊಟ್ಟು ಕೇಳುತ |ಮಂಕು ಹರಿಣನಂತೆ ಆದೆನಲ್ಲ 1ಪರವನಿತೆಯರ ಲಾವಣ್ಯಕೆ ಲೋಚನ |ಚರಿಸುತಲವರ ಕೂಟಕೆ ಬೆರಸಿ ||ಉರಿವ ಕಿಚ್ಚು ತನಗೆ ಹಿತವೆಂದು ಅದರೊಳು |ಎರಗಿದ ಪತಂಗದಂತಾದೆನಲ್ಲ 2ತೊಡೆಯೆಡೆ ಗುಹ್ಯಕಾಂಬೆನೊ ಕಾಣೆನೋ ಎಂದು |ಮಡದಿಯರಂಗಸಂಗವ ಮಾಡುತ ||ಒಡಲ ತೀಟಕೆ ಪೋಗಿ ಬಡಿಗಲ್ಲ ಕೆಡಹಿಕೊಂ-|ಡಡಗಿದ ಮೂಷಕನಂತಾದೆನಲ್ಲ 3ಸಲೆ ನಿಜ ವೃತ್ತಿಯ ಬಿಟ್ಟು ಪರಾನ್ನವ |ನಲಿದುಂಡು ಹೊಟ್ಟೆಯ ಹೊರೆಯುತಲಿ ||ಬಲೆಯ ತುದಿಯ ಮಾಂಸಕೆ ಬಂದೆರಗುತ |ಸಿಲುಕಿದ ವಿೂನಿ ನಂತಾದೆನಲ್ಲ 4ಲಂಪಟನಾಗಿ ನಾರಿಯರ ಮುಖಾಬ್ಜದ |ಸೊಂಪಿನ ಕಂಪನಾಘ್ರಾಣಿಸುತ ||ಸಂಪಿಗೆ ಹೂವಿನ ಮೇಲೆ ಮಲಗಿ ತನ್ನಸೊಂದಳಿದಳಿಯಂತೆ ನಾನಾದೆನಲ್ಲ 5ಇಂತು ಪಂಚೇಂದ್ರಿಯ ತಮತಮ್ಮ ವಿಷಯಕೆಮುಂತಾಗಿ ತಮ್ಮ ತಾವಲೆಯುತಿರೆ ||ಸಂತತ ತವತಮ ವಿಷಯಕೆ ಎಳಸಲುಕಾಂತಾರದರಸನಂತೆ ಆದೆನಲ್ಲ 6ಕಂದರ್ಪಲೀಲೆಯ ಗೆಲಿದುಳ್ಳ ಭಕ್ತಿಯ |ತಂದು ಪಂಚೇಂದ್ರಿಯಗಳಿಗೆನ್ನಯ ||ತಂದೆಪುರಂದರವಿಠಲನ ನೆನೆದರೆ |ಎಂದೆಂದಿಗೂ ಭವಬಂಧನ ಬಾರದಲ್ಲ 7
--------------
ಪುರಂದರದಾಸರು
ಉಪದೇಶಾತ್ಮಕ ಕೀರ್ತನೆ38ಕೊರೆದು ಕೊಲ್ಲಿ ನಿನ್ನ ನಿರಯದೊಳಿರುಸುವ ಪಅರದೃಷ್ಟಿಹಾಕಲು ಮರುಗಿ ಕಳವಳಿಸುವಿ 1ಚೋರತನದಿ ಪÀರದ್ರವ್ಯವನ್ನಪ -ಹೀರಿಕೊಂಡ್ ಹೋಗಲು ಹೋರಾಡಿಯಳುತಿಪ್ಪೆ 2ಮಂದಿಯ ಮನೆ ಮನೆಗೆ ಪೋಗಿಪರ-ಮಂದಮತಿಯೆ ನಿನ್ನ ಹಿಂದಾಡಿದ್ದುಕೇಳಿಹಂದಿನಾಯೆಂದದಿ ಕದನಕ್ಕೆ ತೆರಳುವಿ 3ಗುಡ್ಡಿಕೀಳ್ವಂದದಿ ರೋಷವ ಪೊಂದುವಿ 4ನಾತ್ಮಜನುಕ್ತಿಗೆಯನು ಸರಿಸಿ ಪೂ -ತಾತ್ಮನಾಗಿ ಬಾಳು ಅದರಿಂದೆ ಶ್ರೀಪರ-ಮಾತ್ಮನು ಮೆಚ್ಚಿಯಿಷ್ಟಾರ್ಥವ ಕೊಡುತಿಪ್ಪ 5ಬೆನ್ನಿಂದ ಕರುಳನುಚ್ಚಿಸದಲೆ ಬಿಡುವನೇ 6ನಿರುತದಿಯಭಿಮತವಾದ ಧರ್ಮವು ಕೇಳು 7
--------------
ವರದೇಶವಿಠಲ
ಎನ್ನ ಮನದ ಡೊಂಕ ತಿದ್ದಿ-ಚರಣದಲ್ಲಿ ಸೇರಿಸೋ |ನಿನ್ನ ಸೇವಕನಾದ ಮೇಲೆಇನ್ನು ಸಂಶಯವೇಕೆ ಕೃಷ್ಣ ಪಉದಯವಾದರೆ ಊಟದ ಚಿಂತೆ ಅದರ ಮೇಲೆ ಭೋಗದ ಚಿಂತೆ |ಹದಿನಾಲ್ಕು ಲೋಕಂಗಳನಾಳಬೇಕೆಂಬ ಚಿಂತೆ ||ಇದು ಪುಣ್ಯ ಪಾಪವೆಂದು ಹೃದಯದಲಿ ಭಯವಿಲ್ಲದಲೆ |ಮದ ಮೋಹಿತನಾದೆ ನಿನ್ನ ಪದವ ನಂಬದೆ-ದಯಾಳೊ 1ನೆರೆಮನೆಗಳ ಭಾಗ್ಯವ ನೋಡಿ-ತರಹರಿಸುತ ಅಸೊಯೆಯಿಂದ |ಹರಿಯ ಸ್ಮರಣೆಗೆ ವಿಮುಖನಾದೆ - ನರರಸ್ತುತಿಯ ನಾ ಮಾಡಿದೆ ||ಪರರ ಸತಿಗೆ ಪರರನ್ನಕೆ ತಿರುಗಿ ತಿರುಗಿ ಚಪಲನು ಆದೆ |ಗುರುಹಿರಿಯರ ದೂಷಿಸುತಲಿ ಮರುಳನಾದೆ ದೀನಶರಣ್ಯ 2ಅಗಣಿತಸುಖ ಬಂದರೆ ನಾನು -ಅಗಣಿತದುಃಖಕೆ ಹರಿಯೆನ್ನುವೆನು |ಜಗದೊಳಾವ ಲಾಭವು ಬಂದರು ಧನಿಯು ನಾನೆ ಎಂಬೆ ||ಮಿಗೆ ಹಾನಿಗೆ ಹರಿಯನು ದೂಷಿಸಿನೆಗೆದು ಪತಂಗವು ಕಿಚ್ಚಲಿ ಬೀಳುವ |ಬಗೆ ನಾನಾದೆನುಪುರಂದರವಿಠಲನಖಗರಾಜಸುವಾಹನ ಶ್ರೀ ಕೃಷ್ಣ 3
--------------
ಪುರಂದರದಾಸರು
ಎಲ್ಲಿ ಪೋಯಿತೊ ಅವಿದ್ಯಾಪಟಲ ಕಾಣೆ ನಾನುಶರಣರ ಪಾದರಜಸ್ಪರುಶ ಸಂಭೂತವಾದಅನಘಒಡನೆ ಮಧ್ವಮುನಿ ಸರೋವರದಿತೇರಿನೊಳಗೆ ನಿನ್ನ ವಿಹಾರ ಮೈ-ಅನಾದಿಯಿಂದ ಬಂದದ್ದುಅದರ ಸಂಬಂಧಿಗಳುಕದನಗ-
--------------
ಗೋಪಾಲದಾಸರು