ಒಟ್ಟು 712 ಕಡೆಗಳಲ್ಲಿ , 88 ದಾಸರು , 649 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ
ಕಾಯೊ ಕಾಯೊ ಕಾಯೊ ಕಾಯೊ ಕೃಪಾನಿಧಿ ಕಾಯೊ ಕೃಪಾಳು ಸದ್ಗುರು ದಯ ನೀ ಪಾಲಿಸಿ ಸೋಹ್ಯಸೊನ್ನೆ ಸೂತ್ರಗುಹ್ಯ ಗೂಢದೋರಿ ಸಾಹ್ಯಮಾಡೊ ಸ್ವಾಮಿ ಸಾಕ್ಷಾತ್ಕಾರ ನೀ ದೋರಿಸಿ ನ್ಯಾಯದಲಿ ಮಿಥ್ಯಾಮಾಯ ಮೊನೆಮುರಿಸಿ ತೋಯಜಾಕ್ಷ ನಿಮ್ಮ ಶ್ರಯ ಸುಖ ಬೀರಿ ಭವ ಭಯ ಹರಿಸೊ ಗುರು ಕರುಣಿಸೊ 1 ನಾನಾರು ಎಂದು ಸಾಖೂನ ತಿಳಿಯದೆ ನಾನಾ ಯೋನಿಮುಖ ಜನಿಸಿ ಬಂದೆÀನಯ್ಯ ಜನುಮ ಜ್ಞಾನಗಮ್ಯವಾದ ಸ್ಥಾನದೋರಿ ನಿಜ ಧ್ಯಾನ ಮೌನದನುಭವ ಸುಖ ನೀಡೊ ನಿಮ್ಮ ನ್ಯೂನ ಪೂರ್ಣ ಎನ್ನ ನೀ ನೋಡದೆ ಸ್ವಾಮಿ ಸ್ವಾÀನುಭವದ ಸುಜ್ಞಾನ ದೀಪಲಿಡೊ ನಮ್ಮ ಮನೋನ್ಮನವಾಗಿ ಘನ ಕೈಗೂಡುವಾ ಸನ್ಮತ ನೋಡಿ ಸುವರ್ಮ 2 ನೋಡದೆ ಗುಣದೋಷ ಮಾಡಿ ಉಪದೇಶ ದೃಢಭಾವದ ಸುಪಥ ಒಡನೆ ಗೂಡಿಸೊ ನೋಡಿ ದೃಷ್ಟಿಲೆನ್ನ ಒಡೆಯ ಸದ್ಗುರು ಪೂರ್ಣ ಓಡಿಹೋಗುವಂತೆ ಭಕ್ತಿ ಜ್ಞಾನ ವೈರಾಗ್ಯವಿಡಿಸೊ ನೀಡಿ ಅಭಯಕರುಣಕವಚವ ತೊಡಿಸೊ ಪಿಡಿದು ಎನ್ನ ಕೈಯಾ ಮೂಢ ಮಹಿಪತಿಯ ಬಿಡದೆ ಕಡೆಗಾಣಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕುರುಣಾವಾರುಧೀಶ ಭಾರತೀಶ ಕರಪಿಡಿದು ಕಾಪ್ಯಾಡೊ ಕೊರವಿಯ ವಾಸ ಪ ಸುಜನರೆನ್ನಗೆ ಹಿಂದೆ ಸೂಚಿಸಿದ್ದರೊ ದ್ವಿಜ ಕುಲಾರ್ಚಿತ ಇಂದು ನಿನ್ನ ಭಕುತರಲ್ಲಿಡು ಎನ್ನ 1 ದಂತಿಪುರಪತಿಗೆ ಕೃತಾಂತನೆನಿಸಿದ ಧೀರ | ವಿಂತು ಪೊಗಳಲಿ ನಿನ್ನ ಮಹಿಮೆಯನು ಕುಂತಿಜನೆ ತವನಾಮ ಚಿಂತಿಯನು ಸಂತತದಲಿ ಸಲಹೋ ಧೀಮಂತ ನಂಬಿದೆ ಪರಮಾ 2 ಕಾಮಾರಿಸುತ ನಮೊ ಸೋಮಕುಲಭವ ಭೀಮ | ಶ್ರೀಮಧ್ವಮುನಿನಾಥವರ ಪ್ರದಾತ ಭೂಮಿಜಾತೆಯ ಪ್ರವೀತ ಶಾಮಸುಂದರದೂತ ಸ್ವಾಮಿಗುರು ತವನಾಮ ಸ್ಮರಿಪೆ ಘುನ್ನ 3
--------------
ಶಾಮಸುಂದರ ವಿಠಲ
ಕೂಗಳತಿ ಎಂಬೊ ಸಂಶಯಸಲ್ಲಾಪ ಸಮಚಿತ್ತದಲ್ಲಿ ಇದ್ದು | ಸಮ ವಿಷಮ ತಿಳಿದೆದ್ದು | ಕುಮತ ಮತವನು ವದ್ದು | ಬಲು ಉಬ್ಬೆದ್ದು | ಕಮಲ ಪೀಠನ ಹೊದ್ದು | ಕ್ರಮಣಿ ಯೋಪಾದಿಯಲಿದ್ದು | ತಮಕ್ಕೆ ಹರಿನಾಮ ಮದ್ದು | ಶ್ರಮ ಕಳುಕದವಗೆ1 ಭಾಗವತರ ನೋಡಿ | ವೇಗ ಮನಸನು ಮಾಡಿ | ಬಾಗಿ ಸಿರವನೆ ನೀಡಿ | ನಲಿದು ಪಾಡಿ | ಯೋಗವಾಗದೆ ಕೂಡಿ | ಭೋಗವನು ಈಡಾಡಿ | ತೂಗಿ ಮೈಯಲಾಡಿ ಪುಣ್ಯದನವನಿಗೆ 2 ಹರಿ ಭಕುತಿಯ ಬೇಕು | ನರಹರಿಯ ಸ್ಮರಣೆ ಬೇಕು | ಹರಿಕಥಾ ಬೇಕು | ಹರಿ ಎನಲಿ ಬೇಕು | ಹರಿಯ ಭಜಿಸಲಿ ಬೇಕು | ಹರಿವೊಲಿಮೆ ಇರಬೇಕು | ಹರಿಯಲ್ಲದಿಲ್ಲೆಂದು ಹರಿದು ನುಡಿದವನಿಗೆ 3 ಆಸಿಯನು ಕಳೆದು | ದುರ್ವಾಸನೆ ಹಮ್ಮು ಕಳೆದು | ಕ್ಲೇಶವನು ಅಳಿದು | ತೋಷದಲಿ ಬೆಳೆದು | ದೋಷರಾಶಿಗೆ ಮುಳಿದು | ದೂಷಕರನೆ ಅಳಿದು | ಭೇಷಜವನೆ ಅಳಿದು | ದಾಸರ ಬಳಿಗೆ ಸುಳಿದವಗೆ 4 ಆಚಾರವನು ಪಿಡಿದು | ಸೂಚನೆ ಅರಿತು ನಡೆದು | ವಾಚಗಳ ಮಿತಿ ನುಡಿದು | ನಾಮಗುಡಿದು | ಸಿರಿ ವಿಜಯವಿಠ್ಠಲರೇಯನ | ಯೋಚನಿಂದಲಿ ಬಿಡದೆ | ದಿನವ ಹಾಕುವನಿಗೆ 5
--------------
ವಿಜಯದಾಸ
ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಕೊಂಡಾಡಲಳವೆ ನಿನ್ನಯ ಕೀರ್ತಿ ಭೂ- ಮಂಡಲದೊಳು ಹಯಗ್ರೀವಮೂರ್ತಿ ಪ. ವೇದಂಗಳ ಜಲದಿಂದ ತಂದೆ ನೀ ಪೋದ ಗಿರಿಯ ಬೆನ್ನೊಳಾಂತು ನಿಂದೆ ಮೇದಿನಿಯ ಕದ್ದೊಯ್ದನ ಕೊಂದೆ ಸಂ- ವಾದದಿಂದ ಕಂಬದಿಂದಲಿ ಬಂದೆ 1 ಚರಣಾಗ್ರದಲಿ ನದಿಯನು ಪೆತ್ತೆ ತೀಕ್ಷ್ಣ ಪರಶು ಪಿಡಿದು ಬಾಹುಜರ ಕಿತ್ತೆ ನೆರೆನಂಬಿದಗೆ ಸ್ಥಿರಪಟ್ಟವನಿತ್ತೆ ದೊಡ್ಡ ದುರುಳಕಾಳಿಂಗನ ಶಿರದಿ ನಿಂತೆ 2 ಪರವ್ರತೆಯರ ಮಾನಭೇದನ ಚತುರ ತುರಗವೇರಿ ನಲಿವನ ಕ್ಷಿತಿಯೊಳುತ್ತಮ ವಾದಿರಾಜನ ಸ್ವಾಮಿ ಸತತ ರಕ್ಷಿಪ ಶ್ರೀ ಹಯವದನ 3
--------------
ವಾದಿರಾಜ
ಕೊಡು ಬ್ಯಾಗಭೀಷ್ಟವ ತ್ವರದೀ - ನೀ ಸನ್ಮನದೀ ಪ ಕೊಡುವೊದೆನುತ ನಿನ್ನಡಿಯನು ಭಜಿಸುವ ಬಡವನ ಕರವನು ಪಿಡಿದೀ ಕಾಲದೀ ಅ.ಪ ವಡೆಯ ನೀನೆನುತತಿ ಹರುಷದಲಿ ನಂಬಿದೆ ನಿನ್ನಾ ಬಿಡದಲೆ ಪೊರೆ ಎನ್ನ ಕರುಣದಲಿ ಎನ್ನಯ ಕರವ ಪಿಡಿದು ಭವಶ್ರಮ ಕಳಿಯುತಲಿ - ಬಹು ತೋಷದಲೀ ನುಡಿದ ವಚನವ ಚಿತ್ತಕೆ ತಂದು ಪತಿ ಗುರುರಾಯನೆ ನೀ 1 ನಮಿಪ ಜನರಿಗೆ ಸುರಧೇನು ಭಜಿಸುವ ಜನಕೆ ಸುಮನಸೋತ್ತಮ ವರತರು ನೀನು - ಚಿಂತಿಪ ಜನಕೆ ಅಮರೋತ್ತಮ ರತುನವು ನೀನು - ಎನುತಲಿ ನಾನು ಅಮಿತ ಮಹಿಮವ ತೋರುತಲೀಗ ಶ್ರಮವ ಕಳೆದು ಸುಖಸುರಿಸುತ ನೀ 2 ಭೂತಳ ಮಧ್ಯದಲತಿ ಖ್ಯಾತ - ನೆನಿಸಿದ ನಾಥ ಪಾತಕ ಕುಲವನ ನಿರ್ಧೂತಾ - ಮಾಡುತ ನಿಜಪದ ದೂತಜನ ತತಿಮನೋರಥ - ಪೂರ್ತಿಪ ದಾತಾ ವಾತ ಗುರುಜಗನ್ನಾಥ ವಿಠಲಗತಿ ಪ್ರೀತಿಪಾತ್ರ ಸುಚರಿತ್ರ ಸುರಮಿತ್ರ3
--------------
ಗುರುಜಗನ್ನಾಥದಾಸರು
ಕೊಳಲನೂದುವ ಚದುರನ್ಯಾರೆ ಪೇಳಮ್ಮಯ್ಯತಳಿರಂದದಿ ತಾ ಪೊಳೆವ ಕರದಿ ಪಿಡಿದು ಪ ನಾದದಿ ತುಂಬಿತು ಗೋವರ್ಧನಗಿರಿಯಾದವಕುಲ ಘನ ಒರೆದಿತು ಖಗಕುಲ ಸಾಧಿಸಿ ನೋಡಲು ಕೃಷ್ಣನ ಈಗಲೆಸಾಧ್ಯವೆ ನೀ ಬೃಂದಾವನದೊಳು1 ಮೇವು ಮರೆತವು ಗೋವುಗಳೆಲ್ಲವುಸಾವಧಾನದಿ ಹರಿದಳು ಯಮುನಾಆವು ಕಾವುತಲಿ ಗೋವಳರೆಲ್ಲರಹಾವ ಭಾವದಲಿ ಬೃಂದಾವನದೊಳು 2 ಕದಂಬ ವನದೊಳು 3
--------------
ವ್ಯಾಸರಾಯರು
ಕೋಲ ಕೋಲೆನ್ನಿ ಕೋಲ ಕೋಲ ಕೋಲೆನ್ನಿ ಕೋಲಕೋಲೆಂದು ಹರಿಯ ಪಾಡುವರು ಎಷ್ಟಪ. ನಾಗಶಯನನ ಮುಂದೆ ಪೂಗಿ ಫಲಗಳ ಇರಿಸಿನಾಗವೇಣಿಯರು ಸಾಗುವರು ಎಷ್ಟ 1 ಪಂಕಜಾಕ್ಷನ ಮುಂದೆ ಕುಂಕುಮ ಅರಿಷಿಣ ಪಿಡಿದುಕಂಕಣದ ಕೈಯ ಶಂಕಿನಿಯರೆಷ್ಟ2 ಅಂಬುಜಾಕ್ಷನ ಮುಂದೆ ತಾಂಬೂಲ ತಬಕಗಳುಸಂಭ್ರಮದಿ ಧರಿಸಿದ ರಂಭೆಯರು ಎಷ್ಟ3 ಮಂದಗÀಮನೆಯರ ಮುಂದೆಗಂಧ ಕಸ್ತೂರಿ ಪುನಗುಛsÀಂದದಲಿ ಧರಿಸಿ ಮುಂದಾಗÀುವರೆಷ್ಟ4 ಚಲ್ವ ರಂಗನ ಮುಂದೆ ಮಲ್ಲಿಗೆ ಹೂವಿನ ಝಲ್ಲೆಗಳ ಧರಿಸಿದ ನಲ್ಲೆಯರು ಎಷ್ಟ 5 ಬುಕ್ಕಿಟ್ಟು ಮೊದಲಾಗಿ ವಿಶಿಷ್ಠ ಪರಿಮಳ ಧರಿಸಿಕೃಷ್ಣರಾಯನ ಮುಂದೆ ನಡೆವೋರು ಎಷ್ಟ6 ಕ್ಯಾದಿಗೆ ಸಂಪಿಗೆ ಊದಿನ ಖಡ್ಡಿಗಳುಮುದದಲಿ ಧರಿಸಿ ಮುಂದಾಗುವರಷ್ಟ7 ಉತ್ತತ್ತಿಕದಳಿ ಜಂಬುದ್ರಾಕ್ಷ ಚೂತÀ ಫಲ ಹೊತ್ತುಹರುಷದಲ್ಲಿ ಮಿತ್ರೆಯರು ಸಾಗುವರೆಷ್ಟ8 ಹಾಲು ಮೊಸರಿನ ಕುಂಭ ಬಾಲೆಯರು ಧರಿಸುತ ಸಾಲು ಸಾಲಾಗಿ ಸಾಗುವರೆಷ್ಟ 9 ಬೆಂಡು ಬತ್ತಾಸ ದುಂಡುಗಡಲೆ ಕಬ್ಬುತಂಡ ತಂಡದಲಿ ಹಿಡಿದವರು ಎಷ್ಟ10 ರಂಗರಾಯನ ಮುಂದೆ ಗಂಗೋದಕ ಧರಿಸಿಶೃಂಗಾರದಿಂದ ಸಾಗಿದವರು ಎಷ್ಟ11 ಚಲ್ವರಮಿಅರಸಗೆ ಸಲ್ಲಿಸಬೇಕೆಂದುಕಲ್ಲು ಸಕ್ಕರೆ ಹೊತ್ತ ನಲ್ಲೆಯರು ಎಷ್ಟ 12
--------------
ಗಲಗಲಿಅವ್ವನವರು
ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ಹೊಗಳುವ ಕೋಲ ಪ. ಛsÀತ್ರ ಚಾಮರ ವಿಚಿತ್ರದ ಬಾಣ ಬಿರಸುನೃತ್ಯವಾದ್ಯಗಳು ಹೊಗÀಳುವನೃತ್ಯವಾದ್ಯಗಳು ಹೊಗÀಳುವ ಬಂಧಿಗಳಿಂದ ಅರ್ಥಿಲೆ ನಿಮ್ಮ ಕರೆಸುವ ಕೋಲ 1 ಶಂಕಿನಿ ಪದ್ಮಿನಿಯರು ಕುಂಕುಮ ಅರಿಷಿಣವಪಿಡಿದು ಪಂಕÀಜನಾಭನೆದುರಿಗೆ ಕೋಲಪಂಕಜನಾಭನೆದುರಿಗೆ ಕರೆಯಲುಅಲಂಕಾರವಾಗಿ ಬರುತಾರೆ ಕೋಲ2 ಗಂಧ ಕೇಶರದ ಚಂದದೋಕುಳಿ ತುಂಬಿಮಂದಗಮನೆಯರು ಹಿಡಕೊಂಡುಮಂದಗಮನೆಯರು ಹಿಡಕೊಂಡು ಐವರಿಗೆಬಂದು ನಿವಾಳಿ ತೆಗಿಸುವೆವು ಕೋಲ 3 ಚಿತ್ತಜನಯ್ಯಗ ಮಿತ್ರೆಯರು ಕರೆಯಲುಮುತ್ತಿನಾರತಿಯ ಹಿಡಕೊಂಡುಮುತ್ತಿನಾರತಿಯ ಹಿಡಕೊಂಡು ಐವರಿಗೆ ಎತ್ತಬೇಕೆಂಬೊ ಭರದಿಂದ ಕೋಲ4 ಅರಳು ಅರಳು ಫಲಗಳು ಐವರಿಗೆ ಭರದಿಂದ ಸೂರ್ಯಾಡಿ ಬರತೇವ ಕೋಲ 5 ರಥ ಕುದುರೆಗಳೆಷ್ಟು ರಥಿಕರು ಸೊಬಗೆಷ್ಟು ರತಿಯಿಟ್ಟು ನೋಡೊ ಜನರೆಷ್ಟು ಕೋಲರತಿಯಿಟ್ಟು ನೋಡೊ ಸೊಬಗೆಷ್ಟು ಸಖಿಯೆನಮ್ಮ ಅತಿಶಯವಾದ ಸೊಬಗೆಷ್ಟು ಕೋಲ6 ವೀರ ರಾಮೇಶನು ಭೇರಿ ದುಂಧುಭಿ ಹೊಯ್ಸಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಐವರವಾರಿಜನಾಭ ಕರೆಸುವ ಕೋಲ7
--------------
ಗಲಗಲಿಅವ್ವನವರು
ಕೋಲನಾಡೇ ಲೋಲಾಕ್ಷಿ ಬಾರೆ ಪ. ಕನ್ನಡಿಕದಪುಗಳ್ ಚೆನ್ನಾಗಿ ಪೊಳೆಯಲ್ ಚಿನ್ನದ ಕೋಲ್ಪಿಡಿದು ಚನ್ನೆ ನೀಂ ನಲಿದು 1 ಪಂಚಬಾಣನಶರ ಹೊಂಚಿಬೀಳುವ ತೆರೆ ಚಂಚಲಾಕ್ಷಿಯೆ ಅರಸಂಚೆಗಮನದಿಂ2 ವಿಭವದೆÉೀಳಿಗೆಗಿದು ಶುಭದಿನವಹುದೆಂದು ಇಂದು ಅಭಯವೀವನು ಬಂದು 3 ಶಾರದಾಗಮದಿಂದ ಸಾರವಾಂತಿರುವೆಮ್ಮ ಭಾರತಾಂಬೆಗೆನಲವೇರೆ ಸಂಭ್ರಮದಿ 4 ಭಾರತಮಾತೆಗೆ ಭವ್ಯಮೂರುತಿಗೆ ಭೋರೆನೆ ಜಯಭೇರಿ ಮೊರೆವುದು ಸಾರಿ 5 ತರಳೆಯರಾವೆಲ್ಲ ಪರಿಶುದ್ಧ ಭಾವದಿ ವರಶೇಷಗಿರಿದೊರೆಗೆರಗಿ ಸಮ್ಮುದದಿ 6
--------------
ನಂಜನಗೂಡು ತಿರುಮಲಾಂಬಾ
ಕೋಲು ಉತ್ಸವಗೀತೆ ಕೋಲುವ ನೋಡುವ ಬನ್ನಿ ಶ್ರೀರಂಗನಾಯಕಿಯ ಕೋಲುವ ನೋಡುವ ಬನ್ನಿರೆಲ್ಲ ಪ ಚಪ್ಪರವನು ಶÀೃಂಗರಿಸಿ ಪಟ್ಟುಪೀತಾಂಬರದ ಮೇಲೆ ಕಟ್ಟುಗಳಿಂದ ವಿಸ್ತರಿಸಿ ಕದಳಿಯಕೊನೆ ಕಬ್ಬು ತೆಂಗಿನ ಫಲಗಳ ವಿಧವಿಧವಾಗಿ ಶೃಂಗಾರ ಮಾಡಿದರು 1 ಭಾದ್ರಪದ ಕನ್ಯಾಮಾಸದಲ್ಲಿ ಶುದ್ಧಪಾಡ್ಯದಲ್ಲಿ ಭದ್ರೆ ಶ್ರೀರಂಗನಾಯಕಿಯು ಬಂದು ಮಜ್ಜನವನು ಮಾಡಬೇಕೆನುತಲೆ ಮೂದ್ರ್ವಾರಮಧ್ಯದಲಿ ತಾ ನಿಂದಳು 2 ತಂದು ಹರವಿದರು ಬತ್ತವ ವಿಸ್ತಾರವಾಗಿ ತಂದಿಟ್ಟು ಕರ್ಪೂರಬಟ್ಟಲುಗಳು ತುಂಬಿ ಕಲ್ಪೋಕ್ತ ದಿಂದಲೆ ಪೂಜೆಯ ಮಾಡಿದರು 3 ಎಂಭತ್ತೊಂಬತ್ತು ಬಟ್ಟಲಲ್ಲಿ ಇರುವ ಉದಕವನು ರಂಭೆಗಭಿಷೇಕವ ಮಾಡೆ ಗಂಧವ ಅಂಬೆ ಶಿರದೊಳು ಧರಿಸಿ ಪೂಮಾಲೆಯ [ಸಂಭ್ರಮದಿ]ಧರಿಸಿ ನಿಂದಳು ದೇವಿ 4 ಸುಖನಿಧಿ ಪದ್ಮಾನಿಧಿಗೆ ಹಣ್ಣಿನ ಹರಿವಾಣವ ಶಂಕೆ ಇಲ್ಲದೆ ಭಕ್ತರು ಪಿಡಿದು [ನಿಂತಿರುವ] ಶಂಖನಾದವು ತಾಳಮೇಳ ವಾದ್ಯಗಳಿಂದ ಪಂಕಜಮುಖಿಗಭಿಷೇಕವ ಮಾಡಿದರು 5 ಪುಷ್ಪದ ಮಂಟಪದಲ್ಲಿ ಪುರುಷೋತ್ತಮನ ಒಪ್ಪವಾದ ಅಶ್ವವ ತಂದಿರಿಸಿದರು ಆನಂದದಿ ಕಲ್ಪೋಕ್ತದಿಂದಲೆ ಪೂಜೆ ನೈವೇದ್ಯವ ಮಾಡಿ ಒಪ್ಪುವ ಕಂಕಣವನು ಕಟ್ಟಿದರಾಗ 6 ರತ್ನದ ಕಿರೀಟವಿಟ್ಟು ಲಲಾಟದಲ್ಲಿ ಮತ್ತೆ ತಿದ್ದಿದ ಕಸ್ತೂರಿಬಟ್ಟು ರತ್ನದ ಪದಕವು ಇಟ್ಟು ಕೊರಳೊಳು ಇಂದಿರೆ ವಂದಾಳು 7 ಮಧ್ಯದ ಕೊಟ್ಟಿಗೆಯಲ್ಲಿ ವಿಪ್ರರು ಕೈಕಟ್ಟಿ ನಿಂದು ಸೇವೆಯ ಮಾಡುತಿರಲು ಅರ್ತಿ ಯಿಂದಲೆ ಧೂಪದೀಪ ನೈವೇದ್ಯದಿ ಲಕ್ಷ್ಮೀ ದೇವಿಗೆ ಪೂಜೆಯ ಮಾಡಿದರು 8 ಭೇರಿ ದುಂದುಭಿ ವಾದ್ಯಗಳಿಂದ ತಾಳಮೇಳವು [ನಾರಿಯರ] ರ ಸಾಲುಗಳಿಂದ ಬಾಣ ಬಿರುಸು ಮತಾಪು ಅಗರುಬತ್ತಿ [ಗಳ ನಡುವೆ] ನಾರಾಯಣನರಾಣಿ ಕೋಲುವಿನಲ್ಲಿ 9 ಛತ್ರಿಚಾಮರ ಸೂರೆಪಾನ ಪಿಡಿಯೆ ಮದ ಹಸ್ತಿಗಳು ಮಾಡುವ ಸಲಾಮು ಸುತ್ತಿ ದೀವಟಿಗೆಯು ತುತ್ತೂರಿ ನಾದವು ಮತ್ತಧಿಕಾರಿಗಳು ಮಂಟಪದಲಿ 10 ಆರುದಿವಸದಲ್ಲೊರೆಗೊಂಡು ಪಾನುಪಟ್ಟಿಯು ಸೂರ್ಯಚಂದ್ರರು ಮುತ್ತಿನಬಟ್ಟು [ಆ]ರಾಗಟೆಹೆರಳು ಭಂಗಾರಗೊಂಡೆಗಳಿಟ್ಟು ವ ಯ್ಯಾರದಿಂದಲೆ ಬಂದಳು ಮಂಟಪಕೆ 11 ಸಪ್ತದಿನದಲಿ ಲಕ್ಷ್ಮೀದೇವಿಗೆ ಉತ್ರಾಜಿಮಾಲೆ ಹಸ್ತವಡಗೆ ಹರಡಿವಂಕಿ ದಕ್ಷಿಣ ಹಸ್ತದಿ ರತ್ನದಹಂಸವು ವಾಮ ಹಸ್ತವ ಮೊಣಕಾಲಿನೊಳಿಟ್ಟಳು 12 ಅಂದುಗೆ ಗೆಜ್ಜೆ ಮುಂಗೈಮುರಾರಿ ಉಂಗುರವು ಕುಂದಣದ ಪಾಗಡವಿಟ್ಟು ಹಿಂದಿನತೋಳಿಗೆ ಬಂದಿ ತಾಯಿತನಿಟ್ಟು ಕುಂದಣದ ಮಂಟಪದಲಿ ಕುಳಿತಳು 13 ಅಷ್ಟಮ ದಿವಸದಲ್ಲಂದು ಸೃಷ್ಟಿಗಿರೀಶ್ವರಿಗೆ ಕಟ್ಟಿದರು ಕಲ್ಕೀತುರಾಯಿ ದೃಷ್ಟಿಯಬಟ್ಟು ರತ್ನದ ಕುಂಡಲ [ಇಟ್ಟು] ಮತ್ತರಗಿಣಿಯನು ಮಾತಾಡಿಸುತ 14 ಮುಕ್ತಿದಾಯಕಿಗೆ ಮೂರು ಪಾವಡೆಯನುಡಿಸಿ ಮತ್ತೆ ವಡ್ಯಾಣವನಿ[ಡಲು] ರತ್ನದ ಹಸ್ತದಿ ಅಭಯವ ಕೊಡುತ [ನಿಂತಳು] ಮೊರ್ನೋಮಿಯ ಮಂಟಪದಲ್ಲಿ 15 ಮುಂದೊಂಭತ್ತು ದಿನದಲ್ಲಿ ರಂಭೆರಂಗನಾಯಕಿಯು ಮಿಂದು ಮಡಿಗಳ ತಾನುಟ್ಟು ಚಂದದಿ ನೈವೇದ್ಯವ ಭಕ್ತರಿಗಿತ್ತು ಬಂದು ಆಸ್ಥಾನದಿ ನಿಂದಳು ದೇವಿ 16
--------------
ಯದುಗಿರಿಯಮ್ಮ
ಕೋಸಲಾಧಿಪ ಶುಭವನು ದಾಶರಥೇ ಪ ದಾಸನಲ್ಲಿ ಕೃಪಾಲೇಶವ ಬೀರೆಲೊ ಅ.ಪ ಹರನ ಚಾಪವ ಮುರಿದು ಸ್ವಯಂ ಕರವ ಪಿಡಿದು ಸರಸಿಜಲೋಚನ ಕಾಯೊ ಕರುಣದಲಿ 1 ವನವ ಸೇರಿ ಮುನಿಗಳ ಶಂ ಸನವ ಪೊಂದಿದ ಜಾನಕೀಪತಿ ಮುನಿದು ದುರುಳರ ಹನನ ಮಾಡಿದ ಹನುಮನಿಗೆ ದರುಶನವಿತ್ತ 2 ವಾನರಬಲದಿಂದ ಕೂಡಿ ವನದಿ ಬಂಧಿಸಿ ಲಂಕೆ ಸೇರಿದ ಶಾನನ ಮುಖರನು ಕೊಂದು ಜಾನಕಿಯಲಿ ಪ್ರಸನ್ನನಾದ 3
--------------
ವಿದ್ಯಾಪ್ರಸನ್ನತೀರ್ಥರು
ಕೋಳಿ ಕೂಗಿತು ತಂಪು ಗಾಳಿ ಬೀಸಿತು ಏಳಯ್ಯಾ ಬೆಳಗಾಯಿತು ಪ ಧೀರ ಸೋಮಕನಿರಿದು ಮೇರು ಬೆನ್ನಲಿ ಪೊತ್ತು ಘೋರ ಹಿರಣ್ಯಾಕ್ಷ ಕಶ್ಯಪರ ಶೀಳಿ ಮಾರಿ ಬಲಿಯನ್ನೊತ್ತಿ ಕಂಸ ದಾನವರನಳಿದು ಶೇರಿ ತ್ರಿಪುರರ ದಹಿಸಿ ಕ್ರೂರ ದುಷ್ಟರ ತರಿದು ಭಾರಿ ಆಯಾಸದಲಿ ನಿದ್ರೆ ಹತ್ತಿರೆ ಸ್ವಾಮಿ1 ವೇದವನು ತಂದೆ ಸುರವೃಂದಕಮೃತವನಿತ್ತೆ ಮೇದಿನಿಯ ನೆಲಸಿ ಪ್ರಲ್ಹಾದನಾ ಪೊರೆದೆ ಮೋದಿಗಂಗೆಯ ಜನಿಸಿ ಭೂದಾನ ಮಾಡಿದೆ ಮೋದದಿಂದಜಪದವಿಯ ಆಂಜನೇಯಗಿತ್ತೆ ಪೋದ ಮಕ್ಕಳ ತಂದು ಗುರುಪತ್ನಿಗೇ ನೀಡಿ ವೇದನುತ ನಿರ್ವಸನ ಸುಹಯಾರೂಢನೇ2 ಶರಣಜನ ಬಂದು ಸುಸ್ವರದಿಂದ ಪಾಡುತಿರೆ ಪರಿ ಕಣ್ಣಮುಚ್ಚುವುದೇ ಸರಿಯೆ ಬೆನ್ಮರೆಮಾಡಿ ಮಣ್ಣನಾಡಾಡುವುದೇ ಉರಿಮೋರೆಯಿಂದ ತರಳಾಟ ಆಡುವುದೇ ಪರಶು ಶರ ಚಕ್ರಗಳ ಪಿಡಿದು ಉಡಿಗೆಯ ಮರೆತೆ ಭರದಿ ತುರಗವನೇರು ನರಸಿಂಹ ವಿಠ್ಠಲಾ 3
--------------
ನರಸಿಂಹವಿಠಲರು
ಕ್ಷಣತೋರಿ ಇಲ್ಲದಂತಾಗುವ ವಿಷಮ ಮಹ ಕನಸಿನ ಮೋಹದಿಂ ಕೆಡಬೇಡ ಮನುಜ ಪ ಹಲವು ಜನಮದಿ ಬಿದ್ದು ತಿಳಿಯದೆ ಇಹ್ಯಪರಕೆ ತೊಳಲುತ ಬಳಲುತ ತಿರುತಿರುಗಿ ಗಳಿಸಿದ ನರಜನುಮ ವಿವರಿಸಿ ನೋಡದೆ ಕಳಕೊಂಡು ಬಳಿಕಿನ್ನು ಸುಲಭವಲ್ಲೆಲೆ ಖೋಡಿ 1 ನೀರಮೇಲಣ ಗುರುಳೆಯಂತೆ ಕಾಂಬುವ ಈ ನರಕ ಮೂತ್ರದ ತನುಭಾಂಡವಿದು ಅರಿಯದೆ ಮೋಹಿಸಿ ಪರಿಪರಿ ಕುಣಿಕುಣಿದು ಪರಮ ರೌರವ ನರಕಕ್ಹೋಗ ಬೇಡೆಲೆ ಖೋಡಿ 2 ಜವನÀದೂತರು ಬಂದು ಕವಿದುಕೊಳ್ಳಲು ಆಗ ಕಾಯುವರಾರಿಲ್ಲ ಕೈಪಿಡಿದು ದಿವನಿಶೆಯೆನ್ನದೆ ಭವಹರ ಶ್ರೀರಾಮ ದೇವನ ನೆರೆನಂಬಿ ಭವಮಾಲೆ ಗೆಲಿಯೊ 3
--------------
ರಾಮದಾಸರು