ಒಟ್ಟು 171 ಕಡೆಗಳಲ್ಲಿ , 46 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಔತುಕೊಂಡಿ ಯಾಕೊ ನರಹರಿಪ್ರಾರ್ಥನೆಯನ್ನು ಕೇಳೊ ಸ್ವಾಮಿ ಪವೇದ ತಂದುಭಾರಪೊತ್ತುಕೋರೆ ತೋರಿ ಕರುಳ ಬಗೆದುಬೇಡಿ ಭೂಮಿ ದೂಡಿನೃಪರಸಾಗರವ ಬಂಧಿಸಿದ ಭಯವೋ 1ಕದ್ದು ಬೆಣ್ಣೆ ಕಳ್ಳನೆನಿಸಿವದ್ದು ತ್ರಿಪುರಾಸುರರ ಸದೆದುಹದ್ದನೇರುವುದನೆ ಬಿಟ್ಟುಹಯವನೇರಿದ ಭಯವೋ ಸ್ವಾಮಿ 2ತರಳಗೊಲಿದು ಬರಲು ನಿನ್ನಇರಿಸಿ ಸ್ನಾನಕೆನುತ ಪೋಗಿತ್ವರದಿ ಬಂದು ನೋಡಲು ಅದ್ಭುತದಿ ಬೆಳೆದ ಭಯವೋ ದೇವ 3ನಿಲುಕದಿರಲು ನಿನ್ನವದನಯುವಕ ನೋಡಿ ಮೊರೆಯನಿಡಲುತವಕಿಸುವಿ ಬಾಲಕನೆ ನಿನ್ನಸಮಕೆ ಎನ್ನ ಮಾಡಿಕೊ ಎಂದು 4ಸಿರದಿ ಕರವನಿಡುತ ತನ್ನಸಮಕೆ ಬರುವ ತೆರದಿ ನಿನ್ನಸಿರವ ಪಿಡಿದು ಬಿತ್ತಿ ಸ್ತುತಿಸೆಕುಳಿತೆ ಕೂಡಲಿಯ ತೀರದಲಿ 5ಭಕ್ತರೆಲ್ಲ ನೆರೆದು ನಿನ್ನಭಕ್ತಿಪಾಶದಿಂದ ಬಿಗಿದುಇಚ್ಛೆ ಬಂದ ತೆರದಿ ಕುಣಿಸೆಮೆಚ್ಚಿಅವರಪೊರೆವೆÀ ದೇವ6ಬಂದ ಜನರು ಛಂದದಿಂದತುಂಗಭದ್ರೆ ಸಂಗಮದಲಿಮಿಂದು ನಿನ್ನ ವಂದಿಸುವರೊತಂದೆ ಕಮಲನಾಭವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ
ರಾಮ ಶ್ರೀರಾಮ ಸೀತಾರಾಮ ಶ್ರೀರಾಮರಾಮನೆ ರವಿಕುಲಸೋಮಶ್ರೀರಾಮಪರಾಮ ರಾಮ ರಘುರಾಮನೆ ದಶರಥರಾಮನೆ ಗುಣಗಣಧಾಮನೆ ಶ್ರೀರಘು ಅ.ಪಕೌಸಲ್ಯಾದೇವಿಯ ಕಂದನೆ ರಾಮಕೌಶಿಕಯಜÕವ ಕಾಯ್ದ ಶ್ರೀರಾಮಹಿಂಸಿಸಿದ ತಾಟಕಿಯನು ಕೊಂದರಾಮಧ್ವಂಸಮಾಡಿದೆ ಶಿವಧನು ಮುರಿದುರಾಮಸಂಶಯವಿಲ್ಲದೆ ಸೀತೆಕರವಪಿಡಿದುತನ್ನಂಶದ ಪರಶುರಾಮನಿಗೊಲಿದನೆ ಶ್ರೀ 1ದಶರಥರಾಮ ನೀನರಸನಾಗೆನಲುಅಸುರಾವೇಶದಿ ಕೈಕೆ ವರವ ಯಾಚಿಸಲುಎಸೆವ ಸಿಂಹಾಸನ ತೊರೆದು ಪೊರಮಾಡಲುಶಶಿಮುಖಿಸೀತಾಲಕ್ಷ್ಮಣರ ಕೂಡಿ ಬರಲುಭರತಗೆ ಪಾದುಕೆ ಕೊಡುತಲಿ ಕಳುಹಿಸಿಗುಹನ ಮನ್ನಿಸಿ ವನರಾಜ್ಯದೊಳ್ ಮೆರೆದೆ 2ವನದೊಳುಮಾಯಾಮೃಗವ ಕಂಡು ಸತಿಯುಮನದಿ ಚಿಂತಿಸಿರಾಮ ತೆರಳೆ ರಕ್ಕಸನುವನಜಾಕ್ಷಿ ಸೀತೆಯ ಕಳವಿನಿಂ ತರಲುವನವನಚರಿಸಿ ಪುಡುಕೆ ಕಂಡು ಕಪಿವರನುಶರಧಿಲಂಘಿಸಿ ಸೀತೆಯನು ಕಂಡು ಹನುಮನುಕುರುಹು ಪಡೆದು ಲಂಕೆ ದಹಿಸುತ ಬರಲು 3ಸೇತುಬಂಧನ ಮಾಡಿ ಕಪಿಗಳ ಕೂಡಿನೀತಿ ಪೇಳಿದ ವಿಭೀಷಣಗಭಯ ನೀಡಿಭೂತ ರಾವಣನ ದಶಶಿರವ ಚಂಡಾಡಿಸೀತಾಸಹಿತ ರಾಮ ಪುಷ್ಪಕವನೇರಿಆತುರದಿಂದಿಹ ಭರತನಿಗ್ವಾರ್ತೆಯಪ್ರೀತಿಲಿ ಕಳುಹಿದ ಶ್ರಿ ರಘುರಾಮ 4ಬಂದ ಶ್ರೀರಾಮಚಂದ್ರ ಬಹುಪ್ರೀತಿಯಿಂದಛಂದದಿಂ ಭರತನ ಮನ್ನಿಸಿ ಮುದದಿಂದಕುಂದಣಮಯದ ಸಿಂಹಾಸನ ಚಂದ-ದಿಂದಲೇರುತ ರಾಮ ನಸುನಗೆಯಿಂದಇಂದಿರಾಸೀತಾ ಸಹಿತ ಅಯೋಧ್ಯದಿಬಂದು ಪೊರೆವ ಕಮಲನಾಭ ವಿಠ್ಠಲನು 5
--------------
ನಿಡಗುರುಕಿ ಜೀವೂಬಾಯಿ
ವಾಸೂಕಿ ಶಯನ ಅಶೋಕ ಪರಾಕೂ |ವಾಸುದೇವಾನಿರುದ್ಧ ಶ್ರೀ ಕೃಷ್ಣ ಪರಾಕೂ ||ಸಾಸಿರನಾಮದ ಹರಿಯೆ ಪರಾಕೂ |ದೋಷರಹಿತ ರಘುಪತಿಯೆ ಪರಾಕೆಂದು ||ಮೀಸಲಾರುತಿಯಾ ಬೆಳಗೀರೆ ಪವೃಂದಾವನದೊಳಗಿಹನೆ ಪರಾಕೂ |ತಂದಿ ತಾಯ್ಗಳ ಬಿಡಿಸಿಹನೆ ಪರಾಕೂ ||ಸಿಂಧುರವರದ ಗೋಪಾಲ ಪರಾಕೂ ||ಸಿಂಧುಶಯನಪದ್ಮನಾಭಪರಾಕೆಂದು ||ಛಂದದಲಾರುತಿಯಾ ಬೆಳಗೀರೆ1ಸತ್ಯಾಭಾಮಿ ರುಗ್ಮಿಣಿ ರಮಣಾ ಪರಾಕೂ |ಮುತ್ಯಗ ಪಟ್ಟಗಟ್ಟಿದವನೆ ಪರಾಕೂ ||ಭಕ್ತ ಪೋಷಕ ತ್ರಿವಿಕ್ರಮನೆ ಪರಾಕೂ |ಸತ್ಯಸಂಕಲ್ಪಹೃಷಿಕೇಶ ಪರಾಕೆಂದು ||ಮುತ್ತಿನಾರುತಿಯಾ ಬೆಳಗೀರೆ 2ಮಾಧವಖರ ದೂಷಣಾರಿ ಪರಾಕೂ |ಬಾದರಾಯಣಪುರುಷೋತ್ತಮ ಪರಾಕೂ ||ಯಾದವರೊಳು ಪುಟ್ಟಿದನೆ ಪರಾಕೂ |ವೇದ ಉದ್ಧರ ಮತ್ಸ್ಯರೂಪಿ ಪರಾಕೆಂದು ||ಮೋದದಲಾರುತಿಯಾ ಬೆಳಗೀರೆ3ಇಂದ್ರ ಬಲಿಯನುಂಡಾ ಧೀರ ಪರಕೂ |ಕಂದಗೊಲಿದ ನರಸಿಂಹ ಪರಾಕೂ ||ನಂದನಂದನಶೌರಿಪರಾಕೂ |ಮಂದರಪರ್ವತ ಧರನೆ ಪರಾಕೆಂದು ||ಕುಂದಣದಾರುತಿಯಾ ಬೆಳಗೀರೆ 4ಜಟ್ಟೇರ ಹುಡಿಗುಟ್ಟೀದವನೆ ಪರಾಕೂ |ದುಷ್ಟ ಕಂಸನ ತರಿದವನೆ ಪರಾಕೂ ||ಕೆಟ್ಟಾಜಾಮಿಳಗೊಲಿದವನೆ ಪರಾಕೂ |ಅಷ್ಟು ಲೋಕವ ಸಲಹುವನೆ ಪರಾಕೆಂದು ||ತಟ್ಟಿಯೊಳಾರುತಿಯಾ ಬೆಳಗೀರೆ5ಮಾರನಯ್ಯಾ ಪ್ರಾಣೇಶ ವಿಠಲ ಪರಾಕೂ |ನೀರಜಾಂಬಕ ಶ್ರೀನಿವಾಸ ಪರಾಕೂ ||ದ್ವಾರಕಿನಿಲಯಮುರಾರೆ ಪರಾಕೂ |ಕ್ಷೀರಾಬ್ಧಿ ಸುತಿಯ ವಲ್ಲಭನೆ ಪರಾಕೆಂದು ||ನಾರಿಯರಾರುತಿಯಾ ಬೆಳಗೀರೆ 6
--------------
ಪ್ರಾಣೇಶದಾಸರು
ವೀರ ಬಂದ ವೀರ ಬಂದಘೋರಹಮ್ಮುಎಂಬ ದಕ್ಷನತೋರ ಶಿರವರಿಯಲೋಸುಗಪಭಯನಿವಾರಣವೆಂಬ ಕಾಸೆಯನೆ ಹೊಯ್ದಜಯಶೇಖರನೆಂಬ ವೀರ ಕಂಕಣಕಟ್ಟಿನಿಯತ ಸಾಹಸವೆಂಬ ರತ್ನ ಮುಕುಟವಿಟ್ಟುಸ್ವಯಂ ಸೋಹಂ ಎಂಬ ಕುಂಡಲವ ತೂಗುತ1ಆಡಲೇನದ ಶುದ್ಧವೆಂಬ ಭಸಿತವಿಟ್ಟುರೂಢಿಯ ಸತ್ಪವೆಂದೆಂಬ ಹಲಗೆಯಾಂತುಇಡಾಪಿಂಗಳವೆಂಬ ಪಾವುಗೆಗಳ ಮೆಟ್ಟಿಗಾಢ ಧೈರ್ಯವೆಂಬ ಖಡುಗ ಝಳಪಿಸುತ2ಒಂದೊಂದೆ ಹೆಜ್ಜೆಯನಂದು ಪಾಲಿಸುತಾಗಹಿಂದೆಡಬಲ ನೋಡದೆ ಮುಂದು ನಿಟ್ಟಿಸಿಛಂದಛಂದದಲಾಗುವಣಿ ಲಗುವಿನಿಂದಬಂದನು ಬಹು ಶೂರಧೀರ ಮಹಾವೀರ3ದಾರಿ ಊರುಗಳನೆ ಧೂಳಿಗೋಂಟೆಯ ಮಾಡಿಆರಾಧರೇನು ಶಿಕ್ಷಿಸುವೆನೆಂದೆನುತಭೇರಿಕರಡಿ ಸಮ್ಮೇಳಗಳೊಡಗೂಡಿಕಾರಣವಹ ಯಜÕಮಂಟಪದೆಡೆಗಾಗಿ4ಸುಷುಮ್ನವೆಂದೆಂಬ ಬಾಗಿಲ ಮುರಿಯುತ ಆಸಮಯದಿ ಬಂದ ಅಸುರರ ಕೊಲ್ಲುತಭೇಸರಿಸುವ ದೊರೆ ದೊರೆಗಳನಿರಿಯುತದ್ವೇಷರೆನಿಪ ಷಡುರಥಿಕರ ಕಟ್ಟುತ5ಅಷ್ಟಸಿದ್ಧಿಗಳೆಂಬ ದಿಕ್ಪಾಲಕರ ನಟ್ಟಿಭ್ರಷ್ಟ ಮೋಹವದೆಂಬ ಯಮನ ಹಲ್ಮುರಿದೆತ್ತಿನಷ್ಟಮನವೆಂಬ ಬೃಗುವಿನ ಮೀಸೆಯ ಕಿತ್ತುಶಿಷ್ಟಶಿಷ್ಟರನು ಎಲ್ಲರ ಕೆಡೆಮೆಟ್ಟಿ6ಹಮ್ಮುತಾನಾಗಿರುತಹಉನ್ಮತ್ತದಕ್ಷನ ಶಿರವನು ತರಿಯುತಲಾಗಗಮ್ಮನೆ ತ್ರಿಕೂಟ ಯಜÕಕುಂಡದೊಳುಸುಮ್ಮನಾಹುತಿಯಿಟ್ಟು ಸುಲಭದಲಿ ನಲಿಯುತ7ಪಾಪರೂಪನಾದ ಜೀವದಕ್ಷನನುಈ ಪರಿಯಲಿ ಕೊಂದು ನಾಟ್ಯವಾಡಲುಭಾಪುರೇ ಎಂದು ಸಾಧು ಪ್ರಮಥರು ಹೊಗಳಲುತಾಪಹರನಾಗಿ ಶಾಂತಿಯ ಹೊಂದುತ8ನಿರುಪಮನಿತ್ಯನಿರಾಳನೆ ತಾನಾಗಿಪರಮೇಶಪರವಸ್ತುಪರತರವೆಯಾಗಿಭರಿತ ಚೇತನ ಪ್ರತ್ಯಗಾತ್ಮನೆ ತಾನಾಗಿನಿರುತ ನಿತ್ಯಾನಂದ ಚಿದಾನಂದಯೋಗಿ9
--------------
ಚಿದಾನಂದ ಅವಧೂತರು
ವೃಂದಾವನದಲಿ ನಿಂತ ಸುಯತಿವರನ್ಯಾರೇ ಪೆÉೀಳಮ್ಮಯ್ಯ ಪವಂದಿಪ ಜನರಿಗೆ ನಂದ ಕೊಡುವೊ ರಾಘ -ವೇಂದ್ರ ಮುನಿವರನೀತ ನೋಡಮ್ಮ ಅ.ಪಇಂದಿರೆ ರಮಣನ ಛಂದದಿ ಭಜಿಸ್ಯಾ-ನಂದದಲಿಹನ್ಯಾರೇ ಪೇಳಮ್ಮಯ್ಯಾನಂದತೀರ್ಥಮತ ಸಿಂಧುವರಕೆ ಬಾಲ -ಚಂದಿರನೆನಿಸಿಹನ್ಯಾರೇ ಪೇಳಮ್ಮಯ್ಯಮಂದಜನವಹರಿ ಕಂದುಗೊರಳರವೃಂದದಿ ಶೋಬಿಪನ್ಯಾರೆ ಪೇಳಮ್ಮಯ್ಯಹಿಂದೆ ವ್ಯಾಸಮುನಿ ಎಂದು ಕರೆಸಿದ ರಾಘ -ವೇಂದ್ರ ಗುರುವರ - ನೀತ ನೋಡಮ್ಮ 1ನತಿಸುವ ಜನರಿಗೆ ಸತಿಸುತರನು ಬಲುಹಿತದಲಿ ನೀಡುವನ್ಯಾರೇ ಪೇಳಮ್ಮಯ್ಯಪ್ರತಿದಿನ ತನ್ನನು ಮತಿಪೂರ್ವಕ ಬಲುತುತಿಪರ ಪಾಲಿಪನ್ಯಾರೇ ಪೇಳಮ್ಮಯ್ಯಮತಿಯುತಪಂಡಿತ ತತಿಯಭಿಲಾಷವಸತತ ಪೂರ್ತಿಪನ್ಯಾರೇ ಪೇಳಮ್ಮಯ್ಯಕ್ಷಿತಿಸುರರಿಗೆ ಸದ್ಗತಿದಾಯಕ ಮಹಯತಿಕುಲವರ ಗುರುರಾಯ ಕಾಣಮ್ಮ 2ಮಾತೆಯು ಸುತರಲಿ ಪ್ರೀತಿಗೊಳಿಸುವತಾತನ - ತೆರದಿಹನ್ಯಾರೇ ಪೇಳಮ್ಮಯ್ಯಪ್ರೇತನಾಥ ಮಹ ಭೂತಗಣಗಳಭೀತಿಯ ಬಿಡಿಸುವನ್ಯಾರೆ ಪೇಳಮ್ಮಯ್ಯಭೂತಳ ಜನಕೃತಪಾತಕಕಾನನವೀತಿಹೋತ್ರತೆರನ್ಯಾರೇ ಪೇಳಮ್ಮಯ್ಯದಾತಗುರು ಜಗನ್ನಾಥವಿಠಲ ನಿಜದೂತ ಜನಕ ಮಹದಾತನೀತಮ್ಮ 3
--------------
ಗುರುಜಗನ್ನಾಥದಾಸರು
ವ್ಯಾಸರಾಯಾ ಅಸ್ಮದ್ಗುರೋ ವ್ಯಾಸರಾಯಾ ಪವಿಶೇಷ ಙ್ಞÕನ ಭಕ್ತಿ ಲೇಸಾಗಿ ಸಲಿಸಯ್ಯಾ ಅ.ಪದಾಸನಾಮಕದ್ವಿಜದೇಶಮುಖನ ಮನಿ-ಕೂಸಾಗಿ ಜನಿಸಿದೆ ಭೂಸ್ಪರ್ಶವಿಲ್ಲದೆ 1ಶ್ರೀಪಾದರಾಯರು ಈಪರಿನಿನ್ನನುಕಾಪಾಡಿ ನವವರ್ಷ ಭೂಪತಿ ಮಾಡಿದರೋ 2ವಸುದೇವ ಸುತನನ್ನು ಸುಸಮಾಧಿಯಲಿ ಪಡೆದೆ 3ಕಲೆಯಂತೆ ದಿನದಿನದಲಿ ವೃದ್ಧನಾದೆ ನೀ 4ಚಂಪಕತರುಮುಖ್ಯ ಕಂಪಿತ ನದಿಯುತಪಂಪಾಕ್ಷೇತ್ರದಿ ಮಹಾ ಸಂಪತ್ತಿನಿಂದಿದ್ದೆ 5ತರ್ಕಿಸಿ ಯಂತ್ರಸ್ಥ ಚಕ್ರದಿ ಬಂಧಿಸಿದೆ 6ಮಧ್ವರಾಯರ ತಂದು ಸಿದ್ಧಮಾಡಿ ಇಟ್ಟೆ 7ಮಂದಜನಕೆÀ ಸುಧಾ ಛಂದಾಗಿ ಇದರರ್ಥಪೊಂದದೆಂದು ನೀನು ಚಂದ್ರಿಕೆ ರಚಿಸಿದೆ 8ಇನಿತೆ ಮಹಾಮಹಿಮೆ ಘನವಾಗಿ ಜನರಿUಅನುಭವ ಮಾಡಿಸಿದೆ ಅನುಪಮ ಚರಿತನೆ 9ಶುಭಮಯ ಸ್ಥಳದಲ್ಲಿ ಅಭಯನಾಗಿ ನಿಂತೆ ನೀ 10ಛಂದದ ನವಶುಭವೃಂದಾವನದೊಳಿದ್ದೆ 11ಇಂದುನಿಮ್ಮಯಪಾದಪೊಂದಿ ಎನ್ನಯವೃಜಿನ-ವೃಂದ ಪೋದವು ಅರ್ಕನಿಂದ ತಿಮಿರದಂತೆ 12ವಂದಿಸಿ ಬೇಡುವೆ ನಂದದಿ ಸಲಹಯ್ಯ 13ಇಂದುರಕ್ಷಕರಿಲ್ಲವೆಂದು ನಿನ್ನನು ಸಾರ್ದೆ14ಯಿಂದ ಕರೆದು ಕಾಯೋ ನಂದಾದಾಯಕ ನೀನೆ 15ದೃಷ್ಟಿ ಪಾಲಿಸೊ ಸರ್ವೋತ್ಕøಷ್ಟ ಮಹಿಮ ನೀನೆ 16ಮಾತು ಲಾಲಿಸೊ ನಿಜತಾತ ನೀನೆ ಸೀತಾ -ನಾಥ ಗುರುಜಗನ್ನಾಥವಿಠಲನಾಣೆ 17
--------------
ಗುರುಜಗನ್ನಾಥದಾಸರು
ಶ್ರೀಹರಿಯ ಸ್ತೋತ್ರಬಾಯಂದು ಕರೆವೆನೊ ದೇವ ನಿನ್ನಮಾಯಿವೈರಿಮಧ್ವರಾಯರ ಪ್ರೀಯನೆ ಪರಾಮ ನಿರಾಮಯಮಾಮನೋಹರಶೌರಿಸೋಮಧತಾರ್ಚಿತ ಸಾಮನುತಾ ಭೂಮಿಜಲೋಲಬಾರೊಸಾಮಜಪಾಲ ಬಾರೊಕಾಮಿತ ಶೀಲ ಬಾರೊತಾಮಸಕಾಲಪ್ರೇಮದಿ 1ಬಿಸಿದಾಭಾಸ್ಪಸನ ಮಾನಸಗೆಅಸುರವೈರಿಕುಸುಮಶರ ಪಿತಸುಮನಸವಂದಿತಾಅಸಮ ಶೂರ ಬಾರೊ ವಸುಧಿಧರ ಬಾರೊವ್ಯಸನಹರ ಬಾರೊಅಸುರವೈರಿಕುಶಲದಿ 2ನಂದನ ಕಂದನೆಇಂದಿರೆಮಂದಿರಸುಂದರ ಶಿರಿ ಗೋವಿಂದ ವಿಠಲಮಂದರಧರಬಾರೋ ಚಂದಿರಮೊಗ ಬಾರೊಛಂದದ ದೈವ ಬಾರೊ ಇಂದಿನ ಎನ್ನ ಮನಸಿಗೆ 3
--------------
ಸಿರಿಗೋವಿಂದವಿಠಲ