ಒಟ್ಟು 2131 ಕಡೆಗಳಲ್ಲಿ , 113 ದಾಸರು , 1427 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಷ್ಟು ಮಾಡಿ ಕೈ ಬಿಟ್ಟು ಕೂಡ್ರುವದು ಶಿಷ್ಟರ ನಡತೆಲ್ಲೆಲ್ಲೂ ಗುರುವೇ ಬಲು ಕಷ್ಟದೊಳಗೆ ನಾ ಮುಳುಗಿರುವೆ ನೀ ಕೊಟ್ಟ ಅಭಯದಿಂ ಬದುಕಿರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣುಸಾರಥಿಯ ಪ್ರೀಯ ಮಗುವೆ ಬಾ ಬಾ ಗುರುವೆ ಪ ಇತ್ತರು ಸರಿಯಿಲ್ಲ ಈ ಮಾತು ಹೊರಗೆ ಪೇಳುವವಲ್ಲಾ ನಾ ನಿದ್ದೆ ಪೂರ್ವದಲಿ ಅತಿ ಖುಲ್ಲಾ ಶಿಲೆಯನು ಸುಂದರ ಮೂರ್ತಿಗೈದತೆರ ಬಲು ವಿಧದಲಿ ಸಲಹಿದಿಯಲ್ಲ ಹರಿಬಲ್ಲಾ ಜ್ಞಾನವಿತ್ತಿ ಹರಿಪಾದದಲ್ಲಿ ಅಭಿಮಾನವಿತ್ತಿ ಸುಖವೆಲ್ಲಾ ಬಲುಹೇಯವೆಂದು ತಿಳಿಸಿದಿಯಲ್ಲಾ ಮೇಲ್ವರದಿ ರಂಗನೊಲಿಯುವ ಸೊಲ್ಲಾ ಅಸನ ವಸನಗಳು ಕೊಟ್ಟು ಕೊನೆಗೆ ತುಚ್ಛಿಸುವ ನಿನ್ನ ಗುಣ ತಿಳಿಯಲಿಲ್ಲಾ ಇದು ಥsÀರವಲ್ಲಾ ನಿನ್ನ ಪಾದವೇ ಸಡಗರ ಸಿರಿ ಮೇಲೆ ಸುರಪುರಿ ಜ್ಞಾನನಿಧಿ ಥsÉರಿ ಕಾಶಿ ಗಯಾ ಮಧುರಿ ಹರಿ ಓಂ ಓಂ ಓಂ ನಿನ್ನ ನಾಮ ದುರಿತವೆಂಬೊ ಕರಿ ಕುಲಕೆ ಘನ ಹರಿ ಪರಿ ತಿಳಿದೆನೆಲೊಧೊರಿ ಹರಿ ಓಂ ಓಂ ಓಂ ಇನ್ನಾದರು ಕೋಪವತ್ವರಿ ಕರುಣಿ ಕಣ್ತೆರಿ ಸುತಗೆ ಸುಖಗರಿ ತೋರೋ ನಿನ್ನ ಮಾರಿ ಹರಿ ಓಂ ಓಂ ಓಂ ಎನ್ನಯ ಬಿsÀಷ್ಟಗಳನ್ನು ನೀಡದಿರೆ ನಿನ್ನ ವಿಮಲ ಕೀರ್ತಿಗೆ ಗುರುವೆ ಕುಂದನ್ನು ಬಿಡದೆ ತಿಳಿ ನಾ ತರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣು ಸಾರಥಿಯ ಪ್ರಿಯ ಮಗುವೆ ಬಾ ಬಾ ಗುರುವೆ 1 ಪಂಥವೇ ಹೇ ಮಹಾಕಾಂತ ಪ್ರಿಯ ನಿನ್ನ ಸಂತತಿಯೊಳು ಸೂರಿಗಳೊಡೆಯ ನೀನೆಂತು ಪೊಂದಿದೈ ನಿರ್ಭಿಡಿಯಾ ಇದು ಸಂತರು ಕೇಳಿದರಾಶ್ಚರ್ಯ ವಂತರು ಆಗರೆ ಸಾಕು ಮುಂದೆಯನ್ನಂತರಂಗವೇ ತವನಿಲಯ ಆಗಲಿ ಜೀಯಾ ಕಂದನ ಕಾಯುವದಂತು ಸಹಜ ಸಿರಿ ಹಿಂದಕೆ ಪಾಂಡವನೆಂಭಿರಿಯಾ ಆ ಗಂಧರ್ವನ ಮಗನಾದ ಗಯಾ ತಾ ಬಂದು ಹೋಗಲವನನು ಮೊರೆಯ ಸಿಂಧು ಜಪನ ಸಹ ಲಕ್ಷಿಸದಲೆ ತ್ವರ ತಂದು ಕೊಟ್ಟನವನಿಗೆ ವಿಜಯಾ ಮೇಲ್ಹರಿಯದಯಾ ಇದು ಅಲ್ಲದೆ ಬಹು ಭಕ್ತರು ಜ್ಞಾನಯುಕ್ತರು ಸುಧಿಯ ಭೋಕ್ತರು ನೆನೆದವರ ದು:ಖ ಬಿಡಿಸಿದರು ಸುಧೆಯ ಬಡಿಸಿದರು ಹರಿ ಓಂ ಓಂ ಓಂ ಬಲು ಹಿತದಿ ಶುಭವ ಕೋರಿದರು ತಾಪ ಹೀರಿದರು ವಾಕ್ಯ ಸಾರಿದರು ಹರಿಯ ತೋರಿದರು ಹರಿ ಓಂ ಓಂ ಓಂ ನೀನಾದರೂ ಬಹಳರ ಪೊರದಿ ಈ ಹೀನ ಓರ್ವ ನಿನ್ನಗೆಯರವೆ ಮರಿಯಬ್ಯಾಡ ಕರುಣೆ ಕರವ ಮುಗಿವೆ ಸಿಟ್ಟು ಮಾತ್ರ ನೀನಾಗ ಬೇಡ2 ಪರ ಖರೆ ಗುರುವಿಲ್ಲದ ಗತಿಯನ್ನು ಧರೆತ್ರಯದಿ ತೋರು ತುಸು ನೋಡೋಣ ಗಿರಿಧರಿಯ ಬಿಟ್ಟು ನಿಲ್ಲುವುದೇನು ಗುರುವೆ ತ್ರಿಟಿಯ ಬಿಟ್ಟೊರುಷವಾಗುತದೆ ಹಿರಿಯರಿ ಪೇಳ ವದಿನ್ನೇನು ಹೇ | ಸುರಧೇನು ಗುರುವೆ ಸುಖದ ಖಣಿ ಗುರುತನುಮಣಿ ಮಣಿ ತಿಳಿದೆ ನಾ ಮನದಾಗೆ ಪರಕಿಸಿದೆನ್ನನು ಪೊರೆಯೆ ಯನುತ ಬಾ ಯ್ತೆರೆಯುತ ಮಣಿಸುವೆ ಶಿರನಿನಗೆ ಮೂಜಗದಾಗೆ | ನಿನ್ನಿಂದ ಎನಗೆ ಸದ್ಬುದ್ಧಿ ಯೋಗದಾಸಿದ್ಧಿ ಕಾರ್ಯದಾಸಿದ್ಧಿ ಸ್ವರ್ಗದಾಸಿದ್ಧಿ ಹರಿ ಓಂ ಓಂ ಓಂ ನಿನ್ನಿಂದ ಪಡೆದ ವಿಜ್ಞಾನ ಹರಿಯರಾ ಖೂನಾ ಲೋಕದೊಳು ಮಾನ ಮುಕ್ತಿ ಸೋಪಾನ ಹರಿ ಓಂ ಓಂ ಓಂ ನೀನೇವೆ ಯನಗೆ ಆಭರಣ ಝಗಝಗಿಪ ವಸನ ಶ್ರೀಹರಿಯ ಚರಣ ವಿರಜಾನದಿ ಸ್ನಾನ ಹರಿ ಓಂ ಓಂ ಓಂ ನಿನ್ನೊಮ್ಮೆ ನೆನಸೆ ಪವಮಾನ ಕಾಯ್ವ ಪ್ರತಿದಿನ ಇದಕೆ ಅನುಮಾನ ಇಲ್ಲ ಏನೇನ ಹರಿ ಓಂ ಓಂ ಓಂ ಗಡ ಕೇಳ್ವಡೆಯನೆ ಕಡೆ ನುಡಿಯನ್ನದು ಭಿಡೆಯ ಇಡದೆ ನಾನುಡಿವೆ ಎನ್ನ ಮರೆತರೆ ಮಂಗನು ನೀ ನಿಜವೆ 3
--------------
ಅಸ್ಕಿಹಾಳ ಗೋವಿಂದ
ಇಷ್ಟೇಕೆ ನಿರ್ದಯ ಶ್ರೀಹರಿಯೇ ಸೃಷ್ಟೀಪತಿಯೆ ಪ. ಮುಟ್ಟಿ ಭಜಿಪರ ನಿಟ್ಟಿಸಿ ನೋಡದೆ ನಿಷ್ಠುರವಾಗಿಹುದಿಷ್ಟವೆ ನಿನಗಿದು ಅ.ಪ. ಸಣ್ಣ ಮಾತುಗಳಾಡಿದೆನೇನೊ ದೆನ್ನ ತಲೆಯ ಮೇಲಿನ್ನೊಗೆಯದಿರು 1 ಕೋರೆಯ ತೋರುತ ಕೊಸರುವುದೇಕೋ ಶ್ರೀಹರಿ ನೀ ನೀರೀತಿ ಮಾಡುವ ಬಗೆಯಿನ್ನೇಕೋ ನೀರಜಭವಪಿತ ನೀನೇನಗೈದರು ಸೇರಿದೆ ನಿನ್ನನು ಸಾರೆನದಾರನು 2 ಸಿಂಗನ್ನ ಪೋಲುವ ಮುಖ ಧರಿಸಿ ಕಂಗೆಡೆ ಭಯದಿ ಜಗಂಗಳ ನಡುಗಿಪ ನುಂಗಲು ಬರುವಾಸಿಂಗನ ಬಗೆ ಸಾಕೋ 3 ಮುನ್ನಾ ಶುಕ್ರನ ಕಣ್ಣನು ತಿವಿದಾ ಪುಲ್ಲಿನತುದಿಯಿಂ ಎನ್ನೀ ಕಣ್ಣನ್ನು ತಿವಿಯದಿರಣ್ಣಾ ನಿನ್ನೀಕರದೊಳಿಹ ಘನ ಕೊಡಲಿಗೆ ನೀ ನಿನ್ನಾರನು ಗುರಿಗೈಯದಿರೆಂಬೆನು 4 ಶಿಲೆಯಾಗಿದ್ದವಳ ಕಲುಷವ ಕಳೆದು ಪಾವನೆಯೆನಿ ಕಾಳಿಂಗನ ಫಣೆಯೊಳು ಕುಣಿಕುಣಿದೇ ಭಳಿರೆನೆ ಬಾಲ ಗೋಕುಲ ಬಾಲೆಯರೆಲ್ಲರ ಜಾಲವಿದ್ಯೆಯಿಂ ಮರುಳುಗೊಳಿಸಿದೆ 5 ತುರುಗವನೇರುತ ತರುಬಲು ಬೇಡೈ ಧರೆಯೊಳು ನೀನೆತ್ತಿದ ಪರಿಪರಿ ರೂಪವ ಸ್ಮರಿಸಿ ಸ್ಮರಿಸಿ ಮನಬೆರಗಾಗಿದೆ ಹರಿ6 ಶರಣಾಭರಣನೇ ನೀನೆಂದು ಮನದೆಂದು ಮರೆಬೇಡುವೆನೈ ಬಳಿಸಂದು ವರಶೇಷಗಿರಿ ದೊರೆನೀನಿಂದು 7
--------------
ನಂಜನಗೂಡು ತಿರುಮಲಾಂಬಾ
ಇಹಸುಖ ಮೊದಲೇಯಿಲ್ಲ | ಕೃಷ್ಣ ಅಹಹ ಪರಸುಖವಾಗುವುದ್ಹ್ಯಾಗೊ ಪ ಸಾಹಸಿನಾನೆನುತ ಜನರ ಮೆಚ್ಚಿಸುವೊಡೆ ಕುಹಕ ಮಾತುಗಳ ಕೂಗಿ ಬಾಯಾರಿದೆ ಅ.ಪ ಶ್ರವಣ ಮನನ ನಿಧಿ ಧ್ಯಾಸನ ವೊಂ- ದೆವೆ ಮಾತ್ರವು ನಿಜವಾಗಿ ಕಾಣೆನುನಾ ಬವನಾಶಿ ಧರಿಸಿ ದಾಸನೆಂದು ನಾ ಬರಿದೆ ದೇಶಗಳ ತಿರುಗಿ ಬೆಂಡಾದೆನು 1 ಯಮನಿಯಮಾಸನ ಯೋಗ | ಗಳ ಭ್ರಮೆಯ ಪಡುತ ಬಳಲುವೆಯಾವಾಗ ಮಮಯೆಂಬುದರಿಂ ಬಂದಿತು ರೋಗ 2 ಶಂಕರ ಮುಖ ಸುರವಂದ್ಯ | ಅರಿ ಶಂಖ ಗದಾಧರ ಶ್ರೀಶ ಮುಕುಂದ ಸಂಕಟ ಬಂದಾಗ ವೆಂಕಟರಮಣೆಂದು ಮಂಕುಜನರು ಪೇಳ್ವಗಾದೆಯಂತಾಯಿತು 3 ಕಾಸಿಗೆ ತಿರುಗಿದೆನಲ್ಲದೆ | ದಿವ್ಯ ಕಾಶಿಗಯಾಯಾತ್ರೆಯ ಮಾಡಿದೆನೇ ಘಾಶಿಪಟ್ಟಿ ಸಾಕು ಸಾಕಿದರ ಗೊಡವೇ 4 ಕೊಟ್ಟದ್ದರೆ ಹರಿಕೊಡುವ | ಯಂ ಕೊಟ್ಟರುವದಕು ಕೊಡದಿರುವದಕೂ ಕೃಷ್ಣ ನೀನರಿಯದೆ ನಾನು ಸ್ವತಂತ್ರನೇ 5 ಕಣ್ಣಿಲ್ಲದ ಚಿಂತೆವಂದು | ಸದಾ ಬನ್ನ ಬಡುವದು ಯೋಚನೆಯೆರಡು ನಿನ್ನವನೆನಿಸೀ ಕಷ್ಟ ಬಿಡಿಸಿ ಒಳ- ಕಣ್ಣು ಕೊಟ್ಟು ನಿನ್ನ ಸೇವೆಯ ಪಾಲಿಸೋ 6 ಛಳಿ ಜ್ವರದ ಯಾತನೆ ಪಡುವೆ | ನಿನ್ನ ಕರೆಕರೆ ಪಡಿಸುವುದು ನಿನಗೆ ತರವೇ 7 ಆರು ಜನರ ಸೇವೆ ಕೊಡಿಸೋ | ಯೀ ಆರು ಜನರ ಸಂಘವ ಪರಿಹರಿಸೋ ಮೂರು ಜನದ ಕೂಟ ಮೊದಲೇ ಬಿಡಿಸೋ ತಾಳಲಾರೆಯಿವರು ಬಲು ಕ್ರೂರಾತ್ಮರು 8 ಆಸೆಯ ಪರಿಹರಿಸಯ್ಯಾ | ನಿಜ ದಾಸನೆನಿಸಿ ನೀ ಪಿಡಿಯೆನ್ನ ಕೈಯ್ಯಾ ಈಸಲಾರೆ ಗುರುರಾಮ ವಿಠ್ಠಲ ಜೀಯಾ 9
--------------
ಗುರುರಾಮವಿಠಲ
ಈ ಉಪಾಯವು ತೋರಿ ಕೊಡುವೆನು ಪ ಉದಯದಲಿ ಎದ್ದೀಗ ಊರ ವಾರ್ತಿಯ ಬಿಟ್ಟು ಮುದದಿಂದ ವೃಂದಾವನ ಸೇವಿಸಿ ವದನದಲಿ ಶ್ರೀ ಹರಿಯನಾಮ ಗುಣಕಥೆಗಳನು ಪದೋಪದಿಗೆ ಪಾಡಿ ಕೊಂಡಾಡು ನಲಿದಾಡು 1 ಆಮೇಲೆ ದೇವರೆಡೆ ರಂಗವಾಲಿಯನಿಕ್ಕಿ ಕಾಮುಕನಾಗದಲೆ ಸ್ನಾನ ಸಂಧ್ಯಾ ನೇಮ ನಿತ್ಯವ ಮುಗಿಸಿ ದೇವತಾ ಪೂಜೆಗೈದು ಪ್ರೇಮದಿಂದಲಿ ದಾನ ಕರದಲ್ಲಿ ಮಾಡೊ 2 ಮಂಗಳ ಮೂರುತಿಯ ಅಂತರಂಗದಿ ನಿಲಿಸಿ ಶೃಂಗಾರದುಡಿಗೆ ಇಡಿಗಿಯನು ತೊಡಿಸಿ ಮಂಗಳಾರುತಿ ಬೆಳಗಿ ಮನದಲ್ಲಿ ನಲಿನಲಿದು ಕಂಗಳಿಂದಲಿ ನೋಡು ಹರಿಯ ಕೂಡಾಡು 3 ಮೂಲ ಗುಣ ಅವತಾರ ಮಹಿಮೆ ಮಹ ಉನ್ನತ ಲೀಲೆ ವಿನೋದ ಅತಿ ಆಶ್ಚರ್ಯವ ವ್ಯಾಳವ್ಯಾಳೆಗೆ ಪೋಗಿ ಉತ್ತಮ ಜ್ಞಾನಿಗಳಿಂದ ಕೇಳು ಕರ್ಣದಲಿ ಪರಮ ಹರುಷದಲೆ4 ಹರಿಚರಣಕ್ಕೇರಿಸಿದ ಶಿರಿ ತುಲಸಿ ಚಂಪಕ ವರ ಜಾಜಿ ಮಲ್ಲೆ ಮಲ್ಲಿಗೆ ಕ್ಯಾದಿಗೆ ಪರಿಪರಿ ಗಂಧ ಚಂದನ ದಿವ್ಯ ಪರಿಮಳ ಸರಕು ನಾಶಿಕದಲ್ಲಿ ಕೊಳ್ಳು ಸುಖ ಬಾಳು 5 ಅಶಿವರುಣ ಮಧ್ಯ ತ್ರಿವೇಣಿ ವಿಷ್ಣುಪಾದ ಎಸೆÀವ ಕುರುಕ್ಷೇತ್ರ ಅಯೋಧ್ಯ ಮಾಯಾ ವೃಷಭ ಗಿರಿ ಶ್ರೀರಂಗ ಕಂಚಿ ಮೊದಲಾಗ್ಯುಳ್ಳ ಹೆಸರಾದ ಪುಣ್ಯನಿಧಿ ಮಟ್ಟು ದುರಿತವ ಕುಟ್ಟು 6 ಬೇಸರದಲೀಪರಿಚರಿಸಿದರೆ ಜನನಾದಿ ನಾಶನವÀ ಮಾಡಿ ನಾರದವರದನು ದಾಸ ಪುರಂದರಗೆ ವೊಲಿದಂತೆ ವಿಜಯವಿಠ್ಠ ಲೇಶ ವೆಂಕಟ ನಿನಗೆ ಪರಮ ಪದವೀಯನೀವ 7
--------------
ವಿಜಯದಾಸ
ಈ ತನು ನೀನಲ್ಲಾ ನೀನಲ್ಲಾ |ತನುವಿನ ಗುಣವು ಇದುವೆ ಎಲ್ಲಾ ಪ ರೂಪಕ ಬಂದಿತು ಸ್ಥೂಲ ಸೂಕ್ಷ್ಮ |ರೂಪವು ಒಂದೇ ಬೀಜದ ಮೂಲಾ 1 ಕಾರಣ ದೇಹದೊಳಗೆ ಒಂದೇ | ಮಹಾ ಕಾರಣದಲಿ ನೋಡಿಂದೇ 2 ತನುಮನ ಧರ್ಮದ ಜ್ಞಾನವ ಬಿಟ್ಟು |ಉನ್ಮನದಿ ನೀ ಲಕ್ಷಿಸು ಲಕ್ಷಿಟ್ಟು 3 ತನುಮನ ಕರಣಗಳ್ ನಿನಗೆ ಬ್ಯಾರೆ |ತನುಮನ ನಿನಗಿಹುದೆಂದೆನಲಾರೆ 4 ಗುರುಭವತಾರಕ ದೇವನು ಒಲಿದರೆ |ತೋರುವನರಿವಿನ ನಿಜ ಭಾವಾ 5
--------------
ಭಾವತರಕರು
ಈ ಭಾಗ್ಯವೆ ನಿನ್ನದೊ ವರ ಭೋಗಿಶಯನಾ ಪ ಸೌಭಾಗ್ಯವೇ ನಿನ್ನ ಮಹಿಮೆ ತಿಳಿಯುವ ಯೋಗಅ.ಪ ನೀನಿಲ್ಲದಾಸ್ಥಾನ ಈ ನಳಿನಜಾಂಡದೊಳಿಲ್ಲ ನೀನೆಲ್ಲವನು ಬಲ್ಲೆ ನಿನ್ನತಿಳಿಯಗೊಡದೆ ಹೀನಮಾನವ ನಾನು ನಿನ್ನನವರತ ಮರೆತರು ನೀ ಎನ್ನ ಮರೆಯದಲೆ ಎನ್ನೊಳಗೆ ಇಹೆ ಎಂಬ 1 ನಿಲ್ಲಿಸಲು ನಿಲ್ಲುವೆನು ಮಲಗಿಸಲು ಮಲಗುವೆನು ತಿಳಿಸಿದರೆ ನಾ ತಿಳಿವೆ ತಿಳುವಳಿಕೆ ನೀನೆ ತಿಳಿಯಗೊಡಿಸೋಎನ್ನಕ್ರಿಯೆಗಳನು ದೇಹದ ನೆಳಲಂತೆ ನಿನಗೆ ನಾನಿಹೆನಯ್ಯ ದೇವಾ 2 ಈ ಜಗತ್ತಿನೊಳಗೆಲ್ಲ ಪೂಜ್ಯಪೂಜಕ ಪೂಜ್ಯ ಪೂಜೋಪಕರಣದೊಳು ನೀನೆ ನಿಂತು ಮೂರ್ಜಗತ್ಪತಿಯೆ ನಿನ್ನನರ್ಚಿಸುವ ಭಜಕರಿಗೆ ನೈಜಸುಖ ವ್ಯಕ್ತಿಯನು ಮಾಡುತಲಿ ಪೊರೆವೇ 3 ನೀರು ತೃಣವನು ಕೊಡಲು ಹರುಷದಿಂದಲಿ ಗೋವು ಕ್ಷೀರವನು ಕರೆದು ಜನರ ಪೊರೆವಂತೆ ಸೂರಿಗಳು ಮಾಳ್ವ ಅಪರಾಧಗಳೆಣಿಸದಲೆ ಕರುಣದಿಂದಲಿ ಅವರ ಪೊರೆವ ಶ್ರೀಹರಿಯೆ4 ಪನ್ನಗಾಚಲನಿಲಯ ನೀನೆ ಎನ್ನೊಳಗಿರಲು ಬನ್ನಪಡಲ್ಯಾತಕೆ ಚಿನ್ಮಯರೂಪ ಎನ್ನಂಥಜೀವರಿನ್ನೆಷ್ಟೋ ಬ್ರಹ್ಮಾಂಡದೊಳು ಘನ್ನಭಕುತಿಯನೀಡೋ ಶ್ರೀಉರಗಾದ್ರಿವಾಸವಿಠಲ 5
--------------
ಉರಗಾದ್ರಿವಾಸವಿಠಲದಾಸರು
ಈ ಸಮಯದಲಿ ಸುಮ್ಮನಿರುವರೆ ರಾಮಾದಾಸಾನುದಾಸರೊಳು ತೋರದೆ ಪ್ರೇಮಾ ಪಮರುಗಿ ಬೆದರದಿರೆಂಬ ಮಾತೃ ಮೊದಲೆುಲ್ಲಕರೆದು ನಾ ಬೇಡಿದುದ ಕೊಡುವ ಪಿತೃ'ಲ್ಲನೆರವಾಗಿಯನುಸರಿಸಿ ನಡೆವ ಭ್ರಾತೃಗಳಿಲ್ಲಮೊರೆುಡಲು ನಿನಗೆ ನೀ ಮುಖದೋರೆಯಲ್ಲಾ 1ಕಡ ಹುಟ್ಟಿದರೆ ಬಡವ ಕೆಡುವನೆಂಬೀಗಾದೆತೊಡರಿಕೊಂಡೆನ್ನೊಳಗೆ ತೋರಿದುದು ತಂದೆತಡವ ಮಾಡದೆ ಮುಂದೆ ತನಿದಯಾರಸದಿಂದೆಕಡೆಹಾುಸಬೇಕೆಂದೆ ಕರುಣಾಬ್ಧಿುಂದೆ 2ಶರಣು ಹೊಕ್ಕೆನು ಜೀಯ ಸೀತಾಮನಃಪ್ರೀಯನರಳಿಪರೆ ಋಣಿಯ ಚಿಕನಾಗಪುರ ನಿಲಯಾಮರೆದೆನ್ನ ದುರ್ನಡೆಯ ಮರುಗಿ ನೀ ಸಲಹಯ್ಯವರದ ವೆಂಕಟರಾಯ ವಾಸುದೇವಾರ್ಯ3
--------------
ವೆಂಕಟದಾಸರು
ಈಗ ಶಾಸ್ತ್ರಗಳನ್ನು ಎರಗಿ ಪೇಳುವೆ ನಾನು ಯೋಗೇಶ ಪ್ರತಿಗ್ರಹಿಸುಆಗುಮಾಡಿದೆ ನೀನು ಅಖಿಲಾಗಮಂಗಳನುಭಾಗಿಸಿ ಬಹುವಾಗಿ ಬಗೆಗಳನು ಪಹದಿನಾಲ್ಕು ಸೂತ್ರಗಳು ಹುದುಗಿದ ವೃತ್ತಿಗಳು ವೊದಗಿ ಶಬ್ದವ ಬೋಧಿಸಿಅದರ ದೋಷಗಳನ್ನು ಅಟ್ಟಿ ಶುದ್ಧಿಯ ಮಾಳ್ಪುದಿದು ತಾನೆ ಮೊದಲಾಗಿ ುೀ ಶಾಸ್ತ್ರವಿರಲು 1ಎರಡನೆಯದು ತರ್ಕವೆಲ್ಲಾ ಜೀವರ ಬಗೆಯನರುಹಿಸಿ ಕೊಡುತಿಹುದುಪರಿಕಿಸಿ ಹದಿನಾರು ಪರಿ ಪದಾರ್ಥಗಳನ್ನುನೆರಹಿಸಿುರೆ ನೀನುನಿನಗೊಪ್ಪಿಸುವೆನು 2ಈ ಸಾಧನಗಳಿಂದಲೇಕ ವಸ್ತುವ ತಿಳಿದುತಾ ಸಾಧಿಸುವ ಬಗೆಯಮೋಸವಿಲ್ಲದ ಹಾಗೆ ಮುಕ್ತಿ ತೋರ್ಪುತ್ತರ ಮೀಮಾಂಸೆ ಯೆಂದೆಂಬುದೆ ನಿಜ ಶಾಸ್ತ್ರ ವಾಗೆ 3ಕರ್ಮ ಬ್ರಹ್ಮವೆಯೆಂದು ಕೊಂಡಾಡಿ ಜನರನ್ನುಧರ್ಮಮಾರ್ಗದಿ ನಿಲಿಪಮರ್ಮದೋರುವ ಪೂರ್ವ ಮೀಮಾಂಸೆ ಯೆಂಬುದನಿರ್ಮಿಸಿುರೆ ನೀನು ನಿರ್ಣೈಪುದಾಗಿ 4ಪರಿಕಿಸಿ ನಿನ್ನುವನು ಪಡೆÉುಸಿ ಪ್ರಾಣಗಳನ್ನುಪರಮಾನಂದದಿ ನಿಲಿಸಿಮೆರೆವ ಶ್ರೀ ತಿರುಪತಿ ವರದ ವೆಂಕಟರಮಣಚರಣಸೇವೆಗೆ ಯೆನ್ನ ಚಲಿಸದಂತಿರಿಸು 5
--------------
ತಿಮ್ಮಪ್ಪದಾಸರು
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ ಪ ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ1 ಕಲುಷ ಮಾಧವ 2 ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ 3 ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ 4 ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ 5 ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಮಾಡಿಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ 6 ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ 7 ಸದನ ಮಾಡು ಮುದದಿ ಶ್ರೀಧರ 8 ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ 9 ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ10 ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ 11 ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ12 ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ 13 ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ 14 ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ 15 ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ಚರಣದಲ್ಲಿ ಕ್ಷೇಮ ಪುರುಷೋತ್ತಮ 16 ಅಧೋಕ್ಷಜ 17 ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ 18 ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ19 ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ 20 ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ 21 ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ22 ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ23 ಸತ್ಯವಾದ ನಾಮಗಳನು ನಿತ್ಯದಲ್ಲಿ ಪಠಿಸುವವರಅರ್ತಿಯಿಂದ ಕಾಯದಿರನು ಕರ್ತೃ ಕೇಶವ 24 ಮರೆತು ಬಿಡದೆ ಹರಿಯ ನಾಮ ಬರೆದು ಓದಿ ಕೇಳುವರಿಗೆಕರೆದು ಮುಕ್ತಿ ಕೊಡುವ ಬಾಡದಾದಿಕೇಶವ 25
--------------
ಕನಕದಾಸ
ಉ. ದಾಸವರ್ಯ ಸ್ತುತಿ ವಿಜಯದಾಸರು ಬಾಲೆಯರ ಪಾಲಿಸೈ ದೀನಜನ ಪಾಲ ವಿಜಯಾಖ್ಯ ರಾಯಾ ಪ ಅಚ್ಚರವಲ್ಲ ಜೀಯಾ ಅ.ಪ. ಘನ ವ್ಯಾಧಿಯಂ ಪೀಡಿತಳಾಗಿ ಸೇವಿಸೆ ನೀನಾಗಿ ವಲಿದು ಅಭಯವನಿತ್ತು ನಿನ್ನ ದಾಸನೆಂದುಪದೇಶಿಶಿ ಜರಿದು ದೂರ ನೋಡುವರೇ ಪರಮ ಕರುಣಾಶರಧಿ ನಿನ್ನ ದ್ವಂದ್ವಗಳಿಗಭಿವಂದಿಪೆ 1 ಅನ್ಯಳಲ್ಲವೋ ರಾಯಾ ನಿನ್ನ ಪರಮ ಪ್ರೀತ್ಯಾಸ್ಪದನ ತನುಜಳೋ ಸದ್ಭಕುತಿಯುಳ್ಳವಳು ಸಲ್ಲೇಲ ಸಂಪನ್ನೆ ಸತ್ಯಭೇದ ಜ್ಞಾನ ಸಚ್ಚಿತ್ತಪುರಿರಾಜನಿಂದ ಪಡೆದು ನಿನಗೆ ಸರಿಯಾಗಿ ತೋರಿದ ಬಳಿಕ 2 ಬಹೂಪರಿಯಿಂದ ಬೇಡುವೆನೊ ತವಚರಣ ನಂಬದ ಶರಣೆಯೆಂತೆಂದು ಕಣ್ತೆರೆದು ಕರುಣಿಸೊನಿನ್ನ ಶರಣರೊಳು ಶರಣಾಧಮನಯ್ಯ ಉದಾಶಿಸದೆ ಸಲಹು ತಂದೆವರದಗೋಪಾಲವಿಠ್ಠಲನ ಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಉಗಾಭೋಗ ಪರಮಪುರುಷ ಕೇಳು ಒರೆದ ಮಾತಿಗೆ ನಾನು ನೆರೆ ತಪ್ಪುವನಲ್ಲ ವಂಚನೆ ಲೇಶವಿಲ್ಲ ಉರುದೈವ ವ್ಯಾಪಾರಕ್ಕೇನ ಮಾಡಲಿ ನಾನು ಸರ್ವವು ನಿನಗೆಂದು ಒಪ್ಪಿಸಿಹೆನಲ್ಲ ನರಕವಾಸಕೆ ನಾನು ಅಂಜÀುವನಲ್ಲವು ಮರಣಪಾಶಕೆಯಿನ್ನು ಅಂಜುವ ನಾನಲ್ಲ ಸರ್ವಸ್ವ ಹೋದರೂ ಚಿಂತೆ ಎನಗಿಲ್ಲ ಥರಥರ ಅಂಜುವೆ ನೊಂದೆ ವಿಷಯಕ್ಕೆ ಅರಿಯಲು ಅನೃತಕ್ಕೆ ಅಂಜುವೆ ನಾನಿನ್ನು ಸಿರಿ ಪರಾಕ್ರಮ ಶೌರ್ಯ ಇವುಗಳಿಂದಲಿ ಕೂಡಿ ಗರುವಪಡುತ ನಾನು ಮದಾಂಧನಾಗಿದ್ದೆ ಉರು ಶಿಕ್ಷೆ ಎನಗಿತ್ತು ಉದ್ಧಾರ ಮಾಡಿದೆ ಕುರುಡಗೆ ನೇತ್ರವು ದೊರೆತಂತೆ ಆಯಿತು ಪರಮ ಭಕ್ತನು ಆತನೆ ಪ್ರಹ್ಲಾದನು ಪರಿ ಪೀಡೆಗೆ ಗುರಿಯಾಗಿದ್ದರು ನಿನ್ನ ಸ್ಮರಿಸಿ ತಾನುತ್ತಮ ಗತಿಯನ್ನು ಪಡೆದನು ಸಿರಿಮದ ಕಳೆದೆನ್ನುನುದ್ಧಾರ ಮಾಡಿದೆ ಪರಮಪುರುಷ ನಿನಗೆ ಪ್ರಣಾಮ ಮಾಡುವೆ ಕರಿಗಿರೀಶನೆ ಕರುಣಿ ಕಾಯಬೇಕೆನ್ನನು
--------------
ವರಾವಾಣಿರಾಮರಾಯದಾಸರು
ಉಗಾಭೋಗ ಭಕ್ತಿದಾಯಕ ಕೇಳೊ ನಿನ್ನನು ಒಲಿಸಲು ಶಕ್ತಿ ಎನಗೆ ಇಲ್ಲ ಸರ್ವೇಶ್ವರ ಭಕ್ತಿಪಾಶದಿ ನಿನ್ನನುಕ್ತಿಯಿಂದಲಿ ಬಿಗಿವೆ ಮುಕ್ತಿಗೊಡೆಯ ಹೃದಯ ಮಧ್ಯದಿ ಬಂಧಿಸುವೆ ಶಕ್ತಿ ನಿನಗಿಲ್ಲ ಬಿಡಿಸಿಕೊಳ್ಳಲು ಇನ್ನು ಯುಕ್ತಾಯುಕ್ತ ತಿಳಿಸಿ ಉದ್ಧರಿಸಬೇಕಿನ್ನು ಶಕ್ತನಿಲ್ಲವೊ ನಿನಗೆ ಸರಿ ಜಗದೊಳು ಮಹ ಸಿರಿ ಗೋಪಾಲಕೃಷ್ಣವಿಠ್ಠಲಾ
--------------
ಅಂಬಾಬಾಯಿ
ಉಗಾಭೋಗ ಮಾಡಿದೆ ಯಾಕೆ ಫಲಗಳ ಮೆದ್ದೆಯಾಕೆ ಒಕ್ಕುಡಿತೆ ಪಾಲ ಕುಡಿದೆಯಾಕೆ ಅವಲ ಮೆದ್ದೆಯಾಕೆ ಕುರೂಪಿ ಕುಬುಜೆಗೆ ಮನಸೋತೆಯಾಕೆ ಅಖಿಲಾಂಡಕೋಟಿ ಬ್ರಹ್ಮಾಂಡನಾಯಕನಾದವ ಪಾಂಡವರೋಲೆಕಾರನಾದೆಯಾಕೆ ನಿನಗಾಗಿ ನೀನು ಬವಣೆಪಡಲಿಲ್ಲವೊ ದೇವ ನಿನ್ನ ಭಕುತರ ಪೊರೆಯಲೋಸುಗವೆಂಬುದ ನಾ ಬಲ್ಲೆ ನಿನ್ನ ದಯಕೆಣೆಯುಂಟೆ ಎನ್ನಪ್ಪ ರಂಗೇಶವಿಠಲ
--------------
ರಂಗೇಶವಿಠಲದಾಸರು
ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಉಣಲೊಲ್ಲೆ ಯಾಕೋ ಅಣ್ಣಯ್ಯ ಉಣದೆ ಹೀಗೇಕೆ ಹಟ ಮಾಡುವಯ್ಯ ಪ ಉಣದಿರೆ ನನ್ನೆದೆ ತಳಮಳಗೊಳುವುದು ತಣಿಸೋ ಮನವನು ಉಂಡು ಕಂದಯ್ಯ ಅ.ಪ ನೀನನುದಿನವೂ ಉಣದಿದ್ದರೂ ಹೀಗೆ ಏನೂ ಹಸಿವಿಲ್ಲದೆ ಆಟವಾಡುವೆ ಹೇಗೆ ಏನಿದರ ಗುಟ್ಟು ಎಲ್ಲೂಟ ಮಾಡುವೆ ನಾನೇನ ಮಾಡಿಹೆನು ಉಣದಿರಲು ಹೀಗೆ 1 ಗೋಪಾಲಿಕೆಯರಲಿ ಆಕಳ ಹಾಲುಂಡು ಗೋಪಾಲಕರ ಕೂಡೆ ಬೆಣ್ಣೆಯ ಕದ್ದುಂಡು ಪಾಪಿಷ್ಠ ಬಲನೊಡನೆ ಮಣ್ಣನಾದರು ತಿಂದು ಅಪಾಟಿ ಹೊಟ್ಟೆಯ ತುಂಬಿಕೊಂಡಿಹೆಯೇನೊ 2 ಪೂತನಿಯ ಮೊಲೆಯುಂಡು ಜಡಗಟ್ಟಿತೊ ಪ್ರೀತಿಯಲಿ ಆ ಗೋಪಿಯರ ದಿಟ್ಟಿ ತಾಕಿತೊ ಆತುಕೊಂಡಾವ ಗೋಪಿಯು ಕೊಟ್ಟಳೆದೆಹಾಲ ಸೋತು ಹೋದೆನಯ್ಯ ನಿನಗುಣಿಸಲಾಗದೆ 3 ಅಣ್ಣಯ್ಯ ಕುಚೇಲ ನೀಡಿದ ಅವಲಕ್ಕಿಯುಂಡು ಕೃಷ್ಣೆ ಕೊಟ್ಟುಳಿದ ಅಗುಳನ್ನವುಂಡು ಚಿಣ್ಣ ಕಡುಭಕ್ತ ವಿದುರನ ಮನೆಯಲಿ ಹಾಲುಂಡು ಸಣ್ಣ ಹೊಟ್ಟೆ ತುಂಬಿತೆ ಕಂದ ಉಣಲೊಲ್ಲೆ ಯಾಕೊ4 ವಸುಧೆಯೊಳಗೆ ದಾಸರು ನಿನ್ನ ಪೂಜಿಸೆ ಏಸು ಪರಿಯಲಿ ನೈವೇದ್ಯ ನೀಡುವರೊ ಬಿಸಿಬಿಸಿ ಪರಮಾನ್ನ ಸಣ್ಣಕ್ಕಿಯೋಗರವು ಹಸಿದ ನಿನಗೆ ಬಲು ಇಷ್ಟವಾಯಿತೆ ಕೃಷ್ಣ 5 ವರಮಹಾಋಷಿಗಳ ವೇದ ಮಂತ್ರಗಳ ಪರಮ ಭಾಗವತರ ಪಲ್ಲಾಂಡುಗಳು ವರಜಾಜಿಪುರಿವಾಸ ನಿನ್ನ ಸೇವಿಸುತಿರಲು ನಿರುತ ಸಂತುಷ್ಟ ನೀ ಚೆನ್ನಕೇಶವನೆ 6
--------------
ನಾರಾಯಣಶರ್ಮರು