ಒಟ್ಟು 410 ಕಡೆಗಳಲ್ಲಿ , 70 ದಾಸರು , 331 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ಪ ಮಂದರಧರನೇ ಬೇಲೂರ ಚೆನ್ನಿಗರಾಯ ಹಿಂದಿಟ್ಟುಕೊ ಮುರಹರ ಸ್ವಾಮೀ ಅ.ಪ ಕುಕ್ಷಿಯೊಳೀರೇಳು ಲೋಕವನು ತಾಳ್ದನೇ ಪಕ್ಷಿವಾಹನಮೂರ್ತಿ ಮತ್ಸ್ಯಾವತಾರನೇ ಅಕ್ಷಯಾಗೆಂದು ದ್ರೌಪದಿಯ ಅಭಿಮಾನವನು ರಕ್ಷಿಸಿದ ಕೃಷ್ಣ ನೀನೆ ಸ್ವಾಮಿ 1 ಚಿಕ್ಕಂದು ಮೊದಲು ನಿನ್ನನು ನೆನೆವ ಬಾಲಕನಾ ಕಕ್ಕಸದ ಬಾಧೆಯಲಿ ಮೂದಲಿಪ ಹಿರಣ್ಯಕನಾ ಸೊಕ್ಕುಗಳ ಮುರಿದವನ ಕರುಳ ಮಾಲೆಯನಿಟ್ಟ ¨Àಕ್ತವತ್ಸಲನು ನೀನೇ ಸ್ವಾಮಿ 2 ಕರಿಕಂಠ ಹರನು ದಾನವನ ತಪಸಿಗೆ ಮೆಚ್ಚಿ ಅರಿತು ಅರಿಯದ ತೆರದಿ ಉರಿಹಸ್ತವನು ಕೊಡಲು ತರುಣಿ ರೂಪಿಲಿ ಪರಿಹರಿಸಿ ಭಸ್ಮಾಸುರನಾ [ಉರಿಸಿ]ಗೆಲಿದ ದೇವರದೇವಾ ಸ್ವಾಮಿ3 ಅಂದು ಮರೆಹೊಕ್ಕ ವಿಭೀಷಣಗೆ ರಾಜ್ಯವನು ಸಂದೇಹವಿಲ್ಲದಂದದಲಿ ಪಾಲಿಸಿ ನರನಾ ಮುಂದೆ ಸಾರಥಿಯಾಗಿ ರಥವ ನಡಸಿದ ಗೋ ವಿಂದ ಸಲಹಯ್ಯ ಯೆನ್ನನೂ [ಸ್ವಾಮಿ] 4 ದೇಶದೇಶದೊಳತ್ಯಧಿಕ ಕಾಶಿಗಿಂ ಮಿಗಿಲು ಭೂಸ್ವರ್ಗವೆನಿಪ ವೇಲಾಪುರವಾಸಾ ಕೇಶವ ಶ್ರೀವೈಕುಂಠ ಚೆನ್ನಿಗರಾಯಾ ಶೇಷಶಯನನೇ ಕರುಣಿಸೈ ಸ್ವಾಮೀ 5
--------------
ಬೇಲೂರು ವೈಕುಂಠದಾಸರು
ನೋಡಿ ನಿನ್ನನು ಧನ್ಯಳಾದೆನು ಮಾಡಿ ಕೃಪೆಯನು ಮನ್ನಿಸೂಬೇಡಿಕೊಂಬೆನು ಭವವ ಮುಂದಕೆ ನೀಡದಂಘ್ರಿಯೊಳೊಂದಿಸೂ ಪಕೃಷ್ಣ ನಿನ್ನನು ಮುದ್ದನಾಡುತ ಕಷ್ಟವನು ಕಡೆಗಾಂಬೆನೂಇಷ್ಟದೈವವು ನನ್ನ ಜಠರದಿ ಪುಟ್ಟೆ ನಿನ್ನನು ಕಂಡೆನೂದುಷ್ಟಕರ್ಮಗಳೆಲ್ಲವನು ನೆರೆ ನಷ್ಟಗೈಯುವ ದೇವನೂಪುಟ್ಟಮಗುವಾಗಿರಲು ಕೇಶವ ಮುಟ್ಟಿಲಾಲಿಪಳಾದೆನೂ 1ಬಟ್ಟಚೆಲು'ನ ರತ್ನದರಳೆಲೆ ಕಟ್ಟಿ ಬೊಪ್ಪದೊಳೊಲೆಯಲೂಪುಟ್ಟ ಮಾಗಾುಗಳು ಕಿ'ಗಳವಟ್ಟು ಕದಪುಗಳೊಪ್ಪಲೂನಟ್ಟನಡು ಪಣೆಯಲ್ಲಿ ಕತ್ತುರಿಬಟ್ಟು ಬೆಡಗನು ಬೀರಲೂಇಟ್ಟ ಕಪ್ಪಿನ ಕಣ್ಗಳೆಸೆಯಲು ಬಿಟ್ಟಬಾಯಲಿ ಸ'ಯಲು 2ಮುತ್ತು ರತ್ನಗಳನ್ನು ತೆತ್ತಿಸಿ ಸುತ್ತಕಾಂತಿಯ ಬೀರುವಉತ್ತಮದ ಮಕುಟವನು ನಿನ್ನಯ ನೆತ್ತಿಗಿಡುವೆನು ಕೇಶವಮತ್ತು ಕಂಕಣಗಳನು ಕರಗಳಿಗಿತ್ತು ಕಟ್ಟುವೆ ಪವಳವಾಸತ್ಯವಂತನೆ ನೀನು ಶಿಶುತನವೆತ್ತೆ ಪಡೆದೆನು ಭಾಗ್ಯವಾ 3ಸನ್ನುತನೆ ಪದಕಗಳ ಸರಗಳ ನಿನ್ನ ಕೊರಳಿಗೆ ಕಟ್ಟಿಚಿನ್ನ ಮುಕ್ತದಿ ಪೊಳೆವ ಕೌಸ್ತುಭವನ್ನು ಉರಕಳವಡಿಸುವಾರನ್ನ ಮಾಣಿಕದುಡಿಯ ಸೂತ್ರಗಳನ್ನು ಕಟಿಯಲಿ ರಚಿಸುವಾಇನ್ನು ಬಹು'ಧವಾಗಿ ಮನ್ನಿಪುದನ್ನು ವ'ಸಿದೆ ದಾಸ್ಯವಾ 4ಕಟ್ಟಿ ಘಂಟೆಯ ಸರವ ಕಟಿಯಲಿ ಪುಟ್ಟ ಶ್ರೀಮೃದುಪಾದವಾಮುಟ್ಟಿ ಕೈುಂದಂದುಗೆಗಳ ನಾನಿಟ್ಟು ಘಲಿಘಲಿಗುಟ್ಟುವಾಬಟ್ಟಗೆಜ್ಜೆಯ ಸಣ್ಣಸಾಲ್ಗಳ ದಟ್ಟಗೊಳಿಸೀಯೆಂದವಾನೆಟ್ಟದ್ಟೃಯಲೀಕ್ಷಿಸುತ ಹೊರಗಟ್ಟಿಬಿಟ್ಟೆನು ಕ್ಲೇಶವಾ 5ಒಂದು ಸ್ತನವನು ಸ'ಯುತಲೆ ಮತ್ತೊಂದು ಸ್ತನವನು ಕರದಲಿತಂದು ವದನದೊಳಿಟ್ಟು ದಣಿಯುತ ಮಂದಹಾಸದ ಮುಖದಲಿಇಂದಿರೇಶನೆ ನಿನ್ನ ನೋಡುತ ಇಂದು ಸಲ'ದೆ ಕೃಪೆಯಲಿವಂದಿಪರು ನಿನ್ನಡಿಗೆ ಸುರಮುನಿವೃಂದ ಭಾ'ಸಿ ಮನದಲಿ 6ಸಕಲ ಲೋಕಾಧಾರನಾಗಿಯೆ ಸಕಲ ಜೀವರ ಸಾಕ್ಷಿಯೆಪ್ರಕಟವಾಗೆನಗೀಗ ತೋರಿದೆ ಮುಕುತಿದಾಯಕ ಮೂರ್ತಿಯೆಭೃಕುಟಿಯಲಿ ನಿರ್'ುಸಿದ ಮಾಯೆಯ 'ಕರಿಸುವನುಸಾರಿಯೆಚಕಿತಳಿಗೆ ನನಗೊಲಿದೆ ತಿರುಪತಿ ವೆಂಕಟನಡಿಗೆ ಸ್ವಾ'ುಯೆ7
--------------
ತಿಮ್ಮಪ್ಪದಾಸರು
ನೋಡಿದೆ ನಾ ನೋಡಿದೆ ಮಾಡಿದೆ ನಾ ಮಾಡಿದೆ ಪ ಬೆಟ್ಟವ ಕಂಡೆನು ಸೋಪಾನಂಗಳು ನಿಟ್ಟುಸುರಿಕ್ಕದೆ ಏರಿದೆ ಕಟ್ಟ ಕಡಿಯಣ ಗೋಪುರ ಶಿಖರ ದಿಟ್ಟಿಸಿ ಕಣ್ಣಿಲಿ ನೋಡಿದೆ 1 ಈ ಸಮಸ್ತರ ಗುರುವಾದ ಭಾರತಿ ಈಶನ ಪಾದಕ್ಕೆ ಎರಗಿದೆ ಕ್ಲೇಶನ ಕಳೆದು ಎದುರಾಗಿ ಪೊಳೆವ ಶ್ರೀಶನ ಮಹದ್ವಾರ ನೋಡಿದೆ 2 ಬಲವಾಗಿ ಬಂದು ಸ್ವಾಮಿ ಪುಷ್ಕರಣಿ ಒಳಗೆ ವರಹನ ನೋಡಿದೆ ಜಲದಲಿ ಮಿಂದು ವೇಗದಲಿ ತಿರುವೆಂ ಗಳ ದೇವನ ನೋಡ ಸಾಗಿದೆ 3 ಗುಡಿಯ ಪೊಕ್ಕೆನು ಗರುಡಗಂಬದ ಸಡಗರವನು ನಾ ನೋಡಿದೆ ಒಡನೆ ಪ್ರಾಣಾಚಾರದವರು ಪಡೆದ ವರಗಳ ಕೇಳಿದೆ 4 ಮುನ್ನ ಅವಸರ ಮನಿಯೊಳಗೆ ಅನ್ನಪೂರ್ಣಿಯ ನೋಡಿದೆ ಚನ್ನಾಗಿ ಮಂಟಪದೊಳು ಶ್ರೀನಿವಾ ಸನ್ನ ಮೂರುತಿಯ ನೋಡಿದೆ 5 ತೊಟ್ಟಲ ತೀರ್ಥವ ಕೊಂಡು ಪ್ರಸಾದ ಇಟ್ಟು ಮಾರುವದು ನೋಡಿದೆ ಇಷ್ಟ ಭಕ್ತರು ಸಮ್ಮುಖದಲಿ ಮುಟ್ಟಿ ಪಾಡುವದು ನೋಡಿದೆ6 ದ್ವಾರಪಾಲಕರಿಗೆ ಸಾಷ್ಟಾಂಗದಲಿ ನಮ ಸ್ಕಾರವನು ಮಾಡಿದೆ ಭೋರನೆ ಕಟಾಂಜನದ ಫಲ್ಗುಣಿ ಬಂ ಗಾರ ಬಾಗಿಲವ ನೋಡಿದೆ 7 ಇಂದು ರವಿ ಶತಕೋಟಿ ತೇಜದ ವಿಂದ ಯುಗ್ಮವ ಪುಳಕೋತ್ಸಹÀದಿಂದ ಸಂದರುಶನ ನಾ ಮಾಡಿದೆ 8 ಇಟ್ಟಿದ್ದ ಅಂದಿಗೆ ಉಟ್ಟ ಪೀತಾಂಬರ ಕಟ್ಟಿದ್ದ ಧಟ್ಟಿ ವಢ್ಯಾಣ ಝಟಿ ಕಂಕಣಾಕಾರದಾಲಾಯುಧ ಇಟ್ಟ ಕಸ್ತೂರಿಯ ನೋಡಿದೆ 9 ಮಾಸದಾ ಪೂವು ಪೂಸಿದ ಗಂಧ ಭೂಷಣಾ ನಾನಾ ಪರಿವಿಧ ಏಸು ಬಗೆಯಲ್ಲಿಟ್ಟು ಶ್ರೀನಿ ವಾಸನ ಶೃಂಗಾರ ನೋಡಿದೆ 10 ಜಯಜಯ ಜಗದೀಶ ಜಗನ್ನಿವಾಸ ಜಯ ಜಯ ಲಕುಮಿ ಪರಿತೋಷ ಜಯ ಜಯ ವಿನಾಶ ಜಯ ಜಯ ಸರ್ವೇಶ ಜಯವೆಂದು ಸ್ತೋತ್ರವ ಮಾಡಿದೆ11 ಕೇಸಕ್ಕಿ ದಧ್ಯೋದನ ಪರಮಾನ್ನ ದೋಶಿ ಬಿಸಿಬಿಸಿ ಮನೋಹರ ಲೇಸಾಗಿ ಚತುರ್ವಿಧ ಪ್ರಸಾದವನ್ನು ಈಸು ಅವಸರ ನೋಡಿದೆ 12 ಕರ್ಪೂರದಾರತಿ ವಪ್ಪಿನಿಂದಲಿ ತಂದು ತಪ್ಪದಲಿ ಬೆಳಗೋದು ನೋಡಿದೆ ರೆಪ್ಪೆಯವಿ ಹಾಕದೆ ಮನದಣಿಯ ತಿ ಮ್ಮಪ್ಪನ ವಿಗ್ರಹ ನೋಡಿದೆ 13 ಹಿಮಋತು ಪ್ರಥಮ ಮಾಸÀ ದಶಮಿ ಹಿಮಕರ ವಾರದದಿನದಲ್ಲಿ ಕ್ರಮದಿಂದಲಿ ಪೋಗಿ ಬಿಂಬ ಮೂರುತಿಯ ವಿಮಲ ಚಾರಿತ್ರವ ನೋಡಿದೆ 14 ಶತ ಅಪರಾಧವ ಮಾಡಲು ಕಳೆದು ಪತಿ ವಿಜಯವಿಠ್ಠಲ ಪುರಂದರನ ಸಂ ಗತಿಯಲ್ಲಿ ಸತತ ಸಾಕಿದಾ15
--------------
ವಿಜಯದಾಸ
ನೋಡೊ ಮನ ಕೊಂಡಾಡೊ ಮರೆಯದಲೆ ಮನ ಚಿಂತÀ ಲ್ರೇವ ಲೇಶನ ? ಪಾಡುತಿರೆ ಕೃಷ್ಣಾತೀರದ್ವಾಸನ ಮಾಡೊ ಮಹಾತ್ಮರೆಂದೆನಿಸೊ ದಾಸರ ಜೋಡು ಪಾದಂಗಳಿಗೆ ವಂದನೆ ಪ ಅಂಜನೆಯಲ್ಲುದಿಸಿ ಕೌಸಲ್ಯಾ- ಕಂದನಂಘ್ರಿಕಮಲ ಸೇವೆಗೆ ಅಂಗದ ಮೊದಲಾದ ಕಪಿಗಳ ಸಂಗ ಬಿಟ್ವಾರಿಧಿಯನ್ಹಾರುತ ಭಂಗ ಬಡಿಸುತ ರಾವಣನ ಪುರ ಮಂಗಳಾರತಿ ಮಾಡಿ ಜಾನಕಿ ಗುಂಗುರವನಿಟ್ಟೆರಗಿ ರಾಮರಿ ಗಂಗನೆಯ ವಾರ್ತೆಗಳನರುಹಿದೆ1 ಕುಂತಿಸುತನಾಗ್ಯುದಿಸಿ ಬ್ಯಾಗನೆ ಪಂಥಮಾಡುತ ಕೌರವರ ಕುಲ- ಕಂತಕನು ನಾನೆಂದು ರಣದೊಳು ನಿಂತು ಗದೆ ಹಾಕವರ ಸವರುತ ಅಂತರಂಗದಿ ಹರಿಯ ದಿವ್ಯಾ- ನಂತ ಗುಣಗಳ ತಿಳಿದು ದ್ರೌಪದೀ- ಕಾಂತನೆನಿಸಿ ತಾ ಕರುಣನಿಧಿಗೇ- ಕಾಂತ ಭಕ್ತನೆಂದಿನಿಸಿದಾತನು 2 ಮಧ್ಯಗೇಹಭಟ್ಟರಲ್ಲಿ ಮಗನಾ- ಗಿದ್ದ ಸುಜನರಭೀಷ್ಟದಾಯಕ ಗೆದ್ದು ಮಾಯಾವಾದಿಗಳನೆ ಪ್ರ ಸಿದ್ಧಿನೆನಿಸಿದೆ ಸರ್ವಲೋಕದಿ ಶುದ್ಧ ಜ್ಞಾನಾನಂದತೀರ್ಥರು ಮಧ್ವಮತದ ಬಿರುದನೆತ್ತಿದ ಪದ್ಮಪತಿ ಭೀಮೇಶಕೃಷ್ಣಗೆ ಪರಮಭಕ್ತನೆಂದೆನಿಸಿದಾತನು 3
--------------
ಹರಪನಹಳ್ಳಿಭೀಮವ್ವ
ಪಂಚಮಿಯ ದಿನ ವಿಭವ ನಮ್ಮ ಶ್ರೀನಿವಾಸನ ಮಹಾತ್ಮವ ಮಾನಿನಿ ರನ್ನೆ ನೀ ಪೇಳೆ ಭಕ್ತಾ- ಧೀನದ ಚರಣದ ಲೀಲೆ ಭಾನು ಉದಯದಲಿ ವೀಣಾದಿ ಸು- ಗಾನ ವಾದ್ಯ ನಾನಾವಿಧ ರಭಸದಿ1 ಎತ್ತಲು ನೋಡಿದಡತ್ತ ಜನ- ಮೊತ್ತವಿಲಾಸವಿದೆತ್ತ ಚಿತ್ತದಿ ನಲಿನಲಿದಾಡಿ ತೋಷ- ವೆತ್ತಿರುವನು ಒಟ್ಟುಗೂಡಿ ಸುತ್ತುಮುತ್ತು ಒತ್ತೊತ್ತಿಲಿಹರು ವಿ- ಪ್ರೋತ್ತಮ ಶ್ರೀಹರಿಭಕ್ತರ ಮಯವಿದು2 ಚಾಮರ ಛತ್ರ ಸಿಗುರಿಯು ಜನ- ಸ್ತೋಮ ಪತಾಕೆ ತೋರಣವು ಹೇಮದ ಕಂಚುಕಿ ಈಟಿ ಗುಣ- ಧಾಮನ ಬಿರುದುಗಳ್ ಕೋಟಿ ಆ ಮಹಾಭೇರಿ ಪಟಹ ನಿಸ್ಸಾಳಕ ಸಾಮಗಾನ ಸಾಮ್ರಾಜ್ಯವೋಲಿಹುದು3 ಬಾಲರು ವೃದ್ಧ ಯೌವನರು\ಜನ- ಜಾಲವೆಲ್ಲರು ಕೂಡಿಹರು ಲೋಲ ಸ್ರೀಮುಂದ್ರಾಂಕಿತದಿ ಬಹು ವಿ- ಶಾಲ ದ್ವಾದಶನಾಮ ಮುದದಿ ಆಲಯದೊಳಗಿಹ ಬಾಲಕಿಯರು ಸಹ ಸಾಲಂಕೃತ ಸಮ್ಮೇಳದಿ ನಲಿವರು4 ಒಂದು ಭಾಗದಿ ವೇದಘೋಷ ಮ- ತ್ತೊಂದು ಭಾಗದಿ ಜನಘೋಷ ಇಂದಿನ ದಿನದತಿಚೋದ್ಯ ಏ- ನೆಂದು ವರ್ಣಿಸುವದಸಾಧ್ಯ ಚಂದಿರಮುಖಿ ಯಾರೆಂದೆನಗುಸುರೆಲೆ ಮಂದರಧರ ಗೋವಿಂದನ ಮಹಿಮೆಯ5 ಊರ್ವಶಿ : ಕೇಳಿದ್ಯಾ ನಳಿನಾಕ್ಷಿ ಶ್ರೀಹರಿಲೀಲೆ ಪೇಳಲೇನದಾ ಮೂರ್ಲೋಕದೊಳಗೀ ವಿ- ಶಾಲವ ನಾ ಕಾಣೆಪ. ಸೋಜಿಗ ಸೌಭಾಗ್ಯ ಸಂಪದಕಿದು ಬೀಜ ಕಾಣೆಲೆ ರಾಜೀವನಾಭನ ಪೂಜಾವಿನೋದದಿ ರಾಜವದನೆ ವನಭೋಜನದಿಂದಿನ1 ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹ ಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹ ರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು2 ನೂತನವೆಂದು ನೀ ಪೇಳುವಿ ಚಂದಿರ ಮುಖಿ ಜನಸಂದಣಿಗಳು ಮಹಾ ಮಂದಿ ಓಲೈಸುವರಿಂದು ಮುಕುಂದನ3 ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆಪ. ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆ ಕಾಣುವ ಯೋಗಭೋಗ1 ಎನಗತಿ ಮನವು ನಿನಗತಿ ಛಲವು ಜನುಮಾಂತರ ಪುಣ್ಯವೈಸೆ ನೀ2 ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾ ಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾಪ. ಅನವರತದಿಂದ ಬರುವ ಪುರುಷನಲ್ಲ ಮೀನಕೇತನ ಶತರೂಪ ಕಾಣೆ1 ನೂತನ ಪುರುಷನಿವನ್ಯಾರೆಂದರಿಯೆನಮ್ಮಾ ಶಾತಕುಂಭದ ಮಂಟಪವೇರಿ ಬರುವನಮ್ಮಾ2 ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾ ತರತರ ರತ್ನವರದ ಬಾಯೊಳಿರುವದಮ್ಮಾ3 ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾ ಪರಮ ಪುರುಷನಂತೆ ತೋರುವನು ಅಮ್ಮಾ4 ಬಾಲಾರ್ಕನಂತೆ ಮುಖ ಪ್ರಜ್ವಲಿಪುದು ನೀಲಮಾಣಿಕ್ಯ ಕಾಂತಿಯ ಸೋಲಿಪುದು5 ತೋರಲರಿಯೆ ಕಾಲಿಗೆರಗುವೆನು ಪೇಳಬೇಕು ಸಖಿಯೆ6 ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾ ಬೆರಳೊಳು ವಜ್ರದುಂಗುರವನಿಟ್ಟವನಮ್ಮಾ7 ವರರತ್ನಖಚಿತದಾಭರಣದಿಂದ ಮೆರೆವ ಚರಣ ಸರೋಜದೊಳು ರೇಖೆಯಿಂ ಶೋಭಿಸುವ 8 ವಲ್ಲಭೆಯರ ಸಹಿತುಲ್ಲಾಸದಿ ಬರುವ ಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ9 ಬಲ್ಲಿದ ಪುರುಷನಿವನೆಲ್ಲಿಂದ ಬಂದ ಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ10 ಊರ್ವಶಿ : ನೋಡು ನಿತ್ಯಾನಂದಕರನ ಮೂಡಗಿರಿಯಿಂದೋಡಿ ಬಂದನ ನೋಡೆಪ. ಛಪ್ಪನ್ನೈವತ್ತಾರು ದೇಶ ಸರ್ಪಶೈಲ ರಾಜವಾಸ ಚಪ್ಪರ ಶ್ರೀ ಶ್ರೀನಿವಾಸ1 ತಿರುಗುತ್ತಿಪ್ಪಾ ತಿರುಮಲೇಶ ಶರಣ ರಾಮನ ಭಕ್ತಿಪಾಶ ದುರುಳಿನಲಿ ನಿಂದಿರ್ಪಶ್ರೀಶ ತರಿಸುವನು ಕಾಣಿಕೆ ವಿಲಾಸ2 ಪಟ್ಟದರಸನಾದ ದೇವ ಸೃಷ್ಟಿಯಾಳುವಜಾನುಭಾವ ದೃಷ್ಟಿಗೋಚರವಾಗಿ ಕಾಯ್ವ ಇಷ್ಟವೆಲ್ಲವ ಸಲಿಸಿ ಕೊಡುವ 3 ಊರ್ವಶಿ : ಬಂದ ಗೋವಿಂದ ಸಾನಂದದಿ ಭಕ್ತರ ವೃಂದ ನೆರಹಿ ವನಕೆ ಅಂದಣವೇರಿ ಮುಕುಂದನೊಲವಿನಲಿ ಕುಂದಣ ಮಂಟಪವೇರಿ ಮತ್ತೊಬ್ಬನು ಸಂದರುಶನವಂ ನೀಡುತ ಯಿಬ್ಬರು ಒಂದಾಗುತ್ತಾನಂದವ ಬೀರುತ್ತ 1 ಅಕ್ಕ ನೀ ನೋಡು ಬಹುಮಾನದಿ ಸಿಕ್ಕಿದಿ ಬಿರುದು ಪೊತ್ತಾ ಉಕ್ಕುವದತಿ ತೋಷ ಸ್ತುತಿಪಾಠಕ ಜನಗಳ ಮಿಕ್ಕಿ ನೊಡುವ ನೋಟಕೆ ಮನಸಿನೊಳು ಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2 ಪವಿತ್ರ ನಿಶಾನಿಧಾರಣಾ ಪವಿತ್ರಗೈಯುವ ಕಾರಣ ಮಿತ್ರಮಂಡಳವನು ಮೀರಿ ಪೊಳೆವುತಿಹ ರತ್ನಖಚಿತ ಮಂಟಪದಲಿ ಮಂಡಿಸಿ ಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವ ಕೀರ್ತಿಯ ಧರಿಸಿ ಜಗತ್ರಯಪಾವನ 3 ನಿಸ್ಸಾಳ ಪಟಹ ಭೂರಿ ಜನ ಜಾಲ ಕೂಡಿರುವ ಮೇಳವಿಸುತ್ತನುಕೂಲಿಸಿ ಬಹು ಬಿರು ದಾಳಿಗೆ ಸಂಭ್ರಮದೇಳಿಗೆಯಿಂದಲಿ ಕೋಲು ಪಿಡಿದು ಓಹೋಯೆಂಬಂಥ ವಿ- ಶಾಲ ಭಕ್ತರ ಮೇಲು ಸಂತೋಷದಿ 4 ದೇಶದೇಶದ ಜನರು ನಾನಾ ವಿಧ &ಟಿ
--------------
ತುಪಾಕಿ ವೆಂಕಟರಮಣಾಚಾರ್ಯ
ಪಚ್ಚ ಪವಳದ ಕೋಲಅಚ್ಚ ಮುತ್ತಿನ ಕೋಲ ತುಚ್ಚಗೊಯ್ಸಿದ್ರೌಪತಿಗೆ ಹುಚ್ಚು ಹಿಡಿಸುವ ಕೋಲ ಪ. ಧಿಟ್ಟೆರಿಬ್ಬರು ನಮಗೆ ಇಟ್ಟರು ಅಣೆಯ ಕೃಷ್ಣಯ್ಯ ಇದಕೆ ನಗಬಹುದು ಕೋಲಕೃಷ್ಣಯ್ಯ ಇದಕೆ ನಗಬಹುದು ಮುಯ್ಯವ ಕೊಟ್ಟುಬಾಹುದಕೆ ತಡವ್ಯಾಕೆ ಕೋಲ 1 ಜಾಣಿಯರಿಬ್ಬರು ನಮಗೆ ಆಣಿಯನಿಟ್ಟರು ವೇಣುಗೋಪಾಲ ನಗಬಹುದು ಕೋಲವೇಣುಗೋಪಾಲ ನಗಬಹುದು ಮುಯ್ಯವ ಕ್ಷಣದೊಳು ನಾವು ತಿರುಗಿಸುವೆವು ಕೋಲ2 ಹರಿಯ ತಂಗಿಯರ ಗರುವಿನ ಮುಯ್ಯವತಿರುಗಿಸಿ ಬಂದು ಉಣಬೇಕು ಕೋಲ ತಿರುಗಿಸಿ ಬಂದು ಉಣಬೇಕು ಎನುತಲೆ ಹರಿಣಾಕ್ಷಿ ಭಾಮೆ ನುಡಿದಳು ಕೋಲ3 ರಂಗರಾಯರ ಮುದ್ದು ತಂಗಿಯರ ಹಂಗಿನ ಮುಯ್ಯ ತಿರುಗಿಸುವೆ ಕೋಲ ಹಂಗಿನ ಮುಯ್ಯ ತಿರುಗಿಸುವೆ ಮುಖವ ಭಂಗಿಸಿ ಬಾಹೊ ಸಭೆಯೊಳು ಕೋಲ4 ಇಂತು ರಾಮೇಶನ ಕಾಂತೆಯರೆಂಬುವರ ಪಂಥವ ಬಿಡಿಸಿ ಬರಬೇಕು ಕೋಲಪಂಥವ ಬಿಡಿಸಿ ಬರಬೇಕು ಮುಯ್ಯದ ಭ್ರಾಂತಿಯ ಹಿಡಿಸಿ ಕೊಡಬೇಕು ಕೋಲ 5
--------------
ಗಲಗಲಿಅವ್ವನವರು
ಪರ ಬೊಮ್ಮ ಸುಜ್ಞಾನವನರಿಯದ ಮನುಜನ ಪ ಮುಖವ ತೊಳೆದು ನಾಮವನಿಟ್ಟೆನಲ್ಲದೆಸುಖತೀರ್ಥಶಾಸ್ತ್ರವನೋದಿದನೆಸುಖಕೆ ಶೃಂಗಾರಕೆ ಮಾಲೆ ಹಾಕಿದನಲ್ಲದೆಭಕುತಿ ರಸದಲ್ಲಿ ಮುಳುಗಿದೆನೇನಯ್ಯ 1 ಊರು ಮಾತುಗಳಾಡಿ ದಣಿದೆನಲ್ಲದೆನಾರಾಯಣ ಕೃಷ್ಣ ಶರಣೆಂದೆನೆನಾರಿಯ ನುಡಿ ಕೇಳಿ ಮರುಳಾದೆನಲ್ಲದೆಗುರುಹಿರಿಯರ ಮಾತ ಮನ್ನಿಸಿದೆನೇನಯ್ಯ2 ನರೋತ್ತಮರಿಗಧಿಕ ಗಂಧರ್ವರಿಗಧಿಕಸುರೇಂದ್ರಗಧಿಕ ಹರಗಧಿಕವಿರಿಂಚಿಗಧಿಕ ಸಿರಿಗಧಿಕಹರಿ ಸರ್ವೋತ್ತಮನೆಂದು ತಿಳಿದೆನೇನಯ್ಯ3 ಜಗತು ಸತ್ಯವೆಂದು ಪಂಚಭೇದವ ತಿಳಿದುಮಿಗೆ ರಾಗದ್ವೇಷಂಗಳನು ವರ್ಜಿಸಿಭಗವಂತನ ಲೀಲೆ ಶ್ರವಣ ಕಥೆಗಳಿಂದನಿಗಮಗೋಚರನೆಂದು ತಿಳಿದೆನೇನಯ್ಯ 4 ಗಂಗೆಯಲಿ ಮೈ ಬಣ್ಣ ತೊಳೆದೆನಲ್ಲದೆ ಭವಹಿಂಗುವ ಸ್ನಾನವ ಮಾಡಿದೆನೆರಂಗವಿಠಲನ ನಿಜವಾದ ದಾಸರಸಂಗ ಸುಖವೆಂದು ತಿಳಿದೆನೇನಯ್ಯ 5
--------------
ಶ್ರೀಪಾದರಾಜರು
ಪಾರ್ಥಸಾರಥಿ ಪಾಲಿಸೆನ್ನ ಶ್ರೀಹರಿಯೆ ಪ ಅಂದು ಗಜನು ತಾನು ಬಂದು ತಾ ಬಂಧು ಬಳಗವ ಕೂಡಿ ಸೊಂಡಿ- ಲಿಂದ ನೀರನು ಕಲಕಲಾಕ್ಷಣ ಒಂದು ಮಕರ್ಹಲ್ಲಿಂದ ಪಿಡಿಯೆ ಮು- ಕುಂದ ನೀನೆ ಗತಿಯೆಂದರಾಕ್ಷಣ ಬಂದು ಒದಗಿದ್ಯೊ ಸಿಂಧುಶಯನನೆ 1 ದುರುಳಾಸುರನು ತನ್ನ ಕರುಳ ತನ ಕರುಳನಿಟ್ಟುರಿಯಲ್ಲಿ ಗರಳ ಹಾಕಿ ಬಾಧಿಸಲು ಖಳನು ಕಾರಣ ಕಂಬದಲಿ ಬಂದೆಳೆದು ಅವನುರ ಕರುಳ ಮಾಲೆಯ ಕರಾಳವದನವ ತೆರೆದು ತನ್ನಯ ಕೊರಳಲ್ಲಿರಿಸಿದ ಕೋಮಲಾಂಗನೆ 2 ಪಿತನ ತೊಡೆಯಲಿದ್ದ ಸುತನ ಕಂಡು ಸುತನ ಸುರುಚಿಯು ತಾನಾಗ ಹಿತದಂತ್ವಾಕ್ಯಗಳನು ನುಡಿಯಲು ಅತಿಬ್ಯಾಗದಲಜಸುತನ ನುಡಿ ಕೇ ಳುತಲಿ ತಪವನು ಚರಿಸಲಾಕ್ಷಣ ಪತಿತಪಾವನ ಪರಮ ಕರುಣದಿ ಸುತ ಧ್ರುವಗೆ ಸುಖವಿಟ್ಟ ಶ್ರೀಹರಿ3 ಬಾಡಿ ಬಳುಕುವ ದ್ವಿಜನ ನೋಡಿ ತಾ ನೋಡಿ ತಂದವಲಕ್ಕಿ ಬೇಡಿ ಆಡಿ ಭಕ್ತನ ಕೂಡ ನಯನುಡಿ ಮಾಡಿ ಕರುಣವ ತನ್ನ ದಯ ಸೂ- ರ್ಯಾಡಿ ಸಖಗೀಡಿಲ್ಲದರ್ಥವ ನೀಡಿದ್ಯೊ ಬಹು ರೂಢಿಗಧಿಕನೆ 4 ಕಡುಚÉಲ್ವೆಕರೆಯಲುಟ್ಟುಡುಗೆ ಉಟ್ಟ ಉಡುಗೆ ಸೆಳೆಯಲು ಕೃಪ್ಣೆ(ಯಿ)ದ್ದೆಡೆಗೆ ನಡೆದಸುರ ಪಿಡಿದೆಳೆಯೆ ಸೀರೆಯ ಕಡೆಯ ಕಾಣದೆ ಖಳನು ಧರೆಯೊಳು ಯುಡುಗೆಗಕ್ಷಯ ನುಡಿದ ಕೃಷ್ಣನೆ 5 ಸಿಂಧುಶಯನಾರವಿಂದನಯನಾರ- ವಿಂದ ನಯನ ಅಸುರರಿಗತಿ ಭಯಂಕರನಾ- ಗೆಂದಿಗಾದರು ನಿನ್ನ ನಾಮಸುಧೆ ಯಿಂದ ಸುಖ ಸುರಿವಂತೆ ಮಾಡು ಮು- ಕುಂದ ಭೀಮೇಶಕೃಷ್ಣ ನಿನ್ನ ಪ- ದಾಂಬುಜವ ತೋರಾನಂದದಿಂದಲಿ 6
--------------
ಹರಪನಹಳ್ಳಿಭೀಮವ್ವ
ಪಾಲಿಸೆನ್ನ ಪಾವನ ಮೂರ್ತಿಯೇ ಪ ಸತ್ಯಜ್ಞಾನಾನಂದತೀರ್ಥ ನಿನ್ನಯ ಉತ್ತಮ ಹಸ್ತವನಿಟ್ಟು ಅಭಯಾ ಭಕ್ತಗೆ ಅಂಕಿತವಿತ್ತು ಕಾಯೋ ಕರುಣಾನಿಧಿಯೇ 1 ಆನಂದತೀರ್ಥರ ಗ್ರಂಥಶ್ರವಣ ನೀನೆ ಮಾಡಿಸೆನ್ನೊಳಿಟ್ಟು ಕರುಣಾ ಮಾನಾಭಿಮಾನವು ನಿನ್ನ ಈ ದಾಸನಾ 2 ತಡವ್ಯಾಕೆ ತ್ವರಾ ಪಡೆಯೋ ಹನುಮೇಶವಿಠಲ ಪ್ರಿಯ ಕುವರಾ 3
--------------
ಹನುಮೇಶವಿಠಲ
ಪಾಲಿಸೋಯನ್ನ ಪರಾತ್ಪರಾ - ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನ ಘಣಿಶೈಲ ನಿಲಯ-ಹರಿ ಅ.ಪ ಜಲಜಭವನ ನಿಜಕುಕ್ಷಿಯೊಳಿದ್ದ ಸುಲಲಿತ ವೇದಾಪಹಾರಿಯ ಕಂಡು ಜಲಜರೂಪಿನಿಂದಾ ಖಳ ಸಂಹರ ಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಅಂದು ದೂರ್ವಾಸನ ಶಾಪದಿ ಜಗವು ಇಂದಿರೆ ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ಧರಣಿಯನಪಹಾರಗೈಯ್ಯಲು ಬೇಗ ಸೂಕರ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ3 ಸರಸಿಜಜನ ವರದರ್ಪದಿ ಜಗವನುರುಹಿ ತರಳನ ಬಾಧೆಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ 4 ಬಲಿಯ ಮೂರಡಿಭೂಮಿ ದಾನವ ಬೇಡಿ ಅಳೆದು ಈರಡಿಮಾಡಿ ಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯ ಪೆತ್ತ ಚೆಲುವ ವಾಮನರೂಪ5 ಚಕ್ರಾಂಶನಾದ ಕಾರ್ತಿವೀರ್ಯನ ಭುಜ ಚಕ್ರದೊಡನೆ ದುಷ್ಟ ಭೂಪರ ಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ಕ್ರೂರ ರಾವಣ ಕುಂಭಕರ್ಣರ ಬಲು ಘೋರತನಕೆ ತ್ರಿವೇಶರ ದೊಡ್ಡ ದೂರ ಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀರಾಮ ಮೂರುತಿ 7 ಬಲಭದ್ರನೆಂಬುವ ನಾಮದಿ ಧುರದಿ ಹಲ ನೇಗಿಲುಗಳನು ಹಸ್ತದಿ ಪಿಡಿದು ಬಲವಂತರಾದ ದೈತ್ಯಕುಲವ ತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರನಿಭಚೇಲ 8 ಭಾರ ಸೃಷ್ಟೀಶನಲ್ಲಿ ದೂರಿಡೆ ಬಲು ಭ್ರಷ್ಟ ಕೌರವ ಯುಧಿಷ್ಠಿರಗೆ ವೈರ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ 9 ಕಲಿಯಿಂದ ಕಿಡೆ ನಿಜಧರ್ಮವು ಬಹು ಖಳರಿಂದ ವ್ಯಾಪಿಸೆ ಲೋಕವು ಆಗ ಲಲಿತ ತೇಜಿಯನೇರಿ ಕಲುಷಾತ್ಮಕರ ಕೊಂದು ವಿಲಸಿತ ಧರ್ಮವನು ಸಲಹಿದ ಕಲ್ಕಿರೂಪ 10 ಗಿರಿಜಾವಿವಾಹದಿ ತ್ವಷ್ಟ್ರನ ಶಾಪ ಶರಧಿಯೀಂಟಿದ ಮುನಿಗೈದಲು ಬೇಗ ವರವ್ಯಾಘ್ರ ಗಿರೀಶನೆ ಶರಣೆಂದ ಮುನಿಪಗೆ ವರವಿತ್ತು ಸಲಹಿದ ವರದವಿಠಲಹರಿ11
--------------
ವೆಂಕಟವರದಾರ್ಯರು
ಪಾಲಿಸೋಯನ್ನ ಪರಾತ್ಪರಾ ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನಫಣಿ ಶೈಲ ನಿಳಯ-ಹರಿ ಅ.ಪ. ವೇದಾಪಹಾರಿಯಕಂಡು ಜಲಚರ ರೂಪಿನಿಂದಾ ಖಳನ ಸಂಹರಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ದುರುಳ ಹಿರಣ್ಯಾಕ್ಷನೆಂಬುವ-ದೈತ್ಯ-ಧರಣಿಯನ ಪಹಾರಗೈಯಲು ಬೇಗ ಪರಮೇಷ್ಟಿಗೊಲಿದು ಸೂಕರನ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ 3 ಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ4 ಅಳೆದು ಈರಡಿಮೂಡಿಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯಪೆತ್ತ ಚಲುವ ವಾಮನ ರೂಪ 5 ಚಕ್ರದೊಡನೆದುಷ್ಟಭೂಪರಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ತ್ರಿದಿವೇಶರದೊಡ್ಡ ದೂರಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀ ರಾಮ ಮೂರುತಿ 7 ನೇಗಿಲುಗಳನು ಹಸ್ತದಿಪಿಡಿದು ಬಲವಂತರಾದ ದೈತ್ಯಕುಲವತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರ ನಿಭಚೇಲ 8 ಭಾರ ತಾಳದೆ-ಧರಣೀ-ಸೃಷ್ಟೀಶನಲ್ಲಿದೂರಿಡೆ ವೈರಿ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ9 ವ್ಯಾಪಿಸೆಲೋಕವು ಆಗ ಲಲಿತತೇಜಿಯನೇರಿ ಕಲುಷಾತ್ಮಕರಕೊಂದು ವಿಲಸಿತ ಧರ್ಮವನ್ನು ಸಲಹಿದ ಕಲ್ಕಿರೂಪ 10 ಮುನಿಗೈದಲುಬೇಗ ವರವ್ಯಾಘ್ರಗಿರೀಶನೆ ಶರಣೆಂದಮುನಿಪಗೆ ವರವಿತ್ತು ಸಲಹಿದ ವರದ ವಿಠಲ ಹರಿ11
--------------
ಸರಗೂರು ವೆಂಕಟವರದಾರ್ಯರು
ಪಾಲೊಳಗದ್ದು ನೀರೊಳಗದ್ದು ಹರಿನಾ ನಿನ್ನ ನಂಬಿದೆನೋ ಪ ಜಲಜನಾಭ ನೀನಿಟ್ಟ ತೆರದಲ್ಲಿ ಇರುವೆನಯ್ಯ ಅ.ಪ ಸುಕೃತ ದುಷ್ಕøತ ಮಾಡುನಿಖಿಳ ದುರಿತದೊಳೆನ್ನನೋಲ್ಯಾಡಿಸುಅಖಿಳ ಖಿಳನೆನಿಸು ಅಭಯ ಭಯವ ಸೂಸುಮಕರಕುಂಡಲ ನಿನ್ನ ಮತವೆ ಸನ್ಮತವಯ್ಯ1 ಜ್ಞಾನಾಜ್ಞಾನದೊಳಗಿಡು ಮಾನಾಪಮಾನವೆ ಮಾಡುಅನಾಥ ನಾಥರೊಳೆನ್ನ ಅನವರತಾಗಿರಿಸುದೀನಾದೀನತೆಯೊಳಗೆನ್ನ ನೀನೀಡ್ಯಾಡುಶ್ರೀನಾಥ ನಿನ್ನಯ ಮತ ಮತವೆ ಸನ್ಮತವಯ್ಯ 2 ಪ್ರಾಣಾಪಾನ ವ್ಯಾನೋದಾನ ಸಮಾನಂಗಳ ಭೇದಿಸುಘನ ದಾರಿದ್ಯ್ರದಿ ನೂಕು ಸುಖವೆ ಸುರರೊಳಗ್ಹಾಕುಮುನಿಜನರ ಸಂಗ ಪೊರೆವ ರಂಗವಿಠಲನಿನ್ನಯ ಮತ ಮತವೆ ಸನ್ಮತವಯ್ಯ 3
--------------
ಶ್ರೀಪಾದರಾಜರು
ಪುಣ್ಯ ಪಡೆಯೆ ನೀನು ಪೂರ್ಣೇಂದುವದನೆ ಪುಣ್ಯ ಪಡೆಯೆ ನೀನು ಪ ಕುಂದಣದಾರತಿ ಬೆಳಗಿ ಅಕ್ಷತೆನಿಟ್ಟು ಆ- ನಂದವಾಗಾಶೀರ್ವಾದ ಮಾಡ್ಹರಸುತಲಿ 1 ಅತಿ ಹರುಷದಿ ಗಂಡು ಸುತರನೆ ಪಡೆದು ನೀ ಪೃಥಿವಿನಾಳೆನುತ ದ್ರೌಪದಿ ಹರಸಿದಳು2 ಅಕ್ಕರದಿಂದ್ಹೆಣ್ಣುಮಕ್ಕಳ ಪಡೆದು ಪ- ಲ್ಲಕ್ಕಿನೇರೆನುತ ದೇವಕ್ಕಿ ಹರಸಿದಳು 3 ಕಟ್ಟಿದ್ದ ಮಾಂಗಲ್ಯ ಕರಿಯ ಕಾಜಿನ ಬಳೆ ಮುತ್ತೈದೆತನಕೆ ಸಾವಿತ್ರಿ ಹರಸಿದಳು 4 ಅನ್ನ ಗೋವ್ಗಳು ಕನ್ಯಾದಾನ ಮಾಡೆನುತ ಸಂ- ಪನ್ನ್ಯಾಗಿರೆನುತ ಅರುಂಧತಿ ಹರಸಿದಳು 5 ಆಯುಷ್ಯ ಆರೋಗ್ಯ ಶ್ರೇಯಸ್ಸು ಸೌಭಾಗ್ಯ ನೀ ಪಡೆ ಸುಖ ಶ್ರೀಮಹಾಲಕ್ಷ್ಮಿ ಹರಸಿದಳು 6 ಕಾಮಿತ ಫಲ ಇಷ್ಟದಾಯಕನಾದ ಶ್ರೀ ಭೀಮೇಶಕೃಷ್ಣರಾಯನ ಕರುಣದಲಿ 7
--------------
ಹರಪನಹಳ್ಳಿಭೀಮವ್ವ
ಪುರುಷರೈವರು ಕೂಡಿ ಹರುಷದಿ ಬರುತಿರೆ ಸರಸದಿ ಕೃಷ್ಣೆ ಕದವಿಕ್ಕೆ ಸರಸದಿ ಕೃಷ್ಣೆ ಕದವಿಕ್ಕೆ 1 ನಾಗವೇಣಿಯೆ ನೀನು ಸಾಗಿ ಮುಂದಕ್ಕೆ ಬಂದು ಬಾಗಿಲಿಕ್ಕಿದ ಬಗೆ ಪೇಳೆ 2 ಸರ್ಹ್ಯಾಗೆ ತೆಗೆಯಲಿ ಕದವನು ಹ್ಯಾಗೆ ತೆಗೆಯಲಿ ಕದವನು 3 ಹರದಿ ದ್ರೌಪದಿ ಕೇಳೆ ದೊರೆಯು ಧರ್ಮರು ನಾವು ತ್ವರಿತದಿ ಬಂದೆವು ತೆಗೆ ನೀನು 4 ದೊರೆಗಳಾದರೆ ರಾಜ್ಯ ಪರರಿಗೆ ಕೊಟ್ಟು ತಾ- ನಡವಿ ಯಾತಕೆ ತಿರುಗೀರಿ ಅಡವಿ ಯಾತಕೆ ತಿರುಗೀರಿ5 ಪಟ್ಟದರಸನ ಕೂಡ ಇಷ್ಟು ಮಾತುಗಳ್ಯಾಕೆ ಶ್ರೇಷ್ಠ ಭೀಮನು ನಾ ಬಂದೀನೆ ಶ್ರೇಷ್ಠ ಭೀಮನು ನಾ ಬಂದೀನೆ 6 ಶ್ರೇಷ್ಠನಾದರೆ ಕೈಯ್ಯೊಳ್ಹುಟ್ಟು ಹಿಡಿದು ರಾಜ- ಗಟ್ಟ್ಟಿ ಅಡಿಗೆ ಉಣೀಸ್ಹೋಗೋ ರಾಜ- ಗಟ್ಟಿ ಅಡಿಗೆ ಉಣೀಸ್ಹೋಗೋ 7 ಪುಂಡಕೌರವರಿಗೆ ಗಂಡನೆನಿಸುವಂಥ ಗಾಂಡೀವರ್ಜುನ ನಾ ಬಂದೀನೆ ಗಾಂಡೀವರ್ಜುನ ನಾ ಬಂದೀನೆ 8 ದುಂಡು ಹರಡಿನಿಟ್ಟು ಗೊಂಡ್ಯದ್ಹೆರಳನ್ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ 9 ಸಕಲವಿದ್ಯೆಗಳಲ್ಲಿ ಕುಶಲ ಸಂಪನ್ನನಾದ ನಕುಲರಾಯನು ನಾ ಬಂದೀನೆ ನಕುಲರಾಯನು ನಾ ಬಂದೀನೆ 10 ಸಕಲವಿದ್ಯೆಗಳಲ್ಲಿ ಕುಶಲನಾದರೆ ತೇಜಿ ಕೆಲಸ ರಾಯರಿಗೆ ತಿಳಿಸ್ಹೋಗೊ ಕೆಲಸ ರಾಯರಿಗೆ ತಿಳಿಸ್ಹೋಗೊ 11 ಪಾವಕÀತನುಜೆ ಮಾದೇವಹಾರದವೇಣಿ ಸ(ಹ) ದೇವರಾಯನು ನಾ ಬಂದೀನೀಗ ಸ(ಹ)- ದೇವರಾಯನು ನಾ ಬಂದೀನೀಗ 12 ಗೋವ ಕಾಯುತಲಿ ಗೋಪಾಲಕನಾಗಿ ಕೊಳಲೂದಿ ಗೊಲ್ಲರೊಳಾಡಹೋಗೊ ಕೊಳಲೂದಿ ಗೊಲ್ಲರೊಳಾಡಹೋಗೊ 13 ಮಾತುಳಾಂತಕನಲ್ಲಿ ಮಾತು ಕಲಿತು ಬಂದಿ(ಲ್ಲಿ) ಸೋತೆವೆ ನಿನಗೆ ಸುಂದರಾಂಗಿ ಸೋತೆವೆ ನಿನಗೆ ಸುಂದರಾಂಗಿ 14 ಸೋತರೇನಾಯಿತು ದ್ಯೂತಪಗಡೆ ಬಿಟ್ಟು ಅ- ಜ್ಞಾತವಾಸವನೆ ಚರಿಸ್ಹೋಗೊ ಅ- ಜ್ಞಾತವಾಸವನೆ ಚರಿಸ್ಹೋಗೊ15 ತಿರುಗಿ ತಿರುಗಿ ಭಾಳ ಬಳಲಿ ಬಂದೆವೆ ನಾವು ಕರುಣವಿಲ್ಲವೆ ಕಮಲಾಕ್ಷಿ ಕರುಣವಿಲ್ಲವೆ ಕಮಲಾಕ್ಷಿ 16 ಭಾಳ ಬಳಲಿದೆವೆಂದು ಹೇಳಿಕೊಂಡರು ಕರು- ಣಾಳು ನಾನಲ್ಲ ಕರೆಯಲು ಕರು- ಣಾಳು ನಾನಲ್ಲ ಕರೆಯಲು 17 ಕಾಮನಯ್ಯನ ಕರುಣಕ್ಕೆ ಪಾತ್ರರೆ ನಾವು ಸಾಮಜಗಮನೆ ಸರಸ್ಯಾಕೆ ಸಾಮಜಗಮನೆ ಸರಸ್ಯಾಕೆ 18 ಹೇಮಮಾಣಿಕ್ಯದ ಕದವ ತೆಗೆದು ಪತಿಗಳಿಗೆ ಪ್ರೇಮದಿಂದೆರಗಿ ಕರೆದಳು ಪ್ರೇಮದಿಂದೆರಗಿ ಕರೆದಳು 19 ಆದರದಿಂದ ಕರೆಯಲರ್ಜುನ ಭೀಮ ಧರ್ಮ ಸಾದೇವ ನಕುಲ ಸಹಿತಾಗಿ ಸಾದೇವ ನಕುಲ ಸಹಿತಾಗಿ 20 ಪಂಚಪಾಂಡವರು ಬಂದು ಪರಮ ಸಂಭ್ರಮದಿಂದ ಮಂಚದ ಮ್ಯಾಲೆ ಕುಳಿತಾರೊ ಮಂಚದ ಮ್ಯಾಲೆ ಕುಳಿತಾರೊ21 ಥsÀಳಕು ಬೆಳಕಿನಿಂದ ಝಳಕು ಮಿಂಚುಗಳಂತೆ ಬಳುಕುತ ಬಾಳೆಸುಳಿಯಂತೆ ಬಳುಕುತ ಬಾಳೆಸುಳಿಯಂತೆ22 ಗಂಡರೈವರ ಮುಂದೆ ಗರುವಿಲೆ ನಿಂತಳು ದುಂಡುಮಲ್ಲಿಗೆ ಶಿರ ಬಾಗಿ 23 ಕರಕಮಲವ ಪಿಡಿದು ಕರೆದು ಸಾದೇವ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ 24 ಮುಖಬೆವರ್ವೊರೆಸುತ ನಕುಲರಾಯನು ಭಾಳ ಸುಖದಿ ಮುದ್ದಿಸಿದ ಮಡದಿಯ ಸುಖದಿ ಮುದ್ದಿಸಿದ ಮಡದಿಯ 25 ಅರ್ಜುನಾಗಲೆ ಮೋಹದಿಂದ ಮುಂಗುರುಳು ತಿದ್ದಿ ವಜ್ರದಾಭರಣನಿಡಿಸಿದ 26 ಭೀಮ ನಗುತ ಬಿಗಿದಪ್ಪಿ ದ್ರೌಪದಿಯ ಧರ್ಮ- ರಾಯನ ತೊಡೆಯಲ್ಲಿರಿಸಿದ ಧರ್ಮ- ರಾಯನ ತೊಡೆಯಲ್ಲಿರಿಸಿದ 27 ಧರ್ಮ ಮುತ್ತಿನ ಹಾರ ಪದಕ ಕೊರಳಿಗೆ ಹಾಕಿ ವರಮೋಹನಾಂಗಿ ಒಲಿಸಿದ ವರಮೋಹನಾಂಗಿ ಒಲಿಸಿದ 28|| ಸಿಂಧುಸುತನ ಮುಖಬಿಂಬ ಸೋಲಿಸುವಂಥ ಚಂದ್ರವದನೆ ಮುನಿಸ್ಯಾಕೆ ಚಂದ್ರವದನೆ ಮುನಿಸ್ಯಾಕೆ 29 ಮಾತಿನರಗಿಳಿಯೆ ನೀ ಜ್ಯೋತಿ ಮುತ್ತಿನ ಗೊಂಬೆ ಪ್ರೀತಿಪತಿಗಳ ನೀ ನೋಡೆ ಪ್ರೀತಿಪತಿಗಳ ನೀ ನೋಡೆ 30 ಪ್ರಾಣಪದಕವೆಂದು ತಿಳದೆವೈವರು ನಿನ್ನ
--------------
ಹರಪನಹಳ್ಳಿಭೀಮವ್ವ
ಪೇಳಲಳವಲ್ಲ ನಮ್ಮಯ್ಯನಾಟ ತಿಳಿವರಾರಿಲ್ಲ ಪ ಪೇಳೇನೆಂದರೆ ನಿಲುಕೊ ಮಾತಲ್ಲ ಹೇಳಿಕೆ ಕೇಳಿಕೆಗೆ ಮೀರಿದ ಮೇಲುಮಹಿಮನ ಲೀಲಾಜಾಲವ ಅ.ಪ ಸಾಧ್ಯ ಮಾತಲ್ಲ ಜಗಸೂತ್ರನಾಟಕೆ ಆದಿ ಅಂತಿಲ್ಲ ಜಗಮೂರರೊಳಗೆ ಸಾಧನಿಕರೆಲ್ಲ ನಿಜಭೇದ ತಿಳಿದಿಲ್ಲ ಸಾಧನಿಟ್ಟು ಆವಕಾಲದಿಂ ನಾದ ತಡೆಯದೆ ವೇದಗಳ ಬಿಡ ದೋದಿ ದಣಿದು ಇನ್ನು ಆದಿಮಹಿಮನ ಪಾದಕಾಣವು 1 ಬಾಗಿ ಅನುಗಾಲ ನಿಜತತ್ವಭೇದಿಸಿ ನೀಗಿ ಭವಮಾಲ ಜಡವಾದ ದುರ್ಭವ ರೋಗಗಳುಯೆಲ್ಲ ಪಾರಾಗಿ ನಿರ್ಮಲ ರಾಗಿ ಪರಮಯೋಗ ಒಲಿಸಿ ಯೋಗಿಗಳು ಮಹ ಉಗ್ರತಪದಿಂ ಯೋಗಬೆಳಗಿನೊಳಗೆ ನೋಡಲು ನಾಗಶಯನ ಮಹಿಮೆ ತಿಳಿಯದು 2 ಸಾನಂದಾದಿಗಳು ಮಹ ಭೃಗು ಗಾರ್ಗೇಯ ಮನು ಮುನ್ಯಾದಿಗಳು ದೇವರ್ಷಿ ನಾರದ ಶೌನಕಾದಿಗಳು ಘನ ಸಪ್ತಋಷಿಗಳು ಅನಂತಾನಂತ ಪ್ರಳಯದಿಂದ ಜ್ಞಾನ ಬೆಳಗಿನೋಳ್ನಿಂತು ನೋಡಿ ಕಾಣದೆ ಶ್ರೀರಾಮಪಾದ ಮೌನದೋಳ್ಮುಳುಗೇಳುತಿಹರು 3
--------------
ರಾಮದಾಸರು