ಒಟ್ಟು 325 ಕಡೆಗಳಲ್ಲಿ , 60 ದಾಸರು , 254 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕನೀತಿ ಅಚ್ಯುತಾನಂತ ಗೋವಿಂದ ಅಕ್ಷರೊತ್ತಮ ಸದಾನಂದ ಪ. ನಿಶ್ಚಲ ಭಕ್ತಿಯಿಂ ಮೆಚ್ಚಿಸು ಹರಿಯಂ ನಿಶ್ಚಯ ಪೋಪುದು ಭವಬಂಧ ಅ.ಪ. ಆಧಿವ್ಯಾಧಿಹರಣ ಕಾರಣ ಮಧು ಸೂದನ ಸತ್ಯ ಸದ್ಗುಣವೃಂದ ವೇದಗಮ್ಯ ಪ್ರಹ್ಲಾದ ಕ್ಷೇಮದ ಮ- ಹೋದಧಿಶಯನ ಮುಕುಂದ 1 ಶ್ರೀಬ್ರಹ್ಮಾದಿ ದಿವಿಜಕುಲವಂದಿತ ಶೋಭಿತ ಪಾದಾರವಿಂದ ಈ ಭೂಮಿಯೊಳಗೆ ಜನಿಸಿದಕೆ ಸಫಲ ಲಾಭವೆ ಹರಿಕಥಾನಂದ 2 ಪ್ರಾಣನಿಯಾಮಕ ಸರ್ವತ್ರ ವ್ಯಾಪ್ತ ಧ್ಯಾನಿಸದಿರು ನೀ ಬೇರೊಂದ ದೀನವತ್ಸಲ ಸುಮ್ಮಾನದಿ ಕಾವ ಲ- ಕ್ಷ್ಮೀನಾರಾಯಣ ದಯದಿಂದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಲೋಕೇಶನೆನಿಪ ಶ್ರೀಗುರು ಸಿದ್ಧೇಶ್ವರಗೆ ಪ ನೀ ಕಮಲಮುಖಿ ಆಋವೈರಿಯ ನೇಕ ಮೈಯ್ಯಾಳು ಸುತ್ತಿಕೊಂಡು ವಿ ವೇಕವಿಲ್ಲದೆ ವಿಷವನುಂಡ ಪಿನಾಕಧರÀನಿಗೆ ಸೋಲುವರೆ ನೀ ಜಗವ ಮೋಹಿಪ ಮಾನಿನೀ ಮಣಿಯೇ ಅ.ಪ. ಶಿರದೊಳು ಶಶಿಯ ಕೆಂಜೆಡೆ ಇಹ ಜೋಗಿ ಸ್ಮರನ ದಹಿಸಿ ಭಸ್ಮ ಹಣೆಗಿಟ್ಟ ಯೋಗಿ ಇರುವರೆ ಸ್ಥಳವಿಲ್ಲದಂತೆ ತಾ ಪೋಗಿ ಮೆರೆವ ಸ್ಮಶಾನ ಮಂದಿರಕನುವಾಗಿ ಮರುಲು ಭೂತ ಪಿಶಾಚ ಯಕ್ಷರ ನೆರವಿಯಲಿ ಕುಣಿಕುಣಿದು ಬ್ರಹ್ಮನ ಶಿರವಿಡಿದು ತಿರಿದುಂಬ ಗೊರವಗೆ ಬರಿದೆ ತಿಳಿಯದೆ ಜಗವ ಮೋಹಿಪ ಮಾನಿನೀ ಮಣಿಯೇ 1 ಮಂಡೆಯೋಳ್ ಜಾನ್ಹವಿ ಶಶಿಯನ್ನೆ ಸೂಡಿ ರುಂಡಮಾಲೆಯ ಕೊರಳೊಳಗಿಟ್ಟಪಚಾಡಿ ಕುಂಡಲಿಗಳಾ ಧರಿಸಿರುವನ ನೋಡಿ ಖಂಡ ಪರಶುವೆಂದು ಅವನ ಕೊಂಡಾಡಿ ಧಿಂಡೆಯಾಗಿಹ ಪ್ರಾಯದವಳು ನೀ ನೀನವನನೊಲಿದೆ ಪ್ರ ಚಂಡೆ ಪಾರ್ವತಿ ಜಗವ ಮೋಹಿಪ ಮಾನಿನೀ ಮಣಿಯೇ 2 ಕರದಿ ತ್ರಿಶೂಲ ಧಮರುಗಳ ಧರಿಸಿರುವಾ ಕಂಚರ್ಮಾಂಬಕ ಪುಲಿದೊಗಲುಟ್ಟು ಮೆರೆವಾ ಹಿರಿಯತನಕೆ ವೃಷಭವನೇರಿ ಬರುವಾ ಶಿರಿಯ ಹೊಗಾಡಿ ಫಕೀರನಂತಿರುವಾ ವಿರಚಿಸಿದ ಲೀಲಾವಿನೋದದ ಪರತರ ಶ್ರೀ ಪ್ರಣವರೂಪನ ಗುರುವಿಮಲಾನಂದ ತೊಟ್ಟಿದ ಗುರು ಸಿದ್ಧೇ ಶ್ವರನೆಂದು ತಿಳಿಯದೆ ಜಗವ ಮೋಹಿಪ ಮಾನಿನೀಮಣಿಯೇ 3
--------------
ಭಟಕಳ ಅಪ್ಪಯ್ಯ
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಾಣಿ ಬ್ರಹ್ಮನ ರಾಣಿ ಕಲ್ಯಾಣೀ| ಫಣಿವೇಣಿ ಸದ್ಗುಣ | ಶ್ರೇಣಿ ವೀಣಾ ಪುಸ್ತಕ ಪಾಣಿ ಪ ಜಾಣೆ ಶ್ರೀ ಜಗತ್ರಾಣಿ ಶಾಸ್ತ್ರ ಪ್ರ- ವೀಣೆ ವೇದ ಪ್ರಮಾಣಿ ನಿನಗೆಣೆ | ಗಾಣೆ ಸಂತತಕೇಣವಿಡದೆನ್ನಾಣೆ | ನೆಲಸಿರು ಮಾಣದೆನ್ನೊಳು ಅ.ಪ. ತ್ರಿಜಗ ಶುಭ ಕಾಯೇ | ಓಂಕಾರರೂಪಿಣಿ | ಮಾಯೆ ಮುನಿಜನಗೇಯೆ ಸುಖದಾಯೇ || ತೋಯಜಾಂಬಕಿ ಶ್ರೀಯರ ಸೊಸೆ | ಆಯದಿಂದಲಿ ಶ್ರೇಯಸ್ಸುಖಪದ - ವೀಯೆ ಸಂತತ ಕಾಯೆ ಶತಧೃತಿ ಪ್ರೀಯೆ | ನೀನೆನಗೀಯೆ ವಾಕ್ಸುಧೆü 1 ಅಕ್ಷರ ಸ್ವರೂಪೆ ನಿರ್ಲೇಪೇ | ಮೌನಿಜನ ಮಾನಸ | ಪಕ್ಷ ಸಕಲಾಧ್ಯಕ್ಷೆ ಶುಭಚರಿತೇ | ಸೂಕ್ಷ್ಮ ಸ್ಥೂಲ ಸುಲಕ್ಷಣಾನ್ವಿತೆ | ಮುಮುಕ್ಷು ಜನ ನಿಜ | ಭಕ್ತಿ ಭುಕ್ತಿವರ ಪ್ರದಾಯಕಿ | ಮುಕ್ತಿ ಸುಖ ಸೌಖ್ಯ ಪ್ರದಾಯಕಿ 2 ಸುಂದರಾಂಗಿ ಆನಂದ ಗುಣ ಭರಿತೇ | ವಂದಿಸುವೆ ತವಪದ -| ದ್ವಂದಕಾನತನಾಗಿ ಸಚ್ಚರಿತೇ | ಯೆಂದು ಮದ್‍ಹ್ವನ್ ಮಂದಿರದಿ ನೀ | ನಿಂದು ಆಪದ್ ಬಂಧು ಕರುಣಾ | ಸಿಂಧುವನು ನಾನೆಂದು ಪೊಗಳ್ವಾ -| ನಂದವರ ಸದಾನಂದ ಪಾಲಿಸೇ 3
--------------
ಸದಾನಂದರು
ವಾಸುದೇವನ ಪುರಕೆ ತೆರಳಿದಾರು |ಶ್ರೀಶನಾ ಪ್ರಿಯ ಗುರು ಪ್ರಾಣೇಶ ದಾಸಾರ್ಯ ಪ ಮೂರ್ತಿ ಧ್ಯಾನಮಾಡೀ ತತ್ವ |ಮಾನಿಗಳೊಳೊಂಮ್ಮಿಂದೊಮ್ಮೆ ಆನಂದದಿಂದಲೀ 1 ಹರಿಯೆ ಸರ್ವೋತ್ತಮಾ ತದ್ರಾಣಿ ಶಿರಿಬೊಮ್ಮ |ಮರುತ ದೇವರೆ ಗುರುವು, ತಾರತಮ್ಯ ||ವರಪಂಚಭೇದ ಜ್ಞಾನವನರಿತು ಮನದಿ ಹರಿ |ಪುರದೊಳಿಹ ಪರಮ ಭಕ್ತರ ಕಾಣಬೇಕೆನುತ 2 ಮೋಕ್ಷರೌದ್ರೀ ಅಬ್ಧಮಾಘದರ್ಶಾ ಪೂರ್ವಭಾದ್ಧರಾ |ನಕ್ಷತ್ರ ಸೋಮವಾರದಿದ್ದವ ದ್ವಿತಿಯ ಯಾಮದೀ |ಲಕ್ಷಿ ಇಟ್ಟೂ ಲಯದ ಚಿಂತನೆಯ ಗೈಯುತಲಿ |ಪಕ್ಷಿವಾಹನ ಶ್ರೀಶಪ್ರಾಣೇಶ ವಿಠಲೆನುತ 3
--------------
ಶ್ರೀಶಪ್ರಾಣೇಶವಿಠಲರು
ವಿಜಯದಾಸರ | ದಿವ್ಯ ವಿಜಯ ನೆನೆವರ ಪ ವಿಜಯಸಾರಥಿಯ ಮನದಿ ಭಜಿಪ ಸತ್ವರ ಅ.ಪ. ಆದಿದೇವನ | ಒಲುಮೆ ಸಾಧಿಸಿದನ ಮೋದ ಭರಿತನ 1 ಮನದಿ ಹರಿಯನು | ಸತತ ಕುಣಿಸಿ ನಲಿವನು ಅಮೃತ ಖಣಿ ವಿಶಿಷ್ಟನು 2 ಭಕ್ತಿಯುಕ್ತಿಯ | ಮಹಾವಿರಕ್ತಿ ಉಕ್ಕುತ ಭಕ್ತ ಜನರಿಗೆ ಬಿಂಬ ವ್ಯಕ್ತಿ ಮಾಡಿದ 3 ತುಂಬಿ ವೈಭವ ಕದಂಬ ಸಲಹುವ 4 ಭಾರತೀಪತಿ | ಇವರ ವೀರಸಾರಥಿ ಸಾರಿ ಭಜಿಪರ ಸಕಲ ಭಾರವಹಿಸುವ 5 ಅಪರೋಕ್ಷ ಕೊಡುವನು ತ್ರಕ್ಷವಲ್ಲಭಾ ಇವರ ದಕ್ಷರೆನಿಸಿಹ 6 ದಾಸರತ್ನನಾ | ದಯವ ಲೇಸು ಪಡೆಯಲು ಸೂಸಿ ಬರುವನು ಶ್ರೀ ಜಯೇಶವಿಠಲ 7
--------------
ಜಯೇಶವಿಠಲ
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವೇಣು ಗಾನಪ್ರಿಯ - ಗೋವಿಂದ ನಮ್ಮಮಾನ್ಯ ಮಾನದನೇ - ಗೋವಿಂದ ಪ ದಕ್ಷಿಣಾಕ್ಷಿಯಲಿಹ - ಗೋವಿಂದ | ನಮ್ಮ | ಪಕ್ಷಿಯ ವಾಹ - ಮುಕುಂದ ||ಕುಕ್ಷಿಲಿ ತ್ರಿಭುವನ - ಗೋವಿಂದ | ನಮ್ಮ | ಅಕ್ಷರ ಕ್ಷರವರ _ ಮುಕುಂದ1 ಪೂರ್ಣ ಗುಣಾರ್ಣವ - ಗೋವಿಂದ | ನಮ್ಮ | ಪೂರ್ಣ ಭೋದನುತ ಮುಕುಂದಪೂರ್ಣಾನಂದ ಪ್ರದ - ಗೋವಿಂದ | ಕುಭ | ವಾರ್ಣವ ದಾಟಿಸು ಮುಕುಂದ 2 ಭವ | ಗೋಜನೆ ಬಿಡಿಸೊ - ಮುಕುಂದ 3 ಕಾರಣ ಕಾರಣ - ಗೋವಿಂದ | ಜಗ | ಕಾರಣ ನೈಮಿತ್ಯ - ಮುಕುಂದಈರಣ ಜಗಕೆಲ್ಲ - ಗೋವಿಂದ | ಮದ ವಾರಣ ಮಾರಣ - ಮುಕುಂದ 4 ಶಿರಿ ಹಯವದನನೆ - ಗೋವಿಂದ | ನಮ್ಮ | ಶಿರಿ ಕೃಷ್ಣ ರಾಮನೆ - ಮುಕುಂದಶಿರಿ ವೇದವ್ಯಾಸ - ಗೋವಿಂದ | ಕಾಯೊ | ಗುರು ಗೋವಿಂದ - ವಿಠಲ ಮುಕುಂದ 5
--------------
ಗುರುಗೋವಿಂದವಿಠಲರು
ವ್ಯಾಸರಾಯರ ಸೇವೆ ಲೇಸಾಗಿ ಮಾಡಲು ದಾಸನೆಂದೆನಿಸಿಕೊಂಬ ಪ ಸಾಸಿರನಾಮದ ವಾಸುದೇವನ ಭಕ್ತ ಕಾಷಾಯ ವಸ್ತ್ರಧರಅ.ಪ ತಾ ಸಹಗಮನದಿ ಪತಿಸಹ ಪೋಗುವ ಆ ಸ್ತ್ರೀಯು ಬ್ರಹ್ಮಣ್ಯತೀರ್ಥರಲ್ಲಿಗೆ ಪೋಗೆ ಶ್ರೀಶ ಬದರಿಯಲ್ಲಿ ಪೇಳಿದ ಮಹಿಮೆಯ ಆ ಸುಮಹಿಮ ಪ್ರಹ್ಲಾದನ್ನ ಸ್ಮರಿಸುತ್ತ ಮೋಸ ಬರುವುದೆಂದಾಲೋಚನೆ ಇಲ್ಲದೆ ಸತಿ ವಂದಿಸೆ ಸುಮಂಗಲ್ಯವನಿತ್ತು ಆ ಸಮಯದಿ ಮಂತ್ರಾಘ್ರ್ಯಾವನೆ ಕೊಂಡು ತಾ ಸುಮ್ಮಾನದಿ ಬನ್ನೂರಿಗೆ ಪೋಗ್ಯತಿ ಯಾ ಸತಿಪತಿಯ ಪ್ರಾಣವನುಳಿಹಿ ರನ್ನ ತಾ ಸಮೀಪದಿ ಮಠದಲ್ಲಿ ವಾಸಮಾಡಿಸಿ ಕುಸುಮಾಕ್ಷತೆ ಫಲ ಮಂತ್ರಿಸಿ ಆಕೆಗೆ ಕೊಟ್ಟು ಆ ಸುಮಂಗಲಿಯಲ್ಲಿ ಪ್ರಹ್ಲಾದ ಪುಟ್ಟಿದ ಆ ಸಮಯದಿ ಚಿನ್ನದ ಹರಿವಾಣದಲಿ ಶಿಶು ತಾನು ಬಿಡದೆ ಕಣ್ವ ನದಿಯಲ್ಲೀ ಶಿಷ್ಯರಿಗೆ ತೊಳಸಿ ತಂದು ಮಠಕೆ ಆಗ ವಾಸುದೇವನಭಿಷೇಕ ಕ್ಷೀರವನ್ನು ಆ ಸುರಭಿಯ ಕರೆದಭಿಷೇಕÀವನೆ ಕೊಂಡ ಲೇಸಿನಿಂದಲಿ ಮೊಲೆಯುಂಡು ಬೆಳೆದನು ವಾಸವನುತ ದೇವೇಶನ ಪಾಡುತ ವಾಸವಾದರು ಮಳೂರಿನಲಿ1 ಆ ಶಂಕುಕÀರ್ಣನೇ ಶೇಷಾವೇಶದಲ್ಲಿ ಶ್ರೀಶನ ಕÀಂಭದಿ ತೋರಿಸಿದಾತನೆ ತಾ ಸುಮ್ಮಾನದಿ ನರಸಿಂಹನ ಪೂಜೆಗೆ ತಾಸು ಬಿಡದೆ ಆಸೆ ತೀರಿಸಿದಾತನೆ ಈಸು ಮಹಿಮೆಗೆ ವ್ಯಾಸ ನಾಮಕರಣವು ಆ ಸುಮನೋಯತಿ ಆಶೀರ್ವಾದವಮಾಡೆ ತಾ ಸುಮ್ಮನಿರದಲೆ ಕೃಷ್ಣನ್ನ ಸ್ಮರಿಸುತ್ತ ಈ ಶಿಶುಬೆಳೆಯೆ ಆಭರಣದಿ ಶೋಭಿತ ವೀ ಸುಮತಿಯ ಮಂಗುರುಳಿಗೆ ಮುತ್ತಿನ ಗೊಂಡೆ ಆ ಸುಮನೋಹರಗಳೆಲೆ ಮಾಗಾಯಿ ಭೂಸುರ ನಿಕರವ ಮೋಹಿಪ ಬಗೆವಂಟಿ ಭೂಸುರ ಕರ್ಣಕೆ ಚಳತುಂಬು ಬಾವಲಿ ನಾಸಿಕಛಂದವು ಪದ್ಮವಿಕಸಿತ ಮುಖನೇತ್ರ ಸೂರ್ಯ ಕಾಂತಿಯ ಮುಖ ಫಣೆ ತಿಲಕನ ನೃ ಕೇಸರಿ ಪ್ರಾಯಗೆ ಹಾರಪದಕÀವಿಟ್ಟು ಆ ಸುಕರಗಳಲಿ ಉಂಗುರ ಪೊಳೆಯುತ ಆ ಸುಕಾಂತಿಯ ಕಡಗ ಸರಪಳಿ ವಂಕಿಯೂ ಲೇಸು ವಡ್ಯಾಣವ ನಡುವಿಗೆ ಧರಿಸಿ ಆ ಸಣ್ಣ ಪಾದಕ್ಕೆ ಗೆಜ್ಜೆ ಕಾಲ್ಗಡಗವು ಈ ಶಿಶುವಿನ ಹರಿ ಆಡಿಸುವಾ 2 ವರ್ಷವೈದಕೆ ಚೌಲ ಅಕ್ಷರಾಭ್ಯಾಸ ವತ್ಸರ ಉಪನಯನ ಮಾಡಿ ಧೀರಗೆ ಸಪ್ತ ವರ್ಷಕೆ ತುರ್ಯಾಶ್ರಮ ಕಾರುಣ್ಯದಿಂದ ಶ್ರೀಪಾದರಾಯರಲ್ಲಿ ಅರುಹಿಸಲು ವೇದಶಾಸ್ತ್ರ ನಿಗಮಪಾಠ ಸಾರವ ತರ್ಕತಾಂಡವ ಚಂದ್ರಿಕೆಯ ಮಾಡಿ ಸೂರಿಶಿಷ್ಯ ವಾದಿರಾಜನ್ನ ಪಡೆದೆಯೋ ಶೂರಕೇಸರಿಯಂತೆ ವಾದಿದಿಗ್ಗಜಗಳ ಧಾರಿಣಿಯಲ್ಲಿ ತಲೆ ಎತ್ತದಂತೆ ಮಾಡಿ ನೂರೆಂಟು ಮಂದಿ ಶೂರವಾದಿಗಳಿಂದ ವಾರಿಧಿ ಕಟ್ಟಿ ಮಾರುತಿಯನು ಪ್ರತಿಷ್ಠೆಯ ತಾಮಾಡಿ ಶ್ರೀ ರುಕ್ಮಿಣಿಪತಿ ಗೋಪಾಲ ಕೃಷ್ಣನ ಸಾರಸಾಕ್ಷನ ಸೇವೆ ಅನುದಿನವು ಮಾಡಿ ಪುರಂದರ ದಾಸರಿಗಂಕಿತಾ ಪಾರ ಕುಹುಯೋಗವ ನೂಕಿ ಭೂಷತಿಯನು ಕಾಯ್ದ ಪಾರ ಮಹಿಮೆ ಫಾಲ್ಗುಣ ಬಹುಳ ಚೌತಿಯು ಶ್ರೀ ರಮಣನ ಪುರಿಯಾತ್ರೆಗೆ ರಥವೇರಿ ತೋರಿದ ವರದ ವಿಜಯವಿಠ್ಠಲನಾ ಪಾ ಸೇರೀದರಿವರು ಆನಂದದಿ * 3 * ಈ ಕೀರ್ತನೆ ವರದ ವಿಜಯವಿಠಲಾಂಕಿತದಲ್ಲಿ ದಾವಣಗೆರೆಶ್ರೀನಿವಾಸದಾಸಕೃತ ವ್ಯಾಸರಾಜ ಚರಿತೆಯಲ್ಲಿ ಉಪಲಬ್ಧವಿದೆ.
--------------
ವಿಜಯದಾಸ
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶರಣು ಶರಣು ಹರ ಸುಂದರ ಶಂಕರ | ಹೊರೆಯೋ ನಾ ನಿಮ್ಮ ಬಾಲನು ಪ ಪತಿ - ಧರ | ಸರ್ವ ಜನರ ಸಹಕಾರೀ || ಅಘ ಕುಲಿಶ ನೆ | ಪರ್ವತ ಸುತೆ ಮನೋಹಾರಿ 1 ಭವ ಭ್ರಮ | ಪಂಚಾಕ್ಷರ ಸುಖದಾತಾ || ವಂಚನಿಲ್ಲವದರ ವಾಂಛಿತ ಪೂರಿತ | ಅಂಚೆ ಗಮನೆ ಸನ್ಮತಾ 2 ಮಹಿತಳ ವ್ಯಾಪಕ ಮಹಿಮನು - ಪಮ್ಯನೆ | ಮಹಿಪತಿ ನಂದನ ಪ್ರಭೋ | ಅಹಿಯಾ ಭರಣನೆ ಅಹವರಾನಳವಿದು | ವಿಹಿತಾಂಬಕ ತೃಯ ಶಂಭೋ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರೀರ ಜರಿಯಬೇಡಾ | ಬೆರಿಯಬೇಡಾ | ಸ್ಥಿರವಿದ್ದ ಕೈಯಲಿ ಗುರು ಶರಣವ ಹೊಕ್ಕು | ತಾರಿಸೋ ಭವದಿಂದ ನೀ ಮರಳು ಜೀವವೇ ಪ ಲೋಕದೊಳು ವಾರಿಜೋದ್ಭವ ನಿನ್ನ ಜನ್ಮ ಕೊಟ್ಟು | ನೂಕಲಾಗ ತಾಯಿ ಗರ್ಭದೊಳಾವರಿಸಿ ತಾನು ಧರಿಸಿ | ರೇಖೆ ರೂಪ ಲಾವಣ್ಯ ಅವಯವಂಗಳಿಂದ | ಸಾಕಾರವಾಗಿ ಸುಂದರೆನಿಸಿ ವರನೆನಿಸಿ | ಬೇಕಾದ ವಿದ್ಯವನು ಸರ್ವ ಸಂಪಾದಿಸಲು | ತಾ ಕಾರ್ಯವಾಗಿ ಅಭ್ಯಾಸದಿಂದಾ ಧ್ಯಾಸದಿಂದಾ | ವಾಕ್ಪಟುದಲಿ ಸಮರ್ಥನೆಂಬನಾಮ ಪಡೆದು | ಪ್ರಖ್ಯಾತವಾದೆ ಈ ಕಾಯದಿಂದ 1 ಸ್ನಾನವನು ಮಾಡಿ ತ್ರಿಕಾಲ ಸಂಧ್ಯಾನ ವಿಧಿಯನು | ಮೌನ ಜಪಗಳವನು ತಪಗಳನು | ಸ್ವಾನುಭಾವ ಸೂರ್ಯಾಡಲಾಗಿ ನೇಮವನುಷ್ಠಾನ ಮೊದಲಾದ | ಧ್ಯಾನ ಧಾರಣವನು ಕಾರವನು | ಜ್ಞಾನ ಭಕ್ತಿ ವೈರಾಗ್ಯ ಶಮದಮ ಕರುಣನು ದಿನಮಾಳ್ಪಾ | ಕರ್ಮ ನೈಮಿತ್ಯವಾದಾ ನಿತ್ಯವಾದಾ | ತಾನು ತನ್ನ ಉದ್ಧರಿಸಿಕೊಳಲಿಕ್ಕೆ ಭಾವದಿಂದಾ | ಮಾನುಭಾವg ದಯ ಪಡೆವುದರಿಂದಾ 2 ತಾನು ಕುಣಿಯಲಾರದೆ ಅಂಕಣವು ಡೊಂಕು ಎಂದು | ಹೀನೋಯಿಸಿ ನುಡಿವ ನಟ ವೇಷಿಯಂತೆ | ನೀನು ನೀಟ ನಡಿಯದ್ಹೋಗಿ ದೇಹ ಕಶ್ಮಲವೆಂದು | ಜ್ಞಾನ ರಹಿತನಾಗಿ ಹಳಿವುದು ಉಚಿತ ಇದು ಪ್ರಾಚೀತ | ಈ ನಾಲ್ಕೆರಡು ವೈರಿಗಳ ದಂಡಿಸದೇ ಬರಿದೇ | ಹೀನ ವೈರಾಗ್ಯವಾ ಶಣಸಬೇಡಾ ದಣಿಸಬೇಡಾ | ಕಾನನದ ಹುತ್ತಮ್ಯಾಲ ಬಡಿದರೇನು ವರಗಿರುವಾ | ಆ ನಾಗದರ್ಪಗುಂದದು ಕಂಡಾ 3 ಪರಿಪರಿ ಮುಮ್ಮುಳಿ ವಳಗಾಗಿ ಜೀವಿಸುವ | ತೆರನಂತೋಯಂದು ಚಿಂತಿಸಬಹುದು ಸುರಿಸಬಹುದು | ನೂರು ಭಂಡಿಗಳ ತÀುಂಬಿ ಬಂದರೇನು ತಾ | ಧರೆಯೊಳು ಸೂಲ ತಾ ಹಾವುದೊಂದೇ ನೋವುದೊಂದೇ | ಬರೆದ ಬರಹವೇ ಪಣಿಯಾಲಿದ್ದಪರಿ ತಪ್ಪದೈ | ವರ ಕೂಡಿ ಕೊಟ್ಟಡವಿ ಮಾಡುವದೇನು ನೋಡುದೇನು | ಪರಿ | ಪಡಿ ನೀನು 4 ಸಾಕ್ಷರಾವೆಂಬ ಮೂರಕ್ಷರವ ಬರೆದು ತಾ | ರಾಕ್ಷಸಾವೆಂಬುದೇ ಅರ್ಥವಹುದು ಅನರ್ಥ ವಹುದು | ಪರಿ ವಳಿತು ಹೊಲ್ಲೆ | ಪಕ್ಷದ್ವಯಕ ಬಾಹುದು ಮಾಡಿದಾಂಗ ಕೂಡಿದಾಂಗ | ರಕ್ಷಿಸೆಂದು ಮಹಿಪತಿಸುತ ಜೀವನಾದಿ ವಿಶ್ವಾ | ಭವ ಹಿಂಗು ಬ್ಯಾಗ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಿವನ ನಾಮಾಮೃತವ ಸವಿದು ಧನ್ಯರಾಗಿರೊ ಜಗದೊಳು ಪ ಶಿವ ಶಿವ ಎಂಬೊ ಎರಡಕ್ಷರವು ಭವರೋಗಕೆ ಇದು ಮೂತೌಷಧವು ಜವನಾಳ್ಗಳ ಭಯ ಲವಲೇಶವಿಲ್ಲವು ಇದು ಸತ್ಯವು 1 ಪಾತಕ ಪಹರಿನಿತು ಪೋತ ಮಾರ್ಕಂಡೇಯಗಾಯುವ ನೀಡಿತು ಭೂತೇಶನ ಪದವಾರಿಜ ಧ್ಯಾನದಿ ಧನ್ಯರಾಗಿರೋ 2 ಹರನ ದಿವ್ಯಪದವಾರಿಜ ಧ್ಯಾನ ಪರ ಚರ ಮುಕುತಿ ಪಥಕೆ ಸೋಪಾನ 3
--------------
ಶಾಮಸುಂದರ ವಿಠಲ
ಶುಭ ಯೋಗಿ ಪುಂಗಗೆ | ಮಂಗಳಂ ಪಾಪೌಘ ಭಂಗಗೆ | ಮಂಗಳಂ ಯಾಳಗಿಯ ದೊರೆ ರಾಮಲಿಂಗನಿಗೆ ಪ ಮೋದದಲಿ ದತ್ತಾವಧೂತನು ಪೇಳಿದನು ಶ್ರೀಕಪಿಲ ಮುನಿವರ |ಗಾಧಿಯಂ ಮಣಿಚೂಲ ಶೈಲದ ಗುಹದಿ ತಪಮಾಡಿ ||ಮೇದಿನಿಯ ಜನರಿಂಗೆ ಸಹಜದಿ ವೇದ ವೇದಾರ್ಥವನು ಬೋಧಿಸಿ |ಭೇದ ಬುದ್ಧಿಯ ಬಿಡಿಸಿ ಕೃಪೆಯನು ಮಾಡಿ ಪೊರೆ ಎಂದು 1 ಕಪಿಲಮುನಿ ಲಿಂಗಾಂಬಿಕೆಗೆ ತಾ ಸ್ವಪ್ನದಲಿ ಪೇಳಿದನು ನಿಶ್ಚಯ |ಅಪರಿಮಿತ ವರ ಕೊಡುವ ಬೆಟ್ಟದ ರಾಮಲಿಂಗೇಶ ||ತಪವು ಮಾಡಲು ಕೊಡುವ ನೀ ತಪವು ಮಾಡೆಂದು ಪೇಳಿದ |ಗುಪಿತ ಮೂಲವ ತೋರಿ ಬೋಧಿಸಿ ಸುಖವ ಪಡೆ ಎಂದ 2 ಮೊದಲು ಲಿಂಗಾಂಬಿಕೆಯು ಮನದಲಿ ನೆನೆದು ಬೆಟ್ಟದ ರಾಮಲಿಂಗನ | ಪದುಳದಿಂ ಸೇವಾ ಪ್ರದಕ್ಷಿಣೆ ಭಕ್ತಿಭಾವದಲಿ |ಮುದದಿ ಪ್ರಾರ್ಥಿಸೆಗೈದು ಎನ್ನಗೆ ಸುತನ ಕೊಡಬೇಕೆಂದು ಪ್ರಾರ್ಥಿಸೆ | ಸದಮಲಾತ್ಮರಾಮಲಿಂಗನು ಜನಿಸುತಿಹನೆಂದ 3 ಸತಿ ಲಿಂಗಾಂಬೆ ಗರ್ಭದೊಳುಪಾವನಾತ್ಮಕ ಜನಿಸಿ ಬೆಳೆದುದ್ದಾಮ ಆನಂದಾಭ್ಧಿಯೊಳು ಸ- |ದ್ಭಾವದಿಂ ಮಣಿಚೂಲ ಶೈಲದಿ ತಪವನೆಸಗಿದಗೆ 4 ಕೆಲವು ದಿನ ಮಣಿಚೂಲ ಶೈಲದ ಗುಹೆಯೊಳಗೆ ತಪಗೈಯುತಿರೆ ಶ್ರೀಮಲಹರಿಯು ಪ್ರತ್ಯಕ್ಷರೂಪದಿ ಮಂತ್ರ ಬೋಧಿಸಿದ ||ಚೆಲುವ ರಾಮಪ್ಪಯ್ಯ ಮನದಲಿ ಹರುಷವಂ ಕೈಕೊಂಡು ಸಿದ್ಧಿಯಫಲವ ಪಡೆದನು ಮಂತ್ರ ಮಹಯೋಗಾದಿ ಸಿದ್ಧಿಗಳ 5 ಗೌತಮಾನ್ವಯದಲ್ಲಿ ಜನಿಸಿ ಸುಕೀರ್ತಿ-ಪಡೆದಪ್ಪಯ್ಯ ಗುರುವರ |ಮಾತು ಮಾತಿಗೆ ರಾಮಲಿಂಗನ ನೆನೆ ನೆನೆದು ಮನದಿ ||ಸಾತಿಶಯ ಮಣಿಚೂಲ ಶೈಲವ ಸೇರಿ ಕಂಡಿಹ ರಾಮಲಿಂಗನ |ಮಾತು ತಿಳುಹಿಸಿ ಗ್ರಹಕೆ ಕರಕೊಂಡು ಬಂದಿಹಗೆ 6 ಪರಮ ತಾರಕ ಮಂತ್ರ ಕರ್ಣದೊಳೊರೆದ ಗುರು ಅಪ್ಪಯ್ಯ ಮೂರ್ತಿಯ | ಚರಣವನು ಧ್ಯಾನಿಸುತೆ ಮಹಾ ವಾಕ್ಯಾರ್ಥ ಶೋಧಿಸಿದ | ಪರಿಪರಿಯ ವೇದಾರ್ಥವನು ಬಹು ಹರುಷದಿಂ ಶಿಷ್ಯರಿಗೆ ಬೋಧಿಸಿ | ನಿರುತ ಬ್ರಹ್ಮಾಕಾರ ವೃತ್ತಿಯೊಳಿರುವ ಶರಣಂಗೆ 7 ಪಂಚಲಿಂಗವು ಪಂಚ ತೀರ್ಥಗಳುಳ್ಳ ಯಾಳಗಿ ಕ್ಷೇತ್ರದಲಿ ಪ್ರ- |ಪಂಚವನು ಪರಮಾರ್ಥ ಬುದ್ಧಿಯಲಿಂದ ನೆರೆಗೈದು ||ವಂಚನಿಲ್ಲದ ರಾಮಲಿಂಗ ವಿರಂಚಿ ಭಾವದೊಳಿರ್ದು ಜನರಿಗೆಹಂಚಿಕೆಯ ಪೇಳಿದನು ಇಲ್ಲಿಗೆ ಗಂಗೆ ಬರುತಿಹಳು 8 ಇಂದು ವೇದ ರಸೈಕ ಶಕದ ವಿಕಾರಿವತ್ಸರ ದಕ್ಷಿಣಾಯನ |ಛಂದದಾಶ್ವೀನ ಶುದ್ದ ಸಪ್ತಮಿ ಸೌಮ್ಯ ವಾಸರದಿ ||ಸುಂದರದ ಜ್ಯೇಷ್ಠರ್ಕ ವೃಶ್ಚಿಕ ರಾಶಿ ಶುಭದಿನ ತೃತಿಯ ಪ್ರಹರದಿಹೊಂದಿದನು ಸುಸಮಾಧಿ ಸುಖವನು ರಾಮಗುರುವರನು 9 ಸುರರು ಅಂಬರಕೇರಿ ಪುಷ್ಪದ ಮಳೆಯ ಸುರಿದರು ಹರುಷದಿಂದಲಿಪರಮ ವಿಸ್ಮಯವಾಗೆ ಸುರದುಂದುಭಿಯ ಧ್ವನಿಕೇಳಿ || ಹರುಷ ದಿಂದಲಿ ಶಿರವ ನಲಿಯುತ ದೇವ ಗಣಿಕೆಯರು ನೃತ್ಯ ಮಾಡುತ ತರ ತರದಿ ಜಯ ಘೋಷ ಮಾಡುತ ಜನ ಸಹಿತವಾಗಿ 10|| ಜಯ ಜಯತು ಜಯ ನಿರ್ವಿಕಾರಗೆ ಜಯ ಜಯತು ಜಯ ನಿರ್ವಿಶೇಷಗೆ | ಜಯ ಜಯತು ನಿಃಸೀಮ ಪರಮಾನಂದ ರೂಪನಿಗೆ || ಜಯ ಜಯತು ಭಕ್ತಾಭಿಮಾನಿಗೆ ಜಯ ಜಯತು ಮಹ ಸಿದ್ಧ ವರದಗೆ | ಜಯ ಜಯತು ಸಿಂಧಾಪುರದ ಸಖರಾಮ ಗುರುವರಗೆ 11
--------------
ಗುರುರಾಮಲಿಂಗ