ಒಟ್ಟು 936 ಕಡೆಗಳಲ್ಲಿ , 83 ದಾಸರು , 722 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾರ್ತಿಕೇಯ ಮಹಾಸೇನ ನಿಜ ಭೃತ್ಯರೊಳಾಗು ಪ್ರಸನ್ನಪ. ಚಿತ್ತಸಾಕ್ಷಿ ಹರಿಭಕ್ತಿಜ್ಞಾನಮ- ನಿತ್ತು ಕಾಯೊ ಷಡ್ವದನಅ.ಪ. ತಂದೆ ತಾಯಿ ಕುಲಸ್ವಾಮಿ ಹರಿ- ಯೆಂದು ಭಜಿಸುವೆನು ಪ್ರೇಮಿ ಸ್ಕಂದನಾಮಕ ನೀನಂತರ್ಯಾಮಿ ಸುಂದರ ಮಯೂರಗಾಮಿ 1 ಪಾರ್ವತಿ ಶಿವಸಂಜಾತ ಪರಿ- ಪಾಲಿತ ಸುಜನವ್ರಾತ ಸರ್ವಗೀರ್ವಾಣ ಸೇನಾಧ್ಯಕ್ಷ ಸರ್ವೋತ್ತಮ ಹರಿಪಕ್ಷ 2 ತಾರಕದ್ಯೆತ್ಯಸಂಹಾರ ಸುವಿ- ಚಾರೈಕಪರಾಧಾರ ಪ್ರಾರಂಭಗೈದ ಕಾರ್ಯ ಸಫಲಿಪುದು ಭಾರ ನಿನ್ನದು ರಣಧೀರ 3 ಪಾವಂಜಪುರನಿವಾಸ ನಃ ಪಾತು ಶಿವಗಣಾಧೀಶ ದೇವ ಲಕ್ಷ್ಮೀನಾರಾಯಣದಾಸ ಪಾವನಚರಿತ ವಿಲಾಸ 4
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲ ಸಜ್ಜನರಿಗನ್ನಕಿಲ್ಲದ ಸಾವಕಾಲ ಪ ಅರಮನೆಯ ಬಾಗಿಲನು ಕಾದು ಕೊಂಡಿರ್ದು ನೃಪ ವರನೊಡನೆ ಮಾತುಕಥೆಗಳ ನಡೆಸುತ ವರಮಂತ್ರಿಯಾಗಿ ರಾಜಾಧಿ ಕಾರಂಗಳನು ಕಾಲ 1 ಅಡಗಡಿಗೆ ಮಂತ್ರಿಗಳನಾಶ್ರಯಿಸಿ ಕೋವಿದರು ಗಡಿಗಳನು ಕೊಡಿಸೆನಗೆ ತನಗೆನ್ನುತ ಕಾಲ 2 ಮತ್ತಿವರನಾಶ್ರಯಿಸಿ ಕೆಲರು ಮಣಿಹಂಗಳನು ಪೊತ್ತು ಸೀಮೆಯ ಗ್ರಾಮಗಳ ನೋಡುತ ಇತ್ತ ಕುಳ ಸ್ಥಳ ವಂಚನೆಗಳೆಂದು ಬಂದ ಕಾ ಕಾಲ 3 ಬುಡಗಳನ್ನು ಗೈದೆ ಹಾಳ್ಮಾಡಿ ಕೊಂಡಿರ್ದರಿಗೆ ಕಡ ಮೊದಲುಗಳ ಕೊಟ್ಟು ಪೋಗೆಂಬರು ಅಡೆಯಂಚು ಮೂಲೆಗೆಳಗೈದು ಕುಳದೆರಿಗೆಯನು ಕಾಲ ಕಾಲ 4 ಚಾಡಿ ಕೋರರು ಹೆಚ್ಚಿ ಕೆಡಿಸಿವರ ರಾಜ್ಯವನ್ನು ರೂಢಿ ಪತಿಗಳಿಗೆಲ್ಲ ಕಿವಿಯೇ ಕಣ್ಣು ನೋಡಿದರೆ ಮರುತ ಸುತ ಕೋಣೆ ಲಕ್ಷ್ಮೀರಮಣ ನಾಡಿಸಿದ ವೋಲು ಜಗವಾಡುತಿಹುದು 5
--------------
ಕವಿ ಪರಮದೇವದಾಸರು
ಕಾಲನೇಮಿ ಕಾಡುತಿರುವನೊ | ಕೇಳೊ ಶೌರಿಕಾಲನೇಮಿ ಕಾಡುತಿರುವನೊ ಪ ಕಾಲನೇಮಿ ಕಾಡುತಿಹನು | ಶೀಲಗೆಡಿಸಿ ಮನದ ಚರ್ಯತಾಳಲಾರೆ ಅವನ ಬಾಧೆ | ಕೊಲ್ಲು ಬೇಗ ಅವನ ಹರಿಯೇ ಅ.ಪ. ಸ್ನಾನಗೈದು ನಿನ್ನ ಪೂಜೆಯ | ಧ್ಯಾನವು ಆವಾಹನಾದಿಯಏನು ನೋಡಿದೆ ತ್ವರ್ಯ ಬರುವ | ಧೀನಪಾಲ ಕಾಯೊ - ನೀನೆ 1 ದೈತ್ಯ ಪರಿವಾರದೊಡನೆಯ |ಕೃತ್ಯ ಮನದಿ ಚರಿಸಿ ಪೋಪನುದೈತ್ಯ ಹರನೆ ಹಯವದನ | ಸತ್ಯ ಮಾಡೊ ನಿನ್ನ ವಚನ 2 ಮುರುಳಿ ಧರನೆ ಮಾನಸಾಂಡದ | ಧೊರೆಯೆ ನೀನು ದೂರ ನೋಳ್ಪುದೆಗುರು ಗೋವಿಂದ ವಿಠಲ ನಿನ್ನ | ಚರಣ ದಡಿಗೆ ಸೇರಿಸೆನ್ನ 3
--------------
ಗುರುಗೋವಿಂದವಿಠಲರು
ಕಾವ ಜನಕ ನೀನಿರುತಿರಲೆನಗಿ ನ್ನಾವ ಬಂಧುವು ಬೇಕೊ ಮಾಂಗಿರಿಯ ರಂಗ ಪ ದೇವ ನೀನಲ್ಲದೆ ಲಕ್ಷಜೀವಿಗಳಿದ್ದು ಈವ ಸೌಖ್ಯವು ಬೇಡ ಮಾಂಗಿರಿಯ ರಂಗ ಅ.ಪ ನಾರಿಯ ಮಾನಾಪಹಾರವ ಗೈದಾಗ ವೀರರೈವರು ತಮ್ಮ ಮೋರೆಯ ತೋರ್ದರೆ ನೂರುಮಂದಿ ವೇದಪಾರಂಗತರಿದ್ದು ಕ್ರೂರ ಕಾರ್ಯಂಗಳ ನಿಲಿಸಿದರೆ ರಂಗ 1 ಮೂವತ್ತುಮೂರುಕೋಟಿ ನಿರ್ಜರರಿದ್ದು ರಾವಣನೊಬ್ಬನ ಜೈಸಿದರೆ ಪಾವಕ ಹಸ್ತವನಿತ್ತ ಗಿರೀಶನ ದೇವಗಣೇಶ್ವರರುಳಿಸಿದರೇ 2 ಅರಕ್ಷಿತವಾದುದ ಸುರಕ್ಷಿತ ಗೈವೆ ಸುರಕ್ಷಿತವಾದುದಕ್ಷಯ ಗೈವೆ ನಿರಕ್ಷರಕುಕ್ಷಿಗೆ ಮೋಕ್ಷವ ನೀನೀವೆ ದುರಿತಕ್ಷಯ ಗೈದು ಪಾಲಿಸುವೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾವದೇವ ನಿನಗೆ ನಾ ಕೈಮುಗಿದು ಬೇಡ್ವೆ ಕಾಮಜಪಿತ ಎನ್ನ ಕಾಯಮೋಹ ಬಿಡಿಸೈ ಪ ಮಸಣಬುದ್ದಿಯ ಮರೆಸು ಪುಸಿನುಡಿಯ ಪರಿಹರಿಸು ವಸನ ಒಡವ್ಯೆಂದೆಂಬ ವ್ಯಸನ ಕಡೆಹಾಯ್ಸು ದಿಸೆಗೆಡಿಸಿ ಬಳಲಿಸುವ ಹಸಿವು ತೃಷೆಯನಡಗಿಸಿ ಹಸನಗೆಡಿಸುವ ಮಮ ರಸನೆರುಚಿ ಕೆಡಿಸು 1 ಅಳದ್ಹೋಗ್ವ ಇಳೆಸುಖದ ಹಲುಬಾಟವನೆ ಬಿಡಿಸು ಮಲಿನಸಂಸಾರಮಾಯ ಕಳವಳಿಕೆ ತಪ್ಪಿಸು ಸಲೆ ಸಾಧುಸಂತತಿಯ ಬಳಗದೊಳು ಕೂಡಿಸು ಹೊಳೆಯಮನಸಿನ ಸಕಲ ಚಲನೆ ದೂರೆನಿಸುತ 2 ದೋಷರಾಶಿಯ ತೊಡೆದು ಮೋಸಪಾಶವ ಕಡಿದು ಆಸೆ ನಾಶಗೈದು ನಿರ್ದೋಷನೆನಿಸಿ ಶ್ರೀಶ ಶ್ರೀರಾಮ ನಿಮ್ಮ ಸಾಸಿರ ನಾಮವೆನ್ನ ಧ್ಯಾಸದಲಿ ಸ್ಥಿರನಿಲಿಸಿ ಪೋಷಿಸನುದಿನದಿ3
--------------
ರಾಮದಾಸರು
ಕಾವೇರಿ ಕಲುಪಾಪಹಾರಿ ಪಾವನ ಶರೀರೆ ಶುಭತೋಷಕಾರಿ ಪ ವಾಸುದೇವ ರಂಗೇಶನಾಲಯಕೆ ನೀ ನಾವರಣಳಾಗಿಪ್ಪೆ ವಿರಜೆಯಂತೇ ದೇವ ಋಷಿ ಗಂಧರ್ವ ಪಿತೃಪ ನರವರರಿಂದ ಸೇವನೀಯಳಾಗಿ ಸರ್ವಾರ್ಥ ಪೂರೈಪೆ 1 ಜಲಚರಾನ್ವೇಷಣ ಲುಬ್ಧ ಸಾಲಿಗ್ರಾಮ ತುಲಸಿ ವೃಕ್ಷವನೆ ಕೊಡಿಸಿದ ಮಾತ್ರದೀ ಕಲುಷರಾಶಿಗಳೆಲ್ಲ ಕಳೆದು ಮುಕ್ತಿಯನಿತ್ತೆ ಸಲಿಲಮಂದಿರೆ ನಿನ್ನ ಕರುಣಕೇನೆಂಬೆ 2 ರವಿ ತುಲಾರಾಶಿಗೈದಿದ ಸಮಯದೊಳಗೊಂದು ಮಜ್ಜನ ಗೈವ ಮಾನವರಿಗೆ ಪವನಾಂತರಾತ್ಮಕನ ಪಾದಕಮಲವ ತೋರಿ ಭವಜ ರೋಗವ ಕಳೆದು ಭಾಗ್ಯವಂತರ ಮಾಳ್ಪೆ 3 ಶ್ರೀ ಪವನ ಶಿವರಿಂದ ತಾ ಪೂಜೆಗೊಳುತ ಬಹು ಪರ ಮನು ವ್ಯಾಪಿಸಿಹ ನಿನ್ನೊಳದ್ಯಾಪಿ ಸ್ವರ್ಗಸ್ಥ ಜನ ರೀ ಪೊಡವಿಯೊಳು ತವ ಸಮೀಪದಲಿ ಜನಿಸುವರು 4 ಮೂಢಮತಿ ನಾನು ಕೊಂಡಾಡ ಬಲ್ಲೆನೆ ನಿನ್ನ ಬೇಡಿಕೊಂಡೆನು ಹೃದಯ ನೀಡದೊಳಗೇ ಗೂಡ ಪದ ಶಯನ ಜಗನ್ನಾಥ ವಿಠ್ಠಲನಂಘ್ರಿ ನೋಡುವ ಸೌಭಾಗ್ಯ ದಯ ಮಾಡು ಪ್ರತಿದಿನದಲ್ಲಿ ಬ 5
--------------
ಜಗನ್ನಾಥದಾಸರು
ಕಾಶಿಯಿಂದ ಬಂದ ಬಾಗೀರಥಿಯು ತನ್ನ ವಾಸಕ್ಕೆ ತೆರಳಿದಳು ಲÉೀಸಾಗಿ ತನ್ಹ ಮನದ ಸಂಕಲ್ಪವು ವಾಸಿಯಾಗಲು ತನ್ಹಾಶೆ ಪೊರೈಸಿಸಿ ಪ ಮದದಾನೆ ತನ್ನ ಕಾಲುಗಳ ಸಂಕೋಲೆಯ ನೊದೆದು ಕಳೆವ ತೆರದಿ ಪದುಳದಿ ಶ್ರೀಗುರು ಮುದದಿ ಬಿಡಿಸಿ ತನ್ನ ಸದಮಲಾನಂದವ ಸತತ ಪಡೆವೆನೆಂದು 1 ಮುತ್ತೈದೆತನದಿ ತೆರಳಿಹೋಗಬೇಕೆಂಬ ಚಿತ್ತದಿವಿಸ್ಮರಣೆಗೈದು ಪ್ರತ್ಯುಗಾತುಮ ಆತ್ಮಾರಾಮನ ಸಂಗಡ ಚಿತ್ತೈಸಿದಳು ತನ್ನ ಉತ್ತಮ ಕಾಶಿಗೆ 2 ಪತಿಯ ವಚನದ ಸಂಗತಿಗಳ ಕೇಳುತ ಅತಿ ಹಿತ ತನಗಾಗಲು ಮತಿಗೆ ಮಂಗಲವಾದ ಮುಕುತಿಯ ಸಾಧಿಸಿ ನುತ ವಿಮಲಾನಂದ ಸತತ ಪಡುವೆನೆಂದು 3
--------------
ಭಟಕಳ ಅಪ್ಪಯ್ಯ
ಕೀಳು ಮನವೆ ಏನುಕೆಟ್ಟೆಲೋ ಹಾಳು ಮಾಡಿದಿ ದಿನಗಳ ಪ ನೀಲಮೇಘಶ್ಯಾಮ ಹರಿಪಾದ ಶೀಲಭಕ್ತಿಲಿ ಸ್ಮರಿಸದೆ ಅ.ಪ ಬಾಲತನದ ಸುಶೀಲ ದಿನಗಳ ಜಾಳುಗೈದೆಲೋ ಆಟದಿ ನಾಳೆ ಕಾಲನು ಸೀಳಿ ಕೊಲುವಾಗ ತಾಳಿ ಬಾಳುವುದೆಂತೆಲೊ 1 ಪ್ರಾಯದಿನಗಳ ಕಾಯಜನ ಮಹ ಮಾಯದಾಟದಿ ನೀಗಿದ್ಯೊ ಮಾಯಮೃತಿಯ ಬಾಯೊಳು ಸಿಲ್ಕಿ ನೋಯುವಾಗ ಕಾಯ್ವರಾರೆಲೊ 2 ಇಷ್ಟಕ್ಕಾದರೂ ಕೆಟ್ಟಗುಣಗಳ ಬಿಟ್ಟು ಶ್ರೀರಾಮಪಾದವ ನಿಷ್ಠೆಯಿಂ ಮನಮುಟ್ಟಿ ಭಜಿಸಲೆ ದುಷ್ಟಭವದಿಂ ಗೆಲಿಸುವ 3
--------------
ರಾಮದಾಸರು
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೃಷ್ಣತಾತ ಮ'ಪತಿರಾಯರ ಭಜಿಸೊಅಭಿಮಾನವ ತ್ಯಜಿಸೊ ಅನುಮಾನವ ತ್ಯಜಿಸೊ ಪರಾಜವೈಭವದ ಭೋಗಗಳನುಭ'ಸಿ ಶ್ರೀ ಹರಿಯ ಸ್ಮರಿಸಿಭೋಗದೊಳಗೆ ತ್ಯಾಗದ ಪಾಠವ ಕಲಿಸಿ ಕೊಡುಗೈದೊರೆಯೆನಿಸಿಯೋಗಬಂದತಕ್ಷಣ ವೈಭವ ತ್ಯಜಿಸಿ ಯೋಗಿಯನಾಶ್ರೈಸಿಯೋಗಾಭ್ಯಾಸದಿ ಬೇಗ ಹರಿಯ ಒಲಿಸಿ ಅವನೊಳು ಮನಬೆರೆಸಿ 1ಹರಿಯಧ್ಯಾನಕನುಕೂಲವಾದ ಮೆಟ್ಟಾ ಹುಡಕುತುತಾಹೊರಟಾವರಕಾಖಂಡಿಕಿ ಕ್ಷೇತ್ರದಿ ಕಾಲಿಟ್ಟಾ 'ಶ್ರಾಂತಿಗೆ ಕುಳಿತಾಅರೆನಿ'ುಷದಿ ಹರಿಧ್ಯಾನದಿ ಮೈಮರೆತಾ ಸಮಾಧಿ ಇಳಿಯುತಾವರೃಮುನಿಗಳು ತಪವಗೈದಮೆಟ್ಟಾ ಎನುತಲಿಯೆ ನಿಂತಾ 2ಹಗಲು ಇರಳು ಹರಿಧ್ಯಾನದಿ ತಾ ಮುಳುಗಿ ಅಲ್ಲಿರುತಿರಲಾಗಿ ನಗೆ ಮುಖದಲಿ ಝಗಝಗ ಕಾಂತಿಯು ಬೆಳಗಿ ಸುತ್ತಲು ಬೆಳಕಾಗಿಜಗದಜನಕೆ ಅದು ಅತಿ ಅಚ್ಚರಿಯಾಗಿ ಯೋಗಿಗೆ ಶಿರಬಾಗಿಬಗೆ ಬಗೆ ಭಕುತರು ಬಂದರು ತಾವಾಗಿ ಮ'ಪತಿಮಹಾಯೋಗಿ 3ಅಷ್ಟಸಿದ್ಧಿಗಳು ನೆಲೆಸಿದವಾಗಲ್ಲಿ ಆಶ್ರಮ ಬಾಗಿಲಲಿಎಷ್ಟು ಭಕುತಿಜನ ಬಂದರು ಸ'ತಲ್ಲಿ ಇಷ್ಟಾರ್ಥ ಕರದಲಿಮೃಷ್ಟಾನ್ನ ಭೋಜನ ಪ್ರತಿದಿನದಲ್ಲಿ ನಡೆುತು ಸಮತೆಯಲಿಇಷ್ಟವಾದ ಆಧ್ಯಾತ್ಮಿಕ ಮಾರ್ಗದಲಿ ಉಪದೇಶ ಪಡೆಯುತಲಿ 4
--------------
ಭೂಪತಿ ವಿಠಲರು
ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರುತಿರು ಹೇ ಮನುಜ ಪ ಕ್ಲೇಶಪಾಶಂಗಳ ಹರಿದು ವಿಲಾಸದಿಶ್ರೀಶನ ನುತಿಗಳ ಪೊಗಳುತ ಮನದೊಳುಅ ಘಾಸಿ ಮಾಡಿದ ಪಾಪಕಾಶಿಗೆ ಹೋದರೆ ಹೋದೀತೆಶ್ರೀಶನ ಭಕುತರ ದೂಷಿಸಿದಾ ಫಲಕಾಸು ಕೊಟ್ಟರೆ ಬಿಟ್ಟೀತೆಭಾಷೆಯ ಕೊಟ್ಟು ನಿರಾಶೆಯ ಗೈದ ಫಲಕ್ಲೇಶಗೊಳಿಸದೆ ಇದ್ದೀತೆಭೂಸುರಸ್ವವ ಹ್ರಾಸ ಮಾಡಿದ ಫಲಏಸೇಸು ಜನುಮಕು ಬಿಟ್ಟೀತೆ 1 ಜೀನನ ವಶದೊಳು ನಾನಾ ದ್ರವ್ಯವಿರೆದಾನಧರ್ಮಕೆ ಮನಸಾದೀತೆಹೀನ ಮನುಜನಿಗೆ ಜ್ಞಾನವ ಬೋಧಿಸೆಹೀನ ವಿಷಯ ಅಳಿದ್ಹೋದೀತೆಮಾನಿನಿ ಮನಸದು ನಿಧಾನವಿರದಿರೆಮಾನಾಭಿಮಾನಗಳುಳಿದೀತೆಭಾನುಪ್ರಕಾಶನ ಭಜನೆಯ ಮಾಡದಹೀನಗೆ ಮುಕುತಿಯು ದೊರಕೀತೆ2 ಸತ್ಯಧರ್ಮಗಳ ನಿತ್ಯವು ಬೋಧಿಸೆತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥವ ವಿಚಿತ್ರದಿ ಪೇಳೆಕತ್ತೆಯ ಚಿತ್ತಕೆ ಹತ್ತೀತೆಪುತ್ಥಳಿ ಬೊಂಬೆಯ ಚಿತ್ರದಿ ಬಣ್ಣಿಸಿಮುತ್ತು ಕೊಟ್ಟರೆ ಮಾತನಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆಅರ್ತಿಯ ತೋರದೆ ಇದ್ದೀತೆ 3 ನ್ಯಾಯವ ಬಿಟ್ಟನ್ಯಾಯವ ಪೇಳುವನಾಯಿಗೆ ನರಕವು ತಪ್ಪೀತೆಬಾಯಿ ಕೊಬ್ಬಿನಲಿ ಬಯ್ಯುವ ಮನುಜಗೆಘಾಯವಾಗದೆ ಬಿಟ್ಟೀತೆತಾಯಿತಂದೆಗಳ ನೋಯಿಸಿದವನಿಗೆಮಾಯದ ಮರಣವು ತಪ್ಪೀತೆಮಾಯಾಜಾಲವ ಕಲಿತ ಮನುಜನಿಗೆಕಾಯ ಕಷ್ಟವು ಬಿಟ್ಟೀತೆ 4 ಸಾಧು ಸಜ್ಜನರ ನೋಯಿಸಿದ ಮಾಯಾವಾದಿಗೆ ನರಕವು ತಪ್ಪೀತೆಬಾಧಿಸಿ ಪರರರ್ಥವ ದೋಚುವವಗೆವ್ಯಾಧಿಯು ಕಾಡದೆ ಬಿಟ್ಟೀತೆಭೇದವೆಣಿಸಿ ಬಲು ಕ್ಷುದ್ರವ ಕಲಿತರೆಮೋದವೆಂದಿಗು ಆದೀತೆಕದ್ದು ಒಡಲ ಪೊರೆವವನ ಮನೆಯೊಳುಇದ್ದದ್ದು ಹೋಗದೆ ಉಳಿದೀತೆ5 ಅಂಗಜ ವಿಷಯಗಳನು ತೊರೆದಾತಗೆಅಂಗನೆಯರ ಸುಖ ಸೊಗಸೀತೆಸಂಗ ದುಃಖಗಳು ಹಿಂಗಿದ ಮನುಜಗೆಶೃಂಗಾರದ ಬಗೆ ರುಚಿಸೀತೆಇಂಗಿತವರಿತ ನಿಸ್ಸಂಗಿ ಶರೀರ ವ-ಜ್ರಾಂಗಿಯಾಗದೆ ತಾನಿದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದಮಂಗಗೆ ಮುಕುತಿಯು ದೊರಕೀತೆ 6 ಕರುಣಾಮೃತದಾಭರಣವ ಧರಿಸಿದಶರಣಗೆ ಸಿರಿಯು ತಪ್ಪೀತೆಕರುಣ ಪಾಶದುರವಣೆ ಹರಿದಾತಗೆಶರಣರ ಕರುಣವು ತಪ್ಪೀತೆಅರಿತು ಶಾಸ್ತ್ರವನಾಚರಿಪ ಯೋಗ್ಯಗೆಗುರು ಉಪದೇಶವು ತಪ್ಪೀತೆವರ ವೇಲಾಪುರದಾದಿಕೇಶವನಸ್ಮರಿಸುವನಿಗೆ ಮೋಕ್ಷ ತಪ್ಪೀತೆ 7
--------------
ಕನಕದಾಸ
ಕೇಶವನೊಲುಮೆಯು ಆಗುವತನಕ ಹರಿ ದಾಸರೊಳಿರು ಮನವೆ ದಾಸರ ಸ್ತುತಿಯನು ಪೊಗಳುತ ಮನದೊಳು ಪ ಕಾಶಿಗೆ ಪೋದರೆ ಪೋದೀತೆ ಲೇಸಾಗದೆ ಸುಮ್ಮನಿದ್ದೀತೆ ಮೋಸವ ಮಾಡದೆ ಬಿಟ್ಟೀತೆ ನಿಜವಲ್ಲದೆ ಪುಸಿಯಾದೀತೆ 1 ಸೊಣಕನ ಮನಸಿಗೆ ಸೊಗಸೀತೆ ಹೀನ ವಿಷಯಗಳು ಬಿಟ್ಟೀತೆ ಮಾನಾಭಿಮಾನವು ಉಳಿದೀತೆ ದೀನಗೆ ಮುಕ್ತಿಯು ದೊರಕೀತೆ 2 ಕತ್ತೆಯ ಮನಸಿಗೆ ಬಂದೀತೆ ತೊತ್ತಿನ ಮನಸಿಗೆ ಬಂದೀತೆ ಅರ್ಥ ತೊರೆಯದೇ ಬಿಟ್ಟೀತೆ ಚಿತ್ರದಿ ಬೊಂಬೆ ವಿಚಿತ್ರದಿ ಬರೆದಿತ್ತ ಮುತ್ತು ಕೊಟ್ಟರೆ ಮಾತಾಡೀತೆ 3 ನಾಯಾಗಿ ಹುಟ್ಟೋದು ಬಿಟ್ಟೀತೆ ಮಾಯಾವಾದಿಗೆ ಮುಕುತಿಯು ದೊರಕೀತೆ ಬಾಯಿಬೊಬ್ಬಿಲಿ ಬೊಗಳುವ ಮನುಜಗೆ ಘಾಯವಾಗದೆ ಬಿಟ್ಟೀತೆ ಕಾಯಕ ಕಷ್ಟ ಬಿಡದಿದ್ದೀತೆ 4 ರ್ವಾದಿಗೆ ಮುಕುತಿಯು ದೊರಕೀತೆ ಗೈದವಗೆ ವ್ಯಾಧಿ ಕಾಡದೆ ಬಿಟ್ಟೀತೆ ಬುದ್ಧಿಹೀನನೆಂಬೋದು ಬಿಟ್ಟೀತೆ ಇದ್ದದ್ದೋಗದೆ ಉಳಿದೀತೆ 5 ಅಂಗನೆಯರ ಬಯಸೀತೆ ಶೃಂಗಾರದ ಬಗೆ ತೋರೀತೆ ಭೃಂಗಗೆ ಮುಕ್ತಿಯು ದೊರಕೀತೆ 6 ಕರುಣಾನನ ಸ್ಮರಣೆವುಳ್ಳರಿಗೆ ಪರಮ ಪದವಿ ಆಗದಿದ್ದೀತೆ ಚರಣ ಸೇವಕನಾಗಿ ಇರು ಕಂಡ್ಯ ಮನವೆ 7
--------------
ಬೇಲೂರು ವೈಕುಂಠದಾಸರು
ಕೇಳಮ್ಮ ತಂಗಿ ಕೇಳಮ್ಮ ಪ ಕೇಳಿ ಪುರಾಣದಿ ಪೇಳಿದ ಕೃಷ್ಣನ ಲೀಲೆಯ ಪಾಡುತ ``ಬಾಳಮ್ಮ'' ಅ.ಪ ನಿಷ್ಟೆಯಿಂದಲಿ ಬಲು ಶಿಷ್ಟಳಾಗುತ ದುಷ್ಟರಿಂದ ದೂ``ರಾಗಮ್ಮ'' 1 ಹರಿದಾಸರಪದ ಹರುಷದಿ ಹಾಡುತ ಗುರು ಹಿರಿಯರ ಮನ ``ಕೊಪ್ಪಮ್ಮ'' 2 ಕಾಲ ಕಳೆಯದೆ ಶೀಲಮತಿ ನೀ “ನಾಗಮ್ಮ'' 3 ವಿದ್ಯೆಯ ಕಲಿತು ಬದ್ಧಿವಂತ | ಳಾ | ಗಿದ್ದರೆ ಸುಖ ಶತ “ಸಿದ್ಧಮ್ಮ'' 4 ವಂದಿಸಿ ತುಲಸಿ ವೃಂದಾವನ ಪೂಜಿಸು ಮುಂದೆ ನಿನಗೆ ``ಆನಂದಮ್ಮ'' 5 ಹೀನರ ಬೆರೆಯದೆ ಮೌನವ್ರತದಲಿ | ಜ್ಞಾನಿ ಜನರ ನೀ ``ನರಸಮ್ಮ'' 6 ಮೂಢ ಜನರ ಒಡನಾಡದೆ ಭಕ್ತಿಲಿ ಮಾಡುವ ಸಜ್ಜನರ ``ಸಂಗಮ್ಮ'' 7 ಧರ್ಮದಿಂದ ಸತ್ಕರ್ಮ ಮಾಡುತ ನಿರ್ಮಲಗೊಳಿಸಿ ಸಂತ ``ರಂಗಮ್ಮ'' 8 ಪವನ ಪಿತನ ಕಥಾಶ್ರವಣವೆ ಪುಣ್ಯವು ಭವ ವಿದು ಕತ್ತಲು ``ಕಾಳಮ್ಮಾ'' 9 ಸದನಕೆ ಬಂದಿಹ ಬುಧರಾವರಿಸಲು ಮಂದಬಲು ನಿನಗದ ``ರಿಂದಮ್ಮ'' 10 ಎಂದೆಂದಿಗು ಪರನಿಂದೆಯ ಮಾಡದೆ ಮಂದಿರದಿರುವದೆ ``ಚಂದಮ್ಮ'' 11 ಸಾರಿದ ಜನರಘದೂರಗೈದು ಹರಿ ತೋರುವ ನುಜಗುರು ``ಈರಮ್ಮ'' 12 ಅತ್ತಿಯ ಮನಿಗೆ ಹೆತ್ತವರಿಗೆ ಉತ್ತಮ ಕೀರ್ತಿ ``ತಾರಮ್ಮ'' 13 ಗೋವಿಪ್ರಾಳಿ ಸೇವಿಸುತಿರುವದೆ ಕೋವಿದರಿಗೆ ಬಲು ``ಜೀವಮ್ಮ'' 14 ಭಾವದೊಳಗೆ ಪರದೇವನೆ ಪತಿಯೆಂದು ಪಡಿ ``ಭೋಗಮ್ಮ'' 15 ಭೇದಜ್ಞಾನ ಸಂಪಾದಿಸು ಕ್ಷಮಿಸುವ ಶ್ರೀಧರ ನಿನ್ನಾಪ ``ರಾಧಮ್ಮ'' 16 ಕೋಪದಿ ಪರರಿಗೆ ತಾಪವ ಬಡಿಸಲು ಲೇಪವಾಗುವದು ``ಪಾಪಮ್ಮ'' 17 ಇಂಗಡಲಾತ್ಮಜನಂಘ್ರಿ ಸರೋಜಕೆ ಸತಿ ``ತುಂಗಮ್ಮ'' 18 ದಾಸಜನರ ಸಹವಾಸದೊಳಿರುವದೆ ಕಾಶಿಗಿಂತ ವಿ``ಶೇಷಮ್ಮ'' 19 ಕಲಿಯುಗದಲಿ ಸಿರಿನಿಲಯನ ನೆನೆದರೆ ಸುಲಭ ಮುಕ್ತಿ ತಿಳಿ ``ಕಂದಮ್ಮ'' 20 ಪತಿಯು ಸದ್ಗತಿಗೆ ಗತಿ ಎಂದರಿತಹ ಮತಿಯುತ ಸತಿಯೆ ``ಯವನಮ್ಮ'' 21 ಮಧ್ವಸಿದ್ಧಾಂತದ ಪದ್ಧತಿ ತಪ್ಪದೆ ಇದ್ದರೆ ಹರಿಗತಿ ``ಮುದ್ದಮ್ಮ'' 22 ಸೋಗಿಗೆ ನೀ ಮರುಳಾಗಿ ನಡೆದರೆ ಯೋಗಿ ಜನರ ಮನ ``ಕಲ್ಲಮ್ಮ'' 23 ಶೀಲೆ ಗುಣದಿ ಪಾಂಚಾಲೆಯು ಎಲ್ಲ ಬಾಲೆಯರೊಳು ``ಮೇಲಮ್ಮ'' 24 ನೇಮದಿ ನಡೆದರೆ ಪ್ರೇಮದಿ ಸಲಹುವ ಶಾಮಸುಂದರನು ``ಸತ್ಯಮ್ಮ'' 25
--------------
ಶಾಮಸುಂದರ ವಿಠಲ
ಕೇಳಿ ಬಂದೆ ಪ ಕೇಳಿ ಬಂದೆ ನಿನ್ನ ಮೊರೆಹೊಕ್ಕವರ ಕೈಯ್ಯಾ | ಇಳೆಯೊಳಗ ಬಿಡನೆಂಬ ಬಿರುದವ ನಾ1 ಸುಗ್ರೀವ ತಾ ಪುಗೆ ಒಡಲವನು ವಾಲಿಯನು | ನಿಗ್ರಹಿಸಿರಾಜ್ಯ ಪದವಿತ್ತನೆಂದು 2 ಶರಧಿ ಧಡಿಯಲಿ ವಿಭೀಷಣನು ಶರಣವನು | ಬರಲು ಧೃಡ ಸಂಪತ್ತು ನಿತ್ತನೆಂದು 3 ಖಂಡಿಸಿ ಕೌರವರ ಬಳಗವನು ಸೈನ್ಯವನು | ಪಾಂಡವರನು ಸ್ಥಾಪನೆ ಗೈದಾನೆಂದು 4 ಏನ್ನನು ಪೇಕ್ಷಿಸದಿರು ನೀನು ಕಾರಣನು | ಸನ್ನುತ ಮಹಿಪತಿ ಸುತ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೈಪಿಡಿದೆನ್ನನು ಕಾಪಿಡು ನಲವಿಂ ಕನ್ನಡ ನುಡಿವೆಣ್ಣೆ ಪ. ಈ ಪಸುಳೆಗೈದಾ ಪಾಪವದಾವುದು ಕೋಪಿಸದಿರೆನ್ನಾಣೆ ಅ.ಪ ಮುಳಿವಿಂತೇತಕೆ ನಳಿನದಳಾಂಬಕೆ ಎಳೆಗೂಸಿನ ಮನಕೆ ಕಳವಳದಿಂದತಿ ಬಳಲಿಕೆಯಾದರು ತಳುವುದಿದೇನಿದು ಸಾಕೇ 1 ಮಾತೆಯ ಮಮತೆಗೆ ಸೋತು ಭಜಿಸುವೀ ಪೋತನ ನೆರೆನೋಡಿ ಪ್ರೀತಿಯಿಂ ಕರೆದಾತುಕೋ ನಲ್ವಾತಿನಿಂ ಕೈನೀಡಿ 2 ಪರಿಪರಿಯೆಡರಿನ ಗಿರಿದುರ್ಗಂಗಳಾವರಿಸಿರುತಿಹುದೆ ಪರಿಯಿಂದದನುತ್ತರಿಸಿ ಬಂದಪೆ ಕರುಣಿಸು ಭರದೆ 3 ಕಾರ್ಯ ಕಾರಣ ಕರ್ತೃ ನೀನಹುದಾರ್ಯೆ ಸದಾ ಪೊರೆಯೇ ಕೋರಿಕೆಗಳನೀಡೇರಿಸಿಯಣುಗರ ನಿರಪಾಯದೆ ಕಾಯೇ 4 ಭಾಷೆಗೆ ತಪ್ಪಿದ ದೋಷಿಯೆನ್ನುತುಪೇಕ್ಷಿಸಬೇಡೆನ್ನ ಶೇಷಗಿರೀಶನೆ ಪೋಷಕನಾಗಿರೆ ನಿರ್ದೋಷಿಯೆನಿಸುವೆ ನೀಂ5
--------------
ನಂಜನಗೂಡು ತಿರುಮಲಾಂಬಾ