ಒಟ್ಟು 1740 ಕಡೆಗಳಲ್ಲಿ , 104 ದಾಸರು , 1431 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಇಂದಿರೆ ರಮಣಾ ಪಬಂದನೋಡು ಆನಂದದಿಂದ ಗೋ'ಂದಗೋಕುಲಾನಂದ ಮುಕುಂದಾ ಅ.ಪಶ್ರೀ ಕೇಶವ ನಾರಾಯಣಮಾಧವಶ್ರೀಧರ ಗಿರಿಧರ ಗೋವರ್ಧನಧರಶ್ರೀ ದಾಮೋದರ ಪದ್ಮನಾಭಮುಚಕುಂದವರದ ಮುರಹರ ಶ್ರೀಕೃಷ್ಣ 1ಸರ್ವೋತ್ತಮ ಸರ್ವಜ್ಞ ಶಿಖಾಮಣಿಸರ್ವಪ್ರೇರಕ ಸರ್ವವ್ಯಾಪಕಸರ್ವಾಧಾರಕ ಸರ್ವ ನಿಯಾಮಕಸರ್ವತಂತ್ರ ಸ್ವತಂತ್ರ ಸಮರ್ಥಾ 2ಗೋಪಾಲಾಚ್ಯುತ ಗೋಪ ಕಿಶೋರಾಗೋಪಿ ಜನಮನ ಚಂದ್ರ ಚಕೋರಾಆಪದ್ಬಾಂಧವ ಭೂಪತಿ'ಠ್ಠಲಕೈಪಿಡಿದೆಮ್ಮನು ಕಾಪಾಡಲು ಬಾ 3ಪಾದ ಮ'ಮೆ
--------------
ಭೂಪತಿ ವಿಠಲರು
ಇಂದಿರೆ ಚಂದಿರವದನೆ ಮಂದಗಮನೆ ಕಂದರ್ಪ ಕೋಟಿ ಲಾವಣ್ಯೆ ಪ ಮಂದನಾಗಿ ಭವಸಿಂಧುವಿಲಿ ಪೊಂದಿದೆ ಬಂದು ನೀ ಕರಪಿಡಿದು ಮುಂದಕೆ ಕರೆಯೆ ಅ.ಪ. ನಾಗವೇಣಿಯೆ ಸುರಶ್ರೇಣಿ ಅಗಣಿತಗುಣಮಣಿಯ ಹೊಗಳುವ ಮತಿ ನೀಡೆ ಕಲ್ಯಾಣಿ ಹಗಲಿರುಳು ನಡೆಯುವ ಬಗೆ ಬಗೆ ಕ್ರಿಯೆಗಳು ನಗಧರನೆ ಮಾಳ್ಪಾನೆಂಬ ಮಿಗೆ ಜ್ಞಾನ ಪಾಲಿಸೆ 1 ಸರಸಿಜೋದ್ಭವ ಮಾತೆ ವಿಖ್ಯಾತೆ ನಿಕರ ಸನ್ನುತೆ ಕಂಕಣಾಭರಣ ಭೂಷಿತೆ ಕರೆ ಕರೆಗೊಳಿಸುವ ಅಹಂ ಮಮತೆ ಶರಧಿಯು ತೆರೆಯಂತೆ ಬರುವುದು ಮರೆಸಿ ನೀ ಪೊರೆಯೆ 2 ಹರಿಗುಣ ಮಣಿಯೆಣಿಸುವ ಧೀರೆ ಪರಿಪರಿ ಅಲಂಕಾರೆ ಸ್ಮರಿಸದವರಿಗೆ ದೂರೆ ಅರಿದೂರ ವಿಜಯ ರಾಮಚಂದಿರವಿಠಲನ ನಿರುತ ಧೇನಿಸುವಂತೆ ಮರೆಯದೆ ಮಾಡೆ ತಾಯೆ 3
--------------
ವಿಜಯ ರಾಮಚಂದ್ರವಿಠಲ
ಇಂದಿರೇಶಾನಂದ ಕಂದನೇ ಮಂದರಧರ ಗೋವಿಂದ ಗೋಪತಿಯೇ ಪ ಮುದ್ದು ಮೋಹನ ಕೃಷ್ಣಾ ಸಿದ್ಧನಾಗಿಹೆ ನೀ ಇದ್ದು ನೀ ಇಲ್ಲದಂತೆನ್ನಾ ಬುದ್ಧಿವಂತನೆ ನೀನು ಕದ್ದು ಪೋಗುವೆಯೊ 1 ಮರೆತು ನಾಬಿಟ್ಟೆನು ಧರೆಯೊಳು ನಿನಗೆ ಪರಮ ಪುರುಷ ಹರಿಯೇ ತುಂಬಿ ಭರಿತನಾಗಿರುವಿ 2 ಮೃಡಸಭಾ ನಿನಗೆ ತಡಮಾಡದೆ ಪಿಡಿದು ದೃಢದಿಂ ಕಟ್ಟುವೆ ಕಡಲೊಡೆಯನೇ 3 ವಾಸುದೇವನೇ ಜಗ ದೀಶ ಗೋಪಾಲಾ ಈಶ ಶಾಂತಿಯ ಪಾಲಿಪಾ ಶೇಷ ಶಯನನೆ ಸರ್ವೇಶಾ ಶ್ರೀ ಗುರುವೇ 4
--------------
ಶಾಂತಿಬಾಯಿ
ಇಂದು ಕಂಡೇ ಪ ಪಾದ ಭಜನೆ ಮಾಡುವದೊಂದೆ ಅ.ಪ. ಪುಟ್ಟಿದಾರಾಭ್ಯ ಬಹುದಿಟ್ಟನಾಗಿಯೆ ಬಾಳು ಅಟ್ಟಿಮೆರೆಯುವ ಬಯಕೆ ವಿಟ್ಟು ಮನದಲಿ ಬಹಳ ಕಷ್ಟಪಟ್ಟೆನು ಘಳಿಸೆ ವಿತ್ತರಾಶಿಯ ವಿಪ್ರ ಶ್ರೇಷ್ಟಧರ್ಮವ ಬಿಟ್ಟು ವ್ಯರ್ಥ ವಿದ್ಯೆಯ ನೋದಿನೋದಿ ಅಷ್ಟಕರ್ತನು ಬಯಕೆ ಬಟ್ಟಬಯಲನು ಗೈದು ಕೊಟ್ಟು ಜ್ಞಾನದ ಕಣ್ಣು ನೆಟ್ಟನೆ ನೊಡೆನಲು ಬಟ್ಟು ಸುಖವನೆ ಮೆಲ್ವ ಜಟ್ಟಿ ಜಗದಲಿ ಕಾಣೆ ಭವ ಸುಖಕೆ 1 ಹೆಂಡತಿಯ ಸುಖವೆಂದೆ ಕೆಂಡಬಡತನ ಸೋಕೆ ಗಂಡು ಬಯಕೆಗಳೆಲ್ಲ ಉಂಡುದಣಿಯಲಿಲ್ಲ ಮಂಡೆ ಚಚ್ಚುತ ನಿತ್ಯ ತುಂಡು ಆದಳು ಅವಳು ಬೆಂಡು ಆದೆನುನಾನು ಹಿಂಡು ಬಳಗಗಳೆಲ್ಲ ಉಂಡು ದಣಿದರು ನಗೆಯ ಹಿಂಡಿ ಪರಜನ ಪ್ರಾಣ ಉಂಡು ಬದುಕಿಹೆ ಸ್ವಾಮಿ ಮುಂಡೆ ಗಿಂತಲು ಹೀನ ಷಂಡನಾಗಿಹೆ ಸ್ವಾಮಿ ಪಾಂಡುರಂಗನೆ ನಿನ್ನ ತೊಂಡನಾದರೆ ಧನ್ಯ 2 ವಿತ್ತ ಗಂಟು ಇಲ್ಲದಮೇಲೆ ಗಂಟುಮೋರೆಯ ನೇಮ ಒಂಟಿಗನೆ ಜೀವನಿಹ ನೆಂಟ ಬಿಂಬನೆ ಒಬ್ಬ ಭಂಟನೆಂದರೆ ಪಿಡಿವ ಶುಂಠ ಬಿಟ್ಟವ ಸತ್ಯ ಕಂಟಕವು ವಿಷಯತತಿ ಕಜ್ಜಿತಿನಸಿನ ತೆರದಿ ಎಷ್ಟು ಸೇವಿಸಲಷ್ಟು ತಂಟೆನೀಡುವವೇನೆ ಕುಂಠವಾದರು ಕರುಣ ಅಂಟಿಮನಸಿಗೆ ಭಾಧೆ ಉಂಟುಮಾಡುವವು ವೈಕುಂಠ ನಾಯಕಕಾಯೊ 3 ಬಾಡಿಗೆಯ ಮನೆಯಂತೆ ಗಾತ್ರವಿದು ಜೀವನಿಗೆ ಹೂಡಿಹನು ಭವಯಾತ್ರೆ ಓಡಿಹೊಹುದು ತಾನೆ ಆಗಿ ಮುಗಿಯಲು ಆಟ ಪ್ರೌಡ ಹರಿಪುರ ದಾರಿ ನೋಡಿಕೊಂಡವ ಜಾಣ ಕೇಡು ಮತ್ತಗೆ ಸಿದ್ಧ ಮಾಡುತಲಿ ವಿಧಿಗಳನು ದೂಡುತಲಿನಿಜೀವ ಕೂಡುತಲಿ ಸಜ್ಜನರ ಹಾಡುತಲಿ ಹರಿಗಾನ ಜೋಡಿಸುತ ಹರಿಭಕ್ತಿ ಬೇಡದಲೆ ಏನೊಂದು ಬಾಡದಿರೆ ದುಃಖ ಬರೆ ನೋಡುವನು ನಿಜ ಸುಖವ 4 ಹೆಂಡತಿಯು ಸುಗುಣಿ ಇರೆ ಗಂಡನಿಹ ದುರ್ಮಾರ್ಗ ಗಂಡ ಮೃದು ತರವೆನ್ನೆ ಹೆಂಡತಿಯು ಕರ್ಕಸಿಯು ಕುಂಡಲಿಯ ಸಿರಿಯೆನ್ನೆ ಮಂಡೆಯಲಿ ಮೆದುಳಿಲ್ಲ ಹೆಂಡ ಕುಡುಕರು ಸುತರು ಉಂಡುಸುಖಿಸೆ ರೋಗ ಮುಂಡೆಯರ ಚಲುವಿಕೆಯು ಶಂಡಸಹ ಸಂಸಾರ ಭಂಡ ಮಕ್ಕಳ ಬಾಳು ಪುಂಡಜನ ಸಹವಾಸ ಕಂಡು ಸಹಿಸದ ನೆಂಟ ಉಂಡು ದೂರುವ ಬಳಗ ದಂಡವಲ್ಲವೆ ಮತ್ತೆ ಕೊಂಡು ಮಾಡುವದೇನು 5 ಭವ ನಿಜಗುಣವೆ ಕ್ಲೇಶದಾಯಕ ವಿರಲು ಲೇಸು ದೊರಕುವದುಂಟೇ ಏಸು ಕಾಲವು ಕಳಿಯೆ ಏಸು ಕಡಿಯಲು ನೀರ ಸೂಸುವುದೆ ನವನೀತ ಹೇಸಿಗೆಯ ದುರ್ಗಂಧ ನಾಶವಾಗುವುದುಂಟೇ ಕ್ಲೇಶ ತೊಲಗದು ಎಂದು ದಾಶರಥಿಯ ಮನಮುಟ್ಟಿ ದಾಸ ನಾಗದ ತನಕ ಭಾಸವಾಗದು ಜ್ಞಾನ ಶ್ರೀಶ ಕಾಣಿಸ ತನ್ನ ದೋಷಿಯಾಗದೆ ಹರಿಗೆ ಮೀಸಲೆನ್ನಿರಿ ಎಲ್ಲ 6 ನಂಬಿ ಮತಿಮತ ತತ್ವ ವಿಷಯ ಹಂಬಲವಳಿದು ಡಿಂಬಗತ ಹರಿ ಬಿಂಬ ಧ್ಯಾನ ಮಾರ್ಗವ ಕಂಡು ಅಂಬುಜಾಕ್ಷ ನಮ್ಮ “ಶ್ರೀ ಕೃಷ್ಣವಿಠಲ”ನ್ನ ತುಂಬಿ ಹೃದಯದದಿ ಸತತ ಪರಮ ಸಂಭ್ರಮದಿಂದ ತಂಬೂರಿ ಮೀಟುತ್ತ ಗೆಜ್ಜೆ ಸಹ ಕುಣಿಕುಣಿದು ಅಂಬಕದಿ ಸುಖ ಬಾಷ್ಪ ಸುರಿಸುತ್ತಹರಿನೆನೆದು ಅಂಬುಜಾಸನ ಸುರಕದಂಬ ಕರುಣವ ಗಳಿಸಿ ಅಂಬೆ ಸಿರಿಪತಿ ಚರಣದಿಂಬು ಬೇಡುವದೊಂದೇ 7
--------------
ಕೃಷ್ಣವಿಠಲದಾಸರು
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮ ಮನಿಲಿ ಬ್ರಹ್ಮಾನಂದ ಬಂದು ಭಾವ ಪೂರಿಸಿದ ಮುಕುಂದ ಧ್ರುವ ಎನ್ನಮನಕೆ ಮಾಡಿದ ಮನೋಹರ ಚೆನ್ನಾಗೊಲಿದು ದೋರಿದ ಸಹಕಾರ ಮನ್ನಿಸೆನಗೆ ಬೀರಿದ ನಿಜಸಾರ ಇನ್ನೊಬ್ಬರಿಗ್ಹೇಳುದಲ್ಲೀ ವಿಚಾರ 1 ದಯದಿಂದ ಪಿಡಿದು ಎನ್ನ ಕೈಯ ಶ್ರೇಯ ಸುಖ ನೀಡಿದ ಪ್ರಾಣಪ್ರಿಯ ತ್ರಯ ಗುಣಾತೀತದ ಸುಖಾಶ್ರಯ ತ್ರೈಲೋಕದೊಳೆನಗೆ ವಿಜಯ 2 ಕಣ್ಣು ಪಾರಣಗೈಸಿದೆನ್ನ ನೋಡಿ ಎನ್ನೊಳನುಭವಾಮೃತಸಾರ ನೀಡಿ ಚಿಣ್ಣಮಹಿಪತಿ ಕೈವಶಗೂಡಿ ಧನ್ಯಧನ್ಯಗೈಸಿದ ದಯಮಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನೀ ಕರೆದು ತಾರೆ ಬೇಗನೆ ಪೋಗಿ ಚನ್ನವೆಂಕಟರಾಯನ ಮೊನ್ನೆ ಆಡಿದ ಮಾತು ಒಂದೂ ನಿಜವಲ್ಲಾ ರನ್ನೆ ಈಗಲೆಪೋಗಿ ssssssಸನ್ನೆ ಮಾಡಿಬಾರೆ ಪ. ಅಂಗಜನಯ್ಯನ ಕಾಣದೆ ನಾನು ಹಿಂಗಿರಲಾರೆ ನಮ್ಮಾ ಕಂಬುಕುಚದ ಬಾಲೆ ರಂಗನಾ ಕರತಾರೆ ರಂಗು ಮಾಣಿಕದಹರಳುಂಗುರ ಕೊಡುವೆನು 1 ಕಾಲಿಗೆ ಎರಗುವೆನೆ ಕೋಮಲಮುಖಿ ಆಲಸ್ಯ ಮಾಡದೆಲೆ ನೀಲಕುಂತಳನೀರೆ | ಲೋಲನ ಕರತಾರೆ ವಾಲೆಮೂಗುತಿ ಕಂಠಮಾಲೆಯ ಕೊಡುವೆನು 2 ಮರದಿರಲಾರೆನಮ್ಮಾ ಬೇಗನೆಪೋಗಿ ನೆರವಂತೆ ಮಾಡು ನೀನು ಯರವುತನವುಬ್ಯಾಡಾಮರೆಯಲಾರೆನೆ ನಿಮ್ಮಕರವಪಿಡಿವೆ ಹೆಳವನ ಕಟ್ಟೆರಂಗೈಯ್ಯನ3
--------------
ಹೆಳವನಕಟ್ಟೆ ಗಿರಿಯಮ್ಮ
ಇಂದು ಭಾಗ ಹರಿ ವಿಠಲ | ಪೊರೆಯ ಬೇಕಿವಳಾ ಪ ನೊಂದಿಹಳೊ ಬಹುವಾಗಿ | ಹೇಸಿ ಸಂಸ್ಕøತಿಲೀ ಅ.ಪ. ವಿನುತ | ಪರಿಪರಿಯ ಶಾಸ್ತ್ರಗಳುವರಲುತಿದೆ ಶ್ರೀಹರಿಯೆ | ಮೊರೆ ಕೇಳದೇನೋತರುಣಿ ದ್ರೌಪದಿವರದ | ಕರಿವರದ ನೀನೆಂದುಮರಳಿಮಹಪಾಪಿ ಆ | ಅಜಾಮಿಳವರದಾ 1 ಉಸಿರಿದ್ದು ಭಾರವನು | ಹೊರುಎಂದು ಪೇಳ್ಬಹುದುಉಸಿರಳಿವ ಪರಿಮಾಡೆ | ಮೊರೆ ಆವನಿಡುವಾಬಸಿರಿನಿಂ ಬಂದಂಥ | ಶಿಶುಗಳೆಲ್ಲವೂ ಪೋಗಿಯಶವ ವರ ಮೆರೆಸಲ್ಕೆ | ಹಸುಮಗನಸಲಹೋ 2 ಸಂಸಾರ ಕ್ಲೇಶಗಳ | ಶಿಂಸಿಸಲು ಅಳಿವಲ್ಲಕಂಸಾರಿ ನಾವಾಗಿ | ಪೊರೆಯ ಬೇಕಿವಳಾವಂಶ ಉದ್ದರಿಸೆ ಪದ | ಪಾಂಸು ಬೇಡ್ವಳೊ ನಿನ್ನಸಂಶಯವು ಯಾಕಿನ್ನು | ಕರುಣಿಸೋ ಹರಿಯೆ 3 ಸುಜನ | ತಂದೆ ಕೈಪಿಡಿಯೋ 4 ಜ್ಞಾನ ಸದ್ಭಕುತಿ ವೈ | ರಾಗ್ಯ ಕೊಟ್ಟವಳೀಗೆಕಾಣಿಸೋ ಸದ್ಗತಿಯ | ಕಾರುಣ್ಯ ಮೂರ್ತೇಏನೊಂದು ಅನ್ಯವನು | ನಾನು ಬೇಡುವುದಿಲ್ಲಜಾಣಗುರು ಗೋವಿಂದ | ವಿಠಲಾ ಪೊರೆ ಇವಳಾ 5
--------------
ಗುರುಗೋವಿಂದವಿಠಲರು
ಇಂದು ರಂಗಾನಟ್ಟೂಳಿಗೆ | ಇರಲಾರೆವಮ್ಮಾ ನಾವುಬಂದುಪಾಯವ ಕಾಣೆವೆ | ವನಿತೆ ಗೋಪ್ಯಮ್ಮಾ ಕೇಳೆ ಪ ಹಿರಿಯರಾದವರಿಗೆ | ಭರದಿ ಪೇಳೇವೆಂದರೆಸರಸಿಜ ಸಂಭವನಿಗೆ ಹಿರಿಯನೀತ ಕಾಣಮ್ಮ 1 ಮಾಯಗಳ ಮಾಡಿ ನಾವೂ | ಹೊಯಿಲೆಬ್ಬಿಸೇವೆಂದರೆಮಾಯಾದೇವಿಗೆ ಸಿಗದೆ | ಮಾಯಾವ ತೋರುವನಮ್ಮ 2 ಗುಮ್ಮನ ತೋರಿದರೀಗಾ | ಒಮ್ಮೊಮ್ಮೊ ಲೆಕ್ಕಿಸನಮ್ಮ ಅಮ್ಮಮ್ಮ ಶ್ರೀ ನಾರಸಿಂಹ | ಅದ್ಭತಾದ ದೈವ ಕಾಣಮ್ಮ 3 ಅರಿವಿ ಸರ್ಪಾನ ಮಾಡಿ | ಭರದಿ ಅಂಜಿಸೇವೆಂದರೆಖರೆಯವಾಗಿದ್ದ ದೊಡ್ಡಾ | ಉರಗಶಾಯಿ ಕಾಣಮ್ಮ 4 ಅರಸರಿಗ್ಹೇಳಿದರೂ | ಬರಿದಾಗುವುದೇ ನಿಜಧರೆ ಗಗನ ಪಾತಾಳದ | ಅರಸನಲ್ಲವೇನಮ್ಮ 5 ಕಾಸು ವೀಸಾ ಕೈಯ್ಯಾಳಿಟ್ಟೂ | ಕೂಸಿಗೆ ಬುದ್ಧಿ ಹೇಳುವೆಕೋಶ ಭಾಗ್ಯದಭಿಮಾನಿ | ಶ್ರೀಶನೇ ಈಶ ಕಾಣಮ್ಮ 6 ಪಾಪದ ಭೀತಿ ತೊರದು | ಭೂಪ ರಂಗ ಅಂಜಾನಮ್ಮಪಾಪ ರಹಿತರಾದವರ | ತಪಸಿಗಳೊಡೆಯಾನಮ್ಮ 7 ಮ್ಯಾಣದ ಚೇಳು ತೋರುವೆ | ಜಾಣ ರಂಗ ಅಂಜಾನಮ್ಮಮೇಣು ಮೂವತ್ತಾರು ಲಕ್ಷ | ತಾಂ ಶಿಂಶುಮಾರಾನಮ್ಮ 8 ಅನ್ನ ವಸನಗಳಿತ್ತು | ಮನ್ನಿಸೆವೆಂದಾರೆ ಪುಸಿಕನ್ಯೆ ದ್ರೌಪದಿ ದುಮ್ಮಾನ | ಮುನ್ನೆ ಇದಕ್ಕೇ ಸಾಕ್ಷಿಯಲ್ಲೆ 9 ಅಣ್ಣ ತಮ್ಮಾ ಬಂಧೂ ಬಳಗ | ಜನರುಂಟೇನೆ ಹೇಳೇವೆಅನಾದಿ ಕಾಲದಿಂದಾ | ಘನ್ನ ತಾನೇ ಏಕಮೇವ 10 ಚಿಣ್ಣ ನೀ ಅಣ್ಣಾ ಬಾಯೆಂದು | ಮನ್ನಿಸೇವೆಂದಾರೆ ಪುಸಿಅನಂತ ವೇದಗಳಿವನ | ಬಣ್ಣಿಸಿ ಹಿಂದಾಗಲಿಲ್ಲೆ 11 ಊರು ಕೇರಿಗಳಾ ಬಿಟ್ಟು | ದೂರ ಬಾರ ಹೋದೇವೇನೆಸಾರ ವ್ಯಾಪ್ತನಾಗಿ ಇಪ್ಪಾ | ಯಾರಿಗೆ ದೂರುವೆನಮ್ಮಾ 12 ಕದ್ದು ಕದ್ದೋಡುವಾ ನಮ್ಮ | ಲಿದ್ದು ಪಿಡಿಯಾಲೊಶವಲ್ಲೆ ರುದ್ದರನ್ನಾ ಓಡೀಸಿದಾ | ಮುದ್ದು ರಂಗಾನಿವನಮ್ಮ 13 ಹಗ್ಗದಿ ಕಟ್ಟೀದರಾಗ | ಬಗ್ಗನಮ್ಮಾ ನಿನ್ನ ಮಗಅಗ್ಗಳೀಕೆ ಖಳರ ಉಕ್ಕು | ತಗ್ಗಿಸಿ ಬಂದಿಹಾನಮ್ಮ 14 ಇಂದು ನಿನ್ನಾ ಕಂದನಾಟಾ | ಚಂದಾವೆಂದೂ ವಂದಿಸುವೆವೆತಂದೆ ವ್ಯಾಸಾ ವಿಠಲೆ*ಮಗೆ | ಬಾಂಧವಾನಾದನು ಕಾಣೆ 15
--------------
ವ್ಯಾಸವಿಠ್ಠಲರು
ಇಂದು ಶ್ರೀ ಗುರುಪಾದಪದ್ಮ ನೋಡುವ ಎಂದೆಂದು ಬಿಡದೆ ಭಾವಭಕ್ತಿ ಮಾಡುವ ಧ್ರುವ ಮನವೆಂಬ ಮನಮಂಟಪವನಾಡುವ ನೆನವು ನವರತ್ನದ ಸಿಂಹಾಸನಿಡುವ ಙÁ್ಞನಧ್ಯಾನದಡಬಲದಿ ಪಿಡಿವ ಅನುವಾಗಿ ಅನಿಮಿಷದಲಿ ನೋಡುವ 1 ತನುವೆಂಬ ತಾರತಮ್ಯಭಾವ ಮಾಡುವ ಅನುಭದಿಂದನುಪಮನ ನೋಡುವ ಆನಂದವೆಂಬ ಅಭಿಷೇಕವ ಮಾಡುವ ಮನೋ ಅಭೀಷ್ಟೆಯ ಸುವಸ್ತ್ರನೀಡುವ 2 ಬುದ್ಧಿ ಭಾವನೆಯ ಗಂಧಾಕ್ಷತಿಡುವ ಶುದ್ಧ ಸುವಾಸನೆ ಪರಿಮಳ ಮಾಡುವ ಶಬ್ದ ಸುವಾಕ್ಯವೇ ಪುಷ್ಪವ ನೀಡುವ ಸಿದ್ಧಾಂತವೆಂಬುದೇ ಸುಸೇವೆ ಮಾಡುವ 3 ಪ್ರಾಣ ಪಂಚವೇ ಪಾದಪೂಜೆಯ ಮಾಡುವ ಪುಣ್ಯಪೂರ್ವಾರ್ಜಿತ ಫಲಗಳಿಡುವ ಅನೇಕವಾದ ಪರಿಪೂಜೆ ಮಾಡುವ ಧನ್ಯ ಧನ್ಯವಾಗುವ ಮುಕ್ತಿಬೇಡುವ 4 ನಿರ್ವಿಕಲ್ಪ ನಿಜಮೂರುತಿ ನೋಡುವ ಪೂರ್ವಕರ್ಮವೆಂಬ ಧೂಪಾರ್ತಿ ಮಾಡುವ ಅರುವೆಂಬ ದೀಪದಿ ಏಕಾರ್ತಿ ಮಾಡುವ ಸರ್ವಕಾಲದಲಿ ಸಂತೋಷಬಡುವ 5 ಜೀವ ಭಾವನೆಂಬ ನೈವೇದ್ಯವಿಡುವ ವಿವೇಕುದಕ ಸಮರ್ಪಣೆ ಮಾಡುವ ತ್ರಿವಿಧಗುಣವೆಂಬ ತಾಂಬೋಲನಿಡುವ ಅವಾವಪರಿಯು ಪ್ರಾರ್ಥನೆ ಮಾಡುವ 6 ಪಂಚತತ್ವದ ಪಂಚಾರತಿ ಮಾಡುವ ಚಂಚಲವಿಲ್ಲದೆ ಚಿದ್ಛನ ನೋಡುವ ಪಂಚಭೂತವೆಂಬಾರತಿ ಮಾಡುವ ಸಂಚಿತಕ್ರಿಯ ಮಂತ್ರಪುಷ್ಪನೀಡುವ 7 ದಿವ್ಯ ಯೋಗ ಭೋಗ ಚೌರ ಢಾಳಿಸುವ ಅವಲೋಕನೆಯ ಬೀಸಣಿಕೆ ಬೀಸುವ ಪಾದ ನಮಿಸುವ ಭವಬಂಧನದ ಮೂಲ ಛೆÉೀದಿಸುವ 8 ನಮ್ರತವೆಂಬ ಸಮಸ್ಕಾರ ಮಾಡುವ ಸಂಭ್ರಮದಿಂದ ಸ್ವಸ್ವರೂಪ ನೋಡುವ ಪ್ರೇಮಪ್ರೀತೆಂಬ ಪ್ರದಕ್ಷಿಣಿ ಮಾಡುವ ಜನ್ಮ ಮರಣದ ಹಾದಿಯು ಬಿಡುವ 9 ನಿರ್ಗುಣದಿಂದ ಸ್ವರೂಪ ನೋಡುವ ನಿಗಮಗೋಚರನೆಂದು ಸ್ತುತಿ ಪಾಡುವ ಅಗಣಿತಗುಣ ಸುಕೀರ್ತಿ ಸೂರ್ಯಾಡುವ ಜಗದೊಳಾನಂದದಿಂದ ನಲಿದಾಡುವ 10 ಅನಾಹತವೆಂಬ ಧ್ವನಿವಾದ್ಯ ಮಾಡುವ ಅನಂದೋ ಬ್ರಹ್ಮದೊಳು ಮುಳಗ್ಯಾಡುವ ಭಾನುಕೋಟಿತೇಜ ಪ್ರಕಾಶ ನೋಡುವ ದೀನಮಹಿಪತಿ ಸ್ವಾಮ್ಯೆಂದು ಕೊಂಡಾಡುವ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದ್ದರಿರಬೇಕು ಸಂಸಾರಸುಖದಲ್ಹೀಗೆ ಪದ್ಮಪತ್ರವು ಜಲದೊಳಗಿದ್ಹಾಂಗೆ ಧ್ರುವ ನಡಿನಡಿಯಬೇಕ್ಹೀಂಗೆ ತಡಿಯೊಳರಿಬಿಡದ್ಹಾಂಗೆ ನುಡಿನುಡಿಯಬೇಕು ಹರಿನುಡಿಸಿದ್ಹಾಂಗೆ ಪಡೆದರಿದೇ ಪಡಿಯಬೇಕು ಹರಿ ಒಡಲ ಹುಗುವ್ಹಾಂಗೆ ಅಡಿಗಡಿಗೆ ಹರಿಕೂಡಿ ಬಿಡದಗ್ಹಲದ್ಹಾಂಗೆ 1 ಇಡಗಿ ಇಡಬೇಕ್ಹಿಂಗೆ ಇಡಗರಿಗುಡಿಸಿದ್ಹಾಂಗೆ ತುಡಗಿ ತುಡಬೇಕ್ಹೀಂಗೆ ತುಡಮಾಡಿಸದ್ಹಾಂಗೆ ಉಡಗಿ ಉಡಬೇಕ್ಹೀಂಗೆ ಉಡಿಗರಿಗುಡಿಸಿದ್ಹಾಂಗೆ ಮುಡಗಿ ಮುಡಿಬೇಕ್ಹಾಂಗ್ಹರಿಗೆ ಮುಡಿಸಿದ್ಹಾಂಗೆ 2 ಉಂಡರುಣಬೇಕ್ಹೀಂಗೆ ಉಂಡದರಿಗುಣಸಿದ್ಹಾಂಗೆ ಕೊಂಡುದಕೋ ಹರಿಗೆ ಕೊಡಿಸಿದ್ಹಾಂಗೆ ಮಂಡಣಿಯ ಮಾಡ್ಹೀಂಗೆ ಹರಿಗೆ ಮಂಡಿಸಿದ್ಹಾಂಗೆ ಕೊಂಡು ಕೊಂಬುದು ಹರಿಕಂಡು ಒಲುವ್ಹಾಂಗೆ 3 ಮಲಗಿ ಏಳುವದ್ಹೀಂಗೆ ಮಲಗರಿಗೇಳಿಸಿದ್ಹಾಂಗೆ ತಿಳವು ತಿಳವದು ಹರಿ ತಿಳಿಸಿದ್ಹಾಂಗೆ ಸುಳವು ಸುಳವರು ಹರಿಸುಳಸ್ಯಾಡಿದ್ಹಾಂಗೆ ಒಲವು ಮಾಡುವದ್ಹೀಂಗೆ ಹರಿಯ ಒಲಿವಾದ್ಹಾಂಗೆ 4 ರತಿಪಿಡಿದು ಹೀಂಗೆ ಹರಿಗತಿಯಾಗುವ್ಹಾಂಗೆ ಅತಿಹರುಷ ಬಡು ಹರಿನೋಡುವ್ಹಾಂಗೆ ಸಥಿಯ ಪಡೆದವುದು ಹೀಂಗರಿಯು ಸಥಿನಡಿಸಿದ್ಹಾಂಗೆಸ್ತುತಿಮಾಡುವ ಮಹಿಪತಿ ಪ್ರತಿಗಾಣದ್ಹಾಂಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದ್ರಪ್ರಸ್ಥದಲ್ಲೆ ಕುಂತಿ ನಂದ(ನ) ರಾಜಸೂಯ್ಯಾಗವನು ಆ- ನಂದದಿ ಮಾಡಿಂದಿರೇಶಗರ್ಪಿಸಿದನು 1 ಮಂದಬುದ್ಧಿ ಕೌರವನು ಚೆಂದನೋಡಿ ಸೈರಿಸದೆ ಪಾಂಡವರ ಪಟ್ಟಣದಿಂದ್ಹೊರಗ್ಹಾಕುವೆನೆಂದನು 2 ಘಾತಕ ದುರ್ಯೋಧನ ತನ್ನ ಮಾತುಳ ಶಕುನಿಯ ಕೇಳಿ ಪ್ರೀತಿಂದೆ ಪಾಂಡವರ ಕರೆಸಿ ದ್ಯೂತವಾಡಿದ 3 ಆಗ್ರಾದಿಂದಾಟಗಳ ಸೋಲಿಸಿ ಶೀಘ್ರದಿಂದ್ವನವಾಸವ ಚರಿಸಿ ಅಜ್ಞಾತ್ವಾಸೊಂದೊ(ದ್ವ?) ರುಷವೆಂದು ಪ್ರತಿಜÉ್ಞ ಮಾಡಿದ 4 ಸೋತು ಧರ್ಮ ಸಕಲೈಶ್ವರ್ಯ ಸಾದೇವ ನಕುಲ ಭೀಮರ ಪಾರ್ಥ ದ್ರೌಪದಿಯ ಪಣಕಿಟ್ಟು ಕೂತನಾಗಲೆ 5 ಆನೆ ಕುದುರೆ ಅಷ್ಟೈಶ್ವರ್ಯ ಬ್ಯಾಗೆ ತನ್ನಿರಿ ಭಂಡಾರವನು ಹೋಗಿ ದ್ರೌಪದಿ ಕರೆಯಿರೆಂದು ಹೇಳಿದನಾಗ 6 ಕರವ ಮುಗಿದು ನಿಂತು ಇಂದು ನಮ್ಮ ರಾಜಸಭೆಗೆ ಬನ್ನಿರೆಂದರು 7 ದಾಯವಾಡಿ ಸೋತರಿನ್ನುಪಾಯವಿಲ್ಲೀಗೆ 8 ಇಂದಿರೇಶನ ದಯವು ನಮ್ಮಲ್ಲಿದ್ದ ಕಾರಣದಿಂದೀಗ ದುರಿತ ಬಯಲಾಗುವುದ್ಹ್ಯಾಗೆಂದು ನುಡಿದಳು 9 ಚಂದ್ರ ಜ್ಯೋತಿಯಂತೆ ಹೊಳೆವೊ ಮಂದಗಮನೆ (ಇ)ಂದು ವದನೆ ದುಂಡು ಮಲ್ಲಿಗೆಶಿರವ ಬಾಗಿ ಬಂದು ನಿಂತಳು 10 ಕಂಡು ದುರ್ಯೋಧನ ದ್ರೌಪದಿ ನಿನ್ನ ಗಂಡರಡವಿಗೈದುವೋರು ಹೆಂಡತ್ಯಾಗಿರೆನ್ನ ಬಳಿಗೆ ಬಾರೆ ಎಂದನು 11 ಕೆಂಡ ತುಂಬಿದ ಕೊಂಡದೊಳು ಕಂಡೂ ನೀ ಹಾರುವರೇನೊ ತುಂಡು ಮಾಡಿ ಕಡಿವೋರೈವರು ಬ್ಯಾಡೋಯೆಂದಳು 12 ಪತಿಗಳಿಂದೆ ರಹಿತಳೆ ದ್ರೌಪದಿಯೆ ನೀನತಿ ಹರುಷದಿಂದೆ ಸತಿಯಾಗಿ ಬಾಳ್ಹಿತದಿಂದೆನ್ನಕೂಡೇಯೆಂದನು 13 ಪತಿಯಿಂದೆ ರಹಿತಳು ಭಾನುಮತಿಯೋ ಧೃತರಾಷ್ಟ್ರ ಗಾಂಧಾರಿ ಸುತಹೀನರಾಗುವರತಿ ಬ್ಯಾಗೆ ಮತಿಗೇಡಿ ಕೇಳೊ 14 ಪಟ್ಟೆ ಮಂಚಕ್ಕೊಪ್ಪುವ್ಯಂತೇ ಬಾರೇಯೆಂದನು 15 ಅಷ್ಟ ಬಡವರೈವರು ನಿನ ಶಿರ ಕುಟ್ಟಿ ಯಮಪಟ್ಟಣಕ್ಕೆ ಅಟ್ಟಿ ರಾಜ್ಯಕ್ಕಧಿಕಾರ್ಯವರು ಕೇಳೋಯೆಂದಳು 16 ಹೇಮ ಇಚ್ಛ ಮಾಡಿದ್ದೇನೀಗೆನ್ನ ಕೂಡೆ ಎಂದನು 17 ಹುಚ್ಚು ಹಿಡಿದಿತೇನೋ ನಿನಗೆ ಉಚ್ಚು ಬಡಿದು ನಿನ್ನ ಹಲ್ಲು ನುಚ್ಚು ಮಾಡಿ ಕೊಲ್ಲೋರೈವರು ಬ್ಯಾಡೋಯೆಂದಳು 18 ಬಡನಡುವಿನ ವೈಯಾರಿ ಕಡುಚೆಲ್ವೆ ದ್ರೌಪದಿಯೆ ಎನ್ನ ತೊಡೆಯಮ್ಯಾಲೆ ಒಪ್ಪುವ್ಯಂತೆ ಬಾರೆಯೆಂದನು 19 ಕಡುಪಾಪಿ ನೀ ನುಡಿವೋ ನಾಲಿಗೆ ಕಡಿದು ಭೀಮನ ಗದೆಯು ನಿನ್ನ ಉರ ಭೇದಿಸುವೋದನು ನೋಡೇನೆಂದಳು 20 ಅಂಗನೆ ನಿನ್ನಂಗಸಂಗವಾಗದಿದ್ದರೆ ನಿನ್ನ ಮಾನ- ಭಂಗ ಮಾಡಿ ಬತ್ತಲೆ ನಾ ನಿಲಿಸೇನೆಂದನು 21 ಪುಂಡ ಖಳ ನಿನ್ನುದರ ಓಕುಳಿಕೊಂಡಮಾಡೋಕುಳಿಯನಾಡಿ ಚೆಂಡನಾಡಲು ನಿನ್ನ ಶಿರವ ನೋಡೇನೆಂದಳು 22 ಪಾಪಿ ದುಶ್ಶಾಸನನು ಬಂದು ದ್ರೌಪದಿಯ ಮುಂದೆ ನಿಂತು ನೂತನದ ನಿರಿಯ ಪಿಡಿದು ಸೆಳೆಯುತಿದ್ದನು 23 ನಿಲ್ಲೊ ಪಾಪಿ ನಿನ್ನ ರಕ್ತ ಎರೆದು ಹಲ್‍ಹಣಿಗಿಯಲ್ಹಿಕ್ಕಿ ಎಲ್ಲ ಕರುಳ್ವನಮಾಲೆಯ ಮಾಡಿ ಮುಡಿವೆನೆಂದಳು 24 ಮಂಗಳ ಮೂರುತಿ ಮಾರಜನಕ ಎನ್ನ ರಕ್ಷಿಸೆಂದು ಕರವ ಮುಗಿದು ನಿಂತಳು 25 ಮಡುವಿನಲ್ಲೆ ಮುಚ್ಛನಾಗಿ ಬಿಡದೆ ವೇದವ ತಂದು ಕ್ಷೀರ- ಕಡಲ ಕಡೆದ ಕೂರುಮ ಎನ್ನ ಕಾಯೋಯೆಂದಳು 26 ಕಡುಕ್ರೂರ ವರಾಹಾವತಾರ ಹಿಡಿದು ಹಿರಣ್ಯಾಕ್ಷನ ಕಂಬ ವೊಡೆದು ಬಂದಾರ್ಭಟಿಸುವ ಸಿಂಹ ಕಾಯೊ ಎಂದಳು 27 ಬಡವನಾಗಿ ಬಲಿಯ ದಾನ ಬೇಡಿಕೊಂಡ್ವಾಮನನೆ ದೊಡ್ಡ ಕೊಡಲಿ ಪಿಡಿದು ಕ್ಷತ್ರಿಯರನೆ ಕಡಿಬ್ಯಾಗೆಂದಳು 28 ಹತ್ತು ತಲೆಯ ರಾವಣನ ಹತವಮಾಡಿದ್ದವನೆ ಗೋಪೀ ಪುತ್ರನಾದ ಕೃಷ್ಣ ಎನ್ನ ರಕ್ಷಿಸೆಂದಳು29 ಬತ್ತಲಿದ್ದ ಬೌದ್ಧ ನೀ ಬಿಟ್ಟೊ ್ವಸ್ತ್ರ ಎನಗುಡುಗೊರೆಯ ಕೊಟ್ಟು ಹತ್ತಿ ತೇಜಿ ಹರುಷದಿಂದ ಬಾರೋಯೆಂದಳು 30 ಕ್ಷೀರಸಾಗರದಲ್ಲೆ ನೀ ಶ್ರೀಲಕ್ಷ್ಮೀ ಸಹಿತ ಇದ್ದರೇನು ಭೂ ವೈಕುಂಠವಾಸಿ ಎನ್ನ ಕಾಯೋಯೆಂದಳು 31 ಅನಂತಾಸನದಲ್ಲೆ ಆದಿಲಕ್ಷ್ಮೀ ಸಹಿತಾಗಿದ್ದರೇನು ಸೇತೂ(ಶ್ವೇತ?) ದ್ವೀಪವಾಸಿಯೆನ್ನ ಕಾಯೋಯೆಂದಳು 32 ಮಧುರಾ ವಾಸಿ ವೃಂದಾವನ ಗೋವ್ರಜದಲ್ಲಿದ್ದರೇನೊ ಕೃಷ್ಣ ಒದಗಿಬಂದೀಗೆನ್ನಭಿಮಾನ ಕಾಯೋಯೆಂದಳು 33 ಬ್ಯಾಗೆ ಬಿಟ್ಟೀಗೆನ್ನ ಬಳಿಗೆ ಬಾರೋಯೆಂದಳು 34 ಕಾಂತ ಅಕ್ಷಯವೆಂದ ವಸ್ತ್ರಾನಂತವಾದುವು 35 ಕೆಂಪು ಹೂವು ಇರುವಂತಿಗೆಯು ಪಂಚಪೈಠಣಿ ಪಗಡಿ ಬಣ್ಣ ಚಿಂತಾಕು ಪೈಠಣಿಯ ನಿರಿ ಸೆಳೆಯುತಿದ್ದನು 36 ಕರಿಯ ಹೂವು ಕಡ್ಡಿಪೈಠಣಿ ಸೆರಗು ಜರದ ಚಾರಖಾನಿ ಪರಿಪರಿ ಪತ್ತಲಗಳ ತಾ ಸೆಳೆಯುತಿದ್ದನು 37 ಬಿಳಿಯ ಹೂವು ಬಟ್ಟ ಮುತ್ತಿನ ಹೊಳೆವೊ ನಿಂಬಾವಳಿಯು ಚಂದ್ರ ಕಳೆಯ ಸೀರೆಗಳನೆ ಪಿಡಿದು ಸೆಳೆಯುತಿದ್ದನು 38 ಸೂರೂತಿ ಸುಗುತೀಯ ಬಣ್ಣ ಭಾರಿ ಬಾಳೆಪಟ್ಟೆಗಳನು ದ್ವಾರ್ಯಾಮನಿ ಖಂಬಾವತಿ ಸೀರೆ ಸೆಳೆಯುತಿದ್ದನು 39 ತಬಕಾದ್ಹೂವೆಳ್ಳ್ಹೂವು ಗೆರೆ ಸಾಸಿವೆಯ ಚಿಕ್ಕಿ ಸರಪಳ್ಯಂಚು
--------------
ಹರಪನಹಳ್ಳಿಭೀಮವ್ವ
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇಲ್ಲಿ ಬಾರೋ ಹರಿ ತಾತ್ಸಾರ ಥರ ಪರಿ ಪ. ಬಿಲ್ಲಹಬ್ಬದ ನೆವನದಿಂದತಿ ಮಲ್ಲಕಂಸಾದಿಗಳ ಮಡುಹಿದ ಬಲ್ಲಿದನೆ ಲೋಕದಲಿ ಸರಿ ನಿನ- ಗಿಲ್ಲ ಶ್ರೀ ಭೂನಲ್ಲ ಕೃಪೆಯಿಂದ ಅ.ಪ. ಶ್ರೀ ಪಯೋಜಭವ ಶಿವ ಶಕ್ರಾದಿಗಳನ್ನು ಕಾಪಾಡಿ ಖಳಕುಲವ ಖಂಡಿಪ ಸರ್ವ ಭೂಪತಿ ತವ ಪಾದವ ನಂಬಿರಲೆನ್ನ ದುರಿತ ಮ- ಹಾಪಯೋಧಿಯೊಳಿಳಿಸಿದರೆ ಸುಜ- ನಾಪವಾದವು ಬಿಡದು ನಿನ್ನ ಪ- ದೇ ಪದೇ ಇನ್ನೆಷ್ಟು ಪೊಗಳಲಿ 1 ಕರ್ಮ ಕೊಡುವುದು ಫಲವೆಂಬ ನುಡಿಯನುಭವಸಿದ್ಧವು ಆದರು ಜಗ ದೊಡೆಯಗಾವದಸಾಧ್ಯವು ನೀ ಮಾಳ್ಪ ಚೋದ್ಯವು ನುಡಿ ಮನೋಗತಿಗಳುಕವೆಂಬೀ ಸಡಗರವು ವೇದ ಪ್ರಸಿದ್ಧವು ನಡೆಯಲೇಳಲು ಶಕ್ತಿ ಕುಂದಿದ ಬಡವನನು ಕೈಪಿಡಿದ ತವಕದೊಳ್ 2 ಬೆಟ್ಟದೊಡೆಯ ವೆಂಕಟೇಶ ನೀ ಗತಿ ಎಂದು ಘಟ್ಯಾಗಿ ನಂಬಿರುವ ದಾಸನ ಕೈಯ ಬಿಟ್ಟರೆ ಸರಿಯೆ ದೇವ ಸಜ್ಜನರ ಕಾವ ಸಟ್ಟಸ ಶಿಗಡಿ ನೀರ ಸುರಿಸುತ ಕಟ್ಟಿಕಟ್ಟಿಸುತದರ ಛಾಯ ದೊ - ಳಿಟ್ಟ ಗದ್ದಿಗೆಯಲ್ಲಿ ಕುಳಿತು ಸ- ಮೃಷ್ಟ ಸುಖವುಂಬರಸನಂದದಿ 3
--------------
ತುಪಾಕಿ ವೆಂಕಟರಮಣಾಚಾರ್ಯ