ಒಟ್ಟು 389 ಕಡೆಗಳಲ್ಲಿ , 80 ದಾಸರು , 333 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಬರಹೇಳಮ್ಮಾ ಭಾವೇ ಮನೆಗೆ ಬಿರದಂಕ ಹರಿಯಾ| ಚರಣವನ್ನು ಗಾಣದೆನ್ನ ಚಿತ್ರನೆಲೆ ಗೊಳ್ಳದಮ್ಮಾ ಪ ಬಾಲೆಕೇಳೆ ಕುಂತಳೆ ಬೇಸರ ವಿದೇನೇ| ಪಾಲಗಡಲ ಮನೆಯಾ ಬಿಟ್ಟು ಪವನಾಹಾರನ ಪರ್ಯಂಕವನು| ಜಾಳಿಸಿ ತಾನ್ಯಾಕ ಪೋದನೇ ಜಲರುಹ ನಾಭ| ಕಾಲಿಲಲ್ಲದವನಾಗಿ ಕೊಂದು ತಮನನೀಗಿ| ಮ್ಯಾಲಗಿರಿಯ ಪೊತ್ತ ಮರರಿಗ ಮೃತವಿತ್ತಾ| ಭೂಲಲನೆ ಬಡಿಸಿ ಭೂವರಾಹೆನಿಸಿ| ಬಾಲಕರಿಯಲು ರೂಪ ಬೆಡಗಾ ವಿಡಿಸು 1 ಉಡುರಾಜದವನೆ ಕೆಳದೀ ಉನ್ನತಿಯ ನೋಡೇ| ಷಡ್ಗುಣೈಶ್ವರ್ಯವುಳ್ಳಾ ಸುರಮುನಿಸೇವಿತ ಪಾದಾ| ಬೇಡಿ ಭಾಗ್ಯವ ನೀಡುವ ಬಲುದೊರೆ ತಾನಾಗಿ| ಬಡಹಾರುವನಂತೆ ಭೂಮಿ ಬೇಡಿದನಂತೆ| ಕೊಡಲಿಪಿಡಿದರೆ ಸಕುಲ ಮಾಡಿದ ನಾಶಾ ವಡನೆ ವಾನರ ಸಂಗ ವಿರಹರಿಸಿ ಸುರತುಂಗಾ| ತುಡುಗತನದಿ ಬೆಣ್ಣೆತಿನ್ನುವರೆ ರನ್ನೆ 2 ಕರಿರಾಜ ಗಾಮಿನೀ ಕಿರೀಟ ಕುಂಡಲದಾ ಶಿವತ್ವಕುಂಡಲದಿಂದಾ| ಪರಮಪುರಷದೇವನು ಪೀತಾಂಬರಧಾರೀ| ಬರಿಯ ಬತ್ತೆಲೆಯಾಡಿ ಬೌದ್ಯರೋಳಗ ಕೂಡೀ| ತುರಗೀರಿಯ ವನರ ತುಳಿಸುತ ಸುರವರ ಮೊರೆಗೇಳಿ ಬಂದನು ಮನದೊಳು ನಿಂದನು| ಗುರು ಮಹಿಪತಿ ಪ್ರೀಯಾ ಗುಣಗಣನಿಲಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾಗುವೇ ಶ್ರೀಗುರೋ ಸತ್ಯಸ್ವರೂಪಾ ಓ ಜ್ಞಾನಿಯೇ ಪರಾತ್ಮರೂಪನೇ ನೀ ಬೋದಿಸೈ ನಮೋ ಮಹಾತ್ಮನೇ ಶರಣಾದೆ ಕರುಣಿಸು ನೀ ಭವದಬಾಧೆ ನೀಗಿಸೈ ಈ ದರುಶನಾ ಪಾದಾಭಿವಂದನಾ ಈ ಸ್ಪರ್ಶನಾ ಪುನೀತವೀಮನಾ ಭಾಗ್ಯವಿದೇ ಜೀವನದೀ ನಿನ್ನಂಥ ಗುರು ದೊರಕಿದಿ ಆನಂದದಾ ಸುಬೋಧ ನೀಡುವಾ ಈ ಬುಧವಾ ನಿವಾರಿಸುವ ಮಹಾ ಬೋಧಾತ್ಮ ಶಂಕರಗುರು
--------------
ಶಂಕರಭಟ್ಟ ಅಗ್ನಿಹೋತ್ರಿ
ಬಾರಮ್ಮ ಇಂದಿರಮ್ಮ ಪ ನೀರೇಜ ಪದಯುಗಕೆ ಸಾರಿ ವಂದಿಪೆನಮ್ಮ ಹಾರಗಳನರ್ಪಿಸುವೆ ಸ್ವೀಕರಿಪುದಮ್ಮ ಅ.ಪ ಆವ ತೆರದಲಿ ನಿನ್ನನರ್ಚಿಸಿದರೂ ಕೊರೆಯೆ ಭಾವಶುದ್ಧಿಯಲಿ ಪೂಜೆಗೈವೆನಮ್ಮ ಓವರಿಗೆ ದಯಮಾಡು ದೇವಗಂಗಾ ಜಲದಿ ಪಾವನ ಪಾದಾಂಬುಜವ ತೊಳೆವೆನಮ್ಮಾ 1 ತವದಿವ್ಯ ಭೂಷಣವ ನವರತ್ನ ಹಾರಗಳ ಸುವಿಲಾಸದಿಂದಿತ್ತು ಮಣಿವೆನಮ್ಮ ಪವಳಪದುಮಾಸನ ವಿಶ್ರಾಂತಳಾಗಮ್ಮ ನವಪುಷ್ಪ ಕುಂಜಗಳ ಧರಿಪೆನಮ್ಮ 2 ಅಗರು ಚಂದನ ಧೂಪಮಿಗೆ ದಿವ್ಯ ಗಂಧಗಳ ಬಗೆಬಗೆಯ ದೀಪಗಳ ನೀಡುವೆನಮ್ಮಾ ಸೊಗಸಾದ ಭಕ್ಷ್ಯ ಭೋಜ್ಯಂಗಳನು ಅರ್ಪಿಸುವೆ ನಗುನಗುತ ಸ್ವೀಕರಿಸಿ ಪಾಲಿಸಮ್ಮ3 ದೇವಕನ್ಯೆಯರೆಲ್ಲ ದಿವ್ಯಗಾನವ ಪಾಡಿ ದೇವಿ ತವಕರುಣೆಯನು ಬೇಡುತಿಹರು ಶ್ರೀವನಿತೆ ನಾನೀವ ತಾಂಬೂಲವನು ಸವಿದು ಜೀವಕೋಟಿಗೆ ಸುಖವನೀವುದಮ್ಮಾ 4 ಪೊಡಮಡುವೆ ನಿನ್ನಡಿಗೆ ಕೊಡು ಭಕ್ತಿಭಾಗ್ಯವನು ಎಡೆಬಿಡದೆ ಹರಿಪಾದ ಸೇವೆಗೈದು ಕಡುಮುದದಿ ನಿನ್ನ ಸಂಕೀರ್ತನೆಯ ಪಾಡಿಸು ಬಡವರಾಧಾರಿ ಮಾಂಗಿರಿಯೊಡೆಯನ ರಾಣಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರಮ್ಮ ಭಾಗ್ಯನಿಧಿಯೆ | ಸಿರಿಯೆ ಪ ಬಾರಮ್ಮ ನಿನ್ನ ಪಾದಾರವಿಂದ ತೋರಲು ಅ.ಪ ಸರಸಿಜಾಕ್ಷನ ವಕ್ಷ ಮಂದಿರೆ ಇಂದಿರೆ ಸರಸಿಮುದವೆರಸಿ ನಿನ್ನರಸನೊಡನೆನೀ 1 ಸೀತಾರುಕ್ಮಿಣ್ಯಾದ್ಯವತಾರಿಣಿ ಬುಧ- ವ್ರಾತ ಮನಃ ಪದ್ಮ ವಿಹಾರಿಣಿ ಚೇತೋದ್ಭವ ಜನನೀ ಶ್ರೀತರುಣೀಮಣಿ 2 ಬ್ರಹ್ಮರುದ್ರೇಂದ್ರಾದಿ ಸುರಸೇವಿತೆ ಬ್ರಹ್ಮಾಣಿ ಗಿರಿಜಾ ಶಚೀವಂದಿತೆ ಪರ- ಬ್ರಹ್ಮ ಗುರುರಾಮವಿಠಲನ ದಯಿತೆ 3
--------------
ಗುರುರಾಮವಿಠಲ
ಬಾರೋ ಬಾರೋ ಶ್ರೀಗುರುರಾಯ ಬಾರೋ ಬಾರೋ ಭೂಸುರವರ್ಯ ಬಾರೋ ಬಾರೋ ಭಕ್ತಪ್ರೀಯ ಕಾಯ ಪ ಘೋರಾರಣ್ಯದೊಳು ಬಂದು ಸೇರಿದೆನೊ ದುಷ್ಕರ್ಮದಿ] ಕ್ರೂರ ಮೃಗಗಳೆನ್ನತಿ ಬಾಧಿಸುತಿಹವು ಚೋರರುಪದ್ರವವನ್ನು ನಾ ಸಹಿಸಲಾರೆ ಇಷ್ಟೆನುತ ದೂರ ನೋಳ್ವರೆ ವ್ಯಾಳ್ಯಕೆ ಸೂರಿವರೇಣ್ಯ 1 ಮಂದಜನ ಸಂಗದಿಂದ ತಂದೆ ತ್ವತ್ಪಾದಾರ ವಿಂದ ಪೊಂದದಿರೆ ಸಂಧಿಸಿಎನ್ನಗೆ ಬಂದÀ ಬನ್ನ ಹಿಂದೆ ನೀ ನಾಲ್ವರಿಯಲಿಲ್ಲೆ ಸಂದೇಹವ್ಯಾಕೆ 2 ಇಂದ್ರ ಸಮವಿರಾಜಿತ ಇಂದ್ರ ವಿರೋಧಿ ಸಂಭೂತ ಇಂದ್ರ ದೇವಾಧಿ ಮಾನಿತ ಆನಂದ ಪ್ರದಾತ ಇಂದ್ರ ಜಾರಿ ಸೂತ ಶಾಮಸುಂದರವಿಠಲ ದೂತ ಇಂದ್ರ ಜಾತಾಖ್ಯರ ಪ್ರೀತ ಇಂದ್ರಾರ್ಯಪೋತ 3
--------------
ಶಾಮಸುಂದರ ವಿಠಲ
ಬಾಲಗೆ ಪಟ್ಟಗಟ್ಟಿಸು ಪರಿವಾರವ ಬಾಳಿಸು ಮುನ್ನಿನಂದದಲಿ ಸುತನ ಮುಂದಿಟ್ಟು 151 ಇಕ್ಷ್ವಾಕುಕುಲತಿಲಕನೆ ನಿನ್ನ ರಾಜ್ಯವ ಒಪ್ಪಿಸಿಕೊಳಲೆನಗಳವೆ ಪುತ್ರಗೆ ಪಟ್ಟವ ಕಟ್ಟುವುದೇನು ಕಾರಣ ವಿಸ್ತಾರವಾಗಿ ಹೇಳೆಂದ 152 ಕೇಳಿದೆ ಕರ್ಣದಿ ಹೀನದ ವಾಕ್ಯವ ಜಾರತ್ವ ಬಂದಿತಾತ್ಮಜೆಗೆ ಮಾಡುವೆನು 153 ಅಮರಲೋಕಕ್ಕೆ ವಶವಹರು ಭಾಧೆಗೆ ಗುರಿಯಾಗಿ 154 ವ್ಯರ್ಥವಾಯಿತು ಎನ್ನ ಬದುಕು ಮಾಡಿಕೊಂಬೆನೆಂದ 155 ಕಥೆಯ ಕೇಳರಿಯಾ ಕುಂದನೊದ್ದವರಾರು ಜಗದಿ 156 ಮೀರಿದರಾರೊ ಕಲ್ಪನೆಯ 157 ಸರ್ವಾಂಗದಿಂದ ಸುಂದರಿಯು ಸತಿ ಲಾಂಛನೆಯ ತಾಳಿದನು 158 ಸೆರೆತಂದ ತಾರಾದೇವಿಯನು ಪಾಡೇನು ಭೂಪಾಲ 159 ಕುಮಾರತಿಯ ಮಂದಿರಕೆ ಅರುಹಿದರಾರು ನಿನ್ನೊಡನೆ 160 ನಿಲ್ಲಿಸಿದ ಪ್ರಧಾನಿ ನಡೆತಂದ ಸೆಜ್ಜೆವಾಹರಿಗೆ 161 ಮಲಿನವನುಟ್ಟ ಮಾನಿನಿಯ ಸೆಳೆವಿಡಿದೆತ್ತಿದ ರಾಯ 162 ಮಾಜುವದೇಕೆ ಎನ್ನೊಡನೆ ಬ್ರಾಹ್ಮರು ಮೆಚ್ಚುವಂತೆ 163 ಸುರರೊ ನರರೊ ಕಿನ್ನರರೊ ಗಿರಿಜೇಶನಾಣೆ ಹೇಳೆಂದ 164 ವಿಶ್ವಲೋಚನನಂಘ್ರಿಯಾಣೆ 165 ಸರಿಯ ನಾರಿಯರು ಉರಿವ ಪಾವಕನ 166 ಬ್ರಾಹ್ಮರಿಗ್ಯೊಗ್ಯವಹುದೆ ಬರುವುದು ನಿಮ್ಮ ಕುಲಕೆ 167 ಪಾತಕಿಯೆಂದು ತಿಳಿದು ಬರುವುದೆ ಉಚಿತವು 168 ಮುನಿದು ಅರಣ್ಯಕ್ಹೋಗುವರೆ ವರಿಸು ನಿನಗೆ ಉತ್ತುಮವುಳ್ಳ ಪುರಷಗೆ ಧಾರೆಯನೆರೆವೆನು 169 ಪಾತಕ ಬರಿದೆ ನಿಂದ್ಯವನು (ಅ) ಬಂದೊದಗಿದ ಮೇಲೆ 170 ತೂಪಿರಿದು ಮಂತರಿಸಿ ಘೋರ ಕಾನನಕೆ 171 ಗುರಿಮಾಡಿ ನಾರಿ ಕಂಬನಿದುಂಬಿದಳು 172 ವಶವಲ್ಲದಂಥ ಮೂಗುತಿಯ ಬಿಸುಸುಯ್ವದೇತಕೆ ತಾಯೆ 173 ಕುಮಾರಿಯ ಮೇಲೆ ಸ್ನೇಹದಲಿ ವಿಧಿಯೆಂದ್ಹೊರಳಿದಳು 174 ಅಳುವುದೇತಕೆ ತಾಯೆ ನೀನು ಕಲ್ಮಾಡು ನಿನ್ನ ದೇಹವನು 175 ಹೇಳಿದನೇಕಾಂತದಲಿ ಉದಯಕೆ ಬನ್ನಿರೆಂದ 176 ಕರೆಸಿದನಾಗ ಕಿಂಕರರ ಪ್ರಧಾನಿಯು ತರಿಸಿದನೊಜ್ರದಂದಣವ ಬನ್ನಿರಿ ಶೀಘ್ರದಿಂದ 177 ಮಾಡಿರಿಮನಕೆ ಬಂದುದನು ನಾನಿಡುವೆ ರಾಯನ ಮುಂದೆ 178 ಮೇಲೆ ಪನ್ನಂಗ ಕವಿದವು ಶೀಘ್ರದಿ ಪೊತ್ತು ನಡೆದರು 179 ಬಸವಳಿದಳು ಶ್ರೀ ಹರಿಯ ಸ್ತುತಿಸುತಿರ್ದಳೆ ತನ್ನ ಮನದಿ 180 ಕಾಲನ ವಶಕೆÉ ಒಪ್ಪಿಸದೆ ಪಾದಾರವಿಂದೊಳಿರಿಸು 181 ಭಾರವನ್ಹೊತ್ತು ಬಳಲಿ ಬಾಯಾರುತ್ತ ಏರುತ್ತ ಘಟ್ಟ ಬೆಟ್ಟಗಳ ಬಾಲೆಯ ತಂದಿಳುಹಿದರು 182 ಬಾ ಬಳಲಿದೆಯೆನುತ ರಂಭೆಯನುಪಚರಿಸಿದರು 183 ತೊಪ್ಪಲ ಮೇಲ್ಹರಹಿದರು ಕತ್ತಿಗೆ ಮಯ್ಯನಿಕ್ಕಿದಳು 184 ಕಂಬುಚಕ್ರಧಾರಿ ವೈಕುಂಠವಾಸಗೆ ವಂದಿಸಿದಳು ತನ್ನ ಮನದಿ ಸ್ತುತಿಯ ಮಾಡಿದಳು 185 ಅರಣ್ಯದಲ್ಲಿ ತನ್ನ ನೆನೆವ ಕುಮಾರಿಗೆ ಕಾರುಣ್ಯದಿಂದೊದಗಿದನು ನಿದ್ರೆ ಕವಿದವು 186 ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಭಕ್ತರಿಗೊಜ್ರಪಂಜರನೆ ದೂತರ ಮನವ 187 ಯೋಚಿಸಿ ತಮ್ಮ ಮನದಿ ಪಾತಕ ಎತ್ತಿದಾಯುಧವನಿಳುಹಿದರು 188 ಒಬ್ಬರೊಬ್ಬರು ಮಾತನಾಡಿ ಉರ್ವೀಶಗೊಯ್ದು ಒಪ್ಪಿಸುವ 189 ವಾರಿಜಗಂಧಿಯ ಬಿಟ್ಟು ರಾಯಗೆ ಗುರುತ ತೋರಿದರು 190 ತಪ್ಪದೆ ರಾಯನೋಲಗಕೆ ಚಿತ್ತೈಸು ಜೀಯವಧಾನ 191 ತಂದೆವು ಮುದ್ರೆಯುಂಗುರವ ಮನದಲಿ ಮರುಗಿದನು 192 ಅಂಜೂರ ಕೊಯ್ದು ಕೊಟ್ಟಂತೆ ಬೆಂದೊಡಲನೆಂತು ಪೊರೆಯಲಿ 193 ಕೆಂಡದೊಳಾಜ್ಯ ಬಿದ್ದಂತೆ ಬೆಂದರು ಶೋಕಾಗ್ನಿಯಿಂದ 194 ಮೇಲೆ ಸ್ನೇಹದಲಿ ತಲೆಯೆತ್ತಿದವಬ್ಜ ಬಂಧುಗಳು 195 ಹಸಿದ ಹೆಬ್ಬುಲಿಗೆ 196 ಬೆದರುವಳು ವ್ಯಾಘ್ರದಟ್ಟುಳಿಗೆ ಮರಳಿ ಧೈರ್ಯವನೆ ಮಾಡುವಳು 197 ಮಾಯಪಾಶಕೆ ಗುರಿಮಾಡಿ ಮುಕ್ತಿ ಸಾಧನವು 198
--------------
ಹೆಳವನಕಟ್ಟೆ ಗಿರಿಯಮ್ಮ
ಬಿಡದೆ ಭಜಿಸೊ ಮನವೆ ದೃಢಭಾವದಿ ಪೂರಿಸೊ ಶ್ರೀಪಾದಾರಾಧಿಸೊ ಧ್ರುವ ನಿತ್ಯಾನಿತ್ಯ ಆವದೆಂದುದ್ದಿತ್ಯರ್ಥ ಶೋಧಿಸೊ ಪಥ್ಯವಾಗುವ ಸತ್ಯಶಾಖತ್ವಪಥವ ಸಾಧಿಸೊ ಕೃತ್ಯಾಕೃತ್ಯವಾಗುವ ನಿತ್ಯನಿಜವು ಭೇದಿಸೊ ಉತ್ತಮೋತ್ತಮವಾದ ವಸ್ತುಮಯದೊಳು ನೀ ಸಂಧಿಸೊ 1 ಇದೆ ನೋಡು ಹಿತವು ನಿನ್ನು ಸುಪಥಸಾಧÀನ ಸಾಧಿಸಿಗೊಡುವ ಸ್ವಾಮಿ ಸದ್ಗುರು ಪತಿತಪಾವನ ಭೇದಿಸಿ ನೋಡಲಕ್ಕೆ ನಿನ್ನೊಳಗಾಗುವದು ಉನ್ಮನ ತಾಂ ನಿಧಾನ 2 ಬೆರಿಯೊ ಭಾವಭಕುತಿವಿಡಿದು ಹಿಡಿಯೊ ಹರಿ ಪಾದವ ಸಾರ ಸವಿಯೊ ಸುಖವ ಅನಭವಾಮೃತವ ಹರಿಯೊ ಪಾಶ ಬೀಳುವ ಭವಜನ್ಮಮೃತ್ಯುವ ನೆರಿಯೊ ಮಹಿಪತಿಸ್ವಾಮಿ ವಸ್ತು ಪರಾತ್ಪರವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಿಡೆನು ನಿನ್ನಯ ಪಾದವಾ ಮುಖ್ಯ ಪ್ರಾಣ ಬಿಡೆನು ನಿನ್ನ ಪಾದಾ ಕಡಲ ಹಾರಿದೆನೆಂಬ ಸಡಗರದಿಂದೆನ್ನ ಕಡೆಹಾಯಿಸದೆ ಬೇಗ ಪ. ಹದಿನಾಲ್ಕು ಲೋಕದೊಳು ವ್ಯಾಪಕವಾಗಿ ಮುದದಿಂದ ಹಂಸ ಮಂತ್ರವ ಜಪಿಸುತ ಮಧುವೈರಿಯನು ಒಲಿಸಿ ಕಡೆಗೆ ಅಜ- ಪದವನೈದುವಿ ಸುಖದಿ ವಿಧುಕಳಾಧರ ವಾಸವಾದ್ಯರ ಮುದದಿ ರಕ್ಷಿಸಿ ದೈತ್ಯ ಪುಂಜವ ವಿಬುಧ ಗಣಾರ್ಚಿತ 1 ಮತಿವಂತನಾದಮ್ಯಾಲೆ ತ್ವತ್ಪಾದವೇ ಗತಿಯೆಂದು ನಂಬಿಹೆನು ನೀ- ನಿತ್ತ ಶಕುತಿಯಿಂದ ಪೂಜೆಯನು ಮಾ- ಡುತ ನಿನ್ನ ಪ್ರತಿಮೆಯ ನಮಿಸುವೆನು ವಿತತ ಮಹಿಮನೆ ಪೂರ್ವಭವ ದುಷ್ಕøತಗಳೆನ್ನನು ಪತನಗೊಳಿಪದನತುಳ ನೀ ನೋಡುತ್ತ ಎನ್ನನು ಜತನಮಾಡದೆ ವಿತಥ ಮಾಳ್ಪರೆ 2 ಹಿಂದೆ ತ್ರೇತಾಯುಗದಿ ಈ ಧರಣಿಗೆ ಬಂದು ನೀ ಕಪಿರೂಪದಿ ಅರ- ವಿಂದ ಬಾಂಧವನನು ಸೇರಿದಿ ಇಂದ್ರ ನಂದನನಿಂಗೆ ರಾಜ್ಯವ ಇಂದಿರೇಶನ ದಯದಿ ಕೊಡಿಸಿ ಪು- ರಂದರಗೆ ವರವಿತ್ತ ಬಲದಶ ಕಂಧರನ ಜವದಿಂದ ಗೆಲಿದನೆ 3 ಭೀಮನನೆನಿಸಿ ಕೀಚಕರ ನಿ- ರ್ನಾಮ ಗೊಳಿಸಿ ಜಯಿಸಿ ಕಿಮ್ಮೀರ ಬಕಮಾಗಧರ ಸೀಳಿಸಿ ಸಾಮಗಾಯನ ಲೋಲಕೃಷ್ಣನ ಪ್ರೇಮ ರಸಪೂರ್ಣೈಕ ಪಾತ್ರನಿ- ರಾಮಯನೆ ಧೃತರಾಷ್ಟ್ರತನಯಸ್ತೋಮವನು ತರಿದಮಲರೂಪ 4 ಕಡೆಯಲಿ ಕಲಿಯುಗದಿ ನೀ ಯತಿಯಾಗಿ ಮೃಡನ ತರ್ಕವ ಖಂಡಿಸಿ ಜ್ಞಾನಾ ನಂದಕದಲಿ ಕೃಷ್ಣನ ಸ್ಥಾಪಿಸಿ ಮಾಯಿಗಳನ್ನು ಬಡಿದು ದೂರದಲೋಡಿಸಿ ಪೊಡವಿಗಧಿಪತಿ ಪಾವನಾತ್ಮಕ ಒಡೆಯ ಶೇಷಾಚಲನಿವಾಸನ ಮೆರದನೆ ತಡವ ಮಾಡದಲು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬೃಂದಾವನವಿದೆಕೊ ಯತಿವರ ಪ ನಂದ ನಂದನ ಗೋವಿಂದನ ಪಾದಾರ ವಿಂದವ ಪೂಜಿಪ ಶ್ರೀರಾಘವೇಂದ್ರನ ಅ.ಪ ಮಂತ್ರಾಲಯದಿ ಸ್ವತಂತ್ರ ಭೂಮಿಕೆಯಲ್ಲಿ ಯಂತ್ರ ಸ್ಥಾಪನೆಗೈದು ಸಂತೃಪ್ತಿಯಾಂತು ಮಂತ್ರಾರ್ಥ ತತ್ವಗಳನುಪದೇಶ ಗೈಯುವ ಮಂತ್ರ ಸ್ವರೂಪನು ಸೇವಿಪ್ಪ ಪುಣ್ಯದ1 ಗುರುರಾಜರಾಜನು ಕರುಣಾಪಯೋಧಿಯು ನಿರುತ ಭಕ್ತರಿಗೆಲ್ಲ ವರವೀವ ದೊರೆಯು ಸರಸೀರುಹಾಕ್ಷ ಮಾಂಗಿರಿವಾಸ ರಂಗನ ಚರಣವ ತೋರುವ ಕೃಪೆಮಾಡುವಾತನ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡ ಬಂದೆನೊ ನಾನು | ನಿನ್ನಯ ಕರುಣಕೀಡು ಇಲ್ಲವೊ ಇನ್ನೂ | ಪ ಪರಿ ಭವ ಕಳೆ ಶ್ರೀ ಹರೇ ಅ.ಪ. ರುದ್ರಾದಿಸುರ ಸೇವಿತ | ಪಾದಾಬ್ಜಗಳಕದ್ರುಜ ಶಿರ ಘಟ್ಟಿತಭದ್ರ ಮೂರುತಿ ಸ | ಮುದ್ರಜೆ ರಮಣನೆಅದ್ರಿಯುದ್ದರ | ಮುಗ್ಧರಾರ್ತಿಹಕ್ಷುದ್ರ ಸುರಪನ | ವ ಭದ್ರ ಗರ್ವಹರಶುದ್ಧ ನಿಜಾನಂದ ಪೂರ್ಣ | ಶ್ರದ್ಧೆ - ಜನರ ಘ ಚೂರ್ಣನಿರ್ದಯ ನೀನಲ್ಲಘನ | ಸುಪ್ರಬುದ್ಧ ಗುಣಪೂರ್ಣ ||ವೃದ್ದ್ಯಾದಿಗಳೊರ್ಜನೆ ಎನ್ | ಹೃದ್ಗುಹದಲಿ ನಿಂದುದ್ಧರಿಸೊ ದೇವಾ 1 ಕನಕಾಕ್ಷಹನ ಹಯಮುಖ | ಕಪಿಲಕೋಲಾನಕ ದುಂದುಭಿ ಬಾಲಕ ||ಮನುಸು ತೆಗೆ ತತ್ವ | ಖಣಿಬೋಧಕಪಿಲಾತ್ಮಘನಸು ಕಂಬದಿ ಖಣಿಲು ಖಣಿಲೆಗೆಅನಘ ನರಹರಿ | ತನುಭವಾಕ್ಷಣಕನಕ ಕಶಿಪುವಿನ್ಹನನ | ವನಜಾಸನನ ವಚನಭೃತ್ಯ ನುಡಿದುದನ | ಸತ್ಯವ ಗೈದಾಕ್ಷಣಅಣುಗನು ಹರಿ ಅಂಕದಿ ಕುಳ್ಳಿರೆ | ಋಣ ನಿಧಿ ಆದೆಯೊ ಶಾಂತ 2 ಮೂರ್ತಿ ಪರಿ | ಪೂರ್ಣ ಮೋಕ್ಷದನಿರವದ್ಯ ಹರಿ ಅರಿಧರ | ದುರಿತೌಘಗಳ ಪರಿಹರಸಿರಿಭೂಮಿ ಲಕುಮಿಧರ | ವರವೀವ ಶ್ರೀಧರಕರಿವರ ವರದ ಪರೋಕ್ಷವ | ಕರುಣಿಸು ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಬೇಡಿಕೊಂಬೆನೊ ಗೋಪಾಲ ನಿನ್ನ ಬೇಡಿಕೊಂಬೆ ಕರಗಳೆರೆಡ ಪ ಜೋಡಿಸಿ ನಿನ್ನೊಳು ಸುದೃಢ ಭಕುತಿ ಮಾಡಿ ಸತತ ಭಜಿಸುವಂಥ ರೂಢಿ ಎನಗೆ ಕೊಡು ನೀನೆಂದು ಅ.ಪ ಕ್ಲೇಶಪಡಿಸದೆ ಸಲಹೆನ್ನ ಜಗಂಗಧೀಶ ಮರೆಯದೆ ಬಾರದ್ಯಾಕೊ ಕರುಣ ಲೇಶಗುಣನಿಧೆ ಆಶಾಪಾಶ ಬದ್ಧನಾಗಿ ದೇಶ ದೇಶ ತಿರುಗಿ ಕರುಣ ದುರುಳ ವಸುಮತೀಶರೊಳ್ ಬೇಡಿಸದಂತೆ 1 ಇಂದುವzನÀನೆ ಮುನಿವರ್ಯಹೃದರ ವಿಂದಸದನೆ ವರಗೋಪಯುವತಿ ಬೃಂದಮದನನೆ ಇಂದಿರೇಶ ನಿನ್ನ ಪಾದಾರವೃಂದಗಳನು ಹೃದಯವೆಂಬೊ ಮಂದಿರದೊಳಗೆ ನಿಲ್ಲಿಸಿ ಚಿದಾ- ನಂದಮೂರ್ತಿಯ ಪೂಜಿಪೆನೆಂದು 2 ಧೀರ ಚರಣನೆ ಮುರಾರಿ ಧರಣಿ ಭಾರಹರಣನೆ ಭುಜಗೇಶಫಣಿ ವಿದಾರಿ ಚರಣನೆ ಮಾರಜನಕ ನೀರಜಾಕ್ಷ ನಾರಸಿಹ್ಮ ನಾಮಗಿರೀಶ ಸಾರ ಎನಗೆ ತಿಳಿಬೇಕೆಂದು 3
--------------
ವಿದ್ಯಾರತ್ನಾಕರತೀರ್ಥರು
ಬೊಮ್ಮಗಟ್ಟಿರಾಯ ಪಾಲಿಸೋ ನಮ್ಮ ನೀ ಮಾರಾಯ ಧರ್ಮ ಕಾಮ್ಯಾರ್ಥ ಕೊಡುವೊ ಕರುಣಾಂಬುಧಿ ಪ ನಿಗ್ರ(ಹ) ಮಾಡುತ ಪರಮಾಗ್ರ(ಹ) ದಲಿ ಸೀಗ್ರ (ಶೀಘ್ರ?) ದಿಂದಲಿ ದಶಗ್ರೀವನ ಲಂಕ- ದುರ್ಗದಲ್ಲಾಡಿದ್ಯಗ್ನಿಯ ಒಡಗೂಡಿ 1 ರಾಮಪಾದಾಂಬುಜ ಸೇವಕ ಸೇತುವೆ ಪ್ರೇಮದಿ ಕಟ್ಟಿ ನಿಂತನು ರಣದಿ ನೇಮದಿಂದಲಿ ಸಂಜೀವನ ತಂದಾತ ವಾಹನನಾದ ತ್ರಿಧಾಮದೊಡೆಯಗೆ 2 ವಾತಾತ್ಮಜ ರಘುನಾಥಗೆ ನೀ ನಿಜ- ದೂತನೆನಿಸಿ ಬಹು ಪ್ರೀತಿಯಲಿ ಭೂತಳದೊಳು ಪ್ರಖ್ಯಾತಿಯ ಪಡೆದೆ ನಿ- ರ್ಭೀತನಾದ ಭೀಮೇಶಕೃಷ್ಣನ ಪ್ರಿಯ 3
--------------
ಹರಪನಹಳ್ಳಿಭೀಮವ್ವ
ಭಜಿಪೇನೆ ನಿನ್ನ ಭಕುತಿಯಿತ್ತು ಪೊರೆ ಎಮ್ಮಾ ಪ ಭಾರ ನಿನ್ನದು ಭರತರಾಯನ ಪ್ರೀತಿ ವಿಷಯಳೆ ಅ.ಪ. ಬಂದ ಕಾರ್ಯವಾಗುವಂತೆ ಮಾಡೆನಿನ್ನ ದ್ವಂದ್ವಕೆ ನಮಿಪೆ ಅನ್ಯರ ಬೇಡೇಬನ್ನ ಬಡುತಿಹ ಧಮ್ಮ ಭಕುತನ ನೋಡೆ ಸುಜ್ಞಾನವಿತ್ತು ಕರಪಿಡಿದು ಕಾಪಾಡೆ 1 ತರಳನ ಮತಿಯನ್ನು ಸರಳಮಾಡಿ ಉರುಳಿಸು ಸುಧೆಯಾಂಬುಧಿಯೊಳಗೆನ್ನ ಗರಳವಾಗಿದೆ ಮನವೆಲ್ಲಾ...ಪಾಶಾದಿ ಸುತ್ತಿ ಇನ್ನು ಅರಳಿಸಿದೆ ಮೋಹಸತಿಯೊಡನೆ ಪಾದಾ 2 ದಾಸಾನಿಗೆ ನಿನ್ನ ದಾಸನಾಗುವದೆಂಬೊ ಆಶಾಪುಟ್ಟಿದ್ದಕ್ಕೆ ದಾಸನ ಮಾಡಿಕೊ ಉದಾಶಿಸದೆ ಏಸು ಮಾತುಗಳಾಡಿದರೂ ಕಾಸು ಬಾಳದು ಸಾಸಿರ ಮಾತಿಗೆ ಒಂದೇ ತಂದೆವರದಗೋಪಾಲವಿಠ್ಠಲನತೋರೆ 3
--------------
ತಂದೆವರದಗೋಪಾಲವಿಠಲರು
ಭಜಿಸಿದ್ಯಾ ಈ ಭಾಗ್ಯನಿಧಿಯಾ ನೋಡು ಸುಜನರ ಹೃದಯ ಪಂ ರಜತಮೋ ದೂರನ್ನ ಪ ಮನ ಸೋಲಿಸುವ ಲಲಾಟ ಫಣಿ ನಮ್ಮನು ನೋಡುವ ವಾರೆ ನೋಟಾ ಹಾಹಾ ಮಕರ ಕುಂಡಲ ಕರ್ಣ ಕದಪು ಆವಿನ ಸೋಲಿಸೆ ನಿತ್ಯಾ 1 ಭೃಂಗ ಕುಂತಳ ಕೇಶಾ ಪುಬ್ಬು ಅಂಗಜ ಚಾಪಾ ವಿಲಾಸ ಉ ತ್ತುಂಗ ಚಂಪಕ ಕೋಶಾ ನಾಸಾರಸಾ ರಂಗುದುಟಿಯ ಮಂದಹಾಸಾ ಹಾಹಾ ತಿಂಗಳ ಎಳೆ ಬೆಳ ದಿಂಗಳಾ ಮೀರೆ ಭೂ ಮಂಗಳಾಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳ ವೀಳ್ಯೆ ಕರ್ಪುರಾ ವಿಟ್ಟಾ ಜಲಧಿ ಗಂಭೀರಾ ದಂತ ಪರಿಪಙË್ತ ಸಮ ವಿಸ್ತಾರ ಹಾಹಾ ಮಿರುಗುವಾನಂತ ಚಂ ಚರಿಸುವ ಚತುರನ್ನ 3 ಪನ್ನೇರು ಸಂಪಿಗೆ ಪೊಂಗೇ ಜಾಜಿ ಇರುವಂತಿಗೆ | ಹಾಹಾ | ಮಕರಂದಾ ಮಾರಂದೋದಕ ಸುರಿಯಲಿಂದು4 ನಿಡಿದೋಳು ಕಕುಭುಜಾ ಕೊರಳಾ ಸ್ಕಂಧಾ ಮಣಿ ಹರಳಾ | ಹಾಹಾ| ಒಡನೆ ತಾಯಿತ ಕೀರ್ತಿ ವಡಿವೇಲಿ ಮೆರೆವನ್ನ 5 ಸುರವಿ ಮಯೂಖಾ ಮೇಲು ಧರಿಸಿದ ಚಕ್ರಾದಿ ಶಂಖಾ | ಹಾಹಾ | ಕೌಸ್ತುಭ ಮಣಿ ಸಿರಿವತ್ಸ ವನಮಾಲಾ ಉರವೈಜಯಂತಿ ಮಂದಾರ ಹೀರ ಹಾರನ್ನ6 ಮುತ್ತು ವೈಢೂರ್ಯ ಪ್ರವಳಾ ಪಚ್ಚ್ಚೆ ಕೆತ್ತಿದ ಪದಕ ನ್ಯಾವಳಾ ಸ್ತುತಿಪ ಜನಕೆ ಜೀವಾಳಾ | ಹಾಹಾ | ಪ್ರತ್ಯೇಕವಾಗಿ ತೂಗುತಿಹ ಸರಗಳು ತತ್ತುಲಸಿಧಾಮ ಚಿತ್ರವಾಗಿರೆ ಬಲು 7 ನಖ ಚಂದನಾ ಅಗರಾ ಪಚ್ಚೆ ಘನ ಪರಿಮಳ ಗಂಧ ಸಾರಾ | ಹಾಹಾ | ತನುವಿಗೆ ತನುವು ಲೇಪನವಾದಾ ಸೊಗಸು ವಾ ಸನೆ ಸುತ್ತ ಘಮಘಮ ತನರು ಹಾವಳಿ ತಿಳಿ 8 ತ್ರಿವಳಿ ಉಪಗೂಢ ಜಠರಾ ಅಖಿಳಾವನಿ ಧರಿಸಿದ ಧೀರಾ ನಾಭಿ ಕುಸುಮ ಮೃಗ ದೇವ ಉಡಿ ಉಡದಾರಾ | ಹಾಹಾ | ಭವಕಿಂಕಿಣಿ ತಳಲಾವಿ ವಸನ ಬಿರು ತೊಡರು ದೈತ್ಯಾವಳಿ ಹರನನ್ನಾ 9 ಊರು ಜಾನು ಜಂಘೆ ಗುಲ್ಫಾ ವಿಚಾರಿಸೆ ಕ್ರಮಾತು ಅಲ್ಪಾ ತನ್ನ ಸಂಕಲ್ಪಾ | ಹಾಹಾ| ವಾರಣಾ ಕರದಂತೆ ಹಾರೈಸುಯಿಂತು ನೂ ಚಾರು ಚರಣ ಪೆಂಡೆ10 ನಖ ವಜ್ರಾಂಕುಶ ಚಕ್ರ ಸುಧಿಯಾ ಸುರಿವ ಪೀಠ ಸರಸಾ | ಹಾಹಾ | ತ್ರಿದಶನಾಯಕ ಶಿವ ವಿಧಿಗಳ ಮುಕುಟ ಪಾದದಲಿ ಸಮ್ಮರ್ದವಾದುದು ನೋಡಿ ತರುವಾಯಾ 11 ದಹಿಸುವ ಪಾದಾ ಕಾಮ ಕಾನನ ದಹಿಸುವ ಪಾದಾ | ಹಾಹಾ | ಅನಂತ ದಿನಕ್ಕೊಮ್ಮೆ ನೀನೇ ಗತಿಯೆಂದಾ ಮಾನವಗೆ ಬಂದು ಕಾಣಿಸಿಕೊಂಬನ್ನ12 ಅಪದಕ್ಷ ಸಾರಾಧ್ಯಕ್ಷ ಸರ್ವವ್ಯಾಪಕ ಕರುಣಿಕಟಾಕ್ಷ ಜಾಗ್ರತ್ ಸ್ವಪ್ನದಲ್ಲಿ ಪ್ರಾಜ್ಞಾದಕ್ಷ ನಿಜ ಆಪನ್ನರಿಗೆ ದಾವಾ ವೃಕ್ಷ | ಹಾಹಾ | ರೂಪ ರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ರತುನ ಮೌಳಿಪರಿಯಂತರಾ13 ಸಂಪಾದಿಸು ಜ್ಞಾನಾ ಭಕ್ತಿ ಕೊಂಡಾಡು ಮುನ್ನಿನಾ | ಹಾಹಾ | ಬಂಧನ ಹರಿಸಿ ಆನಂದವ ಕೊಡುವ ಮು ಕುಂದ ಅನಿಮಿತ್ತ ಬಂಧು ವೆಂಕಟನ್ನ 14 ನಿತ್ಯ ಭಜಿಸುವ ಜನರಿಗೆ ಶೀಲಾ ಪುಣ್ಯ ನಿಜರೊಳಗಿಡುವ ಈ ಕೂಲಾ | ಹಾಹಾ | ವ್ರಜದಲಿ ಪುಟ್ಟಿದಾ ಸುಜನಾಂಬುಧಿ ಸೋಮ ವಿಜಯವಿಠ್ಠಲರೇಯಾ ಗಜರಾಜವರದನ್ನಾ 15
--------------
ವಿಜಯದಾಸ