ಒಟ್ಟು 252 ಕಡೆಗಳಲ್ಲಿ , 59 ದಾಸರು , 237 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಯಾವ್ಯಾತಕೋ ಮಾಧವನೆ ಮಾಯಾವ್ಯಾತಕೋ ಪ ಮಾಯವ್ಯಾತಕೆ ಎನ್ನ | ಪ್ರೀಯ ಸಖನೆ ಲೋಕನಾಯಕ ನೀನಿರೆ ಕಾಯೆ ಕಂಡವರಾ ಅ.ಪ. ಆರು ವರ್ಗಗಳೆಂಬ ಕ್ರೂರರಿಗೊಪ್ಪಿಸಿದೂರಾ ನೋಡುವದು ಉದಾರ ಉಚಿತವೆ 1 ಇಂದಿರೆಯರಸ ಗೋವಿಂದ ನಿನ್ನಯ ಪಾದದ್ವಂದ್ವ ನಂಬಿದವನ ಕುಂದೆಣಿಸುವರೇ 2 ಸುಪರ್ಣ ವಾಹನ ಮೋಹನ್ನ ವಿಠ್ಠಲನೇ 3
--------------
ಮೋಹನದಾಸರು
ಮುದವ ಬೀರುವುದೊ | ಬದರಿಯ ನಿಲಯನೇ ಪ ಮುದವ ಬೀರುವುದು | ಬದರಿಯ ನಿಲಯ ಶ್ರೀವಿಧಿ ವಿಬುಧಾದ್ಯರ | ಮುದಕೆ ಕಾರಣನೇ ಅ.ಪ. ಪಾದ ಉರ | ಮಂದೀರದಲಿ ಧರಸುಂದರಾಂಗನೆ | ಗೋವಿಂದ 1 ಇಂದ್ರ ನಿನ್ನಯ ತಪ | ಕುಂದೀಸೆ ಅಪ್ಸರವೃಂದಾ ಕಳುಹೆ | ಗೋವಿಂದ ||ಚೆಂದಾದುಡಿಗೆ ಉಟ್ಟ | ಅಂದಾಭರಣ ತೊಟ್ಟಮಂದಾಗಮನೆರೆಲ್ಲ | ಗೋವಿಂದ || ಅಂದಿಗೆ ಕಾಲ್ಗೆಜ್ಜೆ ದಂಧಣಿರೆನ್ನ ಕುಣಿದುನೊಂದು ಶ್ರಮಗಳಿಂದ | ಗೋವಿಂದ ||ಕಂದರ್ಪ ಪಿತ ತನ್ನ | ಸುಂದರೂರುವಿನಿಂದಸುಂದರಿಯನ್ನೆ ಕೊಟ್ಟ | ಗೋವಿಂದ 2 ಮಂದಗಮನೆರೆಲ್ಲ | ಸುಂದರಿಯನ್ನೆ ಕೊಂಡುಇಂದ್ರಂಗೆ ಇತ್ತರು | ಗೋವಿಂದ ||ಎಂದೆಂದು ಕಾಣದ | ಸುಂದರಾಕೃತಿ ಕಂಡು ಕಂದೀತು ಇಂದ್ರ ಮುಖ | ಗೋವಿಂದ ||ವೃಂದಾರಕೇಂದ್ರನು | ಅಂದು ಪರಾಶರಜಗೊಂದಿಸಿ ಕ್ಷಮೆಯನು | ಬೇಡಿದ ||ಇಂದ್ರಾವರಜ ಗುರು | ಗೋವಿಂದ ವಿಠಲನದ್ವಂದ್ವ ಪಾದಂಗಳ್ಗೆ | ಶರಣೆಂದ 3
--------------
ಗುರುಗೋವಿಂದವಿಠಲರು
ಮೂಲ ಕಾರಣ ವಿಠಲ | ಪಾಲಿಸಿವಳಾ ಪ ಲೀಲಾ ಮನೋರೂಪ | ಬಾಲಗೋಪಾಲಾ ಅ.ಪ. ಕರ್ಮಕರ್ಮಗಳ | ಮರ್ಮಗಳ ತಿಳಿಸುತ್ತಕರ್ಮ ನಾಮಕ ಕಾಯೊ | ಪೇರ್ಮೆಯಲಿ ಇವಳಾದುರ್ಮತಧ್ವಾಂತಾಕ | ಸಮೀರ ಮತ ತಿಳಿಸಿನಿರ್ಮಲಾತ್ಮನೆ ಸಲಹೊ | ಭರ್ಮ ಗರ್ಭಾತ್ಮ 1 ಸುಖ ದುಃಖ ದ್ವಂದಗಳು | ಸಕಲಕ್ಕು ಶ್ರೀ ಹರಿಯೆಮುಖ್ಯ ಕಾರುಣಾನೆಂಬ | ಸುಖತೀರ್ಥ ಭಾವಾ |ಕಕುಲಾತಿಯಿಲ್ಲದೆ | ತ್ರೈಕರಣ ಪೂರ್ವಕದಿನಿಖಿಲಾತ್ಮ ಕೃತವೆಂಬ | ಯುಕುತಿಯನೆ ತಿಳಿಸೋ 2 ಪತಿಸುತರು ಹಿತರಲ್ಲಿ | ವ್ಯಾಪ್ತನಾಗಿಹ ಹರಿಯಹಿತದಿಂದ ಸೇವೆಯಲಿ | ಕೃತಕೃತ್ಯಳೆನಿಸಿಮತಿಮತಾಂವರರಂಘ್ರಿ | ಶತಪತ್ರ ನಮಿಪ ಸ-ನ್ಮತಿಯನ್ನೆ ಪಾಲಿಸೋ | ಕೃತಿರಮಣದೇವ 3 ಗಜ ಪಂಚಾಸ್ಯ | ಪರಿಹರಿಸಿ ಇವಳ ಘವಸರ್ವದ ಪೊರೆಯಲ್ಕೆ | ಹರಿಯೆ ಬಿನ್ನವಿಪೇ 4 ಸೃಷ್ಟಿ ಸ್ಥಿತಿ ಸಂಹಾರ | ಅಪ್ಟ ಕರ್ತೃತ್ವಗಳಸುಷ್ಠು ಚಿಂತನೆಯಲ್ಲಿ | ನೆಟ್ಟ ಮನವಿರಿಸೀಕೃಷ್ಣ ಗುರು ಗೋವಿಂದ | ವಿಠಲನೇ ಗತಿಯೆಂಬಶ್ರೇಷ್ಠ ಮತಿಯಲಿ ಭವದ | ಕಟ್ಟನೇ ಬಿಡಿಸೋ5
--------------
ಗುರುಗೋವಿಂದವಿಠಲರು
ಮೊದಲಕಲ್ಲು ಶೇಷದಾಸ ಸ್ತುತಿ ನೇತ್ರಗಳ ಸಾಫಲ್ಯಮಾಳ್ವ ಸುಗಾತ್ರರನು ಕಂಡೆ ಪ ಪಾತ್ರರಾದವರು ದಾಸರ ಕೀರ್ತಿಸಲು ಪಾಪಗಳು ನಿಲ್ಲವೊ ಅ.ಪ. ವೇದ ಶಾಸ್ತ್ರಗಳ ಪೇಳುತ ಮೋದದಿಂದಿಹರುವಾದ ಮಾಡುವರಲ್ಲಿ ಶಮದಮಾದಿ ಗುಣದವರುಮೋದ ತೀರ್ಥರ ಮತಾನುಸಾರವಬೋಧಿಸುತ ಪರಮಾನುಗ್ರಹ ಮಾಳ್ವರ 1 ವಾಸುದೇವನ ದಾಸರೊಳಗ್ರೇಸರರು ಇವರುಶ್ರೀಶನ ಶುಭಗುಣ ಕರ್ಮಂಗಳು ಚಿಂತಿಸುತಲಿಹರುಭೂಸುರಾಂಶರಲ್ಲಿದಾವ ಸುರೇಶರೋಶೇಷದಾಸರಾಗಿ ಇಹರು 2 ತಂದೆ ಶ್ರೀ ನರಸಿಂಹನ ಪದದ್ವಂದ್ವ ಭಜಿಸುವರುಬಂದ ಸಜ್ಜನವೃಂದ ಜನಕಾನಂದಗೈಸುವರುಇಂದಿರೇಶನ ಒಂದೆ ಮನದಿ ಆ-ನಂದಬಾಷ್ಪಗಳಿಂದ ಧೇನಿಪರು 3
--------------
ಇಂದಿರೇಶರು
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆ ಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರ ಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ 2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ 3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ 4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ 5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ 6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು7
--------------
ತುಪಾಕಿ ವೆಂಕಟರಮಣಾಚಾರ್ಯ
ಯತಿಗಳ ಸ್ತುತಿ ಮಧ್ವಮುನಿಯೆ ಎನ್ನ ಉದ್ಧರಿಸಿನ್ನ ಪ. ಸದ್ಗುರುವೆ ನಿನ್ನ ಪದ್ಮಪಾದಗಳಿಗೆ ಕರ ಮಣಿ ಅ.ಪ. ವರಕಲ್ಪ ಕಲ್ಪದಲಿ ಹರಿಯ ಮೆಚ್ಚಿಸಿ ಸಿರಿವರನಲಿ ಜನಿಸಿ ವಾಯುವೆಂದೆನಿಸಿ ಸುರರೆಲ್ಲ ಮೊರೆಯಿಡೆ ಹರಿಯವತರಿಸಿ ಹರಿಯ ಸೇವೆಗೆ ನೀ ಮಾರುತಿ ಎನಿಸಿ ಶರಧಿ ಲಂಘಿಸಿ ಉಂಗುರ ಸೀತೆಗೆ ಇತ್ತು ದುರುಳನ ಪುರ ಸುರಮುಖನಿಗರ್ಪಿಸಿದೆ 1 ಚಂದ್ರವಂಶದಲಿ ಬಂದ್ಯೊ ಬಲಶಾಲಿ ನಂದಕಂದನ ಲೀಲೆ ಅಂದ ಪಾಡುತಲಿ ಬಂದಿತು ಕಲಹ ಅಲ್ಲಿ ದ್ವಂದ್ವ ಭಾಗದಲಿ ಅಂದು ಕೌರವರಲಿ ನಿಂದ್ಯೊ ದ್ವೇಷದಲಿ ಇಂದುಮುಖಿಗೆ ಸೌಗಂಧಿಕ ಇತ್ತು ಕುರು ನಂದನ ವಂಶವನಂದು ಛೇದಿಸಿದೆ 2 ದುರುಳರೆಲ್ಲರು ಬಂದು ಕಲಿಯುಗದಿ ನಿಂದು ಹರಿಯು ನರನು ಒಂದು ಅರುಹಲಿಂತೆಂದು ಸುರರೆಲ್ಲ ಬಲುನೊಂದು ಕ್ಷೀರಾಬ್ಧಿಗೆ ಬಂದು ಸಿರಿವರ ಪೊರೆಯೆಂದು ಮೊರೆಯಿಡಲಂದು ಹರಿ ನಿನಗರುಹಲು ಧರೆಯಲ್ಲಿಗೆ ಬಂದು ಸುರ ಭೂ ಶ್ರೇಷ್ಠನುದರದಲಿ ಜನಿಸಿದೆ 3 ಪರಮಾಯಿಗಳ ಮತ ತರಿದು ಕೆಡಹುತ್ತ ಹರಿ ಸರ್ವೋತ್ತಮೆನುತ ಧರೆಯೊಳ್ ಸಾರುತ್ತ ತರತಮ್ಯ ಸತ್ಯವೆನುತ ಪಂಚಭೇದೆನುತ ಸಿರಿರಮಣಗೆ ನರಭೃತ್ಯನೆನ್ನುತ್ತ ಪರಿ ಬೋಧಿüಸಿ ದುರುಳರ ಛೇಡಿಸಿ ಸರಸಿಜಾಕ್ಷಗೆ ಬಲು ಸಮ್ಮತನೆನಿಸಿ 4 ವೈಷ್ಣವಾಗ್ರಣೀ ಲೀಲೆ ಪೇಳಲಳವಲ್ಲ ಜಿಷ್ಣುಸಖನ ಲೀಲೆ ನುಡಿಸೆನಗೆ ಸೊಲ್ಲ ಕಷ್ಟಪಡುತಿಹೆನಲ್ಲ ಕರುಣವೇಕಿಲ್ಲ ಶ್ರೇಷ್ಠನೆ ಗೋಪಾಲಕೃಷ್ಣವಿಠಲ ಇಷ್ಟು ತಿಳಿಸುತ ಅಷ್ಟದಳದಲಿ ಶ್ರೇಷ್ಠದಿ ಪೂಜಿಪ ಗುಟ್ಟು ತೋರೆನಗೆ 5
--------------
ಅಂಬಾಬಾಯಿ
ಯಾಕೋ ಕೋಪ ಕೃಷ್ಣಾ ನಿನಗೆ ಎನ್ನ ಮೇಲೆ ಎಲ್ಲ ಸಾಕಬೇಕು ಎಂಬ ನಿಜವಾ ಪ ಲೋಕನಾಯಕನಾದ ಲಕ್ಷ್ಮೀಲೋಲಗೋವಿಂದ ಅನೇಕ ಅವತಾರಗಳೆತ್ತಿದ ಹರಿಯೆ ಮುಕುಂದಾ -------ಜನರೊಳಗಿನ್ನು ಹೀನನ ಮಾಡಿ ಬಿಡಿಸಿ ------------------------------ 1 ತಂದೆತಾಯಿ ಬಂಧು ಬಳಗ ದೈವ ನೀನೆಂದು ಇನ್ನು ಎಂದೆಂದು ಭಕ್ತರ ಸಲಹೊ ಇಂದು ನಿನ್ನ ದ್ವಂದ್ವ ಚರಣಾನಂದದಿಂದ ಹೊಂದಿದವನು ಕಂದನೆಂದು--------- ಅಂದದಿಂದ ಪೊರೆಯದಿರುವದು ಹೇಗೊ 2 ಅಷ್ಟು ಜಗಕಾಧ್ಯಕ್ಷನಾದ ಆದಿಮೂರುತಿ ನಿಷ್ಟ ನೀನು ಶಿಷ್ಟ ಜನರ ಹೃದಯದಿರುತಿ ಇಷ್ಟು ಕಷ್ಟ ಬಡುತ ನಾನು ಇಷ್ಟದಿಂದ ಮೊರೆಯ ಹೊಕ್ಕರೆಸೃಷ್ಟಿಗೊಡೆಯನಾದ 'ಹೊನ್ನವಿಠ್ಠಲ’ ನಿನ್ನ ಇಷ್ಟ ಇಲ್ಲದೆಲ್ಲಾ 3
--------------
ಹೆನ್ನೆರಂಗದಾಸರು
ಯಾರಿಗೆ ಯಾರು | ಯಾರಿಗು ಯಾರು ಯಾರಿಲ್ಲಾ | ಯಾರಿಲ್ಲ ಪ ನಾರಾಯಣನೊಬ್ಬ | ಸಾರುವ ಸಮಯಕೆ ಬೇರೊಬ್ಬರಿಲ್ಲ ಕಂಡ್ಯಾ ಜೀವವೇ ಅ.ಪ. ತಂದೆ ತಾಯಿ ಸುತ | ಬಂಧು ಬಳಗ ಜನಮಂದಿಯೊಬ್ಬರು ಬರರೊ ||ಸಂದೋಹದಿಂದ ಜೀವ | ನೊಂದು ಪೋಗುವ ವೇಳೆಬಂಧು ಬಳಗ ರೋದನಾ | ಬಲು ರೋದನ 1 ಅಂದಾದರವನ್ಹಿಂದೆ | ಪೋಗೋರೊಬ್ಬರ ಕಾಣೆಸಂದೋಹ ಸುಟ್ಟು ಬರುವರೋ ||ಬಂದು ಮಶಣದಿಂದ | ಮಿಂದು ಮೆಲ್ಲದೆ ಇರುವಮಂದಿಯೊಬ್ಬರ ಕಾಣೆನೋ | ಎಲ್ಲು ಕಾಣೆನೊ 2 ಕಾಲ ಕಳೆಯುತ ಬರೆ | ಮೇಲಾದ ದುಃಖ ಮರೆಕಾಲಾ ನಾಮಕ ಲೀಲೆಯೋ ||ವ್ಯಾಳಾ ವ್ಯಾಳಕೆ ಮೆದ್ದು | ಜೋಲು ಮುಖವ ಬಿಟ್ಟುಲೀಲಾ ವಿನೋದ ಮಾಡರೇ | ಅದ ಬಿಡುವರೇ 3 ಪಥ ಸೇರೋ | ಅದ ಸೇರೋ 4 ಬಂದದ್ದು ಹೋದದ್ದು | ಮುಂದೆ ಬರುವುದನುದ್ವಂದ್ವಕರ್ಮಗಳೆಲ್ಲವಾ ||ಸುಂದರ ಗುರು ಗೋ | ವಿಂದ ವಿಠಲ ಪಾದದ್ವಂದ್ವ ಕರ್ಪಿಸೊ ಬಿಡದೇ | ಮರೆಯದೇ 5
--------------
ಗುರುಗೋವಿಂದವಿಠಲರು
ಯಾವ ಪರಿಯಲಿ ಒಲಿಸಿ ಪಡೆವೆ ಹರಿಯೊಲವನು ಭೂವಿವರವನು ಪೊತ್ತ ಮಹಶೇಷಗರಿದು ಪ ಸುರನದಿ ಜಲದೊಳಭಿಷೇಕವ ಮಾಡುವರೆ ಚರಣದಲಿ ಜನಿಸಿಹಳು ದೇವಗಂಗೆ ಮೆರೆವ ದಿವ್ಯಾಸನವನೀಯೆ ವಿಶ್ವಾಧಾರ ಧರಿಸಿ ಕೊಡಲಿಕೆ ವಸ್ತ್ರ ಪೀತಾಂಬರ 1 ಹೇಮರಚಿತಾಭರಣದಿಂದ ಮೆಚ್ಚಿಸಲವಗೆ ಕಾಮಿನಿಯೆ ಶ್ರೀಮಹಾಲಕ್ಷ್ಮಿದೇವಿ ಪ್ರೇಮದಿಂ ಶಾಲ್ಯಾನ್ನದಿಂದ ತೃಪ್ತಿ ನಿತ್ಯ ತೃಪ್ತ 2 ಕ್ಷೀರದಿಂ ಮೆಚ್ಚಿಸಲಿಕವಗೆ ಪಾಲ್ಗಡಲೆಮನೆ ಮಾರುತಾತ್ಮಜ ಕೋಣೆ ಲಕ್ಷ್ಮೀಶ ನಂಘ್ರಿಗೆ ನಮಸ್ಕಾರದಿಂ ಮೆಚ್ಚಿಸಲಿಕವ ಜಗದ್ವಂದ್ಯಾ 3
--------------
ಕವಿ ಪರಮದೇವದಾಸರು
ಯೋಗದರ್ಶನ ಎಂತುಗೂಡುವದೊ ನಿಜ ಹರಿಯೆ ಧ್ರುವ ನಿದ್ರ್ವಂದ್ವದಲಿದ್ದ ಒಂದೆ ವಸ್ತುವೆ ನೀನು ದ್ವಂದ್ವಾಭೇದದ ಸಂದೇಹಿ ನಾನು ಅಂದಿಗಿಂದಿಗೆ ಪೂರ್ಣ ಎಂದೆಂದಿಗೆ ನೀನು ಹೊಂದಲರಿಯದಾ ತಿಮಿರಾಂಧ ನಾನು ಹರಿ 1 ನಿಃಪ್ರಪಂಚದ ನಿರ್ಮಳ ನಿರ್ಗುಣನು ನೀನು ಪ್ರಾಪಂಚಿಕ ಪರಮ ನಾನು ಕೃಪೆಯುಳ್ಳ ಕರುಣಾಕಾರ ಪರಿಪೂರ್ಣ ನೀನು ಕಪಟ ಕುಟಿಲಲಿಹ ಪ್ರಾಣಿ ನಾನು ಹರಿ 2 ಮಹಿಗೆ ಪತಿಯಾದ ಸ್ವಾಮಿ ಶ್ರೀಪತಿ ನೀನು ಸೋಹ್ಯ ತಿಳಿಯದಾ ಮಂದಮತಿ ನಾನು ಸಾಹ್ಯ ಮಾಡುವ ಸಹಕಾರ ಸದ್ಗತಿ ನೀನು ಮಹಾಮಹಿಮೆಯುಳ್ಳ ಮೂರುತಿ ನೀನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯೋಗಿ ವರ್ಯಾ ಪ ಯೋಗಿ ದಶಮತಿ ಬ್ರಾತೃ | ವಂಶ ಸಂಭೂತಾ ಅ.ಪ. ಭಾವಿ ವಾಯ್ದೆನಿಸಿದ್ದು | ಆವಿಪರು ಶೇಷಾದಿದೇವ ಸದ್ವಂದ್ಯರೆನೆ | ಶ್ರೀ ವಾದಿರಾಜಾ |ಆವ ವಂಶಾಬ್ದಿಯಲಿ | ದಿವ್ಯ ಸೋಮನು ಎನಿಸಿ |ದೈವ ವಿಭವದಿ ಮೆರೆವ | ವಿಶ್ವೋತ್ತಮಾಖ್ಯಾ 1 ವಿಭವ ನಾನೋಡ್ದೆ 2 ಸುಜನ | ವೃಂದದಲಿ ಭೋಧಿಸುತಇಂದಿಲ್ಲಿ ಸಿದ್ದಾರ್ಥಿ | ಸಂದ ಅಯ ನವಮೀ |ಮಂದಿರಕೆ ಬಂದುತವ | ನಂದ ಪದ ಪೂಜಿಸುವಸಂದು ಇತ್ತಿಹ ಗುರೂ | ಗೋವಿಂದ ಭಜಕಾ 3
--------------
ಗುರುಗೋವಿಂದವಿಠಲರು
ರಕ್ಷಿಸಿ ಪೊರೆಯೊ ದೇವನೆ ಪಕ್ಷಿವಾಹನನೆ ಸೂಕ್ಷ್ಮ ಸ್ಥೂಲದಿ ವ್ಯಾಪ್ತನೆ ಪ ಲಕ್ಷ್ಮಿರಮಣ ಪುರುಷೋತ್ತಮ ಪುರುಷನೆ ಕುಕ್ಷಿಯೊಳಗೆ ಜಗ ರಕ್ಷಿಸಿ ಪೊರೆವನೆ ಅಕ್ಷರೇಢ್ಯ ಕಮಲೇಕ್ಷಣ ಮಾಧವ ರಕ್ಷ ಶಿಕ್ಷಕ ಜಗದ್ರಕ್ಷಕ ಹರಿಯೆ ಅ.ಪ ವಿಶ್ವರೂಪನೆ ಶ್ರೀಹರಿ ವಿಶ್ವವ್ಯಾಪಕನೆ ವಿಶ್ವತೋ ಮುಖನೆ ಶ್ರೀಶನೆ ವಿಶ್ವನಾಟಕನೆ ದೇವನೆ ವಿಶ್ವೋದ್ಧಾರಕನೆ ವಿಶ್ವಮಯನೆ ಶ್ರೀ ವಿಶ್ವನೆ ವಿಶ್ವರೂಪ ತಾಯಿಗೆ ಬಾಯೊಳು ತೋದರ್À ವಿಶ್ವರೂಪ ಮೈದುನನಿಗೆ ತೋರಿದ ವಿಶ್ವರೂಪ ಸಭೆಯೊಳು ಭಕ್ತರಿಗೆ ತೋರ್ದ ವಿಶ್ವ ಮೂರುತಿಯೆ 1 ಹಿಂದಿನ ಕರ್ಮಫಲದಲಿ ಬಂದು ಈ ಭವದಿ ಕಂದಿ ಕುಂದಿದೆನೋ ವ್ಯಥೆಯಲಿ ಬಂಧ ಮೋಚಕನೆನುತಲಿ ಬಂದೆರಗುತಲಿ ತಂದೆ ನೀ ಪೊರೆಯಬೇಕೆನುತಲಿ ಮಂದರೋದ್ಧರ ಗೋವಿಂದ ನಿನ್ನಯ ಪಾದ ದ್ವಂದ್ವಕೆ ನಮಿಸುವೆ ಬಂಧನ ಬಿಡಿಸೆಂದು ಇಂದು ಮುಂದು ಎಂದೆಂದಿಗೂ ನೀ ಗತಿ ಇಂದಿರೆ ರಮಣ2 ಶ್ರಮವ ಪರಿಹರಿಸೊ ಶ್ರೀಶನೇ ಶ್ರೀನಿಕೇತನನೆ ಕಮಲ ಸಂಭವನ ತಾತನೆ ಕಮಲ ಲೋಚನನೆ ಕಮಲ ಪೊಕ್ಕಳಲಿ ಪಡೆದನೆ ಕಮಲ ಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ವಿಠ್ಠಲನೆಂದು ಕಮಲಪುಷ್ಪ ಮಾಲಾಲಂಕೃತ ಶೋಭಿತ ಕಮಲದಳಾಕ್ಷನೆ ಕಮನೀಯರೂಪ 3
--------------
ನಿಡಗುರುಕಿ ಜೀವೂಬಾಯಿ
ರಕ್ಷೆಸೆನ್ನ ಈ ಕ್ಷಣದಲುಪೇಕ್ಷೆ ಮಾಡದೆ ಪಕ್ಷಿವಾಹನ ಪರಮಪುರುಷ ಲಕ್ಷ್ಮಿನಾಯಕ ಪ ಅಂದಂದಿಂದ ಕೈಯಹಿಡಿದು ಚಂದದಿಂದ ಎನ್ನಬಿಡದೆ ಇಂದು ನಿನ್ನ ದ್ವಂದ್ವ ಚರಣಕ್ಹೊಂದಿದ ದಾಸನು ಎಂದು 1 ಕಷ್ಟಿ ಇವನು ಎಂದು ಕರುಣ ದೃಷ್ಟಿಯನೆ ತೋರುಬೇಗ ಸೃಷ್ಟಿಗೊಡೆಯ ನಾದ ಶ್ರೀ ಕೃಷ್ಣಮೂರುತಿ ನೀನೆ ಗತಿ 2 ಇಂದು ಮಾಡಿದಂಥದೆಂಥಾ ದೋಷವೊ ಹರಿಯೆ ಇಂದು ಎನ್ನ ಬಾಧಿಸುವುದು ಏನು ಕಾರಣವೊ ಕೃಷ್ಣಾ 3 ಸಜ್ಜನರ ರಕ್ಷಕ ದೇವ ಸರ್ವಜನರ ಪೋಷಕ ನೀನೆ ದುರ್ಜನರ ಖಂಡಿಸಿದ ಮೂಜ್ಜಗ ಪಾಲಕ ನೀನೇ ಎಂದೂ 4 ಪುಂಡರೀಕವರದ ಭೂಮಂಡಲಾಧಿಪತಿಯೆನಿಸಿ ಮಹಿಮವುಳ್ಳದೇವ 5 ಭಾವಜನಯ್ಯ ಭವ ಸ್ತೋತ್ರ ಪ್ರೀಯಾ ಪೊರೆಯದಲಿರುವದು ದೇವಾ 6 ಗಂಗೆ ಜನಕ ಮಂಗಳಾಂಗ ಕರುಣಾಸಾಗರ ಘನಗಂಭೀರಾ ರಂಗ `ಹೆನ್ನವಿಠಲ' ಕೃಪಾಂಗ ದೇವೋತ್ತುಂಗ ಹರಿಯೆ7
--------------
ಹೆನ್ನೆರಂಗದಾಸರು
ರಂಗ ಬಾರೈಯ್ಯ ದೇವೋತ್ತುಂಗ ದಯಾಂತರಂಗ | ಅಂಗಜನಯ್ಯ ನರಶಿಂಗಾ ಸಾರಸಾಪಾಂಗ || ಮಂಗಳ ಮಹಿಮಾ ವಿಹಂಗ ಘೋರ ಭವಭಂಗರಹಿತ ರಣರಂಗ ವಿಜಯ || ಸನ್ನುತ ಶೃಂಗಾರಾಂಗ ರಮಾಂಗನಾಸಂಗ ಪ ಶತಕೋಟಿ ಭಾಸ್ಕರ ಯುತತೇಜ ಮರುತಾಂತರ್ಗತ | ಹರಿಮೃದು ಭಾಷಣ | ಕೌಸ್ತು ಭಾಭರಣ | ಜಿತದಿತಿಸುತಬಾಲ | ಶ್ರಿತಭಕ್ತ ಮಂದಾರ | ಪತಿತ ಪಾವನ ಶ್ರೀರಾಮ ಪಟ್ಟಾಭಿರಾಮ | ಅತುಲಿತ ಚರಿತ ಕಾಮಿತ ಫಲದಾಯಕ | ಶತ ಧೃತಿ ಜನಕಾಚ್ಯುತ ಸರ್ವೋತ್ತಮ | ಸತತವು ನೀನೇ ಗತಿಯೆಂದೆನುತಲಿ | ಹಿತದಿ ನಾನು ನಿಮ್ಮ ಸ್ತುತಿಸುತಲಿರುವೆನು 1 ನಂದನಂದನ ವೇಣುನಾದ ವಿನೋದ ಜಗದ್ವಂದ್ಯ ಶ್ರೀವತ್ಸಲಾಂಛನ ವಾಸುಕಿಶಯನ | ಮಂದಹಾಸ ಮುಚುಕುಂದವರದ ರಾಕೇಂದುವದನ | ಗೋವಿಂದ ಇಂದಿರಾನಂದ ಸಿಂಧು ಗಂಭೀರಾ | ಮುಕುಂದ ಧರಣೀಧರ ಕುಂದರದನ ಕಾಳಿಂದಿರಮಣ ಗಜೇಂದ್ರನ ಸಲಹಿದ ಛೆಂದದೆನ್ನ ಮೊರೆಯಿಂದಿಗೆ ಲಾಲಿಸೊ ಪರಮಾತ್ಮ ಸರಸಿಚೋದರ ಸಕಲಾಣುರೇಣು ಪರಿಪೂರ್ಣ 2 ನಿರುಪಮಧೀರ ಶರಣಾಗತ ರಕ್ಷಣ ಮಧುಸೂದನ ಸುರವರ ಪೂಜಿತ ಚರಣಾಂಭೋರುಹ ಕೃಪಾಕಾರ ಹರುಷದಲಿ 3
--------------
ಹೆನ್ನೆರಂಗದಾಸರು